Tag: ಶಾಸಕರು

  • ಸೋತ ಬಳಿಕ ಕಚೇರಿ ಖಾಲಿ ಮಾಡೋವಾಗ ಟಾಯ್ಲೆಟ್‍ನ್ನು ಕಿತ್ಕೊಂಡು ಹೋದ ಮಾಜಿ ಶಾಸಕ

    ಸೋತ ಬಳಿಕ ಕಚೇರಿ ಖಾಲಿ ಮಾಡೋವಾಗ ಟಾಯ್ಲೆಟ್‍ನ್ನು ಕಿತ್ಕೊಂಡು ಹೋದ ಮಾಜಿ ಶಾಸಕ

    ಕಾರವಾರ: ಮಾಜಿ ಶಾಸಕ ತಮ್ಮ ಕಚೇರಿಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಟಾಯ್ಲೆಟ್ ಸಮೇತ ಖಾಲಿ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

    ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶಾಸಕಿ ರೂಪಾಲಿ ನಾಯ್ಕರಿಗೆ ಮಾತ್ರ ತಮ್ಮ ಕಚೇರಿಯನ್ನ ಪಡೆಯುವುದು ಇದೀಗ ಹರಸಾಹಸದ ಕೆಲಸವಾಗಿದೆ. ಈ ಹಿಂದೆ ಕಾರವಾರ ನಗರದ ತಾಲೂಕು ಪಂಚಾಯತ್ ಆವರಣದಲ್ಲಿ ಶಾಸಕರಿಗೆ ಕಚೇರಿಯನ್ನ ತೆರೆಯಲಾಗಿತ್ತು. ಕಳೆದ ಬಾರಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಸತೀಶ್ ಸೈಲ್‍ನ್ನ ಕಟ್ಟಡವನ್ನು ಬಳಸಿಕೊಂಡಿದ್ದು ಚುನಾವಣೆಯಲ್ಲಿ ಪರಾಭವಗೊಂಡ ನಂತರ ಕಚೇರಿಯನ್ನ ತೆರವು ಮಾಡಿದ್ದರು. ಇನ್ನು ತೆರವು ಮಾಡುವ ಸಂದರ್ಭದಲ್ಲಿ ಕೇವಲ ಪಿಠೋಪಕರಣವನ್ನು ಮಾತ್ರ ತೆಗೆದು ಕೊಂಡುಹೋಗದೇ ಶೌಚಾಲಯಕ್ಕೆ ಅಳವಡಿಸಿದ್ದ ಪೈಪ್, ಟಾಯ್ಲೆಟ್, ಕಚೇರಿಗೆ ಬಳಸುತ್ತಿದ್ದ ಬಲ್ಪಗಳು ಸೇರಿದಂತೆ ಹಲವು ವಸ್ತುಗಳನ್ನ ಮಾಜಿ ಶಾಸಕರ ಕಡೆಯವರು ಕಿತ್ತುಕೊಂಡು ತೆರಳಿದ್ದಾರೆ.

    ಶಾಸಕರಾಗಿ ಆಯ್ಕೆಯಾದ ನಂತರ ಸರ್ಕಾರ ಆಯಾ ಕ್ಷೇತ್ರದಲ್ಲಿ ಶಾಸಕರಿಗೆ ಕಚೇರಿಗೆ ಅವಕಾಶವನ್ನ ಮಾಡಿಕೊಡುತ್ತದೆ. ಜನಸಾಮಾನ್ಯರಿಗೆ ಶಾಸಕರು ಕಚೇರಿಯಲ್ಲಿ ಸಿಗಲು, ಸರ್ಕಾರದ ಯೋಜನೆಗಳನ್ನ ಜನರಿಗೆ ತಿಳಿಸಲು ಸೇರಿದಂತೆ ಹತ್ತಾರು ಉದ್ದೇಶಕ್ಕೆ ಸರ್ಕಾರವೇ ಕಚೇರಿಗೆ ಅವಕಾಶವನ್ನ ಮಾಡಿಕೊಡಲಾಗುತ್ತದೆ. ಇನ್ನು ಆಯಾ ಕ್ಷೇತ್ರದಲ್ಲಿ ಸ್ಥಳೀಯ ಸಂಸ್ಥೆಗಳ ಆವರಣದಲ್ಲಿ ಕಚೇರಿಯನ್ನ ತೆರೆಯಲು ಅವಕಾಶವಿದ್ದು, ಸ್ಥಳೀಯ ಸಂಸ್ಥೆಯವರೇ ಶಾಸಕರ ಕಚೇರಿಗೆ ಸ್ಥಳಾವಕಾಶವನ್ನ ಕೊಡಬೇಕಾಗಿದೆ. ರಾಜ್ಯದ ಬಹುತೇಕ ಶಾಸಕರು ತಮ್ಮ ತಮ್ಮ ಕಚೇರಿಯನ್ನ ಪ್ರಾರಂಭಿಸಿದ್ದಾರೆ.

    ಈ ಹಿಂದೆ ಇದ್ದ ಶಾಸಕರು ಕಚೇರಿ ಖಾಲಿ ಮಾಡುವ ನೆಪದಲ್ಲಿ ಕಚೇರಿಯಲ್ಲಿನ ವಸ್ತುಗಳನ್ನೆಲ್ಲಾ ತೆಗೆದುಕೊಂಡು ಹೋದರೆ, ಇತ್ತ ಕಚೇರಿಯಲ್ಲಿನ ಅವ್ಯವಸ್ಥೆ ಬಹಿರಂಗವಾಗುತ್ತಿದ್ದಂತೆ ತಾಲೂಕು ಪಂಚಾಯತ್ ಸದಸ್ಯರುಗಳು ಕಚೇರಿ ಕೊಡುವ ಬಗ್ಗೆಯೇ ವಿರೋಧಕ್ಕೆ ಇಳಿದಿದ್ದು, ಬಾಡಿಗೆ ನೀಡುವಂತೆ ಠರಾವು ಮಾಡಿದ್ದಾರೆ. ಈ ಬಗ್ಗೆ ಕೆಲವರು ವಿರೋಧ ಮಾಡಿದ ಹಿನ್ನೆಲೆಯಲ್ಲಿ ತಾಲೂಕು ಪಂಚಾಯತ್ ಸದಸ್ಯರು ತಮ್ಮ ಸಭೆಯಲ್ಲಿ ಶಾಸಕರಿಗೆ ಯಾಕೆ ಕಚೇರಿ ಕೊಡಬೇಕು. ತಮ್ಮ ಕಚೇರಿಯನ್ನ ತಾಲೂಕು ಪಂಚಾಯತ್ ಆವರಣದಲ್ಲಿ ಪಡೆದರೆ ಅದಕ್ಕೆ ಶಾಸಕರು ಬಾಡಿಗೆಯನ್ನ ಕಟ್ಟಲಿ ಎಂದು ಸದಸ್ಯರು ಠರಾವನ್ನ ಸಹ ಹೊರಡಿಸಿದ್ದಾರೆ. ಇವೆಲ್ಲಾ ಘಟನೆಯಿಂದ ಬೇಸತ್ತಿರುವ ಶಾಸಕಿ ಈ ಬಗ್ಗೆ ಅಸಮಾಧಾನವನ್ನು ಹೊರಹಾಕಿದ್ದಾರೆ.

    ಶಾಸಕರ ಕಛೇರಿ ಅವ್ಯವಸ್ಥೆಯಿಂದ ಕೂಡಿರುವುದರಿಂದ ಶಾಸಕಿ ರೂಪಾಲಿ ನಾಯ್ಕ ಬಿಜೆಪಿ ಕಚೇರಿಯಲ್ಲಿಯೇ ಸದ್ಯ ತಮ್ಮ ಕಚೇರಿಯನ್ನ ತೆರೆದಿದ್ದಾರೆ. ಈ ಎಲ್ಲ ಬೆಳವಣಿಗೆಯಾದ ನಂತರ ಕಚೇರಿಯನ್ನ ಸರಿಪಡಿಸುವ ಕಾರ್ಯ ಮಾಡಿದ್ದಾದರೂ ಇನ್ನೂ ಕಚೇರಿಯನ್ನ ಶಾಸಕರಿಗೆ ಬಿಟ್ಟುಕೊಟ್ಟಿಲ್ಲ. ಇವರನ್ನು ಭೇಟಿಯಾಗಬೇಕಾದ ಸಾರ್ವಜನಿಕರು ಬಿಜೆಪಿ ಕಚೇರಿಗೆ ಬಂದು ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ತಾಲೂಕು ಪಂಚಾಯಿತ್ ಮುಖ್ಯಕಾರ್ಯ ನಿರ್ವಹಣಾಧಿಕಾರಿಯವರ ಬಳಿ ಕೇಳಿದರೆ ಹಿಂದಿನ ಶಾಸಕರು ತಮ್ಮ ಸ್ವಂತ ಖರ್ಚಿನಿಂದ ತಂದ ವಸ್ತುಗಳನ್ನ ತೆಗೆದುಕೊಂಡು ಹೋಗಿದ್ದಾರೆ. ಪೈಪ್ ಗಳನ್ನ, ಟಾಯ್ಲೆಟ್, ವಿದ್ಯುತ್ ಬಲ್ಪಗಳನ್ನು ಕೀಳುವಾಗ ಅವರಿಗೆ ಕರೆಮಾಡಿ ತಿಳಿಸಿದ್ದು, ಆಗ ಕೆಲಸಕ್ಕೆ ಬಂದವರು ಈ ರೀತಿ ಮಾಡಿದ್ದಾರೆ. ಸದ್ಯ ಕಚೇರಿಯನ್ನ ಶಾಸಕರಿಗೆ ನೀಡಿ ಸರಿಪಡಿಸಿಕೊಳ್ಳಲು ತಿಳಿಸಿದ್ದು, ಶಾಸಕರಿಗೆ ಕಚೇರಿ ನೀಡುವಲ್ಲಿ ಯಾವುದೇ ಗೊಂದಲವಿಲ್ಲ ಎಂದು ಮುಖ್ಯಕಾರ್ಯನಿರ್ವಹಣಾಧಿಕಾರಿ ಆನಂದ್ ಕುಮಾರ್ ಹೇಳಿದ್ದಾರೆ.

  • ಎಚ್‍ಡಿಕೆ, ಪರಮೇಶ್ವರ್ ಎದುರು ಶಾಸಕರು ಅಸಮಾಧಾನ!

    ಎಚ್‍ಡಿಕೆ, ಪರಮೇಶ್ವರ್ ಎದುರು ಶಾಸಕರು ಅಸಮಾಧಾನ!

    ಬೆಂಗಳೂರು: ಉಸ್ತುವಾರಿ ಸಚಿವರ ನೇಮಕ ವಿಳಂಬಕ್ಕೆ ಸಂಬಂಧಿಸಿದಂತೆ ಸಿಎಂ ಎಚ್‍ಡಿಕೆ, ಡಿಸಿಎಂ ಪರಮೇಶ್ವರ್ ಎದುರು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಸಂಪುಟ ವಿಸ್ತರಣೆ ಮಾಡದಿದ್ದರೂ ಪರವಾಗಿಲ್ಲ, ಜಿಲ್ಲೆಗೆ ಉಸ್ತುವಾರಿ ಸಚಿವರನ್ನ ನೇಮಕ ಮಾಡಿ ಅಂತ ಶಾಸಕರು ಒತ್ತಾಯಿಸುತ್ತಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಎಲ್ಲದಕ್ಕೂ ಆಷಾಢ ಅಂತೀರಾ, ಆದ್ರೆ ನಮ್ಮ ಜಿಲ್ಲೆಯಲ್ಲಿ ನಮ್ಮನ್ನ ಕೇಳೋರೇ ಇಲ್ಲದಾಗಿದೆ. ನಮ್ಮ ಜಿಲ್ಲೆಗಳಲ್ಲಿ ಮಳೆ ಹೆಚ್ಚಿದೆ. ಹಾನಿ ಪ್ರಮಾಣವೂ ಕೂಡ ಅಷ್ಟೇ ಇದೆ. ಉಸ್ತುವಾರಿ ಸಚಿವರಿಲ್ಲದೇ ಯಾವ ಕೆಲಸವೂ ಆಗಲ್ಲ, ಅಧಿಕಾರಿಗಳು ಕೆಲಸ ಮಾಡಲ್ಲ. ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ಜಿಲ್ಲೆಗೆ ಉಸ್ತುವಾರಿ ಸಚಿವರು ಬೇಕು. ಹೀಗಾಗಿ ಕೂಡಲೇ ಉಸ್ತುವಾರಿ ಸಚಿವರ ನೇಮಿಸಿ ಅಂತಾ ಕೆಲ ಶಾಸಕರ ದುಂಬಾಲು ಬಿದ್ದಿದ್ದಾರೆ ಎನ್ನಲಾಗಿದೆ.

    ಒಟ್ಟಿನಲ್ಲಿ ಶಾಸಕರ ಒತ್ತಡದ ಮೇರೆಗಾದ್ರೂ ಆಷಾಢದ ನೆಪ ಹೇಳದೇ ಈ ತಿಂಗಳಲ್ಲೇ ಜಿಲ್ಲಾ ಉಸ್ತುವಾರಿಗಳ ನೇಮಕ ಆಗುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.

  • ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಕೇಳುವವರು ಕಮಂಗಿಗಳು: ತೋಂಟದಾರ್ಯ ಶ್ರೀ

    ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಕೇಳುವವರು ಕಮಂಗಿಗಳು: ತೋಂಟದಾರ್ಯ ಶ್ರೀ

    ಬಳ್ಳಾರಿ: ಬಜೆಟ್ ವಿಚಾರ ಇಟ್ಟುಕೊಂಡು ಪ್ರತ್ಯೇಕ ರಾಜ್ಯ ಕೇಳುವ ಶಾಸಕರು, ಹೋರಾಟಗಾರು ಕಮಂಗಿಗಳು ಎಂದು ಗದುಗಿನ ತೋಂಟದಾರ್ಯ ಮಠದ ಸಿದ್ಧಲಿಂಗ ಸ್ವಾಮೀಜಿ ಲೇವಡಿ ಮಾಡಿದ್ದಾರೆ.

    ನಗರದಲ್ಲಿ ಆಯೋಜಿಸಿದ್ದ ದಿವಂಗತ ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಅವರ 78 ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಪ್ರತ್ಯೇಕ ರಾಜ್ಯ ಕೇಳುವುದು ಹೇಗಿದೆ ಎಂದರೆ ಪತಿಗೆ ಹೆದರಿಸುವುದಕ್ಕೆ ಪತ್ನಿ ಪದೇ ಪದೇ ಬಾವಿಗೆ ಬೀಳುತ್ತೇನೆ ನೋಡು ಎನ್ನುವಂತಿದೆ ಎಂದು ಹೇಳಿ ಪರೋಕ್ಷವಾಗಿ ಶಾಸಕ ಶ್ರೀರಾಮುಲು, ಉಮೇಶ ಕತ್ತಿ ಸೇರಿದಂತೆ ಹಲವು ನಾಯಕರ ವಿರುದ್ಧ ವ್ಯಂಗ್ಯವಾಡಿದರು.

    ಕರ್ನಾಟಕ ಏಕೀಕರಣವಾಗಿ 70 ವರ್ಷಗಳು ಕಳೆದಿವೆ. ಈಗ ಮತ್ತೇ ಪ್ರತ್ಯೇಕ ಮಾಡುವುದು ಹುಡುಗಾಟಿಕೆ ಅಲ್ಲ. ಒಂದು ವೇಳೆ ಕರ್ನಾಟಕ ಒಡೆಯುವ ಕೆಲಸಕ್ಕೆ ಮುಂದಾದರೆ ಅದು ಮಹಾ ಪಾಪದ ಕೆಲಸವಾಗುತ್ತದೆ. ಉತ್ತರ ಕರ್ನಾಟಕ್ಕೆ ಅನ್ಯಾಯವಾಗಿದ್ದರೆ ಚರ್ಚೆ ನಡೆಸಿ, ಹೋರಾಟ ಮಾಡಿ. ಆದರೆ ಅದೂ ಬಿಟ್ಟು ಬಜೆಟ್ ವಿಚಾರ ಇಟ್ಟುಕೊಂಡು ಪ್ರತ್ಯೇಕ ರಾಜ್ಯ ಕೇಳಲು ಮುಂದಾಗುವ ರಾಜಕಾರಣಿಗಳು ಕಮಂಗಿಗಳು ಎಂದು ಹೇಳಿದರು.

  • ಬಜೆಟ್‍ಗೆ ದೋಸ್ತಿಗಳಿಂದಲೇ ಟೀಕೆ: ಸಿಎಂ ಸುತ್ತುವರಿದು ಬೇಡಿಕೆ ಮಂಡನೆ

    ಬಜೆಟ್‍ಗೆ ದೋಸ್ತಿಗಳಿಂದಲೇ ಟೀಕೆ: ಸಿಎಂ ಸುತ್ತುವರಿದು ಬೇಡಿಕೆ ಮಂಡನೆ

    ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಜೆಟ್‍ಗೆ ಶಾಸಕಾಂಗ ಪಕ್ಷದ ಸದಸ್ಯರಿಂದಲೇ ಭಾರೀ ಟೀಕೆ ಹಾಗೂ ಅಸಮಾಧಾನ ವ್ಯಕ್ತವಾಗುತ್ತಿದೆ.

    ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ಮೊದಲ ಬಜೆಟ್ ಅನ್ನು ಗುರುವಾರ ಕುಮಾರಸ್ವಾಮಿ ಅವರು ಮಂಡಿಸಿದ್ದರು. ಆದರೆ ಈಗ ಇದು ದೋಸ್ತಿ ಸರ್ಕಾರದಲ್ಲಿ ಭಾರೀ ಅಸಮಾಧಾನಕ್ಕೆ ಕಾರಣವಾಗಿದೆ. ವಿಧಾನಸಭೆ ಕಲಾಪ ಮುಂದೂಡಿದ ಬಳಿಕವೂ ಸದನದೊಳಗೆ ಮುಖ್ಯಮಂತ್ರಿಯನ್ನು ಸುತ್ತುವರಿದ ಕೈ ಹಾಗೂ ಜೆಡಿಎಸ್ ಶಾಸಕರು ತಮ್ಮ ಬೇಡಿಕೆಗಳನ್ನು ಮಂಡಿಸಿದರು. ತಮ್ಮ ಕ್ಷೇತ್ರಗಳಿಗೆ ಏನು ಕೊಟ್ಟಿಲ್ಲ. ಪೂರಕ ಬಜೆಟ್‍ನಲ್ಲಿ ಅವಕಾಶ ಕಲ್ಪಿಸಿ ಎಂದು ಪಟ್ಟು ಹಿಡಿದರು.

    ಹಾಸನ-ರಾಮನಗರ ಅಣ್ತಮ್ಮ ಬಜೆಟ್ ಎಂಬ ಹಣೆಪಟ್ಟಿ ಮೈತ್ರಿ ಸರ್ಕಾರಕ್ಕೆ ಒಳ್ಳೆಯದಲ್ಲ. ಅಷ್ಟೇ ಅಲ್ಲದೆ ಉತ್ತರ ಕರ್ನಾಟಕ, ಮಲೆನಾಡು ಪ್ರದೇಶಗಳ ನಿರ್ಲಕ್ಷ್ಯ ಜೆಡಿಎಸ್ ಬೆಳವಣಿಗೆಗೆ ಪೂರಕವಾಗುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ಸುಧಾಕರ್, ಸಚಿವ ಶಿವಾನಂದ ಪಾಟೀಲ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಕಲಾಪದ ನಂತರ ಶಾಸಕರನ್ನು ಸಮಾಧಾನ ಪಡಿಸಲು ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು 20 ನಿಮಿಷಗಳ ಕಾಲ ಹರಸಾಹಸ ಪಟ್ಟರು. ಆದರೂ ಶಾಸಕರು ಕುಮಾರಸ್ವಾಮಿ ಅವರ ಸ್ಪಷ್ಟನೆಗೆ ಬಗ್ಗದೇ ಪೂರಕ ಬಜೆಟ್‍ನಲ್ಲಿ ತಮ್ಮ ಕ್ಷೇತ್ರಗಳಿಗೆ ವಿಶೇಷ ಪ್ರಾಮುಖ್ಯತೆ ನೀಡುವಂತೆ ಒತ್ತಾಯಿಸಿದರು.

  • ಬಜೆಟ್ ದಿನವೇ ದೋಸ್ತಿಗಳ ನಡುವಿನ ಭಿನ್ನಮತ ಸ್ಫೋಟ

    ಬಜೆಟ್ ದಿನವೇ ದೋಸ್ತಿಗಳ ನಡುವಿನ ಭಿನ್ನಮತ ಸ್ಫೋಟ

    ಬೆಂಗಳೂರು: ಬಜೆಟ್ ಗೆ ಕೆಲವೇ ಕ್ಷಣ ಇರುವಾಗಲೇ ದೋಸ್ತಿಗಳ ನಡುವೆ ಮತ್ತೊಮ್ಮೆ ಭಿನ್ನಮತ ಭುಗಿಲೆದ್ದಿದೆ.

    ಜೆಡಿಎಸ್ ಶಾಸಕರು ಕೃಷ್ಣಬೈರೇಗೌಡ ಸೇರಿ ಕಾಂಗ್ರೆಸ್ ಸಚಿವರ ವಿರುದ್ಧ ಸಿಡಿದೆದ್ದಿದ್ದಾರೆ. ಕಾಂಗ್ರೆಸ್ ಸಚಿವರು ನಮ್ಮ ಶಾಸಕರ ಮಾತಿಗೆ ಗೌರವ ಕೊಡುತ್ತಿಲ್ಲ. ಕೆಲಸ ಮಾಡಿಕೊಡುತ್ತಿಲ್ಲ. ಸಚಿವರು ನಮ್ಮನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಹೀಗೆ ಆದರೆ ನಮ್ಮ ಕ್ಷೇತ್ರದ ಜನಕ್ಕೆ ಏನು ಉತ್ತರ ಕೊಡೋದು ಮುಖ್ಯಮಂತ್ರಿಗಳೇ? ಎಂದು ಸಿಎಂಗೆ ಕಾಂಗ್ರೆಸ್ ಸಚಿವರ ವರ್ತನೆ ಬಗ್ಗೆ ಜೆಡಿಎಸ್ ಶಾಸಕರು ದೂರು ನೀಡಿದ್ದಾರೆ.

    ಸಚಿವ ಕೃಷ್ಣಭೈರೇಗೌಡ ವಿರುದ್ಧ ಸ್ವತಃ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಗರಂ ಆಗಿದ್ದಾರೆ. ಜೆಡಿಎಸ್ ಶಾಸಕರು ರೇವಣ್ಣ ಮಾತಿಗೆ ದನಿಗೂಡಿಸಿದ್ದಾರೆ. ಸಮ್ಮಿಶ್ರ ಸರ್ಕಾರ ಆಗಿರುವುದರಿಂದ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಆದರೆ ಕಾಂಗ್ರೆಸ್ ಶಾಸಕರು ನಮ್ಮನ್ನು ಕಡೆಗಣಿಸುತ್ತಿದ್ದಾರೆ ಎಂದು ಬುಧವಾರ ನಡೆದ ಶಾಸಕರ ಸಭೆಯಲ್ಲಿ ಶಾಸಕರು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

  • ಅಸೆಂಬ್ಲಿಯನ್ನ ಹುಚ್ಚಾಸ್ಪತ್ರೆ ಮಾಡ್ಬೇಡಿ: ಶಾಸಕರ ವಿರುದ್ಧ ರಮೇಶ್ ಕುಮಾರ್ ಗರಂ

    ಅಸೆಂಬ್ಲಿಯನ್ನ ಹುಚ್ಚಾಸ್ಪತ್ರೆ ಮಾಡ್ಬೇಡಿ: ಶಾಸಕರ ವಿರುದ್ಧ ರಮೇಶ್ ಕುಮಾರ್ ಗರಂ

    ಬೆಂಗಳೂರು: ಅಸೆಂಬ್ಲಿಯನ್ನು ಹುಚ್ಚಾಸ್ಪತ್ರೆ ಮಾಡಲು ಹೊರಟಿದ್ದೀರಾ ಎಂದು ಶಾಸಕರ ವಿರುದ್ಧ ವಿಧಾನಸಭೆ ಸಭಾಪತಿ ರಮೇಶ್ ಕುಮಾರ್ ಅವರು ಗರಂ ಆಗಿ ಪ್ರಶ್ನೆ ಮಾಡಿದ್ದಾರೆ.

    ನಾನು ಕರೆಯದೆ ಯಾರೂ ಸಹ ಎದ್ದು ನಿಂತು ಮಾತನಾಡುವಂತಿಲ್ಲ. ಸಂಸದೀಯ ವ್ಯವಸ್ಥೆಯ ಶಿಸ್ತು ಮೀರಿದರೆ ಸುಮ್ಮನಿರಲ್ಲ ಎಂದು ಶಾಸಕರನ್ನು ಎಚ್ಚರಿಸಿದ ಅವರು, ಲಿಂಗಾಯತ ಧರ್ಮ ವಿಚಾರವಾಗಿ ಬಿಜೆಪಿಯ ರಾಜಕುಮಾರ್ ಪಾಟೀಲ್, ಪಾಟೀಲ್ ನಡಹಳ್ಳಿ ಮತ್ತು ಸಚಿವ ಡಿಕೆ ಶಿವಕುಮಾರ್, ಸಚಿವ ಜಮೀರ್ ಅಹ್ಮದ್ ಮಧ್ಯೆ ವಾಗ್ವಾದ ನಡೆದಿದ್ದಕ್ಕೆ ಸ್ಪೀಕರ್ ರಮೇಶ್ ಕುಮಾರ್ ಬಿಸಿ ಮುಟ್ಟಿಸಿದರು.

    ನೀರಾವರಿ ಇಲಾಖೆಯಲ್ಲಿ ಕೆಲಸ ಆಗಿಲ್ಲ ಎಂದು ಶಾಸಕ ಗೋವಿಂದ ಕಾರಜೋಳ ಟೀಕಿಸಿದರು. ಇದಕ್ಕೆ ತಿರುಗೇಟು ಕೊಡುವ ಬರದಲ್ಲಿ ಸಚಿವ ಶಿವಾನಂದ ಪಾಟೀಲ್ ಅವರು ಎಂ.ಬಿ.ಪಾಟೀಲ್ ಅವರನ್ನು ನಿಮ್ಮ ಯತ್ನಾಳ್ ಹೊಗಳುತ್ತಾರೆ. ಆದರೆ ನೀವು ತೆಗಳುತ್ತಿರುವಿರಿ. ಇದಕ್ಕೆ ಬಿಜೆಪಿಗರು ಕಿಡಿಕಾರಿದರು. ಸಚಿವರು ತಮ್ಮ ಮಾತನ್ನು ವಾಪಸ್ ಪಡೆದರು. ಈ ವೇಳೆ ಇದು ಪಾಟೀಲರ ಜಗಳವೇ ಅಂತಾ ಬೊಮ್ಮಾಯಿ ಕಿಚಾಯಿಸಿದರು. ಆಗ ಪಾಟೀಲರ ನಡುವೆ ಶೆಟ್ಟರಿಗೆ ಏನು ಕೆಲಸ ಅಂತಾ ಯತ್ನಾಳ್ ಕಾಲೆಳೆದರು. ವಿಚಾರ ಗೊತ್ತಾಯ್ತು ಬಿಡಿ ಅಂತ ಸ್ಪೀಕರ್ ಹಾಸ್ಯ ಚಟಾಕಿ ಹಾರಿಸಿದರು.

  • ಅಧಿವೇಶನದ ಮೊದಲ ದಿನವೇ ಸ್ಪೀಕರ್ ರಮೇಶ್ ಕುಮಾರ್ ಫುಲ್ ಕ್ಲಾಸ್

    ಅಧಿವೇಶನದ ಮೊದಲ ದಿನವೇ ಸ್ಪೀಕರ್ ರಮೇಶ್ ಕುಮಾರ್ ಫುಲ್ ಕ್ಲಾಸ್

    ಬೆಂಗಳೂರು: ಸಮ್ಮಿಶ್ರ ಸರ್ಕಾರದ ಜಂಟಿ ಅಧಿವೇಶನ ಮೊದಲ ದಿನವೇ ಮಾನ್ಯ ಎಲ್ಲಾ ಸದಸ್ಯರುಗಳಿಗೆ ಕ್ಲಾಸ್ ತೆಗೆದುಕೊಳ್ಳುವ ಮೂಲಕ ಸ್ಪೀಕರ್ ರಮೇಶ್ ಕುಮಾರ್ ಅವರು ಸುಗಮ ಅಧಿವೇಶನದ ನಡೆಸುವ ಸೂಚನೆ ನೀಡಿದ್ದಾರೆ.

    ಸರ್ಕಾರದ ಜಂಟಿ ಅಧಿವೇಶನ ಕುರಿತು ಗವರ್ನರ್ ಭಾಷಣ ಮುಗಿಯುತ್ತಿದ್ದಂತೆ ಎಲ್ಲಾ ಶಾಸಕರು ಆ ತಮ್ಮ ಸ್ಥಾನಗಳಲ್ಲಿ ಕುಳಿತುಕೊಳ್ಳದೆ ಓಡಾಡುತ್ತಿದ್ದರು. ಇದನ್ನು ನೋಡಿದ ಸ್ಪೀಕರ್ ರಮೇಶ್ ಕುಮಾರ್ ಫುಲ್ ಕ್ಲಾಸ್ ತೆಗೆದುಕೊಂಡರು

    ಶಾಸಕರು ತಮ್ಮ ತಮ್ಮ ಸ್ಥಳಗಳಿಗೆ ಹೋಗುವಂತೆ ಮೊದಲು ಮನವಿ ಮಾಡಿದರು. ಆದರೆ ಸ್ಪೀಕರ್ ಮಾತನ್ನು ಯಾರು ಗಮನಿಸದ ವೇಳೆ ಶಾಸಕರ ಹೆಸರು ಕರೆದ ಸ್ಪೀಕರ್ ಅವರು ರಹೀಂಖಾನ್, ಹ್ಯಾರಿಸ್, ರಾಜೇಗೌಡ ಹೆಸರು ಕೂಗಿ ನಿಮ್ಮ ಸ್ಥಾನದಲ್ಲಿ ನೀವು ಕುಳಿತು ಕೊಳ್ಳಿ ಎಂದು ಸೂಚಿಸಿದರು. ಬಳಿಕ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ಇದನ್ನು ಓದಿ: ಅರೇ, ಹೊರಟ್ಟಿಯವ್ರೇ ಸೈಡಿಗೆ ಬನ್ರಿ: ಸ್ಪೀಕರ್ ರಮೇಶ್ ಕುಮಾರ್

    ಗಣ್ಯರಿಗೆ ಸಂತಾಪ ಸೂಚಿಸಿದ ಬಳಿಕ ಮಾತನಾಡಿದ ಸ್ಪೀಕರ್, ಸದನದ ನಿಯಮಾವಳಿಗಳು ಕೆಲವು ಬದಲಾವಣೆ ಆಗಿದೆ. ಈ ಕುರಿತು ಮಾಹಿತಿ ನೀಡಲಾಗಿದೆ. ಈ ಬಾರಿ ಸಭೆಯಲ್ಲಿ ಸುಮಾರು 100 ಹೊಸ ಶಾಸಕರಿದ್ದು ಅವರು ಸೇರಿದಂತೆ ಎಲ್ಲರಿಗೂ ಮೊದಲು ಮನವಿ ಮಾಡುತ್ತೇನೆ, ಬಳಿಕ ಸೂಚನೆ ನೀಡುತ್ತೇನೆ. ಸದನ ಕಲಾಪ ಆರಂಭದ ವೇಳೆಗೆ ಶಾಸಕರು ಮುಖ್ಯಮಂತ್ರಿಗಳಿಗೆ ಯಾವುದೇ ಅರ್ಜಿಗಳನ್ನು ಸದನದಲ್ಲಿ ನೀಡುವಂತಿಲ್ಲ. ಇದರಿಂದ ಸದನದ ಚರ್ಚೆ ಬಗ್ಗೆ ಸಿಎಂ ಗಮನ ಹರಿಸಲು ಸಾಧ್ಯವಾಗುವುದಿಲ್ಲ. ಅದ್ದರಿಂದ ಶಾಸಕರಿಗೆ ಅಂತಹ ತುರ್ತು ಕಾರ್ಯವಿದ್ದರೆ ಶಾಸಕರು ಸಿಎಂ ಅವರನ್ನು ತಮ್ಮ ಕಚೇರಿಗೆ ಕರೆದುಕೊಂಡು ಹೋಗಬಹುದು. ಇದಕ್ಕೆ ನಾನು ಯಾವುದೇ ಆಕ್ಷೇಪ ವ್ಯಕ್ತಪಡಿಸುವುದಿಲ್ಲ. ಒಬ್ಬ ಶಾಸಕನಾಗಿ ಇಂತಹ ಕಾರ್ಯವನ್ನು ನಾನು ಎಂದು ಮಾಡಿಲ್ಲ. ಅದ್ದರಿಂದ ಇದನ್ನು ನಾನು ಹೇಳುವ ನೈತಿಕ ಆರ್ಹತೆ ಹೊಂದಿದ್ದೇನೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮುಜುಗರ ಆಗಿದ್ದ ಸನ್ನಿವೇಶ ಗಮನಿಸಿದ್ದೇನೆ ಅದ್ದರಿಂದ ಯಾವುದೇ ಕಾರಣಕ್ಕೂ ಸದನಕ್ಕೆ ತೊಂದರೆ ನೀಡಬಾರದು ಎಂದು ಎಲ್ಲ ಶಾಸಕರಿಗೆ ಸೂಚನೆ ನೀಡಿದರು. ಇದನ್ನು ಓದಿ: ಕರ್ನಾಟಕ ರಾಜಕೀಯದಲ್ಲಿ ಹೊಸ ದಾಖಲೆ ಬರೆದ ಬಿಎಸ್‍ವೈ!

  • ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ- ರಮೇಶ್ ಜಾರಕಿಹೊಳಿ ಹೊಸ ಬಾಂಬ್

    ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ- ರಮೇಶ್ ಜಾರಕಿಹೊಳಿ ಹೊಸ ಬಾಂಬ್

    ಬೆಳಗಾವಿ: ಪಕ್ಷಕ್ಕೆ ಬರುವ ಕಾಂಗ್ರೆಸ್- ಜೆಡಿಎಸ್ ಮುಖಂಡರ ಬಳಿ ಚರ್ಚಿಸಿ ಅವರನ್ನು ಪಕ್ಷಕ್ಕೆ ಕರೆತನ್ನಿ ಎಂಬ ಬಿಎಸ್‍ವೈ ಹೇಳಿಕೆ ಬೆನ್ನಲ್ಲೆ ಬಿಜೆಪಿ ಶಾಸಕರು ಕೂಡ ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

    ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ಹಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಪಕ್ಷ ಸೇರ್ಪಡೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತೆ ಎಂದರು.

    ಡಿಕೆಶಿ ಗೆ ಟಾಂಗ್: ಇನ್ನು ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿ ಪೂಜೆಗೆ ಆದ್ಯತೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಹೇಳಿಕೆಗೆ ಟಾಂಗ್ ನೀಡಿದ ರಮೇಶ್ ಜಾರಕಿಹೊಳಿ, ಅದು ಸಚಿವ ಡಿಕೆ ಶಿವಕುಮಾರ್ ವೈಯಕ್ತಿಕ ಅಭಿಪ್ರಾಯ. ಉಪಕಾರ ಮಾಡಿದವರನ್ನು ಸ್ಮರಿಸಿಕೊಳ್ಳುವುದು ನಮ್ಮ ಕರ್ತವ್ಯ. ಸಿದ್ದರಾಮಯ್ಯ ಕಾಂಗ್ರೆಸ್ ಗೆ ಉಪಕಾರ ಮಾಡಿದ್ದಾರೆ ಎಂದರು.

    ಇದೇ ವೇಳೆ ಸಿದ್ದರಾಮಯ್ಯ ಗುಂಪಿನಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಆರೋಪಕ್ಕೂ ತಿರುಗೇಟುಕೊಟ್ಟ ರಮೇಶ್ ಜಾರಕಿಹೊಳಿ, ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಕಾಮಾಲೆ ಕಣ್ಣಿಗೆ ಕಾಣೋದು ಹಳದಿಯಂತೆ ಹಾಗೇ ನಾವೇನು ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರು ಹೊಸ ಬಜೆಟ್ ಕುರಿತು ಹೊಸ ಸರ್ಕಾರಕ್ಕೆ ಕೇವಲ ಸಲಹೆ ಕೊಟ್ಟಿದ್ದಾರೆ. ಸಲಹೆ ಸ್ವೀಕರಿಸುವುದು ಬಿಡುವುದು ಸಿಎಂ ಅವರಿಗೆ ಬಿಟ್ಟಿದ್ದು. ಹಿಂದಿನ ಸರ್ಕಾರದ ಯೋಜನೆ ಮುಂದುವರೆಸುವುದು ನಮ್ಮ ಉದ್ದೇಶ ಎಂದು ಹೇಳಿದರು.

    ಉತ್ತರಕರ್ನಾಟಕ ನಾಯಕರಿಗೆ ನೀಡಲಿ: ಇದೇ ವೇಳೆ ಡಿಸಿಎಂ ಪರಮೇಶ್ವರ್ ಅವರ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಉತ್ತರ ಕರ್ನಾಟಕಕ್ಕೆ ನೀಡಿದರೆ ಒಳ್ಳೆಯದು. ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಎಚ್‍ಕೆ ಪಾಟೀಲ್ ಯಾರಿಗಾದರು ನೀಡಿದರೂ ಒಳ್ಳೆಯದು ಎಂದು ತಿಳಿಸಿದರು.

     

  • ಸಿದ್ದರಾಮಯ್ಯ ಪ್ರಯೋಗಿಸಿದ `ಅಸಮಾಧಾನ’ದ ಕ್ಷಿಪಣಿಗೆ ಜೆಡಿಎಸ್ ತತ್ತರ

    ಸಿದ್ದರಾಮಯ್ಯ ಪ್ರಯೋಗಿಸಿದ `ಅಸಮಾಧಾನ’ದ ಕ್ಷಿಪಣಿಗೆ ಜೆಡಿಎಸ್ ತತ್ತರ

    ಬೆಂಗಳೂರು: ಮಾಜಿ ಸಿಎಂ ಪ್ರಯೋಗಿಸಿದ `ಅಸಮಾಧಾನ’ದ ಕ್ಷಿಪಣಿಗೆ ಜೆಡಿಎಸ್ ತತ್ತರವಾಗಿದ್ದು, ಸಿದ್ದರಾಮಯ್ಯರ ಮೇಲೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕೆಂಡಮಂಡಲವಾಗಿದ್ದಾರಂತೆ.

    ಜೆಡಿಎಸ್‍ ನಲ್ಲಿ ಸಚಿವರು, ಶಾಸಕರು ಬಾಯಿಯನ್ನೇ ಬಿಡುತ್ತಿಲ್ಲ. ಯಾರೊಬ್ಬರೂ ಸರ್ಕಾರದ ಪರ ವಹಿಸಿಕೊಂಡು ಮಾತೇ ಆಡುತ್ತಿಲ್ಲ. ಕಾಂಗ್ರೆಸ್ ನಲ್ಲಿ ಸಿದ್ದು ಟೀಂನಿಂದ ದಿನದಿಂದ ದಿನಕ್ಕೆ ಟಾಕ್ ಫೈಟ್ ನಡೆಯುತ್ತಿದೆ. ಆದರೆ ಜೆಡಿಎಸ್ ಶಾಸಕರು ಮಾತ್ರ ಎಲ್ಲದಕ್ಕೂ ಫುಲ್ ಸೈಲೆಂಟ್ ಆಗಿದ್ದಾರೆ. ಇದರಿಂದ ಮಾಜಿ ಪ್ರಧಾನಿ ದೇವೇಗೌಡ ಕೆಂಡಮಂಡಲವಾಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಜೆಡಿಎಸ್ ಮಂತ್ರಿಗಳು ಈಗ ಹೊಸ ಬಟ್ಟೆ ಹಾಕ್ಕೊಂಡು ಓಡಾಡ್ತಿದ್ದಾರೆ- ಸಿದ್ದರಾಮಯ್ಯ ಪರ ಶಾಸಕ ಸುಧಾಕರ್ ಬ್ಯಾಟಿಂಗ್

    ಎಲ್ಲದಕ್ಕೂ ನಾವು ಅಪ್ಪ, ಮಕ್ಕಳೇ ಉತ್ತರ ಕೊಡಬೇಕಾ..? ಬಾಯಿಬಡ್ಕೋಬೇಕಾ..? ಪಕ್ಷದಲ್ಲಿ ಇರುವ ಹಿರಿಯರು, ಸಚಿವರು, ಶಾಸಕರು ಏನ್ ಮಾಡುತ್ತಿದ್ದಾರೆ..? ಯಾವುದೇ ವಿಚಾರಕ್ಕೂ ಒಬ್ಬರಿಂದಲೂ ಪಕ್ಷ ಸಮರ್ಥನೆಯ ಮಾತೇ ಇಲ್ಲ. ಮೌನವಾಗಿರೋದು ಸಾಕು, ಹಿಂಗೆ ಇದ್ದರೆ ಪಕ್ಷ ಉಳಿಯಲ್ಲ ಎಂದು ದೇವೇಗೌಡು ಪಕ್ಷದ ನಾಯಕರಿಗೆ ಹೇಳಿದ್ದಾರೆ ಎಂದು ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ.

  • ಸಭೆ ವೇಳೆ ಫೇಸ್ ಬುಕ್ ನಲ್ಲಿ ಯುವತಿಯರ ಚಿತ್ರ ವೀಕ್ಷಿಸುವಲ್ಲಿ ಬ್ಯುಸಿಯಾದ ಅಧಿಕಾರಿ

    ಸಭೆ ವೇಳೆ ಫೇಸ್ ಬುಕ್ ನಲ್ಲಿ ಯುವತಿಯರ ಚಿತ್ರ ವೀಕ್ಷಿಸುವಲ್ಲಿ ಬ್ಯುಸಿಯಾದ ಅಧಿಕಾರಿ

    ಚಿತ್ರದುರ್ಗ: ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಯು ದುರ್ವತನೆ ತೋರಿದ್ದು, ಫೇಸ್ ಬುಕ್ ನಲ್ಲಿ ಯುವತಿಯರ ಚಿತ್ರ ವೀಕ್ಷಿಸುವಲ್ಲಿ ಅಧಿಕಾರಿ ಬ್ಯುಸಿಯಾಗಿದ್ದ ಘಟನೆ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಡೆದಿದೆ.

    ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಿಗಧಿ ಮಾಡಲಾಗಿತ್ತು. ಆದರೆ ಈ ವೇಳೆ ಚಿತ್ರದುರ್ಗ ಜಿಲ್ಲಾ ಪಶು ಸಂಗೋಪನಾ ಇಲಾಖೆ ಅಧಿಕಾರಿ ರಾಜಪ್ಪ ಈ ರೀತಿ ದುರ್ವತನೆ ತೋರಿದ್ದಾರೆ. ಸಭೆಯಲ್ಲಿ ಅಧಿಕಾರಿಗಳು ಅಭಿವೃದ್ಧಿ ಪರಿಶೀಲನೆಯಲ್ಲಿ ತೊಡಗಿದ್ದರೆ ರಾಜಪ್ಪ ಅವರು ಫೇಸ್ ಬುಕ್ ನಲ್ಲಿ ಯುವತಿಯರ ಚಿತ್ರ ವೀಕ್ಷಿಸುವಲ್ಲಿ ಬ್ಯುಸಿಯಾಗಿದ್ದರು.

    ಶಾಸಕ ಗೈರು: ಪ್ರಮುಖವಾಗಿ ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ ಪರಿಶೀಲನೆ ಸಭೆಯನ್ನು ಸಂಸದ ಬಿ.ಎನ್.ಚಂದ್ರಪ್ಪ ನೇತೃತ್ವದಲ್ಲಿ ಕರೆಯಲಾಗಿತ್ತು. ಈ ಸಭೆ ಜಿಲ್ಲೆಯ ಎಲ್ಲಾ ಶಾಸಕರು ಆಗಮಿಸುವುದು ಕಡ್ಡಾಯವಾಗಿದ್ದರು. ಈ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಮೊಳಕಲ್ಮೂರು ಶಾಸಕ ಶ್ರೀರಾಮುಲು, ಹೊಸದುರ್ಗ ಶಾಸಕ ಶೇಖರ್ ಸಭೆಗೆ ಗೈರು ಹಾಜರಾಗಿದ್ದರು. ಅಲ್ಲದೇ ಎಂಎಲ್‍ಸಿ ಗಳಾದ ರಘು ಆಚಾರ್, ವೈ ಎ ನಾರಾಯಣ ಸ್ವಾಮಿ ಸಭೆ ಹಾಜರಾಗದೇ ನಿರ್ಲಕ್ಷ್ಯ ಮೆರೆದಿದ್ದಾರೆ.

    https://www.youtube.com/watch?v=vZX67yMNpv4