Tag: ಶಾಸಕ ಆನಂದ್ ಸಿಂಗ್

  • ರೆಸಾರ್ಟಿನಲ್ಲಿ ಗಲಾಟೆ ಆಗಿದ್ದು ನಿಜ : ಸಿದ್ದರಾಮಯ್ಯ

    ರೆಸಾರ್ಟಿನಲ್ಲಿ ಗಲಾಟೆ ಆಗಿದ್ದು ನಿಜ : ಸಿದ್ದರಾಮಯ್ಯ

    ಕೊಪ್ಪಳ: ಪಕ್ಷದ ಕಾರ್ಯಕರ್ತರು ರೆಸಾರ್ಟಿನಲ್ಲಿ ತಂಗಿದ್ದ ವೇಳೆ ರಾತ್ರಿ ಸ್ವಲ್ಪ ಜಗಳ ನಡೆದಿದೆ ಎಂಬ ಮಾಹಿತಿ ಲಭಿಸಿದೆ. ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ರೆಸಾರ್ಟಿನಲ್ಲಿ ರಾತ್ರಿ ಇರಲಿಲ್ಲ. ಆದ್ದರಿಂದ ನನಗೆ ಗೊತ್ತಿಲ್ಲ. ಆದರೆ ರಾತ್ರಿ ಗಲಾಟೆ ಆಗಿರುವ ಬಗ್ಗೆ ಮಾಹಿತಿ ಬಂದಿದೆ. ಮಾಧ್ಯಮಗಳ ಮೂಲಕವೂ ಮಾಹಿತಿ ಬಂದಿದೆ. ಈಗ ಅಲ್ಲಿಗೆ ತೆರಳುತ್ತಿದ್ದು, ಯಾವ ಸಂದರ್ಭದಲ್ಲಿ ಏನಾಗಿದೆ ಎನ್ನುವುದು ಅಲ್ಲಿಗೆ ಹೋದ ನಂತರವೇ ಗೊತ್ತಾಗಲಿದೆ ಎಂದರು.

    ಯಾವುದೇ ಖಚಿತ ಮಾಹಿತಿ ಇಲ್ಲದೇ ನಾನು ಈ ಬಗ್ಗೆ ಮಾತನಾಡುವುದು ಸರಿಯಲ್ಲ. ನೇರ ಅಲ್ಲಿಗೆ ತೆರಳುತ್ತಿದ್ದು, ಆನಂದ್ ಸಿಂಗ್, ಗಣೇಶ್, ಭೀಮಾನಾಯ್ಕ್ ನಡುವೆ ಗಲಾಟೆ ನಡೆದಿದೆ ಎಂದು ಮಾಧ್ಯಮಗಳಿಂದ ತಿಳಿದಿದೆ. ಗಲಾಟೆ ಆಗಿದ್ದರೆ ಯಾವ ಸಂದರ್ಭದಲ್ಲಿ ಆಗಿದೆ? ಯಾವ ಕಾರಣಕ್ಕೆ ಆಗಿದೆ ಎನ್ನುವುದನ್ನು ತಿಳಿದುಕೊಳ್ಳಬೇಕಿದೆ. ಈ ಬಗ್ಗೆ ಶಾಸಕರನ್ನು ಸಂಪರ್ಕ ಮಾಡಲು ಸಾಧ್ಯವಾಗಲಿಲ್ಲ. ಅಲ್ಲಿಗೆ ತೆರಳಿ ನಿಮಗೆ ಹೆಚ್ಚಿನ ಮಾಹಿತಿ ತಿಳಿಸುತ್ತೇನೆ ಎಂದರು. ಇದನ್ನು ಓದಿ: ಡಿಕೆಶಿಗೆ ಭಾರೀ ಮುಖಭಂಗ – ಶಾಸಕರನ್ನು ರಕ್ಷಿಸಲು ಸುಳ್ಳು ಹೇಳಿ ಭಾರೀ ಟೀಕೆಗೆ ಗುರಿಯಾದ್ರು ಡಿಕೆ ಬ್ರದರ್ಸ್!

    ಇದೇ ವೇಳೆ ಸಿಎಂ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕೆಂದು 20 ಶಾಸಕರು ಬೇಡಿಕೆ ಇಟ್ಟಿದ್ದಾರೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಎಚ್‍ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾರೆ. ಈಗ ಯಾವುದೇ ಶಾಸಕರು ಸಿಎಂ ಆಗುವ ಬಗ್ಗೆ ಹೇಳಿಲ್ಲ. ಸಮ್ಮಿಶ್ರ ಸರ್ಕಾರ ಸುಗಮವಾಗಿ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದ್ದರು.

    ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಹೇಗಾದ್ರೂ ಮಾಡಿ, ಸಿಎಂ ಆಗಬೇಕು ಅಂದುಕೊಂಡಿದ್ದಾರೆ. ಆದರೆ ಅದು ಸಾಧ್ಯವಾಗುವುದಿಲ್ಲ. ಪದೇ ಪದೇ ಯಡಿಯೂರಪ್ಪ, ಈಶ್ವರಪ್ಪ ಕೆಟ್ಟ ಪದ ಬಳಕೆ ಮಾಡುತ್ತಾರೆ. ಈಶ್ವರಪ್ಪನಿಗೆ ಒಳ್ಳೆಯ ಭಾಷೆಯೇ ಗೊತ್ತಿಲ್ಲ, ಅನಂತ್ ಕುಮಾರ್ ಹೆಗ್ಡೆ ಕೂಡ ಹಾಗೆಯೇ. ಅವರೇ ಮಕ್ಕಳ ಕಳ್ಳರು ಎಂದು ಹೇಳುತ್ತಾರೆ. ಆದರೆ ಮಾಧ್ಯಮಗಳು ಅವರನ್ನು ಪ್ರಶ್ನೆ ಮಾಡಲ್ಲ ಎಂದರು.

    https://www.youtube.com/watch?v=9xgPiNXdmxU

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೊದ್ಲು ಮದುವೆ ಬಳಿಕ ಎದೆನೋವು ಈಗ ಆಕ್ಸಿಡೆಂಟ್ – ಕಡೆಗೂ ಆನಂದ್ ಸಿಂಗ್ ತಲೆಗೆ 12 ಹೊಲಿಗೆ!

    ಮೊದ್ಲು ಮದುವೆ ಬಳಿಕ ಎದೆನೋವು ಈಗ ಆಕ್ಸಿಡೆಂಟ್ – ಕಡೆಗೂ ಆನಂದ್ ಸಿಂಗ್ ತಲೆಗೆ 12 ಹೊಲಿಗೆ!

    ಬೆಂಗಳೂರು: ಶಾಸಕ ಆನಂದ್ ಸಿಂಗ್ ಅವರ ತಲೆಗೆ ಪೆಟ್ಟಾಗಿದ್ದು, ವೈದ್ಯರು 12 ಹೊಲಿಗೆ ಹಾಕಿದ್ದಾರೆ ಎಂಬ ಮಾಹಿತಿ ಅಪೋಲೋ ಆಸ್ಪತ್ರೆಯ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

    ಆನಂದ್ ಸಿಂಗ್ ಅವರಿಗೆ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಮೊದಲಿನಿಂದಲೂ ಭಿನ್ನ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ಶಾಸಕರು ಸತ್ಯವನ್ನು ಮುಚ್ಚಿಡಲು ಪ್ರಯತ್ನ ನಡೆಸುತ್ತಿದ್ದಾರೆ ಎನ್ನುವ ವಿಚಾರ ಮತ್ತಷ್ಟು ಬಲಗೊಂಡಿದೆ. ಇದನ್ನು ಓದಿ: ಆನಂದ್ ಸಿಂಗ್ ಎದೆ ನೋವಿನಿಂದ ಆಸ್ಪತ್ರೆಗೆ ದಾಖಲು: ಸಂಸದ ಡಿಕೆ ಸುರೇಶ್

    ಮೊದಲು ಸಚಿವ ಡಿಕೆ ಶಿವಕುಮಾರ್ ಅವರು ಮಾತನಾಡಿ ಆನಂದ್ ಸಿಂಗ್ ರಾತ್ರಿ ಮದುವೆಗೆ ತೆರಳಿದ್ದು, ಆ ಬಳಿಕ ಎಲ್ಲರೂ ಮಾತನಾಡಿ ತೆರಳಿದ್ದಾರೆ. ಯಾವುದೇ ಗಲಾಟೆ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಆ ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದ ಸಂಸದ ಡಿಕೆ ಸುರೇಶ್ ಅವರು ಆನಂದ್ ಸಿಂಗ್ ಎದೆನೋವು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ತಲೆಗೆ ಯಾವುದೇ ಗಾಯ ಆಗಿಲ್ಲ ಎಂದು ಎಂದಿದ್ದರು. ಆದರೆ ಈಗ ಆಸ್ಪತ್ರೆಯ ದಾಖಲೆಯಲ್ಲಿ ಬೇರೆಯೇ ಮಾಹಿತಿ ದಾಖಲಿಸಿದ್ದಾರೆ. ಇದನ್ನು ಓದಿ: ಬಾಟ್ಲಿ ಪೆಟ್ಟು ತಿಂದು ಅಪೋಲೋ ಆಸ್ಪತ್ರೆ ಸೇರಿದ ಆನಂದ್ ಸಿಂಗ್?

    ಆಸ್ಪತ್ರೆ ದಾಖಲೆ ಮಾಹಿತಿ ಪ್ರಕಾರ ಆನಂದ್ ಸಿಂಗ್ ಅವರು ಕಾರಿಗೆ ಹತ್ತುವ ವೇಳೆ ಜಾರಿ ಬಿದ್ದು ತಲೆಗೆ ಗಾಯವಾಗಿದೆ. ಆದ್ದರಿಂದ ಅವರ ತಲೆಗೆ 12 ಹೊಲಿಗೆ ಹಾಕಲಾಗಿದೆ. ಅಲ್ಲದೇ ಗಾಯದ ಬಗ್ಗೆ ತಲೆಗೆ ಸಿಟಿ ಸ್ಕ್ಯಾನ್ ತಪಾಸಣೆ ನಡೆದಿದ್ದು, ವರದಿಗಳು ಬಂದ ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುತ್ತಿದೆ ಎಂಬ ಮಾಹಿತಿ ಲಭಿಸಿದೆ. ಇದನ್ನು ಓದಿ: ಗುರು ಆನಂದ್ ಸಿಂಗ್ ಮೇಲೆ ಶಿಷ್ಯ ಗಣೇಶ್ ಅಟ್ಯಾಕ್?-ಇದು ಇನ್‍ಸೈಡ್ ಸ್ಟೋರಿ

    ಈ ಕುರಿತು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ ಅಪೋಲೋ ಆಸ್ಪತ್ರೆ ವೈದ್ಯ ಯತೀಶ್ ಅವರು, ಶಾಸಕರೊಬ್ಬರು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ನನಗೆ ಮಾಹಿತಿ ಲಭಿಸಿದೆ. ಅವರ ಆರೋಗ್ಯದಿಂದ ಇದ್ದಾರೆ ಎಂಬ ಮಾಹಿತಿ ಲಭಿಸಿದೆ. ಆದರೆ ಅವರು ಆಸ್ಪತ್ರೆಗೆ ದಾಖಲಾದ ವೇಳೆ ಯಾವ ಸ್ಥಿತಿಯಲ್ಲಿ ಇದ್ದರು ಎಂಬ ಬಗ್ಗೆ ಮಾಹಿತಿ ಲಭಿಸಿಲ್ಲ. ಮಾಹಿತಿಯನ್ನು ತಿಳಿದುಕೊಂಡು ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದರು.

    https://www.youtube.com/watch?v=9xgPiNXdmxU

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆನಂದ್ ಸಿಂಗ್ ಎದೆ ನೋವಿನಿಂದ ಆಸ್ಪತ್ರೆಗೆ ದಾಖಲು: ಸಂಸದ ಡಿಕೆ ಸುರೇಶ್

    ಆನಂದ್ ಸಿಂಗ್ ಎದೆ ನೋವಿನಿಂದ ಆಸ್ಪತ್ರೆಗೆ ದಾಖಲು: ಸಂಸದ ಡಿಕೆ ಸುರೇಶ್

    ಬೆಂಗಳೂರು: ಶಾಸಕ ಆನಂದ್ ಸಿಂಗ್ ಅವರಿಗೆ ಇಂದು ಬೆಳಗ್ಗೆ 7 ಗಂಟೆ ಸಮಯದಲ್ಲಿ ಎದೆ ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ಬಂದು ದಾಖಲಾಗಿದ್ದು, ವೈದ್ಯರು ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದಾರೆ ಎಂದು ಸಂಸದ ಡಿಕೆ ಸುರೇಶ್ ಅವರು ಹೇಳಿದ್ದಾರೆ.

    ಶೇಷಾದ್ರಿಪುರಂ ಬಳಿಯ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದ ಸುರೇಶ್ ಅವರು, ನನಗೆ ಇಂದು ಬೆಳಗ್ಗೆ ಅನಂದ್ ಸಿಂಗ್ ಅವರು ಆಸ್ಪತ್ರೆಗೆ ದಾಖಲಾದ ಮಾಹಿತಿ ಲಭಿಸಿತ್ತು. ಆದ್ದರಿಂದ ಆಸ್ಪತ್ರೆಗೆ ಭೇಟಿ ನೀಡಿ ಅವರನ್ನು ಮಾತನಾಡಿದ್ದೇನೆ. ಅವರ ಆರೋಗ್ಯ ಸ್ಥಿತಿ ಸದ್ಯ ಸುಧಾರಣೆ ಆಗಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರ ಬಳಿ ಮಾತನಾಡಿರುವ ವೇಳೆ ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದ ಬಗ್ಗೆ ಹೇಳಿದರು. ಆ ಬಳಿಕ ಆನಂದ್ ಸಿಂಗ್ ಅವರು ವಿಶ್ರಾಂತಿ ಅಗತ್ಯವಿದ್ದರಿಂದ ನಿದ್ದೆ ಮಾಡಲು ಡಾಕ್ಟರ್ ಸೂಚಿಸಿದ್ದಾರೆ. ಸಂಜೆ ವೇಳೆಗೆ ವೈದ್ಯಕೀಯ ಪರೀಕ್ಷೆಗಳ ಮಾಹಿತಿ ಲಭ್ಯವಾಗಲಿದ್ದು, ತದನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ತೀರ್ಮಾನ ಮಾಡಲಾಗುವುದು ಎಂದು ಸ್ಪಷ್ಟನೆ ನೀಡಿದರು. ಇದನ್ನು ಓದಿ: ಬಾಟ್ಲಿ ಪೆಟ್ಟು ತಿಂದು ಅಪೋಲೋ ಆಸ್ಪತ್ರೆ ಸೇರಿದ ಆನಂದ್ ಸಿಂಗ್?

    ಇದೇ ವೇಳೆ ಮಾಧ್ಯಮಗಳ ವರದಿ ಅಲ್ಲಗಳೆದ ಡಿಕೆ ಸುರೇಶ್ ಅಸಮಾಧಾನ ವ್ಯಕ್ತಪಡಿಸಿದರು. ರೆಸಾರ್ಟಿನಲ್ಲಿ ಯಾವುದೇ ಜಗಳ ಆಗಿಲ್ಲ. ಆನಂದ್ ಸಿಂಗ್ ಅವರ ತಲೆಗೆ ಗಾಯ ಆಗಿರುವುದು ಭೇಟಿ ವೇಳೆ ನನಗೆ ಕಾಣಿಸಲಿಲ್ಲ. ಅಲ್ಲದೇ ರೆಸಾರ್ಟಿನಲ್ಲಿ ಯಾವುದೇ ಪಾರ್ಟಿಯನ್ನು ಆಯೋಜಿಸಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆನಂದ್ ಸಿಂಗ್ ಕುಟುಂಬಸ್ಥರು ಮದುವೆಯ ಸಮಾರಂಭದಲ್ಲಿ ಭಾಗಿಯಾಗಿದ್ದು, ಅವರಿಗೂ ಕೂಡ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನು ಓದಿ: ಗುರು ಆನಂದ್ ಸಿಂಗ್ ಮೇಲೆ ಶಿಷ್ಯ ಗಣೇಶ್ ಅಟ್ಯಾಕ್?-ಇದು ಇನ್‍ಸೈಡ್ ಸ್ಟೋರಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಾಟ್ಲಿ ಪೆಟ್ಟು ತಿಂದು ಅಪೋಲೋ ಆಸ್ಪತ್ರೆ ಸೇರಿದ ಆನಂದ್ ಸಿಂಗ್?

    ಬಾಟ್ಲಿ ಪೆಟ್ಟು ತಿಂದು ಅಪೋಲೋ ಆಸ್ಪತ್ರೆ ಸೇರಿದ ಆನಂದ್ ಸಿಂಗ್?

    ಬೆಂಗಳೂರು: ಆಪರೇಷನ್ ಕಮಲದಿಂದ ಪಕ್ಷದ ಶಾಸಕರನ್ನು ರಕ್ಷಿಸಲು ಮುಂದಾಗಿ ರೆಸಾರ್ಟ್ ಸೇರಿದ್ದ ಕಾಂಗ್ರೆಸ್ ಶಾಸಕರ ನಡುವೆ ಮಾರಾಮಾರಿ ನಡೆದಿದೆ ಎನ್ನಲಾಗಿದ್ದು, ಪೆಟ್ಟು ತಿಂದ ಶಾಸಕ ಆನಂದ್ ಸಿಂಗ್ ಅವರನ್ನು ನಗರದ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿಗಳು ಲಭ್ಯವಾಗಿವೆ.

    ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಆನಂದ್ ಸಿಂಗ್ ಬೆಂಬಲಿಗ ರಘುನಾಥ್, ಸಾಹೇಬ್ರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ನನಗೆ ಲಭ್ಯವಾಯಿತು. ಆದ್ದರಿಂದ ಆಸ್ಪತ್ರೆಗೆ ಭೇಟಿ ನೀಡಿದ್ದೆ. ಆದರೆ ಆಸ್ಪತ್ರೆಯಲ್ಲಿ ಅವರನ್ನು ಭೇಟಿ ಮಾಡಲು ಅವಕಾಶ ನೀಡಿಲ್ಲ. ಆನಂದ್ ಸಿಂಗ್ ಅವರು ಯಾರನ್ನು ಭೇಟಿ ಮಾಡಲ್ಲ ಎಂದು ಹೇಳಿದ್ದಾರೆ. ಸದ್ಯ ಅವರೊಂದಿಗೆ ಕೆಲ ಸ್ನೇಹಿತರು ಮಾತ್ರ ಅವರೊಂದಿಗೆ ಇದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

    ಅಪೋಲೋ ಆಸ್ಪತ್ರೆಯ 6ನೇ ಮಹಡಿಯ 6002 ಕೊಠಡಿಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಾರೆ. ಬೆಳಗ್ಗೆ 7.05 ಗಂಟೆ ಸಮಯದಲ್ಲಿ ಆಸ್ಪತ್ರೆಗೆ ಆಗಮಿಸಿ ಒಳರೋಗಿಯಾಗಿ ದಾಖಲಾಗಿರುವುದು ಆಸ್ಪತ್ರೆಯ ದಾಖಲಾತಿಯಲ್ಲಿ ಇದೆ ಎಂಬ ಮಾಹಿತಿ ಲಭಿಸಿದೆ. ಡಾ. ಚಂದ್ರ ಅವರು ಶಾಸಕ ಆನಂದ್ ಸಿಂಗ್ ಅವರಿಗೆ ಚಿಕಿತ್ಸೆ ನೀಡಿದ್ದಾರೆ ಎನ್ನಲಾಗಿದೆ. ದಾಖಲಾತಿಯಲ್ಲಿ ಆನಂದ್ ಸಿಂಗ್ ಅವರ ತಲೆಗೆ ಗಾಯವಾಗಿರುವುದನ್ನು ಚಿಕಿತ್ಸೆ ನೀಡಿ ನಮೂದಿಸಿದ್ದಾರೆ. ಈಗಾಗಲೇ ಅಪೋಲೋ ಆಸ್ಪತ್ರೆಗೆ ಶೇಷಾದ್ರಿಪುರಂ ಪೊಲೀಸರು ಕೂಡ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ ಎಂಬುವುದು ಖಚಿತವಾಗಿದೆ.

    ಇತ್ತ ಸಚಿವ ಡಿಕೆ ಶಿವಕುಮಾರ್ ಅವರು ಶಾಸಕರ ನಡುವೆ ಬಾಟ್ಲಿ ಜಗಳ ನಡೆದಿದೆ ಎಂಬುವುದನ್ನು ನಿರಾಕರಿಸಿದ್ದಾರೆ. ಅವೆಲ್ಲವೂ ಸುಳ್ಳು. ಮಾರಾಮಾರಿನೂ ಇಲ್ಲ, ಬಾಟ್ಲಿಯೂ ಇಲ್ಲ. ಯಾವ ಹೊಡೆದಾಟನೂ ಇಲ್ಲ. ಸ್ವಲ್ಪ ಹೊತ್ತಲ್ಲೇ ಅವರಿಬ್ಬರು ಬಂದು ಮಾತಾಡ್ತಾರೆ ಎಂದು ಸ್ಪಷ್ಟನೆ ನೀಡಿದ್ದರು. ಆದರೆ ಸಚಿವ ಡಿಕೆಶಿ ಅವರ ಸಹೋದರ ಸಂಸದ ಡಿಕೆ ಸುರೇಶ್ ಸೇರಿದಂತೆ ಹಲವು ಬೆಂಬಲಿಗರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

    ಏನಿದು ಘಟನೆ: ಕಾಂಗ್ರೆಸ್ ರಾಜ್ಯ ಉಸ್ತುವಾರಿಯಾದ ವೇಣುಗೋಪಾಲ್ ಅವರೊಂದಿಗೆ ಇಂದು ಸಭೆ ನಿಗದಿ ಆದ ಕಾರಣ ಶಾಸಕರು ರೆಸಾರ್ಟ್ ನಲ್ಲಿಯೇ ಉಳಿದ್ದಿದ್ದರು. ಕಾಂಗ್ರೆಸ್ ಶಾಸಕರ ಸಭೆ ನಡೆಸಿ ಗೈರಾದ ಶಾಸಕರಿಗೆ ನೋಟಿಸ್ ಕೂಡ ನೀಡಿದ್ದರು. ಬಳಿಕ ಶನಿವಾರ ರಾತ್ರಿ ಎಲ್ಲಾ ಶಾಸಕರಿಗೆ ಪಾರ್ಟಿ ಏರ್ಪಡಿಸಲಾಗಿತ್ತು. ಈ ವೇಳೆ ಬೆಳಗಿನ ಜಾವ 3 ಗಂಟೆಗೆ ಶಾಸಕರ ಪಾರ್ಟಿ ವೇಳೆ ನಡೆದ ಮಾತಿಗೆ ಮಾತು ಬೆಳೆದು ಕಂಪ್ಲಿ ಶಾಸಕ ಗಣೇಶ್ ಅವರು ಆನಂದ್ ಸಿಂಗ್ ತಲೆಗೆ ಬಾಟಲಿನಿಂದ ಏಟು ನೀಡಿದ್ದರು ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆರ್‌ಎಸ್‌ಎಸ್  ಮುಖಂಡರೊಂದಿಗೆ ಕಾಣಿಸಿಕೊಂಡ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್

    ಆರ್‌ಎಸ್‌ಎಸ್ ಮುಖಂಡರೊಂದಿಗೆ ಕಾಣಿಸಿಕೊಂಡ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್

    ಮಂಗಳೂರು: ಆಪರೇಷನ್ ಕಮಲದ ಸುದ್ದಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಬಳ್ಳಾರಿ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಆರ್ ಎಸ್‍ಎಸ್ ಮುಖಂಡರೊಂದಿಗೆ ಕಾಣಿಸಿಕೊಂಡಿದ್ದು, ಮತ್ತೆ ಮಾತೃಪಕ್ಷ ಬಿಜೆಪಿಗೆ ಸೇರುತ್ತಾರ ಎಂಬ ಚರ್ಚೆ ರಾಜಕೀಯ ವಲಯದಿಂದ ಕೇಳಿ ಬಂದಿದೆ.

    ಆರ್ ಎಸ್‍ಎಸ್ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್ ಮುಂದಾಳತ್ವದಲ್ಲಿ ನಡೆಯುತ್ತಿರುವ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಭಾನುವಾರ ನಡೆದ ಕ್ರೀಡೋತ್ಸವದಲ್ಲಿ ಆನಂದ್ ಸಿಂಗ್ ಭಾಗಿಯಾಗಿದ್ದರು.

    ಇಡೀ ಕಾರ್ಯಕ್ರಮದಲ್ಲಿ ಬಿಜೆಪಿ, ಆರ್ ಎಸ್‍ಎಸ್ ಮುಖಂಡರುಗಳನ್ನು ಹೊರತುಪಡಿಸಿ ಬೇರೆ ಯಾರೂ ಅತಿಥಿಗಳು ಇರಲಿಲ್ಲ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿಯೂ ಆನಂದ್ ಸಿಂಗ್ ಹೆಸರು ಇರಲಿಲ್ಲ. ಹೀಗಿದ್ದರೂ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಕುತೂಹಲ ಕೆರಳಿಸಿದೆ.

    ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಬಿಜೆಪಿ ಆಪರೇಷನ್ ನಡೆಸುತ್ತೆ ಎಂಬ ಆರೋಪ ಬಿಜೆಪಿ ಮುಖಂಡರ ಮೇಲೆ ಕೇಳಿ ಬಂದಿತ್ತು. ಆನಂದ್ ಸಿಂಗ್ ಅವರ ನಡೆ ಸದ್ಯ ರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದ್ದು, ಆನಂದ್ ಸಿಂಗ್ ಮತ್ತೆ ಬಿಜೆಪಿ ಸೇರುತ್ತಾರಾ ಎನ್ನುವ ಪ್ರಶ್ನೆ ಮತ್ತೆ ಹುಟ್ಟಿಕೊಂಡಿತ್ತು.

    ಸಮ್ಮಿಶ್ರ ಸರ್ಕಾರದ ರಚನೆಗೂ ಮುನ್ನ ಆನಂದ್ ಸಿಂಗ್ ಬಿಜೆಪಿ ಸೇರುವ ಬಗ್ಗೆ ಮಾತು ಕೇಳಿಬಂದಿತ್ತು. ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಸಮಯದಲ್ಲೂ ಸದನಕ್ಕೆ ತಡವಾಗಿ ಆಗಮಿಸಿದ್ದರು. ಆದರೆ ಈ ವೇಳೆ ಅವರು ತಾವು ಕಾಂಗ್ರೆಸ್ ಪಕ್ಷದಲ್ಲೇ ಇರುವುದಾಗಿ ತಿಳಿಸಿದ್ದರು. ಆದರೆ ಬೆಳಗಾವಿ ಅಧಿವೇಶನಕ್ಕೂ ಮುನ್ನ ಕಲ್ಲಡ್ಕದಲ್ಲಿ ದಿಢೀರ್ ಆಗಿ ಕಾಣಿಸಿಕೊಂಡಿದ್ದಲ್ಲದೆ, ಪ್ರಭಾಕರ್ ಭಟ್ ಅವರೊಂದಿಗೆ ಕೆಲಕಾಲ ಮಾತುಕತೆ ನಡೆಸಿದ್ದಾರೆ.

    ಈ ಹಿಂದೆ ಶಾಸಕ ಆನಂದ್ ಸಿಂಗ್ ಬಿಜೆಪಿಯಲ್ಲಿದ್ದಾಗ ಟಿಪ್ಪು ಜಯಂತಿಯಲ್ಲಿ ಭಾಗಿಯಾಗಿದ್ದರು. ಅಲ್ಲದೇ ಇದ್ದಕ್ಕೆ ರಾಜ್ಯ ಬಿಜೆಪಿ ಮುಖಂಡರು ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಅಂತೆಯೇ ಜಯಂತಿಯಲ್ಲಿ ಭಾಗವಹಿಸಿದ್ದಕ್ಕೆ ಉತ್ತರ ನೀಡಬೇಕೆಂದು ಬಿಜೆಪಿ ಆನಂದ್ ಸಿಂಗ್ ಅವರಿಗೆ ಶೋಕಾಸ್ ನೋಟಿಸ್ ಸಹ ಜಾರಿ ಮಾಡಿತ್ತು. ಆ ಬಳಿಕ ನಡೆದ ಬೆಳವಣಿಗೆಯಲ್ಲಿ ಆನಂದ್ ಸಿಂಗ್ ಅವರು ಕಾಂಗ್ರೆಸ್ ಪಕ್ಷ ಸೇರಿ ಶಾಸಕರಾಗಿ ಆಯ್ಕೆ ಆಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಶಾಸಕ ಆನಂದ್ ಸಿಂಗ್‍ ರನ್ನ ಹುಡುಕಿ ಕೊಡಿ-ಕಾಂಗ್ರೆಸ್ ಕಾರ್ಯಕರ್ತರಿಂದ ದೂರು ದಾಖಲು!

    ಶಾಸಕ ಆನಂದ್ ಸಿಂಗ್‍ ರನ್ನ ಹುಡುಕಿ ಕೊಡಿ-ಕಾಂಗ್ರೆಸ್ ಕಾರ್ಯಕರ್ತರಿಂದ ದೂರು ದಾಖಲು!

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿದ್ದು, ದಿನೇ ದಿನೇ ಹೊಸ ರೂಪವನ್ನು ಪಡೆದುಕೊಳ್ಳುತ್ತಿದೆ. ಇತ್ತ ಬಳ್ಳಾರಿ ಜಿಲ್ಲೆಯ ವಿಜಯನಗರ ಶಾಸಕ ಆನಂದ್ ಸಿಂಗ್ ನಾಪತ್ತೆಯಾಗಿದ್ದು, ಈಗ ಅವರ ಪತ್ತೆಗಾಗಿ ಕಾಂಗ್ರೆಸ್ ಶಾಸಕರು ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ.

    ಆನಂದ್ ಸಿಂಗ್ ಬುಧವಾರ ಬಳ್ಳಾರಿಯಿಂದ ರೆಸಾರ್ಟ್ ರಾಜಕಾರಣಕ್ಕೆಂದು ಹೊರಟ್ಟಿದ್ದರು. ಆದರೆ ಇದೂವರೆಗೂ ಬೆಂಗಳೂರು ತಲುಪಿಲ್ಲ. ಕಾಂಗ್ರೆಸ್ ಮುಖಂಡರಿಗೆ ಖುದ್ದು ಕರೆ ಮಾಡಿ ಬೆಂಗಳೂರಿಗೆ ಬರುತ್ತೀದ್ದೀನಿ ಅಂತ ಹೇಳಿದ್ದರು. ಆದರೆ ಅವರು ಕಾಂಗ್ರೆಸ್ ಮುಖಂಡರ ಕೈಗೆ ಸಿಕ್ಕಿಲ್ಲ. ಹೀಗಾಗಿ ಆನಂದ್ ಸಿಂಗ್ ಹುಡುಕಿಕೊಡುವಂತೆ ಇಂದು ಹೊಸಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಜೊತೆಗೆ ಹೊಸಪೇಟೆ ಪೊಲೀಸ್ ಠಾಣೆಗೆ ಮಿಸ್ಸಿಂಗ್ ಕಂಪ್ಲೆಂಟ್ ಕೊಟ್ಟು ಹುಡುಕಿಕೊಡಿ ಎಂದು ಮನವಿ ಸಲ್ಲಿಸಲಿದ್ದಾರೆ.

