Tag: ಶಿವಂ ದುಬೆ

  • ಮೊದಲ ಬಾರಿಗೆ ಕ್ರಿಕೆಟಿಗ ಶಿವಂ ದುಬೆ ಮಂಗಳೂರಿಗೆ ಭೇಟಿ – ಕಟೀಲು ದುರ್ಗಾಪರಮೇಶ್ವರಿಯ ದರ್ಶನ

    ಮೊದಲ ಬಾರಿಗೆ ಕ್ರಿಕೆಟಿಗ ಶಿವಂ ದುಬೆ ಮಂಗಳೂರಿಗೆ ಭೇಟಿ – ಕಟೀಲು ದುರ್ಗಾಪರಮೇಶ್ವರಿಯ ದರ್ಶನ

    – ಪಿಲಿನಲಿಕೆ ಹುಲಿವೇಷ ಸ್ಪರ್ಧೆ ಕಾರ್ಯಕ್ರಮದಲ್ಲಿ ಭಾಗಿ

    ಮಂಗಳೂರು: ಮೊದಲ ಬಾರಿಗೆ ಕ್ರಿಕೆಟಿಗ ಶಿವಂ ದುಬೆ (Shivam Dube) ಮಂಗಳೂರಿಗೆ (Mangaluru) ಭೇಟಿ ನೀಡಿದ್ದಾರೆ. ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ (Kateel Durgaparameshwari Temple) ಭೇಟಿ ನೀಡಿದ ದುಬೆ, ದೇವಿಯ ದರ್ಶನ ಪಡೆದಿದ್ದಾರೆ.

    ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭ ದೇವಳದ ವತಿಯಿಂದ ಶಿವಂ ದುಬೆ ಅವರಿಗೆ ದೇವಳದ ಶೇಷ ವಸ್ತ್ರ ಹಾಗೂ ಪ್ರಸಾದ ನೀಡಿ ಗೌರವಿಸಲಾಯಿತು. ಈ ವೇಳೆ ದೇವಳದ ಅರ್ಚಕರು, ಆಡಳಿತ ಮಂಡಳಿಯವರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು. ಬಳಿಕ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುತ್ತಿರುವ ಪಿಲಿನಲಿಕೆ ಹುಲಿವೇಷ ಸ್ಪರ್ಧೆ ಕಾರ್ಯಕ್ರಮದಲ್ಲಿ ದುಬೆ ಪಾಲ್ಗೊಂಡರು. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಈ ಬಾರಿಯೂ ಜನ ಜೆಡಿಎಸ್‌ ಕೈ ಹಿಡಿಯುತ್ತಾರೆ: ನಿಖಿಲ್‌ ಕುಮಾರಸ್ವಾಮಿ

    ಮಂಗಳೂರಿನಲ್ಲಿ ಹುಲಿವೇಷ ಸ್ಪರ್ಧೆಯ ಅಬ್ಬರ ಜೋರಾಗಿ ನಡೆಯುತ್ತಿದ್ದು, ನಟ ಡಾಲಿ ಧನಂಜಯ್, ರಾಜ್ ಬಿ ಶೆಟ್ಟಿ, ರಿಷಬ್ ಶೆಟ್ಟಿ, ಪ್ರಮೋದ್ ಸೇರಿದಂತೆ ಅನೇಕ ಬಾಲಿವುಡ್ ಹಾಗೂ ಸ್ಯಾಂಡಲ್‌ವುಡ್ ಕಲಾವಿದರು ಇದರಲ್ಲಿ ಭಾಗವಹಿಸಿದ್ದಾರೆ. ನವರಾತ್ರಿಯ ಸಂಭ್ರಮದಲ್ಲಿ ಮಂಗಳೂರಿನ ವಿವಿಧೆಡೆ ಹುಲಿ ಕುಣಿತ ಸ್ಪರ್ಧೆ ನಡೆಯುತ್ತಿದೆ. ನಗರದ ನೆಹರೂ ಮೈದಾನದಲ್ಲಿ ನಡೆದ ಪಿಲಿಪರ್ಬ ಹುಲಿವೇಷ ಕುಣಿತದ ಸ್ಪರ್ಧೆಗೆ ಅತಿಥಿಯಾಗಿ ಆಗಮಿಸಿದ ಚಿತ್ರನಟ ರಾಜ್ ಬಿ ಶೆಟ್ಟಿ ವೇದಿಕೆಯಲ್ಲಿ ಹುಲಿ ಕುಣಿತಕ್ಕೆ ಸ್ಟೆಪ್ ಹಾಕಿದರು. ಇದನ್ನೂ ಓದಿ: Mysuru Dasara Photo Gallery: ಜಂಬೂಸವಾರಿ ಮೆರವಣಿಗೆ ವೈಭವ ಕಣ್ತುಂಬಿಕೊಂಡ ಕೋಟ್ಯಂತರ ಜನರು

    ಹುಲಿವೇಷಧಾರಿಗಳು ವೇದಿಕೆಯಲ್ಲಿ ಹುಲಿಡ್ಯಾನ್ಸ್ ಮಾಡುತ್ತಿದ್ದಂತೆ ರಾಜ್ ಬಿ ಶೆಟ್ಟಿಯೂ ಅವರೊಂದಿಗೆ ಸ್ಟೆಪ್ ಹಾಕಿ ಎಲ್ಲರನ್ನೂ ರಂಜಿಸಿದರು. ಬಳಿಕ ಇದೇ ವೇದಿಕೆಗೆ ಆಗಮಿಸಿದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಹುಲಿವೇಷ ಹಾಕಿ ಸಾಧನೆ ಮಾಡಿದ ಹಿರಿಯರನ್ನು ಸನ್ಮಾನಿಸಿದರು. ಇದನ್ನೂ ಓದಿ: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಂಜಯ್ ದತ್ ಭೇಟಿ

  • ಸಂಜು ಅಮೋಘ ಫಿಫ್ಟಿ, ಶಿವಂ ದುಬೆ ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ; 4-1ರಲ್ಲಿ ಸರಣಿ ಗೆದ್ದ ಭಾರತ!

    ಸಂಜು ಅಮೋಘ ಫಿಫ್ಟಿ, ಶಿವಂ ದುಬೆ ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ; 4-1ರಲ್ಲಿ ಸರಣಿ ಗೆದ್ದ ಭಾರತ!

    ಹರಾರೆ: ಸಂಜು ಸ್ಯಾಮ್ಸನ್ (Sanju Samson)​ ಅಮೋಘ ಅರ್ಧ ಶತಕ, ಶಿವಂ ದುಬೆ ಆಲ್‌ರೌಂಡ್‌ ಆಟ ಹಾಗೂ ಮುಕೇಶ್‌ ಕುಮಾರ್‌ ಮಾರಕ ಬೌಲಿಂಗ್‌ ದಾಳಿಯಿಂದ ಭಾರತ ತಂಡ (Team India) ಜಿಂಬಾಬ್ವೆ ವಿರುದ್ಧ ಟಿ20 ಸರಣಿಯ 5ನೇ ಪಂದ್ಯದಲ್ಲೂ 42 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯನ್ನು 4-1ರಲ್ಲಿ ಗೆದ್ದುಕೊಂಡಿದೆ.

    ಆರಂಭಿಕ ಪಂದ್ಯದಲ್ಲಿ ಅತ್ಯಲ್ಪ ಮೊತ್ತವಿದ್ದರೂ ಅಚ್ಚರಿ ಸೋಲು ಕಂಡಿದ್ದ ಯುವ ಬಳಗದ ಭಾರತ ತಂಡ ಬಳಿಕ ಸತತ ನಾಲ್ಕೂ ಪಂದ್ಯಗಳಲ್ಲೂ ಭರ್ಜರಿ ಗೆಲುವಿನೊಂದಿಗೆ ಸರಣಿ ತನ್ನದಾಗಿಸಿಕೊಂಡಿದೆ. ಅಲ್ಲದೇ ತನ್ನ ನಾಯಕತ್ವದಲ್ಲಿ ನಡೆದ ಮೊಟ್ಟ ಮೊದಲ ಅಂತಾರಾಷ್ಟ್ರೀಯ ಟಿ20 ಸರಣಿಯಲ್ಲೇ ಗೆಲುವು ಸಾಧಿಸುವ ಮೂಲಕ ಶುಭಮನ್‌ ಗಿಲ್‌ (Shubman Gill) ನಾಯಕತ್ವದ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.

    ಭಾನುವಾರ ಹರಾರೆ ಸ್ಪೋರ್ಟ್ಸ್‌ಕ್ಲಬ್‌ ಮೈದಾನದಲ್ಲಿ ನಡೆದ ಕೊನೇ ಟಿ20 ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ 6 ವಿಕೆಟ್‌ ನಷ್ಟಕ್ಕೆ 167 ರನ್‌ ಬಾರಿಸಿತ್ತು. 168 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಜಿಂಬಾಬ್ವೆ (Zimbabwe), ಟೀಂ ಇಂಡಿಯಾ ಬೌಲರ್‌ಗಳ ಮಾರಕ ದಾಳಿಗೆ ತತ್ತರಿಸಿ 18.3 ಓವರ್‌ಗಳಲ್ಲೇ 125 ರನ್‌ಗಳಿಗೆ ಸರ್ವಪತನ ಕಂಡಿತು. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ – ನಿತ್ಯ 8 ಸಾವಿರ ಕ್ಯುಸೆಕ್‌ ನೀರು ಹರಿಸಲು ಸರ್ಕಾರ ನಿರ್ಧಾರ: ಸಿಎಂ

    ಆರಂಭದಲ್ಲೇ ಸ್ಫೋಟಕ ಪ್ರದರ್ಶನಕ್ಕೆ ಮುಂದಾಗಿದ್ದ ಭಾರತ ತಂಡಕ್ಕೆ ಆಘಾತ ಎದುರಾಗಿತ್ತು. ಮೊದಲ ಐದು ಓವರ್‌ಗಳಲ್ಲೇ 40 ರನ್‌ಗಳಿಗೆ ಪ್ರಮುಖ ಮೂರು ವಿಕೆಟ್‌ ಕಳೆದುಕೊಂಡಿತ್ತು. ಈ ವೇಳೆ ಕ್ರೀಸ್‌ನಲ್ಲಿ ಭದ್ರವಾಗಿ ಕ್ರೀಸ್‌ನಲ್ಲಿ ನೆಲೆಯೂರಿದ ಸಂಜು ಸ್ಯಾಮ್ಸನ್‌ ಹಾಗೂ ರಿಯಾನ್‌ ಪರಾಗ್‌ ಜೋಡಿ ಉತ್ತಮ ಇನ್ನಿಂಗ್ಸ್‌ ಕಟ್ಟುವಲ್ಲಿ ಯಶಸ್ವಿಯಾಯಿತು. 56 ಎಸೆತಗಳಲ್ಲಿ ಈ ಜೋಡಿ 4ನೇ ವಿಕೆಟ್‌ಗೆ 65 ರನ್‌ ಬಾರಿಸಿತ್ತು. ಈ ವೇಳೆ ಸಿಕ್ಸರ್‌ ಬಾರಿಸಲು ಮುಂದಾದ ರಿಯಾನ್‌ ಪರಾಗ್‌ ಕ್ಯಾಚ್‌ ನೀಡಿ ಔಟಾದರು. ಬಳಿಕ ಕ್ರೀಸ್‌ಗಿಳಿದ ಶಿವಂ ದುಬೆ (Shivam Dube) ಆರಂಭದಿಂದಲೇ ಸಿಕ್ಸರ್‌, ಬೌಂಡರಿ ಅಬ್ಬರಿಸಲು ಶುರು ಮಾಡಿದರು. ಇದರಿಂದ ಭಾರತ ತಂಡ 160 ರನ್‌ ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಸಂಜು 110 ಮೀಟರ್‌ ಸಿಕ್ಸರ್‌:
    ಸಂಕಷ್ಟ ಸಮಯದಲ್ಲಿ ಉತ್ತಮ ಇನ್ನಿಂಗ್ಸ್‌ ಕಟ್ಟಿದ ಸಂಜು ಸ್ಯಾಮ್ಸನ್‌ 45 ಎಸೆತಗಳಲ್ಲಿ 1 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್‌ನೊಂದಿಗೆ 58 ರನ್‌ ಚಚ್ಚಿದರು. ಈ ವೇಳೆ ಸಂಜು ಸ್ಯಾಮ್ಸನ್‌ ಬಾರಿಸಿದ ಸಿಕ್ಸರ್‌ವೊಂದು 110 ಮೀಟರ್‌ ಸಾಗಿತು. ಸಂಜು ಸಿಡಿಲಬ್ಬರದ ಸಿಕ್ಸರ್‌ ಕಂಡು ಪ್ರೇಕ್ಷಕರೇ ದಂಗಾದರು. ಇದರೊಂದಿಗೆ ಶಿವಂ ದುಬೆ 28 ರನ್‌ (12 ಎಸೆತ, 2 ಸಿಕ್ಸರ್‌, 2 ಬೌಂಡರಿ), ರಿಯಾನ್‌ ಪರಾಗ್‌ 22 ರನ್‌, ಯಶಸ್ವಿ ಜೈಸ್ವಾಲ್‌ 12 ರನ್‌, ಶುಭಮನ್‌ ಗಿಲ್‌ 13 ರನ್‌, ಅಭಿಷೇಕ್‌ ಶರ್ಮಾ 14 ರನ್‌, ರಿಂಕು ಸಿಂಗ್‌ 11 ರನ್‌, ವಾಷಿಂಗ್ಟನ್‌ 10 ರನ್‌ಗಳ ಕೊಡುಗೆ ನೀಡಿದರು.  ಇದನ್ನೂ ಓದಿ: ಮುಸ್ಲಿಂ ಮಹಿಳೆ ವಿಚ್ಚೇದನ ಜೀವನಾಂಶಕ್ಕೆ ಅರ್ಹಳು: ಸುಪ್ರೀಂ ತೀರ್ಪು ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ ಎಂದ ಮುಸ್ಲಿಂ ಬೋರ್ಡ್‌

    ಮುಕೇಶ್‌ ಮಾರಕ ದಾಳಿ:
    ಭಾರತ ನೀಡಿದ ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಜಿಂಬಾಬ್ವೆ 15 ರನ್​ಗೆ 2 ವಿಕೆಟ್​ ಕಳೆದುಕೊಂಡು ಆತಂಕಕ್ಕೆ ಸಿಲುಕಿತ್ತು. ಬಳಿಕ ಡಿಯೋನ್​ ಮೈರ್ಸ್​ 34 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಅಲ್ಲದೇ ಕೊನೆಯಲ್ಲಿ ಫರಾಜ್ ಅಕ್ರಮ್ 27 ರನ್ ಬಾರಿಸಿದರು. ಮರುಮಣಿ 27 ರನ್ ಕೊಡುಗೆ ನೀಡಿದ್ದು ಬಿಟ್ಟರೆ ಉಳಿದ ಯಾರೊಬ್ಬರೂ ಕ್ರೀಸ್‌ನಲ್ಲಿ ನೆಲೆಯೂರದ ಕಾರಣ ಜಿಂಬಾಬ್ವೆ ಕೊನೇ ಪಂದ್ಯದಲ್ಲೂ ಹೀನಾಯ ಸೋಲಿಗೆ ತುತ್ತಾಯಿತು. ಭಾರತ ಪರ ಬೌಲಿಂಗ್​ನಲ್ಲಿ ಮುಕೇಶ್ ಕುಮಾರ್​ 3.3 ಓವರ್‌ಗಳಲ್ಲಿ 22 ರನ್ ಬಿಟ್ಟುಕೊಟ್ಟು 4 ವಿಕೆಟ್ ಕಿತ್ತರೆ ಶಿವಂ ದುಬೆ 2 ವಿಕೆಟ್ ಪಡೆದರು. ಇದರೊಂದಿಗೆ ತುಷಾರ್‌ ದೇಶ್‌ಪಾಂಡೆ, ವಾಷಿಂಗ್ಟನ್‌ ಸುಂದರ್‌, ಅಭಿಷೇಕ್‌ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು. ಇದನ್ನೂ ಓದಿ: AR Wedding Celebrations: ಉದ್ಯಮಿ ಅಂತ ಹೇಳ್ಕೊಂಡು ಆಹ್ವಾನವಿಲ್ಲದೇ ಬಂದಿದ್ದ ಇಬ್ಬರ ವಿರುದ್ಧ ಕೇಸ್‌! 

  • ರೈಸ್‌ ಆಗಿದ್ದ ಸನ್‌ ತಾಪ ಇಳಿಸಿದ ಚೆನ್ನೈ; ಸಿಎಸ್‌ಕೆಗೆ 78 ರನ್‌ಗಳ ಭರ್ಜರಿ ಜಯ – 3ನೇ ಸ್ಥಾನಕ್ಕೆ ಜಿಗಿದ ಹಾಲಿ ಚಾಂಪಿಯನ್ಸ್‌!

    ರೈಸ್‌ ಆಗಿದ್ದ ಸನ್‌ ತಾಪ ಇಳಿಸಿದ ಚೆನ್ನೈ; ಸಿಎಸ್‌ಕೆಗೆ 78 ರನ್‌ಗಳ ಭರ್ಜರಿ ಜಯ – 3ನೇ ಸ್ಥಾನಕ್ಕೆ ಜಿಗಿದ ಹಾಲಿ ಚಾಂಪಿಯನ್ಸ್‌!

    ಚೆನ್ನೈ: ನಾಯಕ ರುತುರಾಜ್‌ ಗಾಯಕ್ವಾಡ್‌ (Ruturaj Gaikwad), ಡೇರಿಲ್‌ ಮಿಚೆಲ್‌ ಅವರ ಸ್ಫೋಟಕ ಬ್ಯಾಟಿಂಗ್‌, ಸಂಘಟಿತ ಬೌಲಿಂಗ್‌ ಪ್ರದರ್ಶನದಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಸನ್‌ ರೈಸರ್ಸ್‌ ಹೈದರಾಬಾದ್‌ (CSK vs SRH) ವಿರುದ್ಧ 78 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ 9 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಜಿಗಿದಿದೆ.

    ಇಲ್ಲಿನ ಚೆಪಾಕ್‌ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್‌ಕೆ 20 ಓವರ್‌ಗಳಲ್ಲಿ 3 ವಿಕೆಟ್‌ಗೆ 212 ರನ್‌ ಬಾರಿಸಿತ್ತು. ಈ ಗುರಿ ಬೆನ್ನತ್ತಿದ ಸನ್‌ ರೈಸರ್ಸ್‌ ಹೈದರಾಬಾದ್‌ (SRH) ತಂಡ 18.5 ಓವರ್‌ಗಳಲ್ಲೇ 134 ರನ್‌ಗಳಿಗೆ ಆಲೌಟ್‌ ಆಗಿ ಸೋಲೊಪ್ಪಿಕೊಂಡಿತು. ಇದನ್ನೂ ಓದಿ: T20 ವಿಶ್ವಕಪ್‌ಗೆ ಶೀಘ್ರದಲ್ಲೇ ಭಾರತ ತಂಡ ಪ್ರಕಟ; ರೋಹಿತ್‌ ಜೊತೆಗೆ ಆರಂಭಿಕ ಯಾರಾಗ್ತಾರೆ ಅನ್ನೋದೇ ಸಸ್ಪೆನ್ಸ್‌!

    ಚೇಸಿಂಗ್‌ ಆರಂಭಿಸಿದ ಸನ್‌ ರೈಸರ್ಸ್‌ ತಂಡ ಆರಂಭದಿಂದಲೇ ವಿಕೆಟ್‌ ಕಳೆದುಕೊಂಡಿತು. ಸಿಕ್ಸರ್‌-ಬೌಂಡರಿ ಸಿಡಿಸುತ್ತಿದ್ದ ಅಗ್ರ ಕ್ರಮಾಂಕದ ಟಾಪ್‌ ಬ್ಯಾಟರ್ಸ್‌ಗಳು ಅಲ್ಪ ಮೊತ್ತಕ್ಕೆ ನೆಲ ಕಚ್ಚಿದರು. ಇದು ಚೆನ್ನೈ ತಂಡಕ್ಕೆ ಲಾಭವಾಯಿತು. ಟ್ರಾವಿಸ್‌ ಹೆಡ್‌, ಅಭಿಷೇಕ್‌ ಶರ್ಮಾ, ಏಡನ್‌ ಮಾರ್ಕ್ರಮ್‌ ಬ್ಯಾಕ್‌ ಟು ಬ್ಯಾಕ್‌ ಪೆವಿಲಿಯನ್‌ ಪರೇಡ್‌ ನಡೆಸಿದರು. ಹಾಗಾಗಿ ಸಹಜವಾಗಿಯೇ ಗೆಲುವು ಚೆನ್ನೈ ತಂಡದ ಪಾಲಾಯಿತು.

    ಸನ್‌ ರೈಸರ್ಸ್‌ ತಂಡದ ಪರ ಟ್ರಾವಿಸ್‌ ಹೆಡ್‌ (Travis Head) 13 ರನ್‌, ಅಭಿಷೇಕ್‌ ಶರ್ಮಾ 15 ರನ್‌, ಏಡನ್‌ ಮಾರ್ಕ್ರಮ್‌ 32 ರನ್‌, ನಿತೀಶ್‌ ಕುಮಾರ್‌ ರೆಡ್ಡಿ 15 ರನ್‌, ಹೆನ್ರಿಕ್‌ ಕ್ಲಾಸೆನ್‌ 20 ರನ್‌, ಅಬ್ದುಲ್‌ ಸಮದ್‌ 19 ರನ್‌, ಪ್ಯಾಟ್‌ ಕಮ್ಮಿನ್ಸ್‌ 5 ರನ್‌, ಶಹಬಾಜ್‌ 7 ರನ್‌, ಜಯದೇವ್‌ ಉನದ್ಕಟ್‌ 1 ರನ್‌ ಗಳಿಸಿದ್ರೆ, ಭುವನೇಶ್ವರ್‌ ಕುಮಾರ್‌ 4 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ಸಿಎಸ್‌ಕೆ ಮತ್ತೊಬ್ಬೆ ಬೌಲಿಂಗ್‌ ಪಿಚ್‌ನಲ್ಲಿ ರನ್‌ ಹೊಳೆ ಹರಿಸಿತ್ತು. 20 ಓವರ್‌ಗಳಲ್ಲಿ ಕೇವಲ 3 ವಿಕೆಟ್‌ ನಷ್ಟಕ್ಕೆ 212 ರನ್‌ ಗಳಿಸಿತ್ತು. ಆರಂಭಿಕ ಅಜಿಂಕ್ಯಾ ರಹಾನೆ 9 ರನ್‌ಗಳಿಗೆ ವಿಕೆಟ್‌ ಕೈ ಚೆಲ್ಲಿದರೂ ಇತರ ಅಗ್ರ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ಸಹಾಯದಿಂದ ಬೃಹತ್‌ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಯಿತು. ಇದನ್ನೂ ಓದಿ: 10 ಸಿಕ್ಸರ್‌ನೊಂದಿಗೆ ಸ್ಫೋಟಕ ಶತಕ – ಆರ್‌ಸಿಬಿಗೆ ವಿಲ್‌ ಪವರ್‌; ಟೈಟಾನ್ಸ್‌ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ

    ಕೊನೇ ಓವರ್‌ನಲ್ಲಿ ಕೈತಪ್ಪಿದ ಶತಕ:
    ಆರಂಭಿಕನಾಗಿ ಕಣಕ್ಕಿಳಿದಿದ್ದ ರುತುರಾಜ್‌ ಗಾಯಕ್ವಾಡ್‌ 54 ಎಸೆತಗಳಲ್ಲಿ 98 ರನ್‌ ಗಳಿಸಿದ್ದರು. ಇಂದು ತಮ್ಮ 2ನೇ ಐಪಿಎಲ್‌ ಶತಕ ದಾಖಲಿಸುವ ಉತ್ಸಾಹದಲ್ಲಿದ್ದರು. ಆದ್ರೆ 20ನೇ ಓವರ್‌ನ 2ನೇ ಎಸೆತದಲ್ಲೇ ಸಿಕ್ಸರ್‌ ಸಿಡಿಸಲು ಯತ್ನಿಸಿ ಬೌಂಡರಿ ಲೈನ್‌ ಬಳಿಕ ಕ್ಯಾಚ್‌ಗೆ ತುತ್ತಾದರು.

    ಸಿಎಸ್‌ಕೆ ಪರ ರುತುರಾಜ್‌ ಗಾಯಕ್ವಾಡ್‌ 54 ಎಸೆತಗಳಲ್ಲಿ 98 ರನ್‌ (3 ಸಿಕ್ಸರ್‌, 10 ಬೌಂಡರಿ), ಡೇರಿಲ್‌ ಮಿಚೆಲ್‌ 52 ರನ್‌ (32 ಎಸೆತ, 7 ಬೌಂಡರಿ, 1 ಸಿಕ್ಸರ್‌), ಶಿವಂ ದುಬೆ 39 ರನ್‌ (20 ಎಸೆತ, 4 ಸಿಕ್ಸರ್‌, 1 ಬೌಂಡರಿ), ಅಜಿಂಕ್ಯಾ ರಹಾನೆ 9 ರನ್‌, ಎಂ.ಎಸ್‌ ಧೋನಿ 5 ರನ್‌ ಗಳಿಸಿದರು.

    ಸನ್‌ ರೈಸರ್ಸ್‌ ಹೈದರಾಬಾದ್‌ ಪರ ಭುವನೇಶ್ವರ್‌ ಕುಮಾರ್‌, ಟಿ ನಟರಾಜನ್‌ ಹಾಗೂ ಜಯದೇವ್‌ ಉನಾದ್ಕಟ್‌ ತಲಾ ಒಂದೊಂದು ವಿಕೆಟ್‌ ಕಿತ್ತರು.

  • ಯಶಸ್ಸಿನ ಶ್ರೇಯಸ್ಸು ಮಹಿ ಅಣ್ಣನಿಗೆ, CSKಗೆ ಸಲ್ಲಬೇಕು – ಚೆನ್ನೈಗೆ ಕ್ರೆಡಿಟ್‌ ಕೊಟ್ಟ ಶಿವಂ ದುಬೆ

    ಯಶಸ್ಸಿನ ಶ್ರೇಯಸ್ಸು ಮಹಿ ಅಣ್ಣನಿಗೆ, CSKಗೆ ಸಲ್ಲಬೇಕು – ಚೆನ್ನೈಗೆ ಕ್ರೆಡಿಟ್‌ ಕೊಟ್ಟ ಶಿವಂ ದುಬೆ

    ಇಂದೋರ್‌: ಅಫ್ಘಾನಿಸ್ತಾನ ವಿರುದ್ಧ ನಡೆದ 2ನೇ ಟಿ20 ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಬಾರಿಸಿದ ಟೀಂ ಇಂಡಿಯಾ ಆಲ್‌ರೌಂಡರ್‌ ಶಿವಂ ದುಬೆ (Shivam Dube), ತನ್ನ ಯಶಸ್ಸನ್ನು ಎಂ.ಎಸ್‌ ಧೋನಿ (MS Dhoni) ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಕ್ಕೆ ಅರ್ಪಿಸಿದ್ದಾರೆ.

    ಪಂದ್ಯದ ಬಳಿಕ ಪೋಸ್ಟ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ಶಿವಂ ದುಬೆ, ತಮ್ಮ ವೃತ್ತಿಜೀವನದಲ್ಲಿ ಮೇಲೇಳುವಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ತಂಡದ ಕೊಡುಗೆ ಅಪಾರ. ನಾಯಕ ಎಂ.ಎಸ್ ಧೋನಿ, ಕೋಚ್ ಸ್ಟೀಫನ್ ಫ್ಲೆಮಿಂಗ್ ಸೇರಿದಂತೆ ಸೂಪರ್ ಕಿಂಗ್ಸ್‌ ತಂಡದ ಹಿರಿಯ ಆಟಗಾರರು ನನ್ನ ಆತ್ಮವಿಶ್ವಾಸ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಮೈದಾನಕ್ಕೆ ನುಗ್ಗಿ ವಿರಾಟ್‌ ಪಾದ ಮುಟ್ಟಿ‌, ಅಪ್ಪಿಕೊಂಡ – ಭದ್ರತೆ ಉಲ್ಲಂಘಿಸಿದ ಕೊಹ್ಲಿ ಅಪ್ಪಟ ಅಭಿಮಾನಿಗೆ ಸಂಕಷ್ಟ

    ನನಗೆ ಸಲ್ಲುತ್ತಿರುವ ಶ್ರೇಯಸ್ಸು, ಸಿಎಸ್‌ಕೆ ತಂಡ ಮತ್ತು ಮಹಿ ಅಣ್ಣನಿಗೆ ಸಲ್ಲಬೇಕು. ನಾನು ನನ್ನ ಆಟ ಆಡುತಿದ್ದೆ, ಆದರೆ ಸಿಎಸ್‌ಕೆ ನನ್ನ ನಿಜವಾದ ಪ್ರತಿಭೆಯನ್ನು ಹೊರತಂದಿದೆ. ತಂಡವು ನನ್ನಲ್ಲಿ ಆ ಆತ್ಮವಿಶ್ವಾಸ ತುಂಬಿದೆ. ನಾನು ಐಪಿಎಲ್‌ನಲ್ಲಿ ರನ್ ಗಳಿಸಲು ಸಾಧ್ಯವಿದೆ ಎಂಬುದನ್ನು ಅವರು ನನಗೆ ಮನವರಿಕೆ ಮಾಡಿದರು. ಅಲ್ಲದೇ ನನ್ನ ಮೇಲೆ ನಂಬಿಕೆ ಇಟ್ಟರು. ಮೈಕ್‌ ಹಸ್ಸಿ ಮತ್ತು ಫ್ಲೆಮಿಂಗ್ ಅವರಂಥ ಹಿರಿಯರು ನನ್ನ ಮೇಲೆ ನಂಬಿಕೆಯಿಟ್ಟಿದ್ದಾರೆ ಎಂದು ಭಾವುಕರಾಗಿದ್ದಾರೆ.

    ನಾನು ಸಿಎಸ್‌ಕೆ ತಂಡದಲ್ಲಿದ್ದಾಗ, ಮಹಿ ಅಣ್ಣ ನನಗೆ ಚೆನ್ನಾಗಿ ಬ್ಯಾಟಿಂಗ್ ಮಾಡುವ ಸಾಮರ್ಥ್ಯವಿದೆ ಎಂದು ಹೇಳಿದ್ದರು. ಆದರೆ ಸ್ಮಾರ್ಟ್‌ ಆಗಿ ಆಡಲು ಅವರು ಹೇಳಿದರು. ಹೀಗಾಗಿ ನಾನು ನನ್ನ ಮಿತಿಗಳನ್ನು ನೋಡಿಕೊಂಡು ಇನ್ನೂ ಉತ್ತಮವಾಗಿ ಆಡಲು ಏನು ಮಾಡಬಹುದು ಎಂಬುದರ ಮೇಲೆ ಗಮನ ಹರಿಸಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿಕ್ಸರ್‌, ಬೌಂಡರಿ ಸುರಿಮಳೆ – ಯಶಸ್ವಿ, ದುಬೆ ಸ್ಫೋಟಕ ಫಿಫ್ಟಿ; ಅಫ್ಘಾನ್‌ ವಿರುದ್ಧ ಭಾರತಕ್ಕೆ ಸರಣಿ ಜಯ

    ಬ್ಯಾಕ್‌ ಟು ಬ್ಯಾಕ್‌ ಫಿಫ್ಟಿ:
    ಯುವ ಆಲ್‌ರೌಂಡರ್‌ ಶಿವಂ ದುಬೆ ಬ್ಯಾಕ್‌ ಟು ಬ್ಯಾಕ್‌ ಅರ್ಧಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ ಹಿರಿಯ ಆಟಗಾರರ ಗಮನ ಸೆಳೆದಿದ್ದಾರೆ. ಅಫ್ಘಾನ್‌ ವಿರುದ್ಧ ಮೊದಲ ಪಂದ್ಯದಲ್ಲಿ 40 ಎಸೆತಗಳಲ್ಲಿ 2 ಸಿಕ್ಸರ್‌, 5 ಬೌಂಡರಿಗಳೊಂದಿಗೆ 60 ರನ್‌ ಚಚ್ಚಿದ ದುಬೆ, 2ನೇ ಪಂದ್ಯದಲ್ಲಿ 32 ಎಸೆತಗಳಲ್ಲಿ ಸ್ಫೋಟಕ 63 ರನ್‌ (4 ಸಿಕ್ಸರ್‌, 5 ಬೌಂಡರಿ) ಬಾರಿಸಿ ಮಿಂಚಿದ್ದಾರೆ. ಅಲ್ಲದೇ ಎರಡೂ ಪಂದ್ಯಗಳಲ್ಲಿ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದ್ದಾರೆ. ಜನವರಿ 17ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 3ನೇ ಪಂದ್ಯ ನಡೆಯಲಿದ್ದು, ಅಂದು ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ.

    ಭಾರತಕ್ಕೆ ಸರಣಿ ಜಯ: ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತ ಗೆದ್ದುಕೊಂಡಿದೆ. ಆರಂಭಿಕ ಎರಡು ಪಂದ್ಯಗಳನ್ನು ಗೆದ್ದು ಸರಣಿ ತನ್ನದಾಗಿಸಿಕೊಂಡಿರುವ ಭಾರತ, ತವರಿನಲ್ಲೇ ವೈಟ್‌ವಾಶ್‌ ಮಾಡುವ ಗುರಿ ಹೊಂದಿದೆ. ಭಾನುವಾರ ಇಂದೋರ್‌ನ ಹೋಳ್ಕರ್‌ ಮೈದಾನದಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ಮೊದಲು ಫೀಲ್ಡಿಂಗ್‌ ಆಯ್ದುಕೊಂಡಿತು.

    ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘಾನಿಸ್ತಾನ ತಂಡವು ಗುಲ್ಬದೀನ್ ನಯೀಬ್ ಅವರ ಅರ್ಧಶತಕದ ನೆರವಿನಿಂದ 20 ಓವರ್​​​ಗಳಲ್ಲಿ 172 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನತ್ತಿದ್ದ ಭಾರತ ಯಶಸ್ವಿ ಜೈಸ್ವಾಲ್‌, ಶಿವಂ ದುಬೆ ಸ್ಫೋಟಕ ಅರ್ಧಶತಕಗಳ ನೆರವಿನಿಂದ 15.4 ಓವರ್‌ಗಳಲ್ಲೇ 173 ರನ್‌ ಗಳಿಸಿ ಗೆಲುವು ಸಾಧಿಸಿತು.

  • ಸಿಕ್ಸರ್‌, ಬೌಂಡರಿ ಸುರಿಮಳೆ – ಯಶಸ್ವಿ, ದುಬೆ ಸ್ಫೋಟಕ ಫಿಫ್ಟಿ; ಅಫ್ಘಾನ್‌ ವಿರುದ್ಧ ಭಾರತಕ್ಕೆ ಸರಣಿ ಜಯ

    ಸಿಕ್ಸರ್‌, ಬೌಂಡರಿ ಸುರಿಮಳೆ – ಯಶಸ್ವಿ, ದುಬೆ ಸ್ಫೋಟಕ ಫಿಫ್ಟಿ; ಅಫ್ಘಾನ್‌ ವಿರುದ್ಧ ಭಾರತಕ್ಕೆ ಸರಣಿ ಜಯ

    – ಭಾರತ ತಂಡಕ್ಕೆ ಸರಣಿ ಕೈವಶ

    ಇಂದೋರ್: ಆಫ್ಘಾನಿಸ್ತಾನ ವಿರುದ್ಧದ ಟಿ20 (T20I) ಸರಣಿಯ 2ನೇ ಪಂದ್ಯ ಗೆದ್ದು, ಭಾರತ 2-0 (IND vs AFG) ಮುನ್ನಡೆ ಸಾಧಿಸಿದೆ. ಇಂದೋರ್‌ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳ ಗೆಲುವು ಸಾಧಿಸಿದೆ.

    173 ರನ್ ಟಾರ್ಗೆಟ್ ಬೆನ್ನತ್ತಿದ ಭಾರತ 15.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ ಗೆಲುವು ಸಾಧಿಸಿತು. ಭಾರತದ ಪರ ಯಶಸ್ವಿ ಜೈಸ್ವಾಲ್ ಹಾಗೂ ಶಿವಂ ದುಬೆ ಅರ್ಧ ಶತಕ ಬಾರಿಸಿ ಗೆಲುವಿನ ರೂವಾರಿಯಾದರು. ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ – ಯುಪಿ ಮೂಲದ ಹೊಸ ಆಟಗಾರನಿಗೆ ಚಾನ್ಸ್

    34 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ 5 ಬೌಂಡರಿಗಳ ನೆರವಿನಿಂದ ಜೈಸ್ವಾಲ್ 68 ರನ್ ಬಾರಿಸಿ ಔಟಾದರು. 32 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 5 ಬೌಂಡರಿಗಳ ನೆರವಿನಿಂದ 63 ರನ್ ಬಾರಿಸಿ ಅಜೇಯರಾಗಿ ಉಳಿದರು. ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲೂ ಶೂನ್ಯ ಸಂಪಾದಿಸಿದರು. ವಿರಾಟ್ ಕೊಹ್ಲಿ 16 ಎಸೆತಗಳಲ್ಲಿ 29 ರನ್ ಗಳಿಸಿದರು.

    ಆಫ್ಘನ್ ತಂಡದ ಪರವಾಗಿ ಕರೀಂ ಜನತ್ 2 ವಿಕೆಟ್ ಪಡೆದರೆ, ಫಝಲ್ ಹಖ್ ಫರೂಖಿ ಹಾಗೂ ನವೀನ್ ಉಲ್ ಹಖ್ ತಲಾ 1 ವಿಕೆಟ್ ಪಡೆದರು. ಇದನ್ನೂ ಓದಿ: ಅಂಧ ಮಹಿಳೆಯರ ಕಣ್ಣಲ್ಲಿ ಗೆಲುವಿನ ಹೊಳಪು – ನ್ಯಾಷನಲ್‌ T20 ಕ್ರಿಕೆಟ್ ಟೂರ್ನಿಯಲ್ಲಿ ಒಡಿಶಾ ಚಾಂಪಿಯನ್

    ಟಾಸ್ ಸೋತು ಬ್ಯಾಟ್ ಮಾಡಿದ ಆಫ್ಘಾನಿಸ್ತಾನ ನಿಗದಿತ 20 ಓವರ್‌ಗಳಲ್ಲಿ 172 ರನ್‌ಗಳಿಗೆ ಆಲೌಟ್ ಆಯಿತು. ಆಫ್ಘನ್ ತಂಡದ ಪರವಾಗಿ ಗುಲಬ್ದೀನ್ ನಯೀಬ್ 35 ಬಾಲ್‌ನಲ್ಲಿ 57 ರನ್ ಬಾರಿಸಿದರು. ಟೀಂ ಇಂಡಿಯಾ ಪರವಾಗಿ ಆರ್ಷದೀಪ್ ಸಿಂಗ್ ಮೂರು ವಿಕೆಟ್ ಉರುಳಿಸಿದರು.

    ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್‌ಗಳಿಂದ ಗೆದ್ದಿತ್ತು. ಸರಣಿಯ ಕೊನೆಯ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನವರಿ 17ರಂದು ನಡೆಯಲಿದೆ. ಇದನ್ನೂ ಓದಿ: ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 – ಭಾರತಕ್ಕೆ ಗೆಲುವು!

  • ರಂಗೇರಿಸಿದ ರಹಾನೆ, ಧೂಳೆಬ್ಬಿಸಿದ ದುಬೆ – ಚೆನ್ನೈ ಸೂಪರ್‌ ಕಿಂಗ್ಸ್‌ಗೆ 49 ರನ್‌ಗಳ ಭರ್ಜರಿ ಜಯ

    ರಂಗೇರಿಸಿದ ರಹಾನೆ, ಧೂಳೆಬ್ಬಿಸಿದ ದುಬೆ – ಚೆನ್ನೈ ಸೂಪರ್‌ ಕಿಂಗ್ಸ್‌ಗೆ 49 ರನ್‌ಗಳ ಭರ್ಜರಿ ಜಯ

    – ರನ್‌ ಹೊಳೆಯಲ್ಲಿ ತೇಲಾಡಿದ ಕಿಂಗ್ಸ್‌

    ಕೋಲ್ಕತ್ತಾ: ಅಜಿಂಕ್ಯಾ ರಹಾನೆ (Ajinkya Rahane), ಶಿವಂ ದುಬೆ (Shivam Dube), ಡಿವೋನ್‌ ಕಾನ್ವೆ (Devon Conway) ಭರ್ಜರಿ ಬ್ಯಾಟಿಂಗ್‌ ಹಾಗೂ ಶಿಸ್ತು ಬದ್ಧ ಬೌಲಿಂಗ್‌ ದಾಳಿ ಪ್ರದರ್ಶನದಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಕೋಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ 49 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

    ಇಲ್ಲಿನ ಈಡನ್‌ ಗಾರ್ಡನ್‌ನಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ತಂಡವು 20 ಓವರ್‌ಗಳಲ್ಲಿ ಭರ್ಜರಿ 235 ರನ್‌ ಸಿಡಿಸಿತ್ತು. 236 ರನ್‌ಗಳ ಗುರಿ ಬೆನ್ನತ್ತಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್‌ (Kolkata Knight Riders) 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 186 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ಚೇಸಿಂಗ್‌ ಆರಂಭಿಸಿದ ಕೆಕೆಆರ್‌ ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನ ಕಳೆದುಕೊಂಡಿತ್ತು. ನಾರಾಯಣ್‌ ಜಗದೀಶನ್‌ 1 ರನ್‌ ಗಳಿಸಿದರೆ, ಸುನೀಲ್‌ ನರೇನ್‌ ಶೂನ್ಯ ಸುತ್ತಿದರು. ಸ್ಫೋಟಕ ಬ್ಯಾಟ್ಸ್‌ಮ್ಯಾನ್‌ ವೆಂಕಟೇಶ್‌ ಅಯ್ಯರ್‌ (Venkatesh Iyer) ಕೇವಲ 20 ರನ್‌, ನಾಯಕ ನಿತೀಶ್‌ ರಾಣಾ 27 ರನ್‌ ಗಳಿಸಿ ವಿಕೆಟ್‌ ಕೈಚೆಲ್ಲಿದರು. ಇದರಿಂದ ತಂಡಕ್ಕೆ ಸೋಲು ಖಚಿತವಾಗಿತ್ತು. ಇದನ್ನೂ ಓದಿ: ಮ್ಯಾಕ್ಸಿ, ಡುಪ್ಲೆಸಿಸ್‌ ಭರ್ಜರಿ ಫಿಫ್ಟಿ; ಬೆಂಗ್ಳೂರಿನಲ್ಲಿ RCB ʻಹಸಿರು ಕ್ರಾಂತಿʼ- ರಾಯಲ್ಸ್‌ ವಿರುದ್ಧ 7 ರನ್‌ ರೋಚಕ ಜಯ

    ಮಧ್ಯಮ ಕ್ರಮಾಂಕದಲ್ಲಿ ಒಂದಾದ ಜೇಸನ್‌ ರಾಯ್‌ ಹಾಗೂ ರಿಂಕು ಸಿಂಗ್‌ ಜೋಡಿ 37 ಎಸೆತಗಳಲ್ಲಿ 65 ರನ್‌ ಸಿಡಿಸಿತ್ತು. ಇವರಿಬ್ಬರ ಸ್ಫೋಟಕ ಬ್ಯಾಟಿಂಗ್‌ನಿಂದ ತಂಡ ಚೇತರಿಕೆ ಕಂಡಿತ್ತು. ಆದರೆ ಜೇಸನ್‌ ರಾಯ್‌ (Jason Roy) ಔಟಾಗುತ್ತಿದ್ದಂತೆ ರನ್‌ ವೇಗವೂ ಕಡಿಮೆಯಾಯಿತು. ರಿಂಕು ಸಿಂಗ್‌ ಏಕಾಂಗಿ ಹೋರಾಟ ನಡೆಸಬೇಕಾಯಿತು. ಜೇಸನ್‌ ರಾಯ್‌ 26 ಎಸೆತಗಳಲ್ಲಿ 61 ರನ್‌ ಗಳಿಸಿದರೆ, ಕೊನೆಯವರೆಗೂ ಹೋರಾಡಿದ ರಿಂಕು ಸಿಂಗ್‌ (Rinku Singh) 33 ಎಸೆತಗಳಲ್ಲಿ 53 ರನ್‌ (3 ಬೌಂಡರಿ, 4 ಸಿಕ್ಸರ್)‌ ಗಳಿಸಿ ಅಜೇಯರಾಗುಳಿದರು. ಆ್ಯಂಡ್ರೆ ರಸ್ಸೆಲ್‌ 9 ರನ್‌, ಡೇವಿಡ್‌ ವೈಸ್‌ 1 ರನ್‌, ಉಮೇಶ್‌ ಯಾದವ್‌ 4 ರನ್‌ ಗಳಿಸಿದರು.

    ಚೆನ್ನೈ ಸೂಪರ್‌ ಕಿಂಗ್ಸ್‌ ಪರ ತುಶಾರ್‌ ದೇಶ್‌ಪಾಂಡೆ ಹಾಗೂ ಮಹೀಶ್‌ ತೀಕ್ಷಣ ತಲಾ 2 ವಿಕೆಟ್‌ ಕಿತ್ತರೆ, ಆಕಾಶ್‌ ಸಿಂಗ್‌, ಮೊಯಿನ್‌ ಅಲಿ, ರವೀಂದ್ರ ಜಡೇಜಾ ಹಾಗೂ ಮಥೀಶ ಪತಿರಾಣಾ ತಲಾ ಒಂದೊಂದು ವಿಕೆಟ್‌ ಗಳಿಸಿದರು. ಇದನ್ನೂ ಓದಿ: ಚಿನ್ನಸ್ವಾಮಿಯಲ್ಲಿ ʻಕಾಂತಾರʼ ಸಾಂಗ್‌ – RCB ಗೆಲುವಿಗೆ ದೈವ ಕಾರಣ ಅಂದ್ರು ಫ್ಯಾನ್ಸ್‌

    ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಅಜಿಂಕ್ಯಾ ರಹಾನೆ, ಶಿವಂ ದುಬೆ, ಡಿವೋನ್‌ ಕಾನ್ವೆ ಅವರ ಅಮೋಘ ಪ್ರದರ್ಶನದಂದಾಗಿ ದಾಖಲೆಯ ಮೊತ್ತ ಪೇರಿಸಿತು. ಚೆನ್ನೈ ತಂಡದ ಅಗ್ರ ಕ್ರಮಾಂಕದ ಎಲ್ಲಾ ಆಟಗಾರರೂ ಅಬ್ಬರದ ಪ್ರದರ್ಶನ ನೀಡಿದರು. ಅದರಲ್ಲೂ ಅಜಿಂಕ್ಯಾ ರಹಾನೆ ಹಾಗೂ ಶಿವಂ ದುಬೆ ಕೊಲ್ಕತ್ತಾ ನೈಟ್ ರೈಡರ್ಸ್ ಬೌಲರ್‌ಗಳನ್ನು ಧೂಳಿಪಟ ಮಾಡಿದರು. ಈ ಜೋಡಿ ಕೇವಲ 32 ಎಸೆತಗಳಲ್ಲಿ 85 ರನ್‌ಗಳ ಜೊತೆಯಾಟ ನೀಡುವ ಮೂಲಕ ಸಿಎಸ್‌ಕೆ ತಂಡ ಬೃಹತ್ ಮೊತ್ತ ಗಳಿಸಲು ಕಾರಣವಾದರು. ಇದಕ್ಕೂ ಮುನ್ನ ಆರಂಭಿಕರಾದ ಡಿವೋನ್‌ ಕಾನ್ವೆ ಹಾಗೂ ಋತುರಾಜ್‌ ಗಾಯಕ್ವಾಡ್‌ 45 ಎಸೆತಗಳಲ್ಲಿ 73 ರನ್‌ ಸಿಡಿಸಿದ್ದರು.

    ಋತುರಾಜ್ 20 ಎಸೆತಗಳಲ್ಲಿ 35 ರನ್‌ಗಳಿಸಿ ಔಟಾದರು. ನಂತರ ಅರ್ಧ ಶತಕ ಸಿಡಿಸಿದ ಕಾನ್ವೆ 40 ಎಸೆತಗಳಲ್ಲಿ 56 ರನ್‌ (4 ಬೌಂಡರಿ, 3 ಸಿಕ್ಸರ್‌) ಗಳಿಸಿ ವಿಕೆಟ್ ಕಳೆದುಕೊಂಡರು. ನಂತರ ಜೊತೆಯಾಗಿದ್ದು ರಹಾನೆ ಹಾಗೂ ದುಬೆ ಜೋಡಿ. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಶಿವಂ ದುಬೆ ಕೇವಲ 21 ಎಸೆತಗಳಲ್ಲೇ 50 ರನ್‌ (5 ಸಿಕ್ಸರ್‌, 2 ಬೌಂಡರಿ) ಗಳಿಸಿ ಚಚ್ಚಿದರು. ಆದರೆ ಅಜಿಂಕ್ಯಾ ರಹಾನೆ ಕೊನೆಯ ವರೆಗೂ ವಿಕೆಟ್ ಕಳೆದುಕೊಳ್ಳದೇ ಕೆಕೆಆರ್‌ ಬೌಲರ್‌ಗಳನ್ನ ಚೆಂಡಾಡಿದರು. ಕೇವಲ 29 ಎಸೆತಗಳಲ್ಲಿ ಅವರು 71 ರನ್‌ (5 ಸಿಕ್ಸರ್‌, 6 ಬೌಂಡರಿ) ಬಾರಿಸಿ ಅಜೇಯರಾಗುಳಿದರು.

    ಕೊನೆಯ ಕ್ಷಣದಲ್ಲಿ ರವೀಂದ್ರ ಜಡೇಜಾ 8 ಎಸೆತಗಳಲ್ಲಿ ಎದುರಿಸಿ 18 ರನ್ ಬಾರಿಸಿ ವಿಕೆಟ್ ಕಳೆದುಕೊಂಡರು. ಎಂ.ಎಸ್ ಧೋನಿ 2 ರನ್‌ಗಳಿಸಿ ಅಜೇಯವಾಗುಳಿದರು. ಈ ಮೂಲಕ ಸಿಎಸ್‌ಕೆ ಈ ಪಂದ್ಯದಲ್ಲಿ 4 ವಿಕೆಟ್ ಕಳೆದುಕೊಂಡು 235 ರನ್‌ಗಳಿಸಿತು. ಇದು ಈ ವರ್ಷದ ಐಪಿಎಲ್‌ನಲ್ಲಿ ಬೃಹತ್‌ ಮೊತ್ತ ಎಂಬ ದಾಖಲೆ ಸಹ ಬರೆಯಿತು.

    ಕೆಕೆಆರ್‌ ಪರ ಕುಲ್ವಂತ್ ಖೇಜ್ರೋಲಿಯಾ 2 ವಿಕೆಟ್‌ ಕಿತ್ತರೆ, ವರುಣ್‌ ಚಕ್ರವರ್ತಿ ಹಾಗೂ ಸುಯಶ್‌ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದರು.

  • ಕೆಟ್ಟ ದಾಖಲೆಗೆ ಗುರಿಯಾದ ಶಿವಂ ದುಬೆ

    ಕೆಟ್ಟ ದಾಖಲೆಗೆ ಗುರಿಯಾದ ಶಿವಂ ದುಬೆ

    ಮೌಂಟ್ ಮಾಂಗನುಯಿ: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯನ್ನು ಟೀಂ ಇಂಡಿಯಾ ಕ್ಲೀನ್‍ಸ್ವಿಪ್ ಮೂಲಕ ತನ್ನ ಮುಡಿಗೇರಿಸಿಕೊಂಡಿದೆ. ಆದರೆ ಮೌಂಟ್ ಮಾಂಗನುಯಿಯಲ್ಲಿ ಇಂದು ನಡೆದ ಕೊನೆಯ ಪಂದ್ಯದಲ್ಲಿ ಭಾರತ ತಂಡದ ಆಲ್‍ರೌಂಡರ್ ಶಿವಂ ದುಬೆ ಕೆಟ್ಟ ದಾಖಲೆಗೆ ಗುರಿಯಾಗಿದ್ದಾರೆ.

    ನ್ಯೂಜಿಲೆಂಡ್ ಇನ್ನಿಂಗ್ಸ್ ನ 10ನೇ ಓವರಿನಲ್ಲಿ ಬೌಲಿಂಗ್ ಮಾಡಿದ ಶಿವಂ ದುಬೆ ಕ್ರಮವಾಗಿ 6, 6, 4, 1, ನೋಬಾಲ್ + 4, 6 ಹಾಗೂ 6 ಸೇರಿ ಒಟ್ಟು 34 ರನ್ ನೀಡಿದರು. ಈ ಮೂಲಕ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ಒಂದೇ ಓವರ್‌ನಲ್ಲಿ ಅತಿ ಹೆಚ್ಚು ರನ್ ನೀಡಿದ ವಿಶ್ವದ ಬೌಲರ್‌ಗಳ ಪಟ್ಟಿಯಲ್ಲಿ ಶಿವಂ ದುಬೆ ಎರಡನೇ ಸ್ಥಾನ ಪಡೆದಿದ್ದಾರೆ. ಅಷ್ಟೇ ಅಲ್ಲದೆ ಭಾರತದ ಪಟ್ಟಿಯಲ್ಲಿ ಶಿವಂ ದುಬೆ ಅಗ್ರ ಸ್ಥಾನದಲ್ಲಿದ್ದರೆ, ಸ್ಟುವರ್ಟ್ ಬಿನ್ನಿ ನಂತರ ಸ್ಥಾನದಲ್ಲಿದ್ದಾರೆ.  ಇದನ್ನೂ ಓದಿ:  10 ರನ್ ಅಂತರದಲ್ಲಿ 4 ವಿಕೆಟ್ ಪತನ- ಕಿವೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

    ಶಿವಂಗೆ ಮೊದಲು ಸ್ಟುವರ್ಟ್ ಬಿನ್ನಿ 2016ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಒಂದೇ ಓವರಿನಲ್ಲಿ 32 ರನ್ ನೀಡಿದ್ದರು. ಒಂದೇ ಓವರಿನಲ್ಲಿ ಅತಿ ಹೆಚ್ಚು ರನ್ ನೀಡಿದ ವಿಶ್ವದ ಬೌಲರ್‍ಗಳ ಪಟ್ಟಿಯಲ್ಲಿ ಇಂಗ್ಲೆಂಡ್‍ನ ಸ್ಟುವರ್ಟ್ ಬ್ರಾಡ್ ಅಗ್ರ ಸ್ಥಾನದಲ್ಲಿದ್ದಾರೆ. ಅವರು 2007ರಲ್ಲಿ ಭಾರತ ವಿರುದ್ಧದ ಪಂದ್ಯದಲ್ಲಿ 36 ರನ್ ನೀಡಿದ್ದರು. ಇದನ್ನೂ ಓದಿ: ಫ್ಲಿಂಟಾಫ್ ಕಿರಿಕ್‍ಗೆ ಚಿಮ್ಮಿತು 6 ಸಿಕ್ಸ್ – ಸಿಕ್ಸರ್ ಸುರಿಮಳೆಗೈದ ಯುವಿ

    ಎರಡನೇ ಸ್ಥಾನದಲ್ಲಿ ಶಿವಂ ದುಬೆ ಇದ್ದಾರೆ. ಮೂರನೇ ಸ್ಥಾನದಲ್ಲಿ ಅಫ್ಘಾನಿಸ್ತಾನದ ಎಜತುಲ್ಲಾ ದೌಲತ್ ಜೈ ಇಂಗ್ಲೆಂಡ್ ವಿರುದ್ಧ 2012ರಲ್ಲಿ ನಡೆದ ಪಂದ್ಯದಲ್ಲಿ ಒಂದೇ ಓವರಿನಲ್ಲಿ 32 ರನ್ ನೀಡಿದ್ದರು. ದಕ್ಷಿಣ ಆಫ್ರಿಕಾದ ವೇಯ್ನ್ ಪೆರ್ನೆಲ್ ಇಂಗ್ಲೆಂಡ್ ವಿರುದ್ಧ 2012ರಲ್ಲಿ 32ರನ್, ಭಾರತದ ಸ್ಟುವರ್ಟ್ ಬಿನ್ನಿ ವೆಸ್ಟ್ ಇಂಡೀಸ್ ವಿರುದ್ಧ 2016ರಲ್ಲಿ 32 ರನ್ ಹಾಗೂ ಮ್ಯಾಕ್ಸ್ ಒ’ಡೌಡ್ ಜಿಂಬಾಬ್ವೆ ಸ್ಕಾಟ್ಲೆಂಡ್ ವಿರುದ್ಧ 2019ರಲ್ಲಿ 32 ರನ್ ನೀಡಿದ್ದರು. ಇದನ್ನೂ ಓದಿ: ಕೀಪಿಂಗ್ ಆಯ್ತು, ಈಗ ಟೀಂ ಇಂಡಿಯಾ ಕ್ಯಾಪ್ಟನ್ ಜವಾಬ್ದಾರಿ ಹೊತ್ತ ಕನ್ನಡಿಗ ರಾಹುಲ್

  • 3 ಕ್ಯಾಚ್ ಡ್ರಾಪ್, ನೀರಸ ಫೀಲ್ಡಿಂಗ್- ವಿಂಡೀಸ್‍ಗೆ 8 ವಿಕೆಟ್ ಗಳ ಜಯ

    3 ಕ್ಯಾಚ್ ಡ್ರಾಪ್, ನೀರಸ ಫೀಲ್ಡಿಂಗ್- ವಿಂಡೀಸ್‍ಗೆ 8 ವಿಕೆಟ್ ಗಳ ಜಯ

    ತಿರುವನಂತಪುರಂ: ಟಿ20 ಸರಣಿಯ 2ನೇ ಪಂದ್ಯದಲ್ಲೂ ಟೀಂ ಇಂಡಿಯಾ ನಿರಸ ಫೀಲ್ಡಿಂಗ್ ಪ್ರದರ್ಶನ ನೀಡಿದ ಪರಿಣಾಮ ವೆಸ್ಟ್ ಇಂಡೀಸ್ 8 ವಿಕೆಟ್ ಗಳ‌ ಜಯ ಸಾಧಿಸಿದ್ದು, ಮೂರು ಪಂದ್ಯಗಳ ಸರಣಿ ಈಗ 1-1ರಲ್ಲಿ ಜಯ ಸಮಗೊಂಡಿದೆ.

    ತಿರುವನಂತಪುರಂನ ಗ್ರೀನ್‍ಫಿಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-20 ಸರಣಿಯ 2ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಲೆಂಡ್ಲ್ ಸಿಮನ್ಸ್ 67 ರನ್, ಎನಿನ್ ಲೂಯಿಸ್ 40 ರನ್, ನಿಕೋಲಸ್ ಪೂರನ್ 38  ರನ್‍ಗಳ ಸಹಾಯದಿಂದ 18.3 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ173 ರನ್‍ಗಳಿಸಿ ಭರ್ಜರಿ ಗೆಲುವು ಸಾಧಿಸಿದೆ.

