Tag: ಶಾಲೆ ಆರಂಭ

  • ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ ಕೊರೊನಾ ಹೊಸ ತಳಿ ಬಂದಿದೆ: ಕೆ.ಸುಧಾಕರ್

    ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ ಕೊರೊನಾ ಹೊಸ ತಳಿ ಬಂದಿದೆ: ಕೆ.ಸುಧಾಕರ್

    ಹುಬ್ಬಳ್ಳಿ: ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ ಕೊರೊನಾ ಹೊಸ ತಳಿ ಬಂದಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

    ಮೂರನೇ ಅಲೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವು ದೇಶಗಳಲ್ಲಿ ಈಗಾಗಲೇ 3ನೇ ಅಲೆ ಕುರಿತು ಮಾತುಗಳು ಕೇಳಿಬರುತ್ತಿದೆ. ರಷ್ಯಾ, ಇಂಗ್ಲೆಂಡ್ ರೀತಿಯಲ್ಲಿ ದೇಶದ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಕೊರೊನಾ ಹೊಸ ತಳಿ ಬಂದಿದೆ ಎಂಬ ವರದಿ ಬಂದಿದೆ. ಹೀಗಾಗಿ ನಮ್ಮ ತಜ್ಞರ ಮತ್ತು ತಾಂತ್ರಿಕ ಸಿಬ್ಬಂದಿ ಜೊತೆ ಮಾತನಾಡಿದ್ದೇನೆ. ಹೊಸ ತಳಿಯ ಲಕ್ಷಣಗಳ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ನಮ್ಮ ಗಮನಕ್ಕೆ ತರಲು ಸೂಚಿಸಿದ್ದೇನೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲೂ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಮೊದಲ ಡೋಸ್ ವ್ಯಾಕ್ಸಿನ್ ಪಡೆದವರು ಎರಡನೇ ಡೋಸ್ ಕಡ್ಡಾಯ ಪಡೆದುಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಅವಶ್ಯಕತೆ ಬಿದ್ದರೆ ಮುಂದಿನ ದಿನಗಳಲ್ಲಿ ಪಠ್ಯ ಕಡಿತ: ಬಿ.ಸಿ.ನಾಗೇಶ್

    ಶಾಲೆ ಆರಂಭ ಕುರಿತು ಮಾತನಾಡಿದ ಅವರು, ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಜಾಸ್ತಿ ಇರುತ್ತೆ. 4 ತಿಂಗಳಿನಿಂದಲೂ ಶಾಲೆಗಳು ಆರಂಭವಾಗಿದ್ದರೂ, ಈವರೆಗೆ ಮಕ್ಕಳಲ್ಲಿ ಅಂತಹ ಆತಂಕ ಕಂಡುಬಂದಿಲ್ಲ. ಮಕ್ಕಳಲ್ಲಿ ಗಂಭೀರ ಸಮಸ್ಯೆಗಳು ಕಾಣಿಸಿಕೊಂಡಿಲ್ಲ. ವಿದ್ಯಾರ್ಥಿಗಳ ಕಲಿಕೆ ಈಗಾಗಲೇ ನಿಂತುಹೋಗಿದೆ. ಹೀಗಾಗಿ ಸರ್ಕಾರದ್ದು, ಅತ್ಯಂತ ಜವಾಬ್ದಾರಿ ನಡೆ ಇದೆ. ಶಾಲೆಗಳಲ್ಲಿ 1 ಪ್ರತಿಶತಕ್ಕಿಂತ ಹೆಚ್ಚು ಪ್ರಕರಣಗಳು ಕಂಡುಬಂದರೆ ಅಂತಹ ಶಾಲೆಗಳನ್ನು ಬಂದ್ ಮಾಡಲಾಗುತ್ತದೆ. ಹಲವು ಮಾರ್ಗಸೂಚಿಗಳನ್ನು ಇಟ್ಟುಕೊಂಡು ಇದೀಗ ಶಾಲೆಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

    ಉಪಚುನಾವಣೆ ಹಿನ್ನೆಲೆ ವಿಧಾನಸೌಧ ಖಾಲಿ ವಿಚಾರವಾಗಿ ಮಾತನಾಡಿದ ಅವರು, ಇಂತಹ ಆರೋಪಗಳು ಸತ್ಯಕ್ಕೆ ದೂರವಾಗಿದೆ. ರಾಜ್ಯದಲ್ಲಿ ಎಲ್ಲ ಯೋಜನೆಯ ಕಾಮಗಾರಿಗಳು ಅನುಷ್ಠಾನಗೊಳ್ಳುತ್ತಿವೆ. ನಾನು ಎಲ್ಲೇ ಇದ್ದರೂ ಸಭೆಗಳನ್ನು ಮಾಡುತ್ತಿದ್ದೇನೆ. ಕಳೆದ ಎಂಟು ದಿನಗಳಿಂದ ಈ ಭಾಗದಲ್ಲಿದ್ದೇವೆ. ಇಲ್ಲಿ ಬಂದರೂ ಸಹ ಹಲವು ಜಿಲ್ಲೆಗಳಲ್ಲಿ ಆರೋಗ್ಯ ವಿಚಾರವಾಗಿ ಪರಿಶೀಲನೆ ಮಾಡುತ್ತಿದ್ದೇವೆ. ಉಪಚುನಾವಣೆ ಇದೇ ಮೊದಲಲ್ಲ. ಎಲ್ಲ ಸರ್ಕಾರಗಳು ಅಧಿಕಾರದಲ್ಲಿದ್ದಾಗಲೂ, ಉಪಚುನಾವಣೆ ಎದುರಿಸಿದ್ದಾರೆ. ಎಲ್ಲರೂ ಇದನ್ನೇ ಮಾಡಿದ್ದಾರೆ. ಉಪಚುನಾವಣೆಯಲ್ಲಿ ನಾಲ್ಕೈದು ಸಚಿವರುಗಳು ಬಂದು ಪ್ರಚಾರ ಕೈಗೊಳ್ಳುವುದು ವಿಶೇಷವೂ ಅಲ್ಲ, ಹೊಸದೂ ಅಲ್ಲ ಎಂದಿದ್ದಾರೆ. ಇದನ್ನೂ ಓದಿ: ತಂದೆ ಹಿಂದೂ, ತಾಯಿ ಮುಸ್ಲಿಂ, ನಾನು ಜಾತ್ಯತೀತ ಕುಟುಂಬಕ್ಕೆ ಸೇರಿದ್ದೇನೆ: ಸಮೀರ್ ವಾಂಖೆಡೆ ತೀಕ್ಷ್ಣ ಪ್ರತಿಕ್ರಿಯೆ

    ಹಾನಗಲ್ ಉಪಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಬೊಮ್ಮಾಯಿ ಈಗಾಗಲೇ ಇದು ನನ್ನ ಪ್ರತಿಷ್ಠೆಯಲ್ಲ, ಹಾನಗಲ್ ಜನರ ಅಭಿವೃದ್ದಿಯ ಪ್ರತಿಷ್ಠೆ ಎಂದಿದ್ದಾರೆ. ನಾನೂ ಕೂಡ ಸಿಎಂ ಮಾತಿಗೆ ಬದ್ಧನಾಗಿದ್ದೇನೆ. ಅದು ಅಲ್ಲದೇ ಕ್ಷೇತ್ರದ ಜನರಿಗೂ ಹೇಳಿದ್ದೇನೆ. ಈ ಕ್ಷೇತ್ರ ಅಭಿವೃದ್ಧಿಯಾಗಬೇಕಾದರೆ ಬಿಜೆಪಿ ಅಭ್ಯರ್ಥಿ ಸರ್ಕಾರದ ಪರ ಇರುತ್ತಾರೆ. ಅವರನ್ನೇ ಗೆಲ್ಲಿಸಬೇಕು. ಒಂದು ಸೀಟು ಗೆದ್ದರೆ ಅಥವಾ ಸೋತರೆ ಸರ್ಕಾರಕ್ಕೇನೂ ಅಪಾಯವಿಲ್ಲ. ಆದರೂ ಕೂಡ ಯಾವುದೇ ಚುನಾವಣೆಯಲ್ಲಿ ಗೆದ್ದಾಗ ನೈತಿಕಸ್ಪೂರ್ತಿ ಹಾಗೂ ಧೈರ್ಯ ಹೆಚ್ಚಾಗುತ್ತೆ. ಬೊಮ್ಮಾಯಿ ಅವರು ಮೊದಲ ಬಾರಿಗೆ ಸಿಎಂ ಆದ ಬಳಿಕ ತಮ್ಮ ಕ್ಷೇತ್ರದಲ್ಲಿ ತೊಡಗಿಕೊಂಡಿರುವುದು ಸಹಜವಾಗಿ ಎಲ್ಲರಿಗೂ ಕುತೂಹಲ ಹೆಚ್ಚಾಗಿರುತ್ತೆ ಎಂದು ಹೇಳಿದ್ದಾರೆ.

  • ಪಾಸಿಟಿವಿಟಿ ರೇಟ್ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಆ.23ರಿಂದ ಶಾಲೆ ಆರಂಭ: ಶಿಕ್ಷಣ ಸಚಿವ ನಾಗೇಶ್

    ಪಾಸಿಟಿವಿಟಿ ರೇಟ್ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಆ.23ರಿಂದ ಶಾಲೆ ಆರಂಭ: ಶಿಕ್ಷಣ ಸಚಿವ ನಾಗೇಶ್

    ಯಾದಗಿರಿ: ಆಗಸ್ಟ್ 23 ರಿಂದ ಶಾಲೆ ಆರಂಭ ಮಾಡುತ್ತೇವೆ, ಪಾಸಿಟಿವಿಟಿ ರೇಟ್ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ಆರಂಭ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

    ಧ್ವಜಾರೋಹಣ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭ ಮಾಡಬೇಕು, ಪೋಷಕರು ಧೈರ್ಯವಾಗಿ ಮಕ್ಕಳನ್ನು ಶಾಲೆಗೆ ಕಳುಹಿಸಿ. ಮಕ್ಕಳ ಊರಿನ ಪಾಸಿಟಿವಿಟಿ ರೇಟ್ ಚೆಕ್ ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.

    ಹೊರಗುತ್ತಿಗೆಯ ಮೂಲಕ ಶಿಕ್ಷಕರನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು, ಶಿಕ್ಷಕರ ವರ್ಗಾವಣೆ ಅಧಿಸೂಚನೆ ಬಂದಿದೆ ಆದಷ್ಟು ಬೇಗ ಈ ಕಾರ್ಯ ಆರಂಭವಾಗುತ್ತೆ. ಎಲ್ಲವನ್ನೂ ಅವಲೋಕಿಸಿ ಶಾಲೆ ಆರಂಭಿಸಲಾಗುವುದು ಎಂದರು.

    ಸಿ.ಟಿ.ರವಿ ಪ್ರಿಯಾಂಕ ಖರ್ಗೆ ಜಟಾಪಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಷ್ಟ್ರೀಯ ಯೋಜನೆಗಳಿಗೆ ಕೇವಲ ಒಂದೇ ಕುಟುಂಬದ ಮೂರು ಜನರ ಹೆಸರು ಇಟ್ಟರೆ ಹೇಗೆ? ವ್ಯಕ್ತಿಯ ಹಿಂದೆ ನಮ್ಮ ಸರ್ಕಾರ ಹೊಗಿಲ್ಲ. ಇದು ಸಮಾಜದ ದುಡ್ಡು, ಇಲ್ಲಿ ವ್ಯಕ್ತಿಯ ವಯಕ್ತಿಕ ಬೆಳವಣಿಗೆ ಮುಖ್ಯ ಅಲ್ಲ, ದೇಶಕ್ಕಾಗಿ ಬಹಳ ಜನ ಪ್ರಾಣ ಕೊಟ್ಟಿದ್ದಾರೆ. ನಾವು ಅಂತಹವರನ್ನು ಸ್ಮರಿಸಿಕೊಳ್ಳಬೇಕಿದೆ ಎಂದರು.

  • ಪಠ್ಯಕ್ರಮ ಕಡಿಮೆ ಮಾಡಿ ಮಕ್ಕಳನ್ನು ಪಾಸ್ ಮಾಡಿ- ಪಬ್ಲಿಕ್ ಟಿವಿ ಅಭಿಯಾನಕ್ಕೆ ಶೋಭಾ ಕರಂದ್ಲಾಜೆ ಮೆಚ್ಚುಗೆ

    ಪಠ್ಯಕ್ರಮ ಕಡಿಮೆ ಮಾಡಿ ಮಕ್ಕಳನ್ನು ಪಾಸ್ ಮಾಡಿ- ಪಬ್ಲಿಕ್ ಟಿವಿ ಅಭಿಯಾನಕ್ಕೆ ಶೋಭಾ ಕರಂದ್ಲಾಜೆ ಮೆಚ್ಚುಗೆ

    ಉಡುಪಿ: ವಿದ್ಯಾಗಮ ಸತತ ವರದಿ ಮಾಡಿದ್ದ ಪಬ್ಲಿಕ್ ಟಿವಿಗೆ ಗೆಲುವಾಗಿದ್ದು, ರಾಜ್ಯ ಸರ್ಕಾರ ಯೋಜನೆಯನ್ನು ತಾತ್ಕಾಲಿಕ ಸ್ಥಗಿತ ಮಾಡಿದೆ. ಇದು ಪಬ್ಲಿಕ್ ಟಿವಿ ಅಭಿಯಾನದ ಗೆಲುವು ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿನಂದನೆ ಸಲ್ಲಿಸಿದ್ದಾರೆ.

    ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಇದು ಪಬ್ಲಿಕ್ ಟಿವಿ ಸಂಪಾದಕರ ದನಿಗೆ ಗೆಲುವು ಎಂದರು.

    ವಿದ್ಯಾಗಮ ಯಾವುದೇ ಕಾರಣಕ್ಕೂ ಮುಂದುವರಿಯಬಾರದು. ಯೋಜನೆ ಶಿಕ್ಷಕರಿಗೂ ಮತ್ತು ಮಕ್ಕಳಿಗೂ ಮಾರಕ. ಈ ವರ್ಷ ಶಾಲೆ ಬೇಡವೇ ಬೇಡ. ಎಸ್‍ಎಸ್‍ಎಕ್‍ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಶಿಕ್ಷಣ ಬಹಳ ಮುಖ್ಯ. ಅವರಿಗೆ ಬೇರೆಯದೇ ಆದ ವಿಶೇಷವಾದ ಯೋಜನೆಯನ್ನು ಮಾಡಿ ಎಂದು ರಾಜ್ಯ ಸರಕಾರಕ್ಕೆ ಸಲಹೆ ಕೊಟ್ಟರು.

    ಉಳಿದ ಎಲ್ಲಾ ತರಗತಿಯ ಮಕ್ಕಳನ್ನು ಆನ್‍ಲೈನ್ ಶಿಕ್ಷಣದ ಮೂಲಕ ಕಡಿಮೆ ಪಾಠ ಮಾಡಿ ಪಾಸ್ ಮಾಡಿ. ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಕರೆಯನ್ನು ಕೊಟ್ಟಿದ್ದಾರೆ. ಮೊದಲು ಜೀವ ಉಳಿಸಬೇಕು. ಆನಂತರ ಜೀವನವನ್ನು ರೂಪಿಸಬೇಕು. ರಾಜ್ಯ ಸರ್ಕಾರ ಇದನ್ನು ಪಾಲಿಸಬೇಕು ಎಂದು ಸಲಹೆ ಕೊಟ್ಟರು. 2020ರಲ್ಲಿ ಜೀವ ಉಳಿಸಿಕೊಳ್ಳಬೇಕು. 2021ರಲ್ಲಿ ಜೀವನವನ್ನು ಆರಂಭಿಸೋಣ ಎಂದರು.

    ಕೆಲವು ಜಿಲ್ಲೆಗಳು ನಮಗೆ ಶಿಕ್ಷಣ ಮುಖ್ಯ ಎಂದು ಹೇಳುತ್ತವೆ. ಅಂತಹವರಿಗೆ ಆನ್‍ಲೈನ್ ಶಿಕ್ಷಣದ ಮೂಲಕ ಪಾಠ ಮಾಡಬಹುದು. ಮನೆಗಳಲ್ಲಿ ಪೋಷಕರು ಕೂಡ ಮಕ್ಕಳಿಗೆ ಪಾಠ ಮಾಡಬೇಕು. ಈಗಿನ ಕಾಲದಲ್ಲಿ ಮನೆಯಲ್ಲಿ ಒಂದು ಎರಡು ಮಕ್ಕಳಿರುತ್ತಾರೆ. ಅವರಿಗೂ ಕೂಡ ಸೋಂಕು ಆವರಿಸಿದರೆ ಬಹಳಷ್ಟು ಕಷ್ಟ ಆಗುತ್ತದೆ.

    ಶಾಲೆ ಆರಂಭ ಮಾಡಿ ಎಂಬ ಒತ್ತಡದ ಮೇಲೆ ಒತ್ತಡ ಬಂದದ್ದಕ್ಕೆ ರಾಜ್ಯ ಸರ್ಕಾರ ಶಾಲೆಗಳನ್ನು ಆರಂಭ ಮಾಡುವ ಯೋಜನೆ ಮಾಡಿತ್ತು. ರಾಜ್ಯ ಸರ್ಕಾರಕ್ಕೆ ಈಗ ಅನುಭವಕ್ಕೆ ಬಂದಿದೆ, ಶಾಲೆಗಳು ಬೇಡ ಅಂತ ಹೇಳಿ ಆದೇಶ ಮಾಡಿದೆ ಶಾಲೆ ಬೇಡ ಅನ್ನುವ ಮಾಧ್ಯಮಗಳ ಅಭಿಯಾನಕ್ಕೆ ನಾನು ಕೈ ಜೋಡಿಸಿದ್ದೇನೆ. ಡಿಸೆಂಬರ್ ತನಕ ಯಾವುದೇ ಕಾರಣಕ್ಕೂ ಶಾಲೆಗಳನ್ನು ತೆರೆಯುವುದು ಬೇಡ. ಜನವರಿ ತಿಂಗಳಲ್ಲಿ ಮತ್ತೆ ಪ್ರತಿ ಜಿಲ್ಲೆಯಿಂದ ವರದಿಗಳನ್ನು ತರಿಸಿಕೊಳ್ಳಿ ಎಂದು ಶೋಭಾ ಕರಂದ್ಲಾಜೆ ಹೇಳಿದರು.

    ಕೊರೊನಾದ ವ್ಯಾಪಕತೆ ಕಡಿಮೆಯಾದರೆ, ಲಸಿಕೆ ಬಂದರೆ ಮತ್ತೆ ವಿದ್ಯಾಗಮ ಶಾಲೆ ಆರಂಭಿಸಿ. ಶಾಲೆ ಬೇಡ ಅನ್ನುವುದಕ್ಕೆ ಒಂದು ನಿರ್ದಿಷ್ಟವಾದ ಕಾರಣ ಇದೆ. ಹಾಗಾಗಿ ನಾವು ಬೇಡ ಅನ್ನುತ್ತಿದ್ದೇನೆ. ಪಠ್ಯಕ್ರಮವನ್ನು ಕಡಿಮೆ ಮಾಡಿ ಮಕ್ಕಳನ್ನು ಪಾಸ್ ಮಾಡಿ. ಅವರ ಒಂದು ವರ್ಷವನ್ನು ಲಾಸ್ ಮಾಡಬೇಡಿ. ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟ. ಈ ಎರಡು ತರಗತಿಗಳ ವಿದ್ಯಾರ್ಥಿಗಳ ಪರವಾಗಿ ರಾಜ್ಯ ಸರ್ಕಾರ ಶಿಕ್ಷಣ ತಜ್ಞರು ಏನಾದರೂ ವಿಶೇಷವಾದ ಯೋಜನೆಯನ್ನು ಜಾರಿಗೆ ತರಬೇಕು. ಸರ್ಕಾರದ ಕೋವಿಡ್ ನಿಯಮಾವಳಿಗಳನ್ನು ದೊಡ್ಡ ಮಕ್ಕಳು ಸುಲಭವಾಗಿ ಪಾಲಿಸಬಹುದು ಎಂದು ಅಭಿಪ್ರಾಯಪಟ್ಟರು.