Tag: ಶಾಸಕ ಶಿವಲಿಂಗೇಗೌಡ

  • ಸಿದ್ದರಾಮೋತ್ಸವಕ್ಕೆ ಬಸ್ ವ್ಯವಸ್ಥೆ ಮಾಡಿದ್ದನ್ನು ಒಪ್ಪಿಕೊಂಡ ಶಾಸಕ ಶಿವಲಿಂಗೇಗೌಡ

    ಸಿದ್ದರಾಮೋತ್ಸವಕ್ಕೆ ಬಸ್ ವ್ಯವಸ್ಥೆ ಮಾಡಿದ್ದನ್ನು ಒಪ್ಪಿಕೊಂಡ ಶಾಸಕ ಶಿವಲಿಂಗೇಗೌಡ

    ಹಾಸನ: ಸಿದ್ದರಾಮೋತ್ಸವಕ್ಕೆ ಅನ್ಯಪಕ್ಷಗಳ ಶಾಸಕರು ವಾಹನ ವ್ಯವಸ್ಥೆ ಮಾಡಿದ್ರು ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಪುಷ್ಠಿ ನೀಡುವಂತಹ ಹೇಳಿಕೆಯನ್ನು ಅರಸಿಕೆರೆಯ ಜೆಡಿಎಸ್ ಶಾಸಕ ಶಿವಲಿಂಗೇಗೌಡ ನೀಡಿದ್ದಾರೆ.

    ಹೌದು. ನಾನು ವಾಹನ ವ್ಯವಸ್ಥೆ ಮಾಡಿದ್ದು ಸತ್ಯ ಎಂದಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ನಾನು ಉಪಯೋಗ ಪಡೆದಿದ್ದೇನೆ. ಕೆಲವರು ಬಂದು ಸಹಾಯ ಕೇಳಿದಾಗ, ಬಸ್ ವ್ಯವಸ್ಥೆ ಮಾಡಿಸಿದ್ದೇನೆ ಎಂದಿದ್ದಾರೆ. ನಾನು ಜೆಡಿಎಸ್ ಜೊತೆ ಭಿನ್ನಾಭಿಪ್ರಾಯ ಹೊಂದಿರೋದು ಎಲ್ಲರಿಗೂ ಗೊತ್ತಿದೆ ಎಂದು ಶಿವಲಿಂಗೇಗೌಡ ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿಂದು 1,608 ಮಂದಿಗೆ ಕೊರೊನಾ – ಇಬ್ಬರು ಸಾವು

    ಸಿದ್ದರಾಮೋತ್ಸವ ಅಪಘಾತ- ಸಾವಿನ ಸಂಖ್ಯೆ 3ಕ್ಕೆ: ಸಿದ್ದರಾಮೋತ್ಸವ ವೇಳೆ ಸಂಭವಿಸಿದ ಅಪಘಾತಗಳಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೇರಿದೆ. ಸಿದ್ದರಾಮೋತ್ಸವಕ್ಕೆ ತೆರಲಿದ್ದ ಮಂಡ್ಯದ ಅರಳಕುಪ್ಪೆಯ ಸ್ವಾಮಿಗೌಡ ಅಪಘಾತದಲ್ಲಿ ಮೃತಪಟ್ಟಿರೋದು ತಡವಾಗಿ ಬೆಳಕಿಗೆ ಬಂದಿದೆ. ದಾವಣಗೆರೆಯಿಂದ ವಾಪಸ್ ಆಗದ ಕಾರಣ ಕುಟುಂಬಸ್ಥರು ನಾಪತ್ತೆ ಕೇಸ್ ದಾಖಲಿಸಿದ್ರು. ಇದನ್ನೂ ಓದಿ: ಮುಂದಿನ ಕಾಮನ್‌ವೆಲ್ತ್ ಗೇಮ್ಸ್ ಎಲ್ಲಿ-ಯಾವಾಗ? – ಇಲ್ಲಿದೆ ಡೀಟೈಲ್ಸ್

    ದಾವಣಗೆರೆ ಪೊಲೀಸರು ತನಿಖೆ ನಡೆಸಿದಾಗ, ಜಿಲ್ಲಾಸ್ಪತ್ರೆ ಶವಾಗಾರದಲ್ಲಿ ಸ್ವಾಮಿಗೌಡನ ಶವ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಲಾಗಿದೆ. ಕಲಬುರಗಿಯ ಸಾವಳಗಿಯಿಂದ ಸಿದ್ದರಾಮೋತ್ಸವಕ್ಕೆ ತೆರಳಿದ್ದ 70 ವರ್ಷದ ಬಸಣ್ಣ ನಾಪತ್ತೆಯಾಗಿದ್ದಾರೆ. ಅಪ್ಪನ ಫೋಟೋ ಹಿಡಿದು ಮೂವರು ಮಕ್ಕಳು ದಾವಣಗೆರೆಯಲ್ಲಿ ಹುಡುಕಾಟ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನನ್ನ ಮಾತಿಗೆ ಬೆಲೆ ಕೊಡದಿದ್ರೆ ಸಭೆ ನೀವೇ ನೆಡಸಿ: ಸಚಿವರ ವಿರುದ್ಧ ಶಿವಲಿಂಗೇಗೌಡ ಗರಂ

    ನನ್ನ ಮಾತಿಗೆ ಬೆಲೆ ಕೊಡದಿದ್ರೆ ಸಭೆ ನೀವೇ ನೆಡಸಿ: ಸಚಿವರ ವಿರುದ್ಧ ಶಿವಲಿಂಗೇಗೌಡ ಗರಂ

    ಹಾಸನ: ನಾನು ಮೊದಲಿಂದಲೂ ಹೋಂ ಐಸೋಲೇಶನ್ ರದ್ದುಗೊಳಿಸಬೇಕೆಂದು ಹೇಳುತ್ತಲಿದ್ದೇನೆ. ಆದರೆ ನನ್ನ ಮಾತನ್ನು ಕೇಳುವುದಿಲ್ಲ. ನನ್ನ 20 ವರ್ಷ ಅನುಭವದ ಮಾತನ್ನು ಹೇಳುತ್ತಿದ್ದೇನೆ. ಅದಕ್ಕೆ ಬೆಲೆ ಕೊಡದಿದ್ದರೆ ಸಭೆಯನ್ನು ನೀವೇ ಮುಂದುವರಿಸಿಕೊಂಡು ಹೋಗಿ ಎಂದು ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ವೇದಿಕೆಯ ಮೇಲಿದ್ದ ಸಚಿವದ್ವಯರ ಮೇಲೆ ಕೆಂಡಾಮಂಡಲವಾದರು.

    ಹಾಸನದ ಜಿಲ್ಲಾ ಪಂಚಾಯಿತಿಯ ಹೊಯ್ಸಳ ಸಭಾಂಗಣದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಆರೋಗ್ಯ ಸಚಿವ ಸುಧಾಕರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯನವರಿಗೆ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಸಲಹೆ ನೀಡಲು ಮುಂದಾದರು. ಆದರೆ ಇದನ್ನ ಕೇಳುವಂತಹ ಪರಿಸ್ಥಿತಿಯಲ್ಲಿ ವೇದಿಕೆ ಮೇಲಿದ್ದ ಸಚಿವದ್ವಯರು ಹಾಗೂ ಸಂಸದರು ಸೇರಿದಂತೆ ಜಿಲ್ಲಾಡಳಿತ ಸರಿಯಾಗಿ ಗಮನಹರಿಸದ ಹಿನ್ನೆಲೆಯಲ್ಲಿ ಶಾಸಕ ಶಿವಲಿಂಗೇಗೌಡ ಮಾತಿನ ಮೂಲಕವೇ ಏರುಧ್ವನಿಯಲ್ಲಿ ಕೂಗಾಡಿದರು. ಇದನ್ನೂ ಓದಿ: ಸಚಿವ ಸುಧಾಕರ್ ಎದುರೇ ಪತ್ರ ಹರಿದು ಹಾಕಿ ರೇವಣ್ಣ ಆಕ್ರೋಶ

    ನನ್ನ ಹೆಂಡತಿ ಕೋವಿಡ್-19 ರ ಸೋಂಕಿಗೆ ಒಳಗಾಗಿದ್ದರು. ಇಂತಹ ಸಮಯದಲ್ಲಿ ನಾನು ಪ್ರಥಮ ಸಂಪರ್ಕದಲ್ಲಿದ್ದ ಕಾರಣಕ್ಕಾಗಿ ನನಗೂ ಕೂಡ ನಿರ್ಬಂಧ ಹೇರಿ ಸುಮಾರು ಹದಿನಾಲ್ಕು ದಿನಗಳ ಕಾಲ ಹೋಗದಂತೆ ತಂತಿ ಬೆಲೆ ಹಾಕುವ ರೀತಿ ನನ್ನ ಮನೆಯ ಸುತ್ತಲೂ ಹಾಕಿದ್ರು. ಆದರೆ ಈ ಬಾರಿ ಆ ರೀತಿಯ ಕಠಿಣ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳುತ್ತಿಲ್ಲ. ಕಳೆದ ಬಾರಿ ಸೋಂಕು ತಗಲಿದ ವ್ಯಕ್ತಿಗೆ ತಹಶೀಲ್ದಾರ್ ಆರೋಪಿಯಂತೆ ಹಿಡಿದು ಕೈಗೆ ಸೀಲ್ ಹಾಕುತ್ತಿದ್ದರು. ಈ ಬಾರಿ ಆ ರೀತಿ ಮಾಡುತ್ತಿಲ್ಲ ಎಂದು ಕೆಂಡಾಮಂಡಲವಾಗಿ ಸಭೆಯಲ್ಲಿ ಕೆಲಕಾಲ ಮಾಡುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

  • ಭೀಮನ ಡೈಲಾಗ್ ಹೇಳಿ ಮಿಂಚಿದ ಶಾಸಕ ಶಿವಲಿಂಗೇಗೌಡ

    ಭೀಮನ ಡೈಲಾಗ್ ಹೇಳಿ ಮಿಂಚಿದ ಶಾಸಕ ಶಿವಲಿಂಗೇಗೌಡ

    ಹಾಸನ: ಸಾಮಾಜಿಕ ನಾಟಕದ ಉದ್ಘಾಟನೆಗೆ ತೆರಳಿದ್ದ ಹಾಸನ ಜಿಲ್ಲೆಯ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಹಾಡು ಹೇಳುವ ಮೂಲಕ ಜನರನ್ನು ರಂಜಿಸಿದ್ದಾರೆ.

    ಹಾಸನ ಜಿಲ್ಲೆಯ ದಿಬ್ಬೂರಿನಲ್ಲಿ ನಡೆದ ಸಾಮಾಜಿಕ ನಾಟಕದ ಉದ್ಘಾಟನಾ ಕಾರ್ಯಕ್ರಮಕ್ಕೆ ಶಿವಲಿಂಗೇಗೌಡ ತೆರಳಿದ್ದರು. ಈ ವೇಳೆ ಭಾಷಣ ಮಾಡಿದ ನಂತರ ಪ್ರೇಕ್ಷಕರು, ಶಾಸಕರ ಬಳಿ ಕುರುಕ್ಷೇತ್ರ ನಾಟಕದ ಭೀಮನ ಪಾತ್ರ ಅಭಿನಯಿಸಿ ತೋರಿಸುವಂತೆ ಪಟ್ಟು ಹಿಡಿದರು.

    ಆಗ ಶಾಸಕ ಶಿವಲಿಂಗೇಗೌಡ ಅಲ್ಲಿ ನೆರೆದಿದ್ದ ಜನರ ಮುಂದೆ ಭೀಮನ ಪಾತ್ರವನ್ನು ಡೈಲಾಗ್ ಹೇಳುವುದರ ಜೊತೆಗೆ ಅಭಿನಯ ಮಾಡಿ ತೋರಿಸಿದ್ದಾರೆ.

  • ಕಾಂಕ್ರೀಟ್‌ ಎಂಎಲ್‌ಎ –  ಶಿವಲಿಂಗೇಗೌಡ ವಿರುದ್ಧ ಹೆದ್ದಾರಿ ಮಧ್ಯೆ ನಿಂತು ಧಿಕ್ಕಾರ ಕೂಗಿಸಿದ ಸಂತೋಷ್

    ಕಾಂಕ್ರೀಟ್‌ ಎಂಎಲ್‌ಎ – ಶಿವಲಿಂಗೇಗೌಡ ವಿರುದ್ಧ ಹೆದ್ದಾರಿ ಮಧ್ಯೆ ನಿಂತು ಧಿಕ್ಕಾರ ಕೂಗಿಸಿದ ಸಂತೋಷ್

    ಹಾಸನ: ನಗರಸಭೆಗಳ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಕೋರ್ಟ್ ತಡೆ ನೀಡಿದ್ದರಿಂದ ಶಾಸಕ ಶಿವಲಿಂಗೇಗೌಡ ಬೆಂಬಲಿಗರು ನಮ್ಮ ಕಾರ್ಯಕರ್ತರ ಮನೆ ಮುಂದೆ ಪಟಾಕಿ ಹೊಡೆಯುವ ದುಸ್ಸಾಹಸ ಮಾಡಿದ್ದಾರೆ. ಅದನ್ನು ತಡೆ ಹಿಡಿಯುವ ಪ್ರಯತ್ನ ಮಾಡದಿದ್ದರೆ ಕೆಲವೇ ದಿನಗಳಲ್ಲಿ ಶಾಸಕರ ಮನೆ ಮುಂದೆ ಪಟಾಕಿ ಹೊಡೆಯುವ ದಿನ ದೂರವಿಲ್ಲ ಎಂದು ಬಿಎಸ್‍ವೈ ರಾಜಕೀಯ ಕಾರ್ಯದರ್ಶಿ ಸಂತೋಷ್ ಎಚ್ಚರಿಕೆ ನೀಡಿದ್ದಾರೆ.

    ಇಂದು ಹಾಸನ ಜಿಲ್ಲೆ ಅರಸೀಕೆರೆಯ ಸ್ಥಳೀಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಎನ್.ಡಿ.ಪ್ರಸಾದ್ ಮತ್ತು ಸದಸ್ಯರಾದ ಶಿವನ್‍ರಾಜ್, ಮುರಳಿಧರ್, ರವಿಕುಮಾರ್ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ವೇಳೆ ಅರಸೀಕೆರೆ ಹೆದ್ದಾರಿಯಲ್ಲಿ ನಿಂತು ಶಾಸಕ ಶಿವಲಿಂಗೇಗೌಡ ವಿರುದ್ಧ, ಕಾಂಕ್ರೀಟ್ ಎಂಎಲ್‍ಎಗೆ ಧಿಕ್ಕಾರ ಎಂದು ಕೂಗಿಸಿದರು.

    ಬಳಿಕ ಮಾತನಾಡಿದ ಸಂತೋಷ್, ಅರಸೀಕೆರೆ ನಗರಸಭೆ ಅಧ್ಯಕ್ಷಗಾದಿಗೆ ಎಸ್‍ಟಿ ಮೀಸಲಾಗಿತ್ತು. ಇದರ ವಿರುದ್ಧ ಶಾಸಕ ಶಿವಲಿಂಗೇಗೌಡ ಕಾನೂನು ಹೋರಾಟ ಮಾಡಿದ್ದರು. 2023ಕ್ಕೆ ಮತ ಚಲಾಯಿಸುವ ಮೂಲಕ ಜನರು ಶಾಸಕರಿಗೆ ಈ ಬಗ್ಗೆ ಕೊಡುತ್ತಾರೆ. ಕೊರೊನಾ ಸೋಂಕು ಹೆಚ್ಚಿದ್ದ ಕಾರಣ ಇಂದಿನ ಕಾರ್ಯಕ್ರಮಕ್ಕೆ 200 ಜನರ ಮೇಲೆ ಬರಬೇಡಿ ಎಂದು ಮನವಿ ಮಾಡಿದ್ದೆವು. ಆದರೆ ಶಾಸಕರು ತಡೆಯಾಜ್ಞೆ ತಂದಿರುವುದರಿಂದ ಎಸ್‍ಸಿ, ಎಸ್‍ಟಿ ಜನಾಂಗಕ್ಕೆ ಸಿಟ್ಟು ತರಿಸಿದೆ. ಹೀಗಾಗಿ ಇಷ್ಟು ಜನ ಸೇರಿದ್ದಾರೆ ಎಂದು ತಿಳಿಸಿದರು.

    ಶಿವಲಿಂಗೇಗೌಡ ತಂತ್ರ, ಕುತಂತ್ರ ಮಾಡಲು ನಿಪುಣರಿದ್ದಾರೆ. ಈ ಕಾಂಕ್ರೀಟ್ ಎಂಎಲ್‍ಎ ವಿರುದ್ಧ ಒಬ್ಬೊಬ್ಬರು ಹೋರಾಟ ಮಾಡುತ್ತಾರೆ. ಅದಕ್ಕೆ ಸಂಬಂಧಿಸಿದ ದಾಖಲೆ ಕಲೆ ಹಾಕುತ್ತಿದ್ದೇನೆ. ನನ್ನ ವಿರುದ್ಧ ನಮ್ಮ ಪಕ್ಷದವರು ಬೆಂಗಳೂರು ನಾಯಕರ ಬಳಿ ಹೋಗಿದ್ದರು. ಇದರ ಹಿಂದೆ ಶಾಸಕರ ಕೈವಾಡವಿದೆ. ಅಂದು ಅವರು ಯಾರು ಯಾರಿಗೆ ಬೆಂಗಳೂರಿಗೆ ಹೋಗಲು ವಾಹನ ಸೌಕರ್ಯ ಮಾಡಿಕೊಟ್ಟಿದ್ದರು ಎಂಬ ಮಾಹಿತಿ ಇದೆ ಎಂದು ಸಂತೋಷ್ ಕಿಡಿಕಾರಿದರು. ಇದನ್ನೂ ಓದಿ: ನಗರಸಭೆಗಳ ಅಧ್ಯಕ್ಷ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ – ಹಾಸನದಲ್ಲಿ ಜೆಡಿಎಸ್ ಸಂಭ್ರಮ

  • ದೇವರ ಮುಂದೆ ಬಂದು ಪ್ರಮಾಣ ಮಾಡಲಿ- ಬಿಎಸ್‍ವೈ ರಾಜಕೀಯ ಕಾರ್ಯದರ್ಶಿಗೆ ಶಿವಲಿಂಗೇಗೌಡ ಸವಾಲು

    ದೇವರ ಮುಂದೆ ಬಂದು ಪ್ರಮಾಣ ಮಾಡಲಿ- ಬಿಎಸ್‍ವೈ ರಾಜಕೀಯ ಕಾರ್ಯದರ್ಶಿಗೆ ಶಿವಲಿಂಗೇಗೌಡ ಸವಾಲು

    – ಅವನು ಯಾರ್ರೀ, ಅರಸೀಕೆರೆ ಜನಕ್ಕೆ ಏನೇನೋ ಸುಳ್ಳು ಹೇಳ್ತಾರೇನ್ರೀ

    ಹಾಸನ: ಕಾನೂನು ಪ್ರಕಾರ ಈ ಬಾರಿ ಅರಸೀಕೆರೆ ನಗರಸಭೆ ಅಧ್ಯಕ್ಷಗಾದಿಗೆ ಎಸ್‍ಟಿ ಮೀಸಲಾತಿ ಬಂದಿದೆ ಎನ್ನುವುದಾದರೆ ದೇವರ ಮುಂದೆ ಬಂದು ಪ್ರಮಾಣ ಮಾಡಲಿ. ನಾನು ಹೇಳುತ್ತಿರುವುದು ಕಾನೂನಿನಲ್ಲಿ ತಪ್ಪಿದ್ದರೆ ಬೆಳಗ್ಗೆಯೇ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಬಿಎಸ್‍ವೈ ರಾಜಕೀಯ ಕಾರ್ಯದರ್ಶಿ ಎನ್‍ಆರ್.ಸಂತೋಷ್‍ಗೆ ಶಾಸಕ ಶಿವಲಿಂಗೇಗೌಡ ಬಹಿರಂಗ ಸವಾಲು ಹಾಕಿದ್ದಾರೆ.

    ಅರಸೀಕೆರೆ ನಗರಸಭೆ ಅಧ್ಯಕ್ಷಗಾದಿ ಎಸ್‍ಟಿಗೆ ಮೀಸಲಾಗಿರುವುದರಿಂದ ಜೆಡಿಎಸ್ ಪಕ್ಷಕ್ಕೆ ಬಹುಮತವಿದ್ದರೂ, ಅರಸೀಕೆರೆ ನಗರಸಭೆ ಅಧ್ಯಕ್ಷಗಾದಿ ಬಿಜೆಪಿ ಪಾಲಾಗಲಿದೆ. ಈ ಮೀಸಲಾತಿ ದೋಷದಿಂದ ಕೂಡಿದ್ದು ಈ ಬಗ್ಗೆ ನ್ಯಾಯಾಲಯದಲ್ಲಿ ಹೋರಾಟ ಮಾಡುವುದಾಗಿ ಶಾಸಕ ಶಿವಲಿಂಗೇಗೌಡ ಆಕ್ರೋಶ ಹೊರಹಾಕಿದ್ದಾರೆ.ಇದನ್ನೂ ಓದಿ: ಚುನಾವಣೆಗೆ ಸ್ಪರ್ಧಿಸುವ ಸುಳಿವು ನೀಡಿದ ಸಿಎಂ ಆಪ್ತ ಸಂತೋಷ್

    ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಸಂತೋಷ್, ಮೀಸಲಾತಿಯಲ್ಲಿ ಯಾವುದೇ ತಪ್ಪಾಗಿಲ್ಲ. ಶಾಸಕ ಶಿವಲಿಂಗೇಗೌಡ ಅವರ ಕಾನೂನು ಹೋರಾಟದ ಬಗ್ಗೆ ಅರಸೀಕೆರೆಯ ಎಸ್‍ಟಿ ಸಮುದಾಯದ ಜನರ ಮನೆಗಳಿಗೆ ಹೋಗಿ ತಿಳಿಸುವುದಾಗಿ ಹೇಳಿದ್ದರು. ಸಂತೋಷ್ ಹೇಳಿಕೆಗೆ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಶಾಸಕ ಶಿವಲಿಂಗೇಗೌಡ, ಅವನು ಯಾರ್ರೀ. ಅರಸೀಕೆರೆ ಜನಕ್ಕೆ ಏನೇನೋ ಸುಳ್ಳು ಹೇಳ್ತಾರೇನ್ರೀ. ಎಸ್‍ಟಿ ಸದಸ್ಯ ಜೆಡಿಎಸ್‍ನಿಂದ ಗೆದ್ದಿದ್ದರೆ ಮೀಸಲಾತಿ ಮಾಡಿಸುತ್ತಿದ್ದರಾ. ಇವನು ಆತ್ಮಸಾಕ್ಷಿ ಮುಟ್ಟಿಕೊಂಡು ಹೇಳಲಿ.

    ಎಲ್ಲೆಲ್ಲಿ ಬಿಜೆಪಿಯವರನ್ನು ತಂದು ಕೂರಿಸಬಹುದೋ ಅಲ್ಲೆಲ್ಲ ಮೀಸಲಾತಿ ತಂದಿದ್ದಾರೆ. ಅಸೆಂಬ್ಲಿ ನಡೆದಿದ್ದರೆ ನಾವು ಏನು ಎಂದು ತೋರಿಸುತ್ತಿದ್ದೆವು. ಇವನು ತಲೆಕೆಳಗಾಗಿ ನಿಂತರು ಎಸ್‍ಟಿ ಜನಾಂಗ ಇವನನ್ನು ನಂಬುತ್ತಾ. ಅರಸೀಕೆರೆಯಲ್ಲಿ ನೆಮ್ಮದಿ ರಾಜಕಾರಣ ಇತ್ತು. ಈಗ ಬೆಂಕಿಯಿಡಲು ಬಂದಿದ್ದಾರೆ. ನಾನು ಅರಸೀಕೆರೆಯಲ್ಲಿ ಜಾತಿ ರಾಜಕಾರಣ ಮಾಡಿದ್ದೇನೆ ಅಂದರೆ ಅವರ ಮನೆಯಲ್ಲಿ ಜೀತ ಮಾಡುತ್ತೇನೆ. ನಾನು ಕೂಡ ಮನೆ ಮನೆಗೆ ಹೋಗುತ್ತೇನೆ. ಆ ಜನಾಂಗದವರಿಗೆ ಎಲ್ಲವನ್ನೂ ತಿಳಿಸುತ್ತೇನೆ. ಶಿವಲಿಂಗೇಗೌಡನನ್ನೇನಾದ್ರು ನೀವು ಕೆಣಕಿದ್ರೆ ರಾಜಕೀಯದಲ್ಲಿ ಜನ ನಿಮ್ಮನ್ನು ಯಾವ ಸ್ಥಿತಿಗೆ ತಂದು ನಿಲ್ಲಿಸುತ್ತಾರೆ ನೋಡ್ತೀರಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಬಹುಮತ ಇಲ್ಲದಿದ್ದರೂ ಬಿಜೆಪಿಗೆ ಸಿಕ್ತು ಹಾಸನ, ಅರಸೀಕೆರೆ ನಗರಸಭೆ ಅಧ್ಯಕ್ಷ ಪಟ್ಟ

  • ಬಿಎಸ್‍ವೈ ಬಹುಮತ ಇಲ್ಲದೆ ಮುಖ್ಯಮಂತ್ರಿ ಆದನಾ?- ಶಾಸಕ ಶಿವಲಿಂಗೇಗೌಡ ಆಕ್ರೋಶ

    ಬಿಎಸ್‍ವೈ ಬಹುಮತ ಇಲ್ಲದೆ ಮುಖ್ಯಮಂತ್ರಿ ಆದನಾ?- ಶಾಸಕ ಶಿವಲಿಂಗೇಗೌಡ ಆಕ್ರೋಶ

    – ಸ್ವಾರ್ಥಕ್ಕಾಗಿ ರಾಜಕೀಯ ಪ್ರೇರಿತ ಮೀಸಲಾತಿ

    ಹಾಸನ: ಸರ್ಕಾರ ನಿಯಮ ಮೀರಿ ಹಾಸನ ಜಿಲ್ಲೆಯ, ಅರಸೀಕೆರೆ ನಗರಸಭೆ ಅಧ್ಯಕ್ಷಗಾದಿಗೆ ಮೀಸಲಾತಿ ಪ್ರಕಟಿಸಿದೆ. ಸರ್ಕಾರದಲ್ಲಿ ಕಾಣದ ಕೈಗಳು ಹಿಂಬದಿಯಿಂದ ಯಡಿಯೂರಪ್ಪ ಅವರ ಕೈಯಲ್ಲಿ ಈ ರೀತಿ ಆಡಳಿತ ನಡೆಸುತ್ತಿವೆ ಎಂದು ಶಾಸಕ ಶಿವಲಿಂಗೇಗೌಡ ಆಕ್ರೋಶ ಹೊರಹಾಕಿದ್ದಾರೆ.

    ಅರಸೀಕೆರೆ ನಗರಸಭೆಯ ಅಧ್ಯಕ್ಷಗಾದಿ ಎಸ್‍ಟಿ ಅಭ್ಯರ್ಥಿ ಮೀಸಲಾಗಿದೆ. ಆದರೆ ಎಸ್‍ಟಿ ಪಂಗಡಕ್ಕೆ ಸೇರಿದ ಅಭ್ಯರ್ಥಿ ಬಿಜೆಪಿ ಪಕ್ಷದಿಂದ ಮಾತ್ರ ಜಯಗಳಿಸಿದ್ದಾರೆ. ಹೀಗಾಗಿ ಅರಸೀಕೆರೆ ನಗರಸಭೆಯಲ್ಲಿ ಜೆಡಿಎಸ್ ಬಹುಮತ ಹೊಂದಿದ್ದರೂ ಅಧ್ಯಕ್ಷಗಾದಿ ಮಾತ್ರ ಬಿಜೆಪಿ ಪಾಲಾಗುತ್ತಿದೆ. ಈ ಬಗ್ಗೆ ಹಾಸನದಲ್ಲಿ ಆಕ್ರೋಶ ಹೊರಹಾಕಿರುವ ಶಾಸಕ ಶಿವಲಿಂಗೇಗೌಡ, ಯಡಿಯೂರಪ್ಪ ಅವರಿಗೆ ನೇರವಾಗಿ ಆಡಳಿತ ನಡೆಸಲು ಬಿಡುತ್ತಿಲ್ಲ. ಯಡಿಯೂರಪ್ಪ ಏನು ಬಹುಮತ ಇಲ್ಲದೆ ಮುಖ್ಯಮಂತ್ರಿ ಆದನಾ? ನಗರಸಭೆ ಮೀಸಲಾತಿ ಪ್ರಕಟ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಈ ಬಗ್ಗೆ ನ್ಯಾಯಾಲಯಕ್ಕೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಮೀಸಲು ನಿಗದಿಯಲ್ಲಿ ನ್ಯಾಯ ದೇವತೆಗೆ ಅನ್ಯಾಯ – ರೇವಣ್ಣ ಕಿಡಿ

    ನ್ಯಾಯಾಧೀಶರು ನಮಗೆ ನ್ಯಾಯ ಕೊಡಬೇಕು. ರಾಜಕೀಯ ಸ್ವಾರ್ಥಕ್ಕಾಗಿ, ರಾಜಕೀಯ ಪ್ರೇರಿತ ಮೀಸಲಾತಿ ಮಾಡಿದ್ದಾರೆ. ಕಾರ್ಯಾಂಗ, ಶಾಸಕಾಂಗ ನಡೆಸುವವರಿಗೆ ಕ್ಯಾಕರಿಸಿ, ಕ್ಯಾಕರಿಸಿ ಉಗಿಯಬೇಕಾಗುತ್ತೆ. ಇದಕ್ಕೆ ಪ್ರಜಾಪ್ರಭುತ್ವ ಅಂತಾ ಕರೆಯಬೇಕಾ. ಈ ಬಗ್ಗೆ ಸುಪ್ರೀಂಕೋರ್ಟ್‍ಗೆ ಹೋದರೂ ಬಿಡೋದಿಲ್ಲ. ಹೋರಾಟ ಮಾಡುತ್ತೇನೆ. ಯಾವ ಪುರುಷಾರ್ಥಕ್ಕಾಗಿ ಇಂಥ ಕೆಲಸ ಮಾಡಿದ್ದಾರೆ. ಯಡಿಯೂರಪ್ಪ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿ ಕಾಣದ ಕೈ ಕೆಲಸ ಮಾಡುತ್ತಿವೆ. ಯಡಿಯೂರಪ್ಪ ಹೇಗೆ ಇದನ್ನ ಸಮರ್ಥಿಸಿ ಕೊಳ್ಳುತ್ತಾರೆ? ಕಾರ್ಯಾಂಗ, ಶಾಸಕಾಂಗ ಎರಡೂ ನ್ಯಾಯಾಂಗಕ್ಕೆ ಮೋಸ, ಅಪಚಾರ ಮಾಡುತ್ತಿವೆ ಎಂದು ಕಿಡಿಕಾರಿದರು.

    ಅರಸೀಕೆರೆ ನಗರಸಭೆ ಒಟ್ಟು 31 ಸದಸ್ಯ ಬಲ ಹೊಂದಿದೆ. ಅದರಲ್ಲಿ ಜೆಡಿಎಸ್ 21, ಕಾಂಗ್ರೆಸ್ 01, ಬಿಜೆಪಿ 05, 3 ಜನ ಸ್ವತಂತ್ರ ಅಭ್ಯರ್ಥಿಗಳು ಸದಸ್ಯರಾಗಿದ್ದಾರೆ. ಅರಸೀಕೆರೆ ನಗರಸಭೆ ಅಧ್ಯಕ್ಷಗಾದಿ ಎಸ್‍ಟಿ ಗೆ ಮೀಸಲಾಗಿರುವ ಕಾರಣ, ಕೇವಲ 5 ಜನ ಸದಸ್ಯ ಬಲ ಹೊಂದಿರುವ ಬಿಜೆಪಿ ಪಕ್ಷದ ಸದಸ್ಯ ನಗರಸಭೆ ಅಧ್ಯಕ್ಷರಾಗೋದು ಖಚಿತವಾಗಿದೆ. ಇದನ್ನೂ ಓದಿ: ಬಹುಮತ ಇಲ್ಲದಿದ್ದರೂ ಬಿಜೆಪಿಗೆ ಸಿಕ್ತು ಹಾಸನ, ಅರಸೀಕೆರೆ ನಗರಸಭೆ ಅಧ್ಯಕ್ಷ ಪಟ್ಟ

  • ಡ್ರಗ್ಸ್ ಮೂಲ ಎಲ್ಲಿ ಅಂತ ನನಗೆ ಗೊತ್ತಿದೆ – ಶಾಸಕ ಶಿವಲಿಂಗೇಗೌಡ ಸ್ಫೋಟಕ ಹೇಳಿಕೆ

    ಡ್ರಗ್ಸ್ ಮೂಲ ಎಲ್ಲಿ ಅಂತ ನನಗೆ ಗೊತ್ತಿದೆ – ಶಾಸಕ ಶಿವಲಿಂಗೇಗೌಡ ಸ್ಫೋಟಕ ಹೇಳಿಕೆ

    ಹಾಸನ: ಡ್ರಗ್ಸ್ ಮೂಲ ಎಲ್ಲಿ ಅಂತ ನನಗೆ ಗೊತ್ತಿದ್ದು, ಆ ಮೂಲವನ್ನು ಬೈಯ್ಯಲು ಹೋದರೆ ಯಾರ್ಯಾರಿಗೋ ಬೇಜಾರಾಗುತ್ತೆ ಎಂದು ಜಿಲ್ಲೆಯ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಅರಸೀಕೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಡ್ರಗ್ಸ್ ದಂಧೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಎಲ್ಲಾ ದೇಶದಲ್ಲೂ ಡ್ರಗ್ಸ್ ಇದೆ. ನಮ್ಮ ಭಾರತದಲ್ಲಿ ಆರೋಗ್ಯದ ಹಿತದೃಷ್ಟಿಯಿಂದ ಕೆಟ್ಟದ್ದು ಎಂದು ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾಗಿದೆ. ಯಾವುದೇ ಬೀಚ್‍ಗೆ ಹೋಗಿ ಅಲ್ಲಿ ಕುಡಿದು ಮಲಗಿರುವವರೆಲ್ಲಾ ಡ್ರಗ್ಸ್ ತೆಗೆದುಕೊಂಡು ಮಲಗಿರುತ್ತಾರೆ. ಎಲ್ಲಿ ಲಾಭವಿದೆ ಅಲ್ಲಿ ಅದಕ್ಕೆ ಬಿಸಿನೆಸ್‍ದಾರರು ಹುಟ್ಟಿಕೊಳ್ಳುತ್ತಾರೆ. ಅಷ್ಟರಮಟ್ಟಿಗೆ ಈ ದೇಶ, ರಾಜ್ಯದಲ್ಲಿ ಡ್ರಗ್ಸ್ ಅಡಿಕ್ಟ್ ಆಗಿದೆ ಎಂದರು.

    ಈ ಬಗ್ಗೆ ವಿಧಾನಸೌಧದಲ್ಲಿ ಈ ಹಿಂದೆ 3-4 ಗಂಟೆಗಳ ಕಾಲ ಚರ್ಚೆಯಾಗಿತ್ತು. ಆಗಲೇ ನಾನು ಡ್ರಗ್ಸ್ ಬಗ್ಗೆ ವಿರೋಧ ಮಾಡಿದ್ದೆ. ಈ ಹಿಂದೆ ಶಾಸಕ ಕಳಕಪ್ಪ ಬಂಡಿ, ನನ್ನ ಮಗ ಎಂಬಿಬಿಎಸ್ ಓದುತ್ತಿದ್ದಾನೆ ಡ್ರಗ್ಸ್‌ಗೆ ಅಡಿಕ್ಟ್ ಆಗಿದ್ದಾನೆ. ನನ್ನ ಮಗನನ್ನ ಉಳಿಸಿಕೊಡಿ ಎಂದು ಕೈಮುಗಿದು ಕೇಳಿಕೊಂಡಿದ್ದರು. ಅಂದೇ ಈ ಬಗ್ಗೆ ಎಚ್ಚೆತ್ತುಕೊಂಡಿದ್ದರೆ ಈಗ ನಿಯಂತ್ರಣಕ್ಕೆ ತರಬಹುದಿತ್ತು. ಈಗಲಾದರೂ ಸರ್ಕಾರ ಈ ಬಗ್ಗೆ ಎಚ್ಚೆತ್ತುಕೊಂಡು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಶಿವಲಿಂಗೇಗೌಡ ಆಕ್ರೋಶ ವ್ಯಕ್ತಪಡಿಸಿದರು.

    ಎಂಬಿಬಿಎಸ್ ಮತ್ತು ಪಿಜಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಯಾರ ಕೈಯಲ್ಲಿದ್ದಾರೆ. ಇದೆಲ್ಲವೂ ಸರ್ಕಾರಕ್ಕೆ ಗೊತ್ತಿಲ್ಲವೇ. ಅದರ ಮೂಲ ಎಲ್ಲಿ ಅಂತ ನನಗೆ ಗೊತ್ತಿದೆ. ಆ ಮೂಲವನ್ನ ಬೈಯ್ಯಲು ಹೋದರೆ ಯಾರಿಗಾದರೂ ಬೇಜಾರಾಗುತ್ತೆ. ಯಾರೋ ನಾಲ್ಕು ಜನ ಆರ್ಥಿಕವಾಗಿ ಮುಂದುವರಿಯಲು ಯುವಕರನ್ನ ಹಾಳು ಮಾಡುವ ಕೆಟ್ಟ ಪ್ರವೃತ್ತಿ ಮಾಡುತ್ತಿದ್ದಾರೆ. ಇನ್ನಾದರೂ ಸರ್ಕಾರ ಡ್ರಗ್ಸ್ ವಿಚಾರದಲ್ಲಿ ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸಬೇಕೆಂದು ಶಾಸಕ ಶಿವಲಿಂಗೇಗೌಡ ಕಿಡಿಕಾರಿದ್ದಾರೆ.

  • ‘ಸತ್ತರೆ ಅಲ್ಲೇ ಸಾಯಲಿ’, ಹೊರ ರಾಜ್ಯದವರು ನಮ್ಮ ರಾಜ್ಯಕ್ಕೆ ಬರೋದು ಬೇಡ: ಶಿವಲಿಂಗೇಗೌಡ

    ‘ಸತ್ತರೆ ಅಲ್ಲೇ ಸಾಯಲಿ’, ಹೊರ ರಾಜ್ಯದವರು ನಮ್ಮ ರಾಜ್ಯಕ್ಕೆ ಬರೋದು ಬೇಡ: ಶಿವಲಿಂಗೇಗೌಡ

    ಹಾಸನ: ಯಾರು ಎಲ್ಲಿ ಬದುಕುತ್ತಿದ್ದಾರೆ ಅಲ್ಲೇ ಬದುಕಲಿ. ಸತ್ತರೆ ಅಲ್ಲೇ ಸಾಯಲಿ, ಬದುಕಿದರೆ ಅಲ್ಲೇ ಬದುಕಲಿ ಎಂದು ಶಾಸಕ ಶಿವಲಿಂಗೇಗೌಡ ಅವರು ಹೇಳಿದ್ದು, ಹೊರರಾಜ್ಯದಿಂದ ಹಾಸನಕ್ಕೆ ಬರುವವರಿಗೆ ಅವಕಾಶ ನೀಡದಂತೆ ಮನವಿ ಮಾಡಿದ್ದಾರೆ.

    ಕೊರೊನಾ ಕುರಿತಂತೆ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕ ಶಿವಲಿಂಗೇಗೌಡ ಅವರು, ಹೊರರಾಜ್ಯದಿಂದ ಹಾಸನಕ್ಕೆ ಬರುವವರಿಗೆ ಅವಕಾಶ ನೀಡದಂತೆ ಸಚಿವ ಮಾಧುಸ್ವಾಮಿಯವರಿಗೆ ಮನವಿ ಮಾಡಿದ್ದಾರೆ.

    ಇಂದು ಹಾಸನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಚಿವ ಮಾಧುಸ್ವಾಮಿ ನೇತೃತ್ವದಲ್ಲಿ ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳ ಸಭೆ ನಡೆಯುತ್ತಿತ್ತು. ಈ ವೇಳೆ ಮುಂಬೈನಿಂದ ಬಂದವರಿಂದ ಹಾಸನ ಗ್ರೀನ್‍ಝೋನ್ ಪಟ್ಟ ಕಳೆದುಕೊಂಡು ಜಿಲ್ಲೆಯ ಜನ ಆತಂಕಕ್ಕೊಳಪಟ್ಟ ವಿಚಾರವನ್ನು ಶಿವಲಿಂಗೇಗೌಡ ಅವರು ಪ್ರಸ್ತಾಪಿಸಿದರು.

    ಯಾರಿಗೂ ಹೊರರಾಜ್ಯದಿಂದ ಬರಲು ಅವಕಾಶ ನೀಡದಂತೆ ಮನವಿ ಮಾಡುತ್ತಿದ್ದೇನೆ. ಕಳೆದ 25 ವರ್ಷಗಳಿಂದ ಮುಂಬೈಯಲ್ಲಿ ವಾಸವಿದ್ದವರು ಈಗ ನಮ್ಮ ಜಿಲ್ಲೆ ಸೇಫ್ ಆಗಿದೆ ಎಂದು ಬರುತ್ತಿದ್ದಾರೆ. ಆದರೆ ಯಾರು ಎಲ್ಲಿ ಇದ್ದಾರೋ ಅಲ್ಲೇ ಇರಲಿ. ನಮ್ಮ ಜಿಲ್ಲೆ ಸೇಫ್ ಆಗಿದೆ. ಹೊರ ರಾಜ್ಯದವರ ಸಹವಾಸವೇ ಬೇಡ. ಅವರ ಜೀವನ ಅಲ್ಲಿ ಉತ್ತಮವಾಗಿದೆ. ಆದರೆ ಜೀವ ಭಯದಿಂದ ಮಾತ್ರ ಅವರು ಇಲ್ಲಿ ಬರಲು ಮುಂದಾಗುತ್ತಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರಬೇಕು ಎಂದರೇ ಇದಕ್ಕೆ ಅವಕಾಶ ನೀಡಬಾರದು. ಮೋದಿ ಅವರು ಯಾವ ದೃಷ್ಟಿಯಿಂದ ಈ ಬಗ್ಗೆ ಅವಕಾಶ ನೀಡಿದ್ದರೆ ಎಂದು ತಿಳಿದಿಲ್ಲ. ಆದರೆ ನಮ್ಮ ಜಿಲ್ಲೆ ಸೇಫ್ ಆಗಬೇಕು ಎಂದರೇ ಜಿಲ್ಲಾಧಿಕಾರಿಗಳು ತಮಗೆ ಲಭಿಸಿರುವ ಅಧಿಕಾರವನ್ನು ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.

  • 50 ಸಾವಿರ ಆಹಾರ ಧಾನ್ಯಗಳ ಕಿಟ್ ವಿತರಣೆಗೆ ಮುಂದಾದ ಶಿವಲಿಂಗೇಗೌಡ

    50 ಸಾವಿರ ಆಹಾರ ಧಾನ್ಯಗಳ ಕಿಟ್ ವಿತರಣೆಗೆ ಮುಂದಾದ ಶಿವಲಿಂಗೇಗೌಡ

    ಹಾಸನ: ಹೆಮ್ಮಾರಿ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕೈಗೊಂಡಿರುವ ಲಾಕ್‍ಡೌನ್‍ನಿಂದಾಗಿ ಜನ ಸಾಮಾನ್ಯರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಹೀಗಾಗಿ 50 ಸಾವಿರ ಆಹಾರ ಧಾನ್ಯಗಳ ಕಿಟ್ ವಿತರಿಸಲು ಶಾಸಕ ಶಿವಲಿಂಗೇಗೌಡ ಮುಂದಾಗಿದ್ದಾರೆ.

    ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಅವರು ಜನರಿಗೆ ಅನುಕೂಲವಾಗಲಿ ಎಂದು ಈಗಾಗಲೇ ಆಹಾರ ಧಾನ್ಯ ತುಂಬಿದ ಸುಮಾರು 50 ಸಾವಿರ ಕಿಟ್‍ಗಳನ್ನು ಸಿದ್ಧಪಡಿಸಿದ್ದಾರೆ. ಕಿಟ್‍ಗಳು ತಮ್ಮ ಕ್ಷೇತ್ರದ ವ್ಯಾಪ್ತಿಗೆ ಬರುವ 530 ಹಳ್ಳಿಗೂ ತಲುಪಬೇಕು ಎಂಬ ಉದ್ದೇಶದಿಂದ ಈಗಾಗಲೇ ಶಾಸಕ ಶಿವಲಿಂಗೇಗೌಡ ಕಿಟ್ ಹಂಚಿಕೆ ಮಾಡುತ್ತಿದ್ದಾರೆ.

    ಶಿವಲಿಂಗೇಗೌಡ ಅವರು ಕೆಲವೊಂದು ಹಳ್ಳಿಗಳಿಗೆ ತಾವೇ ಸ್ವತಃ ತೆರಳಿ ಬೆಂಬಲಿಗರೊಂದಿಗೆ ಕಿಟ್ ಹಂಚಿಕೆ ಮಾಡುತ್ತಿದ್ದಾರೆ. ಇನ್ನುಳಿದ ಹಳ್ಳಿಗಳಲ್ಲಿ ತಮ್ಮ ಕಾರ್ಯಕರ್ತರ ಮೂಲಕ ಕಿಟ್ ಹಂಚುತ್ತಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸಕರು, ಎಷ್ಟು ಜನರಿಗೆ ಅಗತ್ಯವಿದೆಯೋ ಅವರಿಗೆ ತಮ್ಮ ಕೈಲಾದ ಮಟ್ಟಿಗೆ ಆಹಾರ ಧಾನ್ಯದ ಕಿಟ್ ತಲುಪಿಸುತ್ತಿದ್ದೇವೆ. ಒಂದು ವೇಳೆ ಏಪ್ರಿಲ್ ತಿಂಗಳ ನಂತರವೂ ಲಾಕ್‍ಡೌನ್ ಮುಂದುವರಿದರೆ ಕೈಲಾದ ಸಹಾಯ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

  • ಮೋದಿ ಬಂದರೆ ಎತ್ತಿ ದವಡೆಗೆ ಹೊಡೆಯಿರಿ: ಶಾಸಕ ಶಿವಲಿಂಗೇಗೌಡ

    ಮೋದಿ ಬಂದರೆ ಎತ್ತಿ ದವಡೆಗೆ ಹೊಡೆಯಿರಿ: ಶಾಸಕ ಶಿವಲಿಂಗೇಗೌಡ

    ಹಾಸನ: ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಎನಾಯ್ತು ಅಂತ ಪ್ರಶ್ನಿಸಿ, ಎಲ್ಲರು ಸೇರಿ ಎತ್ತಿದವಡೆಗೆ ಹೊಡೆಯಿರಿ ಎಂದು ಜಿಲ್ಲೆಯ ಅರಸೀಕೆರೆ ತಾಲೂಕಿನ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಭಾಷಣ ಮಾಡಿದ್ದಾರೆ.

    ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತ ಪ್ರಧಾನಿ ಮೋದಿ ವಿರುದ್ಧ ಶಿವಲಿಂಗೇಗೌಡ ಕಾರ್ಯಕರ್ತರನ್ನು ಎತ್ತಿಕಟ್ಟುವ ರೀತಿ ಭಾಷಣ ಮಾಡಿ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ.

    ನಾನು ನೇರವಾಗಿ ಪ್ರಧಾನಿ ಅವರನ್ನೇ ಪ್ರಶ್ನಿಸುತ್ತಿದ್ದೇನೆ, ನೀವು ಆಡಳಿತಕ್ಕೆ ಬರುವ ಮುನ್ನ ದೇಶದ ರೈತಾಪಿ ವರ್ಗಕ್ಕೆ ಕೊಟ್ಟ ವಾಗ್ದಾನ ಏನು? ರಾಜಕಾರಣಿಗಳು ಸ್ವೀಸ್ ಬ್ಯಾಂಕ್‍ನಲ್ಲಿಟ್ಟಿರುವ ಕಪ್ಪು ಹಣವನ್ನು ತಂದು ರೈತರ ಅಕೌಂಟ್‍ಗೆ 10, 15 ಲಕ್ಷ ರೂ. ಹಾಕುತ್ತೇನೆ ಎಂದು ಭರವಸೆ ನೀಡಿದ್ದೀರಿ. ಆ ಭರವಸೆ ಏನಾಯ್ತು? ಈ ಬಗ್ಗೆ ಬಿಜೆಪಿಯವರನ್ನು ನೀವು ಕೇಳಬೇಕು. ಅವರನ್ನು ಪ್ರಶ್ನಿಸುವುದನ್ನು ನೀವು ಬೆಳೆಸಿಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

    ಮೋದಿ ಅವರು ರಾಜ್ಯಕ್ಕೆ ಬಂದರೆ ನೀವೆಲ್ಲ ಕೇಳಬೇಕು ಕಪ್ಪು ಹಣ ಎಲ್ಲಿ? 15 ಲಕ್ಷ ಎಲ್ಲಿ ಎಂದು ಮೋದಿಗೆ ದವಡೆಗೆ ಹೊಡೆಯಿರಿ ಎಂದು ಕಾರ್ಯಕರ್ತರಿಗೆ ಪ್ರಚೋದನೆ ನೀಡಿದ್ದಾರೆ. ಕಪ್ಪು ಹಣ ಹೊರತರುತ್ತೇವೆ ಅಂತ ನೋಟ್ ಬ್ಯಾನ್ ಮಾಡಿದರು. ಅದರಿಂದ ಬಡವರಿಗೆ ಏನು ಲಾಭವಾಯ್ತು? ಚಾಲ್ತಿಯಲ್ಲಿದ್ದ ನೋಟ್‍ಗಳೆಲ್ಲ ಬ್ಯಾಂಕ್ ಸೇರಿದ್ದು ಬಿಟ್ಟರೆ, ಕಪ್ಪು ಹಣ ಹೊರ ಬರಲಿಲ್ಲ. ಬಡವರಿಗೆ, ರೈತರಿಗೆ ಹಣ ಸಿಗಲಿಲ್ಲ ಎಂದು ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದರು.