Tag: ಶಿವಕುಮಾರ್

  • ಸಂಕಷ್ಟದಲ್ಲಿದ್ದಾಗಲೇ ಕೈ ಬಿಟ್ಟ ಸಿಎಂ ಕುಚುಕು!

    ಸಂಕಷ್ಟದಲ್ಲಿದ್ದಾಗಲೇ ಕೈ ಬಿಟ್ಟ ಸಿಎಂ ಕುಚುಕು!

    ಬೆಂಗಳೂರು: ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್‍ನಲ್ಲಿ ಇರಲಿದ್ದಾರೆ.

    ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದಾರೆ. ಮೇ 27ರವರೆಗೆ ಆಸ್ಟ್ರೇಲಿಯಾ ಪ್ರವಾಸ ಮಾಡಲಿರುವ ಡಿಕೆಶಿ, ಸಂಪೂರ್ಣವಾಗಿ ರಾಜಕಾರಣ ಮರೆತು ಕುಟುಂಬದೊಂದಿಗೆ ಕಾಲ ಕಳೆಯಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    ಮೇ 23 ರ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಅನ್ನುವ ಸ್ಥಿತಿ ಇದೆ. ಇಂತಹ ಸಮಯದಲ್ಲೇ ಡಿ.ಕೆ.ಶಿವಕುಮಾರ್ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದಾರೆ. ಡಿಕೆಶಿ ಅವರು ಸರ್ಕಾರಕ್ಕೆ ಸಂಕಷ್ಟ ಬಂದಾಗ ದೋಸ್ತಿಗಳ ನಡುವೆ ಭಿನ್ನಾಭಿಪ್ರಾಯ ಬಂದಾಗೆಲ್ಲ ಮುಂದೆ ನಿಂತು ಸರಿಪಡಿಸಿದ್ದರು.

    ಲೋಕ ಸಮರದ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಎಂಬ ಆತಂಕವಿದ್ದು, ಅದರಲ್ಲೂ ಮೈತ್ರಿ ಸರ್ಕಾರದ ಅಸ್ತಿತ್ವವೇ ಅಲ್ಲಾಡಬಹುದು ಎಂಬ ಮಾತು ಜೋರಾಗಿಯೇ ಕೇಳಿ ಬರುತ್ತಿದೆ. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಆಸ್ಟ್ರೇಲಿಯಾ ಪ್ರವಾಸ ಕಾಕತಾಳಿಯವೋ ಅಥವಾ ಉದ್ದೇಶ ಪೂರಕವೋ ಅನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

  • ತೊಟ್ಟಿಲು ತೂಗಿ, ಸಿಎಂ ಪದವಿಗೆ ಮೊರೆ ಹೋದ್ರಾ ಡಿಕೆಶಿ?

    ತೊಟ್ಟಿಲು ತೂಗಿ, ಸಿಎಂ ಪದವಿಗೆ ಮೊರೆ ಹೋದ್ರಾ ಡಿಕೆಶಿ?

    ಬಳ್ಳಾರಿ: ಸದ್ಯ ದೋಸ್ತಿ ಸರ್ಕಾರದ ಟ್ರಬಲ್ ಶೂಟರ್ ಸಚಿವ ಡಿ.ಕೆ. ಶಿವಕುಮಾರ್, ಸಿಎಂ ಪದವಿಗಾಗಿ ದೇವರ ಮೊರೆ ಹೋದರಾ ಅನ್ನೋ ಪ್ರಶ್ನೆ ಎದ್ದಿದೆ.

    ಸಚಿವ ಶಿವಕುಮಾರ್ ಬಳ್ಳಾರಿಯ ಚಳ್ಳಗುರ್ಕಿಯ ಯರಿತಾತ ದೇವಾಲಯದಲ್ಲಿ ತೊಟ್ಟಿಲು ತೂಗಿದ ನಂತರ ಇಂತಹದ್ದೊಂದು ಪ್ರಶ್ನೆ ಇದೀಗ ಎದ್ದಿದೆ. ಮಂಗಳವಾರ ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ನಾಮಪತ್ರ ಸಲ್ಲಿಕೆ ನಂತರ ಪವಾಡ ಪುರುಷ ಯರಿತಾತನ ದೇವಾಲಯದಲ್ಲಿ ತೊಟ್ಟಿಲು ತೂಗಿ ಡಿ.ಕೆ.ಶಿವಕುಮಾರ್ ಬೇಡಿಕೊಂಡಿದ್ದಾರೆ.

    ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ಇದೊಂದು ಪುಣ್ಯವಾದ ಕ್ಷೇತ್ರ. ಇಲ್ಲಿ ಇದಕ್ಕೇ ಆದಂತಹ ಇತಿಹಾಸವೂ ಇದೆ. ಇಲ್ಲಿಗೆ ಬಂದು ದರ್ಶನ ಮಾಡಲು ನನಗೆ ಅವಕಾಶ ಸಿಕ್ಕಿರಲಿಲ್ಲ. ಈಗ ಸಿಕ್ಕಿದೆ. ಹೀಗಾಗಿ ದೇವರ ದರ್ಶನ ಪಡೆದುಕೊಂಡಿದ್ದೇನೆ ಎಂದರು.

    ಈ ಬಗ್ಗೆ ನಾನು ಏನು ಮಾತನಾಡಲು ಇಷ್ಟ ಪಡುವುದಿಲ್ಲ. ನನ್ನ ಟಾರ್ಗೆಟ್ ಅವರಲ್ಲ. ಬೇರೆ ಇದೆ ಎಂದು ಸಿಎಂ ಕುಮಾರಸ್ವಾಮಿ ಮತ್ತು ಡಿಕೆಶಿ ಕಳ್ಳೆತ್ತುಗಳು, ರಾತ್ರಿ ಬಂದು ಮೇಯ್ದುಕೊಂಡು ಹೋಗುತ್ತವೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

    ಬಳ್ಳಾರಿಯ ಚಳ್ಳಗುರ್ಕಿಯ ಯರಿತಾತ ದೇವಾಲಯದಲ್ಲಿ ಇಷ್ಟಾರ್ಥ ಸಿದ್ಧಿಗಾಗಿ ತೊಟ್ಟಿಲು ತೂಗಿದರೆ ಅಂದುಕೊಂಡಿದ್ದೆಲ್ಲಾ ನೆರವೇರುತ್ತದೆ ಅನ್ನೋ ಪ್ರತೀತಿ ಇದೆ. ಅಲ್ಲದೆ ಡಿ.ಕೆ.ಶಿ ತೊಟ್ಟಿಲು ತೂಗಿದ ನಂತರ ನನ್ನ ಟಾರ್ಗೆಟ್ ಬೇರೆ ಇದೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಕಳೆದ ಉಪಚುನಾವಣೆ ಸಮಯದಲ್ಲೂ ಶಿವಕುಮಾರ್ ಬಳ್ಳಾರಿಯ ಸಂಡೂರಿನ ಜೋಗದ ತಾತನ ಬಳಿ ಹೋಗಿ ಆರ್ಶೀವಾದ ಪಡೆದಿದ್ದರು.

  • ಪ್ರಶ್ನೆ ಪತ್ರಿಕೆ ಲೀಕ್ ನಲ್ಲಿ ಸ್ವಾಮೀಜಿಯ ಕೈವಾಡ

    ಪ್ರಶ್ನೆ ಪತ್ರಿಕೆ ಲೀಕ್ ನಲ್ಲಿ ಸ್ವಾಮೀಜಿಯ ಕೈವಾಡ

    ಬೆಂಗಳೂರು: ಇತ್ತೀಚೆಗಷ್ಟೇ ಪೊಲೀಸ್ ಪೇದೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು ಎಲ್ಲರಿಗೂ ಗೊತ್ತಿದೆ. ಈ ಬಗ್ಗೆ ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಲೀಕ್ ಮಾಡಿದ್ದ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಸ್ವಾಮೀಜಿಯೊಬ್ಬರ ಹೆಸರು ಹೊರಬಂದಿದ್ದು, ಸ್ಫೋಟಕ ಮಾಹಿತಿ ಬಯಲಾಗಿದೆ.

    ಕಲ್ಮಠ ಸ್ವಾಮಿಯ ಹೆಸರು ಕೇಳಿ ಬಂದಿದೆ. ಪ್ರಶ್ನೆ ಪತ್ರಿಕೆ ಲೀಕ್ ಮಾಡುವುದರಲ್ಲಿ ಎಕ್ಸ್ ಪರ್ಟ್ ಆಗಿರುವ ಶಿವಕುಮಾರ ಸ್ವಾಮೀಜಿಯನ್ನು ಸಿಸಿಬಿ ವಿಚಾರಣೆಯನ್ನು ಮಾಡುತ್ತಿದ್ದು, ಸಾಕಷ್ಟು ಅಂಶಗಳು ಬೆಳಕಿಗೆ ಬರುತ್ತಿವೆ. ಕಲ್ಮಠ ಸ್ವಾಮಿ ಪ್ರಶ್ನೆ ಪತ್ರಿಕೆ ಲೀಕ್ ಮಾಡಿ ಅಭ್ಯರ್ಥಿಗಳಿಗೆ ಟ್ರೈನಿಂಗ್ ಕೊಡುತ್ತಿದ್ದ ಎಂದು ಗೊತ್ತಾಗಿದೆ.

    6 ಲಕ್ಷ ಕೊಟ್ಟವರಿಗೆ ನೂರು ಪ್ರಶ್ನೆ ಉಚಿತ ಎಂದು ಹೇಳುತ್ತಾ 15 ಕೋಟಿ ಹಣ ವಸೂಲಿ ಮಾಡಿ ಅಭ್ಯರ್ಥಿಗಳಿಗೆ ಶಿವಕುಮಾರ್ ಟ್ರೈನಿಂಗ್ ಕೊಡುತ್ತಿದ್ದನು. ಈತ ಪ್ರಶ್ನೆ ಪತ್ರಿಕೆಯ ಮುಖ್ಯ ಪೇಜ್‍ನ್ನೇ ಕದಿಯುತ್ತಿದ್ದನು. ಬಳಿಕ ಜನರಿಲ್ಲದ ರೆಸಾರ್ಟ್ ಒಂದರಲ್ಲಿ ಟ್ರೈನಿಂಗ್ ಕೊಡುತ್ತಿದ್ದನು ಎಂದು ತಿಳಿದು ಬಂದಿದೆ.

    ಪೊಲೀಸ್ ಪೇದೆ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣದ ಹಿಂದೆ ಶಾಸಕ ಸ್ಥಾನದ ಆಕಾಂಕ್ಷಿಯಾಗಿದ್ದ ಬಿಜೆಪಿ ಮುಖಂಡನ ನಂಟು ಇದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಬಸವರಾಜ್ ಅಲಿಯಾಸ್ ಬಸವ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದವನಾಗಿದ್ದು, 110 ಜನ ಹುಡುಗರು, 10 ಜನ ಹುಡುಗಿಯರು ಕೂಡ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಈ ಹಿಂದೆ ರಾಸಲೀಲೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಕಲ್ಮಠ ಸ್ವಾಮಿ ಈಗ ಮತ್ತೆ ಪ್ರಶ್ನೆ ಪತ್ರಿಕೆಯ ಉರುಳು ಸಿಕ್ಕಿಬಿದ್ದಿದೆ. ಪ್ರಶ್ನೆ ಪತ್ರಿಕೆಯ ಲೀಕ್ ದಂಧೆ ಗೊತ್ತಿದ್ದೇ ಸ್ವಾಮಿಜಿ ಜಾಗವನ್ನು ಬಿಟ್ಟುಕೊಟ್ಟಿದ್ರಾ.? ಅಥವಾ ಹಣವನ್ನು ಪಡೆದುಕೊಂಡಿದ್ರಾ ಅನ್ನೋ ಅನುಮಾನವನ್ನೂ ಕೂಡ ಪೊಲೀಸರು ವ್ಯಕ್ತಪಡಿಸುತ್ತಿದ್ದಾರೆ. ಪೊಲೀಸರು 7 ದಿನಗಳ ಕಾಲ ಲೀಕ್ ಕಿಂಗ್‍ಪಿನ್ ಶಿವಕುಮಾರಸ್ವಾಮಿಯನ್ನು ಕಸ್ಟಡಿಗೆ ಪಡೆದುಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಳ್ಳಾರಿ ಆಯ್ತು ಈಗ ಜಾರಕಿಹೊಳಿ ಕೋಟೆಯಲ್ಲಿ ಹವಾ – ರೈತರ ಜೊತೆ ಡಿಕೆಶಿ ಸಂಧಾನ ಯಶಸ್ವಿ

    ಬಳ್ಳಾರಿ ಆಯ್ತು ಈಗ ಜಾರಕಿಹೊಳಿ ಕೋಟೆಯಲ್ಲಿ ಹವಾ – ರೈತರ ಜೊತೆ ಡಿಕೆಶಿ ಸಂಧಾನ ಯಶಸ್ವಿ

    – ಕಾರ್ಖಾನೆ ಮಾಲೀಕರನ್ನ ಬಿಡುತ್ತೇವೆ ಹೊರತು ರೈತರನ್ನ ಬಿಡುವ ಪ್ರಶ್ನೆಯೇ ಇಲ್ಲ
    – ಡಿಕೆಶಿ ಸಂಧಾನಕ್ಕೆ ಬಗ್ಗಿ ರೈತರ ಪ್ರತಿಭಟನೆ ವಾಪಸ್

    ಬೆಳಗಾವಿ: ಬಳ್ಳಾರಿಯಲ್ಲಿ ಗಣಿಧಣಿಗಳ ಕೋಟೆಯನ್ನು ಉರುಳಿಸಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಈಗ ಜಾರಕಿಹೊಳಿ ಸಹೋದರರ ಕೋಟೆಗೆ ಲಗ್ಗೆ ಇಟ್ಟು ಯಶಸ್ವಿಯಾಗಿದ್ದಾರೆ. ನಾಲ್ಕು ದಿನಗಳಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಬ್ಬಿನ ಬಾಕಿ ಹಣವನ್ನು ಪಾವತಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಮನ ಒಲಿಸುವಲ್ಲಿ ಡಿಕೆಶಿ ಯಶಸ್ವಿಯಾಗಿದ್ದಾರೆ.

    ಬೆಳಗಾವಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದ ರೈತರನ್ನು ಡಿಕೆಶಿ ಸಮಾಧಾನ ಮಾಡಿದ್ದಾರೆ. ರೈತರು ಕೂಡ ಡಿಕೆಶಿ ಅವರ ಮಾತಿಗೆ ಬೆಲೆಕೊಟ್ಟು ಪ್ರತಿಭಟನೆಯನ್ನು ವಾಪಸ್ ಪಡೆದುಕೊಂಡಿದ್ದಾರೆ.

    ಈ ವೇಳೆ ಹೋರಾಟ ನಡೆಸುತ್ತಿದ್ದ ರೈತರು ಡಿ.ಕೆ.ಶಿವಕುಮಾರ್ ಅವರಲ್ಲಿ ಸಚಿವ ಜಾರಕಿಹೊಳಿ ಮತ್ತು ಡಿಸಿ ಬೊಮ್ಮನಹಳ್ಳಿ ವಿರುದ್ಧ ದೂರು ನೀಡಿದ್ದಾರೆ. ಅಷ್ಟೇ ಅಲ್ಲದೇ ಸಕ್ಕರೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. ನಾವೂ ಪ್ರತಿ ಸಲ ಡಿಸಿ ಅವರಿಗೆ ಮನವಿ ಕೊಡಬೇಕೇ? ನ್ಯಾಯಕ್ಕಾಗಿ ಸಾಯುವವರೆಗೂ ಮನವಿ, ಅರ್ಜಿ ಕೊಡುತ್ತಾ ಇರಬೇಕು ಎಂದು ಕಬ್ಬಿನ ಹೋರಾಟಗಾರರು ಅಳಲು ತೋಡಿಕೊಂಡಿದ್ದಾರೆ. ಕಬ್ಬಿನ ಬಾಕಿ ಉಳಿದಿರುವ ಹಣವನ್ನ ಕೊಡಿಸಿ, ಅಲ್ಲದೇ ಜಿಲ್ಲಾಡಳಿತಕ್ಕೆ ರೈತರ ಸಮಸ್ಯೆಗೆ ಸ್ಪಂದಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

    ಈ ವೇಳೆ ಪ್ರತಿಕ್ರಿಯಿಸಿದ ಡಿಕೆಶಿ, ನಮ್ಮ ರೈತರು ರಾತ್ರೋರಾತ್ರಿ ಬೆಳಗಾವಿಯಲ್ಲಿ ಧರಣಿಯನ್ನು ನಡೆಸುತ್ತಿದ್ದಾರೆ. ಸರ್ಕಾರದ ಗಮನವನ್ನು ಸೆಳೆದಿದ್ದಾರೆ. ಅದಕ್ಕೆ ಸ್ಪಂದಿಸಬೇಕಾದದ್ದು ನಮ್ಮ ಧರ್ಮ. ಈಗಾಗಲೇ ಮುಖ್ಯಮಂತ್ರಿಗಳು ಮೂರು ದಿನಗಳಿಂದ ಹಗಲು-ರಾತ್ರಿ ಕುಳಿತುಕೊಂಡು ಮಾಲೀಕರು, ಅಧಿಕಾರಿಗಳು ಮತ್ತು ರೈತರ ಬಳಿ ಚರ್ಚೆ ಮಾಡಿದ್ದಾರೆ. ಜೊತೆಗೆ ಇನ್ನೂ 15 ದಿನದ ಒಳಗಡೆ ರೈತರ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಕಟ್ಟುನಿಟ್ಟಿನ ಆದೇಶವನ್ನು ಕೊಟ್ಟಿದ್ದಾರೆ ಎಂದು ತಿಳಿಸಿದರು.

    ಸರ್ಕಾರ ನ್ಯಾಯಬದ್ಧವಾದ ಹಣ, ಬಾಕಿಯನ್ನ ಕೊಡಿಸುವ ಕೆಲಸ ಮಾಡುತ್ತದೆ. ನಮ್ಮ ಸರ್ಕಾರಕ್ಕೆ ರೈತರ ಸಮಸ್ಯೆ ಗೊತ್ತಿದೆ. ಆದರೆ ದುರದೃಷ್ಟಕರ ಸಕ್ಕರೆ ಮಾಲೀಕರು ರೈತರಿಗೆ ಕೊಡಬೇಕಾದ ಹಣ ಕೊಟ್ಟಿಲ್ಲ. ಯಾವುದೇ ಕಾರಣಕ್ಕೂ ನಾವು ಕಾರ್ಖಾನೆ ಮಾಲೀಕರನ್ನು ಬಿಡುತ್ತೇವೆ ಹೊರತು ರೈತರನ್ನು ಬಿಡುವ ಪ್ರಶ್ನೆಯೇ ಇಲ್ಲ. ಸರ್ಕಾರ ಜೀವನಾಡಿ ರೈತರು, ರೈತರಿಂದಲೇ ನಮ್ಮ ಸರ್ಕಾರ. ರೈತರಿಗಾಗಿ ಅನೇಕ ಯೋಜನೆಗಳನ್ನು ರೂಪಿಸುತ್ತೇವೆ ಎಂದು ಡಿಕೆಶಿ ಹೇಳಿದರು.


    ನಾನು ಕೂಡ ರೈತರ ಮುಖಂಡರ ಜೊತೆ ಮಾತನಾಡಿದ್ದೇನೆ. ಕಾನೂನನ್ನು ಕೈಯಲ್ಲಿ ತೆಗೆದುಕೊಳ್ಳಬೇಡಿ ಎಂದು ಮನವಿ ಮಾಡಿಕೊಂಡಿದ್ದೇನೆ. ನಮ್ಮ ಮನವಿಗೆ ರೈತರು ಸ್ಪಂದಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿದ್ದ ಪ್ರತಿಭಟನೆಯನ್ನು ವಾಪಸ್ ಪಡೆದುಕೊಂಡಿದ್ದಾರೆ. ಜೊತೆಗೆ ಕಬ್ಬಿನ ಬಾಕಿ ಬಿಲ್ ಕೊಡಿಸುವ ಭರವಸೆಯನ್ನು ಕೂಡ ನೀಡಲಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಯಾವ ಕಿಂಗು ಇಲ್ಲ, ಪಿನ್ ಇಲ್ಲ, ಕಿಂಗ್ ಪಿನ್‍ಗಳೇ ಬೇರೆ ಇದ್ದಾರೆ: ಡಿಕೆಶಿ

    ಯಾವ ಕಿಂಗು ಇಲ್ಲ, ಪಿನ್ ಇಲ್ಲ, ಕಿಂಗ್ ಪಿನ್‍ಗಳೇ ಬೇರೆ ಇದ್ದಾರೆ: ಡಿಕೆಶಿ

    ಕಲಬುರಗಿ: ಆಪರೇಷನ್ ಕಮಲದಲ್ಲಿ ಯಾವ ಕಿಂಗು ಇಲ್ಲ, ಪಿನ್ನು ಇಲ್ಲ, ಅವನು ಲೆಕ್ಕಾನು ಇಲ್ಲ ಎಂದು ಜಲಸಂಪನ್ಯೂಲ ಸಚಿವ ಡಿಕೆ.ಶಿವಕುಮಾರ್ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿ ಹೇಳಿದ್ದಾರೆ.

    ಶಿವಕುಮಾರ್ ಜಾಮೀನು ಸಿಕ್ಕ ಬೆನ್ನಲ್ಲೆ ಶ್ರೀ ಕ್ಷೇತ್ರ ದತ್ತಾತ್ರೇಯ ದೇವಸ್ಥಾನದ ದರ್ಶನ ಮಾಡಿ ಪಾದ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಯೋಗೀಶ್ವರ್ ಅಲ್ಲದೇ ಇದೀಗ ಹಲವು ಜನ ಮುಂದಾಗಿದ್ದಾರೆ. 20 – 21 ಶಾಸಕರ ಜೊತೆ ಮಾತನಾಡಿ ಆಫರ್ ಕೊಟ್ಟಿದ್ದಾರೆ. ಈ ಬಗ್ಗೆ ಸಿಎಂ ಮತ್ತು ನಮ್ಮ ಪಕ್ಷದ ನಾಯಕರು ಮಾತನಾಡುತ್ತಾರೆ ಎಂದು ಹೇಳಿದ್ದಾರೆ.

    ಆಪರೇಷನ್ ಕಮಲದಲ್ಲಿ ಬಿಜೆಪಿ ಮುಖಂಡ ಯೋಗೀಶ್ವರ್ ಕಿಂಗ್ ಪಿನ್ ಆಗಿದ್ದಾರಾ ಎನ್ನುವ ಪ್ರಶ್ನೆಗೆ ಯಾವ ಕಿಂಗು ಇಲ್ಲ, ಪಿನ್ನು ಇಲ್ಲ, ಅವನು ಲೆಕ್ಕಾನು ಇಲ್ಲ, ಕಿಂಗ್ ಪಿನ್ ಗಳೇ ಬೇರೆ ಇದ್ದಾರೆ. ಶಾಸಕರಿಗೆ ಎಷ್ಟು ಆಮಿಷ ನೀಡಿದ್ದಾರೆ ಎಂಬುದು ನಾನು ಮಾತನಾಡುವುದಿಲ್ಲ. ಗುಪ್ತ ಇಲಾಖೆಯನ್ನು ನೋಡಿಕೊಳ್ಳುವವರು ಮಾತನಾಡುತ್ತಾರೆ ಎಂದು ಉತ್ತರಿಸಿದರು.

    ಬಹಳ ವರ್ಷದಿಂದ ದತ್ತಾತ್ರೇಯ ಪೀಠದ ಬಗ್ಗೆ ಕೇಳಿದ್ದೆ. ಇಲ್ಲಿಗೆ ಬಂದು ದೇವರ ದರ್ಶನ ಮಾಡಬೇಕು ಎಂದು ನನ್ನ ಮನಸ್ಸು ಹೇಳುತ್ತಿತ್ತು. ಎರಡು ಮೂರು ಬಾರಿ ಬರಲು ಸಾಧ್ಯವಾಗದೇ ಮುಂದಕ್ಕೆ ಹೋಗಿತ್ತು. ಇಂದು ಎರಡು ಕಾರ್ಯಕ್ರಮಗಳಿದ್ದವು. ಆದರು ಮೊದಲು ದೇವರ ದರ್ಶನ ಮಾಡಬೇಕು ಎಂದು ಬಂದಿದ್ದೇನೆ. ಇಂದು ದರ್ಶನ ಭಾಗ್ಯ ಸಿಕ್ಕಿದ್ದು ಮನಸ್ಸಿಗೆ ಸಂತೋಷವಾಗಿದೆ ಎಂದು ಹೇಳಿದ್ದಾರೆ.

    ನಮ್ಮ ಶಾಸಕರನ್ನು ಸೆಳೆಯಲು ಬಿಜೆಪಿ ಯತ್ನ ಮಾಡುತ್ತಿದೆ. ಅನಿಲ್ ಚಿಕ್ಕಮಾದುಗೆ ಬಿಜೆಪಿ ಆಫರ್ ನೀಡಿದ್ದು ಸತ್ಯ. ಆಫರ್ ಬಂದಿರುವ ಬಗ್ಗೆ ನಮ್ಮ ಬಳಿ ಶಾಸಕರೇ ಹೇಳಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ ಅಂತ ಡಿಕೆಶಿ ಸ್ಪಷ್ಟಪಡಿಸಿದ್ದಾರೆ.

    ನಾನು ಏನೂ ತಪ್ಪು ಮಾಡಿಲ್ಲ. ದೇವರನ್ನ ನಂಬಿರುವ ನನಗೆ ದೇವರೇ ನ್ಯಾಯ ಕೊಡುತ್ತಾನೆ. ನನಗೆ ನೋವು, ಕಷ್ಟ ಕೊಟ್ಟ ಎಲ್ಲರ ಮೇಲೂ ದೇವರ ಅನುಗ್ರಹ ಇರಲಿ ಅಂತ ಪೂಜೆ ಬಳಿಕ ಸಚಿವ ಡಿಕೆ ಶಿವಕುಮಾರ್ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತಡರಾತ್ರಿ ಅಣ್ಣ ಡಿಕೆಶಿಯನ್ನು ಭೇಟಿ ಮಾಡಿದ್ರು ತಮ್ಮ ಡಿಕೆ ಸುರೇಶ್!

    ತಡರಾತ್ರಿ ಅಣ್ಣ ಡಿಕೆಶಿಯನ್ನು ಭೇಟಿ ಮಾಡಿದ್ರು ತಮ್ಮ ಡಿಕೆ ಸುರೇಶ್!

    ಬೆಂಗಳೂರು: ಜಾರಿ ನಿರ್ದೇಶಾಲಯ ಸಚಿವ ಡಿ.ಕೆ. ಶಿವಕುಮಾರ್ ಅವರ ಎಫ್‍ಐಆರ್ ಗೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಸಂಸದ ಡಿ.ಕೆ ಸುರೇಶ್ ತಡರಾತ್ರಿ ಅಣ್ಣನನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

    ಶನಿವಾರ ತಡರಾತ್ರಿ ಸುಮಾರು 11.30 ಗಂಟೆಗೆ ಶಿವಕುಮಾರ್ ಮನೆಗೆ ಸುರೇಶ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಸುರೇಶ್ ಅವರು ಶುಕ್ರವಾರ ಬೆಳಗ್ಗೆ ದೆಹಲಿಗೆ ಹೋಗಬೇಕಿತ್ತು. ಆದರೆ ಮಾಧ್ಯಮಗಳಲ್ಲಿ ವದಂತಿ ಬಂದ ಹಿನ್ನೆಲೆಯಲ್ಲಿ ಇಲ್ಲಿಯೇ ಉಳಿದುಕೊಂಡಿದ್ದಾರೆ ಅಂತ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮತಾನಾಡುತ್ತಾ ತಿಳಿಸಿದ್ದಾರೆ.

    ನಮ್ಮ ಮನೆಗೆ ನಾನು ಭೇಟಿ ಕೊಡುವುದಕ್ಕೆ ಯಾರದ್ದಾದರೂ ಒಪ್ಪಿಗೆ ತೆಗೆದುಕೊಳ್ಳಬೇಕಾ. ನಮ್ಮ ಮನೆಗೆ ನಾನು ಬರುವುದಕ್ಕೆ, ನಮ್ಮ ಅಣ್ಣನ ಜೊತೆ ನಾನು ಮಾತನಾಡುವುದಕ್ಕೆ ಯಾರಿಗಾದರೂ ಹೇಳಿ ಬರಬೇಕಾ ಎಂದು ಪ್ರಶ್ನಿಸಿದ್ದಾರೆ. ಅವರು ಸಿಗುವುದೇ ರಾತ್ರಿ ಹೊತ್ತು. ಹಾಗಾಗಿ ಭೇಟಿ ಮಾಡಿದ್ದೇನೆ. ನನಗೆ ಏನು ವಿಚಾರಗಳು ಗೊತ್ತಿದಿಯೋ ಆ ವಿಚಾರಗಳನ್ನು ಅವರ ಗಮನಕ್ಕೆ ತಂದಿದ್ದೇನೆ. ನಾವು ಏನೂ ತಪ್ಪು ಮಾಡಿಲ್ಲ. ಉಹಾ ಪೋಹಗಳು ನಡೆಯುತ್ತಿವೆ. ಬಿಜೆಪಿಯವರು ವಾಮಮಾರ್ಗದ ಮೂಲಕ ಅಧಿಕಾರ ಪಡೆಯಲು ಮುಂದಾಗಿದ್ದಾರೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇಡಿ ಅವರು ಎಫ್‍ಐಆರ್ ಮಾಡಿದರೆ ನಾವು ಉತ್ತರ ಕೊಡುತ್ತೇವೆ. ಅರೆಸ್ಟ್ ಮಾಡುತ್ತಾರೋ ಮಾಡಲಿ. ನಾನಾಗಲಿ, ಡಿಕೆ ಶಿವಕುಮಾರ್ ಆಗಲಿ ಭಯ ಪಡುವ ಪ್ರಮೇಯವೇ ಇಲ್ಲ. ಸರ್ಕಾರ ಹಾಗೂ ನಾವು ಇದನ್ನು ಎದುರಿಸುತ್ತೇವೆ ಅಂತ ಸಂಸದ ಡಿಕೆ ಸುರೇಶ್ ಖಡಕ್ಕಾಗಿ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ದ್ವೇಷದ ರಾಜಕಾರಣ, ಭಯದಿಂದ ತುರ್ತು ಸುದ್ದಿಗೋಷ್ಠಿ ಕರೆದಿಲ್ಲ: ಡಿಕೆ ಸುರೇಶ್

    ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ದ್ವೇಷದ ರಾಜಕಾರಣ, ಭಯದಿಂದ ತುರ್ತು ಸುದ್ದಿಗೋಷ್ಠಿ ಕರೆದಿಲ್ಲ: ಡಿಕೆ ಸುರೇಶ್

    ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಎಫ್‍ಐಆರ್ ದಾಖಲಿಸುವ ಪ್ರಯತ್ನ ನಡೆಸುತ್ತಿದ್ದ ಬೆನ್ನಲ್ಲೇ ಸಹೋದರ ಸಂಸದ ಡಿ.ಕೆ. ಸುರೇಶ್ ಅವರು ನಗರದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ರಾಜ್ಯ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಇಂದು ಸಿಬಿಐ, ಇಡಿ ಮತ್ತು ಆದಾಯ ತೆರಿಗೆ ಇಲಾಖೆಯನ್ನ ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳತ್ತಿದೆ. ನಾನು ಯಾವುದಕ್ಕೂ ಹೆದರುವುದಿಲ್ಲ. ನಾವು ಈಗಾಗಲೇ ಹಿರಿಯ ಅಧಿಕಾರಿಗಳನ್ನ ಮತ್ತು ವಕೀಲರನ್ನು ಭೇಟಿ ಮಾಡಿ ಸತ್ಯಾಸತ್ಯತೆಯ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು ಯಾವುದೇ ತಪ್ಪು ಮಾಡಿಲ್ಲ. ನಮ್ಮ ಬಳಿ ಇರುವ ಎಲ್ಲ ಲೆಕ್ಕಗಳಿಗೆ ಐಟಿಗೆ ಉತ್ತರ ಕೊಟ್ಟಿದ್ದೇವೆ ಎಂದು ಹೇಳಿದರು.

    ಸದ್ಯಕ್ಕೆ ಯಾವುದೇ ನೋಟಿಸ್ ಬಂದಿಲ್ಲ. ಕಾನೂನು, ಸಂವಿಧಾನದ ಮೇಲೆ ಗೌರವವಿದೆ. ಭಯದಿಂದ ಈ ಸುದ್ದಿಗೋಷ್ಠಿ ಮಾಡುತ್ತಿಲ್ಲ. ಬಿಜೆಪಿ ಅವರ ದುರಾಡಳಿತ, ಅವರು ಯಾವ ರೀತಿ ವಿರೋಧ ಪಕ್ಷದ ಮೇಲೆ ಗದಾಪ್ರಹಾರ ಮತ್ತು ಅಧಿಕಾರ ದುರುಪಯೋಗ ಮಾಡುತ್ತಿದ್ದಾರೆ ಎಂಬುದನ್ನು ಈ ರಾಜ್ಯದ ಜನರಿಗೆ ತಿಳಿಸುವ ಪ್ರಯತ್ನವನ್ನು ಮಾಡುತ್ತಿದ್ದೇನೆ ಎಂದರು.

    ಸೋನಿಯಾ ಗಾಂಧಿ, ಮಮತಾ ಬ್ಯಾನರ್ಜಿ ಹೀಗೆ ದೇಶದ ಎಲ್ಲ ನಾಯಕರ ಮೇಲೂ ಕೇಸು ಹಾಕಿದ್ದಾರೆ. ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸುವ ಯತ್ನ ಮಾಡುತ್ತಿದ್ದಾರೆ. ಗುಜರಾತ್ ರಾಜ್ಯಸಭಾ ಚುನಾವಣೆ ನಂತರ ಈ ಸೇಡಿನ ರಾಜಕಾರಣ ಜಾಸ್ತಿಯಾಗಿದೆ. ಡಿ.ಕೆ ಶಿವಕುಮಾರ್ ಮೇಲೆ ಕಂಪ್ಲೇಂಟ್ ಕೊಟ್ಟಿದ್ದಾರೆ. ಸರ್ಕಾರವನ್ನು ಅಸ್ಥಿರ ಮಾಡಲು, ಅಧಿಕಾರವನ್ನು ಪಡೆಯಲು ಬಿಜೆಪಿಯವರು ಈ ರೀತಿ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಡಿ.ಕೆ ಶಿವಕುಮಾರ್ ಅವರನ್ನು ಅರೆಸ್ಟ್ ಮಾಡಿಸುತ್ತೇವೆ ಎಂದು ಬಿಜೆಪಿ ನಾಯಕರೇ ಹೇಳಿದ್ದಾರೆ ಎಂದು ಆರೋಪಿಸಿದರು.

    ದ್ವೇಷದ ರಾಜಕಾರಣ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಬೆಳೆದಿದೆ. ಅದರಲ್ಲೂ ಕೂಡ ಕರ್ನಾಟಕ ಬಿಜೆಪಿಯ ಟಾರ್ಗೆಟ್ ಆಗಿದೆ. ಇಲ್ಲಿ ಬಿಜೆಪಿಗೆ ಸಡ್ಡು ಹೊಡೆದು ಸಮ್ಮಿಶ್ರ ಸರ್ಕಾರ ರಚನೆ ಆಗಿದೆ. ಈ ಸಂದರ್ಭದಲ್ಲಿ ಕೆಲವೊಂದು ವಿದ್ಯಮಾನಗಳು ಕೇಂದ್ರ ಸರ್ಕಾರದ ಅಧೀನದಲ್ಲಿರುವ ಐಟಿ, ಇಡಿ, ಸಿಬಿಐಯನ್ನ ಬಳಸಿಕೊಂಡು ರಾಜ್ಯ ಸರ್ಕಾರಕ್ಕೆ ಬೆಂಬಲವಾಗಿರುವವರನ್ನ ಬಂಧಿಸುವ ಪ್ರಯತ್ನವನ್ನು ಬಿಜೆಪಿಯ ರಾಜ್ಯ, ರಾಷ್ಟ್ರ ನಾಯಕರು ಮಾಡುತ್ತಿದ್ದಾರೆ ಎಂದರು.

    ಕಳೆದು ಒಂದು ವರ್ಷದ ಹಿಂದೆ ನನ್ನ ಸಹೋದರರ ಮನೆ, ಕಚೇರಿ, ಸಂಬಂಧಿಕರ ಮೇಲೆ ಸುಮಾರು 68 ಕಡೆ ಐಟಿ ದಾಳಿ ನಡೆಸಿತ್ತು. ಅದು ಮುಂದುವರಿದು 80 ಕಡೆ ದಾಳಿ ನಡೆದಿತ್ತು. ಈಗಾಗಲೇ ಐಟಿ ಅಧಿಕಾರಿಗಳು ಪ್ರಾಷಿಕ್ಯೂಷನ್ ಕೇಸ್ ಅನ್ನು ಡಿ.ಕೆ ಶಿವಕುಮಾರ್ ಮೇಲೆ ಹಾಕಿದ್ದಾರೆ. ಆದರೆ ಕೇಸ್ ಹಾಕಿದ್ದರಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ಗೊತ್ತಾದ ಮೇಲೆ ಮತ್ತೊಂದು ಪ್ರಯತ್ನವನ್ನು ಹಿಂಬಾಗಿಲಿನಿಂದ ಶಿವಕುಮಾರ್ ಮೇಲೆ ಒತ್ತಡ ತರಬೇಕು ಎಂದು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ದೂರಿದರು.

    ಪ್ರಧಾನಿ ಮಂತ್ರಿ ಅವರಿಗೆ ಇದರ ಬಗ್ಗೆ ಮಾಹಿತಿ ಇದೆಯೋ ಇಲ್ಲವೋ ಗೊತ್ತಿಲ್ಲ. ಪ್ರಧಾನಿ ಮಂತ್ರಿಯ ಕಚೇರಿಯನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರದ ಅದೀನ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿರುವ ಈ ವಿಚಾರ ಗೊತ್ತಿದೆಯೋ ಇಲ್ಲವೋ ತಿಳಿದಿಲ್ಲ. ಹಾಗಾಗಿ ಪ್ರಧಾನಿ ಮೋದಿ ಅವರು ಮಧ್ಯೆ ವಹಿಸಬೇಕು ಎಂದು ಒತ್ತಾಯಿಸುತ್ತೇನೆ. ಇದರ ಬಗ್ಗೆ ಮಾತನಾಡಲು ಅವರನ್ನು ಖುದ್ದಾಗಿ ಭೇಟಿ ಮಾಡಿ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

    ಡಿ.ಕೆ. ಶಿವಕುಮಾರ್ ಅಪರಾಧ ಎಸಗಿದರೆ ಮಾತ್ರ ಜಾರಿ ನಿರ್ದೇಶನಾಲಯಕ್ಕೆ ರೆಫರ್ ಮಾಡಲು ಅವಕಾಶ ಇರುತ್ತದೆ. ಆದರೆ ಇದು ಸಿಬಿಐ ಅಲ್ಲಾ ಸಿಬಿಐ ಮೋರ್ಚಾ, ಐಟಿ ಮೋರ್ಚಾ ಮತ್ತು ಇಡಿ ಮೋರ್ಚಾವಾಗಿ ಕೆಲಸ ಮಾಡುತ್ತಿದೆ. ಇದಕ್ಕೆಲ್ಲಾ ಕಾರಣ ಬಿಜೆಪಿ ನಾಯಕರ ಒತ್ತಡವಾಗಿದೆ. 1 ತಿಂಗಳಲ್ಲಿ ಸರ್ಕಾರ ಉರುಳುತ್ತದೆ ಅಂತ ಎಲ್ಲ ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಅದರ ಅರ್ಥ ಏನು ಅಂತ ಎಲ್ಲರಿಗು ಗೊತ್ತಾಗಿದೆ. ಬಿಜೆಪಿಯವರು ಹೀಗೆ ಒತ್ತಡ ಹೇರುವ ಮೂಲಕ ಸರ್ಕಾರ ಬೀಳಿಸುವ ಯತ್ನ ನಡೆಸುತ್ತಿದ್ದಾರೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಧರ್ಮವನ್ನು ಯಾರು ಕಾಪಾಡ್ತಾರೋ ಅವರನ್ನು ಧರ್ಮ ಕಾಪಾಡುತ್ತೆ: ಡಿ.ಕೆ ಶಿವಕುಮಾರ್

    ಧರ್ಮವನ್ನು ಯಾರು ಕಾಪಾಡ್ತಾರೋ ಅವರನ್ನು ಧರ್ಮ ಕಾಪಾಡುತ್ತೆ: ಡಿ.ಕೆ ಶಿವಕುಮಾರ್

    ಮಡಿಕೇರಿ: ತಲಕಾವೇರಿಗೆ ಬಾಗಿನ ಅರ್ಪಿಸಿ ಧರ್ಮವನ್ನು ಯಾರು ಕಾಪಾಡುತ್ತಾರೋ ಅವರನ್ನು ಧರ್ಮ ಕಾಪಾಡುತ್ತದೆ ಎಂದು ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

    ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ದಂಪತಿ ಕೊಡಗಿನಲ್ಲಿ ತಲಕಾವೇರಿಗೆ ಬಾಗಿನ ಅರ್ಪಿಸಿದ್ದಾರೆ. ಇವರ ಜೊತೆ ಡಿ.ಕೆ. ಶಿವಕುಮಾರ್ ಅವರು ಕೂಡ ಬಾಗಿನ ಅರ್ಪಿಸಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಶಿವಕುಮಾರ್, 19 ವರ್ಷದ ನಂತರ ಕರ್ನಾಟಕ ಸರ್ಕಾರ ಪೂಜೆ ಸಲ್ಲಿಸುವಂತಹ ಕಾರ್ಯವನ್ನು ಮಾಡುತ್ತಿದೆ. ಧರ್ಮವನ್ನು ಯಾರು ಕಾಪಾಡುತ್ತಾರೋ ಅವರನ್ನು ಧರ್ಮ ಕಾಪಾಡುತ್ತದೆ. ಧರ್ಮದಿಂದ ಭಕ್ತಿಯಿಂದ ಈ ರಾಜ್ಯವನ್ನು ಸುಭೀಕ್ಷೆಯಿಂದ ನಡೆಸುವಂತಹ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಸಂತಸದಿಂದ ಹೇಳಿದ್ದಾರೆ.

    ಈ ಹಿನ್ನೆಲೆಯಲ್ಲಿ ನಮಗೆ ಎಲ್ಲ ನದಿಗಳ ಬಗ್ಗೆ, ನಮ್ಮ ನಾಡಿನ ಬಗ್ಗೆ, ಈ ನಾಡಿನ ಕ್ಷೇಮಕ್ಕೋಸ್ಕರ ಒಳ್ಳೆದಾಗಲಿ ಎಂದು ಇಂದು ನಮ್ಮ ಭೂಮಿ ತಾಯಿ ಕಾವೇರಿಗೆ ಮುಖ್ಯಮಂತ್ರಿಗಳು ಸರ್ಕಾರದ ಸಮೇತವಾಗಿ ಪೂಜೆ ಮಾಡಿ ಬಾಗಿನ ಅರ್ಪಿಸುವ ಕಾರ್ಯವನ್ನು ಮಾಡಿದ್ದಾರೆ. ಇಲ್ಲಿ ಪೂಜೆ ಮುಗಿದ ಮೇಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗುತ್ತೇವೆ ಎಂದು ತಿಳಿಸಿದ್ದಾರೆ.

    ನಮ್ಮ ನಾಡಿದ ದೇವತೆ ಚಾಮುಂಡಿ ದೇವತೆಯ ಬಳಿ ಹೋಗಿ ದುಃಖವನ್ನು ಮತ್ತು ದಾರಿದ್ರ್ಯವನ್ನು ನಿವಾರಣೆ ಮಾಡುವ ಶಕ್ತಿಯನ್ನು ಆ ದೇವಿ ನಮಗೆ ಕೊಡಲಿ ಎಂದು ಬೇಡಿಕೊಳ್ಳುತ್ತೇವೆ. ಇವತ್ತು ಒಂದೇ ದಿನ ಹಾರಂಗಿ, ಕಬಿನಿ ಮತ್ತು ಕೆಆರ್‍ಎಸ್ ಎಲ್ಲ ಕಡೆ ಪೂಜೆ ಮಾಡುತ್ತಿದ್ದೇವೆ. ಅವರ ಕರ್ತವ್ಯವನ್ನು ದಂಪತಿ ಸಮೇತ ನಿಮ್ಮೆಲ್ಲರ ಪರವಾಗಿ ಅವರು ಮಾಡುತ್ತಿದ್ದಾರೆ ಎಂದು ಸಿಎಂ ಬಗ್ಗೆ ಶಿವಕುಮಾರ್ ಅವರು ಹೇಳಿದ್ದಾರೆ.

  • ಕಾಂಗ್ರೆಸ್‍ನತ್ತ ಮಾಲಾಶ್ರೀ, ಸಾಧು ಕೋಕಿಲ ಚಿತ್ತ?

    ಕಾಂಗ್ರೆಸ್‍ನತ್ತ ಮಾಲಾಶ್ರೀ, ಸಾಧು ಕೋಕಿಲ ಚಿತ್ತ?

    ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಮತ್ತಷ್ಟು ಜೋರಾಗಿದ್ದು ಸ್ಯಾಂಡಲ್‍ವುಡ್ ತಾರೆಯರಾದ ಮಾಲಾಶ್ರೀ ಮತ್ತು ಸಾಧು ಕೋಕಿಲ ಕಾಂಗ್ರೆಸ್ ಸೇರ್ಪಡೆಯಾಗಲು ಚಿಂತನೆ ನಡೆಸಿದ್ದಾರೆ.

    ಹೌದು. ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಮಾಲಾಶ್ರೀ ಮತ್ತು ಸಾಧುಕೋಕಿಲ ಭೇಟಿ ಮಾಡಿ ಪಕ್ಷ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎನ್ನುವ ಸುದ್ದಿ ಕೈ ಪಾಳೆಯದಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್  ಅವರನ್ನು ಬುಧವಾರ ಭೇಟಿ ಮಾಡಿ ಮಾಲಾಶ್ರೀ ಈ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಬಾರಿ ಪಕ್ಷಕ್ಕಾಗಿ ಸ್ಟಾರ್ ಪ್ರಚಾರಕರನ್ನಾಗಿಯೂ ಇವರನ್ನು ಬಳಸುವ ಸಾಧ್ಯತೆ ಇದೆ ಎನ್ನಲಾಗಿದೆ.

    ಕನಕಪುರದ ಕನಕ ಜಯಂತಿ ವೇಳೆ ಕಾಂಗ್ರೆಸ್ ವೇದಿಕೆಯಲ್ಲಿ ಮಾಲಾಶ್ರೀ, ಸಾಧುಕೋಕಿಲ ಭಾಗಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಮಾಲಾಶ್ರೀ ಮತ್ತು ಸಾಧುಕೋಕಿಲ ತಮ್ಮ ರಾಜಕೀಯಕ್ಕೆ ಸೇರ್ಪಡೆ ವಿಚಾರವಾಗಿ ಇದೂವರೆಗೂ ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ.

  • ಐಟಿ ರೇಡ್: ರಾಜ್ಯದ ಸಂಸದರಿಗೆ ಮೋದಿಯಿಂದ ಜಾಣ್ಮೆಯ ಪಾಠ

    ಐಟಿ ರೇಡ್: ರಾಜ್ಯದ ಸಂಸದರಿಗೆ ಮೋದಿಯಿಂದ ಜಾಣ್ಮೆಯ ಪಾಠ

    ನವದೆಹಲಿ: ರಾಜ್ಯದಲ್ಲಿ ಐಟಿ ದಾಳಿ ವಿಚಾರವಾಗಿ ಯಾರೂ ಪೇಚಿಗೆ ಸಿಲುಕಿಸುವ ಹೇಳಿಕೆ ಕೊಡಬೇಡಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ಜಾಣ್ಮೆಯ ಪಾಠವನ್ನು ಹೇಳಿದ್ದಾರೆ.

    ಶುಕ್ರವಾರ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ದಕ್ಷಿಣ ಭಾರತದ ಬಿಜೆಪಿ ಸಂಸದರನ್ನುದ್ದೆಶಿಸಿ ಮೋದಿ ಮಾತನಾಡಿದರು. ಈ ಸಭೆಯಲ್ಲಿ ಕೇಂದ್ರ ಸಚಿವರಾದ ಅನಂತ್ ಕುಮಾರ್, ಸದಾನಂದ ಗೌಡ, ಸಂಸದರಾದ ಬಿ.ಎಸ್ ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಪ್ರಹ್ಲಾದ್ ಜೋಶಿ, ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ ಹಾಜರಿದ್ದರು.

    ದಾಳಿಗೂ, ಬಿಜೆಪಿಗೂ ಸಂಬಂಧವೇ ಇಲ್ಲ ಎನ್ನುವ ಹೇಳಿಕೆಗಳಿಗೆ ಬದ್ಧರಾಗಿರಿ. ಅಮಿತ್ ಶಾ ನಿಮ್ಮ ರಾಜ್ಯಕ್ಕೆ ಹೋಗಿ ಬಂದಮೇಲೆ ಸಾಕಷ್ಟು ರಾಜಕೀಯ ಬದಲಾವಣೆಗಳು ಆಗುತ್ತವೆ. ಎಲ್ಲದಕ್ಕೂ ನೀವು ಸಿದ್ಧರಾಗಿರಬೇಕು. ಚುನಾವಣಾ ಯುದ್ಧಕ್ಕೆ ನೀವು ಸಿದ್ಧರಾಗಿ. ತಂತ್ರ ಅಸ್ತ್ರಗಳನ್ನು ನಾವು ತಯಾರು ಮಾಡುತ್ತೇವೆ ಎಂದು ಪ್ರಧಾನಿ ಹೇಳಿದ್ದಾರೆ ಎಂದು ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಸಿಕ್ಕಿದೆ.

    ದೆಹಲಿಯಲ್ಲಿ ರಾಜ್ಯ ಸಂಸದರ ಜೊತೆ ಮೋದಿ ಸುಮಾರು 40 ನಿಮಿಷ ಚರ್ಚೆ ನಡೆಸಿದ್ದಾರೆ. ಇದೇ ವೇಳೆ, ರಾಜ್ಯ ಬಿಜೆಪಿ ಸಂಸದರನ್ನು ತರಾಟೆ ತೆಗೆದುಕೊಂಡಿದ್ದಾರೆ. ಕೇಂದ್ರದ ಯೋಜನೆಗಳನ್ನು ಜನರಿಗೆ ತಲುಪಿಸಲು ನೀವು ವಿಫಲರಾಗಿದ್ದೀರಿ. ನಿಮ್ಮ ಕಾರ್ಯವೈಖರಿ ಸರಿಯಾಗಿಲ್ಲ. ಫಸಲ್ ಭೀಮಾ, ಉಜ್ವಲ ಯೋಜನೆಗಳನ್ನು ಪ್ರಚಾರ ಮಾಡಿ, ಕೇಂದ್ರದ ಅನುದಾನಗಳ ಬಗ್ಗೆ ಪ್ರಚಾರ ಮಾಡಿ ಎಂದು ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಇದನ್ನೂ ಓದಿ: ರಾಜ್ಯದ ರಾಜ್ಯಸಭೆ ಸದಸ್ಯರೊಬ್ಬರ ಮೇಲೆ ಮೋದಿ ಫುಲ್ ಗರಂ: ಸಂಸದರಿಗೆ ಟ್ರೆಂಡ್ ಪೊಲಿಟಿಕ್ಸ್ ಪಾಠ