Tag: ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ

  • ಸ್ವಾಮೀಜಿ ನಾಮಪತ್ರ ವಾಪಸ್: ಹೆಚ್‍ಡಿಡಿ ಪ್ರತಿಕ್ರಿಯೆ

    ಸ್ವಾಮೀಜಿ ನಾಮಪತ್ರ ವಾಪಸ್: ಹೆಚ್‍ಡಿಡಿ ಪ್ರತಿಕ್ರಿಯೆ

    ಬೆಂಗಳೂರು: ರಾಷ್ಟ್ರದಲ್ಲಿ ಅನೇಕ ಕಡೆ ಚುನಾವಣೆಯಲ್ಲಿ ಗೆದ್ದು ಸ್ವಾಮೀಜಿಗಳು ಸಂಸತ್ ಪ್ರವೇಶಿಸಿದ್ದಾರೆ. ಆದರೆ ಕರ್ನಾಟಕದಲ್ಲಿ ದೊಡ್ಡ ಅನಾಹುತ ಆಯ್ತು ಎನ್ನುವ ರೀತಿ ಬಿಂಬಿಸುತ್ತಿದ್ದಾರೆ ಎಂದು ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ನಾಮ ಪತ್ರ ಹಿಂಪಡೆದಿರುವುದರ ಕುರಿತು ಬೇಸರ ವ್ಯಕ್ತಪಡಿಸಿದರು.

    ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಥಣಿ ಕ್ಷೇತ್ರದಲ್ಲಿ ಗುರು ದಾಶ್ಯಾಳ್, ಹಿರೇಕೆರೂರಿನಲ್ಲಿ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ನಾಮಪತ್ರ ಹಿಂಪಡೆದಿದ್ದಾರೆ. ಹಲವು ಮುಖಂಡರು ಒತ್ತಡ ಹೇರುವ ಮೂಲಕ ನಾಮಪತ್ರವನ್ನು ಹಿಂಪಡೆಯುವಂತೆ ಮಾಡಿದ್ದಾರೆ. ನಾವೇ ಸ್ವಾಮೀಜಿಯನ್ನು ಚುನಾವಣೆಗೆ ನಿಲ್ಲಿಸಿರಲಿಲ್ಲ. ಅವರೇ ಕೇಳಿದ್ದಾರೆ ಎಂದು ಬಿ-ಫಾರಂ ಕೊಟ್ಟಿದ್ದೆವು. ನಾನು ಅದರ ಬಗ್ಗೆ ಹೆಚ್ಚು ವಿಶ್ಲೇಷಣೆ ಮಾಡುವುದಿಲ್ಲ ಎಂದರು.

    ನಾಮಪತ್ರ ಹಿಂಪಡೆಯುವಂತೆ ಒತ್ತಡ ಹೇರಿದ ಕ್ರಮವನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ಸ್ವಾಮೀಜಿಗಳಿಗೆ ಮಾನಸಿಕ ಒತ್ತಡ ಹಾಕಿ, ನಾಮಪತ್ರ ಹಿಂಪಡೆಯದಿದ್ದಲ್ಲಿ ದುಷ್ಪರಿಣಾಮ ಆಗುತ್ತದೆ ಎಂದು ಬೆದರಿಸಿದ್ದಾರೆ. ಸಿಎಂ ಯಡಿಯೂರಪ್ಪನವರ ಪುತ್ರ, ಸಂಸದ ರಾಘವೇಂದ್ರ ನಾಯಕತ್ವದಲ್ಲಿ ಒತ್ತಡ ಹಾಕಿಸಿದ್ದಾರೆ. ಏಳೆಂಟು ಸ್ವಾಮೀಜಿಗಳ ಮೂಲಕ ಒತ್ತಡ ಹಾಕಿಸಿದ್ದಾರೆ, ಅವರ ಹೆಸರನ್ನು ಹೇಳುವುದಿಲ್ಲ. ಆದರೆ ಒಬ್ಬ ವ್ಯಕ್ತಿಯ ಸ್ವಾತಂತ್ರ್ಯ ಹರಣ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಉಪ ಚುನಾವಣೆಯಲ್ಲಿ ಜಯಲಕ್ಷ್ಮಿ ಯಾರಿಗೆ ಜಾರುತ್ತಾಳೋ ಗೊತ್ತಿಲ್ಲ, ಕಾದು ನೋಡೋಣ. ಮಹಾಲಕ್ಷ್ಮಿ ಲೇಔಟ್ ನಲ್ಲಿ ಗಿರೀಶ್ ನಾಶಿ ಮನೆ ಮುಂದೆ ಇದ್ದ ಪೋಸ್ಟರ್ ಕೀಳಿಸಿದ್ದರು. ಅವರು ಯುದ್ಧ ಭೂಮಿಯಿಂದ ಓಡಿಹೋದರು ಎನ್ನುವ ರೀತಿ ಬಿಂಬಿಸಿದರು. ಆ ಪೋಸ್ಟರ್ ಕೀಳಿಸಿದ್ದು ಯಾರು ಅಂತ ಗೊತ್ತು. ಇದನ್ನು ಸವಾಲಾಗಿ ಸ್ವೀಕಾರ ಮಾಡುತ್ತೇನೆ, ಈ ವಿಚಾರವನ್ನು ನಾನು ವೈಯಕ್ತಿಕವಾಗಿ ತೆಗೆದುಕೊಂಡಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

  • ಹಿರೇಕೆರೂರಿನಲ್ಲಿ ಬಿಜೆಪಿಗೆ ಬಿಗ್ ರಿಲೀಫ್

    ಹಿರೇಕೆರೂರಿನಲ್ಲಿ ಬಿಜೆಪಿಗೆ ಬಿಗ್ ರಿಲೀಫ್

    ಹಾವೇರಿ: ಜೆಡಿಎಸ್ ಅಭ್ಯರ್ಥಿಯಾಗಿ ಹಿರೇಕೆರೂರು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದಿದ್ದ ಕಬ್ಬಿಣಕಂಥಿ ಮಠದ ಸ್ವಾಮೀಜಿ ಈಗ ನಾಮಪತ್ರ ವಾಪಸ್ ಪಡೆದಿದ್ದು, ಇದರಿಂದ ಬಿಜೆಪಿಗೆ ಬಿಗ್ ರಿಲೀಫ್ ಸಿಕ್ಕಿದೆ.

    ಪಂಚಮಠಾಧೀಶರ ಒತ್ತಡಕ್ಕೆ ತಲೆಬಾಗಿ ಶಿವಲಿಂಗ ಶಿವಾಚಾರ್ಯ ಶ್ರೀಗಳು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಸಂಸದ ರಾಘವೇಂದ್ರ ಸಮ್ಮುಖದಲ್ಲಿ ಶಿವಾಚಾರ್ಯ ಸ್ವಾಮೀಜಿ ತಮ್ಮ ನಾಮಪತ್ರವನ್ನು ವಾಪಾಸ್ ಪಡೆದಿದ್ದಾರೆ. ಮಾಲೆ ಹಾಕುವ ಮೂಲಕ ರಾಘವೇಂದ್ರ ಅವರು ಸ್ವಾಮೀಜಿ ಅವರನ್ನು ಸ್ವಾಗತಿಸಿದ್ದಾರೆ. ಇದನ್ನೂ ಓದಿ: ನಾಮಪತ್ರ ಹಿಂಪಡೆಯಲು ಹಿರೇಕೆರೂರು ಜೆಡಿಎಸ್ ಅಭ್ಯರ್ಥಿ ಸ್ವಾಮೀಜಿ ನಿರ್ಧಾರ

    ಮಂಗಳವಾರ ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ಶ್ರೀಗಳು, ನಾಮಪತ್ರ ಹಿಂಪಡೆಯಲು ನಿರ್ಧರಿಸಿರುವುದಾಗಿ ತಿಳಿಸಿದ್ದರು. ಹಿರಿಯ ಮಠಾಧೀಶರ ಆದೇಶದಿಂದ ನಿರ್ಧಾರ ಬದಲಿಸಿದ್ದೇನೆ. ಸಾಧ್ಯವಾದರೆ ಬುಧವಾರವೇ ನಾಮಪತ್ರ ಹಿಂಪಡೆಯುತ್ತೇನೆ. ಒಂದು ವೇಳೆ ಸಾಧ್ಯವಾಗದಿದ್ದರೆ ಗುರುವಾರ ನಾಮಪತ್ರ ವಾಪಸ್ ಪಡೆಯುವುದು ಖಚಿತ. ಯಾರೇ ಜನಪ್ರತಿನಿಧಿ ಆಯ್ಕೆಯಾಗಿ ಬಂದರೂ ತಾಲೂಕಿನ ಅಭಿವೃದ್ಧಿ ಕೆಲಸಗಳನ್ನು ಅನುಷ್ಠಾನಕ್ಕೆ ತರುವ ಅಜೆಂಡಾಗೆ ಒಪ್ಪಿಗೆ ನೀಡಿದ್ದಾರೆ. ಹೀಗಾಗಿ ವಾಪಸ್ ಪಡೆಯುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದರು. ಇದನ್ನೂ ಓದಿ: ನಾನು ಸೇಫ್ ಆಗಿದ್ದೇನೆ, ನಿಲುವು ಬದಲಿಸಲ್ಲ: ಜೆಡಿಎಸ್ ಅಭ್ಯರ್ಥಿ ಹಿರೇಕೆರೂರು ಸ್ವಾಮೀಜಿ

    ಕೆಲ ದಿನಗಳ ಹಿಂದೆ ಹಿರೇಕೆರೂರು ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿಗೆ ಭಕ್ತರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಮಾಡಿದ್ದರು. ಹಿರೇಕೆರೂರು ಕ್ಷೇತ್ರದ ರಾಜಕಾರಣ ಅಪಮೌಲ್ಯ ಆಗಿದೆ. ಕ್ಷೇತ್ರದ ರಾಜಕೀಯ ವ್ಯವಸ್ಥೆ ಸರಿಪಡಿಸಲು ಚುನಾವಣೆಗೆ ಸ್ಪರ್ಧಿಸಿ ಎಂದು ಒತ್ತಡ ಹಾಕಿದ್ದರು. ಕಳೆದ ಎರಡು ದಿನಗಳ ಹಿಂದೆ ಚುನಾವಣೆಗೆ ನಿಲ್ಲದಿರಲು ನಿರ್ಧರಿಸಿದ್ದ ಸ್ವಾಮೀಜಿ, ರಾತ್ರೋರಾತ್ರಿ ಹಿರೇಕೆರೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರು. ಅದರಂತೆ ಸೋಮವಾರ ಜೆಡಿಎಸ್ ಅಭ್ಯರ್ಥಿಯಾಗಿ ಹಿರೇಕೆರೂರು ಕ್ಷೇತ್ರದಿಂದ ನಾಮಪತ್ರ ಸಹ ಸಲ್ಲಿಸಿದ್ದರು. ಇದನ್ನೂ ಓದಿ: ಗುರುಗಳ ಬಳಿ ಭಕ್ತರೇ ಹೋಗಬೇಕು, ಭಕ್ತರ ಬಳಿ ಗುರುಗಳು ಹೋಗಬಾರದು: ಶಿವಲಿಂಗ ಸ್ವಾಮೀಜಿಗೆ ತರಾಟೆ

    ಚುನಾವಣೆಗೆ ನಿಲ್ಲಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಬೇಡಿಕೊಂಡಿದ್ದರು. ಬಿ.ಸಿ ಪಾಟೀಲ್ ಅವರನ್ನು ಸೋಲಿಸಲು ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಅಲ್ಲದೆ ವೀರಶೈವ ಲಿಂಗಾಯತರ ಮತ ಒಡೆಯಲು ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಈ ರಣತಂತ್ರ ರೂಪಿಸಿದ್ದಾರೆ ಎಂದು ಭಕ್ತರು ಸ್ವಾಮೀಜಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕಿದ್ದರು.

  • ನಾಮಪತ್ರ ಹಿಂಪಡೆಯಲು ಹಿರೇಕೆರೂರು ಜೆಡಿಎಸ್ ಅಭ್ಯರ್ಥಿ ಸ್ವಾಮೀಜಿ ನಿರ್ಧಾರ

    ನಾಮಪತ್ರ ಹಿಂಪಡೆಯಲು ಹಿರೇಕೆರೂರು ಜೆಡಿಎಸ್ ಅಭ್ಯರ್ಥಿ ಸ್ವಾಮೀಜಿ ನಿರ್ಧಾರ

    – ಪಂಚಪೀಠದ ಶ್ರೀಗಳಿಂದ ಶಿವಾಚಾರ್ಯ ಸ್ವಾಮೀಜಿಗೆ ಒತ್ತಡ
    – ಜೆಡಿಎಸ್ ಮುಖಂಡ ಕೋನರೆಡ್ಡಿ ಆರೋಪ

    ಹಾವೇರಿ: ರಟ್ಟೀಹಳ್ಳಿ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಅಚ್ಚರಿಯ ನಿರ್ಧಾರ ಪ್ರಕಟಿಸಿದ್ದು, ಉಪ ಸಮರದ ಕಣದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.

    ಈ ಕುರಿತು ಸ್ವತಃ ಸ್ವಾಮೀಜಿಗಳೇ ಪಬ್ಲಿಕ್ ಟಿವಿಗೆ ಸ್ಪಷ್ಟಪಡಿಸಿದ್ದು, ನಾಮಪತ್ರ ಹಿಂಪಡೆಯಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಹಿರಿಯ ಮಠಾಧೀಶರ ಆದೇಶದಿಂದ ನಿರ್ಧಾರ ಬದಲಿಸಿದ್ದೇನೆ. ಸಾಧ್ಯವಾದರೆ ಬುಧವಾರವೇ ನಾಮಪತ್ರ ಹಿಂಪಡೆಯುತ್ತೇನೆ. ಒಂದು ವೇಳೆ ಸಾಧ್ಯವಾಗದಿದ್ದರೆ ಗುರುವಾರ ನಾಮಪತ್ರ ವಾಪಸ್ ಪಡೆಯುವುದು ಖಚಿತ. ಯಾರೇ ಜನಪ್ರತಿನಿಧಿ ಆಯ್ಕೆಯಾಗಿ ಬಂದರೂ ತಾಲೂಕಿನ ಅಭಿವೃದ್ಧಿ ಕೆಲಸಗಳನ್ನು ಅನುಷ್ಠಾನಕ್ಕೆ ತರುವ ಅಜೆಂಡಾಗೆ ಒಪ್ಪಿಗೆ ನೀಡಿದ್ದಾರೆ. ಹೀಗಾಗಿ ವಾಪಸ್ ಪಡೆಯುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

    ಕೆಲ ದಿನಗಳ ಹಿಂದೆ ಹಿರೇಕೆರೂರು ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿಗೆ ಭಕ್ತರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಮಾಡಿದ್ದರು. ಹಿರೇಕೆರೂರು ಕ್ಷೇತ್ರದ ರಾಜಕಾರಣ ಅಪಮೌಲ್ಯ ಆಗಿದೆ. ಕ್ಷೇತ್ರದ ರಾಜಕೀಯ ವ್ಯವಸ್ಥೆ ಸರಿಪಡಿಸಲು ಚುನಾವಣೆಗೆ ಸ್ಪರ್ಧಿಸಿ ಎಂದು ಒತ್ತಡ ಹಾಕಿದ್ದರು. ಕಳೆದ ಎರಡು ದಿನಗಳ ಹಿಂದೆ ಚುನಾವಣೆಗೆ ನಿಲ್ಲದಿರಲು ನಿರ್ಧರಿಸಿದ್ದ ಸ್ವಾಮೀಜಿ, ರಾತ್ರೋರಾತ್ರಿ ಹಿರೇಕೆರೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರು. ಅದರಂತೆ ಸೋಮವಾರ ಜೆಡಿಎಸ್ ಅಭ್ಯರ್ಥಿಯಾಗಿ ಹಿರೇಕೆರೂರು ಕ್ಷೇತ್ರದಿಂದ ನಾಮಪತ್ರ ಸಹ ಸಲ್ಲಿಸಿದ್ದರು.

    ಚುನಾವಣೆಗೆ ನಿಲ್ಲಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಬೇಡಿಕೊಂಡಿದ್ದರು. ಬಿ.ಸಿ.ಪಾಟೀಲ್ ಅವರನ್ನು ಸೋಲಿಸಲು ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮಾಸ್ಟರ್ ಪ್ಲಾನ್ ಮಾಡಿದ್ದರು. ಅಲ್ಲದೆ ವೀರಶೈವ ಲಿಂಗಾಯತರ ಮತ ಒಡೆಯಲು ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಈ ರಣತಂತ್ರ ರೂಪಿಸಿದ್ದಾರೆ ಎಂದು ಭಕ್ತರು ಸಹ ಸ್ವಾಮೀಜಿ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದರು.

    ಪಂಚಪೀಠದ ಶ್ರೀಗಳಿಂದ ಒತ್ತಡ:
    ಇದಕ್ಕೂ ಮುನ್ನ ರಾಣೆಬೆನ್ನೂರಿನಲ್ಲಿ ಮಾತನಾಡಿದ್ದ ಜೆಡಿಎಸ್ ಮುಖಂಡ ಎನ್.ಎಚ್.ಕೋನರೆಡ್ಡಿ, ಧರ್ಮದಲ್ಲಿ ರಾಜಕಾರಣ ಬೇಡ ಎಂದು ಪಂಚಪೀಠದ ಜಗದ್ಗುರುಗಳಿಂದ ಶಿವಾಚಾರ್ಯ ಸ್ವಾಮೀಜಿಗೆ ಒತ್ತಡ ಬಂದಿದೆ. ಅಲ್ಲದೆ ಮುಖ್ಯಮಂತ್ರಿಗಳ ಪುತ್ರ ಬಿ.ವೈ.ರಾಘವೇಂದ್ರ ಅವರು ಸಹ ಸ್ವಾಮೀಜಿ ಮೇಲೆ ಒತ್ತಡ ಹೇರಿದ್ದಾರೆ. ಹೀಗಾಗಿ ಸ್ವಾಮೀಜಿಗಳು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಹೇಳಿದ್ದರು.

    ಈ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಹ ಸ್ವಾಮೀಜಿಗಳಿಗೆ ಸ್ಪಷ್ಟವಾಗಿ ತಿಳಿಸಿದ್ದಾರೆ. ನಿಮಗೆ ಮಾನಸಿಕವಾಗಿ ತೊಂದರೆಯಾಗಬಾರದು. ಧರ್ಮದಲ್ಲಿ ರಾಜಕಾರಣವನ್ನು ಜೆಡಿಎಸ್ ಬಯಸುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಇದು ಕುಮಾರಸ್ವಾಮಿ ಅವರ ನಂಬಿಕೆ ಆಗಿದೆ. ಹೀಗಾಗಿ ಸ್ವಾಮೀಜಿಗೆ ನೀವು ನಿರ್ಧಾರ ತೆಗೆದುಕೊಳ್ಳಲು ಸ್ವತಂತ್ರರು. ಇದಕ್ಕೆ ನಮ್ಮ ಪಕ್ಷ ಯಾವುದೇ ರೀತಿ ವಿರೋಧ ವ್ಯಕ್ತಪಡಿಸುವುದಿಲ್ಲ ಅಂತ ತಿಳಿಸಿದ್ದರು ಎಂದು ಮಾಹಿತಿ ನೀಡಿದ್ದರು.

    ಸ್ವಾಮೀಜಿಗಳು ಸ್ಪರ್ಧಿಸುತ್ತಿರುವುದರಿಂದ ಬಿಜೆಪಿಗೆ ಸೋಲಿನ ಭೀತಿ ಇದೆಯೇನೋ, ಅದೇ ಕಾರಣಕ್ಕೆ ಈ ರೀತಿ ಮಾಡಲಾಗುತ್ತಿದೆ. ಸ್ವಾಮೀಜಿ ನಿರ್ಧಾರಕ್ಕೆ ನಮ್ಮ ಪಕ್ಷ ಬದ್ಧ. ಇದೀಗ ನಾನು ರಟ್ಟಿಹಳ್ಳಿಗೆ ತೆರಳಿ ಚುನಾವಣೆ ಸಿದ್ಧತೆ ಮಾಡಿ ಬಂದಿದ್ದೇನೆ. ಈ ಕುರಿತು ಅಲ್ಲಿನ ಭಕ್ತರ ಬಳಿ ಚರ್ಚಿಸಿ ಬಂದಿದ್ದೇನೆ ಎಂದಿದ್ದರು.

    ರಾಜಕೀಯ ಪ್ರವೇಶದ ಕುರಿತು ನಾಮಪತ್ರ ಸಲ್ಲಿಸಿದ ದಿನವೇ ಸ್ವಾಮೀಜಿ ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿ ಆಗಬಹುದಾದರೆ, ನಾನ್ಯಾಕೆ ಸ್ಪರ್ಧಿಸಬಾರದು ಎಂದು ಪ್ರಶ್ನಿಸಿದ್ದಾರೆ. ಅದನ್ನು ನಾವು ಗೌರವಿಸುತ್ತೇವೆ. ಆದರೆ ನಮ್ಮ ಪಕ್ಷದಿಂದ ಒತ್ತಡ ಹಾಕುವುದಿಲ್ಲ ಎಂದು ತಿಳಿಸಿದ್ದರು.

    ನಮ್ಮ ಪಕ್ಷದಿಂದ ಬೇರೆಯವರಿಗೆ ಟಿಕೆಟ್ ಫೈನಲ್ ಆಗಿತ್ತು. ಆದರೆ ಮಧ್ಯರಾತ್ರಿ ಸ್ವಾಮೀಜಿ ನಿಲ್ಲೋದು ಗೊತ್ತಾಯಿತು. ಜನರು ಸಹ ಅದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಹೀಗಾಗಿ ನಾವು ಅಭ್ಯರ್ಥಿ ಬದಲಾಯಿಸಿದೆವು. ಅವರು ನಿಲ್ಲಲು ಬಯಸಿದ್ದಾರೆ, ನಾವು ಬೆಂಬಲಿಸುತ್ತೇವೆ. ಆದರೆ ಅವರಿಗೆ ಏನೂ ತೊಂದರೆಯಾಗಬಾರದು, ಅದೇ ನಮ್ಮ ಕಾಳಜಿ ಎಂದಿದ್ದರು.

  • ನಾನು ಸೇಫ್ ಆಗಿದ್ದೇನೆ, ನಿಲುವು ಬದಲಿಸಲ್ಲ: ಜೆಡಿಎಸ್ ಅಭ್ಯರ್ಥಿ ಹಿರೇಕೆರೂರು ಸ್ವಾಮೀಜಿ

    ನಾನು ಸೇಫ್ ಆಗಿದ್ದೇನೆ, ನಿಲುವು ಬದಲಿಸಲ್ಲ: ಜೆಡಿಎಸ್ ಅಭ್ಯರ್ಥಿ ಹಿರೇಕೆರೂರು ಸ್ವಾಮೀಜಿ

    ಹಾವೇರಿ: ನಾಮಪತ್ರ ಸಲ್ಲಿಸಿದ ನಂತರ ಜೆಡಿಎಸ್ ಅಭ್ಯರ್ಥಿ ಕಬ್ಬಿಣಕಂಥಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿಗಳು ಮಠದಲ್ಲಿ ಕಾಣುತ್ತಿಲ್ಲ ಎಂಬ ಆತಂಕ ಭಕ್ತರಲ್ಲಿ ಮನೆ ಮಾಡಿತ್ತು. ಆದರೆ ಅವರದ್ದೇ ಎನ್ನಲಾದ ಆಡಿಯೋ ಇದೀಗ ಬಿಡುಗಡೆಯಾಗಿದ್ದು, ಸೇಫ್ ಆಗಿದ್ದೇನೆ ಎಂದು ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.

    ಜೆಡಿಎಸ್ ತಾಲೂಕು ಅಧ್ಯಕ್ಷ ಬಸನಗೌಡ್ರ ಜೊತೆ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಕರೆ ಮಾಡಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ನಾನು ಸೇಫ್ ಆಗಿದ್ದೇನೆ, ಹರಿಬ್ರಹ್ಮ ಬಂದರೂ ನನ್ನ ನಿಲುವು ಬದಲಾಗುವುದಿಲ್ಲ. ನವೆಂಬರ್ 21, ರಂದು ಸಂಜೆ ಬರುತ್ತೇನೆ ಎಂದು ಆಡಿಯೋದಲ್ಲಿ ಸ್ವಾಮೀಜಿ ಹೇಳಿದ್ದಾರೆ. ಇದನ್ನೂ ಓದಿ: ಸ್ವಾಮೀಜಿಗೆ ಟಿಕೆಟ್, ಕೌರವನಿಗೆ ಶಾಕ್ ಕೊಡಲು ಜೆಡಿಎಸ್ ನಿರ್ಧಾರ

    ನಾಮಪತ್ರ ಸಲ್ಲಿಕೆ ನಂತರ ಸ್ವಾಮೀಜಿ ಮಠದಲ್ಲಿ ಕಾಣಿಸಿಕೊಂಡಿರಲಿಲ್ಲ. ನಿಮ್ಮ ಸಹವಾಸವೇ ಸಾಕು ಎಂದು ಶ್ರೀಗಳು ಅಜ್ಞಾತ ಸ್ಥಳಕ್ಕೆ ಹೋಗಿದ್ದಾರೆ. ನಾಮಪತ್ರ ವಾಪಸ್ ಪಡೆಯುವಂತೆ ಬಿಜೆಪಿ ಮುಖಂಡರಿಂದ ಒತ್ತಡ ಹೆಚ್ಚಾಗಿತ್ತು. ಕರೆ ಹಾಗೂ ಸಂದೇಶಗಳ ಮೂಲಕ ಸ್ವಾಮೀಜಿಗೆ ಒತ್ತಾಯ ಮಾಡುತ್ತಿದ್ದರು. ಇದರಿಂದ ಬೇಸತ್ತ ಸ್ವಾಮೀಜಿ ಮಠದಿಂದ ಕಾಣೆಯಾಗಿದ್ದಾರೆ. ಆದರೆ ಸ್ವಾಮೀಜಿ ಸುರಕ್ಷಿತ ಸ್ಥಳದಲ್ಲಿದ್ದಾರೋ ಇಲ್ಲವೋ ಎಂಬುದು ಭಕ್ತರ ಆತಂಕವಾಗಿತ್ತು ಇದೀಗ ಸ್ವಾಮೀಜಿಗಳದ್ದು ಎನ್ನಲಾದ ಆಡಿಯೋ ಹರಿದಾಡುತ್ತಿದೆ.

    ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹಾವೇರಿ ಜಿಲ್ಲೆ ಹಿರೇಕೆರೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

  • ಬಿಎಸ್‍ವೈ ಪುತ್ರನ ಸಂಧಾನ ವಿಫಲ – ಸ್ಪರ್ಧೆಗೆ ನಿಲ್ತೀನಿ ಎಂದ ಸ್ವಾಮೀಜಿ

    ಬಿಎಸ್‍ವೈ ಪುತ್ರನ ಸಂಧಾನ ವಿಫಲ – ಸ್ಪರ್ಧೆಗೆ ನಿಲ್ತೀನಿ ಎಂದ ಸ್ವಾಮೀಜಿ

    ಹುಬ್ಬಳ್ಳಿ: ರಟ್ಟೀಹಳ್ಳಿ ಪಟ್ಟಣದಲ್ಲಿರುವ ಕಬ್ಬಿಣಕಂಥಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಅವರ ಜೊತೆ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ ಅವರು ನಡೆಸಿದ ಸಂಧಾನ ವಿಫಲವಾಗಿದೆ.

    ಹಿರೇಕೆರೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಕಬ್ಬಿಣಕಂಥಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಜೊತೆ ಮಾತುಕತೆ ನಡೆಸಲು ರಾಘವೇಂದ್ರ ಹಾಗೂ ಮಾಜಿ ಶಾಸಕ ಬಣಕಾರ ತೆರಳಿದ್ದರು. ಆದರೆ ನಾನು ಯಾವುದೇ ಕಾರಣಕ್ಕೂ ಚುನಾವಣೆಯಿಂದ ಹಿಂದಕ್ಕೆ ಸರಿಯುವುದಿಲ್ಲ ಎಂಬುದಾಗಿ ಸ್ವಾಮೀಜಿ ಈ ನಾಯಕರಿಗೆ ಸ್ಪಷ್ಟವಾಗಿ ತಿಳಿಸಿದ್ದಾರೆ.

    ಸಂಧಾನ ವಿಫಲದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ ರಾಘವೇಂದ್ರ ಅವರು ಮಠದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿದ್ದೇನೆ. ಅವರು ಸಹ ಸ್ಪಂದಿಸಿದ್ದಾರೆ. ಸ್ವಾಮೀಜಿಯವರಿಗೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಹುಮ್ಮಸ್ಸು ಇದೆ. ನೋಡೋಣ ಏನಾಗುತ್ತೋ ಎಂದು ಹೇಳಿ ಕಾರು ಹತ್ತಿ ಹೊರಟು ಹೋಗಿದ್ದಾರೆ.

    ಇದಾದ ನಂತರ ಮಾತನಾಡಿದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು, ಅವರು ಸಂಧಾನಕ್ಕೆ ಬಂದಿದ್ದರು. ಆದರೆ ನಾನು ಸ್ಪರ್ಧೆ ಮಾಡಿರುವುದಾಗಿ ತಿಳಿಸಿ ಆಶೀರ್ವಾದ ಮಾಡಿ ಕಳುಹಿಸಿರುವೆ. ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತಿಲ್ಲ ಎಂದು ಹೇಳಿದರು.

    ಕೆಲ ದಿನಗಳಿಂದ ಹಿರೇಕೆರೂರು ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿಗೆ ಭಕ್ತರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಮಾಡಿದ್ದರು. ಹಿರೇಕೆರೂರು ಕ್ಷೇತ್ರದ ರಾಜಕಾರಣ ಅಪಮೌಲ್ಯ ಆಗಿದೆ. ಕ್ಷೇತ್ರದ ರಾಜಕೀಯ ವ್ಯವಸ್ಥೆ ಸರಿಪಡಿಸಲು ಚುನಾವಣೆಗೆ ಸ್ಪರ್ಧಿಸಿ ಎಂದು ಒತ್ತಡ ಹಾಕಿದ್ದರು. ಕಳೆದ ಎರಡು ದಿನಗಳ ಹಿಂದೆ ಚುನಾವಣೆಗೆ ನಿಲ್ಲದಿರಲು ನಿರ್ಧರಿಸಿದ್ದ ಸ್ವಾಮೀಜಿ ಈಗ ರಾತ್ರೋರಾತ್ರಿ ಹಿರೇಕೆರೂರು ಕ್ಷೇತ್ರದಿಂದ ಜೆಡಿಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ.

    2018ರ ಚುನಾವಣೆಯಲ್ಲಿ ಬಿಸಿ ಪಾಟೀಲ್ 555 ಮತಗಳ ಅಂತರದಿಂದ ಜಯಗಳಿಸಿದ್ದರು. ಬಿಸಿ ಪಾಟೀಲ್‍ಗೆ 72,461 ಮತಗಳು ಬಿದ್ದರೆ 71,906 ಮತಗಳು ಬಿಜೆಪಿ ಅಭ್ಯರ್ಥಿ ಬಣಕಾರ ಅವರಿಗೆ ಬಿದ್ದಿತ್ತು. ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿದ್ದಪ್ಪ ಗದ್ದಪ್ಪನವರ್ ಅವರಿಗೆ 3,597 ಮತಗಳು ಬಿದ್ದಿತ್ತು.