Tag: ಶೀರೂರು ಸ್ವಾಮೀಜಿ

  • ಶಿರೂರು ಶ್ರೀ ಕೋಣೆಯಲ್ಲಿ ವಿದೇಶಿ ಮದ್ಯ- ಕಾಂಡೋಮ್ ಸ್ಯಾನಿಟರಿ ಪ್ಯಾಕ್!

    ಶಿರೂರು ಶ್ರೀ ಕೋಣೆಯಲ್ಲಿ ವಿದೇಶಿ ಮದ್ಯ- ಕಾಂಡೋಮ್ ಸ್ಯಾನಿಟರಿ ಪ್ಯಾಕ್!

    ಉಡುಪಿ: ಶೀರೂರು ಸ್ವಾಮೀಜಿಗಳ ನಿಗೂಢ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಶೀರೂರು ಮಠವನ್ನು ತಪಾಸಣೆ ಮಾಡಿದ್ದಾರೆ. ಈ ಸಂದರ್ಭ ಪೊಲೀಸರು ಶಾಕ್‍ಗೆ ಒಳಗಾಗಿದ್ದಾರೆ.

    ಶೀರೂರು ಮಠದ ಸ್ವಾಮೀಜಿಗಳ ಆಪ್ತರ ಕೋಣೆಯಲ್ಲಿ ಮದ್ಯ ಬಾಟಲಿಗಳು ಸಿಕ್ಕಿವೆ. ಅವುಗಳ ಮೌಲ್ಯ ಬರೋಬ್ಬರಿ 6 ಲಕ್ಷ ರೂ. ಇದ್ದು, ವಿದೇಶದ ದುಬಾರಿ ಮದ್ಯವಾಗಿದೆ. ಕಾಂಡಮ್, ಸ್ಯಾನಿಟರಿ ಪ್ಯಾಡ್, ಮಹಿಳೆಯರ ಬಟ್ಟೆಗಳೂ ಪತ್ತೆಯಾಗಿದೆ.

    ಸ್ವಾಮೀಜಿ ಚಾರಿತ್ರ್ಯ ಕುರಿತು ಬಹಳ ಹಿಂದೆಯೇ ಚರ್ಚೆಗಳು ನಡೆಯುತ್ತಿತ್ತು. ಆದರೆ ಸ್ವಾಮೀಜಿ ಬದುಕಿದ್ದಾಗ ಈ ಬಗ್ಗೆ ಗೊತ್ತಿರುವವರೂ ಚಕಾರ ಎತ್ತುತ್ತಿರಲಿಲ್ಲ. ಏಳು ಮಠದ ಯತಿಗಳಿಗೆ ತಗಾದೆ ಇದ್ದರೂ ಏನೂ ಮಾಡಲಾಗದೆ ಸುಮ್ಮನಿದ್ದರು. ಇದೀಗ ಎಲ್ಲವೂ ಬೆಳಕಿಗೆ ಬಂದಿದೆ ಎಂದು ಕೃಷ್ಣಮಠದ ಭಕ್ತ ಬಾಲಾಜಿ ರಾಘವೇಂದ್ರರು ಆರೋಪಿಸಿದ್ದಾರೆ.

    ಪ್ರಕರಣ ಸಂಬಂಧ ರಮ್ಯಾ ಶೆಟ್ಟಿ ಬಂಧನ ಆಗಿಲ್ಲ. ಕೆಲವು ಮಾಧ್ಯಮಗಳಲ್ಲಿ ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ. ಹೀಗೆ ಬಿಂಬಿಸಿ ಜನರ, ನ್ಯಾಯಾಲಯದ ದಿಕ್ಕು ತಪ್ಪಿಸಬೇಡಿ ಎಂದು ಎಸ್‍ಪಿ ಲಕ್ಷ್ಮಣ ನಿಂಬರ್ಗಿ ಮಾಧ್ಯಮಗಳಿಗೆ ವಿನಂತಿಸಿಕೊಂಡರು.

    ಶೀರೂರು ಸ್ವಾಮೀಜಿಗೆ ಇಬ್ಬರು ಮಹಿಳೆಯರ ಸಂಪರ್ಕವಿತ್ತು. ಹೀಗಾಗಿ ಮೊದಲ ಮಹಿಳೆಯ ಪುತ್ರನನ್ನು ಪೊಲೀಸರು ವಿಚಾರಣೆಗೆ ಒಳಪಡೆಸಿದ್ದಾರೆ. ಆತನು ಮಹತ್ವದ ಮಾಹಿತಿಯನ್ನು ನೀಡಿದ್ದಾನೆ ಎನ್ನಲಾಗಿದೆ. ಡಿವಿಆರ್ ನಾಪತ್ತೆ ವಿಚಾರಕ್ಕೆ ಸಂಬಂಧಿಸದಂತೆ ಆತನ ಜೊತೆಗೆ ಇನ್ನು ಇಬ್ಬರು ಯುವಕರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಮೂವರನ್ನು ನಿನ್ನೆ ಬೆಳಗ್ಗೆಯಿಂದ ಸಂಜೆಯವರೆಗೆ ತನಿಖೆ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    https://youtu.be/Ssv-pfTMn6Y

  • ಶಿರೂರು ಶ್ರೀಗಳಿಗೆ ಮದ್ಯಪಾನ, ಸ್ತ್ರೀ ಸಂಪರ್ಕ ಇದ್ದಿರೋದಕ್ಕೆ ಹೀಗಾಯ್ತೋ ಏನೋ ಗೊತ್ತಿಲ್ಲ: ಪೇಜಾವರ ಶ್ರೀ

    ಶಿರೂರು ಶ್ರೀಗಳಿಗೆ ಮದ್ಯಪಾನ, ಸ್ತ್ರೀ ಸಂಪರ್ಕ ಇದ್ದಿರೋದಕ್ಕೆ ಹೀಗಾಯ್ತೋ ಏನೋ ಗೊತ್ತಿಲ್ಲ: ಪೇಜಾವರ ಶ್ರೀ

    ಉಡುಪಿ: ಶಿರೂರು ಸ್ವಾಮೀಜಿಗೆ ಮದ್ಯಪಾನ, ಸ್ತ್ರೀ ಸಂಪರ್ಕ ಇದ್ದರಿಂದ ಹೀಗಾಯಿತೋ ಏನೋ ಗೊತ್ತಿಲ್ಲ ಎಂದು ಪೇಜಾವರ ಶ್ರೀಗಳು ಶಂಕೆ ವ್ಯಕ್ತಪಡಿಸಿದ್ದಾರೆ.

    ಇಂದು ಉಡುಪಿ ಕೃಷ್ಣ ಮಠಕ್ಕೆ ಆಗಮಿಸಿ, ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಗಳು, ಶಿರೂರು ಶ್ರೀ ಹಲವಾರು ಒಳ್ಳೆಯ ಕಾರ್ಯಗಳ ಮೂಲಕ ಸಾಮಾಜಿಕ, ಸಾಂಸ್ಕೃತಿಕ ಕೆಲಸ ಮಾಡಿದ್ದಾರೆ. ಆದರೆ ಅವರು ಸನ್ಯಾಸ ಧರ್ಮ ಪಾಲಿಸದೇ ಪುಂಡಾಟಿಕೆ ಮೆರೆದಿದ್ದರು. ಅಷ್ಟೇ ಅಲ್ಲದೆ ಅವರಿಗೆ ದುರ್ವ್ಯಸನ ಹಾಗೂ ಸ್ತ್ರೀಯರ ಮೇಲೆ ಆಸಕ್ತಿ ಇತ್ತು ಎಂದು ಆರೋಪಿಸಿದರು.

    ಶ್ರೀಗಳ ಸಾವಿನ ಬಗ್ಗೆ ಯಾವುದೇ ಖಚಿತ ಮಾಹಿತಿ ದೊರೆತಿಲ್ಲ. ಅನ್ನಾಹಾರ ವಿಷವಾಗಿದೆಯೋ ಗೊತ್ತಿಲ್ಲ. ಕೆಲವರು ಶ್ರೀಗಳಿಗೆ ಮೂತ್ರಪಿಂಡ ಹಾಗೂ ಪಿತ್ತಕೋಶದ ಸಮಸ್ಯೆ ಅಂತಾ ಹೇಳುತ್ತಿದ್ದಾರೆ. ಇನ್ನೂ ಕೆಲವು ಮೂಲಗಳ ಪ್ರಕಾರ ಮಹಿಳೆ ಜೊತೆ ಜಗಳವಾಗಿದೆ ಎನ್ನಲಾಗಿದೆ ಎಂಬ ಶಂಕೆಯನ್ನು ವ್ಯಕ್ತಪಡಿಸಿದರು. ಇದನ್ನೂ ಓದಿ: ಪಟ್ಟದ ದೇವರನ್ನು ಶಿರೂರು ಶ್ರೀಗಳಿಗೆ ಕೊಡದೆ ಇರಲು ಕಾರಣವಿದೆ – ರಹಸ್ಯ ಬಿಚ್ಚಿಟ್ಟ ಪೇಜಾವರ ಶ್ರೀ

    ಬೇರೆ ಯಾವ ಮಠದಿಂದ ಈ ಕೃತ್ಯ ನಡೆದಿಲ್ಲ. ಜೊತೆಗಿರುವವರಿಂದ ಸಮಸ್ಯೆ ಆಗಿದೆಯೋ ಗೊತ್ತಿಲ್ಲ. ಪಲಾವ್ ತಿಂದಿರುವ ಬಗ್ಗೆ ಶಿರೂರು ಶ್ರೀಗಳ ಸಹೋದರ ಹೇಳಿದ್ದಾರೆ. ಹೀಗಾಗಿ ಅವರ ಮಠದವರಿಂದಲೇ ಕೃತ್ಯ ನಡೆದಿರಬಹುದು ಎನ್ನಲಾಗುತ್ತಿದೆ. ಅಷ್ಟೇ ಅಲ್ಲದೆ ವನ ಮಹೋತ್ಸವಕ್ಕೆ ಬಂದಾಗ ವಿದ್ಯಾರ್ಥಿಗಳ ಜೊತೆ ಇರಿಸು ಮುರುಸಾಗಿತ್ತು. ಎಲ್ಲ ಸತ್ಯಾಸತ್ಯತೆಗಳು ಮರಣೋತ್ತರ ಪರೀಕ್ಷೆಯ ಬಳಿಕ ತಿಳಿಯಲಿದೆ ಎಂದು ಹೇಳಿದರು.

    ಪರ್ಯಾಯ ಸಭೆಯಲ್ಲಿಯೇ ಹಾಗೂ ವೈಯಕ್ತಿಕವಾಗಿ ತಪ್ಪುಗಳನ್ನು ತಿದ್ದಿಕೊಳ್ಳಲು ನಾನು ಸಲಹೆ ನೀಡಿದ್ದೆ. ಆದರೆ ಅವರು ಯಾವುದನ್ನೂ ಪಾಲಿಸಿಲ್ಲ. ಶಿರೂರು ಶ್ರೀ ತಮಗೆ ಮಕ್ಕಳಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಅವರೇ ಒಪ್ಪಿಕೊಂಡ ಮೇಲೆ ಸ್ವಾಮೀಜಿ ಆಗುವುದು ಹೇಗೆ ಎಂದು ಇತರೆ ಮಠಾಧೀಶರೂ ಪ್ರಶ್ನೆ ಕೇಳಿದ್ದಾರೆ. ಶ್ರೀಗಳು ಸನ್ಯಾಸ ಧರ್ಮ ಪಾಲಿಸದಿರುವುದರಿಂದ ಪಟ್ಟದ ದೇವರನ್ನು ಕೊಟ್ಟಿಲ್ಲ. ನಿನ್ನೆ ಹುಬ್ಬಳ್ಳಿಯಲ್ಲಿದ್ದೆ. ಆರೋಗ್ಯ ದೃಷ್ಟಿಯಿಂದ ವೈದ್ಯರು ಪ್ರಯಾಣ ಮಾಡಬಾರದು ಎಂದು ಸಲಹೆ ನೀಡಿದ್ದರಿಂದ ಉಡುಪಿಗೆ ಬರಲು ಸಾಧ್ಯವಾಗಲಿಲ್ಲ ಎಂದರು.

  • ಅಷ್ಟಮಠಗಳ ಶ್ರೀಗಳ ವಿರುದ್ಧ ಕೇವಿಯಟ್ ತಂದ ಶೀರೂರು ಶ್ರೀ

    ಅಷ್ಟಮಠಗಳ ಶ್ರೀಗಳ ವಿರುದ್ಧ ಕೇವಿಯಟ್ ತಂದ ಶೀರೂರು ಶ್ರೀ

    ಉಡುಪಿ: ಶೀರೂರು ಸ್ವಾಮೀಜಿ ಶಿಷ್ಯ ಸ್ವೀಕಾರ ಮಾಡಬೇಕು ಎಂಬ ವಿಚಾರದಲ್ಲಿ ಉಡುಪಿ ಕೃಷ್ಣ ಮಠದಲ್ಲಿ ಚರ್ಚೆ ಆರಂಭವಾದ ಬೆನ್ನಲ್ಲೇ ಶೀರೂರು ಶ್ರೀಗಳು ಹೈಕೋರ್ಟ್ ನಿಂದ ಕೇವಿಯಟ್ ತಂದಿದ್ದಾರೆ.

    ಶೀರೂರು ಶ್ರೀ ಸನ್ಯಾಸ ಧರ್ಮವನ್ನು ಪಾಲನೆ ಮಾಡದ ಕಾರಣ ಶೀರೂರು ಸ್ವಾಮೀಜಿ ಶಿಷ್ಯ ಸ್ವೀಕಾರ ಮಾಡಬೇಕು ಅನ್ನೋದು ಇತರ ಮಠಾಧೀಶರ ಅಭಿಪ್ರಾಯವಾಗಿತ್ತು.

    ಅನಾರೋಗ್ಯ ಸಂದರ್ಭದಲ್ಲಿ ಶೀರೂರು ಸ್ವಾಮೀಜಿ, ತಮ್ಮ ಪಟ್ಟದ ದೇವರನ್ನು ಅದಮಾರು ಕಿರಿಯ ಸ್ವಾಮೀಜಿಯ ವಶಕ್ಕೆ ನೀಡಿದ್ದರು. ಆದರೆ ಪಟ್ಟದ ದೇವರು ಈಗ ಕೃಷ್ಣಮಠದಲ್ಲಿದೆ. ಪರ್ಯಾಯ ಪಲಿಮಾರು ಸ್ವಾಮೀಜಿ ಪೂಜೆ ನಡೆಸುತ್ತಿದ್ದಾರೆ. ಶೀರೂರು ಸ್ವಾಮೀಜಿ ಶಿಷ್ಯ ಸ್ವೀಕಾರ ಮಾಡದಿದ್ದರೆ ಪಟ್ಟದ ದೇವರನ್ನು ನೀಡಬಾರದು ಎಂದು ಇತರ ಮಠಾಧೀಶರು ತೀರ್ಮಾನಿಸಿದ್ದರು.

    ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅಷ್ಟಮಠಾಧೀಶರು ನ್ಯಾಯಾಲಯದ ಮೊರೆ ಹೋಗಬಹುದು ಎಂಬ ಹಿನ್ನೆಲೆಯಲ್ಲಿ ಶೀರೂರು ಸ್ವಾಮೀಜಿ ಈ ಕೇವಿಯಟ್ ತಂದಿದ್ದಾರೆ. ತನ್ನನ್ನು ವಿಶ್ವಾಸಕ್ಕೆ ಪಡೆಯದೆ ನ್ಯಾಯಾಲಯ ಈ ಕುರಿತು ಯಾವುದೇ ತೀರ್ಮಾನ ಕೈಗೊಳ್ಳಬಾರದು ಎಂಬ ಕಾರಣಕ್ಕೆ ಈ ಕಾನೂನು ಪ್ರಕ್ರಿಯೆ ನಡೆಸಲಾಗಿದೆ ಎಂದು ಸ್ವಾಮೀಜಿ ಹೇಳಿದ್ದಾರೆ. ಅಷ್ಟ ಮಠಾಧೀಶರು ಮತ್ತೊಮ್ಮೆ ಸಭೆ ಸೇರಿ ಪಟ್ಟದ ದೇವರ ಹಸ್ತಾಂತರ ವಿಚಾರದಲ್ಲಿ ತೀರ್ಮಾನ ಕೈಗೊಳ್ಳುವುದು ಬಾಕಿಯಿದೆ.

    ಕೇವಿಯಟ್ ಎಂದರೇನು?
    ನಮ್ಮ ಅಹವಾಲನ್ನು ಕೇಳದೇ ಯಾವುದೇ ಆದೇಶ ನೀಡಬೇಡಿ ಎಂದು ಕೋರ್ಟ್‍ಗೆ ಮನವಿ ಮಾಡುವುದನ್ನು ಕೇವಿಯಟ್ ಎನ್ನಲಾಗುತ್ತದೆ. ಒಂದು ವಿಚಾರದಲ್ಲಿ ಬೇರೊಬ್ಬರು ಅರ್ಜಿ ಸಲ್ಲಿಸಿದಾಕ್ಷಣ, ಅವರ ವಾದ ಕೇಳಿ ಯಾವ ಆದೇಶವನ್ನೂ ನೀಡಬಾರದು. ಅಲ್ಲದೇ ನಮ್ಮ ವಾದಕ್ಕೂ ಮನ್ನಣೆ ನೀಡಬೇಕು. ಆ ಬಳಿಕವಷ್ಟೇ ಆದೇಶ ಹೊರಡಿಸಿ ಎಂದು ಕೇಳಿಕೊಳ್ಳುವುದೇ ಕೇವಿಯಟ್ ಆಗಿದೆ.

  • ಶಿಷ್ಯನನ್ನು ಸ್ವೀಕರಿಸೋವರೆಗೂ ಶೀರೂರು ಶ್ರೀಗಳಿಗೆ ಪಟ್ಟದ ದೇವರು ಕೊಡಬಾರದು: ಉಡುಪಿ ಅಷ್ಟಮಠಾಧೀಶರ ಪಟ್ಟು

    ಶಿಷ್ಯನನ್ನು ಸ್ವೀಕರಿಸೋವರೆಗೂ ಶೀರೂರು ಶ್ರೀಗಳಿಗೆ ಪಟ್ಟದ ದೇವರು ಕೊಡಬಾರದು: ಉಡುಪಿ ಅಷ್ಟಮಠಾಧೀಶರ ಪಟ್ಟು

    ಉಡುಪಿ: ಉಡುಪಿ ಶೀರೂರು ಸ್ವಾಮೀಜಿ ಕಡ್ಡಾಯವಾಗಿ ಶಿಷ್ಯ ಸ್ವೀಕಾರ ಮಾಡಬೇಕು ಎಂಬ ವಿಚಾರದಲ್ಲಿ ಇತರ ಅಷ್ಟಮಠಾಧೀಶರು ಕೆಲವೊಂದು ನಿರ್ಣಯ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಶಿರೂರು ಮಠಾಧೀಶರ ಬಗ್ಗೆ ಕೆಲ ತಿಂಗಳ ಹಿಂದೆ ಆರಂಭವಾಗಿದ್ದ ಚರ್ಚೆ ಈಗ ಮತ್ತೊಮ್ಮೆ ಜೀವ ಪಡೆದುಕೊಂಡಿದೆ. ಭಾನುವಾರ ಸೇರಿದ ಐದು ಮಠಾಧೀಶರು ಸೇರಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದರೆ ಯಾವುದೇ ಅಂತಿಮ ತೀರ್ಮಾನಕ್ಕೆ ಬಂದಿಲ್ಲ ಎಂದು ಪರ್ಯಾಯ ಪಲಿಮಾರು ಮಠಾಧೀಶರು ತಿಳಿಸಿದ್ದಾರೆ.

    ಅಷ್ಟಮಠಾಧೀಶರು ಪಾಲಿಸಬೇಕಾದ ನಿಯಮಗಳನ್ನು ಶೀರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ ಪಾಲಿಸುತ್ತಿಲ್ಲ ಎಂಬ ಬಗ್ಗೆ ಕೆಲ ತಿಂಗಳ ಹಿಂದೆ ಆರೋಪ ಕೇಳಿಬಂದಿತ್ತು. ಇದೇ ಸಂದರ್ಭದಲ್ಲಿ ಶೀರೂರು ಸ್ವಾಮೀಜಿಯವರಿಗೆ ಅನಾರೋಗ್ಯವಾಗಿದೆ. ಈ ಸಂದರ್ಭ ದಿನನಿತ್ಯ ಪೂಜೆ ಮಾಡುವ ಪಟ್ಟದ ದೇವರನ್ನು ಕೃಷ್ಣಮಠದಲ್ಲಿ ಇರಿಸಿದ್ದರು. ಅಂದಿನಿಂದ ಪರ್ಯಾಯ ಪೀಠದಲ್ಲಿರುವ ಪಲಿಮಾರು ಸ್ವಾಮೀಜಿ ಪಟ್ಟದ ದೇವರಿಗೆ ಪೂಜೆ ನಡೆಸುತ್ತಿದ್ದಾರೆ.

    ಈಗ ಶೀರೂರು ಸ್ವಾಮೀಜಿ ಗುಣಮುಖರಾಗಿದ್ದು, ಪಟ್ಟದ ದೇವರನ್ನು ವಾಪಸ್ ಕೇಳುತ್ತಿದ್ದಾರೆ. ಆದರೆ ಉಳಿದ ಏಳು ಮಠಾಧೀಶರು ಶೀರೂರು ಶ್ರೀಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ತನಕ ಪಟ್ಟದ ದೇವರನ್ನು ಶೀರೂರು ಸ್ವಾಮೀಜಿಗೆ ಕೊಡಬಾರದು ಎಂದು ನಿರ್ಧರಿಸಿದ್ದಾರೆ.

    ಪೇಜಾವರ ಸ್ವಾಮೀಜಿ ನೇತೃತ್ವದಲ್ಲಿ ಇನ್ನೊಮ್ಮೆ ಸಭೆ ಸೇರಿ ಶಿಷ್ಯ ಸ್ವೀಕಾರದ ಬಗ್ಗೆ ಸರಿಯಾದ ತೀರ್ಮಾನ ಕೈಗೊಳ್ಳುತ್ತೇವೆ. ಅಷ್ಟಮಠಾಧೀಶರಲ್ಲಿ ಬಹುಮತದ ತೀರ್ಮಾನವೇ ಅಂತಿಮ ಎಂದು ಪರ್ಯಾಯ ಪಲಿಮಾರು ಸ್ವಾಮೀಜಿ ತಿಳಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಶೀರೂರು ಸ್ವಾಮೀಜಿಯ ಶಿಷ್ಯ ಸ್ವೀಕಾರದ ಕುರಿತು ಚರ್ಚೆ ಆರಂಭವಾಗಿತ್ತು. ಇದೀಗ ಮತ್ತೆ ಚರ್ಚೆ ಆರಂಭವಾಗಿದೆ. ಶೀರೂರು ಸ್ವಾಮೀಜಿ ಕಡ್ಡಾಯವಾಗಿ ಶಿಷ್ಯ ಸ್ವೀಕಾರ ಮಾಡಬೇಕೆಂಬ ವಿಚಾರಕ್ಕೆ ಮತ್ತೆ ಜೀವ ಬಂದಿದೆ.

    ಯಾರು ಪರ್ಯಾಯ ಸ್ವೀಕರಿಸುತ್ತಾರೋ ಆ ಶ್ರೀಗಳೇ ಎರಡು ವರ್ಷಗಳ ಪಟ್ಟದ ದೇವರಿಗೆ ಪೂಜೆ ಮಾಡಬೇಕೆಂಬ ನಿಯಮವಿದೆ. ಒಂದು ವೇಳೆ ಈ ಅವಧಿಯಲ್ಲಿ ಶ್ರೀಗಳು ಅನಾರೋಗ್ಯಕ್ಕೆ ಒಳಗಾದರೆ ಅವರ ಶಿಷ್ಯ ಪೂಜೆ ಮಾಡಬೇಕಾಗುತ್ತದೆ.

  • ದೈವದ ನುಡಿಗೆ ತಲೆಬಾಗಿ ಚುನಾವಣಾ ಕಣದಿಂದ ಹಿಂದೆ ಸರಿದ ಶೀರೂರು ಸ್ವಾಮೀಜಿ

    ದೈವದ ನುಡಿಗೆ ತಲೆಬಾಗಿ ಚುನಾವಣಾ ಕಣದಿಂದ ಹಿಂದೆ ಸರಿದ ಶೀರೂರು ಸ್ವಾಮೀಜಿ

    ಉಡುಪಿ: ಇಲ್ಲಿನ ಶೀರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಈ ಬಾರಿ ಚುನಾವಣಾ ಕಣಕ್ಕೆ ಇಳಿದಿದ್ದು ದೊಡ್ಡ ಸುದ್ದಿಯಾಗಿತ್ತು. ಬಿಜೆಪಿ-ಕಾಂಗ್ರೆಸ್ ಗೆ ಸ್ವಾಮೀಜಿ ಸ್ಪರ್ಧೆ ಕೊಂಚ ಆತಂಕವನ್ನು ಸೃಷ್ಟಿಸಿತ್ತು. ಇದೀಗ ಶೀರೂರು ಸ್ವಾಮೀಜಿ ಕಣದಿಂದ ಹಿಂದೆ ಸರಿದಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ಬೆಂಬಲ ಕೊಡಲು ನಾಮಪತ್ರ ವಾಪಾಸ್ ಪಡೆದಿರುವುದಾಗಿ ಉಡುಪಿ ಶೀರೂರು ಸ್ವಾಮೀಜಿ ಹೇಳಿಕೊಂಡಿದ್ದರು. ಆದರೆ ಸ್ವಾಮೀಜಿ ಚುನಾವಣಾ ಕಣದಿಂದ ಹಿಂದೆ ಸರಿಯಲು ಕಾರಣ ಸ್ವಾಮೀಜಿಗೆ ದೈವ ಕೊಟ್ಟ ನುಡಿ ಎಂದು ತಿಳಿದುಬಂದಿದೆ.

    ಕೊಡಮಣಿತ್ತಾಯ, ರಾಜನ್ ದೈವ, ಬ್ರಹ್ಮ ಬೈದರ್ಕಳ ದೈವಕ್ಕೆ ನರ್ತನ ಸೇವೆ ನೀಡಿದ್ದರು. ಕೋಲ ಸೇವೆಯ ಕೊನೆಗೆ ಯಜಮಾನನ ಮುಂದೆ ನುಡಿ ಕೊಡುವುದು ಸಂಪ್ರದಾಯ. ಕೋಲ ಮಾಡಿಸಿದ ವ್ಯಕ್ತಿ, ಊರಿನ ಜನರು ಮನಸ್ಸಿನ ಇಷ್ಟಾರ್ಥಗಳನ್ನು ಪ್ರಶ್ನೆ ರೂಪದಲ್ಲಿ ಇಡುತ್ತಾರೆ. ಇದಕ್ಕೆ ದೈವದಿಂದ ಉತ್ತರ ರೂಪದ ಪರಿಹಾರ ಕೇಳುತ್ತಾರೆ. ಸ್ವಾಮೀಜಿ ಈ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದೇನೆ. ನಿನ್ನ ಮನಸ್ಸಿನ ಇಚ್ಛೆ ಏನು ಎಂದು ಕೇಳಿದ್ದಾರೆ. ಈ ಸಂದರ್ಭದಲ್ಲಿ ದೈವ ಸಕಾರಾತ್ಮಕ ಉತ್ತರ ನೀಡಿಲ್ಲ. ಆದ್ದರಿಂದ ಆಶೀರ್ವದಿಸುವ ಕೈ ಜನರ ಮುಂದೆ ಯಾಚನೆ ಮಾಡಬಾರದು. ಇದು ಶೋಭೆಯಲ್ಲ ಅಂತ ದೈವ ನುಡಿ ಕೊಟ್ಟಿದೆ. ಅದರಂತೆ ಸ್ವಾಮೀಜಿ ಕಣದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

    ಇದರ ಜೊತೆ ಪ್ರಧಾನಿ ಮೋದಿಯವರ ಚಿಂತನೆ ಬೆಂಬಲಿಸುವ ಶ್ರೀಗಳು ಕಣದಿಂದ ಒಂದು ಕಾಲು ಹಿಂದಿಟ್ಟಿದ್ದಾರೆ. ದೈವದ ನುಡಿಯನ್ನು ಕರಾವಳಿಯಲ್ಲಿ ಯಾರೂ ಮೀರುವುದಿಲ್ಲ. ಶೀರೂರು ಸ್ವಾಮೀಜಿಗೂ ದೈವ-ದೇವರ ಮೇಲೆ ಅಪಾರ ನಂಬಿಕೆಯಿದೆ. ಹೀಗಾಗಿ ಸ್ವಾಮೀಜಿ ಚುನಾವಣೆಗೆ ಮುನ್ನ ಬ್ರಹ್ಮ ಬೈದರ್ಕಳ ದೈವದ ಕೋಲ ಸೇವೆ ಮಾಡಿಸಿ ನುಡಿಯನ್ನು ಅಪೇಕ್ಷಿಸಿದ್ದಾರೆ. ಈ ಸ್ವಾರಸ್ಯಕರ ಕಾರಣ ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

    ಶೀರೂರು ಶ್ರೀಗಳು ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಅವರು ನಂಬುವ ದೈವಗಳೂ ಕೂಡ ಬೇಡ ಎಂದಿದ್ದವು ಎಂಬ ಕುತೂಹಲಕಾರಿ ಅಂಶ ಈಗ ಬೆಳಕಿಗೆ ಬಂದಿದೆ. ಶೀರೂರು ಶ್ರೀಗಳು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವುದಾಗಿ ಘೋಷಿಸಿದ ನಂತರ, ತಮ್ಮ ಮಠದಲ್ಲಿ 3 ದಿನಗಳ ದೈವಗಳ ಕೋಲವನ್ನು ವಿಜೃಂಭಣೆಯಿಂದ ಆಯೋಜಿಸಿದ್ದರು.

    ಈ ಸಂದರ್ಭದಲ್ಲಿ ಸ್ವಾಮೀಜಿ, ತಾವು ಚುನಾವಣೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿಸಿದ್ದೇವೆ. ತಮ್ಮನ್ನು ಗೆಲ್ಲಿಸಿಕೊಡುತ್ತೀರಾ ಎಂದು ದೈವಗಳನ್ನು ಕೇಳಿದ್ದರು. ಅದಕ್ಕೆ ದೈವಗಳು ನೀಡಿದ ಉತ್ತರ ಅಷ್ಟೇನೂ ಆಶಾದಾಯಕವಾಗಿರಲಿಲ್ಲ. ಸ್ವಾಮಿಗಳೇ ನೀವು ದೇವರಿಗಿಂತ ಒಂದು ಪಟ್ಟ ಕೆಳಗಿದ್ದೀರಿ, ಮಠಾಧೀಶರ ಪಟ್ಟ ಶ್ರೇಷ್ಟವಾದ ಪಟ್ಟ. ಅದನ್ನು ಬಿಟ್ಟು ನಿಮ್ಮನ್ನು ಇನ್ನೂ ಕೆಳಗಿನ ಪಟ್ಟದಲ್ಲಿ ನೋಡುವುದಕ್ಕೆ ನಾವು ಇಷ್ಟಪಡುವುದಿಲ್ಲ. ನೀವು ಈಗಿರುವ ಪಟ್ಟವನ್ನು ಬಿಟ್ಟು ಕೆಳಗಿನ ಪಟ್ಟಕ್ಕೆ ಇಳಿಯುವುದಕ್ಕೆ ಹೊರಟರೆ ನಾವು ನಿಮಗೆ ಬೆಂಬಲ ಕೊಡುವುದಿಲ್ಲ ಎಂದು ದೈವ ಹೇಳಿತ್ತು ಎಂದು ಕೋಲದ ಸಂದರ್ಭದಲ್ಲಿ ಉಪಸ್ಥಿತರಿದ್ದವರು ಮಾತಾಡಿಕೊಳ್ಳುತ್ತಿದ್ದಾರೆ.