Tag: ಶಿಕ್ಷೆ

  • ನಗ್ನ ಫೋಟೋ ವೈರಲ್ ಮಾಡಿದ ಮಾಡೆಲ್‍ಗೆ 10 ತಿಂಗ್ಳು ಜೈಲು!

    ನಗ್ನ ಫೋಟೋ ವೈರಲ್ ಮಾಡಿದ ಮಾಡೆಲ್‍ಗೆ 10 ತಿಂಗ್ಳು ಜೈಲು!

    ನವದೆಹಲಿ: ಮಾಡೆಲ್ ಒಬ್ಬನ ನಗ್ನ ಫೋಟೋವನ್ನು ಕ್ಲಿಕ್ಕಿಸಿ, ವೈರಲ್ ಮಾಡಿದ್ದ ಕಾರಣ ದಕ್ಷಿಣ ಕೊರಿಯಾದ ಕೋರ್ಟ್ ಮಾಡಲ್ ಒಬ್ಬಳಿಗೆ 10 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

    ಅಹನ್, ಜೈಲು ಶಿಕ್ಷೆಗೆ ಗುರಿಯಾಗಿರೋ ರೂಪದರ್ಶಿ. ಈಕೆಗೆ ಕೋರ್ಟ್ 10 ತಿಂಗಳ ಜೈಲು ಶಿಕ್ಷೆಯ ಜೊತೆಗೆ 40 ಗಂಟೆಗಳ ಕೌನ್ಸೆಲಿಂಗ್ ಶಿಕ್ಷೆಯನ್ನು ವಿಧಿಸಿದೆ. ಅಹನ್ ವೃತ್ತಿಯಲ್ಲಿ ಮಾಡೆಲ್ ಆಗಿದ್ದು, ಈಕೆ ಪುರುಷ ಮಾಡೆಲ್ ಒಬ್ಬನ ನಗ್ನ ಫೋಟೋ ತೆಗೆದು ಅದನ್ನು ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ಮಾಡಿದ್ದಾಳೆ. ಆ ಫೋಟೋಗೆ ಅನೇಕರು ವಿಭಿನ್ನ ರೀತಿಯಲ್ಲಿ ಕಮೆಂಟ್ ಮಾಡಿದ್ದರು. ಇದನ್ನು ನೋಡಿದ ಮಾಡೆಲ್, ಅಹನ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

    ಮಾಡೆಲ್ ನೀಡಿದ ದೂರಿನ ಅನ್ವಯ ಆಕೆಯನ್ನು ಬಂಧಿಸಲಾಗಿದೆ. ನಾವು ಆಕೆಯ ಮನೆ ಮೇಲೆ ದಾಳಿ ನಡೆಸಿ ಕೆಲವು ಸಾಕ್ಷ್ಯ ದಾಖಲೆಗಳನ್ನು ವಶಕ್ಕೆ ಪಡೆದಿದ್ದೇವೆ. ಬಳಿಕ ಆಕೆಯನ್ನು ನ್ಯಾಯಲಯಕ್ಕೆ ಹಾಜರು ಪಡಿಸಿದ್ದು, ಕೋರ್ಟ್ 10 ತಿಂಗಳು ಜೈಲು ಶಿಕ್ಷೆ ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇತ್ತೀಚೆಗೆ ದಕ್ಷಿಣ ಕೊರಿಯಾದಲ್ಲಿ ಸ್ಪೈ ಕ್ಯಾಮೆರಾ ಬಳಸಿ ಅಶ್ಲೀಲ ವಿಡಿಯೋ ಕ್ಲಿಕ್ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಶಾಲೆ, ಟ್ರೈನ್, ಕಚೇರಿ, ಡ್ರೆಸ್ಸಿಂಗ್ ರೂಮ್ ಮತ್ತು ರಸ್ತೆಯಲ್ಲೂ ವಿಡಿಯೋಗಳನ್ನು ಮಾಡಲಾಗುತ್ತಿದೆ.

    2010 ರಲ್ಲಿ ದಕ್ಷಿಣಾ ಕೊರಿಯಾದಲ್ಲಿ ಸ್ಪೈ ಕ್ಯಾಮೆರಾದ ಮೂಲಕ ಸುಮಾರು 1,100 ಕ್ಕೂ ಹೆಚ್ಚು ವಿಡಿಯೋ ರೆಕಾರ್ಡ್ ಮಾಡಲಾಗಿತ್ತು. ಆದರೆ ಇತ್ತೀಚೆಗೆ 6,500 ಕ್ಕೂ ಹೆಚ್ಚು ವಿಡಿಯೋಗಳು ಹೆಚ್ಚಾಗಿವೆ. ಕೆಲವರು ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಾರೆ. ಇನ್ನು ಕೆಲವರು ಆ ಫೋಟೋಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂಬುದಾಗಿ ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತಾಯಿಯನ್ನು ಕೊಂದ ತಂದೆಯನ್ನೇ ಜೈಲಿಗೆ ಕಳುಹಿಸಿದ ಮಗ ಗ್ರಾಮದಲ್ಲಿ ಈಗ ಹೀರೋ!

    ತಾಯಿಯನ್ನು ಕೊಂದ ತಂದೆಯನ್ನೇ ಜೈಲಿಗೆ ಕಳುಹಿಸಿದ ಮಗ ಗ್ರಾಮದಲ್ಲಿ ಈಗ ಹೀರೋ!

    ಚಿತ್ರದುರ್ಗ: ಮಗನೊಬ್ಬ ತನ್ನ ತಾಯಿಯನ್ನ ಕೊಂದ ತಂದೆಯನ್ನೆ ಜೈಲಿಗೆ ಕಳಿಸಿದ್ದು, ಆತನಿಗೆ ಅನಾಥ ಪ್ರಜ್ಞೆ ಕಾಡದಿರಲೆಂದು ಖಾಸಗಿ ಶಾಲೆಯೊಂದು ಆತನನ್ನು ದತ್ತು ಪಡೆದಿದೆ.

