Tag: ಶಾಸಕ ಸತ್ಯನಾರಾಯಣ್

  • ಶಿರಾ ಉಪಚುನಾವಣೆ- ಅಮ್ಮಾಜಮ್ಮಗೆ ಜೆಡಿಎಸ್ ಟಿಕೆಟ್

    ಶಿರಾ ಉಪಚುನಾವಣೆ- ಅಮ್ಮಾಜಮ್ಮಗೆ ಜೆಡಿಎಸ್ ಟಿಕೆಟ್

    ಬೆಂಗಳೂರು: ಶಿರಾ ಉಪಚುನಾವಣೆ ಕ್ಷೇತ್ರ ರಂಗೇರುತ್ತಿದ್ದು, ಜೆಡಿಎಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಫೈನಲ್ ಮಾಡಿ ದಿವಂಗತ ಮಾಜಿ ಶಾಸಕ ಸತ್ಯನಾರಾಯಣ್ ಅವರ ಪತ್ನಿ ಅಮ್ಮಾಜಮ್ಮ ಅವರಿಗೆ ಟಿಕೆಟ್ ಘೋಷಿಸಿದೆ.

    ನವೆಂಬರ್ 3 ರಂದು ತುಮಕೂರಿನ ಶಿರಾ ಉಪಚುನಾವಣೆ ನಡೆಯಲಿದ್ದು, ಜೆಡಿಎಸ್ ವರಿಷ್ಠ ಎಚ್.ಡಿ.ದೇವೆಗೌಡ ಅವರು ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದಾರೆ. ಜೆಡಿಎಸ್ ಶಾಸಕ ಬಿ ಸತ್ಯನಾರಾಯಣ ಅವರ ನಿಧನದಿಂದಾಗಿ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಈಗಾಗಲೇ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನ ಈಗಾಗಲೇ ಫೈನಲ್ ಮಾಡಿದೆ.

    ದಿವಂಗತ ಮಾಜಿ ಶಾಸಕ ಸತ್ಯನಾರಾಯಣ್ ಅವರ ಪತ್ನಿ ಅಮ್ಮಾಜಮ್ಮ ಅವರಿಗೆ ಜೆಡಿಎಸ್ ಟಿಕೆಟ್ ನೀಡುವ ಮೂಲಕ ಗೆಲುವಿನ ಲೆಕ್ಕಾಚಾರವನ್ನು ಮಾಡಿದೆ. ಈ ಮೊದಲು ಸತ್ಯನಾರಾಯಣ್ ಅವರ ಮಗ ಸತ್ಯ ಪ್ರಕಾಶ್‍ಗೆ ಟಿಕೆಟ್ ನೀಡುತ್ತಾರೆ ಎನ್ನಲಾಗಿತ್ತು.

    ಕಳೆದ ಚುನಾವಣೆಯಲ್ಲಿ ಗೆಲುವು ಪಡೆದಿದ್ದ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಭಾರೀ ಪೈಪೋಟಿ ನಡೆದಿದ್ದರೇ, ಬಿಜೆಪಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಇತ್ತ ಶಿರಾ ಕ್ಷೇತ್ರದೊಂದಿಗೆ ಆರ್.ಆರ್ ನಗರ ಉಪಚುನಾವಣೆಯೂ ನ.3 ರಂದು ನಡೆಯಲಿದ್ದು, ಜೆಡಿಎಸ್ ಪಕ್ಷ ಇನ್ನಷ್ಟೇ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕಿದೆ.

  • ದೇವಿಯ ಬಲಿಗಾಗಿ ಬಿಟ್ಟ ಕೋಣದಿಂದ ವ್ಯಕ್ತಿ ಬಲಿ!

    ದೇವಿಯ ಬಲಿಗಾಗಿ ಬಿಟ್ಟ ಕೋಣದಿಂದ ವ್ಯಕ್ತಿ ಬಲಿ!

    ತುಮಕೂರು: ಕೋಣ ತಿವಿತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಹೊನ್ನೇಹಳ್ಳಿಯಲ್ಲಿ ನಡೆದಿದೆ.

    ದಾಸಮಾರಪ್ಪ(65) ಮೃತ ದುರ್ದೈವಿ. ದಾಳಿ ನಡೆಸಿದ ಕೋಣವನ್ನು ಕೆಲವು ವರ್ಷಗಳ ಹಿಂದೆ ಮಾರಮ್ಮ ದೇವಿ ಬಲಿಗಾಗಿ ಬಿಡಲಾಗಿತ್ತು. ದಾಸಮಾರಪ್ಪ ಹೊಲದಲ್ಲಿ ಕೆಲಸ ಮಾಡುವ ವೇಳೆ ಏಕಾಏಕಿ ಕೋಣ ದಾಳಿ ಮಾಡಿದ್ದು, ಬಲವಾಗಿ ತಿವಿದಿದ್ದರಿಂದ ದಾಸಮಾರಪ್ಪ ಮೃತಪಟ್ಟಿದ್ದಾರೆ.

    ಘಟನಾ ಸ್ಥಳಕ್ಕೆ ಶಾಸಕ ಸತ್ಯನಾರಾಯಣ್ ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಕೋಣನ ಹಾವಳಿ ಹಾಗೂ ಆರ್ಭಟಕ್ಕೆ ಹೊನ್ನೇನಹಳ್ಳಿ ಗ್ರಾಮಸ್ಥರು ತತ್ತರಿಸಿದ್ದು, ಅದನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಈಗ ದೌಡಾಯಿಸಿದ್ದಾರೆ.