Tag: ಶಾಸಕ ರೇಣುಕಾಚಾರ್ಯ

  • ರಾಜ್ಯದಲ್ಲೂ ಗುಜರಾತ್ ಮಾದರಿ ಸಂಪುಟ ರಚನೆಯಾದರೆ ಒಳ್ಳೆಯದು: ವಿಜಯೇಂದ್ರ

    ರಾಜ್ಯದಲ್ಲೂ ಗುಜರಾತ್ ಮಾದರಿ ಸಂಪುಟ ರಚನೆಯಾದರೆ ಒಳ್ಳೆಯದು: ವಿಜಯೇಂದ್ರ

    ದಾವಣಗೆರೆ: ರಾಜ್ಯದಲ್ಲೂ ಗುಜರಾತ್ ಮಾದರಿ ಸಂಪುಟ ರಚನೆಯಾದರೆ ಒಳ್ಳೆಯದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲೂ ಗುಜರಾತ್ ಮಾದರಿ ಸಂಪುಟ ರಚನೆಯಾದರೆ ಒಳ್ಳೆಯದು. ಆ ನಿಟ್ಟಿನಲ್ಲಿ ರೇಣುಕಾಚಾರ್ಯ ಅವರು ತಮ್ಮ ಅನಿಸಿಕೆಯನ್ನು ತಿಳಿಸಿದ್ದಾರೆ. ಅವರ ಹೇಳಿಕೆಯಲ್ಲಿ ದುರುದ್ದೇಶವಿಲ್ಲ ಎಂದು ಶಾಸಕ ರೇಣುಕಾಚಾರ್ಯ ಹೇಳಿಕೆಗೆ ಸಾಥ್ ನೀಡಿದರು.

    ಕೋರ್ ಕಮಿಟಿಯಲ್ಲಿ ಪಕ್ಷ ಸಂಘಟನೆಯ ಬಗ್ಗೆ ಚರ್ಚೆಯಾಗಿದೆ. ಹಾನಗಲ್ ಸಿಂದಗಿ ಉಪಚುನಾವಣೆ ಬಗ್ಗೆ ಚರ್ಚೆ ಮಾಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕೆಲಸಗಳ ಬಗ್ಗೆ ರಾಜ್ಯ ಜನರಿಗೆ ತಿಳಿಸಬೇಕು. ಮಾಜಿ ಸಿಎಂ ಯಡಿಯೂರಪ್ಪ ಪಕ್ಷವನ್ನು ಕಟ್ಟಲು ಸಾಕಷ್ಟು ಶ್ರಮ ಪಟ್ಟಿದ್ದಾರೆ. ಸ್ಪಷ್ಟ ಬಹುಮತದಿಂದ ಪಕ್ಷ ಅಧಿಕಾರಕ್ಕೆ ತರಲು ಪ್ರವಾಸ ಮಾಡಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಸಾಮೂಹಿಕ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಾಧ್ಯತೆ

    ದೇವಾಲಯಗಳನ್ನು ಒಡೆಯುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ದೇವಾಲಯಗಳ ಹೆಸರಿನಲ್ಲಿ ಕಾಂಗ್ರೆಸ್ ಮೊಸಳೆ ಕಣ್ಣೀರು ಹಾಕುತ್ತಿದೆ. ಅಧಿಕಾರಿಗಳು ಆತುರದ ನಿರ್ಧಾರ ತೆಗೆದುಕೊಂಡಿದ್ದಾರೆ. ಎಲ್ಲಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತೆರವು ಮಾಡಬೇಕಿತ್ತು. ಆದರೆ ಅದು ನಡೆಯದೆ ತಪ್ಪಾಗಿದೆ. ಈಗ ಕಾಂಗ್ರೆಸ್ ಗೆ ಇದ್ದಕ್ಕಿದ್ದಂತೆ ಹಿಂದೂಗಳ ಮೇಲೆ ಪ್ರೀತಿ ಬಂದಿದೆ ಎಂದು ಟೀಕಿಸಿದರು. ಇದನ್ನೂ ಓದಿ:  ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಭೇಟಿ ನೀಡಬಹುದು – ಜಿಲ್ಲಾಡಳಿತದಿಂದ ನಿರ್ಬಂಧ ತೆರವು

    ಮೋದಿ ಅವರ ಹುಟ್ಟುಹಬ್ಬವನ್ನು ದೇಶದ ಪ್ರತಿಯೊಬ್ಬರು ಸಂಭ್ರಮದಿಂದ ಆಚರಿಸಿದರು. ಆದರೆ ಕಾಂಗ್ರೆಸ್ ನಿರುದ್ಯೋಗ ದಿನಾಚರಣೆ ಎಂದು ಆಚರಣೆ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿ ಮಾತ್ರ ನಿರುದ್ಯೋಗಿಗಳು ಇದ್ದಾರೆ. ಮುಂದೆ ಬರುವ ಎಲ್ಲಾ ಚುನಾವಣೆಯಲ್ಲಿ ಹೇಳ ಹೆಸರಿಲ್ಲದೆ ಕಾಂಗ್ರೆಸ್ ಹೋಗುತ್ತೆ ಎಂದು ಶಪಿಸಿದರು.

  • ಸರ್ ನಿಮ್ಮೊಂದಿಗೆ ಫೋಟೋ ಬೇಕು- ಸೆಲ್ಫಿ ಕ್ಲಿಕ್ಕಿಸಿಕೊಂಡ ಬಾಲಕಿ

    ಸರ್ ನಿಮ್ಮೊಂದಿಗೆ ಫೋಟೋ ಬೇಕು- ಸೆಲ್ಫಿ ಕ್ಲಿಕ್ಕಿಸಿಕೊಂಡ ಬಾಲಕಿ

    – ಪುಸ್ತಕ ನೀಡಿ ಹಾರೈಸಿದ ರೇಣುಕಾಚಾರ್ಯ

    ದಾವಣಗೆರೆ: ಕೊರೊನಾ ಕಾಲದಲ್ಲಿ ಜನರಿಗೆ ಹೋಳಿಗೆ ಊಟ ಹಾಕಿಸಿ, ಜನಪರವಾಗಿ ಕೆಲಸಮಾಡಿದ್ದೀರಿ, ನನ್ನ ಬಳಿ ವೀಡಿಯೋ ಇದೆ. ನಿಮ್ಮ ಜನಸೇವೆ ಮರೆಯುವುದಿಲ್ಲ ಎಂದು ವೀಡಿಯೋ ತೋರಿಸಿ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯಗೆ ಬಾಲಕಿ ಮೆಚ್ಚುಗೆ ವ್ಯಕ್ತಪಡಿಸಿದ್ದಾಳೆ.

    ರೇಣುಕಾಚಾರ್ಯ ಅವರು ಹೊನ್ನಾಳಿ ಕ್ಷೇತ್ರ ಪ್ರವಾಸದಲ್ಲಿದ್ದರು. ಈ ವೇಳೆ ಶಾಸಕರ ಕಾರ್ಯಕ್ಕೆ ಹೊನ್ನಾಳಿ ತಾಲೂಕಿನ ತುಂಬಿಗೆರೆ ಗ್ರಾಮದ ವಿದ್ಯಾರ್ಥಿನಿ ಮೈತ್ರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಳಿಕ ಸರ್ ನಿಮ್ಮೊಂದಿಗೆ ಒಂದು ಫೋಟೋ ಬೇಕೆಂದು ಕೇಳಿ ಸೆಲ್ಫಿ ತೆಗೆದುಕೊಂಡಳು. ಇದನ್ನೂ ಓದಿ: ಅಂಬುಲೆನ್ಸ್‌ಗೂ ದಾರಿ ಬಿಡದ ಕಾಂಗ್ರೆಸ್ ಕಾರ್ಯಕರ್ತರು

    ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಶಾಸಕ ರೇಣುಕಾಚಾರ್ಯ ಮಾಡಿದ ಕಾರ್ಯಕ್ಕೆ ಮನಸೋತ ಬಾಲಕಿ, ಅವರ ಸೇವೆಯನ್ನು ಜನರ ಮುಂದೆ ಹಾಡಿ ಹೊಗಳಿದಳು. ಬಳಿಕ ಶಾಸಕ ರೇಣುಕಾಚಾರ್ಯ ಪುಟ್ಟ ಬಾಲಕಿಯ ಮಾತುಗಳನ್ನು ಆಲಿಸಿ, ಮನಸೋತು, ಪುಸ್ತಕ ನೀಡಿ ಚೆನ್ನಾಗಿ ಓದುವಂತೆ ತಿಳಿಸಿದರು.

  • ‘ಜಮೀರ್ ಅಹ್ಮದ್ ಒಬ್ಬ ಚಿಲ್ಲರೆ ಗಿರಾಕಿ’- ಏಕವಚನದಲ್ಲೇ ರೇಣುಕಾಚಾರ್ಯ ವಾಗ್ದಾಳಿ

    ‘ಜಮೀರ್ ಅಹ್ಮದ್ ಒಬ್ಬ ಚಿಲ್ಲರೆ ಗಿರಾಕಿ’- ಏಕವಚನದಲ್ಲೇ ರೇಣುಕಾಚಾರ್ಯ ವಾಗ್ದಾಳಿ

    ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಜಮೀರ್ ಅಹ್ಮದ್ ಹಾಗೂ ರೇಣುಕಾಚಾರ್ಯ ಅವರ ವಾಕ್ ಸಮರ ಹೆಚ್ಚು ಸದ್ದು ಮಾಡುತ್ತಿದೆ. ಇಬ್ಬರು ನಾಯಕರು ಪರಸ್ಪರ ಮಾತಿನ ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಇಬ್ಬರ ನಡುವಿನ ವಾಕ್ ಸಮರ ವೈಯಕ್ತಿಕ ಮಟ್ಟಕ್ಕೆ ಇಳಿದಿದ್ದು, ಜಮೀರ್ ಒಬ್ಬ ಚಿಲ್ಲರೆ ಗಿರಾಕಿ ಎಂದು ರೇಣುಕಾಚಾರ್ಯ ಕಿಡಿಕಾರಿದ್ದಾರೆ.

    ಇಂದು ಮಾಜಿ ಸಚಿವ ಜಮೀರ್ ವಿಚಾರಕ್ಕಾಗಿಯೇ ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಜಮೀರ್ ಒಬ್ಬ ಚಿಲ್ಲರೆ ಗಿರಾಕಿ. ಪುಟ್‍ಪಾತ್‍ನಲ್ಲಿ ಇದ್ದವನು. ಚಾಮರಾಜಪೇಟೆಯಲ್ಲಿ ದಂಧೆ ಮಾಡಿಕೊಂಡಿದ್ದವನನ್ನು ಕರೆತಂದು ದೇವೇಗೌಡರು ಮಂತ್ರಿ ಮಾಡಿದ್ದರು. ಅವರಿಗೆ ಜಮೀರ್ ಏನು ಮಾಡಿದ್ದರೂ ಎಂದು ಎಲ್ಲರಿಗೂ ಗೊತ್ತಿದೆ ಎಂದರು.

    ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರ ಹಿಂದೆ ‘ಅಣ್ಣ ಕುಮಾರಣ್ಣ ಅಂತಾ ಹೇಳಿಕೊಂಡು ತಿರುಗುತ್ತಿದ್ದ’. ಅವರಿಗೂ ಜಮೀರ್ ಏನು ಮಾಡಿದ್ರು ಎಂದು ಗೊತ್ತಿದೆ. ನನ್ನ ವೈಯಕ್ತಿಕ ವಿಷಯಗಳ ಬಗ್ಗೆ ಜಮೀರ್ ಮಾತನಾಡಿದ್ರೆ ನಾನೂ ಕೂಡ ಅದೇ ಭಾಷೆಯಲ್ಲಿ ಮಾತನಾಡುವುದು ನನಗೆ ಗೊತ್ತಿದೆ. ಜಮೀರ್ ಗೆ ಸಂದರ್ಭದಲ್ಲಿ ಎಚ್ಚರಿಕೆ ಕೊಡುತ್ತೇನೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ಇದನ್ನು ಓದಿ: ರೇಣುಕಾಚಾರ್ಯ ಇಸ್ಪೀಟ್ ಎಲೆಯಲ್ಲಿರುವ ಜೋಕರ್‌ನಂತೆ: ಜಮೀರ್ ವ್ಯಂಗ್ಯ

    ರೇಣುಕಾಚಾರ್ಯ ಏಕವಚನ ವಾಗ್ದಾಳಿ ಜಮೀರ್ ವಿರುದ್ಧ ಮಾತ್ರ ಸೀಮಿತವಾಗಿರಲಿಲ್ಲ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೇಲೂ ಕೂಡ ತಿರುಗಿತ್ತು. ‘ದಿನೇಶ್ ಗುಂಡೂರಾವ್, ಮೊದಲು ನಿನ್ನ ಪಕ್ಷ ಸರಿಪಡಿಸಿಕೋ. ನಿನಗೆ ರಾಜಕಾರಣದ ಮೆದುಳೇ ಇಲ್ಲ. ಅದು ಬಿಟ್ಟು ನನ್ನ ಬಗ್ಗೆ ಮಾತನಾಡಬೇಡ’ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು. ಇದೆಲ್ಲವನ್ನು ನೋಡುತ್ತಿದ್ದರೆ ರೇಣುಕಾಚಾರ್ಯ ವರ್ಸಸ್ ಕಾಂಗ್ರೆಸ್ ಶಾಸಕರ ನಡುವಿನ ವೈಯುಕ್ತಿಕ ವಾಕ್ ಸಮರ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಮಾತ್ರ ಕಾಣಿಸುತ್ತಿಲ್ಲ.

  • ಹೊನ್ನಾಳಿಯಲ್ಲೂ ಪ್ರವಾಹ ಭೀತಿ- ಜನರ ಸ್ಥಳಾಂತರ ಕಾರ್ಯಕ್ಕೆ ರೇಣುಕಾಚಾರ್ಯ ಸಾಥ್

    ಹೊನ್ನಾಳಿಯಲ್ಲೂ ಪ್ರವಾಹ ಭೀತಿ- ಜನರ ಸ್ಥಳಾಂತರ ಕಾರ್ಯಕ್ಕೆ ರೇಣುಕಾಚಾರ್ಯ ಸಾಥ್

    ದಾವಣಗೆರೆ: ತುಂಗಭದ್ರಾ ನದಿಯಲ್ಲಿ ನೀರು ಹೆಚ್ಚಾದ ಕಾರಣ ಹೊನ್ನಾಳಿಯಲ್ಲಿಯೂ ಸಹ ಪ್ರವಾಹ ಭೀತಿ ಉಂಟಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. ಜನರನ್ನು ಕಾಪಾಡಲು ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರೇ ಅಖಾಡಕ್ಕಿಳಿದ್ದಿದ್ದು, ಸಂತ್ರಸ್ತರ ಮೆನೆಗೆ ತೆರಳಿ ಜನರನ್ನು ಹೊರಗೆ ಕರೆ ತರುತ್ತಿದ್ದಾರೆ.

    ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಶಾಸಕ ರೇಣುಕಾಚಾರ್ಯ ಅವರೇ ಸ್ವತಃ ನೀರಿಗೆ ಇಳಿದು ಜನರನ್ನು ಸ್ಥಳಾಂತರ ಮಾಡಿಸುತ್ತಿದ್ದಾರೆ. ತುಂಗಾಭದರ್ರಾ ನದಿಯಲ್ಲಿ ನೀರಿನ ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗುತ್ತಿದ್ದು, ಮನೆಗಳಿಗೆ ನೀರು ನುಗ್ಗುತ್ತಿದೆ. ಹೊನ್ನಾಳಿಯ ಬಾಲ್ ರಾಜ್ ಘಾಟ್, ಬಂಬುಬಜಾರ್ ನಲ್ಲಿ ಮನೆಗಳಿಗೆ ನೀರು ನುಗ್ಗಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿದೆ. ಪ್ರವಾಹ ಇನ್ನು ಹೆಚ್ಚಾಗುವ ಹಿನ್ನಲೆ ಅಧಿಕಾರಿಗಳು ಮನೆಗಳನ್ನು ಖಾಲಿ ಮಾಡಿಸುತ್ತಿದ್ದಾರೆ.

    ಅಧಿಕಾರಿಗಳ ಜೊತೆ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹ ಕಾರ್ಯಕರ್ತರೊಂದಿಗೆ ನೀರಿಗೆ ಇಳಿದು ಜನರನ್ನು ಮನೆಯಿಂದ ಹೊರಗೆ ಕರೆ ತರುತ್ತಿದ್ದಾರೆ. ತಕ್ಷಣ ಮನೆ ಖಾಲಿ ಮಾಡಿ ಎಂದು ಸೂಚನೆ ನೀಡುತ್ತಿದ್ದಾರೆ. ರೇಣುಕಾಚಾರ್ಯ ಜೊತೆ ಕಾರ್ಯಕರ್ತರು ಸಹ ಸಾಥ್ ನೀಡಿದ್ದಾರೆ. ಶಿಂಗಟಾಲೂರು ಏತ ನೀರಾವರಿ ಬ್ಯಾರೇಜ್‍ನಿಂದ 1.80 ಲಕ್ಷ ಕ್ಯೂಸೆಕ್ ನೀರನ್ನು ಹೊರ ಬಿಟ್ಟಿದ್ದರಿಂದ ತುಂಗಭದ್ರಾ ನದಿಯಲ್ಲಿ ಪ್ರವಾಹ ಹೆಚ್ಚಾಗಿದೆ.

    ಕುರವತ್ತಿ, ಹರವಿ, ಅಲ್ಲಿಪುರ, ಮಾಗಳ, ಅಂಗೂರು, ಗ್ರಾಮದಲ್ಲಿ ಬೆಳೆ ಹಾನಿ ಸಂಭವಿಸಿದೆ. ಕುರವತ್ತಿ ಗ್ರಾಮದಲ್ಲಿ 5 ಕುಟುಂಬಗಳನ್ನು ಈಗಾಗಿಲೇ ಸ್ಥಳಾಂತರಿಸಲಾಗಿದ್ದು, ಉಳಿದ ಕುಟುಂಬಗಳನ್ನು ಸ್ಥಳಾಂತರಿಸಲಾಗುತ್ತಿದೆ. ಹಡಗಲಿ ತಾಲೂಕಿನಲ್ಲಿ ಒಟ್ಟು 127 ಮನೆಗಳು ನೆಲಸಮವಾಗಿದೆ.

  • ಆರೋಪಗಳು ನಿಜವಾದರೇ ಬಹಿರಂಗವಾಗಿ ನೇಣು ಹಾಕಿಕೊಳ್ಳುತ್ತೇನೆ – ಸಿಎಂಗೆ ರೇಣುಕಾಚಾರ್ಯ ಸವಾಲು

    ಆರೋಪಗಳು ನಿಜವಾದರೇ ಬಹಿರಂಗವಾಗಿ ನೇಣು ಹಾಕಿಕೊಳ್ಳುತ್ತೇನೆ – ಸಿಎಂಗೆ ರೇಣುಕಾಚಾರ್ಯ ಸವಾಲು

    ಬೆಂಗಳೂರು: ವಿಧಾನಸಭಾ ಕಲಾಪದಲ್ಲಿ ಮೌನ ವಹಿಸಿದ್ದ ಬಿಜೆಪಿ ಶಾಸಕ ರೇಣುಕಾಚಾರ್ಯ ಅವರು ಇಂದು ಸಿಎಂ ಕುಮಾರಸ್ವಾಮಿ ಅವರ ಆರೋಪಗಳಿಗೆ ಪ್ರತಿಕ್ರಿಯೆ ನೀಡಿ ವಾಗ್ದಾಳಿ ನಡೆಸಿದ್ದಾರೆ. ನಿನ್ನೆ ಸದನದಲ್ಲಿ ಸಿಎಂ ಹೇಳಿರುವ ಮಾತಿಗೆ ಟಾಂಗ್ ನೀಡಿ ಅಣೆ ಪ್ರಮಾಣದ ಸವಾಲು ಎಸೆದಿದ್ದಾರೆ.

    ಸದನದಲ್ಲಿ ನನ್ನ ಹೆಸರನ್ನು ಮುರ್ನಾಲ್ಕು ಬಾರಿ ಪ್ರಸ್ತಾಪ ಮಾಡಿದ್ದಾರೆ. ಆದರೆ ನಾನು ಅವರಿಗೆ ಸವಾಲು ಹಾಕುತ್ತಿದ್ದೇನೆ. ಅಂದು ನಾನು ಗೋವಾಕ್ಕೆ ಹೋಗಿದ್ದು ನಿಜ. ಆದರೆ ನಾನು ಅವರಿಂದ ಸಚಿವನಾಗಲಿಲ್ಲ. ಅಂದು ಸರ್ಕಾರ ರಚಿಸಲು ಪ್ರಸ್ತಾಪ ಮಾಡಿದ್ದ ಅವರೇ ನಮ್ಮನ್ನ ಗೋವಾ ಹಾಗೂ ಹೈದರಾಬಾದ್ ಗೆ ಬಂದು ಮಧ್ಯರಾತ್ರಿ ಭೇಟಿ ಮಾಡಿದ್ರು. ತಮಗೆ ಬೆಂಬಲ ನೀಡಲು ಮನವಿ ಮಾಡಿದ್ದರು. ಆದರೆ ನಾನು ಅಂದು ಅವರೊಂದಿಗೆ ಜಗಳ ಮಾಡಿ ಬಿಎಸ್ ಯಡಿಯೂರಪ್ಪ ಅವರಿಗೆ ಮೋಸ ಮಾಡಲು ಒಪ್ಪಿರಲಿಲ್ಲ ಎಂದರು.

    ಬಿಎಸ್‍ವೈ ಅವರಿಗೆ ಮೋಸ ಮಾಡಿದರೆ ಹೆತ್ತ ತಾಯಿಗೆ ಮೋಸ ಮಾಡಿದಂತೆ ಎಂದು ನಾನು ಸಿಎಂ ಅವರಿಗೆ ಹೇಳಿದ್ದೆ. ನಿನ್ನೆ ವಿಧಾನ ಸೌಧದಲ್ಲಿ ಮೌನ ವಹಿಸಲು ಒಂದು ಅರ್ಥ ಇದೆ. ಈಗ ಬಹಿರಂಗವಾಗಿ ಪ್ರಮಾಣ ಮಾಡಿ ಅಥವಾ ಬಹಿರಂಗ ಚರ್ಚೆ ಬನ್ನಿ ಎಂದರು. ಅಲ್ಲದೇ ನೀವು ಹೇಳಿದ್ದೆಲ್ಲಾ ಸಾಬೀತು ಆದರೆ ಬಹಿರಂಗವಾಗಿ ನೇಣಿಗೆ ಶರಣಾಗುತ್ತೇನೆ. ಸಿಎಂ ಅವರು ನಂಬಿರುವ ಶೃಂಗೇರಿ ಮತ್ತು ಮಂಜುನಾಥ ಸನ್ನಿಧಿಗೆ ಬನ್ನಿ ಪ್ರಮಾಣ ಮಾಡಿ ಎಂದು ಸವಾಲು ಎಸೆದರು.

    ದೇವೇಗೌಡರ ಕುಟುಂಬ ಸುಳ್ಳು ಹೇಳುವುದಲ್ಲಿ ನಿಸ್ಸೀಮರು, ನಾನು ನಿಮ್ಮ ಸಹಾಯದಿಂದ ಸಚಿವನಾಗಲಿಲ್ಲ, ನಮ್ಮನ್ನು ಉದ್ವೇಗಗೊಳಿಸುವ ಉದ್ದೇಶದಿಂದಲೇ ಸಿಎಂ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಬಹುಮತವಿಲ್ಲದ ಸಿಎಂ ಅವರು ಮೊದಲು ರಾಜೀನಾಮೆ ನೀಡಬೇಕು. ಮುಂದಿನ ಅಧಿವೇಶನದಲ್ಲಿ ನಿಮ್ಮ ಆರೋಪಗಳಿಗೆ ತಕ್ಕ ಉತ್ತರ ನೀಡುತ್ತೇನೆ ಎಂದರು.