    ಅತ್ತ ರಾಯಚೂರಿನ ಮಸ್ಕಿಯಲ್ಲಿಯೂ ಶಾಸಕ ಪ್ರತಾಪ್ ಗೌಡರನ್ನು ಹುಡುಕಿಕೊಡಿ ಎಂದು ಅಭಿಯಾನ ನಡೆಯಲಿದೆ. ಪ್ರತಾಪ್ ಗೌಡ, ಕಾಂಗ್ರೆಸ್ ನಾಯಕರ ಸಂಪರ್ಕಕ್ಕೆ ಬಾರದಿದ್ದರೆ ಅವರ ಮನೆಗೆ ಮುತ್ತಿಗೆ ಹಾಕುವುದಾಗಿ ಸ್ಥಳೀಯ ಕಾಂಗ್ರೆಸ್ಸಿಗರು ಎಚ್ಚರಿಸಿದ್ದಾರೆ.

    ಸದ್ಯಕ್ಕೆ ಹೊಸಪೇಟೆ ಶಾಸಕ ಆನಂದ್ ಸಿಂಗ್ ಮತ್ತು ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಇನ್ನೂ ಕಾಂಗ್ರೆಸ್ ನಾಯಕರ ಸಂಪರ್ಕಕ್ಕೆ ಸಿಕ್ಕಿಲ್ಲ. ಇಬ್ಬರನ್ನು ಬಿಜೆಪಿ ಹೈಜಾಕ್ ಮಾಡಿರೋ ಶಂಕೆಯನ್ನು ಕಾಂಗ್ರೆಸ್ ಪಾಳಯ ವ್ಯಕ್ತಪಡಿಸುತ್ತಿದೆ.

    ಒಟ್ಟಿನಲ್ಲಿ ಬಳ್ಳಾರಿಯಿಂದ 3 ಶಾಸಕರು ಒಟ್ಟಾಗಿದ್ದು, ಆನಂದ್ ಸಿಂಗ್ ಅವರು ಸಚಿವ ಸ್ಥಾನದ ಬೇಡಿಕೆಯಿಟ್ಟಿದ್ದರು. ಅವರ ಬೇಡಿಕೆ ಈಡೇರಿಸುತ್ತೇವೆ ಅಂತ ಹೇಳಿದ್ರೂ ಕೂಡ ಖಚಿತ ಸ್ಪಷ್ಟತೆ ಇಲ್ಲದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಅವರು ದೂರ ಉಳಿದಿರಬಹುದೆಂಬ ಮಾತುಗಳು ಕಾಂಗ್ರೆಸ್ ವಲಯದಿಂದ ಕೇಳಿಬರುತ್ತಿದೆ.

  • ಗನ್ ಮ್ಯಾನ್, ಚಾಲಕನನ್ನು ಬಿಟ್ಟು ಪತ್ನಿ ಜೊತೆ ಕಾರಿನಲ್ಲಿ ಆನಂದ್ ಸಿಂಗ್ ಹೋಗಿದ್ದು ಎಲ್ಲಿಗೆ?

    ಗನ್ ಮ್ಯಾನ್, ಚಾಲಕನನ್ನು ಬಿಟ್ಟು ಪತ್ನಿ ಜೊತೆ ಕಾರಿನಲ್ಲಿ ಆನಂದ್ ಸಿಂಗ್ ಹೋಗಿದ್ದು ಎಲ್ಲಿಗೆ?

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡುತ್ತಿದ್ದು, ಈ ಮಧ್ಯೆ ಇತ್ತೀಚೆಗಷ್ಟೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಬಳ್ಳಾರಿ ಶಾಸಕ ಆನಂದ್ ಸಿಂಗ್ ನಡೆ ಭಾರೀ ಕುತೂಹಲ ಕೆರಳಿಸಿದೆ.

    ರೆಸಾರ್ಟ್ ರಾಜಕಾರಣಕ್ಕೆಂದು ಬುಧವಾರ ಬಳ್ಳಾರಿಯಿಂದ ಹೊರಟವರು ಇದೂವರೆಗೂ ಬೆಂಗಳೂರು ತಲುಪಿಲ್ಲ. ಇಷ್ಟು ಮಾತ್ರವಲ್ಲದೇ ಚಾಲಕ, ಗನ್ ಮ್ಯಾನ್ ಗಳನ್ನು ಬಿಟ್ಟು ಸ್ವತಃ ತಾವೇ ಡ್ರೈವ್ ಮಾಡಿಕೊಂಡು ಬಳ್ಳಾರಿಯಿಂದ ಹೊರಟಿದ್ದವರು ಇನ್ನೂ ಬೆಂಗಳೂರು ತಲುಪಿಲ್ಲದ್ದು ಅಚ್ಚರಿ ಮೂಡಿಸುತ್ತಿದೆ.

    ಕಾಂಗ್ರೆಸ್ ಮುಖಂಡರಿಗೆ ಖುದ್ದು ಕರೆ ಮಾಡಿ ಬೆಂಗಳೂರಿಗೆ ಬರ್ತಿದ್ದೀನಿ ಡೋಂಟ್ ವರಿ ಅಂತ ಹೇಳಿದ್ದರು. ಆದ್ರೆ ಇದೂವರೆಗೂ ಶಾಸಕರು ಕಾಂಗ್ರೆಸ್ ಮುಖಂಡರ ಕೈಗೆ ಸಿಕ್ಕಿಲ್ಲ. ಹೀಗಾಗಿ ಸದ್ಯ ಕಾಂಗ್ರೆಸ್ಸಿನ 78 ಶಾಸಕರಲ್ಲಿ 77 ಜನ ಮಾತ್ರ ಇದ್ದಾರೆ. ಇದನ್ನೂ ಓದಿ: ಶಾಸಕ ಆನಂದ್ ಸಿಂಗ್ ಎಲ್ಲಿದ್ದಾರೆ ಅನ್ನೋದಕ್ಕೆ ಉತ್ತರಿಸಿದ್ರು ಹೆಚ್‍ಡಿಕೆ

    ಚುನಾವಣಾ ಫಲಿತಾಂಶದ ಬಳಿಕ ಕಾರ್ಯಕರ್ತರ ಸಂಭ್ರಮ ಕಾರ್ಯಕ್ರಮವಿದ್ದುದರಿಂದ ಮೊನ್ನೆ ರಾತ್ರಿ ಹೊರಡಬೇಕಾಗಿದ್ದ ಆನಂದ್ ಸಿಂಗ್ ನಿನ್ನೆ ಬೆಳಗ್ಗೆ ಹೊರಟಿದ್ದರು ಎನ್ನಲಾಗಿದೆ. ಒಟ್ಟಿನಲ್ಲಿ ಬಳ್ಳಾರಿ ಗಡಿಯಲ್ಲಿ ರೆಡ್ಡಿ ಬ್ರದರ್ಸ್ ಅವರ ಸಂಪರ್ಕದಲ್ಲಿದ್ದು, ಅವರನ್ನು ಹೈಜಾಕ್ ಮಾಡಿದ್ದಾರೆ ಅನ್ನೋ ಮಾಹಿತಿಯನ್ನು ಅವರ ಆಪ್ತವಲಯದಿಂದ ಕೇಳಿಬಂದಿದೆ. ಆದ್ರೆ ಈ ವಿಚಾರವನ್ನು ಸ್ಪಷ್ಟಪಡಿಸುವುದಾಗಿ ಅಥವಾ ನಿರಾಕರಿಸುವುದಾಗಿ ಆಪ್ತ ವಲಯಗಳು ಬಿಟ್ಟು ಕೊಡುತ್ತಿಲ್ಲ.

    ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ಮಾತನಾಡಿದ್ದ ವೇಳೆ ಆನಂದ್ ಸಿಂಗ್ ಅವರು ಮಾಜಿ ಸಚಿವ ಗಣಿಧಣಿ ಜನಾರ್ದನ ರೆಡ್ಡಿ ಅವರು ಈಗಲೂ ನನ್ನ ಜೊತೆ ಸಂಪರ್ಕದಲ್ಲಿದ್ದಾರೆ ಎಂಬ ಹೇಳಿಕೆಯೊಂದನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಆಪರೇಷನ್ ಕಮಲ ಮಾಡೋದಿಕ್ಕೆ ಜನಾರ್ದನ ರೆಡ್ಡಿಯವರು ಫೀಲ್ಡ್ ಗೆ ಇಳಿದಿದ್ದಾರಾ ಎಂಬ ಅನುಮಾನವೊಂದ ಪ್ರಶ್ನೆ ಈಗ ಎದ್ದಿದೆ. ಇದನ್ನೂ ಓದಿ: ಗುಜರಾತ್‍ಗೆ ತೆರಳಿದ್ದಾರಾ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್?

    ಬಿಜೆಪಿಯನ್ನು ತೊರೆದು ಬಿಜೆಪಿ ವಿರುದ್ಧವೇ ತೊಡೆತಟ್ಟಿ ಕಾಂಗ್ರೆಸ್ ಸೇರಿ ಗೆದ್ದಿರುವ ಶಾಸಕರು ಇದೀಗ ಮತ್ತೆ ಬಿಜೆಪಿ ಪರ ಯಾಕೆ ಬೆಂಬಲ ಸೂಚಿಸುತ್ತಾರೆ ಎಂಬ ಯಕ್ಷಪ್ರಶ್ನೆ ಕಾಂಗ್ರೆಸ್ಸಿಗರನ್ನು ಕಾಡುತ್ತದೆ. ಆದ್ರೆ ಅವರು ಇಂತಹ ನಿರ್ಧಾರ ಕೈಗೊಳ್ಳಲಾರರು ಎಂಬ ನಂಬಿಕೆಯಲ್ಲಿ ಕೈ ನಾಯಕರಿದ್ದಾರೆ.

    ಒಟ್ಟಿನಲ್ಲಿ ಬಳ್ಳಾರಿಯಿಂದ 3 ಶಾಸಕರು ಒಟ್ಟಾಗಿದ್ದು, ಆನಂದ್ ಸಿಂಗ್ ಅವರು ಸಚಿವ ಸ್ಥಾನದ ಬೇಡಿಕೆಯಿಟ್ಟಿದ್ದರು. ಅವರ ಬೇಡಿಕೆ ಈಡೇರಿಸುತ್ತೇವೆ ಅಂತ ಹೇಳಿದ್ರೂ ಕೂಡ ಖಚಿತ ಸ್ಪಷ್ಟತೆ ಇಲ್ಲದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಅವರು ದೂರ ಉಳಿದಿರಬಹುದೆಂಬ ಮಾತುಗಳು ಕಾಂಗ್ರೆಸ್ ವಲಯದಿಂದ ಕೇಳಿಬರುತ್ತಿದೆ.