Tag: ಶಿವರಾಂ

  • ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟ ಶಿವರಾಂ

    ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟ ಶಿವರಾಂ

    ಬೆಂಗಳೂರು: ನಿನ್ನೆ ನಿಧನರಾಗಿರುವ ಸ್ಯಾಂಡಲ್‍ವುಡ್‍ನ ಹಿರಿಯ ನಟ ಶಿವರಾಂ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ನೆರವೇರಿತು.

    ಗುರುಸ್ವಾಮಿಯಾಗಿದ್ದ ಶಿವರಾಂಗೆ ಪಂಚಾಮೃತ ಅಭಿಷೇಕ ಮತ್ತು ಕೇಸರಿ ವಸ್ತ್ರ ಸಮರ್ಪಿಸಿ ಚಿತಾಗಾರಾದಲ್ಲಿ ಬ್ರಾಹ್ಮಣ ಸ್ಮಾರ್ತ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಸಲಾಯಿತು. ಈ ವೇಳೆ ಅಯ್ಯಪ್ಪ ಭಕ್ತರು ಭಜನೆ ಮಾಡಿ ಅಯ್ಯಪ್ಪನಿಗೆ ಇಷ್ಟವಾದ ಕರ್ಪೂರವನ್ನು ಸಮರ್ಪಿಸಿದರು. ಶಿವರಾಂ ಪುತ್ರರಾದ ಹಿರಿಯ ಮಗ ರವಿಶಂಕರ್‌ ಮತ್ತು ಲಕ್ಷ್ಮೀಶ್ ಅಗ್ನಿ ಸ್ಪರ್ಶ ಮಾಡಿದರು.  ಈ ಮೊದಲು ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಶಿವರಾಂ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಚಿತ್ರರಂಗದ ಹಲವು ಮಂದಿ ಹಿರಿಯ ನಟನ ದರ್ಶನ ಪಡೆದು ಕಂಬನಿ ಮಿಡಿದರು.ಇದನ್ನೂ ಓದಿ: ಸಾಮಾನ್ಯ ವ್ಯಕ್ತಿಯಲ್ಲ ಶಿವರಾಂ, ಅವರಂತೆ ಯಾರು ಮತ್ತೆ ಹುಟ್ಟಿ ಬರಲು ಸಾಧ್ಯವಿಲ್ಲ: ದ್ವಾರಕೀಶ್

    ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದ ಶಿವರಾಂ ನಂತರ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುತ್ತಿದ್ದ ವೇಳೆ  ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ ಬಳಿಕ ಬ್ರೈನ್ ಡ್ಯಾಮೇಜ್ ನಿಂದ ಕೋಮಾದಲ್ಲಿದ್ದರು.  ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದರು. ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನದ ಬಳಿಕ ಬನಶಂಕರಿ ಚಿತಾಗಾರದಲ್ಲಿ ಸಕಲ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು. ಸಚಿವ ಆರ್. ಅಶೋಕ್ ಸೇರಿ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು. ಇದನ್ನೂ ಓದಿ: ಕನ್ನಡದ ಹಿರಿಯ ನಟ ಶಿವರಾಂ ಇನ್ನಿಲ್ಲ

    ಶಿವರಾಂ ಅವರಿಗೆ 84 ವರ್ಷ ವಯಸ್ಸಾಗಿತ್ತು. ಆರು ದಶಕಗಳಿಂದ ಕನ್ನಡ ಸಿನಿಮಾ ರಂಗದ ನಂಟುಹೊಂದಿದ್ದಾರೆ. ಪುಟ್ಟಣ್ಣ ಕಣಗಾಲ್ ಗರಡಿಯಲ್ಲಿ ಪಳಗಿದ ಶಿವರಾಂ ನಾಯಕ ನಟರಾಗಿ, ಹಾಸ್ಯನಟ, ಪೋಷಕ ನಟ, ನಿರ್ಮಾಪಕರಾಗಿಯೂ ಹೆಸರು ಮಾಡಿದವರು. `ಶರಪಂಜರ’ ಶಿವರಾಂ ಎಂದೇ ಹೆಸರುವಾಸಿಯಾಗಿದ್ದರು `ಡ್ರೈವರ್ ಹನುಮಂತು’ ಸಿನಿಮಾದಲ್ಲಿ ನಾಯಕ ನಟರಾಗಿ ಹೆಚ್ಚು ಜನಪ್ರಿಯರಾಗಿದ್ದರು. ಡಾ.ರಾಜ್‍ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಪ್ರಣಯರಾಜ ಶ್ರೀನಾಥ್ ಅವರ ಜೊತೆಯಲ್ಲಿ ನಟಿಸಿದ್ದರು.

  • ಬೆಳಗ್ಗೆ 10ರವರೆಗೆ  ಶಿವರಾಂ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ಬೆಳಗ್ಗೆ 10ರವರೆಗೆ ಶಿವರಾಂ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ಬೆಂಗಳೂರು: ನಿನ್ನೆ ನಮ್ಮನಗಲಿದ ಚಂದನವನದ ಶರಪಂಜರ ಶಿವರಾಂ ಅವರ ಪಾರ್ಥಿವ ಶರೀರವನ್ನು ಬನಶಂಕರಿ ನಿವಾಸದಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಕೊಂಡೊಯ್ಯಲಾಗುತ್ತದೆ. ಬೆಳಗ್ಗೆ ಬೆಳಗ್ಗೆ 7.30 ರಿಂದ ಬೆಳಗ್ಗೆ 10 ಗಂಟೆ ತನಕ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 11 ಗಂಟೆ ನಂತರ ಬನಶಂಕರಿ ಚಿತಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದ ಅನುಸಾರ ಅಂತಿಮ ಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಶಿವರಾಮಣ್ಣನಿಗೆ ಪೊಲೀಸ್ ಗೌರವದ ವಿದಾಯ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

    ನಿನ್ನೆ ಬನಶಂಕರಿಯ ನಿವಾಸದಲ್ಲಿ ಚಿತ್ರರಂಗದ ಹಿರಿ-ಕಿರಿಯ ಕಲಾವಿದರೆಲ್ಲರೂ ಕೂಡ ಶಿವರಾಮಣ್ಣಗೆ ಅಂತಿಮ ನಮನ ಸಲ್ಲಿಸಿದ್ರು. ದ್ವಾರಕೀಶ್, ಶ್ರೀನಾಥ್, ಅನಂತನಾಗ್, ಜಗ್ಗೇಶ್, ನಿರ್ದೇಶಕ ಭಗವಾನ್, ಶಿವಣ್ಣ, ರಾಘಣ್ಣ, ದೇವರಾಜ್, ರಮೇಶ್ ಅರವಿಂದ್, ಪ್ರೇಮಾ, ಉಮಾಶ್ರೀ, ಗಿರಿಜಾ ಲೋಕೇಶ್, ಸುಂದರರಾಜ್, ಯೋಗರಾಜ್ ಭಟ್, ಕ್ರಿಕೆಟಿಗ ಅನಿಲ್ ಕುಂಬ್ಳೆ ಸೇರಿದಂತೆ ಹಲವರು ಶಿವರಾಮಣ್ಣನನ್ನು ಸ್ಮರಿಸಿ ಕಂಬನಿ ಮಿಡಿದ್ರು.

    ಕನ್ನಡಚಿತ್ರರಂಗದ ಮೂರು ತಲೆಮಾರುಗಳನ್ನು ಕಂಡಿದ್ದ ಶಿವರಾಂ ಹಿರಿಯ ನಟನಾಗಿ ಮಾತ್ರವಲ್ಲ, ಸಿನಿಮಾ ಕುಟುಂಬಕ್ಕೆ ಹಿರಿಯರ ಸ್ಥಾನದಲ್ಲಿದ್ದು ನಿಜ ಪೋಷಕರೆನಿಸಿದ್ದರು. ಎಲ್ಲರ ಪಾಲಿಗೆ ಪ್ರೀತಿಯ ಶಿವರಾಮಣ್ಣ ಆಗಿದ್ದರು. ಇದೀಗ ಶಿವರಾಂ ಅಗಲಿಕೆಯಿಂದ ಕನ್ನಡ ಚಿತ್ರರಂಗ ಅಕ್ಷರಶಃ ಅನಾಥವಾಗಿದೆ. ವಿಷಾದದ ಕಡಲಲ್ಲಿ ಮುಳುಗಿದೆ. ಇದನ್ನೂ ಓದಿ: ಸಾಮಾನ್ಯ ವ್ಯಕ್ತಿಯಲ್ಲ ಶಿವರಾಂ, ಅವರಂತೆ ಯಾರು ಮತ್ತೆ ಹುಟ್ಟಿ ಬರಲು ಸಾಧ್ಯವಿಲ್ಲ: ದ್ವಾರಕೀಶ್

    ಕರ್ನಾಟಕ-ತಮಿಳುನಾಡು ಗಡಿಭಾಗದ, ಬೆಂಗಳೂರಿನಿಂದ 60 ಕಿಲೋಮೀಟರ್ ದೂರದ ಚೂಡಸಂದ್ರದಲ್ಲಿ 1938ರ ಜನವರಿ 28ರಂದು ಜನಿಸಿದ ಶಿವರಾಂ ಪ್ರಾಥಮಿಕ ಶಿಕ್ಷಣವನ್ನು ಅಲ್ಲಿಯೇ ಪೂರೈಸಿದರು. ನಂತರ ಅವರು ಸೇರಿದ್ದು ಬೆಂಗಳೂರು ಎಂಬ ಮಾಯನಗರಿಯನ್ನು. ಮೊದಲು ನಾಟಕಗಳಲ್ಲಿ ಅಭಿನಯಿಸುತ್ತಾ ಬೆಳ್ಳಿ ತೆರೆಗೂ ಎಂಟ್ರಿ ಕೊಟ್ಟರು. 1958ರಲ್ಲಿ ಮೊದಲ ಬಾರಿಗೆ ಬೆರೆತ ಜೀವ ಸಿನಿಮಾದಲ್ಲಿ ಬಣ್ಣ ಹಚ್ಚಿದರು. ಸುಮಾರು ಆರು ದಶಕಗಳ ಸುದೀರ್ಘ ಸಿನಿಮಾ ಜೀವನದಲ್ಲಿ ಅವರು ನಿರ್ವಹಿಸದ ಪಾತ್ರವಿಲ್ಲ.

    ಗುರು ಶಿಷ್ಯರು, ಶರಪಂಜರ, ನಾಗರಾಹಾವು, ದೇವರಗುಡಿ, ಎಡಕಲ್ಲು ಗುಡ್ಡದ ಮೇಲೆ, ಚಲಿಸುವ ಮೋಡಗಳು, ಹಾಲುಜೇನು, ಹೊಂಬಿಸಲು, ಶುಭಮಂಗಳ.. ಉಪಾಸನೆ, ಡ್ರೈವರ್ ಹನುಮಂತು, ಬನಶಂಕರಿ.. ತಾಯಿ ಸಾಹೇಬ, ಅವರ ಸಿನಿಮಾಗಳ ಬಗ್ಗೆ ಹೇಳಲು ಒಂದೇ ಎರಡೇ ಸೇರಿ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಗೃಹಭಂಗ, ಬದುಕು, ಚಕ್ರ, ಇತ್ತೀಚಿಗೆ ಬಂದ ಸತ್ಯ ಸೇರಿ ಧಾರವಾಹಿಗಳಿಗೂ ಜೀವ ತುಂಬಿದ್ದಾರೆ.

    ಕ್ಯಾಮೆರಾ ಸಹಾಯಕರಾಗಿ, ಸಹಾಯ ನಿರ್ದೇಶಕರಾಗಿ , ನಿರ್ದೇಶಕರಾಗಿ, ನಿರ್ಮಾಪಕರಾಗಿ ಚಂದನವನದ ನಿಜ ಅರ್ಥದಲ್ಲಿ ಪೋಷಕರೆನಿಸಿದ್ದರು. ಹಿರಿಯನಟ ಶಿವರಾಂ ಅಭಿನಯದ ಕೊನೇ ಚಿತ್ರ ಆವರ್ತ. ಈ ಸಿನಿಮಾದಲ್ಲಿ ನರೇಂದ್ರನಾಥ ಬಲ್ಲಾಳ ಅನ್ನೊ ಪಾತ್ರದಲ್ಲಿ ಶಿವರಾಂ ಕಾಣಿಸಿಕೊಂಡಿದ್ದರು.

  • ಸಾಮಾನ್ಯ ವ್ಯಕ್ತಿಯಲ್ಲ ಶಿವರಾಂ, ಅವರಂತೆ ಯಾರು ಮತ್ತೆ ಹುಟ್ಟಿ ಬರಲು ಸಾಧ್ಯವಿಲ್ಲ: ದ್ವಾರಕೀಶ್

    ಸಾಮಾನ್ಯ ವ್ಯಕ್ತಿಯಲ್ಲ ಶಿವರಾಂ, ಅವರಂತೆ ಯಾರು ಮತ್ತೆ ಹುಟ್ಟಿ ಬರಲು ಸಾಧ್ಯವಿಲ್ಲ: ದ್ವಾರಕೀಶ್

    ಬೆಂಗಳೂರು: ಸ್ಯಾಂಡಲ್‍ವುಡ್ ಶಿವರಾಮಣ್ಣ ಇನ್ನಿಲ್ಲ ಎಂಬ ಸುದ್ದಿ ಕೇಳಿದ ನಿರ್ಮಾಪಕ, ನಟ, ದ್ವಾರಕೀಶ್ ಅವರು ಭಾವನಾತ್ಮವಾಗಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ್ದಾರೆ.

    ದ್ವಾರಕೀಶ್ ಅವರು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ್ದು, ಶಿವರಾಂ ಇಲ್ಲದೇ ನಾನು ಯಾವುದೇ ಕಾರ್ಯಕ್ರಮಗಳನ್ನು ಮಾಡುತ್ತಿರಲಿಲ್ಲ. 60ನೇ ಇಸವಿಯಿಂದ ನನ್ನ ಮತ್ತು ಅವನ ಒಡನಾಟ ಪ್ರಾರಂಭವಾಗಿತ್ತು ಎಂದು ನೆನೆದು ಭಾವುಕರಾದರು.

    ‘ಬೆರೆತ ಜೀವ’ ಸಿನಿಮಾದಿಂದಲ್ಲೂ ನನಗೆ ಅವನು ಗೊತ್ತು. ಅವನು ನನಗೆ ಪರಿಚಯ ಎನ್ನುವುದಕ್ಕಿಂತ ಅವನು ನನಗೆ ಅಣ್ಣನ ಸಮಾನನಾಗಿದ್ದನು. ನನ್ನ ಎಲ್ಲ ಚಿತ್ರಗಳಲ್ಲಿಯೂ ಅವನು ಪಾತ್ರ ಮಾಡಿದ್ದಾನೆ. ಶಿವರಾಂ ಒಬ್ಬ ಅದ್ಭುತ ನಟ ಎಂದು ನೆನಪಿಸಿಕೊಂಡರು.

    ನಮ್ಮ ಅಣ್ಣ ‘ಶರಪಂಜರ’ ಚಿತ್ರವನ್ನು ನೋಡಿ, ನನಗೆ ಬಂದು ಲೇ, ನೀನು ನಟಿಸಬೇಕು ಎಂದು ಹೇಳುತ್ತಿಯಾ ಮೊದಲು ಹೋಗಿ ‘ಶರಪಂಜರ’ ಸಿನಿಮಾದ ಭಟ್ಟನ ಪಾತ್ರವನ್ನು ನೋಡು. ನಂತರ ನೀನು ನಟನಾಗಲು ಸಾಧ್ಯನಾ ಅಂತ ನೋಡು. ಆತ ತುಂಬಾ ಅದ್ಭುತವಾಗಿ ನಟಿಸಿದ್ದಾರೆ ಎಂದಿದ್ದನು. ಅಷ್ಟು ಹೆಸರುವಾಸಿಯಾದ ನಟ ಅವನು ಎಂದರು. ಇದನ್ನೂ ಓದಿ: ಕೆಬಿಸಿ ನಿರೂಪಣೆ ಒಪ್ಪಿಕೊಳ್ಳಲು ನಿಜವಾದ ಕಾರಣ ಬಿಚ್ಚಿಟ್ಟ ಬಿಗ್ ಬಿ

    ಶಿವರಾಂ ಸಾಮಾನ್ಯವಾದ ನಟನಲ್ಲ. ಅದು ಅಲ್ಲದೇ ಅವನು ಎಲ್ಲರಿಗೂ ಬೇಕಾದವನು. ಯಾವುದೇ ಸಮಾರಂಭದಲ್ಲಿಯಾಗಲಿ, ಕೆಟ್ಟದಾಗಲಿ, ಒಳ್ಳೆಯಾದಗಲಿ ಅವನು ಇರಲೇಬೇಕಿತ್ತು. ನನ್ನ ಮಗನ ಮದುವೆಯನ್ನು ತನ್ನ ಮಗನ ಮದುವೆ ರೀತಿ ಮಾಡಿಕೊಟ್ಟಿದ್ದನು ಎಂದು ಅವರ ಜೊತೆಗಿನ ಆತ್ಮೀಯತೆಯನ್ನು ಹೇಳಿಕೊಂಡರು.

    ಅವನನ್ನು ಮರೆಯುವುದಕ್ಕೆ ಯಾವತ್ತು ಸಾಧ್ಯವಿಲ್ಲ. ಶಿವರಾಂ ನಮ್ಮ ಕನ್ನಡ ಚಿತ್ರರಂಗದ ಎಲ್ಲರಿಗೂ ಬೇಕಾಗಿದ್ದ ವ್ಯಕ್ತಿ. ಯಾರ ಮನೆಯಲ್ಲಿ ಏನೇ ಆದರೂ ಅವನು ನೋಡಿಕೊಳ್ಳುತ್ತಿದ್ದನು. ಸ್ವಾಮಿ ಅಯ್ಯಪ್ಪ, ರಾಘವೇಂದ್ರಸ್ವಾಮಿಗಳ ಪರಮ ಭಕ್ತ. ದೇವರ ಮೇಲೆ ಅಪಾರವಾದ ಭಕ್ತಿಯನ್ನು ಹೊಂದಿದ್ದನು ಎಂದು ಆಧ್ಯಾತ್ಮಿಕ ಜೀವನದ ಬಗ್ಗೆ ಹೇಳಿದರು.

    ನಾನು ಶಿವರಾಮಣ್ಣನಿಗೆ ಒಂದು ವಾರದಿಂದ ಫೋನ್ ಮಾಡುತ್ತಿದ್ದೇನೆ. ಆದರೆ ನಾನು ಎಷ್ಟೇ ಕಾಲ್ ಮಾಡಿದ ಅವನು ರಿಸೀವ್ ಮಾಡುತ್ತಿರಲಿಲ್ಲ. ಆ ಮೇಲೆ ಟಿವಿ ನೋಡಿ ಅವನಿಗೆ ಆರೋಗ್ಯ ಸರಿಯಿಲ್ಲ ಎಂಬ ವಿಷಯ ತಿಳಿಯಿತು. ಈ ವಿಷಯ ಕೇಳಿ ಮನಸ್ಸಿಗೆ ಬಹಳ ನೋವಾಯಿತು ಎಂದು ತಿಳಿಸಿದರು.

    ಸಭ್ಯ ವಸ್ತುವನ್ನು ನಾವು ಕಳೆದುಕೊಂಡಿದ್ದೇವೆ. ನಾನು ಸಿನಿಮಾದಲ್ಲಿ ಮಾತ್ರವಲ್ಲ, ನಮ್ಮ ಕಷ್ಟ-ಸುಖಗಳಲ್ಲಿ ಅವನು ಭಾಗಿಯಾಗಿದ್ದನು. ಒಂದು ತಿಂಗಳ ಹಿಂದೆ ನಮ್ಮ ಮನೆಗೆ ಬಂದು ಸುಮಾರು 2 ಗಂಟೆಗಳ ಕಾಲ ಕುಳಿತುಕೊಂಡಿದ್ದ. ಆ ವೇಳೆ ನನ್ನ ಕಷ್ಟ-ಸುಖಗಳನ್ನು ವಿಚಾರಿಸಿಕೊಂಡ. ಧೈರ್ಯವಾಗಿರು ಎಂದು ಹೇಳಿದ ಎಂದು ಒಡಾನಾಟವನ್ನು ನೆನಪಿಸಿಕೊಂಡರು.

    ಶಿವರಾಮಣ್ಣ ಸಾಮಾನ್ಯ ವ್ಯಕ್ತಿಯಲ್ಲ. ಅವನಿಗೆ ಸರಿಸಮನಾದ ವ್ಯಕ್ತಿಯಿಲ್ಲ. ಅವನನ್ನು ಎಷ್ಟು ವರ್ಣಿಸಿದರು ಸಾಲದು. ಇನ್ನೊಬ್ಬ ಶಿವರಾಂ ಕನ್ನಡದಲ್ಲಿ ಹುಟ್ಟುವುದಕ್ಕೆ ಸಾಧ್ಯವಿಲ್ಲ ಎಂದರು.

  • ಕನ್ನಡದ ಹಿರಿಯ ನಟ ಶಿವರಾಂ ಇನ್ನಿಲ್ಲ

    ಕನ್ನಡದ ಹಿರಿಯ ನಟ ಶಿವರಾಂ ಇನ್ನಿಲ್ಲ

    ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸ್ಯಾಂಡಲ್‍ವುಡ್‍ನ ‘ಶಿವರಾಮಣ್ಣ’ ಎಂದೇ ಖ್ಯಾತರಾಗಿದ್ದ ಶಿವರಾಂ ಇಂದು ನಿಧನ ಹೊಂದಿದ್ದಾರೆ.

    ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು. ನಂತರ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುತ್ತಿದ್ದ ವೇಳೆ  ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬ್ರೇನ್ ಡ್ಯಾಮೇಜ್ ನಿಂದ ಕೋಮಾದಲ್ಲಿದ್ದರು.  ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಹೊಸಕೆರೆಹಳ್ಳಿಯ ಖಾಸಗಿ ಆಸ್ಪತ್ರೆಯಿಂದ ಬನಶಂಕರಿಗೆ ಮೃತದೇಹ ಕೊಂಡೊಯ್ಯಲು ಸಿದ್ದತೆ ನಡೆಸಲಾಗುತ್ತಿದೆ.  ಮನೆಯ ಬಳಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಅಂತ್ಯಕ್ರಿಯೆ ನಡೆಯಲಿದೆ.

    ಶಿವರಾಂ ಅವರಿಗೆ 84 ವರ್ಷ ವಯಸ್ಸಾಗಿತ್ತು. ಆರು ದಶಕಗಳಿಂದ ಕನ್ನಡ ಸಿನಿಮಾ ರಂಗದ ನಂಟುಹೊಂದಿದ್ದಾರೆ. ಪುಟ್ಟಣ್ಣ ಕಣಗಾಲ್ ಗರಡಿಯಲ್ಲಿ ಪಳಗಿದ ಶಿವರಾಂ ನಾಯಕ ನಟರಾಗಿ, ಹಾಸ್ಯನಟ, ಪೋಷಕ ನಟ, ನಿರ್ಮಾಪಕರಾಗಿಯೂ ಹೆಸರು ಮಾಡಿದವರು. `ಶರಪಂಜರ’ ಶಿವರಾಂ ಎಂದೇ ಹೆಸರುವಾಸಿಯಾಗಿದ್ದರು `ಡ್ರೈವರ್ ಹನುಮಂತು’ ಸಿನಿಮಾದಲ್ಲಿ ನಾಯಕ ನಟರಾಗಿ ಹೆಚ್ಚು ಜನಪ್ರಿಯರಾಗಿದ್ದರು. ಡಾ.ರಾಜ್‍ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಪ್ರಣಯರಾಜ ಶ್ರೀನಾಥ್ ಅವರ ಜೊತೆಯಲ್ಲಿ ನಟಿಸಿದ್ದರು.

    ಶಿವರಾಂ ಅಯ್ಯಪ್ಪನ ಪರಮಭಕ್ತರಾಗಿದ್ದು, ಇವರು ಗುರುಸ್ವಾಮಿಯೂ ಆಗಿದ್ದರು. 48 ವರ್ಷಗಳಿಂದ ಶಬರಿಮಲೆಗೆ ಹೋಗಿ ಬರುತ್ತಿದ್ದರು. ಈ ಬಾರಿಯೂ ಹೋಗಬೇಕೆಂದು ಅಂದುಕೊಂಡಿದ್ದರು. ಆದರೆ ಇದೀಗ ಶಿವರಾಂ ಕನ್ನಡ ಸಿನಿಪ್ರಿಯರನ್ನು ಬಿಟ್ಟು ಇಹಲೋಕ ತ್ಯಜಿಸಿದ್ದು, ಇವರ ಸಾವಿಗೆ ಇಡೀ ಕನ್ನಡ ಚಿತ್ರರಂಗ ಸಹಿತ ಹಲವು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

  • ಶಿವರಾಂ ಕೋಮಾದಲ್ಲಿದ್ದು ಮೆದುಳು, ಹೃದಯ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ: ವೈದ್ಯ ಭಾವುಕ

    ಶಿವರಾಂ ಕೋಮಾದಲ್ಲಿದ್ದು ಮೆದುಳು, ಹೃದಯ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ: ವೈದ್ಯ ಭಾವುಕ

    – ಕ್ಷಣದಿಂದ ಕ್ಷಣಕ್ಕೂ ಕ್ಷೀಣಿಸುತ್ತಿದೆ ಹಿರಿಯ ನಟನ ಆರೋಗ್ಯ

    ಬೆಂಗಳೂರು: ಸ್ಯಾಂಡಲ್‍ವುಡ್‍ನ ಹಿರಿಯ ನಟ ಶಿವರಾಂ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿರುವ ಕುರಿತಾಗಿ ವೈದ್ಯರು ಮಾಹಿತಿ ನೀಡಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ವೈದ್ಯ ಡಾ. ಮೋಹನ್, ಅವರ ಆರೋಗ್ಯ ಚೇತರಿಕೆಗಾಗಿ ನಾವು ಕಾಯುತ್ತಿದ್ದೆವು. ಆ ಆದರೆ ಅವರ ಬ್ರೈನ್‍ಗೆ ಅತಿ ಹೆಚ್ಚಿನ ಹಾನಿಯಾಗಿದೆ. ನಾನು ಶಿವರಾಂ ಅವರ ಸಂಬಂಧಿ ಮತ್ತು ಡಾಕ್ಟರ್ ಆಗಿ ಇವತ್ತು ನಿಮ್ಮ ಮುಂದೆ ಬಂದು ನಿಲ್ಲಲು ನನಗೆ ತುಂಬಾ ಕಷ್ಟವಾಗುತ್ತಿದೆ. ಮಿರಾಕಲ್ ಆಗುತ್ತದೆ ಎನ್ನುವ ಭಾವನೆ ನಮಗೆ ಕಮ್ಮಿಯಾಗುತ್ತಿದೆ. ನಾವು ಏನೇ ಮಾಡಿದರೂ ಅವರಿಗೆ ಹಿಂಸೆ ಆಗುತ್ತದೆ. ಕಿಡ್ನಿ, ಲಿವರ್ ವರ್ಕ್ ಆಗುತ್ತಿದೆ. ಆದರೆ ಹೃದಯ ಸ್ಪಂದಿಸುತ್ತಿಲ್ಲ. ಅವರು ತುಂಬಾ ಸಮಯ ನಮ್ಮ ಜೊತೆಗೆ ಇರಲ್ಲ ಎಂದು ಹೇಳುತ್ತಾ ವೈದ್ಯರು ಭಾವುಕರಾಗಿದ್ದಾರೆ. ಇದನ್ನೂ ಓದಿ: ಹಿರಿಯ ನಟ ಶಿವರಾಮ್ ಆರೋಗ್ಯ ಗಂಭೀರ

    ನಮಗೆ ಜೀವನಾಡಿಯಾಗಿದ್ದರು. ಒಬ್ಬ ರೋಗಿಗಿಂತ ನನಗೆ ಅಪ್ಪನ ಸ್ಥಾನದಲ್ಲಿ ಇದ್ದರು. ಅವರನ್ನು ನಾನು ಈ ಪರಿಸ್ಥಿತಿಯನ್ನು ನಾನು ಚಿಕಿತ್ಸೆ ಕೊಡಲು ತುಂಬಾ ಕಷ್ಟವಾಗುತ್ತಿದೆ. ಚಿಕಿತ್ಸೆ ನೀಡುತ್ತಿದ್ದೇವೆ, ಆದರೆ ಅವರು ಚಿಕಿತ್ಸೆಗೆ ಸ್ಪಂಧಿಸುತ್ತಾರೆ ಎನ್ನುವ ನಂಬಿಕೆ ಇಲ್ಲ. ಅವರು ರಿಕವರಿ ಆಗುವ ಚಾನ್ಸ್ ತುಂಬಾ ಕಡಿಮೆ ಇದೆ. ಎಷು ದಿನ, ಎಷ್ಟು ಗಂಟೆ ಎಂದು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ನಟ ಶಿವರಾಂ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಇಲ್ಲ: ವೈದ್ಯರು

    ಅವರ ಕುಟುಂಬದವರು ನಮ್ಮ ಜೊತೆಗೆ ಇದ್ದಾರೆ. ಅವರಿಗೆ ತುಂಬಾ ಹಿಂಸೆ ಮಾಡುವುದು ಬೇಡ. ನಿಮ್ಮ ಕೈಯಲ್ಲಿ ಸಾಧ್ಯವಾದಷ್ಟು ಪ್ರಯತ್ನವನ್ನು ಕೊನೆ ಗಳಿಗೆವರೆಗೂ ಮಾಡಿ ಎಂದು ಹೇಳುತ್ತಿದ್ದಾರೆ. ಎಂಐಆರ್ ಮಾಡಲು ಆಗುತ್ತಿಲ್ಲ ಅವರನ್ನು ಬೇರೆ ಬೆಡ್‍ಗೆ ಶಿಫ್ಟ್ ಮಾಡಿದರೆ ಅವರ ಬಿಪಿಗೆ ಕಷ್ಟವಾಗುತ್ತದೆ ಎನ್ನುವ ಭಯವಿದೆ, ಕಂಡಿಶನ್ ಕ್ರಿಟಿಕಲ್ ಇದೆ ಎಂದು ಹೇಳಿದ್ದಾರೆ.

  • ದೇವರು ನಮಗೆ ಯಾಕೆ ಪದೇ ಪದೇ ನೋವು ಕೊಡುತ್ತಿದ್ದಾನೋ ಗೊತ್ತಿಲ್ಲ: ಶಿವರಾಜ್‍ಕುಮಾರ್

    ದೇವರು ನಮಗೆ ಯಾಕೆ ಪದೇ ಪದೇ ನೋವು ಕೊಡುತ್ತಿದ್ದಾನೋ ಗೊತ್ತಿಲ್ಲ: ಶಿವರಾಜ್‍ಕುಮಾರ್

    ಬೆಂಗಳೂರು: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಟ ಶಿವರಾಂ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಇಲ್ಲ. ಶಿವರಾಂ ಅವರ ಆರೋಗ್ಯ ವಿಚಾರಿಸಲು ನಟ ಶಿವರಾಜ್‍ಕುಮಾರ್ ಆಸ್ಪತ್ರೆ ಬಂದಿದ್ದರು. ಈ ವೇಳೆ ಅವರ ಜೊತೆಗೆ ಕಳೆದಿರುವ ಹಳೆಯ ನೆನಪುಗಳನ್ನು ಮೆಲಕು ಹಾಕಿ ಭಾವುಕರಾಗಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಫ್ಯಾಮಿಲಿಯ ಯಾವುದೇ ಪರಿಸ್ಥಿತಿಯಲ್ಲಿಯೂ ಅವರು ನಮ್ಮ ಜೊತೆಗೆ ಇದ್ದರು. ದೇವರು ಕೈ ಬಿಡಲ್ಲ, ಚಿಕ್ಕ ವಯಸ್ಸಿನಿಂದಲೂ ನೋಡುತ್ತಿದ್ದೇವೆ. ನಮ್ಮ ಕುಟುಂಬದಲ್ಲಿ ಅವರು ಒಬ್ಬರು ಆಗಿದ್ದಾರೆ ಎಂದು ಬೇಸರವ್ಯಕ್ತಪಡಿಸಿದ್ದಾರೆ.

    ನಾವೆಲ್ಲ ಅಯಪ್ಪ ದೇವಸ್ಥಾನಕ್ಕೆ ಮೂರು ವರ್ಷಗಳ ಹಿಂದೆ ಹೋಗಿದ್ದೇವು. ಆಗ ಅವರಿಗೆ 81 ವರ್ಷ, ಆದರು ಯಾವುದೇ ಸಹಾಯವಿಲ್ಲದೆ ಬೆಟ್ಟ ಹತ್ತವರು, ಮನಸ್ಸು ಬಂದಗೆಲ್ಲಾ ಅಯಪ್ಪ ದೇವಸ್ಥಾನ ಕ್ಕೆ ಅವರು ಹೋಗುತ್ತಿದ್ದರು. ನಾವು ತಮ್ಮನ ಕಳೆದುಕೊಂಡ ನೋವುನಲ್ಲಿ ಇದ್ದೇವು, ದೇವರು ನಮಗೆ ಯಾಕೆ ಪದೇ ಪದೇ ಇತರ ನೋವು ಕೊಡುತ್ತಿದ್ದಾನೋ ಗೊತ್ತಿಲ್ಲ ಎಂದು ದುಃಖಿತರಾಗಿದ್ದಾರೆ. ಇದನ್ನೂ ಓದಿ: ನನ್ನ ಹುಟ್ಟಿಸಿದ್ಯಾಕೆ?- ತಾಯಿಯ ಹೆರಿಗೆ ಮಾಡಿಸಿದ್ದ ವೈದ್ಯರ ವಿರುದ್ಧ ಯುವತಿ ಕೇಸ್

    ಅಯಪ್ಪನ ಪೂಜೆ ವೇಳೆ ಇತರ ಆಗಿದೆ ಅಂದ್ರೆ ದೇವರು ಅವರನ್ನ ಕೈ ಬಿಡಲ್ಲ. ಈ ಪರಿಸ್ಥಿತಿಯಲ್ಲಿ ಅವರನ್ನ ನೋಡೋಕೆ ತುಂಬಾ ಕಷ್ಟ ಆಗುತ್ತದೆ. ಮತ್ತೆ ಅವರು ಗುಣಮುಖರಾಗಿ ಬರಬೇಕು ಅಂತ ನಮ್ಮಗೂ ಆಸೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಸರ್ಕಾರಿ ಉದ್ಯೋಗ ಇಲ್ಲದೆ ಯುವಕರಲ್ಲಿ ಹತಾಶೆ: ವರುಣ್ ಗಾಂಧಿ

  • ನಟ ಶಿವರಾಂ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಇಲ್ಲ: ವೈದ್ಯರು

    ನಟ ಶಿವರಾಂ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಇಲ್ಲ: ವೈದ್ಯರು

    ಬೆಂಗಳೂರು: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಟ ಶಿವರಾಂ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.

    ನಟನ ಆರೋಗ್ಯದ ಕುರಿತು ಮಾಹಿತಿ ನೀಡಿರುವ ವೈದ್ಯರು, ಶಿವರಾಂ ಆರೊಗ್ಯ ಸ್ಥಿತಿ ಗಂಭೀರವಾಗಿದ್ದು, ಯಾವುದೇ ಚೇತರಿಕೆ ಕಂಡುಬಂದಿಲ್ಲ. ಸದ್ಯ ನಿನ್ನೆ ಹೇಗಿದ್ರೋ ಇಂದೂ ಹಾಗೇ ಇದ್ದಾರೆ. ಹಾಗಾಗಿ ಇಂದು ನುರಿತ ವೈದ್ಯರು ಪರೀಕ್ಷೆ ಮಾಡಿ ನಂತರ ಮಾಹಿತಿ ನೀಡಲಿದ್ದಾರೆ. ಈಗಾಗಲೇ ಕೋಮಾದಲ್ಲಿದ್ದು, ಶಿವರಾಮ್ ಅವರು ಬದುಕುಳಿದ್ರೆ ಮಿರಾಕಲ್ ಎಂದು ಹೇಳಿದ್ದಾರೆ.

    ಮನೆಯಲ್ಲಿ ಪೂಜೆ ಮಾಡುತ್ತಿದ್ದ ಸಂದರ್ಭದಲ್ಲಿ ಬಿದ್ದು ಬ್ರೈನ್ ಡ್ಯಾಮೇಜ್ ಆಗಿ ಶಿವರಾಂ ಬೆಂಗಳೂರಿನ ಸೀತಾ ಸರ್ಕಲ್ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿರಿಯ ನಟನ ಆರೊಗ್ಯ ವಿಚಾರಿಸಲು ಇಂದು ಕೂಡ ಹಲವು ಕಲಾವಿದರು ಆಗಮಿಸಲಿದ್ದಾರೆ.  ಇದನ್ನೂ ಓದಿ: ಹಿರಿಯ ನಟ ಶಿವರಾಮ್ ಆರೋಗ್ಯ ಗಂಭೀರ

  • ಕೋಮುವಾದಿ ಶಕ್ತಿ ದೂರ ಇಡಲು ನಾವು ಕಾಂಗ್ರೆಸ್ ಒಂದಾಗಿದ್ದೇವೆ: ರೇವಣ್ಣ

    ಕೋಮುವಾದಿ ಶಕ್ತಿ ದೂರ ಇಡಲು ನಾವು ಕಾಂಗ್ರೆಸ್ ಒಂದಾಗಿದ್ದೇವೆ: ರೇವಣ್ಣ

    ಹಾಸನ: ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಅವರು ಇಂದು ಕೆಪಿಸಿಸಿ ಉಪಾಧ್ಯಕ್ಷ ಬಿ.ಶಿವರಾಂ ಮನೆಗೆ ಭೇಟಿ ನೀಡಿದ್ದಾರೆ.

    ಬಿ.ಶಿವರಾಂ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ರೇವಣ್ಣ, “ಕೋಮುವಾದಿ ಶಕ್ತಿ ದೂರ ಇಡಲು ನಾವು ಕಾಂಗ್ರೆಸ್ ಒಂದಾಗಿದ್ದೇವೆ. ನಾವೆಲ್ಲರೂ ಒಟ್ಟಾಗಿ ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ಮಾಡಿದ್ದೇವೆ. ಸಣ್ಣ ಪುಟ್ಟ ಸಮಸ್ಯೆ ಇದರೂ ಒಟ್ಟಾಗಿ ಮಾತನಾಡಿದ್ದೇವೆ. ನಾವು ಶಿವರಾಂ ಒಟ್ಟಾಗಿ ಸೇರಿ ಚುನಾವಣೆ ಕಾರ್ಯತಂತ್ರ ಮಾಡುತ್ತೇವೆ” ಎಂದು ಎಚ್‍ಡಿ ರೇವಣ್ಣ ಹೇಳಿದ್ದಾರೆ.

    ಅಲ್ಲದೆ ಮುಂದೆ ನಾವಿಬ್ಬರೂ ಜಿಲ್ಲೆಯ ಅಭಿವೃದ್ಧಿ ಮಾಡುತ್ತೇವೆ ಎಂದು ಬಿ. ಶಿವರಾಂ ಸಚಿವ ರೇವಣ್ಣ ಮಾತಿಗೆ ಧ್ವನಿಗೂಡಿಸಿದ್ದಾರೆ. ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಹಳೇ ಭಿನ್ನಮತ ಮರೆತು ಒಟ್ಟಾಗಿ ಹೋಗುತ್ತೇವೆ. ಮುಂದೆ ಕಾಂಗ್ರೆಸ್ ಕಾರ್ಯಕರ್ತರನ್ನೂ ವಿಶ್ವಾಸಕ್ಕೆ ಪಡೆಯಿರಿ ಎಂದು ಮನವಿ ಮಾಡಿದ್ದೇನೆ. ಹಿಂದಿನ ಭಾವನೆ ಬೇಡ, ನಂಬಿಕೆಯಿಂದ ಮುನ್ನಡೆಯೋಣ. ನಾನೂ ಕಾಂಗ್ರೆಸ್ ಕಾರ್ಯಕರ್ತರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವೆ ಎಂದು ರೇವಣ್ಣ ಹೇಳಿದ್ದಾರೆ.

    ಇತ್ತೀಚೆಗೆ ಶಿವರಾಂ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷ ಜೆಡಿಎಸ್ ಕುರಿತು ಅಸಮಧಾನ ವ್ಯಕ್ತಪಡಿಸಿದ್ದರು. ಹಾಗಾಗಿ ಇಂದು ರೇವಣ್ಣ ಚುನಾವಣೆಯಲ್ಲಿ ಪುತ್ರನಿಗೆ ಬೆಂಬಲಿಸಲು ಸಹಾಯ ಯಾಚಿಸಲು ಶಿವರಾಂ ಮನೆಗೆ ಆಗಮಿಸಿದ್ದರು. ಈ ವೇಳೆ ಶಿವರಾಂ ರೇವಣ್ಣರನ್ನು ಹಾರ ಮತ್ತು ಶಾಲು ಹಾಕಿ ಸ್ವಾಗತಿಸಿದ್ದಾರೆ. ಬಳಿಕ ಟೀ ಕುಡಿಯುತ್ತಾ ಶಿವರಾಂ ಹೊತೆ ಉಭಯ ಕುಶಲೋಪರಿ ನಡೆಸಿದ್ದಾರೆ. ಇದೇ ವೇಳೆ ರೇವಣ್ಣ ಮನೆ ಆಲ್ಟ್ರೇಷನ್ ಮಾಡಿಸಿದ್ದೀರಾ ಎಂದು ಪ್ರಶ್ನಿಸಿದ್ದಕ್ಕೆ ನಮ್ಮ ಮನೆಯಲ್ಲಿ ವಾಸ್ತುಗೀಸ್ತು ಇಲ್ಲ ಎಂದು ಶಿವರಾಂ ನಗೆ ಚಟಾಕಿ ಹಾರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹೊಂದಾಣಿಕೆಯಾಗದಿದ್ದರೆ ಚುನಾವಣೆಯಲ್ಲಿ ಫಲಿತಾಂಶ ಸಿಗಲ್ಲ- ಕೆಪಿಸಿಸಿ ಉಪಾಧ್ಯಕ್ಷ ಭವಿಷ್ಯ

    ಹೊಂದಾಣಿಕೆಯಾಗದಿದ್ದರೆ ಚುನಾವಣೆಯಲ್ಲಿ ಫಲಿತಾಂಶ ಸಿಗಲ್ಲ- ಕೆಪಿಸಿಸಿ ಉಪಾಧ್ಯಕ್ಷ ಭವಿಷ್ಯ

    ಹಾಸನ: ರಾಜ್ಯಾದ್ಯಂತ ಎರಡೂ ಪಕ್ಷಗಳ ಕಾರ್ಯಕರ್ತರ ಜಂಟಿ ಸಭೆಗಳನ್ನು ನಡೆಸಿಲ್ಲ. ಸರಿಯಾಗಿ ಹೊಂದಾಣಿಕೆ ಆಗದೇ ಇದ್ದರೆ ಹೈಕಮಾಂಡ್ ನಿರೀಕ್ಷೆಯಂತೆ ಚುನಾವಣೆಯಲ್ಲಿ ಫಲಿತಾಂಶ ಸಿಗುವುದಿಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷ ಬಿ.ಶಿವರಾಂ ಭವಿಷ್ಯ ನುಡಿದಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಹೊಂದಾಣಿಕೆ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಇಲ್ಲದ ಜಿಲ್ಲೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸ್ಥಿತಿ ದಯನೀಯವಾಗಿದೆ. ರಾಜ್ಯದಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರ ಜಂಟಿ ಸಭೆಗಳನ್ನು ನಡೆಸಿಲ್ಲ. ಹೀಗಾಗಿ ಸರಿಯಾಗಿ ಹೊಂದಾಣಿಕೆ ಆಗದಿದ್ದಲ್ಲಿ ಹೈಕಮಾಂಡ್ ನಿರೀಕ್ಷೆಯಂತೆ ಚುನಾವಣೆಯಲ್ಲಿ ಫಲಿತಾಂಶ ಸಿಗುವುದು ಕಷ್ಟ ಎಂದು ಹೇಳಿದ್ರು.

    ನಮ್ಮ ಪಕ್ಷದಲ್ಲಿ ಎಲ್ಲ ಅಧಿಕಾರ ಅನುಭವಿಸಿದ ಮಾಜಿ ಸಚಿವ ಎ.ಮಂಜು ಪಕ್ಷಕ್ಕೆ ದ್ರೋಹ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಶ್ವಾಸವನ್ನೂ ಎ ಮಂಜು ಉಳಿಸಿಕೊಳ್ಳಲಿಲ್ಲ. ಇದನ್ನು ಸಿದ್ದರಾಮಯ್ಯ ಅರ್ಥಮಾಡಿಕೊಳ್ಳಬೇಕು. ಎ.ಮಂಜುಗೆ ಪಕ್ಷಾಂತರ ಹೊಸದಲ್ಲ. ಈ ಹಿಂದೆಯೂ ಅವರು ಮೂರು ಬಾರಿ ಪಕ್ಷಾಂತರ ಮಾಡಿದ್ದಾರೆ ಎಂದು ಕಾಲೆಳೆದರು.

    ಈ ರೀತಿಯ ಪಕ್ಷಾಂತರಗಳಿಗೆ ಕಾಂಗ್ರೆಸ್ ನಲ್ಲಿ ಬೆಲೆ ಮತ್ತು ಗೌರವ ಕೊಡ್ತಾರೆ. ನಿಷ್ಠಾವಂತರಿಗೆ ಗೌರವ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದೇ ವೇಳೆ ಎ.ಮಂಜು ಜಿಲ್ಲೆಯಾದ್ಯಂತ ನಡೆಸುತ್ತಿರುವ ಸಭೆಗಳಲ್ಲಿ ಭಾಗವಹಿಸುತ್ತಿರುವ ಜನಪ್ರತಿನಿಧಿಗಳ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಶಿವರಾಂ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ವಿರುದ್ಧ ಶೀಘ್ರವೇ ಶಿಸ್ತುಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.