Tag: ಶಿಕ್ಷಕ

  • ಕಂಠಪೂರ್ತಿ ಮದ್ಯ ಕುಡಿದ ಶಿಕ್ಷಕರಿಂದ ರಂಪಾಟ- ವಿಡಿಯೋ ನೋಡಿ

    ಕಂಠಪೂರ್ತಿ ಮದ್ಯ ಕುಡಿದ ಶಿಕ್ಷಕರಿಂದ ರಂಪಾಟ- ವಿಡಿಯೋ ನೋಡಿ

    ಮೈಸೂರು: ಪಾಠ ಹೇಳುವ ಶಿಕ್ಷಕರೇ ತಮ್ಮ ಕಡೆಯವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಕೊಡಬೇಕೆಂದು ಆಗ್ರಹಿಸಿ ಕುಡಿದು ರಂಪಾಟ ಮಾಡಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.

    ನಂಜನಗೂಡು ಪಟ್ಟಣದ ಜೆಎಸ್‍ಎಸ್ ಮಂಗಳ ಮಂಟಪದ ಮುಂಭಾಗ ಸೆಪ್ಟೆಂಬರ್ 4 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ತಮ್ಮ ಕಡೆಯವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡುವಂತೆ ಒತ್ತಾಯಿಸಿ ಹೆಮ್ಮರಗಾಲದ ಅಂಕಶೆಟ್ಟಿ, ಹೊನ್ನಬಿಡಿನ ಚೆಲುವಮೂರ್ತಿ ಎಂಬ ಇಬ್ಬರು ಶಿಕ್ಷಕರು ಕುಡಿದು ರಂಪಾಟ ಮಾಡಿದ್ದಾರೆ.

    ಸಾರ್ವಜನಿಕ ಶಿಕ್ಷಣ ಇಲಾಖೆಯ ಬಿಆರ್‍ಸಿ ಅಧಿಕಾರಿಯಾಗಿರುವ ಕೆ.ಜೆ.ಮಹೇಶ್ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ನಾವು ಹೇಳಿದವರಿಗೆ ಪ್ರಶಸ್ತಿ ನೀಡಬೇಕು. ಇಲ್ಲದಿದ್ದರೆ ಚೆನ್ನಾಗಿರಲ್ಲ ಎಂದು ಬೆದರಿಕೆ ಹಾಕಿದ್ದಾರೆ.

    ಸೆ. 5 ರಂದು ಇದೇ ಜೆಎಸ್‍ಎಸ್ ಮಂಗಳ ಮಂಟಪದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಆಯೋಜನೆಗೊಂಡಿದ್ದ ಹಿನ್ನೆಲೆಯಲ್ಲಿ ಅದೇ ಸ್ಥಳಕ್ಕೆ ಗದ್ದಲ ನಡೆಸಿದ್ದಾರೆ. ಶಿಕ್ಷಕರ ರಂಪಾಟದ ದೃಶ್ಯಗಳು ಮೊಬೈಲ್‍ನಲ್ಲಿ ಸೆರೆಯಾಗಿದೆ. ತಡವಾಗಿ ಕೆ.ಜೆ.ಮಹೇಶ್ ಅವರಿಗೆ ಈ ವಿಡಿಯೋ ಸಿಕ್ಕಿದೆ. ವಿಡಿಯೋ ಆಧಾರದ ಮೇಲೆ ಅವರು ಬಿಇಓಗೆ ಶಿಕ್ಷಕರ ವಿರುದ್ಧ ದೂರು ನೀಡಿದ್ದಾರೆ.

    https://youtu.be/YCzY9L21V0I

  • ಶಿಕ್ಷಕರ ಪರಿಶ್ರಮದಿಂದಾಗಿ SSLC ಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸ್ತಿದೆ ದಾವಣಗೆರೆಯ ಈ ಶಾಲೆ!

    ಶಿಕ್ಷಕರ ಪರಿಶ್ರಮದಿಂದಾಗಿ SSLC ಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸ್ತಿದೆ ದಾವಣಗೆರೆಯ ಈ ಶಾಲೆ!

    ದಾವಣಗೆರೆ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗಲ್ಲ. ಹಾಗಾಗಿ ಫಲಿತಾಂಶ ಕಡಿಮೆ ಬರುತ್ತೆ ಅನ್ನೋ ಕೊಂಕಿದೆ. ಆದರೆ ಜಿಲ್ಲೆಯೆ ತುರ್ಚಘಟ್ಟ ಶಾಲೆಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹಲವು ವರ್ಷಗಳಿಂದ ಶೇ.97ರಷ್ಟು ಫಲಿತಾಂಶ ದಾಖಲಾಗುತ್ತಿದೆ.

    ಹೌದು, ಈ ವಿಶೇಷ ಸಾಧನೆಗೆ ಕಾರಣ ಶಾಲೆಯ ಶಿಕ್ಷಕ ರಾಮರೆಡ್ಡಿ ಅವರ ಪರಿಶ್ರಮ. ರಾಮರೆಡ್ಡಿ ಅವರಿಂದಾಗಿ ತುರ್ಚಘಟ್ಟ ಗ್ರಾಮದ ಆಂಜನೇಯ ಸರ್ಕಾರಿ ಪ್ರೌಢಶಾಲೆ ಕಳೆದ ಹಲವಾರು ವರ್ಷಗಳಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.97ರಷ್ಟು ಫಲಿತಾಂಶ ಪಡೆಯುತ್ತಿದೆ. ಈ ಮೂಲಕ ಜಿಲ್ಲೆಯಲ್ಲಿ ಮಾದರಿ ಶಾಲೆಗಳ ಪಟ್ಟಿಗೆ ಸೇರಿದೆ.

    ತಾವು ಈ ಶಾಲೆಗೆ ಬಂದ ಮೇಲೆ ಶಾಲೆಯ ಪಾಠದ ಜೊತೆಗೆ ಮಕ್ಕಳನ್ನ ಗುಂಪುಗಳನ್ನಾಗಿ ಮಾಡಿ ಆ ಗುಂಪುಗಳನ್ನ ದತ್ತು ಪಡೆದು ವಿದ್ಯಾಭ್ಯಾಸದ ಸಂಪೂರ್ಣ ಜವಾಬ್ದಾರಿ ಹೊತ್ತಿದ್ದಾರೆ. ಜೊತೆಗೆ ಮನೆ ಮನೆ ಪಾಠದ ಯೋಜನೆ ಹಮ್ಮಿಕೊಂಡು ಫಲಿತಾಂಶ ಹೆಚ್ಚಿಸಿದ್ದಾರೆ.

    ವಿದ್ಯಾರ್ಥಿಗಳು ಪೋಷಕರ ಜೊತೆ ಅವರವರ ಮನೆಯಲ್ಲಿ ಸಮಾಲೋಚನಾ ಸಭೆ ನಡೆಸಿ ವಿದ್ಯಾರ್ಥಿಗಳ ಬೌದ್ಧಿಕ ದೌರ್ಬಲ್ಯತೆಗೆ ಕಾರಣ ಪತ್ತೆ ಹಚ್ಚಿ ಪರಿಹಾರ ಕೈಗೊಳ್ಳುತ್ತಾರೆ. ಜೊತೆಗೆ ನಾಲ್ಕು ಗೋಡೆಗಳ ಮಧ್ಯೆ ಪಾಠ ಮಾಡುವುದಕ್ಕಿಂತ ನಿಸರ್ಗದ ಮಡಿಲಲ್ಲಿ ಪಾಠ ಮಾಡಿ ವಿದ್ಯಾರ್ಥಿಗಳ ಓದಿನ ಆಸಕ್ತಿ ಹೆಚ್ಚಿಸುತ್ತಿದ್ದಾರೆ.

    ಇವರ ಈ ಯೋಜನೆಗಳನ್ನು ಪ್ರತಿ ಸರ್ಕಾರಿ ಶಾಲೆಯಲ್ಲಿ ಅಳವಡಿಸಿಕೊಂಡರೆ ಖಾಸಗಿ ಶಾಲೆಗಿಂತಲೂ ಸರ್ಕಾರಿ ಶಾಲೆಗಳಲ್ಲಿಯೇ ಗುಣಮಟ್ಟದ ಶಿಕ್ಷಣ ಸಿಗುತ್ತೆ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ.

     

  • ವಿದ್ಯಾರ್ಥಿನಿಯ ಮೈ,ಕೈ ಮುಟ್ತಾನೆ-ತಾನೇ ದುಡ್ಡು ಕೊಟ್ಟು ಟೂರ್‍ಗೆ ಕರ್ಕೊಂಡು ಹೋಗ್ತಾನೆ

    ವಿದ್ಯಾರ್ಥಿನಿಯ ಮೈ,ಕೈ ಮುಟ್ತಾನೆ-ತಾನೇ ದುಡ್ಡು ಕೊಟ್ಟು ಟೂರ್‍ಗೆ ಕರ್ಕೊಂಡು ಹೋಗ್ತಾನೆ

    – ಎಸ್‍ಪಿ ಕಚೇರಿಗೆ ಬಂತು ಅನಾಮಧೇಯ ಪತ್ರ

    ಚಿಕ್ಕಮಗಳೂರು: ಟ್ಯೂಷನ್ ಕೊಡ್ತೀನಿ ಅಂತ ಮನೆಗೆ ಕರೆದ, ಮನೇಗೆ ಹೋದ್ಮೇಲೆ ಮೈಮೇಲೆ ಕೈ ಹಾಕ್ದ. ಸರ್, ನೀವ್ ನಮ್ಮ ಗುರುಗಳು ಅಂದಿದ್ಕೆ ನಿಮ್ಗೆ ಎಸ್‍ಎಸ್‍ಎಲ್‍ಸಿಯಲ್ಲಿ ಹೆಚ್ಚು ಅಂಕ ಬರುವಂತೆ ಮಾಡ್ತೀನಿ ಎಂದ. ಟೂರ್‍ಗೆಂದು ಕೇರಳಕ್ಕೆ ಕರೆದ್ಕೊಂಡ ಹೋಗಿದ್ದ. ಹೆಣ್ಮಕ್ಕಳು ಡ್ರೆಸ್ ಚೇಂಜ್ ಮಾಡುವಾಗ ಕ್ಯಾಮರಾ ಹಿಡಿದು ಒಳಗೇ ಬಂದ. ಇದು ಚಿಕ್ಕಮಗಳೂರಿನ ಪೋಲಿ ಮೇಷ್ಟ್ರ ಸ್ಟೋರಿ.

    ಹೌದು. ಚಿಕ್ಕಮಗಳೂರಿನ ವಿಶ್ವವಿದ್ಯಾಲಯ ಪ್ರೌಢಶಾಲೆಯ ಗಣಿತ ಶಿಕ್ಷಕ ಲೋಕೇಶ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಶತಮಾನದ ಇತಿಹಾಸವಿರುವ ಈ ಶಾಲೆಯ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿಯರೇ ಬರೆದ್ರೋ ಅಥವಾ ಶಿಕ್ಷಕರೇ ಬರೆದ್ರೋ ಗೊತ್ತಿಲ್ಲ. ಆದರೆ ಎಸ್ಪಿ ಕಚೇರಿಗೆ ಬಂದ ಅನಾಮಧೇಯ ದೂರಿನನ್ವಯ ವಿಚಾರಣೆ ನಡೆಸಿದಾಗ ಈ ಶಿಕ್ಷಕನ ಕಾಮಪುರಾಣ ಬಯಲಾಗಿದೆ.

    ಲೋಕೇಶ್ 6 ವಿದ್ಯಾರ್ಥಿನಿಯರನ್ನ ಮನೆಗೆ ಕರೆಸಿಕೊಂಡಿದ್ದನು. ನಿಮಗೆ ಎಸ್‍ಎಸ್‍ಎಲ್‍ಸಿಯಲ್ಲಿ ಅತಿ ಹೆಚ್ಚು ಅಂಕ ಬರುವಂತೆ ಮಾಡ್ತೀನಿ ಎಂದು ಮೈ-ಕೈ ಮುಟ್ಟುತ್ತಿದ್ದನು. ವಿದ್ಯಾರ್ಥಿನಿಯರ ಶಾಲೆ, ಟೂರ್ ಫೀಸ್‍ನ ಇವನೇ ಕಟ್ಟಿ ಕರೆದುಕೊಂಡು ಹೋಗುತ್ತಿದ್ದ. ಅಲ್ಲಿ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ನಡೆಸುತ್ತಿದ್ದ ಎನ್ನಲಾಗಿದೆ. ಶಿಕ್ಷಕನ ಈ ಪುಂಡಾಟವನ್ನ ವಿದ್ಯಾರ್ಥಿನಿಯರು ಹೆಡ್ ಮಾಸ್ಟರ್ ಗಮನಕ್ಕೆ ತಂದ್ರೂ ಅವ್ರು ನಕ್ಕು ಸುಮ್ಮನಾಗುತ್ತಿದ್ದರು ಎಂದು ಹೆಣ್ಮಕ್ಕಳು ಪೊಲೀಸರ ತನಿಖೆ ವೇಳೆ ಹೇಳಿದ್ದಾರೆ. ಈಗ ಶಾಲೆಯ ಹೆಡ್ ಮಾಸ್ಟರ್ ಶ್ರೀನಿವಾಸ್, ಹೌದು, ಶಿಕ್ಷಕ ಲೋಕೇಶ್ ತಪ್ಪು ಮಾಡಿದ್ದಾರೆ ಎಂದು ಹೇಳುತ್ತಾರೆ.

    ವಿದ್ಯಾರ್ಥಿನಿಯರನ್ನ ಟೂರ್‍ಗೆ ಕರೆದುಕೊಂಡು ಹೋಗಿ ಮೈಮೇಲೆ ಕೈ ಹಾಕಿದ್ದಾನೆ. ಅವರು ಬಟ್ಟೆ ಚೇಂಜ್ ಮಾಡುವಾಗ ಕ್ಯಾಮರಾ ಹಿಡಿದು ಹೇಳದೆ-ಕೇಳದೆ ರೂಂಗೆ ನುಗ್ಗಿದ್ದಾನೆ. ವಿಜ್ಞಾನ ವಸ್ತು ಪ್ರದರ್ಶನಕ್ಕೆಂದು ಧಾರವಾಡಕ್ಕೆ ಹೋದಾಗ ಒಬ್ಬಳೇ ವಿದ್ಯಾರ್ಥಿಯನ್ನ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದ. ಇಷ್ಟೆಲ್ಲಾ ಮಾಡಿದ ಕಾಮುಕ ಟೀಚರ್ ನಮಗೆ ಬೇಡ. ಇವನು ಇಲ್ಲೇ ಇದ್ರೆ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಎಸ್ಪಿ ಕಚೇರಿಗೆ ಅನಾಮಧೇಯ ಪತ್ರ ಬಂದಿದೆ.

  • ಕೆಪಿಎಸ್‍ಸಿ ಪರೀಕ್ಷೆ ಪಾಸಾದ ಶಿಕ್ಷಕ ನೌಕರಿಗಾಗಿ 19 ಕುರಿಗಳನ್ನ ಕದ್ದ!

    ಕೆಪಿಎಸ್‍ಸಿ ಪರೀಕ್ಷೆ ಪಾಸಾದ ಶಿಕ್ಷಕ ನೌಕರಿಗಾಗಿ 19 ಕುರಿಗಳನ್ನ ಕದ್ದ!

    ಕೊಪ್ಪಳ: ಕೆಪಿಎಸ್‍ಸಿ ಪರೀಕ್ಷೆ ಪಾಸಾಗಿದದ್ದ ಶಿಕ್ಷಕನೊಬ್ಬ ನೌಕರಿ ಪಡೆಯಲು ಹಣ ಅಡಚಣೆಯಾಗಿ ಕುರಿ ಕಳ್ಳತನ ಮಾಡಿ ಜೈಲು ಪಾಲಾಗಿರೋ ಘಟನೆ ಕೊಪ್ಪಳದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ಕೊಪ್ಪಳ ತಾಲೂಕಿನ ಜಿನ್ನಾಪುರ ತಾಂಡಾದ ಕಿರಣ ಕುಮಾರ ಎಂಬವರಿಗೆ ಸೇರಿದ ಕುರಿಗಳನ್ನ ಶಿಕ್ಷಕ ವೆಂಕಟೇಶ್ ನಾಯಕ ಸೇರಿ ಮೂವರು ಕಳ್ಳತನ ಮಾಡಿದ್ದಾರೆ. ಕಳೆದ ಆಗಸ್ಟ್ 6ರಂದು ಸೀತಮ್ಮನಕಲ್ಲು ಬಳಿಯ ಹಟ್ಟಿಯಲ್ಲಿ 19 ಕುರಿಗಳನ್ನು ಕಳ್ಳತನ ಮಾಡಿದ್ದಾರೆ. ಇದರ ಮೌಲ್ಯ 1 ಲಕ್ಷದ 29 ಸಾವಿರ ಆಗಿದೆ.

    ಆಗಸ್ಟ್ 10 ರಂದು ಕುರಿ ಕಳ್ಳತನವಾಗಿರೋ ಕುರಿತು ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಕಿರಣ ಕುಮಾರ ಪ್ರಕರಣ ದಾಖಲು ಮಾಡಿದ್ದರು. ಬೊಮ್ಮಸಾಗರ ತಾಂಡಾದ ಶಿಕ್ಷಕ ವೆಂಕಟೇಶ್ ನಾಯಕನಿಗೆ ಕುರಿ ಕಳ್ಳತನ ಮಾಡಲು ಸ್ಥಳೀಯರಾದ ಗೋಪಾಲ, ಅರ್ಜುನ ಹಾಗು ಯಮನೂರ ಸಹಾಯ ಮಾಡಿದ್ದು, ವಿಚಾರಣೆ ನಡೆಸಿದ ಪೊಲೀಸರು ನಾಲ್ವರನ್ನ ಆಗಸ್ಟ್ 12ರಂದು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

  • ಶತಮಾನದ ಶಾಲೆಗೆ ಹೊಸರೂಪ, ಸಾಧಕರ ಕಲಾಕೃತಿ ಜೊತೆ ಪಾಠ ಮಾಡೋ ಹಾವೇರಿಯ ಕೃಷ್ಣಪ್ಪ

    ಶತಮಾನದ ಶಾಲೆಗೆ ಹೊಸರೂಪ, ಸಾಧಕರ ಕಲಾಕೃತಿ ಜೊತೆ ಪಾಠ ಮಾಡೋ ಹಾವೇರಿಯ ಕೃಷ್ಣಪ್ಪ

    ಹಾವೇರಿ: ಸರ್ಕಾರಿ ಶಾಲೆ ಅಂದ್ರೆ ಮೂಗುಮರಿಯೋ ಜನರೇ ಹೆಚ್ಚು. ಆದ್ರೆ ಇಂಥ ಮಾತನ್ನ ಸುಳ್ಳು ಮಾಡಿರೋ ಹಲವು ಶಾಲೆಗಳು, ಶಿಕ್ಷಕರ ಬಗ್ಗೆ ಪಬ್ಲಿಕ್ ಹೀರೋ ಕಾರ್ಯಕ್ರಮದಲ್ಲಿ ತೋರಿಸಿದ್ದೀವಿ. ಇವತ್ತು ಅಂಥದ್ದೇ ಸ್ಟೋರಿ. ಮಕ್ಕಳನ್ನ ಸೆಳೆಯೋಕೆ, ಅವರಲ್ಲಿ ಹೆಚ್ಚಿನ ಜ್ಞಾನ ತುಂಬೋಕೆ ಹಾವೇರಿಯ ರಾಣೇಬೆನ್ನೂರಿನ ಅರೇಮಲ್ಲಾಪುರ ಗ್ರಾಮದ ಶಿಕ್ಷಕ ಕಾರ್ಯ ಶ್ಲಾಘನೀಯ.

    ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಈ ರೀತಿ ನಿರ್ಮಾಣಗೊಂಡಿರುವ ಸುಂದರ ಕಲಾಕೃತಿಗಳು ಮತ್ತು ಅದನ್ನ ತೋರಿಸಿ ಪಾಠ ಮಾಡುತ್ತಿರುವ ಶಿಕ್ಷಕ ಕೃಷ್ಣಪ್ಪ ದುರ್ಗದ ಅವರೇ ಇವತ್ತಿನ ನಮ್ಮ ಪಬ್ಲಿಕ್ ಹೀರೋ

    1904ರಲ್ಲಿ ಪ್ರಾರಂಭವಾದ ಶಾಲೆ ಶತಮಾನೋತ್ಸ ಕಂಡಿದೆ. ಆದ್ರೆ ಎಲ್ಲಾ ಶಾಲೆಗಳಂತಿದ್ದ ಈ ಶಾಲೆಗೆ ನಾಲ್ಕು ವರ್ಷದಿಂದ ಶಿಕ್ಷಕ ಕೃಷ್ಣಪ್ಪ ದುರ್ಗದ ಅವರ ವಿಶೇಷ ಆಸಕ್ತಿಯಿಂದ ಹೊಸರೂಪ ಬಂದಿದೆ. ಶಾಲೆಯ ಆವರಣದಲ್ಲಿ ಹೋರಾಟಗಾರರು, ದಾರ್ಶನಿಕರು, ಸಾಹಿತಿಗಳು, ಮಹಾನ್ ವ್ಯಕ್ತಿಗಳ ಕಲಾಕೃತಿಯನ್ನ ಸಿಮೆಂಟ್‍ನಲ್ಲಿ ನಿರ್ಮಿಸಿದ್ದಾರೆ.

    ಅರೇಮಲ್ಲಾಪುರ ಶಾಲೆಯಲ್ಲಿ ಮೊದಲಿಗೆ ಮಕ್ಕಳ ಕೊರತೆ ಇತ್ತು. ಆದ್ರೆ ಶಾಲೆಗೆ ಹೊಸ ಮೆರುಗು ನೀಡಿದ್ದು, ಮಕ್ಕಳ ಕಲಿಕೆಗೆ ಪೂರಕ ವಾತಾವರಣ ಇರೋದ್ರಿಂದ ಈಗ 400ಕ್ಕೆ ಏರಿದೆ. ಶಿಕ್ಷಕ ಕೃಷ್ಣಪ್ಪ ಕಾರ್ಯದ ಬಗ್ಗೆ ಗ್ರಾಮಸ್ಥರು ಕೊಂಡಾಡುತ್ತಾರೆ.

    ಇದಕ್ಕಾಗಿ ಶಿಕ್ಷಕ ಕೃಷ್ಣಪ್ಪ ಮೊದಲಿಗೆ ತಾವೇ ಖರ್ಚು ಮಾಡಿದ್ದು, ನಂತರ ಗ್ರಾಮದ ದಾನಿಗಳಿಂದ ನೆರವು ಸಿಕ್ಕಿದೆ. ಕೃಷ್ಣಪ್ಪ ಅವರ ಕಾರ್ಯಕ್ಕೆ ಶಾಲೆಯ ಶಿಕ್ಷಕ ವೃಂದ ಕೂಡ ಸಾಥ್ ನೀಡಿದೆ.

  • ಅಪ್ರಾಪ್ತ ವಿದ್ಯಾರ್ಥಿನಿಯರೊಂದಿಗಿನ ಅಶ್ಲೀಲ ಫೋಟೋ ಅಪ್‍ಲೋಡ್ ಮಾಡಿದ ಕಾಮುಕ ಶಿಕ್ಷಕ

    ಅಪ್ರಾಪ್ತ ವಿದ್ಯಾರ್ಥಿನಿಯರೊಂದಿಗಿನ ಅಶ್ಲೀಲ ಫೋಟೋ ಅಪ್‍ಲೋಡ್ ಮಾಡಿದ ಕಾಮುಕ ಶಿಕ್ಷಕ

    ಡಿಸ್ಪುರ: ಅಸ್ಸಾಂನ ಪುಟ್ಟ ಗ್ರಾಮವೊಂದರಲ್ಲಿ ಕಾಮುಕ ಶಿಕ್ಷಕನೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯರೊಂದಿಗೆ ವಿವಿಧ ಭಂಗಿಯಲ್ಲಿ ಫೋಟೋ ತೆಗೆಸಿಕೊಂಡು ಅದನ್ನು ಆನ್‍ಲೈನ್‍ನಲ್ಲಿ ಹಂಚಿಕೊಂಡಿರುವ ಬಗ್ಗೆ ವರದಿಯಾಗಿದೆ.

    ಇಲ್ಲಿನ ಹೈಲಾಕಂಡಿ ಜಿಲ್ಲೆಯ ಕಟ್ಲಿಚೆರ್ರಾ ಎಂಬ ಪುಟ್ಟ ಗ್ರಾಮ ಈ ಘಟನೆಗೆ ಸಾಕ್ಷಿಯಾಗಿದೆ. ಶಿಕ್ಷಕನಾದ ಫೈಜುದ್ದಿನ್ ಲಸ್ಕರ್ ತನ್ನ ಅಪ್ರಾಪ್ತ ವಿದ್ಯಾರ್ಥಿನಿಯರೊಂದಿಗೆ ಅಶ್ಲೀಲವಾಗಿ ಫೋಟೋ ತೆಗೆಸಿಕೊಂಡಿದ್ದಲ್ಲದೆ ಅವುಗಳನ್ನ ಆನ್‍ಲೈನ್‍ನಲ್ಲಿ ಹಂಚಿಕೊಂಡಿದ್ದಾನೆ. ಈತ ಕಟ್ಲಿಚೆರಾದ ಮಾಡೆಲ್ ಹೈ ಸ್ಕೂಲ್‍ನಲ್ಲಿ ಕಲಸ ಮಾಡ್ತಿದ್ದು, ಈ ಹಿಂದೆಯೂ ಇಂತಹ ಸಾಕಷ್ಟು ಅಪರಾಧಗಳನ್ನ ಎಸಗಿದ್ದಾನೆ ಎಂದು ವರದಿಯಾಗಿದೆ.

    ಸ್ಥಳೀಯ ಮಾಧ್ಯಮವೊಂದರ ವರದಿಯ ಪ್ರಕಾರ ಈ ಹಿಂದೆ ಫೈಜುದ್ದೀನ್ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಸಿಕ್ಕಿಬಿದ್ದಾಗ ಜನರ ಗುಂಪು ಆತನ ಬೆರಳನ್ನೇ ಕತ್ತರಿಸಿದ್ರು ಎನ್ನಲಾಗಿದೆ.

    ಫೈಜುದ್ದಿನ್ ಈ ಫೋಟೋಗಳನ್ನ ಅಪ್ಲೋಡ್ ಮಾಡಿದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ಆದ್ರೆ ಇಷ್ಟೆಲ್ಲಾ ಮಾಡಿದ್ರೂ ಪೊಲೀಸರು ಮಾತ್ರ ಶಿಕ್ಷಕನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

    ಫೋಟೋಗಳು ವೈರಲ್ ಆದ ಬಳಿಕ ಬಾಲಕಿಯಯೊಬ್ಬಳ ಪೋಷಕರು ಶಿಕ್ಷಕನ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಆದ್ರೆ ಪೊಲೀಸರು ಶಿಕ್ಷಕನನ್ನು ಈ ಬಗ್ಗೆ ವಿಚಾರಣೆಗೊಳಪಡಿಸಿದ್ದಾರೆ ಹೊರತು ಬಂಧನ ಮಾಡಿಲ್ಲ.

  • ಬಾಸುಂಡೆ ಬರುವಂತೆ 6ನೇ ತರಗತಿ ವಿದ್ಯಾರ್ಥಿಗೆ ಹೊಡೆದ ಶಿಕ್ಷಕ

    ಬಾಸುಂಡೆ ಬರುವಂತೆ 6ನೇ ತರಗತಿ ವಿದ್ಯಾರ್ಥಿಗೆ ಹೊಡೆದ ಶಿಕ್ಷಕ

    ನೆಲಮಂಗಲ: ಹುಷಾರಿಲ್ಲದ್ದಕ್ಕೆ ಶಾಲೆಯ ಕೊಠಡಿಯಲ್ಲಿ ಮಲಗಿದ್ದ ಕಾರಣಕ್ಕೆ ಸಿಟ್ಟಿಗೆದ್ದ ಶಿಕ್ಷಕ ವಿದ್ಯಾರ್ಥಿಯ ಮೈಯಲ್ಲಿ ಬಾಸುಂಡೆ ಬರುವಂತೆ ಥಳಿಸಿರುವ ಘಟನೆ ನಡೆದಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಮಾದರಿ ಸಕಾ9ರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ನರಸಾಪುರ ಗ್ರಾಮದ ಜಗದೀಶ್ ಹಾಗೂ ಸರಸ್ವತಿ ಎಂಬವರ ಮಗ ಕುಮಾರ್ ಗೆ ಶಿಕ್ಷಕ ರೇವಣ್ಣಸಿದ್ದಯ್ಯ ಬಾಸುಂಡೆ ಬರುವಂತೆ ಹೊಡೆದಿದ್ದಾರೆ.

    ಕಳೆದ ನಾಲ್ಕು ದಿನದಿಂದ ಕುಮಾರ್ ಜ್ವರದಿಂದ ಬಳಲುತಿದ್ದು, ಶಿಕ್ಷಕ ಪಾಠ ಮಾಡುವಾಗ ಶಾಲೆಯ ಕೊಠಡಿಯಲ್ಲಿ ಮಲಗಿದ್ದ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ರೇವಣ್ಣಸಿದ್ದಯ್ಯ ಬಾಸುಂಡೆ ಬರುವಂತೆ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿ ಹಾಗೂ ಪೋಷಕರು ಆರೋಪಿಸಿದ್ದಾರೆ.

    ಈ ಬಗ್ಗೆ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಿಕ್ಷಕನ ವಿರುದ್ಧ ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

     

  • ಹಾಡಿನ ಮೂಲಕ ವಿಜ್ಞಾನದ ಕಲಿಕೆ- ಜಾಗೃತಿ ಜೊತೆ ಪಠ್ಯ ಬೋಧನೆ ಮಾಡುವ ವೀರೇಂದ್ರ ಪಾಟೀಲ್ ಮೇಷ್ಟ್ರು

    ಹಾಡಿನ ಮೂಲಕ ವಿಜ್ಞಾನದ ಕಲಿಕೆ- ಜಾಗೃತಿ ಜೊತೆ ಪಠ್ಯ ಬೋಧನೆ ಮಾಡುವ ವೀರೇಂದ್ರ ಪಾಟೀಲ್ ಮೇಷ್ಟ್ರು

    ರಾಯಚೂರು: ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಸರ್ಕಾರ ಹಾಕಿಕೊಳ್ಳೋ ಎಷ್ಟೋ ಯೋಜನೆಗಳು ಹಳ್ಳ ಹಿಡಿದಿವೆ. ಆದರೆ ಇವತ್ತಿನ ನಮ್ಮ ಪಬ್ಲಿಕ್ ಹೀರೋ ಹಾಡಿನ ಮೂಲಕ ಮಕ್ಕಳಿಗೆ ಶಿಕ್ಷಣ ಕೊಡಿಸೋ ಜೊತೆಗೆ ಪರಿಸರ ಜಾಗೃತಿ ಮೂಡಿಸ್ತಿದ್ದಾರೆ.

     

    ನಗರದ ಗಾಜಗಾರಪೇಟೆ ಪ್ರೌಢಶಾಲೆ ವಿಜ್ಞಾನ ಶಿಕ್ಷಕರಾಗಿರೋ ವೀರೇಂದ್ರ ಪಾಟೀಲರು ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಸಂಗೀತದ ಮೂಲಕ ಮಕ್ಕಳಿಗೆ ಬೇಗ ಅರ್ಥವಾಗುತ್ತೆ ಅನ್ನೋದನ್ನ ಮನಗಂಡ ಪಾಟೀಲ್ ಮೇಷ್ಟ್ರು ತಮ್ಮ ವಿಜ್ಞಾನ ಪಠ್ಯವನ್ನ ಹಾಡಿನ ಮೂಲಕ ಪ್ರಸ್ತುತಿ ಪಡಿಸ್ತಿದ್ದಾರೆ.

    ವೈಜ್ಞಾನಿಕ ಪದಗಳನ್ನ ಸುಲಭವಾಗಿ ಅರ್ಥ ಮಾಡಿಸುವುದರ ಜೊತೆಗೆ ಪರಿಸರ ಕಾಳಜಿಯನ್ನೂ ಮೂಡಿಸುತ್ತಿದ್ದಾರೆ. ಸಾಹಿತ್ಯ ರಚಿಸಿ, ನಿರ್ದೇಶನದ ಜೊತೆ ತಾವೇ ಹಾಡಿದ್ದಾರೆ. ಒಟ್ಟು 7 ಹಾಡುಗಳ ಸಿಡಿಯನ್ನ ಬಿಡುಗಡೆ ಮಾಡಿದ್ದು 350ಕ್ಕೂ ಹೆಚ್ಚು ಪ್ರತಿಗಳನ್ನ ಉಚಿತವಾಗಿ ವಿವಿಧ ಶಾಲೆಗೂ ಹಂಚಲಾಗಿದೆ.

    ಈ ರೀತಿಯ ಹಾಡುಗಳಿಂದ ವಿಜ್ಞಾನ ವಿಷಯದಲ್ಲಿ ಪಾಸಾಗೋದು ಸುಲಭವಾಗಿದೆ ಎಂದು ವಿದ್ಯಾರ್ಥಿಗಳು ಹೇಳುತ್ತಾರೆ. ಪಾಟೀಲ್ ಮೇಷ್ಟ್ರ ಈ ಕಾರ್ಯಕ್ಕೆ ಭಾರತ ಜ್ಞಾನ ವಿಜ್ಞಾನ ಸಮಿತಿ, ವಾಸವಿ ಸೇವಾ ಸಂಘ ಸೇರಿ ಕೆಲ ಸಂಸ್ಥೆಗಳು ಸಹಕಾರ ನೀಡಿವೆ.

    https://www.youtube.com/watch?v=dC0yCkgiDTc

     

  • 20 ವರ್ಷಗಳಿಂದ ಪರಿಸರ ರಕ್ಷಣೆ- ಸಸಿ ನೆಡೋದ್ರಲ್ಲೇ ಹಬ್ಬ, ಹುಟ್ಟುಹಬ್ಬದ ಖುಷಿ ಕಾಣುವ ಆನಂದ್ ಮೇಷ್ಟ್ರು

    20 ವರ್ಷಗಳಿಂದ ಪರಿಸರ ರಕ್ಷಣೆ- ಸಸಿ ನೆಡೋದ್ರಲ್ಲೇ ಹಬ್ಬ, ಹುಟ್ಟುಹಬ್ಬದ ಖುಷಿ ಕಾಣುವ ಆನಂದ್ ಮೇಷ್ಟ್ರು

    ಚಿಕ್ಕಬಳ್ಳಾಪುರ: ಮೇಷ್ಟ್ರುಗಳಿಗೆ ಶನಿವಾರ ಮತ್ತು ಭಾನುವಾರ ಬಂದ್ರೆ ಸಾಕು ಸ್ವಲ್ಪ ರಿಲ್ಯಾಕ್ಸ್ ಆಗ್ತಾರೆ. ಆದರೆ ಇವತ್ತಿನ ನಮ್ಮ ಪಬ್ಲಿಕ್ ಹೀರೋ ಮಾತ್ರ ಶನಿವಾರ ಮತ್ತು ಭಾನುವಾರ ಎರಡು ದಿನ ಬರೀ ಸಸಿ ನೆಡೋದ್ರಲ್ಲೇ ಖುಷಿ ಕಾಣ್ತಾರೆ.

    ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಅನುದಾನಿತ ಪಂಚಗಿರಿ ಬೋಧನಾ ಪ್ರೌಢ ಶಾಲೆಯ ಶಿಕ್ಷಕ ಆನಂದ್ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಪರಿಸರದ ಬಗ್ಗೆ ತುಂಬಾ ಕಾಳಜಿ ಇರೋ ಆನಂದ್ ಮೇಷ್ಟ್ರು ಜಿಲ್ಲೆಯ ಯಾವುದೇ ಮೂಲೆಯಲ್ಲಿ ಗಿಡ ನೆಡಬೇಕು ಅಂದ್ರು ರೆಡಿ. ಯಾವುದೇ ಹಬ್ಬ ಹರಿದಿನ ಇರಲಿ, ಹುಟ್ಟುಹಬ್ಬವೇ ಇರಲಿ, ಕೊನೆಗೆ ಯಾರಾದ್ರೂ ಆಪ್ತರು ಸತ್ತರೂ ಅವರ ಸಮಾಧಿ ಬಳಿ ನೆನಪಿಗಾಗಿ ಒಂದು ಗಿಡ ನೆಡ್ತಾರೆ.

    ಶನಿವಾರ-ಭಾನುವಾರ ಹಾಗೂ ರಜಾ ದಿನ ಬಂದ್ರೆ ಬರೀ ಗಿಡ ನೆಡೋದೇ ಇವರ ಕೆಲಸ. ಕಳೆದ 20 ವರ್ಷಗಳಲ್ಲಿ ಆನಂದ್ ಮೇಷ್ಟ್ರು ಸಾವಿರಾರು ಗಿಡ ನೆಟ್ಟು ಬೆಳೆಸಿದ್ದಾರೆ. ಗುಡಿಬಂಡೆಯಲ್ಲಿ ವಾಸವಿರೋ ಇವರು ಪಟ್ಟಣದ ಮೂರು ಪಾರ್ಕ್‍ಗಳಲ್ಲಿ ಮಾವು, ನೇರಳೆ, ಹಲಸು, ಸೀಬೆ, ದಾಳಿಂಬೆ ಹಾಗೂ ಹೂವಿನ ಗಿಡಗಳನ್ನ ನೆಟ್ಟಿದ್ದಾರೆ.

    ಆನಂದ್ ಮೇಷ್ಟ್ರ ಸಮಾಜಮುಖಿ ಕಾರ್ಯಕ್ಕೆ ರಾಜ್ಯ ಪರಿಸರ ಪ್ರಶಸ್ತಿ, ಸಾಲು ಮರದ ತಿಮ್ಮಕ್ಕ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ. ಇವರ ಪರಿಸರ ಕಾಳಜಿ ಸಾವಿರಾರು ಮಂದಿಗೆ ಸ್ಫೂರ್ತಿಯಾಗಲಿ.

    https://www.youtube.com/watch?v=Ou05SU38O8M

  • ಪಾಠ ಮಾಡೋ ಬದ್ಲು ವಿದ್ಯಾರ್ಥಿಗಳಿಗೆ ಸೆಕ್ಸ್ ಫೋಟೋ ತೋರಿಸ್ತಾನೆ ಈ ಶಿಕ್ಷಕ!

    ಪಾಠ ಮಾಡೋ ಬದ್ಲು ವಿದ್ಯಾರ್ಥಿಗಳಿಗೆ ಸೆಕ್ಸ್ ಫೋಟೋ ತೋರಿಸ್ತಾನೆ ಈ ಶಿಕ್ಷಕ!

    ತುಮಕೂರು: ಶಿಕ್ಷಕರು ಎಂದರೆ ದೇವರು ಸಮಾನ ಎಂದು ಎಲ್ಲರೂ ಭಾವಿಸ್ತಾರೆ. ಆದರೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಲಂಕೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿರುವ ಶಿಕ್ಷಕ ಮಾತ್ರ ಇದಕ್ಕೆ ತದ್ವಿರುದ್ಧವಾಗಿದ್ದಾನೆ. ಶಾಲೆಯಲ್ಲಿ ಓದುವ ಹೆಣ್ಣು ಮಕ್ಕಳಿಗೆ ಮೊಬೈಲ್‍ನಲ್ಲಿ ಸೆಕ್ಸ್ ಫೋಟೋ ತೋರಿಸೋ ಕೆಲಸ ಮಾಡುತ್ತಿದ್ದಾನೆ ಎಂಬ ಆರೋಪಗಳು ಕೇಳಿ ಬಂದಿವೆ.

    ದೇವರಾಜು ಎಂಬಾತನ ವಿರುದ್ಧವೇ ಆರೋಪಗಳು ಕೇಳಿ ಬಂದಿವೆ. ದೇವರಾಜು ಶಾಲೆಗೆ ತನಗೆ ಬೇಕಾದ ಸಮಯಕ್ಕೆ ಬಂದು ಪಾಠ ಮಾಡದೇ ಮೊಬೈಲ್ ಹಿಡಿದುಕೊಂಡು ಕೂರ್ತಾರೆ. ಮೊಬೈಲ್‍ನಲ್ಲಿ ಬೇಸರವಾದಾಗ ಶಾಲೆಯಲ್ಲೇ ನಿದ್ದೆಗೆ ಜಾರುತ್ತಾನೆ. ಈ ಕುರಿತು ಯಾರಾದ್ರೂ ಶಿಕ್ಷಕರು ಅಥವಾ ಪೋಷಕರು ಪ್ರಶ್ನೆ ಮಾಡಿದ್ರೆ ಅವರ ಮೇಲೆಯೇ ಗೂಂಡಾ ವರ್ತನೆ ತೋರಿಸುತ್ತಾನೆ ಎಂದು ಗ್ರಾಮಸ್ಥರು ಹೇಳುತ್ತಾರೆ.

    ಈ ದೇವರಾಜು ಹೆಸ್ರಲ್ಲಿ ಈಗಾಗಲೇ ಅನೇಕ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ತುಮಕೂರು ನಗರ ಡಿವೈಎಸ್ಪಿ ಶಿಕ್ಷಕ ದೇವರಾಜುನನ್ನ ರೌಡಿಶೀಟರ್ ಪಟ್ಟಿಗೆ ಸೇರಿಸಿದ್ದಾರೆ. ಇಷ್ಟೆಲ್ಲಾ ಇದ್ದರೂ ಸಹ ಶಿಕ್ಷಣ ಇಲಾಖೆ ಇತನನ್ನು ಶಿಕ್ಷಕನಾಗಿ ಮುಂದುವರೆಸುತ್ತಿರುವುದು ಈತನ ಪ್ರಭಾವವನ್ನು ತೋರಿಸುತ್ತದೆ. ಶಿಕ್ಷಕ ದೇವರಾಜು ಕಾಟಕ್ಕೆ ಬೇಸತ್ತಿರುವ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಈತನನ್ನು ಕೂಡಲೇ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.