    ಬಗ್ಗಲರಂಗವ್ವನಹಳ್ಳಿ ಗ್ರಾಮದ ನಾಲ್ಕು ವರ್ಷದ ಬಾಲಕ ಧನುಷ್ ತಾಯಿ ಕೊಲೆಯಾದಾಗ ಕಣ್ಣಾರೆ ಕಂಡ ಸತ್ಯವನ್ನ ನ್ಯಾಯಾಧೀಶರ ಮುಂದೆ ನಿರಾತಂಕವಾಗಿ ಹೇಳಿ ಈಗ ಹೀರೋ ಆಗಿದ್ದಾನೆ.

    ಏನಿದು ಪ್ರಕರಣ?
    ಶೀಲ ಶಂಕಿಸಿ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ತಂದೆ ಕೊಲೆ ಮಾಡಿದ್ದನ್ನು ಧನುಷ್ ನೋಡಿದ್ದ. ಕೋರ್ಟ್ ವಿಚಾರಣೆಯ ವೇಳೆ ಧನುಷ್ ನನ್ನ ತಾಯಿಯನ್ನು ಕೊಲೆ ಮಾಡಿದ್ದು ತಂದೆಯೇ ಎಂದು ಹೇಳಿದ್ದ. ಈ ಹೇಳಿಕೆಯನ್ನೇ ಮುಖ್ಯ ಸಾಕ್ಷ್ಯವನ್ನಾಗಿದ ಪರಿಗಣಿಸಿದ ಚಿತ್ರದುರ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಹೆಂಡತಿಯ ಕೊಲೆ ಮಾಡಿದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

    ತನ್ನ ತಂದೆ-ತಾಯಿ ಇಬ್ಬರನ್ನು ಕಳೆದುಕೊಂಡಿರುವ ಈತನ ಸ್ಥಿತಿ ಅರಿತ ಅನಿವಾಸಿ ಭಾರತೀಯ ಮಂಜುನಾಥ್ ಚಿತ್ರದುರ್ಗ ನಗರದಲ್ಲಿರುವ ಕೆಕೆ ಇಂಟರ್‍ನ್ಯಾಷನಲ್ ಶಾಲೆಯಲ್ಲಿ ಈತನಿಗೆ ವಿದ್ಯಾಭ್ಯಾಸ ನೀಡಲು ಮುಂದಾಗಿದ್ದಾರೆ. ಆತ ಎಲ್ಲಿಯವರೆಗೆ ಓದಿದ್ರೂ ನಾನು ಸಹಾಯ ಮಾಡ್ತೀನಿ ಅಂತ ಮುಂದೆ ಬಂದಿದ್ದಾರೆ. ಅಷ್ಟೇ ಅಲ್ಲದೇ ಇಂತಹ ಪರಿಸ್ಥಿತಿಯಲ್ಲಿರೋ ಯಾವುದೇ ಮಕ್ಕಳಿಗೂ ಸಹಾಯ ಮಾಡುತ್ತೇನೆ ಎಂದಿದ್ದಾರೆ.

    ಚಿತ್ರದುರ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು, ಅನಾಥರಾಗಿರುವ ಈತನಿಗೆ ಆಧಾರ ಕಲ್ಪಿಸಲು ಮುಂದಾಗಿದ್ದು, ಸರ್ಕಾರದ ನೆರವು ಕೊಡಿಸುವ ಪ್ರಯತ್ನ ಕೂಡ ಮಾಡಿದ್ದಾರೆ. ಅಷ್ಟೇ ಅಲ್ಲದೆ ಶಾಲೆಯ ಅಧ್ಯಕ್ಷರ ಜೊತೆ ಮಾತನಾಡಿ ನಮ್ಮ ಮೊಮ್ಮಗನಿಗೆ ಇಂತಹ ದೊಡ್ಡ ಶಾಲೆಯಲ್ಲಿ ಉಚಿತ ಶಿಕ್ಷಣ ಸಿಗುವಂತೆ ಮಾಡಿದ್ದಾರೆ ಎಂದು ಬಾಲಕನ ಅಜ್ಜಿ ಶಾಂತಮ್ಮ ನ್ಯಾಯಾಧೀಶರನ್ನ ಮನಸಾರೆ ಸ್ಮರಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • 10 ರೂ. ನಾಣ್ಯ ಪಡೆಯದ್ದಕ್ಕೆ ಅಂಗಡಿ ಮಾಲೀಕನಿಗೆ ದಂಡ!

    10 ರೂ. ನಾಣ್ಯ ಪಡೆಯದ್ದಕ್ಕೆ ಅಂಗಡಿ ಮಾಲೀಕನಿಗೆ ದಂಡ!

    ಭೋಪಾಲ್: ಮಧ್ಯಪ್ರದೇಶದ ಮೊರೆನಾ ಜಿಲ್ಲಾ ನ್ಯಾಯಾಲಯವು 10 ರೂಪಾಯಿ ನಾಣ್ಯ ಸ್ವೀಕರಿಸದ್ದಕ್ಕೆ ಅಂಗಡಿ ಮಾಲೀಕನಿಗೆ 200 ರೂ. ದಂಡ ವಿಧಿಸಿದೆ.

    10 ರೂ. ನಾಣ್ಯ ಸ್ವೀಕರಿಸದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲಾದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಪಿ. ಚಿದಲ್ ರವರು ಮಂಗಳವಾರ ನಾಣ್ಯವನ್ನು ಸ್ವೀಕರಿಸದ್ದಕ್ಕೆ 200 ರೂ. ದಂಡ ವಿಧಿಸಿದ್ದಾರೆ. ಅಷ್ಟೇ ಅಲ್ಲದೇ ನಾಣ್ಯ ನಿಷೇಧವಾಗಿದೆ ಎಂದು ಸುಳ್ಳು ಹೇಳಿದ್ದಕ್ಕೆ ಮಂಗಳವಾರದ ಕಲಾಪ ಮುಗಿಯುವವರೆಗೂ ಕೋರ್ಟ್ ನಲ್ಲೇ ಇರಬೇಕೆಂಬ ಶಿಕ್ಷೆಯನ್ನು ವಿಧಿಸಿದ್ದಾರೆ.

    ಏನಿದು ಪ್ರಕರಣ?
    2017ರ ಅಕ್ಟೋಬರ್ 17ರಂದು ಗ್ರಾಹಕ ಆಕಾಶ್ ಪರಾಸ ಎಂಪೋರಿಯಂ ನಲ್ಲಿ 10 ರೂ. ಮೌಲ್ಯದ ಎರಡು ಕರವಸ್ತ್ರಗಳನ್ನು ಖರೀದಿಸಿದ್ದಾರೆ. ಈ ವೇಳೆ ಅಂಗಡಿ ಮಾಲೀಕನಿಗೆ 10 ರೂ. ಮೌಲ್ಯದ ಎರಡು ನಾಣ್ಯಗಳನ್ನು ನೀಡಿದ್ದರು. ಆದರೆ ಅಂಗಡಿ ಮಾಲೀಕ ಆಕಾಶ್ 10. ರೂ ನಾಣ್ಯಗಳನ್ನು ಸ್ವೀಕರಿಸಲು ನಿರಾಕರಿಸಿದ್ದು ಅಲ್ಲದೇ ಅವುಗಳು ಚಲಾವಣೆಯಲಿಲ್ಲ ಎಂದು ಹೇಳಿದ್ದ.

    10 ರೂ. ನಾಣ್ಯ ಚಲಾವಣೆಯಲ್ಲಿದೆ ಎಂದು ಸರ್ಕಾರವೇ ತಿಳಿಸಿದ್ದು, ನಾಣ್ಯವನ್ನು ಪಡೆಯಲು ನಿರಾಕರಿಸಿದ ಅಂಗಡಿ ಮಾಲೀಕನ ವಿರುದ್ಧ ಆಕಾಶ್ ಜುವಾರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಐಪಿಸಿ ಸೆಕ್ಷನ್ 188ರ(ಸರ್ಕಾರದ ಆದೇಶದ ಉಲ್ಲಂಘನೆ) ಅಡಿ ಗ್ರಾಹಕರೊಂದಿಗೆ ಅನುಚಿತ ವರ್ತನೆ ತೋರಿದ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿದ್ದರು.

    ಆರ್ ಬಿಐ ಆದೇಶದಲ್ಲಿ ಏನಿದೆ?
    10 ರೂಪಾಯಿ ಕಾಯಿನ್ ಬ್ಯಾನ್ ಆಗಿಲ್ಲ, ಸ್ಚೀಕರಿಸಬಹುದು ಅಂತ ಆರ್ ಬಿಐ 2016 ನವೆಂಬರ್ 20ರಂದೇ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟವಾಗಿ ತಿಳಿಸಿದೆ. ಚಾಲ್ತಿಯಲ್ಲಿರುವ ನಾಣ್ಯ ಅಥವಾ ನೋಟುಗಳನ್ನು ನಿರಾಕರಿಸುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಒಂದು ವೇಳೆ ಚಾಲ್ತಿಯಲ್ಲಿರುವ ನಾಣ್ಯ ಅಥವಾ ನೋಟುಗಳನ್ನು ಸ್ವೀಕರಿಸಲು ನಿರಾಕರಿಸಿದರೆ ಅಂತವರ ವಿರುದ್ಧ ದೂರು ಸಲ್ಲಿಸಬಹುದಾಗಿದೆ.

  • ಹಾರ್ದಿಕ್ ಪಟೇಲ್‍ಗೆ 2 ವರ್ಷ ಜೈಲು

    ಹಾರ್ದಿಕ್ ಪಟೇಲ್‍ಗೆ 2 ವರ್ಷ ಜೈಲು

    ಗಾಂಧಿನಗರ: ಪಟೇಲ್ ಸಮುದಾಯ ಮೀಸಲಾತಿ ಹೋರಾಟದ ವೇಳೆ ಬಿಜೆಪಿ ಶಾಸಕರೊಬ್ಬರ ಕಚೇರಿಯನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಹಾರ್ದಿಕ್ ಪಟೇಲ್‍ಗೆ ಸ್ಥಳೀಯ ವಿಸ್ನಾನಗರ್ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಿದೆ.

    ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಹಾರ್ದಿಕ್ ಪಟೇಲ್ ದೋಷಿ ಎಂದು ತೀರ್ಪು ನೀಡಿದೆ. 2015 ರಲ್ಲಿ ಮೀಸಲಾತಿ ಹೋರಾಟದ ಹೆಸರಲ್ಲಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪ ಸಾಬೀತಾಗಿದ್ದು ಹಾರ್ದಿಕ್ ಜೊತೆ ಪಟೇಲ್ ಸಮುದಾಯದ ಇಬ್ಬರು ನಾಯಕರಿಗೆ ಸಮಾನ ಶಿಕ್ಷೆಯಾಗಿದೆ.

