Tag: ಶಾಸಕ ಆರ್ ಶಂಕರ್

  • ಅನರ್ಹತೆಯ ಅಸ್ತ್ರದಿಂದ ಪಕ್ಷೇತರ ಶಾಸಕ ಆರ್.ಶಂಕರ್ ಬಚಾವ್?

    ಅನರ್ಹತೆಯ ಅಸ್ತ್ರದಿಂದ ಪಕ್ಷೇತರ ಶಾಸಕ ಆರ್.ಶಂಕರ್ ಬಚಾವ್?

    ಬೆಂಗಳೂರು: ಎರಡನೇ ಬಾರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿ ಜೂನ್ 14 ರಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದ ಕೆಪಿಜೆಪಿ ಪಕ್ಷದ ಶಾಸಕ ಆರ್.ಶಂಕರ್ ಅಲ್ಪ ಸಮಯದಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಇದರ ಬೆನ್ನಲ್ಲೇ ಆರ್.ಶಂಕರ್ ಅನರ್ಹತೆಯ ಅಸ್ತ್ರ ಪ್ರಯೋಗ ಆಗಲಿದೆಯಾ ಎಂಬ ಅನುಮಾನ ಮೂಡಿತ್ತು.

    ಸಚಿವ ಸ್ಥಾನ ಪಡೆಯುವ ವೇಳೆ ಶಂಕರ್ ತಮ್ಮ ಪಕ್ಷವನ್ನು ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನ ಮಾಡಲು ಸ್ಪೀಕರ್ ಅವರಿಗೆ ಪತ್ರ ಬರೆದಿದ್ದರು. ಆದರೆ ಸ್ಪೀಕರ್ ಈ ಪತ್ರವನ್ನು ನಿರಾಕರಿಸಿ ಪಕ್ಷದಿಂದ ಪತ್ರವನ್ನು ನೀಡುವಂತೆ ತಿಳಿಸಿದ್ದರು.

    ಇತ್ತ 2ನೇ ಬಾರಿಗೆ ಮೈತ್ರಿ ಸರ್ಕಾರಕ್ಕೆ ಬೆಂಬಲ ವಾಪಸ್ ಪಡೆದು ಮುಂಬೈಗೆ ತೆರಳಿದ್ದ ಆರ್. ಶಂಕರ್ ಜುಲೈ 12 ರಂದು ಸ್ಪೀಕರ್ ಗೆ ಬರೆದು ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದು, ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದರು. ಅಲ್ಲದೇ ಪ್ರತ್ಯೇಕ ಆಸನ ವ್ಯವಸ್ಥೆ ಮಾಡುವಂತೆ ಸ್ಪೀಕರ್ ಬಳಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಶಂಕರ್ ಅವರಿಗೆ ಪ್ರತ್ಯೇಕ ಆಸನ ವ್ಯವಸ್ಥೆಗೆ ಸ್ಪೀಕರ್ ಸೂಚಿಸಿದ್ದಾರೆ.

    ಇತ್ತ ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಹಳ್ಳಿ ಅವರನ್ನು ಅನರ್ಹತೆ ಮಾಡುವಂತೆ ಕಾಂಗ್ರೆಸ್ ಸ್ಪೀಕರ್ ಅವರಿಗೆ ಮನವಿ ಮಾಡಿದೆ. ಹಳೆ ಪ್ರಕರಣದಲ್ಲಿ ವಿಚಾರಣೆ ನಡೆಸಲಿರುವ ಸ್ಪೀಕರ್ ಅವರು ಈ ವಿಚಾರದ ಬಗ್ಗೆ ನಿರ್ಧಾರ ಪ್ರಕಟಿಸಲಿದ್ದಾರೆ. ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಹಳ್ಳಿ ಅವರ ವಿರುದ್ಧ ಕಾಂಗ್ರೆಸ್ ಕೆಲ ಸಾಕ್ಷಿಗಳನ್ನು ನೀಡಿದೆ. ಈ ಅಂಶಗಳೊಂದಿಗೆ ಸ್ಪೀಕರ್ ಅವರು ವಿಚಾರಣೆ ನಡೆಲಿದ್ದಾರೆ.

  • ಶಾಸಕ ಆರ್.ಶಂಕರ್‌ಗೂ ಎದುರಾಗುತ್ತಾ ಸಂಕಷ್ಟ?

    ಶಾಸಕ ಆರ್.ಶಂಕರ್‌ಗೂ ಎದುರಾಗುತ್ತಾ ಸಂಕಷ್ಟ?

    ಬೆಂಗಳೂರು: ತಾವು ಪಕ್ಷೇತರ ಅಭ್ಯರ್ಥಿ ಎಂದು ಹೇಳಿಕೊಂಡು ಮೈತ್ರಿ ಸರ್ಕಾರಕ್ಕೆ ಕೈಕೊಟ್ಟಿರುವ ಆರ್.ಶಂಕರ್ ಅವರಿಗೆ ಸಂಕಷ್ಟ ಎದುರಾಗಿದ್ದು, ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಅವರ ವಿರುದ್ಧ ಕ್ರಮಕೈಗೊಳ್ಳಲು ಅವಕಾಶ ಇದೆಯಾ ಎಂಬ ಬಗ್ಗೆ ಚಿಂತನೆ ನಡೆಸಿದ್ದಾಗಿ ಕೆಪಿಜೆಪಿ ಪಕ್ಷದ ಅಧ್ಯಕ್ಷರಾದ ಮಹೇಶ್ ಗೌಡ ಅವರು ಹೇಳಿದ್ದಾರೆ.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಆರ್.ಶಂಕರ್ ಅವರು ಪ್ರತಿ ಬಾರಿ ಮಾಧ್ಯಮಗಳ ಮೂಲಕ ತಾವು ಪಕ್ಷೇತರ ಅಭ್ಯರ್ಥಿ ಎಂದು ಹೇಳುತ್ತಾರೆ. ಆದರೆ ಅವರು ಕೆಪಿಜೆಪಿ ಪಕ್ಷದ ಚಿಹ್ನೆಯಿಂದ ಗೆದ್ದು ಬಂದಿದ್ದಾರೆ. ಅವರಿಗೆ ಈಗಾಗಲೇ ಈ ಬಗ್ಗೆ ಮಾಹಿತಿ ನೀಡಿದ್ದೆ. ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈಗ ಅವರನ್ನು ಸಂಪರ್ಕ ಮಾಡಲು ಕೂಡ ಆಗುತ್ತಿಲ್ಲ. ಆದ್ದರಿಂದ ಕಾನೂನು ಸಲಹೆ ಪಡೆದು ಸ್ಪೀಕರ್ ಹಾಗೂ ರಾಜ್ಯಪಾಲರ ಭೇಟಿ ಮಾಡಿ ಕ್ರಮಕೈಗೊಳ್ಳಲು ಮನವಿ ಮಾಡುವುದಾಗಿ ತಿಳಿಸಿದರು.

    ಇತ್ತೀಚೆಗಷ್ಟೇ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ್ದ ಆರ್.ಶಂಕರ್ ಅವರು ಕೆಲ ದಿನಗಳ ಬೆನ್ನಲ್ಲೇ ತಮ್ಮ ಬೆಂಬಲ ವಾಪಸ್ ಪಡೆದು ಮುಂಬೈಗೆ ತೆರಳಿದ್ದರು. ಸರ್ಕಾರದೊಂದಿಗೆ ಇರುವುದಾಗಿ ಹೇಳಿದ್ದ ಇವರು ಪದೇ ಪದೇ ಈ ರೀತಿ ಮಾಡುತ್ತಿದ್ದಾರೆ. ಈ ಹಿಂದೆ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡುವುದಾಗಿಯೂ ಹೇಳಿದ್ದರು. ಆದರೆ ಇದು ಅವರಿಂದ ಸಾಧ್ಯವಿಲ್ಲ. ಈಗಲೂ ನಾನು ಪಕ್ಷವನ್ನು ವಿಲೀನ ಮಾಡಲು ಸಿದ್ಧರಾಗಿಲ್ಲ ಎಂದರು.

    ಇದೇ ಸಂದರ್ಭದಲ್ಲಿ ಡಿಕೆ ಶಿವಕುಮಾರ್, ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಶಂಕರ್ ಅವರ ಮೇಲೆ ಕಾನೂನು ರೀತಿ ಕ್ರಮಕೈಗೊಳ್ಳಲು ಕಾನೂನು ತಜ್ಞರ ಅಭಿಪ್ರಾಯ ಪಡೆಯುತ್ತಿದ್ದೇನೆ ಎಂದು ಮಹೇಶ್ ಗೌಡ ಅವರು ಹೇಳಿದ್ದಾರೆ.