Tag: ಶಿಕ್ಷಕ

  • ಪಾಠ ಮಾಡು ಅಂದ್ರೆ ಲವ್ ಮಾಡು ಅಂತಾನೆ – ಕೊಪ್ಪಳದಲ್ಲಿದ್ದಾನೆ ಕಾಮುಕ ಶಿಕ್ಷಕ

    ಪಾಠ ಮಾಡು ಅಂದ್ರೆ ಲವ್ ಮಾಡು ಅಂತಾನೆ – ಕೊಪ್ಪಳದಲ್ಲಿದ್ದಾನೆ ಕಾಮುಕ ಶಿಕ್ಷಕ

    ಕೊಪ್ಪಳ: ಇತ್ತೀಚೆಗೆ ವಿದ್ಯಾದೇಗುಲಗಳಲ್ಲಿ ಲೈಂಗಿಕ ಪ್ರಕರಣಗಳು ಹೆಚ್ಚಾಗ್ತಿವೆ. ಇದಕ್ಕೆ ಪೂರಕವೆಂಬಂತೆ ಕೊಪ್ಪಳದ ಶಾಲೆಯ ಶಿಕ್ಷಕನೋರ್ವ ವಿದ್ಯಾರ್ಥಿನಿಗೆ ಪೀಡಿಸಿರುವ ಆರೋಪವೊಂದು ಕೇಳಿಬಂದಿದೆ.

    ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕಿದ್ದ ಶಿಕ್ಷಕ ಇಬ್ರಾಹಿಂಗೆ ಗ್ರಾಮಸ್ಥರೇ ಪಾಠ ಮಾಡಿದ್ದಾರೆ.

    ಶಿಕ್ಷಕನ ವಿರುದ್ಧ ಆರೋಪವೇನು?
    ಶಿಕ್ಷಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಸ್ಟಾಫ್ ರೂಮಿಗೆ ಕರೆದು ಪಪ್ಪಿ ಕೊಡು ನನ್ನ ಲವ್ ಮಾಡು ಎಂದು ಪೀಡಿಸಿದ್ದಾನೆ. ವಿದ್ಯಾರ್ಥಿನಿಯೊಬ್ಬಳು ಶಿಕ್ಷಕನ ಕಿರುಕುಳದಿಂದ ಬೇಸತ್ತು ಶಾಲೆಗೆ ಹೋಗುವುದನ್ನೇ ನಿಲ್ಲಿಸಿದ್ದಾಳೆ. ಈ ಬಗ್ಗೆ ಮನೆಯಲ್ಲಿ ಪೋಷಕರು ವಿಚಾರಿಸಿದಾಗ ವಿದ್ಯಾರ್ಥಿನಿ ಶಿಕ್ಷಕ ತನ್ನ ಜೊತೆ ತೋರಿದ ಅನುಚಿತ ವರ್ತನೆಯ ಬಗ್ಗೆ ಬಾಯಿಬಿಟ್ಟಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಪೋಷಕರು ಹಾಗೂ ಗ್ರಾಮಸ್ಥರು ಶಾಲೆಗೆ ಆಗಮಿಸಿ ಇಂತಹ ಶಿಕ್ಷಕ ನಮ್ಮ ಶಾಲೆಗೆ ಬೇಡ ಕೂಡಲೇ ಈ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

    ಈ ಬಗ್ಗೆ ಶಿಕ್ಷಕನನ್ನು ಕೇಳಿದ್ರೆ ನಾನೇನೂ ತಪ್ಪು ಮಾಡಿಲ್ಲ ಸಾರ್. ಬೇಕಿದ್ರೆ ಮಕ್ಕಳನ್ನೇ ಕೇಳಿ ಎಂದು ಹೇಳಿಕೊಳ್ಳುತ್ತಾನೆ. ಸುಖಾ ಸುಮ್ಮನೆ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಶಿಕ್ಷಕ ಇಬ್ರಾಹಿಂ ಕಣ್ಣೀರು ಹಾಕಿದ್ದಾನೆ.

    ಗ್ರಾಮಸ್ಥರ ಒತ್ತಾಯದ ಮೆರೆಗೆ ಶಾಲೆಗೆ ಆಗಮಿಸಿದ ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಗ್ರಾಮಸ್ಥರ ದೂರನ್ನು ಕೇಳಿ, ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮಸ್ಥರ ಮತ್ತು ವಿದ್ಯಾರ್ಥಿನಿಯ ಹೇಳಿಕೆಯನ್ನ ಸ್ವೀಕರಿಸಿ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

    ಶಿಕ್ಷಕ ಇಬ್ರಾಹಿಂ ಇಂತಹ ಕೃತ್ಯವೆಸಗಿದ್ದು ಇದೇ ಮೊದಲಲ್ಲ. ಈ ಹಿಂದೆ ಅನೇಕ ಬಾರಿ ಕೂಡ ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತನೆ ತೋರಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 6ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ!

    6ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ!

    ಕೊಪ್ಪಳ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಶಾಲೆಯಲ್ಲಿ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಪೋಷಕರ ಮುಂದೆ ಅಳಲು ತೋಡಿಕೊಂಡಿದ್ದಾಳೆ.

    ಶಾಲೆಯಲ್ಲಿ ಶಿಕ್ಷಕನಾಗಿರುವ ಇಬ್ರಾಹಿಂ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಶಿಕ್ಷಕನ ಈ ವರ್ತನೆಯಿಂದ ಬೇಸತ್ತ ವಿದ್ಯಾರ್ಥಿನಿ ತನ್ನ ಪೋಷಕರ ಮುಂದೆ ಅಳಲು ತೋಡಿಕೊಂಡಿದ್ದಾಳೆ. ವಿಷಯ ತಿಳಿದ ಬಳಿಕ ಕೋಪಗೊಂಡ ಬಾಲಕಿಯ ಪೋಷಕರು ಶಿಕ್ಷಕನಿಗೆ ತರಾಟೆ ತೆಗೆದುಕೊಂಡಿದ್ದಾರೆ.

