Tag: ಶಿವರಾಮ ಹೆಬ್ಬಾರ್

  • ಮತ್ತೆ ಆಪರೇಷನ್ ಹಸ್ತ ಸದ್ದು; ಡಿಕೆಶಿ ಭೇಟಿಯಾದ ಶಿವರಾಮ್ ಹೆಬ್ಬಾರ್, 30 ನಿಮಿಷಗಳ ಕಾಲ ಮಾತುಕತೆ

    ಮತ್ತೆ ಆಪರೇಷನ್ ಹಸ್ತ ಸದ್ದು; ಡಿಕೆಶಿ ಭೇಟಿಯಾದ ಶಿವರಾಮ್ ಹೆಬ್ಬಾರ್, 30 ನಿಮಿಷಗಳ ಕಾಲ ಮಾತುಕತೆ

    ಬೆಂಗಳೂರು: ರಾಜ್ಯದಲ್ಲಿ ಮತ್ತೆ ಆಪರೇಷನ್ ಹಸ್ತದ ಸದ್ದು ಜೋರಾಗ್ತಿದೆ. ನಿನ್ನೆಯಷ್ಟೇ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ (Poornima Shrinivas) ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಭೇಟಿ ಕೊಟ್ಟು ಕೃಷ್ಣಜನ್ಮಾಷ್ಟಮಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಈ ಬೆನ್ನಲ್ಲೇ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ (Shivaram Hebbar), ಡಿಕೆಶಿ ಅವರನ್ನ ಭೇಟಿ ಮಾಡಿ 30 ನಿಮಿಷಗಳ ಕಾಲ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

    ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಕುಮಾರಕೃಪ ಸರ್ಕಾರಿ ಅತಿಥಿ ಗೃಹದಲ್ಲಿ ಡಿ.ಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿ 30 ನಿಮಿಷಗಳ ಮಾತುಕತೆ ನಡೆಸಿದ್ದಾರೆ. ಇಲಾಖೆ ವಿಚಾರವಾಗಿ ಚರ್ಚಿಸಬೇಕು ಅಂತಾ ಡಿಶಿ ಅವರನ್ನ ಭೇಟಿ ಮಾಡಿರುವುದಾಗಿ ಹೇಳಿದ್ದಾರೆ.

    ನಿನ್ನೆ ಸಂಜೆ ಮಾಜಿ ಸಂಸದ ಬಿಜೆಪಿ ನಾಯಕ ಎಲ್.ಆರ್ ಶಿವರಾಮೇಗೌಡ (LR ShivarameGowda) ಸಹ ಡಿ.ಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿದ್ದಾರೆ. ಇದರಿಂದ ರಾಜ್ಯ ರಾಜಕೀಯದಲ್ಲಿ ದೊಡ್ಡಮಟ್ಟದ ಆಪರೇಷನ್ ನಡೆಯುತ್ತೆ ಅನ್ನೋ ಮಾತುಗಳು ಕೇಳಿಬರುತ್ತಿವೆ. ಇದನ್ನೂ ಓದಿ: ಮಾಜಿ ಸಚಿವ ವಿಶ್ವನಾಥ್ ಕಾಂಗ್ರೆಸ್ ಸೇರದಂತೆ ಮನವೊಲಿಸಲು ನಾನು ಮುಂದಾಳತ್ವ ವಹಿಸಲ್ಲ: ಹೆಬ್ಬಾರ್

    ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮನೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಪೂಜೆಗೆ ಪಾಲ್ಗೊಂಡಿದ್ದ ಡಿಕೆಶಿ, ನಮ್ದು ಆಪರೇಷನ್ ಅಲ್ಲ.. ಕೋ ಆಪರೇಷನ್ ಅಂತ ಹೇಳಿದ್ದರು. ಇನ್ನು ಕಾಂಗ್ರೆಸ್‌ನಿಂದ ಆಫರ್ ಇದೆ.. ಆದ್ರೆ, ಬಿಜೆಪಿ ಬಿಡೋ ಯೋಚನೆ ಮಾಡಿಲ್ಲ ಎಂದು ಪೂರ್ಣಿಮಾ ಶ್ರೀನಿವಾಸ್ ಹೇಳಿದ್ದರು. ಇದನ್ನೂ ಓದಿ: `ಕೈ’ ಹಿಡಿಯಲು ಮುಂದಾದ್ರಾ BJP ಶಾಸಕ – ರಾತ್ರಿ ರಹಸ್ಯ ಸಭೆ ಬಳಿಕ ಶಿವರಾಮ್‌ ಹೆಬ್ಬಾರ್ ಹೇಳಿದ್ದೇನು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • `ಕೈ’ ಹಿಡಿಯಲು ಮುಂದಾದ್ರಾ BJP ಶಾಸಕ – ರಾತ್ರಿ ರಹಸ್ಯ ಸಭೆ ಬಳಿಕ ಶಿವರಾಮ್‌ ಹೆಬ್ಬಾರ್ ಹೇಳಿದ್ದೇನು?

    `ಕೈ’ ಹಿಡಿಯಲು ಮುಂದಾದ್ರಾ BJP ಶಾಸಕ – ರಾತ್ರಿ ರಹಸ್ಯ ಸಭೆ ಬಳಿಕ ಶಿವರಾಮ್‌ ಹೆಬ್ಬಾರ್ ಹೇಳಿದ್ದೇನು?

    ಕಾರವಾರ: ಲೋಕಸಭಾ ಚುನಾವಣೆ (Lok Sabha Election) ಸಮೀಪಿಸುತ್ತಿರುವ ಹೊತ್ತಿನಲ್ಲೇ ಆಪರೇಷನ್ ಹಸ್ತ ಶುರುವಾಗಿದೆ. ಗೆಲುವೊಂದೇ ಗುರಿಯಾಗಿಸಿಕೊಂಡಿರುವ ಕಾಂಗ್ರೆಸ್ ನಂಬರ್ ಗೇಮ್‌ನತ್ತ ಟಾರ್ಗೆಟ್ ಹಾಕಿಕೊಂಡಿದೆ. ಅದಕ್ಕಾಗಿ ಬಿಜೆಪಿ ಹಾಗೂ ಜೆಡಿಎಸ್‌ನಿಂದ (BJP-JDS) ಎಷ್ಟೇ ಜನ ಬಂದರೂ ಬಾಗಿಲು ಓಪನ್‌ಗೆ ಸೀಕ್ರೆಟ್ ಆಪರೇಷನ್‌ಗೆ ಮುಂದಾಗಿದೆ. ಜೊತೆಗೆ ಮೂಲ ಕಾಂಗ್ರೆಸ್ಸಿಗರನ್ನ ಪಕ್ಷಕ್ಕೆ ಕರೆತರುವ ಪ್ರಯತ್ನವೂ ನಡೆದಿದೆ ಎಂದು ಮೂಲಗಳು ತಿಳಿಸಿವೆ.

    ಈ ನಡುವೆ ಶಾಸಕ ಶಿವರಾಮ್‌ ಹೆಬ್ಬಾರ್‌ (Shivaram Hebbar) ಕೂಡ ಪಕ್ಷ ತೊರೆಯಲು ಸಜ್ಜಾಗಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ. ಕಮಲ ಬಿಟ್ಟು ಕೈ ಹಿಡಿಯಲು ಹೆಬ್ಬಾರ್, ಬೆಂಬಲಿಗರ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಈ ಬಗ್ಗೆ ಬೆಂಬಲಿಗರೊಂದಿಗೆ ಮುಂಡಗೋಡಿನಲ್ಲಿ ರಾತ್ರಿ ರಹಸ್ಯ ಸಭೆ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರೆ ಆಗುವ ಅನುಕೂಲದ ಬಗ್ಗೆ ಚರ್ಚೆ ಸಹ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: 21 ಚರ್ಚ್‌ಗಳನ್ನು ಧ್ವಂಸಗೊಳಿಸಿದ 600 ಜನರ ಮೇಲೆ ಕೇಸ್ – 135 ಆರೋಪಿಗಳನ್ನು ಬಂಧಿಸಿದ ಪಾಕ್ ಪೊಲೀಸರು

    ಶಿವರಾಮ್‌ ಹೆಬ್ಬಾರ್ ಬೆಂಬಲಿಗರೂ ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವಂತೆ ಬೆಂಬಲಿಗರು ಒತ್ತಾಯಿಸಿದ್ದಾರೆ. ಬೆಂಗಳೂರಿಗೆ ಹೋದ್ಮೇಲೆ ಮಾತಾಡ್ತೀನಿ ಅಂತಾ ಹೇಳಿದ್ದಾರೆ. ಸದ್ಯಕ್ಕೆ ಶಿವರಾಮ್‌ ಹೆಬ್ಬಾರ್ ನಡೆ ಕೂಡ ಸಸ್ಪೆನ್ಸ್ ಆಗಿದೆ. ಇದನ್ನೂ ಓದಿ: ಧಾರವಾಡದಲ್ಲಿ ವಿಚಿತ್ರ ಘಟನೆ – ಮೃತಪಟ್ಟಿದೆ ಎಂದ ವೈದ್ಯರು, ಅಂತ್ಯಕ್ರಿಯೆ ವೇಳೆ ಉಸಿರಾಡಿದ ಮಗು!

    ಈ ಸಂಬಂಧ ಶುಕ್ರವಾರ ಯಲ್ಲಾಪುರದಲ್ಲಿ ಮಾತನಾಡಿರುವ ಶಿವರಾಮ್‌ ಹೆಬ್ಬಾರ್, ನಾನು ಎಲ್ಲೂ ಸಭೆ ಮಾಡಿಲ್ಲ. ಕಾರ್ಯಕರ್ತರ ಜೊತೆ ಸಭೆ ಮಾಡುವುದು ನನ್ನ ಕರ್ತವ್ಯ ಮಾಡಿದ್ದೇನೆ. ಯಡಿಯೂರಪ್ಪ ನೇತ್ರತ್ವದಲ್ಲಿ ನಾವು ಪಕ್ಷಕ್ಕೆ ಬಂದಿದ್ದೇವೆ. ನಮ್ಮ ಅಹವಾಲನ್ನ ವರಿಷ್ಠರ ಗಮನಕ್ಕೆ ತಂದಿದ್ದೇನೆ. ನಮಗೆ ಇರುವ ಆತಂಕ ಹಂಚಿಕೊಂಡಿದ್ದೇವೆ. ಏನು ಹೇಳಬೇಕು ಅದನ್ನು ಹೇಳಿದ್ದೇವೆ. ಮುಚ್ಚಿಡುವುದು ಯಾವುದೂ ಇಲ್ಲ. ವರಿಷ್ಟರೇ ನಿರ್ಣಯ ಮಾಡಬೇಕು. ಯಡಿಯೂರಪ್ಪನವರು ಬೊಮ್ಮಾಯಿ ಸಹ ಅನ್ಯಾಯ ಮಾಡಿಲ್ಲ. ಪಕ್ಷದಲ್ಲಿ ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮ ಆಗಬೇಕು. ಕಾಂಗ್ರೆಸ್ ಪಕ್ಷದಿಂದ ಯಾರನ್ನೂ ಸಂಪರ್ಕ ಮಾಡಿಲ್ಲ, ಪಕ್ಷ ಸೇರುವ ಬಗ್ಗೆ ಚರ್ಚೆ ನಡೆದಿಲ್ಲ. ಈಗ ಪಕ್ಷದಲ್ಲೇ ಇದ್ದೀನಿ ಎಂದು ಮತ್ತೆ ಕುತೂಹಲ ಕೆರಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಿಎಫ್‌ಐ ಎಂದಲ್ಲ, ದೇಶದ್ರೋಹಿ ಕೆಲಸ ಮಾಡುವ ಯಾರೇ ಆದರೂ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು: ಶಿವರಾಮ್ ಹೆಬ್ಬಾರ್

    ಪಿಎಫ್‌ಐ ಎಂದಲ್ಲ, ದೇಶದ್ರೋಹಿ ಕೆಲಸ ಮಾಡುವ ಯಾರೇ ಆದರೂ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು: ಶಿವರಾಮ್ ಹೆಬ್ಬಾರ್

    ಹಾವೇರಿ: ಪಿಎಫ್‌ಐ (PFI) ಸಂಘಟನೆ ಅಂತಲ್ಲ, ಯಾರು ದೇಶದ್ರೋಹಿ (Traitor) ಸಂಘಟನೆಗಳಲ್ಲಿ ಭಾಗಿಯಾಗ್ತಾರೆ, ಯಾರು ದೇಶದ ಗೌರವಕ್ಕೆ ತೊಂದರೆ ಕೊಡುತ್ತಾರೆ, ಅವರು ಯಾವುದೇ ಸಮಾಜ, ಜಾತಿ, ಧರ್ಮ ಆಗಿರಲಿ, ನಿರ್ದಾಕ್ಷಿಣ್ಯವಾಗಿ ಅವರನ್ನು ಬಂಧಿಸಲೇಬೇಕಾಗಿದೆ. ಆ ಕೆಲಸವನ್ನು ನಾವು ಮಾಡುತ್ತೇವೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ (Shivaram Hebbar) ಹೇಳಿದರು.

    ಹಾವೇರಿಯಲ್ಲಿ (Haveri) ಮಾತನಾಡಿದ ಅವರು, ಕಾಂಗ್ರೆಸ್‌ನವರ (Congress) ಪೇ ಸಿಎಂ (PayCM) ಅಭಿಯಾನ ವಿರುದ್ಧ ಕಿಡಿ ಕಾರಿದರು. ಕಾಂಗ್ರೆಸ್‌ನವರಿಗೆ ಒಂದು ಕಡೆ ಜೋಡೋ ಯಾತ್ರೆ, ಮತ್ತೊಂದು ಕಡೆ ತೋಡೋ ಯಾತ್ರೆ ಶುರುವಾಗಿದೆ. ಕಾಂಗ್ರೆಸ್‌ನವರಿಗೆ ನರಕ ಉಂಟಾಗಿದೆ ಎಂದರು. ಇದನ್ನೂ ಓದಿ: ಬೊಮ್ಮಾಯಿ ಸಿಎಂ ಆದಾಗಿಂದ ಕಾಂಗ್ರೆಸ್‌ನವರು ಅಪಪ್ರಚಾರ ಮಾಡ್ತಿ‌ದ್ದಾರೆ: ಬಿ.ಸಿ.ಪಾಟೀಲ್

    ಸಿಎಂ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪನವರ ನೇತೃತ್ವದಲ್ಲಿ ಮುಂದಿನ ಚುನಾವಣೆಯನ್ನು ನಾವು ಬಹಳ ಗಟ್ಟಿಯಾಗಿ ಎದುರಿಸುತ್ತೇವೆ. 2023ರಲ್ಲಿ ಕರ್ನಾಟಕದಲ್ಲಿ ಭಾರತೀಯ ಜನತಾ ಪಾರ್ಟಿ (BJP) ಪುನಃ ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್ ತೋಡೋ ಯಾತ್ರೆ ಅಂದ್ರೆ ಕಾಂಗ್ರೆಸ್‌ನವರೇ ತೋಡಿಕೊಳ್ಳುತ್ತಿದ್ದಾರೆ. ರಾಜಸ್ಥಾನದಲ್ಲಿ ಏನಾಗ್ತಿದೆ ಎಂಬುದು ಎಲ್ಲರಿಗೂ ಗೊತ್ತು. ಇನ್ನು ಸ್ವಲ್ಪ ದಿನ, ಮತ್ತೇನಾಗುತ್ತೆ ಎಂದು ಕಾದು ನೋಡಿ ಎಂದು ಶಿವರಾಮ್ ಹೆಬ್ಬಾರ್ ಹೇಳಿದರು. ಇದನ್ನೂ ಓದಿ: HALಗೆ ಈಗ ಮತ್ತೊಮ್ಮೆ ತನ್ನ ಸಾಮರ್ಥ್ಯ ತೋರಿಸುವ ಸಮಯ ಬಂದಿದೆ: ದ್ರೌಪದಿ ಮುರ್ಮು

    Live Tv
    [brid partner=56869869 player=32851 video=960834 autoplay=true]

  • ಗಣೇಶ ಚತುರ್ಥಿ ಆಚರಣೆಗೆ 10 ದಿನದಲ್ಲಿ ಹೊಸ ಮಾರ್ಗಸೂಚಿ: ಶಿವರಾಮ್ ಹೆಬ್ಬಾರ್

    ಗಣೇಶ ಚತುರ್ಥಿ ಆಚರಣೆಗೆ 10 ದಿನದಲ್ಲಿ ಹೊಸ ಮಾರ್ಗಸೂಚಿ: ಶಿವರಾಮ್ ಹೆಬ್ಬಾರ್

    ಕಾರವಾರ: ಗಣೇಶ ಚತುರ್ಥಿ ಆಚರಣೆ ಸಂಬಂಧ ಮುಂದಿನ ಹತ್ತು ದಿನದ ಪರಿಸ್ಥಿತಿ ಅವಲೋಕಿಸಿ ಹೊಸ ಮಾರ್ಗಸೂಚಿ ಹೊರಡಿಸುವ ಸಾಧ್ಯತೆ ಇದೆ ಎಂದು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

    ಶಿರಸಿ ನಗರದಲ್ಲಿ ಇಂದು ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಆಚರಣೆಗೆ ಕಠಿಣ ನಿರ್ಬಂಧ ವಿಧಿಸದಂತೆ ಈಗಾಗಲೇ ಗಣೇಶೊತ್ಸವ ಸಮಿತಿ ಪ್ರಮುಖರ ನಿಯೋಗ ತಮ್ಮನ್ನು ಭೇಟಿ ಮಾಡಿದೆ. ಜನರ ಒತ್ತಾಯವನ್ನು ಸರ್ಕಾರಕ್ಕೂ ತಿಳಿಸಲಾಗಿದೆ. ಮುಂದಿನ ಸ್ಥಿತಿ ಗಮನಿಸಿ ಮುಖ್ಯಮಂತ್ರಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು. ಇದನ್ನೂ ಓದಿ: 6 ಲಕ್ಷ ಕೋಟಿ ಸಂಗ್ರಹ ಗುರಿ – ಖಾಸಗಿಯವರಿಗೆ ಸಿಗಲಿದೆ ರೈಲು, ರಸ್ತೆ, ಗಣಿ

    ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ ಎರಡು ಸಾವಿರದಷ್ಟು ರೈತರಿಗೆ ಬಿಡುಗಡೆ ಆಗಬೇಕಿರುವ ಮೊತ್ತವನ್ನು ಶೀಘ್ರ ದೊರಕುವಂತೆ ಮಾಡಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಿದ್ದೇನೆ. ವಾರದೊಳಗೆ ಸಕಾರಾತ್ಮಕ ಫಲಿತಾಂಶ ಕಂಡುಕೊಳ್ಳಲಿದ್ದೇವೆ ಎಂದರು. ಇದನ್ನೂ ಓದಿ: ಗಣೇಶ ಚತುರ್ಥಿಯಂದೇ ಪ್ರಕೃತಿಯ ಮಧ್ಯೆ ಪ್ರತ್ಯಕ್ಷವಾದ ಗಣಪತಿ

  • ವಲಸೆ ಕಾರ್ಮಿಕರಿಗೆ ಫುಡ್ ಕಿಟ್ ವಿತರಿಸಿದ ಸಚಿವ ಹೆಬ್ಬಾರ್

    ವಲಸೆ ಕಾರ್ಮಿಕರಿಗೆ ಫುಡ್ ಕಿಟ್ ವಿತರಿಸಿದ ಸಚಿವ ಹೆಬ್ಬಾರ್

    ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ಡೈರಿ ಸರ್ಕಲ್ ಬಳಿಯಲ್ಲಿ ಮೆಟ್ರೋ ಹಾಗೂ ಇತರೆ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಲಸೆ ಕಾರ್ಮಿಕರಿಗೆ ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ರಾಜ್ಯ ಕಟ್ಟಡದ ಕಾರ್ಮಿಕ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೀಡುತ್ತಿರುವ ದಿನಸಿ ಸಾಮಗ್ರಿಗಳ ಕಿಟ್ ಹಾಗೂ ಸುರಕ್ಷತಾ ಕಿಟ್ ಗಳನ್ನು ವಿತರಿಸಿ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದರು.

    ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ವಲಸೆ ಕಾರ್ಮಿಕರ ಸುರಕ್ಷತೆಗಾಗಿ ಕೈಗೊಂಡ ಕ್ರಮಗಳ ಕುರಿತು ಕುರಿತು ಕಾರ್ಮಿಕರಿಗೆ ಮಾಹಿತಿ ನೀಡಿ, ಪ್ರತಿಯೊಬ್ಬ ಕಾರ್ಮಿಕರೊಂದಿಗೆ ಮಾತನಾಡಿ ಅವರ ಸಮಸ್ಯೆಗಳನ್ನು ಆಲಿಸಿದರು. ಮಾನ್ಯ ಸಚಿವರು ಆಗಮಿಸಿ ಕಿಟ್ ನೀಡಿ ತಮ್ಮ ಸಮಸ್ಯೆಗಳನ್ನು ಆಲಿಸಿದಕ್ಕೆ ವಲಸೆ ಕಾರ್ಮಿಕರು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಹೊನ್ನಾವರ ಖಾಸಗಿ ಬಂದರು ವಿವಾದ, ಶೀಘ್ರ ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ಭೇಟಿ: ಹೆಬ್ಬಾರ್

    ಈ ಕಾರ್ಯಕ್ರಮದಲ್ಲಿ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ.ಜಿ.ಕಲ್ಪನಾ ಹಾಗೂ ಕಾರ್ಮಿಕ ಆಯುಕ್ತರಾದ ಅಕ್ರಂ ಪಾಷಾ ಕಾರ್ಮಿಕ ಕಲ್ಯಾಣ ಮಂಡಳಿ ನಿರ್ದೇಶಕರಾದ ನಾಗನಾಥ್, ಪ್ರಕಾಶ್ ಎಂ, ನಾಡಗೇರ್ ಹಾಗೂ ಶಿವಾನಿ ಭಟ್ಕಳ ಮತ್ತು ಸ್ಥಳೀಯ ಕಾರ್ಮಿಕ ಸಂಘಟನೆಗಳ ಪ್ರಮುಖರು ಹಾಜರಿದ್ದರು.