Tag: ಶಿಲ್ಪಾ ನಾಗ್

  • ಮಾನ, ಮರ್ಯಾದೆ ಇರುವ ಎಂಪಿ ಹೀಗೆ ಮಾಡಲ್ಲ, ಐಎಎಸ್ ಅಧಿಕಾರಿಗಳ ಕಿತ್ತಾಟದ ಬಗ್ಗೆ ತನಿಖೆ ಆಗಬೇಕು: ಸಿದ್ದರಾಮಯ್ಯ

    ಮಾನ, ಮರ್ಯಾದೆ ಇರುವ ಎಂಪಿ ಹೀಗೆ ಮಾಡಲ್ಲ, ಐಎಎಸ್ ಅಧಿಕಾರಿಗಳ ಕಿತ್ತಾಟದ ಬಗ್ಗೆ ತನಿಖೆ ಆಗಬೇಕು: ಸಿದ್ದರಾಮಯ್ಯ

    – ಪ್ರತಾಪ್ ಸಿಂಹ ಮೊದಲು ರೋಹಿಣಿ ಸಿಂಧೂರಿಗೆ, ಬಳಿಕ ಶಿಲ್ಪಾ ನಾಗ್ ಅವರಗೆ ಸಪೋರ್ಟ್ ಮಾಡಿದರು

    ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಕಿತ್ತಾಟದ ಬಗ್ಗೆ ತನಿಖೆ ನಡೆಯಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು.

    ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಒಬ್ಬ ಎಂಪಿಯಾಗಿ ಅಧಿಕಾರಿಗಳ ಬೆಂಬಲಿಸೋದು ಅಥವಾ ವಿರೋಧಿಸೋದು ಸರಿಯಾ? ಅವರದೇ ಸರ್ಕಾರ ಇದೆ. ಅಲ್ಲದೆ ಅವರು ಎಂಪಿ, ಮಾನ ಮರ್ಯಾದೆ ಇರೋರು ಹೀಗೆಲ್ಲ ಮಾಡಲ್ಲ, ಮೈಸೂರು ಜಿಲ್ಲೆಯಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳು ಕಿತ್ತಾಡಿಕೊಂಡಿದ್ದಾರೆ. ಈ ಕಿತ್ತಾಟಕ್ಕೆ ಬಿಜೆಪಿಯ ಚುನಾಯಿತ ಪ್ರತಿನಿಧಿಗಳು ಹಾಗೂ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಕಾರಣ ಎಂದು ಆರೋಪಿಸಿದರು. ಇದನ್ನೂ ಓದಿ: ರೋಹಿಣಿ ಸಿಂಧೂರಿ, ಶಿಲ್ಪಾ ನಾಗ್ ಇಬ್ಬರೂ ವರ್ಗಾವಣೆ- ಸರ್ಕಾರದಿಂದ ಆದೇಶ

    ಅದೆಂತದೋ ಸಿಂಹ, ಎಂಥಾ ಸಿಂಹ.. ಪ್ರತಾಪ ಸಿಂಹ ಮೊದಲು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿಗೆ ಸಪೋರ್ಟ್ ಮಾಡುತ್ತಿದ್ದರು, ಆಮೇಲೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪಾನಾಗ್‍ಗೆ ಸಪೋರ್ಟ್ ಮಾಡೋಕೆ ಶುರು ಮಾಡಿದರು. ಬಿಜೆಪಿ ಜನಪ್ರತಿನಿಧಿಗಳಿಂದಲೇ ಈ ಗಲಾಟೆ ನಡೆಯಿತು ಎಂದು ದೂರಿದರು. ಇದನ್ನೂ ಓದಿ: ಮಗಳು ತವರು ಮನೆ ಬಿಟ್ಟು ಹೋಗುವಂತೆ ಹೋಗ್ತಿದ್ದೇನೆ – ರೋಹಿಣಿ ಸಿಂಧೂರಿ

    ಐಎಎಸ್ ಅಧಿಕಾರಿಗಳಿಗೆ ಸುದ್ದಿಗೋಷ್ಠಿ ಮಾಡಲು ಅಧಿಕಾರ ಕೊಟ್ಟವರು ಯಾರು? ರೋಹಿಣಿ ಸಿಂಧೂರಿ ಜಮೀನು ಒತ್ತುವರಿ ತಡೆಯೋಕೆ ಹೋಗಿದ್ದಕ್ಕೆ ಹೀಗಾಯ್ತು ಅಂದಿದ್ದಾರೆ. ಇದರ ಬಗ್ಗೆ ತನಿಖೆ ಆಗಬೇಕು. ಬಿಜೆಪಿ ಜನಪ್ರತಿನಿಧಿಗಳಿಗೆ ರೋಹಿಣಿ ಸಿಂಧೂರಿ ತಗೆಯಬೇಕು, ಶಿಲ್ಪಾ ನಾಗ್ ಅವರಿಗೆ ಡಿಸಿ ಸ್ಥಾನ ಕೊಡಿಸಬೇಕು ಅನ್ನೋದಿತ್ತು. ಅಧಿಕಾರಿಗಳನ್ನು ಹೊಗಳುವುದು, ತೆಗಳುವುದು ಜನಪ್ರತಿನಿಧಿಗಳ ಕೆಲಸವಲ್ಲ. ಜನರ ಕೆಲಸ ಮಾಡುವುದು ಜನ ಪ್ರತಿನಿಧಿಗಳ ಕೆಲಸ. ಎಲ್ಲಾ ಬೆಳವಣಿಗೆಗಳ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: CSR ಫಂಡ್ ಲೆಕ್ಕ ನೀಡಿಲ್ಲ, ಕೋವಿಡ್ ಕೇರ್ ಸೆಂಟರ್ ತೆರೆದಿಲ್ಲ- ಶಿಲ್ಪಾ ನಾಗ್ ವಿರುದ್ಧ ಡಿಸಿ ರೋಹಿಣಿ ಸಿಂಧೂರಿ ಪ್ರತ್ಯಾರೋಪ

  • ಶಿಲ್ಪಾ ನಾಗ್ ಒಳ್ಳೆಯ ಐಎಎಸ್ ಅಧಿಕಾರಿ- ಮೈಸೂರು ಪಾಲಿಕೆ ಆಯುಕ್ತೆ ಪರ ಈಶ್ವರಪ್ಪ ಬ್ಯಾಟ್

    ಶಿಲ್ಪಾ ನಾಗ್ ಒಳ್ಳೆಯ ಐಎಎಸ್ ಅಧಿಕಾರಿ- ಮೈಸೂರು ಪಾಲಿಕೆ ಆಯುಕ್ತೆ ಪರ ಈಶ್ವರಪ್ಪ ಬ್ಯಾಟ್

    ಶಿವಮೊಗ್ಗ: ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಒಳ್ಳೆಯ ಐಎಎಸ್ ಅಧಿಕಾರಿ ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಪರ ಬ್ಯಾಟ್ ಬೀಸಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರಿನ ಡಿಸಿ ಹಾಗೂ ಕಮೀಷನರ್ ನಡುವೆ ಗೊಂದಲವಿದೆ. ಇಬ್ಬರ ನಡುವಿನ ಗೊಂದಲ ಬಹಿರಂಗವಾಗಿರುವುದನ್ನು ನಮ್ಮ ಸರ್ಕಾರ ಸಹಿಸಲ್ಲ. ಈ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಸಿಎಂ ಜೊತೆ ಚರ್ಚೆ ನಡೆಸಿ ಮುಂದಿನ ಕ್ರಮ ಜರುಗಿಸುತ್ತೇವೆ. ಕ್ಯಾಬಿನೆಟ್ ಸಭೆ ಯಾವಾಗ ನಡೆಯುತ್ತದೆ ಎಂಬ ಬಗ್ಗೆ ಇನ್ನು ಮಾಹಿತಿ ಇಲ್ಲ. ಕ್ಯಾಬಿನೆಟ್ ಸಭೆ ನಡೆಯುವ ಮೊದಲು ಇವರಿಬ್ಬರ ನಡುವಿನ ಸಮಸ್ಯೆ ಪರಿಹಾರ ಆಗದೆ ಹೋದಲ್ಲಿ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಯಾವುದೇ ಅಧಿಕಾರಿಗಳು ಬಹಿರಂಗವಾಗಿ ಹೇಳಿಕೆ ನೀಡುವುದು ಸರಿಯಲ್ಲ ಎಂದರು. ಇದನ್ನೂ ಓದಿ: 12 ಕೋಟಿ ಸಿಎಸ್‍ಆರ್ ಫಂಡ್ ಖರ್ಚಿನ ಮಾಹಿತಿ ಕೇಳಿದ್ದೆ ಅಷ್ಟೇ – ರೋಹಿಣಿ ಸಿಂಧೂರಿ

    ರೋಹಿಣಿ ಸಿಂಧೂರಿ ಅವರು ನಮ್ಮ ಇಲಾಖೆಯಲ್ಲಿ ಕೆಲಸ ಮಾಡಿಲ್ಲ ಹೀಗಾಗಿ ಅವರ ಬಗ್ಗೆ ನನಗೆ ಗೊತ್ತಿಲ್ಲ. ಶಿಲ್ಪಾ ನಾಗ್ ಮೊನ್ನೆಯವರೆಗೂ ನಮ್ಮ ಇಲಾಖೆಯಲ್ಲಿ ಕೆಲಸ ಮಾಡಿದ್ದಾರೆ. ಇಲಾಖೆಯಲ್ಲಿ ಇರುವಷ್ಟು ದಿನ ಶಿಲ್ಪಾ ನಾಗ್ ಒಳ್ಳೆಯ ಕೆಲಸ ಮಾಡಿದ್ದಾರೆ. ಆದರೆ ಈ ಘಟನೆ ಹೇಗೆ ನಡೆಯಿತು ಎಂದು ನನಗೆ ಗೂತ್ತಿಲ್ಲ. ಈ ರೀತಿ ಬಹಿರಂಗವಾಗಿ ಸುದ್ದಿಗೋಷ್ಠಿ ನಡೆಸುವಷ್ಟು ಯಾಕೆ ಅತಿರೇಕಕ್ಕೆ ಹೋಯ್ತು ಅಂತಾನು ಗೂತ್ತಿಲ್ಲ. ಈ ಕುರಿತು ಮುಖ್ಯ ಕಾರ್ಯದರ್ಶಿಯವರು ಮೈಸೂರಿಗೆ ಭೇಟಿ ನೀಡಿ ಇಬ್ಬರ ಜೊತೆ ಚರ್ಚೆ ನಡೆಸಿದ್ದಾರೆ. ಅವರು ಏನು ವರದಿ ನೀಡುತ್ತಾರೆ, ಸಿಎಂ ಕ್ರಮ ತೆಗೆದುಕೊಳ್ಳುತ್ತಾರೋ ಅಥವಾ ಸಚಿವ ಸಂಪುಟದಲ್ಲಿ ಚರ್ಚಿಸಿ ಕ್ರಮ ತೆಗೆದುಕೊಳ್ಳುತ್ತಾರೋ ನೋಡಬೇಕು ಎಂದರು.

    ಡಿಸಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಎಂಪಿ ಸೇರಿದಂತೆ ಎಲ್ಲ ಪಕ್ಷದ ಶಾಸಕರು ಸ್ಥಳೀಯ ಜನಪ್ರತಿನಿಧಿಗಳು ಸಹ ಆರೋಪ ಮಾಡಿದ್ದಾರೆ. ಡಿಸಿ ಬಗ್ಗೆ ನನಗೆ ಗೂತ್ತಿಲ್ಲ, ಆದರೆ ಶಿಲ್ಪಾ ನಾಗ್ ಬಗ್ಗೆ ನನಗೆ ಗೊತ್ತು. ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ನನ್ನ ಸಹಮತವಿದೆ ಎಂದರು.

  • ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಸಾಧ್ಯತೆ

    ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಸಾಧ್ಯತೆ

    ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯ ಸಾಧ್ಯತೆಗಳಿದ್ದು, ಇಂದು ಸಂಜೆಯೇ ಈ ಕುರಿತು ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಗಳು ದಟ್ಟವಾಗಿವೆ.

    ಶುಕ್ರವಾರ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು ಇಬ್ಬರು ಐಎಎಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಸಭೆಯ ವರದಿಯನ್ನು ಮುಖ್ಯಮಂತ್ರಿಗಳಿಗೆ ರವಿಕುಮಾರ್ ಸಲ್ಲಿಕೆ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದಲ್ಲಿ ಈಜುಕೊಳ ನಿರ್ಮಾಣ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ರೋಹಿಣಿ ಸಿಂಧೂರಿ ವರ್ಗಾವಣೆ ಸಾಧ್ಯತೆಗಳಿವೆ.

    ಮೈಸೂರು ಡಿಸಿ ಸಿಂಧೂರಿ ಕಾರ್ಯವೈಖರಿ ವಿರುದ್ಧ ಸಿಡಿದೆದ್ದಿರುವ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ರು. ಸರ್ಕಾರ ಶಿಲ್ಪಾ ನಾಗ್ ಅವರ ಮನವೊಲಿಕೆಗೆ ಯತ್ನಿಸುತ್ತಿರುವ ಸಂದರ್ಭದಲ್ಲಿ ಹೊಸ ಬೆಳವಣಿಗೆ ಸಂಚಲನಕ್ಕೆ ಕಾರಣವಾಗಿದೆ. ಡಿಸಿ ವರ್ಗಾವಣೆಗೆ ಆಗ್ರಹಿಸಿ ಪಾಲಿಕೆ ಸದಸ್ಯರು ಪ್ರತಿಭಟನೆ ನಡೆಸ್ತಿದ್ದ ಸ್ಥಳಕ್ಕೆ ತೆರಳಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ನನಗೆ ಎರಡು ದಿನ ಸಮಯ ಕೊಡಿ. ಅಷ್ಟರಳೊಗೆ ಸಮಸ್ಯೆ ಬಗೆಹರಿಯದೆ ಇದ್ದರೆ ನನ್ನ ತೀರ್ಮಾನ ಹೇಳುತ್ತೇನೆ. ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿಸಲು ಆಗದ ಮೇಲೆ ನನಗೇಕೆ ಬೇಕು ಉಸ್ತುವಾರಿ ಸ್ಥಾನ ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ:  ಮೈಸೂರು ಡಿಸಿ ವರ್ಸಸ್ ಪಾಲಿಕೆ ಆಯುಕ್ತೆ – ಸುತ್ತೂರು ಶ್ರೀಗಳ ಮನವೊಲಿಕೆ ಯಶಸ್ವಿ!?

    ಸಚಿವ ಎಸ್‍ಟಿ ಸೋಮಶೇಖರ್ ಅವರ ಈ ಮಾತುಗಳು ದೊಡ್ಡ ಸಂಚಲನಕ್ಕೆ ಕಾರಣವಾಗಿದೆ. ಡಿಸಿ ವರ್ಗಾವಣೆ ಆಗದೆ ಇದ್ದರೆ ಎಸ್.ಟಿ. ಸೋಮಶೇಖರ್ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ರೋಹಿಣಿ ಸಿಂಧೂರಿ ಮೈಸೂರು ಡಿಸಿಯಾಗಿಯೇ ಮುಂದವರಿದಲ್ಲಿ ಮೈಸೂರು ಉಸ್ತುವಾರಿ ಸಚಿವ ಸ್ಥಾನ ತ್ಯಜೀಸೋಕೆ ಎಸ್.ಟಿ.ಸೋಮಶೇಖರ್ ಮುಂದಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದೇ ವೇಳೆ ಆಯುಕ್ತೆ ಶಿಲ್ಪಾ ನಾಗ್ ಬೆಂಬಲಕ್ಕೆ ಎಸ್‍ಟಿ ಸೋಮಶೇಖರ್ ಗಟ್ಟಿಯಾಗಿ ನಿಂತಿದ್ದಾರೆ. ಇದನ್ನೂ ಓದಿ: ಶಿಲ್ಪಾ ನಾಗ್ ರಾಜೀನಾಮೆ ಬೆನ್ನಲ್ಲೇ ಹೊಸ ಟೆನ್ಶನ್ -ಕಠಿಣ ನಿರ್ಧಾರಕ್ಕೆ ಬಂದ್ರಾ ಜಿಲ್ಲಾ ಉಸ್ತುವಾರಿ ಸಚಿವ?

  • ಮೈಸೂರು ಡಿಸಿ ವರ್ಸಸ್ ಪಾಲಿಕೆ ಆಯುಕ್ತೆ – ಸುತ್ತೂರು ಶ್ರೀಗಳ ಮನವೊಲಿಕೆ ಯಶಸ್ವಿ!?

    ಮೈಸೂರು ಡಿಸಿ ವರ್ಸಸ್ ಪಾಲಿಕೆ ಆಯುಕ್ತೆ – ಸುತ್ತೂರು ಶ್ರೀಗಳ ಮನವೊಲಿಕೆ ಯಶಸ್ವಿ!?

    ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಿಡಿದೆದ್ದು ಗುರುವಾರ ಸಂಜೆ ದಿಢೀರ್ ಸುದ್ದಿಗೋಷ್ಠಿ ನಡೆಸಿದ್ದ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಸಂಚಲನ ಸೃಷ್ಟಿಸಿದ್ದರು. ರಾಜೀನಾಮೆ ಘೋಷಣೆಯನ್ನು ಮಾಡಿದ್ದ ಆಯುಕ್ತೆ ಸರ್ಕಾರಿ ವಾಹನ ಬಿಟ್ಟು ಅಜ್ಞಾತ ಸ್ಥಳಕ್ಕೆ ತೆರಳಿದ್ದರು, ಶುಕ್ರವಾರ ಬೆಳಗ್ಗೆ ನಡೆದ ಸರ್ಕಾರಿ ಕಾರ್ಯಕ್ರಮದಲ್ಲೂ ಭಾಗಿಯಾಗಿರಲಿಲ್ಲ. ಆದರೆ ಮಧ್ಯಾಹ್ನದ ವೇಳೆಗೆ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡರು.

    ಈ ಸಂದರ್ಭದಲ್ಲಿ ಸುತ್ತೂರು ಶ್ರೀಗಳು, ಸಚಿವ ಎಸ್.ಟಿ. ಸೋಮಶೇಖರ್, ಶಾಸಕರಾದ ಜಿ.ಟಿ. ದೇವೇಗೌಡ ಮತ್ತು ತನ್ವೀರ್ ಸೇಠ್ ಸಮ್ಮುಖದಲ್ಲಿ ಶಿಲ್ಪನಾಗ್‍ರನ್ನು ಕೂರಿಸಿಕೊಂಡು ಪ್ರತ್ಯೇಕ ಸಭೆ ನಡೆಸಿದರು. ಏನಮ್ಮ ಸಮಸ್ಯೆ ಎಂದು ಶ್ರೀಗಳು ಕೇಳಿದಾಗ, ಇಡೀ ವೃತ್ತಾಂತವನ್ನು ಶಿಲ್ಪಾ ನಾಗ್ ಎಳೆಎಳೆಯಾಗಿ ಬಿಡಿಸಿಟ್ಟಿದ್ದಾರೆ. ರೋಹಿಣಿ ಸಿಂಧೂರಿ ವಿನಾ ಕಾರಣ ನಮ್ಮನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ದಿನಕ್ಕೊಂದು ರಿಪೋರ್ಟ್ ಕೇಳುತ್ತಾರೆ. ಅಧಿಕಾರಿಗಳಲ್ಲಿ ಭಯ ಮೂಡಿಸ್ತಿದ್ದಾರೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ.

    ಕೋವಿಡ್ ನಿಯಂತ್ರಣ ವಿಚಾರದಲ್ಲಿ ಜಿಲ್ಲಾಡಳಿತದಲ್ಲಿ ಸಾಕಷ್ಟು ಲೋಪ ಇತ್ತು. ಸಿಎಸ್‍ಆರ್ ಫಂಡ್ ಬಗ್ಗೆ ಯಾರು ಜವಾಬ್ದಾರಿ ತೆಗೆದುಕೊಂಡಿರಲಿಲ್ಲ. ಹೀಗಾಗಿ ನಾನೇ ಇದರ ಜವಾಬ್ದಾರಿ ತೆಗೆದುಕೊಂಡೆ ಅಷ್ಟೇ. ನನಗೆ ಈಗೋ ಇಲ್ಲ, ಕೆಲಸ ಮಾಡುವುದಷ್ಟೇ ನನ್ನ ಉದ್ದೇಶ ಆಗಿತ್ತು. ಯಾರಿಗೂ ಈಗೋ ಇಷ್ಟು ದೊಡ್ಡದಾಗಿ ಇರಬಾರದು. ಎಲ್ಲವನ್ನು ಎಲ್ಲರನ್ನು ಸಮನಾಗಿ ನೋಡಬೇಕು. ಆದರೆ ಒಬ್ಬ ಅಧಿಕಾರಿಯ ಅಹಂನಿಂದ ಇಷ್ಟೆಲ್ಲ ಆಗ್ತಿದೆ. ರಾಜೀನಾಮೆ ನನ್ನ ದುಡುಕಿನ ನಿರ್ಧಾರ ಅಲ್ಲ ಎಂದು ಶಿಲ್ಪಾ ನಾಗ್ ಸ್ಪಷ್ಟನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಶಿಲ್ಪಾ ನಾಗ್ ರಾಜೀನಾಮೆ ಬೆನ್ನಲ್ಲೇ ಹೊಸ ಟೆನ್ಶನ್ -ಕಠಿಣ ನಿರ್ಧಾರಕ್ಕೆ ಬಂದ್ರಾ ಜಿಲ್ಲಾ ಉಸ್ತುವಾರಿ ಸಚಿವ?

    ರಾಜೀನಾಮೆ ವಾಪಸ್ ಪಡೆಯಿರಿ, ನೀವು ದುಡುಕಬಾರದು. ನೀವು ಒಳ್ಳೆಯ ಕೆಲಸ ಮಾಡುತ್ತಿದ್ದೀರಿ. ಮೊದಲು ನೀವು ನಿಮ್ಮ ಸ್ಥಾನಕ್ಕೆ ನೀಡಿರುವ ರಾಜೀನಾಮೆ ವಾಪಾಸ್ ಪಡೆಯಿರಿ. ನಿಮ್ಮ ಸೇವೆ ಮೈಸೂರಿಗೆ, ರಾಜ್ಯಕ್ಕೆ ಬೇಕಿದೆ ಎಂದು ಸುತ್ತೂರು ಶ್ರೀಗಳು ಶಿಲ್ಪಾ ನಾಗ್ ಅವರಿಗೆ ಹಿತವಚನ ನೀಡಿದ್ದಾರೆ ಎನ್ನಲಾಗಿದೆ. ಸುತ್ತೂರು ಸ್ವಾಮೀಜಿಗಳ ಈ ಮಾತಿಗೆ ಧ್ವನಿಗೂಡಿಸಿದ ಸಚಿವ ಎಸ್.ಟಿ. ಸೋಮಶೇಖರ್, ನಾವು ರಾಜೀನಾಮೆ ಅಂಗೀಕಾರಕ್ಕೆ ಬಿಡಲ್ಲ. ನಿಮ್ಮ ಮನಸ್ಸಿನ ನೋವು ನಮಗೆ ಅರ್ಥವಾಗಿದೆ. ನೀವು ಸ್ವಾಮೀಜಿ ಅವರು ಹೇಳಿದಂತೆ ರಾಜೀನಾಮೆ ವಾಪಾಸ್ ಪಡೆದು ಕೆಲಸಕ್ಕೆ ಹಾಜರಾಗಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಅಧಿಕಾರಿಗಳ ಮಧ್ಯೆ ಸಂಘರ್ಷ – ಎಲ್ಲವನ್ನೂ ಚಾಮುಂಡಿ ತಾಯಿ ನೋಡುತ್ತಿದ್ದಾಳೆ ಎಂದ ಎಸ್‍ಟಿಎಸ್

    ಎಲ್ಲರ ಮಾತು ಕೇಳಿದ ಬಳಿಕ ಪ್ರತಿಕ್ರಿಯಿಸಿದ ಪಾಲಿಕೆ ಆಯುಕ್ತೆ ಶಿಲ್ಪಾನಾಗ್, ಸ್ವಾಮೀಜಿಗಳ ಆದೇಶ ಮೀರುವಷ್ಟು ದೊಡ್ಡವಳಲ್ಲ ನಾನು. ಆದರೆ ನನಗೆ ಮಾನಸಿಕವಾಗಿ ತುಂಬಾ ನೋವಾಗಿದೆ. ಬಹಳ ನೊಂದು ನೊಂದು ಈ ತೀರ್ಮಾನಕ್ಕೆ ಬಂದಿದ್ದೇನೆ. ದಿಢೀರನೆ ತೀರ್ಮಾನ ಬದಲಾಯಿಸುವ ಸ್ಥಿತಿಯಲ್ಲಿ ಇಲ್ಲ. ನನಗೆ ಸ್ವಲ್ಪ ಸಮಯ ಕೊಡಿ. ಮನಸ್ಸು ತಿಳಿಯಾದ ಮೇಲೆ ನಿರ್ಧಾರ ಮರುಪರಿಶೀಲಿಸುವ ಬಗ್ಗೆ ಯೋಚನೆ ಮಾಡುತ್ತೇನೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: 12 ಕೋಟಿ ಸಿಎಸ್‍ಆರ್ ಫಂಡ್ ಖರ್ಚಿನ ಮಾಹಿತಿ ಕೇಳಿದ್ದೆ ಅಷ್ಟೇ – ರೋಹಿಣಿ ಸಿಂಧೂರಿ

    ರಾಜೀನಾಮೆ ವಾಪಾಸ್ ಪಡೆಯುವ ವಿಚಾರದಲ್ಲಿ ಶಿಲ್ಪನಾಗ್ ಒಂದು ಹೆಜ್ಜೆ ಮುಂದೆ ಬಂದಿರುವುದು ಸ್ಪಷ್ಟ. ಸ್ವಾಮೀಜಿಗಳ ಮಾತು, ಸಚಿವರು ಮತ್ತು ಹಿರಿಯ ಶಾಸಕರ ಮಾತಿಗೆ ಶಿಲ್ಪನಾಗ್ ಬೆಲೆ ಕೊಟ್ಟು ರಾಜೀನಾಮೆ ವಾಪಾಸ್ ಪಡೆಯುವ ಬಗ್ಗೆ ಯೋಚನೆ ಆರಂಭಿಸಿದ್ದಾರೆ. ಈ ಮಟ್ಟಿಗೆ ಈ ಸಭೆ ಫಲ ಕೊಟ್ಟಂತೆ ಆಗಿದೆ. ಇದನ್ನೂ ಓದಿ: ರೋಹಿಣಿ ಸಿಂಧೂರಿ ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ: ರಾಜೀನಾಮೆ ನೀಡಿ ಕಣ್ಣೀರಿಟ್ಟ ಶಿಲ್ಪಾನಾಗ್

  • ಶಿಲ್ಪಾ ನಾಗ್ ರಾಜೀನಾಮೆ ಬೆನ್ನಲ್ಲೇ ಹೊಸ ಟೆನ್ಶನ್ -ಕಠಿಣ ನಿರ್ಧಾರಕ್ಕೆ ಬಂದ್ರಾ ಜಿಲ್ಲಾ ಉಸ್ತುವಾರಿ ಸಚಿವ?

    ಶಿಲ್ಪಾ ನಾಗ್ ರಾಜೀನಾಮೆ ಬೆನ್ನಲ್ಲೇ ಹೊಸ ಟೆನ್ಶನ್ -ಕಠಿಣ ನಿರ್ಧಾರಕ್ಕೆ ಬಂದ್ರಾ ಜಿಲ್ಲಾ ಉಸ್ತುವಾರಿ ಸಚಿವ?

    ಮೈಸೂರು: ಐಎಎಸ್ ವರ್ಸಸ್ ಐಎಎಸ್ ಕದನಕ್ಕೆ ಸೋಮವಾರ ಮೆಗಾ ಟಿಸ್ವ್ ಸಿಗುತ್ತಾ? ಸೋಮವಾರದ ಒಳಗೆ ಜಿಲ್ಲಾಧಿಕಾರಿ ವರ್ಗವಾಗದೆ ಇದ್ದರೆ ರಾಜ್ಯ ಸರ್ಕಾರಕ್ಕೆ ಅತಿ ದೊಡ್ಡ ತಲೆ ನೋವು ಶುರುವಾಗುತ್ತಾ? ಇಂತಹ ಪ್ರಶ್ನೆ ಹುಟ್ಟಿಕೊಂಡಿವೆ. ಇದಕ್ಕೆ ಕಾರಣ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ನೀಡಿದ ಹೇಳಿಕೆ.

    ಮೈಸೂರಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ಕಿತ್ತಾಟ ತಾರಕಕ್ಕೇರಿದ್ದು, ಸರ್ಕಾರಕ್ಕೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಮೈಸೂರು ಡಿಸಿ ತಕ್ಷಣವೇ ವರ್ಗಾವಣೆ ಆಗಬೇಕೆಂದು ನಗರ ಪಾಲಿಕೆ ಸದಸ್ಯರು ಪಟ್ಟುಹಿಡಿದಿದ್ದಾರೆ. ಒಂದು ವೇಳೆ ಡಿಸಿ ರೋಹಿಣಿ ಸಿಂಧೂರಿ ಸೋಮವಾರದೊಳಗೆ ವರ್ಗಾವಣೆ ಆಗದಿದ್ರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಎಂಬ ಪ್ರಶ್ನೆ ಹುಟ್ಟಿದೆ.

    ಮೈಸೂರು ಡಿಸಿ ಸಿಂಧೂರಿ ಕಾರ್ಯವೈಖರಿ ವಿರುದ್ಧ ಸಿಡಿದೆದ್ದಿರುವ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ರು. ಸರ್ಕಾರ ಶಿಲ್ಪಾ ನಾಗ್ ಅವರ ಮನವೊಲಿಕೆಗೆ ಯತ್ನಿಸುತ್ತಿರುವ ಸಂದರ್ಭದಲ್ಲಿ ಹೊಸ ಬೆಳವಣಿಗೆ ಸಂಚಲನಕ್ಕೆ ಕಾರಣವಾಗಿದೆ. ಡಿಸಿ ವರ್ಗಾವಣೆಗೆ ಆಗ್ರಹಿಸಿ ಪಾಲಿಕೆ ಸದಸ್ಯರು ಪ್ರತಿಭಟನೆ ನಡೆಸ್ತಿದ್ದ ಸ್ಥಳಕ್ಕೆ ತೆರಳಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ನನಗೆ ಎರಡು ದಿನ ಸಮಯ ಕೊಡಿ. ಅಷ್ಟರಳೊಗೆ ಸಮಸ್ಯೆ ಬಗೆಹರಿಯದೆ ಇದ್ದರೆ ನನ್ನ ತೀರ್ಮಾನ ಹೇಳುತ್ತೇನೆ. ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿಸಲು ಆಗದ ಮೇಲೆ ನನಗೇಕೆ ಬೇಕು ಉಸ್ತುವಾರಿ ಸ್ಥಾನ ಎಂದು ಪ್ರಶ್ನೆ ಮಾಡಿದ್ದಾರೆ.

    ಸಚಿವ ಎಸ್‍ಟಿ ಸೋಮಶೇಖರ್ ಅವರ ಈ ಮಾತುಗಳು ದೊಡ್ಡ ಸಂಚಲನಕ್ಕೆ ಕಾರಣವಾಗಿದೆ. ಡಿಸಿ ವರ್ಗಾವಣೆ ಆಗದೆ ಇದ್ದರೆ ಎಸ್.ಟಿ. ಸೋಮಶೇಖರ್ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ರೋಹಿಣಿ ಸಿಂಧೂರಿ ಮೈಸೂರು ಡಿಸಿಯಾಗಿಯೇ ಮುಂದವರಿದಲ್ಲಿ ಮೈಸೂರು ಉಸ್ತುವಾರಿ ಸಚಿವ ಸ್ಥಾನ ತ್ಯಜೀಸೋಕೆ ಎಸ್.ಟಿ.ಸೋಮಶೇಖರ್ ಮುಂದಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದೇ ವೇಳೆ ಆಯುಕ್ತೆ ಶಿಲ್ಪಾ ನಾಗ್ ಬೆಂಬಲಕ್ಕೆ ಎಸ್‍ಟಿ ಸೋಮಶೇಖರ್ ಗಟ್ಟಿಯಾಗಿ ನಿಂತಿದ್ದಾರೆ. ಇದನ್ನೂ ಓದಿ:ಮೇಡಂ ರಾಜೀನಾಮೆ ನೀಡಬೇಡಿ ಎಂದು ಶಿಲ್ಪಾ ನಾಗ್ ಕಾಲು ಹಿಡಿದ ಭದ್ರತಾ ಸಿಬ್ಬಂದಿ

    ಮೈಸೂರು ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ಅಂಗೀಕರಿಸುವುದಿಲ್ಲ. ಅವರ ಸೇವೆ ಮೈಸೂರು ನಗರಕ್ಕೆ ಅಗತ್ಯವಾಗಿದೆ. ಅವರು ಸಮರ್ಥ ಅಧಿಕಾರಿ ಅವರ ಮನವೊಲಿಸಿ ರಾಜೀನಾಮೆ ಹಿಂಪಡೆಯುವಂತೆ ಮನವಿ ಮಾಡ್ತೇನೆ ಅಂತ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಇದನ್ನೂ ಓದಿ: ಅಧಿಕಾರಿಗಳ ಮಧ್ಯೆ ಸಂಘರ್ಷ – ಎಲ್ಲವನ್ನೂ ಚಾಮುಂಡಿ ತಾಯಿ ನೋಡುತ್ತಿದ್ದಾಳೆ ಎಂದ ಎಸ್‍ಟಿಎಸ್

    ಸೋಮವಾರ ಹೈಕೋರ್ಟ್ ನಲ್ಲಿ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿ ನೇಮಕ ಪ್ರಶ್ನಿಸಿ ದಾಖಲಾದ ಅರ್ಜಿಯ ಅಂತಿಮ ವಿಚಾರಣೆ ಇದೆ. ಕೋರ್ಟ್ ಒಂದು ವೇಳೆ ರೋಹಿಣಿ ಸಿಂಧೂರಿ ವಿರುದ್ದದ ಅರ್ಜಿಯನ್ನು ಎತ್ತಿ ಹಿಡಿದರೆ ಎಲ್ಲಾ ಸಮಸ್ಯೆಗೂ ಒಂದೇ ಕ್ಷಣದಲ್ಲಿ ಪರಿಹಾರ ಸಿಗುತ್ತೆ. ಅರ್ಜಿಯ ತೀರ್ಪು ರೋಹಿಣಿ ಸಿಂಧೂರಿ ಪರವಾಗಿದ್ರೆ ಮತ್ತೊಂದು ಡ್ರಾಮಾ ಶುರುವಾಗುತ್ತೆ. ಇದನ್ನೂ ಓದಿ: 12 ಕೋಟಿ ಸಿಎಸ್‍ಆರ್ ಫಂಡ್ ಖರ್ಚಿನ ಮಾಹಿತಿ ಕೇಳಿದ್ದೆ ಅಷ್ಟೇ – ರೋಹಿಣಿ ಸಿಂಧೂರಿ

    ಈ ಎಲ್ಲಾ ಲೆಕ್ಕಾಚಾರದ ಮೇಲೆಯೆ ಸಚಿವ ಎಸ್.ಟಿ. ಸೋಮಶೇಖರ್ ತಮ್ಮದೆ ಸರ್ಕಾರದ ಮೇಲೆ ಒತ್ತಡದ ಹೇರುವ ತಂತ್ರವನ್ನು ಅನುಸರಿಸುತ್ತಿದ್ದಾರೆ. ಇದು ಐಎಎಸ್ ವರ್ಸಸ್ ಐಎಎಸ್ ಕದನಕ್ಕಿಂತ ಜಿಲ್ಲಾ ಉಸ್ತುವಾರಿ ಸ್ಥಾನವನ್ನು ಸೋಮಶೇಖರ್ ತ್ಯಜಿಸುವ ವಿಚಾರ ದೊಡ್ಡ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಬಹುದು. ಎಸ್‍ಟಿ ಸೋಮಶೇಖರ್ ಬಳಗ ಹೇರುತ್ತಿರುವ ಒತ್ತಡಕ್ಕೆ ಸಿಎಂ ಯಡಿಯೂರಪ್ಪ ತಲೆ ಬಾಗ್ತಾರಾ..? ರೋಹಿಣಿ ಸಿಂಧೂರಿಯನ್ನು ವರ್ಗಾ ಮಾಡ್ತಾರಾ ಕಾದು ನೋಡಬೇಕು. ಇದನ್ನೂ ಓದಿ: ರೋಹಿಣಿ ಸಿಂಧೂರಿ ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ: ರಾಜೀನಾಮೆ ನೀಡಿ ಕಣ್ಣೀರಿಟ್ಟ ಶಿಲ್ಪಾನಾಗ್

  • ಮೈಸೂರು ಡಿಸಿ, ಪಾಲಿಕೆ ಆಯುಕ್ತೆ ಜಟಾಪಟಿ ಪ್ರಕರಣ-ಕ್ರಮ ಕೈಗೊಳ್ಳುವುದಾಗಿ ಬಿಎಸ್‍ವೈ ಭರವಸೆ

    ಮೈಸೂರು ಡಿಸಿ, ಪಾಲಿಕೆ ಆಯುಕ್ತೆ ಜಟಾಪಟಿ ಪ್ರಕರಣ-ಕ್ರಮ ಕೈಗೊಳ್ಳುವುದಾಗಿ ಬಿಎಸ್‍ವೈ ಭರವಸೆ

    ಹುಬ್ಬಳ್ಳಿ: ಮೈಸೂರು ಡಿಸಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಮಧ್ಯೆ ಗೊಂದಲ ಇರೋದು ನಿಜ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿ ಧಾರವಾಡ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಮೈಸೂರಿನಲ್ಲಿ ಅಧಿಕಾರಿಗಳ ಮಧ್ಯೆ ಗೊಂದಲ ಇರುವುದು ನಿಜ. ಆ ಬಗ್ಗೆ ನಾನು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ. ಇದನ್ನು ಓದಿ: ಗಂಡನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಐಪಿಎಸ್ ಅಧಿಕಾರಿ

    ಮೈಸೂರು ಡಿಸಿ ದರ್ಪದ ವಿರುದ್ಧ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಆರೋಪಗಳ ಸುರಿಮಳೆಗೈದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಪಾಲಿಕೆ ಆಯುಕ್ತೆ ರಾಜೀನಾಮೆ ನಂತರ ಸಾಕಷ್ಟು ಗೊಂದಲ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಇದೀಗ ಸಿಎಂ ಬಿಎಸ್‍ವೈ ಖುದ್ದು ಈ ಪ್ರಕರಣದ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ. ಇದನ್ನು ಓದಿ:ಸುರೇಶ್ ಕುಮಾರ್ ಆತ್ಮವಂಚನೆ ಮಾಡಿಕೊಂಡು ಪಿಯುಸಿ ಪರೀಕ್ಷೆ ರದ್ದು ಮಾಡಿದ್ದಾರೆ – ಅಮರೇಗೌಡ

    ಹುಬ್ಬಳ್ಳಿಯಿಂದ ಬೆಂಗಳೂರಿಗೆ ಮರಳಿದ ತಕ್ಷಣವೇ ಎಲ್ಲ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

  • CSR ಫಂಡ್ ಲೆಕ್ಕ ನೀಡಿಲ್ಲ, ಕೋವಿಡ್ ಕೇರ್ ಸೆಂಟರ್ ತೆರೆದಿಲ್ಲ- ಶಿಲ್ಪಾ ನಾಗ್ ವಿರುದ್ಧ ಡಿಸಿ ರೋಹಿಣಿ ಸಿಂಧೂರಿ ಪ್ರತ್ಯಾರೋಪ

    CSR ಫಂಡ್ ಲೆಕ್ಕ ನೀಡಿಲ್ಲ, ಕೋವಿಡ್ ಕೇರ್ ಸೆಂಟರ್ ತೆರೆದಿಲ್ಲ- ಶಿಲ್ಪಾ ನಾಗ್ ವಿರುದ್ಧ ಡಿಸಿ ರೋಹಿಣಿ ಸಿಂಧೂರಿ ಪ್ರತ್ಯಾರೋಪ

    ಮೈಸೂರು: ನನ್ನ ರಾಜೀನಾಮೆಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಿರುಕುಳ ಕಾರಣ ಎಂದು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರು ರಾಜೀನಾಮೆ ನೀಡಿದ್ದು, ಈ ಕುರಿತು ಭಾರೀ ಚರ್ಚೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಇದೀಗ ಸ್ವತಃ ರೋಹಿಣಿ ಸಿಂಧೂರಿ ಅವರು ಪ್ರತಿಕ್ರಿಯಿಸಿದ್ದು, ಶಿಲ್ಪಾ ನಾಗ್ ಅವರು ಸುಳ್ಳು ಹೇಳಿದ್ದಾರೆ, ಆರೋಪಗಳು ನಿರಾಧಾರ ಎಂದು ಹೇಳಿದ್ದಾರೆ.

    ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಾನು ಕಿರುಕುಳ ನೀಡಿದ್ದೇನೆ ಎಂದು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರು ಸುಳ್ಳು ಹೇಳಿದ್ದಾರೆ. ಅಲ್ಲದೆ ಯಾವ ರೀತಿಯ ಕಿರುಕುಳ ಎಂಬುದನ್ನು ಸಹ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿಲ್ಲ ಎಂದಿದ್ದಾರೆ.

    ಜಿಲ್ಲಾಧಿಕಾರಿಯಾಗಿ ಕೊರೊನಾ ಸಾಂಕ್ರಾಮಿಕ ರೋಗವನ್ನು ನಿರ್ವಹಿಸುವ ಕೆಲಸದಲ್ಲಿ ಹಾಗೂ ನಿಯಂತ್ರಿಸುವ ಸಂದರ್ಭದಲ್ಲಿ ನನ್ನ ಜವಾಬ್ದಾರಿಯನ್ನು ನಿಭಾಯಿಸಿದ್ದೇನೆ. ನನ್ನ ಗುರಿ ಹಾಗೂ ಕ್ರಮಗಳು ಕೊರೊನಾ ನಿರ್ವಹಣೆಗಾಗಿ ಮಾತ್ರ ಎಂದು ಸ್ಪಷ್ಟಪಡಿಸಿದ್ದಾರೆ.

    ಶಿಲ್ಪಾ ನಾಗ್ ಕುರಿತು ಪ್ರತ್ಯಾರೋವನ್ನೂ ಮಾಡಿರುವ ಡಿಸಿ ರೋಹಿಣಿ ಸಿಂಧೂರಿ, ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರು ಕೊರೊನಾ ನಿರ್ವಹಣೆ ಕುರಿತು ಸಭೆಯಲ್ಲಿ ಭಾಗವಹಿಸಿಲ್ಲ. ವಾರ್ಡ್‍ವಾರು ಕೊರೊನಾ ಹೊಸ ಪ್ರಕರಣಗಳು, ಸಾವು ಹಾಗೂ ಸಕ್ರಿಯ ಪ್ರಕರಣಗಳ ಅಂಕಿ ಸಂಶಗಳನ್ನು ತಪ್ಪಾಗಿ ಹಾಗೂ ಸಹಿ ಮಾಡದೆ ನೀಡಿದ್ದಾರೆ. ಹೀಗಾಗಿ ಈ ಅಂಕಿ ಅಂಶಗಳನ್ನು ಸರಿ ಪಡಿಸುವಂತೆ ನಾನು ಆದೇಶಿಸಿದ್ದೆ ಎಂದು ಸ್ಪಷ್ಟಪಡಿಸಿದ್ದಾರೆ.

    ನಗರದಲ್ಲಿ ಸರ್ಕಾರಿ ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯುವಂತೆ ಆದೇಶಿಸಿದ್ದೆ. ಆದರೆ ಈ ವರೆಗೆ ಒಂದೇ ಒಂದು ಕೋವಿಡ್ ಕೇರ್ ಸೆಂಟರ್ ತೆರೆದಿಲ್ಲ. ನಾವು ತಾಲೂಕು ಹಾಗೂ ಗ್ರಾಮೀಣ ಭಾಗಗಳಲ್ಲಿ ಕಳೆದ 20 ದಿನಗಳಲ್ಲಿ 18 ಕೋವಿಡ್ ಕೇರ್ ಸೆಂಟರ್ ತೆರೆದಿದ್ದೇವೆ. ಇಂತಹ ಪರಿಸ್ಥಿತಿಯಲ್ಲಿ ಸ್ವತಃ ನಾನೇ ಇತ್ತೀಚೆಗೆ ನಗರದಲ್ಲಿ 3 ಕೋವಿಡ್ ಕೇರ್ ಸೆಂಟರ್‍ಗಳನ್ನು ತೆರೆದಿದ್ದೇನೆ. ಕಿರುಕುಳ ನೀಡುವ ಉದ್ದೇಶದಿಂದ ಇವುಗಳನ್ನು ಮಾಡಿಲ್ಲ ಎಂದು ವಿವರಿಸಿದ್ದಾರೆ.

    ಇಡೀ ಜಿಲ್ಲೆಯ ಖಾಸಗಿ ಕೈಗಾರಿಕೆಗಳು, ಫ್ಯಾಕ್ಟರಿಗಳು ಹಾಗೂ ಐಟಿ ಕಂಪನಿಗಳಿಂದ ಬರುವ ಸಿಎಸ್‍ಆರ್ ಫಂಡ್‍ನ ಇನ್‍ಚಾರ್ಜ್ ಆಗಿ ಶಿಲ್ಪಾ ನಾಗ್ ಅವರನ್ನು ನೇಮಿಸಲಾಗಿತ್ತು. ಈ ಎಲ್ಲ ಸಿಎಸ್‍ಆರ್ ಫಂಡ್‍ನ್ನು ಶಿಲ್ಪಾ ನಾಗ್ ಅವರು ಮೈಸೂರು ನಗರಕ್ಕೇ ವ್ಯಯಿಸಿರುವುದಾಗಿ ನನಗೆ ತಿಳಿಸಿದರು. ಬಳಿಕ ಜೂ.1ರಂದು ಇದರ ಸಂಪೂರ್ಣ ಹಾಗೂ ಸರಿಯಾದ ಲೆಕ್ಕ ನೀಡುವಂತೆ ಪತ್ರದ ಮೂಲಕ ಕೇಳಿದೆ. ಪತ್ರಕ್ಕೆ ಈ ವರೆಗೆ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಅಲ್ಲದೆ ತಾಲೂಕು ಹಾಗೂ ಗ್ರಾಮೀಣ ಭಾಗಕ್ಕೆ ಒಂದು ರೂಪಾಯಿಯನ್ನೂ ನೀಡದೇ ಎಲ್ಲ ಹಣವನ್ನು ನಗರಕ್ಕೆ ವ್ಯಯಿಸಿರುವುದು ಸಮಂಜಸ ಹಾಗೂ ಸರಿಯಾದ ಕ್ರಮ ಅಲ್ಲ. ಸಿಎಸ್‍ಆರ್ ಫಂಡ್ ಖರ್ಚು ಮಾಡಿರುವ ಶಿಲ್ಪಾ ನಾಗ್ ಅವರ ಲೆಕ್ಕಕ್ಕಾಗಿ ಇನ್ನೂ ಕಾಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

    ಕಳೆದ 10 ದಿನಗಳಿಂದ ಜಿಲ್ಲಾಡಳಿತದ ವಿರುದ್ಧ ಶಿಲ್ಪಾ ನಾಗ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವುದು ಎಲ್ಲರಿಗೂ ತಿಳಿದಿದೆ. ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಅಲ್ಲದೆ ಅವರ ಆರೋಪಗಳೆಲ್ಲವೂ ಸುಳ್ಳು, ನೈಜ ಸಂಗತಿಗಳಿಗೆ ವಿರುದ್ಧವಾಗಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

  • ಶಿಲ್ಪಾ ನಾಗ್‍ರಂತಹ ದಕ್ಷ ಅಧಿಕಾರಿಗಳ ಸೇವೆ ಅಗತ್ಯ, ಸಿಎಂ ಗಮನಕ್ಕೆ ತರುತ್ತೇನೆ: ರಾಮ್‍ದಾಸ್

    ಶಿಲ್ಪಾ ನಾಗ್‍ರಂತಹ ದಕ್ಷ ಅಧಿಕಾರಿಗಳ ಸೇವೆ ಅಗತ್ಯ, ಸಿಎಂ ಗಮನಕ್ಕೆ ತರುತ್ತೇನೆ: ರಾಮ್‍ದಾಸ್

    – ಶಿಲ್ಪಾ ನಾಗ್ ರಾಜೀನಾಮೆ ನೀಡಿರುವುದು ಆಶ್ಚರ್ಯ, ಬೇಸರ ತಂದಿದೆ

    ಮೈಸೂರು: ಮಹಾನಗರ ಪಾಲಿಕೆ ಅಯುಕ್ತೆ ಶಿಲ್ಪಾ ನಾಗ್ ಮುಖ್ಯಕಾರ್ಯದರ್ಶಿ ಹುದ್ದೆಗೆ ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿರುವುದಕ್ಕೆ ಶಾಸಕ ಎಸ್.ಎ.ರಾಮ್‍ದಾಸ್ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದು, ಇಂತಹ ದಕ್ಷ ಅಧಿಕಾರಿಗಳ ಸೇವೆ ಜನರಿಗೆ ನಿಜಕ್ಕೂ ಬೇಕಾಗಿದೆ. ಇಂಥವರು ಅಧಿಕಾರದಲ್ಲಿ ಮುಂದುವರಿಯಬೇಕು, ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಗಮನಕ್ಕೂ ತರುತ್ತೇನೆ ಎಂದು ಹೇಳಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಅವರು, ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರು ರಾಜೀನಾಮೆ ಕೊಟ್ಟಿದ್ದಾರೆ ಎನ್ನುವ ವಿಷಯ ಕೇಳಿ ನಿಜಕ್ಕೂ ಆಶ್ಚರ್ಯ ಹಾಗೂ ಬೇಸರವಾಯಿತು ಎಂದರು. ಇದನ್ನೂ ಓದಿ: ಮೇಡಂ ರಾಜೀನಾಮೆ ನೀಡಬೇಡಿ ಎಂದು ಶಿಲ್ಪಾ ನಾಗ್ ಕಾಲು ಹಿಡಿದ ಭದ್ರತಾ ಸಿಬ್ಬಂದಿ

    ಮೈಸೂರಿನಲ್ಲಿ ಕೋವಿಡ್ ಮಿತ್ರ, ಮನೆ ಮನೆ ಸರ್ವೇ, ಟೆಲಿ ಮೆಡಿಸಿನ್ ನಂತಹ ಎಲ್ಲ ಮಹತ್ತರವಾದ ಕೋವಿಡ್ ಗೆ ಸಂಬಂಧಿಸಿದ ಯೋಜನೆಗಳನ್ನು ತಂದವರು ಇವರು. ಇಂತಹ ದಕ್ಷ ಅಧಿಕಾರಿಗಳ ಸೇವೆ ಜನರಿಗೆ ನಿಜಕ್ಕೂ ಬೇಕಾಗಿದೆ. ಇಂಥವರು ಅಧಿಕಾರದಲ್ಲಿ ಮುಂದುವರಿಯಬೇಕು ಎಂದು ತಿಳಿಸಿದ್ದೇನೆ. ಅಲ್ಲದೇ ಮುಖ್ಯಮಂತ್ರಿಗಳ ಗಮನಕ್ಕೂ ತರುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರೋಹಿಣಿ ಸಿಂಧೂರಿ ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ: ರಾಜೀನಾಮೆ ನೀಡಿ ಕಣ್ಣೀರಿಟ್ಟ ಶಿಲ್ಪಾನಾಗ್

    ಜನಪ್ರತಿನಿಧಿಗಳೊಡನೆ, ಅಧಿಕಾರಿಗಳೊಡನೆ ಚರ್ಚಿಸಿ ನಿರ್ಧಾರಗಳನ್ನು, ಯೋಜನೆಗಳನ್ನು ರೂಪಿಸುತ್ತಿದ್ದರು. ಅವರಿಗೆ ಕೆಲವು ವಿಷಯಗಳಲ್ಲಿ ಬೇಸರವಾಗಿದ್ದರಿಂದ ರಾಜಿನಾಮೆ ನೀಡಿದ್ದೇನೆ ಎಂದು ಹೇಳಿರುವುದು ನಿಜಕ್ಕೂ ದುಃಖಕರ. ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ಕಾರಣಕ್ಕೂ ಇವರ ರಾಜೀನಾಮೆಯನ್ನು ಅಂಗೀಕಾರ ಮಾಡಬಾರದು ಎಂದು ಮನವಿ ಮಾಡಿದ್ದಾರೆ, ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಿಎಂ ಕಾರ್ಯಾಲಯಕ್ಕೆ ಟ್ಯಾಗ್ ಮಾಡಿದ್ದಾರೆ.

  • ಮೇಡಂ ರಾಜೀನಾಮೆ ನೀಡಬೇಡಿ ಎಂದು ಶಿಲ್ಪಾ ನಾಗ್ ಕಾಲು ಹಿಡಿದ ಭದ್ರತಾ ಸಿಬ್ಬಂದಿ

    ಮೇಡಂ ರಾಜೀನಾಮೆ ನೀಡಬೇಡಿ ಎಂದು ಶಿಲ್ಪಾ ನಾಗ್ ಕಾಲು ಹಿಡಿದ ಭದ್ರತಾ ಸಿಬ್ಬಂದಿ

    ಮೈಸೂರು: ಇದ್ದಕ್ಕಿದ್ದಂತೆ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ನೀಡುವ ಕುರಿತು ಘೋಷಿಸಿದ್ದಕ್ಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ತೀವ್ರ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಸುದ್ದಿಗೋಷ್ಠಿ ಮುಗಿಸಿ ಹೊರಗೆ ಬರುತ್ತಿದ್ದಾಗ ಮೇಡಂ ರಾಜೀನಾಮೆ ನೀಡಬೇಡಿ ಎಂದು ಭದ್ರತಾ ಸಿಬ್ಬಂದಿ ಶಿಲ್ಪಾ ನಾಗ್ ಅವರ ಕಾಲು ಹಿಡಿದಿದ್ದಾರೆ.

    ಶಿಲ್ಪಾ ನಾಗ್ ಅವರು ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿರುವುದು ಶಾಕ್ ನೀಡಿದ್ದು, ಅಧಿಕಾರಿಗಳು ಹಾಗೂ ಸಿಬ್ಬಂದಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಅದೇ ರೀತಿ ಭದ್ರತಾ ಸಿಬ್ಬಂದಿ ಸಹ ಶಿಲ್ಪಾ ನಾಗ್ ಅವರು ಹೊರಗಡೆ ಬರುತ್ತಿದ್ದಂತೆ ಅವರ ಕಾಲು ಹಿಡಿದು ಮೇಡಂ ಹೋಗಬೇಡಿ ಎಂದು ಕೇಳಿಕೊಂಡಿದ್ದಾರೆ. ಶಿಲ್ಪಾ ನಾಗ್ ಅವರು ಅವರಿಂದ ಕಾಲು ಮುಟ್ಟಿಸಿಕೊಳ್ಳದೆ ಸಮಾಧಾನಪಡಿಸಿ, ತೆರಳಿದ್ದಾರೆ. ಮಾತ್ರವಲ್ಲದೆ ಗೇಟ್ ಬಳಿ ಬಂದು ಸಹ ಕೈ ಮುಗಿದಿದ್ದು, ಗೇಟ್ ನಿಂದ ನಿರ್ಗಮಿಸುವಾಗ ಮೇಡಂ ದಯವಿಟ್ಟು ರಾಜೀನಾಮೆ ಕೊಡಬೇಡಿ ಎಂದು ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ರೋಹಿಣಿ ಸಿಂಧೂರಿ ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ: ರಾಜೀನಾಮೆ ನೀಡಿ ಕಣ್ಣೀರಿಟ್ಟ ಶಿಲ್ಪಾನಾಗ್

    ಮತ್ತೊಬ್ಬ ವ್ಯಕ್ತಿ ಸಹ ಮೇಡಂ ನೀವು ತುಂಬಾ ಚೆನ್ನಾಗಿ ಕೆಲಸ ಮಾಡುತ್ತಿದ್ದೀರಿ, ನಿಮ್ಮದು ಏನೂ ತಪ್ಪಿಲ್ಲ. ನೀವು ಕೆಲಸ ಮಾಡುತ್ತಿದೀರಿ, ನೀವ್ಯಾಕೆ ಈ ರೀತಿ ರಾಜೀನಾಮೆ ನೀಡುತ್ತೀರಿ, ಮಾಡದಿದ್ದವರೇ ಆರಾಮಾಗಿ ಇರುತ್ತಾರೆ. ಬೇಡ ಮೇಡಂ ನಾವೆಲ್ಲ ನಿಮಗೆ ಸಪೋರ್ಟ್ ಮಾಡುತ್ತೇವೆ. ನಿಮ್ಮ ನಿರ್ಧಾರವನ್ನು ದಯವಿಟ್ಟು ಹಿಂಪಡೆಯಿರಿ ಎಂದು ಗೋಗರೆದಿದ್ದಾರೆ, ಈ ವೇಳೆ ಶಿಲ್ಪಾ ನಾಗ್ ಅವರು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.

    ಶಿಲ್ಪಾ ನಾಗ್ ರಾಜೀನಾಮೆ ನೀಡಿದ್ಯಾಕೆ?
    ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಶಿಲ್ಪಾನಾಗ್, ಜಿಲ್ಲಾಧಿಕಾರಿಗಳು ನಗರಕ್ಕೆ ಒಂದು ಮಾನದಂಡ, ಗ್ರಾಮಾಂತರಕ್ಕೆ ಒಂದು ಮಾನದಂಡ ಮಾಡಿದ್ದಾರೆ. ಸಿಟಿಯಲ್ಲಿ ಕಮಿಷನರ್ ವಿಫಲವಾಗಿದ್ದಾರೆ ಎಂದು ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಡಳಿತದಿಂದ ನಮಗೆ ಯಾವುದೇ ಸಹಕಾರ ದೊರೆತಿಲ್ಲ. ಸಿಎಸ್‍ಆರ್ ಫಂಡ್‍ನಿಂದ ನಾವು ಕೆಲಸ ಮಾಡುತ್ತಿದ್ದೇವೆ. ಎಲ್ಲರಿಗೂ ಒಂದು ಸಹನೆ ಇರುತ್ತೆ, ಸಹನೆ ಕಟ್ಟೆ ಒಡೆದಾಗ ಏನು ಮಾಡಬೇಕು. ಒಬ್ಬರು ಐಎಎಸ್ ಅಧಿಕಾರಿಯಾಗಿ ಮತ್ತೊಬ್ಬ ಅಧಿಕಾರಿ ಮೇಲೆ ದಬ್ಬಾಳಿಕೆ ಮಾಡೋದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದರು.

    ಮಾಧ್ಯಮಗಳಲ್ಲಿ ಪಾಲಿಕೆ ಚೆನ್ನಾಗಿ ಕೆಲಸ ಮಾಡುತ್ತಿದೆ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ನನ್ನನ್ನ ಟಾರ್ಗೆಟ್ ಮಾಡಲಾಗಿದೆ. ನನ್ನನ್ನ ತುಳಿಯುವ ವ್ಯವಸ್ಥಿತ ಪಿತೂರಿ ನಡೆದಿದ್ದು, ಅವರ ಇಗೋಯಿಂದ ನಮ್ಮ ಕೆಲಸಕ್ಕೆ ಮನ್ನಣೆ ಸಿಗುತ್ತಿಲ್ಲ ಎಂದು ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದರು. ನನಗೆ ಕೆಲಸ ಮಾಡುವ ಆಸಕ್ತಿಯೇ ಇಲ್ಲದಂತಾಗಿದ್ದು, ಚೀಫ್ ಸೆಕ್ರಟರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವ ವಿಷಯವನ್ನ ತಿಳಿಸಿ ಭಾವುಕರಾದರು.

    ಈ ರೀತಿಯ ಜಿಲ್ಲಾಧಿಕಾರಿ ಯಾವುದೇ ಜಿಲ್ಲೆಗೂ ಸಿಗಬಾರದು. ಟಾರ್ಗೆಟ್ ಮಾಡಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಮೈಸೂರು ಜಿಲ್ಲೆ ಬಿಟ್ಟು ತೊಲಗಿ, ತುಂಬಾ ಚೀಪ್ ಮೆಂಟಾಲಿಟಿ ಅಧಿಕಾರಿ ಅವರು. ಒಳ್ಳೆಯ ಜನರು ಇರೋ ಮೈಸೂರು ನಗರದಲ್ಲಿ ಜಿಲ್ಲಾಧಿಕಾರಿಗಳು ಈ ರೀತಿ ಗಲೀಜು ಎಬ್ಬಿಸುತ್ತಿದ್ದಾರೆ. ಯಾಕೆ ಈ ರೀತಿ ಹಠ ಮಾಡುತ್ತಿದ್ದಾರೋ ಗೊತ್ತಿಲ್ಲ. ನಾನು 2014ನೇ ಬ್ಯಾಚ್ ಅಧಿಕಾರಿ, ಅವರು 2009 ನೇ ಬ್ಯಾಚ್ ಅಧಿಕಾರಿ. ನನ್ನ ಮೇಲಿನ ಅವರ ದ್ವೇಷ ಮೈಸೂರು ಜನರ ಮೇಲೆ ಪರಿಣಾಮ ಆಗೋದು ಬೇಡ. ನಾನೇ ಸುಪ್ರೀಂ ಅಂತಾ ಅಧಿಕಾರಿಗಳ ಸಭೆಯಲ್ಲಿ ವರ್ತನೆ ಮಾಡುತ್ತಿದ್ದಾರೆ. ಹಿರಿಯ ಅಧಿಕಾರಿಗಳಿಗೆ ಗೌರವ ಕೊಡದೆ ಅಧಿಕಾರಿಗಳನ್ನ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

  • ರೋಹಿಣಿ ಸಿಂಧೂರಿ ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ: ರಾಜೀನಾಮೆ ನೀಡಿ ಕಣ್ಣೀರಿಟ್ಟ ಶಿಲ್ಪಾನಾಗ್

    ರೋಹಿಣಿ ಸಿಂಧೂರಿ ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ: ರಾಜೀನಾಮೆ ನೀಡಿ ಕಣ್ಣೀರಿಟ್ಟ ಶಿಲ್ಪಾನಾಗ್

    – ರಾಜ್ಯ ಮುಖ್ಯ ಕಾರ್ಯದರ್ಶಿಗೆ ರಾಜಿನಾಮೆ ಪತ್ರ ಬರೆದ ಶಿಲ್ಪಾನಾಗ್
    – ಅವರು ತುಂಬಾ ಚೀಫ್ ಮೆಂಟಾಲಿಟಿ ಅಧಿಕಾರಿ, ಮೈಸೂರು ಬಿಟ್ಟು ತೊಲಗಿ

    ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಶಿಲ್ಪಾನಾಗ್, ಜಿಲ್ಲಾಧಿಕಾರಿಗಳು ಸಿಟಿಗೆ ಒಂದು ಮಾನದಂಡ, ಗ್ರಾಮಾಂತರಕ್ಕೆ ಒಂದು ಮಾನದಂಡ ಮಾಡಿದ್ದಾರೆ. ಸಿಟಿಯಲ್ಲಿ ಕಮಿಷನರ್ ವಿಫಲವಾಗಿದ್ದಾರೆ ಎಂದು ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಡಳಿತದಿಂದ ನಮಗೆ ಯಾವುದೇ ಸಹಕಾರ ದೊರೆತಿಲ್ಲ. ಸಿಎಸ್‍ಆರ್ ಫಂಡ್‍ನಿಂದ ನಾವು ಕೆಲಸ ಮಾಡುತ್ತಿದ್ದೇವೆ. ಎಲ್ಲರಿಗೂ ಒಂದು ಸಹನೆ ಇರುತ್ತೆ, ಸಹನೆ ಒಡೆದಾಗ ಏನು ಮಾಡಬೇಕು. ಒಬ್ಬರು ಐಎಎಸ್ ಅಧಿಕಾರಿಯಾಗಿ ಮತ್ತೊಬ್ಬ ಅಧಿಕಾರಿ ಮೇಲೆ ದಬ್ಬಾಳಿಕೆ ಮಾಡೋದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದರು.

    ಮಾಧ್ಯಮಗಳಲ್ಲಿ ಪಾಲಿಕೆ ಚೆನ್ನಾಗಿ ಕೆಲಸ ಮಾಡುತ್ತಿದೆ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ನನ್ನನ್ನ ಟಾರ್ಗೆಟ್ ಮಾಡಲಾಗಿದೆ. ನನ್ನನ್ನ ತುಳಿಯುವ ವ್ಯವಸ್ಥಿತ ಪಿತೂರಿ ನಡೆದಿದ್ದು, ಅವರ ಇಗೋಯಿಂದ ನಮ್ಮ ಕೆಲಸಕ್ಕೆ ಮನ್ನಣೆ ಸಿಗುತ್ತಿಲ್ಲ ಎಂದು ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದರು. ನನಗೆ ಕೆಲಸ ಮಾಡುವ ಆಸಕ್ತಿಯೇ ಇಲ್ಲದಂತಾಗಿದ್ದು, ಚೀಫ್ ಸೆಕ್ರಟರಿ ಸ್ಥಾನ ರಾಜೀನಾಮೆ ನೀಡುತ್ತಿರುವ ವಿಷಯವನ್ನ ತಿಳಿಸಿ ಭಾವುಕರಾದರು.

    ಈ ರೀತಿಯ ಜಿಲ್ಲಾಧಿಕಾರಿ ಯಾವುದೇ ಜಿಲ್ಲೆಗೂ ಸಿಗಬಾರದು. ಟಾರ್ಗೆಟ್ ಮಾಡಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಮೈಸೂರು ಜಿಲ್ಲೆ ಬಿಟ್ಟು ತೊಲಗಿ, ತುಂಬಾ ಚೀಪ್ ಮೆಂಟಾಲಿಟಿ ಅಧಿಕಾರಿ ಅವರು. ಒಳ್ಳೆಯ ಜನರು ಇರೋ ಮೈಸೂರು ನಗರದಲ್ಲಿ ಜಿಲ್ಲಾಧಿಕಾರಿಗಳು ಈ ರೀತಿ ಗಲೀಜು ಎಬ್ಬಿಸುತ್ತಿದ್ದಾರೆ. ಯಾಕೆ ಈ ರೀತಿ ಹಠ ಮಾಡುತ್ತಿದ್ದಾರೋ ಗೊತ್ತಿಲ್ಲ. ನಾನು 2014ನೇ ಬ್ಯಾಚ್ ಅಧಿಕಾರಿ, ಅವರು 2009 ನೇ ಬ್ಯಾಚ್ ಅಧಿಕಾರಿ. ನನ್ನ ಮೇಲಿನ ಅವರ ದ್ವೇಷ ಮೈಸೂರು ಜನರ ಮೇಲೆ ಪರಿಣಾಮ ಆಗೋದು ಬೇಡ. ನಾನೇ ಸುಪ್ರೀಂ ಅಂತಾ ಅಧಿಕಾರಿಗಳ ಸಭೆಯಲ್ಲಿ ವರ್ತನೆ ಮಾಡುತ್ತಿದ್ದಾರೆ. ಹಿರಿಯ ಅಧಿಕಾರಿಗಳಿಗೆ ಗೌರವ ಕೊಡದೆ ಅಧಿಕಾರಿಗಳನ್ನ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.