Tag: ಶಿವನಗೌಡ ನಾಯಕ

  • ಕಾಂಗ್ರೆಸ್ 80 ಸ್ಥಾನ ಗಳಿಸಿದ್ರೆ ನನ್ನ ಬೆರಳು ಕತ್ತರಿಸಿ ಕೊಡುತ್ತೇನೆ: ಶಿವನಗೌಡ ನಾಯಕ

    ಕಾಂಗ್ರೆಸ್ 80 ಸ್ಥಾನ ಗಳಿಸಿದ್ರೆ ನನ್ನ ಬೆರಳು ಕತ್ತರಿಸಿ ಕೊಡುತ್ತೇನೆ: ಶಿವನಗೌಡ ನಾಯಕ

    ಕೊಪ್ಪಳ: ಇಷ್ಟು ವರ್ಷ ಆಳ್ವಿಕೆ ನಡೆಸಿದ ಕಾಂಗ್ರೆಸ್ (Congress) ಮೀಸಲಾತಿ ಹೆಚ್ಚಳ ಮಾಡಲಿಲ್ಲ. ಈಗ ಕಾಂಗ್ರೆಸ್‌ಗೆ 75-80 ಸ್ಥಾನ ಬಂದರೆ ನನ್ನ ಬೆರಳನ್ನೇ ಕತ್ತರಿಸಿ ಕೊಡುತ್ತೇನೆ ಎಂದು ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಿವನಗೌಡ ನಾಯಕ (Shivanagowda Nayaka) ಹೇಳಿದ್ದಾರೆ.

    ಕೊಪ್ಪಳದ (Koppal) ಕುಷ್ಟಗಿಯಲ್ಲಿ ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಷ್ಟು ವರ್ಷ ಆಳ್ವಿಕೆ ನಡೆಸಿದ ಕಾಂಗ್ರೆಸ್ ಮೀಸಲಾತಿ ಹೆಚ್ಚಳ ಮಾಡಲಿಲ್ಲ. ಆಗ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೀಸಲಾತಿಯನ್ನು ನೀಡಿದರೆ ಈಗ ಆಧುನಿಕ ಅಂಬೇಡ್ಕರ್ ಆಗಿರುವ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಎಸ್‌ಸಿ (SC), ಎಸ್‌ಟಿ (ST) ಮೀಸಲಾತಿ ಹೆಚ್ಚಳ ಮಾಡಿದ್ದಾರೆ ಎಂದು ನುಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ಅವಧಿಯಲ್ಲಿ ಶಾಲಾ-ಕಾಲೇಜುಗಳಲ್ಲಿಯೇ ಡ್ರಗ್ಸ್ ಸಿಗ್ತಿತ್ತು: ಕಟೀಲ್

    ಬಸವರಾಜ ಬೊಮ್ಮಾಯಿ ಅವರಿಗೆ ಎಸ್‌ಸಿ, ಎಸ್‌ಟಿ ಅವರ ಬಗ್ಗೆ ಅಪಾರ ಕಾಳಜಿ ಇದೆ. ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರು ಎರಡು ರಾಜಾಹುಲಿಗಳು ಇದ್ದಂತೆ. ಯಡಿಯೂರಪ್ಪನವರು ಮಹಾರಾಜಾಹುಲಿಯಾದರೆ, ಬೊಮ್ಮಾಯಿ ಅವರು ರಾಜಾಹುಲಿ ಎಂದರು. ಇದನ್ನೂ ಓದಿ: ಅಂಬೇಡ್ಕರ್, ಸಂವಿಧಾನ ನೆನೆದು ಭಾವುಕರಾದ ಕಾಗೇರಿ

    Live Tv
    [brid partner=56869869 player=32851 video=960834 autoplay=true]

  • ಹುಚ್ಚು ಹುಚ್ಚಾಗಿ ಪ್ರಶ್ನೆ ಕೇಳ್ಬೇಡಿ – ಬಿಜೆಪಿ ಶಾಸಕ ಶಿವನಗೌಡ ನಾಯಕ ದರ್ಪ

    ಹುಚ್ಚು ಹುಚ್ಚಾಗಿ ಪ್ರಶ್ನೆ ಕೇಳ್ಬೇಡಿ – ಬಿಜೆಪಿ ಶಾಸಕ ಶಿವನಗೌಡ ನಾಯಕ ದರ್ಪ

    ರಾಯಚೂರು: ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಆಡಿಯೋ ಕುರಿತಂತೆ ಪ್ರಶ್ನಿಸಿದಾಗ ದೇವದುರ್ಗ ಶಾಸಕ ಶಿವನಗೌಡ ನಾಯಕ ಅವರು ಮಾಧ್ಯಮದವರ ಮೇಲೆಯೇ ದರ್ಪ ತೋರಿದ್ದಾರೆ.

    ರಾಯಚೂರಿನ ದೇವದುರ್ಗದ ವೀರಗೋಟದಲ್ಲಿ ಸದನದಿಂದ ಹೊರಬಂದ ವಿಚಾರದ ಕುರಿತು ಮಾಧ್ಯಮದವರು ಪ್ರಶ್ನಿಸಿದಾಗ ನಾನು ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ. ಆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡುವ ಸ್ಥಳ ಇದಲ್ಲ. ಹುಚ್ಚು ಹುಚ್ಚಾಗಿ ಪ್ರಶ್ನೆ ಕೇಳಬೇಡಿ. ಯಡಿಯೂರಪ್ಪನವರ ಬಗ್ಗೆ, ಆಡಿಯೋ ಬಗ್ಗೆ ನೀವು ಏನೇ ಕೇಳಿದರೂ ಪ್ರತಿಕ್ರಿಯೆ ನೀಡಲ್ಲ. ಇಷ್ಟಲಿಂಗ ಪೂಜೆ ಕಾರ್ಯಕ್ರಮದ ಬಗ್ಗೆ ಕೇಳಿ ಮಾತನಾಡುತ್ತೇನೆ ಎಂದು ಕಿಡಿಕಾರಿದ್ದಾರೆ.

    ಜಿಲ್ಲೆಯ ನಡೆಯುತ್ತಿರುವ ಬಹುದೊಡ್ಡ ಲಿಂಗಪೂಜೆ ಕಾರ್ಯಕ್ರಮ ಇದಾಗಿದೆ. ಇಡೀ ನಾಡಿನ ಜನರು ಸೇರಿ ಮಾಡುವಂತಹ ಕಾರ್ಯಕ್ರಮವಾಗಿದೆ. ಇದೂ ಒಂದು ತಾಲೂಕು ಮತ್ತು ಜಿಲ್ಲೆಗೆ ಸೀಮಿತವಾದ ಕಾರ್ಯಕ್ರಮವಲ್ಲ, ನಾನು ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷನಾಗಿದ್ದೇನೆ. ಕಾರ್ಯಕ್ರಮದ ತಯಾರಿ ನಿರಂತರವಾಗಿ ನಡೆದಿದೆ. ಇಡೀ ದೇಶದಲ್ಲಿ ದಾಖಲೆ ಮಾಡುವ ಕಾರ್ಯಕ್ರಮವಾಗಿದೆ ಎಂದರು.

    ಸದನ ಬಿಟ್ಟು ದೇವದುರ್ಗಕ್ಕೆ ಮರಳಿರುವ ಶಾಸಕ ಶಿವನಗೌಡ ನಾಯಕ, ರಾಯಚೂರಿನ ದೇವದುರ್ಗ ಪ್ರವಾಸಿಮಂದಿರದಲ್ಲಿ ಶಿವನಗೌಡ ಇಂದು ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದ್ದಾರೆ. ಅಧಿಕಾರಿಗಳನ್ನ ಐಬಿಗೆ ಕರೆಸಿಕೊಂಡು ಕ್ಷೇತ್ರದ ಕೆಲಸದಲ್ಲಿ ಶಾಸಕರು ತೊಡಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಭವಿಷ್ಯವಾಣಿ ನಿಜವಾಗಿಸಲು ಹೊರಟ ಶಾಸಕ ಶಿವನಗೌಡರಿಂದ ಇಂದು ಬಿಎಸ್‍ವೈ ಏಕಾಂಗಿ!

    ಭವಿಷ್ಯವಾಣಿ ನಿಜವಾಗಿಸಲು ಹೊರಟ ಶಾಸಕ ಶಿವನಗೌಡರಿಂದ ಇಂದು ಬಿಎಸ್‍ವೈ ಏಕಾಂಗಿ!

    ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಪರೇಷನ್ ಡೀಲ್ ಆಡಿಯೋ ಬಿಡುಗಡೆಯಾಗಿ ಏಕಾಂಗಿ ಆಗಿದ್ದಾರೆ. ಇದಕ್ಕೆಲ್ಲಾ ಕಾರಣ ದೇವದುರ್ಗದ ಶಾಸಕ ಶಿವನಗೌಡ ನಾಯಕ್‍ರ ಆತುರ ಎಂಬ ಮಾತುಗಳು ಕೇಳಿ ಬರುತ್ತಿವೆ. ಬಿಎಸ್ ಯಡಿಯೂರಪ್ಪ ದೈವಭಕ್ತರು, ಭವಿಷ್ಯವಾಣಿಗಳನ್ನು ನಂಬುತ್ತಾರೆ. ಆದ್ರೆ ಶಾಸಕ ಶಿವನಗೌಡ ನಾಯಕ್ ಹಾಗಲ್ಲ, ಭವಿಷ್ಯವಾಣಿಯನ್ನು ನಂಬುವದರ ಜೊತೆಗೆ ಅದನ್ನು ನಿಜ ಮಾಡಲು ಕೂಡಲೇ ಕಾರ್ಯಪ್ರವೃತ್ತರಾಗ್ತಾರೆ. ಅವರ ಅತೀ ಉತ್ಸಾಹವೇ ಯಡಿಯೂರಪ್ಪರನ್ನು ಇವತ್ತು ಒಂಟಿಯನ್ನಾಗಿ ಮಾಡಿದೆ ಎಂದು ಹೇಳಲಾಗುತ್ತಿದೆ.

    ದೇವದುರ್ಗ ತಾಲೂಕಿನ ಮುಂಡರಗಿಯ ಶಿವರಾಯಸ್ವಾಮಿ ದೇವಾಲಯದ ಅರ್ಚಕ ಶಿವಣ್ಣ ತಾತ ಅಂದ್ರೆ ಶಿವನಗೌಡರಿಗೆ ಎಲ್ಲಿಲ್ಲದ ನಂಬಿಕೆ. ಅವರು ಈವರೆಗೆ ಹೇಳಿದ ಎಲ್ಲಾ ಭವಿಷ್ಯವಾಣಿಗಳು ಈವರೆಗೆ ಸುಳ್ಳಾಗಿಲ್ಲ. ಎಲ್ಲವೂ ನಿಜವಾಗಿದೆ. ಹೀಗಾಗಿ ಬಜೆಟ್ ಅಧಿವೇಶನವಿದ್ದರೂ ಫೆಬ್ರವರಿ 7ರಂದು ಸಂಜೆ 5:30ಕ್ಕೆ ಶಿವನಗೌಡನ ಜೊತೆ ಏಕಾಏಕಿ ಹೆಲಿಕಾಪ್ಟರ್‍ನಲ್ಲಿ ರಾಯಚೂರಿನ ದೇವದುರ್ಗದ ಅರಕೇರಾಕ್ಕೆ ಬಂದ ಯಡಿಯೂರಪ್ಪ ರಾತ್ರಿ ವೇಳೆ ಶಿವಣ್ಣ ತಾತನನ್ನ ಭೇಟಿಯಾಗಿ ಆಶೀರ್ವಾದ ಪಡೆದರು. ಇದೇ ವೇಳೆ ಶಿವನಗೌಡ ನಾಯಕ್ ಓರ್ವ ಶಾಸಕನನ್ನು ಸೆಳೆದ್ರೆ ಬಿಎಸ್ ಯಡಿಯೂರಪ್ಪ ಸಿಎಂ ಆಗ್ತಾರೆ ಅಂತ ಭವಿಷ್ಯ ನುಡಿದಿದ್ದರು ಎನ್ನಲಾಗಿದೆ.

    ಭವಿಷ್ಯವಾಣಿ ಕೇಳುತ್ತಿದ್ದಂತೆ ಗುರುಮಿಠಕಲ್ ಶಾಸಕರ ಪುತ್ರ ಶರಣಗೌಡಗೆ ದುಂಬಾಲು ಬಿದ್ದ ಶಿವನಗೌಡ ನಾಯಕ್, ದೇವದುರ್ಗದ ಪ್ರವಾಸಿ ಮಂದಿರಕ್ಕೆ ಕರೆಸಿಕೊಂಡಿದ್ದಾರೆ. ಮಧ್ಯರಾತ್ರಿ ಗಾಢ ನಿದ್ರೆಯಲ್ಲಿದ್ದ ಯಡಿಯೂರಪ್ಪರನ್ನ ಸ್ವತಃ ಶಿವನಗೌಡ ನಾಯಕ್ ಕಾಲುಮುಟ್ಟಿ ಎಬ್ಬಿಸಿದ್ದಾರೆ. ಬಳಿಕ ಎದ್ದ ಯಡಿಯೂಪರಪ್ಪ ಶಿವನಗೌಡ ಮೇಲಿನ ನಂಬಿಕೆಯಿಂದ ಬಿ.ಎಸ್ ಯಡಿಯೂರಪ್ಪ ಜೊತೆ ಮಾತನಾಡಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

    ಶಿವನಗೌಡರಿಗೆ ಭವಿಷ್ಯ ನಿಜ ಮಾಡೋ ಆತುರ, ಬಿಎಸ್ ಯಡಿಯೂರಪ್ಪರಿಗೆ ನಿದ್ದೆಯ ಮಂಪರು. ಮಾತುಕತೆಗೆ ಬಂದ ಶರಣಗೌಡ ಏನೇನ್ ಸಿದ್ಧತೆ ಮಾಡಿಕೊಂಡು ಬಂದಿದ್ದಾರೆ. ಆಡಿಯೋ ಏನಾದ್ರೂ ರೆಕಾರ್ಡ್ ಮಾಡ್ತಾರೋ ಇಲ್ವೋ ಅನ್ನೋದನ್ನ ನೋಡದೇ ಮಾತುಕತೆ ನಡೆಸಿದ್ದಾರೆ. ಇದೇ ಯಡವಟ್ಟು ಇವತ್ತು ಬಿಎಸ್ ಯಡಿಯೂರಪ್ಪರನ್ನು ಏಕಾಂಗಿಯನ್ನಾಗಿ ಮಾಡಿದೆ. ಇದನ್ನ ರೆಕಾರ್ಡ್ ಮಾಡಿಕೊಂಡಿದ್ದ ಶರಣಗೌಡ ಯಡಿಯೂರಪ್ಪ ಆಪರೇಷನ್‍ನ್ನು ಬಹಿರಂಗಗೊಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv