Tag: ಶಾಸಕ ರಾಜೇಗೌಡ

  • ಧರ್ಮ ಒಡೆದು, ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದೀರಾ, ಮುಂದೆಯೂ ಅದೇ ಮಾಡಬೇಡಿ: ಶೃಂಗೇರಿ ಶಾಸಕ ರಾಜೇಗೌಡ

    ಧರ್ಮ ಒಡೆದು, ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದೀರಾ, ಮುಂದೆಯೂ ಅದೇ ಮಾಡಬೇಡಿ: ಶೃಂಗೇರಿ ಶಾಸಕ ರಾಜೇಗೌಡ

    – ಪ್ರತಿ ಬಾರಿಯೂ ಪರಕೀಯರೇ ನಮ್ಮ ಉಸ್ತುವಾರಿಯಾಗುತ್ತಾರೆ, ನಮ್ಮ ಹಣೆಬರಹ

    ಚಿಕ್ಕಮಗಳೂರು: ದತ್ತಪೀಠದ ವಿಷಯ ಇಟ್ಟುಕೊಂಡು ಧರ್ಮವನ್ನ ಒಡೆದು, ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದೀರಾ, ಮುಂದಕ್ಕೂ ಅದೇ ತಪ್ಪು ಮಾಡಬೇಡಿ ಎಂದು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಬಿಜೆಪಿ ಮುಖ್ಯಮಂತ್ರಿ ಬೊಮ್ಮಾಯಿಗೆ ಸಲಹೆ ನೀಡಿದ್ದಾರೆ.

    ಮಂತ್ರಿಮಂಡಲ ರಚನೆಯಾಗುತ್ತಿದ್ದಂತೆ ಸ್ವಯಂ ವಿಡಿಯೋ ಮಾಡಿರೋ ಶಾಸಕ ರಾಜೇಗೌಡ ಸಿಎಂ ಸಲಹೆ ನೀಡಿ, ಮನವಿ ಮಾಡಿ ಬಿಜೆಪಿ ವಿರುದ್ಧ ಅಸಮಾಧಾನವನ್ನೂ ಹೊರಹಾಕಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಅತಿ ಹೆಚ್ಚು ರೆವಿನ್ಯೂ ಕೊಡುವ ಜಿಲ್ಲೆ. ಜಿಲ್ಲೆಗೆ ಮಂತ್ರಿ ಸ್ಥಾನ ನೀಡಲು ವಿಳಂಬವಾಗುತ್ತಿದೆ. ಮೂರು ಬಾರಿ ಗೆದ್ದ ಕುಮಾರಸ್ವಾಮಿ, ಸಿ.ಟಿ.ರವಿ, ಬಯಲುಸೀಮೆ ಭಾಗದ ಇಬ್ಬರು ಶಾಸಕರಿದ್ದರು. ಯಾರಿಗೂ ನೀಡದೆ ಇರುವುದನ್ನ ಗಮನಿಸಿದರೆ, ಜಿಲ್ಲೆಯನ್ನ ಕಡೆಗಣಿಸಿದ್ದಾರೆ ಎಂಬುದು ನಮ್ಮ ಭಾವನೆ ಎಂದಿದ್ದಾರೆ.

    ಜಿಲ್ಲೆಗೆ ಪ್ರತಿ ಬಾರಿಯೂ ಪರಕೀಯರೆ ಉಸ್ತುವಾರಿ ಸಚಿವರಾಗುತ್ತಾರೆ, ನಮ್ಮ ಹಣೆಬರಹ ಮಲೆನಾಡ ಜಿಲ್ಲೆಗೂ ಪ್ರಾತಿನಿದ್ಯ ಕೊಡಬೇಕಿತ್ತು. ನಮ್ಮನ್ನ ಎಲ್ಲದಕ್ಕೂ ಬಳಸಿಕೊಳ್ಳುತ್ತಾರೆ. ಅದಕ್ಕೆ ತಕ್ಕ ಫಲ ನೀಡುವುದಿಲ್ಲ ಎಂದಿದ್ದಾರೆ. ಯಡಿಯೂರಪ್ಪನವರು ಪಕ್ಷಪಾತ ಮಾಡಿದ್ದರು. ನೀವು ಅದನ್ನ ಮಾಡಬೇಡಿ. ಎಲ್ಲಾ ಶಾಸಕರು ಒಂದೇ ಎಂದಿದ್ದಾರೆ. ಯಾರಿಗೂ ತಾರತಮ್ಯ ಮಾಡದಂತೆ ಎಲ್ಲರನ್ನೂ ಒಂದೇ ರೀತಿ ನೋಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: 3ನೇ ಬಾರಿಯೂ ಕೈತಪ್ಪಿದ ಸಚಿವ ಸ್ಥಾನ – ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದ ಕುಮಾರಸ್ವಾಮಿ

    ಬಿಜೆಪಿ ಶಾಸಕರಿಗೆ ಹೆಚ್ಚು ಒತ್ತು ನೀಡಬೇಕೆಂದರೆ ನಿಮ್ಮ ವಿವೇಚನಾ ನಿಧಿಯಲ್ಲಿ ಏನೂ ಬೇಕಾದರಿ ಮಾಡಿ, ನಾವು ಪ್ರಶ್ನೆ ಮಾಡುವುದಿಲ್ಲ. ಆದರೆ, ಬೇರೆ ಯೋಜನೆಯಲ್ಲಿ ಎಲ್ಲರನ್ನೂ ಒಂದೇ ರೀತಿ ಕಾಣಿ, ಆಗ ನಿಮಗೂ ಒಳ್ಳೆ ಹೆಸರು ಬರಲಿದೆ ಎಂದಿದ್ದಾರೆ. ಬಿಜೆಪಿ ಸರ್ಕಾರ ರಚನೆ ಮಾಡುವ ಸಂದರ್ಭದಲ್ಲಿ ಯಾವಾಗಲೂ ವಿಳಂಬ ಮಾಡುತ್ತಾರೆ. ಜನ ಅತಿವೃಷ್ಟಿ ಮತ್ತು ಕೊರೊನಾದಿಂದ ಸಂಕಷ್ಟಕ್ಕೀಡಾಗಿದ್ದಾರೆ. ತಡವಾಗಿಯಾದರೂ ಮಂತ್ರಿಗಳ ಆಯ್ಕೆ ಮಾಡಿ ಪ್ರಮಾಣ ವಚನ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸಂತೋಷದ ವಿಚಾರ. ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಭಾಗದಲ್ಲಿ ಅತಿವೃಷ್ಟಿಯಿಂದ ತುಂಬಾ ಹಾನಿಯಾಗಿದೆ. ಸೇತುವೆಗಳು, ರಸ್ತೆಗಳು ಕೊಚ್ಚಿ ಹೋಗಿವೆ. ಹೊಲಗದ್ದೆಗಳಲ್ಲಿ ಮರಳು ಮಣ್ಣು ಮುಚ್ಚಿ ನೂರಾರು ಎಕರೆ ಗದ್ದೆ ನಾಶವಾಗಿದೆ. ಇದರ ಬಗ್ಗೆ ಕೂಡಲೇ ಗಮನ ಹರಿಸಿ ಹಣ ಬಿಡುಗಡೆ ಮಾಡಿ ತುರ್ತು ಕ್ರಮ ವಹಿಸಬೇಕೆಂದು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.

  • ಜಾಲತಾಣದಲ್ಲಿ ಪೋಸ್ಟ್ ಮಾಡಿದವರು, ಗಲಭೆಕೋರರು, ಇಬ್ಬರ ಮೇಲೂ ಕ್ರಮ ಕೈಗೊಳ್ಳಿ: ಕಾಂಗ್ರೆಸ್ ಶಾಸಕ ರಾಜೇಗೌಡ

    ಜಾಲತಾಣದಲ್ಲಿ ಪೋಸ್ಟ್ ಮಾಡಿದವರು, ಗಲಭೆಕೋರರು, ಇಬ್ಬರ ಮೇಲೂ ಕ್ರಮ ಕೈಗೊಳ್ಳಿ: ಕಾಂಗ್ರೆಸ್ ಶಾಸಕ ರಾಜೇಗೌಡ

    ಚಿಕ್ಕಮಗಳೂರು: ಗಲಭೆಯನ್ನು ಸಹಿಸುವುದಿಲ್ಲ ಬೆಂಗಳೂರು ಗಲಭೆಗೆ ಯಾರೇ ಕಾರಣಕರ್ತರಾದರೂ ಸೂಕ್ತ ಕ್ರಮಕೈಗೊಳ್ಳಬೇಕು. ಸರ್ಕಾರಕ್ಕೆ ನಮ್ಮ ಬೆಂಬಲವಿದೆ ಎಂದು ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಆಗ್ರಹಿಸಿದ್ದಾರೆ.

    ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಈ ಘಟನೆಯನ್ನು ಅತ್ಯಂತ ಕಠಿಣ ಹಾಗೂ ತೀವ್ರ ಪದಗಳಿಂದ ಖಂಡಿಸುತ್ತೇನೆ. ಯಾವುದೇ ಜಾತಿ-ಧರ್ಮ ಇರುಬಹುದು. ಯಾವುದೇ ಧಾರ್ಮಿಕ ನಂಬಿಕೆ ಹಾಗೂ ಗುರುಗಳ ಮೇಲೆ ಹಗುರುವಾದ ಹೇಳಿಕೆಗಳನ್ನ ಕೊಡುವುದನ್ನ ಮೊದಲು ಎಲ್ಲ ಸಮುದಾಯದವರು ನಿಲ್ಲಿಸಬೇಕು. ಆಗ ಮಾತ್ರ ಈ ರೀತಿಯ ಭಾವನಾತ್ಮಕ ಘಟನೆಗಳು ನಡೆಯುವುದಿಲ್ಲ ಎಂದರು.

    ಈ ಘಟನೆ ತಪ್ಪು. ನ್ಯಾಯ ಕೇಳಲು ಕೋರ್ಟ್, ಕಾನೂನು, ಪೊಲೀಸ್ ವ್ಯವಸ್ಥೆ ಇದೆ. ದೂರು ನೀಡಿ ನ್ಯಾಯ ಕೇಳಬೇಕು. ಈ ರೀತಿ ದೌರ್ಜನ್ಯ, ಗಲಭೆ ಒಳ್ಳೆಯದಲ್ಲ ಇದನ್ನ ಯಾರೂ ಸಹಿಸಲ್ಲ. ಇದನ್ನು ಯಾರೂ ಒಪ್ಪುವುದಿಲ್ಲ. ಯಾರೋ ಶಾಸಕರ ಸಂಬಂಧಿ ಏನೋ ಹೇಳಿಕೆ ಕೊಟ್ಟನೆಂದು ದಾಂದಲೆ ತರವಲ್ಲ ಎಂದು ಗಲಭೆಕೋರರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

    ಘಟನೆ ಕುರಿತು ಸರ್ಕಾರ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಬೇಕು. ಅದೇ ರೀತಿ ಹೇಳಿಕೆ ಕೊಟ್ಟವನ ಮೇಲೂ ಕ್ರಮವಾಗಬೇಕು ಎಂದಿದ್ದಾರೆ. ಇಂತಹ ಘಟನೆಯಲ್ಲಿ ಅಮಾಯಕರಿಗೆ ಹೊಡೆತ ಬೀಳುತ್ತೆ. ಆದ್ದರಿಂದ ಗಲಭೆಗೆ ಕಾರಣಕರ್ತರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

  • ಐಟಿ ದಾಳಿಯಿಂದ ಸಿದ್ಧಾರ್ಥ್ ಕುಗ್ಗಿ ಹೋಗಿದ್ರು: ರಾಜೇಗೌಡ ಕಣ್ಣೀರು

    ಐಟಿ ದಾಳಿಯಿಂದ ಸಿದ್ಧಾರ್ಥ್ ಕುಗ್ಗಿ ಹೋಗಿದ್ರು: ರಾಜೇಗೌಡ ಕಣ್ಣೀರು

    ಮಂಗಳೂರು: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ.

    ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು ಹಾಕಿದರು.

    ದೇಶಕ್ಕಾಗಿ ದುಡಿದು, ತೆರಿಗೆ ಕಟ್ಟಿದರೂ ಬೆಲೆ ಇಲ್ಲ ಎಂಬುದು ಅವರ ಮನಸ್ಸಿಗೆ ಬಂದಿತ್ತು. ಸಿದ್ಧಾರ್ಥ್ ಶಿಸ್ತು ಸಂಯಮದ ವ್ಯಕ್ತಿ. ಬಹಳ ತಾಳ್ಮೆಯಿಂದ ವರ್ತಿಸುತ್ತಿದ್ದರು. ಗ್ರಾಮೀಣ ಮತ್ತು ಗುಡ್ಡಗಾಡು ಜನಕ್ಕೆ ಉದ್ಯೋಗ ಕೊಟ್ಟ ಮಹಾನೀಯ. ಐಟಿ ದಾಳಿಯ ನಂತರ ಸಿದ್ಧಾರ್ಥ ಕುಗ್ಗಿದ್ದರು. ಮನಸ್ಸಿಗೆ ಬಹಳ ನೋವು ಮಾಡಿಕೊಂಡಿದ್ದರು. ಸಿದ್ಧಾರ್ಥ್ ಅವರು ನಾಪತ್ತೆಯಾದ ಸುದ್ದಿ ಆಘಾತ ತಂದಿದೆ ಎಂದು ಶಾಸಕರು ತಿಳಿಸಿದರು.

    ಸಿದ್ಧಾರ್ಥ್ ಅವರು ಸೋಮವಾರ ಸಂಜೆ 7 ಗಂಟೆ ಸುಮಾರಿನಿಂದ ಮಂಗಳೂರಿನ ನೇತ್ರಾವತಿ ಸೇತುವೆ ಬಳಿಯಿಂದ ನಾಪತ್ತೆಯಾಗಿದ್ದು, ಇದೀಗ ಅವರ ಹುಡುಕಾಟ ಕಾರ್ಯ ಭರದಿಂದ ಸಾಗುತ್ತಿದೆ. ಸ್ಥಳಕ್ಕೆ ರಾಜಕೀಯ ನಾಯಕರು, ಸಾರ್ವಜನಿಕರು, ಮುಳುಗುತ್ಞರು ಹಾಗೂ ಅಗ್ನಿಶಾಮಕ ದಳದವರು ದೌಡಾಯಿಸಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಸಿದ್ಧಾರ್ಥ್ ಪತ್ತೆಗಾಗಿ ಸೇನಾ ಹೆಲಿಕಾಪ್ಟರ್ ಕೂಡ ಬರುವ ಸಾಧ್ಯತೆಗಳಿವೆ.