    ಏನಿದು ಪ್ರಕರಣ?
    2015 ಪಟೇಲ್ ಸಮುದಾಯ ಮೀಸಲಾತಿ ನೀಡಲು ಹಾರ್ದಿಕ್ ಪಟೇಲ್ ನೇತೃತ್ವದಲ್ಲಿ ಗುಜರಾತಿನಲ್ಲಿ ಬೃಹತ್ ಹೋರಾಟ ನಡೆದಿತ್ತು. ಈ ವೇಳೆ 3 ರಿಂದ 4 ಸಾವಿರ ಹೋರಾಟಗಾರರು ಸ್ಥಳೀಯ ಬಿಜೆಪಿ ಶಾಸಕ ರುಷಿಕೇಶ್ ಪಟೇಲ್ ಕಚೇರಿ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದರು. ಪ್ರಕರಣಕ್ಕೆ ಸಂಬಂಧಿದಂತೆ ಹಾರ್ದಿಕ್ ಪಟೇಲ್ ಸೇರಿದಂತೆ 17 ಮಂದಿ ಮೇಲೆ ಪ್ರಕರಣ ದಾಖಲಿಸಿ ಪೊಲೀಸರು ಚಾರ್ಜ್‍ಶೀಟ್ ಸಲ್ಲಿಸಿದ್ದರು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾರ್ದಿಕ್ ಪಟೇಲ್ ಬಂಧನ ಕೂಡ ಆಗಿತ್ತು. ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದು ಹಾರ್ದಿಕ್ ಹೊರಬಂದಿದ್ದರು. ಈ ವೇಳೆ ಪ್ರಕರಣದಲ್ಲಿ ತೀರ್ಪು ತಮ್ಮ ಪರ ಬರುತ್ತದೆ ಎಂದು ಪಟೇಲ್ ಸಮುದಾಯದ ಮೀಸಲಾತಿ ಹೋರಾಟ ಕಾರ್ಯಕರ್ತರಿಗೆ ಆಶ್ವಾಸನೆ ನೀಡಿದ್ದರು. ಆದರೆ ಹೋರಾಟದ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್ ಹಾರ್ದಿಕ್ ಪಟೇಲ್ ಗೆ ವಿಸ್ನಾನಗರ್ ಜಿಲ್ಲೆಯನ್ನು ಪ್ರವೇಶ ಮಾಡದಂತೆ ನಿಷೇಧ ಸಹ ವಿಧಿಸಿತ್ತು. ಬಳಿಕ ಗುಜರಾತ್ ಚುನಾವಣೆಯ ಸಮಯದಲ್ಲಿ ನಿಷೇಧವನ್ನು ತೆರವುಗೊಳಿಸಿತ್ತು.

     

  • ಪತ್ನಿಯನ್ನು ಕೊಲೆಗೈದ 13 ದಿನದಲ್ಲೇ ಪತಿಗೆ ಜೀವಾವಧಿ ಶಿಕ್ಷೆ: ಚಿತ್ರದುರ್ಗ ಕೋರ್ಟ್‍ನಿಂದ ಇತಿಹಾಸ ಸೃಷ್ಟಿ

    ಪತ್ನಿಯನ್ನು ಕೊಲೆಗೈದ 13 ದಿನದಲ್ಲೇ ಪತಿಗೆ ಜೀವಾವಧಿ ಶಿಕ್ಷೆ: ಚಿತ್ರದುರ್ಗ ಕೋರ್ಟ್‍ನಿಂದ ಇತಿಹಾಸ ಸೃಷ್ಟಿ

    ಚಿತ್ರದುರ್ಗ: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಪಾಪಿ ಪತಿರಾಯನಿಗೆ ತನ್ನ ಮಕ್ಕಳೇ ಶಿಕ್ಷೆ ಕೊಡಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

    ಕೊಲೆ ಪ್ರಕರಣ ನಡೆದು ಕೇವಲ 13 ದಿನಗಳಲ್ಲೇ ಜಿಲ್ಲಾ ಸತ್ರ ನ್ಯಾಯಾಲಯ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗು ದಂಡ ವಿಧಿಸೋ ಮೂಲಕ ಒಂದು ಐತಿಹಾಸಿಕ ದಾಖಲೆ ಬರೆದಿದೆ.

    ಘಟನೆ ವಿವರ:
    ಚಿತ್ರದುರ್ಗ ತಾಲೂಕಿನ ಬಗ್ಗಲರಂಗವನಹಳ್ಳಿಯಲ್ಲಿ ಜುಲೈ 27ರಂದು ಮಕ್ಕಳಿಗೆ ಎದೆಹಾಲು ಉಣಿಸಿ ಮಲಗಿದ್ದ ಸಾಕಮ್ಮನ (26) ಮೇಲೆ ಪತಿ ಶ್ರೀಧರ್ ಕಲ್ಲು ಎತ್ತಿಹಾಕಿ ಕೊಲೆ ಮಾಡಿ, ರಾತ್ರೋರಾತ್ರಿ ತನ್ನ ಎಳೆಯ ಎರಡು ಕೂಸುಗಳನ್ನ ಬಿಟ್ಟು ಪರಾರಿಯಾಗಿದ್ದ. ಈ ಬಗ್ಗೆ ಮಾಹಿತಿ ತಿಳಿದ ತುರುವನೂರು ಪಿಎಸ್‍ಐ ಶ್ರೀನಿವಾಸ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ ಅದೇ ದಿನ ಮಧ್ಯಾಹ್ನ ಊರ ಹೊರಗಿನ ಜಮೀನೊಂದರಲ್ಲಿ ವಿಷಕುಡಿದು ಅಪರಾಧಿ ಶೀಧರ್ ಆತ್ಮಹತ್ಯೆಯ ಡ್ರಾಮ ಆಡಿದ್ದನು. ಬಳಿಕ ಸಂಜೆ ವೇಳೆಗೆ ಪೋಲಿಸರ ಅತಿಥಿಯಾಗಿದ್ದನು.

    ಈ ಸಂಬಂಧ ತುರುವನೂರು ಪೊಲೀಸರು ಕೇವಲ ಮೂರೇ ದಿನದಲ್ಲಿ ಪ್ರಕರಣ ಕುರಿತು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಕೂಡಲೇ ಪ್ರಕರಣವನ್ನ ಕೈಗೆತ್ತಿಗೊಂಡ ಜಿಲ್ಲಾ ನ್ಯಾಯಾಧೀಶರಾದ ಎಸ್.ಬಿ. ವಸ್ತ್ರದಮಠರವರು ಕೇವಲ 13 ದಿನಗಳಲ್ಲಿ ಈ ಪ್ರಕರಣದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 30,000 ದಂಡ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದ್ದಾರೆ.

