Tag: ಶಾಸಕರು

  • ಒಬ್ಬರ ಕ್ಷೇತ್ರದಲ್ಲಿ ಹಿಡಿತ ಸಾಧಿಸಲು ಮತ್ತೊಬ್ಬರಿಂದ ಕಿತ್ತಾಟ ಶುರು- ಹೈಕಮಾಂಡ್ ಗೆ ದೂರು

    ಒಬ್ಬರ ಕ್ಷೇತ್ರದಲ್ಲಿ ಹಿಡಿತ ಸಾಧಿಸಲು ಮತ್ತೊಬ್ಬರಿಂದ ಕಿತ್ತಾಟ ಶುರು- ಹೈಕಮಾಂಡ್ ಗೆ ದೂರು

    ಬಳ್ಳಾರಿ: ಆಡಳಿತಾರೂಢ ಶಾಸಕರು ತಮ್ಮ ಕ್ಷೇತ್ರದಲ್ಲಿ ಕಚೇರಿ ತೆರೆಯುವುದು ಸಾಮಾನ್ಯ. ಆದ್ರೆ ಕಾಂಗ್ರೆಸ್ ಶಾಸಕರೊಬ್ಬರು ಮತ್ತೊಬ್ಬ ಕಾಂಗ್ರೆಸ್ ಶಾಸಕರ ಕ್ಷೇತ್ರದಲ್ಲಿ ಸಮಾಜ ಸೇವೆ ಮಾಡೋ ನೆಪದಲ್ಲಿ ಜನಸಂಪರ್ಕ ಕಚೇರಿ ತೆರದು ವಿವಾದ ಸೃಷ್ಠಿ ಮಾಡಿದ್ದಾರೆ.

    ಹೌದು. ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಮುಂದೆಯೇ ಕಿತ್ತಾಡಿಕೊಂಡಿದ್ದ ಹಗರಿಬೊಮ್ಮನಹಳ್ಳಿಯ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ಹಾಗೂ ಹೊಸಪೇಟೆ ಶಾಸಕ ಆನಂದ್ ಸಿಂಗ್, ಇದೀಗ ಒಬ್ಬರ ಕ್ಷೇತ್ರದಲ್ಲಿ ಮತ್ತೊಬ್ಬರು ಪ್ರತಿಷ್ಠೆ ಮೆರೆಯಲು ಮುಂದಾಗುವ ಮೂಲಕ ಕೈಕೈ ಮಿಲಾಯಿಸಲು ಸಜ್ಜಾಗಿದ್ದಾರೆ.

    ಶಾಸಕ ಆನಂದಸಿಂಗ್ ಹೊಸಪೇಟೆ ಕ್ಷೇತ್ರ ಬಿಟ್ಟು ಹಗರಿಬೊಮ್ಮನಹಳ್ಳಿ ಕ್ಷೇತ್ರಕ್ಕೆ ಲಗ್ಗೆ ಇಟ್ಟು ಜನಸಂಪರ್ಕ ಕಚೇರಿ ತೆರೆದು ಜನಸೇವೆ ನೆಪದಲ್ಲಿ ಭೀಮಾನಾಯ್ಕರನ್ನು ಮಣಿಸಲು ಮುಂದಾಗಿದ್ದಾರೆ. ಎರಡು ತಿಂಗಳ ಹಿಂದೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಆನಂದ್ ಸಿಂಗ್ ಹಸ್ತಕ್ಷೇಪದ ಬಗ್ಗೆ ಶಾಸಕ ಭೀಮಾನಾಯ್ಕ್ ತಕರಾರು ತೆಗೆದಿದ್ದರು. ಇದೀಗ ಒಂದು ಹೆಜ್ಜೆ ಮುಂದೆ ಹೋಗಿರುವ ಆನಂದ್ ಸಿಂಗ್ ಹಗರಿಬೊಮ್ಮನಹಳ್ಳಿಯಲ್ಲಿ ಜನಸಂಪರ್ಕ ಕಚೇರಿ ತೆರೆದು ಸಮಾಜ ಸೇವೆ ಮಾಡೋದಾಗಿ ಹೇಳುತ್ತಿದ್ದಾರೆ. ಇದು ಭೀಮಾನಾಯ್ಕ್ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಮುಂದೆ ಕ್ಷೇತ್ರದಲ್ಲಿ ಏನೇ ಆದ್ರೂ ಅದಕ್ಕೆ ಆನಂದ್ ಸಿಂಗ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಹೊಣೆ ಅಂತಾ ಭೀಮಾನಾಯ್ಕ್ ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ.

    ಮಾಜಿ ಸಿಎಂ ಸಿದ್ದರಾಮಯ್ಯ ಮಾತಿಗೂ ಬೆಲೆ ಕೊಡದ ಆನಂದ್ ಸಿಂಗ್, ಭೀಮಾನಾಯ್ಕ್ ವಿರುದ್ಧ ತೊಡೆತಟ್ಟಿ ನಿಂತಿದ್ದಾರೆ. ಹೀಗಾಗಿ ಭೀಮಾನಾಯ್ಕ್ ಕಾಂಗ್ರೆಸ್ ಹೈಕಮಾಂಡ್‍ಗೆ ಲಿಖಿತ ದೂರು ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • 3 ಬಾರಿ ಗೆದ್ದ ಶಾಸಕರಿಗಿಂತ ಪವರ್ ಫುಲ್ ಆದ್ರು ನಟಿ ಪೂಜಾಗಾಂಧಿ..!

    3 ಬಾರಿ ಗೆದ್ದ ಶಾಸಕರಿಗಿಂತ ಪವರ್ ಫುಲ್ ಆದ್ರು ನಟಿ ಪೂಜಾಗಾಂಧಿ..!

    ಬೆಂಗಳೂರು: ಶಾಸಕರಿಗಿಂತ ಸ್ಯಾಂಡಲ್‍ವುಡ್‍ನ ನಟಿ ನಗರದಲ್ಲಿ ಪವರ್ ಫುಲ್ ಆಗಿದ್ದು, ಬೆಂಗಳೂರಿನ ಶಾಸಕರುಗಳು ಬಿಡಿಎಯಲ್ಲಿ ಕೆಲಸ ಆಗ್ತಿಲ್ಲ ಅಂತ ಹೇಳಿದ್ರೂ ಕೆಲಸ ಮಾತ್ರ ಆಗುತ್ತಿರಲಿಲ್ಲ. ಆದರೆ ಈ ನಟಿಯ ಕಡೆಯ ಫೈಲ್ ಬಂದರೆ ಬಿಡಿಎಯಲ್ಲಿ ನೀರು ಕುಡಿದಷ್ಟೆ ಸಲಿಸಾಗಿ ಕೆಲಸ ಆಗುತ್ತದೆ ಎಂದು ಕಾಂಗ್ರೆಸ್ ಶಾಸಕರು ಗರಂ ಆಗಿದ್ದಾರೆ.

    ನಟಿ ಪೂಜಾ ಗಾಂಧಿ, 2-3 ಬಾರಿ ಗೆದ್ದ ಶಾಸಕರಿಗಿಂತ 5 ವರ್ಷದಲ್ಲಿ 3 ಪಕ್ಷ ಬದಲಿಸಿದ್ದಾರೆ. ನಟಿ ಮಣಿಯ ಕೆಲಸ ಬಿಡಿಎಯಲ್ಲಿ ನಡೆಯುತ್ತದೆ. ನಮ್ಮ ಕೆಲಸ ನಡೆಯಲ್ಲ ಎಂದು ನಗರದ ಕಾಂಗ್ರೆಸ್ ಶಾಸಕರು ಮಾತನಾಡಿಕೊಳ್ಳುತ್ತಿದ್ದಾರೆ.

     

    ನಾವು ಶಾಸಕರಾಗುವ ಬದಲು ಬಣ್ಣ ಹಚ್ಚಿಕೊಂಡರೆ ಕೆಲಸ ಆಗುತ್ತಾ ಅಂತ ನಗರದ ಕಾಂಗ್ರೆಸ್ ಶಾಸಕರು ಗರಂ ಆಗಿ ಡಿಸಿಎಂ ಪರಮೇಶ್ವರ್ ರನ್ನ ಕೇಳಿದ್ದಾರೆ. ಅಷ್ಟೇ ಅಲ್ಲದೇ ಏನು ಮಾಡುತ್ತೀರೋ ಗೊತ್ತಿಲ್ಲ ಸರ್ ಬಿಡಿಎ ಆಯುಕ್ತ ರಾಕೇಶ್ ಸಿಂಗ್ ರನ್ನ ಬದಲಿಸಿ ಅಂತ ಶಾಸಕರಾದ ಬೈರತಿ ಬಸವರಾಜು ಹಾಗೂ ಸೋಮಶೇಖರ್ ನೇತೃತ್ವದ ಕಾಂಗ್ರೆಸ್ ಶಾಸಕರ ತಂಡ ಡಿಸಿಎಂ ಪರಮೇಶ್ವರ್ ಗೆ ದೂರು ನೀಡಿದ್ದಾರೆ.

    ಸಮ್ಮಿಶ್ರ ಸರ್ಕಾರ ಬಂದು 5 ತಿಂಗಳು ಕಳೆದರೂ ಬಿಡಿಎಯಲ್ಲಿ ಮೊದಲಿನ ವೇಗದಲ್ಲಿ ಕೆಲಸ ಆಗುತ್ತಿಲ್ಲ ಎಂಬುದು ಕಾಂಗ್ರೆಸ್ ಶಾಸಕರ ದೂರಾಗಿದೆ. ಬಿಡಿಎ ಆಯುಕ್ತ ರಾಕೇಶ್ ಸಿಂಗ್ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅವರನ್ನ ಬದಲಿಸಿ ಅಂತ ನಗರದ ಕಾಂಗ್ರೆಸ್ ಶಾಸಕರು ಮೊದಲೇ ಡಿಸಿಎಂ ಪರಮೇಶ್ವರ್  ದೂರು ನೀಡಿದ್ದರು. ಎರಡು ಮೂರು ಬಾರಿ ಗೆದ್ದ ಶಾಸಕರುಗಳಾದ ನಮ್ಮ ಕೆಲಸವೇ ಬಿಡಿಎಯಲ್ಲಿ ಆಗುತ್ತಿಲ್ಲ. ಆದರೆ ನಟಿ ಪೂಜಾ ಗಾಂಧಿ ಕೆಲಸ ಮಾತ್ರ ಬಿಡಿಎಯಲ್ಲಿ ಸಲಿಸಾಗಿ ಆಗುತ್ತೆ ಅಂತ ಕಾಂಗ್ರೆಸ್ ಶಾಸಕರು ಡಿಸಿಎಂ ಪರಮೇಶ್ವರ್ ಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

    ರಾಕೇಶ್ ಸಿಂಗ್

    ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯರಿಗೂ ದೂರು ನೀಡಿ ಬಿಡಿಎ ಆಯುಕ್ತ ರಾಕೇಶ್ ಸಿಂಗ್ ಬದಲಿಸಿ ಅಂತ ಒತ್ತಡ ಹೇರಿದ್ದರು. ಒಂದೇ ಕೆಲಸಕ್ಕೆ ನಾವು ಹತ್ತಾರು ಬಾರಿ ಬಿಡಿಎ ಮೆಟ್ಟಿಲು ಹತ್ತಿ ಇಳಿಯಬೇಕು. ಆದರೆ ನಟಿ ಪೂಜಾ ಗಾಂಧಿ ಕಡೆಯಿಂದ ಬರುವ ಫೈಲ್‍ ಗೆ ಮಾತ್ರ ಕೂಡಲೆ ಪ್ರತಿಕ್ರಿಯೆ ಸಿಗುತ್ತದೆ ಯಾಕೆ ಅನ್ನೋದು ಶಾಸಕರ ಪ್ರೆಶ್ನೆ ಆಗಿದೆ.

    ರಾಜಕೀಯದಲ್ಲಿ ಏನೂ ಅಲ್ಲದೆ 3-4 ಪಕ್ಷ ಬದಲಿಸಿದ ಪೂಜಾಗಾಂಧಿಗೆ ಇರುವ ಬೆಲೆ, ಮೂರು ಮೂರು ಬಾರಿ ಗೆದ್ದು ಶಾಸಕರಾದ ನಮ್ಮ ಮಾತಿಗೆ ಇಲ್ವಾ ಅಂತ ಗರಂ ಆಗಿ ಪ್ರಶ್ನಿಸಿದ್ದಾರೆ. ಏನು ಮಾಡುತ್ತೀರೋ ಗೊತ್ತಿಲ್ಲ, ನಮ್ಮ ಸಮಸ್ಯೆ ಬಗೆ ಹರಿಸಿ. ಬಿಡಿಎ ಆಯುಕ್ತ ರಾಕೇಶ್ ಸಿಂಗ್ ರನ್ನ ಮೊದಲು ಬದಲಿಸಿ ಅಂತ ಪಟ್ಟು ಹಿಡಿದಿದ್ದರು ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.

    ಶಾಸಕರ ಒತ್ತಾಯಕ್ಕೆ ಮಣಿದು ಸ್ವಲ್ಪ ಸಮಯಾವಕಾಶ ಕೊಡಿ ಎಲ್ಲವನ್ನು ಸರಿಪಡಿಸುತ್ತೀನಿ ಅಂತ ಪರಮೇಶ್ವರ್ ಶಾಸಕರನ್ನ ಸಮಾಧಾನ ಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಉಗ್ರಪ್ಪನ ಗೆಲ್ಲಿಸಿದ ರೂವಾರಿಗಳಿಗೆ ಸಚಿವ ಸ್ಥಾನದ ಕನಸು – ನ. 12ರ ನಂತರ ಸಂಪುಟ ವಿಸ್ತರಣೆ

    ಉಗ್ರಪ್ಪನ ಗೆಲ್ಲಿಸಿದ ರೂವಾರಿಗಳಿಗೆ ಸಚಿವ ಸ್ಥಾನದ ಕನಸು – ನ. 12ರ ನಂತರ ಸಂಪುಟ ವಿಸ್ತರಣೆ

    ಬೆಂಗಳೂರು: ಉಪಚುನಾವಣೆಯ ಫಲಿತಾಂಶ ಮುಗಿದ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಹೊಸ ಲೆಕ್ಕಾಚಾರವೊಂದು ಶುರುವಾಗಿದೆ. ಉಗ್ರಪ್ಪರನ್ನು ಲೀಡ್ ಕೊಟ್ಟು ಗೆಲ್ಲಿಸಿದ್ದ ಕಾಂಗ್ರೆಸ್ ಶಾಸಕರ ಕನಸು ಚಿಗುರಿದೆ.

    ಉಗ್ರಪ್ಪರನ್ನ ಗೆಲ್ಲಿಸಿದ ಬಳ್ಳಾರಿಯ 6 ಜನ ಕಾಂಗ್ರೆಸ್ ಶಾಸಕರಲ್ಲಿ ಯಾರಿಗೆ ಒಲಿಯಲಿದೆ ಮಂತ್ರಿ ಸ್ಥಾನ…? ಯಾರಾಗಲಿದ್ದಾರೆ ಬಳ್ಳಾರಿ ಕೋಟೆಯ ಸಾಮ್ರಾಟ ಅನ್ನೋ ಕುತೂಹಲ ಮತ್ತೆ ಮೂಡಿದೆ. ಚುನಾವಣಾ ಫಲಿತಾಂಶಕ್ಕೂ ಮುನ್ನ ಸೋಲಿನ ಆತಂಕದಲ್ಲಿದ್ದ ಸಿದ್ದರಾಮಯ್ಯ, ಎಲ್ಲಾ ಶಾಸಕರನ್ನು ಕರೆದು ಯಾರು ಹೆಚ್ಚು ಲೀಡ್ ಕೊಡ್ತಾರೋ ಅವರ ಹೆಸರು ಮಂತ್ರಿ ಸ್ಥಾನಕ್ಕೆ ಪರಿಗಣಿಸುವುದಾಗಿ ಟಾಸ್ಕ್ ನೀಡಿದ್ದರು. ಹೀಗಾಗಿ ಮಂತ್ರಿ ಸ್ಥಾನದ ಹಟಕ್ಕೆ ಬಿದ್ದು 6 ಮಂದಿ ಶಾಸಕರು ತಲಾ 30 ಸಾವಿರ ಲೀಡ್ ಕೊಟ್ಟರು. ಈಗ ಮಂತ್ರಿಗಿರಿ ಯಾರಿಗೆ ಎಂಬುದೇ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

    ಸಚಿವ ಸ್ಥಾನದ ಆ ಆರು ಆಕಾಂಕ್ಷಿಗಳು ಯಾರು..?
    * ಸಂಡೂರಿನ ತುಕಾರಾಂ ಅವರು ಮೂರನೇ ಬಾರಿಗೆ ಕಾಂಗ್ರೆಸ್ ಶಾಸಕರಾಗಿರುವ ಇವರು ರಾಜ್ಯ ಕಾಂಗ್ರೆಸ್ ನಾಯಕರ ಪಾಲಿಗೆ ಮಂತ್ರಿ ಸ್ಥಾನದ ಡಾರ್ಕ್ ಹಾರ್ಸ್ ಆಗಿದ್ದಾರೆ. ಜಾತಿ ಲೆಕ್ಕಾಚಾರದಲ್ಲಿ ತುಕಾರಾಂ ಮೇಲೆ ಮಂತ್ರಿ ಸ್ಥಾನದ ಒಲವು ಹೆಚ್ಚಿದೆ.

    * ಹೂವಿನಹಡಗಲಿ ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ್ ಅವರು 30 ಸಾವಿರದಷ್ಟು ಲೀಡ್ ತಂದುಕೊಟ್ಟಿದ್ದಾರೆ. ಇವರು ಸತತವಾಗಿ 4 ಬಾರಿ ಗೆದ್ದಿದ್ದು ಕಳೆದ ಬಾರಿ ಸಚಿವರಾಗಿದ್ದವರು. ಅಲ್ಲದೇ ಮಾಜಿ ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಮೂರೂವರೆ ವರ್ಷ ಸಚಿವರಾಗಿದ್ದರು. ಇದೀಗ ಮತ್ತೆ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.

    * ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕರಾಗಿರೋ ಭೀಮಾ ನಾಯಕ್ ಅವರು 2ನೇ ಬಾರಿಗೆ ಶಾಸಕರಾಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಟಾರ್ಗೆಟನ್ನು ಬಳ್ಳಾರಿ ಶಾಸಕರು ರೀಚ್ ಮಾಡಿದ್ರಾ? ಯಾವ ಶಾಸಕರ ಕ್ಷೇತ್ರದಲ್ಲಿ ಎಷ್ಟು ಲೀಡ್?

    * ಬಳ್ಳಾರಿ ಗ್ರಾಮೀಣ ಭಾಗದ ಶಾಸಕರಾಗಿರುವ ನಾಗೇಂದ್ರ ಕೂಡ ಇದೀಗ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಇವರು 3 ನೇ ಬಾರಿ ಶಾಸಕರಾಗಿದ್ದಾರೆ.

    * ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಇವರು ಈ ಹಿಂದೆ ಹಲವು ಬಾರಿ ತನಗೆ ಸಚಿವ ಸ್ಥಾನ ನೀಡಲೇಬೇಕೆಂದು ಒತ್ತಾಯಿಸಿದ್ದರು.

    * ಕಂಪ್ಲಿ ಶಾಸಕ ಗಣೇಶ್ ಅವರು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಮೊದಲ ಬಾರಿಗೆ ಶಾಸಕರಾಗಿದ್ದರೂ ಕೂಡ ಸಚಿವ ಸ್ಥಾನ ನೀಡಬೇಕೆಂದು ಹೇಳುತ್ತಿದ್ದಾರೆ. ಇದನ್ನೂ ಓದಿ: ನನ್ನ ಶರ್ಟ್ ಹಿಡಿದು ಕೇಳುವ ಹಕ್ಕು ಬಳ್ಳಾರಿ ಜನರಿಗಿದೆ: ವಿ.ಎಸ್ ಉಗ್ರಪ್ಪ

    ಒಟ್ಟಿನಲ್ಲಿ ಕಾಂಗ್ರೆಸ್ ಶಾಸಕರಿಗೆ ಈ ತಿಂಗಳ 12ರ ನಂತರ ಬಂಪರ್ ಗಿಫ್ಟ್ ಸಿಗೋದು ಗ್ಯಾರಂಟಿಯಾಗಿದೆ. ಸಂಪುಟ ವಿಸ್ತರಣೆಗೆ ನವಂಬರ್ 12ರ ನಂತರ ಮುಹೂರ್ತ ಫಿಕ್ಸ್ ಆಗಿದ್ದು, ಕಾಂಗ್ರೆಸ್-ಜೆಡಿಎಸ್ ಹೈಕಮಾಂಡ್ ಮಾತುಕತೆ ಪ್ರಕಾರ ನವೆಂಬರ್ 12 ರ ನಂತರ ಸಂಪುಟ ವಿಸ್ತರಣೆ ನಡೆಯಲಿದೆ.

    ಚುನಾವಣಾ ಫಲಿತಾಂಶ ದಿನದಂದೇ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ದೇವೇಗೌಡರನ್ನ ಭೇಟಿಯಾಗಿದ್ದರು. ಈ ವೇಳೆ ಆದಷ್ಟು ಬೇಗ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ನೇಮಕಾತಿಗೆ ದೇವೇಗೌಡರು ಸೂಚನೆ ನೀಡಿದ್ದಾರೆ. ಅಲ್ಲದೇ ಈ ಕುರಿತು ವೇಣುಗೋಪಾಲ್ ಅವರು ನವೆಂಬರ್ 9 ರಂದು ರಾಹುಲ್ ಗಾಂಧಿ ಜೊತೆ ಸಹ ದೂರವಾಣಿಯಲ್ಲಿ ದೂರವಾಣಿಯಲ್ಲಿ ಚರ್ಚೆ ನಡೆಸಲಿದ್ದಾರೆ. ನವೆಂಬರ್ 09, 10ರಂದು ಕಾಂಗ್ರೆಸ್, ಜೆಡಿಎಸ್ ನಾಯಕರೊಂದಿಗೆ ಅಂತಿಮ ಸುತ್ತಿನ ಮಾತುಕತೆ ನಡೆಯಲಿದೆ. ನ.11ರ ಹೈಕಮಾಂಡ್‍ಗೆ ರಾಜ್ಯ ಕಾಂಗ್ರೆಸ್ ನಾಯಕರು ಅಂತಿಮ ಪಟ್ಟಿ ಸಲ್ಲಿಸಲಿದ್ದಾರೆ ಎನ್ನುವ ಮಾಹಿತಿಯೊಂದು ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ:  ಸೋಲು ಅನಾಥ, ನಾನೇ ಬಳ್ಳಾರಿ ಸೋಲಿನ ಹೊಣೆ ಹೊರುತ್ತೇನೆ: ಶ್ರೀರಾಮುಲು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಿದ್ದರಾಮಯ್ಯ ಟಾರ್ಗೆಟನ್ನು ಬಳ್ಳಾರಿ ಶಾಸಕರು ರೀಚ್ ಮಾಡಿದ್ರಾ? ಯಾವ ಶಾಸಕರ ಕ್ಷೇತ್ರದಲ್ಲಿ ಎಷ್ಟು ಲೀಡ್?

    ಸಿದ್ದರಾಮಯ್ಯ ಟಾರ್ಗೆಟನ್ನು ಬಳ್ಳಾರಿ ಶಾಸಕರು ರೀಚ್ ಮಾಡಿದ್ರಾ? ಯಾವ ಶಾಸಕರ ಕ್ಷೇತ್ರದಲ್ಲಿ ಎಷ್ಟು ಲೀಡ್?

    ಬಳ್ಳಾರಿ: ಲೋಕಸಭಾ ಉಪಚುನಾವಣೆಗೂ ಮುನ್ನ ಬಳ್ಳಾರಿ ಶಾಸಕರ ಸಭೆ ನಡೆಸಿ ಚುನಾವಣೆಯಲ್ಲಿ ಪ್ರತಿ ಶಾಸಕರಿಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ನೀಡಿದ್ದ ಟಾರ್ಗೆಟನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಉಗ್ರಪ್ಪ ಭಾರೀ ಅಂತರದಿಂದ ಗೆದ್ದಿದ್ದಾರೆ.

    ಉಗ್ರಪ್ಪ ಅವರ ಗೆಲುವು ತಮ್ಮ ಸ್ವಕ್ಷೇತ್ರದಲ್ಲಿ ಶ್ರೀರಾಮುಲು ಅವರಿಗೆ ಭಾರೀ ಮುಖಭಂಗಕ್ಕೆ ಕಾರಣವಾಗಿದೆ. ಆದರೆ ಇದರ ಹಿಂದೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೀಡಿದ ಗುರಿಯೇ ಪ್ರಮುಖವಾಗಿ ಕೆಲಸ ಮಾಡಿದೆ ಎನ್ನಲಾಗಿದೆ. ಚುನಾವಣೆ ಮತ ಎಣಿಕೆಯ ಕೊನೆಯ 18 ಸುತ್ತಿನ ಮುಕ್ತಾಯ ಬಳಿಕ ಉಗ್ರಪ್ಪ 6,28,163 ಮತ, ಬಿಜೆಪಿ ಅಭ್ಯರ್ಥಿ ಜೆ.ಶಾಂತಾ 3,84,892 ಮತ ಪಡೆದಿದ್ದಾರೆ. ಈ ಮೂಲಕ ಉಗ್ರಪ್ಪ ಅವರು 2,43,271 ಮತಗಳ ಭಾರೀ ಅಂತರದಲ್ಲಿ ಗೆಲುವು ಪಡೆದಿದ್ದಾರೆ. ಇತ್ತ ಪಕ್ಷೇತರ ಅಭ್ಯರ್ಥಿ ಶ್ರೀನಿವಾಸ್ 13,704 ಮತ ಪಡೆದರೆ, 12,403 ಮಂದಿ ನೋಟಾ ಮತ ಚಲಾಯಿಸಿದ್ದಾರೆ.

    ಬಳ್ಳಾರಿಯ 7 ವಿಧಾನ ಸಭಾ ಕ್ಷೇತ್ರಗಳಲ್ಲಿ 10,47,619 ಮತದಾರರು ಇದ್ದು, ಇದರಲ್ಲಿ ಯಾವ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಮತಗಳು ಲಭಿಸಿದೆ ಎಂದು ನೋಡುವುದಾದರೇ, ಸಂಡೂರು ಶಾಸಕ ಟಿ ತುಕರಾಂ ಅವರ ಕ್ಷೇತ್ರದಲ್ಲಿ ಕೈ ಅಭ್ಯರ್ಥಿಗೆ 85,140 ಮತಗಳು ಹಾಗೂ ಕಂಪ್ಲಿ ಶಾಸಕ ಜೆಎನ್ ಗಣೇಶ್ ಅವರ ಕ್ಷೇತ್ರದಲ್ಲಿ 84,446 ಮತಗಳನ್ನು ಕಾಂಗ್ರೆಸ್ ಪಡೆದಿದೆ.

    ಪ್ರಮುಖವಾಗಿ ಕಾಂಗ್ರೆಸ್ ಪಕ್ಷದ ಎನ್. ನಾಗೇಂದ್ರ ಅವರ ಕ್ಷೇತ್ರದಲ್ಲಿ 83,918 ಮತ ಹಾಗೂ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯಕ್ ಕ್ಷೇತ್ರದಲ್ಲಿ 83,364 ಮತ ಲಭಿಸಿದೆ. ವಿಜಯನಗರ (ಹೊಸಪೇಟೆ) ಶಾಸಕ ಅನಂದ್ ಸಿಂಗ್ ಕ್ಷೇತ್ರದಲ್ಲಿ 82,832, ಎನ್ ನಾಗೇಂದ್ರ ಶಾಸಕರಾಗಿರುವ ಬಳ್ಳಾರಿ ನಗರ ಕ್ಷೇತ್ರದಲ್ಲಿ 72,288, ಹೂವಿನಹಡಗಲಿ ಕ್ಷೇತ್ರದ ಶಾಸಕ ಪರಮೇಶ್ವರ್ ನಾಯ್ಕ್ ಕ್ಷೇತ್ರದಲ್ಲಿ 70,598 ಹಾಗೂ ಬಿಜೆಪಿ ಶಾಸಕರಾಗಿರುವ ಎನ್‍ವೈ ಗೋಪಾಲ ಕೃಷ್ಣ ಅವರ ಕೂಡ್ಲಿಗಿ ಕ್ಷೇತ್ರದಲ್ಲಿ 65,557 ಮತ ಲಭಿಸಿದೆ. ಸಿದ್ದರಾಮಯ್ಯ ಅವರು ಕೊಟ್ಟ ಪರೀಕ್ಷೆಯಲ್ಲಿ ಸಂಡೂರು ಶಾಸಕ ತುಕಾರಾಂ ಅತಿ ಹೆಚ್ಚು ಲೀಡ್ ಕೊಡಿಸಿದ್ದು, ಎರಡನೇ ಸ್ಥಾನದಲ್ಲಿ ಕಂಪ್ಲಿ ಶಾಸಕ ಗಣೇಶ್, ಮೂರನೇ ಸ್ಥಾನದಲ್ಲಿ ಬಳ್ಳಾರಿ ಶಾಸಕ ನಾಗೇಂದ್ರ, ನಾಲ್ಕನೇಯ ಸ್ಥಾನದಲ್ಲಿ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್, ಐದನೇ ಸ್ಥಾನದಲ್ಲಿ ಹೂವಿನಹಡಗಲಿ ಶಾಸಕ ಪರಮೇಶ್ವರ್ ನಾಯಕ್ ಹಾಗೂ 6ನೇ ಸ್ಥಾನದಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಇದ್ದಾರೆ.

    ಇತ್ತ ಬಿಜೆಪಿಗೆ ವಿಜಯನಗರ (ಹೊಸಪೇಟೆ)ದಲ್ಲಿ 53,372 ಮತ, ಹಗರಿಬೊಮ್ಮನಹಳ್ಳಿಯಲ್ಲಿ 53,102 ಮತ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ 50,663 ಮತ, ಕಂಪ್ಲಿಯಲ್ಲಿ 50,018, ಬಳ್ಳಾರಿ ನಗರದಲ್ಲಿ 48,565, ಸಂಡೂರಿನಲ್ಲಿ 46,465, ಕೂಡ್ಲಿಗಿ ಕ್ಷೇತ್ರದಲ್ಲಿ 43,528 ಮತ ಹಾಗೂ ಹೂವಿನಹಡಗಲಿ 39,179 ಮತಗಳನ್ನು ಬಿಜೆಪಿ ಪಡೆದಿದೆ.

    ಉಪಚುನಾವಣೆಯ ಬಳಿಕ ಸಮ್ಮಿಶ್ರದ ಸಂಪುಟ ವಿಸ್ತರಣೆಗೆ ಮಾಡುತ್ತೇವೆ ಎಂದು ಕಾಂಗ್ರೆಸ್ ತಮ್ಮ ಶಾಸಕರಿಗೆ ಸ್ಪಷ್ಟನೆ ನೀಡಿತ್ತು. ಈ ವೇಳೆ ಸಂಪುಟದಲ್ಲಿ ಸಚಿವ ಸ್ಥಾನ ಪಡೆಯಲು ಎಲ್ಲಾ ಶಾಸಕರು ತಮ್ಮ ಕ್ಷೇತ್ರದಲ್ಲಿ 30 ಸಾವಿರ ಮತಗಳ ಲೀಡ್ ತಂದುಕೊಡಬೇಕು. ಸಂಪುಟ ವಿಸ್ತರಣೆ ವೇಳೆ ಹೆಚ್ಚು ಲೀಡ್ ತಂದುಕೊಡುವ ಶಾಸಕರನ್ನು ಪರಿಗಣಿಸುತ್ತೇವೆ ಎಂದು ಸಿದ್ದರಾಮಯ್ಯ ಚುನಾವಣೆಗೂ ಮುನ್ನ ಆಶ್ವಾಸನೆ ನೀಡಿದ್ದರು. ಅಲ್ಲದೇ ಯಾವ ಕ್ಷೇತ್ರದಲ್ಲಿ ಬಿಜೆಪಿಗೆ ಲೀಡ್ ಬರುತ್ತದೆ ಅಂತಹ ಕ್ಷೇತ್ರದ ಶಾಸಕರನ್ನು ಪರಿಗಣಿಸುವುದಿಲ್ಲ ನೇರವಾಗಿಯೇ ಹೇಳಿದ್ದರು. ಸದ್ಯ ಸಿದ್ದರಾಮಯ್ಯ ನೀಡಿದ ಟಾರ್ಗೆಟನ್ನು ಎಲ್ಲಾ ಶಾಸಕರು ಪೂರ್ಣಗೊಳಿಸಿದ್ದು ಯಾರಿಗೆ ಸಚಿವ ಸ್ಥಾನ ಲಭಿಸಲಿದೆ ಎನ್ನುವ ಕುತೂಹಲ ಈಗ ಹೆಚ್ಚಾಗಿದೆ.

    2014ರ ಚುನಾವಣೆಯಲ್ಲಿ ಶ್ರೀರಾಮುಲು 85,144 ಮತಗಳ ಅಂತರದಿಂದ ಗೆದ್ದಿದ್ದರು. ಶ್ರೀರಾಮುಲು ಅವರಿಗೆ 5,34,406 ಮತಗಳು ಬಿದ್ದಿದ್ದರೆ, ಕಾಂಗ್ರೆಸ್ಸಿನ ಎನ್‍ವೈ ಹನುಮಂತಪ್ಪ ಅವರಿಗೆ 4,49,262 ಮತಗಳು ಬಿದ್ದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮುಧೋಳ ದುರ್ಗಾದೇವಿ ಜಾತ್ರೆಗೆ `ಹಾಲಿ ಶಾಸಕ’ನಾಗಿ ಆಗಮಿಸಿದ ಜನಾರ್ದನ ರೆಡ್ಡಿ!

    ಮುಧೋಳ ದುರ್ಗಾದೇವಿ ಜಾತ್ರೆಗೆ `ಹಾಲಿ ಶಾಸಕ’ನಾಗಿ ಆಗಮಿಸಿದ ಜನಾರ್ದನ ರೆಡ್ಡಿ!

    ಬಾಗಲಕೋಟೆ: ಜಿಲ್ಲೆಯ ಮುಧೋಳ ಪಟ್ಟಣದ ದುರ್ಗಾದೇವಿ ಜಾತ್ರಾ ನಿಮಿತ್ತ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣಿಧಣಿ, ಮಾಜಿ ಸಚಿವ ಜನಾರ್ದನ ರೆಡ್ಡಿ `ಹಾಲಿ ಶಾಸಕರು’ ಬೋರ್ಡ್ ಇರುವ ಕಾರಿನಿಂದ ಮೂಲಕ ಇಳಿಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

    ಮುಧೋಳ ಪಟ್ಟಣದಲ್ಲಿ ದುರ್ಗಾ ದೇವೆ ಜಾತ್ರೆಯ ಪ್ರಯುಕ್ತ ಇಂದು ಎತ್ತಿನಗಾಡಿ ಓಟದ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ವಿಶೇಷವಾಗಿ ಎತ್ತಿನಗಾಡಿ ಓಟದ ಸ್ಪರ್ಧೆಗೆ ಜನಾರ್ದನ ರೆಡ್ಡಿಯವರು ಚಾಲನೆ ನೀಡಿದ್ದರು.

    ಹಾಲಿ ಶಾಸಕರು ನಾಮಫಲಕವಿರುವ ಕಾರಿನಲ್ಲಿ ಜನಾರ್ದನ ರೆಡ್ಡಿ ಆಗಮಿಸಿದ್ದರು. ರೆಡ್ಡಿಯವರ ಕಾರು ಬರುತ್ತಿದ್ದಂತೆ ಕ್ಷಣಕಾಲ ಜನ ಕಣ್ಣರಳಿಸಿ ನೋಡಿದರು.

    ಕಾರಿನ ನಾಮಫಲಕ ನೋಡಿದ ಜನರು ರೆಡ್ಡಿಯವರು ಯಾವ ಕ್ಷೇತ್ರದ ಶಾಸಕ? ಅಲ್ಲದೇ ಕಾರಿನಲ್ಲಿ ಶಾಸಕರಲ್ಲದಿದ್ದರೂ ಕಾರಿನ ಮೇಲೆ ಶಾಸಕರು ಎಂಬ ನಾಮಫಲಕ ಹಾಕಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ. ಜನಾರ್ದನರೆಡ್ಡಿ ಶಾಸಕರ ನಾಮಫಲಕ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಒಂದೇ ಕ್ವಾಟರ್ ಕುಡಿರೀಪ್ಪಾ- ಕುಡುಕರಲ್ಲಿ ಶಾಸಕ ಶಿವಲಿಂಗೇಗೌಡ ಮನವಿ

    ಒಂದೇ ಕ್ವಾಟರ್ ಕುಡಿರೀಪ್ಪಾ- ಕುಡುಕರಲ್ಲಿ ಶಾಸಕ ಶಿವಲಿಂಗೇಗೌಡ ಮನವಿ

    -ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸದ್ದು ಮಾಡಿದ ಎಣ್ಣೆ ಮ್ಯಾಟರ್

    ಹಾಸನ: ಜಿಲ್ಲಾ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಂದು ಎಣ್ಣೆ ವಿಚಾರವಾಗಿಯೇ ಹೆಚ್ಚು ಸಮಯ ಚರ್ಚೆಯಾಯಿತು. ಶಾಸಕರು ಸೇರಿದಂತೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಮದ್ಯದ ಕುರಿತು ಮಾತನಾಡಿ, ಸಭೆಯನ್ನು ನಗೆಯಲ್ಲಿ ತೇಲಾಡಿಸಿದ್ರು.

    ಮೊದಲಿಗೆ ಮದ್ಯದ ವಿಚಾರ ಪ್ರಸ್ತಾಪಿಸಿದ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಅವರು, ಗ್ರಾಮಗಳಲ್ಲಿ ರೈತರಿಗೆ ಎಣ್ಣೆ ಸಾಲ ಸಿಗುತ್ತಿದೆ. ಒಂದು ಕ್ವಾಟರ್ ಕುಡಿಯುವವನು, ಸಾಲ ಸಿಗುತ್ತೆ ಅಂತಾ ಆರು-ಏಳು ಕ್ವಾಟರ್ ಕುಡಿತ್ತಿದ್ದಾನೆ. ದಯವಿಟ್ಟು ಒಂದು ಕ್ವಾಟರ್ ಮಾತ್ರ ಕುಡಿಯುವ ರೀತಿ ಮಾಡ್ರಪ್ಪ ಎಂದು ಹೇಳಿದರು. ಅವರ ಮಾತಿನ ಧಾಟಿ ಸಭೆಯಲ್ಲಿ ನಗುವಿಗೆ ಕಾರಣವಾಯಿತು.

    ಮನೆಯಲ್ಲಿ ಪತ್ನಿ, ಮಕ್ಕಳ ಬಗ್ಗೆ ಚಿಂತೆ ಮಾಡುವುದಿಲ್ಲ. ಎಮ್ಮೆ ಮಾರಿಕೊಳ್ಳುವ ಪರಿಸ್ಥಿತಿ ಬರುತ್ತಿದೆ ಎಂದು ಶಾಸಕರು ಮಾತು ಮುಗಿಸಿದರು. ಇದಕ್ಕೆ ದನಿಗೂಡಿಸಿದ ಚನ್ನರಾಯಪಟ್ಟಣ ಶಾಸಕ ಸಿ.ಎನ್.ಬಾಲಕೃಷ್ಣ ಮದ್ಯದ ಅಂಗಡಿಗಳಲ್ಲಿ ಕಳಪೆ ಗುಣಮಟ್ಟದ ನೀರನ್ನು ಮಾರಾಟ ಮಾಡುತ್ತಿದ್ದಾರೆ. ಮತ್ತಿನ ಅಮಲಿನಲ್ಲಿ ಕೆಲವರು ಅದನ್ನೇ ಕುಡಿಯುತ್ತಾರೆ. ಅಧಿಕಾರಿಗಳು ಚೆನ್ನಾಗಿ ಡ್ರೆಸ್ ಹಾಕಿಕೊಂಡು ಬರುತ್ತಾರೆ. ಕೆಲಸ ಮಾತ್ರ ಮಾಡುವುದಿಲ್ಲ ಎಂದು ಅಸಮಧಾನ ಹೊರಹಾಕಿದರು.

     

    ಇದೇ ವಿಚಾರಕ್ಕೆ ದನಿಗೂಡಿಸಿದ ಹಾಸನ ಶಾಸಕ ಪ್ರೀತಮ್ ಗೌಡ ಅವರು, ನಗರದ ಭಾಗಗಳಲ್ಲಿ ಬೆಳಗ್ಗೆಯೇ ಮದ್ಯದಂಗಡಿ ಓಪನ್ ಆಗುತ್ತಿವೆ. ದಯವಿಟ್ಟು 11 ಗಂಟೆಯ ನಂತರ ಎಣ್ಣೆ ಮಾರಾಟ ಮಾಡಬೇಕು ಅಂತಾ ಸಮಯ ನಿಗಧಿಪಡಿಸಿ ಎಂದು ಸಚಿವರಿಗೆ ಮನವಿ ಮಾಡಿಕೊಂಡರು.

    ಶಾಸಕರ ಮಾತನ್ನು ಆಲಿಸಿದ ಸಚಿವ ಎಚ್.ಡಿ.ರೇವಣ್ಣ ಅವರು ಕೂಡ, ಕುಡುಕರ ಸಮಸ್ಯೆಗಳ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಕುಡಿದು ಮನೆಗೆ ಬಂದು ಪತ್ನಿ ಹಾಗೂ ಮಕ್ಕಳ ಮೇಲೆ ಹಲ್ಲೆ ಮಾಡುತ್ತಾರೆ. ಈ ರೀತಿ ಕುಡಿದು ಓಡಾಡುವರ ಮೇಲೆ ಒಂದರೆಡು ಕೇಸ್ ಹಾಕಿ ಬುದ್ಧಿ ಕಲಿಸಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಕುಡಿದು ಬೈಕ್ ಓಡಿಸುತ್ತಾರೆ. ಒಂದು ವೇಳೆ ಬಿದ್ದು ಗಂಭೀರವಾಗಿ ಗಾಯಗೊಂಡರೆ ಪರಿಹಾರದ ಹಣ ಕೂಡ ಸಿಗಲ್ಲ. ಈ ಕುರಿತು ಅಗತ್ಯ ಕ್ರಮಕೈಗೊಳ್ಳಬೇಕು ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕುಮಾರಸ್ವಾಮಿ ಮಕ್ಕಳು, ಮೊಮ್ಮಕ್ಕಳು ಮಾತ್ರ ಶಾಸಕರಾಗಬೇಕೇ- ಸಾಹಿತಿ ವೀರಭದ್ರಪ್ಪ ಪ್ರಶ್ನೆ

    ಕುಮಾರಸ್ವಾಮಿ ಮಕ್ಕಳು, ಮೊಮ್ಮಕ್ಕಳು ಮಾತ್ರ ಶಾಸಕರಾಗಬೇಕೇ- ಸಾಹಿತಿ ವೀರಭದ್ರಪ್ಪ ಪ್ರಶ್ನೆ

    ಧಾರವಾಡ: ಕುಟುಂಬ ರಾಜಕಾರಣದ ವಿರುದ್ಧ ಸಾಹಿತಿ ಕುಂ. ವೀರಭದ್ರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ಸಿಎಂ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಮಕ್ಕಳು, ಮೊಮ್ಮಕ್ಕಳು ಮಾತ್ರ ಶಾಸಕರು ಆಗಬೇಕಾ? ರಾಜಕಾರಣ, ವಿಧಾನಸಭೆ ಅಂದ್ರೆ ಅವರಪ್ಪನ ಮನೆ ಆಸ್ತಿಯೇ ಎಂದು ಪ್ರಶ್ನೆ ಮಾಡಿದ್ದಾರೆ.

    ನಗರದಲ್ಲಿ ನಡೆದ ‘ಪ್ರತ್ಯೇಕ ರಾಜ್ಯ’ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ನನಗೂ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆಯಿದೆ. ಆದರೆ ಅವರೇ ವಿಧಾನಸೌಧದಲ್ಲಿ ಕುಟುಂಬ ರಾಜಕಾರಣ ನಡೆಯುತ್ತಿದೆ. ಬೇರೆಯವರಿಗೆ ಸ್ಪರ್ಧಿಸುವ ಹಕ್ಕಿಲ್ಲವೇ ಎಂದು ಪ್ರಶ್ನಿಸಿದ ಅವರು, ಯುವಕರು ಅಧಿಕಾರಕ್ಕೆ ಬರಬೇಕು ಎಂದು ಆಶಯ ವ್ಯಕ್ತಪಡಿಸಿದರು.

    ವಿಧಾನಸೌಧ ಬಿಗ್ ಬಜಾರ್ ಹಾಗೂ ಮಾಲ್ ಹಂತಕ್ಕೆ ತಲುಪಿ, ಶಾಸಕರನ್ನು ಖರೀದಿಸುವ ಮಾರುಕಟ್ಟೆಯಾಗಿದೆ. ಯಾರು ಬೇಕಾದರೂ 20 ಕೋಟಿ ರೂ. ಅಥವಾ ಅದಕ್ಕಿಂತ ಹೆಚ್ಚಿನ ಹಣ ನೀಡಿ ಅಧಿಕಾರದ ಗದ್ದುಗೆ ಏರಬಹುದು. ಶಾಸಕರನ್ನು ಬಚ್ಚಿಟ್ಟು ರಾಜಕಾರಣ ಮಾಡಿದರೆ, ರಾಜ್ಯ ಉದ್ದಾರ ಆಗುವುದಿಲ್ಲ. ಬಚ್ಚಿ ಇಡಲು ಶಾಸಕರು ಕುರಿ, ಕೋಳಿ, ನಾಯಿಗಳೇ ಎಂದು ವ್ಯಂಗ್ಯವಾಡಿದರು.

    ಬೆಂಗಳೂರಿನ ಸದಾಶಿವ ನಗರ, ಡಾಲರ್ಸ್ ಕಾಲನಿಗಳಲ್ಲಿ ಉತ್ತರ ಕರ್ನಾಟಕ ಭಾಗದ ಮುಟ್ಟಾಳ ಜನಪ್ರತಿನಿಧಿಗಳೇ ತುಂಬಿದ್ದಾರೆ. ಅವರು ಉತ್ತರ ಕರ್ನಾಟಕ ಅಭಿವೃದ್ಧಿಗೆ ಬರುವ ಅನುದಾನವನ್ನು ಹಂಚಿಕೊಂಡು, ಅಲ್ಲಿ ಹೋಗಿ ಮನೆ ಮಾಡುತ್ತಿದ್ದಾರೆ. ಒಬ್ಬೊಬ್ಬ ಶಾಸಕರಿಗೆ ಕನಿಷ್ಠ ಹತ್ತು ಸೈಟ್‍ಗಳಿವೆ. ಹೀಗೆ ಬಿಟ್ಟರೆ ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ರಾಜಕಾರಣಿಗಳೇ ತುಂಬಿಕೊಳ್ಳುತ್ತಾರೆ. ನಮ್ಮ ಭಾಗದ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದು ಹೇಳಿದರು.

    ಜನಪ್ರತಿನಿಧಿಗಳು ತಪ್ಪು ಮಾಡಿದಾಗ ಅವರ ಕೊರಳ ಪಟ್ಟಿ ಹಿಡಿದು, ಕಪಾಳಕ್ಕೆ ಹೊಡೆಯುವ ಅಧಿಕಾರ ಜನರಿಗೆ ಕೊಡಬೇಕಿದೆ. ರಾಜಕಾರಣಿಗಳು ಇಂದು ನಮಗೆ ದುಸ್ವಪ್ನಗಳಾಗಿ ಕಾಡುತ್ತಿದ್ದಾರೆ. ಅವರ ಕಾಟವಿಲ್ಲದೆ ನೆಮ್ಮದಿಯಿಂದ ಮಲಗಬೇಕಾದರೆ ಒಂದು ಕ್ವಾಟರ್ ಹಾಕಲೇಬೇಕಾಗುತ್ತದೆ ಎಂದು ವ್ಯಂಗ್ಯವಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಿಎಂ ಕಾರ್ಯಕ್ರಮಕ್ಕೆ ಬಾರದ ಶಾಸಕರಿಗೆ ಸಚಿವ ರೇವಣ್ಣ ಕ್ಲಾಸ್

    ಸಿಎಂ ಕಾರ್ಯಕ್ರಮಕ್ಕೆ ಬಾರದ ಶಾಸಕರಿಗೆ ಸಚಿವ ರೇವಣ್ಣ ಕ್ಲಾಸ್

    ಹಾಸನ: ಗಾಂಧಿ ಜಯಂತಿ ಪ್ರಯುಕ್ತ ಸಿಎಂ ಕುಮಾರಸ್ವಾಮಿ ಅವರ ಕಾರ್ಯಕ್ರಮಕ್ಕೆ ಶಾಸಕರು ಬರದಿದ್ದಕ್ಕೆ ರೇವಣ್ಣ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಗಾಂಧಿ ಜಯಂತಿಗೆ ಆಗಮಿಸಿದ್ದ ಬಿಜೆಪಿ ಶಾಸಕ ಪ್ರೀತಂಗೌಡ ಅವರನ್ನು ಸಚಿವ ರೇವಣ್ಣ ಪ್ರಶ್ನಿಸಿದ್ದಾರೆ. ರೀ ಕಾರ್ಯಕ್ರಮಕ್ಕೆ ಏಕೆ ಬಂದಿರಲಿಲ್ಲ. ನಾನೇ ಖುದ್ದಾಗಿ ಫೋನ್ ಮಾಡಿದ್ದೆ. ಲೆಟರ್ ಕೂಡ ಕಳಿಸಿದ್ದೆ. ಆದರೂ ಏಕೆ ಬರಲಿಲ್ಲ ಎಂದು ರೇವಣ್ಣ ಪ್ರಶ್ನಿಸಿದ್ದಾರೆ.

    ಕಳೆದ ತಿಂಗಳು 23ರಂದು ಹಾಸನದಲ್ಲಿ ಸಾವಿರಾರು ಕೋಟಿ ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರು ಬಾರದೆ ಗೈರಾಗಿದ್ದರು. ಇಂದು ಈ ಬಗ್ಗೆ ನೇರವಾಗಿ ಸಚಿವರು, ಶಾಸಕರನ್ನು ಪ್ರಶ್ನೆ ಮಾಡಿದ್ದಾರೆ ಎನ್ನಲಾಗುತ್ತಿದೆ.

    ರೇವಣ್ಣ ಈ ಕುರಿತು ಸ್ವತಃ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಹೇಳಿದ್ದಾರೆ. ನೋಡಿ ಮೇಡಂ ನಾನೇ ಫೋನ್ ಮಾಡಿ ಸ್ವತಃ ಕರೆದಿದ್ದೇನೆ. ಆದರೂ ಯಾರೂ ಬಂದಿಲ್ಲ ಎಂದು ಸಚಿವರು ದೂರಿದ್ದಾರೆ. ಆಗ ಶಾಸಕ ಪ್ರೀತಂಗೌಡ ಆಹ್ವಾನ ಪತ್ರಿಕೆ ನನಗೆ ಹಿಂದಿನ ದಿನ ಬಂತು ನಿಮ್ಮಿಂದ ನನಗೆ ಯಾವುದೇ ಫೋನ್ ಬಂದಿಲ್ಲ. ಅಲ್ಲದೇ ನೀವು ಕರೆ ಮಾಡಿದ್ದು ಈ ಹಿಂದೆ ಗುದ್ದಲಿ ಪೂಜೆಗಾಗಿಯೇ ಎಂದು ಶಾಸಕ ನಾಜೂಕಾಗಿಯೇ ಸಚಿವರಿಗೆ ತಿರುಗೇಟು ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ನಕ್ಸಲರ ಗುಂಡಿಗೆ ಟಿಡಿಪಿ ಮಾಜಿ, ಹಾಲಿ ಶಾಸಕರು ಬಲಿ!

    ನಕ್ಸಲರ ಗುಂಡಿಗೆ ಟಿಡಿಪಿ ಮಾಜಿ, ಹಾಲಿ ಶಾಸಕರು ಬಲಿ!

    ಹೈದರಾಬಾದ್: ತೆಲಗು ದೇಶಂ ಪಕ್ಷದ (ಟಿಡಿಪಿ) ಶಾಸಕ ಕಿದರಿ ಸರ್ವೇಶ್ವರ ರಾವ್ ಹಾಗೂ ಮಾಜಿ ಶಾಸಕ ಶಿವಾರಿ ಸೋಮಾ ಅವರನ್ನು ಇಂದು ನಕ್ಸಲರು ಗುಂಡಿಕ್ಕಿ ಕೊಲೆ ಮಾಡಿದ್ದಾರೆ.

    ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಅರಕು ಕಣಿವೆಯ ಪ್ರದೇಶದ ದುಂಬ್ರಿಗುಡ ಮಂಡಲದಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದೆ. ಪಕ್ಷದ ಕಾರ್ಯಕ್ರಮ ಮುಗಿಸಿಕೊಂಡು ಮರಳಿ ಬರುತ್ತಿದ್ದಾಗ ನಕ್ಸಲರು ದಾಳಿ ಮಾಡಿದ್ದಾರೆ.

    ಸರ್ವೇಶ್ವರ ಹಾಗೂ ಶಿವಾರಿ ಸೋಮಾ ಅವರು ಪ್ರಯಾಣಿಸುತ್ತಿದ್ದ ಕಾರನ್ನು ತಡೆದ ನಕ್ಸಲರು, ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಗುಂಡಿನ ಮಳೆ ಸುರಿಸಿದ್ದಾರೆ. ಪರಿಣಾಮ ಕಾರಿನಲ್ಲಿದ್ದ ಶಾಸಕರು ಮೃತಪಟ್ಟಿದ್ದಾರೆ.

    2014ರ ವಿಧಾನಸಭಾ ಚುನಾವಣೆಯಲ್ಲಿ ವಾಯ್‍ಎಸ್‍ಆರ್‍ಸಿಪಿ ಯಿಂದ ಸ್ಪರ್ಧಿಸಿದ್ದ ಸರ್ವೇಶ್ವರ್, ಟಿಡಿಪಿಯಿಂದ ಅಭ್ಯರ್ಥಿಯಾಗಿದ್ದ ಸೋಮಾ ಅವರನ್ನು ಸೋಲಿಸಿದ್ದರು. ಚುನಾವಣೆ ಬಳಿಕ 2016ರಲ್ಲಿ ಸರ್ವೇಶ್ವರ್ ಟಿಡಿಪಿಗೆ ಸೇರಿಕೊಂಡರು. ಈ ಇಬ್ಬರು ನಾಯಕರಿಗೂ ನಕ್ಸಲರಿಂದ ಕೊಲೆ ಬೆದರಿಕೆ ಕರೆಗಳು ಬೆದರಿಕೆಗಳು ಬರುತ್ತಿದ್ದವು ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಗುಜರಾತ್ ಶಾಸಕರ ವೇತನ 45 ಸಾವಿರ ರೂ. ಹೆಚ್ಚಳ: ಹಿಂದೆ ಎಷ್ಟಿತ್ತು? ಈಗ ಎಷ್ಟಿದೆ?

    ಗುಜರಾತ್ ಶಾಸಕರ ವೇತನ 45 ಸಾವಿರ ರೂ. ಹೆಚ್ಚಳ: ಹಿಂದೆ ಎಷ್ಟಿತ್ತು? ಈಗ ಎಷ್ಟಿದೆ?

    ಗಾಂಧಿನಗರ: ಗುಜರಾತ್ ಶಾಸಕರ ತಿಂಗಳ ಸಂಬಳ 45 ಸಾವಿರ ರೂ. ಹೆಚ್ಚಳವಾಗಿದೆ. ಗುಜರಾತ್ ಶಾಸಕಾಂಗ ಸಭೆಯ ಸದಸ್ಯರು, ಸ್ಪೀಕರ್ ಮತ್ತು ಡೆಪ್ಯುಟಿ ಸ್ಪೀಕರ್, ಸಚಿವರು ಮತ್ತು ವಿರೋಧ ಪಕ್ಷದ ಸದಸ್ಯರ ವೇತನ ಮತ್ತು ಭತ್ಯೆ(ತಿದ್ದುಪಡಿ) ಮಸೂದೆಗೆ ಸದನದಲ್ಲಿ ಸರ್ವಾನುಮತದ ಒಪ್ಪಿಗೆ ಸಿಕ್ಕಿದೆ.

    ಈ ಹಿಂದೆ ಗುಜರಾತ್ ಶಾಸಕರು ಪ್ರತಿ ತಿಂಗಳು 70,727 ರೂ. ವೇತನವನ್ನು ಪಡೆಯುತ್ತಿದ್ದರು. ಈಗ ಸಂಬಳ 1,16,316 ರೂ. ಆಗಲಿದೆ. 2017ರ ಡಿಸೆಂಬರ್ 22 ರಿಂದ ಪೂರ್ವಾನ್ವಯವಾಗುಂತೆ ಸಂಬಳವನ್ನು ಏರಿಕೆ ಮಾಡಲಾಗಿದೆ.

    ಗುಜರಾತ್ ವಿಧಾನಸಭೆ ಒಟ್ಟು 182 ಸಂಖ್ಯಾಬಲವನ್ನು ಹೊಂದಿದ್ದು, ಬಿಜೆಪಿಯು 99 ಮತ್ತು ಓರ್ವ ಪಕ್ಷೇತರನ್ನು ಸೆಳೆದುಕೊಳ್ಳುವ ಸರ್ಕಾರ ರಚಿಸಿದೆ. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷ 81 ಸ್ಥಾನ ಪಡೆದುಕೊಂಡಿದೆ.

    ಯಾರಿಗೆ ಎಷ್ಟು?
    ಮುಖ್ಯಮಂತ್ರಿ, ಸಚಿವರು, ಉಪಮುಖ್ಯಮಂತ್ರಿ, ಸಭಾಪತಿ, ಉಪ ಸಭಾಪತಿ, ವಿರೋಧ ಪಕ್ಷದ ನಾಯಕರ ಮೂಲ ವೇತನ 70,125 ರೂ. ದಿಂದ 98,500 ರೂ. ಹೆಚ್ಚಳವಾಗಿದೆ. ಈ ಹಿಂದೆ ಡಿಎ, ದೂರವಾಣಿ ವೆಚ್ಚ, ಪಿಎ ವೇತನ, ಅಂಚೆ ಮತ್ತು ಸ್ಟೇಷನರಿ ಸೇರಿದಂತೆ ಎಲ್ಲ ರೀತಿಯ ಭತ್ಯೆಗೆ 14,627 ರೂ. ಸಿಗುತಿತ್ತು. ಈಗ ಈ ಭತ್ಯೆ 37,516 ರೂ.ಗೆ ಏರಿಕೆಯಾಗಿದೆ. ಮೂಲ ವೇತನ ಮತ್ತು ಭತ್ಯೆ ಎಲ್ಲ ಸೇರಿ ಈ ಹಿಂದೆ 84,752 ರೂ. ಸಿಕ್ಕಿದರೆ ಈಗ 1,16,316 ರೂ.ಗೆ ಏರಿಕೆಯಾಗಿದೆ

    ಶಾಸಕರಿಗೆ ಎಷ್ಟು?
    ಮೂಲ ವೇತನ ಈ ಹಿಂದೆ 56,100 ರೂ. ಸಿಕ್ಕಿದರೆ ಈಗ ಇದು 78,800 ರೂ.ಗೆ ಏರಿಕೆಯಾಗಿದೆ. ಮೂಲ ವೇತನ ಮತ್ತು ಭತ್ಯೆ ಎಲ್ಲ ಸೇರಿ ಈ ಹಿಂದೆ 70,727 ರೂ. ಸಿಕ್ಕಿದರೆ ಈಗ 1,16,316 ರೂ. ಏರಿಕೆಯಾಗಿದೆ.

    ವಿಶೇಷ ಏನೆಂದರೆ ಮಂಗಳವಾರ ತೈಲ ಬೆಲೆ ಏರಿಕೆ ಸಂಬಂಧ ಕಾಂಗ್ರೆಸ್ ಶಾಸಕರು ಮತ್ತು ಜಿಗ್ನೇಶ್ ಮೇವಾನಿ ವಿಧಾನಸೌಧದ ಹೊರಗಡೆ ಪ್ರತಿಭಟನೆ ನಡೆಸಿದರು. ಬುಧವಾರ ಸೈಕಲ್ ಏರಿ ವಿಧಾನಸಭೆಗೆ ಆಗಮಿಸಿದ್ದರು. ಬೆಳಗ್ಗೆ ಸದನದಲ್ಲಿ ಸರ್ಕಾರ ಮಸೂದೆ ಮಂಡಿಸುತ್ತಿದ್ದಂತೆ ಎಲ್ಲ ಶಾಸಕರು ಒಪ್ಪಿಗೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv