Tag: ಶಿವಲಿಂಗ

  • ಕೃಷ್ಣಾ ನದಿ ತೀರದಲ್ಲೊಂದು ವಿಸ್ಮಯ – ರಣಭೀಕರ ಪ್ರವಾಹಕ್ಕೂ ನಲುಗದ ಶಿವಲಿಂಗ, ನಂದಿ ವಿಗ್ರಹ

    ಕೃಷ್ಣಾ ನದಿ ತೀರದಲ್ಲೊಂದು ವಿಸ್ಮಯ – ರಣಭೀಕರ ಪ್ರವಾಹಕ್ಕೂ ನಲುಗದ ಶಿವಲಿಂಗ, ನಂದಿ ವಿಗ್ರಹ

    ಚಿಕ್ಕೋಡಿ(ಬೆಳಗಾವಿ): ಕೃಷ್ಣಾ ನದಿ ತೀರದಲ್ಲೊಂದು ವಿಸ್ಮಯವೊಂದು ನಡೆದಿದೆ. ರಣಭೀಕರ ಪ್ರವಾಹಕ್ಕೂ ಶಿವಲಿಂಗ ಹಾಗೂ ನಂದಿ ವಿಗ್ರಹ ನಲುಗದೆ ಜನರಲ್ಲಿ ಅಚ್ಚರಿ ಮೂಡಿಸಿವೆ.

    ಹೌದು. ಕೃಷ್ಣಾ ನದಿ ತೀರ ಉಕ್ಕಿ ಹರಿದ ಪರಿಣಾಮ 2019 ಹಾಗೂ 2021ರಲ್ಲಿ ರಣ ಭೀಕರ ಪ್ರವಾಹ ಬಂದಿತ್ತು. ರಕ್ಕಸ ಪ್ರವಾಹಕ್ಕೆ ನದಿ ತೀರದ ಜನರ ಬದುಕು ಅಕ್ಷರಶಃ ನಲುಗಿ ಹೋಗುವುದರ ಜೊತೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಅಷ್ಟೇ ಅಲ್ಲದೇ ಪ್ರವಾಹಕ್ಕೆ ಸಿಲುಕಿ ಸೇತುವೆಗಳು, ಸಾವಿರಾರು ಮನೆಗಳು, ಕಲ್ಲು ಬಂಡೆಗಳು ಕೊಚ್ಚಿ ಹೋಗಿದ್ದವು. ಆದರೆ ವಿಸ್ಮಯ ಎನ್ನುವಂತೆ ಶಿವಲಿಂಗ ಹಾಗೂ ನಂದಿ ಮೂರ್ತಿಗಳು ಒಂದಿಂಚು ಅಲುಗಾಡದೇ ತಟಸ್ಥವಾಗಿ ಅಲ್ಲೆ ಉಳಿದಿರುವುದು ಅಚ್ಚರಿಗೆ ಕಾರಣವಾಗಿದೆ.

    ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ನದಿ ತೀರದಲ್ಲಿರುವ ಈ ಎರಡು ಮೂರ್ತಿಗಳು ಭೀಕರ ಪ್ರವಾಹಕ್ಕೂ ಕೊಚ್ಚಿ ಹೋಗಿಲ್ಲ. ಈ ಎರಡು ಮೂರ್ತಿಗಳು ಇರುವ ಪಕ್ಕದಲ್ಲೇ ಇರುವ ಸೇತುವೆ ಕೊಚ್ಚಿ ಹೋಗಿವೆ. ಆದರೆ ಈ ವಿಗ್ರಹಗಳು ಮಾತ್ರ ಇದ್ದಲ್ಲೆ ಇರುವುದನ್ನು ಕಂಡು ಸ್ಥಳೀಯರು ಇದೊಂದು ಚಮತ್ಕಾರ ಎನ್ನುತ್ತಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಶಾಸಕನಿಗೆ ಹೆಚ್‍ಡಿಕೆ ಶಾಕ್ – ಕ್ಷೇತ್ರದಲ್ಲಿ ಹೊಸ ಅಭ್ಯರ್ಥಿ ಹಾಕಲು ತಂತ್ರ!

  • 9ನೇ ಶತಮಾನದ ಶಿವಲಿಂಗ ಉಜ್ಜಯಿನಿಯಲ್ಲಿ ಪತ್ತೆ

    9ನೇ ಶತಮಾನದ ಶಿವಲಿಂಗ ಉಜ್ಜಯಿನಿಯಲ್ಲಿ ಪತ್ತೆ

    ಭೋಪಾಲ್: ಉಜ್ಜಯಿನಿಯ ಮಹಾಕಾಲ್ ಮಂದಿರದ ಉತ್ಖನನದ ವೇಳೆ 9ನೇ ಶತಮಾನದ ಶಿವಲಿಂಗವೊಂದು ಪತ್ತೆಯಾಗಿದೆ.

    ಸ್ಥಳಕ್ಕಾಮಿಗಿಸಿ ಪುರಾತತ್ವ ಶಾಸ್ತ್ರ ಅಧಿಕಾರಿ ಧ್ರುವೇಂದ್ರ ಜೋಧಾ ದೇವಸ್ಥಾನದೊಳಗಿರುವ ಶಿವಲಿಂಗದಷ್ಟು ಎತ್ತರ ಅಂದ್ರೆ 5 ಅಡಿ ಎತ್ತರದ ಶಿವಲಿಂಗ ಇದಾಗಿದೆ ಎಂದಿದ್ದಾರೆ. ಇದನ್ನೂ ಓದಿ:  ನಾನು ಅಂಗಾಂಗ ದಾನ ಮಾಡುತ್ತೇನೆ, ನೀವೂ ಮಾಡಿ- ಸಿಎಂ ಬೊಮ್ಮಾಯಿ ಕರೆ

    ಈ ಶಿವಲಿಂಗವನ್ನು ಜಲಧಾರಿ ಎಂದು ಗುರುತಿಸಲಾಗಿದ್ದು, ಸುಮಾರು 9ನೇ ಶತಮಾನದ ಕಾಲದ್ದು ಎಂದು ಗುರುತಿಸಲಾಗಿದೆ. ಇದೇ ವೇಳೆ ಶಿವಲಿಂಗದ ಅಡಿಯಲ್ಲಿ ಇದ್ದ ಇಟ್ಟಿಗೆಗಳು ದೊರಕಿವೆ. ಈ ಇಟ್ಟಿಗೆಗಳು 5ನೇ ಶತಮಾನದವು ಎನ್ನಲಾಗಿದೆ.

    ಶಿವಲಿಂಗದ ಜೊತೆಗೆ ಸಣ್ಣದೊಂದು ವಿಷ್ಣುವಿನ ವಿಗ್ರಹ ಕೂಡ ಪತ್ತೆಯಾಗಿದ್ದು, ವಿಷ್ಣು ಚತುರ್ಭುಜ ಸ್ಥಾನಕ ಆಸನದಲ್ಲಿದ್ದಾನೆ ಎಂದು ಹೇಳಲಾಗಿದೆ. ಈ ವಿಗ್ರಹ ಸುಮಾರು 10ನೇ ಶತಮಾನದ್ದಿರಬಹುದು ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆಯೂ ಈ ಸ್ಥಳದಲ್ಲಿ ಕೆಲವು ಕೆತ್ತನೆಗಳು, ಮೂರ್ತಿ ಸಹ ಪತ್ತೆಯಾಗಿದ್ದವು ಎನ್ನಲಾಗಿದೆ.

  • ಯುಗಾದಿಯಂದೇ 400 ವರ್ಷಗಳ ಇತಿಹಾಸವಿರುವ ಶಿವಲಿಂಗ ಕಳವು

    ಯುಗಾದಿಯಂದೇ 400 ವರ್ಷಗಳ ಇತಿಹಾಸವಿರುವ ಶಿವಲಿಂಗ ಕಳವು

    – ರಾತ್ರಿ ದೇವಸ್ಥಾನದ ಬೀಗ ಒಡೆದು ಶಿವಲಿಂಗ ಕದ್ದರು

    ಮಂಡ್ಯ: ದೇವಾಲಯದ ಬೀಗ ಒಡೆದು ಪುರಾತನ ಶಿವಲಿಂಗವನ್ನು ಕಳ್ಳತನ ಮಾಡಿರುವ ಘಟನೆ ತಾಲೂಕಿನ ಹಲ್ಲೇಗೆರೆ ಗ್ರಾಮದ ಕಾಶಿ ವಿಶ್ವನಾಥ ದೇವಾಲಯದಲ್ಲಿ ನಡೆದಿದೆ.

    ಹಲ್ಲೇಗೆರೆ ಗ್ರಾಮದ ಹೊರ ಭಾಗದಲ್ಲಿ 400 ವರ್ಷಗಳ ಇತಿಹಾಸ ಹೊಂದಿರುವ ಪುರಾಣ ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯವಿದೆ. ಕಾಶಿಯಿಂದ ತಂದು ಪ್ರತಿಷ್ಠಾಪಿಸಿದ್ದ ಶಿವಲಿಂಗವನ್ನು ಕಿಡಿಗೇಡಿಗಳು ಹೊತ್ತೋಯ್ದಿದ್ದಾರೆ. ರಾತ್ರಿ ದೇವಾಲಯದ ಬೀಗ ಒಡೆದು ಗರ್ಭ ಗುಡಿಯಲ್ಲಿದ್ದ ಶಿವಲಿಂಗವನ್ನು ಕದ್ದು ಪರಾರಿಯಾಗಿದ್ದಾರೆ.

    ಬೆಳಗ್ಗೆ ಪೂಜೆ ಮಾಡಲೆಂದು ಅರ್ಚಕರು ದೇವಸ್ಥಾನಕ್ಕೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ದಿನವೇ ಶಿವಲಿಂಗ ಕಳವು ಮಾಡಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕದ್ರಂಜೆಯಲ್ಲಿ ಗರ್ಭಗುಡಿ ಶೋಧ- ಪ್ರಾಚೀನ ಶಿವಲಿಂಗ ಪತ್ತೆ

    ಕದ್ರಂಜೆಯಲ್ಲಿ ಗರ್ಭಗುಡಿ ಶೋಧ- ಪ್ರಾಚೀನ ಶಿವಲಿಂಗ ಪತ್ತೆ

    ಉಡುಪಿ: ದೇಗುಲ ನವೀಕರಣದ ಸಂದರ್ಭ ಭೂಗರ್ಭದಲ್ಲಿ ಶಿವಲಿಂಗ ಪತ್ತೆ ಆಗಿದೆ. ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದಂತೆ ಸಂದರ್ಭ ಶಿವಲಿಂಗ ಕಂಡುಬಂದಿರುವುದು ಭಕ್ತ ಸಮೂಹಕ್ಕೆ ಅಚ್ಚರಿ ತಂದಿದೆ.

    ಜಿಲ್ಲೆಯ ಕುಂದಾಪುರ ತಾಲೂಕು ಬಿಲ್ಲಾಡಿಯ ಕದ್ರಂಜೆಯಲ್ಲಿ 50 ವರ್ಷಗಳ ಹಿಂದೆ ಬಿದ್ದು ಹೋಗಿದ್ದ ಪ್ರಾಚೀನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಈಗಾಗಲೇ ಪ್ರಶ್ನಾ ಚಿಂತನೆಗಳು ನಡೆದಿವೆ. ದೇವಸ್ಥಾನದ ನವೀಕರಣಾರ್ಥ ಪ್ರಕ್ರಿಯೆಗಳು ಆರಂಭವಾಗಿರುವ ಹೊತ್ತಲ್ಲೇ ನೆಲಸಮವಾಗಿದ್ದ ಗರ್ಭಗುಡಿಯಲ್ಲಿ ಶೋಧ ನಡೆಸಿದಾಗ ಪ್ರಾಚೀನ ಶಿವಲಿಂಗ ಪತ್ತೆಯಾಗಿದೆ. ಇದರಿಂದ ಮಂದಿರ ಪುನರುತ್ಥಾನಕ್ಕೆ ನವೋತ್ಸಾಹ ಕಳೆಕಟ್ಟಿದೆ.

    ಕಳೆದ ನಾಲ್ಕೂವರೆ ದಶಕಗಳಿಗೆ ಮಿಕ್ಕಿ ಪಾಳು ಬಿದ್ದ ಕದ್ರಂಜೆ ಶ್ರೀಮಹಾಲಿಂಗೇಶ್ವರ ದೇವಾಲಯವನ್ನು ಯುವಕರೆಲ್ಲ ಸೇರಿ ಜೀರ್ಣೋದ್ಧಾರ ಮಾಡಲು ಮುಂದಾಗಿದ್ದಾರೆ. ಈ ದೇವಳದ ಪ್ರಾಂಗಣ ಹಿಂದೊಮ್ಮೆ ಶಾಲೆಯಾಗಿತ್ತು. ನೂರಾರು ವಿದ್ಯಾರ್ಥಿಗಳಿಗೆ ಇಲ್ಲಿ ವಿದ್ಯಾ ದಾನ ಮಾಡಲಾಗಿತ್ತು. ಕ್ರಮೇಣ ಈ ದೇವಸ್ಥಾನದಲ್ಲಿ ಪೂಜೆ, ಧಾರ್ಮಿಕ ಕಾರ್ಯಗಳು ನಿಂತು ದೇಗುಲ ಪಾಳು ಬಿದ್ದಿದೆ. ಯುವಕರು ಒಟ್ಟಾಗಿ ಸಹೃದಯಿಗಳ ಸಹಕಾರದೊಂದಿಗೆ ದೇವಾಲಯ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಇದೇ ವೇಳೆ ಮಣ್ಣಿನ ಅಡಿಯಲ್ಲಿ ಹೂತು ಹೋಗಿದ್ದ ಶಿವಲಿಂಗವನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ಹೊರಗೆ ತೆಗೆದಿದ್ದು, ಪೂಜೆ ಸಲ್ಲಿಸಿದ್ದಾರೆ.

    ಇನ್ನೂ ಒಂದು ವಾರಗಳ ಕಾಲ ಧಾರ್ಮಿಕ ಕಾರ್ಯಕ್ರಮ ಇದೆ. ಈ ಬೆಳವಣಿಗೆ ನಮ್ಮಲ್ಲಿ ಹೊಸ ಉತ್ಸಾಹವನ್ನು ತಂದಿದೆ. ದಾನಿಗಳ, ಊರ ಭಕ್ತರ ಸಹಕಾರದಿಂದ ದೇಗುಲದ ಜೀರ್ಣೋದ್ಧಾರ ನಡೆಯಲಿದೆ ಎಂದು ಸ್ಥಳೀಯ ಅಜಿತ್ ಮಡಿವಾಳ ಹೇಳಿದ್ದಾರೆ.

  • ಶಿವಲಿಂಗ ಮೂರ್ತಿಯಲ್ಲಿ ಕಣ್ಣು ಪ್ರತ್ಯಕ್ಷ – ಪವಾಡ ವೀಕ್ಷಿಸಲು ದೇವಾಲಯದತ್ತ ಸೇರಿದ ಜನರ ದಂಡು

    ಶಿವಲಿಂಗ ಮೂರ್ತಿಯಲ್ಲಿ ಕಣ್ಣು ಪ್ರತ್ಯಕ್ಷ – ಪವಾಡ ವೀಕ್ಷಿಸಲು ದೇವಾಲಯದತ್ತ ಸೇರಿದ ಜನರ ದಂಡು

    ಬೆಳಗಾವಿ: ಕಲ್ಲಿನ ಶಿವಲಿಂಗ ಮೂರ್ತಿ ಕಣ್ಣು ತೆರೆದಿದೆ ಎಂಬ ವದಂತಿ ಬೆಳಗಾವಿ ಜಿಲ್ಲೆಯ ಗೋಕಾಕ್‍ನಲ್ಲಿ ಹರಿದಾಡುತ್ತಿದೆ. ಶಿವಲಿಂಗ ಮೂರ್ತಿಯನ್ನು ನೋಡಲು ದೇವಾಲಯದತ್ತ ಭಕ್ತಸಾಗರವೇ ಹರಿದುಬರುತ್ತಿದೆ.

    ಬೆಳಗಾವಿ ಜಿಲ್ಲೆ ಗೋಕಾಕ್‍ನ ಬಣಗಾರ ಗಲ್ಲಿಯಲ್ಲಿನ ಶಂಕರಲಿಂಗ ದೇವಸ್ಥಾನದಲ್ಲಿ ಶಿವಲಿಂಗ ಮೂರ್ತಿಯಲ್ಲಿ ಕಣ್ಣು ಮೂಡಿದೆ ಎಂದು ದೇವಾಲಯದ ಅರ್ಚಕರು ಹೇಳುತ್ತಿದ್ದಾರೆ. ಅದನ್ನು ನೋಡಲು ಭಕ್ತರು ತಂಡೋಪತಂಡವಾಗಿ ಶಂಕರಲಿಂಗ ದೇವಾಲಯಕ್ಕೆ ಬರುತ್ತಿದ್ದಾರೆ.

    ಶಿವಲಿಂಗ ವೀಕ್ಷಿಸಿದ ಜನರು ಇಂದು ರಾತ್ರಿ ಸಂಕಷ್ಠಿ ಚಂದ್ರೋದಯ ಸಮಯದಲ್ಲಿ ಕಲ್ಲಿನ ಮೂರ್ತಿಯಲ್ಲಿ ಕಣ್ಣು ಮೂಡಿದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಅಲ್ಲದೆ ದೇವಾಲಯದ ಆರ್ಚಕರು ಈ ಹಿಂದೆ 2004 ರಲ್ಲಿಯೂ ಇದೇ ರೀತಿ ಶಿವಲಿಂಗದಲ್ಲಿ ಕಣ್ಣುಗಳು ಪ್ರತ್ಯಕ್ಷವಾಗಿದ್ದವು. ಇದೀಗ ಪುನಃ ಶಿವಲಿಂಗ ಮೂರ್ತಿಯಲ್ಲಿ ಕಣ್ಣು ಪ್ರತ್ಯಕ್ಷವಾಗಿದೆ. ಇದು ಶುಭ ಸಂದೇಶವಾಗಿದ್ದು ಜಗತ್ತಿನಲ್ಲಿರುವ ರೋಗರುಜಿನ ಹೋಗುತ್ತದೆ ಎಂದು ಹೇಳುತ್ತಿದ್ದಾರೆ.

    ಈ ಹಿಂದೆ ಸಾಯಿಬಾಬಾ ಫೋಟೋದಲ್ಲಿ ವಿಭೂತಿ ಉದುರಿತ್ತು, ಗಣೇಶ ಹಾಲು ಕುಡಿದಿತ್ತು, ಹೀಗೆ ಹಲವಾರು ರೀತಿಯ ವದಂತಿಗಳು ಹಬ್ಬಿದ್ದವು. ಇದೀಗ ಶಿವಲಿಂಗ ಮೂರ್ತಿ ಕಣ್ಣು ತೆರೆದಿದೆ ಎಂದು ಜನ ದಂಡೇ ದೇವಾಲಯದತ್ತಾ ಹರಿದುಬರುತ್ತಿದೆ.

  • ರಾಮೇಶ್ವರಂನ ಪೂರ್ವ ತೀರದಲ್ಲಿ ಶಿವಲಿಂಗ ಪತ್ತೆ

    ರಾಮೇಶ್ವರಂನ ಪೂರ್ವ ತೀರದಲ್ಲಿ ಶಿವಲಿಂಗ ಪತ್ತೆ

    ಚೆನ್ನೈ: ತಮಿಳುನಾಡಿನ ರಾಮೇಶ್ವರಂನ ಪೂರ್ವ ತೀರದಲ್ಲಿ ಶಿವಲಿಂಗ ಪತ್ತೆಯಾಗಿದೆ. ರಾಮೇಶ್ವರಂ ದೇಗುಲದ ಸಮೀಪವೇ ಸಮುದ್ರ ದಡದಲ್ಲಿ ಪತ್ತೆಯಾಗಿದ್ದು, ಸ್ಥಳೀಯರು ಪೂಜೆ ಸಲ್ಲಿಸುತ್ತಿದ್ದಾರೆ.

    ದೇಶದ ಪುಣ್ಯಕ್ಷೇತ್ರಗಳಲ್ಲಿ ರಾಮೇಶ್ವರಂ ಸಹ ಒಂದಾಗಿದೆ. ಈಗ ಸಮುದ್ರ ದಡದಲ್ಲಿ ಶಿವಲಿಂಗ ಕಂಡು ಭಕ್ತರು ಪುಳಕೀತರಾಗಿದ್ದಾರೆ. ಈ ಪ್ರದೇಶದಲ್ಲಿ ಹಲವು ದೇವಾಲಯಗಳಿವೆ. ವಿಶ್ವದ ಅತಿ ಉದ್ದ ಕಾರಿಡಾರ್ ನ್ನು ರಾಮೇಶ್ವರಂ ದೇವಾಲಯ ಹೊಂದಿದೆ. ಇನ್ನು ದೇವಾಲಯ 1,212 ಕಂಬಗಳನ್ನು ಹೊಂದಿದೆ.

    ಜೂನ್ 16ರಂದು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಸುಮಾರು 200 ವರ್ಷ ಹಳೆಯ ಶಿವ ದೇವಾಲಯ ಪತ್ತೆಯಾಗಿದೆ. ಪೆನ್ನಾ ನದಿ ಪಾತ್ರದಲ್ಲಿ ದೇವಾಲಯ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

  • ವಿಯೆಟ್ನಾಂನಲ್ಲಿ 9ನೇ ಶತಮಾನದ ಬೃಹತ್ ಶಿವಲಿಂಗ ಪತ್ತೆ

    ವಿಯೆಟ್ನಾಂನಲ್ಲಿ 9ನೇ ಶತಮಾನದ ಬೃಹತ್ ಶಿವಲಿಂಗ ಪತ್ತೆ

    ಹನೋಯಿ: ಬರೋಬ್ಬರಿ 9ನೇ ಶತಮಾನದ ಶಿವಲಿಂಗವೊಂದು ವಿಯೆಟ್ನಾಂನಲ್ಲಿ ಪತ್ತೆಯಾಗಿದೆ ಎಂದು ವಿದೇಶಾಂಗ ಸಚಿವ ಡಾ.ಎಸ್. ಜೈಶಂಕರ್ ತಿಳಿಸಿದ್ದಾರೆ.

    ವಿಯೆಟ್ನಾಂನ ಕ್ವಾಂಗ್ ನಾಮ್ ಪ್ರಾಂತ್ಯದ ಮೈ ಸನ್‍ನಲ್ಲಿ ಚಾಮ್ ದೇವಾಲಯದಲ್ಲಿ ಪುನರ್ ರಚನೆ ಕಾರ್ಯ ಮಾಡುತ್ತಿದ್ದಾಗ ಭಾರತದ ಪುರಾತತ್ವ ಇಲಾಖೆ (ಎಎಸ್‍ಐ) ಅಧಿಕಾರಿಗಳಿಗೆ ಈ ಶಿವಲಿಂಗ ಸಿಕ್ಕಿದೆ. ವಿದೇಶಾಂಗ ಸಚಿವ ಡಾ.ಎಸ್. ಜೈಶಂಕರ್ ಭಾರತೀಯ ಪುರಾತತ್ವ ಇಲಾಖೆ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    “ವಿಯೆಟ್ನಾಂನ ಮೈ ಸನ್‍ನಲ್ಲಿ ಚಾಮ್ ದೇವಸ್ಥಾನಗಳ ಪುನರ್ ರಚನೆ ಮಾಡುತ್ತಿದ್ದಾಗ ಭಾರತೀಯ ಪುರಾತತ್ವ ಇಲಾಖೆಯ ತಂಡಕ್ಕೆ ಶಿವಲಿಂಗವೊಂದು ಸಿಕ್ಕಿದೆ. ಇದು ಎರಡೂ ದೇಶಗಳ ನಡುವಿನ ನಾಗರಿಕತೆ ನಂಟನ್ನು ಪುನರುಚ್ಚರಿಸುತ್ತಿದೆ” ಎಂದು ಎಸ್. ಜೈಶಂಕರ್ ಟ್ವೀಟ್ ಮಾಡಿದ್ದಾರೆ.

    ಖಮೇರ್ ಸಾಮ್ರಾಜ್ಯದ ಆಡಳಿತಗಾರ ರಾಜ ಇಂದ್ರವರ್ಮನ್ ಆಳ್ವಿಕೆಯಲ್ಲಿ ಈ ಚಾಮ್ ದೇವಾಲಯದ ನಿರ್ಮಿಸಲಾಗಿದೆ ಎನ್ನಲಾಗಿದೆ. ಅಲ್ಲದೇ ಈ ದೇವಾಲಯ ಯುನೆಸ್ಕೋದ ವಿಶ್ವ ಪರಂಪರೆಯ ತಾಣಗಳ ಪಟ್ಟಿಯಲ್ಲಿದೆ.  ಈ ಭಾಗದಲ್ಲಿ ಅನೇಕ ಶಿವಲಿಂಗಗಳಿದ್ದು, ಇಲ್ಲಿ ಶಿವನನ್ನು ಭದ್ರೇಶ್ವರ ಎಂಬ ಹೆಸರಿನಲ್ಲಿ ಜನರು ಪೂಜೆ ಮಾಡುತ್ತಾರೆ.

    ಭಾರತದ ಪುರಾತತ್ವ ಇಲಾಖೆಯ ತಂಡವು ಪ್ರಸ್ತುತ ಮೈ ಸನ್‍ನಲ್ಲಿ ದೇವಾಲಯ ಪುನರ್ ರಚನೆ  ಮತ್ತು ಸಂರಕ್ಷಣಾ ಕಾರ್ಯಗಳನ್ನು ನಡೆಸುತ್ತಿದೆ. ಒಂದು ತಂಡದಲ್ಲಿ ನಾಲ್ವರು ಸದಸ್ಯರಿದ್ದು, ಈಗಾಗಲೇ ಬೃಹತ್ ಶಿವಲಿಂಗದ ಜೊತೆಗೆ ಇತರ ಆರು ಶಿವಲಿಂಗಗಳು ಸಹ ಕಂಡುಬಂದಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ವಿದೇಶದಲ್ಲಿ ಸಂಸ್ಕೃತಿ ಮತ್ತು ಪರಂಪರೆ ಮೌಲ್ಯಯುಕ್ತ ವಸ್ತುಗಳನ್ನು ಸಂರಕ್ಷಿಸಲು ಮುಂದಾಗಿದ್ದು, ಇದಕ್ಕಾಗಿ ವಿದೇಶಾಂಗ ಸಚಿವಾಲಯವು ‘ಹೊಸ ಅಭಿವೃದ್ಧಿ ಸಹಭಾಗಿತ್ವ ವಿಭಾಗ’ (DPA-IV) ಎಂಬ ವಿಭಾಗವನ್ನು ಸ್ಥಾಪಿಸಿದೆ.

  • ತುಮಕೂರಿನ ಶಿವಲಿಂಗದ ಮೇಲೆ ಸೂರ್ಯ ರಶ್ಮಿ ಸ್ಪರ್ಶ

    ತುಮಕೂರಿನ ಶಿವಲಿಂಗದ ಮೇಲೆ ಸೂರ್ಯ ರಶ್ಮಿ ಸ್ಪರ್ಶ

    ತುಮಕೂರು: ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಾಲಯದ ಲಿಂಗದ ಮೇಲೆ ಸಂಕ್ರಾಂತಿ ಹಬ್ಬದಂದು ಸೂರ್ಯ ಕಿರಣಗಳು ಬದ್ದರೆ, ಈ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ಮರುದಿನ ಸೂರ್ಯ ಕಿರಣ ಲಿಂಗವನ್ನು ಸ್ಪರ್ಶಿಸುತ್ತವೆ.

    ತಾಲೂಕಿನ ಕೋರ ಹೋಬಳಿಯ ಹಿರೇತೊಟ್ಲುಕೆರೆ ಗ್ರಾಮದಲ್ಲಿ ಮಹಾಶಿವರಾತ್ರಿ ಹಬ್ಬದ ಮರುದಿನ ಸೋಮೇಶ್ವರ ದೇವರ ಶಿವಲಿಂಗವನ್ನು ಸೂರ್ಯನ ಕಿರಣ ಸ್ಪರ್ಶಿಸುತ್ತವೆ. ಹೀಗಾಗಿ ಈ ದೇವಸ್ಥಾನ ಮಹತ್ವ ಪಡೆದುಕೊಂಡಿದ್ದು, ಇದನ್ನು ಕಣ್ತುಂಬಿಕೊಳ್ಳಲು ಅಕ್ಕಪಕ್ಕದ ನೂರಾರು ಗ್ರಾಮಸ್ಥರು ಆಗಮಿಸುತ್ತಾರೆ. ಸೂರ್ಯ ಕಿರಣ ಸ್ಪರ್ಶಿಸುವುದನ್ನು ನೋಡಿ, ಶಿವಲಿಂಗಕ್ಕೆ ಪೂಜೆ ಸಲ್ಲಿಸುತ್ತಾರೆ.

    ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಸಂಕ್ರಾಂತಿ ಹಬ್ಬದಂದು ಸೂರ್ಯ ಕಿರಣಗಳು ಶಿವಲಿಂಗ ಸ್ಪರ್ಶಿಸುವಂತೆ ಇಲ್ಲಿಯೂ ವರ್ಷಕ್ಕೊಮ್ಮೆ ಈ ವಿಸ್ಮಯ ಜರುಗುತ್ತದೆ. ಈ ದೇವಾಲಯಕ್ಕೆ ಸುಮಾರು 300 ವರ್ಷಗಳ ಇತಿಹಾಸವಿದ್ದು, ನೊಳಂಬ ಅರಸರು ದೇವಾಲಯ ನಿರ್ಮಿಸಿರುವ ಬಗ್ಗೆ ಇತಿಹಾಸದಲ್ಲಿ ಉಲ್ಲೇಖವಿದೆ.

    ಶಿವರಾತ್ರಿ ದಿನ ವಿಶೇಷಪೂಜೆ, ಜಾಗರಣೆ, ಮಹಾ ರುದ್ರಾಭಿಷೇಕ ನೆರವೇರಿದ ನಂತರ ಶನಿವಾರ ಪ್ರಾಥಃ ಕಾಲ ಸೂರ್ಯನ ಕಿರಣಗಳು ಶಿವಲಿಂಗ ಸ್ಪರ್ಶಿಸಿದವು. ಈ ವಿಸ್ಮಯ ನೋಡಲು ಅಕ್ಕ ಪಕ್ಕದ ಗ್ರಾಮಸ್ಥರಲ್ಲದೆ ಜಿಲ್ಲೆಯ ವಿವಿಧೆಡೆಯಿಂದ ಭಕ್ತರು ಆಗಮಿಸಿದ್ದರು.

  • ಗೋಕರ್ಣದಲ್ಲಿ ಸಿಗಲಿಲ್ಲ ಆತ್ಮಲಿಂಗ ದರ್ಶನ, ಬಡವರ ಕೈಯಲ್ಲಿ ಮೂಡಿತು ಸಾವಿರಾರು ಲಿಂಗ

    ಗೋಕರ್ಣದಲ್ಲಿ ಸಿಗಲಿಲ್ಲ ಆತ್ಮಲಿಂಗ ದರ್ಶನ, ಬಡವರ ಕೈಯಲ್ಲಿ ಮೂಡಿತು ಸಾವಿರಾರು ಲಿಂಗ

    ಕಾರವಾರ: ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಶಿವ ತಾಣ ಗೋಕರ್ಣದಲ್ಲಿ ದುಡ್ಡು ಇದ್ದರೆ ಮಾತ್ರ ಮಹಾಬಲೇಶ್ವರನ ಆತ್ಮ ಲಿಂಗ ದರ್ಶನ ಬೇಗ ಸಿಗುತ್ತದೆ. ಹೀಗಾಗಿ ದುಡ್ಡಿಲ್ಲದ ಬಡವರು ಗೋಕರ್ಣದ ಕಡಲ ತೀರದಲ್ಲಿ ಮರಳಿನ ಆತ್ಮಲಿಂಗ ರಚಿಸಿ ಪೂಜೆ ಸಲ್ಲಿಸಿದ್ದಾರೆ.

    ಶಿವರಾತ್ರಿ ದಿನ ಗೋಕರ್ಣದ ಮಹಾಬಲೇಶ್ವರ ದರ್ಶನ ಮಾಡುವುದು ಪ್ರಾಯಾಸದಾಯಕ. ದುಡ್ಡು ಇದ್ದರೆ, ಇಲ್ಲವೆ ವಿಐಪಿ ಆಗಿದ್ದರೆ ಎರಡು ನಿಮಿಷದಲ್ಲಿ ಆತ್ಮಲಿಂಗ ದರ್ಶನ ಮಾಡಬಹುದು. ಆದರೆ ಜನಸಾಮಾನ್ಯರಿಗೆ ದರ್ಶನ ಸಿಗುವುದು ತುಂಬಾ ಕಷ್ಟ. ದುಡ್ಡಿಲ್ಲದ ಬಡ ಭಕ್ತರು ಬೆಳಗಿನ ಜಾವದಿಂದಲೇ ಕಿಲೋಮೀಟರ್ ಗಟ್ಟಲೆ ಸರತಿಯಲ್ಲಿ ನಿಂತು ದೇವರ ದರ್ಶನ ಪಡೆಯಬೇಕು. ಹೀಗಾಗಿ ಹಲವು ಭಕ್ತರು ದೇವಸ್ಥಾನದ ಮುಖ್ಯದ್ವಾರದಲ್ಲಿ ನಮಸ್ಕರಿಸಿ ಇಲ್ಲಿನ ಕಡಲತೀರದಲ್ಲಿ ಈಶ್ವರನ ಲಿಂಗ ತಯಾರಿಸಿ ಪೂಜೆ ಸಲ್ಲಿಸುತ್ತಾರೆ. ಈ ಮೂಲಕ ತಾವೇ ರಚಿಸಿದ ಮರಳಿನ ಲಿಂಗದಲ್ಲಿ ದೇವರನ್ನು ಕಾಣುತ್ತಾರೆ.

    ಸಾವಿರಾರು ಶಿವಭಕ್ತರು ಗೋಕರ್ಣದ ಮುಖ್ಯ ಕಡಲತೀರಕ್ಕೆ ಆಗಮಿಸಿ ಮರಳಿನಲ್ಲಿ ಶಿವಲಿಂಗ ನಿರ್ಮಿಸಿ ಬಿಲ್ಪತ್ರೆ, ಹೂವು, ಕುಂಕುಮಗಳ ಮೂಲಕ ಪೂಜೆ ಸಲ್ಲಿಸುತ್ತಾರೆ. ಪ್ರತಿ ಶಿವರಾತ್ರಿಯಂದು ಕೇವಲ ಕರ್ನಾಟಕದವರಲ್ಲದೇ ಮಹರಾಷ್ಟ್ರ, ಗೋವಾಗಳಿಂದಲೂ ಭಕ್ತರು ಇಲ್ಲಿಗೆ ಆಗಮಿಸಿ ಪೂಜೆ ಸಲ್ಲಿಸುತ್ತಾರೆ. ಈ ಮೂಲಕ ಮರಳಿನಲ್ಲಿ ಶಿವಲಿಂಗ ಮಾಡಿ ಅದರಲ್ಲಿ ಶಿವನ ಆತ್ಮಲಿಂಗವನ್ನು ಕಂಡು ಪುನೀತರಾಗುತ್ತಾರೆ.

  • ಶಿವರಾತ್ರಿ ವಿಶೇಷ – ಪೆನ್ಸಿಲ್ ನಿಬ್ಬಿನಲ್ಲಿ ಮೂಡಿದ ಪುಟಾಣಿ ಶಿವಲಿಂಗ

    ಶಿವರಾತ್ರಿ ವಿಶೇಷ – ಪೆನ್ಸಿಲ್ ನಿಬ್ಬಿನಲ್ಲಿ ಮೂಡಿದ ಪುಟಾಣಿ ಶಿವಲಿಂಗ

    – ಕಲ್ಲಿನಲ್ಲಿ ಅರಳಿದ 0.5 ಇಂಚಿನ ಮಹಾದೇವ

    ಭುವನೇಶ್ವರ: ಶಿವರಾತ್ರಿ ಹಬ್ಬದ ಪ್ರಯುಕ್ತ ಒರಿಸ್ಸಾದ ಹೆಸರಾಂತ ಮಿನಿಯೇಚರ್ ಆರ್ಟಿಸ್ಟ್ ಎಲ್. ಈಶ್ವರ್ ರಾವ್ ಅವರು ಪೆನ್ಸಿಲ್ ನಿಬ್ಬಿನಲ್ಲಿ ಹಾಗೂ ಕಲ್ಲಿನಲ್ಲಿ 0.5 ಇಂಚಿನ ಶಿವಲಿಂಗವನ್ನು ಕೆತ್ತನೆ ಮಾಡಿ ಭಕ್ತಿ ಮೆರೆದಿದ್ದಾರೆ.

    ಈಶ್ವರ್ ರಾವ್ ಅವರು ಒರಿಸ್ಸಾದ ಖುರ್ದಾ ಜಿಲ್ಲೆಯ ಜಟ್ನಿ ಗ್ರಾಮದ ನಿವಾಸಿಯಾಗಿದ್ದು, ಮಿನಿಯೇಚರ್ ಆರ್ಟಿಸ್ಟ್ ಆಗಿ ಸಾಕಷ್ಟು ಖ್ಯಾತಿ ಗಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕಲಾವಿದ, ಶಿವರಾತ್ರಿ ಪ್ರಯುಕ್ತ ಈ ಪುಟಾಣಿ ಶಿವಲಿಂಗವನ್ನು ಮಾಡಿದ್ದೇನೆ. ಸಣ್ಣ ಬಾಟಲಿನಲ್ಲಿ ಮೃದು ಕಲ್ಲಿನಿಂದ 0.5 ಇಂಚಿನ ಶಿವಲಿಂಗವನ್ನು ತಯಾರಿಸಿದ್ದೇನೆ. ಹಾಗೆಯೇ ಪೆನ್ಸಿಲ್ ನಿಬ್ಬಿನಲ್ಲಿ ಕೂಡ 0.5 ಇಂಚಿನ ಶಿವಲಿಂಗ ಮಾಡಿದ್ದೇನೆ ಎಂದರು.

    ಸಣ್ಣ ಬಾಟಲಿಯೊಳಗೆ ಚಿಕ್ಕ ಕಲ್ಲಿನ ಶಿವಲಿಂಗವನ್ನು ತಯಾರಿಸಲು 2 ದಿನ ಸಮಯ ತಗುಲಿತು, ಆದರೆ ಪೆನ್ಸಿಲ್ ನಿಬ್ಬಿನಲ್ಲಿ ಮಾಡಿರುವ ಶಿವಲಿಂಗವನ್ನು ಒಂದು ದಿನದಲ್ಲಿ ತಯಾರಿಸಿದೆ. ಅದರಲ್ಲೂ ಮೃದು ಕಲ್ಲಿನ ಶಿವಲಿಂಗವನ್ನು ಸಣ್ಣ ಬಾಟಲಿಯೊಳಗೆ ಇರಿಸಲು ಸುಮಾರು 4 ಗಂಟೆ ಸಮಯ ಬೇಕಾಯ್ತು. ಇದು ತುಂಬ ಕಷ್ಟಕರ ಕೆಲಸವಾಗಿತ್ತು ಎಂದು ಕಲಾವಿದ ತಿಳಿಸಿದರು.

    ಕಲಾವಿದನ ಕೈಚಳಕದಲ್ಲಿ ಮೂಡಿದ ಪುಟಾಣಿ ಶಿವಲಿಂಗಗಳು ಭಕ್ತರ ಮನ ಗೆದ್ದಿದ್ದು, ಕಲಾವಿದನ ಪ್ರತಿಭೆಗೆ ಸಲಾಂ ಎಂದಿದ್ದಾರೆ. ಈ ಹಿಂದೆ ಕೂಡ ಕಲಾವಿದ ಈಶ್ವರ್ ರಾವ್ ತಮ್ಮ ಕಲೆಯ ಮೂಲಕ ಎಲ್ಲರ ಮನಗೆದ್ದಿದ್ದರು. ಕಳೆದ ವರ್ಷ ಪೆನ್ಸಿಲ್ ಟಿಪ್ ಮೇಲೆ ಹುಣಿಸೆ ಬೀಜದಲ್ಲಿ ಪುರುಷರ ಹಾಕಿ ವಲ್ರ್ಡ್ ಕಪ್ ಅನ್ನು ಕೆತ್ತಿ ಭಾರತ ತಂಡಕ್ಕೆ ಗೌರವ ಸಲ್ಲಿಸಿದ್ದರು. ಅಲ್ಲದೇ ಕ್ರಿಸ್ಮಸ್ ಹಬ್ಬದಂದು ಚರ್ಚ್‍ವೊಂದನ್ನು ಬಾಟಲಿಯೊಳಗೆ ನಿರ್ಮಿಸಿ ಎಲ್ಲರ ಗಮನ ಸೆಳೆದಿದ್ದರು.

    ಹಾಗೆಯೇ 4ನೇ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರುವರೆ ಇಂಚಿನ ಪ್ರತಿಮೆಯನ್ನು ಕೆತ್ತಿದ್ದರು. ಬಾಟಲಿಯೊಳಗೆ ಸೋಪಿನಲ್ಲಿ ಈ ಕಲಾಕೃತಿಯನ್ನು ಈಶ್ವರ್ ರಾವ್ ಕೆತ್ತಿದ್ದರು.