    ಈ ಸಂಗತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಆಗಮಿಸಿದ್ದಾರೆ. ಹಾಗೆಯೇ ಮೊದಲು ಪ್ರಕರಣದ ತನಿಖೆ ನಡೆಸಲಾಗುತ್ತದೆ. ಬಳಿಕ ಶಿಕ್ಷಕನ ತಪ್ಪಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಅವರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಾಲೆಯ ಹಾಸ್ಟೆಲ್‍ನಲ್ಲಿ ಆತ್ಮಹತ್ಯೆಗೆ ಶರಣಾದ ಶಿಕ್ಷಕ

    ಶಾಲೆಯ ಹಾಸ್ಟೆಲ್‍ನಲ್ಲಿ ಆತ್ಮಹತ್ಯೆಗೆ ಶರಣಾದ ಶಿಕ್ಷಕ

    ರಾಂಚಿ: ಶಿಕ್ಷಕನೋರ್ವ ಶಾಲೆಯ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜಾರ್ಖಂಡ್ ರಾಜ್ಯದ ಕೊಡ್ರಮಾ ಜಿಲ್ಲೆಯ ಜಿ.ಎಸ್.ಪಬ್ಲಿಕ್ ಸ್ಕೂಲ್‍ನಲ್ಲಿ ನಡೆದಿದೆ.

    ವಿಶಾಲ್ ಶರ್ಮಾ ಆತ್ಮಹತ್ಯೆಗೆ ಶರಣಾದ ಶಿಕ್ಷಕ. ವಿಶಾಲ್ ಶರ್ಮಾ ಕಳೆದ ಎರಡು ವರ್ಷಗಳಿಂದ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡಿಕೊಂಡಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.

    ಮಂಗಳವಾರ ಎಂದಿನಂತೆ ಬೆಳಗ್ಗೆ ಪ್ರಾರ್ಥನೆಗೆ ಶಿಕ್ಷಕ ವಿಶಾಲ್ ಗೈರಾಗಿದ್ದರು. ಮಕ್ಕಳು ಶಿಕ್ಷಕರನ್ನು ಕರೆ ತರುವುದಾಗಿ ಅವರ ಕೋಣೆಯತ್ತ ತೆರಳಿದ್ದರು. ಬಾಗಿಲು ಹಾಕಿದ್ದರಿಂದ ಮಕ್ಕಳು ಕಿಟಕಿಯಲ್ಲಿ ನೋಡಿದಾಗ ವಿಶಾಲ್ ಶವ ನೇತಾಡುವ ಸ್ಥಿತಿಯಲ್ಲಿತ್ತು. ಇದನ್ನ ಕಂಡ ಮಕ್ಕಳು ಜೋರಾಗಿ ಕಿರುಚುತ್ತಾ ಮೈದಾನದತ್ತ ಓಡಿ ಬಂದರು ಎಂದು ಶಾಲೆಯ ನಿರ್ದೇಶಕ ನಿತೇಶ್ ಕುಮಾರ್ ತಿಳಿಸಿದ್ದಾರೆ.

    ಸದ್ಯ ಶಾಲೆಗೆ ರಜೆ ನೀಡಲಾಗಿದ್ದು, ಪೊಲೀಸರು ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ವಿಶಾಲ್ ಮೂಲತಃ ಗಿರಿಡಿಹ ಜಿಲ್ಲೆಯ ಲೆದಾ ಬರ್ಕಟ್ಟಾ ನಿವಾಸಿಯಾಗಿದ್ದು, ಆತನ ಕುಟುಂಬಸ್ಥರಿಗೆ ವಿಷಯ ತಿಳಿಸಲಾಗಿದೆ. ಸೋಮವಾರ ರಾತ್ರಿ 9 ಗಂಟೆಯವರೆಗೂ ವಿಶಾಲ್ ನಮ್ಮೊಂದಿಗೆ ಕೆಲಸ ಮಾಡಿದ್ದಾರೆ. ಶಾಲೆಯಲ್ಲಿ ಆಯೋಜಿಸಿರುವ ಸರಸ್ವತಿ ಪೂಜೆಗೆ ಯಾರನ್ನು ಆಹ್ವಾನಿಸಬೇಕು ಎಂಬುದರ ಕುರಿತಾಗಿ ನಮ್ಮ ಜೊತೆ ಚರ್ಚೆ ನಡೆಸಿದ್ದರು. ತಾವೇ ಎಲ್ಲ ಆಹ್ವಾನ ಪತ್ರಿಕೆಗಳ ಮೇಲೆ ಅತಿಥಿಗಳ ಹೆಸರು ಬರೆದು ತಮ್ಮ ಕೋಣೆಯತ್ತ ಹೋಗಿದ್ದರು. ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ವಿಶಾಲ್ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ನಿತೇಶ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಸಹೋದ್ಯೋಗಿಯೊಂದಿಗೆ ಲವ್, ಸೆಕ್ಸ್, ದೋಖಾ – ಶಿಕ್ಷಕ ಅರೆಸ್ಟ್

    ಸಹೋದ್ಯೋಗಿಯೊಂದಿಗೆ ಲವ್, ಸೆಕ್ಸ್, ದೋಖಾ – ಶಿಕ್ಷಕ ಅರೆಸ್ಟ್

    ಭುವನೇಶ್ವರ: ಒಡಿಶಾದ ಜಾಜ್ಪುರ್ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕನೊಬ್ಬ ತನ್ನ ಸಹೋದ್ಯೋಗಿಗೆ ಮದುವೆಯಾಗುತ್ತೇನೆ ಎಂದು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮೋಸ ಮಾಡಿದ್ದಕ್ಕಾಗಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿಯನ್ನು ಬಿನೋದ್ ಬಿಹಾರಿ ಸೇಥಿ ಎಂದು ಗುರುತಿಸಲಾಗಿದೆ. ಧರ್ಮಶಾಲಾದಲ್ಲಿರುವ ಸರ್ಕಾರಿ ಸ್ವಾಮ್ಯದ ಹೈಸ್ಕೂಲ್ ಮುಖ್ಯಸ್ಥನಾಗಿ ಕೆಲಸ ಮಾಡುತ್ತಿದ್ದನು. ಆರೋಪಿ ಸೇಥಿ ತನ್ನ ಸಹೋದ್ಯೋಗಿಯನ್ನು ಮದುವೆಯಾಗುತ್ತೇನೆ ಎಂದು ಸುಳ್ಳು ಹೇಳಿ ನಂಬಿಸಿದ್ದನು. ಬಳಿಕ ಆಕೆಯ ಜೊತೆ ದೈಹಿಕವಾಗಿ ಸಂಬಂಧ ಹೊಂದಿದ್ದನು. ದಿನಕಳೆದಂತೆ ಸಂತ್ರಸ್ತೆ ಮದುವೆಯ ಪ್ರಸ್ತಾಪವನ್ನು ಆತನ ಮುಂದೆ ಇಟ್ಟಿದ್ದಾರೆ.

    ಈ ವೇಳೆ ಆರೋಪಿ ಸೇಥಿ ಮದುವೆಯಾಗುವುದನ್ನು ತಿರಸ್ಕರಿಸಿದ್ದಾನೆ. ಇದರಿಂದ ನೊಂದ ಮಹಿಳಾ ಶಿಕ್ಷಕಿ ದೂರು ದಾಖಲಿಸಿದ್ದಾರೆ. ಆರೋಪಿ ಸೇಥಿ ವಿರುದ್ಧ ಐಪಿಸಿ ಸೆಕ್ಷನ್ 341, 323, 325, 506 ಮತ್ತು 493 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಇನ್ಸ್ ಪೆಕ್ಟರ್ ಅನಿಲ್ ಕುಮಾರ್ ಪ್ರಧಾನ್ ಹೇಳಿದ್ದಾರೆ.

    ಸದ್ಯಕ್ಕೆ ಸಂತ್ರಸ್ತೆಗೆ ಸ್ಥಳೀಯ ಆಸ್ಪತೆಯಲ್ಲಿ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿದೆ. ಆರೋಪಿಯನ್ನು ವಿಚಾರಣೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಕಾರ್ಯಕ್ರಮಕ್ಕೆ ಕರೆದೊಯ್ದು ವಿದ್ಯಾರ್ಥಿಗಳನ್ನ ಮರೆತ ಶಿಕ್ಷಕ- 10 ಕಿ.ಮೀ ನಡ್ಕೊಂಡು ಬಂದ ಮಕ್ಕಳು..!

    ಕಾರ್ಯಕ್ರಮಕ್ಕೆ ಕರೆದೊಯ್ದು ವಿದ್ಯಾರ್ಥಿಗಳನ್ನ ಮರೆತ ಶಿಕ್ಷಕ- 10 ಕಿ.ಮೀ ನಡ್ಕೊಂಡು ಬಂದ ಮಕ್ಕಳು..!

    ಕಾರವಾರ: ಸೇವಾದಳದ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ದಿದ್ದ ದೈಹಿಕ ಶಿಕ್ಷಕರೊಬ್ಬರು ಮಕ್ಕಳನ್ನು ಬಿಟ್ಟು ಹೋಗಿದ್ದರಿಂದ ಸುಮಾರು 10 ಕಿ.ಮೀ ದೂರ ವಿದ್ಯಾರ್ಥಿಗಳು ನಡೆದುಕೊಂಡೇ ಬಂದು ಮನೆ ಸೇರಿರುವ ಘಟನೆ ಜಿಲ್ಲೆಯ ಮುಂಡಗೋಡು ಪಟ್ಟಣದ ಕಾತೂರು ತಾಲೂಕಿನಲ್ಲಿ ನಡೆದಿದೆ.

    ಕಾತೂರಿನಲ್ಲಿ ತಾಲೂಕು ಮಟ್ಟದ ಸೇವಾದಳ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದ್ದರಿಂದ ಸರ್ಕಾರಿ ಜೂನಿಯರ್ ಕಾಲೇಜಿನ 14ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಈ ಕಾರ್ಯಕ್ರಮಕ್ಕೆ ದೈಹಿಕ ಶಿಕ್ಷಣ ಶಿಕ್ಷಕ ದೀಪಕ್ ಲೋಕಣ್ಣವರ್ ಕರೆದುಕೊಂದು ಹೋಗಿದ್ದರು. ಹೋಗುವಾಗ ಮಕ್ಕಳನ್ನ ವಾಹನದಲ್ಲಿ ಕರೆದುಕೊಂಡು ಹೋಗಿದ್ದ ಶಿಕ್ಷಕ, ವಾಪಾಸ್ ಬರುವಾಗ ಮಕ್ಕಳನ್ನು ಕಾರ್ಯಕ್ರಮ ನಡೆದ ಸ್ಥಳದಲ್ಲಿಯೇ ಬಿಟ್ಟು ಬಂದಿದ್ದಾರೆ.

    ಕಾರ್ಯಕ್ರಮದಲ್ಲಿ ಮಕ್ಕಳಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಆದ್ದರಿಂದ ಕಾರ್ಯಕ್ರಮಕ್ಕೆ ಬಂದಿದ್ದ ಎಲ್ಲಾ ಮಕ್ಕಳ ಶಿಕ್ಷಕರ ಬಳಿ ಊಟದ ಚೀಟಿಯನ್ನು ನೀಡಲಾಗಿತ್ತು. ಆದ್ರೆ ದೀಪಕ್ ಅವರು ಮಕ್ಕಳ ಊಟದ ಚೀಟಿಯನ್ನು ತಮ್ಮ ಬಳಿಯೇ ಇಟ್ಟುಕೊಂಡು ಕಾರ್ಯಕ್ರಮದಿಂದ ಹಾಗೆಯೇ ಮುಂಡಗೋಡಿಗೆ ತೆರೆಳಿದ್ದಾರೆ. ಇತ್ತ ಮಕ್ಕಳು ಊಟವನ್ನೂ ಮಾಡದೆ ಶಿಕ್ಷಕರು ಬರುತ್ತಾರೆ ಎಂದು ಕಾದು ಕೂತಿದ್ದಾರೆ. ಆದ್ರೆ ಸಂಜೆಯಾದರೂ ಶಿಕ್ಷಕ ಬರದಿದ್ದಾಗ ಮಕ್ಕಳು ಆತಂಕಗೊಂಡಿದ್ದಾರೆ.

    ಬಳಿಕ ಮನೆ ಸೇರಲು ಬಸ್ಸಿಗೆ ಹೋಗಲು ಕೈಯಲ್ಲಿ ಹಣವಿಲ್ಲದೆ ನಡೆದುಕೊಂಡೇ ಸುಮಾರು 10 ಕಿ.ಮೀ ದೂರ ಬಂದಿದ್ದಾರೆ. ಬಳಿಕ ಮಕ್ಕಳನ್ನು ನೋಡಿದ ಗ್ರಾಮಸ್ಥರೊಬ್ಬರು ಹಣ ನೀಡಿ ಎಲ್ಲರನ್ನೂ ಬಸ್ಸಿಗೆ ಹತ್ತಿಸಿ ಊರಿಗೆ ಕಳುಹಿಸಿದ್ದಾರೆ. ಈ ವಿಷಯ ಪೋಷಕರಿಗೆ ತಿಳಿಯುತ್ತಿದಂತೆ ಶಿಕ್ಷಕರ ಮೇಲೆ ಆಕ್ರೋಶಗೊಂಡಿದ್ದಾರೆ. ಅಲ್ಲದೆ ಮರುದಿನ ಶಾಲೆಗೆ ಬಂದು ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೊನೆಗೆ ತನ್ನ ತಪ್ಪನ್ನು ಒಪ್ಪಿಕೊಂಡ ಶಿಕ್ಷಕ ಎಲ್ಲರ ಬಳಿ ಕ್ಷಮೆಯಾಚಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಶಿಕ್ಷಕನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ!

    ಶಿಕ್ಷಕನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ!

    ಬೆಂಗಳೂರು: ಶಾಲೆಯಲ್ಲಿ ಶಿಕ್ಷಕರು ಎಲ್ಲರ ಮುಂದೆ ನಿಂದಿಸಿ, ತನಗೆ ಹೊಡೆದರು ಎಂದು ಮನನೊಂದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಧಾನಿಯ ಉತ್ತರಹಳ್ಳಿಯಲ್ಲಿ ನಡೆದಿದೆ.

    ಉತ್ತರಹಳ್ಳಿಯ ನಿವಾಸಿ ಧನುಷ್ ಎಂಬ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಧನುಷ್ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದನು. ಧನುಷ್ ಓದುತ್ತಿದ್ದ ಶಾಲೆಯ ಶಿಕ್ಷಕ ಬಾಲಕೃಷ್ಣ ಎಂಬವರು ಎಲ್ಲರ ಮುಂದೆ ನಿಂದಿಸಿ, ತನ್ನನ್ನು ಹೊಡೆದರು ಎಂಬ ಕಾರಣಕ್ಕೆ ವಿದ್ಯಾರ್ಥಿ ಮನನೊಂದಿದ್ದನು. ಅಲ್ಲದೇ ಶಿಕ್ಷಕನ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿ ಡೇತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಡೆತ್‍ನೋಟ್‍ನಲ್ಲಿ ಶಿಕ್ಷಕ ಶಾಲೆಯಲ್ಲಿ ತನಗೆ ಕೊಡುತ್ತಿದ್ದ ಹಿಂಸೆಯ ಬಗ್ಗೆ ಬರೆದು ಮನೆಯಲ್ಲಿ ಯಾರು ಇಲ್ಲದ ವೇಳೆ ಧನುಷ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಗನ ಸಾವಿನಿಂದ ಮನನೊಂದಿರುವ ಪೋಷಕರು ಕಣ್ಣೀರಿಡುತ್ತಿದ್ದಾರೆ. ಹಾಗೆಯೇ ತಮ್ಮ ಮಗನ ಸಾವಿಗೆ ಕಾರಣರಾದ ಶಿಕ್ಷಕನನ್ನು ಬಂಧಿಸುವಂತೆ ಪೊಲೀಸರಿಗೆ ದೂರು ನೀಡಿ ಆಕ್ರೋಶ ಹೊರಹಾಕಿದ್ದಾರೆ.

    ಸದ್ಯ ಈ ಘಟನೆ ಕುರಿತು ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ನೀಡಿದ್ದು, ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮುಗ್ಧ ಮಕ್ಕಳಿಬ್ಬರನ್ನು ಕೊಂದು ತಾಯಿ ನೇಣಿಗೆ ಶರಣು!

    ಮುಗ್ಧ ಮಕ್ಕಳಿಬ್ಬರನ್ನು ಕೊಂದು ತಾಯಿ ನೇಣಿಗೆ ಶರಣು!

    ಚಿಕ್ಕಬಳ್ಳಾಪುರ: ಇಬ್ಬರು ಮಕ್ಕಳನ್ನ ಕೊಂದು ಬಳಿಕ ತಾಯಿಯೂ ನೇಣಿಗೆ ಶರಣಾಗಿರುವ ಮನಕಲಕುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.

    8 ವರ್ಷದ ಮಗ ಶಮಂತ್ ಹಾಗೂ 2 ವರ್ಷದ ಶಾನವಿ ಮೃತ ದುರ್ದೈವಿ ಮಕ್ಕಳು. ಉಷಾ(30) ತನ್ನಿಬ್ಬರು ಮಕ್ಕಳನ್ನ ಕೊಂದು ಆತಹತ್ಯೆಗೆ ಶರಣಾದ ತಾಯಿ.

    ಉಷಾ ಪತಿ ಅಶ್ವತ್ಥನಾರಾಯಣ ವೃತ್ತಿಯಲ್ಲಿ ಶಿಕ್ಷಕರಾಗಿದ್ದು, ಈ ಕುಟುಂಬ ನಗರದ ಮುನಿಸಿಪಾಲ್ ಕಾಲೇಜು ಬಳಿಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿತ್ತು. ಆತ್ಮಹತ್ಯೆಗೂ ಮುನ್ನ ಉಷಾ ಡೆತ್ ನೋಟ್ ಬರೆದಿದ್ದು ತನ್ನ ಸಾವಿಗೆ ಯಾರೂ ಕಾರಣ ಅಲ್ಲ ಅಂತ ಬರೆದಿದ್ದಾಳೆ ಎಂಬುದಾಗಿ ಮಾಹಿತಿ ತಿಳಿದುಬಂದಿದೆ.

    ಕಾರಣವೇನು..?
    ಜ್ಯೋತಿಷಿ ನಿನ್ನ ಮಕ್ಕಳ ಭವಿಷ್ಯ ಸರಿ ಇಲ್ಲ ಎಂದು ಹೇಳಿದ್ದಕ್ಕೆ ಕಳೆದ 15 ದಿನಗಳಿಂದ ತಾಯಿ ಉಷಾ ಖಿನ್ನತೆಗೆ ಓಳಗಾಗಿದ್ದಳಂತೆ. ಪತಿ ಈ ಬಗ್ಗೆ ಬುದ್ಧಿವಾದ ಹೇಳಿದ್ದರೂ ಇಂದು ಅಶ್ವತ್ಥ ನಾರಾಯಣ ಅವರು ಮನೆಯಲ್ಲಿ ಇಲ್ಲದ ವೇಳೆ ಮಕ್ಕಳಿಗೆ ಮೊದಲು ನಿದ್ರೆ ಮಾತ್ರೆ ಹಾಕಿ ತದನಂತರ ಕತ್ತುಹಿಸುಕಿ ಕೊಲೆ ಮಾಡಿ ಬಳಿಕ ತಾನೂ ನೇಣಿಗೆ ಶರಣಾಗಿದ್ದಾಳೆ.

    ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಪತಿ ಅಶ್ವಥ್ ನಾರಾಯಣರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಎಲ್ಲಾ ಕೆಲಸವನ್ನು ಮಾಡ್ತಾರೆ ಮಕ್ಕಳು..!

    ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಎಲ್ಲಾ ಕೆಲಸವನ್ನು ಮಾಡ್ತಾರೆ ಮಕ್ಕಳು..!

    ಚಿಕ್ಕಮಗಳೂರು: ಅಂದು ಮಹಾಭಾರತದ ಗಾಂಧಾರಿ ಗಂಡನಿಗೆ ಕಣ್ಣಿಲ್ಲ ಎಂದು ಕಣ್ಣಿದ್ದು ತಾನೂ ಕುರುಡಳಾಗಿದ್ಲು. ಇಂದು ಕಾಫಿನಾಡ ಮಕ್ಕಳು ಕೂಡ ಕಣ್ಣಿದ್ದು ಕುರುಡರಾಗೇ ಓದೋದು, ಬರೆಯೋದು, ಟಿವಿ ನೋಡೋದು, ಸೈಕಲ್-ಬೈಕ್ ಓಡ್ಸೋದು ಮಾಡ್ತಿದ್ದಾರೆ.

    ಹೌದು, ಜಿಲ್ಲೆಯ ಆಲ್ದೂರಿನ ಶಾಲೆಯಲ್ಲಿ ಕಣ್ಣಿದ್ದರೂ ಸಹ ಥೇಟ್ ಗಾಂಧಾರಿಯ ರೀತಿ ಕಣ್ಣಿಗೆ ಬಟ್ಟೆ ಕಟ್ಕೊಂಡಿರೋ ಮಕ್ಕಳು ತಮ್ಮ ಮುಂದೆ ಏನಿದೇ ಅನ್ನೋದನ್ನ ಹೇಳುತ್ತಾರೆ. ಪುಸ್ತಕಗಳನ್ನ ಓದ್ತಾರೆ, ಬರೀತಾರೆ ಹಾಗೂ ತೋರಿಸಿದ ಬಣ್ಣವನ್ನ ಸರಿಯಾಗಿ ಹೇಳ್ತಾರೆ. ಆಲ್ದೂರಿ ಶಾಲೆಯ ಶಿಕ್ಷಕ ಪದ್ಮನಾಭ್ ಭಟ್ ಅವರ ಮಾರ್ಗದರ್ಶನದಲ್ಲಿ ಈ ಗಾಂಧಾರಿ ವಿದ್ಯೆಯನ್ನ ಕರಗತ ಮಾಡ್ಕೊಂಡಿದ್ದಾರೆ ಇಲ್ಲಿನ ವಿದ್ಯಾರ್ಥಿಗಳು. ಕಣ್ಣಿಗೆ ಬಟ್ಟೆ ಕಟ್ಟಿಕೊಂಡೆ ವಿದ್ಯಾರ್ಥಿಗಳು ಸಲೀಸಾಗಿ ಬೈಕ್ ಓಡಿಸ್ತಾರೆ, ಟಿವಿ ನೋಡ್ತಾರೆ. ಇದನ್ನೆಲ್ಲ ನೋಡಿದವರು ಅಚ್ಚರಿ ಪಡುವುದು ಸಾಮಾನ್ಯ. ಕಣ್ಣು ಬಿಟ್ಟುಕೊಂಡೆ ಕೆಲವೊಮ್ಮೆ ಸರಿಯಾಗಿ ಓದೋಕೆ ಬರಿಯೋಕೆ ಆಗಲ್ಲ ಅಂತದ್ರಲ್ಲಿ ಕಣ್ಣು ಮುಚ್ಚಿಕೊಂಡು ಹೇಗೆ ಈ ಕೆಲಸವನ್ನು ಮಾಡ್ತಾರೆ ಮಕ್ಕಳು ಅಂತ ಎಲ್ಲರಲ್ಲಿ ಸಾಲು ಸಾಲು ಪ್ರಶ್ನೆ ಹುಟ್ಟುತ್ತಲೇ ಇರುತ್ತೆ.

    ಕಣ್ಣು ಮುಚ್ಚಿಕೊಂಡು ಮಕ್ಕಳು ಎಲ್ಲವನ್ನು ಲೀಲಾಜಾಲವಾಗಿ ಮಾಡುತ್ತಾರೆ ಅಂದರೆ ಅದಕ್ಕೆ ಕಾರಣ ಗಾಂಧಾರಿ ವಿದ್ಯೆ. ಈ ವಿದ್ಯೆ ಕಲಿತೋರ ಕೈಗೆ ಏನೇ ಕೊಟ್ರು ಅದರಲ್ಲಿ ಏನ್ ಬರೆದಿದೆ ಅಂತ ಕೇಳಿದರೆ ಕ್ಷಣಾರ್ಧದಲ್ಲೆ ಸರಿಯಾಗಿ ಉತ್ತರಿಸುತ್ತಾರೆ. ಶಿಕ್ಷಕ ಪದ್ಮನಾಭ್ ಭಟ್ ಅವರ ತಮ್ಮ ವಿದ್ಯಾರ್ಥಿಗಳಿಗೆ ಗಾಂಧಾರಿ ವಿದ್ಯೆಯನ್ನು ಕಲಿಸಿದ್ದಾರೆ. ಅದು ಕೇವಲ ಹತ್ತೇ ದಿನದಲ್ಲಿ ಈ ವಿದ್ಯೆ ಕಲಿತ ಮಕ್ಕಳು ಆಟ-ಪಾಠಗಳಲ್ಲಿ ಮುಂದಿದ್ದಾರೆ.

    ಏನಿದು ಗಾಂಧಾರಿ ವಿದ್ಯೆ?
    ಕಣ್ಣಿಗೆ ಬಟ್ಟೆ ಕಟ್ಕೊಂಡ್ ಮೂರನೇ ಕಣ್ಣಿನಿಂದ ನೋಡೋ ವಿದ್ಯೆಗೆ ಗಾಂಧಾರಿ ವಿದ್ಯೆ ಅಂತಾರೆ. ಶಿವನಿಗೆ ಮೂರನೇ ಕಣ್ಣಿದೆ ಅಂತ ಕೇಳಿರುತ್ತೇವೆ. ಅದೇ ಕಣ್ಣು ಮನುಷ್ಯ, ಪ್ರಾಣಿ-ಪಕ್ಷಿಗಳಿಗೂ ಇರುತ್ತೆ ಅನ್ನೋದು ಈ ವಿದ್ಯೆಯ ಸಾರಾಂಶ. ಶರೀರದಲ್ಲಿನ 72 ಸಾವಿರ ನಾಡಿಗಳಲ್ಲಿನ ಹಿಡನಾಡಿ, ಪಿಂಗಳನಾಡಿ ಹಾಗೂ ಶುಷಮ್ನನಾಡಿ ಸಹಾಯದಿಂದ ಈ ವಿದ್ಯೆ ಕರಗತವಾಗುತ್ತೆ. ಇವುಗಳ ಜೊತೆ, ಮೂಲಾಧಾರ, ಸ್ವಾಧಿಷ್ಠಾನ, ಮಣಿಪುರಕ, ಅನಾಥ, ವಿಶುದ್ಧಿ, ಆಜ್ಞಾ, ಸಹಸ್ರರ ಎಂಬ ಏಳು ಸುಪ್ತ ಚಕ್ರಗಳು ಕೆಲಸ ಮಾಡುತ್ತವೆ. ಇದರಲ್ಲಿ ಆಜ್ಞಾ ಚಕ್ರಕ್ಕೆ ಸೂಕ್ಷ್ಮ ವಿಚಾರವನ್ನ ಗ್ರಹಿಸುವ ಶಕ್ತಿ ಇದೆ. ಇದನ್ನ ಬಳಸಿ ಮಕ್ಕಳು ಧ್ಯಾನ ಮತ್ತು ಪ್ರಾಣಾಯಾಮದ ಮೂಲಕ ಬೇಗ ಜಾಗೃತಿಯಾಗ್ತಾರೆ.

    ಈ ಗಾಂಧಾರಿ ವಿದ್ಯೆಯನ್ನ ನೀವು ನಿಮ್ಮ ಮಕ್ಕಳಿಗೆ ಮನೆಯಲ್ಲೇ ಹೇಳಿಕೊಡಬಹುದು. ಮಕ್ಕಳಲ್ಲಿ ಏಕಾಗ್ರತೆ ಇಲ್ಲಾ ಎಂದು ಕೊರಗೋ ಪೋಷಕರು ಪ್ರತಿ ದಿನ ಅರ್ಧ ಗಂಟೆ ಮಕ್ಕಳಿಗೆ ಟೈಂ ಕೊಟ್ಟು, ಅವರ ಎರಡು ಹುಬ್ಬುಗಳ ಮಧ್ಯೆ ಬೆರಳಿಟ್ಟು ಧ್ಯಾನ ಹಾಗೂ ಪ್ರಾಣಾಯಾಮ ಮಾಡಿಸುವುದರಿಂದ ನಿಮ್ಮ ಮಕ್ಕಳಲ್ಲಿ ಏಕಾಗ್ರತೆ ಮೂಡುತ್ತದೆ ಎಂದು ಶಿಕ್ಷಕ ಪದ್ಮನಾಭ್ ಭಟ್ ಹೇಳುತ್ತಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗಣರಾಜ್ಯೋತ್ಸವಕ್ಕೆ ತೆರಳ್ತಿದ್ದ ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹರಿದ ಕಾರ್..!

    ಗಣರಾಜ್ಯೋತ್ಸವಕ್ಕೆ ತೆರಳ್ತಿದ್ದ ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹರಿದ ಕಾರ್..!

    ಧಾರವಾಡ: ಗಣರಾಜ್ಯೋತ್ಸವಕ್ಕೆ ತೆರಳುತ್ತಿದ್ದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಮೇಲೆ ಕಾರ್ ಹರಿದ ಘಟನೆ ಧಾರವಾಡದ ವಾಟರ್ ಬೋರ್ಡ್ ಬಳಿ ಇಂದು ನಡೆದಿದೆ.

    ಪ್ರೀನಿಪಾಲ್ ಸುನಿತಾ ಕಡಪಟ್ಟಿ, ವಿದ್ಯಾರ್ಥಿಗಳಾದ ಪೂಜಾ ನಿಡಗುಂದಿ, ಚೈತ್ರಾ ಕೊಪ್ಪದ, ಅನ್ನಪೂರ್ಣ ಚಲವಾದಿ ಗಾಯಗೊಂಡವರಾಗಿದ್ದಾರೆ. ಘಟನೆಯಲ್ಲಿ ಒಟ್ಟು ಆರು ವಿದ್ಯಾರ್ಥಿಗಳ ಮೇಲೆ ಕಾರ್ ಹರಿದಿದ್ದು, ಇದರಲ್ಲಿ ನಾಲ್ವರಿಗೆ ಗಂಭಿರ ಗಾಯ ಇಬ್ಬರಿಗೆ ಸಣ್ಣ ಪುಟ್ಟಗಾಯಗಳಾಗಿದೆ. ಗಾಯಗೊಂಡ ವಿದ್ಯಾರ್ಥಿಗಳೆಲ್ಲರೂ ಧಾರವಾಡದ ಕೆಇಬೊರ್ಡ್ ಕಾಲೇಜಿನವರಾಗಿದ್ದಾರೆ.

    ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದೆ. ಹೀಗಾಗಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಎಸ್ ಡಿ ಎಮ್ ಗೆ ಗಾಯಾಳುಗಳ ಸ್ಥಳಾಂತರ ಮಾಡಲಾಗಿದೆ. ಅರವಿಂದ ಎಸ್. ಹೆಬ್ಸೂರು ಅವರಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

    ಈ ಘಟನೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸ್ವಂತ ಖರ್ಚಿನಲ್ಲಿ ಶಾಲೆಗೆ, ಗ್ರಾಮಕ್ಕೆ ಬೆಳಕು ತಂದ್ರು ಶಿಕ್ಷಕ ಮೋಹನ್ ಕುಮಾರ್

    ಸ್ವಂತ ಖರ್ಚಿನಲ್ಲಿ ಶಾಲೆಗೆ, ಗ್ರಾಮಕ್ಕೆ ಬೆಳಕು ತಂದ್ರು ಶಿಕ್ಷಕ ಮೋಹನ್ ಕುಮಾರ್

    ರಾಯಚೂರು: ಏನೂ ಇಲ್ಲದ ಜಾಗದಲ್ಲಿ ಸುಂದರ ಶಾಲೆಯನ್ನ ಕಟ್ಟಿ “ಮಕ್ಕಳ ಕಾಡು” ಅಂತ ಹೆಸರಿಟ್ಟು ಮಾದರಿ ಶಾಲೆಯನ್ನಾಗಿ ಮಾಡುವ ಮೂಲಕ ಶಿಕ್ಷಕ ಮೋಹನ್ ಕುಮಾರ್ ಪಬ್ಲಿಕ್ ಹೀರೋ ಆಗಿದ್ದಾರೆ.

    ಜಿಲ್ಲೆಯ ಮಾನ್ವಿ ತಾಲೂಕಿನ ಕೊರವಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿರುವ ಮೋಹನ್ ಕುಮಾರ್ ಸ್ವಂತ ಖರ್ಚಿನಲ್ಲಿ ಶಾಲೆಗೆ ವಿದ್ಯುತ್ ಅಳವಡಿಸಿ ಗ್ರಾಮಕ್ಕೆ ಬೆಳಕಾಗಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾದ ಇವರು ಮೂಲತಃ ಮಂಡ್ಯದವರು. ಮೋಹನ್ ಕುಮಾರ್ ಅವಿರತ ಶ್ರಮದಿಂದ ಇಂದು ಈ ಸರ್ಕಾರಿ ಪ್ರಾಥಮಿಕ ಪಾಠ ಶಾಲೆ ಜಿಲ್ಲೆಗೆ ಮಾದರಿಯಾಗಿದೆ. ಯಾವ ಖಾಸಗಿ ಶಾಲೆಗೂ ಕಮ್ಮಿಯಿಲ್ಲದಂತೆ ಸರ್ಕಾರಿ ಶಾಲೆಯನ್ನು ತಿದ್ದಿ ತೀಡಿದ್ದಾರೆ. ಮೋಹನ್ ಕುಮಾರ್ ಅವರ ಕೆಲಸವನ್ನು ಮೆಚ್ಚಿದ ಗ್ರಾಮಸ್ಥರು ಶಾಲೆಯ ಅಭಿವೃದ್ಧಿಗಾಗಿ ತಮ್ಮ ಕೈಲಾದಷ್ಟು ದಾನ ಮಾಡಲು ಮುಂದಾಗಿದ್ದಾರೆ.

    ಶಾಲೆಗೆ ಸ್ವಂತ ಖರ್ಚಿನಲ್ಲಿ ವಿದ್ಯುತ್ ವ್ಯವಸ್ಥೆ ಮಾಡಿರೋ ಮೋಹನ್ ಕುಮಾರ್ ಈಗ ಗ್ರಾಮಕ್ಕೂ ಬೆಳಕಾಗಿದ್ದಾರೆ. ಸತತ ಆರು ಕಡೆ ಬೋರ್‍ವೆಲ್ ಕೊರೆಸಿ ವಿಫಲರಾದರೂ ಛಲ ಬಿಡದೆ, ಶಾಲೆಯಿಂದ ಒಂದು ಕಿ.ಮೀ ದೂರದಲ್ಲಿ ಬೋರ್‍ವೆಲ್ ಕೊರೆಸಿ ಕುಡಿಯುವ ನೀರಿನ ಬವಣೆ ನೀಗಿಸಲು ಶ್ರಮಿಸಿದ್ದಾರೆ. ಶಾಲೆಯ ಆವರಣದಲ್ಲಿ ಮಕ್ಕಳಿಂದಲೇ ಬೆಳೆಸುತ್ತಿರುವ ಗಿಡಗಳಿಗೆ ಹನಿ ನೀರಾವರಿ ಮೂಲಕ ನೀರುಣಿಸಲಾಗ್ತಿದೆ. ಮೊದಲೆಲ್ಲಾ ಖಾಸಗಿ ಶಾಲೆಗಳತ್ತ ಮುಖ ಮಾಡಿದವರು ಈಗ ಸರ್ಕಾರಿ ಶಾಲೆಗೆ ಜೈ ಎನ್ನುತ್ತಿದ್ದಾರೆ. ಈಗ 234 ಮಕ್ಕಳು ಈ ಶಾಲೆಯಲ್ಲಿ ಕಲಿಯುತ್ತಿದ್ದು, ಇದಕ್ಕೆ ಶಿಕ್ಷಕ ಮೋಹನ್ ಅವರೇ ಕಾರಣ ಎಂದು ಗ್ರಾಮಸ್ಥರು ಶಿಕ್ಷಕರು ಕೆಲಸವನ್ನು ಶ್ಲಾಘಿಸುತ್ತಿದ್ದಾರೆ.

    ಶಾಲೆಯಲ್ಲಿ ಕೇವಲ 5 ಕೊಠಡಿ ಇರುವುದರಿಂದ ದಾನಿಗಳ ನೆರವಿನಿಂದ ಮೋಹನ್ ಕುಮಾರ್ ಸದ್ಯ ಗುಡಿಸಲು ಮಾದರಿಯ ಕೆಲ ಶಾಲಾ ಕೊಠಡಿ ನಿರ್ಮಿಸಿದ್ದಾರೆ. ಜನಪ್ರತಿನಿಧಿಗಳ ಬೆನ್ನುಬಿದ್ದು 300 ಮೀಟರ್ ಕಾಂಪೌಂಡ್, ಗೇಟ್ ವ್ಯವಸ್ಥೆ ಮಾಡಿಸಿದ್ದಾರೆ. ಅಷ್ಟೇ ಅಲ್ಲದೆ ಇನ್ಫೋಸಿಸ್‍ನವರು ಈ ಶಾಲೆಗೆ 5 ಕಂಪ್ಯೂಟರ್ ನೀಡಿದ್ದಾರೆ, ಸೆಲ್ಕೋಸೋಲಾರ್ ಕಂಪನಿ ಸ್ಮಾರ್ಟ್ ಕ್ಲಾಸ್ ಅಳವಡಿಸಿದ್ದಾರೆ. ಈ ಶಾಲೆಗೆ ಬರುತ್ತಿರುವ ಪ್ರತಿ ಮಕ್ಕಳಿಗೂ ಐಡಿ ಕಾರ್ಡ್ ನೀಡಿ ಶಿಸ್ತುಪಾಲನೆ ಮಾಡಲಾಗುತ್ತಿದೆ.

    ಶಾಲೆಯ ಏಳಿಗೆಗಾಗಿ ಹಾಗೂ ಮಕ್ಕಳನ್ನ ಶಾಲೆಗೆ ಕರೆತರಬೇಕು ಅನ್ನೋ ಕಾರಣಕ್ಕೆ ಶಾಲಾ ಅಭಿವೃದ್ದಿಗೆ ಮುಂದಾದ ಶಿಕ್ಷಕ ಮೋಹನ್ ಈಗ ಎಲ್ಲರಿಗೂ ಮಾದರಿಯಾಗಿದ್ದಾರೆ.

    https://www.youtube.com/watch?v=Gvhdclsw3GU

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv