Tag: ಶಿಕ್ಷಕ

  • ಪ್ರೀತಿ ತಿರಸ್ಕರಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಬ್ಲೇಡ್‍ನಿಂದ ಹಲ್ಲೆಗೈದ ಶಿಕ್ಷಕ!

    ಪ್ರೀತಿ ತಿರಸ್ಕರಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಬ್ಲೇಡ್‍ನಿಂದ ಹಲ್ಲೆಗೈದ ಶಿಕ್ಷಕ!

    ಹೈದರಾಬಾದ್: 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಹಿಂದಿ ಶಿಕ್ಷಕನೊಬ್ಬ ಬ್ಲೇಡ್‍ನಿಂದ ಕ್ರೂರವಾಗಿ ಹಲ್ಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.

    ಕರ್ನೂಲ್ ಜಿಲ್ಲೆಯ ಬಂಗರುಪೇಟಾ ಪ್ರದೇಶದಲ್ಲಿರುವ ರಾಕ್ವೆಲ್ ಹೈಸ್ಕೂಲ್ ನಲ್ಲಿ ಹಿಂದಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಶಂಕರ್ ಈ ಕೃತ್ಯವನ್ನು ಎಸಗಿದ್ದಾನೆ. ವಿದ್ಯಾರ್ಥಿನಿ ತನ್ನನ್ನು ತಿರಸ್ಕರಿಸಿದ್ದಕ್ಕಾಗಿ ಶಂಕರ್ ಆಕೆಯ ಮನೆಯಲ್ಲೇ ಹಲ್ಲೆ ಮಾಡಿದ್ದಲ್ಲದೇ ಅವಳ ಗಂಟಲನ್ನು ಕತ್ತರಿಸಲು ಪ್ರಯತ್ನಿಸಿದ್ದಾನೆ. ಈ ಸಮಯದಲ್ಲಿ ಆಕೆ ಜೋರಾಗಿ ಕಿರುಚುಕೊಂಡಿದ್ದಾಳೆ.

    ವಿದ್ಯಾರ್ಥಿನಿಯ ಕಿರುಚಾಟವನ್ನು ಆಲಿಸಿದ ಸ್ಥಳೀಯರು ಬಂದು ವಿದ್ಯಾರ್ಥಿಯನ್ನು ಕಾಮುಕ ಶಿಕ್ಷಕನಿಂದ ರಕ್ಷಣೆ ಮಾಡಿದ್ದಾರೆ. ಬಳಿಕ ಆರೋಪಿಯನ್ನು ಮರಕ್ಕೆ ಕಟ್ಟಿ ಸ್ಥಳೀಯರೇ ಥಳಿಸಿದ್ದಾರೆ. ಘಟನೆಯ ನಂತರ ಸ್ಥಳೀಯರೇ ಪೊಲೀಸರಿಗೆ ಮಾಹಿತಿಯನ್ನು ತಿಳಿಸಿ ಆರೋಪಿ ಶಂಕರ್ ನನ್ನು ಒಪ್ಪಿಸಿದ್ದಾರೆ.

    ಆರೋಪಿಯಿಂದ ಕಿರುಕುಳಕ್ಕೆ ಒಳಗಾಗಿದ್ದ ವಿದ್ಯಾರ್ಥಿಯನ್ನು ಈಗ ಚಿಕಿತ್ಸೆಗಾಗಿ ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರ ಥಳಿತದಿಂದ ಗಾಯಗೊಂಡಿದ್ದ ಆರೋಪಿ ಶಂಕರ್ ನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನೆಯ ಬಳಿಕ ಆಂಧ್ರಪ್ರದೇಶದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಗಾಂತ ಶ್ರೀನಿವಾಸರಾವ್ ಶಂಕರ್ ನನ್ನು ಅಮಾನತುಗೊಳಿಸುವಂತೆ ಆದೇಶಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅತಿಥಿ ಶಿಕ್ಷಕನಿಂದ ವಿದ್ಯಾರ್ಥಿನಿ ಅಪಹರಣ: ಪೊಲೀಸರಿಂದ ಬಾಲಕಿ ರಕ್ಷಣೆ

    ಅತಿಥಿ ಶಿಕ್ಷಕನಿಂದ ವಿದ್ಯಾರ್ಥಿನಿ ಅಪಹರಣ: ಪೊಲೀಸರಿಂದ ಬಾಲಕಿ ರಕ್ಷಣೆ

    ಚಿಕ್ಕೋಡಿ: ಪ್ರೌಢಶಾಲಾ ಅತಿಥಿ ಶಿಕ್ಷಕ ಅಪಹರಿಸಿದ್ದ ವಿದ್ಯಾರ್ಥಿನಿಯನ್ನು ಯಮಕನಮರಡಿ ಪೊಲೀಸರು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಗುಟಗುದ್ದಿ ಗ್ರಾಮದ ಹೈಸ್ಕೂಲ್ ವಿದ್ಯಾರ್ಥಿನಿ ಅಪಹರಣ ಪ್ರಕರಣ ಸುಖಾಂತ್ಯಗೊಂಡಿದ್ದು, ಖಾನಾಪೂರ ತಾಲೂಕಿನ ಕಾಟಗಳ್ಳಿ ಗ್ರಾಮದಲ್ಲಿ ಅಪಹರಣಗೊಂಡಿದ್ದ 9ನೇ ತರಗತಿ ವಿದ್ಯಾರ್ಥಿ ಆರತಿ(ಹೆಸರು ಬದಲಾಯಿಸಲಾಗಿದೆ)ಯನ್ನು ಪೊಲೀಸರು ರಕ್ಷಿಸಿದ್ದಾರೆ. ಅಲ್ಲದೇ ಅಪಹರಣ ಮಾಡಿದ್ದ ಅತಿಥಿ ಶಿಕ್ಷಕ ಸಿದ್ರಾಯ ಲಕ್ಷ್ಮಣ ನಿಂಗರಾಯಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಏನಿದು ಪ್ರಕರಣ?
    ಗುಟಗುದ್ದಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿದ್ದ ಸಿದ್ರಾಯ ಲಕ್ಷ್ಮಣ ನಿಂಗರಾಯಿ (34), ಅದೇ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಆರತಿಯನ್ನು ಅಕ್ಟೋಬರ್ 30 ರಂದು ಕಿಡ್ನಾಪ್ ಮಾಡಿದ್ದ. ಈ ಸಂಬಂಧ ವಿದ್ಯಾರ್ಥಿನಿ ತಂದೆ ಪೊಲೀಸರಿಗೆ ದೂರು ನೀಡಿದ್ದರು.

    ದೂರಿನಲ್ಲಿ ಏನಿತ್ತು?
    ಅಕ್ಟೋಬರ್ 30 ರಂದು ನನ್ನ ಮಗಳು ಶಾಲೆಯಲ್ಲಿ ಪರೀಕ್ಷೆ ಇದೆ ಎಂದು ಹೇಳಿ ಹೋಗಿದ್ದು, ಸಂಜೆಯಾದವರೂ ವಾಪಸ್ ಬರಲಿಲ್ಲ. ಬಳಿಕ ನಾನು ಗ್ರಾಮದ ಸುತ್ತಮುತ್ತ ಮತ್ತು ಸಂಬಂಧಿಕರ ಮನೆಗೆ ಹೋಗಿ ಹುಡುಕಿದೆವು. ಆದರೆ ನನ್ನ ಮಗಳು ಎಲ್ಲೂ ಪತ್ತೆಯಾಗಿಲ್ಲ. ಬಳಿಕ ನಮ್ಮ ಊರಿನ ಜನರು ಸಿದ್ರಾಮ ಲಕ್ಷ್ಮಣ ನಿಂಗರಾಯ ಜೊತೆಗೆ ಬೇರೆ ಊರಿಗೆ ಹೋಗುತ್ತಿದ್ದನ್ನು ನೋಡಿರುವುದಾಗಿ ಹೇಳಿದ್ದರು. ಈ ಬಗ್ಗೆ ತಿಳಿದ ತಕ್ಷಣ ಆತನ ಮನೆಗೆ ಹೋಗಿ ವಿಚಾರಿಸಿದೆ. ಆದರೆ ಆತ ಮನೆಯಲ್ಲಿ ಇರಲಿಲ್ಲ. ಸಿದ್ರಾಮ ನನ್ನ ಮಗಳ ಜೊತೆ ಪ್ರೀತಿಯ ನಾಟಕವಾಡಿ, ಮನೆ ಬಿಟ್ಟು ಬರುವಂತೆ ಆಕೆಯ ತಲೆ ಕೆಡಿಸಿ ಅಪಹರಿಸಿಕೊಂಡು ಹೋಗಿದ್ದಾನೆ. ದಯವಿಟ್ಟು ನನ್ನ ಮಗಳನ್ನು ಹುಡುಕಿಕೊಡಿ ಎಂದು ವಿದ್ಯಾರ್ಥಿನಿಯ ತಂದೆ ಯಮಕನಮರಡಿ ಪೊಲೀಸರಿಗೆ ದೂರು ಕೊಟ್ಟಿದ್ದರು.

    ಪತ್ತೆಯಾಗಿದ್ದು ಹೇಗೆ?
    ಪೊಲೀಸರು ವಿದ್ಯಾರ್ಥಿನಿ ಅಪಹರಣ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ವಿದ್ಯಾರ್ಥಿನಿ ತಂದೆಯ ದೂರಿನ ಹಿನ್ನೆಲೆಯಲ್ಲಿ, ಅತಿಥಿ ಶಿಕ್ಷಕ ಸಿದ್ರಾಯಿ ಸಂಬಂಧಿಕರು ಹಾಗೂ ಸ್ನೇಹಿತರನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಸಿದ್ರಾಯಿಯ ಫೋನ್ ನಂಬರ್ ಚೆಕ್ ಮಾಡಿದ್ದಾರೆ. ಟವರ್ ಪರಿಶೀಲನೆ ವೇಳೆ ಲೋಕೇಶನ್ ಖಾನಾಪೂರ ತಾಲೂಕಿನ ಕಾಟಗಳ್ಳಿ ಗ್ರಾಮದಲ್ಲಿರುವುದು ತಿಳಿದು ಬಂದಿದೆ. ಕೂಡಲೇ ಎಚ್ಚೆತ್ತ ಪೊಲೀಸರು ಕಾಟಹಳ್ಳಿ ಗ್ರಾಮಕ್ಕೆ ತೆರಳಿ, ವಿದ್ಯಾರ್ಥಿನಿಯನ್ನು ರಕ್ಷಿಸಿದ್ದಾರೆ. ಅಲ್ಲದೇ ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪ್ರೌಢ ಶಾಲಾ ಅತಿಥಿ ಶಿಕ್ಷಕನಿಂದ ವಿದ್ಯಾರ್ಥಿನಿ ಅಪಹರಣ

    ಪ್ರೌಢ ಶಾಲಾ ಅತಿಥಿ ಶಿಕ್ಷಕನಿಂದ ವಿದ್ಯಾರ್ಥಿನಿ ಅಪಹರಣ

    ಬೆಳಗಾವಿ: ಪ್ರೌಢಶಾಲಾ ಅತಿಥಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಯನ್ನು ಅಪಹರಣ ಮಾಡಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ.

    ಸಿದ್ರಾಮ ಲಕ್ಷ್ಮಣ ನಿಂಗರಾಯ(28) ವಿದ್ಯಾರ್ಥಿನಿಯನ್ನು ಅಪಹರಿಸಿದ ಶಿಕ್ಷಕ. 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಿಸಿ ಶಿಕ್ಷಕ ಪರಾರಿಯಾಗಿದ್ದಾನೆ. ಈ ಬಗ್ಗೆ ವಿದ್ಯಾರ್ಥಿನಿ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

    ದೂರಿನಲ್ಲಿ ಏನಿದೆ?
    ಅಕ್ಟೋಬರ್ 30 ರಂದು ನನ್ನ ಮಗಳು ಶಾಲೆಯಲ್ಲಿ ಪರೀಕ್ಷೆ ಇದೆ ಎಂದು ಹೇಳಿ ಹೋಗಿದ್ದು, ಸಂಜೆಯಾದವರೂ ವಾಪಸ್ ಬರಲಿಲ್ಲ. ಬಳಿಕ ನಾನು ಗ್ರಾಮದ ಸುತ್ತಮುತ್ತ ಮತ್ತು ಸಂಬಂಧಿಕರ ಮನೆಗೆ ಹೋಗಿ ಹುಡುಕಿದೆವು. ಆದರೆ ನನ್ನ ಮಗಳು ಎಲ್ಲೂ ಪತ್ತೆಯಾಗಿಲ್ಲ. ಬಳಿಕ ನಮ್ಮ ಊರಿನ ಜನರು ಸಿದ್ರಾಮ ಲಕ್ಷ್ಮಣ ನಿಂಗರಾಯ ಅವರ ಜೊತೆಗೆ ಬೇರೆ ಊರಿಗೆ ಹೋಗುತ್ತಿದ್ದನ್ನು ನೋಡಿರುವುದಾಗಿ ಹೇಳಿದ್ದಾರೆ.

    ಸಿದ್ರಾಮ ನನ್ನ ಮಗಳ ಜೊತೆ ಪ್ರೀತಿಯ ನಾಟಕವಾಡಿ, ಮನೆ ಬಿಟ್ಟು ಬರುವಂತೆ ಆಕೆಯ ತಲೆ ಕೆಡಿಸಿ ಅಪಹರಿಸಿಕೊಂಡು ಹೋಗಿದ್ದಾನೆ. ಈ ಬಗ್ಗೆ ತಿಳಿದ ತಕ್ಷಣ ಆತನ ಮನೆಗೂ ಹೋಗಿ ವಿಚಾರಿಸಿದೆ. ಆದರೆ ಆತ ಮನೆಯಲ್ಲಿ ಇರಲಿಲ್ಲ. ಕೊನೆಗೆ ಯಮಕನಮರಡಿ ಪೊಲೀಸರಿಗೆ ದೂರು ಕೊಟ್ಟಿದ್ದೇನೆ. ದಯವಿಟ್ಟು ನನ್ನ ಮಗಳನ್ನು ಹುಡುಕಿಕೊಡಿ ಎಂದು ದೂರಿನಲ್ಲಿ ವಿದ್ಯಾರ್ಥಿನಿಯ ತಂದೆ ಮನವಿ ಮಾಡಿಕೊಂಡಿದ್ದಾರೆ.

    ಈ ಘಟನೆ ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ‘Good Touch, Bad Touch’ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಕನಿಂದ ಕಿರುಕುಳ

    ‘Good Touch, Bad Touch’ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಕನಿಂದ ಕಿರುಕುಳ

    ಮುಂಬೈ: ಇಂಗ್ಲಿಷ್ ಮೀಡಿಯಂ ಶಾಲೆಯ ದೈಹಿಕ ಶಿಕ್ಷಕನೊಬ್ಬ ವಿದ್ಯಾರ್ಥಿಗಳಿಗೆ ಗುಡ್ ಟಚ್, ಬ್ಯಾಡ್ ಟಚ್ ಬಗ್ಗೆ ಹೇಳಿಕೊಡುವುದಾಗಿ ನಾಲ್ವರು ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿರುವ ಘಟನೆ ಪುಣೆಯಲ್ಲಿ ನಡೆದಿದೆ.

    ಹದಾಪ್ಸರ್ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ 40 ವರ್ಷದ ಶಿಕ್ಷಕನನ್ನು ಬಂಧಿಸಿದ್ದಾರೆ. ಬಂಧಿತನ ವಿರುದ್ಧ ಕಳೆದ 5 ತಿಂಗಳಿನಿಂದ 9ನೇ ತರಗತಿಯ ನಾಲ್ವರು ಬಾಲಕರನ್ನು ವಿವಿಧ ಸಂದರ್ಭದಲ್ಲಿ ಲೈಂಗಿಕವಾಗಿ ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

    ಶಾಲೆಯಲ್ಲಿ ‘ಉತ್ತಮ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶ’ ಎಂಬ ಜಾಗೃತಿ ಅಭಿಯಾನವನ್ನು ನಡೆಸಲಾಗುತ್ತಿತ್ತು, ಈ ಕಾರ್ಯಕ್ರಮದಲ್ಲಿ ಆರೋಪಿಯೂ ಕೂಡ ಭಾಗಿಯಾಗಿದ್ದನು. ಶಿಕ್ಷಕನೇ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ದೂರು ನೀಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ಬಂಧಿತ ಶಿಕ್ಷಕ ಕಳೆದ ಏಳು ವರ್ಷಗಳಿಂದ ಈ ಶಾಲೆಯಲ್ಲಿ ದೈಹಿಕ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದನು ಎಂದು ತಿಳಿದು ಬಂದಿದೆ. ಸದ್ಯಕ್ಕೆ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ ವಿದ್ಯಾರ್ಥಿಗಳಿಂದ ಹೇಳಿಕೆಯನ್ನು ಪಡೆಯಲಾಗಿದೆ. ಈಗಾಗಲೇ ವಿದ್ಯಾರ್ಥಿಗಳು ನೀಡಿದ ದೂರನ್ನು ಆಧಾರಿಸಿ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ. ಶೀಘ್ರವೇ ಆತನನ್ನು ಕೋರ್ಟ್ ಗೆ ಹಾಜರು ಪಡಿಸಲಾಗುತ್ತದೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಸುನಿಲ್ ತಂಬೆ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಡ್‍ನಿಂದ ಶಿಕ್ಷಕನ ಮೇಲೆ ಹಲ್ಲೆಗೈದ 8ನೇ ಕ್ಲಾಸ್ ವಿದ್ಯಾರ್ಥಿ

    ರಾಡ್‍ನಿಂದ ಶಿಕ್ಷಕನ ಮೇಲೆ ಹಲ್ಲೆಗೈದ 8ನೇ ಕ್ಲಾಸ್ ವಿದ್ಯಾರ್ಥಿ

    ನವದೆಹಲಿ: 8ನೇ ತರಗತಿ ವಿದ್ಯಾರ್ಥಿ ಕಬ್ಬಿಣದ ರಾಡ್‍ನಿಂದ ತನ್ನ ಶಿಕ್ಷಕನ ಮೇಲೆ ಹಲ್ಲೆ ನಡೆಸಿರುವ ಘಟನೆ ನಗರದ ಸಾಕೇತ್ ಎಂಬಲ್ಲಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ. ಪ್ರಕರಣದ ಬಳಿಕ ಭಯಭೀತನಾದ ವಿದ್ಯಾರ್ಥಿ ಕಾಂಪೌಂಡ್ ಜಿಗಿದು ಪರಾರಿಯಾಗಿದ್ದನು. ಸದ್ಯ ಹಲ್ಲೆಗೊಳಗಾಗಿರುವ ಶಿಕ್ಷಕರನ್ನು ಏಮ್ಸ್ ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಸುಂದರ್, ವಿದ್ಯಾರ್ಥಿಯಿಂದ ಹಲ್ಲೆಗೊಳಾಗದ ಶಿಕ್ಷಕ. ಇಂದು ಬೆಳಗ್ಗೆ ಶಾಲೆಗೆ ಬಂದ ವಿದ್ಯಾರ್ಥಿ ಮೇಲೆ ಹಾಜರಾತಿ ವಿಷಯದಲ್ಲಿ ಗರಂ ಆಗಿದ್ದರು. ಶಾಲೆಗೆ ಪದೇ ಪದೇ ಗೈರಾಗುತ್ತಿರೋದ್ರಿಂದ ವಿದ್ಯಾರ್ಥಿ ಮೇಲೆ ಶಿಕ್ಷಕರು ಸಹಜವಾಗಿಯೇ ಕೋಪಗೊಂಡಿದ್ದರು.

    ಇದೇ ವೇಳೆ ವಿದ್ಯಾರ್ಥಿಯ ಬ್ಯಾಗ್ ಚೆಕ್ ಮಾಡುವಾಗ ಪುಸ್ತಕಗಳ ಮಧ್ಯೆ ಕಬ್ಬಿಣದ ರಾಡ್ ಸಿಕ್ಕಿದೆ. ಅನುಮಾನಗೊಂಡ ಶಿಕ್ಷಕರು ನಿನ್ನ ಬಳಿ ರಾಡ್ ಎಲ್ಲಿಂದ ಬಂತು ಪ್ರಶ್ನಿಸಿ ರಾಡ್‍ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಟೇಬಲ್ ಮೇಲೆ ಇಟ್ಟ ರಾಡ್ ತೆಗೆದುಕೊಳ್ಳುವಾಗ ಶಿಕ್ಷಕರು ಆತನನ್ನು ತಡೆದಿದ್ದ ಸಂದರ್ಭದಲ್ಲಿ ಅದರಿಂದಲೇ ಹಲ್ಲೆ ಮಾಡಿ ವಿದ್ಯಾರ್ಥಿ ಪರಾರಿಯಾಗಿದ್ದಾನೆ.

    ಇಂದು ಬೆಳಗ್ಗೆ ಸುಮಾರು 9.30ಕ್ಕೆ ಶಿಕ್ಷಕರು ವಿದ್ಯಾರ್ಥಿಗಳ ಬ್ಯಾಗ್ ಚೆಕ್ ಮಾಡುವಾಗ ರಾಡ್ ದೊರೆತಿದೆ. ಕೂಡಲೇ ಶಿಕ್ಷಕ ಸುಂದರ್ ರಾಡ್ ವಶಕ್ಕೆ ಪಡೆದು ಟೇಬಲ್ ಮೇಲಿಟ್ಟು ಪಾಠ ಆರಂಭಿಸಿದ್ದಾರೆ. ಈ ವೇಳೆ ವಿದ್ಯಾರ್ಥಿ ಶಿಕ್ಷಕರಿಗೆ ಗೊತ್ತಾಗದಂತೆ ಮತ್ತೆ ರಾಡ್ ತೆಗೆದುಕೊಂಡು ಬ್ಯಾಗ್‍ನಲ್ಲಿ ಇಟ್ಟುಕೊಂಡಿದ್ದಾನೆ. ಶಿಕ್ಷಕ ಸುಂದರ್ ವಿದ್ಯಾರ್ಥಿಯ ಬ್ಯಾಗ್ ಪಡೆಯಲು ಮುಂದಾದಾಗ ಅದೇ ರಾಡ್‍ನಿಂದ ಹಲ್ಲೆ ಮಾಡಿದ್ದಾನೆ. ಹಲ್ಲೆಯಿಂದ ಸುಂದರ್ ಅವರ ಮುಖ ಮತ್ತು ಕುತ್ತಿಗೆ ಭಾಗದಲ್ಲಿ ಗಾಯಗಳಾಗಿವೆ. ವಿಷಯ ತಿಳಿದು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ ಸುಂದರ್ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಿಸಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶಿಕ್ಷಕನ ಕ್ರೌರ್ಯಕ್ಕೆ ವಿದ್ಯಾರ್ಥಿ ಬಲಿ!

    ಶಿಕ್ಷಕನ ಕ್ರೌರ್ಯಕ್ಕೆ ವಿದ್ಯಾರ್ಥಿ ಬಲಿ!

    ಲಕ್ನೋ: ಶಿಕ್ಷಕನೊಬ್ಬನ ಕ್ರೌರ್ಯಕ್ಕೆ 8 ವರ್ಷದ ವಿದ್ಯಾರ್ಥಿ ಬಲಿಯಾದ ಘಟನೆ ಉತ್ತರ ಪ್ರದೇಶದ ಬಂದಾ ಜಿಲ್ಲೆಯಲ್ಲಿ ನಡೆದಿದೆ.

    ಅರ್ಬಾಜ್ (8) ಮೃತ ದುರ್ದೈವಿ. ಸಾದಿಮಾದಾನ್‍ಪುತ್ ಗ್ರಾಮದ ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದ್ದು, ಹಲ್ಲೆ ಮಾಡಿದ ಶಿಕ್ಷಕ ಜೈರಾಜ್ ವಿರುದ್ಧ ಮೃತ ವಿದ್ಯಾರ್ಥಿ ಪೋಷಕರು ದೂರು ನೀಡಿದ್ದಾರೆ.

    ಆಗಿದ್ದೇನು?: ಶಿಕ್ಷಕ ಜೈರಾಜ್ ಗುರುವಾರ ಅರ್ಬಾಜ್ ಮೇಲೆ ಹಲ್ಲೆ ಮಾಡಿದ್ದ. ಪರಿಣಾಮ ಅರ್ಬಾಜ್ ಅಸ್ವಸ್ಥಗೊಂಡಿದ್ದು, ಆತನನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅರ್ಬಾಜ್ ಶುಕ್ರವಾರ ಮೃತಪಟ್ಟಿದ್ದಾನೆ. ಬಳಿಕ ಅರ್ಬಾಜ್ ಪೋಷಕರು ಶಿಕ್ಷಕ ಜೈರಾಜ್ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಎಲ್. ಬಿ.ಕುಮಾರ್ ಪಾಲ್ ತಿಳಿಸಿದ್ದಾರೆ.

    ಈ ಕುರಿತು ಎಫ್‍ಐಆರ್ ದಾಖಲಿಸಿಕೊಂಡು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಿದ್ಯಾರ್ಥಿನಿಯರ ಎದುರೇ ಶಾಲಾ ಮುಖ್ಯೋಪಾಧ್ಯಾಯಿನಿ ಮೇಲೆ ಹಿಂದಿ ಶಿಕ್ಷಕನಿಂದ ಹಲ್ಲೆ

    ವಿದ್ಯಾರ್ಥಿನಿಯರ ಎದುರೇ ಶಾಲಾ ಮುಖ್ಯೋಪಾಧ್ಯಾಯಿನಿ ಮೇಲೆ ಹಿಂದಿ ಶಿಕ್ಷಕನಿಂದ ಹಲ್ಲೆ

    ಮಂಗಳೂರು: ವಿದ್ಯಾರ್ಥಿನಿಯರ ಎದುರೇ ಹಿಂದಿ ಶಿಕ್ಷಕನೊಬ್ಬ ಶಾಲಾ ಮುಖ್ಯೋಪಾಧ್ಯಾಯಿನಿ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ನಡೆದಿದೆ.

    ಸುಳ್ಯದ ಖಾಸಗಿ ಶಿಕ್ಷಣ ಸಂಸ್ಥೆಯ ಹೆಣ್ಣು ಮಕ್ಕಳ ಶಾಲೆಯಲ್ಲಿ ಘಟನೆ ನಡೆದಿದೆ. ತರಗತಿ ನಡೆಯುತ್ತಿದ್ದಾಗಲೇ ಕ್ಲಾಸಿಗೆ ಬಂದ ಮುಖ್ಯೋಪಾಧ್ಯಾಯಿನಿಗೆ ಹೊಡೆಯಲು ಮುಂದಾಗಿದ್ದಾರೆ. ಕ್ಷುಲ್ಲಕ ಕಾರಣಕ್ಕಾಗಿ ಹಿಂದಿ ಶಿಕ್ಷಕ ರವೀಂದ್ರ ಮುಖ್ಯೋಪಾಧ್ಯಾಯಿನಿ ಪ್ರೇಮಲತಾ ಎದುರು ತಗಾದೆ ತೆಗೆದಿದ್ದಾರೆ ಎನ್ನಲಾಗುತ್ತಿದ್ದು, ಮಾತಿಗೆ ಮಾತು ಬೆಳೆದಿದೆ.

    ಈ ಸಂಧರ್ಭದಲ್ಲಿ ಶಿಕ್ಷಕಿ ಮೇಲೆ ಹಲ್ಲೆಗೈಯುವುದಕ್ಕಾಗಿ ದೂಡಿಕೊಂಡು ಹೋಗಿದ್ದಾರೆ. ತರಗತಿ ಕೊಠಡಿಯಲ್ಲಿಯೇ ಶಿಕ್ಷಕರು ಜಗಳ ಮಾಡಿಕೊಂಡಿದ್ದು ವಿದ್ಯಾರ್ಥಿನಿಯರನ್ನು ಬೆಚ್ಚಿ ಬೀಳಿಸಿದೆ. ಜಗಳ ತಡೆಯಲು ಬಂದ ಇತರ ಶಿಕ್ಷಕರಿಗೂ ಶಿಕ್ಷಕ ರವೀಂದ್ರ ಹಲ್ಲೆಗೆ ಮುಂದಾಗಿದ್ದಾರೆ. ಶಾಲಾ ಕೊಠಡಿಯಲ್ಲಿ ನಡೆದಿರೋ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.

    ಸದ್ಯ ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 3ರ ಬಾಲಕಿ ಮೇಲೆ ಕರಾಟೆ ಶಿಕ್ಷಕನಿಂದಲೇ ಅತ್ಯಾಚಾರ!

    3ರ ಬಾಲಕಿ ಮೇಲೆ ಕರಾಟೆ ಶಿಕ್ಷಕನಿಂದಲೇ ಅತ್ಯಾಚಾರ!

    ಪಾಟ್ನಾ: ಕರಾಟೆ ಹೇಳಿಕೊಡಬೇಕಾದ ಶಿಕ್ಷಕನೇ 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

    ಈ ಘಟನೆ ಮಂಗಳವಾರ ಸಂಜೆ 4.30ರ ವೇಳೆಗೆ ನಡೆದಿದೆ. ಮುಖೇಶ್ ಕುಮಾರ್ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ. ಈ ಪ್ರಕರಣ ಬೆಳಕಿಗೆ ಬಂದ ಪೊಲೀಸರು ತನಿಖೆಯನ್ನು ನಡೆಸಿ ಒಂದು ಗಂಟೆಯ ಒಳಗಡೆ ಆರೋಪಿಯನ್ನು ಬಂಧಿಸಿದ್ದಾರೆ.

    ಏನಿದು ಘಟನೆ?
    3 ವರ್ಷದ ಬಾಲಕಿ ಸಂಬಂಧಿಕರ ಮನೆಯಿಂದ ತನ್ನ ಮನೆಗೆ ಮರಳಿ ಬರುತ್ತಿರುವಾಗ ಮುಖೇಶ್ ಕರಾಟೆ ಹೇಳಿಕೊಡುವುದಾಗಿ ಬಾಲಕಿಯನ್ನು ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ಕೃತ್ಯವನ್ನು ಎಸಗಿ ಅಲ್ಲಿಂದ ಪರಾರಿಯಾಗಿದ್ದ. ಮಗಳು ಮನೆಗೆ ಬಾರದ ಹಿನ್ನೆಲೆಯಲ್ಲಿ ಪೋಷಕರು ಆಕೆಗೆ ಶೋಧ ಕಾರ್ಯ ನಡೆಸುತ್ತಿದ್ದಾಗ ಶಿಕ್ಷಕನ ಮನೆಯಲ್ಲಿ ಬಾಲಕಿ ಪ್ರಜ್ಞಾ ತಪ್ಪಿ ಬಿದ್ದಿರುವುದನ್ನು ಗಮನಿಸಿದ್ದಾರೆ.

    ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ ಬಾಲಕಿಯನ್ನು ದಾನಪುರದ ಸಮೀಪದ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ. ಪ್ರಜ್ಞೆ ಬಂದ ಮೇಲೆ ಏನಾಯ್ತು ಎಂದು ಬಾಲಕಿಯನ್ನು ಪ್ರಶ್ನಿಸಿದಾಗ ಕರಾಟೆ ಶಿಕ್ಷಕನ ಅಸಲಿ ಮುಖ ಬಯಲಾಗಿದೆ.

    ಈ ಘಟನೆಗೆ ಸಂಬಂಧಪಟ್ಟಂತೆ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕರಾಟೆ ಶಿಕ್ಷಕ ಪಾಟ್ನಾದ ಅನೇಕ ಕಡೆ ಕರಾಟೆ ತರಬೇತಿ ನೀಡುತ್ತಿದ್ದ ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಿದ್ಯಾರ್ಥಿಯ ಕಾಲಿಗೆ ಕಬ್ಬಿಣದ ಸರಪಳಿ ಹಾಕಿ ಬಂಧಿಸಿದ ಶಿಕ್ಷಕ

    ವಿದ್ಯಾರ್ಥಿಯ ಕಾಲಿಗೆ ಕಬ್ಬಿಣದ ಸರಪಳಿ ಹಾಕಿ ಬಂಧಿಸಿದ ಶಿಕ್ಷಕ

    ರಾಯಚೂರು: ತುಂಟತನ ಮಾಡುತ್ತಿದ್ದ ವಿದ್ಯಾರ್ಥಿ ಎಲ್ಲೂ ಹೋಗದಂತೆ ಶಿಕ್ಷಕನೋರ್ವ ಕಾಲಿಗೆ ಕಬ್ಬಿಣದ ಸರಪಳಿ ಹಾಕಿ ಬಂಧಿಸಿಟ್ಟಿದ್ದ ಘಟನೆ ರಾಯಚೂರಿನ ಸಿಂಧನೂರಿನಲ್ಲಿ ನಡೆದಿದೆ.

    ಜಿಲ್ಲೆಯ ಬಡಿಬೇಸ್ ಪ್ರದೇಶದಲ್ಲಿರುವ ಮದರಸಾ ಏ ಅರಬ್ಬಿಯಾ ದಾರೂಲ್ ಉಲೂಮ್ ಮೊಹಮ್ಮದಿಯಾ ಮದರಸಾದ ಶಿಕ್ಷಕ ಆಸೀಫ್, 10 ವರ್ಷದ ಖದೀರ್ ಎನ್ನುವ ವಿದ್ಯಾರ್ಥಿ ಕಾಲಿಗೆ ಸರಪಳಿ ಹಾಕಿ ಮದರಸಾದಲ್ಲೆ ಬಂಧಿಸಿಟ್ಟಿದ್ದ. ಆದರೆ ಖದೀರ್ ಹೇಗೋ ಅಲ್ಲಿಂದ ತಪ್ಪಿಸಿಕೊಂಡು ಸರಪಳಿ ಸಹಿತ ಹೊರಗಡೆ ಬಂದಿದ್ದ.

    ರಸ್ತೆಯಲ್ಲಿ ಖದೀರ್ ನನ್ನು ನೋಡಿದ ಮುಸ್ಲಿಂ ಮುಖಂಡರು ವಿದ್ಯಾರ್ಥಿಯನ್ನು ಅಮಾನವೀಯವಾಗಿ ನೋಡಿಕೊಳ್ಳುತ್ತಿದ್ದಿರಾ ಎಂದು ಗಲಾಟೆ ಮಾಡಿ ಮದರಸಾ ಮುಖ್ಯಸ್ಥ ಹುಸೇನ್ ಬಾಷಾನನ್ನು ಥಳಿಸಿದ್ದಾರೆ. ಇದರಿಂದ ಗಾಯಗೊಂಡ ಹುಸೇನ್ ಬಾಷಾ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾನೆ.

    ಹಲ್ಲೆ ಆರೋಪದಲ್ಲಿ ಸೈಯದ್ ರಬ್ಬಾನಿ, ಸೈಯದ್ ಸಲೀಂ ಸೇರಿ 6 ಜನರ ವಿರುದ್ಧ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿ ಖದೀರ್ ಪೊಷಕರು ತಮ್ಮ ಮಗ ತುಂಬಾ ಕಿಟಲೇ ಮಾಡುತ್ತಿದ್ದರಿಂದ ಅವನನ್ನು ಸರಿ ಮಾಡುವಂತೆ ಶಿಕ್ಷಕರಿಗೆ ನಾವೇ ಹೇಳಿದ್ದೇವು ಎಂದು ಪೊಲೀಸರಿಗೆ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದೈಹಿಕ ಶಿಕ್ಷಣ ಶಿಕ್ಷಕನಿಂದ ಕಾಮ ಪಾಠ- ಅನಾಥ ವಿದ್ಯಾರ್ಥಿನಿಯರೇ ಈತನ ಟಾರ್ಗೆಟ್!

    ದೈಹಿಕ ಶಿಕ್ಷಣ ಶಿಕ್ಷಕನಿಂದ ಕಾಮ ಪಾಠ- ಅನಾಥ ವಿದ್ಯಾರ್ಥಿನಿಯರೇ ಈತನ ಟಾರ್ಗೆಟ್!

    ಕಲಬುರಗಿ: ವಿದ್ಯೆ ಕೊಟ್ಟು ಪಾಠ ಕಲಿಸುವ ಶಿಕ್ಷಕನೊಬ್ಬ ಅನಾಥ ವಿದ್ಯಾರ್ಥಿನಿಯರಿಗೆ ಅಂಗಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿರುವ ಪ್ರಕರಣವೊಂದು ಕಲಬುರಗಿಯಲ್ಲಿ ಬೆಳಕಿಗೆ ಬಂದಿದೆ.

    ಬಸವರಾಜ್ ಕಲಬುರಗಿಯ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ. ಅನಾಥ ಮಕ್ಕಳೇ ಈತನ ಟಾರ್ಗೆಟ್ ಆಗಿದ್ದು, ವಿದ್ಯಾರ್ಥಿನಿಯರನ್ನು ತನ್ನ ಕೊಠಡಿಗೆ ಕರೆಸಿ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ. ಈತನ ಕಾಮದಾಟದಿಂದ ಬೇಸತ್ತ ವಿದ್ಯಾರ್ಥಿನಿಯರು ಪೊಲೀಸರಿಗೆ ದೂರು ಕೊಟ್ಟಿದ್ದಾರೆ.

    ಅನಾಥ ಮಕ್ಕಳು ಅಂದರೆ ಅವರಿಗೆ ಹಿಂದೆ-ಮುಂದೆ ಯಾರೂ ಇರಲ್ಲ ಎಂದುಕೊಂಡು ಕಾಮಿ ಶಿಕ್ಷಕ, ಈ ಹಿಂದೆಯೂ ಕೂಡ ಸಾಕಷ್ಟು ಅನಾಥ ವಿದ್ಯಾರ್ಥಿನಿಯರ ಅಂಗಾಂಗ ಮುಟ್ಟಿ ದೌರ್ಜನ್ಯವೆಸಗಿದ್ದಾನೆ. ಸದ್ಯ ಕಾಮುಕ ಶಿಕ್ಷಕ ಬಸವರಾಜ್ ಕಲಬುರಗಿ ಪೊಲೀಸರ ಅತಿಥಿಯಾಗಿದ್ದಾನೆ.

    ವಿದ್ಯಾರ್ಥಿಗಳಿಗೆ ವಿದ್ಯೆ ಕಲಿಸಿ, ತಿದ್ದಿ ತೀಡುವ ಗುರುವಿಗೆ ಅತ್ಯುನ್ನತ ಸ್ಥಾನ ಇದೆ. ಆದರೆ ಈ ಶಿಕ್ಷಕ ವಿದ್ಯಾರ್ಥಿಗಳಿಗೆ ಪಾಠ ಮಾಡುವುದು ಬಿಟ್ಟು ಕಾಮದಾಟ ಆಡುತ್ತಾ ಸಮಾಜ ತಲೆ ತಗ್ಗಿಸುವ ಕೆಲಸ ಮಾಡಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv