Tag: ಶಾಸಕ ಪರಣ್ಣ ಮುನವಳ್ಳಿ

  • ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೆ ಕೊರೊನಾ ಸೋಂಕು

    ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೆ ಕೊರೊನಾ ಸೋಂಕು

    ಕೊಪ್ಪಳ: ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕ ಪರಣ್ಣ ಮುನವಳ್ಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

    ಈ ಕುರಿತು ಪಬ್ಲಿಕ್ ಟಿವಿಗೆ ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಮಾಹಿತಿ ನೀಡಿದ್ದಾರೆ. ಶಾಸಕರಲ್ಲಿ ಕೊರೊನಾ ಪತ್ತೆಯಾಗಿರುವುದು ಅವರ ಬೆಂಬಲಿಗರು ಹಾಗೂ ಸ್ನೇಹಿತರಲ್ಲಿ ಭಯವನ್ನುಂಟು ಮಾಡಿದೆ. ಶಾಸಕರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮುಂದಾಗಿದ್ದು, ಈಗಾಗಲೇ ಪ್ರಯಾಣ ಬೆಳೆಸಿದ್ದಾರೆ.

    ಶಾಸಕ ಪರಣ್ಣ ಮುನವಳ್ಳಿ ಜುಲೈ 16ರಂದು ಜಿಲ್ಲಾಧಿಕಾರಿಗಳ ಕೋವಿಡ್-19 ನಿಯಂತ್ರಣ ಸಭೆಯಲ್ಲಿ ಸಹ ಭಾಗಿಯಾಗಿದ್ದರು. ಈ ಸಭೆಯಲ್ಲಿ ಕೊಪ್ಪಳ, ಕುಷ್ಟಗಿ, ಕನಕಗಿರಿ ಹಾಗೂ ಗಂಗಾವತಿ ಶಾಸಕರು, ಸಂಸದ ಸಂಗಣ್ಣ ಕರಡಿ ಹಾಗೂ ಜಿಲ್ಲಾಧಿಕಾರಿ ಸೇರಿ ವಿವಿಧ ಅಧಿಕಾರಿಗಳು ಭಾಗಿಯಾಗಿದ್ದರು. ಹೀಗಾಗಿ ಉಳಿದ ಶಾಸಕರು, ಸಂಸದರು ಹಾಗೂ ಅಧಿಕಾರಿಗಳಿಗೂ ಕೊರೊನಾ ಭೀತಿ ಎದರಾಗಿದೆ.

  • ವಿಜಯ್ ಪ್ರಕಾಶ್ ಸನ್ಮಾನ ಮಾಡೋ ವಿಚಾರಕ್ಕೆ ಸಣ್ಣಪುಟ್ಟ ತಪ್ಪಾಗಿದೆ: ಶಾಸಕ ಮುನವಳ್ಳಿ

    ವಿಜಯ್ ಪ್ರಕಾಶ್ ಸನ್ಮಾನ ಮಾಡೋ ವಿಚಾರಕ್ಕೆ ಸಣ್ಣಪುಟ್ಟ ತಪ್ಪಾಗಿದೆ: ಶಾಸಕ ಮುನವಳ್ಳಿ

    ಕೊಪ್ಪಳ: ವಿಜಯ್ ಪ್ರಕಾಶ್ ಅವರಿಗೆ ಸನ್ಮಾನ ಮಾಡುವ ವಿಚಾರಕ್ಕೆ ಡಿಸಿ ಜೊತೆಗಿನ ಮುನಿಸಿಗೆ ಶಾಸಕ ಪರಣ್ಣ ಮುನವಳ್ಳಿ ತೆರೆ ಎಳೆದಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಪರಣ್ಣ ಮುನವಳ್ಳಿ, ಜಿಲ್ಲಾಧಿಕಾರಿಗಳು ಆಕಸ್ಮಿಕವಾಗಿ ಅವಸರದಲ್ಲಿ ಗಾಯಕ ವಿಜಯ ಪ್ರಕಾಶ್ ಅವರಿಗೆ ಸನ್ಮಾನ ಮಾಡಿದ್ದಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಅವಸರದಲ್ಲಿ ವಿಜಯ್ ಅವರಿಗೆ ಸನ್ಮಾನ ಮಾಡಿದ್ದಾಗಿ ಡಿಸಿ ಹೇಳಿಕೊಂಡಿದ್ದಾರೆ. ನಮ್ಮನ್ನು ಕಡೆಗಣಿಸಿ ಡಿಸಿ ಸನ್ಮಾನ ಮಾಡಿದ್ದಕ್ಕೆ ನಮ್ಮ ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ್ದು ನಿಜ. ಯಾವುದೇ ಕಾರ್ಯಕ್ರಮದಲ್ಲಾಗಲಿ ಮೊದಲು ಜನಪ್ರತಿನಿಧಿಗಳು, ನಂತರ ಅಧಿಕಾರಿಗಳು ಇರುತ್ತಾರೆ. ಮೊದಲು ಜನಪ್ರತಿನಿಧಿಗಳಿಗೆ ಪ್ರಾತಿನಿಧ್ಯ ನೀಡಬೇಕು ಎಂದರು. ಇದನ್ನೂ ಓದಿ: ಆನೆಗೊಂದಿ ಉತ್ಸವದಲ್ಲಿ ಗಾಯಕ ವಿಜಯ್ ಪ್ರಕಾಶ್‍ಗೆ ಅವಮಾನ 

    ಇದು ಡಿಸಿ ವರ್ಸಸ್ ಪರಣ್ಣ ಮುನವಳ್ಳಿ ಉತ್ಸವ ಅಲ್ಲ, ಇದು ಪ್ರತಿಯೊಬ್ಬರ ಉತ್ಸವ. ದೊಡ್ಡ ದೊಡ್ಡ ಕಾರ್ಯಕ್ರಮಗಳಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಬರುವುದು ಸಹಜ. ಹೀಗಾಗಿ ಇದನ್ನು ನಾವು ಸರಿಪಡಿಸಿಕೊಂಡು ಹೋಗಬೇಕು ಎಂದು ಹೇಳಿದರು.

    ಗುರುವಾರ ರಾತ್ರಿ ಆನೆಗೊಂದಿ ಉತ್ಸವದಲ್ಲಿ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರಿಗೆ ಸನ್ಮಾನ ಮಾಡುವ ವಿಚಾರದಲ್ಲಿ ಶಾಸಕ ಪರಣ್ಣ ಮುನವಳ್ಳಿ ಜಿಲ್ಲಾಧಿಕಾರಿ ಸುನೀಲ್ ಕುಮಾರ್ ನಡುವೆ ಮನಸ್ತಾಪ ಉಂಟಾಗಿತ್ತು. ಗಾಯಕ ವಿಜಯ್ ಪ್ರಕಾಶ್ ಅವರಿಗೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಒಬ್ಬರೇ ಸನ್ಮಾನ ಮಾಡಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಪರಣ್ಣ ಮುನವಳ್ಳಿ ಅವರನ್ನು ಸ್ವತಃ ವಿಜಯ್ ಪ್ರಕಾಶ್ ವೇದಿಕೆಯಿಂದ ಕೆಳಗೆ ಬಂದು ಸಮಾಧಾನ ಮಾಡಿ ವೇದಿಕೆಗೆ ಕರೆದುಕೊಂಡು ಹೋಗಿದ್ದರು. ಬಳಿಕ ಪರಣ್ಣ ಮುನವಳ್ಳಿ ವಿಜಯ್ ಅವರನ್ನು ಸನ್ಮಾನ ಮಾಡಿದ್ದರು. ಇದರಿಂದಾಗಿ ಶಾಸಕ ಪರಣ್ಣ ಮುನವಳ್ಳಿ ಹಾಗೂ ಜಿಲ್ಲಾಧಿಕಾರಿ ಪಿ ಸುನೀಲ ಕುಮಾರ್ ನಡುವೆ ಮನಸ್ತಾಪ ಉಂಟಾಗಿತ್ತು.

  • ಬೆಳ್ಳಂಬೆಳಗ್ಗೆ ಗಂಗಾವತಿಯಿಂದ ಆನೆಗೊಂದಿಗೆ ಓಡಿದ ಯುವಕ-ಯುವತಿಯರು

    ಬೆಳ್ಳಂಬೆಳಗ್ಗೆ ಗಂಗಾವತಿಯಿಂದ ಆನೆಗೊಂದಿಗೆ ಓಡಿದ ಯುವಕ-ಯುವತಿಯರು

    ಕೊಪ್ಪಳ: ಮೈ ಕೊರೆಯುವ ಚಳಿ, ಗುರಿ ಮುಟ್ಟಬೇಕೆಂಬ ಛಲ ಹೀಗಾಗಿ ಬೆಳ್ಳಂಬೆಳಗ್ಗೆ ನೂರಾರು ಯುವಕರು, ಯುವತಿಯರು ಶಾಲಾ-ಕಾಲೇಜು ವಿದ್ಯಾರ್ಥಿಗಳು ಲಗುಬಗೆಯಿಂದ ಓಡಿದರು.

    ಕೊಪ್ಪಳದ ಗಂಗಾವತಿ ತಾಲೂಕಿನ ಆನೆಗೊಂದಿ ಉತ್ಸವದ ಭಾಗವಾಗಿ ನಗರದ ಕೇಂದ್ರ ಬಸ್ ನಿಲ್ದಾಣದಿಂದ ಆನೆಗೊಂದಿವರೆಗೆ 12 ಕಿ.ಮೀ ಪುರುಷರ ಮ್ಯಾರಾಥಾನ್ ಹಾಗೂ ಗಂಗಾವತಿಯಿಂದ ಸಂಗಾಪುರದವರೆಗೆ 5 ಕಿ.ಮೀ ಮಹಿಳಾ ಮ್ಯಾರಾಥಾನ್ ಹಮ್ಮಿಕೊಳ್ಳಲಾಗಿತ್ತು.

    ಸ್ಪರ್ಧಾಳುಗಳು ಉತ್ಸಾಹದಿಂದಲೇ ಈ ಮ್ಯಾರಾಥಾನ್‍ನಲ್ಲಿ ಪಾಲ್ಗೊಂಡಿದ್ದರು. ಶಾಸಕ ಪರಣ್ಣ ಮುನವಳ್ಳಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ವಿಶ್ವನಾಥ ರೆಡ್ಡಿ ಮ್ಯಾರಾಥಾನ್ ಓಟಕ್ಕೆ ಚಾಲನೆ ನೀಡಿದರು. 200ಕ್ಕೂ ಹೆಚ್ಚು ಪುರುಷ 100ಕ್ಕೂ ಹೆಚ್ಚು ಮಹಿಳಾ ಸ್ಪರ್ಧಿಗಳು ಪಾಲ್ಗೊಂಡಿದ್ದರು. ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

  • ಬ್ಯಾನರ್‌ನಲ್ಲಿ ಫೋಟೋ ಮಿಸ್ – ಅಧಿಕಾರಿಗಳ ವಿರುದ್ಧ ಶಾಸಕ ಮುನವಳ್ಳಿ ಗರಂ

    ಬ್ಯಾನರ್‌ನಲ್ಲಿ ಫೋಟೋ ಮಿಸ್ – ಅಧಿಕಾರಿಗಳ ವಿರುದ್ಧ ಶಾಸಕ ಮುನವಳ್ಳಿ ಗರಂ

    – ಮನವೊಲಿಕೆಗೆ ಬಂದ ವೈದ್ಯಾಧಿಕಾರಿಗೆ ಶಾಸಕರಿಂದ ಕ್ಲಾಸ್

    ಕೊಪ್ಪಳ: ಗಂಗಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದ ಬ್ಯಾನರ್‌ನಲ್ಲಿ ತಮ್ಮ ಫೋಟೋ ಇಲ್ಲವೆಂದು ಶಾಸಕ ಪರಣ್ಣ ಮುನವಳ್ಳಿ ಅವರು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

    ಗಂಗಾವತಿಯಲ್ಲಿ 30 ಹಾಸಿಗೆಯ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ಹಾಗೂ ಪಲ್ಸ್ ಪೋಲಿಯೋ ಲಸಿಕೆಗೆ ಚಾಲನೆ ನೀಡುವ ಕಾರ್ಯಕ್ರಮ ಇಂದು ನಡೆದಿತ್ತು. ಆದರೆ ವೇದಿಕೆಯ ಮೇಲಿದ್ದ ಬ್ಯಾನರ್ ನಲ್ಲಿ ಶಾಸಕ ಪರಣ್ಣ ಮುನವಳ್ಳಿ, ಕೊಪ್ಪಳ ಸಂಸದರಾದ ಕೆ.ಎಸ್.ಅಮರಪ್ಪ ಅವರ ಹೆಸರು ಹಾಗೂ ಫೋಟೋವನ್ನೇ ಹಾಕಿರಲಿಲ್ಲ. ಇದರಿಂದಾಗಿ ಶಾಸಕರು ವೇದಿಕೆ ಬಿಟ್ಟು ಕೆಳಗಿಳಿದು ನೇರವಾಗಿಯೇ ಅಸಮಾಧಾನವನ್ನು ಹೊರ ಹಾಕಿದರು.

    ಇದು ಕೇಂದ್ರ ಸರ್ಕಾರದ ಯೋಜನೆಯ ಕಾರ್ಯಕ್ರಮ. ಆದರೆ ವೇದಿಕೆಯ ಮೇಲಿರುವ ಬ್ಯಾನರ್ ನಲ್ಲಿ ಬಿಜೆಪಿ ಸಂಸದ ಕೆ.ಎಸ್.ಅಮರಪ್ಪ ಹಾಗೂ ನನ್ನ ಹೆಸರು, ಫೋಟೋವನ್ನೇ ಹಾಕಲಿಲ್ಲ. ಕೇವಲ ಸಿಎಂ ಕುಮಾರಸ್ವಾಮಿ, ಡಿಸಿಎಂ ಜಿ.ಪರಮೇಶ್ವರ್ ಹಾಗೂ ಆರೋಗ್ಯ ಸಚಿವ ಶಿವಾನಂದ್ ಪಾಟೀಲ್ ಅವರ ಹೆಸರು, ಫೋಟೋ ಹಾಕಿದ್ದೀರಿ ಎಂದು ಶಾಸಕ ಪರಣ್ಣ ಮುನವಳ್ಳಿ ಕಿಡಿಕಾರಿದರು.

    ಇದು ರಾಜ್ಯ ಸರ್ಕಾರದ ಕಾರ್ಯಕ್ರಮವೋ? ಅಥವಾ ಕೇಂದ್ರ ಸರ್ಕಾರದ ಕಾರ್ಯಕ್ರಮವೋ? ರಾಜ್ಯ ಸರ್ಕಾರದ ಕಾರ್ಯಕ್ರಮವಾಗಿದ್ದರೆ ಸಿಎಂ ಕುಮಾರಸ್ವಾಮಿ ಅವರೇ ಬಂದು ಉದ್ಘಾಟನೆ ಮಾಡಲಿ. ಬಿಜೆಪಿಯವರು ಯಾಕೆ ಬೇಕು. ಹೆಸರಿಗೆ ಎಂಬಂತೆ ನಮ್ಮನ್ನು ಆಮಂತ್ರಿಸಿ ಅವಮಾನ ಮಾಡಲಾಗಿದೆ ಎಂದು ಶಾಸಕರು ವೈದ್ಯಾಧಿಕಾರಿಗಳ ವಿರುದ್ಧ ಅಸಮಾಧಾನವನ್ನು ಹೊರ ಹಾಕಿದರು.

    ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಿದ್ದ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಅವರು ಶಾಸಕರ ಮನವೊಲಿಸುವಲ್ಲಿ ಯಶಸ್ವಿಯಾದರು. ತಕ್ಷಣವೇ ಎಚ್ಚೆತ್ತುಕೊಂಡ ಆಸ್ಪತ್ರೆಯ ಸಿಬ್ಬಂದಿ ವೇದಿಕೆಯ ಮೇಲಿದ್ದ ಬ್ಯಾನರ್ ತೆರವುಗೊಳಿಸಿ ಶಾಸಕರು ಹಾಗೂ ಸಂಸದರ ಫೋಟೋ ಇರುವ ಬ್ಯಾನರ್ ಹಾಕಿದರು. ಅಷ್ಟೇ ಅಲ್ಲದೆ ಆಸ್ಪತ್ರೆಯ ಮುಂಭಾಗದಲ್ಲಿ ದೊಡ್ಡ ಬ್ಯಾನರ್ ಹಾಕಿ ಶಾಸಕ ಪರಣ್ಣ ಮುನವಳ್ಳಿ ಅವರ ಮನವೊಲಿಸಿದರು.

    ಸಚಿವ ಶಿವಾನಂದ ಪಾಟೀಲ್ ಭಾಷಣದ ವೇಳೆ ವೇದಿಕೆಯತ್ತ ನುಗ್ಗಿದ ಬಿಜೆಪಿ ಕಾರ್ಯಕರ್ತ ಸೋಮನಾಥ, ಸ್ಥಳೀಯ ಶಾಸಕರು ಹಾಗೂ ಸಂಸದರಿಗೆ ಅವಮಾನ ಮಾಡಲಾಗಿದೆ ಎನ್ನುತ್ತ, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಸ್ಥಳದಲ್ಲಿದ್ದ ಪೊಲೀಸರು ಸೋಮನಾಥ ಅವರನ್ನು ವಶಕ್ಕೆ ಪಡೆದು, ಪರಿಸ್ಥಿತಿ ತಿಳಿಗೊಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv