Tag: ಶಿಕ್ಷಣ ಸಚಿವ

  • ಪಠ್ಯ ಪುಸ್ತಕ ಪರಿಷ್ಕರಣೆಯ ಗೊಂದಲಗಳಿಗೆ ಸಚಿವ ಬಿ.ಸಿ.ನಾಗೇಶ್ ತೆರೆ – ಏನಿರುತ್ತೆ, ಏನಿರಲ್ಲ?

    ಪಠ್ಯ ಪುಸ್ತಕ ಪರಿಷ್ಕರಣೆಯ ಗೊಂದಲಗಳಿಗೆ ಸಚಿವ ಬಿ.ಸಿ.ನಾಗೇಶ್ ತೆರೆ – ಏನಿರುತ್ತೆ, ಏನಿರಲ್ಲ?

    ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆಯಿಂದ ಉಂಟಾಗಿದ್ದ ಗೊಂದಲಗಳು, ವಿವಾದಗಳಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತೆರೆ ಎಳೆದಿದ್ದಾರೆ.

    ಒಂದು ಗಂಟೆಗೂ ಹೆಚ್ಚು ಸಮಯ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಉಂಟಾಗಿದ್ದ ಗೊಂದಲಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿದ್ದ ನಾರಾಯಣ ಗೌಡರಿಗೆ ಕೈ ಪಾಲಿಕೆ ಸದಸ್ಯರಿಂದ ಫುಲ್ ಕ್ಲಾಸ್

    siddaramaiah bc nagesh

    ಕಾಂಗ್ರೆಸ್ ಅವಧಿಯಲ್ಲಿ ಪರಿಷ್ಕರಣೆ ಸಮಿತಿ ಅಧ್ಯಕ್ಷರಾಗಿದ್ದ ಬರಗೂರು ರಾಮಚಂದ್ರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಪಠ್ಯಕ್ಕೆ ವಿರೋಧ ಮಾಡಿದ್ದ ಸಾಹಿತಿಗಳು, ಕಾಂಗ್ರೆಸ್ ನಾಯಕರ ವಿರುದ್ಧ ದಾಖಲೆ ಸಮೇತ ಬಿಡುಗಡೆ ಮಾಡಿ ವಾಗ್ದಾಳಿ ನಡೆಸಿದ್ದಾರೆ. ನಾರಾಯಣ ಗುರು, ಭಗತ್ ಸಿಂಗ್ ಪಠ್ಯಗಳನ್ನು ಕೈ ಬಿಟ್ಟಿಲ್ಲ ಅಂತ ಸ್ಪಷ್ಟಪಡಿಸಿದ್ದಾರೆ.

    ಹೆಡ್ಗೆವಾರ್ ಪಠ್ಯ ಸೇರ್ಪಡೆ, ಕೆಂಪೇಗೌಡರ ಜೀವನ ಚರಿತ್ರೆ, ಟಿಪ್ಪು ವೈಭವೀಕರಣದ ಬಗ್ಗೆ ದಾಖಲೆ ಸಮೇತ ಸ್ಪಷ್ಟೀಕರಣ ನೀಡಿದ್ದಾರೆ. ಇದನ್ನೂ ಓದಿ: ಪತ್ನಿಗೆ 90,000 ಮೌಲ್ಯದ ಉಡುಗೊರೆ ನೀಡಿದ ಭಿಕ್ಷುಕ

    bc nagesh
    ಸಾಂದರ್ಭಿಕ ಚಿತ್ರ

    ಪಠ್ಯದಲ್ಲಿ ಏನಿದೆ, ಏನಿಲ್ಲ? – ಸಚಿವರು ಹೇಳಿದ್ದೇನು?

    • ನಾರಾಯಣಗುರು ಪಠ್ಯವನ್ನ 10ನೇ ತರಗತಿ ಇತಿಹಾಸ ಪುಸ್ತಕದಿಂದ ಕನ್ನಡ ಪುಸ್ತಕಕ್ಕೆ ಸೇರ್ಪಡೆ ಮಾಡಲಾಗಿದೆ. ಇತಿಹಾಸ ಪುಸ್ತಕದಲ್ಲಿ ಹೆಚ್ಚು ಪಠ್ಯ ಇತ್ತೆಂಬ ಕಾರಣಕ್ಕೆ ಕನ್ನಡಕ್ಕೆ ಸೇರ್ಪಡೆ ಮಾಡಲಾಗಿದೆ. 6ನೇ ತರಗತಿ ಪಠ್ಯದಲ್ಲಿರೋ ನಾರಾಯಣಗುರು ಪಠ್ಯವೂ ಹಾಗೇ ಉಳಿಸಿಕೊಳ್ಳಲಾಗಿದೆ.
    • ಭಗತ್ ಸಿಂಗ್ ಪಠ್ಯ ತೆಗೆದಿಲ್ಲ. ಭಗತ್ ಸಿಂಗ್ ಜೊತೆ ಕ್ರಾಂತಿಕಾರಿಗಳಾದ ರಾಜ್‌ಗುರು, ಸುಖ್‌ದೇವ್ ಪಠ್ಯವನ್ನು ಸೇರ್ಪಡೆ ಮಾಡಲಾಗಿದೆ. ಚಕ್ರವರ್ತಿ ಸೂಲಿಬೆಲಿ ಅವರು ಬರೆದಿರು `ತಾಯಿ ಭಾರತೀಯರ ಅಮರಪುತ್ರರು’ ಪಠ್ಯವನ್ನು ಸೇರ್ಪಡೆ ಮಾಡಲಾಗಿದೆ.
    • ಡಾ.ಜಿ.ರಾಮಕೃಷ್ಣರ ಭಗತ್ ಸಿಂಗ್ ಪಠ್ಯವೂ ಕೈ ಬಿಟ್ಟಿಲ್ಲ. ಮೈಸೂರು ಒಡೆಯರ್ ಪಠ್ಯವನ್ನ ಬರಗೂರು ರಾಮಚಂದ್ರಪ್ಪ ಸಮಿತಿ ಕೈ ಬಿಟ್ಟಿತ್ತು. 5 ಪುಟದ ಪಠ್ಯವನ್ನ 4 ಪುಟಕ್ಕೆ ಇಳಿಸಿತ್ತು. ಇದನ್ನ ಸರಿ ಮಾಡಿದ್ದೇವೆ.
    • ಬರಗೂರು ಸಮಿತಿ ಒಂದು ಪುಟ ಇದ್ದ ಟಿಪ್ಪು ಸುಲ್ತಾನ್ ಪಠ್ಯವನ್ನು 6 ಪುಟಕ್ಕೆ ಹೆಚ್ಚಿಸಿತ್ತು. ಓಟ್ ಬ್ಯಾಂಕ್‌ಗಾಗಿ ಒಡೆಯರ್ ಪಠ್ಯ ಕೈ ಬಿಟ್ಟು ಟಿಪ್ಪು ಸುಲ್ತಾನ್ ಪಠ್ಯ ಸೇರ್ಪಡೆ ಮಾಡಿತ್ತು. ಟಿಪ್ಪು ವೈಭವೀಕರಣವನ್ನು, ಅದರಲ್ಲಿದ್ದ ತಪ್ಪುಗಳನ್ನು ತಪ್ಪು ಸರಿ ಮಾಡಲಾಗಿದೆ. ಟಿಪ್ಪುವಿನ ನಿಜವಾದ ಮುಖವಾಡವನ್ನ ಪಠ್ಯದಲ್ಲಿ ಸೇರಿಸಿದ್ದೇವೆ.
    • ಪೆರಿಯಾರ್ ಪಠ್ಯ ಮುಂದುವರಿಸಲಾಗಿದೆ. ರಾಮನ ಬಗ್ಗೆ ಆಕ್ಷೇಪಾರ್ಹ ಮತ್ತು ರಾವಣನ ಪರ ಇದ್ದ ಸಾಲುಗಳನ್ನ ತೆಗೆಯಲಾಗಿದೆ. ಕುವೆಂಪು ಪಠ್ಯವನ್ನ ನಾವು ಬದಲಾವಣೆ ಮಾಡಿಯೇ ಇಲ್ಲ. ಬರಗೂರು ಸಮಿತಿ ಕುವೆಂಪು ಪಠ್ಯವನ್ನು ಕೈ ಬಿಟ್ಟಿತ್ತು. ನಾವು ಹೆಚ್ಚುವರಿಯಾಗಿ 2 ಪಠ್ಯ ಸೇರ್ಪಡೆ ಮಾಡಿದ್ದೇವೆ.
    • ಕುವೆಂಪು ಅವರ `ರಾಮಾಯಣ ದರ್ಶನಂ’ ಮಹಾಕಾವ್ಯವನ್ನು ಪಠ್ಯದಲ್ಲಿ ಸೇರಿಸಲಾಗಿದೆ. ಇತಿಹಾಸದ ಬಗ್ಗೆ ಬರಗೂರು ರಾಮಚಂದ್ರಪ್ಪ ತಪ್ಪು ಮಾಹಿತಿ ಕೊಟ್ಟಿದ್ದರು. ಅದನ್ನೂ ಸರಿ ಮಾಡಿದ್ದೇವೆ.
    • ಬ್ರಿಟಿಷರ ವಿರುದ್ದ ಹೋರಾಟ ಮಾಡಿದ್ದ, ಸಂಗೊಳ್ಳಿ ರಾಯಣ್ಣ, ಮದಕರಿ ನಾಯಕರು, ಕಿತ್ತೂರು ಚೆನ್ನಮ್ಮ, ರಾಣಿ ಅಬ್ಬಕ್ಕ ಅವರ ಪಠ್ಯ ಬರಗೂರು ಸಮಿತಿ ಕೈ ಬಿಟ್ಟಿತ್ತು. ಅವರ ಪಠ್ಯ ಸೇರ್ಪಡೆ ಮಾಡಿದ್ದೇವೆ.
    • ಹಿಂದೂ ಮಹಾ ಸಾಗರವನ್ನು ಇಂಡಿಯನ್ ಓಷನ್ ಅಂತ ಬದಲಾವಣೆ ಮಾಡಿದ್ರು. ಅದನ್ನು ಸರಿ ಮಾಡಿದ್ದೇವೆ. ಬರಗೂರು ರಾಮಚಂದ್ರಪ್ಪ ಸಮಿತಿ ಅಂಬೇಡ್ಕರ್, ಮಹಾತ್ಮ ಗಾಂಧೀಜಿಯವರ ಪಠ್ಯವನ್ನು ತೆಗೆದು ಹಾಕಿತ್ತು. ಅದನ್ನ ಸೇರಿಸಲಾಗಿದೆ. ಜೊತೆಗೆ ಬರಗೂರು ಸಮಿತಿ ವಿವೇಕಾನಂದರ ಬಗ್ಗೆಯಿದ್ದ ವಿಕೃತಿಯನ್ನು ಸರಿ ಮಾಡಿದ್ದೇವೆ.
    • `ಏರುತಿಹುದು, ಹಾರುತಿಹುದು ನಮ್ಮ ಬಾವುಟ’ ಹಾಗೂ ನಾಡಪ್ರಭು ಕೆಂಪೇಗೌಡರ ಪಠ್ಯವನ್ನು ಸೇರಿಸಿದ್ದೇವೆ. ಚರ್ಚ್‌ಗಳು, ದೇವಾಲಯಗಳ ಬಗ್ಗೆ ಪಠ್ಯ ಇತ್ತು. ಇದ್ರಲ್ಲಿ ದೇವಾಲಯ ಫೋಟೋವೇ ಇರಲಿಲ್ಲ. ಅದನ್ನ ಸರಿ ಮಾಡಿದ್ದೇವೆ. ಸಿಂಧೂ ನಾಗರಿಕತೆ ಪಠ್ಯ ಸೇರ್ಪಡೆ ಮಾಡಿದ್ದೇವೆ. ಮೊಘಲರು, ಬ್ರಿಟಿಷರ ವಿರುದ್ಧ ಹೋರಾಡಿದ ವೀರರ ಬಗ್ಗೆಯೂ ಪಠ್ಯ ಸೇರ್ಪಡೆ ಮಾಡಲಾಗಿದೆ.
    • ಹೆಡ್ಗೆವಾರ್ ಬಗ್ಗೆ ಈಗ ಮಾತಾಡೋರು ಯಾರು ಹುಟ್ಟಿರಲಿಲ್ಲ. ಅದಕ್ಕಾಗಿ ಅವರ ಪಠ್ಯ, ಒಂದು ಭಾಷಣ ಸೇರ್ಪಡೆ ಮಾಡಿದ್ದೇವೆ. ದೇಶ ಭಕ್ತಿ ಬಗ್ಗೆ, ದೇಶಕ್ಕೆ ಸಮರ್ಪಣೆ ಭಾವದ ಬಗ್ಗೆ ತಿಳಿಸಲು ಹೆಡ್ಗೆವಾರ್ ಬಗ್ಗೆ ಸೇರಿಸಲಾಗಿದೆ. ಆರ್‌ಎಸ್‌ಎಸ್ ಬಗ್ಗೆ ಸೇರಿಸಿಲ್ಲ.
    • ಪ್ರಸ್ತುತ ಸಾಹಿತಿಗಳಲ್ಲೂ ಜಾತಿ ಬಣ್ಣ ಹುಡುಕುವ ಕೆಲಸ ಮಾಡೋದು ಸರಿಯಲ್ಲ. ಬರಗೂರು ಸಮಿತಿ ಸಂದೇಶ ನಿಡಗುಂಡ, ಶಿವಯೋಗಿ, ಸಾ.ಶಿ.ಮರುಳಯ್ಯ, ಸಿದ್ದಯ್ಯ ಪುರಾಣಿಕರನ್ನ ಪಠ್ಯ ಕೈ ಬಿಟ್ಟಿದ್ದರು. ಅದನ್ನೂ ಈಗ ಸೇರಿಸಲಾಗಿದೆ.

  • ಶಾಲೆಗಳನ್ನು ಪ್ರಾರಂಭಿಸುವಂತೆ ಮೊದಲು ಹೇಳಿದವನೇ ನಾನು: ಬಸವರಾಜ ಹೊರಟ್ಟಿ

    ಶಾಲೆಗಳನ್ನು ಪ್ರಾರಂಭಿಸುವಂತೆ ಮೊದಲು ಹೇಳಿದವನೇ ನಾನು: ಬಸವರಾಜ ಹೊರಟ್ಟಿ

    ಹಾವೇರಿ: ಶಾಲೆಗಳನ್ನು ಪ್ರಾರಂಭ ಮಾಡುವಂತೆ ಮೊದಲು ಹೇಳಿದವನೇ ನಾನು. ಕೊರೊನಾದಿಂದ ಶಾಲೆಗಳು ಬಂದ್ ಆದಾಗ ಶಾಲೆ ಮತ್ತು ಮಕ್ಕಳ ಸಂಬಂಧ ಕಡಿತವಾಯ್ತು. ಎಲ್ಲರೂ ಪಾಸ್ ಆಗಲು ಶುರುವಾಯಿತು. ಮಕ್ಕಳ ಮತ್ತು ಶಾಲೆಯ ಸಂಬಂಧ ತಪ್ಪಬಾರದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

    ಹಾವೇರಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಮೊದಲು ವಿದ್ಯಾಗಮ ಯೋಜನೆಯೂ ಬೇಡವೆಂದು ಹೇಳಿದ್ದೆ ಹಾಗೂ ಹತ್ತತ್ತು ಮಕ್ಕಳನ್ನು ಕೂರಿಸಿ ಪಾಠ ಮಾಡುವಂತೆ ತಿಳಿಸಿದ್ದೇನೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಹೊಸ ಶಿಕ್ಷಣ ಮಂತ್ರಿಗಳು ಬಂದು ಮೊದಲು ನನ್ನನ್ನೇ ಭೇಟಿ ಮಾಡಿದರು. ಆವಾಗಲೂ ಶಾಲೆ ಆರಂಭ ಮಾಡುವಂತೆ ಹೇಳಿದ್ದೇನೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಲೆಗಳ ಆರಂಭದ ಬಗ್ಗೆ ಸಮಿತಿ ರಚನೆ ಮಾಡುವಂತೆ ತಿಳಿಸಿದ್ದೇನೆ. ಮಕ್ಕಳಿಗೆ ಏನಾದರೂ ಆದರೆ ಸಮಿತಿ ಜವಾಬ್ದಾರಿ. ಮಕ್ಕಳ ಬಗ್ಗೆ ಅವರ ಪಾಲಕರು ಜವಾಬ್ದಾರಿ ತೆಗೆದುಕೊಳ್ಳಬೇಕು. ಶಾಲೆಗಳನ್ನು ಆರಂಭಿಸಬೇಕು ಎಂದಿದ್ದಾರೆ. ಇದನ್ನೂ ಓದಿ:ಹೋಟೆಲಿನ ವಾಶ್ ರೂಮಿನಲ್ಲಿ ಅವಿತಿದ್ದ ನಟಿ ಸೋನಿಯಾ ವಶಕ್ಕೆ

    ಸರ್ಕಾರಗಳು ಬದಲಾದಂತೆ ಶಿಕ್ಷಣ ನೀತಿ ಬದಲಾಗಬಾರದು. ಈಗಿನ ಹೊಸ ಶಿಕ್ಷಣ ನೀತಿ ಸರಿಯಿಲ್ಲ. ಹಿಂದಿನ ಶಿಕ್ಷಣ ನೀತಿಯೇ ಸರಿ ಇತ್ತು. ವರದಿಯನ್ನ ವಿಸ್ತೃತವಾಗಿ ಅಧ್ಯಯನ ಮಾಡಿ ಕೆಲವೊಂದು ಬದಲಾವಣೆಗಳನ್ನು ಮಾಡಬೇಕು. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಪರಿಪೂರ್ಣತೆಯಿಂದ ಕೂಡಿಲ್ಲ. ನಾನು ನೂರು ದೇಶಗಳನ್ನು ತಿರುಗಿದ್ದೇನೆ. ಅಲ್ಲಿ ಸರ್ಕಾರ ಬದಲಾದಂತೆ ಶಿಕ್ಷಣ ನೀತಿಗಳು ಬದಲಾಗುವುದಿಲ್ಲ. ಸರ್ಕಾರ ಬದಲಾದಂತೆ ನೀತಿ ಬದಲಾದರೆ ಶಿಕ್ಷಣ ವ್ಯವಸ್ಥೆ ಸರಿಯಾಗುವುದಿಲ್ಲ. ನಮ್ಮ ದೇಶದಲ್ಲಿ ಮೂರು ಹಂತದ ಶಿಕ್ಷಣವೇ ಉತ್ತಮ. ಹಿಂದಿನ ಶಿಕ್ಷಣ ಪದ್ದತಿಯೇ ಉತ್ತಮವಾಗಿದೆ ಎಂದು ನುಡಿದಿದ್ದಾರೆ.

    ಮಾಜಿ ಸಿಎಂ ಕುಮಾರಸ್ವಾಮಿ 2023ರ ಚುನಾವಣೆ ನನ್ನ ಕೊನೆಯ ಹೋರಾಟದ ಹೇಳಿಕೆ ಕುರಿತಂತೆ, ನಾನು ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ. ಸಭಾಪತಿ ಆದವರು ರಾಜಕೀಯ ಮಾತನಾಡಬಾರದು ಎಂದು ಹೇಳಿದ್ದಾರೆ. ಇದನ್ನೂ ಓದಿ:ಹಿಂದೂ ಸಂಘಟನೆಗಳ ಒತ್ತಡಕ್ಕೆ ಮಣಿದ ಸರ್ಕಾರ – ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ?

  • ಕನ್ನಡ ಭಾಷಾ ಕಲಿಕೆ ಪರಿಣಾಮಕಾರಿ ಅನುಷ್ಠಾನವಾಗಲಿ – ಶಿಕ್ಷಣ ಸಚಿವರಿಗೆ ಮನವಿ

    ಕನ್ನಡ ಭಾಷಾ ಕಲಿಕೆ ಪರಿಣಾಮಕಾರಿ ಅನುಷ್ಠಾನವಾಗಲಿ – ಶಿಕ್ಷಣ ಸಚಿವರಿಗೆ ಮನವಿ

    ಬೆಂಗಳೂರು: ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ರ ಅನ್ವಯ 2017-18ನೇ ಸಾಲಿನಿಂದ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸುವುದು ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಶೈಕ್ಷಣಿಕ ಸಂಸ್ಥೆಗಳಿಗೆ ಕಡ್ಡಾಯಗೊಳಿಸಲಾಗಿದೆ. ಆದರೆ ಕೆಲ ಶಾಲೆಗಳು ಈ ನಿಯಮವನ್ನು ಪಾಲಿಸುತ್ತಿಲ್ಲ. ಈ ಬಗ್ಗೆ ಗಮನ ಹರಿಸಿ ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ರ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೆ ಮನವಿ ಮಾಡಿದರು.

    2017-18ನೇ ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗಿ 2020-21ನೇ ಶೈಕ್ಷಣಿಕ ವರ್ಷಕ್ಕೆ 4ನೇ ತರಗತಿ ಮಕ್ಕಳಿಗೆ ಈ ನಿಯಮದಡಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸಿರಬೇಕಿತ್ತು. ಆದರೆ ರಾಜ್ಯದಲ್ಲಿರುವ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಈ ನಿಯಮವನ್ನು ಉಲ್ಲಂಘಿಸುತ್ತಿರುವ ಬಗ್ಗೆ ಪ್ರಾಧಿಕಾರಕ್ಕೆ ನಿರಂತರವಾಗಿ ದೂರುಗಳು ಸಲ್ಲಿಕೆಯಾಗುತ್ತಿವೆ. ಕರ್ನಾಟಕ ರಾಜ್ಯ ಪಠ್ಯಪುಸ್ತಕ ಸಂಘದಿಂದ ಪ್ರಾಧಿಕಾರಕ್ಕೆ ಬಂದಿರುವ ಅಧಿಕೃತ ಮಾಹಿತಿ ಅನ್ವಯ 2021-22ನೇ ಶೈಕ್ಷಣಿಕ ವರ್ಷಕ್ಕೆ ರಾಜ್ಯದ ಸುಮಾರು 823 ಶಾಲೆಗಳು ಸರ್ಕಾರ ನಿಗದಿಪಡಿಸಿರುವ ಕನ್ನಡ ಪಠ್ಯಪುಸ್ತಕಗಳನ್ನು ಖರೀದಿಸಲು ಅಧಿಕೃತ ಪಟ್ಟಿ ಸಲ್ಲಿಸಿರುವುದಿಲ್ಲ. ಹೀಗಾಗಿ ಈ ಶಾಲೆಗಳು ಕನ್ನಡ ಭಾಷಾ ಕಲಿಕಾ ಅಧಿನಿಯಮ-2015 ಅನ್ನು ಸರಿಯಾಗಿ ಪಾಲಿಸುತ್ತಿರುವುದು ಅನುಮಾನ ಬರುವಂತಿದೆ. ಹೀಗಾಗಿ ಶಿಕ್ಷಣ ಇಲಾಖೆಯಲ್ಲಿನ ಎಲ್ಲ ಶೈಕ್ಷಣಿಕ ಜಿಲ್ಲೆಗಳ ಉಪ ನಿರ್ದೇಶಕರಿಗೆ ಪತ್ರ ಬರೆಯಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
    ಇದನ್ನೂ ಓದಿ: ಎನ್‍ಇಪಿ ಮೂಲಕ ಶಿಕ್ಷಣದಲ್ಲಿ ಸುಧಾರಣೆ: ಬಿ.ಸಿ.ನಾಗೇಶ್

    1,2,3 ಮತ್ತು 4ನೇ ತರಗತಿಗೆ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸಲಾಗಿದೆಯೇ ಪರಿಶೀಲಿಸುವುದು. ತರಗತಿಗಳಲ್ಲಿರುವ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪಠ್ಯಪುಸ್ತಕಗಳನ್ನು ಸಕ್ಷಮ ಪ್ರಾಧಿಕಾರದಿಂದ ಖರೀದಿಸಲಾಗಿದೆಯೇ? ಅಗತ್ಯ ದಾಖಲೆಗಳನ್ನು ಸಂಗ್ರಹಿಸುವುದು. ಕನ್ನಡ ವಿಷಯಕ್ಕೆ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಅರ್ಹ ಶಿಕ್ಷಕರನ್ನು ನೇಮಕ ಮಾಡಿರುವ ಬಗ್ಗೆ ಹಾಗೂ ಶಿಕ್ಷಕರಿಗೆ ನಿಯಮಾನುಸಾರ ತರಗತಿಗಳನ್ನು ಹಂಚಿಕೆ ಮಾಡಿರುವ ಬಗ್ಗೆ ಪರಿಶೀಲಿಸುವುದು. ವಿದ್ಯಾರ್ಥಿಗಳಿಗೆ 100 ಅಂಕದ ಕನ್ನಡ ಪರೀಕ್ಷೆಯನ್ನು ನಡೆಸಿರುವ ಬಗ್ಗೆ, ಅದರಂತೆ ಮೌಲ್ಯಮಾಪನ ಮಾಡಿರುವ ಬಗ್ಗೆ ಹಾಗೂ ಮೌಲ್ಯಮಾಪನದಂತೆ ಅಂಕಪಟ್ಟಿಯನ್ನು ವಿತರಿಸಿರುವ ಬಗ್ಗೆ ಪರಿಶೀಲಿಸಿ ದಾಖಲೆಗಳನ್ನು ಸಂಗ್ರಹಿಸುವುದು.

    ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ರಂತೆ ಉಳಿದೆಲ್ಲಾ ಅಗತ್ಯ ಪರಿಶೀಲನೆಗಳನ್ನು ನಡೆಸುವುದು. ಈ ಬಗ್ಗೆ 15 ದಿನಗಳೊಳಗಾಗಿ ಪ್ರಾಧಿಕಾರಕ್ಕೆ ವಿಸ್ತೃತ ವರದಿ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಈ ಸಂಬಂಧ ಶೀಘ್ರದಲ್ಲಿಯೇ ನೂತನ ಶಿಕ್ಷಣ ಸಚಿವರೊಂದಿಗೆ ಉನ್ನತ ಮಟ್ಟದ ಸಮಿತಿ ಸಭೆ ಕರೆಯಲಾಗುವುದು ಎಂದು ಉಪನಿರ್ದೇಶಕರುಗಳಿಗೆ ಪತ್ರ ಬರೆಯಲಾಗಿದೆ ಎಂದು ಸಚಿವರಿಗೆ ಇದೇ ವೇಳೆ ಪ್ರಾಧಿಕಾರದ ಅಧ್ಯಕ್ಷರು ಮಾಹಿತಿ ನೀಡಿದರು. ಇದನ್ನೂ ಓದಿ: ಮಕ್ಕಳಿಗೆ ಸಾಂಸ್ಕೃತಿಕ ವಾತಾವರಣ ಕಟ್ಟಿಕೊಡಿ: ಟಿ.ಎಸ್ ನಾಗಾಭರಣ

    ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್ಲ ಹಾಜರಿದ್ದರು.

  • ಎನ್‍ಇಪಿ ಮೂಲಕ ಶಿಕ್ಷಣದಲ್ಲಿ ಸುಧಾರಣೆ: ಬಿ.ಸಿ.ನಾಗೇಶ್

    ಎನ್‍ಇಪಿ ಮೂಲಕ ಶಿಕ್ಷಣದಲ್ಲಿ ಸುಧಾರಣೆ: ಬಿ.ಸಿ.ನಾಗೇಶ್

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ದಿಟ್ಟ ನಿರ್ಧಾರದಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ, ಬದಲಾವಣೆಗೆ ನಾಂದಿ ಹಾಡುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ಹೇಳಿದರು.

    ಬೆಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿರುವ ರಾಷ್ಟ್ರೀಯ ಮೌಲ್ಯೀಕರಣ ಮತ್ತು ಮಾನ್ಯತಾ ಪರಿಷತ್ (ನ್ಯಾಕ್) ಹೊರ ತಂದಿರುವ ‘ನ್ಯಾಕ್ ಸುದ್ದಿಪತ್ರ’ ಬಿಡುಗಡೆ ಮಾಡಿ ವಿಶ್ವವಿದ್ಯಾಲಯಗಳು ಮತ್ತು ಪ್ರಮುಖ ಕಾಲೇಜುಗಳ ಪ್ರಾಂಶುಪಾಲರನ್ನು ಉದ್ದೇಶಿಸಿ ಬಿ.ಸಿ ನಾಗೇಶ್ ಮಾತನಾಡಿದರು. ಶಿಕ್ಷಣದಲ್ಲಿ ಬದಲಾವಣೆ ತರಬೇಕು. ಅದರ ಮೂಲಕ ವ್ಯಕ್ತಿತ್ವ ವಿಕಸನವಾಗಬೇಕು ಎಂದು ಕನಸು ಕಂಡಿರುವ ದೇಶದ ಅನೇಕ ಶ್ರೇಷ್ಠ ಮಹಾಪುರುಷರ ಎಲ್ಲ ಕನಸುಗಳನ್ನು ನನಸು ಮಾಡಲು ಸಾಧ್ಯವಾಗದೆ ಇರಬಹುದು. ಆದರೂ ನಾವು ಶಿಕ್ಷಣದಲ್ಲಿ ಸಾಕಷ್ಟು ಮೈಲುಗಲ್ಲುಗಳನ್ನು ತಲುಪಿದ್ದೇವೆ. ದೇಶದ ಎಲ್ಲ ಮೂಲೆಗಳಲ್ಲೂ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗಿದೆ. ಪ್ರತಿಯೊಂದು ಗ್ರಾಮದಲ್ಲಿ ಪ್ರಾಥಮಿಕ ಶಾಲೆ ಇರುವಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹೇಳಿದರು.

    ಉತ್ತಮ ವಾತಾವರಣದಲ್ಲಿ ವ್ಯಾಸಂಗ ಮಾಡಲು ಅಗತ್ಯವಾದ ಮೂಲಸೌಕರ್ಯಗಳನ್ನು ಹೊಂದಿರುವಂತಹ ಶಾಲೆಗಳನ್ನು ತೆರೆಯಲಾಗಿದೆ. 2000 ಇಸವಿಗೆ ಮೊದಲು ಚುನಾವಣೆ ಕರ್ತವ್ಯವೆಂದರೆ ಶಿಕ್ಷಕರು ಬೇಡವೇ ಬೇಡ ಎನ್ನುತ್ತಿದ್ದರು. ಶೌಚಗೃಹ ಕೊರತೆ, ರಾತ್ರಿ ಉಳಿದುಕೊಳ್ಳಲು ಸೂಕ್ತ ವ್ಯವಸ್ಥೆ ಇರುತ್ತಿರಲಿಲ್ಲ. ಆದರೆ, ಮೂಲಸೌಕರ್ಯ ಅಭಿವೃದ್ಧಿ, ಗುಣಮಟ್ಟ ಸುಧಾರಿಸಲು ಆರಂಭವಾದ ಸರ್ವ ಶಿಕ್ಷಣ ಅಭಿಯಾನ ಬದಲಾವಣೆಗೆ ಮುನ್ನುಡಿ ಬರೆಯಿತು ಎಂದು ಸಚಿವರು ನುಡಿದರು.

    ಈಗ ನಮ್ಮ ಇಲಾಖೆಯಲ್ಲೇ 48 ಸಾವಿರ ಶಾಲೆಗಳಿವೆ. ಶಾಲೆಗಳು ನಮ್ಮ ನಿರೀಕ್ಷೆಯಂತೆ ಇಲ್ಲದಿರಬಹುದು. ಆದರೆ, ಪಾಠದ ಗುಣಮಟ್ಟ ಚೆನ್ನಾಗಿದೆ. ಗುಣಮಟ್ಟ ಸುಧಾರಣೆಯಾಗದಿರಲು ಪ್ರೇರಣೆ, ಅಗತ್ಯ ಮತ್ತು ಸೂಕ್ತ ಮಾರ್ಗದರ್ಶನದ ಕೊರತೆ ಇರಬಹುದು. ಬೋಧನೆ ಜೊತೆಗೆ ಬೇರೆ ಬೇರೆ ಕೆಲಸಗಳ ಜವಾಬ್ದಾರಿ, ಕೆಲಸದ ಒತ್ತಡ ಅದಕ್ಕೆ ಕಾರಣವಾಗಿರಬಹುದು ಎಂದು ಸಚಿವರು ಅಭಿಪ್ರಾಯಪಟ್ಟರು.

    ಮೆಕಾಲೆ ಶಿಕ್ಷಣದ ಬಗ್ಗೆ ಎಲ್ಲರೂ ಮಾತನಾಡಿದ್ದಾರೆ. ಆದರೆ ಗಟ್ಟಿ ನಿರ್ಧಾರ ತೆಗೆದುಕೊಳ್ಳಲು ಆಗಿರಲಿಲ್ಲ. ಈಗ ಗಟ್ಟಿ ನಿರ್ಧಾರ ತೆಗೆದುಕೊಂಡು ಬದಲಾವಣೆ ತರಬಲ್ಲ ಸಮರ್ಥ ನಾಯಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಈ ದೇಶ ಪಡೆದಿದೆ. ದೇಶದ ಪ್ರತಿಯೊಬ್ಬ ಪ್ರಜೆಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕು. ಅದೇ ನಮ್ಮ ಗುರಿಯಾಗಿರಬೇಕು ಎಂದು ನಮ್ಮ ಪೂರ್ವಜರು, ಸ್ವಾತಂತ್ರ್ಯ ಹೋರಾಟಗಾರರು ಕಂಡಿರುವ ಕನಸುಗಳನ್ನು ನನಸು ಮಾಡುವ ಗುರಿಯನ್ನು ಪ್ರಧಾನಿಯವರು ಹೊಂದಿದ್ದಾರೆ. ಪ್ರಸಕ್ತ ಸನ್ನಿವೇಶ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗುತ್ತಿದೆ ಎಂದು ಸಚಿವರು ಹೇಳಿದರು. ಇದನ್ನೂ ಓದಿ: ಜನರಿಗಷ್ಟೇ ಕೊರೊನಾ ರೂಲ್ಸ್- ಜನಪ್ರತಿನಿಧಿಗಳು ಡೋಂಟ್‍ಕೇರ್

    ವಿಶ್ವವಿದ್ಯಾಲಯ ಮಾದರಿಯ ಶೈಕ್ಷಣಿಕ ಚಟುವಟಿಕೆಗಳ ವ್ಯವಸ್ಥೆಯನ್ನು ಪ್ರಾಥಮಿಕ ಶಿಕ್ಷಣ, ಪ್ರೌಢ ಶಿಕ್ಷಣ ಹಂತದಲ್ಲೂ ಅಳವಡಿಸಿಕೊಳ್ಳಲು ಸಾಧ್ಯವಾದರೆ ಗುಣಮಟ್ಟ ಸುಧಾರಣೆಯಾಗಬಹುದು. ಈ ಕುರಿತು ಯೋಚನೆ ಮಾಡಬೇಕು. ನ್ಯಾಕ್‍ನಂತಹ ಪ್ರತಿಷ್ಠಿತ ಸಂಸ್ಥೆಗಳು ಬದಲಾವಣೆ ಮತ್ತು ಸುಧಾರಣೆಗಾಗಿ ಹೊಸ ಯೋಜನೆಗಳ ನೀಲಲಕ್ಷೆ ರೂಪಿಸಬೇಕು. ಭಾರತದ ಶೈಕ್ಷಣಿಕ ವ್ಯವಸ್ಥೆಯಲ್ಲಿ ಇರುವ ಕೊರತೆಗಳನ್ನು ನಿವಾರಿಸಿ ಬದಲಾವಣೆ ತರುವ ಸಾಮರ್ಥ್ಯ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿವೆ ಎಂದು ಸಚಿವರು ಹೇಳಿದರು.

    ತುಮಕೂರು ವಿಶ್ವವಿದ್ಯಾಲಯ ಸ್ಥಾಪನೆಯಾಗುವಲ್ಲಿ ನ್ಯಾಕ್ ನಿರ್ದೇಶಕರಾದ ಪ್ರೊ. ಎಸ್.ಸಿ. ಶರ್ಮ ಅವರ ಪಾತ್ರ ಮಹತ್ವದ್ದಾಗಿದೆ. ಸಿಎಸ್‍ಆರ್ ನಿಧಿ ಮೂಲಕ ವಿವಿ ಆವರಣದಲ್ಲಿ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಶರ್ಮ ಕಾರಣರಾದರು ಎಂದು ನ್ಯಾಕ್ ನಿರ್ದೇಶಕರ ಕೆಲಸಗಳ ಕುರಿತು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ನಮ್ಮ ದೇಶದಲ್ಲಿ ಯುವ ಜನಸಂಖ್ಯೆ ದೊಡ್ಡದಾಗಿದೆ. ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಅವರನ್ನು ದೊಡ್ಡ ಆಸ್ತಿ ಮಾಡುವ ಜವಾಬ್ದಾರಿ ನಮ್ಮ, ನಿಮ್ಮ ಕೈಯಲ್ಲಿದೆ. ಸುಧಾರಣೆ ಆಗಬೇಕು ಎಂದು ಸಚಿವರು ಹೇಳಿದರು.

  • ದೂರು ಕೊಡಲು ಬಂದ ಪೋಷಕರ ಸಂಘಕ್ಕೆ ‘ಹೋಗಿ ಸಾಯಿರಿ’ ಎಂದ ಸಚಿವ..!

    ದೂರು ಕೊಡಲು ಬಂದ ಪೋಷಕರ ಸಂಘಕ್ಕೆ ‘ಹೋಗಿ ಸಾಯಿರಿ’ ಎಂದ ಸಚಿವ..!

    ಭೋಪಾಲ್: ಗರಿಷ್ಠ ಶುಲ್ಕದ ಬಗ್ಗೆ ದೂರು ಕೊಡಲು ಬಂದ ಪೋಷಕರ ಸಂಘಕ್ಕೆ ‘ಹೋಗಿ ಸಾಯಿ’ ಎಂದು ಹೇಳುವ ಮೂಲಕ ಮಧ್ಯಪ್ರದೇಶದ ಶಿಕ್ಷಣ ಸಚಿವ ಇಂದರ್ ಸಿಂಗ್ ಪಾರ್ಮರ್ ತೀವ್ರ ವಿವಾದಕ್ಕೀಡಾಗಿದ್ದಾರೆ.

    ಹೌದು, ಪೋಷಕರ ಸಂಘವೊಂದು ಶಾಲೆಗಳು ಹೆಚ್ಚಿನ ಶುಲ್ಕ ವಿಧಿಸುವ ಬಗ್ಗೆ ಸಮಾಲೋಚಿಸಲು ಸಚಿವರ ಬಳಿ ತೆರಳಿತ್ತು. ಈ ವೇಳೆ ಪೋಷಕರ ಮನವಿಯನ್ನು ಶಿಕ್ಷಣ ಇಲಾಖೆ ನಿರಾಕರಿಸಿದರೆ ಏನು ಮಾಡಬೇಕು ಎಂದು ಕೇಳಿದಾಗ ಸಚಿವರು ಆಘಾತಕಾರಿ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ಸಚಿವರ ಪ್ರತಿಕ್ರಿಯೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಈ ಸಂಬಂಧ ಪಾಲಕರ ಮಹಾಸಂಘದ ಅಧ್ಯಕ್ಷ ಕಮಲ್ ವಿಶ್ವಕರ್ಮ ಮಾತನಾಡಿ, ಹಲವು ಶಾಲೆಗಳು ಕೈಹೋರ್ಟ್ ಸೂಚನೆಯನ್ನು ಮೀರಿ ಹೆಚ್ಚಿನ ಶುಲ್ಕ ವಿಧಿಸುತ್ತವೆ. ಬೋಧನಾ ಶುಲ್ಕವನ್ನು ಹೊರತುಪಡಿಸಿ ಬೇರೆ ಯಾವುದೇ ಮೊತ್ತವನ್ನು ಪೋಷಕರಿಂದ ತೆಗೆದುಕೊಳ್ಳದಂತೆ ಹೈಕೋರ್ಟ್ ಶಾಲೆಗಳಿಗೆ ನಿರ್ದೇಶನ ನೀಡಿದೆ. ಆದರು ಕೂಡ ಶಾಲೆಗಳು ಹೆಚ್ಚಿನ ಹಣವನ್ನು ಪೋಷಕರಿಂದ ಪೀಕುತ್ತವೆ. ಈ ಹಿನ್ನೆಲೆಯಲ್ಲಿ ಹಲವಾರು ಪೋಷಕರು ಅಧಿಕ ಶುಲ್ಕ ವಿಧಿಸುವ ಬಗ್ಗೆ ಸಚಿವರ ಬಳಿ ದೂರು ನೀಡಲು ಮುಂದಾಗಿದ್ದೆವು ಎಂದರು. ಇದನ್ನೂ ಓದಿ: ಬಾಲಕಿಯ ಚಿಕಿತ್ಸೆಗಾಗಿ ಡಬ್ಲ್ಯುಟಿಸಿ ಫೈನಲ್‍ನಲ್ಲಿ ಆಡಿದ ಜೆರ್ಸಿಯನ್ನು ಹರಾಜಿಗಿಟ್ಟ ಆಟಗಾರ

    ಮಹಾಮಾರಿ ಕೊರೊನಾ ವೈರಸ್ ನಿಂದಾಗಿ ಲಾಕ್ ಡೌನ್ ಮಾಡಿದ ಪರಿಣಾಮ ಹಲವು ಮಂದಿ ಪೋಷಕರು ತಮ್ಮ ಕೆಲಸಗಳನ್ನು ಕಳೆದುಕೊಂಡಿದ್ದಾರೆ. ಆದರೆ ಹಲವು ಖಾಸಗಿ ಶಾಲೆಗಳು ಪೋಷಕರ ಕಷ್ಟವನ್ನು ಅರಿತುಕೊಳ್ಳದೆ ಶುಲ್ಕ ಹೆಚ್ಚಳ ಮಾಡುತ್ತಿವೆ ಎಂದು ತಿಳಿಸಿದ್ದಾರೆ.

    ಇತ್ತ ಖಾಸಗಿ ಶಾಲೆಗಳು ಹೆಚ್ಚಿನ ಶುಲ್ಕ ವಿಧಿಸುವ ಹಿನ್ನೆಲೆಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಖಾಸಗಿ ಶಾಲೆಯ ಹಣ ಪೀಕುವ ವಿಚಾರವಾಗಿ ನಾವು ಹಲವಾರು ಬಾರಿ ಶಾಇಕ್ಷಣ ಸಚಿವರನ್ನು ಭೇಟಿ ಮಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಮಂಗಳವಾರ ಮತ್ತೆ ಈ ಸಂಬಂಧ ಸಚಿವರನ್ನು ಭೇಟಿ ಮಾಡಲು ಹೋದಾಗ ಅವರು ನಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಕಮಲ್ ದೂರಿದರು.

    https://twitter.com/AnitaReddyIn/status/1410174195560898570

  • ಜನವರಿಯಿಂದಲೇ ಶಾಲಾ ಕಾಲೇಜು ಆರಂಭ ಫಿಕ್ಸ್: ಸುರೇಶ್ ಕುಮಾರ್

    ಜನವರಿಯಿಂದಲೇ ಶಾಲಾ ಕಾಲೇಜು ಆರಂಭ ಫಿಕ್ಸ್: ಸುರೇಶ್ ಕುಮಾರ್

    ಬೆಂಗಳೂರು: ಬ್ರಿಟನ್ ರೂಪಾಂತರಿ ವೈರಸ್ ಕಂಡು ಬಂದಿರುವ ಹಿನ್ನೆಲೆ ರಾಜ್ಯದಲ್ಲಿ ಶಾಲಾ ಕಾಲೇಜುಗಳು ನಿಗದಿತ ಸಮಯಕ್ಕೆ ಆರಂಭವಾಗುತ್ತಾ ಇಲ್ವಾ? ಎಂಬ ಗೊಂದಲಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

    ಈಗಾಗಲೇ ಸಿಎಂ ಬಿಎಸ್ ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ ಸುಧಾಕರ್, ರಾಜ್ಯದ ಉನ್ನತ ಶಿಕ್ಷಣ ಸಿಚಿವ ಸಿ.ಅಶ್ವಥ್ ನಾರಾಯಣ್ ಎಲ್ಲರೂ ತಿಳಿಸಿರುವಂತೆ ಜನವರಿ 1 ರಿಂದ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ತರಗತಿಗಳು ಪ್ರಾರಂಭವಾಗುತ್ತದೆ ಜೊತೆಗೆ 6, 7 ಮತ್ತು 8 ತರಗತಿಗಳಿಗೆ ವಿದ್ಯಾಗಮ ಮಾಡುವುದರ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದರು.

    ಈ ಮುಂಚೆ ಆರೋಗ್ಯ ಸಚಿವರು ಮತ್ತು ಮತ್ತು ತಾಂತ್ರಿಕ ಸಲಹ ಸಮಿತಿಯವರು ತಿಳಿಸಿದಂತೆ ಬ್ರಿಟನ್ ವೈರಾಣು ಕುರಿತಂತೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಕೋವಿಡ್‍ಗೆ ನಾವು ಯಾವ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದೆವು ಅದೇ ಚಿಕಿತ್ಸೆಯನ್ನೇ ಇದಕ್ಕೂ ಪಡೆದುಕೊಳ್ಳಬಹುದು. ಕೊರೊನಾಗೆ ಯಾವ ರೀತಿಯ ಮುನ್ನೆಚ್ಚರಿಕೆ ಕ್ರಮ ಅನುಸರಿಸುತ್ತಿದ್ದೆವೋ ಅದೇ ನಿಯಮವನ್ನು ಬ್ರಿಟನ್ ವೈರಸ್‍ಗೂ ಪಾಲಿಸಿದರೆ ಸಾಕು ಎಂದರು.

    ಶಾಲೆ ಪ್ರಾರಂಭಿಸಲು ಈಗಾಗಲೇ ಶಾಲೆಗಳನ್ನು ಶುಚಿಗೊಳಿಸಿ ಸ್ಯಾನಿಟೈಸ್ ಮಾಡಿಸಲಾಗಿದ್ದು, ಶಾಲಾ-ಕಾಲೇಜುಗಳಲ್ಲಿ ಥರ್ಮಲ್ ಸ್ಕ್ಯಾನರ್ ವ್ಯವಸ್ಥೆಗೊಳಿಸಲಾಗಿದೆ. ಹಾಗೂ ತರಗತಿಯಲ್ಲಿ ಎಷ್ಟು ಜನ ಮಕ್ಕಳನ್ನು ಕೂರಿಸಬೇಕು ಎಂಬುದರ ಬಗ್ಗೆ ಯೋಚನೆ ಕೂಡ ಮಾಡಿದ್ದೇವೆ. ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಶಾಲೆಗಳ ಕುರಿತಂತೆ ಮೇಲ್ವಿಚಾರಣೆ ನಡೆಸಿ ಬೇಕಾದ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಹೀಗೆ ಹಲವು ರೀತಿಯ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಂಡಿದ್ದೇವೆ.

    ಇಂದಿನಿಂದ ಬೆಂಗಳೂರಿನ ಹೊರವಲಯದಲ್ಲಿರುವ ಕೆಲವು ಕಾಲೇಜು ಮತ್ತು ಶಾಲೆಗಳಿಗೆ ಸ್ವತಃ ನಾನೇ ಭೇಟಿ ನೀಡಿ ಅಲ್ಲಿನ ಸಿದ್ಧತೆಗಳ ಕುರಿತಂತೆ ಪರಿಶೀಲಿಸುತ್ತೇನೆ ಎಂದು ತಿಳಿಸಿದರು. ಇನ್ನೂ ಸೋಂಕಿನ ಬಗ್ಗೆ ಆರೋಗ್ಯ ಸಚಿವರ ಮೂಖಾಂತರ ತಜ್ಞರ ಜೊತೆ ಮಾತನಾಡಿದ್ದು, ಅವರು ಕೂಡ ಯಾವುದೇ ರೀತಿ ಆತಂಕ ಪಡುವ ಅಗತ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದ್ರೆ ಎಲ್ಲರೂ ಎಚ್ಚರಿಕೆಯಿಂದ ಇರಬೇಕೆಂದು ಸೂಚನೆ ನೀಡಿದ್ದಾರೆ.

    ಪೋಷಕರು ಮಕ್ಕಳನ್ನು ಧೈರ್ಯದಿಂದ ಶಾಲೆಗೆ ಕಳುಹಿಸಿ ಕೊಡಿ. ನಿಮಗೆ ಏನಾದರೂ ಆತಂಕವಿದ್ದು, ಇಚ್ಛಿಸದಿದ್ದರೆ ಅದಕ್ಕೂ ಕೂಡ ನಿಮಗೆ ಅವಕಾಶವಿದೆ. ನಮ್ಮ ವ್ಯವಸ್ಥೆಯ ಬಗೆಗೆ ಧೈರ್ಯವಿದ್ದು ವಿಶ್ವಾಸವಿದ್ದರೆ, ಮಕ್ಕಳನ್ನು ದಯವಿಟ್ಟು ಶಾಲೆಗೆ ಕಳುಹಿಸಿ. ನಿಮ್ಮ ಮಕ್ಕಳನ್ನು ನಿಮ್ಮ ಮನೆಯಲ್ಲಿ ಯಾವ ರೀತಿ ನೋಡಿಕೊಳ್ಳುವಿರೋ ಅದೇ ರೀತಿ ನಮ್ಮ ಮಕ್ಕಳಂತೆ ಶಾಲೆಯಲ್ಲಿ ನೋಡಿಕೊಳ್ಳುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • ಜನವರಿ 1 ರಿಂದಲೇ ಶಾಲೆ ಆರಂಭ: ಸುರೇಶ್ ಕುಮಾರ್ ಸ್ಪಷ್ಟನೆ

    ಜನವರಿ 1 ರಿಂದಲೇ ಶಾಲೆ ಆರಂಭ: ಸುರೇಶ್ ಕುಮಾರ್ ಸ್ಪಷ್ಟನೆ

    ಬೆಂಗಳೂರು: ಕೊರೊನಾ ರೂಪಾಂತರ ವೈರಸ್ ಬಗ್ಗೆ ತಜ್ಞರ ಜೊತೆಗೆ ಮಾತಾನಾಡಿದ್ದೇನೆ. ಈಗಾಗಲೇ ನಿರ್ಧಾರ ಮಾಡಿರುವಂತೆ ಜನವರಿ 1 ರಿಂದ ಶಾಲೆ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿದ ಸಚಿವರು, ಹೊಸ ವೈರಸ್ ಬಗ್ಗೆ ಕೇಂದ್ರ ಸಚಿವರು ಮಾಹಿತಿ ನೀಡಿದ್ದಾರೆ. ಹೆಚ್ಚು ಆತಂಕಪಡುವ ಅವಶ್ಯಕತೆ ಇಲ್ಲ. ಪ್ರತಿದಿನ ತಜ್ಞರ ಅಭಿಪ್ರಾಯ ಪಡೆದುಕೊಳ್ಳುತ್ತಿದ್ದೇವೆ. ತಜ್ಞರ ವರದಿ ಅನುಸಾರವಾಗಿ ನಡೆದುಕೊಳ್ಳುತ್ತೇವೆ ಎಂದಿದ್ದಾರೆ.

    ಜಿಲ್ಲಾ ಸಿಇಒ ಗಳು, ಡಿಡಿಪಿಐ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಚಿವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಶಾಲಾ-ಕಾಲೇಜು ಪ್ರಾರಂಭಕ್ಕೆ ಸಿದ್ಧತೆ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗುತ್ತಿದೆ. ಶಾಲೆಯನ್ನು ಪ್ರಾಂಭಿಸುವ ಮೊದಲು ಯಾವೆಲ್ಲಾ ಮುಂಜಾಗ್ರತಾ ಕ್ರಮಗಳ ಅನುಷ್ಠಾನ, ಕೊರೊನಾ ಮಾರ್ಗಸೂಚಿ ಪಾಲನೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.

  • ಪೋಷಕರು ಅನುಕೂಲಕರವಾಗಿದ್ರೆ ಶುಲ್ಕ ಪಾವತಿಸಿ: ಸುರೇಶ್ ಕುಮಾರ್

    ಪೋಷಕರು ಅನುಕೂಲಕರವಾಗಿದ್ರೆ ಶುಲ್ಕ ಪಾವತಿಸಿ: ಸುರೇಶ್ ಕುಮಾರ್

    – ಖಾಸಗಿ ಶಾಲಾ ಶಿಕ್ಷಕರು ತರಕಾರಿ ಮಾರೋ ದುಸ್ಥಿತಿ ಬಂದಿದೆ
    – ಎಲ್ಲಾ ಸಮಸ್ಯೆಗೂ ಸೂಕ್ತ ಪರಿಹಾರ ಒದಗಿಸ್ತೀನಿ
    – ಝೀರೋ ಬಡ್ಡಿದರದಲ್ಲಿ ಲೋನ್ ಬಗ್ಗೆ ಚರ್ಚೆ

    ಚಾಮರಾಜನಗರ: ಯಾವ ಪೋಷಕರು ಅನುಕೂಲಕರವಾಗಿದ್ದಾರೆ ಅಂತಹವರು ಶುಲ್ಕ ಪಾವತಿಸಿ. ಫೀಸ್ ಪಾವತಿ ಮಾಡಿದ್ರೆ ಶಿಕ್ಷಕರಿಗೆ ವೇತನ ಕೊಡಲೂ ಅನುಕೂಲವಾಗುತ್ತೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

    ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಷ್ಟೇ ಮಹತ್ವವನ್ನು ಖಾಸಗಿ ಶಾಲೆಗಳು ವಹಿಸಿವೆ. ಖಾಸಗಿ ಶಾಲೆ ಬೇಕು ಅಂತ ಇಷ್ಟಪಟ್ಟು, ಕಷ್ಟಪಟ್ಟು ಪೋಷಕರು ಶಾಲೆಗೆ ಸೇರಿಸಿದ್ದಾರೆ. ಶಾಲೆಗೆ, ಪೋಷಕರಿಗೆ ಆರೋಗ್ಯಕರ ಸಂಬಂಧವಿರಬೇಕು. ಖಾಸಗಿ ಶಾಲಾ ಸಂಘಟನೆ ಜೊತೆ ನಾನು ಮಾತುಕತೆ ನಡೆಸ್ತೇನೆ ಎಂದರು.

    ಯಾವ ಪೋಷಕರು ಅನುಕೂಲಕರವಾಗಿದ್ದಾರೆ ಅಂತಹವರು ಫೀಸ್ ಪಾವತಿಸಿ. ಹೀಗೆ ಮಾಡಿದ್ದಲ್ಲಿ ಶಿಕ್ಷಕರಿಗೆ ವೇತನ ಕೊಡಲು ಸಹಾಯವಾಗುತ್ತೆ. ಈಗಾಗಲೇ ಖಾಸಗಿ ಶಾಲಾ ಶಿಕ್ಷಕರು ತರಕಾರಿ ಮಾರುವ ದುಸ್ಥಿತಿ ಬಂದಿದೆ. ಪೋಷಕರು ಹಾಗೂ ಶಾಲೆಯ ನಡುವೆ ಸಂಘರ್ಷ ಉಂಟಾಗಬಾರದು. ಬೆಂಗಳೂರಿಗೆ ಹೋದ ನಂತರ ಸಭೆ ನಡೆಸಿ ಪರಿಹಾರ ಮಾಡ್ತೀನಿ ಎಂದು ಸ್ಪಷ್ಟಪಡಿಸಿದರು.

    ಖಾಸಗಿ ಶಾಲೆಗೆ ಲೋನ್ ಕೊಡಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಲೋನ್ ಕೊಡಿಸುವ ಪ್ರಸ್ತಾಪ ಬಂದಿತ್ತು. ಕೆಲವು ಖಾಸಗಿ ಶಾಲೆಗಳು ಝೀರೋ ಬಡ್ಡಿದರದಲ್ಲಿ ಲೋನ್ ಕೊಡಿಸಿ ಅಂತ ಕೇಳಿದ್ದವು. ಕೆಲವು ಬ್ಯಾಂಕರ್ಸ್ ಜೊತೆ ಮಾತನಾಡಿದಾಗ ಹಿಂದೇಟು ಹಾಕಿದ್ದಾರೆ. ನಮ್ಮ ಆರ್ಥಿಕ ಇಲಾಖೆ ಜೊತೆ ಚರ್ಚೆ ನಡೆಸಿ ಲೋನ್ ಕೊಡಿಸಬಹುದಾ ಅಂತ ಯೋಚಿಸ್ತೀನಿ ಎಂದು ಹೇಳಿದರು.

    ಕೆಲವು ಶಾಲೆಗಳ ಪ್ರಕಾರ ಲೋನ್ ಸಿಕ್ಕಿದ್ರೆ ಸದ್ಯದ ಪರಿಸ್ಥಿತಿಯಿಂದ ಪಾರಾಗಬಹುದು ಎಂಬ ಅನಿಸಿಕೆಯಿದೆ. ಗೇಟ್ ಆಚೆ ನಿಂತು ಪ್ರತಿಭಟನೆ ಮಾಡೋದು ಒಳ್ಳೆಯ ಬೆಳವಣಿಗೆಯಲ್ಲ. ಪೋಷಕರು, ಟೀಚರ್ಸ್ ಜೊತೆ ಕೂಡ ಮಾತನಾಡ್ತೀನಿ. ಕೋವಿಡ್ ನಿಂದ ಇಂತಹ ದೊಡ್ಡ ಸಮಸ್ಯೆ ಎದುರಾಗಿದೆ ಎಂದು ತಿಳಿಸಿದರು.

    ಕಳೆದ 8 ತಿಂಗಳಿಂದ ಖಾಸಗಿ ಶಾಲಾ ಶಿಕ್ಷಕರು, ಶಿಕ್ಷಕರೇತರ ಸಿಬ್ಬಂದಿಗೆ ಸಮಸ್ಯೆಯಾಗಿದೆ. ಅದಕ್ಕೆ ಒಂದು ಕಂತಿನ ಶುಲ್ಕ ಕಟ್ಟಿಸಿಕೊಳ್ಳುವಂತೆ ಸೂಚನೆ ನೀಡಿದ್ದೇವೆ. ಕೆಲವೆಡೆ ಶಿಕ್ಷಕರು ಕೆಲಸ ಕಳೆದುಕೊಂಡಿದ್ದಾರೆ. ಮತ್ತೆ ಕೆಲ ಶಾಲೆಗಳು ಅರ್ಧ ಸಂಬಳ ನೀಡ್ತಿವೆ. ಇದೆಲ್ಲ ಗಮನಕ್ಕೆ ಬಂದಿದೆ. ಎಲ್ಲಾ ಸಮಸ್ಯೆಗೂ ಸೂಕ್ತ ಪರಿಹಾರ ಒದಗಿಸ್ತೀನಿ. ಲೋನ್ ಕೊಡಿಸುವ ಕುರಿತು ಸಾಧಕ-ಬಾಧಕ ಚರ್ಚಿಸಿ ಕ್ರಮ ಕೈಗೊಳ್ತೀನಿ ಎಂದು ಸಚಿವರು ಭರವಸೆ ನೀಡಿದ್ದಾರೆ.

  • ದಯವಿಟ್ಟು ನನ್ನ ಅಮ್ಮನನ್ನ ಉಳಿಸಿಕೊಡಿ – ಶಿಕ್ಷಣ ಸಚಿವರಿಗೆ ವಿದ್ಯಾರ್ಥಿನಿ ಪತ್ರ

    ದಯವಿಟ್ಟು ನನ್ನ ಅಮ್ಮನನ್ನ ಉಳಿಸಿಕೊಡಿ – ಶಿಕ್ಷಣ ಸಚಿವರಿಗೆ ವಿದ್ಯಾರ್ಥಿನಿ ಪತ್ರ

    ಮಂಗಳೂರು: ರಾಜ್ಯದ ಶಿಕ್ಷಣ ಇಲಾಖೆ ವಿದ್ಯಾಗಮ ಯೋಜನೆಯು ಅನೇಕ ಮಕ್ಕಳ ಜೊತೆಗೆ ಶಿಕ್ಷಕರಿಗೂ ಕಂಟಕವಾಗಿದೆ. ವಿದ್ಯಾಗಮ ಯೋಜನೆಯಡಿಯಲ್ಲಿ ಮಕ್ಕಳಿಗೆ ಪಠ್ಯ ಬೋಧಿಸಿದ ಶಿಕ್ಷಕವರ್ಗದ ಪೈಕಿ ಅನೇಕರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಈ ನಡುವೆ ವಿದ್ಯಾಗಮ ಯೋಜನೆಯಡಿಯಲ್ಲಿ ಕರ್ತವ್ಯ ನಿರ್ವಹಿಸಿ, ಸೋಂಕಿಗೆ ತುತ್ತಾಗಿ ಒದ್ದಾಡುತ್ತಿರುವ ಶಿಕ್ಷಕರ ಪುತ್ರಿಯೊಬ್ಬಳು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾಳೆ.

    ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಶಿರ್ತಾಡಿಯ ಮಕ್ಕಿಯ ಡಿಜೆ ಹೈಯರ್ ಪ್ರೈಮರಿ ಏಡೆಡ್ ಸ್ಕೂಲ್ ಮತ್ತು ಮೂಡಬಿದ್ರೆಯ ಜವಹರಲಾಲ್ ನೆಹರೂ ಅನುದಾನಿತ ಹೈಸ್ಕೂಲ್‍ನಲ್ಲಿ ಶಿಕ್ಷಕರಾಗಿ ಶಶಿಕಾಂತ್ ವೈ ಮತ್ತು ಪದ್ಮಾಕ್ಷಿ ಎನ್ ಕೆಲಸಮಾಡುತ್ತಿದ್ದಾರೆ. ಈ ದಂಪತಿಯ ಪುತ್ರಿ ಐಶ್ವರ್ಯಾ ಜೈನ್ ಇದೀಗ ಪತ್ರವನ್ನು ಬರೆದಿದ್ದಾಳೆ.

    ನನ್ನ ಹೆತ್ತವರಿಬ್ಬರೂ ಶಿಕ್ಷಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇದೀಗ ತಂದೆ ಮತ್ತು ತಾಯಿ ಇಬ್ಬರೂ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಈ ನಡುವೆ ತಾಯಿಯ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಇಂಡಿಯಾನ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 29ರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಂದೆಯೂ ಸೋಂಕಿನಿಂದ ಬಳಲುತ್ತಿದ್ದು ಇದೀಗ ಆಸ್ಪತ್ರೆಯ ಬಿಲ್ ಕಟ್ಟಲು ಸಾಧ್ಯವಾಗದೆ ಒದ್ದಾಡುತ್ತಿದ್ದಾರೆ.

    ನಮಗೊಂದು ಸಹಾಯದ ಹಸ್ತ ಬೇಕಿದೆ. ನನ್ನ ತಾಯಿಯು ಈ ವಿದ್ಯಾಗಮ ಯೋಜನೆಯ ಮುಂಚೆ ಸಂಪೂರ್ಣವಾಗಿ ಆರೋಗ್ಯವಾಗಿದ್ದರು. ತಮ್ಮ ಯೋಜನೆಯೇ ಇದಕ್ಕೆ ಕಾರಣ ಎನ್ನುವುದು ಸ್ಪಷ್ಟವಾಗಿದೆ. ಹೀಗಾಗಿ ಸಾಧ್ಯವಾದಷ್ಟು ಬೇಗ ತಮ್ಮಿಂದ ಆರ್ಥಿಕ ಸಹಾಯವನ್ನು ನಿರೀಕ್ಷೆ ಮಾಡುತ್ತಿದ್ದೇವೆ. ಈ ಸಂದರ್ಭದಲ್ಲಿ ಸರ್ಕಾರವು ಶಿಕ್ಷಕರನ್ನು ಕೈಬಿಡುವುದಿಲ್ಲ ಎಂದು ನಂಬಿದ್ದೇವೆ ಎಂದು ವಿದ್ಯಾರ್ಥಿನಿ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾಳೆ.

  • ಕೊರೊನಾಗೆ ಲಸಿಕೆ ಬರುವವರೆಗೂ ಶಾಲೆಗಳನ್ನ ತೆರೆಯದಿರುವುದು ಒಳ್ಳೆಯದು: ಶ್ರೀನಿವಾಸಮೂರ್ತಿ

    ಕೊರೊನಾಗೆ ಲಸಿಕೆ ಬರುವವರೆಗೂ ಶಾಲೆಗಳನ್ನ ತೆರೆಯದಿರುವುದು ಒಳ್ಳೆಯದು: ಶ್ರೀನಿವಾಸಮೂರ್ತಿ

    ಬೆಂಗಳೂರು: ಕೊರೊನಾ ನಡುವೆ ರಾಜ್ಯದಲ್ಲಿ ಶಾಲಾ ಕಾಲೇಜು ಓಪನ್ ವಿಚಾರದಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ರಾಜ್ಯದ ಎಲ್ಲಾ ಶಾಸಕರ ಅಭಿಪ್ರಾಯ ಕೇಳಿದ್ದಾರೆ. ಇದು ಸ್ವಾಗತಾರ್ಹ ಎಂದು ಬೆಂಗಳೂರು ಹೊರವಲಯ ನೆಲಮಂಗಲ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಪಬ್ಲಿಕ್ ಟಿವಿ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಶಾಲಾ, ಕಾಲೇಜುಗಳ ಆರಂಭ – ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದ ಸುರೇಶ್‌ ಕುಮಾರ್‌

    ಮಹಾಮಾರಿ ಕೊರೊನಾದಿಂದ ಜನಸಾಮಾನ್ಯರು ಸೇರಿದಂತೆ ನಮ್ಮಲ್ಲಿ ರೈಲ್ವೇ ಮಂತ್ರಿ, ಒಬ್ಬರು ಶಾಸಕರು ಇತ್ತೀಚೆಗೆ ತೀರಿಕೊಂಡಿದ್ದಾರೆ. ನನ್ನ ಅಭಿಪ್ರಾಯದಂತೆ ಈ ಮಹಾಮಾರಿ ಕೊರೊನಾಗೆ ಲಸಿಕೆ ಬರುವವರೆಗೂ ಶಾಲೆಗಳನ್ನ ತೆರೆಯದೆ ಇರುವುದೇ ಒಳ್ಳೆಯದು ಎಂದಿದ್ದಾರೆ.

    ಇತ್ತ ಈಗಾಗಲೇ ಶಿಕ್ಷಕರು ಮನೆಮನೆಗೆ ಹೋಗಿ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಿಸುತ್ತಿದ್ದಾರೆ. ಅದನ್ನು ಇನ್ನೂ ಎರಡು ತಿಂಗಳು ಮುಂದುವರಿಸುವುದು ಒಳ್ಳೆಯದು. ಕೊರೊನಾಗೆ ಲಸಿಕೆ ಕಂಡು ಹಿಡುಯುವುದು ಒಳ್ಳೆಯದು. ಶಾಲಾ ಮಕ್ಕಳಿಗೆ ಒಬ್ಬರಿಗೆ ಬಂದರೆ ಇಡೀ ಶಾಲೆ ನಾಶ ಆಗಬಿಡುತ್ತೆ. ಈ ಕೊರೊನಾ ಒಂದು ದಾರಿದ್ರ್ಯ ಕಾಯಿಲೆಯಾಗಿದೆ ಎಂದು ಶ್ರೀನಿವಾಸಮೂರ್ತಿ ಹೇಳಿದರು.

    ಸಚಿವರ ಅಭಿಪ್ರಾಯ ಜೊತೆಯಲ್ಲಿ ನಮ್ಮ ತಾಲೂಕಿನ ಶಿಕ್ಷಕರು ಮತ್ತು ಪೋಷಕರ ಜೊತೆ ಮಾತನಾಡುತ್ತೀನಿ. ಶಾಲೆಗಳು ಆರಂಭ ಮಾಡಲೇಬೇಕಾದರೆ ಬೆಳಗ್ಗೆ 1 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಮಧ್ಯಾಹ್ನದ ನಂತರ 6, 7ನೇ ವಿದ್ಯಾರ್ಥಿಗಳಿಗೆ ತರಗತಿ ಮಾಡಲಿ. ಸಾಮಾಜಿಕ ಅಂತರ ಮತ್ತು ಸ್ಯಾನಿಟೈಸ್ ಮಾಡಿ ತರಗತಿ ಪ್ರಾರಂಭ ಮಾಡಲಿ. ಆದರೂ ಇದು ಕಷ್ಟವಾಗುತ್ತದೆ. ಹೀಗಾಗಿ ಕೊರೊನಾಗೆ ಲಸಿಕೆ ಬರುವವರೆಗೂ ಶಾಲೆ ತೆರೆಯುವುದು ಬೇಡ ಎಂಬುದು ನನ್ನ ಅಭಿಪ್ರಾಯ ಎಂದರು.