    ಕ್ಯಾಚ್ ಡ್ರಾಪ್:
    ಇನ್ನಿಂಗ್ಸ್‌ನ 3ನೇ ಓವರ್ ಮುಕ್ತಾಯಕ್ಕೆ ವಿಂಡೀಸ್ ತಂಡವು 22 ರನ್ ಗಳಿಸಿತ್ತು. ಈ ವೇಳೆ ಬೌಲಿಂಗ್ ಆರಂಭಿಸಿದ ವಾಷಿಂಗ್ಟನ್ ಸುಂದರ್ ಕೇವಲ ಒಂದು ನೀಡಿ ರನ್ ರೇಟ್‍ಗೆ ಬ್ರೇಕ್ ಹಾಕಿದರು. ಬಳಿಕ ಬೌಲಿಂಗ್ ಮಾಡಿದ ಭುವನೇಶ್ವರ್ ಕುಮಾರ್ ಕೂಡ ಎರಡು ರನ್ ನೀಡಿ ತಂಡಕ್ಕೆ ಆಸರೆ ಆದರು. ಆದರೆ ಈ ಓವರ್ ನ ಎರಡನೇ ಎಸೆತದಲ್ಲಿ ಲೆಂಡ್ಲ್ ಸಿಮನ್ಸ್ ನೀಡಿದ ಕ್ಯಾಚ್ ಅನ್ನು ವಾಷಿಂಗ್ಟನ್ ಸುಂದರ್ ಕೈಚೆಲ್ಲಿದರು. ಈ ಬೆನ್ನಲ್ಲೇ ನಾಲ್ಕನೇ ಎಸೆತದಲ್ಲಿ ಎನಿನ್ ಲೂಯಿಸ್ ನೀಡಿದ್ದ ಕ್ಯಾಚ್ ಅನ್ನು ರಿಷಭ್ ಪಂತ್ ಕೈಬಿಟ್ಟರು. ಜೀವದಾನ ಪಡೆದ ಈ ಜೋಡಿ ಭರ್ಜರಿ ಬ್ಯಾಟಿಂಗ್ ಮುಂದುವರಿಸಿತು.

    ಲೆಂಡ್ಲ್ ಸಿಮನ್ಸ್ ಹಾಗೂ ಎನಿನ್ ಲೂಯಿಸ್ ಜೋಡಿಯು ಇನ್ನಿಂಗ್ಸ್ ನ 9ನೇ ಓವರ್ ಮುಕ್ತಾಯಕ್ಕೆ 71 ರನ್ ಸಿಡಿಸಿತ್ತು. ಬಳಿಕ ವಾಷಿಂಗ್ಟ್ ಸುಂದರ್ ಬೌಲಿಂಗ್ ವೇಳೆ ಕೈಚಳಕ ತೋರಿದ ಪಂತ್ ಎನಿನ್ ಲೂಯಿಸ್ ವಿಕೆಟ್ ಕಿತ್ತರು. ಎನಿನ್ ಲೂಯಿಸ್ 35 ಎಸೆತಗಳಲ್ಲಿ (3 ಬೌಂಡರಿ, 3 ಸಿಕ್ಸರ್) 40 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಬಳಿಕ ಮೈದಾನಕ್ಕಿಳಿದ ಶ್ರಿಮೊನ್ ಹೆಟ್ಮೆಯರ್ ಸ್ಫೋಟಕ ಬ್ಯಾಟಿಂಗ್ ಆರಂಭಿಸಿದರು. 13ನೇ ಓವರ್ ನಲ್ಲಿ ಜಡೇಜಾ ಬೌಲಿಂಗ್ ಎರಡು ಸಿಕ್ಸರ್ ಸಿಡಿಸಿದ್ದ ಹೆಟ್ಮೆಯರ್ ಮತ್ತೊಮ್ಮೆ ಬೌಂಡರಿ ಸಿಡಿಸಲು ಯತ್ನಿಸಿ ವಿರಾಟ್ ಕೊಹ್ಲಿಗೆ ಕ್ಯಾಚ್ ನೀಡಿದರು. 14 ಎಸೆತಗಳಲ್ಲಿ ಹೆಟ್ಮೆಯರ್ 3 ಸಿಕ್ಸರ್ ಸೇರಿ 23 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

    ಬಳಿಕ ಮೈದಾನಕ್ಕಿಳದ ನಿಕೋಲಸ್ ಪೂರನ್ ಲೆಂಡ್ಲ್ ಸಿಮನ್ಸ್ ಗೆ ಸಾಥ್ ನೀಡಿದರು. ಇನ್ನಿಂಗ್ಸ್ ನ 17ನೇ ಓವರ್ ನಲ್ಲಿ ಶ್ರೇಯಸ್ ಅಯ್ಯರ್ ಕ್ಯಾಚ್ ಕೈಚೆಲ್ಲಿಸಿದರು. ಪರಿಣಾಮ ಸ್ಫೋಟಕ ಬ್ಯಾಟಿಂಗ್ ಮುಂದುವರಿಸಿ ವಿಂಡೀಸ್ ಜಯಗಳಿಸಿತು.

    ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಶಿವಂ ದುಬೆ 54 ರನ್, ರಿಷಭ್ ಪಂತ್ 33 ರನ್‍ಗಳ ಸಹಾಯದಿಂದ 7 ವಿಕೆಟ್ ನಷ್ಟಕ್ಕೆ 170 ರನ್ ಪೇರಿಸಿತ್ತು.

  • ಕೆಣಕಿದ ಪೋಲಾರ್ಡ್‍ಗೆ 3 ಸಿಕ್ಸರ್‌ಗಳಿಂದ ಉತ್ತರ ನೀಡಿದ ಶಿವಂ- ವಿಂಡೀಸ್‍ಗೆ 171 ರನ್‍ಗಳ ಗುರಿ

    ಕೆಣಕಿದ ಪೋಲಾರ್ಡ್‍ಗೆ 3 ಸಿಕ್ಸರ್‌ಗಳಿಂದ ಉತ್ತರ ನೀಡಿದ ಶಿವಂ- ವಿಂಡೀಸ್‍ಗೆ 171 ರನ್‍ಗಳ ಗುರಿ

    ತಿರುವನಂತಪುರಂ: ಕೆಣಕಿದ ವೆಸ್ಟ್ ಇಂಡೀಸ್ ನಾಯಕ ಕೀರಾನ್ ಪೋಲಾರ್ಡ್ ಟೀಂ ಇಂಡಿಯಾ ಆಲ್‍ರೌಂಡರ್ ಶಿವಂ ದುಬೆ ಸಿಕ್ಸರ್‌ಗಳ ಮೂಲಕವೇ ಉತ್ತರ ನೀಡಿದ್ದಾರೆ. ದುಬೆ ಅರ್ಧಶತಕದ ಸಹಾಯದಿಂದ ಭಾರತವು ವಿಂಡೀಸ್ ತಂಡಕ್ಕೆ 171 ರನ್‍ಗಳ ಗುರಿ ನೀಡಿದೆ.

    ತಿರುವನಂತಪುರಂನ ಗ್ರೀನ್‍ಫಿಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಯ 2ನೇ ಪಂದ್ಯದಲ್ಲಿ ಭಾರತ ಶಿವಂ ದುಬೆ 54 ರನ್, ರಿಷಭ್ ಪಂತ್ 33 ರನ್ ಗಳ ಸಹಾಯದಿಂದ 7 ವಿಕೆಟ್ ನಷ್ಟಕ್ಕೆ 170 ರನ್ ಪೇರಿಸಿದೆ.

    ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ವೆಸ್ಟ್ ಇಂಡೀಸ್ ಆರಂಭದಲ್ಲಿ ಭಾರತದ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿ ಹಾಕಲು ಶಕ್ತವಾಯಿತು. ಇನ್ನಿಂಗ್ಸ್ ನ 4ನೇ ಓವರ್ ನಲ್ಲಿ ಕೆ.ಎಲ್.ರಾಹುಲ್ (11 ರನ್) ವಿಕೆಟ್ ಒಪ್ಪಿಸಿದರು. ಬಳಿಕ ಮೈದಾನಕ್ಕೆ ಇಳಿದ ಶಿವಂ ದುಬೆ ಭರ್ಜರಿ ಬ್ಯಾಟಿಂಗ್ ಆರಂಭಿಸಿ, ರೋಹಿತ್ ಶರ್ಮಾಗೆ ಸಾಥ್ ನೀಡಿದರು. ಇನ್ನಿಂಗ್ಸ್ ನ 7ನೇ ಓವರ್ ಮುಕ್ತಾಯಕ್ಕೆ ಭಾರತ 45 ರನ್ ಗಳಿಸಿತ್ತು. ಈ ವೇಳೆ ರನ್ ರೇಟ್ ಏರಿಸಲು ಮುಂದಾಗಿದ್ದ ರೋಹಿತ್ ಶರ್ಮಾ (15 ರನ್) ವಿಕೆಟ್ ಒಪ್ಪಿಸಿದರು.

    ಶಿವಂ ಅರ್ಧಶತಕ:
    ಇನ್ನಿಂಗ್ಸ್ ನ 9ನೇ ಓವರ್‌ನ 2 ಎರಡನೇ ಎಸೆತದಲ್ಲಿ ಶಿವಂ ದುಬೆ ಎರಡು ರನ್ ಕದಿಯಲು ಮುಂದಾಗಿದ್ದರು. ಈ ವೇಳೆ ಬೌಲರ್ ಪೋಲಾರ್ಡ್ ಪಿಚ್ ಮಧ್ಯೆ ನಿಂತು ಅಡ್ಡಿಪಡಿಸಿದರು. ಇದರಿಂದ ಕೋಪಗೊಂಡ ಶಿವಂ ದುಬೆ, ಮೂರನೇ ಎಸೆತವನ್ನು ಸಿಕ್ಸರ್ ಸಿಡಿಸಿದರು. ಇದರಿಂದ ವಿಚಲಿತಗೊಂಡ ಪೋಲಾರ್ಡ್ ನಿರಂತರ ಎರಡು ವೈಡ್ ಎಸೆದರು. ಬಳಿಕ ಬ್ಯಾಟ್‌ಗೆ ಸಿಕ್ಕ ಎರಡು ಎಸೆತಗಳನ್ನು ಶಿವಂ ದುಬೆ ಸಿಕ್ಸ್ ಸಿಡಿಸಿದರು. ಕೊನೆಯ ಎಸೆತದಲ್ಲಿ ಶಿವಂ ಒಂದು ರನ್ ಗಳಿಸಿದರು. ಈ ಮೂಲಕ ಇನ್ನಿಂಗ್ಸ್‌‌ನ 9ನೇ ಓವರ್‌ನಲ್ಲಿ ಪೋಲಾರ್ಡ್ 23 ರನ್ ನೀಡಿದರು.

    ಸ್ಫೋಟಕ ಬ್ಯಾಟಿಂಗ್‍ನಿಂದ ಶಿವಂ ದುಬೆ 27 ಎಸೆತಗಳಲ್ಲಿ ಅರ್ಧ ಶತಕ ದಾಖಲಿಸಿದರು. ಇದು ಅವರ ಟಿ20 ವೃತ್ತಿಜೀವನದ ಮೊದಲ ಅರ್ಧಶತಕವಾಗಿದೆ. ಶಿವಂ ಅರ್ಧಶತಕದ ಬಳಿಕ ಎಸೆತಗಳನ್ನು ಬೌಂಡರಿಗೆ ಅಟ್ಟಲು ಮುಂದಾಗಿ ವಿಕೆಟ್ ಒಪ್ಪಿಸಿದರು. ಶಿವಂ ದುಬೆ 30 ಎಸೆತಗಳಲ್ಲಿ (3 ಬೌಂಡರಿ, 4 ಸಿಕ್ಸರ್) 54 ರನ್ ಗಳಿಸಿ ಕ್ಯಾಚ್ ನೀಡಿ, ಪೆವಿಲಿಯನ್‍ಗೆ ತೆರಳಿದರು. ಈ ಬೆನ್ನಲ್ಲೇ ವಿರಾಟ್ ಕೊಹ್ಲಿ (19 ರನ್) ವಿಕೆಟ್ ಒಪ್ಪಿಸಿದರು.

    ರೋಹಿತ್‍ರನ್ನ ಹಿಂದಿಕ್ಕಿದ ಕೊಹ್ಲಿ:
    ಅಂತರಾಷ್ಟ್ರೀಯ ಟಿ20 ರನ್ ಟೀಂ ಇಂಡಿಯಾ ಪರ ಅತಿ ಹೆಚ್ಚು ರನ್ ದಾಖಲೆಸಿದ ಬ್ಯಾಟ್ಸ್‌ಮನ್ ಪೈಕಿ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿದ್ದರು. ಪಂದ್ಯದಲ್ಲಿ 19 ಗಳಿಸಿದ ವಿರಾಟ್ ಕೊಹ್ಲಿ ರೋಹಿತ್ ಶರ್ಮಾರನ್ನು ಹಿಂದಿಕ್ಕಿದ್ದಾರೆ. ಕೊಹ್ಲಿ 2,563 ರನ್ ಗಳಿಸುವ ಮೂಲಕ ನಂಬರ್ 1 ಸ್ಥಾನಕ್ಕೆ ಏರಿದ್ದಾರೆ. 2,547 ಗಳಿಸಿದ ರೋಹಿತ್ ಶರ್ಮಾ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.

    ವಿರಾಟ್ ಕೊಹ್ಲಿ ವಿಕೆಟ್ ಬಳಿಕ ಮೈದಾನಕ್ಕಿಳಿದ ಶ್ರೇಯಸ್ ಅಯ್ಯರ್ (10 ರನ್) ಹಾಗೂ ರವೀಂದ್ರ ಜಡೇಜಾ (9 ರನ್) ಬಹುಬೇಗ ವಿಕೆಟ್ ಒಪ್ಪಿಸಿ ಪೆವಿಲಿಯನ್‍ಗೆ ತೆರಳಿದರು. ಈ ಮಧ್ಯೆ ರಿಷಭ್ ಪಂತ್ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡದ ಮೊತ್ತವನ್ನು ಏರಿಸುತ್ತ ಸಾಗಿಸಿದರು. ಔಟಾಗದೆ ರಿಷಭ್ ಪಂತ್ 22 ಎಸೆತಗಳಲ್ಲಿ (3 ಬೌಂಡರಿ, ಸಿಕ್ಸ್) 33 ರನ್ ಸಿಡಿಸಿ ತಂಡಕ್ಕೆ ಆಸರೆಯಾದರು.

  • 20 ಲಕ್ಷ ಮೂಲ ಬೆಲೆ ಹೊಂದಿದ್ದ ಶಿವಂ ದುಬೆಯನ್ನು ಆರ್‌ಸಿಬಿ 5 ಕೋಟಿಗೆ ಖರೀದಿ ಮಾಡಿದ್ದು ಯಾಕೆ?

    20 ಲಕ್ಷ ಮೂಲ ಬೆಲೆ ಹೊಂದಿದ್ದ ಶಿವಂ ದುಬೆಯನ್ನು ಆರ್‌ಸಿಬಿ 5 ಕೋಟಿಗೆ ಖರೀದಿ ಮಾಡಿದ್ದು ಯಾಕೆ?

    ಬೆಂಗಳೂರು: ರಣಜಿ ಟೂರ್ನಿಯಲ್ಲಿ ಬರೋಡಾ ವಿರುದ್ಧದ ಪಂದ್ಯದಲ್ಲಿ ಮುಂಬೈ ಒಂದೇ ಓವರ್ ನಲ್ಲಿ ಸತತ ಐದು ಸಿಕ್ಸರ್ ಸಿಡಿಸಿದ್ದ ಮುಂಬೈ ಆಲ್ ರೌಂಡರ್ ಶಿವಂ ದುಬೆ ಅವರ ಅದೃಷ್ಟವೇ ಬದಲಾಗಿದೆ.

    ಜೈಪುರದಲ್ಲಿ ನಡೆದ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ದುಬೆ ಅವರನ್ನು 5 ಕೋಟಿ ರೂ. ನೀಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಖರೀದಿಸಿದೆ.

    25 ವರ್ಷದ ಎಡಗೈ ಬ್ಯಾಟ್ಸ್ ಮನ್ ಶಿವಂ ದುಬೆ ಅವರು ರಣಜಿ ಟ್ರೋಫಿ ಅಂತಿಮ ದಿನವಾದ ಸೋಮವಾರ ಎಡಗೈ ಸ್ಪಿನ್ನರ್ ಸ್ವಪ್ನಿಲ್ ಸಿಂಗ್ ಓವರ್ ನಲ್ಲಿ ಐದು ಎಸೆತಗಳಲ್ಲಿ ಐದು ಸಿಕ್ಸರ್ ಸಿಡಿಸಿದ್ದರು. ಮೊದಲ ಇನ್ನಿಂಗ್ಸ್ ನಲ್ಲಿ 37 ರನ್(45 ಎಸೆತ, 5 ಬೌಂಡರಿ, 1 ಸಿಕ್ಸರ್) ಹೊಡೆದಿದ್ದ ದುಬೆ ಎರಡನೇ ಇನ್ನಿಂಗ್ಸ್ ನಲ್ಲಿ 76 ರನ್(60 ಎಸೆತ, 3 ಬೌಂಡರಿ, 7 ಸಿಕ್ಸರ್) ಚಚ್ಚಿದ್ದರು.

    ಹರಾಜು ವೇಳೆ 20 ಲಕ್ಷ ರೂ. ಮೂಲ ಬೆಲೆ ಹೊಂದಿದ್ದ ಶಿವಂ ದುಬೆ ಅವರ ರಣಜಿಯಲ್ಲಿ ಸ್ಫೋಟಕ ಆಟದಿಂದಾಗಿ ಫ್ರಾಂಚೈಸಿಗಳು ಖರೀದಿಸಲು ಆಸಕ್ತಿ ತೋರಿದ ಪರಿಣಾಮ ಕೊನೆಗೆ ಆರ್‌ಸಿಬಿ ಗೆ ಮಾರಾಟವಾಗಿದ್ದಾರೆ.

    6 ಅಡಿ ಎತ್ತರ ಇರುವ ದುಬೆ ಗಂಟೆಗೆ 130 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುವ ಸಾಮಥ್ರ್ಯವನ್ನು ಹೊಂದಿದ್ದಾರೆ. ಕಳೆದ ವರ್ಷ ರಣಜಿಯಲ್ಲಿ ಒಟ್ಟು 454 ರನ್ ಸಿಡಿಸಿದ್ದ ದುಬೆ 21 ವಿಕೆಟ್ ಪಡೆದಿದ್ದರು. 2 ಶತಕ ಮತ್ತು 2 ಅರ್ಧ ಶತಕ ಸಿಡಿಸಿ ಮುಂಚಿದ್ದರು. ಮುಂಬೈ ಟಿ20 ಟೂರ್ನಿಯಲ್ಲಿ ಪ್ರವೀಣ್ ತಾಂಬೆ ಎಸೆದ ಓವರಿನ 5 ಎಸೆತವನ್ನು ಸಿಕ್ಸರ್ ಗೆ ಅಟ್ಟಿದ್ದರು.

    6 ಪ್ರಥಮ ದರ್ಜೆ ಪಂದ್ಯದಲ್ಲಿ ಶಿವಂ ದುಬೆ 567 ರನ್ ಹೊಡೆದಿದ್ದು ಇದರಲ್ಲಿ 2 ಶತಕ, 22 ವಿಕೆಟ್ ಪಡೆದಿದ್ದಾರೆ. 18 ಲಿಸ್ಟ್ ಎ ಪಂದ್ಯವಾಡಿದ್ದು, 248 ರನ್ ಮತ್ತು 23 ವಿಕೆಟ್ ಪಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv