Tag: ಶಿವಪ್ಪ

  • ನಟ ವಿರೇನ್ ಕೇಶವ್‌ಗೆ ಚಲನಚಿತ್ರೋತ್ಸವದ ‘ಅತ್ಯುತ್ತಮ ನಟ’ ಪ್ರಶಸ್ತಿ

    ನಟ ವಿರೇನ್ ಕೇಶವ್‌ಗೆ ಚಲನಚಿತ್ರೋತ್ಸವದ ‘ಅತ್ಯುತ್ತಮ ನಟ’ ಪ್ರಶಸ್ತಿ

    ವ ಕರ್ನಾಟಕ ಚಲನಚಿತ್ರ ಅಕಾಡೆಮಿ ಧಾರವಾಡ ಇವರು ಆಯೋಜಿಸಿರುವ ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವ 2022ರಲ್ಲಿ, ಡಾ. ಶಿವಪ್ಪ ನಿರ್ಮಾಣದಲ್ಲಿ ತಯಾರಾದ  “ಕಾಕ್ಟೈಲ್” ಚಲನಚಿತ್ರವನ್ನು ವೀಕ್ಷಿಸಿ, ಈ ಚಲನಚಿತ್ರದಲ್ಲಿ ನಾಯಕನಟನಾಗಿ ಅಭಿನಯಿಸಿರುವ ವಿರೇನ್ ಕೇಶವ್ ಅವರಿಗೆ ಮೊಟ್ಟ ಮೊದಲ ಬಾರಿಗೆ ” ಅತ್ಯುತ್ತಮ ನಾಯಕ ನಟ ” ಎಂಬ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

    ವಿರೇನ್ ಕೇಶವ್ ಅವರಿಗೆ ಬಾಲ್ಯದಿಂದಲೂ ಕಲೆ, ಸಾಹಿತ್ಯ, ನಾಟಕ ಅಭಿನಯದಲ್ಲಿ ಆಸಕ್ತಿ ಇದ್ದುದರಿಂದ ತಮ್ಮ ಎಂ.ಬಿ.ಎ ಶಿಕ್ಷಣವನ್ನು ಮುಗಿಸಿ ಮುಂಬೈನಲ್ಲಿರುವ ಅನುಪಮ್ ಖೇರ್ ಅವರ ನಟನಾ ಸಂಸ್ಥೆಯಲ್ಲಿ ನಟನೆಯಲ್ಲಿ ತರಬೇತಿಯನ್ನು ಪಡೆದು, ಒಬ್ಬ ಪರಿಪೂರ್ಣ ನಟನಾಗಲು ಬೇಕಾಗಿರುವ ಎಲ್ಲಾ ಕಲೆಗಳನ್ನು ಸಿದ್ಧಿಸಿಕೊಂಡಿರುವ ಒಬ್ಬ ಸುಂದರ ಸ್ತುರದ್ರೂಪಿ ಕಲಾವಿದ ವಿರೇನ್ ಕೇಶವ್.  ಖ್ಯಾತ ಚಲನಚಿತ್ರ ನಟಿ ಪ್ರಿಯಾಂಕ ಉಪೇಂದ್ರ ಈ ಪ್ರಶಸ್ತಿಯನ್ನು ನೀಡಿ ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ಸ್ಲಿಮ್ ಆಗಿ ಹೊಸ ಲುಕ್‌ನಲ್ಲಿ ಮಿಂಚಿದ ವಿಜಯ್ ಸೇತುಪತಿ

    ಪ್ರಸ್ತುತ ಚಲನಚಿತ್ರವನ್ನು ವಿಜಯಲಕ್ಷ್ಮಿ ಕಂಬೈನ್ಸ್‍ನಲ್ಲಿ ಡಾ. ಶಿವಪ್ಪ ನಿರ್ಮಾಣ ಮಾಡಿದ್ದು, ಶ್ರೀರಾಮ್ ನಿರ್ದೇಶನ ಮಾಡಿದ್ದಾರೆ. ನಾಯಕನಟನಾಗಿ ಪ್ರತಿಭಾವಂತ ಹುಡುಗ ವಿರೇನ್ ಕೇಶವ್, ನಾಯಕಿಯಾಗಿ ಚರಿಷ್ಮಾ ನಟಿಸಿದ್ದಾರೆ. ಮುಖ್ಯ ತಾರಾಗಣದಲ್ಲಿ ಶೋಭರಾಜ್, ರಮೇಶ್ ಪಂಡಿತ್, ಮಹಾಂತೇಶ್ , ಶಿವಮಣಿ, ಕರಿಸುಬ್ಬು, ಚಂದ್ರಕಲಾ ಮೋಹನ್ ಮುಂತಾದವರು ಮುಖ್ಯ ಭೂಮಿಕೆಯಲ್ಲಿದ್ದಾರೆ. ಈ ಚಲನಚಿತ್ರವನ್ನು  ಕೆ.ಆರ್.ಜಿ ಸ್ಟುಡಿಯೋಸ್ ಇವರು ಬಿಡುಗಡೆ ಮಾಡುತ್ತಿದ್ದು, ಮುಂಬೈನ ಖ್ಯಾತ ಗಾಯಕ ಅರ್ಮಾನ್ ಮಲಿಕ್ ಅವರು ಹಾಡಿರುವ ಹಾಡು ಈಗಾಗಲೇ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಬಿಬಿ ಶಿವಪ್ಪ ನಿಧನ: ಸಾವಿನಲ್ಲೂ ಮಾನವೀಯತೆ ಮೆರೆದ ನಾಯಕ

    ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಬಿಬಿ ಶಿವಪ್ಪ ನಿಧನ: ಸಾವಿನಲ್ಲೂ ಮಾನವೀಯತೆ ಮೆರೆದ ನಾಯಕ

    ಬೆಂಗಳೂರು: ಹಿರಿಯ ಬಿಜೆಪಿ ಮುಖಂಡ ಹಾಗೂ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಬಿಬಿ ಶಿವಪ್ಪ ವಿಧಿವಶರಾಗಿದ್ದಾರೆ.

    ಬೆಂಗಳೂರಿನ ಸುಗುಣ ಆಸ್ಪತ್ರೆಯಲ್ಲಿ ನಿಧನರಾದ ಶಿವಪ್ಪ ಅವರಿಗೆ 89 ವರ್ಷ ವಯಸ್ಸಾಗಿತ್ತು. ಸಾವಿನಲ್ಲೂ ಮಾನವೀಯತೆ ಮೆರೆದ ಬಿಬಿ ಶಿವಪ್ಪ, ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ.

    ಆಸ್ಪತ್ರೆಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಭೇಟಿ ನೀಡಿದ್ದಾರೆ. ಪ್ರಮೋದ್ ಮುತಾಲಿಕ್, ಮಾಜಿ ಪರಿಷತ್ ಸದಸ್ಯ ವಿನಯ್ ಚಂದ್ರ ಹಾಗೂ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಅಸ್ಪತ್ರೆಗೆ ಆಗಮಿಸಿ ಅಂತಿಮ ದರ್ಶನ ಪಡೆದಿದ್ದಾರೆ.

    ವಯೋ ಸಹಜ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಶಿವಪ್ಪ ಅವರಿಗೆ ಕಳೆದ ಏಪ್ರಿಲ್‍ನಲ್ಲಿ ಹೃದಯಾಘಾತವಾಗಿತ್ತು. ಶಿವಪ್ಪ ಅವರು ಹುಟ್ಟೂರಿನಲ್ಲೇ ಕೊನೆಯುಸಿರೆಳೆಯಬೇಕೆಂಬ ಬಯಕೆ ವ್ಯಕ್ತಪಡಿಸಿದ್ದರಿಂದ ವೈದ್ಯರ ಅನುಮತಿ ಪಡೆದು ಹುಟ್ಟೂರಿಗೆ ಕರೆದೊಯ್ಯಲು ಕುಟುಂಬಸ್ಥರು ರೆಡಿಯಾಗಿದ್ದರು. ಆದ್ರೆ ಇಂದು ಆಸ್ಪತ್ರೆಯಲ್ಲಿ ಶಿವಪ್ಪ ಕೊನೆಯುಸಿರೆಳೆದಿದ್ದಾರೆ.

    ಬಿಜೆಪಿ ಕಚೇರಿಯಲ್ಲಿ ಶಿವಪ್ಪ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 1 ಗಂಟೆಗೆ ಬಿಜೆಪಿ ಕಚೇರಿ, ನಂತರ 2-30ರಿಂದ ಶಾಸಕರ ಭವನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ಸಕಲೇಶಪುರದ ಕಂಬಾಲಪುರದ ಎಸ್ಟೇಟ್ ಗೆ ಪಾರ್ಥಿವ ಶರೀರ ರವಾನೆಯಾಗಲಿದ್ದು, ನಾಳೆ ಅಂತ್ಯಸಂಸ್ಕಾರ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ ಶಿವಪ್ಪ ಅವರು ಮೂವರು ಮಕ್ಕಳಾದ ಪ್ರತಾಪ್, ಪ್ರದೀಪ್, ಸುಧೀರ್ ಹಾಗೂ ಪತ್ನಿ ಸುಶೀಲಾ ಅವರನ್ನ ಅಗಲಿದ್ದಾರೆ.

    ಬಿಜೆಪಿಯ ಡೈನಾಮಿಕ್ ಲೀಡರ್ ಎಂದು ಹೆಸರು ಪಡೆದಿದ್ದ ಶಿವಪ್ಪ 1994, 1999 ರಲ್ಲಿ ಸಕಲೇಶಪುರ ವಿಧಾನಸಭೆ ಕ್ಷೇತ್ರದಿಂದ ಗೆದ್ದಿದ್ದರು. ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದರು. 1980 ಮತ್ತು 1991 ರಲ್ಲಿ ಹಾಸನ ಲೋಕಸಭೆ ಚುನಾವಣೆಗಳಲ್ಲಿ ಸೋಲನುಭವಿಸಿದ್ದರು. 1989 ರಲ್ಲಿ ಸೋಮವಾರಪೇಟೆ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಪರಾಭವ ಹೊಂದಿದ್ದರು. ಬಿಜೆಪಿಯಿಂದ ಒಮ್ಮೆ ಬಿಬಿ ಶಿವಪ್ಪ ಉಚ್ಛಾಟನೆಯಾಗಿದ್ದರು.

    2004 ರಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸ್ಥಾನ ಕೈತಪ್ಪಿತ್ತು. ಇದರಿಂದ ಬೇಸರಗೊಂಡು ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ಟಿಕೆಟ್ ಪಡೆದು ಚುನಾವಣೆಯಲ್ಲಿ ಗೆಲ್ಲಲಾಗಲಿಲ್ಲ. ಹೆಚ್ಚು ದಿನ ಕಾಂಗ್ರೆಸ್ ನಲ್ಲಿರದೇ ಮತ್ತೆ ಬಿಜೆಪಿಗೆ ವಾಪಸ್ ಆಗಿದ್ದರು.

    ಶಿವಪ್ಪ ಎರಡು ಬಾರಿ ಶಾಸಕರು, ಪರಿಷತ್ ಸದಸ್ಯರಾಗಿದ್ದರು. ಮೂರು ಸಲ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದರು. ಬಿಜೆಪಿ ಕಟ್ಟಿ ಬೆಳೆಸಿದ್ದ ಶಿವಪ್ಪ, ಇತ್ತೀಚಿಗಿನ ಬಿಜೆಪಿ ಬೆಳವಣಿಗೆಗಳ ಬಗ್ಗೆ ಬೇಸರ ವ್ಯಕ್ತಪಡಿಸುತ್ತಿದ್ದರು. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದರು. ಬಿಜೆಪಿಯ ನಾಯಕರಾದ ವೆಂಕಯ್ಯನಾಯ್ಡು, ಅನಂತ್ ಕುಮಾರ್, ಯಡಿಯೂರಪ್ಪರಿಗೆ ಬಿಫಾರಂ ಕೊಟ್ಟಿದ್ದರು. ಪಕ್ಷದಿಂದ ಕೊಟ್ಟಿದ್ದ ಕಾರಿನಲ್ಲಿ ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ ಅಡ್ವಾಣಿಯವರನ್ನು ರಾಜ್ಯಾದ್ಯಂತ ಸುತ್ತಾಡಿಸಿದ್ದರು.

    https://twitter.com/ShobhaBJP/status/891924043619749889

    https://twitter.com/BSriramulu_BJP/status/891916693722681345