Tag: ಶಾಸಕ ನಾಗೇಂದ್ರ

  • ಕಂಟೈನ್‍ಮೆಂಟ್ ಏರಿಯಾದಲ್ಲಿ ಶಾಸಕ ನಾಗೇಂದ್ರ ರೇಷನ್ ಕಿಟ್ ವಿತರಣೆ

    ಕಂಟೈನ್‍ಮೆಂಟ್ ಏರಿಯಾದಲ್ಲಿ ಶಾಸಕ ನಾಗೇಂದ್ರ ರೇಷನ್ ಕಿಟ್ ವಿತರಣೆ

    ಬಳ್ಳಾರಿ: ನಗರದ ಕೌಲ್ ಬಜಾರ್ ಪ್ರದೇಶ ವ್ಯಾಪ್ತಿಯ 26ನೇ ವಾರ್ಡಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜಿಲ್ಲಾಡಳಿತ ಇಡೀ ಪ್ರದೇಶವನ್ನ ಕಂಟೈನ್‍ಮೆಂಟ್ ಝೋನ್ ಎಂದು ಘೋಷಿಸಿದೆ. ಹೀಗಾಗಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರು ರೇಷನ್ ಕಿಟ್ ವಿತರಿಸಿದ್ದಾರೆ.

    ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಿಎಲ್‍ಪಿ ನಾಯಕ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ ಈ ದಿನ ಕಂಟೈನ್‍ಮೆಂಟ್ ಏರಿಯಾದ ನೂರಾರು ಕುಟುಂಬ ಸದಸ್ಯರಿಗೆ ರೇಷನ್ ಕಿಟ್‍ಗಳನ್ನ ಶಾಸಕ ನಾಗೇಂದ್ರ ವಿತರಿಸಿದರು.

    ಕೌಲ್ ಬಜಾರ್ ವ್ಯಾಪ್ತಿಯ 26ನೇಯ ವಾರ್ಡಿನ ಪ್ರತಿಯೊಂದು ಮನೆಗಳಿಗೆ ತೆರಳಿದ ಶಾಸಕ ಬಿ.ನಾಗೇಂದ್ರ ಅವರು, ರೇಷನ್ ಕಿಟ್, ತರಕಾರಿ, ಹಾಲು, ಮೊಸರನ್ನ ವಿತರಿಸಿದರು. ಒಂದು ವಾರಕ್ಕೆ ಆಗುವಷ್ಟು ಅಗತ್ಯ ವಸ್ತುಗಳ ಶಾಸಕ ನಾಗೇಂದ್ರ ಪೂರೈಸಿದ್ದಾರೆ.

    ಈ ವೇಳೆ ಮಾತನಾಡಿದ ಶಾಸಕ ನಾಗೇಂದ್ರ, ಅಂದಾಜು ಸಾವಿರಕ್ಕೂ ಅಧಿಕ ಕಿಟ್‍ಗಳನ್ನ ವಿತರಿಸಲಾಯಿತು. ಅದರೊಂದಿಗೆ ತರಕಾರಿ, ಹಾಲು, ಮೊಸರನ್ನ ವಿತರಿಸಲಾಗಿದೆ. ಕಂಟೈನ್‍ಮೆಂಟ್ ಝೋನ್ ಎಂದು ಈ ಪ್ರದೇಶವನ್ನು ಘೋಷಣೆ ಮಾಡಲಾಗಿದ್ದು, ಅಗತ್ಯ ವಸ್ತುಗಳ ಕೊರತೆಯಾಗಬಾರದೆಂಬ ಸದುದ್ದೇಶದೊಂದಿಗೆ ಈ ನಿರ್ಧಾರಕ್ಕೆ ಬರಲಾಗಿದೆ. ವಾರಕ್ಕೆ ಆಗುವಷ್ಟು ಅಗತ್ಯ ವಸ್ತುಗಳನ್ನ ವಿತರಿಸಲಾಗಿದೆ. ವಾರದ ನಂತರ ಬೇಡಿಕೆಯಿದ್ದರೆ ಪೂರೈಕೆಗೂ ಸದಾ ಸಿದ್ಧವಿರುವುದಾಗಿ ಶಾಸಕ ನಾಗೇಂದ್ರ ತಿಳಿಸಿದ್ದಾರೆ.

  • ಐಟಿ ದಾಳಿ ರಾಜಕೀಯ ಪ್ರೇರಿತ ಅಲ್ಲ – ಕೈ ಶಾಸಕ ನಾಗೇಂದ್ರ

    ಐಟಿ ದಾಳಿ ರಾಜಕೀಯ ಪ್ರೇರಿತ ಅಲ್ಲ – ಕೈ ಶಾಸಕ ನಾಗೇಂದ್ರ

    ಬಳ್ಳಾರಿ: ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಅವರ ಮೇಲಿನ ಐಟಿ ದಾಳಿ ಯಾವುದೇ ರಾಜಕೀಯ ಪ್ರೇರಿತ ಅಲ್ಲ ಎಂದು ಹೇಳುವ ಮೂಲಕ ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ ಕಾಂಗ್ರೆಸ್ ನಾಯಕರಿಗೆ ಅಚ್ಚರಿ ಮೂಡಿಸಿದ್ದಾರೆ.

    ಬಳ್ಳಾರಿಯಲ್ಲಿ ಮಾತನಾಡಿದ ಅವರು, ನಾನು ಒಬ್ಬ ಉದ್ಯಮಿ ನನ್ನ ಮೇಲೂ ಈ ಹಿಂದೆ ಐಟಿ ದಾಳಿ ಆಗಿವೆ. ಇದನ್ನು ನಾನೂ ಎದುರಿಸಿದ್ದೇನೆ, ತೆರಿಗೆ ಸರಿಯಾಗಿ ಕಟ್ಟಿದ್ದರಿಂದ ನನಗೆ ಯಾವುದೇ ತೊಂದರೆಯಾಗಿಲ್ಲ. ದಾಳಿ ಆಗಿದೆ ಎಂಬ ಮಾತ್ರಕ್ಕೆ ಇದು ರಾಜಕೀಯ ಪ್ರೇರಿತ ಎನ್ನುವುದು ತಪ್ಪು. ಐಟಿ ಇಲಾಖೆ ಹಲವಾರು ದಿನಗಳ ಕಾಲ ಮಾಹಿತಿ ಪಡೆದು ದಾಳಿ ಮಾಡುತ್ತದೆ. ದಾಳಿ ಮಾಡುವುದು ಅವರ ಕೆಲಸ ಎಂದು ತಿಳಿಸಿದರು.

    ಐಟಿ ಇಲಾಖೆ ಯಾರ ಹಿಡಿತದಲ್ಲಿ, ಹಂತದಲ್ಲಿ ಇರುವುದಿಲ್ಲ, ಇದಕ್ಕಾಗಿ ಹಲವಾರು ದಿನದಿಂದ ಸಿದ್ಧತೆ ನಡೆಸಿರುತ್ತಾರೆ. ಇದನ್ನು ರಾಜಕೀಯ ಪ್ರೇರಿತ ಎಂದು ಹೇಳಲು ಸಾಧ್ಯವಿಲ್ಲ. ನಾನಂತೂ ಆ ರೀತಿ ಹೇಳಲು ಇಷ್ಟ ಪಡಲ್ಲ. ಮಾಮೂಲಿಯಾಗಿ ಐಟಿ ದಾಳಿ ನಡೆಯುತ್ತಲೇ ಇರುತ್ತದೆ. ಇದರಿಂದಾಗಿ ಹಿರಿಯ ರಾಜಕಾರಣಿಯಾಗಿರುವುದರಿಂದ ಪರಮೇಶ್ವರ್ ಅವರಿಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಸರಿಯಾದ ದಾಖಲೆಗಳನ್ನು ಅವರು ಇಲಾಖೆಗೆ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಆದರೆ ಬಹುತೇಕ ಕಾಂಗ್ರೆಸ್‍ನ ಹಿರಿಯ ನಾಯಕರು ಐಟಿ ದಾಳಿ ಕೇವಲ ಕಾಂಗ್ರೆಸ್ ನಾಯಕರ ಮೇಲೆ ಮಾತ್ರ ನಡೆಯುತ್ತಿದೆ. ಇದೊಂದು ರಾಜಕೀಯ ಪ್ರೇರಿತ ದಾಳಿ ಎಂದು ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡಿದ್ದಾರೆ.

  • ಶವ ಸಂಸ್ಕಾರಕ್ಕೆ ತುಂಬಿದ ಹಳ್ಳ ದಾಟಿ ಹೋಗುವ ದುಸ್ಥಿತಿ

    ಶವ ಸಂಸ್ಕಾರಕ್ಕೆ ತುಂಬಿದ ಹಳ್ಳ ದಾಟಿ ಹೋಗುವ ದುಸ್ಥಿತಿ

    ಬಳ್ಳಾರಿ: ಶವ ಸಂಸ್ಕಾರಕ್ಕೂ ಸರಿಯಾದ ವ್ಯವಸ್ಥೆಯಿಲ್ಲದೆ ತುಂಬಿದ ಹಳ್ಳ ದಾಟಿ, ಶವ ಸಂಸ್ಕಾರ ಮಾಡಲು ಜನರು ತೆರಳಿದ ಹೃದಯ ವಿದ್ರಾವಕ ಘಟನೆ ಬಳ್ಳಾರಿ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ.

    ಅಸುಂಡಿ ಗ್ರಾಮದ ನಿವಾಸಿ ಪರಶುರಾಮ್(45) ಸೋಮವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಅಸುಂಡಿ ಗ್ರಾಮದಲ್ಲಿದ್ದ ಹಳ್ಳ ತುಂಬಿ ಹರಿಯುತ್ತಿದ್ದ ಪರಿಣಾಮ ಸ್ಮಶಾನಕ್ಕೆ ಶವಗಳನ್ನ ತೆಗೆದುಕೊಂಡು ಹೋಗಲು ಆಗದೆ, ನಿನ್ನೆಯಿಂದ ಶವವನ್ನು ಇಡಲಾಗಿತ್ತು. ಕೊನೆಗೆ ಬೇರೆ ಮಾರ್ಗವಿಲ್ಲದೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸೇರಿಕೊಂಡು ಇಂದು ಶವವನ್ನು ಶವದ ಪೆಟ್ಟಿಗೆಯಲ್ಲಿ ಹೊತ್ತುಕೊಂಡು ಹಳ್ಳ ದಾಟಿ ಶವ ಸಂಸ್ಕಾರ ಮಾಡಿದ್ದಾರೆ.

    ಈ ಹಳ್ಳದಲ್ಲಿ ನೀರು ತುಂಬಿ ಹರಿಯುತ್ತಿದ್ದು, ಇದನ್ನು ದಾಟುವಾಗ ಸ್ವಲ್ಪ ಯಾಮಾರಿದರೂ ಅಂತ್ಯಸಂಸ್ಕಾರಕ್ಕೆ ಹೋದವರು ಕೊಚ್ಚಿ ಹೋಗುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ ಗ್ರಾಮದಲ್ಲಿ ಮೇಲ್ವರ್ಗಕ್ಕೊಂದು, ಕೆಳ ವರ್ಗದವರಿಗೊಂದು ಸ್ಮಶಾನವಿದೆ. ಆದರೆ ಕೆಳ ವರ್ಗದ ಸ್ಮಶಾನ ಹಳ್ಳದಾಚೆ ಇರುವುದರಿಂದ ಗ್ರಾಮಸ್ಥರು ಶವ ಸಂಸ್ಕಾರ ಮಾಡಲು ಪರದಾಡುತ್ತಿದ್ದಾರೆ.

    ಈ ಬಗ್ಗೆ ಪಿಡಿಒ, ತಹಶಿಲ್ದಾರ್, ಡಿಸಿವರೆಗೂ ಗ್ರಾಮಸ್ಥರು ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿಂದೆ ಶಾಸಕ ನಾಗೇಂದ್ರ ಕೂಡಾ ಚುನಾವಣೆ ವೇಳೆ ಸ್ಮಶಾನಕ್ಕೆ ಜಾಗ ಕೊಡುತ್ತೇನೆ ಎಂದು ಭರವಸೆ ನೀಡಿದ್ದರು. ಇದಾದ ನಂತರ ನಮ್ಮ ಗ್ರಾಮದ ಕಡೆ ತಲೆ ಹಾಕಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ನಾನು ಎಲ್ಲಿಯೂ ಹೋಗಿಲ್ಲ – ಶಾಸಕ ನಾಗೇಂದ್ರ ಸ್ಪಷ್ಟನೆ

    ನಾನು ಎಲ್ಲಿಯೂ ಹೋಗಿಲ್ಲ – ಶಾಸಕ ನಾಗೇಂದ್ರ ಸ್ಪಷ್ಟನೆ

    ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾಸಕ ನಾಗೇಂದ್ರ ಅವರು ರಾತ್ರೋರಾತ್ರಿ ಆಸ್ಪತ್ರೆಯಿಂದ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿತ್ತು. ಆದರೆ ಈ ಬಗ್ಗೆ ಸ್ವತಃ ನಾಗೇಂದ್ರ ಅವರೇ ಸ್ಪಷ್ಟನೆ ನೀಡಿದ್ದು, ನಾನು ಎಲ್ಲಿಯೂ ಹೋಗಿಲ್ಲ. ಆಸ್ಪತ್ರೆಯಲ್ಲೇ ಇದ್ದೇನೆ ಎಂದು ಹೇಳಿದ್ದಾರೆ.

    ಅನಾರೋಗ್ಯದಿಂದ ಸದನಕ್ಕೆ ಹಾಜರು ಆಗಲು ವಿನಾಯ್ತಿ ಪಡೆದಿದ್ದ ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ತೆರಳಿದ್ದಾರೆ ಎನ್ನಲಾಗಿತ್ತು. ಆದರೆ ಈ ಬಗ್ಗೆ ಸಚಿವ ಎಂಬಿ ಪಾಟೀಲ್ ಕೂಡ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದು, ನಾನು ಶಾಸಕ ನಾಗೇಂದ್ರ ಅವರೊಂದಿಗೆ ಇದ್ದೇನೆ. ಅವರು ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದರು.

    ನಗರದ ಆಸ್ಟರ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಾಗೇಂದ್ರ ಅವರು ಚಿಕಿತ್ಸೆ ಪಡೆಯುತ್ತಿದ್ದರು. ವೈದ್ಯರು ಅವರಿಗೆ ಸ್ಟಂಟ್ ಕೂಡ ಅಳವಡಿಸಿದ್ದರು. ವೈದ್ಯರ ಸೂಚನೆ ಮೇರೆಗೆ ಸದನಕ್ಕೆ ಗೈರಾಗಿ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದರು. ಇದರ ನಡುವೆಯೇ ಕಾಂಗ್ರೆಸ್ ಪಕ್ಷದ ನಾಯಕರು ಭಾನುವಾರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಅತೃಪ್ತ ಶಾಸಕರ ಗುಂಪಿನ ಪಟ್ಟಿಯಲ್ಲಿ ಗುರುತಿಸಿಕೊಂಡಿದ್ದ ನಾಗೇಂದ್ರ ಅವರು ಪಕ್ಷದಲ್ಲೇ ಇರಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

  • ನಡುಬೀದಿಯಲ್ಲೇ ಅಧಿಕಾರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಶಾಸಕ ನಾಗೇಂದ್ರ!

    ನಡುಬೀದಿಯಲ್ಲೇ ಅಧಿಕಾರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಶಾಸಕ ನಾಗೇಂದ್ರ!

