Tag: ಶಿರೂರು ಮಠ

  • ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿಧನಕ್ಕೆ ಟ್ವಿಸ್ಟ್!

    ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿಧನಕ್ಕೆ ಟ್ವಿಸ್ಟ್!

    ಉಡುಪಿ: ಉಡುಪಿಯ ಅಷ್ಠಮಠಗಳಲ್ಲಿ ಒಂದಾಗಿರುವ ಶಿರೂರು ಮಠದ ಲಕ್ಷ್ಮಿವರ ತೀರ್ಥ ಸ್ವಾಮೀಜಿ ಸಾವಿನ ಬಳಿಕ ಹಲವು ಊಹಾಪೋಹಗಳು ಕೇಳಿಬರುತ್ತಿದ್ದು, ಇದೀಗ ಕುಡಿತದ ಚಟವೇ ಸ್ವಾಮೀಜಿಗಳ ನಿಧನಕ್ಕೆ ಕಾರಣವಾಗಿದೆ ಎಂಬ ಚರ್ಚೆ ಆರಂಭವಾಗಿದೆ.

    ಶ್ರೀಗಳು ಆಪ್ತರೊಬ್ಬರು ಈ ಕುರಿತು ಮಾತಾಡಿದ್ದಾರೆ ಎನ್ನಲಾಗಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದರಲ್ಲಿ ಸ್ವಾಮೀಜಿಗಳು ಕುಡಿತದ ದಾಸರಾಗಿರುವ ಬಗ್ಗೆ ತಿಳಿಸಿದ್ದಾರೆ. ಇದನ್ನೂ ಓದಿ: ಶಿರೂರು ಶ್ರೀಗಳಿಗೆ ಮದ್ಯಪಾನ, ಸ್ತ್ರೀ ಸಂಪರ್ಕ ಇದ್ದಿರೋದಕ್ಕೆ ಹೀಗಾಯ್ತೋ ಏನೋ ಗೊತ್ತಿಲ್ಲ: ಪೇಜಾವರ ಶ್ರೀ

    ಆಡಿಯೋದಲ್ಲೇನಿದೆ?:
    ಕುಡಿತ ಚಟದಿಂದ ಶ್ರೀಗಳ ಲಿವರ್‍ಗೆ ತೊಂದರೆ ಆಗಿತ್ತು. ಐದಾರು ತಿಂಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸ್ವಾಮೀಜಿಗೆ ಚಿಕಿತ್ಸೆ ನೀಡಲಾಗಿತ್ತು. ಈ ವೇಳೆ ಕುಡಿತದ ಚಟ ಬಿಟ್ರೆ ಹೆಚ್ಚು ವರ್ಷ ಬದುಕುತ್ತೀರಿ ಎಂದು ವೈದ್ಯರು ಹೇಳಿದ್ದರು. ಆದ್ರೆ ಮೂರೇ ತಿಂಗಳಿಗೆ ಮತ್ತೆ ಕುಡಿತ ಶುರು ಮಾಡಿದ್ರು ಅಂತ ಆಡಿಯೋದಲ್ಲಿ ಹೇಳಲಾಗಿದೆ. ಇದನ್ನೂ ಓದಿ: ಪಲಿಮಾರು ಶ್ರೀಗೆ 50, ಅಜ್ಜಗೆ 50ಲಕ್ಷ, 1 ಕೋಟಿ ಕೊಟ್ರೆ ಮ್ಯಾಟರ್ ಫಿನಿಶ್- ಶಿರೂರು ಶ್ರೀಗಳ ಆಡಿಯೋ ವೈರಲ್

    ಬಹು ಅಂಗಾಂಗ ವೈಫಲ್ಯದಿಂದ ತೀವ್ರ ಅಸ್ವಸ್ಥರಾಗಿದ್ದ ಶ್ರೀಗಳು ಗುರುವಾರ ಬೆಳಗ್ಗೆ ಹರಿಪಾದ ಸೇರಿದ್ದರು. ಶ್ರೀಗಳ ಸಾವಿನ ಬಳಿಕ ಅವರಿಗೆ ವಿಷಪ್ರಾಶನ ಮಾಡಿಸಲಾಗಿದೆಯೇ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಇದಕ್ಕೆ ಪೂರಕವಾಗಿರುವಂತೆ ಕೆಎಂಸಿ ಆಸ್ಪತ್ರೆಯ ವೈದ್ಯರೂ ದೇಹದಲ್ಲಿ ವಿಷಕಾರಕ ಅಂಶ ಪತ್ತೆಯಾಗಿದೆ ಅಂದಿದ್ದರು. ಈ ಹಿನ್ನೆಲೆಯಲ್ಲಿ ಶ್ರೀಗಳ ಪೂರ್ವಾಶ್ರಮದ ಸಹೋದರ ಲಾತವ್ಯ ಆಚಾರ್ಯ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದರು. ಸದ್ಯ ದೂರು ದಾಖಲಿಸಿಕೊಂಡಿರೋ ಪೊಲೀಸರು ಶ್ರೀಗಳಿಗೆ ದಿನಾಲೂ ಫಲಾಹಾರ ತರುತ್ತಿದ್ದ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಮಣಿಪಾಲ ಮೂಲದ ಮಹಿಳೆಯನ್ನು ಉಡುಪಿ ಪೋಲಿಸರು ವಿಚಾರಣೆ ಮಾಡ್ತಿದ್ದಾರೆ. ಇನ್ನು ಶ್ರೀಗಳ ಸಾವಿನ ಸಂಬಂಧ ಹಿರಿಯಡ್ಕ ಠಾಣೆಯಲ್ಲಿ ದೂರು ದಾಖಲಾಗಿಸಿದ್ದ ಅವರ ಪೂರ್ವಾಶ್ರಮದ ಸಹೋದರ ಲಾತವ್ಯ ಆಚಾರ್ಯರನ್ನು ಕೂಡಾ ವಿಚಾರಣೆ ಮಾಡಲಾಗ್ತಿದೆ. ಇದನ್ನೂ ಓದಿ: ಉಡುಪಿಯ ಶಿರೂರು ಶ್ರೀಗಳು ವಿಧಿವಶ

    https://www.youtube.com/watch?v=-p-dNCjn3ok

  • ಶಿರೂರು ಶ್ರೀಗಳಿಗೆ ಮೊಸರವಲಕ್ಕಿ ಕೊಟ್ಟವರು ಯಾರು?

    ಶಿರೂರು ಶ್ರೀಗಳಿಗೆ ಮೊಸರವಲಕ್ಕಿ ಕೊಟ್ಟವರು ಯಾರು?

    ಉಡುಪಿ: ಶಿರೂರು ಶ್ರೀಗಳು ಕೊನೆಯ ಬಾರಿಗೆ ಮಠದಲ್ಲಿ ಮೊಸರು ಅವಲಕ್ಕಿಯನ್ನು ಸೇವಿಸಿದ್ದರು. ಇದಾದ ಕೆಲ ಸಮಯದ ಬಳಿಕ ಶ್ರೀಗಳು ರಕ್ತದ ವಾಂತಿ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಹಾಗಾದ್ರೆ ಕೊನೆಯ ಬಾರಿಗೆ ಮೊಸರು ಅವಲಕ್ಕಿ ನೀಡಿದ್ದು ಯಾರು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

    ವನ ಮಹೋತ್ಸವದಲ್ಲಿ ಭಾಗಿಯಾಗಿದ್ದ ಶ್ರೀಗಳು ಅಲ್ಲಿ ಯಾವುದೇ ಆಹಾರವನ್ನು ಸೇವಿಸಿರಲಿಲ್ಲವಂತೆ. ಸಂಜೆ ಮಠಕ್ಕೆ ಆಗಮಿಸಿದಾಗಲೇ ತಮ್ಮ ನೆಚ್ಚಿನ ಆಹಾರವಾದ ಮೊಸರು ಅವಲಕ್ಕಿ ತಿಂದಿದ್ದರು. ಅವಲಕ್ಕಿ ತಿಂದ ಬಳಿಕವೇ ಶ್ರೀಗಳಿಗೆ ಫುಡ್ ಪಾಯ್ಸನ್ ಆಗಿದೆ ಮಠದ ಮೂಲಗಳು ತಿಳಿಸಿದ್ದವು. ಶ್ರೀಗಳು ರಕ್ತದ ವಾಂತಿ ಮಾಡಿಕೊಳ್ಳುತ್ತಿದ್ದಂತೆ ಭಕ್ತವೃಂದ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿತ್ತು.

    ಬಹು ಅಂಗಾಂಗ ವೈಫಲ್ಯದಿಂದ ತೀವ್ರ ಅಸ್ವಸ್ಥರಾಗಿದ್ದ ಶ್ರೀಗಳು ಗುರುವಾರ ಬೆಳಗ್ಗೆ ಹರಿಪಾದ ಸೇರಿದ್ದರು. ಶ್ರೀಗಳ ಸಾವಿನ ಬಳಿಕ ಅವರಿಗೆ ವಿಷಪ್ರಾಶನ ಮಾಡಿಸಲಾಗಿದೆಯೇ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಇದಕ್ಕೆ ಪೂರಕವಾಗಿರುವಂತೆ ಕೆಎಂಸಿ ಆಸ್ಪತ್ರೆಯ ವೈದ್ಯರೂ ದೇಹದಲ್ಲಿ ವಿಷಕಾರಕ ಅಂಶ ಪತ್ತೆಯಾಗಿದೆ ಅಂದಿದ್ದರು. ಈ ಹಿನ್ನೆಲೆಯಲ್ಲಿ ಶ್ರೀಗಳ ಪೂರ್ವಾಶ್ರಮದ ಸಹೋದರ ಲಾತವ್ಯ ಆಚಾರ್ಯ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದರು. ಸದ್ಯ ಶ್ರೀಗಳ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಪೊಲೀಸರು ಶಿರೂರು ಮಠವನ್ನು ಮೂರು ದಿನಗಳ ಕಾಲ ವಶಕ್ಕೆ ಪಡೆದು, ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿದ್ದಾರೆ.

    ಪೇಜಾವರ ಶ್ರೀಗಳು ಗುರುವಾರ ಶಿರಸಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ನಾನು ಈ ಮೊದಲು ಲಾತವ್ಯ ಆಚಾರ್ಯರೊಂದಿಗೆ ಫೋನ್ ನಲ್ಲಿ ಮಾತನಾಡಿ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೆ. ಅವರಿಗೆ ಕೆಟ್ಟದಾದ ಕಂಚಿನ ಪಾತ್ರೆಯಲ್ಲಿ ಫಲಾಹಾರ ನೀಡಲಾಗಿತ್ತು. ಪಾತ್ರೆ ದೋಷದಿಂದ ಶಿರೂರು ಶ್ರೀಗಳು ಸಾವನ್ನಪ್ಪಿರುವ ಸಾಧ್ಯತೆಗಳಿವೆ ಎಂಬ ಶಂಕೆ ವ್ಯಕ್ತಪಡಿಸಿದ್ದರು.

  • ಶಿರೂರು ಮಠಕ್ಕೆ 3 ದಿನ ಭಕ್ತರು ಹೋಗುವಂತಿಲ್ಲ

    ಶಿರೂರು ಮಠಕ್ಕೆ 3 ದಿನ ಭಕ್ತರು ಹೋಗುವಂತಿಲ್ಲ

    ಉಡುಪಿ: ಶಿರೂರು ಮಠವನ್ನು ಪೊಲೀಸರು ಜುಲೈ 19ರಿಂದ 21ರವರೆಗೆ ಅಂದರೆ ಇಂದಿನಿಂದ ಶನಿವಾರದವರಗೆ ಸುಪರ್ದಿಗೆ ಪಡೆದಿದ್ದು, ಸಾರ್ವಜನಿಕರಿಗೆ ಮಠ ಪ್ರವೇಶಕ್ಕೆ ನಿಷೇಧಿಸಲಾಗಿದೆ.

    ಶಿರೂರು ಶ್ರೀಗಳಿಗೆ ವಿಷ ಪ್ರಾಶನ ಮಾಡಿಸಲಾಗಿದೆ ಎಂಬುದರ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಶ್ರೀಗಳ ಪೂರ್ವಾಶ್ರಮದ ಸಹೋದರ ಲಾತವ್ಯ ಆಚಾರ್ಯರು ಹಿರಿಯಡ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಸಾಕ್ಷ್ಯಾಧಾರ ಪರಿಶೋಲನೆ ಹಿನ್ನೆಲೆಯಲ್ಲಿ ಪೊಲೀಸರು ಇಂದಿನಿಂದ ಮೂರು ದಿನಗಳ ಮಠದ ಪರಿಶೀಲನೆ ನಡೆಸಲಿದ್ದಾರೆ. ತನಿಖೆಗೆ ತೊಂದರೆ ಆಗದಿರಲಿ ಎಂಬ ಸಾರ್ವಜನಿಕರಿಗೆ ಮಠದ ಪ್ರವೇಶವನ್ನು ನಿರ್ಭಂಧಿಸಲಾಗಿದೆ ಎಂದು ಎಸ್.ಪಿ. ಲಕ್ಷ್ಮಣ್ ನಿಂಬರ್ಗಿ ಮಾಹಿತಿ ನೀಡಿದ್ದಾರೆ.

    ಸಾವಿಗೆ ಬೇರೆ ಕಾರಣಗಳಿದೆಯಾ? ವಿಷಪ್ರಾಶನ ಆದಂತಹ ಕೆಲವು ಸಂಶಯಗಳನ್ನು ಕೆಎಂಸಿಯ ವೈದ್ಯರು ಹೇಳಿರುತ್ತಾರೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಬೇಕು. ಇದೊಂದು ಅನುಮಾನಸ್ಪದವಾದ ಸಾವಾಗಿದ್ದು, ಹೀಗಾಗಿ ಈ ಸಾವಿಗೆ ನಿಖರ ಕಾರಣವೇನೆಂದು ನಮಗೆ ಪೊಲೀಸ್ ತನಮಿಖೆಯ ಮೂಲಕ ತಿಳೀದುಬರಬೇಕು ಅಂತ ದೂರಿನಲ್ಲಿ ಲಾತವ್ಯ ತಿಳಿಸಿದ್ದಾರೆ.