Tag: ಶಿರೂರು ಮಠ

  • ಶಿರೂರು ಮಠದ ಪೀಠಾಧಿಪತಿಯಾಗಿ ಉಡುಪಿ ವಿದ್ಯೋದಯ ಶಾಲೆಯ ಅನಿರುದ್ಧ್ ಆಯ್ಕೆ

    ಶಿರೂರು ಮಠದ ಪೀಠಾಧಿಪತಿಯಾಗಿ ಉಡುಪಿ ವಿದ್ಯೋದಯ ಶಾಲೆಯ ಅನಿರುದ್ಧ್ ಆಯ್ಕೆ

    ಉಡುಪಿ: ವಿದ್ಯೋದಯ ಪ್ರೌಢ ಶಾಲೆಯ ವಿದ್ಯಾರ್ಥಿ ಅನಿರುದ್ಧ್ ಸರಳತ್ತಾಯರನ್ನು ಶಿರೂರು ಮಠದ ನೂತನ ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲಾಗಿದೆ. ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣನಾಗಿರುವ ಅನಿರುದ್ಧ್ ಸರಳತ್ತಾಯಗೆ ಈಗ ಕೇವಲ 16 ವರ್ಷಗಳು.

    ಸೋದೆ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಉಡುಪಿಯ ಶೀರೂರು ಮಠದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಅನಿರುದ್ಧ್ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪದ ನಿಡ್ಲೆ ಮೂಲದವರಾಗಿದ್ದು, ಮೇ 11 ರಿಂದ 14ರ ವರೆಗೆ ಪಟ್ಟಾಭಿಷೇಕ ಪ್ರಕ್ರಿಯೆ ಉತ್ತರ ಕನ್ನಡ ಜಿಲ್ಲೆಯ ಸೋಂದಾ ಮಠದಲ್ಲಿ ನಡೆಯಲಿದೆ.

    ಅಷ್ಟಮಠಗಳಲ್ಲಿ ಬಾಲಸನ್ಯಾಸ ಸ್ವೀಕಾರ ಸಂಪ್ರದಾಯ ಇದೆ. ಹಿಂದಿನ ಸಂಪ್ರದಾಯದ ಪ್ರಕಾರವೇ ವಟುವಿನ ಆಯ್ಕೆ ನಡೆದಿದೆ. ಅಷ್ಟಮಠಗಳ ಯತಿಗಳಿಂದ ಸನ್ಯಾಸ ವಿಚಾರದಲ್ಲಿ ಯಾವುದೇ ಸಂವಿಧಾನ ರಚನೆಯಾಗಿಲ್ಲ. ಇಂತಿಷ್ಟೇ ವಯಸ್ಸು ಎಂಬುದು ನಿಗದಿಯಾಗಿಲ್ಲ. ಎಲ್ಲ ಯತಿಗಳ ಗಮನಕ್ಕೆ ತಂದು ಶಿಷ್ಯನ ಆಯ್ಕೆ ಮಾಡಿದ್ದೇವೆ ಎಂದು ಸ್ವಾಮೀಜಿ ಹೇಳಿದರು.

    ಶ್ರೀ ಕೃಷ್ಣನನ್ನು ಮುಟ್ಟಿ ಪೂಜೆ ಮಾಡುವ ಆಸೆ. ಇನ್ನೂ ಹಲವು ವರ್ಷ ನಾನು ಅಧ್ಯಯನ ಮಾಡಬೇಕಾಗಿದೆ, ಹತ್ತು ವರ್ಷ ಶಿಕ್ಷಣ ಮಾಡಿದ್ದೇನೆ ಮುಂದೆ ವೇದಾಧ್ಯಯನಕ್ಕೆ ಸಮಯ ಮೀಸಲಿಡಬೇಕಾಗುತ್ತದೆ. ಗುರುಗಳ ಮಾರ್ಗದರ್ಶನದಂತೆ ವಿದ್ವಾಂಸರ ಸೂಚನೆಯಂತೆ ಪಾಠ, ಪ್ರವಚನಗಳಲ್ಲಿ ತಲ್ಲೀನನಾಗುತ್ತೇನೆ ಎಂದು ವಟು ಅನಿರುದ್ಧ್ ಹೇಳಿದರು.

    ಇದೊಂದು ಅವಕಾಶ, ಮಗನಿಗೆ ಸನ್ಯಾಸ ಯೋಗ ಇದ್ದು, ಹಲವು ಕಡೆ ಜಾತಕ ತೋರಿಸಿ ಸಲಹೆ ಪಡೆದು ಈ ತೀರ್ಮಾನಕ್ಕೆ ಬರಲಾಗಿದೆ. ಶಿರೂರು ಮಠದ ಪೀಠಕ್ಕೆ ನನ್ನ ಮಗ ಉತ್ತರಾಧಿಕಾರಿ ಆಗುತ್ತೇನೆ ಎಂದರೆ ಸಂತಸವಾಗುತ್ತದೆ. ಈ ವಿಚಾರದಲ್ಲಿ ನಮ್ಮ ಕುಟುಂಬದ ಯಾವುದೇ ಒತ್ತಾಯ ಇಲ್ಲ. ಅನಿರುದ್ಧ್ ನ ಆಸಕ್ತಿಯ ಪ್ರಕಾರ ಎಲ್ಲವೂ ನಡೆಯುತ್ತಿದೆ. ನಾನು ಸನ್ಯಾಸಿ ಆಗುತ್ತೇನೆ ಎಂದಾಗ ಸಂಸಾರ ಅಂದರೆ ಏನು ಸನ್ಯಾಸತ್ವ ಎಂದರೆ ಏನು ಎಂಬ ಬಗ್ಗೆ ಮಾಹಿತಿ ನೀಡಿದ್ದೇನೆ. ನಂತರ ಕೂಡ ಆತ ತನ್ನ ಇಚ್ಛೆಯನ್ನು ಬದಲು ಮಾಡಲಿಲ್ಲ ಎಂದು ಅನಿರುದ್ಧ್ ತಂದೆ ಉದಯ ಕುಮಾರ್ ಸರಳತೆಯ ಹೇಳಿದರು.

    ಈ ಸಂದರ್ಭದಲ್ಲಿ ವಟು ಅನಿರುದ್ಧ್ ತಾಯಿ ಶ್ರೀವಿದ್ಯಾ, ತಂಗಿ ಹಿರಣ್ಮಯಿ ಸೋದೆ ಮತ್ತು ಶಿರೂರು ಮಠದ ಭಕ್ತವೃಂದ ಉಪಸ್ಥಿತವಿತ್ತು. 16 ವರ್ಷದ ಬಾಲಕನಿಗೆ ಸನ್ಯಾಸತ್ವ ನೀಡಬಾರದು ಎಂದು ವೃಂದಾವನಸ್ಥರಾದ ಲಕ್ಷ್ಮೀವರತೀರ್ಥ ಸ್ವಾಮೀಜಿ ಪೂರ್ವಾಶ್ರಮದ ಸಹೋದರರು ತಗಾದೆ ಎತ್ತಿದ್ದರು. ಅವರ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯ ಇಲ್ಲ ಎಂದು ಸೋದೆ ಸ್ವಾಮೀಜಿ ಹೇಳಿದ್ದಾರೆ.

  • ಮೆರವಣಿಗೆ ಬರುತ್ತಿದ್ದಂತೆ ಮುಚ್ಚಿದ ಶಿರೂರು ಮಠದ ಬಾಗಿಲು- ಮಠದ ಜಗಲಿಯಲ್ಲೇ ಪುಷ್ಪನಮನ ಸಲ್ಲಿಕೆ

    ಮೆರವಣಿಗೆ ಬರುತ್ತಿದ್ದಂತೆ ಮುಚ್ಚಿದ ಶಿರೂರು ಮಠದ ಬಾಗಿಲು- ಮಠದ ಜಗಲಿಯಲ್ಲೇ ಪುಷ್ಪನಮನ ಸಲ್ಲಿಕೆ

    ಉಡುಪಿ: ಶಿರೂರು ಲಕ್ಷ್ಮೀವರತೀರ್ಥ ಸ್ವಾಮೀಜಿ ಅನುಮಾನಾಸ್ಪದವಾಗಿ ಸಾವನ್ನಪ್ಪಿ ಒಂದು ತಿಂಗಳು ಕಳೆದಿದೆ. ಸ್ವಾಮೀಜಿಯವರ ಆಪ್ತ ಅಭಿಮಾನಿಗಳು ಉಡುಪಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಸಿದರು. ರಾಜ್ಯದಲ್ಲಿ ಬಾಲ ಸನ್ಯಾಸ ಸ್ವೀಕಾರ ನಡೆದರೆ ಕಾನೂನು ಹೋರಾಟ ನಡೆಸುವ ಎಚ್ಚರಿಕೆ ಸಭೆಯಲ್ಲಿ ಕೇಳಿ ಬಂತು. ಈ ನಡುವೆ ಶಿರೂರು ಮಠದಲ್ಲಿ ಸ್ವಾಮೀಜಿಗಳ ಪುಷ್ಪನಮನಕ್ಕೆ ಅವಕಾಶವೇ ಸಿಗಲಿಲ್ಲ.

    ಶಿರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಸಂಶಯಾಸ್ಪದವಾಗಿ ಸಾವನ್ನಪ್ಪಿ ತಿಂಗಳು ಕಳೆದಿದೆ. ಶ್ರೀಗಳ ಸಾವಿಗೆ ಕಾರಣ ಮಾತ್ರ ಇನ್ನೂ ನಿಗೂಢವಾಗಿಯೇ ಉಳಿದಿದೆ. ಮರಣೋತ್ತರ ಪರೀಕ್ಷೆಯ ಫೈನಲ್ ಎಫ್ ಎಸ್ ಎಲ್ ರಿಪೋರ್ಟ್ ಇನ್ನೂ ಬಂದಿಲ್ಲ. ಈ ನಡುವೆ ಶಿರೂರು ಶ್ರೀ ಅಭಿಮಾನಿ ಸಮಿತಿ ಸ್ವಾಮೀಜಿಗಳ ಅತೀ ಆಪ್ತರನ್ನು ಸೇರಿಸಿ ಶ್ರದ್ಧಾಂಜಲಿ ಸಭೆ ನಡೆಸಿತು.

    ಶಿರೂರು ಸ್ವಾಮೀಜಿ ಭಾವಚಿತ್ರವನ್ನು ಅಷ್ಟಮಠಗಳಿರುವ ರಥಬೀದಿಯಲ್ಲಿ ಮೆರವಣಿಗೆ ಮಾಡಲಾಯ್ತು. ಶಿರೂರು ಮಠದ ಒಳಗೆ ಸ್ವಾಮೀಜಿಯವ ಭಾವಚಿತ್ರ ಕೊಂಡೊಯ್ದು ಪುಷ್ಪ ನಮನ ಸಲ್ಲಿಸಲು ಅಭಿಮಾನಿಗಳು ಇಚ್ಛಿಸಿದ್ದರು. ಆದ್ರೆ ದ್ವಂದ್ವ ಸೋದೆ ಮಠ ಮತ್ತು ಶಿರೂರು ಮಠದ ಮೇಲ್ವಿಚಾರಣಾ ಸಮಿತಿ ಮಠದೊಳಗೆ ಭಕ್ತರು ಪ್ರವೇಶಿಸಿ ಪುಷ್ಪನಮನ ಸಲ್ಲಿಸಲು ಅವಕಾಶ ನೀಡಲಿಲ್ಲ. ಕೃಷ್ಣಮಠದ ಪಾರ್ಕಿಂಗ್ ಏರಿಯಾದ ಮಥುರಾ ಛತ್ರದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಯಾವುದೇ ಮಠಗಳಲ್ಲಿ ಬಾಲ ಸನ್ಯಾಸ ಸ್ವೀಕಾರ ಮಾಡಬಾರದೆಂಬ ಒತ್ತಾಯ ಕೇಳಿ ಬಂತು. ಬಾಲ ಸನ್ಯಾಸ ಸ್ವೀಕಾರ ಮಾಡಿದ್ರೆ ಬಾಲಕಾರ್ಮಿಕ ಪದ್ಧತಿ ಕಾನೂನಿನ ಅನ್ವಯ ಕೇಸು ದಾಖಲಿಸಿ, ಕಾನೂನು ಹೋರಾಟ ಮಾಡುವ ನಿರ್ಣಯವನ್ನು ತೆಗೆದುಕೊಳ್ಳಲಾಯ್ತು.

    ಕೇಮಾರು ಸಾಂದೀಪನಿ ಮಠಾಧೀಶ ಈಶ ವಿಠಲದಾಸ ಸ್ವಾಮೀಜಿ ಮಾಧ್ಯಮಗಳ ಜೊತೆ ಮಾತನಾಡಿ, ಶಿರೂರು ಸ್ವಾಮೀಜಿ ಮೂರು ಪರ್ಯಾಯ ಮಾಡಿದವರು. 48 ವರ್ಷ ಕೃಷ್ಣನ ಪೂಜೆಯನ್ನು ಮಾಡಿದ್ದವರು. ಶಿರೂರು ಮಠದ ಬಾಗಿಲು ಭಕ್ತ ಜನರಿಗೆ ಸದಾ ತೆರೆದಿತ್ತು. ಇಂದು ಸ್ವಾಮೀಜಿಯ ಭಾವಚಿತ್ರ ಪ್ರವೇಶಕ್ಕೆ ಮಠದ ಬಾಗಿಲು ಮುಚ್ಚಿದೆ. ಮಠದ ಒಳಗೆ ಪುಷ್ಪನಮನಕ್ಕೆ ನಮಗೆ ಅವಕಾಶ ಸಿಗಲಿಲ್ಲ. ಇದು ಸಾಧು ಪರಂಪರೆಗೆ ಮಾಡಿದ ಅವಮಾನ. ಉದಾರತೆಯಿಂದ ಶಿರೂರು ಮಠದ ಬಾಗಿಲು ತೆಗೆಯಬೇಕಿತ್ತು ಅಂತ ನೊಂದು ಹೇಳಿದರು.

    ಶಿರೂರು ಸ್ವಾಮೀಜಿಯವರ ಅನುಮಾನಾಸ್ಪದ ಸಾವು ಪ್ರಕರಣದ ಮರಣೋತ್ತರ ಪರೀಕ್ಷೆಯ ವರದಿ ತಿಂಗಳು ಕಳೆದ್ರೂ ಇನ್ನೂ ಪೊಲೀಸರ ಕೈಸೇರಿಲ್ಲ. ದೇಶದ ಗಮನ ಸೆಳೆದ ಪ್ರಕರಣ ಆದರೂ ವರದಿ ಇನ್ನೂ ಬಂದಿಲ್ಲ. ಮಣಿಪಾಲ ಕೆಎಂಸಿ ವೈದ್ಯರು ದೇಹದಲ್ಲಿ ವಿಷಕಾರಿ ಅಂಶ ಪತ್ತೆಯಾಗಿರುವುದನ್ನು ಒಪ್ಪಿಕೊಂಡಿದ್ದಾರೆ. ಎಫ್‍ಎಸ್‍ಎಲ್ ವರದಿ ತಡವಾದಷ್ಟು ವಿಷ ವಿಷತ್ವವನ್ನು ಕಳೆದುಕೊಳ್ಳುತ್ತದೆ. ಪ್ರಕರಣದ ದಿಕ್ಕೇ ಬದಲಾಗುವ ಸಾಧ್ಯತೆಯಿದೆ ಎಂದು ಕ್ರಿಮಿನಲ್ ವಕೀಲ, ಶಿರೂರು ಶ್ರೀ ಆಪ್ತ ರವಿಕಿರಣ್ ಮುರ್ಡೇಶ್ವರ ಸಂಶಯ ವ್ಯಕ್ತಪಡಿಸಿದರು.

    ಈ ನಡುವೆ ಶಿರೂರು ಸ್ವಾಮೀಜಿ ವೃಂದಾವನಸ್ಥರಾದ ನಂತರ ಮಾಡಬೇಕಾದ ಸಂಸ್ಕಾರ, ಆರಾಧನೆ ಪ್ರಕ್ರಿಯೆಗಳು ನಡೆದಿಲ್ಲ. ಈ ಬಗ್ಗೆ ಕೂಡಾ ಮಠದ ಭಕ್ತರು ಅಸಾಮಾಧಾನ ವ್ಯಕ್ತಗೊಳಿಸಿದ್ದಾರೆ. ಆರಾಧನೆ ಮಾಡಲು ಪೊಲೀಸರು ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶಿರೂರು ಪಟ್ಟದ ದೇವರು ಸೋದೆ ಮಠಕ್ಕೆ ಹಸ್ತಾಂತರ

    ಶಿರೂರು ಪಟ್ಟದ ದೇವರು ಸೋದೆ ಮಠಕ್ಕೆ ಹಸ್ತಾಂತರ

    ಉಡುಪಿ: ಪಟ್ಟದ ದೇವರಾದ ವಿಠ್ಠಲ ದೇವರ ವಿಗ್ರಹವನ್ನು ಇಂದು ಕೃಷ್ಣಮಠದಿಂದ ಶಿರೂರು ಮಠದ ದ್ವಂದ್ವ ಮಠವಾಗಿರುವ ಸೋದೆ ಮಠಕ್ಕೆ ಹಸ್ತಾಂತರ ಮಾಡಿದ್ದಾರೆ.

    ಉಡುಪಿಯ ಅಷ್ಟ ಮಠಗಳಲ್ಲೊಂದಾದ ಶಿರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಶ್ರೀಪಾದರು ವೃಂದಾವನಸ್ಥರಾದ ಮೇಲೆ ಪಟ್ಟದ ದೇವರು ದ್ವಂದ್ವ ಮಠಕ್ಕೆ ಹಸ್ತಾಂತರ ಆಗಬೇಕು. ಈ ಹಿನ್ನೆಲೆಯಲ್ಲಿ ಅನ್ನವಿಠಲ ದೇವರನ್ನು ದ್ವಂದ್ವ ಮಠವಾದ ಸೋದೆ ವಿಶ್ವವಲ್ಲಭ ತೀರ್ಥ ಶ್ರೀಪಾದರ ಪಾಲಾಗಿದೆ.

    ನಾಲ್ಕು ತಿಂಗಳಿಂದ ಕೃಷ್ಣಮಠದಲ್ಲೇ ಪೂಜಿಸಲ್ಪಡುತ್ತಿದ್ದ ಶಿರೂರು ಮಠದ ಅನ್ನ ವಿಠಲ ದೇವರನ್ನು ಕೃಷ್ಣಮಠದಿಂದ ವಿಶ್ವವಲ್ಲಭ ತೀರ್ಥ ಶ್ರೀಗಳು ಪಡೆದು ಉತ್ತರ ಕನ್ನಡ ಜಿಲ್ಲೆಯ ಸೋದೆ ಮಠಕ್ಕೆ ಕೊಂಡೊಯ್ದು ಪೂಜೆ ಸಲ್ಲಿಸುತ್ತಿದ್ದಾರೆ.

    ಪರ್ಯಾಯ ಪಲಿಮಾರು ವಿದ್ಯಾಧೀಶ ಶ್ರೀಗಳು ಪಟ್ಟದ ದೇವರನ್ನು ಹಸ್ತಾಂತರ ಮಾಡಿದ್ದಾರೆ. ಶೀರೂರು ಮಠಕ್ಕೆ ನೂತನ ಉತ್ತರಾಧಿಕಾರಿ ನೇಮಕದ ತನಕ ಸೋದೆ ಶ್ರೀಗಳಿಂದ ಪಟ್ಟದ ದೇವರಿಗೆ ಪೂಜೆ ನಡೆಯಲಿದೆ. ಶಿರೂರು ಸಾವಿಗೂ ಮುನ್ನ ಪಟ್ಟದ ದೇವರ ಹಸ್ತಾಂತರ ವಿಚಾರಕ್ಕೆ ಭಾರೀ ವಿವಾದ ಏರ್ಪಟ್ಟಿತ್ತು. ಅನ್ನ ವಿಠಲ ದೇವರ ವಿಗ್ರಹಕ್ಕಾಗಿ ಪಟ್ಟು ಹಿಡಿದಿದ್ದ ಶಿರೂರು ಶ್ರೀಗಳು ಕೋರ್ಟ್ ಮೆಟ್ಟಿಲು ಸಹ ಏರಿದ್ದರು. ಆದರೆ ವಿವಾದದಲ್ಲಿರುವಾಗಲೇ ಶಿರೂರು ಶ್ರೀ ಸಾವನ್ನಪ್ಪಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಶಿರೂರು ಮೂಲಮಠಕ್ಕೆ ತಾತ್ಕಾಲಿಕ ವ್ಯವಸ್ಥಾಪಕರ ನೇಮಕ

    ಶಿರೂರು ಮೂಲಮಠಕ್ಕೆ ತಾತ್ಕಾಲಿಕ ವ್ಯವಸ್ಥಾಪಕರ ನೇಮಕ

    ಉಡುಪಿ: ಆಡಳಿತ ಮಂಡಳಿ ಮತ್ತು ಹೊಸ ಉತ್ತರಾಧಿಕಾರಿ ನೇಮಕವಾಗುವವರೆಗೆ ಶಿರೂರು ಮಠಕ್ಕೆ ವ್ಯವಸ್ಥಾಪಕರ ನೇಮಕವಾಗಿದೆ.

    ಶಿರೂರು ಮೂಲಮಠಕ್ಕೆ ತಾತ್ಕಾಲಿಕ ವ್ಯವಸ್ಥಾಪಕರಾಗಿ ಸುಬ್ರಹ್ಮಣ್ಯ ಭಟ್ ಗೆ ಜವಾಬ್ದಾರಿ ನೀಡಲಾಗಿದೆ. ಸೋದೆ ಮಠಾಧೀಶ ವಿಶ್ವವಲ್ಲಭ ತೀರ್ಥರು ಉಸ್ತುವಾರಿ ನೇಮಕವಾಗಿದೆ. ಮಠದ ತೋಟ, ಚಿನ್ನಾಭರಣ, ನೋಡಿಕೊಳ್ಳಲು ಈ ಉಸ್ತುವಾರಿಗೆ ಅಧಿಕಾರ ಕೊಡಲಾಗಿದೆ.

    ತನಿಖೆ ಹಿನ್ನೆಲೆಯಲ್ಲಿ ಪೊಲೀಸ್ ಸುಪರ್ದಿಯಲ್ಲಿರುವ ಮೂಲ ಮಠದಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ. ಆದ್ದರಿಂದ ಮಠದೊಳಗೆ ಯಾರಿಗೂ ಪ್ರವೇಶಕ್ಕೆ ಅವಕಾಶ ಕೊಡಲಾಗುತ್ತಿಲ್ಲ. ಶಿರೂರು ಮಠದ ಆಸ್ತಿಪಾಸ್ತಿ ಸೋದೆ ಮಠ ಸುಪರ್ದಿಗೆ ಪಡೆದಿಲ್ಲ. ತನಿಖೆ ಮುಗಿಯುವ ತನಕ ವ್ಯವಸ್ಥಾಪಕರಿಗೆ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಸೋದೆ ಮಠದ ಮೂಲಗಳು ತಿಳಿಸಿವೆ.

  • ಶಿರೂರು ಮಠದ ಆವರಣದಲ್ಲಿರೋ ಬಾವಿಯಲ್ಲಿ ಮದ್ಯದ ಬಾಟಲಿ ಪತ್ತೆ!

    ಶಿರೂರು ಮಠದ ಆವರಣದಲ್ಲಿರೋ ಬಾವಿಯಲ್ಲಿ ಮದ್ಯದ ಬಾಟಲಿ ಪತ್ತೆ!

    ಉಡುಪಿ: ಇಲ್ಲಿನ ಶಿರೂರು ಮಠದ ಆವರಣದಲ್ಲಿರುವ ಬಾವಿಯಲ್ಲಿ ಮದ್ಯದ ಬಾಟಲ್ ಪತ್ತೆಯಾಗಿದ್ದು, ಇದೀಗ ತನಿಖೆ ಚುರುಕುಗೊಂಡಿದೆ.

    ಶಿರೂರು ಶ್ರೀಗಳ ಅನುಮನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಶೋಧ ಕಾರ್ಯ ಮುಂದುವರಿದೆ. ಈ ವೇಳೆ ಜಗದೀಶ್ ಪೂಜಾರಿ ಎಂಬವರು ಶಿರೂರು ಮಠ ಮತ್ತು ಕೃಷ್ಣಮಠದ ಪಕ್ಕದಲ್ಲಿರುವ ಬಾವಿಯಲ್ಲಿ ಮದ್ಯದ ಬಾಟಲಿ ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಶಿರೂರು ಮಠದ ಬಾವಿಯಲ್ಲಿ ಪೊಲೀಸರು ಹುಡುಕಾಟ ನಡೆಸಿದ ವೇಳೆ ಮದ್ಯದ ಬಾಟಲ್ ಇರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಉಡುಪಿ ಶಿರೂರು ಮಠದ ಸಿಸಿಟಿವಿ ಡಿವಿಆರ್ ನಾಪತ್ತೆ!

    ಕೂಡಲೇ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ, ಬಾವಿಯಲ್ಲಿದ್ದ ಕೆಲವು ವಸ್ತುಗಳನ್ನು ಕೊಕ್ಕೆಯೊಂದರ ಮೂಲಕ ಮೇಲೆತ್ತಿ ಕೊಂಡೊಯ್ದಿದ್ದಾರೆ. ಸಂಗ್ರಹಿಸಿದ ವಸ್ತುಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ಭದ್ರತೆಗೊಳಿಸಿ ರವಾನೆ ಮಾಡಲಾಗಿದೆ.

    ಇನ್ನು ಸೋಮವಾರವಷ್ಟೇ ಮಠದ ಮುಂಭಾಗದಲ್ಲಿದ್ದ ಸಿಸಿಟಿವಿ ಡಿವಿಆರ್ ನಾಪತ್ತೆಯಾಗಿದೆ ಎನ್ನಲಾಗುತ್ತಿತ್ತು. ಆದ್ರೆ ಇದೀಗ ಸಿ.ಸಿ ಕ್ಯಾಮರಾದ ಡಿ.ವಿ.ಆರ್ ಪತ್ತೆಯಾಗಿದೆ ಅಂತ ಹೇಳಲಾಗುತ್ತಿದ್ದು, ಆದ್ರೆ ಪೊಲೀಸರು ಈ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಡುತ್ತಿಲ್ಲ. ಇದನ್ನೂ ಓದಿ: ಶಿರೂರು ಮೂಲ ಮಠದಲ್ಲಿ ಸಿಕ್ಕಿದ್ದು ಪಾಯ್ಸನ್ ಅಲ್ಲ, ಜ್ಯೂಸ್ ಬಾಟಲ್!

  • ಉಡುಪಿ ಶಿರೂರು ಮಠದ ಸಿಸಿಟಿವಿ ಡಿವಿಆರ್ ನಾಪತ್ತೆ!

    ಉಡುಪಿ ಶಿರೂರು ಮಠದ ಸಿಸಿಟಿವಿ ಡಿವಿಆರ್ ನಾಪತ್ತೆ!

    ಉಡುಪಿ: ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿಗೂಢ ಸಾವಿನ ಬಳಿಕ ಊಹಾಪೋಹಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಮಠದ ಡಿವಿಆರ್ ನಾಪತ್ತೆಯಾಗಿದೆ.

    ಸ್ವಾಮೀಜಿಗಳ ಅಸಹಜ ಸಾವಿನ ಕುರಿತಂತೆ ಎಸ್ ಪಿ ಲಕ್ಷ್ಮಣ್ ನಿಂಬರ್ಗಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಈ ವೇಳೆ ಸಿಸಿಟಿವಿ ವಿಡಿಯೋಗಳನ್ನು ಸೇವ್ ಮಾಡುತ್ತಿದ್ದ ಡಿವಿಆರ್ ಇದೀಗ ಮೂಲ ಮಠದಿಂದ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಅಲ್ಲದೇ ಶಿರೂರು ಮೂಲಮಠದಿಂದ ಕೆಲ ವಸ್ತುಗಳು ಕೂಡ ಕಾಣೆಯಾಗಿವೆ.

    ಶಿರೂರು ಮೂಲ ಮಠದ ಪ್ರವೇಶ ದ್ವಾರದಲ್ಲೇ ಒಂದು ಸಿಸಿಟಿವಿ ಇತ್ತು. ಇದರಲ್ಲಿ ಮಠಕ್ಕೆ ಬರುವ ಎಲ್ಲಾ ಭಕ್ತರ ಬಗ್ಗೆ ದಾಖಲಾಗುತ್ತಿತ್ತು. ಯಾಕಂದ್ರೆ ಇದೊಂದು ದಾರಿಯ ಮೂಲಕವೇ ಭಕ್ತರು ಮಠ ಪ್ರವೇಶವಾಗಬೇಕಿತ್ತು. ಹೀಗಾಗಿ ಪೊಲೀಸರು ಇದೊಂದೇ ಸಾಕ್ಷಿ ಅಂತ ಪೊಲೀಸರು ನಂಬಿದ್ದರು. ತನಿಖೆಯ ಆರಂಭದಲ್ಲಿಯೇ ಪೊಲೀಸರು ಡಿವಿಆರ್ ಸಿಗುತ್ತೋ ಇಲ್ಲವೋ ಎಂಬ ಗೊಂದಲದಲ್ಲಿದ್ದರು. ಅಲ್ಲದೇ ಡಿವಿಆರ್ ಅನ್ನು ಸ್ವತಃ ಸ್ವಾಮೀಜಿಯವರೇ ಬೇರೆ ಮಠಕ್ಕೆ ಶಿಫ್ಟ್ ಮಾಡಿದ್ದಾರೆಯೋ ಎನ್ನುವುದರ ಬಗ್ಗೆ ತನಿಖೆ ನಡೆದಿತ್ತು. ಆದ್ರೆ ಎಲ್ಲಿ ಹುಡುಕಾಡಿದ್ರೂ ಡಿವಿಆರ್ ಮಾತ್ರ ಕಾಣಿಸುತ್ತಿಲ್ಲ.

    ಸ್ವಾಮೀಜಿಯವರು ಆಸ್ಪತ್ರೆಗೆ ದಾಖಲಾದ ದಿನವೇ ಯಾರೋ ಮಠಕ್ಕೆ ಬಂದು ಎಲ್ಲಾ ವಸ್ತುಗಳನ್ನು ತೆಗೆದುಕೊಂಡು ಹೋಗಿರಬಹುದೆಂಬ ಶಂಕೆ ವ್ಯಕ್ತವಾಗುತ್ತಿದೆ. ಆದ್ರೆ ಏನೆಲ್ಲ ವಸ್ತುಗಳನ್ನು ಹಾಗೂ ಯಾರು ತೆಗೆದುಕೊಂಡು ಹೋಗಿದ್ದಾರೆಂಬ ಬಗ್ಗೆ ದಾಖಲೆಗಳು ಈ ಸಿಸಿಟಿವಿಯಲ್ಲಿ ಸಿಗಬೇಕಿತ್ತು. ಆದ್ರೆ ಡಿವಿಆರ್ ಅನ್ನೇ ತೆಗೆದುಕೊಂಡು ಹೋಗಿದ್ರೆ ಎಲ್ಲಾ ದಾಖಲೆಗಳು ನಾಪತ್ತೆ ಆಗಿರೋ ಸಾಧ್ಯತೆಗಳಿವೆ. ಒಟ್ಟಿನಲ್ಲಿ ಆ ದಿನ ಮಠಕ್ಕೆ ಬಂದವರು ಯಾರು ಎಂಬುದರ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ಮೂರು ತಿಂಗಳ ಹಿಂದೆ ಮಠದಲ್ಲಿ ಹಸುವಿನ ಕಳ್ಳತನವಾಗಿತ್ತು. ಆ ಸಂದರ್ಭದಲ್ಲಿ ಸಿಸಿಟಿವಿಯಲ್ಲಿ ದೃಶ್ಯಗಳು ಲಭ್ಯವಾಗಿದ್ದು, ಅದನ್ನು ಸ್ವತಃ ಸ್ವಾಮೀಜಿಗಳೇ ಮಧ್ಯಮಗಳಿಗೆ ನೀಡಿದ್ದರು. ಹೀಗಾಗಿ ಅಂದಿ ಇದ್ದ ಡಿವಿಆರ್ ಆ ನಂತ್ರ ಏನಾಗಿದೆ ಎಂಬುದೇ ಇದೀಗ ಪ್ರಶ್ನೆಯಾಗಿದೆ.

  • ಉಡುಪಿಯಲ್ಲಿ ತಪ್ತಮುದ್ರಾಧಾರಣೆ – ಭಕ್ತರಿಗೆ ಇಂದು ಮತ್ತೆ ನೆನಪಾದ್ರು ಶಿರೂರು ಶ್ರೀ

    ಉಡುಪಿಯಲ್ಲಿ ತಪ್ತಮುದ್ರಾಧಾರಣೆ – ಭಕ್ತರಿಗೆ ಇಂದು ಮತ್ತೆ ನೆನಪಾದ್ರು ಶಿರೂರು ಶ್ರೀ

    ಉಡುಪಿ: ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ದೈಹಿಕವಾಗಿ ಎಲ್ಲರ ನಡುವೆ ಇಲ್ಲದಿದ್ದರೂ ಅವರ ನೆನಪುಗಳು ಮಾತ್ರ ಹಾಗೇ ಉಳಿದುಕೊಂಡಿದೆ. ಈ ಪೈಕಿ ತಪ್ತ ಮುದ್ರಾಧಾರಣೆಯೂ ಒಂದು. ಕಾರಣ ಇಂದು ತಪ್ತ ಮುದ್ರಾಧಾರಣೆ.

    ಮುದ್ರಾಧಾರಣೆ ಅಂದ ತಕ್ಷಣ ಉಡುಪಿಲ್ಲಿರುವ ಶ್ರೀಕೃಷ್ಣ ಭಕ್ತರಿಗೆ ಮೊದಲು ನೆನಪಾಗೋದು ಶಿರೂರು ಸ್ವಾಮೀಜಿ. ಎಲ್ಲಾ ಮಠಗಳಿಗಿಂತ ಮೊದಲು ಶಿರೂರು ಮಠದಲ್ಲಿ ಮುದ್ರಾಧಾರಣೆ ಶುರುವಾಗುತ್ತಿತ್ತು. ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ, ಕೆಲಸಕ್ಕೆ ಹೋಗುವವರಿಗೆ ಸಮಸ್ಯೆಯಾಗಬಾರದು ಅಂತ ಶಿರೂರು ಸ್ವಾಮೀಜಿ ಬೇರೆ ಮಠಗಳಿಗಿಂತ ಮೊದಲೇ ಮುದ್ರಾಧಾರಣೆ ಶುರುಮಾಡುತ್ತಿದ್ದರು. ಈ ಬಾರಿ ತಪ್ತಮುದ್ರಾಧಾರಣೆ ಮತ್ತೆ ಬಂದಿದೆ. ಆದ್ರೆ ಶಿರೂರು ಶ್ರೀ ನೆನಪು ಮಾತ್ರ.

    ತಪ್ತ ಮುದ್ರಾಧಾರಣೆಯಂದು ಜನಜಂಗುಳಿಯಿಂದ ತುಂಬಿಕೊಳ್ಳುತ್ತಿದ್ದ ಶಿರೂರು ಮಠ ಈ ಬಾರಿ ತಣ್ಣಗಿದೆ. ಪೊಲೀಸರು ಮಠವನ್ನು ಸುಪರ್ಧಿಗೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಶಿರೂರು ಶ್ರೀಗಳ ಭಕ್ತರು, ಅಭಿಮಾನಿಗಳಿಗೆ ಈ ದಿನ ಬಹಳ ಕಾಡಲಿದೆ.

    ಇಲ್ಲಿನ ಶಿರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿಗೂಢವಾಗಿ ಮೃತಪಟ್ಟು ಐದು ದಿನಗಳು ಕಳೆದಿದೆ. ಪ್ರಕರಣ ತನಿಖೆ ಇನ್ನೂ ತನಿಖೆ ಹಂತದಲ್ಲಿದೆ.

  • ಶಿರೂರು ಮಠಕ್ಕೆ ಸಮಿತಿ ಆಯ್ಕೆ- ಉತ್ತರಾಧಿಕಾರಿಯಾಗಲು ವಟುಗಳು ನಿರಾಸಕ್ತಿ

    ಶಿರೂರು ಮಠಕ್ಕೆ ಸಮಿತಿ ಆಯ್ಕೆ- ಉತ್ತರಾಧಿಕಾರಿಯಾಗಲು ವಟುಗಳು ನಿರಾಸಕ್ತಿ

    ಉಡುಪಿ: ಶಿರೂರು ಮಠದ ಒಂದು ತಿಂಗಳ ಆಡಳಿತ ನಿರ್ವಹಣೆಗೆ ಐವರು ಸದಸ್ಯರ ಆಡಳಿತ ಸಮಿತಿ ಸೋಮವಾರ ರಚನೆಯಾಗಲಿದೆ ಎಂಬ ಮಾಹಿತಿ ಸೋದೆ ಮಠದ ಮೂಲಗಳಿಂದ ಲಭಿಸಿದೆ.

    ಈ ಕುರಿತು ಪಬ್ಲಿಕ್ ಟಿವಿಗೆ ಮಠದ ಮೂಲಗಳಿಂದ ಮಾಹಿತಿ ಲಭಿಸಿದ್ದು, ಮಠದ ಆಡಳಿತ ವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಈ ವ್ಯವಸ್ಥೆ ಮಾಡುತ್ತೇವೆ. ಸೋದೆ ವಿಶ್ವವಲ್ಲಭ ಸ್ವಾಮಿಗಳ ನೇತೃತ್ವದಲ್ಲಿ ಸಮಿತಿ ರಚನೆಯಾಗುತ್ತದೆ. ಸೋದೆಮಠವೂ ಶಿರೂರು ಮಠದ ದ್ವಂದ್ವ ಮಠ ಆಗಿರುವುದರಿಂದ ಜವಾಬ್ದಾರಿ ವಹಿಸುತ್ತೇವೆ ಎಂದಿದ್ದಾರೆ. ಆದರೆ ಶಿರೂರು ಮಠದ ಮುಂದಿನ ಉತ್ತರಾಧಿಕಾರಿಯಾಗಲು ವಟುಗಳು ನಿರಾಸಕ್ತಿ ವಹಿಸಿದ್ದಾರೆ ಎನ್ನಲಾಗಿದೆ.

    ಒಂದು ತಿಂಗಳೊಳಗೆ ಶಿರೂರು ಮಠಕ್ಕೆ ಉತ್ತರಾಧಿಕಾರಿ ಆಯ್ಕೆಯಾಗಬೇಕು. ಉತ್ತರಾಧಿಕಾರಿ ಆಯ್ಕೆಗೆ ಸೋದೆ ಮಠದ ಪ್ರಯತ್ನ ನಡೆಸುತ್ತಿದ್ದು, ಹಲವಾರು ವಟುಗಳ ಜಾತಕ ಪರಿಶೀಲನೆ ನಡೆಸುತ್ತಿದ್ದಾರೆ. ವಟು ಆಯ್ಕೆಯ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಉತ್ತರಾಧಿಕಾರಿ ನೇಮಕವಾಗಲಿದೆ. ಆದರೆ ನೂತನ ಉತ್ತರಾಧಿಕಾರಿಯಾಗಿ ಬರಲು ಹಲವರ ನಿರಾಸಕ್ತಿ ವಹಿಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಶಿರೂರು ಮಠದ ಆರ್ಥಿಕ ನಷ್ಟವೇ ಈ ನಿರಾಸಕ್ತಿಗೆ ಕಾರಣವಾಗಿದ್ದು, ಸನ್ಯಾಸ ಯೋಗವಿದ್ದರೂ ಉತ್ತರಾಧಿಕಾರಿಯಾಗಲು ಹಲವರ ನಿರಾಸಕ್ತಿ ವಹಿಸಿದ್ದಾರೆ. ಈ ಕುರಿತು ಕಳೆದ ಕೆಲ ವಾರಗಳಿಂದ ಮೂಡಿರುವ ಗೊಂದಲಗಳೇ ಕಾರಣ ಎನ್ನಲಾಗಿದೆ.

    ಮಠಾಧೀಶರುಗಳ ಚಾತುರ್ಮಾಸ್ಯದ ನಂತರ ಉತ್ತರಾಧಿಕಾರಿ ನೇಮಕ ಪ್ರಕ್ರಿಯೆಗೆ ಚಾಲನೆ ದೊರೆಯಲಿದ್ದು, ಉತ್ತರಾಧಿಕಾರಿ ಆಯ್ಕೆ ಸಮಿತಿಯಲ್ಲಿ ಶಿರೂರು ಮಠದ ವಿದ್ವಾಂಸರಿಗೂ ಅವಕಾಶ ನೀಡಲಾಗಿದೆ ಎನ್ನಲಾಗಿದೆ.

  • ಶಿರೂರು ಶ್ರೀ ನಿಗೂಢ ಸಾವು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್!

    ಶಿರೂರು ಶ್ರೀ ನಿಗೂಢ ಸಾವು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್!

    ಉಡುಪಿ: ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ನಿಗೂಢ ಸಾವು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದೆ.

    ಶಿರೂರು ಶ್ರೀಗೆ ಭೂ ಮಾಫಿಯಾ ಜೊತೆ ಸಂಪರ್ಕ ಇದೆ ಎನ್ನಲಾಗುತ್ತಿದ್ದು, ಈ ಕುರಿತು ಹಲವು ಆಯಾಮಗಳಲ್ಲಿ ವಿಚಾರಣೆ ನಡೆಯುತ್ತಿದೆ. ಮಠ ಸಂಘರ್ಷ, ಭೂ ವ್ಯವಹಾರ, ಅನೈತಿಕ ಸಂಬಂಧದ ವಿಚಾರದಲ್ಲಿಯೂ ತನಿಖೆ ನಡೆಸಲಾಗುತ್ತಿದೆ. ತನಿಖೆಗೆ ಉಡುಪಿ ಎಸ್ ಪಿ 5 ವಿಶೇಷ ತಂಡಗಳನ್ನು ರಚಿಸಿದ್ದಾರೆ. ಇದನ್ನೂ ಓದಿ: ಊಟ ನೀಡ್ತಿದ್ದ ಮಹಿಳೆ ಮೈ ಮೇಲೆ ಶಿರೂರು ಶ್ರೀಗಳ ಆಭರಣಗಳು

    ಉಡುಪಿಯಲ್ಲಿರುವ ಪ್ರಮುಖ ಉದ್ಯಮಿ ಹಾಗೂ ಬಿಲ್ಡರ್ ಗಳ ತನಿಖೆ ನಡೆಸಲಾಗುತ್ತಿದೆ. ಇದರ ಜೊತೆಗೆ ಸ್ವಾಮೀಜಿಗೆ 26 ಕೋಟಿ ರೂ. ವಂಚನೆ ನಡೆದಿದೆ ಅನ್ನೋ ವಿಡಿಯೋ ಮತ್ತು ಆಡಿಯೋ ವೈರಲ್ ಆಗಿದ್ದು, ಈ ಬಗ್ಗೆಯೂ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಒಟ್ಟಿನಲ್ಲಿ ಸ್ವಾಮೀಜಿಗಳ ರಿಯಲ್ ಎಸ್ಟೇಟ್ ಉದ್ಯಮ ಪಾಲುದಾರರ ತೀವ್ರ ವಿಚಾರಣೆ ಆರಂಭವಾಗಿದೆ. ಇದನ್ನೂ ಓದಿ: ಶಿರೂರು ಶ್ರೀಗೆ ಇಬ್ಬರು ಉದ್ಯಮಿಗಳಿಂದ ಮೋಸ- ಬರೋಬ್ಬರಿ 26 ಕೋಟಿ ರೂ. ದೋಖಾ

    ಸ್ವಾಮೀಜಿಗಳ ಬಳಿ ನೂರಾರು ಎಕರೆ ಜಮೀನು ಇದೆ. ಸುಮಾರು 30 ಕೋಟಿ ರೂ. ವೆಚ್ಚದ ಕಮರ್ಷಿಯಲ್ ಕಾಂಪ್ಲೆಕ್ಸ್ ನಿರ್ಮಾಣ ಕಾರ್ಯದಲ್ಲಿವೆ. ಈ ವಿಚಾರದಲ್ಲಿಯೂ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಮುಂಬೈ ಮೂಲದ ಉದ್ಯಮಿಯೊಬ್ಬರ ಜೊತೆ ಈ ಕಾಂಪ್ಲೆಕ್ಸ್ ನಿರ್ಮಾಣ ಮತ್ತು ಸೇಲ್ ಬಗ್ಗೆ ಸಾಕಷ್ಟು ಚರ್ಚೆಗಳು, ಜಟಾಪಟಿ ನಡೆದಿತ್ತು ಅನ್ನೋ ಮಾತುಗಳು ಕೂಡ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿಯೂ ಕೂಡ ಪೊಲೀಸರು ಈಗಾಗಲೇ ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿಧನಕ್ಕೆ ಟ್ವಿಸ್ಟ್!

    ಬಹು ಅಂಗಾಂಗ ವೈಫಲ್ಯದಿಂದ ತೀವ್ರ ಅಸ್ವಸ್ಥರಾಗಿದ್ದ ಶ್ರೀಗಳು ಗುರುವಾರ ಬೆಳಗ್ಗೆ ಹರಿಪಾದ ಸೇರಿದ್ದರು. ಶ್ರೀಗಳ ಸಾವಿನ ಬಳಿಕ ಅವರಿಗೆ ವಿಷಪ್ರಾಶನ ಮಾಡಿಸಲಾಗಿದೆಯೇ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಇದಕ್ಕೆ ಪೂರಕವಾಗಿರುವಂತೆ ಕೆಎಂಸಿ ಆಸ್ಪತ್ರೆಯ ವೈದ್ಯರೂ ದೇಹದಲ್ಲಿ ವಿಷಕಾರಕ ಅಂಶ ಪತ್ತೆಯಾಗಿದೆ ಅಂದಿದ್ದರು. ಈ ಹಿನ್ನೆಲೆಯಲ್ಲಿ ಶ್ರೀಗಳ ಪೂರ್ವಾಶ್ರಮದ ಸಹೋದರ ಲಾತವ್ಯ ಆಚಾರ್ಯ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದರು.

    ದೂರು ದಾಖಲಿಸಿಕೊಂಡಿರೋ ಪೊಲೀಸರು ಶ್ರೀಗಳಿಗೆ ದಿನಾಲೂ ಫಲಾಹಾರ ತರುತ್ತಿದ್ದ ಮಹಿಳೆಯನ್ನು ಉಡುಪಿ ಪೋಲಿಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.  ಇನ್ನು ಶ್ರೀಗಳ ಸಾವಿನ ಸಂಬಂಧ ಹಿರಿಯಡ್ಕ ಠಾಣೆಯಲ್ಲಿ ದೂರು ದಾಖಲಾಗಿಸಿದ್ದ ಅವರ ಪೂರ್ವಾಶ್ರಮದ ಸಹೋದರ ಲಾತವ್ಯ ಆಚಾರ್ಯರನ್ನು ಕೂಡಾ ವಿಚಾರಣೆ ನಡೆಸಲಾಗಿದೆ.

  • ಶಿರೂರು ಶ್ರೀ, ರಮ್ಯಾ ಶೆಟ್ಟಿಯ ನಡುವಿನ ಸಂಬಂಧವೇನು? ಮಠದ ಮಾಜಿ ಮ್ಯಾನೇಜರ್ ಸ್ಫೋಟಕ ಹೇಳಿಕೆ

    ಶಿರೂರು ಶ್ರೀ, ರಮ್ಯಾ ಶೆಟ್ಟಿಯ ನಡುವಿನ ಸಂಬಂಧವೇನು? ಮಠದ ಮಾಜಿ ಮ್ಯಾನೇಜರ್ ಸ್ಫೋಟಕ ಹೇಳಿಕೆ

    ಹಾಸನ: ಶಿರೂರು ಮಠದ ಲಕ್ಷ್ಮೀವರ ಸ್ವಾಮೀಜಿಗಳ ನಿಧನಕ್ಕೆ ಸಂಬಂಧಿಸಿದಂತೆ ಕ್ಷಣ ಕ್ಷಣಕ್ಕೂ ಸ್ಫೋಟಕ ವಿಚಾರಗಳು ಹೊರ ಬರುತ್ತಿವೆ. ಶಿರೂರು ಶ್ರೀಗಳದ್ದು ಕೊಲೆಯಾಗಿದೆ ಅಂತಾದ್ರೆ ಅದಕ್ಕೆ ಕಾರಣ ರಮ್ಯಾ ಶೆಟ್ಟಿ ಎಂದು ಮಠದ ಮಾಜಿ ಮ್ಯಾನೇಜರ್ ಸುನಿಲ್ ಕುಮಾರ್ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ.

    ಶ್ರೀಗಳಿಗೆ ಮತ್ತು ಮಠಕ್ಕೆ ಸೇರಿದಂತೆ ತರಕಾರಿ, ಆಹಾರ ಪದಾರ್ಥಗಳನ್ನು ರಮ್ಯಾ ತರುತ್ತಿದ್ದರು. ರಮ್ಯಾ ಮಠದ ಭಕ್ತೆಯಾಗಿದ್ದರೆ ಪೂಜಾ ಕಾರ್ಯದಲ್ಲಿ ಭಾಗಿಯಾಗಿ ಹೋಗಬೇಕಿತ್ತು. ರಮ್ಯಾ ಸ್ವಾಮೀಜಿ ಬಳಿ ಒಬ್ಬಂಟಿಯಾಗಿ ರಾತ್ರಿ ವೇಳೆ ಮಠದಲ್ಲಿ ಇರುತ್ತಿದ್ದರು. ಸ್ವಾಮೀಜಿಗಳ ಕೋಣೆಗೆ ಯಾರು ಹೋಗುತ್ತಿರಲಿಲ್ಲ, ಆದ್ರೆ ರಮ್ಯಾ ಹೋಗ್ತಿದ್ರು. ಮಠಕ್ಕೆ ಸೇರಿದ ನಂತರ ರಮ್ಯಾ ಮೈತುಂಬ ಬಂಗಾರ, ಕಾರು ಸೇರಿ 2 ಮನೆ ಸೇರಿ ಆಸ್ತಿ ಹೆಚ್ಚಾಯಿತು ಎಂದು ಆರೋಪಿಸಿದರು.

    ರಮ್ಯಾ ಶೆಟ್ಟಿ ಮಠಕ್ಕೆ ಬರೋ ಮುನ್ನ ಎಲ್ಲವೂ ಚೆನ್ನಾಗಿತ್ತು. ಒಂಬತ್ತು ವರ್ಷ ನಾನು ಮತ್ತು ನನ್ನ ಕುಟುಂಬದಲ್ಲಿಯೇ ವಾಸವಾಗಿದ್ದೇವು. ಸ್ವಾಮೀಜಿಗಳು ಎಲ್ಲರನ್ನು ಅತ್ಯಂತ ಪ್ರೀತಿಯಿಂದ ಕಾಣುತ್ತಿದ್ದರು. ಆದ್ರೆ ರಮ್ಯಾ ಶೆಟ್ಟಿ ಆಗಮನದ ಬಳಿಕ ಮಠದ ವಾತಾವರಣವೇ ಬದಲಾಯಿತು. ಕೆಲವೇ ದಿನಗಳಲ್ಲಿಯೇ ಇಡೀ ಮಠವನ್ನೇ ರಮ್ಯಾ ತನ್ನ ಸ್ವಾಧೀನಕ್ಕೆ ಪಡೆದುಕೊಂಡಳು. ಮಠದ ಬ್ಯಾಂಕ್ ವ್ಯವಹಾರ ಸೇರಿದಂತೆ ಎಲ್ಲ ಕೆಲಸಗಳನ್ನು ರಮ್ಯಾ ನೋಡಿಕೊಳ್ಳುತ್ತಿದ್ದಳು. ರಮ್ಯಾ ಸೂಚಿಸಿದವರನ್ನೆ ಮಠದ ಕಾರ್ಯಗಳಿಗೆ ನೇಮಿಸಿಕೊಳ್ಳಲಾಗುತ್ತಿತ್ತು ರಹಸ್ಯ ವಿಚಾರಗಳನ್ನು ಸುನಿಲ್ ವಿವರಿಸಿದರು.

    ಶಿಶೂರು ಸ್ವಾಮೀಜಿ ಆರೋಗ್ಯವಾಗಿದ್ದರು, ಉತ್ತಮ ಯೋಗ ಹಾಗೂ ಈಜು ಪಟುವಾಗಿದ್ದರು. 55ನೇ ವಯಸ್ಸಿನಲ್ಲಿ ಸ್ವಾಮೀಜಿಗಳು ಸಾವನ್ನಪ್ಪಿದ್ದಾರೆ ಎಂದರೆ ಅದಕ್ಕೆ ರಮ್ಯಾ ಕಾರಣ. ಮಠದಲ್ಲಿ ಸ್ವಾಮೀಜಿಗಳಿಗಿಂತ ರಮ್ಯಾ ಮಾತು ನಡೆಯುತ್ತಿತ್ತು. ರಮ್ಯಾ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಪೆÇಲೀಸ್ ಗೆ ದೂರು ನೀಡಿ ಕಿರುಕುಳ ನೀಡಿ ಮಠದಿಂದ ಹೊರ ಹಾಕಿದಳು. ಮಠದಲ್ಲಿರುವ ಸಿಸಿ ಟಿವಿ ಪರೀಕ್ಷಿಸಿದರೆ ಸತ್ಯಾಂಶ ತಿಳಿಯಲಿದೆ. ರಮ್ಯಾ ವಿರುದ್ಧ ಉಡುಪಿ ಜನ ಹೋರಾಟ ಮಾಡಬೇಕು. ಆಕೆಯ ವಿರುದ್ಧ ಕಾನೂನು ಕ್ರಮ ಆಗಬೇಕು. ಸೂಕ್ತ ತನಿಖೆ ನಡೆಸಿ ರಮ್ಯಾ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಸುನಿಲ್ ಆಗ್ರಹಿಸಿದರು.