    ಈ ಪ್ರಕರಣ ಕುರಿತಂತೆ ತನಿಖೆ ಆರಂಭಿಸಿದ ಪೊಲೀಸರು ಕೇವಲ ಮೂರು ದಿನದಲ್ಲಿ ಸುಮಾರು ಸಾಕ್ಷಿ ಸಮೇತ ಕೋರ್ಟ್ ಗೆ ಹಾಜರು ಪಡಿಸಿದ್ದರು. ಈ ವೇಳೆಯಲ್ಲಿ ಸ್ವತಃ ಶ್ರೀಧರನ ಮಗ ಈತನೇ ತನ್ನ ತಾಯಿಯನ್ನು ಕೊಲೆ ಮಾಡಿದ್ದು ಅಂತ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದನು. ಈ ಹೇಳಿಕೆಯನ್ನ ಆಧರಿಸಿದ ನ್ಯಾಯಾಧೀಶರು ಅಪರಾಧಿಗೆ ಜೀವಾವಧಿ ಶಿಕ್ಷೆ 30 ಸಾವಿರ ದಂಡವನ್ನ ವಿಧಿಸಿದ್ದರು.

    ಚಿತ್ರದುರ್ಗ ಜಿಲ್ಲಾ ಸತ್ರ ನ್ಯಾಯಾಲಯ ಅತಿ ಕಡಿಮೆ ಅವಧಿಯಲ್ಲಿ ಒಂದು ಐತಿಹಾಸಿಕ ತೀರ್ಪು ನೀಡಿದೆ. ಕೇವಲ ಹದಿಮೂರು ದಿನದಲ್ಲಿ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ ಮತ್ತು 30 ಸಾವಿರ ದಂಡ ವಿಧಿಸಿದೆ. ಅಪರಾಧಿ ಶ್ರೀಧರನ ಬಡತನ ಕಂಡು ಎರಡು ಮಕ್ಕಳಿಗೆ ಸಮಾಜಕಲ್ಯಾಣ ಇಲಾಖೆಯಿಂದ ಬರುವ ಸಹಾಯಧನವನ್ನ ಅವರ ಭವಿಷ್ಯಕ್ಕಾಗಿ ಕೊಡಿಸುವುದಾಗಿ ಅಪರಾಧಿಗೆ ಭರವಸೆ ನೀಡಿದ್ದಾರೆ. ಈ ಐತಿಹಾಸಿಕ ತೀರ್ಪಿನಿಂದಾಗಿ ಸುಲಭವಾಗಿ ಕಾನೂನಿನಿಂದ ತಪ್ಪಿಸಿಕೊಳ್ಳಬಹುದೆಂಬ ಭ್ರಮೆಯಲ್ಲಿರುವ ಸುಲಿಗೆದಾರರನ್ನು ಬೆಚ್ಚಿ ಬೀಳಿಸಿದೆ.

  • ಚಿನ್ನಸ್ವಾಮಿ ಬಾಂಬ್ ಸ್ಫೋಟ ಪ್ರಕರಣ- ಮೂವರಿಗೆ 7 ವರ್ಷ ಜೈಲು ಶಿಕ್ಷೆ

    ಚಿನ್ನಸ್ವಾಮಿ ಬಾಂಬ್ ಸ್ಫೋಟ ಪ್ರಕರಣ- ಮೂವರಿಗೆ 7 ವರ್ಷ ಜೈಲು ಶಿಕ್ಷೆ

    ಬೆಂಗಳೂರು: ಐಪಿಎಲ್ ಪಂದ್ಯಾವಳಿ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಕಾಂಪೌಡ್ ನಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ದೋಷಿಗಳಿಗೆ ಎನ್‍ಐಎ ವಿಶೇಷ ನ್ಯಾಯಾಲಯ ಸೋಮವಾರ 7 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶ ಸಿದ್ದಲಿಂಗ ಪ್ರಭು ರವರು ಇಂದು ತಪ್ಪೊಪ್ಪಿಕೊಂಡ ಮೂವರು ದೋಷಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ. ಕಳೆದ ಬುಧವಾರ ಸ್ಫೋಟ ಪ್ರಕರಣದ 5ನೇ ಆರೋಪಿಯಾಗಿರುವ ಗೌಹಾರ್ ಅಜೀಜ್ ಖೋಮೆನಿ, 12ನೇ ಆರೋಪಿ ಕಮಲ್ ಹಸನ್ ಅಲಿಯಾಸ್ ಕಮಲ್ ಹಾಗೂ 13ನೇ ಆರೋಪಿ ಮೊಹಮ್ಮದ್ ಕಫೀಲ್ ಅಖ್ತರ್ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು. ಉಳಿದ ಆರೋಪಿಗಳ ಬಗ್ಗೆ ತನಿಖೆ ಮುಂದುವರಿದಿದ್ದು, ಉಗ್ರ ಯಾಸಿನ್ ಭಟ್ಕಳ್ ಸೇರಿದಂತೆ ಒಟ್ಟು 14 ಉಗ್ರರು ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

    2010ರ ಏಪ್ರಿಲ್ 17ರಂದು ಐಪಿಎಲ್ ಪಂದ್ಯ ಆರಂಭಕ್ಕೆ ಮುನ್ನ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಮೂರು ಬಾಂಬ್ ಸ್ಫೋಟಗೊಂಡಿದ್ದವು. ಘಟನೆಯಲ್ಲಿ ಪೊಲೀಸರು ಸೇರಿದಂತೆ 15 ಜನ ಗಾಯಗೊಂಡಿದ್ದರು. ಇದೇ ವೇಳೆ ಸ್ಫೋಟಗೊಳ್ಳದ ಎರಡು ಬಾಂಬ್‍ಗಳು ಸ್ಥಳದಲ್ಲಿ ಪತ್ತೆಯಾಗಿತ್ತು.

  • ಮಾಜಿ ಸೈನಿಕನಿಗೆ ರಾಮನಗರ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ

    ಮಾಜಿ ಸೈನಿಕನಿಗೆ ರಾಮನಗರ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ

    ರಾಮನಗರ: ಅತ್ತೆಯನ್ನು ಕೊಲೆ ಮಾಡಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ  ಅಪರಾಧಿಯಾಗಿದ್ದ ಮಾಜಿ ಸೈನಿಕನಿಗೆ ರಾಮನಗರ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

    ಕಳೆದ ವರ್ಷ ಅತ್ತೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದ ಮಾಜಿ ಸೈನಿಕ ನಾಗರಾಜುವನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿತ್ತು. ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ವಿಚಾರಣೆ ನಡೆಸಿ, ಈ ಪ್ರಕರಣ ಕುರಿತಂತೆ ಇಂದು ಶಿಕ್ಷೆಯ ತೀರ್ಪು ನೀಡಿದೆ. ನ್ಯಾಯಧೀಶರಾದ ಗೋಪಾಲಕೃಷ್ಣ ರೈರವರು ಮಾಜಿ ಸೈನಿಕ ನಾಗರಾಜುವಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

    ಏನಿದು ಪ್ರಕರಣ?
    ರಾಮನಗರ ತಾಲೂಕಿನ ದಾಸೇಗೌಡನದೊಡ್ಡಿ ಗ್ರಾಮದವನಾದ ನಾಗರಾಜ್, ಬಿಎಸ್‍ಎಫ್ ನಲ್ಲಿ ಸುಮಾರು 20 ವರ್ಷಗಳ ಕಾಲ ಸೇವೆ ಸಲ್ಲಿಸಿ ಗಡಿಯಲ್ಲಿ ದೇಶ ಸೇವೆ ಮಾಡಿದ್ದ. ಮೂವತ್ತು ವರ್ಷಗಳ ಹಿಂದೆ ಮೃತಳ ಪುತ್ರಿ ಮಂಗಳಾ ಎಂಬುವವರನ್ನ ಮದುವೆಯಾಗಿದ್ದ. ದಂಪತಿಗೆ ಮುದ್ದಾದ ಇಬ್ಬರು ಮಕ್ಕಳು ಇದ್ದಾರೆ. ನಾಗರಾಜ್ ಕಳೆದ ಆರು ವರ್ಷಗಳಿಂದ ಕೆಂಚನಕುಪ್ಪೆ ಗ್ರಾಮದಲ್ಲಿಯೇ ನೆಲೆಸಿದ್ದನು.

    ನಾಗರಾಜ್ ಸಂಸಾರದಲ್ಲಿ ಪದೇ ಪದೇ ಜಗಳ ನಡೆಯುತ್ತಿತ್ತು. ಈ ಸಂಬಂಧ ರಾಜಿ ಪಂಚಾಯಿತಿ ಕೂಡ ನಡೆದಿತ್ತು. ಅಲ್ಲದೆ ಕಳೆದ ವರ್ಷದ ಏಪ್ರಿಲ್ ನಲ್ಲಿ ಜಗಳ ನಡೆದು ಮಂಗಲಾ ತನ್ನ ತಾಯಿ ಮನೆ ಸೇರಿದ್ದರು. ಇದೇ ವಿಚಾರವಾಗಿ  ಏಪ್ರಿಲ್ 7ರಂದು ಗಲಾಟೆ ಮಾಡುತ್ತಾ, ಮಚ್ಚು ಹಿಡಿದು ಅತ್ತೆ ಮನೆ ಬಳಿ ಬಂದ ನಾಗರಾಜ್, ಪತ್ನಿ ಮಂಗಳರನ್ನ ಹುಡುಕಿದ್ದಾನೆ. ಈ ವೇಳೆ  ಕೈಯಲ್ಲಿ ಮಚ್ಚು ಕಂಡ, ಅತ್ತೆ ಚಿಕ್ಕತಿಮ್ಮಮ್ಮ ನಾಗರಾಜ್ ನನ್ನ ಪ್ರಶ್ನಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಇದರಿಂದ ಕುಪಿತಗೊಂಡ ನಾಗರಾಜ್ ಮಚ್ಚಿನಿಂದ ಅತ್ತೆಯನ್ನು ಕೊಚ್ಚಿ ಕೊಲೆ ಮಾಡಿದ್ದ.

    .  ಇದನ್ನೂ ಓದಿ : ಗಂಡ-ಹೆಂಡತಿ ಜಗಳದಲ್ಲಿ ಮೂಗು ತೂರಿಸಿದ್ದಕ್ಕೆ ಅತ್ತೆಯನ್ನೇ ಕೊಂದ ಮಾಜಿ ಸೈನಿಕ

  • 60ರ ಮಹಿಳೆ ಮೇಲೆ ಐವರಿಂದ ಅತ್ಯಾಚಾರಕ್ಕೆ ಯತ್ನ – ಗ್ರಾಮದ ಪಂಚಾಯ್ತಿಯಲ್ಲಿ ಕಾಮುಕರಿಗೆ ವಿಚಿತ್ರ ಶಿಕ್ಷೆ

    60ರ ಮಹಿಳೆ ಮೇಲೆ ಐವರಿಂದ ಅತ್ಯಾಚಾರಕ್ಕೆ ಯತ್ನ – ಗ್ರಾಮದ ಪಂಚಾಯ್ತಿಯಲ್ಲಿ ಕಾಮುಕರಿಗೆ ವಿಚಿತ್ರ ಶಿಕ್ಷೆ

    ಲಕ್ನೋ: ಹಿರಿಯ ವಯಸ್ಸಿನ ಮಹಿಳೆಯ ಮೇಲೆ ಐವರು ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದು, ಈಗ ಅವರಿಗೆ ನೀಡಿರುವ ಶಿಕ್ಷೆಯ ವಿಡಿಯೋ ವೈರಲ್ ಆಗಿದೆ.

    ಈ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಗ್ರಾಮ ಪಂಚಾಯತ್ ಸದಸ್ಯರು ನ್ಯಾಯ ಪಂಚಾಯಿತಿ ಮಾಡಿದ್ದು, ಐವರು ಆರೋಪಿಗಳಿಗೆ ಸಂತ್ರಸ್ತೆಯ ಕೈಯಿಂದ ಐದು ಬಾರಿ ಚಪ್ಪಲಿ ಏಟು ಹೊಡೆಸಿದ್ದು, 5,100 ರೂ. ದಂಡವನ್ನು ವಿಧಿಸಿ ಶಿಕ್ಷೆಯನ್ನು ನೀಡಿದೆ.

    ಘಟನೆಯ ವಿವರ: ಸಂತ್ರಸ್ತೆ ರಾತ್ರಿ ಮನೆಯ ಮುಂದೆ ಮಲಗಿದ್ದರು. ಈ ವೇಳೆ ಬಂದ ಐವರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಮಹಿಳೆ ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಂತೆ ಐವರು ಕೊಲೆ ಬೆದರಿಕೆಯನ್ನು ಹಾಕಿದ್ದಾರೆ. ತಾಯಿಯ ಕಿರುಚಾಟ ಕೇಳುತ್ತಿದ್ದಂತೆ ಮಗ ಬಂದಿದ್ದಾನೆ. ಕೂಡಲೇ ಎಲ್ಲ ಕಾಮುಕರು ಓಡಿ ಹೋಗಿದ್ದಾರೆ. ಬೆಳಗ್ಗೆ ಮಹಿಳೆ ತನ್ನ ಮೇಲಾದ ದೌರ್ಜನ್ಯವನ್ನು ನೆರೆಹೊರೆಯ ಜನಕ್ಕೆ ತಿಳಿಸಿದ್ದಾರೆ.

    ವಿಷಯ ತಿಳಿದ ಗ್ರಾಮಸ್ಥರು ಸಂತ್ರಸ್ತೆಯ ಮನೆಗೆ ದೌಡಾಯಿಸಿ ಬಂದು ಐವರನ್ನು ಹಿಡಿದು ಪಂಚಾಯಿತಿ ಮಾಡಿದ್ದಾರೆ. ಗ್ರಾಮದ ಪಂಚಾಯತ್ ಮುಖ್ಯಸ್ಥ ಸೇರಿ ಐವರು ಆರೋಪಿಗಳಿಗೆ ಸಂತ್ರಸ್ತೆಯ ಕೈಯಿಂದ ಒಬ್ಬೊಬ್ಬರಿಗೆ ಐದು ಬಾರಿ ಚಪ್ಪಲಿ ಏಟು ಮತ್ತು 5100 ರೂ ದಂಡವನ್ನು ವಿಧಿಸಿದ್ದಾನೆ. ವೃದ್ಧೆ ಮತ್ತು ಕುಟುಂಬಸ್ಥರು ಆರೋಪಿಗಳ ವಿರುದ್ಧ ದೂರು ನೀಡಲು ಹಿಂದೇಟು ಹಾಕಿದ್ದರು.

    ವಿಡಿಯೋ ವೈರಲ್: ಐವರು ಆರೋಪಿಗಳಿಗೆ ಸಂತ್ರಸ್ತೆ ಚಪ್ಪಲಿಯಿಂದ ಹೊಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಡಿಯೋ ಗಮನಿಸಿದ ನಂತರ ಪೊಲೀಸರು ಘಟನೆ ನಡೆದ ಸ್ಥಳದ ಬಗ್ಗೆ ಮಾಹಿತಿ ಪಡೆದು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಗ್ರಾಮಕ್ಕೆ ಆಗಮಿಸಿದ ಪೊಲೀಸರು ಸಂತ್ರಸ್ತೆಯಿಂದ ಮಾಹಿತಿ ಪಡೆದುಕೊಂಡಿದ್ದಾರೆ.

    ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳು 50 ವರ್ಷದವರಾಗಿದ್ದು, ಮಹಿಳೆಯ ನೆರೆಮನೆಯವರೇ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೇ ಈ ಕೃತ್ಯ ಎಸಗಲು ಪ್ರಯತ್ನಿಸಿದಾಗ ಅವರೆಲ್ಲರೂ ಮದ್ಯದ ನಶೆಯಲ್ಲಿದ್ದರು ಎಂದು ಪೊಲೀಸರು ಶಂಕಿಸಿದ್ದಾರೆ. ಗ್ರಾಮಕ್ಕೆ ಬಂದು ಸಂತ್ರಸ್ತೆಯಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಂತೆ ಐವರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಟಾಲಿವುಡ್ ಯುವ ನಟನ ತಂದೆಗೆ 3 ವರ್ಷ ಜೈಲು!

    ಟಾಲಿವುಡ್ ಯುವ ನಟನ ತಂದೆಗೆ 3 ವರ್ಷ ಜೈಲು!

    ಹೈದರಾಬಾದ್: ಟಾಲಿವುಡ್ ಯುವ ನಾಯಕ ನಟರಾಗಿ ಹೆಸರು ಪಡೆದಿರುವ ನಟ ರಾಜ್ ತರುಣ್ ಅವರ ತಂದೆಗೆ ವಿಶಾಖಪಟ್ಟಣ ಸ್ಥಳೀಯ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ.

    ನಟ ರಾಜ್ ತರುಣ್ ಅವರ ತಂದೆ ನಿಡಮರ್ತಿ ಬಸವರಾಜು ನಕಲಿ ಚಿನ್ನವನ್ನು ಅಡವಿಟ್ಟು ಸಾಲ ಪಡೆದ ಆರೋಪದ ಮೇಲೆ ಅವರಿಗೆ ನ್ಯಾಯಾಲಯ 3 ವರ್ಷ ಜೈಲು ಹಾಗೂ 20 ಸಾವಿರ ರೂ. ದಂಡವನ್ನು ವಿಧಿಸಿದೆ.

    ಏನಿದು ಪ್ರಕರಣ?: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಿಡಮರ್ತಿ ಬಸವರಾಜು 2013 ರಲ್ಲಿ ತಮ್ಮ ಪತ್ನಿ ರಾಜ್ಯಲಕ್ಷ್ಮಿ ಸೇರಿದಂತೆ ಹಲವರ ಹೆಸರಿನಲ್ಲಿ ನಕಲಿ ಚಿನ್ನ ಅಡವಿಟ್ಟು ಸಾಲ ಪಡೆದಿದ್ದಾರೆ.

