Tag: ಶಿವಾಜಿ ಸುರತ್ಕಲ್

  • ಶಿವಾಜಿ ಸುರತ್ಕಲ್ ಚಿತ್ರಕ್ಕೆ ಶುಭ ಕೋರಿದ ಮಹಾರಾಜ ಯದುವೀರ್ ಒಡೆಯರ್

    ಶಿವಾಜಿ ಸುರತ್ಕಲ್ ಚಿತ್ರಕ್ಕೆ ಶುಭ ಕೋರಿದ ಮಹಾರಾಜ ಯದುವೀರ್ ಒಡೆಯರ್

    ಮೇಶ್ ಅರವಿಂದ್ (Ramesh Arvind) ಅವರ 103 ನೇ ಚಿತ್ರ ಶಿವಾಜಿ ಸುರತ್ಕಲ್ (Shivaji Suratkal) – ದಿ ಮಿಸ್ಟೀರಿಯಸ್ ಕೇಸ್ ಆಫ಼್ ಮಾಯಾವಿ ನಾಲ್ಕನೇ ವಾರಕ್ಕೆ ಕಾಲಿಡುತ್ತಿದೆ. ಅದರ ಓಟ ಭರ್ಜರಿಯಾಗಿ ಸಾಗುತ್ತಿದೆ. ಇನ್ನಷ್ಟು ಸಿಂಗಲ್ ಸ್ಕ್ರೀನ್ ಗಳು ಚಿತ್ರದ ಪ್ರದರ್ಶನಕ್ಕೆ ಸೇರ್ಪಡೆಯಾಗಿದೆ. ಚಿತ್ರದ ವಿತರಕರಾದ ಕೆ ಆರ್ ಜಿ ಸ್ಟೂಡಿಯೋಸ್ ಸಂಪೂರ್ಣ ಬೆಂಬಲಕ್ಕೆ ನಿಂತಿರುವುದು ವಿಶೇಷ.

    ಚಿತ್ರದ ಈ ಯಶಸ್ಸಿನ ನಡುವೆ ನಿರ್ದೇಶಕರಾದ ಆಕಾಶ್ ಶ್ರೀವತ್ಸ (Akash Srivaths) ಹಾಗೂ ನಿರ್ಮಾಪಕರಾದ ಅನೂಪ್ ಗೌಡ ಮೈಸೂರಿನ ಮಹಾರಾಜರಾದ ಯದುವೀರ್ ಒಡೆಯರ್ (Yaduvir Wodeyar) ಅವರನ್ನು ಭೇಟಿ ಮಾಡಿದ್ದಾರೆ. ಮಹಾರಾಜರು ಚಿತ್ರದ ಯಶಸ್ಸನ್ನು ಬಹಳ ಮೆಚ್ಚಿ, ಚಿತ್ರಕ್ಕೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಹಾರೈಸಿದ್ದಾರೆ. ಜೊತೆಗೆ ರಮೇಶ್ ಅರವಿಂದ್ ಅವರಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ:ಆರ್.ಎಲ್ ಜಾಲಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು ಹಿರಿಯ ನಟ ಶ್ರೀನಿವಾಸ್ ಮೂರ್ತಿ

    ಯದುವೀರರ ಬೆಂಬಲ ಇದು ಚಿತ್ರ ತಂಡಕ್ಕೆ, ತಮ್ಮ ಯಶಸ್ಸಿಗೆ ಮತ್ತೊಂದು ಗರಿ ಸೇರಿದಂತಾಗಿದೆ ಎಂದಿದೆ ಚಿತ್ರತಂಡ. ಚುನಾವಣೆಯ ಹಾಗೂ ಐ ಪಿ ಎಲ್ ನ ಭರದಲ್ಲಿ ಚಿತ್ರಕ್ಕೆ ಈ ಮಟ್ಟದ ಯಶಸ್ಸು ಸಿಕ್ಕಿರುವುದು ಗಮನಾರ್ಹ. ರಮೇಶ್ ಅರವಿಂದ್ ಜೊತೆಗೆ ಮೇಘನಾ ಗಾಂವ್ಕರ್ ಸೇರಿದಂತೆ ಅನೇಕ ಕಲಾವಿದರು ತಾರಾಗಣದಲ್ಲಿದ್ದು, ಅನೂಪ್ ಗೌಡ ಮತ್ತು ಆಕಾಶ್ ಶ್ರೀವತ್ಸ ಜೋಡಿ ಮತ್ತೊಮ್ಮೆ ಪ್ರೇಕ್ಷಕರನ್ನು ಮೋಡಿ ಮಾಡಿದೆ.

    ಶಿವಾಜಿ ಸುರತ್ಕಲ್ ಮೊದಲ ಭಾಗ ಕೂಡ ಯಶಸ್ಸಿ ಪ್ರದರ್ಶನದ ಜೊತೆಗೆ ಭರ್ಜರಿ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿತ್ತು. ಅದರ ಬೆನ್ನಲ್ಲೇ ಶಿವಾಜಿ ಸುರತ್ಕಲ್ ಪಾರ್ಟ್ ಮಾಡಲು ನಿರ್ದೇಶಕರು ಸಿದ್ಧತೆ ಮಾಡಿಕೊಂಡಿದ್ದರು. ಎರಡನೇ ಭಾಗ ಕೂಡ ಯಶಸ್ಸು ಕಂಡಿದೆ. ಹಾಗಾಗಿ ಮುಂದಿನ ಸಿನಿಮಾ ಯಾವುದು ಎನ್ನುವ ಕುರಿತು ಕುತೂಹಲ ಮೂಡಿದೆ.

  • ರಾಜಕೀಯಕ್ಕೆ ಅಖಾಡಕ್ಕೆ ರಮೇಶ್ ಅರವಿಂದ್? ಸ್ಪಷ್ಟನೆ ನೀಡಿದ ನಟ

    ರಾಜಕೀಯಕ್ಕೆ ಅಖಾಡಕ್ಕೆ ರಮೇಶ್ ಅರವಿಂದ್? ಸ್ಪಷ್ಟನೆ ನೀಡಿದ ನಟ

    ನ್ನಡ ಚಿತ್ರರಂಗದ ಸ್ಟಾರ್ ನಟ ರಮೇಶ್ ಅರವಿಂದ್ ಅವರು ‘ಶಿವಾಜಿ ಸುರತ್ಕಲ್ 2’ (Shivaji Surathkal 2) ಸಿನಿಮಾ ಸಕ್ಸಸ್ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರದ ನಂತರ ಮುಂದೇನು? ತಮ್ಮ ಮುಂದಿನ ಚಿತ್ರ ಯಾವುದು? ರಾಜಕೀಯಕ್ಕೆ (Politics) ರಮೇಶ್ ಅರವಿಂದ್ (Ramesh Aravind)  ಬರುತ್ತಾರಾ ಹೀಗೆ ಹಲವು ವಿಚಾರಗಳ ಬಗ್ಗೆ ನಟ ಸ್ಪಷ್ಟನೆ ನೀಡಿದ್ದಾರೆ.

    ರಮೇಶ್ ಅರವಿಂದ್ ಅವರು ಯಾವಾಗಲೂ ವಿಭಿನ್ನ ಸಿನಿಮಾಗಳ ಮೂಲಕ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ನಟ, ನಿರ್ದೇಶಕ, ನಿರ್ಮಾಪಕನಾಗಿ ರಮೇಶ್ ಛಾಪು ಮೂಡಿಸಿದ್ದಾರೆ. Weekend With Ramesh ಕಾರ್ಯಕ್ರಮ ಸೇರಿದಂತೆ ಹಲವು ಶೋಗಳ ಮೂಲಕ ಉತ್ತಮ ನಿರೂಪಕರಾಗಿಯೂ ಸೈ ಎನಿಸಿಕೊಂಡಿದ್ದಾರೆ. ತಮ್ಮ ಮುಂದಿನ ನಡೆ ಸಿನಿಮಾ- ರಾಜಕೀಯ ಎಂಟ್ರಿ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:ಹೊಸ ಪ್ರಾಜೆಕ್ಟ್‌ನಲ್ಲಿ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಸಮಂತಾ- ಅನುಷ್ಕಾ ಶರ್ಮಾ

    ವೀಕೆಂಡ್ ವಿತ್ ರಮೇಶ್ ಶೋ ಮುಗಿದ ಬಳಿಕ ಹೊಸ ಸಿನಿಮಾ ಮಾಡುತ್ತೇನೆ. ಕರೋನಾ ಸಮಯದಲ್ಲಿ ಮೂರು ಕಥೆಗಳನ್ನ ಮಾಡಿಕೊಂಡಿದ್ದೇನೆ. ಅವುಗಳಲ್ಲಿ ಒಂದು ಕಥೆಯನ್ನ ಪ್ರಾರಂಭಿಸುವ ಆಲೋಚನೆಯಿದೆ ಎಂದು ರಮೇಶ್ ಹೇಳಿದ್ದಾರೆ.

    ಇದೀಗ ಚುನಾವಣೆ ಕಣ ಜೋರಾಗಿರುವ ಕಾರಣ, ಸ್ಟಾರ್ ನಟ- ನಟಿಯರು ಪಕ್ಷಗಳ ಪರ ಪ್ರಚಾರ ಮಾಡ್ತಿದ್ದಾರೆ. ಹಾಗಾಗಿ ಪಾಲಿಟಿಕ್ಸ್ ಎಂಟ್ರಿ ಬಗ್ಗೆ ನಟ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಪ್ರಚಾರಕ್ಕೆ ಬನ್ನಿ ಅಂತ ಹಲವರು ಕರೆದರು. ಆದರೆ, ಹೋಗಲಿಲ್ಲ. ನಾನು ರಾಜಕೀಯಕ್ಕೆ ತಲೆ ಹಾಕುವುದಿಲ್ಲ. ಬದಲಾಗಿ ತಟಸ್ಥನಾಗಿರಲು ಬಯಸುತ್ತೇನೆ. ಎಲ್ಲರೂ ನನಗೆ ಗೆಳೆಯರೇ, ಎಲ್ಲಾ ಪಕ್ಷದಲ್ಲೂ ಗೆಳೆಯರಿದ್ದಾರೆ. ನನ್ನ ಮಗಳ ಮದುವೆಗೆ ಆ ಪಕ್ಷ, ಈ ಪಕ್ಷ ಅಂತ ನೋಡದೇ ಎಲ್ಲ ಪಕ್ಷದ ನಾಯಕರೂ ಬಂದಿದ್ದರು ಎಂದು ಮಾತನಾಡಿದ್ದಾರೆ. ಈ ಮೂಲಕ ರಾಜಕೀಯಕ್ಕೆ ಬರುವ ಆಸಕ್ತಿ ತಮಗಿಲ್ಲ ಎಂದು ರಮೇಶ್ ಅರವಿಂದ್ ತಿಳಿಸಿದ್ದಾರೆ.

  • ‘ಶಿವಾಜಿ ಸುರತ್ಕಲ್ 2’ ಆಗಿ ಪ್ರೇಕ್ಷಕರ ಮುಂದೆ ನಿಂತಿದ್ದಾರೆ ರಮೇಶ್ ಅರವಿಂದ್

    ‘ಶಿವಾಜಿ ಸುರತ್ಕಲ್ 2’ ಆಗಿ ಪ್ರೇಕ್ಷಕರ ಮುಂದೆ ನಿಂತಿದ್ದಾರೆ ರಮೇಶ್ ಅರವಿಂದ್

    ಮೂರು ವರ್ಷಗಳ ಹಿಂದೆ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದ್ದ ರಮೇಶ್ ಅರವಿಂದ್ (Ramesh Aravind) ಅಭಿನಯದ ಪತ್ತೇದಾರಿ ಚಿತ್ರ ‘ಶಿವಾಜಿ ಸುರತ್ಕಲ್’ ಮುಂದುವರೆದ ಭಾಗ ‘ಶಿವಾಜಿ ಸುರತ್ಕಲ್ – ದಿ ಮಿಸ್ಟೀರಿಯಸ್ ಕೇಸ್ ಆಫ್ ಮಾಯಾವಿ’  (Shivaji Suratkal 2) ಇದೇ ಶುಕ್ರವಾರ (ಏಪ್ರಿಲ್ 14) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

    ‘ಶಿವಾಜಿ ಸುರತ್ಕಲ್ 2’ ಚಿತ್ರವನ್ನು ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಮೂಲಕ ರೇಖಾ ಕೆ.ಎನ್ ಮತ್ತು ಅನೂಪ್ ಗೌಡ ನಿರ್ಮಿಸಿದ್ದಾರೆ. ಆಕಾಶ್ ಶ್ರೀವತ್ಸ (Akash Srivatsa) ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಮೊದಲ ಭಾಗದಂತೆಯೇ ಈ ಚಿತ್ರವು ಸಹ ಒಂದು ಮರ್ಡರ್ ಮಿಸ್ಟ್ರಿಯಾಗಿದ್ದು, ಚಿತ್ರದಲ್ಲಿ ನಡೆಯುವ ಕೊಲೆಗಳಿಗೂ, ನಾಯಕ ಶಿವಾಜಿಗೂ ಒಂದು ನಂಟಿರುತ್ತದೆ. ಆ ನಂಟೇನು? ಕೊಲೆಗಳ ಹಿಂದಿರುವ ರಹಸ್ಯವೇನು? ಮತ್ತು ಕೊಲೆಗಾರ ಯಾರು? ಎಂಬುದೇ ಈ ಚಿತ್ರದ ಹೂರಣ.

     ‘ಮೊದಲ ಭಾಗ ನೋಡಿದವರಿಗೆ ಈ ಚಿತ್ರವು ಖಂಡಿತಾ ಇಷ್ಟವಾಗುತ್ತದೆ. ಇಲ್ಲಿ ಕೊಲೆಗಳ ಜೊತೆಗೆ ಮನರಂಜನೆ ಮತ್ತು ಭಾವನಾತ್ಮಕ ಸನ್ನಿವೇಶಗಳು ಸಹ ಇದೆ. ಚಿತ್ರ ನೋಡುತ್ತಿದ್ದಂತೆ ಇಲ್ಲಿ ಎರಡು ಪಾತ್ರಗಳಿವೆಯೋ ಅಥವಾ ನಾಯಕನ ಮನಸ್ಸಿನಲ್ಲಿ ಆಗುವ ತಳಮಳಗಳೋ ಎಂಬ ಪ್ರಶ್ನೆ ಪ್ರೇಕ್ಷಕರಿಗೆ ಕಾಡುತ್ತದೆ. ಕನ್ನಡದಲ್ಲಿ ಇದೊಂದು ವಿಭಿನ್ನವಾದ ಪ್ರಯತ್ನ ಎಂಬ ನಂಬಿಕೆ ಇದೆ’ ಎನ್ನುತ್ತಾರೆ ನಿರ್ದೇಶಕ ಆಕಾಶ್ ಶ್ರೀವತ್ಸ.

    ‘ಶಿವಾಜಿ ಸುರತ್ಕಲ್ 2’ ಚಿತ್ರದಲ್ಲಿ ರಮೇಶ್ ಅರವಿಂದ್, ರಾಧಿಕಾ ನಾರಾಯಣ್ (Radhika Narayan) , ಮೇಘನಾ ಗಾಂವ್ಕರ್ (Meghana Gaonkar), ಸಂಗೀತ ಶೃಂಗೇರಿ, ರಘು ರಮಣಕೊಪ್ಪ, ನಾಜರ್, ರಮೇಶ್ ಭಟ್, ವೀಣಾ ಸುಂದರ್, ವಿನಾಯಕ್ ಜೋಶಿ, ಶೋಭರಾಜ್ ಮುಂತಾದ ಪ್ರತಿಭಾವಂತ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

    ಚಿತ್ರಕ್ಕೆ ಬೆಂಗಳೂರು, ಮೈಸೂರು, ಹೈದರಾಬಾದ್, ಸುರತ್ಕಲ್, ಕಾಪು, ಹೊನ್ನಾವರ ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆ. ಗುರುಪ್ರಸಾದ್ ಮತ್ತು ಮಧು ಅಂಬಟ್ ಅವರ ಛಾಯಾಗ್ರಹಣ ಹಾಗೂ ಜೂಡಾ ಸ್ಯಾಂಡಿ ಸಂಗೀತವಿದೆ. ನಿರ್ದೇಶಕ ಆಕಾಶ್ ಶ್ರೀವತ್ಸ ಅವರೇ ಚಿತ್ರದ ಸಂಕಲನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.

  • ದಕ್ಷ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡ ಸಿಂಪಲ್ ಹುಡುಗಿ ಮೇಘನಾ ಗಾಂವ್ಕರ್

    ದಕ್ಷ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡ ಸಿಂಪಲ್ ಹುಡುಗಿ ಮೇಘನಾ ಗಾಂವ್ಕರ್

    ಶಿವಾಜಿ ಸುರತ್ಕಲ್ ಚಿತ್ರದ ಮುಂದಿನ ಸರಣಿ, ಶಿವಾಜಿ ಸುರತ್ಕಲ್-2 ಚಿತ್ರದಲ್ಲಿ ದಕ್ಷ ಪೊಲೀಸ್ ಅಧಿಕಾರಿಯಾಗಿ ಮೇಘನ ಗಾಂವ್ಕರ್ ಕಾಣಿಸಿಕೊಳ್ಳುತ್ತಿದ್ದಾರೆ. ಸಾಕಷ್ಟು ಯುವ ಮಹಿಳಾ ಪೊಲೀಸ್ ಅಧಿಕಾರಿಗಳ ಬಗ್ಗೆ ವಿವರವಾಗಿ ಅಧ್ಯಯನ ನಡೆಸಿ ನಿರ್ದೇಶಕರು ಈ ಪಾತ್ರವನ್ನು ಸೃಷ್ಟಿಸಿದ್ದಾರೆ, ವಿಶೇಷವೇನೆಂದರೆ ನಿಜ ಜೀವನದಲ್ಲಿ ಮೇಘನವರ ತಂದೆ ಕೂಡ ಒಬ್ಬ ಪೊಲೀಸ್ ಅಧಿಕಾರಿಯಾಗಿದ್ದು, ಈ ಪಾತ್ರದ ತಯಾರಿಗೆ ಮತ್ತಷ್ಟು ಸಹಕಾರಿಯಾಯಿತು. ಇನ್ನು ಚಿತ್ರದಲ್ಲಿ ಮೇಘನಾ ಅವರದ್ದು ಶಿವಾಜಿಯ ಮೇಲಧಿಕಾರಿಯ ಪಾತ್ರವಾಗಿದ್ದು, ತನಿಖೆಯ ಪ್ರತಿ ಹಂತದಲ್ಲೂ ಶಿವಾಜಿಯ ಜೊತೆಗಿದ್ದು ಚಿತ್ರಕ್ಕೆ ನಿಜವಾದ ಪೊಲೀಸ್ ಪವರ್ ಸಿಗುವಂತೆ ಮಾಡಿದ್ದಾರೆ.

    ಇನ್ನು ಶಿವಾಜಿ ಸುರತ್ಕಲ್-2 ಚಿತ್ರತಂಡವು ರಮೇಶ್ ಅರವಿಂದ್ ಅವರ ಹುಟ್ಟು ಹಬ್ಬದ ದಿನ ಸೆಪ್ಟೆಂಬರ್ 10 ರಂದು ಟೀಸರ್ ಬಿಡುಗಡೆ ಮಾಡಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಉಳಿದಂತೆ ಚಿತ್ರದ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು, ಡಬ್ಬಿಂಗ್ ಕೆಲಸಗಳು ಶುರುವಾಗಿದೆ. ಇದನ್ನೂ ಓದಿ: ಜಯಶ್ರೀ, ಚೈತ್ರಾ ಬೆಸ್ಟಿ ಅಂದ ರೂಪೇಶ್- ಸಾನ್ಯಾಗೆ ಶುರುವಾಯ್ತು ಹೊಟ್ಟೆಕಿಚ್ಚು..?

    ಚಿತ್ರಕ್ಕೆ ಜೂಡ ಸ್ಯಾಂಡಿರವರ ಸಂಗೀತ ಮತ್ತು  ದರ್ಶನ್ ಅಂಬಟ್, ಗುರು ಪ್ರಸಾದ್ ಎಂ ಜಿ  ಛಾಯಾಗ್ರಹಣವಿದ್ದು, ಅಂಜನಾದ್ರಿ ಸಿನಿ ಕ್ರಿಯೇಶನ್ಸ್ ನಲ್ಲಿ ರೇಖಾ ಕೆ.ಎನ್ ಮತ್ತು ಅನುಪ್ ಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಆಕಾಶ್ ಶ್ರೀವತ್ಸರವರು ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಸ್ಪೆನ್ಸ್, ಥ್ರಿಲ್ಲರ್‌ಗಳ ಆಗರ ಶಿವಾಜಿ ಸುರತ್ಕಲ್!

    ಸಸ್ಪೆನ್ಸ್, ಥ್ರಿಲ್ಲರ್‌ಗಳ ಆಗರ ಶಿವಾಜಿ ಸುರತ್ಕಲ್!

    ಮೇಶ್ ಅರವಿಂದ ಅಭಿನಯದ ಆಕಾಶ್ ಶ್ರೀವತ್ಸ ನಿರ್ದೇಶನದ ಬಹು ನಿರೀಕ್ಷೆ ಮೂಡಿಸಿದ ಶಿವಾಜಿ ಸುರತ್ಕಲ್ ಚಿತ್ರ ಇಂದು ಯಶಸ್ವಿಯಾಗಿ ಬಿಡುಗಡೆಯಾಗಿದೆ. ಚಿತ್ರ ಸೆಟ್ಟೇರಿದ ದಿನದಿಂದಲೂ ಸದ್ದು ಮಾಡಿದ್ದ ಶಿವಾಜಿ ಸುರತ್ಕಲ್ ಚಿತ್ರಮಂದಿರದಲ್ಲಿ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

    ಶಿವಾಜಿ ಸುರತ್ಕಲ್ ಮಿಸ್ಟ್ರಿ, ಸಸ್ಪೆನ್ಸ್, ಥ್ರಿಲ್ಲರ್ ಕಥಾನಕವುಳ್ಳ ಸಿನಿಮಾ. ರಮೇಶ್ ಅರವಿಂದ್ ಶಿವಾಜಿ ಸುರತ್ಕಲ್ ಪಾತ್ರದಲ್ಲಿ ಬಣ್ಣಹಚ್ಚಿದ್ದಾರೆ. ರಣಗಿರಿಯಲ್ಲಿ ನಡೆದ ಸಚಿವರ ಮಗನ ಕೊಲೆಯ ರಹಸ್ಯ ಬೇಧಿಸುವ ಜವಾಬ್ದಾರಿ ಹೊತ್ತ ಶಿವಾಜಿ ಸುರತ್ಕಲ್ ಅದು ಕೊಲೆಯೋ..? ಆತ್ಮಹತ್ಯೆಯೋ ಎಂಬುದನ್ನು ಭೇಧಿಸುವ ಸ್ಟೋರಿ ಚಿತ್ರದಲ್ಲಿದೆ. ಇತ್ತ ಶಿವಾಜಿ ಪತ್ನಿ ಜನನಿ ಕೂಡ ಅದೇ ಸಮಯದಲ್ಲಿ ಕಾಣೆಯಾಗಿ ಚಿತ್ರ ಮತ್ತೊಂದು ತಿರುವು ಪಡೆದುಕೊಳ್ಳುತ್ತೆ. ಈ ಘಟನೆ ಡಿಟೆಕ್ಟಿವ್ ಶಿವಾಜಿಗೆ ಅನುಮಾನ ಹುಟ್ಟಿಸಲು ಶುರು ಮಾಡುತ್ತದೆ. ಇದನ್ನು ಶಿವಾಜಿ ಹೇಗೆ ಬೇಧಿಸುತ್ತಾನೆ..? ಆತನಿಗೆ ಎದುರಾಗುವ ಸವಾಲುಗಳು, ಸಸ್ಪೆನ್ಸ್, ಥ್ರಿಲ್ಲರ್ ಅಂಶಗಳು ನೋಡುಗರನ್ನು ಸೀಟಿನ ತುದಿ ಕೂರುವಂತೆ ಮಾಡಿಸುತ್ತೆ. ಜನನಿ ಸಿಗ್ತಾಳಾ..? ಸಚಿವರ ಮಗನ ಕೊಲೆಗಾರರು ಸಿಗ್ತಾರಾ ಅನ್ನೋ ಕುತೂಹಲ ನಿಮಗಿದ್ರೆ ನೀವು ಸಿನಿಮಾ ನೋಡ್ಲೇಬೇಕು.

    ರೋಚಕ ಚಿತ್ರಕಥೆ ಹಾಗೂ ಕಥೆಯ ಮೇಲಿನ ನಿರ್ದೇಶಕರ ಹಿಡಿತ ಪ್ರೇಕ್ಷಕರನ್ನು ಕ್ಷಣ ಕ್ಷಣಕ್ಕೂ ಹಿಡಿದಿಡುತ್ತೆ. ಎಲ್ಲಾ ಸಸ್ಪೆನ್ಸ್, ಕ್ರೈಂ ಥ್ರಿಲ್ಲರ್ ಸಿನಿಮಾಗಳಂತೆ ಶಿವಾಜಿ ಸುರತ್ಕಲ್ ಸಿನಿಮಾ ಇದ್ದರೂ ಕೂಡ ಆ ಎಲ್ಲಾ ಚಿತ್ರಕ್ಕೆ ಹೋಲಿಕೆ ಮಾಡಿದ್ರೆ ಈ ಚಿತ್ರ ಒಂದು ಹೆಜ್ಜೆ ಮುಂದೆ ಇದೆ. ಸಿನಿಮಾದ ಎಲ್ಲಾ ವಿಭಾಗಗಳಲ್ಲೂ ಅಷ್ಟು ಪರ್ಫೆಕ್ಷನ್ ಇದೆ. ಹಿನ್ನೆಲೆ ಸಂಗೀತ, ಕ್ಯಾಮೆರಾ ವರ್ಕ್, ಸಂಕಲನ, ಚಿತ್ರಕಥೆ, ಕಲಾವಿದರ ಅಭಿನಯ ಎಲ್ಲವೂ ಪ್ರೇಕ್ಷಕರನ್ನು ಹಿಡಿದಿಡುವಲ್ಲಿ ಪ್ರಮುಖ ಪಾತ್ರವಹಿಸಿದೆ. ಪತ್ತೇದಾರಿ ಕಥೆಯನ್ನು ಇಷ್ಟಪಡುವರಿಗೆ ಈ ಸಿನಿಮಾ ಸಖತ್ ಥ್ರಿಲ್ ಕೊಡಲಿದೆ.

    ಚಿತ್ರ: ಶಿವಾಜಿ ಸುರತ್ಕಲ್
    ನಿರ್ದೇಶಕ: ಆಕಾಶ್ ಶ್ರೀವತ್ಸ
    ನಿರ್ಮಾಪಕ: ರೇಖಾ.ಕೆ.ಎನ್, ಅನೂಪ್ ಗೌಡ
    ಸಂಗೀತ: ಜ್ಯೂಡಾ ಸ್ಯಾಂಡಿ
    ಛಾಯಾಗ್ರಹಣ: ಗುರುಪ್ರಸಾಧ್.ಎಂ.ಜಿ
    ತಾರಾಬಳಗ: ರಮೇಶ್‍ಅರವಿಂದ್, ರಾಧಿಕಾ ನಾರಾಯಣ್, ಆರೋಹಿ, ಅವಿನಾಶ್, ರಘು ರಾಮನಕೊಪ್ಪ, ಇತರರು.

    Rating: 4/5

  • ರಮೇಶ್ ಅರವಿಂದ್ ಅಭಿನಯದ 101ನೇ ಚಿತ್ರ ಮಹಾ ಶಿವರಾತ್ರಿಗೆ ಚಿತ್ರಮಂದಿರಕ್ಕೆ!

    ರಮೇಶ್ ಅರವಿಂದ್ ಅಭಿನಯದ 101ನೇ ಚಿತ್ರ ಮಹಾ ಶಿವರಾತ್ರಿಗೆ ಚಿತ್ರಮಂದಿರಕ್ಕೆ!

    ನ್ನಡ ಚಿತ್ರರಂಗದಲ್ಲಿ ಮೂರು ದಶಕಗಳ ಕಾಲ ತಮ್ಮ ಅದ್ಭುತ ನಟನೆ, ನಿರ್ದೇಶನದಿಂದ ಮನೋರಂಜನೆ ನೀಡುತ್ತಾ ಬಂದಿರುವ ರಮೇಶ್ ಅರವಿಂದ್ ಈಗಾಗಲೇ ನೂರು ಚಿತ್ರಗಳಲ್ಲಿ ನಟಿಸಿದ್ದಾರೆ. ಈಗ ಅವ್ರ 101 ನೇ ಚಿತ್ರ `ಶಿವಾಜಿ ಸುರತ್ಕಲ್’ ಚಿತ್ರ ಬಿಡುಗಡೆಯಾಗಲು ಸಿದ್ದವಾಗಿದ್ದು, ವಿಭಿನ್ನ ಪಾತ್ರದಲ್ಲಿ ರಂಜಿಸಲು ಇದೇ ಫೆಬ್ರವರಿ 21ಕ್ಕೆ ಥಿಯೇಟರ್ ಅಂಗಳಕ್ಕೆ ಬರಲಿದ್ದಾರೆ.

    ಆಕಾಶ್ ಶ್ರೀವತ್ಸ ಆಕ್ಷನ್ ಕಟ್ ಹೇಳಿರೋ ಈ ಚಿತ್ರವನ್ನು ರೇಖಾ.ಕೆ.ಎನ್, ಅನೂಪ್ ಗೌಡ ನಿರ್ಮಾಣ ಮಾಡಿದ್ದಾರೆ. `ಶಿವಾಜಿ ಸುರತ್ಕಲ್’ ರಮೇಶ್ ಅರವಿಂದ್ 101ನೇ ಚಿತ್ರ ಅನ್ನೋದು ಒಂದು ವಿಶೇಷ ಆದ್ರೆ ಈ ಚಿತ್ರದಲ್ಲಿ ಪತ್ತೇದಾರಿ ನಾಯಕನಾಗಿ ಎರಡು ಶೇಡ್‍ನಲ್ಲಿ ರಮೇಶ್ ಅರವಿಂದ್ ಕಾಣಿಸಿಕೊಂಡಿರೋದು ಮತ್ತೊಂದು ವಿಶೇಷ.

    ಪತ್ತೇದಾರಿ ಕಥಾಹಂದರ `ಶಿವಾಜಿ ಸುರತ್ಕಲ್’ ಚಿತ್ರದಲ್ಲಿದ್ದು, ಸಸ್ಪೆನ್ಸ್, ಥ್ರಿಲ್ಲರ್ ಸೀನ್‍ಗಳು, ಟ್ವಿಸ್ಟ್ ಗಳು ಪ್ರೇಕ್ಷಕರಿಗೆ ಸಖತ್ ಥ್ರಿಲ್ ಕೊಡಲಿವೆ. ಸೆನ್ಸಾರ್ ಅಂಗಳದಲ್ಲಿ ಪಾಸ್ ಆಗಿರುವ ಈ ಚಿತ್ರದ ಸ್ಯಾಂಪಲ್ ಗಳು ಸೋಶಿಯಲ್ ಮೀಡಿಯಾಗಳಲ್ಲಿ ಮೆಚ್ಚುಗೆ ಪಡೆದುಕೊಂಡಿದ್ದು, ಸಿನಿಮಾ ತೆರೆಗ ಬರೋದನ್ನೇ ಕಾಯುತ್ತಿದ್ದಾರೆ ಸಿನಿರಸಿಕರು. ಮಹಾ ಶಿವರಾತ್ರಿಗೆ ಚಿತ್ರ ರಾಜ್ಯಾದ್ಯಂತ ಬಿಡುಗಡೆಗೆ ಸಿದ್ದವಾಗಿದ್ದು, ಜ್ಯೂಡಾ ಸ್ಯಾಂಡಿ ಸಂಗೀತ ಚಿತ್ರಕ್ಕಿದೆ. ರಾಧಿಕಾ ನಾರಾಯಣ್, ಆರೋಹಿ ನಾಯಕಿಯರಾಗಿ ಚಿತ್ರದಲ್ಲಿ ಬಣ್ಣಹಚ್ಚಿದ್ದಾರೆ.

  • ಮಹಾ ಶಿವರಾತ್ರಿಗೆ ತೆರೆಗೆ ಬರಲಿದೆ ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್’?

    ಮಹಾ ಶಿವರಾತ್ರಿಗೆ ತೆರೆಗೆ ಬರಲಿದೆ ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್’?

    ಮಹಾ ಶಿವರಾತ್ರಿಯಂದು ರಮೇಶ್ ಅರವಿಂದ್ ಡಿಟೆಕ್ಟಿವ್ ಪಾತ್ರದಲ್ಲಿ ಅಭಿನಯಿಸಿರುವ ‘ಶಿವಾಜಿ ಸುರತ್ಕಲ್’ ಚಿತ್ರ ಥ್ರಿಲ್ ನೀಡಲು ಬರ್ತಿದೆ. ಫೆಬ್ರವರಿ 21ರ ಮಹಾ ಶಿವರಾತ್ರಿಗೆ ‘ಶಿವಾಜಿ ಸುರತ್ಕಲ್’ ಚಿತ್ರ ಬಿಡುಗಡೆಯಾಗುತ್ತಿದೆ. ‘ಶಿವಾಜಿ ಸುರತ್ಕಲ್’ ಪತ್ತೇದಾರಿ ಕಥಾನಕ ಸಬ್ಜೆಕ್ಟ್ ಇರೋ ಸಿನಿಮಾ. ರಣಗಿರಿಯಲ್ಲಿ ಅನುಮಾನಾಸ್ಪದವಾಗಿ ನಡಿಯೋ ಕೊಲೆ ರಹಸ್ಯವನ್ನು ಭೇದಿಸುವ ಪಾತ್ರದಲ್ಲಿ ರಮೇಶ್ ಮಿಂಚಿದ್ದಾರೆ. ಸಸ್ಪೆನ್ಸ್ ,ಥ್ರಿಲ್ಲರ್ ಮತ್ತು ಹಾರಾರ್ ಸಬ್ಜೆಕ್ಟ್ ಚಿತ್ರದಲ್ಲಿದೆ. ಆಕಾಶ್ ಶ್ರೀವತ್ಸ ನಿರ್ದೇಶನದಲ್ಲಿ ‘ಶಿವಾಜಿ ಸುರತ್ಕಲ್’ ಚಿತ್ರ ಮೂಡಿಬಂದಿದ್ದು ಆರಂಭದಿಂದ ಕುತೂಹಲ ಮೂಡಿಸಿದ್ದ ಈ ಚಿತ್ರ, ಟ್ರೈಲರ್ ಮೂಲಕ ಆ ಕೌತುಕವನ್ನು ದುಪ್ಪಟ್ಟು ಮಾಡಿದೆ.

    ರಮೇಶ್ ಅರವಿಂದ್ ಮೂರು ದಶಕಗಳ ಸಿನಿ ಜೀವನದಲ್ಲಿ ಇದೆ ಮೊದಲ ಬಾರಿ ಡಿಟೆಕ್ಟಿವ್ ಪಾತ್ರದಲ್ಲಿ ಬಣ್ಣಹಚ್ಚಿರೋದು ಈ ಚಿತ್ರದ ವಿಶೇಷ. ಚಿತ್ರದಲ್ಲಿ ನಾಯಕಿಯರಾಗಿ ರಾಧಿಕಾ ನಾರಾಯಣ್, ಆರೋಹಿ ಅಭಿನಯಿಸಿದ್ದಾರೆ. ಅವಿನಾಶ್, ರಮೇಶ್ ಪಂಡಿತ್, ರೋಹಿತ್ ಭಾನುಪ್ರಕಾಶ್, ರಾಘು ರಮಣಕೊಪ್ಪ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ, ಗುರುಪ್ರಸಾಧ್ ಎಂ.ಜಿ ಕ್ಯಾಮೆರಾ ವರ್ಕ್ ‘ಶಿವಾಜಿ ಸುರತ್ಕಲ್’ ಚಿತ್ರಕ್ಕಿದೆ.

    ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿ ಚಿತ್ರ ನಿರ್ಮಾಣವಾಗಿದ್ದು, ರೇಖಾ.ಕೆ.ಎನ್, ಅನೂಪ್ ಗೌಡ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸಾಕಷ್ಟು ಕುತೂಹಲ ಮೂಡಿಸಿರುವ ‘ಶಿವಾಜಿ ಸುರತ್ಕಲ್’ ಚಿತ್ರ ಫೆಬ್ರವರಿ 21ಕ್ಕೆ ಚಿತ್ರಮಂದಿರಕ್ಕೆ ಬರಲಿದೆ.

  • ಫೆಬ್ರವರಿಗೆ 21ಕ್ಕೆ ತೆರೆಗೆ ಬರಲಿದೆ ‘ಶಿವಾಜಿ ಸುರತ್ಕಲ್’!

    ಫೆಬ್ರವರಿಗೆ 21ಕ್ಕೆ ತೆರೆಗೆ ಬರಲಿದೆ ‘ಶಿವಾಜಿ ಸುರತ್ಕಲ್’!

    ರಮೇಶ್ ಅರವಿಂದ್ ನಟಿಸಿರುವ ‘ಶಿವಾಜಿ ಸುರತ್ಕಲ್’ ಚಿತ್ರ ಟೀಸರ್ ಹಾಗೂ ಟ್ರೈಲರ್ ನಿಂದ ಭಾರೀ ನಿರೀಕ್ಷೆ ಹಾಗೂ ಕುತೂಹಲ ಹುಟ್ಟಿಸಿದೆ. ಇದೊಂದು ಪತ್ತೇದಾರಿ ಸಿನಿಮಾವಾಗಿದ್ದು, ರಣಗಿರಿಯಲ್ಲಿ ನಡೆಯೋ ಅನುಮಾನಾಸ್ಪದ ಸಾವಿನ ಸುತ್ತ ಈ ಕತೆಯನ್ನು ಹೆಣೆಯಲಾಗಿದೆ. ಈ ಕೊಲೆಯ ರಹಸ್ಯ ಭೇಧಿಸುವ ಡಿಟೆಕ್ಟಿವ್ ಪಾತ್ರದಲ್ಲಿ ರಮೇಶ್ ಅರವಿಂದ್ ಬಣ್ಣಹಚ್ಚಿದ್ದಾರೆ.

    ಸಸ್ಪೆನ್ಸ್, ಹಾರಾರ್, ಥ್ರಿಲ್ಲಿಂಗ್ ಎಲಿಮೆಂಟ್‍ಗಳು ‘ಶಿವಾಜಿ ಸುರತ್ಕಲ್’ ಚಿತ್ರದಲ್ಲಿ ಮಿಶ್ರಣವಾಗಿದ್ದು, ನೋಡುಗರಿಗೆ ಥ್ರಿಲ್ ಕೊಡಲಿದೆ. ರಮೇಶ್ ಅರವಿಂದ್ ಮೊದಲ ಬಾರಿ ಪತ್ತೇದಾರಿಯಾಗಿ ಕಾಣಿಸಿಕೊಂಡಿರುವ ಈ ಚಿತ್ರ ಮಹಾ ಶಿವರಾತ್ರಿಗೆ ಬಿಡುಗಡೆಗೆ ಸಿದ್ದವಾಗಿದೆ. ರಾಧಿಕಾ ನಾರಾಯಣ್, ಆರೋಹಿ ಚಿತ್ರದಲ್ಲಿ ನಾಯಕಿಯರಾಗಿ ನಟಿಸಿದ್ದಾರೆ. ಅವಿನಾಶ್, ರಮೇಶ್ ಪಂಡಿತ್, ರೋಹಿತ್ ಭಾನುಪ್ರಕಾಶ್, ರಾಘು ರಮಣಕೊಪ್ಪ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

    ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಗುರುಪ್ರಸಾಧ್ ಎಂ.ಜಿ ಕ್ಯಾಮೆರಾ ವರ್ಕ್ ‘ಶಿವಾಜಿ ಸುರತ್ಕಲ್’ ಚಿತ್ರಕ್ಕಿದೆ. ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿ ಚಿತ್ರ ನಿರ್ಮಾಣವಾಗಿದ್ದು, ರೇಖಾ.ಕೆ.ಎನ್, ಅನೂಪ್ ಗೌಡ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸಾಕಷ್ಟು ನಿರೀಕ್ಷೆ ಹುಟ್ಟಿಹಾಕಿರುವ ಈ ಚಿತ್ರ ಫೆಬ್ರವರಿ 21ಕ್ಕೆ ತೆರೆಗೆ ಬರಲಿದೆ.

  • ‘ಶಿವಾಜಿ ಸುರತ್ಕಲ್’ ಟ್ರೈಲರ್ ಔಟ್!- ಫೆಬ್ರವರಿ 21ಕ್ಕೆ ಬಯಲಾಗಲಿದೆ ರಣಗಿರಿ ರಹಸ್ಯ!

    ‘ಶಿವಾಜಿ ಸುರತ್ಕಲ್’ ಟ್ರೈಲರ್ ಔಟ್!- ಫೆಬ್ರವರಿ 21ಕ್ಕೆ ಬಯಲಾಗಲಿದೆ ರಣಗಿರಿ ರಹಸ್ಯ!

    ಸ್ಯಾಂಡಲ್‍ವುಡ್‍ನ ವೆರಿ ಟ್ಯಾಲೆಂಟೆಡ್ ಹಾಗೂ ಸ್ಫುರದ್ರೂಪಿ ನಟ ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಡಿಟೆಕ್ಟಿವ್ ಪಾತ್ರದಲ್ಲಿ ಎರಡು ವಿಭಿನ್ನ ಶೇಡ್‍ನಲ್ಲಿ ರಮೇಶ್ ಅರವಿಂದ್ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಕುತೂಹಲಕಾರಿ ಟ್ರೈಲರ್ ಸಾಮಾಜಿಕ ಜಾಲತಾಣದಲ್ಲಿ ಎಲ್ಲರಿಗೂ ಸಖತ್ ಥ್ರಿಲ್ ಕೊಡುತ್ತಿದೆ.

    ‘ಶಿವಾಜಿ ಸುರತ್ಕಲ್’ ಪತ್ತೇದಾರಿ ಕಥಾನಕ ಸಬ್ಜೆಕ್ಟ್ ಇರೋ ಸಿನಿಮಾ. ರಣಗಿರಿಯಲ್ಲಿ ಅನುಮಾನಾಸ್ಪದವಾಗಿ ನಡಿಯೋ ಕೊಲೆ ರಹಸ್ಯವನ್ನು ಭೇದಿಸುವ ಪಾತ್ರದಲ್ಲಿ ರಮೇಶ್ ಮಿಂಚಿದ್ದಾರೆ. ಸಸ್ಪೆನ್ಸ್, ಥ್ರಿಲ್ಲಿಂಗ್ ಮತ್ತು ಹಾರಾರ್ ಸಬ್ಜೆಕ್ಟ್ ಚಿತ್ರದಲ್ಲಿದೆ. ಆಕಾಶ್ ಶ್ರೀವತ್ಸ ನಿರ್ದೇಶನದಲ್ಲಿ ‘ಶಿವಾಜಿ ಸುರತ್ಕಲ್’ ಚಿತ್ರ ಮೂಡಿಬಂದಿದ್ದು, ಆರಂಭದಿಂದ ಕುತೂಹಲ ಮೂಡಿಸಿದ್ದ ಈ ಚಿತ್ರ, ಟ್ರೈಲರ್ ಮೂಲಕ ಆ ಕೌತುಕವನ್ನು ದುಪ್ಪಟ್ಟು ಮಾಡಿದೆ. ಚಿತ್ರದ ಬಿಡುಗಡೆ ಡೇಟ್ ಕೂಡ ಅನೌನ್ಸ್ ಮಾಡಿರೋ ಟೀಂ ‘ಶಿವಾಜಿ ಸುರತ್ಕಲ್’. ಫೆಬ್ರವರಿ 21ಕ್ಕೆ ಚಿತ್ರ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ ಚಿತ್ರತಂಡ.

    ಚಿತ್ರದಲ್ಲಿ ನಾಯಕಿಯರಾಗಿ ರಾಧಿಕಾ ನಾರಾಯಣ್, ಆರೋಹಿ ಅಭಿನಯಿಸಿದ್ದಾರೆ. ಅವಿನಾಶ್, ರಮೇಶ್ ಪಂಡಿತ್, ರೋಹಿತ್ ಭಾನುಪ್ರಕಾಶ್, ರಾಘು ರಮಣಕೊಪ್ಪ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ, ಗುರುಪ್ರಸಾಧ್ ಎಂ.ಜಿ ಕ್ಯಾಮೆರಾ ವರ್ಕ್ ‘ಶಿವಾಜಿ ಸುರತ್ಕಲ್’ಚಿತ್ರಕ್ಕಿದೆ.

    ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿ ಚಿತ್ರ ನಿರ್ಮಾಣವಾಗಿದ್ದು, ರೇಖಾ.ಕೆ.ಎನ್, ಅನೂಪ್ ಗೌಡ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸಾಕಷ್ಟು ಕುತೂಹಲ ಮೂಡಿಸಿರುವ  ‘ಶಿವಾಜಿ ಸುರತ್ಕಲ್’ ಚಿತ್ರ ಫೆಬ್ರವರಿ 21ಕ್ಕೆ ಚಿತ್ರಮಂದಿರಕ್ಕೆ ಬರಲಿದೆ.