Tag: ಶಿಫಾರಸ್ಸು

  • ಲಿಂಗಾಯತ, ವೀರಶೈವ ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ – ಕೇಂದ್ರಕ್ಕೆ ಶೀಘ್ರವೇ ಸಿದ್ದು ಸರ್ಕಾರದಿಂದ ಶಿಫಾರಸ್ಸು

    ಲಿಂಗಾಯತ, ವೀರಶೈವ ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ – ಕೇಂದ್ರಕ್ಕೆ ಶೀಘ್ರವೇ ಸಿದ್ದು ಸರ್ಕಾರದಿಂದ ಶಿಫಾರಸ್ಸು

    ಬೆಂಗಳೂರು: ರಾಜ್ಯದ ರಾಜಕೀಯ ಹಾಗೂ ಧಾರ್ಮಿಕ ವಲಯದಲ್ಲಿ ಕೋಲಾಹಲ ಸೃಷ್ಟಿಸಿದ್ದ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೊನೆಗೂ ಸಿದ್ದರಾಮುಯ್ಯ ನೇತೃತ್ವದ ರಾಜ್ಯಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

    ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆದಿದ್ದು, ಈ ವೇಳೆ ಸಮಿತಿಯ ಸದಸ್ಯರ ಅಭಿಪ್ರಾಯದಂತೆ ಲಿಂಗಾಯಿತ ಮತ್ತು ವೀರಶೈವರಾಗಿದ್ದು ಬಸವ ತತ್ವವವನ್ನು ಅನುಸರಿಸುತ್ತಿರುವ ಮಂದಿಗೆ ಪ್ರತ್ಯೇಕ ಧರ್ಮದ ಕುರಿತು ಕೇಂದ್ರ ಸರ್ಕಾರಕ್ಕೆ ಶೀಘ್ರವೇ ಶಿಫಾರಸ್ಸು ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.

    ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್, ಇಂದು ಐತಿಹಾಸಿಕ ನಿರ್ಣಯ ತೆಗೆದುಕೊಳ್ಳಲಾಗಿದೆ. ಸಮಿತಿ ನೀಡಿದ್ದ ವರದಿ ಬಗ್ಗೆ ಚರ್ಚೆ ಆಗಿದೆ. ಸ್ವತಂತ್ರ ಧರ್ಮಕ್ಕೆ ಮಾನ್ಯತೆ ನೀಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ನ್ಯಾ. ನಾಗಮೋಹನ ದಾಸ್ ಸಮಿತಿ ವರದಿಯನ್ವಯ ಪ್ರತ್ಯೇಕ ವೀರಶೈವ ಲಿಂಗಾಯಿತ ಸ್ವತಂತ್ರ ಧರ್ಮದ ಮಾನ್ಯತೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಕ್ಕಾಗಿ ರಾಜ್ಯದ ಮುಖ್ಯಮಂತ್ರಿ ಯವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಅಂದ್ರು.

    ಇದೀಗ ಸರ್ಕಾರ ಎಲೆಕ್ಷನ್ ಹೊತ್ತಲ್ಲಿ ಲಿಂಗಾಯತರು- ವೀರಶೈವರನ್ನು ಓಲೈಸಲು ಯತ್ನ ಮಾಡುತ್ತಿದ್ದೆಯಾ ಎಂಬ ಪ್ರಶ್ನೆ ಎದ್ದಿದೆ. ಶತಶತಮಾನಗಳಿಂದ ಹಿಂದೂ ಧರ್ಮದ ಭಾಗವಾಗಿದ್ದ ವೀರಶೈವ-ಲಿಂಗಾಯತರನ್ನು ಇದೀಗ ಸರ್ಕಾರ `ಅಲ್ಪಸಂಖ್ಯಾತರು’ ಎಂದು ಪರಿಗಣಿಸಲು ಮುಂದಾಗಿರುವುದು ಬಹುಸಂಖ್ಯಾತ ಹಿಂದೂ ಧರ್ಮೀಯರ ಆಕ್ರೋಶಕ್ಕೆ ತುತ್ತಾಗುತ್ತಾ ಎನ್ನುವ ಪ್ರಶ್ನೆ ಎದ್ದಿದೆ.

  • ವಿವಿಗಳಲ್ಲಿರೋ ಹಿಂದೂ, ಮುಸ್ಲಿಂ ಪದಗಳನ್ನು ಕೈಬಿಡಿ: ಕೇಂದ್ರಕ್ಕೆ ಯುಜಿಸಿ ಸಲಹೆ

    ವಿವಿಗಳಲ್ಲಿರೋ ಹಿಂದೂ, ಮುಸ್ಲಿಂ ಪದಗಳನ್ನು ಕೈಬಿಡಿ: ಕೇಂದ್ರಕ್ಕೆ ಯುಜಿಸಿ ಸಲಹೆ

    ನವದೆಹಲಿ: ಐತಿಹಾಸಿಕ ಹಿನ್ನಲೆಯನ್ನು ಹೊಂದಿರುವ ಬನಾರಸ್ ಹಿಂದೂ ವಿಶ್ವವಿದ್ಯಾಲಯ (ಬಿಎಚ್‍ಯು) ಹಾಗೂ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ (ಎಎಂಯು)ಗಳ ಹೆಸರಿನಲ್ಲಿರುವ ಹಿಂದೂ ಹಾಗೂ ಮುಸ್ಲಿಂ ಪದಗಳನ್ನು ಕೈಬಿಡುವಂತೆ ವಿಶ್ವ ವಿದ್ಯಾಲಯಗಳ ಧನ ಸಹಾಯ ಆಯೋಗದ (ಯುಜಿಸಿ) ಸಮಿತಿ ಸಲಹೆಯನ್ನು ನೀಡಿದೆ.

    “ಎಚ್” ಮತ್ತು “ಎಂ” ಪದಗಳು ಭಾರತೀಯ ಸಂವಿಧಾನದಲ್ಲಿ ಅಳವಡಿಸಲಾಗಿರುವ ಜ್ಯಾತ್ಯಾತೀತ ತತ್ವಕ್ಕೆ ಸರಿ ಹೊಂದುವುದಿಲ್ಲ ಎಂಬ ಕಾರಣಕ್ಕೆ ಯುಜಿಸಿ ಸಮಿತಿ ಶಿಫಾರಸ್ಸು ಮಾಡಿದೆ.

    ಕೇಂದ್ರ ಮಾನವ ಸಂಪನ್ಮೂಲ ಇಲಾಖೆಗೆ ಕೇಂದ್ರದ ಹತ್ತು ವಿಶ್ವವಿದ್ಯಾಲಗಳ ಕುರಿತು ಬಂದ ದೂರುಗಳನ್ನು ಆಧಾರಿಸಿ ವರದಿಯನ್ನು ನೀಡುವಂತೆ ಎಎಂಯು ಅಡಿಯಲ್ಲಿ ಯುಜಿಸಿ ಸಮಿತಿಯನ್ನು ನೇಮಕ ಮಾಡಲಾಗಿತ್ತು. ಆದರೆ ಬಿಎಸ್‍ಯು ವಿಶ್ವವಿದ್ಯಾಲಯ ಈ ಪಟ್ಟಿಯಲ್ಲಿ ಇರಲಿಲ್ಲ ಆದರೂ ಸಲಹೆಯನ್ನು ಸಮಿತಿ ತನ್ನ ವರದಿಯಲ್ಲಿ ನೀಡಿದೆ. ಅಲ್ಲದೆ ಈ ವಿಶ್ವವಿದ್ಯಾಲಯಗಳನ್ನು ಅಲಿಗಢ ಮತ್ತು ಬನಾರಸ್ ವಿಶ್ವವಿದ್ಯಾಲಯ ಎಂದು ಕರೆಯಬಹುದು ಎಂದು ಸೂಚಿಸಿದೆ.

    ಯುಜಿಸಿ ಸಮಿತಿಯ ಅಡಿಯಲ್ಲಿ ಎಎಂಯು ಹೊರತುಪಡಿಸಿ ತ್ರಿಪುರ, ಪಾಂಡೀಚೆರಿ, ಅಲಹಾಬಾದ್ ವಿಶ್ವವಿದ್ಯಾಲಯ, ಜಮ್ಮು, ರಾಜಸ್ಥಾನ್ ಮತ್ತು ಜಾರ್ಖಂಡ್ ಕೇಂದ್ರಿಯ ವಿಶ್ವವಿದ್ಯಾಲಯ, ಉತ್ತರಾಖಂಡದ ಹೇಮವಾತಿ ನಂದನ್ ಗಡ್ವಾಲ್ ವಿಶ್ವವಿದ್ಯಾಲಯ, ವರ್ಧಾದ ಮಹಾತ್ಮ ಗಾಂಧೀ ಅಂತರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯ, ಮಧ್ಯಪ್ರದೇಶದ ಹರಿಸಿಂಗ್ ಗೌರ್ ವಿಶ್ವವಿದ್ಯಾಲಯದ ಆಡಳಿತಾತ್ಮಕ, ಸಂಶೋಧನ, ಆರ್ಥಿಕ ಮತ್ತು ಹಣಕಾಸು ವಿಷಯಗಳ ಲೆಕ್ಕಪರಿಶೋಧನೆಯನ್ನು ಮಾಡಲಾಯಿತು.

    ಸಮಿತಿಯಿಂದ ವಿಶ್ವವಿದ್ಯಾಲಯಗಳ ಮೂಲಭೂತ ಅಗತ್ಯತೆಗಳು ಹಾಗೂ ಆರ್ಥಿಕತೆಯ ಕುರಿತು ವರದಿಯನ್ನು ಸಿದ್ಧಪಡಿಸಲಾಗಿದೆ. ವಿಶೇಷವಾಗಿ ಎಎಂಯು ವಿಶ್ವವಿದ್ಯಾಲದಲ್ಲಿ ಕೈಗೊಂಡಿರುವ ನೇಮಕಾತಿಗಳಲ್ಲಿ ಉಂಟಾಗಿರುವಂತಹ ಭ್ರಷ್ಟಚಾರದ ಕುರಿತು ತನ್ನ ವರದಿಯಲ್ಲಿ ಮಾಹಿತಿಯನ್ನು ನೀಡಿದೆ. ಇದುವರೆಗೂ ಎಎಂಯುನಲ್ಲಿ ನೇಮಕವಾದ ಎಲ್ಲಾ ಬೋಧಕರು ಸಹ ಅದೇ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದವರಾಗಿದ್ದಾರೆ. ಅಲ್ಲದೆ ಹುದ್ದೆಗಳು ಖಾಲಿ ಇಲ್ಲದಿದ್ದರೂ ಸಹ ಆಕ್ರಮವಾಗಿ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡಿರುವ ಕುರಿತ ದೂರಗಳ ಬಗ್ಗೆಯು ವರದಿಯನ್ನು ನೀಡಲು ಯುಜಿಸಿ ಸೂಚಿಸಿದೆ.