Tag: ಶಿಶು ಕಳ್ಳತನ

  • ನರ್ಸ್ ವೇಷ ಧರಿಸಿ ಮಗು ಕಿಡ್ನಾಪ್ – ಮರಳಿ ತಾಯಿಯ ಮಡಿಲು ಸೇರಿದ ನವಜಾತ ಶಿಶು

    ನರ್ಸ್ ವೇಷ ಧರಿಸಿ ಮಗು ಕಿಡ್ನಾಪ್ – ಮರಳಿ ತಾಯಿಯ ಮಡಿಲು ಸೇರಿದ ನವಜಾತ ಶಿಶು

    ಹಾವೇರಿ: ನರ್ಸ್ ವೇಷ ಧರಿಸಿ ಬಂದು ಒಂದು ದಿನದ ನವಜಾತ ಶಿಶುವನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ (Haveri) ಮಹಿಳಾ ಠಾಣಾ ಪೊಲೀಸರು ಮಗುವನ್ನು ಪತ್ತೆ ಹಚ್ಚಿದ್ದಾರೆ. ಶನಿವಾರ ಸಂಜೆ ಐದು ಗಂಟೆಯಿಂದ ಆರೂವರೆ ಗಂಟೆಯ ಸಮಯದಲ್ಲಿ, ಮಗುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಾಗಿ ಹೇಳಿ ಅಜ್ಜಿಯನ್ನು ಯಾಮಾರಿಸಿ ಮಹಿಳೆ ಮಗುವಿನೊಂದಿಗೆ ಪರಾರಿಯಾಗಿದ್ದಳು.

    ಒಂದು ದಿನದ ಹೆಣ್ಣು ಮಗು ನಾಪತ್ತೆ ಆಗಿದ್ದ ಹಿನ್ನೆಲೆ ಮಗುವಿನ ಅಜ್ಜ ಹಾವೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಮಗುವನ್ನು ತೆಗೆದುಕೊಂಡು ಹೋದ ಮಹಿಳೆ ಮತ್ತು ಮಗುವಿನ ಚಹರೆ ಪಟ್ಟಿಯ ಆಧಾರದ ಮೇಲೆ ಮತ್ತು ಜಿಲ್ಲಾಸ್ಪತ್ರೆಯಲ್ಲಿನ (District Hospital) ಸಿಸಿಟಿವಿ (CCTV) ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆಗೆ ಇಳಿದ ಹಾವೇರಿ ಮಹಿಳಾ ಠಾಣಾ ಪೊಲೀಸರು ನಾಪತ್ತೆಯಾಗಿದ್ದ ಹಸುಗೂಸನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಮಾಡಿ ಹೆತ್ತವರ ಮಡಿಲು ಸೇರುವಂತೆ ಮಾಡಿದ್ದಾರೆ. ಇದನ್ನೂ ಓದಿ: ಹುಟ್ಟೂರಿನ ಮಣ್ಣಲ್ಲಿ ಧ್ರುವನಾರಾಯಣ್ ಲೀನ – ರಾಜಕೀಯದ ಅಜಾತಶತ್ರು ಇನ್ನು ನೆನಪು ಮಾತ್ರ 

    ಮಗುವಿನೊಂದಿಗೆ ಪರಾರಿಯಾಗಿದ್ದ ಮಹಿಳೆ ತಾನು ಈ ಹಿಂದೆ ಬೆಂಗಳೂರಿನಲ್ಲಿ (Bengaluru) ಕೆಲಸ ಮಾಡುತ್ತಿದ್ದೆ ಎಂದು ಹೇಳಿದ್ದಾಳೆ. ಅಲ್ಲದೇ ನರ್ಸ್ ಡ್ರೆಸ್ ಹಾಕಿಕೊಂಡು ಮಗುವನ್ನು ತೆಗೆದುಕೊಂಡು ಹೋಗಿರುವುದಾಗಿಯೂ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾಳೆ. ಇದನ್ನೂ ಓದಿ: ನರ್ಸ್ ವೇಷ ಧರಿಸಿ ಜಿಲ್ಲಾಸ್ಪತ್ರೆಯಿಂದ ನವಜಾತ ಶಿಶು ಕಳ್ಳತನ

    ತಾನು ಹಾವೇರಿ ನಗರದ ನಾಗೇನಮಟ್ಟಿ (Nagenammati) ನಿವಾಸಿಯಾಗಿದ್ದು, ಐದು ವರ್ಷಗಳಿಂದ ಮಕ್ಕಳಾಗದ ಕಾರಣ ಮಗುವನ್ನು ತೆಗೆದುಕೊಂಡು ಹೋಗಿದ್ದೆ. ಮಗು ನೋಡಿ ಆಸೆಯಾಯಿತು. ಮಗುವನ್ನು ಕಳ್ಳತನ ಮಾಡಿ ಮಣ್ಣು ತಿನ್ನುವ ಕೆಲಸ ಮಾಡಿಬಿಟ್ಟೆ. ಮಗು ಅಳುವುದನ್ನು ನೋಡಿ ರಾತ್ರಿಯೇ ಹೆತ್ತವರಿಗೆ ವಾಪಸ್ ಕೊಡಬೇಕು ಎಂದು ಬಂದೆ. ಆದರೆ ಧೈರ್ಯ ಸಾಕಾಗದ ಕಾರಣ ವಾಪಸ್ ಹೋದೆ ಎಂದು ಪೊಲೀಸರ ಬಳಿ ಬಾಯಿ ಬಿಟ್ಟಿದ್ದಾಳೆ. ಈ ಕುರಿತು ಪೊಲೀಸರು ಇನ್ನಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಬೆಂಗಳೂರಿನಿಂದ ಮಂಗಳೂರಿಗೆ ಬೇಗ ತಲುಪಿ!

    ಒಟ್ಟಿನಲ್ಲಿ ಪೊಲೀಸರ ಕಾರ್ಯಾಚರಣೆಯಿಂದ ನಾಪತ್ತೆಯಾಗಿದ್ದ ಮಗು ಕೆಲವೇ ಗಂಟೆಗಳಲ್ಲಿ ಮರಳಿ ತಾಯಿಯ ಮಡಿಲು ಸೇರಿದೆ. ಅಲ್ಪ ಸಮಯದಲ್ಲಿ ಮಗುವನ್ನು ಪತ್ತೆ ಮಾಡಿದ ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ: ಲಿಂಗಭೈರವಿ ದೇವಿಯ ಮೋರೆ ಹೋದ ಸಮಂತಾ

  • ನರ್ಸ್ ವೇಷ ಧರಿಸಿ ಜಿಲ್ಲಾಸ್ಪತ್ರೆಯಿಂದ ನವಜಾತ ಶಿಶು ಕಳ್ಳತನ

    ನರ್ಸ್ ವೇಷ ಧರಿಸಿ ಜಿಲ್ಲಾಸ್ಪತ್ರೆಯಿಂದ ನವಜಾತ ಶಿಶು ಕಳ್ಳತನ

    ಹಾವೇರಿ: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಾಗಿ ಯಾಮಾರಿಸಿ ನವಜಾತ ಶಿಶುವನ್ನು (Newborn Baby) ಕಳ್ಳತನ ಮಾಡಿದ ಘಟನೆ ಹಾವೇರಿಯಲ್ಲಿ (Haveri) ನಡೆದಿದೆ.

    ಬ್ಯಾಡಗಿ ತಾಲೂಕಿನ (Byadagi Taluk) ಗುಡ್ಡದಹೊಸಳ್ಳಿ ಗ್ರಾಮದ ರಂಜಿತಾ ಕುಂಬಾರ ಎಂಬುವವರು ಶುಕ್ರವಾರ ಸಂಜೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ (District Hospital) ಹೆಣ್ಣುಮಗುವಿಗೆ ಜನ್ಮ ನೀಡಿದ್ದರು. ಶನಿವಾರ ಸಂಜೆ ಮಹಿಳೆಯೊಬ್ಬಳು ನರ್ಸ್ ವೇಷದಲ್ಲಿ ಬಂದು ಮಗುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಾಗಿ ಹೇಳಿ ಶಿಶುವಿನ ಅಜ್ಜಿಯನ್ನು ಯಾಮಾರಿಸಿ ಮಗುವನ್ನು ಕಳ್ಳತನ ಮಾಡಿದ್ದಾಳೆ. ಇದನ್ನೂ ಓದಿ: ಕಾಂಗ್ರೆಸ್ ನನ್ನ ಸಮಾಧಿ ಮಾಡುವ ಕನಸು ಕಾಣುತ್ತಿದೆ: ಮೋದಿ ವಾಗ್ದಾಳಿ

    ಶಿಶುವಿಗೆ ಚಿಕಿತ್ಸೆ ಕೊಡಿಸುವುದಾಗಿ ಹೇಳಿದ ನರ್ಸ್ ವೇಷಧಾರಿ, ಅಜ್ಜಿ ಹಾಗೂ ಶಿಶುವನ್ನು ನಗರದ ವಿವಿಧ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಳು. ಮರಳಿ ಜಿಲ್ಲಾಸ್ಪತ್ರೆಗೆ ಬರುವ ಸಂದರ್ಭ ಮಾರ್ಗಮಧ್ಯದಲ್ಲಿ ಹಣ್ಣು ತೆಗೆದುಕೊಂಡು ಬರುವುದಾಗಿ ಅಜ್ಜಿಯನ್ನು ನಂಬಿಸಿ ಶಿಶುವನ್ನು ಕಳ್ಳತನ ಮಾಡಿದ್ದಾಳೆ. ಕಳ್ಳತನದ ದೃಶ್ಯ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನವಜಾತ ಶಿಶುವನ್ನು ಕಳೆದುಕೊಂಡ ಪೋಷಕರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆಗೊಳಿಸಿದ ಮೋದಿ    

    ಈ ಕುರಿತು ಹಾವೇರಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜನಾರ್ದನ ರೆಡ್ಡಿ ಭರ್ಜರಿ ರೋಡ್ ಶೋ – ಬಾಗೇಪಲ್ಲಿಯಲ್ಲಿ ಅಭ್ಯರ್ಥಿ ನಿಲ್ಲಿಸಲು ತಯಾರಿ

  • ರಾಯಚೂರು: ರಿಮ್ಸ್ ಆಸ್ಪತ್ರೆಯಲ್ಲಿ ನವಜಾತ ಶಿಶು ನಾಪತ್ತೆ

    ರಾಯಚೂರು: ರಿಮ್ಸ್ ಆಸ್ಪತ್ರೆಯಲ್ಲಿ ನವಜಾತ ಶಿಶು ನಾಪತ್ತೆ

    – ಕಾಣೆಯಾದ ಗಂಡು ಮಗು ಮೂರು ದಿನಗಳ ಹಿಂದೆ ಜನಿಸಿತ್ತು

    ರಾಯಚೂರು: ನಗರದ ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ನವಜಾತ ಶಿಶು ಕಾಣೆಯಾಗಿದ್ದು, ಇದೀಗ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮಾರ್ಚ್ 26 ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಜನಿಸಿದ್ದ ಗಂಡು ಶಿಶು ನಾಪತ್ತೆಯಾಗಿದೆ. ದೇವದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಯಲ್ಲಮ್ಮ ತಿಮ್ಮಣ್ಣ ದಂಪತಿಗಳ ಮಗು ಕಾಣೆಯಾಗಿರುವುದು ಇಡೀ ಆಸ್ಪತ್ರೆಯನ್ನೇ ಬೆಚ್ಚಿಬೀಳಿಸಿದೆ.

    ಆಸ್ಪತ್ರೆಯ ನವಜಾತ ಶಿಶು ಸೂಕ್ಷ್ಮ ನಿಗಾ ಘಟಕದಲ್ಲಿದ್ದು, ಬೆಳಿಗ್ಗೆ 6 ಗಂಟೆಗೆ ತಾಯಿಗೆ ನೀಡಲಾಗಿತ್ತು. ಹಾಲುಣಿಸಿದ ಬಳಿಕ ತಾಯಿ ಯಲ್ಲಮ್ಮ ಎನ್‍ಐಸಿಯುಗೆ ಮಗುವನ್ನ ನೀಡಿದ್ದಾರೆ. ಇದಾದ ಬಳಿಕವೇ ಮಗು ನಾಪತ್ತೆಯಾಗಿದೆ. ಆಸ್ಪತ್ರೆಯ ರಿಜಿಸ್ಟರ್ ಪುಸ್ತಕದಲ್ಲಿ ಬೆಳಿಗ್ಗೆ 8:40 ರ ಸುಮಾರಿಗೆ ಮಗುವನ್ನ ಪುನಃ ಪೋಷಕರಿಗೆ ನೀಡಲಾಗಿದೆ. ಆದ್ರೆ ಶಿಶುವಿನ ತಾಯಿ ನನಗೆ ಮಗುವನ್ನು ನೀಡಿಲ್ಲ ಅಂತಿದ್ದಾರೆ. ಹಾಗಾದ್ರೆ ಮಗು ಎಲ್ಲಿ ಹೋಯ್ತು ಅನ್ನೋದು ತಿಳಿದು ಬಂದಿಲ್ಲ.

    ಈ ಹಿನ್ನೆಲೆ ಆಸ್ಪತ್ರೆ ವೈದ್ಯರು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಗೆ ಮೌಖಿಕ ದೂರನ್ನು ನೀಡಿದ್ದಾರೆ. ಆಸ್ಪತ್ರೆ ಪರಿಶೀಲನೆ ನಡೆಸಿರುವ ಪೊಲೀಸರಿಗೆ ಹೊಸದಾಗಿ ಅಳವಡಿಸಿರುವ ಸಿಸಿ ಕ್ಯಾಮೆರಾದಿಂದಲೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆಸ್ಪತ್ರೆಯ ಆಡಳಿತ ವ್ಯವಸ್ಥೆ ಹಾಗೂ ಸಿಬ್ಬಂದಿಗಳ ಬೇಜವಾಬ್ದಾರಿತನವೇ ಘಟನೆಗೆ ಕಾರಣ ಅಂತ ಆರೋಪಿಸಿಲಾಗಿದೆ. ಸದ್ಯ ಮಗುವನ್ನ ಕಳೆದುಕೊಂಡಿರುವ ತಾಯಿ ಕಂಗಾಲಾಗಿದ್ದಾರೆ.