Tag: ಶಿರೂರು ಗುಡ್ಡ ಕುಸಿತ

  • ಶಿರೂರು ಭೂಕುಸಿತ ದುರಂತ; ಮಲೆಯಾಳಂನಲ್ಲಿ ಸಿನಿಮಾ ಸಟ್ಟೇರಲು ಸಿದ್ಧತೆ

    ಶಿರೂರು ಭೂಕುಸಿತ ದುರಂತ; ಮಲೆಯಾಳಂನಲ್ಲಿ ಸಿನಿಮಾ ಸಟ್ಟೇರಲು ಸಿದ್ಧತೆ

    – ಕೇರಳದ ಮೃತ ಅರ್ಜುನ್‌ನಿಂದ ಹಿಡಿದು 11 ಜನರ ಕುರಿತು ಮೂಡಿ ಬರಲಿದೆ ಸಿನಿಮಾ
    – ಸಿನಿಮಾದ ಕಥೆ ಬರೆಯುತ್ತಿರುವ ಕೇರಳದ ಶಾಸಕ ಅಶ್ರಫ್‌

    ಕಾರವಾರ: ಶಿರೂರು ಭೂಕುಸಿತ (Shirur Landslide) ದುರಂತ ಬಗ್ಗೆ ಮಾಲೆಯಾಳಂನಲ್ಲಿ ಸಿನಿಮಾ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಕೇರಳದ ಶಾಸಕ ಅಶ್ರಫ್‌ (A.K.M.Ashraf) ಅವರು ಸಿನಿಮಾ ಕಥೆ ಬರೆಯುತ್ತಿದ್ದಾರೆ ಎನ್ನಲಾಗಿದೆ.

    ಕಳೆದ ವರ್ಷ ಜುಲೈನಲ್ಲಿ ಅಂಕೋಲದ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತವಾಗಿ 11 ಜನ ಮೃತಪಟ್ಟರು. ಈವರೆಗೂ ಜಗನ್ನಾಥ, ಲೋಕೇಶ್ ಶವಗಳು ದೊರೆತಿಲ್ಲ. ಕೇರಳದ ಚಾಲಕ ಅರ್ಜುನ್ ಮೃತದೇಹ ಹುಡುಕಲು ಮೂರು ತಿಂಗಳಕಾಲ ಅವಿರತ ಕಾರ್ಯಾಚರಣೆ ನಡೆದು ಕೊನೆಗೆ ಆತನ ಶವವನ್ನು ಮಾತ್ರ ಹೊರತೆಗೆಯಲಾಯಿತು. ಇದನ್ನೂ ಓದಿ: ಶಿರೂರು ಗುಡ್ದ ಕುಸಿತ ದುರಂತ: ನಾಪತ್ತೆಯಾಗಿದ್ದ ಲಾರಿ ಚಾಲಕ ಅರ್ಜುನ್ ಶವ, ಲಾರಿ ಪತ್ತೆ

    ಆತನು ಬದುಕಿ ಬರಲೆಂದು ಕೇರಳದ ಜನತೆ ಪ್ರಾರ್ಥನೆ ಮಾಡಿದ್ದರು. ಇದೀಗ ಶಿರೂರು ಘಟನೆ ನಡೆದು ಒಂದು ವರ್ಷವಾದ ಬೆನ್ನಲ್ಲೇ ಈ ದುರಂತ ಘಟನೆ ಕೇರಳದ ಮಲೆಯಾಳಂ ಭಾಷೆಯಲ್ಲಿ ಸಿನಿಮಾ ಸಟ್ಟೇರಲು ಸಿದ್ಧವಾಗಿದೆ.

    ಶಿರೂರು ದುರಂತ ಕಥೆಯನ್ನು ಬರೆಯುತ್ತಿರುವ ಕೇರಳದ ಶಾಸಕ ಅಶ್ರಫ್, ‘ಪಬ್ಲಿಕ್ ಟಿವಿ’ ಜೊತೆ ಸಿನಿಮಾ ನಿರ್ಮಾಣದ ಬಗ್ಗೆ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ತಂದೆ-ತಾಯಿ ಕಳೆದುಕೊಂಡಿದ್ದ ಯುವತಿಗೆ ಉದ್ಯೋಗ ಭಾಗ್ಯ

  • ಶಿರೂರು ಗುಡ್ಡ ಕುಸಿತದಲ್ಲಿ ಮಾಲೀಕನನ್ನ ಕಳೆದುಕೊಂಡು ಅನಾಥವಾಗಿದ್ದ ಶ್ವಾನ ಪೊಲೀಸ್‌ ಇಲಾಖೆ ಸೇರ್ಪಡೆ

    ಶಿರೂರು ಗುಡ್ಡ ಕುಸಿತದಲ್ಲಿ ಮಾಲೀಕನನ್ನ ಕಳೆದುಕೊಂಡು ಅನಾಥವಾಗಿದ್ದ ಶ್ವಾನ ಪೊಲೀಸ್‌ ಇಲಾಖೆ ಸೇರ್ಪಡೆ

    – ಮ್ಯಾರಥಾನ್‌ ಓಟದಲ್ಲಿ ಬೆಳ್ಳಿ ಪದಕ

    ಕಾರವಾರ: ಶಿರೂರು ಗುಡ್ಡ ಕುಸಿತದಲ್ಲಿ (Shirur landslide) ತನ್ನ ಮಾಲೀಕನನ್ನು ಕಳೆದುಕೊಂಡು ಅನಾಥವಾಗಿದ್ದ ಶ್ವಾನ ಇದೀಗ ಪೊಲೀಸ್ ಇಲಾಖೆ (Police Department) ಸೇರಿದೆ.

    ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಟಾಧಿಕಾರಿ ಎಂ. ನಾರಾಯಣ್ ಇದನ್ನು ದತ್ತು ಪಡೆದು ಪಳಗಿಸಿದ್ದು, ಇಂದು ಮಾದಕ ದ್ರವ್ಯ ಹಾಗೂ ಸೈಬರ್ ಅಪರಾಧ ಮುಕ್ತ ಕರ್ನಾಟಕ ಜಾಗೃತಿ ಮೂಡಿಸಲು ನಡೆದ 5 ಕಿಮೀ ಮ್ಯಾರಾಥಾನ್‌ (Marathon) ಓಟದಲ್ಲಿ ಈ ಶ್ವಾನ ಬೆಳ್ಳಿ ಪದಕ ಪಡೆದಿದೆ. ಇದನ್ನೂ ಓದಿ: ಮ್ಯಾರಥಾನ್‌ನಲ್ಲಿ ಕುಸಿದು ಬಿದ್ದ ವ್ಯಕ್ತಿ – ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಶಾಸಕ ಸತೀಶ್ ಸೈಲ್

    ಹೌದು.. ಶಿರೂರಿನ ಗುಡ್ಡ ಕುಸಿತ ಪ್ರಕರಣ ಇಡೀ ರಾಜ್ಯದಲ್ಲಿಯೇ ಸದ್ದು ಮಾಡಿತ್ತು. ಕಳೆದ 2024ರ ಜುಲೈ 16 ರಂದು ಧಾರಾಕಾರವಾಗಿ ಸುರಿದ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತವಾಗಿ 11 ಜನ ಮೃತಪಟ್ಟಿದ್ದರು. ಹೆದ್ದಾರಿ ಪಕ್ಕದಲ್ಲೇ ಲಕ್ಷ್ಮಣ್ ನಾಯ್ಕ ಎನ್ನುವವರು ಹೋಟೆಲ್ ನಡೆಸುತ್ತಿದ್ದು ಗುಡ್ಡ ಕುಸಿದು ಮಣ್ಣು ಹೋಟೆಲ್ ಮೇಲೆ ಬಿದ್ದ ಪರಿಣಾಮ ಆತ, ಆತನ ಪತ್ನಿ ಹಾಗೂ ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದರು. ಈ ಘಟನೆಯಲ್ಲಿ ಲಕ್ಷ್ಮಣ್ ನಾಯ್ಕ ಕುಟುಂಬದವರು ಪ್ರೀತಿಯಿಂದ ಸಾಕಿದ್ದ ಶ್ವಾನವೊಂದು ಅನಾಥವಾಗಿತ್ತು. ಕಾರ್ಯಾಚರಣೆ ವೇಳೆ ಪ್ರತಿದಿನ ಬಂದು ಮಾಲೀಕನ ಬರುವಿಕೆಗಾಗಿ ಶ್ವಾನ ಕಾಯುತ್ತಾ ಕುಳಿತಿರುವುದು ಸಾಕಷ್ಟು ಗಮನ ಸೆಳೆದಿತ್ತು.

    ಇದನ್ನು ಗಮನಿಸಿದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ. ನಾರಾಯಣ್, ಶ್ವಾನವನ್ನ ದತ್ತು ಪಡೆದು ಸಲುಹಿದರು. ಜಿಲ್ಲಾ ಪೊಲೀಸ್ ಶ್ವಾನದಳದಲ್ಲಿ ಇದೇ ಶ್ವಾನಕ್ಕೆ ತರಬೇತಿ ನೀಡಿದ್ದರು. ಸದ್ಯ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಈ ಶ್ವಾನ ಎಲ್ಲರ ಗಮನ ಸೆಳೆದಿದೆ. ಇಂದು ಪೊಲೀಸ್ ಇಲಾಖೆಯಿಂದ ನಡೆದ ಮಾದಕ ದ್ರವ್ಯ ಹಾಗೂ ಸೈಬರ್ ಅಪರಾಧ ಮುಕ್ತ ಕರ್ನಾಟಕ ಜಾಗೃತಿ ಮೂಡಿಸಲು ನಡೆದ ಮ್ಯಾರಾಥಾನ್‌ ಓಟಲ್ಲಿ ಈ ಶ್ವಾನ 5 ಕಿಲೋ ಮೀಟರ್ ಸಂಚರಿಸಿ ಬೆಳ್ಳಿ ಪದಕ ಪಡೆದಿದ್ದು ಕಾರವಾರದ ಶಾಸಕ ಸತೀಶ್ ಸೈಲ್ ಶ್ವಾನಕ್ಕೆ ಪದಕ ತೊಡಿಸಿದರು.

    ಇನ್ನು ಶ್ವಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ನಾರಾಯಣ್ ತನ್ನ ಮನೆಯಲ್ಲಿಯೇ ಇಟ್ಟುಕೊಂಡು ತರಬೇತಿಯನ್ನ ನೀಡಿದ್ದು ಬೇರೆ ಶ್ವಾನಗಳಂತೆ ಈ ಶ್ವಾನ ಸಹ ಸಾಕಷ್ಟು ಚುರುಕಿನಿಂದ ಕೆಲಸ ಮಾಡುತ್ತಿದೆ. ಅಲ್ಲದೇ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ನೆಚ್ಚಿನ ಶ್ವಾನವಾಗಿದ್ದು ಪ್ರತಿನಿತ್ಯ ಬೆಳಿಗ್ಗೆ ಕೆಲಸಕ್ಕೆ ಹೊಗಬೇಕಾದರೆ ಸಲ್ಯೂಟ್ ಮಾಡಿಯೇ ಕಳಿಸುತ್ತದೆ. ಮನೆಗೆ ವಾಪಾಸ್ ಬರುವ ವೇಳೆಯಲ್ಲಿ ಗೇಟ್ ಬಳಿಯೇ ಕಾಯುತ್ತಾ ಕುಳಿತಿರುತ್ತದೆ. ಈ ಶ್ವಾನ ತನ್ನ ಮನೆಯ ಸದಸ್ಯನಂತಾಗಿದೆ ಎನ್ನುತ್ತಾರೆ ಪೊಲೀಸ್ ವರಿಷ್ಟಾಧಿಕಾರಿ ಎಂ.ನಾರಾಯಣ್. ಇದನ್ನೂ ಓದಿ: ನಾನು ನಿಮ್ಮ ಹಾಗೆ ಆಗಬೇಕು ಎಂದ ವಿದ್ಯಾರ್ಥಿನಿಯನ್ನು ತಮ್ಮ ಕುರ್ಚಿಯಲ್ಲಿ ಕೂರಿಸಿದ ಉ.ಕನ್ನಡ ಜಿಲ್ಲಾಧಿಕಾರಿ

  • ಶಿರೂರು ಗುಡ್ಡ ಕುಸಿತ ದುರಂತದಲ್ಲಿ ತಂದೆ-ತಾಯಿ ಕಳೆದುಕೊಂಡಿದ್ದ ಯುವತಿಗೆ ಉದ್ಯೋಗ ಭಾಗ್ಯ

    ಶಿರೂರು ಗುಡ್ಡ ಕುಸಿತ ದುರಂತದಲ್ಲಿ ತಂದೆ-ತಾಯಿ ಕಳೆದುಕೊಂಡಿದ್ದ ಯುವತಿಗೆ ಉದ್ಯೋಗ ಭಾಗ್ಯ

    – ಯುವತಿಗೆ ನೇಮಕಾತಿ ಪತ್ರ ನೀಡಿದ ಹೆಚ್.ಡಿ.ಕುಮಾರಸ್ವಾಮಿ

    ಮಂಡ್ಯ: ಕಾರವಾರದ ಶಿರೂರು ಗುಡ್ಡ ಕುಸಿತದಲ್ಲಿ (Shiruru Landslide) ಹೆತ್ತವರನ್ನು ಕಳೆದುಕೊಂಡು ಅನಾಥಳಾಗಿದ್ದ ಯುವತಿಗೆ ಮಂಡ್ಯದ ಉದ್ಯೋಗ ಮೇಳದಲ್ಲಿ ಉದ್ಯೋಗ ಭಾಗ್ಯ ಲಭಿಸಿದೆ. ಯುವತಿಗೆ ನೇಮಕಾತಿ ಪತ್ರ ನೀಡಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅಭಿನಂದಿಸಿದ್ದಾರೆ.

    ಮಂಡ್ಯ ಟೂ ಇಂಡಿಯಾ (Mandya To India) ಘೋಷದೊಂದಿದೆ ಎರಡು ದಿನಗಳ ಬೃಹತ್ ಉದ್ಯೋಗ ಮೇಳ ಮಂಡ್ಯದಲ್ಲಿ ನಡೆಯಿತು. ಎರಡನೇ ದಿನವೂ ಉದ್ಯೋಗ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತು. ಇದನ್ನೂ ಓದಿ: 2028ರ ವರೆಗೆ ಈ ಸರ್ಕಾರ ನಡೆಯಲ್ಲ, ಮತ್ತೆ ನಾನೇ ಸಿಎಂ: ಹೆಚ್‌ಡಿಕೆ

    ಶಿರೂರು ಗುಡ್ಡ ಕುಸಿತ ದುರಂತದಲ್ಲಿ ತಂದೆ-ತಾಯಿ ಕಳೆದುಕೊಂಡ ಯುವತಿಯೂ ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿದ್ದರು. ಮೃತ ಹೋಟಲ್ ಮಾಲೀಕನ ಪುತ್ರಿ ಕೃತಿಗೆ ಬಿಹೆಚ್‌ಇಎಲ್‌ನಲ್ಲಿ ಉದ್ಯೋಗ ಲಭಿಸಿತು. ಆಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ನೇಮಕಾತಿ ಪತ್ರ ನೀಡಿದರು.

    ಉದ್ಯೋಗ ಮೇಳದಲ್ಲಿ ನವ್ಯ ಹಾಗೂ ನಂದಿತ ಎಂಬ ಅವಳಿ ಸಹೋದರಿಯರಿಗೂ ಉದ್ಯೋಗ ಸಿಕ್ಕಿತು. ಟಾಟಾ ಮೋಟಾರ್ಸ್ನಲ್ಲಿ ಸಹೋದರಿಯರು ಉದ್ಯೋಗಕ್ಕೆ ನೇಮಕಗೊಂಡರು. ಇದನ್ನೂ ಓದಿ: ʻಮಂಡ್ಯ To ಇಂಡಿಯಾʼ – ಮಂಡ್ಯದಲ್ಲಿ ಇಂದಿನಿಂದ 2 ದಿನ ಬೃಹತ್ ಉದ್ಯೋಗ ಮೇಳ

    ಸಾವಿರಾರು ಮಂದಿ ಯುವಕ-ಯುವತಿಯರು ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿದ್ದರು. ಉದ್ಯೋಗಕ್ಕೆ ಆಯ್ಕೆ ಆದವರಿಗೆ ಕುಮಾರಸ್ವಾಮಿ ಅವರು ನೇಮಕಾತಿ ಪತ್ರ ನೀಡಿ ಅಭಿನಂದಿಸಿದರು.

  • ಸಂಸದ ಕಾಗೇರಿ ಪ್ರಯತ್ನ – ಪ್ರಧಾನಿ ಪರಿಹಾರ ನಿಧಿಯಿಂದ ಶಿರೂರು ಸಂತ್ರಸ್ತರಿಗೆ ವಿಶೇಷ ಅನುದಾನಕ್ಕೆ ಅನುಮತಿ

    ಸಂಸದ ಕಾಗೇರಿ ಪ್ರಯತ್ನ – ಪ್ರಧಾನಿ ಪರಿಹಾರ ನಿಧಿಯಿಂದ ಶಿರೂರು ಸಂತ್ರಸ್ತರಿಗೆ ವಿಶೇಷ ಅನುದಾನಕ್ಕೆ ಅನುಮತಿ

    ಕಾರವಾರ: ಶಿರೂರು ಗುಡ್ಡ ಕುಸಿತ (Shirur Landslide) ಸಂತ್ರಸ್ತರಿಗೆ ಪ್ರಧಾನಿ ಮಂತ್ರಿಗಳ ವಿಪತ್ತು ನಿಧಿಯಿಂದ ಹೆಚ್ಚಿನ ಪರಿಹಾರ ಬಿಡುಗಡೆ ಮಾಡಲು ಅನುಮೋದನೆ ಸಿಕ್ಕಿದೆ.

    ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಜುಲೈ 16 ರಂದು ಭೂ ಕುಸಿತವಾಗಿ 11 ಜನ ಸಾವು ಕಂಡಿದ್ದರು. ಇದರ ಬೆನ್ನಲ್ಲೇ 8 ಜನರ ಶವ ಶೋಧ ಮಾಡಲಾಗಿತ್ತು. ಇನ್ನೂ ಮೂರು ಜನರ ಶವ ಶೋಧಕಾರ್ಯ ನಡೆಯಬೇಕಿದೆ. ಇದನ್ನೂ ಓದಿ: ಗುಜರಾತ್‌ನಲ್ಲಿದೆ `ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ’ – ಒಬ್ಬಬ್ಬರ ಬಳಿ ಇರೋ ಆಸ್ತಿ ಎಷ್ಟು?

    ನ್ನು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಸಂಸದ ಕಾಗೇರಿಯವರು ವಿಶೇಷ ಪ್ರಕರಣದಡಿ ಕೇಂದ್ರಸರ್ಕಾರದ ಪರಿಹಾರ ನಿಧಿಯಡಿ ಹಣ ಬಿಡುಗಡೆ ಮಾಡಬೇಕೆಂದು ಜುಲೈ 31 ರಂದು ಪ್ರಧಾನಿಯವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಪ್ರಧಾನಿಯವರು ಶಿರೂರು ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಪ್ರಧಾನಿ ಮಂತ್ರಿಗಳ ವಿಪತ್ತು ನಿಧಿಯಿಂದ ಹೆಚ್ಚಿನ ಪರಿಹಾರ ಬಿಡುಗಡೆ ಮಾಡಲು ಅನುಮೋದನೆ ನೀಡಿದ್ದಾರೆ.

    ಈ ಹಿಂದೆ ಕೇಂದ್ರ ಸರ್ಕಾರದಿಂದ NDRF ರಿಲೀಫ್ ಪಂಡ್ ನಿಂದ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಲಾಗಿತ್ತು. ಇದೀಗ ವಿಶೇಷ ಪ್ರಕರಣ ಎಂದು ಪರಿಗಣಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ಪರಿಹಾರ ನೀಡುತಿದ್ದು ಜಿಲ್ಲೆಯಲ್ಲಿ ಆದ ಭೂ ಕುಸಿತ/ಪ್ರಕೃತಿ ವಿಕೋಪ ಅವಘಡದಲ್ಲಿ ಇದೇ ಮೊದಲ ಬಾರಿಗೆ ವಿಶೇಷ ಅನುದಾನ ಬಿಡುಗಡೆಯಾಗುತ್ತಿದೆ. ಇದನ್ನೂ ಓದಿ: ಡೆಮಾಕ್ರಟಿಕ್ ಪಕ್ಷದ ಸಭೆಯಲ್ಲಿ ವೇದಮಂತ್ರಗಳ ಸದ್ದು – ಅಮೆರಿಕದಲ್ಲಿ ಬೆಂಗಳೂರು ಅರ್ಚಕರಿಂದ ವಿಶೇಷ ಪ್ರಾರ್ಥನೆ!

    <iframe width=”560″ height=”315″ src=”https://www.youtube.com/embed/f8A-vIFsZKA?si=n4J27g54NGGa0OcW” title=”YouTube video player” frameborder=”0″ allow=”accelerometer; autoplay; clipboard-write; encrypted-media; gyroscope; picture-in-picture; web-share” referrerpolicy=”strict-origin-when-cross-origin” allowfullscreen></iframe>

  • ದಕ್ಷಿಣ ಭಾರತ ಕಾಡಿದ ಆ ಮೂರು ದುರಂತಗಳು – ಬಲಿಯಾದ ಜೀವಗಳೆಷ್ಟು? ದುರಂತ ಆಗಿದ್ದು ಏಕೆ?

    ದಕ್ಷಿಣ ಭಾರತ ಕಾಡಿದ ಆ ಮೂರು ದುರಂತಗಳು – ಬಲಿಯಾದ ಜೀವಗಳೆಷ್ಟು? ದುರಂತ ಆಗಿದ್ದು ಏಕೆ?

    ದೇವರನಾಡು ಕೇರಳದ (Kerala) ಮೇಲೆ ನಿಸರ್ಗಮಾತೆ ಮುನಿಸಿಕೊಂಡಿದ್ದಾಳೆ. ವಯನಾಡಿನಲ್ಲಿ (Wayanad) ಮುಂಡಕ್ಕೈ, ಚುರಲ್ಮಲದಲ್ಲಿ ಸಂಭವಿಸಿದ ದುರಂತದಿಂದ ಆಸ್ತಿಪಾಸ್ತಿ ಹಾನಿ, ಪ್ರಾಣಹಾನಿ ವರದಿಯಾಗುತ್ತಲೇ ಇದೆ. ನಿಸರ್ಗದೇವಿಯ ಕೋಪಕ್ಕೀಡಾಗಿರುವ ಜನ ತಮ್ಮನ್ನು ತಾವು ಸುರಕ್ಷಿತ ನೆಲೆಗಳಿಗೆ ಪಾರು ಮಾಡಿಕೊಳ್ಳಲು ಹೋರಾಡುತ್ತಿರುವ ದೃಶ್ಯಗಳಂತು ಎದೆ ಝಲ್‌ ಎನಿಸುತ್ತಿವೆ. ಕೇಂದ್ರ ಹಾಗೂ ರಾಜ್ಯಗಳ ನೈಸರ್ಗಿಕ ವಿಕೋಪ ನಿರ್ವಹಣಾ ಪಡೆಗಳು, ಸೇನೆ, ನೌಕಾಪಡೆ ಮತ್ತು ವಾಯುಪಡೆ ಯೋಧರು ಜೀವ ಉಳಿಸಿಕೊಳ್ಳಲು ಹಾತೊರೆಯುತ್ತಿದ್ದವರನ್ನ ಹುಡುಕಿ ಮೇಲಕ್ಕೆತ್ತಿದ್ದಾರೆ. ಮಣ್ಣಿನಡಿ ಜೀವ ಬಿಟ್ಟವರನ್ನ ಭೂಮಿ ಬಗೆದು ಹೊರಕ್ಕೆ ತೆಗೆಯುತ್ತಿದ್ದಾರೆ. ಇನ್ನೂ ಕಣ್ಣಿಗೆ ಕಾಣದ ಅದೆಷ್ಟೋ ಶವಗಳು ಮಣ್ಣಿನಲ್ಲಿ ಊತು ಹೋಗಿವೆ. ಸತತ 9ನೇ ದಿನವೂ ಸೇನಾ (Army) ಕಾರ್ಯಚರಣೆ ಮುಂದುವರಿದಿದ್ದು, ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಸಿವೆ.

    Wayanad landslides

    ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ತೀರ ಅಸಹಜವಾದುದ್ದೇನಲ್ಲ. ನೀಲಗಿರಿ ಬೆಟ್ಟಗಳಲ್ಲಿಯೂ (Nilgiri Hills) ನೂರಾರು ವರ್ಷಗಳಿಂದ ಭೂಕುಸಿತವಾದ ದಾಖಲೆಗಳಿವೆ. 2009ರ ನವೆಂಬರ್‌ನಲ್ಲಿ ಕೇವಲ 5 ದಿನಗಳಲ್ಲಿ 1,150 ಭೂಕುಸಿತ ಸಂಭವಿಸಿತ್ತು. ಇದನ್ನು ಅಧ್ಯಯನ ಮಾಡಿರುವ ತಜ್ಞರು ಮೊದಲು ಕೈತೋರಿಸಿದ್ದು ವ್ಯಾಪಕವಾಗಿ ತಲೆ ಎತ್ತಿದ್ದ ಟೀ ತೋಟಗಳತ್ತ. ಅದಕ್ಕಾಗಿ ಮಾಡಿರುವ ಅರಣ್ಯ ಆಕ್ರಮಣದತ್ತ. ನೀಲಗಿರಿ ಕೂಡ ಭೂಕಂಪನ ವಲಯದಲ್ಲೇ ಇದ್ದರೂ ಅದರಿಂದ ಆಗಿರುವ ನಷ್ಟಕ್ಕಿಂತ ಭೂಕುಸಿತ ತಂದಿರುವ ನಷ್ಟವೇ ಹೆಚ್ಚು ಎಂಬುದು ತಜ್ಞರ ಅಭಿಪ್ರಾಯ. ಪಶ್ಚಿಮ ಘಟ್ಟಗಳ ಪರ್ವತ ಶ್ರೇಣಿ ಅತ್ಯಂತ ಸೂಕ್ಷ್ಮ ಪರ್ವತ ಸಾಲುಗಳಲ್ಲಿ ಒಂದು. ಇದು ಇಡೀ ದಖ್ಖನ್‌ ಪ್ರಸ್ಥಭೂಮಿಯ ಜೀವಸೆಲೆ ಇಡೀ ಭರತ ಖಂಡದ ಹವಾಮಾನ ನಿರ್ಧರಿಸುವಲ್ಲಿ ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತವೆ. ಪೂರ್ವ ಹಿಮಾಲಯವನ್ನು ಬಿಟ್ಟರೆ ಪಶ್ಚಿಮ ಘಟ್ಟಗಳು ಜೀವ ವೈವಿಧ್ಯತೆಯ 2ನೇ ಭಂಡಾರವಾಗಿದೆ. ಜಗತ್ತಿನ 8 ಜೀವ ವೈವಿಧ್ಯತೆಯ ಸೂಕ್ಷ್ಮ ಪರಿಸರ ತಾಣಗಳಲ್ಲಿ ಪಶ್ಚಿಮ ಘಟ್ಟವನ್ನು ಒಂದು ಪ್ರಮುಖ ತಾಣವೆಂದು ಪರಿಗಣಿಸಲಾಗಿದೆ.

    ಇಂತಹ ಹೊತ್ತಿನಲ್ಲಿ ಕಳೆದ ಕೆಲ ವರ್ಷಗಳಲ್ಲಿ ದಕ್ಷಿಣ ಭಾರತವನ್ನ ಕಾಡಿದ ಭೂಕುಸಿತಗಳು ನಮ್ಮ ಕಣ್ಣಿಗೆ ಕಟ್ಟಿದಂತಿವೆ. ಕೇರಳದ ವಯನಾಡಿನ ಕಳೆದ ಜುಲೈ 30 ರಂದು ಸಂಭವಿಸಿದ ಭೂಕುಸಿತ, ಅಂಕೋಲಾ ತಾಲೂಕಿನ ಶಿರೂರು ಗ್ರಾಮದಲ್ಲಿ ಉಂಟಾದ ಗುಡ್ಡ ಕುಸಿತ ದುರಂತ ಹಾಗೂ 2018ರಲ್ಲಿ ಸಂಭವಿಸಿದ ಕೊಡಕು ಭೂಕುಸಿತ ಇಡೀ ದಕ್ಷಿಣ ಭಾರತದ ಜನರ ಕಣ್ಣಿಗೆ ಕಟ್ಟಿದಂತಿವೆ. ಅವುಗಳ ಬಗ್ಗೆ ತಿಳಿಯಲು ಒಮ್ಮೆ ಕಣ್ಣು ಹಾಯಿಸೋಣ…

    ಕೊಡಗಿಗೆ ʻಆಗಸ್ಟ್‌ ಆತಂಕʼ

    2018ರ ಆಗಸ್ಟ್‌ 13 ರಿಂದ 17ರ ತನಕ ಕೊಡಗು (Kodagu) ಅಕ್ಷರಶಃ ತತ್ತರಿಸಿ ಹೋಗಿತ್ತು. ಮಡಿಕೇರಿ ಮತ್ತು ಸೋಮವಾರಪೇಟೆ ತಾಲೂಕಿನ ಅನೇಕ ಕಡೆಗಳಲ್ಲಿ ಮಹಾಮಳೆ ಸುರಿದ ಬೆನ್ನಲ್ಲೇ ಬೆಟ್ಟಗಳು ಕುಸಿದು ದೊಡ್ಡ ಪ್ರಮಾಣದಲ್ಲಿ ಹಾನಿ ಸಂಭವಿಸಿತ್ತು. ಸಾವಿರಕ್ಕೂ ಅಧಿಕ ಮಂದಿ ಮನೆಗಳನ್ನು ಕಳೆದುಕೊಂಡು ಬೀದಿಗೆ ಬಂದರು. ಹಲವರು ಜೀವ ಕಳೆದುಕೊಂಡರು. ಬೆಟ್ಟ ಕುಸಿತದಿಂದ ತೋಟಗಳೂ ನಾಶವಾಗಿ ಜನರ ಬದುಕನ್ನೇ ಮೂರಾಬಟ್ಟೆ ಮಾಡಿಬಿಟ್ಟಿತು. ಅಂದಿನ ದುರಂತದಲ್ಲಿ 20 ಜನ ಸಾವನ್ನಪ್ಪಿದರು, 4,056 ಮನೆಗಳಿಗೆ ಹಾನಿಯಾಯಿತು ಮತ್ತು ಕೊಡಗಿನಲ್ಲಿ 18,000 ಜನರನ್ನು ಸ್ಥಳಾಂತರಿಸಲಾಗಿತ್ತು. ಇದು ಜಿಲ್ಲೆಯು ಅನುಭವಿಸಿದ ಮೊದಲ ಬೃಹತ್ ದುರಂತ ಮತ್ತು ಕರ್ನಾಟಕದಲ್ಲಿ ಮೊದಲ ಮಹತ್ವದ ಭೂಕುಸಿತ ಸಂಬಂಧಿತ ವಿಪತ್ತು ಆಗಿತ್ತು. ಭೂಕುಸಿತದ ಆರ್ಭಟಕ್ಕೆ ಮನೆಗಳು ಆಟಿಕೆಗಳಂತೆ ತೇಲಿ ಹೋಗಿದ್ದವು. ದುಃಸ್ವಪ್ನದಂತೆ ಕಳೆದು ಹೋದ ಆ ದುರ್ಘಟನೆಗೆ ಕಾರಣವಾದ ವೈಜ್ಞಾನಿಕ ಅಂಶಗಳ ಬಗ್ಗೆ ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲವಾದರೂ, ಹಾನಿಗೀಡಾದ ಜಾಗವನ್ನು ಸರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಕೃತಿ ತನ್ನ ಕೆಲಸವನ್ನು ಸದ್ದಿಲ್ಲದೆ ನಡೆಸುತ್ತಿದೆ.

    ಇಂತಹ ಹೊತ್ತಿನಲ್ಲಿ ಕೊಡಗಿನಲ್ಲಿ ಮತ್ತೊಂದು ಆತಂಕ ಎದುರಾಗಿದೆ. ಈ ಹಿಂದೆ ಅಪಾಯ ಸಂಭವಿಸಿದ ಪ್ರದೇಶಗಳ ಆಧಾರದಲ್ಲಿ 104 ಸಂಭವನೀಯ ಭೂಕುಸಿತ-ಪ್ರವಾಹ ಪ್ರದೇಶಗಳನ್ನು ‘ಮ್ಯಾಪಿಂಗ್’ ಮಾಡಲಾಗಿದ್ದು, ಅಪಾಯದ ಸ್ಥಳದಲ್ಲಿರುವ 2,995 ಕುಟುಂಬಗಳು ಸ್ಥಳಾಂತರಕ್ಕೆಂದು ಗುರುತು ಮಾಡಲಾಗಿದೆ. ಮಳೆಗಾಲದಲ್ಲಿಯೂ ಗ್ರಾಮೀಣ ಪ್ರದೇಶಗಳ ಜನತೆ ಭೂಕುಸಿತ, ಪ್ರವಾಹದ ಭಯದಲ್ಲಿ ದಿನದೂಡಬೇಕಾದ ಪರಿಸ್ಥಿತಿ ಬಂದಿದ್ದು, ಪ್ರಕೃತಿ ಮುನಿಯದಿರಲಿ ಎಂಬ ಪ್ರಾರ್ಥನೆ ಮೊಳಗುತ್ತಿದೆ.

    ಅಭಿವೃದ್ಧಿಯೇ ಕೊಡಗನ್ನು ಕಾಡುತ್ತಿದೆಯೇ?

    ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ಕಷ್ಟ-ನಷ್ಟ ಸಾವು-ನೋವುಗಳನ್ನು ಅಧಿಕ ಮಳೆಯಲ್ಲಿ ಅನುಭವಿಸಿದ ಪ್ರದೇಶ ಕೊಡಗು ಜಿಲ್ಲೆ. ಪರಿಸರ ಪ್ರಿಯರು ನಿರಂತರವಾಗಿ ಕೊಡಗಿನಲ್ಲಿ ಜಾರಿಯಾಗಿರುವ, ಜಾರಿಯಾಗುತ್ತಿರುವ ಹಲವಾರು ಯೋಜನೆಗಳ ವಿರುದ್ಧ ಧ್ವನಿಯೆತ್ತಿ ಪ್ರತಿಭಟಿಸುವ ಪ್ರಯತ್ನಗಳು ನಡೆಯುತ್ತಲೇ ಇವೆ. ತೀರಾ ಇತ್ತೀಚೆಗೆ ಕೊಡಗಿನ ಮೂಲಕ ಹಾದು ಹೋಗಲಿರುವ ಎರಡು ರೈಲ್ವೇ ಮಾರ್ಗ ನಿರ್ಮಾಣ ಯೋಜನೆಗಳಿಗೆ ಸಂಘಟಿತವಾಗಿ ವಿರೋಧ ವ್ಯಕ್ತವಾಗಿತ್ತು. ಒಂದು ರೈಲ್ವೇ ಮಾರ್ಗ ಕೇರಳದ ತಲಶ್ಶೇರಿಯಿಂದ ದಕ್ಷಿಣ ಕೊಡಗಿನ ಮೂಲಕ ಮೈಸೂರಿಗೆ ರೈಲ್ವೇ ಸಂಪರ್ಕ ಕಲ್ಪಿಸುವ ಯೋಜನೆ. ಮತ್ತೊಂದು ಹುಣಸೂರಿನಿಂದ ಪಿರಿಯಾಪಟ್ಟಣ ಮಾರ್ಗವಾಗಿ ಕುಶಾಲನಗರ ಮೂಲಕ ಮಂಗಳೂರು ತಲುಪುವ ಯೋಜನೆ. ಈ ಎರಡೂ ಯೋಜನೆಗಳಿಗೆ ಪಶ್ಚಿಮ ಘಟ್ಟಗಳ ಹಲವಾರು ಗುಡ್ಡಗಳನ್ನು ಕಡಿದೇ ರೈಲು ಮಾರ್ಗ ನಿರ್ಮಾಣ ಮಾಡಬೇಕಾಗುತ್ತದೆ. ಈ ಯೋಜನೆಗಳಿಗೆ ಎರಡು ಲಕ್ಷ ಮರಗಳು ಬಲಿಯಾಗುತ್ತವೆಂಬ ಆತಂಕವನ್ನು ಪರಿಸರ ಕಾರ್ಯಕರ್ತರು ವ್ಯಕ್ತಪಡಿಸಿದ್ದರು. ಈ ಅರಣ್ಯ ನಾಶದಿಂದ ಆನೆ, ಕರಡಿಗಳಿಗೆ ಅಡಚಣೆಯುಂಟಾಗಿ ವನ್ಯಜೀವಿ ಮಾನವ ಸಂಘರ್ಷ ಮತ್ತಷ್ಟು ಉಲ್ಬಣಿಸಲಿದೆ ಎಂಬ ಆತಂಕನ್ನು ತಜ್ಞರು ವ್ಯಕ್ತಪಡಿಸಿದ್ದರು. ಈ ಸಂಘರ್ಷ ಕೊಡಗಿನಲ್ಲಿ ಅನೇಕ ಜನರ ಜೀವ ಬಲಿ ಪಡೆದಿದೆ.

    ಸ್ಥಳೀಯ ಮೂಲಗಳ ಪ್ರಕಾರ, ಕೊಡಗು ಜಿಲ್ಲೆಯಲ್ಲಿ ಅಂದಾಜು 4 ಸಾವಿರಕ್ಕೂ ಅಧಿಕ ಹೋಂಸ್ಟೇಗಳಿವೆ. ಅಧಿಕೃತ ಹೋಮ್‌ಸ್ಟೇಗಳಿಗಿಂತ ಅನಧಿಕೃತ ಹೋಮ್‌ಸ್ಟೇಗಳೇ ಹತ್ತಾರು ಪಟ್ಟು ಹೆಚ್ಚಾಗಿವೆ. ಇದಲ್ಲದೇ ಅನೇಕ ಐಷಾರಾಮಿ ರೆಸಾರ್ಟ್‌ಗಳು ಖಾಸಗಿ ವಿಲ್ಲಾಗಳು ಕಾರ್ಯಾಚರಣೆ ನಡೆಸುತ್ತಿವೆ. ರಜಾ ದಿನಗಳಲ್ಲಿ ಪ್ರವಾಸಿಗರ ಮಹಾ ಪ್ರವಾಹದ ಕಾಲ್ತುಳಿತಕ್ಕೆ ಕೊಡಗಿನ ಪರಿಸರ ತತ್ತರಿಸಿ ಹೋಗುತ್ತಿದೆ. ಪ್ರವಾಸಿಗರ ಆಕರ್ಷಣೆಗೆ, ಅನುಕೂಲಕ್ಕೆ ಓಡಾಟ ಹಾಗೂ ಮೋಜು-ಮಸ್ತಿಗೆ ಕೊಡಗಿನ ಪರಿಸರವನ್ನ ಕೊಚ್ಚೆಗುಂಡಿ ಮಾಡಿ ಹಾಳುಗೆಡವಲಾಗುತ್ತಿದೆ. ಸುಮಾರು ಎಂಟು ವರ್ಷಗಳ ಹಿಂದೆ ಕೇರಳ ರಾಜ್ಯದ ಕೋಝಿಕ್ಕೋಡ್‌ಗೆ ಮೈಸೂರು, ಕೊಡಗು ಮೂಲಕ ಎಳೆಯಲಾದ ಹೈಟೆಶ್ಶನ್‌ ವಿದ್ಯುತ್ ಮಾರ್ಗಕ್ಕೆ ಅಂದಾಜು 56,000 ಮರಗಳು ಬಲಿಯಾಗಿವೆ.

    ಕೊಡಗಿನ ಮೂಲಕ 4 ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿರುವುದರಿಂದ ಕೊಡಗಿನ ಅರಣ್ಯ ಪ್ರದೇಶದ ಮೇಲೆ ವ್ಯಾಪಕ ದುಷ್ಪರಿಣಾಮ ಉಂಟಾಗಿದೆ. ಅಭಯಾರಣ್ಯಗಳಿಂದ ಹೊರದೂಡಿಸಿಕೊಂಡ ವಸತಿ ಹೀನರಿಗೆ ಕೊಡಗಿನ ಗುಡ್ಡಗಳಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ. ಕೃಷಿ ಭೂಮಿಯ ಹಾಗೂ ಎಸ್ಟೇಟ್ ಗಳ ಪಕ್ಕದಲ್ಲಿ ವ್ಯಾಪಕ ಒತ್ತುವರಿ ನಡೆಯುತ್ತಿದೆ. ಇಂಥ ಅಪಾಯಕಾರಿ ಯೋಜನೆಗಳಿಂದಾಗಿ ಕೊಡಗಿನ ಅರಣ್ಯ ಪ್ರದೇಶ 102 ಚದರ ಕಿಮೀ ಕಡಿಮೆಯಾಗಿದೆ ಎಂದು ಭಾರತೀಯ ಅರಣ್ಯ ಸರ್ವೇಕ್ಷಣ ಇಲಾಖೆಯ ವಾರ್ಷಿಕ ವರದಿ ಹೇಳಿದೆ.

    ಮೇಲಿನ ಎಲ್ಲ ಕಾರಣಗಳಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಕಾವೇರಿ ನದಿಯು ಬೇಸಿಗೆಯ ಮೂರು ತಿಂಗಳು ಬತ್ತಿ ಹೋಗುತ್ತಿದೆ. ನದಿಯ ಅಂಚಿನಲ್ಲಿ ರೆಸಾರ್ಟ್ ಹೋಂಸ್ಟೇ ನಿರ್ಮಿಸಲು ದೊಡ್ಡ ಪ್ರಮಾಣದಲ್ಲಿ ಮರಗಳನ್ನು ಕಡಿದು ಗುಡ್ಡಗಳ ಇಳಿಜಾರಿನ ಪ್ರದೇಶಗಳನ್ನು ಕಟ್ಟಡ ನಿರ್ಮಾಣಕ್ಕೆ ಸಿದ್ಧಪಡಿಸಲು ಅಸ್ಥಿರಗೊಳಿಸಲಾಗಿದೆ. ಮಣ್ಣಿಗೆ ಸ್ಥಿರತೆಯನ್ನು ನೀಡಿ ಅಂತರ್ಜಲ ವರ್ಧನೆ ಮಾಡುತ್ತಿದ್ದ ಕಾಡುಜಾತಿಯ ಮರಗಳನ್ನು ತೆಗೆದು ಬರೀ ಸಿಲ್ವರ್ ಓಕ್‌ನಂಥ ಮರಗಳನ್ನು ನೆಡಲಾಗುತ್ತಿದೆ. ಈ ರೀತಿಯ ಚಟುವಟಿಕೆಗಳಿಂದಲೂ ವ್ಯಾಪಕ ಅರಣ್ಯನಾಶವಾಗಿ ಗುಡ್ಡ ಗುಡ್ಡಗಳೇ ಕುಸಿದು ಕಣ್ಮರೆಯಾಗುವ ಪರಿಸ್ಥಿತಿಯನ್ನು ವಿನಾಶಕಾರಿ ಅಭಿವೃದ್ಧಿ ಯೋಜನೆಗಳು ಕೊಡಗಿನಲ್ಲಿ ಸೃಷ್ಟಿಸಿವೆ ಎಂದು ಪರಿಸರ ತಜ್ಞರು ಹೇಳುತ್ತಾರೆ.

    ಕೇರಳವನ್ನು ನಡುಗಿಸಿದ ಭೂಕುಸಿತಗಳು

    ಕೇರಳಕ್ಕೆ ಪ್ರವಾಹ ಅಪ್ಪಳಿಸಿರುವುದು ಇದೇ ಮೊದಲೇನಲ್ಲ. 2019ರ ಆಗಸ್ಟ್‌ 6ರಂದು ಪುತ್ತುಮಲ ಸಮೀಪದಲ್ಲಿ ಭೂಕುಸಿತ ಉಟಾಗಿ 17 ಜನ ಸಾವಿಗೀಡಾಗಿದ್ದರು. ಈ ಪೈಕಿ ಐವರ ಮೃತದೇಹಗಳು ಪತ್ತೆಯಾಗಲೇ ಇಲ್ಲ. 65 ಮನೆಗಳು ಸಂಪೂರ್ಣ ಹಾನಿಗೆ ಒಳಗಾದವು. ಆದ್ರೆ ಇದಕ್ಕೂ ಮುನ್ನ ಕೇರಳದಲ್ಲಿ 2018ರಲ್ಲಿ ಕೇರಳ ಶತಮಾನಗಳಲ್ಲೇ ಅತೀ ಭೀಕರ ಪ್ರವಾಹವೊಂದನ್ನು ಎದುರಿಸಿತ್ತು. ಸುಮಾರು 483 ಮಂದಿ ಜೀವ ಕಳೆದುಕೊಂಡಿದ್ದರು. ವ್ಯಾಪಕ ಹಾನಿಯನ್ನುಂಟುಮಾಡಿತ್ತು ಈ ಪ್ರವಾಹ.

    2020 – ಪೆಟ್ಟಿಮುಡಿ: ಪೆಟ್ಟಿಮುಡಿಯಲ್ಲಿ 2020ರ ಆಗಸ್ಟ್ 6 ರಂದು ರಾತ್ರಿ 10:30ರ ವೇಳೆಗೆ ದುರಂತ ಸಂಭವಿಸಿದ ಸ್ವಲ್ಪ ಸಮಯದಲ್ಲೇ ಎಲ್ಲವೂ ನೆಲದಡಿಯಲ್ಲಿ ಹೂತುಹೋಗಿದ್ದವು. ಅಂದು ಕೆಲಸ ಮುಗಿಸಿ ನಿದ್ರೆಗೆ ಜಾರಿದ್ದ ಜನರ ಮನೆಗಳ ಮೇಲೆ ಬಂಡೆಗಳು ಉರುಳಿ ಬಿದ್ದಿದ್ದವು. ಇದಾದ 10 ಗಂಟೆಗಳ ನಂತರ ಅನಾಹುತ ಸಂಭವಿಸಿರುವುದು ಹೊರಜಗತ್ತಿಗೆ ತಿಳಿದಿತ್ತು. ವಿಪತ್ತು ನಿರ್ವಹಣಾ ಪಡೆಗಳು ಮತ್ತು ವಿವಿಧ ಇಲಾಖೆಗಳು ರಕ್ಷಣಾ ಕಾರ್ಯಾಚರಣೆ ನಡೆಸಿದ್ದವು. 500ಕ್ಕೂ ಹೆಚ್ಚು ಜನ ಕೋವಿಡ್ ಅನ್ನೂ ನಿರ್ಲಕ್ಷಿಸಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಸುಮಾರು 19 ದಿನಗಳ ಕಾಲ ಶವಗಳಿಗಾಗಿ ಹುಡುಕಾಟ ನಡೆಯಿತು. ಶೋಧದ ವೇಳೆ 14 ಕಿ.ಮೀ ದೂರದಿಂದ ಮೃತದೇಹಗಳು ಪತ್ತೆಯಾಗಿದ್ದವು. ರೀ ಮಳೆ, ಕೆಸರು, ವಿಪರೀತ ಚಳಿ ಮತ್ತು ಹಿಮವು ರಕ್ಷಣಾ ಕಾರ್ಯಾಚರಣೆಗೆ ದೊಡ್ಡ ಸವಾಲಾಗಿತ್ತು. ಅಂತಿಮವಾಗಿ 70 ಮಂದಿಗಳು ಜೀವ ಕಳೆದುಕೊಂಡಿದ್ದು ಪೂರ್ಣ ಕಾರ್ಯಾಚರಣೆ ಬಳಿಕ ಬೆಳಕಿಗೆ ಬಂದಿತು. 2024ರ ಜುಲೈ 30ರಂದು ವಯನಾಡಿನ ಮುಂಡಕ್ಕೈನಲ್ಲಿ ಸಂಭವಿಸಿದ ದುರಂತವೂ ಇದೀಗ ಇ ಕಹಿ ಘಟನೆಗಳನ್ನು ನೆನಪಿಸಿದೆ.

    ಮರೆಯಲಾಗದ ಶಿರೂರು ಗುಡ್ಡ ಕುಸಿತ

    ಜುಲೈ 15 ರಾತ್ರಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಚರಿಸುತ್ತಿದ್ದ ಎಲ್ಪಿ‌ಜಿ‌ ಟ್ಯಾಂಕರ್ ಮೇಲೆ ಗುಡ್ಡ ಕುಸಿದು ಬಿದ್ದಿತ್ತು. ಈ ದುರ್ಘಟನೆಯಲ್ಲಿ ಹಲವಾರು ಜನ ಮೃತಪಟ್ಟಿದ್ದರು. ಹಲವರ ಶವವನ್ನು ಪತ್ತೆ ಮಾಡಿ ಹೊರತೆಗೆಯಲಾಗಿತ್ತು. ಇನ್ನು ಹಲವರು ಮಣ್ಣಿನ ಅಡಿಯಲ್ಲಿ ಸಿಲುಕಿ‌ರುವ ಶಂಕೆ ವ್ಯಕ್ತವಾಗಿದೆ. ನದಿಯಲ್ಲಿ ತೇಲಿ ಹೋಗಿರಬಹುದೂ ಎಂಬ ಅನುಮಾನ ಇದೆ. ಈ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

    ಶಿರೂರು ಗುಡ್ಡ ಕುಸಿತಕ್ಕೆ ಕಾರಣ ಏನು?

    ಅಂಕೋಲಾ ತಾಲ್ಲೂಕಿನ ಶಿರೂರು ಗ್ರಾಮದಲ್ಲಿ ಗುಡ್ಡ ಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿಯ ವಿಸ್ತರಣೆಯ ಅವೈಜ್ಞಾನಿಕವಾಗಿ ಗುಡ್ಡ ಕೊರೆದಿರುವುದು ಒಂದು ಕಾರಣವಾದರೆ, ಗುಡ್ಡದ ಮೇಲಿನ ಪ್ರದೇಶದಿಂದ ವ್ಯಾಪಕ ಪ್ರಮಾಣದಲ್ಲಿ ನೀರು ಇಂಗಿ ಗುಡ್ಡದಿಂದ ಒಸರುತ್ತಿರುವುದು ಮತ್ತೊಂದು ಕಾರಣ ಆಗಿರಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ʻಗುಡ್ಡದ ಮೇಲೆ ಅರಣ್ಯ ಪ್ರದೇಶವಿದ್ದರೂ ನೀರು ಇಂಗಲು ಬಯಲು ಸೃಷ್ಟಿಯಾದಂತಿದೆ. ಅರಣ್ಯ ನಾಶ ಆಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಸಮೀಕ್ಷೆ ನಡೆಸುವುದು ಸೂಕ್ತ’ ಎಂದು ಪರಿಸರ ತಜ್ಞರು ತಿಳಿಸಿದ್ದಾರೆ. ಹೆದ್ದಾರಿ ವಿಸ್ತರಣೆಗೆ ಗುಡ್ಡವನ್ನು ಲಂಬಕೋನದಲ್ಲಿ ಕತ್ತರಿಸಿದ್ದು ಅವಘಡಕ್ಕೆ ಕಾರಣವಾಗಬಹುದು ಎಂದು ಕೆಲ ತಿಂಗಳ ಹಿಂದೆ ಎಚ್ಚರಿಸಲಾಗಿತ್ತು. ಹೆದ್ದಾರಿ ನಿರ್ಮಾಣಕ್ಕೆ ಯಂತ್ರೋಪಕರಣಗಳ ನಿರಂತರ ಬಳಕೆಯಿಂದ ಗುಡ್ಡಗಳಿಗೆ ಹಾನಿ ಆಗಿರಬಹುದು. ಡ್ರಿಲ್ಲಿಂಗ್, ಬ್ಲಾಸ್ಟಿಂಗ್ ಸೇರಿ ಮಿತಿಮೀರಿ ಕಾಮಗಾರಿ ನಡೆದಿದೆ. ಈಗ ಎಲ್ಲವೂ ಕಂಪಿಸಿ, ಮಳೆಗಾಲದಲ್ಲಿ ಅಡ್ಡ ಪರಿಣಾಮ ಬೀರಿದೆ’ ಎಂದು ಪರಿಸರ ತಜ್ಞ ವಿ.ಎನ್.ನಾಯಕ ತಿಳಿಸಿದ್ದಾರೆ.

  • ಶಿರೂರು ಗುಡ್ಡ ಕುಸಿತ ಪ್ರಕರಣ; ಸಂಸತ್‌ನಲ್ಲಿ ಧ್ವನಿ ಎತ್ತಿದ ಕಾಗೇರಿ

    ಶಿರೂರು ಗುಡ್ಡ ಕುಸಿತ ಪ್ರಕರಣ; ಸಂಸತ್‌ನಲ್ಲಿ ಧ್ವನಿ ಎತ್ತಿದ ಕಾಗೇರಿ

    ಕಾರವಾರ/ನವದೆಹಲಿ: ಶಿರೂರು ಗುಡ್ಡ ಕುಸಿತ (Shirur Landslide) ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwara Hegde Kageri) ಸಂಸತ್‌ನಲ್ಲಿ ಧ್ವನಿ ಎತ್ತಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ಭೂಕುಸಿತವಾಗಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯೇ ಕಾರಣ. ಶಿರೂರು ಭೂಕುಸಿತದಲ್ಲಿ ಮೃತರಾದವರಿಗೆ ಪ್ರಧಾನಮಂತ್ರಿ ಪರಿಹಾರ ನಿಧಿಯಡಿ ಪರಿಹಾರ ನೀಡಬೇಕು. NDRFನ ಮತ್ತೊಂದು ತಂಡವನ್ನು ಶಿರೂರಿಗೆ ಶೋಧ ಕಾರ್ಯ ನಡೆಸಲು ಕಳುಹಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: Shirur Landslide; ನಾಪತ್ತೆಯಾದವರ ಕುಟುಂಬಸ್ಥರ ಕಣ್ಣೀರು ನೋಡಿ ಮತ್ತೆ ಕಾರ್ಯಾಚರಣೆ ನಿರ್ಧಾರ: ಈಶ್ವರ್ ಮಲ್ಪೆ

    ವಯನಾಡಿನಲ್ಲಿ ಆಗಿರುವಂತೆ ಶಿರೂರಿನಲ್ಲಿ ಸಹ ಗುಡ್ಡ ಕುಸಿತವಾಗಿದೆ. ಅಭಿವೃದ್ಧಿ ಆಗಬೇಕು. ಅಭಿವೃದ್ಧಿ ಮಾಡುವಾಗ ವೈಜ್ಞಾನಿಕ ಅಧ್ಯಯನದ ವರದಿ ಮೂಲಕ ಅಭಿವೃದ್ಧಿ ಮಾಡಬೇಕು. ಪಶ್ಚಿಮಘಟ್ಟ ಬಹಳ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಅದರ ಕ್ಯಾರಿಂಗ್ ಕ್ಯಪಾಸಿಟಿ ಅಧ್ಯಯನ ಆಗುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

    ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡುತ್ತಿರುವ ಕೆಲಸ ಅವೈಜ್ಞಾನಿಕವಾಗಿದೆ. ಅವೈಜ್ಞಾನಿಕವಾಗಿರುವುದರಿಂದಲೇ ಗುಡ್ಡ ಕುಸಿದಿದೆ ಎಂಬುದಾಗಿ ಹೇಳಲಾಗುತ್ತಿದೆ ಎಂದು ಸಂಸತ್‌ನಲ್ಲಿ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: Landslide In Karnataka: ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ತಪ್ಪಿದ ಭಾರೀ ಅನಾಹುತ

    ಮುಂದಿನ ದಿನಗಳಲ್ಲಿಯಾದರೂ ಕಾಮಗಾರಿ ಮಾಡುವಾಗ ವೈಜ್ಞಾನಿಕ ರೀತಿಯಲ್ಲಿ ಅಧ್ಯಯನ ಆಗಬೇಕು ಎಂದು ಸಂಸತ್‌ನಲ್ಲಿ ಕಾಗೇರಿ, ಜಿಲ್ಲೆಯ ಸಮಸ್ಯೆ ಕುರಿತು ಸಂಸತ್ ಗಮನಕ್ಕೆ ತಂದಿದ್ದಾರೆ.