Tag: ಶಾ ಮಹಮೂದ್ ಖುರೇಷಿ

  • ಒಳ್ಳೆಯ ವ್ಯಕ್ತಿತ್ವ ಇರೋ ಮನುಷ್ಯ- ಮನಮೋಹನ್ ಸಿಂಗ್‍ರನ್ನು ಹೊಗಳಿದ ಖುರೇಷಿ

    ಒಳ್ಳೆಯ ವ್ಯಕ್ತಿತ್ವ ಇರೋ ಮನುಷ್ಯ- ಮನಮೋಹನ್ ಸಿಂಗ್‍ರನ್ನು ಹೊಗಳಿದ ಖುರೇಷಿ

    ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಒಳ್ಳೆಯ ವ್ಯಕ್ತಿತ್ವ ಇರುವ ಮನುಷ್ಯ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಹಾಡಿ ಹೊಗಳಿದ್ದಾರೆ.

    ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೊಂದಿಗೆ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಸಂಭಾಷಣೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಖುರೇಷಿ ಅವರು ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿದ ಸಮಯದಲ್ಲಿ ಚಹಾ ನೀಡಿದ ಘಟನೆಯನ್ನು ನೆನಪಿಸಿಕೊಳ್ಳುತ್ತಾರೆ.

    ನಾನು ನಿಮ್ಮ ಮನೆಗೆ ಭೇಟಿ ನೀಡಿದ್ದೆ. ನಿಮ್ಮ ಪತ್ನಿ ಚಹಾ ತಯಾರಿಸಿದ್ದರು. ಸ್ವತಃ ಮನಮೋಹನ್ ಸಿಂಗ್ ಅವರೇ ಚಹಾವನ್ನು ತಂದುಕೊಟ್ಟಿದ್ದರು. ನಾನು ಮರಳಿ ಬಂದ ನಂತರ ಜನರಿಗೆ ಈ ಕಥೆಯನ್ನು ವಿವರಿಸಿದೆ. ಎಂತಹ ದೊಡ್ಡ ಮನುಷ್ಯ ಅವರು ಎಂದು ಹೇಳಿದೆ ಎಂದು ಖುರೇಷಿ ಮನಮೋಹನ್ ಸಿಂಗ್ ಅವರೊಂದಿಗೆ ಸಂಭಾಷಣೆ ನಡೆಸುತ್ತಿರುವ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

    ಈ ಘಟನೆಯು 90 ದಶಕದಲ್ಲಿ ಸಂಭವಿಸಿದೆ ಎಂದು ಖುರೇಷಿ ವಿಡಿಯೋದಲ್ಲಿ ನೆನಪಿಸಿಕೊಳ್ಳುತ್ತಾರೆ. ಇದರಲ್ಲಿ ಅವರು ಪ್ರಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಅವರ ಪತ್ನಿ ಗುರ್ಷರನ್ ಕೌರ್ ಅವರೊಂದಿಗೆ ಕುಳಿತಿದ್ದಾರೆ.

    ಸಿಖ್ ಪವಿತ್ರ ಮಂದಿರದ ಉದ್ಘಾಟನಾ ಸಮಾರಂಭಕ್ಕಾಗಿ ಪಾಕಿಸ್ತಾನದ ಕಡೆಗೆ ತೆರಳಿದ ಭಾರತೀಯ ಯಾತ್ರಿಕರ ಮೊದಲ ಬ್ಯಾಚ್‍ನಲ್ಲಿ ಮನಮೋಹನ್ ಸಿಂಗ್ ಭಾಗವಹಿಸಿದ್ದರು.

    ಮೊದಲ ಬ್ಯಾಚ್‍ನಲ್ಲಿ ಅಕಲ್ ತಖ್ತ್ ಜತೇದರ್ ಹರ್ಪೀತ್ ಸಿಂಗ್, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್, ಸುಖ್ಖೀರ್ ಸಿಂಗ್ ಬಾದಲ್, ಹರ್ಸಿಮ್ರತ್ ಕೌರ್ ಬಾದಲ್, ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧು ಹಾಗೂ ಬಿಜೆಪಿ ಸಂಸದ ಸನ್ನಿ ಡಿಯೋಲ್ ತೆರಳಿದ್ದಾರೆ.

  • ಮುಸ್ಲಿಂ ಸಮುದಾಯ ಮೇಲೆ ಮತ್ತಷ್ಟು ಒತ್ತಡ ಹಾಕಲಿದೆ – ಪಾಕ್ ಪ್ರತಿಕ್ರಿಯೆ

    ಮುಸ್ಲಿಂ ಸಮುದಾಯ ಮೇಲೆ ಮತ್ತಷ್ಟು ಒತ್ತಡ ಹಾಕಲಿದೆ – ಪಾಕ್ ಪ್ರತಿಕ್ರಿಯೆ

    ಇಸ್ಲಾಮಾಬಾದ್: ಅಯೋಧ್ಯೆ ತೀರ್ಪಿಗೆ ಪಾಕಿಸ್ತಾನ ವಿದೇಶಾಂಗ ಮಂತ್ರಿ ಶಾ ಮಹಮೂದ್ ಖುರೇಷಿ ಪ್ರತಿಕ್ರಿಯೆ ನೀಡಿದ್ದಾರೆ.

    ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಒತ್ತಡದಲ್ಲಿರುವ ಮುಸ್ಲಿಂ ಸುಮುದಾಯ ಮೇಲೆ ಮತ್ತಷ್ಟು ಒತ್ತಡ ಹಾಕಲಿದೆ. ಪಾಕಿಸ್ತಾನ ವಿದೇಶ ಕಾರ್ಯಾಲಯದಿಂದ ತೀರ್ಪಿನ ಹೆಚ್ಚಿನ ವಿವರಣೆಯನ್ನು ಪಡೆದುಕೊಂಡು ಪ್ರತಿಕ್ರಿಯಿಸುತ್ತೇನೆ ಎಂದು ಖುರೇಶಿ ಹೇಳಿದ್ದಾರೆ.

    ಅಯೋಧ್ಯೆಯ ಜಾಗ ಹಿಂದೂಗಳಿಗೆ ಸೇರಿದ್ದು ಎಂದು ಹೇಳುವ ಮೂಲಕ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಐತಿಹಾಸಿಕ ತೀರ್ಪು ನೀಡಿ, ಸುಮಾರು 5 ಶತಮಾನಗಳ ವಿವಾದಕ್ಕೆ ಷರಾ ಬರೆದಿದೆ. ರಾಮಜನ್ಮಭೂಮಿ ರಾಮನಿಗಷ್ಟೇ. ಸರ್ಕಾರದ ಟ್ರಸ್ಟ್ ಗೆ ಸೇರಬೇಕು. ಈ ಟ್ರಸ್ಟ್ ದೇವಾಲಯ ನಿರ್ಮಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಎಸ್.ಎ. ಬೋಬ್ಡೆ, ಡಿ.ವೈ. ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್. ಅಬ್ದುಲ್ ನಜೀರ್ ನೇತೃತ್ವದ ಪಂಚ ನ್ಯಾಯಾಧೀಶರ ಪೀಠ ತೀರ್ಪು ನೀಡಿದೆ.

    ಅಖಿಲ ಭಾರತೀಯ ಮುಸ್ಲಿಂ ಮಹಾಸಂಘದ ಅಧ್ಯಕ್ಷರಾಗಿರುವ ಫರ್ಹತ್ ಖಾನ್ ತಮ್ಮ ರಕ್ತದಿಂದ ‘ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ. ಹಿಂದೂಸ್ಥಾನಕ್ಕೆ ತೀರ್ಪನ್ನು ಅರ್ಥೈಸುವ ಕೆಲಸವನ್ನು ಮಾಡುತ್ತೇನೆ. ಇಲ್ಲಿ ಪ್ರೀತಿ, ಬಾಂಧವ್ಯ ಮತ್ತು ಸಹೋದರತೆಗೆ ಗೆಲುವು ಸಿಕ್ಕಿದೆ. ನ್ಯಾಯಾಧೀಶರು ಎಲ್ಲ ಆಂಶಗಳನ್ನು ಗಮನದಲ್ಲಿಟ್ಟುಕೊಂಡು ನ್ಯಾಯೋಚಿತವಾದ ತೀರ್ಪನ್ನು ಪ್ರಕಟಿಸಿದ್ದಾರೆ. ಹಾಗಾಗಿ ಅಯೋಧ್ಯೆ ತೀರ್ಪನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಹಿಂದೂಸ್ಥಾನದ ಪ್ರತಿಯೊಂದು ಕಣದಲ್ಲಿ ರಾಮ್ ಮತ್ತು ರಹೀಂ ಇದ್ದಾರೆ ಎಂದು ಫರ್ಹರ್ ಹೇಳಿದ್ದಾರೆ.

    ನಾವು ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಆದ್ರೆ ಈ ತೀರ್ಪು ನಮಗೆ ಸಮಾಧಾನ ತಂದಿಲ್ಲ. 5 ಮಂದಿ ನ್ಯಾಯಾಧೀಶರು ನೀಡಿದ ಸಂವಿಧಾನ ಪೀಠದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಚಿಂತಿಸಲಾಗುತ್ತದೆ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ತಿಳಿಸಿದೆ.