    ಬ್ಯಾಂಕ್ ಅಧಿಕಾರಿಗಳು ವಾರ್ಷಿಕ ಲೆಕ್ಕ ಪರಿಶೀಲನೆ ನಡೆಸಿದ ವೇಳೆ ಈ ಕುರಿತು ಅನುಮಾನಗೊಂಡು ತನಿಖೆ ನಡೆಸಿದ್ದು, ಬಳಿಕ ಬಸವರಾಜು ನಡೆಸಿದ ಕೃತ್ಯ ಬೆಳಕಿಗೆ ಬಂದಿದೆ. ಸುಮಾರು 9.85 ಲಕ್ಷ ರೂ. ಹಣವನ್ನು ನಕಲಿ ಚಿನ್ನವನ್ನು ಅಡವಿಟ್ಟು ಸಾಲ ಪಡೆದಿದ್ದಾರೆ. ಬ್ಯಾಂಕ್ ಅಧಿಕಾರಿಗಳು ಘಟನೆ ಕುರಿತು ದೂರು ನೀಡಿದ್ದರಿಂದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ನಿಡಮರ್ತಿ ಬಸವರಾಜುಗೆ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ.

  • ಒಂದಕ್ಕಿಂತ ಹೆಚ್ಚು ಲಿಕ್ಕರ್ ಬಾಟಲ್ ತೆಗೆದುಕೊಂಡು ಯುಪಿ ಪ್ರವೇಶಿಸುವಂತಿಲ್ಲ-ನಿಯಮ ಮುರಿದರೆ 5 ವರ್ಷ ಜೈಲು!

    ಒಂದಕ್ಕಿಂತ ಹೆಚ್ಚು ಲಿಕ್ಕರ್ ಬಾಟಲ್ ತೆಗೆದುಕೊಂಡು ಯುಪಿ ಪ್ರವೇಶಿಸುವಂತಿಲ್ಲ-ನಿಯಮ ಮುರಿದರೆ 5 ವರ್ಷ ಜೈಲು!

    ಘಜಿಯಾಬಾದ್: ನೆರೆ ರಾಜ್ಯಗಳಿಂದ ಒಂದಕ್ಕಿಂತ ಹೆಚ್ಚು ಮದ್ಯದ ಬಾಟಲಿ ತೆಗೆದುಕೊಂಡು ಬಂದರೆ, 5 ವರ್ಷ ಜೈಲು ಹಾಗೂ 5 ಸಾವಿರ ರೂ. ದಂಡ ವಿಧಿಸುವ ಹೊಸ ನಿಯಮವನ್ನು ಉತ್ತರ ಪ್ರದೇಶದ ಸರ್ಕಾರ ಜಾರಿಗೊಳಿಸಿದೆ.

    ಈ ನಿಯಮವನ್ನು ಮುರಿದು ಒಂದಕ್ಕಿಂತ ಹೆಚ್ಚು ಬಾಟಲಿ ಮದ್ಯ ತೆಗೆದುಕೊಂಡು ಬಂದರೆ ಇದನ್ನು ಜಾಮೀನು ರಹಿತ ಅಪರಾಧ ಎಂದು ಪರಿಗಣಿಸಲಾಗುತ್ತದೆ. ಯುಪಿ ನೆರೆಯ ರಾಜ್ಯದಲ್ಲಿ ಮದ್ಯದ ಬೆಲೆ ಕಡಿಮೆ ಇದರುವುರಿಂದ ಮಾರಾಟಗಾರರು ಹೆಚ್ಚು ಇತರೇ ರಾಜ್ಯಗಳಿಂದ ಮದ್ಯ ರವಾನೆ ಮಾಡಿಕೊಳ್ಳುತ್ತಿದ್ದರು. ಈ ಕ್ರಮಕ್ಕೆ ತಡೆ ನೀಡಲು ರಾಜ್ಯ ಸರ್ಕಾರ ಈ ಹೊಸ ನಿಯಮಗಳನ್ನು ರೂಪಿಸಿದೆ.

    ಈ ಕುರಿತು ಮಾಹಿತಿ ನೀಡಿರುವ ಅಬಕಾರಿ ಅಧಿಕಾರಿಯೊಬ್ಬರು 2017ರಲ್ಲೇ ಈ ಕುರಿತು ನಿಯಮ ರೂಪಿಸಲಾಗಿತ್ತು. ಒಬ್ಬ ವ್ಯಕ್ತಿಗೆ ಸೀಲ್ ಮಾಡಿದ ಒಂದು ಬಾಟಲ್ ಮದ್ಯವನ್ನು ಮಾತ್ರ ನೆರೆಯ ರಾಜ್ಯದಿಂದ ತೆಗೆದುಕೊಂಡು ಬರಲು ಅನುಮತಿ ನೀಡಲಾಗಿದೆ. ತೆರೆದ ಸಿಲ್ ಬಂದಿರುವ ಬಾಟಲ್‍ಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ ಎಂದು ಮಾಹಿತಿ ತಿಳಿಸಿದ್ದಾರೆ.

    ಮಾಧ್ಯಹ್ನದ ಬಳಿಕವೇ ಲಿಕ್ಕರ್ ಶಾಪ್ ಓಪನ್:
    ಮದ್ಯಪಾನ ಸೇವನೆ ಮಾಡುವವರ ಸಂಖ್ಯೆಯನ್ನು ಕಡಿಮೆ ಮಾಡುವ ದೃಷ್ಟಿಯಿಂದ ಉತ್ತರ ಪ್ರದೇಶ ಸರ್ಕಾರ ಮಧ್ಯಾಹ್ನದ ಬಳಿಕವೇ ಮದ್ಯದ ಅಂಗಡಿ ತೆರೆಯಲು ಅನುಮತಿ ನೀಡಿದ್ದು, ರಾತ್ರಿ 10 ಗಂಟೆ ವೇಳೆಗೆ ಬಂದ್ ಮಾಡಲು ಸೂಚಿಸಿದೆ.