    ಮೈಸೂರು: ಸಿಎಂ ಜಿಲ್ಲೆಗೆ ಬರುತ್ತಿರುವ ವಿಷಯ ತಿಳಿಸಿಲ್ಲ ಅಂತ ಸಿಟ್ಟಿಗೆದ್ದ ಶಾಸಕರೊಬ್ಬರು ನಡುಬೀದಿಯಲ್ಲೇ ಅಧಿಕಾರಿಯನ್ನು ಎಲ್ಲರ ಮುಂದೆ ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಾರೆ.

    ಜಿಲ್ಲೆಯ ಚಾಮರಾಜ ಕ್ಷೇತ್ರದ ಶಾಸಕ ನಾಗೇಂದ್ರ ಅಧಿಕಾರಿಯನ್ನು ನಿಂದಿಸಿ ಅವಾಜ್ ಹಾಕಿದ್ದಾರೆ. ಸಿಎಂ ಅವರು ಜಿಲ್ಲೆಗೆ ಬರುತ್ತಿರುವ ವಿಷಯವನ್ನು ಅಧಿಕಾರಿಗಳು ತಮಗೆ ತಿಳಿಸಿಲ್ಲ ಎಂಬ ಕಾರಣಕ್ಕೆ ನಾಗೇಂದ್ರ ಅವರು ನಡುಬೀದಿಯಲ್ಲೇ ಅಧಿಕಾರಿಗೆ ಬೈದಿದ್ದಾರೆ. ಇಲ್ಲಿಗೆ ಯಾಕೆ ಬಂದಿದ್ಯಾ ರಜೆ ಹಾಕಿ ನೀನು? ಸಿಎಂ ಬರಬೇಕಾದ್ರೆ ಹೇಳಬೇಕು ಅನ್ನೋ ಯೋಗ್ಯತೆ ಇಲ್ಲ ನಿಂಗೆ ಲೋಫರ್ ತಂದು ಎಂದು ಹೇಳಿ ಅಧಿಕಾರಿಗೆ ನಿಂದಿಸಿದ್ದಾರೆ.

    ಮೈಸೂರಿನ ಲ್ಯಾನ್ಸ್ ಕಟ್ಟಡ ವೀಕ್ಷಣೆ ವೇಳೆ ಸ್ಥಳೀಯ ಶಾಸಕರ ನಿರ್ಲಕ್ಷ್ಯ ತೋರಿದ್ದು, ಸಿಎಂ ಅವರು ಕಟ್ಟಡ ವೀಕ್ಷಣೆಗೆ ಬರುತ್ತಾರೆ ಅಂತ ಅಧಿಕಾರಿಗಳು ಶಾಸಕರಿಗೆ ಮಾಹಿತಿ ನೀಡಿರಲಿಲ್ಲ. ಆದರಿಂದ ಕೋಪಗೊಂಡ ನಾಗೇಂದ್ರ ಅವರು ಅಧಿಕಾರಿಗೆ ಬೈದು ಸಮಾಧಾನಪಟ್ಟುಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಾಸಕ ನಾಗೇಂದ್ರ ಶಪಥ ಫಲಿಸುತ್ತಾ? ಕೈ ನಾಯಕರ ವಿರುದ್ಧ ಮುನಿಸಿಗೆ ಕಾರಣ ಏನು?

    ಶಾಸಕ ನಾಗೇಂದ್ರ ಶಪಥ ಫಲಿಸುತ್ತಾ? ಕೈ ನಾಯಕರ ವಿರುದ್ಧ ಮುನಿಸಿಗೆ ಕಾರಣ ಏನು?

    ಬಳ್ಳಾರಿ: ಸಮ್ಮಿಶ್ರ ಸರ್ಕಾರ ಬೀಳಿಸಿ ಹೊಸ ಸರ್ಕಾರ ರಚಿಸಿ ಮಂತ್ರಿಯಾಗಿಯೇ ಬಳ್ಳಾರಿಗೆ ಬರುತ್ತೇನೆ ಎಂದು ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ ಶಪಥ ಮಾಡಿದ್ದಾರೆ ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದೆ.

