Tag: ಶಿಬಿರ

  • CRPF ಸಹ ಸೈನಿಕರ ಮೇಲೆ ಗುಂಡಿನ ದಾಳಿ- ನಾಲ್ವರು ಬಲಿ, ಮೂವರಿಗೆ ಗಂಭೀರ ಗಾಯ

    CRPF ಸಹ ಸೈನಿಕರ ಮೇಲೆ ಗುಂಡಿನ ದಾಳಿ- ನಾಲ್ವರು ಬಲಿ, ಮೂವರಿಗೆ ಗಂಭೀರ ಗಾಯ

    ಚಂಢೀಗಡ: ಸಹೋದ್ಯೋಗಿ ಗುಂಡಿನ ದಾಳಿಗೆ ನಾಲ್ವರು ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್​​ಪಿಎಫ್) ಸಿಬ್ಬಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಛತ್ತೀಸ್‍ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ.

    ರಾಜ್ಯ ರಾಜಧಾನಿ ರಾಯ್‍ಪುರದಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಸುಕ್ಮಾ ಜಿಲ್ಲೆಯ ಮರೈಗುಡೆಮ್‍ನಲ್ಲಿರುವ ಲಿಂಗಂಪಲ್ಲಿಯ 50ನೇ ಬೆಟಾಲಿಯನ್‍ನ ಶಿಬಿರದಲ್ಲಿ ಸಿಆರ್‍ಪಿಎಫ್ ಯೋಧರ ನಡುವೆ ಘರ್ಷಣೆ ನಡೆದಿದ್ದು, ಈ ಘಟನೆ ಮುಂಜಾನೆ 3.30ರ ಸುಮಾರಿಗೆ ನಡೆದಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಬಸ್ತರ್ ಶ್ರೇಣಿ) ಸುಂದರರಾಜ್ ಪಿ. ಹೇಳಿದ್ದಾರೆ. ಇದನ್ನೂ ಓದಿ: ಸ್ವಿಗ್ಗಿ ಊಟ ತಂದು ಕೊಡದಕ್ಕೆ ಪಿಎಂ, ಸಿಎಂಗೆ ಪತ್ರ ಬರೆದ ಸಿನಿಮಾ ಸೂಪರ್ ಸ್ಟಾರ್

    ಯೋಧನೊಬ್ಬ ತನ್ನ ಸಹ ಸೈನಿಕರ ಮೇಲೆ ಗುಂಡು ಹಾರಿಸಿದ್ದಾನೆ. ಈ ವೇಳೆ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಹೀಗಾಗಿ ಕೂಡಲೇ ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಸದ್ಯ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಕ್ಕಿ, ಕತ್ರಿನಾ ಮದುವೆ ಸಿದ್ಧತೆ ಶುರು

  • ಮನಬಂದಂತೆ ಆನೆಗೆ ಥಳಿಸಿದ ಮಾವುತರು – ವಿಡಿಯೋ ವೈರಲ್

    ಮನಬಂದಂತೆ ಆನೆಗೆ ಥಳಿಸಿದ ಮಾವುತರು – ವಿಡಿಯೋ ವೈರಲ್

    ಚೆನ್ನೈ: ದೇವಸ್ಥಾನದ ಆನೆಗೆ ಮನಬಂದಂತೆ ಇಬ್ಬರು ಮಾವುತರು ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಕಕ್ಕೆ ಕಾರಣವಾಗಿದೆ. ಈ ಘಟನೆ ತಮಿಳುನಾಡಿನ ಕೊಯಮತ್ತೂರು ಪ್ರದೇಶದ ಆನೆ ಶಿಬಿರದಲ್ಲಿ ನಡೆದಿದೆ.

    ಆನೆ ತಾವು ಅಂದುಕೊಂಡಂತೆ ವರ್ತಿಸುತ್ತಿಲ್ಲ ಎಂದು ಕೋಪಗೊಂಡ ಮಾವುತ ವಿನಿಲ್ ಕುಮಾರ್ ಹಾಗೂ ಆತನ ಸಹಾಯಕ ಶಿವಪ್ರಸಾದ್ ಆನೆಯ ಮೇಲೆ ಸಿಟ್ಟು ತೋರಿಸಿದ್ದಾರೆ. ಬೇಕಾ ಬಿಟ್ಟಿಯಾಗಿ ಆನೆಗೆ ಹೊಡೆದು ಸಿಟ್ಟು ತೋರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅನೇಕ ಮಾವುತರು ಕ್ರೌರ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ಇಬ್ಬರು ಮಾವುತರನ್ನು ಕೆಲಸದಿಂದ ತೆಗೆಯಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ಮರದ ಹಿಂಭಾಗದಲ್ಲಿ ಕಟ್ಟಿ ಹಾಕಲಾಗಿದ್ದ ಆನೆಗೆ ಇಬ್ಬರು ಮಾವುತರು ದೊಣ್ಣೆಯಿಂದ ಆನೆಯ ಮುಂಗಾಲಿಗೆ ಜೋರಾಗಿ ಬಡಿದಿದ್ದಾರೆ. ನೋವನ್ನು ತಾಳಲಾರದೆ ಆನೆ ಘೀಳಿಡುತ್ತಿರುವ ದೃಶ್ಯ ಮನ ಕಲಕುವಂತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋಗೆ ನೆಟ್ಟಿಗರು ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಇತ್ತೀಚೆಗೆ ತಮಿಳುನಾಡಿನ ರೆಸಾರ್ಟ್ ಮಾಲೀಕ ಬೆಂಕಿ ಹಚ್ಚಿ ಆನೆ ಮೇಲೆ ಎಸೆದಿದ್ದನು. ಆನೆ ನೋವು ತಾಳಲಾರದೇ ಸಾವನ್ನಪ್ಪಿತ್ತು. ಇದೀಗ ಈ ಘಟನೆ ನಡೆದಿದ್ದು, ಪ್ರಾಣಿಗಳಿಗೆ ನೀಡುತ್ತಿರುವ ಹಿಂಸೆ ಕುರಿತಾಗಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

  • ಮೈಸೂರು ದಸರಾಕ್ಕೆ ದುಬಾರೆಯಿಂದ ನಾಲ್ಕೇ ಆನೆಗಳು

    ಮೈಸೂರು ದಸರಾಕ್ಕೆ ದುಬಾರೆಯಿಂದ ನಾಲ್ಕೇ ಆನೆಗಳು

    ಮಡಿಕೇರಿ: ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಭಾಗವಹಿಸಲು ಕೊಡಗಿನ ನಾಲ್ಕು ಆನೆಗಳು ಆಯ್ಕೆಯಾಗಿವೆ. ಆನೆಗಳ ದೇಹದಾಡ್ರ್ಯ ಮತ್ತು ಆರೋಗ್ಯ ಪರಿಶೀಲನೆ ಮಾಡಿರುವ ವಜ್ಯಜೀವಿ ವೈದ್ಯರು ಮತ್ತು ಅರಣ್ಯ ಇಲಾಖೆ, ಉನ್ನತ ಅಧಿಕಾರಿಗಳು ತಿಂಗಳಾಂತ್ಯಕ್ಕೆ ಆನೆಗಳನ್ನು ಮೈಸೂರಿಗೆ ಕರೆದೊಯ್ಯಲು ಒಪ್ಪಿಗೆ ಸೂಚಿಸಿದ್ದಾರೆ.

    ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಮೆರಗು ಅಂದ್ರೆ ಅದು ಜಂಬೂ ಸವಾರಿ. ಆದರೆ ಈ ಬಾರಿ ವಿಶ್ವಕ್ಕೆ ಬಂದೊದಗಿರುವ ಕೊರೊನಾ ಮಹಾಮಾರಿ ಮೈಸೂರು ದಸರಾದ ಜಂಬೂ ಸವಾರಿ ಮೇಲೂ ಕರಿನೆರಳು ಬೀರಿದೆ. ಹೀಗಾಗಿ ಈ ಬಾರಿ ನಡೆಯುತ್ತಿರುವ ಸರಳ ದಸರಾಕ್ಕೆ ಕೊಡಗಿನ ಆನೆ ಶಿಬಿರದ ನಾಲ್ಕು ಆನೆಗಳು ಆಯ್ಕೆಯಾಗಿವೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ದುಬಾರೆ ಸಾಕಾನೆ ಶಿಬಿರದಿಂದ ಕಾವೇರಿ, ಗೋಪಿ, ವಿಜಯ ಮತ್ತು ವಿಕ್ರಮ ಆನೆಗಳು ಈ ಬಾರಿಯ ದಸರಾಕ್ಕೆ ಆಯ್ಕೆಯಾಗಿವೆ. ಗೋಪಿ ಮತ್ತು ಕಾವೇರಿ ಆನೆಗಳು ತಲಾ ಒಂಬತ್ತು ಬಾರಿ ಮೈಸೂರು ದಸರಾದಲ್ಲಿ ಭಾಗವಹಿಸಿವೆ. ವಿಕ್ರಮ ಕೂಡ ಆರೇಳು ಬಾರಿ ದಸರಾದಲ್ಲಿ ಜಂಬೂ ಸವಾರಿಯಲ್ಲಿ ಭಾಗವಹಿಸಿದೆ. ವಿಕ್ರಮ ಆನೆಯೂ ಹತ್ತಕ್ಕೂ ಹೆಚ್ಚು ಬಾರಿ ಜಂಬೂ ಸವಾರಿಯಲ್ಲಿ ಭಾಗವಹಿಸಿದೆ. ಹೀಗಾಗಿ ಈ ಆನೆಗಳು ದಸರಾದಲ್ಲಿ ಭಾಗವಹಿಸುವುದು ಸೂಕ್ತವೆಂದು ನಿರ್ಧರಿಸಿ ಈ ತಿಂಗಳ ಅಂತ್ಯದೊಳಗೆ ಆನೆಗಳನ್ನು ಮೈಸೂರಿಗೆ ಸಾಗಿಸಲಿದ್ದಾರೆ.

    ಪ್ರತೀ ವರ್ಷ ಕೊಡಗಿನ ದುಬಾರೆ ಆನೆ ಶಿಬಿರದಿಂದ ಏಳು ಆನೆಗಳು ದಸರಾಕ್ಕೆ ಭಾಗವಹಿಸುತ್ತಿದ್ದವು. ಜೊತೆಗೆ ಅಷ್ಟೂ ಆನೆಗಳ ಮಾವುತ, ಕವಾಡಿಗ ಮತ್ತು ಅವರ ಕುಟುಂಬಗಳು ದಸಾರಕ್ಕೆ ಹೋಗುತ್ತಿದ್ದವು. ತಿಂಗಳುಗಟ್ಟಲೆ ಆ ಕುಟುಂಬಗಳು ಮೈಸೂರು ಅರಮನೆ ಆವರಣದಲ್ಲಿದ್ದು ಮೈಸೂರು ದಸರಾದ ಜಂಬೂ ಸವಾರಿಯನ್ನು ಕಣ್ತುಂಬಿಕೊಳ್ಳುತ್ತಿದ್ದವು. ಈ ಬಾರಿ ಅದ್ಯಾವುದಕ್ಕೂ ಅವಕಾಶವೇ ಇಲ್ಲ. ಬದಲಾಗಿ ನಾಲ್ಕು ಆನೆಗಳ ಮಾವುತರು ಮತ್ತು ಕವಾಡಿಗರು ಮಾತ್ರವೇ ಭಾಗವಹಿಸಲಿದ್ದಾರೆ.

  • ಮದ್ಯವರ್ಜನ ಶಿಬಿರದಿಂದ ತಪ್ಪಿಸಿಕೊಳ್ಳಲು ಹೋಗಿ ಬಂಡೆಯ ಮಧ್ಯೆ ಸಿಲುಕಿದ ವ್ಯಕ್ತಿಯ ರಕ್ಷಣೆ

    ಮದ್ಯವರ್ಜನ ಶಿಬಿರದಿಂದ ತಪ್ಪಿಸಿಕೊಳ್ಳಲು ಹೋಗಿ ಬಂಡೆಯ ಮಧ್ಯೆ ಸಿಲುಕಿದ ವ್ಯಕ್ತಿಯ ರಕ್ಷಣೆ

    ಬಳ್ಳಾರಿ: ಶಿಬಿರಾರ್ಥಿಯೊಬ್ಬ ಮದ್ಯವರ್ಜನ ಶಿಬಿರದಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಬೃಹತ್ ಬಂಡೆಯ ಮಧ್ಯೆ ಸಿಕ್ಕಿ ನರಳಾಡಿದ ಘಟನೆ ಹಂಪಿಯಲ್ಲಿ ನಡೆದಿದೆ.

    ಹಂಪಿ ಕಡಲೇ ಕಾಳು ಗಣೇಶ ಹಿಂಭಾಗದಲ್ಲಿ ಇರುವ ಶಿವರಾಂ ಅವಧೂತರ ಮಠದಲ್ಲಿ ಕಳೆದ ನಾಲ್ಕು ದಿನಗಳಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ಮದ್ಯವರ್ಜನ ಶಿಬಿರ ನಡೆಯುತ್ತಿದೆ. ಈ ಶಿಬಿರದಲ್ಲಿ ಸುಮಾರು ಅರವತ್ತಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗಿಯಾಗಿದ್ದರು.

    ಇದರಲ್ಲಿ ಕೊಪ್ಪಳ ಜಿಲ್ಲೆಯ ಹುಲಿಗಿ ಮೂಲದ ದೇವೇಂದ್ರ ಶಿಬಿರದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾಗ ಮಠದ ಪಕ್ಕದಲ್ಲಿರುವ ಎರಡು ಬೃಹತ್ ಬಂಡೆಗಳ ಮಧ್ಯೆ ಸಿಕ್ಕಿ ಹಾಕಿಕೊಂಡು ಹೊರಗೆ ಬರಲಾಗದೆ ನರಳಾಡಿದ್ದಾನೆ.

    ನಂತರ ಸ್ಥಳೀಯರು ವ್ಯಕ್ತಿಯನ್ನು ಗಮನಿಸಿ ಹಂಪಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಅಗ್ನಿಶಾಮಕ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿದ್ದಾರೆ. ಸತತ 4 ಗಂಟೆ ಕಾರ್ಯಾಚರಣೆ ನಡೆಸಿದ ಹೋಮ್ ಗಾರ್ಡ್ ಸಿಬ್ಬಂದಿ ಮತ್ತು ಅಗ್ನಿಶಾಮಕ ಸಿಬ್ಬಂದಿ ದೇವೇಂದ್ರನನ್ನು ರಕ್ಷಿಸಿದ್ದಾರೆ.

    ಪ್ರಾಣಪಾಯದಿಂದ ಪಾರಾಗಿರುವ ದೇವೇಂದ್ರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

  • ಸಾಕಾನೆ ಪರಾರಿ – ದುಬಾರೆ ಆನೆ ಶಿಬಿರಕ್ಕೆ ನಿರ್ಬಂಧ

    ಸಾಕಾನೆ ಪರಾರಿ – ದುಬಾರೆ ಆನೆ ಶಿಬಿರಕ್ಕೆ ನಿರ್ಬಂಧ

    ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಯೊಂದಕ್ಕೆ ಮದವೇರಿ ಶಿಬಿರದಿಂದ ಪರಾರಿಯಾಗಿರುವ ಕಾರಣ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ.

    ದುಬಾರೆ ಆನೆ ಶಿಬಿರವನ್ನು ಮುಚ್ಚಿರುವ ಅರಣ್ಯ ಇಲಾಖೆ, ಹೈ ಅಲರ್ಟ್ ಘೋಷಿಸಿದ್ದು, ಅಲ್ಲಿದ್ದವರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೋಳ್ಳುವ 37 ವರ್ಷದ ಗೋಪಿ ಎಂಬ ಹಾನೆ ಮಾವುತರ ಕಣ್ಣು ತಪ್ಪಿಸಿ ಕಾಡಿಗೆ ಪರಾರಿಯಾಗಿದೆ.

    ಪರಾರಿಯಾಗಿರುವ ಗೋಪಿ ಕಾಡಾನೆಗಳ ಜೊತೆ ಕಾದಾಟ ನಡೆಸುವ ಸಾಧ್ಯತೆಯಿದೆ. ಹೀಗಾಗಿ ಇದರಿಂದ ಅಪಾಯ ಸಂಭವಿಸಬಹುದು ಎಂಬ ಹಿನ್ನೆಲೆಯಲ್ಲಿ ಮಾವುತರು ಆನೆಯ ಪತ್ತೆ ಕಾರ್ಯ ಆರಂಭಿಸಿದ್ದಾರೆ.

    ದುಬಾರೆ ಆನೆ ಶಿಬಿರಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ್ದು, ಅಲ್ಲಿದ್ದ 26 ಆನೆಗಳನ್ನು ಬೇರೆಡೆ ಶಿಫ್ಟ್ ಮಾಡಲಾಗಿದೆ. ಆನೆಯ ಮದವಿಳಿಯಲು 10 ದಿನಗಳ ಸಮಯ ಬೇಕಾಗಿದ್ದು, ಅಲ್ಲಿಯವರೆಗೂ ಎಚ್ಚರಿಕೆಯಿಂದರಲು ಸೂಚಿಸಲಾಗಿದೆ ಎಂದು ವನ್ಯಜೀವಿ ವಿಭಾಗದ ವೈದ್ಯಾಧಿಕಾರಿ ಡಾ.ಮುಜೀಬ್ ಹೇಳಿದ್ದಾರೆ.