Tag: ಶಾಸಕ ಡಾ.ಭರತ್ ಶೆಟ್ಟಿ

  • AOMSI ನಿಂದ UK ಉತ್ಪಾದಿತ ಬ್ಲ್ಯಾಕ್ ಫಂಗಸ್ ಔಷಧ ಮಂಗಳೂರಿಗೆ

    AOMSI ನಿಂದ UK ಉತ್ಪಾದಿತ ಬ್ಲ್ಯಾಕ್ ಫಂಗಸ್ ಔಷಧ ಮಂಗಳೂರಿಗೆ

    ಮಂಗಳೂರು: ಶಾಸಕ ಡಾ.ಭರತ್ ಶೆಟ್ಟಿ ಪ್ರಯತ್ನದಿಂದಾಗಿ ಎಓಎಂಎಸ್‍ಐ ನಿಂದ ಯುಕೆ ಉತ್ಪಾದಿತ ಬ್ಲ್ಯಾಕ್ ಫಂಗಸ್ ಔಷಧವನ್ನು ಮಂಗಳೂರಿಗೆ ತರಿಸಲಾಗಿದೆ.

    ಮಂಗಳೂರಿನಲ್ಲಿ ಬ್ಲ್ಯಾಕ್ ಫಂಗಸ್ ರೋಗಕ್ಕೆ ಔಷಧದ ಕೊರತೆ ಇರುವುದನ್ನು ಮನಗಂಡ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಮಾಡಿದ ವಿಶೇಷ ಪ್ರಯತ್ನದ ಫಲವಾಗಿAssociation of Oral and Maxillofacial Surgeons of India (AOMSI) ಸಂಘಟನೆಯ ಮಾಜಿ ಅಧ್ಯಕ್ಷರಾದ ಡಾ.ಕೃಷ್ಣಮೂರ್ತಿ ಬೊನತಾಯ ಹಾಗೂ ಡಾ.ಬದ್ರಿ ಅವರು ಯುನೈಟೆಡ್ ಕಿಂಗಡಂನಿಂದ ಬ್ಲ್ಯಾಕ್ ಫಂಗಸ್ ಗೆ ಬೇಕಾಗಿರುವ Amphotericin ಔಷಧವನ್ನು ಭಾರತಕ್ಕೆ ತರಿಸಿದ್ದಾರೆ. ಇದನ್ನು ಓದಿ: ಬ್ಲಾಕ್ ಫಂಗಸ್‍ಗೆ ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚುವರಿ ಔಷಧ ಪೂರೈಕೆ – ಡಿವಿಎಸ್

    ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರಿಗೆ ಮಂಗಳವಾರ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ AOMSI ಅಧ್ಯಕ್ಷರಾದ ಡಾ.ಮಂಜುನಾಥ ರೈ ಹಾಗೂ ಮಾಜಿ ಅಧ್ಯಕ್ಷರಾದ ಡಾ.ಮುಸ್ತಫಾ ಖಾದರ್ ಉಪಸ್ಥಿತರಿದ್ದರು.

    ಡಾ.ವೈ ಭರತ್ ಶೆಟ್ಟಿಯವರು ಕೇಂದ್ರ ಹಾಗೂ ರಾಜ್ಯ ಸರಕಾರದೊಂದಿಗೆ ನಿರಂತರ ಸಂವಹನ ನಡೆಸಿದ ಪ್ರಯತ್ನ ಆಡಳಿತಾತ್ಮಕ ಕಾರ್ಯಗಳು ಸುಗಮವಾಗಿ ನಡೆದು ಔಷಧ ಮಂಗಳೂರಿಗೆ ಬರಲು ಸಹಕಾರಿಯಾಯಿತು. ಬ್ಲ್ಯಾಕ್ ಫಂಗಸ್ ರೋಗಕ್ಕೆ ಚಿಕಿತ್ಸೆ ನೀಡುವಲ್ಲಿ AOMSI ಸಂಘಟನೆ ಮುಂಚೂಣಿಯಲ್ಲಿದ್ದು, ಕೋವಿಡ್ 19 ಸಾಂಕ್ರಾಮಿಕ ರೋಗ ನಿಯಂತ್ರಣದಲ್ಲಿಯೂ ಸರ್ಕಾರದೊಂದಿಗೆ ಕೈಜೋಡಿಸಿದೆ. ಇದನ್ನು ಓದಿ:ಕೊರೊನಾ ಸೋಂಕಿನಲ್ಲಿ ಭಾರಿ ಇಳಿಮುಖ – ಬೀದರ್ ರಾಜ್ಯಕ್ಕೆ ಮಾದರಿ

  • ಮಂಗಳೂರಿನ ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಕೊರೊನಾ

    ಮಂಗಳೂರಿನ ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಕೊರೊನಾ

    ಬೆಂಗಳೂರು: ಕೊರೊನಾ ಮಹಾಮಾರಿ ಬೆಂಬಿಡದೆ ಕಾಡುತ್ತಿದ್ದು, ರಾಜಕಾರಣಿಗಳಿಗೂ ವ್ಯಾಪಿಸುತ್ತಿದೆ. ಇದೀಗ ಮಂಗಳೂರು ನಗರ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿಯವರಿಗೂ ಕೊರೊನಾ ಸೋಂಕು ತಗುಲಿದೆ.

    ಈ ಕುರಿತು ಟ್ವೀಟ್ ಮಾಡುವ ಮೂಲಕ ಅವರು ಸ್ಪಷ್ಟಪಡಿಸಿದ್ದು, ನನಗೆ ಕೊರೊನಾ ಪಾಸಿಟಿವ್ ಬಂದಿದೆ. ನಿಮ್ಮ ಆಶೀರ್ವಾದದೊಂದಿಗೆ ಗುಣಮುಖನಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

    ದಯವಿಟ್ಟು ಸಾಮಾಜಿಕ ಅಂತರ ಕಾಪಾಡಿಕೊಳ್ಳಿ, ಹೊರಗಡೆ ಹೋಗುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ ಹಾಗೂ ಆಗಾಗ ಕೈ ತೊಳೆಯುತ್ತಿರಿ. ದಯವಿಟ್ಟು ನಿಮ್ಮ ಬಗ್ಗೆ ಹಾಗೂ ನಿಮ್ಮ ಹತ್ತಿರವಿದ್ದವರ ಬಗ್ಗೆಯೂ ಕಾಳಜಿ ವಹಿಸಿ ಎಂದು ಟ್ವೀಟ್‍ನಲ್ಲಿ ಮನವಿ ಮಾಡಿದ್ದಾರೆ.

    ರಾಜ್ಯದಲ್ಲಿ ಪ್ರತಿನಿತ್ಯ ಸಾವಿರದ ಲೆಕ್ಕದಲ್ಲಿ ಕೊರೊನಾ ಪ್ರಕರಣಗಳು ಬರುತ್ತಿದ್ದು, ಜನರನ್ನು ಭಯಭೀತರನ್ನಾಗಿಸಿದೆ. ಇಂದು ಮತ್ತೆ 1502 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಬೆಂಗಳೂರು ಒಂದರಲ್ಲೇ 889 ಜನರಿಗೆ ಸೋಂಕು ತಗುಲಿದೆ. ಒಟ್ಟು 8334 ಜನ ಈ ವರೆಗೆ ಗುಣಮುಖರಾಗಿದ್ದು, 9406 ಸಕ್ರಿಯ ಪ್ರಕರಣಗಳಿವೆ.