    ಲೋಕಸಭಾ ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆ ವೇಳೆ ಶಾಸಕ ನಾಗೇಂದ್ರ ಅವರು, ಸಹೋದರನಿಗೆ ಟಿಕೆಟ್ ಕೇಳಿದ್ದರು. ಆದರೆ ಟಿಕೆಟ್ ಅನ್ನು ಉಗ್ರಪ್ಪ ಅವರಿಗೆ ನೀಡಲಾಗಿತ್ತು. ಬಳಿಕ ತಮಗೆ ಸಚಿವ ಸ್ಥಾನ ನೀಡುವಂತೆ ಕೇಳಿದ್ದರು. ಆಗಲೂ ಹಿನ್ನಡೆಯಾಗಿದ್ದರಿಂದ ಕಾಂಗ್ರೆಸ್ ನಾಯಕರ ವಿರುದ್ಧ ನಾಗೇಂದ್ರ ಅವರು ಕಿಡಿಕಾರಲು ಆರಂಭಿಸಿದ್ದರು.

    ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಬಳಿಕವೂ ಸಚಿವ ಸ್ಥಾನ ತಪ್ಪಿದ್ದರಿಂದ ಬೇಸರ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ನಾನು ಸಚಿವ ಸ್ಥಾನವನ್ನು ಪಡೆದೆ ಕ್ಷೇತ್ರಕ್ಕೆ ಮರಳುತ್ತೇನೆ ಎಂದು ಶಾಸಕರು ತಮ್ಮ ಬೆಂಬಲಿಗರಿಗೆ ಹೇಳಿದ್ದರಂತೆ. ಈ ಕಾರಣಕ್ಕೆ ಕಳೆದ ಒಂದು ತಿಂಗಳಿಂದ ನಾಗೇಂದ್ರ ಬಳ್ಳಾರಿ ಹಾಗೂ ತಮ್ಮ ಸ್ವಕ್ಷೇತ್ರಕ್ಕೆ ಭೇಟಿ ನೀಡಿಲ್ಲ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

    ಅಣ್ಣಾ ಮಿನಿಸ್ಟರ್ ಆಗಿಯೇ ಬರುತ್ತಾರೆ. ಸದ್ಯದ ಬೆಳವಣಿಗೆಯಿಂದ ನಾಗೇಂದ್ರ ಅವರ ಶಪಥ ಈಡೇರುತ್ತೆ ಅಂತ ಬೆಂಬಲಿಗರು ಮಾತನಾಡುತ್ತಿದ್ದಾರೆ. ಈ ಮೂಲಕ ಆಪರೇಷನ್ ಕಮಲ ಯಶಸ್ವಿಯಾಗಲು ನಾಗೇಂದ್ರ ಅವರು ಬದ್ಧರಾಗಿದ್ದಾರಾ? ಸಚಿವ ಸ್ಥಾನಕ್ಕಾಗಿ ಮತ್ತೇ ಬಿಜೆಪಿಗೆ ಮರಳುತ್ತಾರಾ ಎನ್ನುವ ಪ್ರಶ್ನೆ ರಾಜಕೀಯ ವಲಯದಲ್ಲಿ ಈಗ ಚರ್ಚೆಯಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚಿಕಿತ್ಸೆ ನೀಡಲು ತಡ ಮಾಡಿದ ವೈದ್ಯರಿಗೆ ಶಾಸಕ ತರಾಟೆ

    ಚಿಕಿತ್ಸೆ ನೀಡಲು ತಡ ಮಾಡಿದ ವೈದ್ಯರಿಗೆ ಶಾಸಕ ತರಾಟೆ

    ಮೈಸೂರು: ಚಾಮರಾಜನಗರದ ಹನೂರು ತಾಲೂಕಿನ ಮಾರಮ್ಮ ದೇವಾಲಯದ ವಿಷ ಪ್ರಸಾದ ತಿಂದು ಅಸ್ವಸ್ಥರಾಗಿದ್ದ ಮಹಿಳೆಗೆ ಚಿಕಿತ್ಸೆ ನೀಡದೆ ತಡ ಮಾಡಿದ ವೈದ್ಯರಿಗೆ ಶಾಸಕ ನಾಗೇಂದ್ರ ತರಾಟೆ ತೆಗೆದುಕೊಂಡಿದ್ದಾರೆ.

    ತಮಿಳುನಾಡು ಮೂಲದ ಲಕ್ಷೀ ಎಂಬವರ ಸ್ಥಿತಿ ಗಂಭೀರವಾಗಿತ್ತು, ಇದರಿಂದ ಅವರನ್ನು ಕೆ.ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ವೈದ್ಯರು ಮೊದಲು ಅಸ್ವಸ್ಥಗೊಂಡ ಮಹಿಳೆಗೆ ಚಿಕಿತ್ಸೆ ಕೊಡದೆ ಅವರ ಬಳಿಯೇ ಮಾಹಿತಿ ಪಡೆಯಲು ವೈದ್ಯರು ಮುಂದಾಗಿದ್ದಾರೆ. ಇದನ್ನು ಗಮನಿಸಿದ ನಾಗೇಂದ್ರ ಅವರು ವೈದ್ಯರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

    ಮೊದಲು ರೋಗಿಗೆ ಚಿಕಿತ್ಸೆ ನೀಡಿ ಆ ಬಳಿಕ ಮಾಹಿತಿ ಪಡೆಯಿರಿ. ಇಂತಹ ಸಂದರ್ಭದಲ್ಲಿ ರೋಗಿಗಳ ಆರೋಗ್ಯ ಮುಖ್ಯ ಎಂದು ಶಾಸಕ ನಾಗೇಂದ್ರ ಅವರು ತಿಳಿಸಿದ್ದಾರೆ. ಬಳಿಕ ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಅವರು, ಆಸ್ಪತ್ರೆಯಲ್ಲಿ ಸೇರಿರುವ ಎಲ್ಲಾ ರೋಗಿಗಳಿಗೂ ಚಿಕಿತ್ಸೆ ನೀಡಲಾಗಿದೆ. ಆದರೆ ಹೆಚ್ಚಿನ ಅವಶ್ಯಕತೆ ಇರುವ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲು ಸಹ ಸೂಚನೆ ನೀಡಲಾಗಿದೆ ಎಂದರು.

    ಯಾವುದೇ ರೋಗಿಯ ಜಾತಿ, ಹೆಸರು ಬಗ್ಗೆ ತಿಳಿಯುವ ಮೊದಲು ಚಿಕಿತ್ಸೆ ನೀಡುವುದು ಮುಖ್ಯ. ಆದ್ದರಿಂದ ವೈದ್ಯರಿಗೆ ಈ ಕುರಿತು ಸ್ವಲ್ಪ ಏರು ಧ್ವನಿಯಲ್ಲಿ ಸೂಚನೆ ನೀಡಿದ್ದೇನೆ ಅಷ್ಟೇ. ಕೆ. ಆರ್ ಆಸ್ಪತ್ರೆಗೆ ಸಂಬಂಧಿಸಿದಂತೆ ಹೆಚ್ಚಿನ ಸೌಲಭ್ಯ ನೀಡಲು ಸದನದಲ್ಲೂ ಪ್ರಸ್ತಾಪ ಮಾಡಿದ್ದೇನೆ. ಆಸ್ಪತ್ರೆಯಲ್ಲಿ ಯಾವುದೇ ರೀತಿಯ ಲೋಪವಾಗದಂತೆ ನೋಡಿಕೊಳ್ಳಲು ಕ್ರಮಕೈಗೊಳ್ಳಲಾಗಿದೆ. ಎಲ್ಲಾ ರೋಗಿಗಳಿಗೂ ಉತ್ತಮ ಚಿಕಿತ್ಸೆ ನೀಡುತ್ತೇವೆ ಎಂದು ನಾಗೇಂದ್ರ ಅವರು ಸ್ಪಷ್ಟನೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸುದೀಪ್ ರೀಲ್ ಸ್ಟಾರ್, ನಾವೆಲ್ಲಾ ರಿಯಲ್ ಸ್ಟಾರ್-ಕಿಚ್ಚನ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಕಿಡಿ

    ಸುದೀಪ್ ರೀಲ್ ಸ್ಟಾರ್, ನಾವೆಲ್ಲಾ ರಿಯಲ್ ಸ್ಟಾರ್-ಕಿಚ್ಚನ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಕಿಡಿ

    ಬಳ್ಳಾರಿ: ಬಿಜೆಪಿಯ ಅಭ್ಯರ್ಥಿಗಳ ಪರ ನಟ ಸುದೀಪ್ ಪ್ರಚಾರ ನಡೆಸಿರುವ ಕುರಿತು ಬಳ್ಳಾರಿ ಕಾಂಗ್ರೆಸ್ ಅಭ್ಯರ್ಥಿ ನಾಗೇಂದ್ರ ಕಿಡಿಕಾರಿದ್ದಾರೆ.

    ಜಿಲ್ಲೆಯ ಹಲಕುಂದಿಯಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ಸಿನಿಮಾ ನಟರು ಪದರೆಗೆ ಮಾತ್ರ ಸೀಮಿತ. ಸುದೀಪ್ ರೀಲ್ ಸ್ಟಾರ್, ನಾವೆಲ್ಲಾ ರಿಯಲ್ ಸ್ಟಾರ್. ರೀಲ್ ಸ್ಟಾರ್ ನೋಡಿ ಜನ ಮತ ಹಾಕಲ್ಲ. ಜನರ ಮಧ್ಯೆ ಇರುವ ನಾವೂ ನಿಜವಾಗಿ ರಿಯಲ್ ಸ್ಟಾರ್ ಎಂದು ಹೇಳಿದರು.

    ಸಿನಿಮಾ ನಟರು ಬಂದ ಕೂಡಲೇ ಜನ ಮತ ಹಾಕಲ್ಲ. ಮತದಾರರು ತುಂಬಾ ಪ್ರಬುದ್ಧರಿದ್ದಾರೆ. ಸುದೀಪ್ ಅವರಿಗೆ ಜಾತಿ ಮೇಲೆ ಅಭಿಮಾನ ಇದ್ದರೇ ಅವರು ನನ್ನ ಪರವಾಗಿಯೂ ಪ್ರಚಾರ ಮಾಡಬೇಕಿತ್ತು. ಆದರೆ ಸುದೀಪ್ ಸಿಎಂ ಸಿದ್ದರಾಮಯ್ಯ ಪರವಾಗಿ ಪ್ರಚಾರ ಮಾಡದೇ ರಾಮುಲು ಪರವಾಗಿ ಪ್ರಚಾರ ಮಾಡಿದ್ದು ಸರಿಯಲ್ಲ. ಸಿದ್ದರಾಮಯ್ಯ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಸಿಎಂ ಪರ ಪ್ರಚಾರ ಮಾಡಬೇಕಿತ್ತು ಎಂದು ಹೇಳಿ ನಾಗೇಂದ್ರ ಕಿಡಿಕಾರಿದರು.

    ಬಳ್ಳಾರಿಯ ಶ್ರೀರಾಮುಲು ಹಾಗೂ ಸೋಮಶೇಖರ್ ಪರ ನಟ ಸುದೀಪ್ ಸೋಮವಾರ ಪ್ರಚಾರ ನಡೆಸಿ ರೋಡ್ ಶೋ ನಡೆಸಿದ್ದರು. ಹಲವು ಜನರು ಸುದೀಪ್ ರನ್ನು ನೋಡಲು ಬಿಸಿಲನ್ನು ಲೆಕ್ಕಿಸದೆ ಕಾದು ನಿಂತಿದ್ದರು.