Tag: ಶಾಸಕ ಸಿಟಿ ರವಿ

  • ಸ್ಪೀಕರ್ ಮಾತು, ಕೃತಿಗೆ ಸಂಬಂಧವೇ ಇಲ್ಲದಂತೆ ನಡೆದುಕೊಳ್ತಿದ್ದಾರೆ – ಸಿಟಿ ರವಿ ಅಸಮಾಧಾನ

    ಸ್ಪೀಕರ್ ಮಾತು, ಕೃತಿಗೆ ಸಂಬಂಧವೇ ಇಲ್ಲದಂತೆ ನಡೆದುಕೊಳ್ತಿದ್ದಾರೆ – ಸಿಟಿ ರವಿ ಅಸಮಾಧಾನ

    ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅತೃಪ್ತಿ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್ ಪಕ್ಷದ ಬಂಡಾಯ ಶಾಸಕರನ್ನು ಅನರ್ಹ ಮಾಡಿರುವ ಸ್ಪೀಕರ್ ನಿರ್ಧಾರಕ್ಕೆ ಬಿಜೆಪಿ ಶಾಸಕ ಸಿಟಿ ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಬಿಎಸ್‍ ಯಡಿಯೂರಪ್ಪ ಅವರು ಸಿಎಂ ಆಗುತ್ತಿರುವ ಕುರಿತು ಸಂತಸ ವ್ಯಕ್ತಪಡಿಸಿ ಮಲ್ಲೇಶ್ವರದಲ್ಲಿರುವ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಮಾತನಾಡಿದ ಅವರು, ವಿಧಾನ ಸಭಾಧ್ಯಕ್ಷರು ನಿನ್ನೆ ತೆಗೆದುಕೊಂಡ ನಿರ್ಣಯ ಸರಿಯಿಲ್ಲ. ಕೆಲ ತಿಂಗಳ ಹಿಂದೆ ಕೊಟ್ಟಿರುವ ಶಾಸಕರ ಅನರ್ಹ ದೂರಿಗೆ ಈಗ ಅವರನ್ನು ಅನರ್ಹ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ರಾಜೀನಾಮೆ ವಿಚಾರವಾಗಿ ತೀರ್ಮಾನ ಮಾಡಿ ಎಂದು ಹೇಳಿದ್ದರು ಕೂಡ ಅವರು ಅನರ್ಹ ಮಾಡಿದ್ದಾರೆ. ಆ ಮೂಲಕ ಸ್ಪೀಕರ್ ಮಾತು ಮತ್ತು ಕೃತಿಗೆ ಸಂಬಂಧವೇ ಇಲ್ಲದಂತೆ ನಡೆದುಕೊಳ್ಳುತ್ತಿದ್ದಾರೆ ಎಂದರು.

    ಪತ್ರಿಕಾಗೋಷ್ಠಿ ನಡೆಸುವ ಸಂದರ್ಭದಲ್ಲಿ ಸ್ಪೀಕರ್ ಅವರಿಗೆ ನಾನು ತಪ್ಪು ಮಾಡುತ್ತಿದ್ದೇನೆ ಎನ್ನುವಂತೆ ಕಂಡು ಬಂದರು. ಆದ್ದರಿಂದಲೇ ಅವರು ಒಂದೂವರೆ ಗಂಟೆಗಳ ಕಾಲ ವಿವರಣೆ ನೀಡಿದ್ದಾರೆ. ಸಭಾಧ್ಯಕ್ಷರ ಸ್ಥಾನದಲ್ಲಿ ಇರುವ ಅವರು, ಪಕ್ಷಪಾತಿಯಂತೆ ನಡೆದುಕೊಂಡಿದ್ದಾರೆ. ಅವರಿಗೆ ಪ್ರಾಮಾಣಿಕ ಕಾಳಜಿ ಇದ್ದಿದ್ದರೆ ಕಳೆದ 14 ತಿಂಗಳಿಂದ ಪಂಚ ತಾರಾ ಹೋಟೆಲ್‍ನಲ್ಲಿದ್ದುಕೊಂಡೇ ಆಡಳಿತ ಮಾಡುತ್ತಿದ್ದ ಕುಮಾರಸ್ವಾಮಿ ಅವರ ವಾಸ್ತವ್ಯದಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ರೆಸಾರ್ಟ್ ವಾಸ್ತವ್ಯದ ಬಗ್ಗೆಯೂ ಮಾತನಾಡಬೇಕಿತ್ತು. ಅಲ್ಲದೇ ಎಲ್ಲೋ ಒಂದು ಕಡೆ ಸ್ಪೀಕರ್ ಅವರ ನಡೆ ಅನುಮಾನ ಹುಟ್ಟಿಸಿದೆ. ಸಭಾಧ್ಯಕ್ಷರೇ ಸುಪ್ರೀಂ ಅಲ್ಲ, ಅಂತಿಮವಾಗಿ ನ್ಯಾಯಾಲಯ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂಬ ವಿಶ್ವಾಸ ಇದೆ ಎಂದರು.

    ಬಿಎಸ್‍ವೈ ಅವರು ಬಹುಮತ ಸಾಬೀತು ಪಡಿಸುವ ಬಗ್ಗೆ ಕೆಲವರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ಬಹುಮತ ಸಾಬೀತು ಪಡೆಸಬೇಕಾಗಿರುವುದು ವಿಧಾನ ಸೌಧದಲ್ಲಿ ವಿನಃ, ರಾಜಭವನದಲ್ಲಿ ಅಲ್ಲ. ಎಲ್ಲರೂ ಕಾದು ನೋಡಿ. ಸದನದಲ್ಲೇ ಕುಮಾರಸ್ವಾಮಿ ಅವರ ವಿಶ್ವಾಸ ಮತಯಾಚನೆ ನಡೆದಿದ್ದು, ಅಲ್ಲಿ ಅವರು ವಿಫಲರಾದರು. ಆದರೆ ಬಿಎಸ್‍ವೈ ಅವರು ಖಂಡಿತ ಬಹುಮತ ಸಾಬೀತು ಪಡೆಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ಸಿಎಂ ಎಲ್ಲಿ ಮಲಗಿದ್ದರು ಎಂಬುವುದು ರಾಜ್ಯದ ಜನತೆಗೆ ಗೊತ್ತಾಗದಿರಲಿ – ಸಿಟಿ ರವಿ ವ್ಯಂಗ್ಯ

    ಸಿಎಂ ಎಲ್ಲಿ ಮಲಗಿದ್ದರು ಎಂಬುವುದು ರಾಜ್ಯದ ಜನತೆಗೆ ಗೊತ್ತಾಗದಿರಲಿ – ಸಿಟಿ ರವಿ ವ್ಯಂಗ್ಯ

    ದಾವಣಗೆರೆ: ರಾಜ್ಯದ ಜನರ ಸಾಲಮನ್ನಾ ಬಗ್ಗೆ ಕೇಳಿದರೆ ಸಿಎಂ ಕುಮಾರಸ್ವಾಮಿ ಅವರಿಗೆ ಸಿಟ್ಟು ಬರುತ್ತದೆ. ರೈತ ಮಹಿಳೆಗೆ ಇಷ್ಟು ದಿನ ಎಲ್ಲಿ ಮಲಗಿದ್ದೆ ಎಂದು ಕೇಳುವ ಸಿಎಂ ಅವರು ಎಲ್ಲಿ ಮಲಗಿದ್ದರು ಎಂದು ರಾಜ್ಯದ ಜನರಿಗೆ ಗೊತ್ತಾಗದಿರಲಿ ಎಂದು ಬಿಜೆಪಿ ಶಾಸಕ ಸಿಟಿ ರವಿ ವ್ಯಂಗ್ಯವಾಡಿದ್ದಾರೆ.

    ನಗರದ ಟೆನಿಸ್ ಟೂರ್ನಿಯ ಸಮಾರೋಪ ಸಮಾರಂಭಕ್ಕೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳಿಗೆ ಯಾವಾಗಲೂ ಸಿಟ್ಟು ಮಾಡಿಕೊಳ್ಳುವುದು ರೂಢಿ ಆಗಿದೆ. ಅವರ ತಪ್ಪುಗಳ ಬಗ್ಗೆ ಹೇಳಿದರೇ ಸಿಟ್ಟು ಮಾಡಿಕೊಳ್ಳುತ್ತಾರೆ. ಸಾಲಮನ್ನಾ ಬಗ್ಗೆ ಕೇಳಿದರೆ ಕುಮಾರಸ್ವಾಮಿಯವರು ರೈತರ ಮೇಲೆ ಕೋಪ ಮಾಡಿಕೊಳ್ಳುತ್ತಾರೆ. ಹಾಗೆಯೇ ಕೇಂದ್ರದ ನೀಡಿದ ಅನುದಾನದ ಬಗ್ಗೆ ಹೇಳಿದರೂ ಸಂಸದರ ವಿರುದ್ಧ ಸಿಟ್ಟಾಗುತ್ತಿದ್ದಾರೆ ಎಂದು ಕಿಡಿಕಾರಿದರು.

    ರಾಜ್ಯದ ರೈತರು ಏನಾದರು ಹೋರಾಟ ಮಾಡಿದರೆ, ರೈತ ಮಹಿಳೆಗೆ ಎಲ್ಲಿ ಮಲಗಿದ್ದೆ ಎಂದು ಸಿಎಂ ಕೇಳುತ್ತಾರೆ. ಆದರೆ ಸಿಎಂ ಕುಮಾರಸ್ವಾಮಿ ಅವರು ಎಲ್ಲಿ ಮಲಗಿದ್ದರು ಎಂದು ಹೇಳಿದರೆ ರಾಜ್ಯದಲ್ಲಿ ಅವರಿಗೆ ಯಾವ ಗೌರವ ಉಳಿಯುವುದಿಲ್ಲ. ಸಿಎಂ ಮಲಗಿದ್ದು ರಾಜ್ಯದ ಜನತೆಗೆ ಗೊತ್ತಾಗದ ಹಾಗೇ ಇರಲಿ ಎಂದು ಬಿಡಿ ವ್ಯಂಗ್ಯವಾಡಿದರು.

    ಸಿಎಂ ಅವರು ಅಧಿಕಾರಕ್ಕೆ ಬರುವ ಮುನ್ನ ರೈತರ ಸಾಲಮನ್ನಾ ಬಗ್ಗೆ ಹೇಳಿದ್ದರು. ಅಲ್ಲದೇ ಮಹಿಳಾ ಸಂಘಗಳು ಹಾಗೂ ಖಾಸಗಿ ಸಾಲಮನ್ನಾವನ್ನು ಹೇಳಿದ್ದಾರೆ. ಆದರೆ ಮನುಷ್ಯನಿಗೆ ಅದರಲ್ಲೂ ನಮ್ಮಂತಹ ರಾಜಕೀಯ ವ್ಯಕ್ತಿಗಳಿಗೆ ಜಾಸ್ತಿ ಮರೆವು ಅದ್ದರಿಂದ ನಾವು ಮಾಧ್ಯಮಗಳ ಮೂಲಕ ನೆನಪು ಮಾಡುತ್ತೇವೆ. ಒಂದೊಮ್ಮೆ ಮಾಧ್ಯಮಗಳು ಈ ಕುರಿತು ನೆನಪು ಮಾಡಿದರೆ ಅವರ ಮೇಲು ಮುಖ್ಯಮಂತ್ರಿಗಳಿಗೆ ಸಿಟ್ಟು ಬರುತ್ತದೆ ಎಂದು ಆರೋಪಿಸಿದರು.

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಜಿ ವರದಿ ಬಗ್ಗೆ ಹಗುರವಾಗಿ ಮಾತಾಡುತ್ತಿದ್ದಾರೆ. 36 ಸಾವಿರ ಕೋಟಿ ರೂಪಾಯಿ ಲೆಕ್ಕ ಕೇಳಿದರೆ ಸಮರ್ಪಕ ಉತ್ತರ ನೀಡುತ್ತಿಲ್ಲ. ಈ ವಿಚಾರವನ್ನ ಬೆಳಗಾವಿ ಅಧಿವೇಶನ ದಲ್ಲಿ ಪ್ರಬಲವಾಗಿ ಪ್ರಶ್ನಿಸಲಾಗುವುದು. ಸಿದ್ದರಾಮಯ್ಯನವರೇ ಸದಸಕ್ಕೆ ಗೈರು ಹಾಜರಾಗುತ್ತಿದ್ದಾರೆ. ಅವರಿಗೂ ಈ ಸರ್ಕಾರ ಬಹಳ ದಿನ ಉಳಿಯಬಾರದು ಎಂದು ಮನಸ್ಸಿನಲ್ಲಿ ಇದ್ದಂತಿದೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿಎಂ ಎಚ್‍ಡಿಕೆ ಕೇವಲ ಪೇಪರ್ ಟೈಗರ್ -ಸಿಟಿ ರವಿ ವ್ಯಂಗ್ಯ

    ಸಿಎಂ ಎಚ್‍ಡಿಕೆ ಕೇವಲ ಪೇಪರ್ ಟೈಗರ್ -ಸಿಟಿ ರವಿ ವ್ಯಂಗ್ಯ

    ಚಿಕ್ಕಮಗಳೂರು: ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿನ ರೈತರ ಸಾಲ ಮನ್ನಾ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ ಅವರು ಪೇಪರ್ ಟೈಗರ್ ಆಗಿದ್ದಾರೆ ಎಂದು ಶಾಸಕ ಸಿ.ಟಿ ರವಿ ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಸಿಟಿ ರವಿ, ಸರ್ಕಾರ ಮುಖ್ಯ ಕಾರ್ಯದರ್ಶಿಗಳಿಂದ ಸಾಲಮನ್ನಾ ಕುರಿತು ಆದೇಶ ಹೊರಡಿಸಬೇಕು. ರೈತರ ಸಾಲಕ್ಕೆ ಸರ್ಕಾರವೇ ಜವಾಬ್ದಾರಿ ಆಗಿರಲಿದೆ ಎಂದು ಸರ್ಕಾರ ಬ್ಯಾಂಕುಗಳಿಗೆ ತಿಳಿಸಬೇಕು. ಆಗ ಮಾತ್ರ ಬ್ಯಾಂಕುಗಳು ರೈತರಿಗೆ ಸಾಲದ ನೋಟಿಸ್ ನೀಡದಂತೆ ಮಾಡಬಹುದು. ಸರ್ಕಾರ ಸಾಲಮನ್ನಾ ಹೇಳಿಕೆ ನೀಡಿದರೆ ಸಾಲದು, ಅದನ್ನು ಕಾರ್ಯರೂಪಕ್ಕೆ ತರಬೇಕು. ಆದರೆ ಈ ವಿಚಾರದಲ್ಲಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ಪೇಪರ್ ಟೈಗರ್ ಆಗಿದ್ದಾರೆ ಎಂದರು.

    ಇದೇ ವೇಳೆ ಟಿಪ್ಪು ಜಯಂತಿ ಆಚರಣೆಗೆ ಸಿದ್ಧತೆ ನಡೆಸುತ್ತಿರುವ ಸರ್ಕಾರದ ನಡೆ ವಿರುದ್ಧ ಕಿಡಿಕಾರಿದ ಅವರು, ಟಿಪ್ಪು ಇವರ ಅಪ್ಪನ, ತಾತನ ಅಥವಾ ಮುತ್ತಾತನಾ? ಟಿಪ್ಪು ಜಯಂತಿ ಯಾಕೆ? ಇದಕ್ಕೆ ನಮ್ಮ ವಿರೋಧವಿದೆ. ಕಾಂಗ್ರೆಸ್ ಮಾಡಿದ ತಪ್ಪನ್ನ ಮೈತ್ರಿ ಸರ್ಕಾರವೂ ಮಾಡಲು ಮುಂದಾಗಿದೆ. ರಾಜ್ಯದಲ್ಲಿ ಯಾವುದೇ ಅನಾಹುತ ಸಂಭವಿಸಿದರು ಸರ್ಕಾರವೇ ಹೊಣೆಯಾಗಬೇಕು. ಸಮ್ಮಿಶ್ರ ಸರ್ಕಾರ ಈ ನಡೆಗೆ ಮುಂದಿನ ದಿನಗಳಲ್ಲಿ ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

    ಟಿಪ್ಪು ಕನ್ನಡ ವಿರೋಧಿಯಾಗಿದ್ದು, ಆಡಳಿತ ಭಾಷೆಯನ್ನು ಪರ್ಷಿಯನ್ ಭಾಷೆಗೆ ಬದಲಾವಣೆ ಮಾಡಿದ್ದ. ರಾಜ್ಯದ ಹಲವು ಜಿಲ್ಲೆಗಳ ಹೆಸರನ್ನು ಬದಲಾಯಿಸಿದ ಕೀರ್ತಿ ಟಿಪ್ಪುನದ್ದು. ಅಕ್ರಮಣ ಮಾಡಿದವರ ಜಯಂತಿ ನಾಡಿಗೆ ಒಳ್ಳೆಯ ಬೆಳೆವಣಿಗೆಯಲ್ಲ. ಕೇವಲ ಮತಗಳ ಆಸೆಗೆ ಬಾಬರ್, ಬಿನ್ ಲಾಡೆನ್ ಆಚರಣೆ ಮಾಡಿದರೂ ಆಚ್ಚರ್ಯವಿಲ್ಲ ಎಂದು ಆರೋಪಿಸಿದ ಸಿಟಿ ರವಿ ಅವರು ಭಾವೈಕ್ಯತೆಯ ಉದ್ದೇಶದಿಂದ ಶರೀಫ್ ರ ಜಯಂತಿ ಆಚರಿಸಲಿ ಎಂಬ ಸಲಹೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv