Tag: ಶಿವರಾಮ್ ಹೆಬ್ಬಾರ್

  • ಸಚಿವ ಅನಂತಕುಮಾರ್ ಹೆಗಡೆ ಜೊತೆ ಶಾಸಕ ಶಿವರಾಮ್ ಹೆಬ್ಬಾರ್ ರಹಸ್ಯ ಮಾತುಕತೆ!

    ಸಚಿವ ಅನಂತಕುಮಾರ್ ಹೆಗಡೆ ಜೊತೆ ಶಾಸಕ ಶಿವರಾಮ್ ಹೆಬ್ಬಾರ್ ರಹಸ್ಯ ಮಾತುಕತೆ!

    – ಮತ್ತೆ ಶುರುವಾಯ್ತಾ ಆಪರೇಷನ್ ಕಮಲ?

    ಬೆಂಗಳೂರು: ಒಂದು ವಾರದ ಹಿಂದೆ ರಾಜ್ಯ ರಾಜಕಾರಣವನ್ನೇ ಅಲ್ಲೋಲ ಕಲ್ಲೋಲ ಮಾಡಿದ್ದ ಆಪರೇಷನ್ ಕಮಲ ಕೊನೆ ಹಂತದಲ್ಲಿ ವಿಫಲವಾಗಿತ್ತು. ಗುರುಗ್ರಾಮದ ರೆಸಾರ್ಟ್ ಸೇರಿಕೊಂಡಿದ್ದ ಬಿಜೆಪಿ ಶಾಸಕರು ತಮ್ಮ ಕ್ಷೇತ್ರದತ್ತ ಮರಳಿ ಬರ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ. ಆಪರೇಷನ್ ಕಮಲದ ಭೀತಿ ಹಿನ್ನೆಲೆಯಲ್ಲಿ ರೆಸಾರ್ಟ್ ಸೇರಿಕೊಂಡಿದ್ದ ಕೈ ನಾಯಕರು ತಮ್ಮ ಕ್ಷೇತ್ರಕ್ಕೆ ಹಿಂದಿರುಗಿದ್ದಾರೆ. ಇದೀಗ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಜೊತೆ ರಹಸ್ಯ ಮಾತುಕತೆ ನಡೆಸಿದ್ದಾರೆ.

    ಯಲ್ಲಾಪುರ ಸರ್ಕಾರಿ ವಸತಿಗೃಹದಲ್ಲಿ ಇಬ್ಬರು ನಾಯಕರು ತಮ್ಮ ಬೆಂಬಲಿಗರನ್ನು ಹೊರ ಕಳುಹಿಸಿ ಸಮಾಲೋಚನೆ ನಡೆಸಿದ್ದಾರೆ. ಈ ಹಿಂದೆ ಆಪರೇಷನ್ ಕಮಲಕ್ಕೆ ಒಳಗಾಗಬಹುದು ಅನ್ನೊ ಪಟ್ಟಿಯಲ್ಲಿ ಶಿವರಾಮ್ ಹೆಬ್ಬಾರ್ ಅವರ ಹೆಸರು ಕೇಳಿ ಬಂದಿತ್ತು. ಕೈ ಅತೃಪ್ತ ಶಾಸಕರು ಮುಂಬೈ ಸೇರಿಕೊಂಡಾಗ ಶಿವರಾಮ್ ಹೆಬ್ಬಾರ್ ಸಹ ಕೆಲ ದಿನ ಅಜ್ಞಾತಸ್ಥಳದಲ್ಲಿದ್ದರು. ಈ ವೇಳೆ ಆಪರೇಷನ್ ಕಮಲದಡಿ ಶಿವರಾಮ್ ಹೆಬ್ಬಾರ್ ಹೆಸರು ಕೇಳಿ ಬಂದಿತ್ತು.

    ಆಪರೇಷನ್ ಕಮಲ ವಿಫಲ ಬಳಿಕ ಕಾಣಿಸಿಕೊಂಡಿದ್ದ ಶಾಸಕರು, ನಾನು ಕುಟುಂಬದ ಜೊತೆ ಅಂಡಮಾನ್ ನಿಕೋಬಾರ್ ಪ್ರವಾಸಕ್ಕೆ ತೆರಳಿದ್ದೆ. ಅಭಿಮಾನಿಗಳು ಬಿಜೆಪಿಗೆ ಹೋಗಿ ಎಂದು ಹೇಳುತ್ತಾರೆ. ಅದು ಅವರ ಅಭಿಮಾನ. ಆದರೆ ಈ ಕ್ಷಣದವರೆಗೆ ಯಾವುದೇ ನಿರ್ಧಾರ ಮಾಡಿಲ್ಲ ಊಹಾಪೋಹದ ಸುದ್ದಿಗಳಿಗೆ ನಾವು ಬೆಲೆ ಕೊಡುವುದಿಲ್ಲ. ಮಾಧ್ಯಮಗಳಲ್ಲಿ ಕಪೋಲಕಲ್ಪಿತ ಸುದ್ದಿಗಳು ಬರುತ್ತಿವೆ. ಅದಕ್ಕೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದು ಹೇಳಿದ್ದರು.

    https://www.youtube.com/watch?v=t8hUU62B-gc

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ‘ಹಲೋ…, ಎಲ್ಲಿದ್ದೀಯಾ ನಾರಾಯಣರಾವ್ ಜಲ್ದಿ ಬಂದ್ಬಿಡು, ಜಲ್ದಿ ಬಂದ್ಬಿಡು’ ಅಂದ್ರು ಸಿದ್ದರಾಮಯ್ಯ, ಏರ್ ಪೋರ್ಟಿಂದ ಓಡೋಡಿ ಬಂದ್ರು ನಾರಾಯಣ ರಾವ್!

    ‘ಹಲೋ…, ಎಲ್ಲಿದ್ದೀಯಾ ನಾರಾಯಣರಾವ್ ಜಲ್ದಿ ಬಂದ್ಬಿಡು, ಜಲ್ದಿ ಬಂದ್ಬಿಡು’ ಅಂದ್ರು ಸಿದ್ದರಾಮಯ್ಯ, ಏರ್ ಪೋರ್ಟಿಂದ ಓಡೋಡಿ ಬಂದ್ರು ನಾರಾಯಣ ರಾವ್!

    ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಹಲವು ಹಾಸ್ಯಮಯ ಸನ್ನಿವೇಶಗಳಿಗೆ ಸಾಕ್ಷಿಯಾಯಿತು. ಇಂದು ವಿಧಾನಸಭೆಯಲ್ಲಿ ನಡೆದ ಶಾಸಕಾಂಗ ಸಭೆಗೆ ಆರಂಭದಲ್ಲಿ ಬಸವಕಲ್ಯಾಣ ಶಾಸಕ ನಾರಾಯಣ ರಾವ್ ಆಗಮಿಸಿರಲಿಲ್ಲ. ತಮ್ಮ ನಿರೀಕ್ಷಿತ ಶಾಸಕರೆಲ್ಲಾ ಬರ್ತಾರೋ ಇಲ್ವೋ ಎಂಬ ಆತಂಕದಲ್ಲೇ ಎಲ್ಲಾ ನಾಯಕರು ಇದ್ದರು. ಇದೇ ವೇಳೆ ಸಭೆಗೆ ಬಂದ ಶಾಸಕರ ದೃಶ್ಯಾವಳಿಗಳನ್ನು ಚಿತ್ರೀಕರಿಸಲು ಕೊಠಡಿಯೊಳಗೆ ಮಾಧ್ಯಮಗಳಿಗೆ ಪ್ರವೇಶ ನೀಡಲಾಯಿತು.

    ಮಾಧ್ಯಮ ಪ್ರತಿನಿಧಿಗಳು ವೀಡಿಯೋ ಶೂಟ್ ಮಾಡುತ್ತಿದ್ದ ವೇಳೆಯಲ್ಲಿಯೇ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಯವರು ತಮ್ಮದೇ ಜಿಲ್ಲೆಯವರಾದ ಬಸವಕಲ್ಯಾಣ ಶಾಸಕರಾದ ನಾರಾಯಣ ರಾವ್ ಅವರಿಗೆ ಫೋನ್ ಮಾಡಿದ್ದಾರೆ. ಈ ವೇಳೆ ಖಂಡ್ರೆಯವರು ಸಿದ್ದರಾಮಯ್ಯ ಅವರಿಗೆ ಫೋನ್ ನೀಡಿದ್ದಾರೆ. ಫೋನ್ ಕೈಗೆತ್ತಿಕೊಂಡ ಸಿದ್ದರಾಮಯ್ಯನವರು ತಮ್ಮ ಎಂದಿನ ಶೈಲಿಯಲ್ಲಿ, ಹಲೋ…… ನಾರಾಯಣರಾವ್ ಎಲ್ಲಿದ್ದೀಯಾ, ಆ….. ಜಲ್ದಿ ಬಂದ್ಬಿಡು, ಜಲ್ದಿ ಬಂದ್ಬಿಡು ಎಂದು ಹೇಳಿದ್ದಾರೆ.

    ಸರ್, ಹೈದ್ರಾಬಾದ್‍ನಿಂದ ಬರೋದು ಲೇಟಾಯ್ತು. ಈಗ ಬೆಂಗಳೂರು ಏರ್ ಪೋರ್ಟ್‍ಗೆ ಬಂದಿದ್ದೇನೆ. ಬರ್ತಿದ್ದೇನೆ ಸರ್ ಎಂದು ಸಿದ್ದರಾಮಯ್ಯ ಅವರಿಗೆ ಉತ್ತರಿಸಿದರು. ಅಷ್ಟೊತ್ತಿಗಾಗಲೇ ನಾರಾಯಣರಾವ್ ಅವರು ಹೈದರಾಬಾದ್‍ನಿಂದ ವಿಮಾನದಲ್ಲಿ ಆಗಮಿಸಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದಿಂದ ಕೆಳಗಿಳಿದು ವಿಧಾನಸೌಧ ತಲುಪಬೇಕು ಅನ್ನೋ ಧಾವಂತದಲ್ಲಿ ಹೊರಬರುತ್ತಿದ್ದರು.

    ಈ ವೇಳೆ ಅಲ್ಲಿಯೂ ಮಾಧ್ಯಮ ಪ್ರತಿನಿಧಿಗಳು ಹಾಜರಿದ್ದರು. ಸಿದ್ದರಾಮಯ್ಯ ಫೋನ್ ಕಾಲ್ ರಿಸೀವ್ ಮಾಡಿದ ನಾರಾಯಣರಾವ್ ಅವರು, ಓಡೋಡುತ್ತಾ ಬಂದು ಕೆಂಪು ಬಣ್ಣದ ಕಾರು ಹತ್ತಿ ಏರ್ ಪೋರ್ಟಿಂದ ಹೊರಟೇ ಬಿಟ್ರು. ಈ ವೇಳೆ ಅವರ ಜೊತೆ ಬಂದಿದ್ದವರಲ್ಲಿ ಯಾಕೆ ಲೇಟ್ ಎಂದು ಕೇಳಿದಾಗ, ವಿಮಾನ ಬರುವುದು ವಿಳಂಬವಾಯಿತು ಎಂಬ ಸ್ಪಷ್ಟನೆ ನೀಡಿದರು.

    ಹೆಬ್ಬಾರ್ ಇವ್ರೇ…!: ಅತೃಪ್ತ ಬಣದಲ್ಲಿದ್ದಾರೆ ಎಂಬ ಗುಮಾನಿಯಲ್ಲೇ ಇದ್ದ ಶಿವರಾಮ್ ಹೆಬ್ಬಾರ್ ಅವರು ಕೂಡಾ ಇಂದಿನ ಸಭೆಗೆ ಆಗಮಿಸಿದ್ದರು. ಅವರ ಬಳಿ ಹೋಗ್ತಿದ್ದಂತೆ ಅವರ ಅಕ್ಕಪಕ್ಕದಲ್ಲಿ ಕುಳಿತಿದ್ದ ಶಾಸಕರು, ನೋಡ್ರಪ್ಪಾ ಇಲ್ಲಿ…. ಹೆಬ್ಬಾರ್ ಇವ್ರೇ… ಅಂತಾ ಬೆರಳು ತೋರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುವ ಯಾವುದೇ ನಿರ್ಧಾರವನ್ನು ಮಾಡಿಲ್ಲ: ಶಿವರಾಮ್ ಹೆಬ್ಬಾರ್

    ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುವ ಯಾವುದೇ ನಿರ್ಧಾರವನ್ನು ಮಾಡಿಲ್ಲ: ಶಿವರಾಮ್ ಹೆಬ್ಬಾರ್

    ಕಾರವಾರ: ನಾನು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುವ ಯಾವುದೇ ನಿರ್ಧಾರವನ್ನು ಮಾಡಿಲ್ಲ ಎಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ಈ ಕ್ಷಣದವರೆಗೆ ಎಲ್ಲಯೂ ಹೋಗುವ ನಿರ್ಧಾರ ಮಾಡಿಲ್ಲ. ಅಭಿಮಾನಿಗಳು ಬಿಜೆಪಿಗೆ ಹೋಗಿ ಎಂದು ಹೇಳುತ್ತಾರೆ. ಅದು ಅವರ ಅಭಿಮಾನ. ಆದರೆ ಈ ಕ್ಷಣದವರೆಗೆ ಯಾವುದೇ ನಿರ್ಧಾರ ಮಾಡಿಲ್ಲ ಊಹಾಪೋಹದ ಸುದ್ದಿಗಳಿಗೆ ನಾವು ಬೆಲೆ ಕೊಡುವುದಿಲ್ಲ. ಮಾಧ್ಯಮಗಳಲ್ಲಿ ಕಪೋಲಕಲ್ಪಿತ ಸುದ್ದಿಗಳು ಬರುತ್ತಿವೆ. ಅದಕ್ಕೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದರು.

    ವಿ.ಎಸ್ ಪಾಟೀಲ್ ಅವರು ತಾನು ಬಿಜೆಪಿಗೆ ಬರುತ್ತೇನೆ ಎಂದು ಹೇಳಿದ್ದಾರೆ. ಬಿಜೆಪಿಗರು ಅವರ ಮನಸ್ಸಿಗೆ ಬಂದಂತೆ ಹೇಳುತ್ತಾರೆ. ಅದಕ್ಕೆಲ್ಲ ಅವರೇ ಉತ್ತರಿಸಬೇಕು. ನಾವು ಉತ್ತರಿಸಲು ಸಾಧ್ಯವಿಲ್ಲ ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv