Tag: ಶಾಸಕ ಸುರೇಶ್

  • ತರೀಕೆರೆ ಶಾಸಕ ಸುರೇಶ್‍ಗೆ ಕೊರೊನಾ ಪಾಸಿಟಿವ್

    ತರೀಕೆರೆ ಶಾಸಕ ಸುರೇಶ್‍ಗೆ ಕೊರೊನಾ ಪಾಸಿಟಿವ್

    ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಬಿಜೆಪಿ ಶಾಸಕ ಡಿ.ಎಸ್.ಸುರೇಶ್‍ಗೆ ಕೊರೊನಾ ಪಾಸಿಟಿವ್ ಬಂದಿದ್ದು, ಶಿವಮೊಗ್ಗದ ನವಸಂಜೀವಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಸದ್ಯ ಹೋಮ್ ಐಸೋಲೇಶನ್‍ಗೆ ಒಳಗಾಗಿದ್ದಾರೆ.

    ಕಳೆದ ಸೋಮವಾರ ಬೆಂಗಳೂರಿಗೆ ಹೋಗಿ ಬಂದಿದ್ದ ಶಾಸಕ ಸುರೇಶ್, ಆರು ದಿನಗಳಿಂದ ಕ್ಷೇತ್ರದಲ್ಲೇ ಇದ್ದರು. ಹಬ್ಬ ಕಳೆದ ಮರುದಿನದಿಂದ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಇದೀಗ ಸುರೇಶ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆ ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಸ್ವತಃ ಶಾಸಕ ಸುರೇಶ್ ಮನವಿ ಮಾಡಿದ್ದಾರೆ.

    ಶುಕ್ರವಾರ ಅಜ್ಜಂಪುರ ತಾಲೂಕಿನಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ನನಗೆ ಸ್ವಲ್ಪ ಮೈ ಹುಷಾರಿಲ್ಲ ಎಂದು ಹೇಳಿದ್ದರಂತೆ. ಅಜ್ಜಂಪುರ ತಾಲೂಕಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 60-70 ಜನ ಭಾಗವಹಿಸಿದ್ದರು. ಇಂದು ಕೊರೊನಾ ಧೃಡಪಟ್ಟಿದ್ದು, ಶಿವಮೊಗ್ಗದಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲೇ ಐಸೋಲೇಶನ್‍ನಲ್ಲಿದ್ದಾರೆ. ಅವರ ಅಭಿಮಾನಿಗಳು ಶೀಘ್ರವೇ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ.

  • ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ ವೇಳೆ ಹೈಡ್ರಾಮ – `ಕೈ, ಕಮಲ’ ಕಾರ್ಯಕರ್ತರ ನಡ್ವೆ ಫೈಟ್

    ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ ವೇಳೆ ಹೈಡ್ರಾಮ – `ಕೈ, ಕಮಲ’ ಕಾರ್ಯಕರ್ತರ ನಡ್ವೆ ಫೈಟ್

    ಚಿಕ್ಕಮಗಳೂರು: ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸೇರಿದಂತೆ ಕ್ಷೇತ್ರದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಪರಸ್ಪರ ವಾಗ್ವಾದ ನಡೆಸಿ ಹೈಡ್ರಾಮ ನಡೆಸಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ನರಸೀಪುರ ಗ್ರಾಮದಲ್ಲಿ ನಡೆದಿದೆ.

    ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಇಂದು ಶಂಕು ಸ್ಥಾಪನೆ ನಡೆಸಲು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ ಶಾಸಕ ಸುರೇಶ್ ಆಗಮಿಸಿದ್ದರು. ಈ ವೇಳೆ ಸಂಸದರು ಹಾಗೂ ಶಾಸಕರ ಎದುರೇ ಎರಡು ಪಕ್ಷದ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.

    ಮಾಜಿ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಶಾಸಕ ಸುರೇಶ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಈ ವೇಳೆ ಮಧ್ಯ ಪ್ರವೇಶ ಮಾಡಿದ ಪೊಲೀಸರು ಪ್ರತಿಭಟನೆಗೆ ಮುಂದಾದ ಶ್ರೀನಿವಾಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಬಂಧನ ಮಾಡಿ ಕರೆದ್ಯೊಯ್ದರು. ಇದರಿಂದ ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಇತ್ತ ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರ ಹರಸಾಹಸ ಪಟ್ಟರು. ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಮಾಜಿ ಶಾಸಕ ಶ್ರೀನಿವಾಸ್ ಅವರು, ಭದ್ರಾ ಮೇಲ್ದಂಡೆ ಯೋಜನೆ ವ್ಯಾಪ್ತಿಗೆ ಬರುವ ಸುಮಾರು 59 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಇದ್ದ ವೇಳೆಯೇ ಈ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದರು. ಆದರೆ ಇಂದು ಬಿಜೆಪಿ ಶಾಸಕರು ಮತ್ತೆ ಶಂಕುಸ್ಥಾಪನೆ ಮಾಡಲು ಮುಂದಾಗಿದ್ದಾರೆ. ಯೋಜನೆ ಆರಂಭವಾಗಿಯೇ 6 ತಿಂಗಳು ಆಗಿದೆ ಎಂದು ಆರೋಪ ಮಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಾವು ಯಾವುದೇ ಹಣವನ್ನು ಹಂಚಿಲ್ಲ, ಮಗಳ ಮೇಲೆ ಹಲ್ಲೆ ನಡೆಸಲಾಗಿದೆ: ಸುರೇಶ್ ಕುಮಾರ್

    ನಾವು ಯಾವುದೇ ಹಣವನ್ನು ಹಂಚಿಲ್ಲ, ಮಗಳ ಮೇಲೆ ಹಲ್ಲೆ ನಡೆಸಲಾಗಿದೆ: ಸುರೇಶ್ ಕುಮಾರ್

    ಬೆಂಗಳೂರು: ನಗರದ ರಾಜಾಜಿನಗರದಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದ ಆರೋಪದಲ್ಲಿ ನನ್ನ ಪುತ್ರಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನುವ ಸುದ್ದಿ ಅಪ್ಪಟ ಸುಳ್ಳು ಎಂದು ಬಿಜೆಪಿ ಶಾಸಕ, ಪಕ್ಷದ ಅಭ್ಯರ್ಥಿ ಸುರೇಶ್ ಕುಮಾರ್ ಅವರು ಸ್ಪಷ್ಟ ಪಡಿಸಿದ್ದಾರೆ.

    ಬೆಂಗಳೂರಿನ ವೆಸ್ಟ್ ಆಫ್ ಕಾರ್ಡ್ ರೋಡ್‍ನಲ್ಲಿ ಮತದಾರರಿಗೆ ಶಾಸಕ ಸುರೇಶ್ ಕುಮಾರ್ ಪುತಿ ಡಾ. ದಿಶಾ ಹಣ ಹಂಚುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಶಾಸಕ ಸುರೇಶ್ ಕುಮಾರ್ ಫೇಸ್‍ಬುಕ್ ನಲ್ಲಿ ವಿಡಿಯೋ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ.

    ನನ್ನ ಮಗಳ ವಿರುದ್ಧ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡಲಾಗುತ್ತಿದೆ. ನಾವು ಅಥವಾ ನಮ್ಮ ಪಕ್ಷದ ಯಾವುದೇ ಕಾರ್ಯಕರ್ತರು ಇಂತಹ ಕೃತ್ಯದಲ್ಲಿ ಭಾಗಿಯಾಗಿಲ್ಲ. ಮಗಳು ದಿಶಾ ಇಂದು ದೆಹಲಿಯಿಂದ ಆಗಮಿಸಿರುವ ನಮ್ಮ ಪಕ್ಷದ ಸಾಮಾಜಿಕ ಜಾಲತಾಣದ ತಂಡದ ಜೊತೆ ಚರ್ಚೆ ನಡೆಸುತ್ತಿದ್ದಾಳೆ. ಪಕ್ಷದಲ್ಲಿ ತಮ್ಮ ಮಗಳು ಸಾಮಾಜಿಕ ಮಾಧ್ಯಮಗಳದ ಜೊತೆ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದಾಳೆ. ಪಕ್ಷದ ಯುವಮೋರ್ಚಾ ಪದಾಧಿಕಾರಿ ಯಶಸ್ ರವರ ಕಚೇರಿಯಲ್ಲಿ ಇಂದು ಸಭೆ ಏರ್ಪಡಿಸಲಾಗಿತ್ತು. ಈ ವೇಳೆ ಏಕಾಏಕಿ ನುಗ್ಗಿ ಕೈ ಕಾರ್ಯಕರ್ತರು ಮಗಳ ಮೇಲೆ ಹಲ್ಲೆ ನಡೆಸಿ ಹಣವನ್ನು ಪ್ರದರ್ಶಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

    ಮಹಾಲಕ್ಷ್ಮಿ ಲೇಔಟ್ ಪಾಲಿಕೆಯ ಕಾಂಗ್ರೆಸ್ ಸದಸ್ಯ ಕೃಷ್ಣಮೂರ್ತಿ ಉದ್ದೇಶ ಪೂರ್ವಕವಾಗಿ ಈ ಕೃತ್ಯವನ್ನು ನಡೆಸಿ ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ನನ್ನ ಮಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಹೆಣ್ಣು ಮಗಳ ಮೇಲೆ ತೇಜೋವಧೆ ಮಾಡುವುದು ಎಷ್ಟು ಸರಿ? ಘಟನೆ ನಡೆದ ಕೂಡಲೇ ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಅಲ್ಲಿ ಸೇರಿದ್ದರಿಂದಲೇ ಇದು ಪೂರ್ವನಿಯೋಜಿತ ಕೃತ್ಯ ಎನ್ನುವುದು ಸ್ಪಷ್ಟವಾಗುತ್ತದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪರಮೇಶ್ವರ್, ಸಿದ್ದರಾಮಯ್ಯ ಆದಿಯಾಗಿ ಯಾರೂ ಈ ಕೃತ್ಯವನ್ನು ಒಪ್ಪಲಾರರು. ಚುನಾವಣೆ ಗೆಲ್ಲಲು ಈ ಕಾಂಗ್ರೆಸ್ ಈ ರೀತಿಯ ಕುತಂತ್ರ ಮಾಡಬಾರದು. ಕೃಷ್ಣ ಮೂರ್ತಿ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳದೇ ಇದ್ದರೆ ಬೀದಿಗೆ ಇಳಿದು ಹೋರಾಟ ನಡೆಸುವುದಾಗಿ ಸುರೇಶ್ ಕುಮಾರ್ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

    ದಿಶಾ ಸ್ಪಷ್ಟನೆ: ತಾನು ಕಾರ್ಯಚಟುವಟಿಕೆಯಲ್ಲಿ ತೊಡಗಿದ್ದ ವೇಲೆ ಕೆಲ ವ್ಯಕ್ತಿಗಳು ತನ್ನ ಬಂದು ಹಣ ಹಂಚಿಕೆ ಮಾಡುತ್ತಿರುವ ಆರೋಪ ಮಾಡಿದರು. ಈ ವೇಳೆ ಅವರಿಗೆ ಉತ್ತರ ನೀಡಿದೆ. ಆದರೆ ಇದಕ್ಕೆ ಸಮಾಧಾನಗೊಳ್ಳದೇ ಅವರು ನನ್ನ ಫೋಟೋ ವಿಡಿಯೋ ತೆಗೆದುಕೊಂಡರು. ಬಳಿಕ ಚುನಾವಣಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು. ಆ ವೇಳೆಯೂ ಸ್ಥಳಕ್ಕೆ ಬಂದ ಕೆಲ ವ್ಯಕ್ತಿಗಳು ನನ್ನ ಜೊತೆಗೆ ಕೆಟ್ಟದಾಗಿ ನಡೆದುಕೊಂಡರು.

    ಚುನಾವಣೆಯಲ್ಲಿ ತಮ್ಮ ತಂದೆಯ ಮೇಲೆ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಇದೂವರೆಗೆ ಹಣ ಹಂಚಿಕೆ ಮಾಡಿಲ್ಲ. ಮುಂದೆಯೂ ಹಣವನ್ನು ಹಂಚಲ್ಲ. ಕೃಷ್ಣಮೂರ್ತಿ ಬೆಂಬಲಿಗರು ನನಗೆ ಹೊಡೆಯಲು ಬಂದಿದ್ದಾರೆ. ಯಾವುದೇ ರೀತಿಯ ಹಣದ ಸಂಬಂಧ ಚಟುವಟಿಕಗಳನ್ನು ನಾವು ಮಾಡುತ್ತಿರಲಿಲ್ಲ.

    https://www.facebook.com/nimmasuresh/videos/2108056582555009/UzpfSTEyNTU2MTk2NDE1NDU0NDoxODU3OTU0NTgwOTE1MjY1/