Tag: ಶುಭಮನ್ ಗಿಲ್

  • Ind vs Aus T20I | ಮೊದಲ ಪಂದ್ಯ ಮಳೆಯಾಟಕ್ಕೆ ಬಲಿ – ಭಾರತಕ್ಕೆ ನಿರಾಸೆ

    Ind vs Aus T20I | ಮೊದಲ ಪಂದ್ಯ ಮಳೆಯಾಟಕ್ಕೆ ಬಲಿ – ಭಾರತಕ್ಕೆ ನಿರಾಸೆ

    ಕ್ಯಾನ್ಬೆರಾ: ಭಾರತ ಮತ್ತು ಆಸ್ಟ್ರೇಲಿಯಾ (Ind vs AUS) ನಡುವಿನ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಮಳೆಯಾಟವೇ ಮೇಲಾಗಿದೆ. ನಿರಂತರ ಮಳೆ (Rain) ಸುರಿಯುತ್ತಿದ್ದ ಕಾರಣ ಇಂದಿನ ಪಂದ್ಯವನ್ನ ರದ್ದುಗೊಳಿಸಲಾಗಿದೆ.

    ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 5 ಪಂದ್ಯಗಳ ಟಿ20 ಸರಣಿ ಇಂದಿನಿಂದ ಶುರುವಾಗಿದ್ದು, ಮೊದಲ ಪಂದ್ಯ ಮಳೆಗೆ ಬಲಿಯಾಗಿದೆ. ಕ್ಯಾನ್ಬೆರಾದ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 35 ರನ್‌ಗಳಿಗೆ 5 ವಿಕೆಟ್‌ ಕಳೆದುಕೊಂಡಿತು. 5 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 43 ರನ್‌ ಗಳಿಸಿದ್ದಾಗ ಮೊದಲ ಬಾರಿಗೆ ಮಳೆ ಶುರುವಾಯ್ತು. ಕೆಲ ಕಾಲ ಬಿಡುವು ಕೊಟ್ಟಿತ್ತು. ಇದನ್ನೂ ಓದಿ: ಆಸೀಸ್‌ ವಿರುದ್ಧ 2 ಸಿಕ್ಸರ್‌ ಸಿಡಿಸಿ ವಿಶೇಷ ದಾಖಲೆ ಬರೆದ ಸೂರ್ಯ

    ಮತ್ತೆ ಬ್ಯಾಟಿಂಗ್‌ ಶುರು ಮಾಡಿದ ಗಿಲ್‌, ಸೂರ್ಯಕುಮಾರ್‌ ಯಾದವ್‌ (Suryakumar Yadav) ಜೋಡಿ ಆಸೀಸ್‌ ಬೌಲರ್‌ಗಳನ್ನು ಬೆಂಡೆತ್ತಲು ಶುರು ಮಾಡಿತು. 10ನೇ ಓವರ್‌ನ ಮೊದಲ 4 ಎಸೆತಗಳಲ್ಲೇ ವೇಗಿ ನಾಥನ್‌ ಎಲ್ಲಿಸ್‌ಗೆ ಸೂರ್ಯ 15 ರನ್‌ ಬಾರಿಸಿದ್ದರು. ಇದರೊಂದಿಗೆ ಭಾರತ ಬೃಹತ್‌ ಮೊತ್ತ ಪೇರಿಸುವ ನಿರೀಕ್ಷೆಯಲ್ಲಿತ್ತು. ಅಲ್ಲದೇ ಪಂದ್ಯ ಗೆಲ್ಲುವ ವಿಶ್ವಾಸವೂ ಇತ್ತು. ಆದ್ರೆ ಮಳೆಯ ಬಿಡುವುಕೊಡದ ಹಿನ್ನೆಲೆ ಪಂದ್ಯವನ್ನು ಯಾವುದೇ ಫಲಿತಾಂಶವಿಲ್ಲದೇ ರದ್ದುಗೊಳಿಸಲಾಯಿತು. ಅಕ್ಟೋಬರ್‌ 31ರ ಶುಕ್ರವಾರ ಮೆಲ್ಬರ್ನ್‌ ಕ್ರೀಡಾಂಗಣದಲ್ಲಿ 2ನೇ ಟಿ20 ಪಂದ್ಯ ನಡೆಯಲಿದೆ. ಇದನ್ನೂ ಓದಿ: ICC ODI Rankings | ನಿವೃತ್ತಿ ವದಂತಿ ನಡುವೆಯೂ ನಂ.1 ಪಟ್ಟಕ್ಕೇರಿದ ಹಿಟ್‌ಮ್ಯಾನ್‌

    ಭಾರತದ ಪರ ಆರಂಭಿಕ ಅಭಿಷೇಕ್‌ ಶರ್ಮಾ 19 ರನ್‌ ಗಳಿಸಿ ಔಟಾದ್ರೆ, ನಾಯಕ ಸೂರ್ಯಕುಮಾರ್‌ ಯಾದವ್‌ 39 ರನ್‌ (24 ಎಸೆತ, 2 ಸಿಕ್ಸರ, 3 ಬೌಂಡರಿ), ಶುಭಮನ್‌ ಗಿಲ್‌ 37 ರನ್‌ (20 ಎಸೆತ, 1 ಸಿಕ್ಸರ್‌, 4 ಬೌಂಡರಿ) ಗಳಿಸಿ ಅಜೇಯರಾಗುಳಿದರು.

  • ರೋ-ಕೊ ಆರ್ಭಟಕ್ಕೆ ಕಾಂಗರೂ ಪಡೆ ಕಂಗಾಲು – ವೈಟ್‌ವಾಶ್‌ನಿಂದ ಪಾರು, ಭಾರತಕ್ಕೆ 9 ವಿಕೆಟ್‌ಗಳ ಭರ್ಜರಿ ಜಯ

    ರೋ-ಕೊ ಆರ್ಭಟಕ್ಕೆ ಕಾಂಗರೂ ಪಡೆ ಕಂಗಾಲು – ವೈಟ್‌ವಾಶ್‌ನಿಂದ ಪಾರು, ಭಾರತಕ್ಕೆ 9 ವಿಕೆಟ್‌ಗಳ ಭರ್ಜರಿ ಜಯ

    ಸಿಡ್ನಿ: ಹಿಟ್‌ ಮ್ಯಾನ್‌ ರೋಹಿತ್‌ ಶರ್ಮಾ (Rohit Sharma) ಅಮೋಘ ಶತಕ, ಕಿಂಗ್‌ ಕೊಹ್ಲಿಯ (Virat Kohli) ಆಕರ್ಷಕ ಅರ್ಧಶತಕದ ಬ್ಯಾಟಿಂಗ್‌ ನೆರವಿನಿಂದ ಆಸ್ಟ್ರೇಲಿಯಾ ವಿರುದ್ಧ ಭಾರತ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವೈಟ್‌ವಾಶ್‌ ಆಗುವುದನ್ನ ತಪ್ಪಿಸಿಕೊಂಡಿದೆ.

    ಸಿಡ್ನಿ ಅಂಗಳದಲ್ಲಿಂದು ನಡೆದ ಏಕದಿನ ಸರಣಿಯ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಮೊದಲು ಬ್ಯಾಟ್‌ಮಾಡಿದ ಆಸ್ಟ್ರೇಲಿಯಾ (Australia) 46.4 ಓವರ್‌ಗಳಲ್ಲಿ 236 ರನ್‌ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಭಾರತ ಕೇವಲ 38.3 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 237 ರನ್‌ ಗಳಿಸಿ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

    ಚೇಸಿಂಗ್‌ ಆಂಭಿಸಿದ ಭಾರತ 10.2 ಓವರ್‌ಗಳಲ್ಲಿ 69 ರನ್‌ ಗಳಿಗೆ ಮೊದಲ ವಿಕೆಟ್‌ ಕಳೆದುಕೊಂಡಿತ್ತು. ಬೃಹತ್‌ ಮೊತ್ತ ಪೇರಿಸುವ ಉತ್ಸಾಹದಲ್ಲಿದ್ದ ಕ್ಯಾಪ್ಟನ್‌ ಶುಭಮನ್‌ ಗಿಲ್‌ 26 ಎಸೆತಗಳಲ್ಲಿ 24 ರನ್‌ ಗಳಿಸಿ ಪೆವಿಲಿಯನ್‌ ಸೇರಿಸಿಕೊಂಡರು. ಬಳಿಕ ಜೊತೆಗೂಡಿದ ವಿರಾಟ್‌ ಕೊಹ್ಲಿ – ರೋಹಿತ್‌ ಶರ್ಮಾ ಕೊನೆಯವರೆಗೂ ವಿಕೆಟ್‌ ಬಿಟ್ಟುಕೊಡದೇ ತಂಡವನ್ನು ಗೆಲುವಿನ ದಡ ಸೇರಿಸಿದರು. ಮುರಿಯದ 2ನೇ ವಿಕೆಟ್‌ಗೆ ಈ ಜೋಡಿ 170 ಎಸೆತಗಳಲ್ಲಿ 168 ರನ್‌ ಕಲೆಹಾಕಿತು.

    ರೊಹಿತ್‌ ಬೊಂಬಾಟ್‌ ಶತಕ
    ಆರಂಭಿಕನಾಗಿ ಕಣಕ್ಕಿಳಿದ 38 ವರ್ಷ ವಯಸ್ಸಿನ ರೋಹಿತ್‌ ಶರ್ಮಾ ಕೊನೆಯವರೆಗೂ ವಿಕೆಟ್‌ ಬಿಟ್ಟುಕೊಡದೇ ಅಜೇಯ 121‌ ರನ್‌ (125 ಎಸೆತ, 13 ಬೌಂಡರಿ, 3 ಸಿಕ್ಸರ್)‌ ಗಳಿಸಿದ್ರೆ, ವಿರಾಟ್‌ ಕೊಹ್ಲಿ ಅಜೇಯ 74 ರನ್‌ (81 ಎಸೆತ, 7 ಬೌಂಡರಿ) ಚಚ್ಚಿದರು. ಆಸೀಸ್‌ ಪರ ಜೋಶ್‌ ಹೇಜಲ್ವುಡ್‌ ಒಂದು ವಿಕೆಟ್‌ ಪಡೆದರು.

    ಮೊದಲು ಟಾಸ್‌ ಗೆದ್ದ ಆಸ್ಟ್ರೇಲಿಯಾ ಬೃಹತ್‌ ಮೊತ್ತ ಪೇರಿಸುವ ಉತ್ಸಾಹದಿಂದ ಬ್ಯಾಟಿಂಗ್‌ ಆಯ್ದುಕೊಂಡಿತು. ಮೊದಲ ವಿಕೆಟ್‌ಗೆ ಟ್ರಾವಿಸ್‌ ಹೆಡ್‌ ಹಾಗೂ ಮಿಚೆಲ್‌ ಮಾರ್ಷ್‌ ಜೋಡಿ 9.2 ಓವರ್‌ಗಳಲ್ಲಿ 61 ರನ್‌ ಕಲೆಹಾಕಿತ್ತು. ಈ ವೇಳೆ ಡೇಂಜರಸ್‌ ಬ್ಯಾಟರ್‌ ಟ್ರಾವಿಸ್‌ ಆಟಕ್ಕೆ ಸಿರಾಜ್‌ ಬ್ರೇಕ್‌ ಹಾಕಿದರು. ನಂತರದಲ್ಲಿ ಮ್ಯಾಟ್ ರೆನ್ಶಾ ಅರ್ಧಶತಕ ಗಳಿಸಿದ್ದು ಬಿಟ್ಟರೆ, ಉಳಿದ ಆಟಗಾರರು ಅಲ್ಪಮೊತ್ತಕ್ಕೆ ಪೆವಿಲಿಯನ್‌ ಸೇರಿಕೊಂಡರು. ಹೀಗಾಗಿ ಆಸ್ಟ್ರೇಲಿಯಾ 46.4 ಓವರ್‌ಗಳಲ್ಲೇ 236 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡಿತು.

    ಆಸ್ಟ್ರೇಲಿಯಾ ಪರ ನಾಯಕ ಮಿಚೆಲ್‌ ಮಾರ್ಷ್‌ 41 ರನ್‌, ಟ್ರಾವಿಸ್‌ ಹೆಡ್‌ 29 ರನ್‌, ಮ್ಯಾಥಿವ್‌ ಶಾರ್ಟ್‌ 30 ರನ್‌, ಮ್ಯಾಟ್‌ ರೆನ್‌ಶಾ 56 ರನ್‌ (58 ಎಸೆತ, 2 ಬೌಂಡರಿ), ಅಲೆಕ್ಸ್‌ ಕ್ಯಾರಿ 24 ರನ್‌, ಕೂಪರ್‌ ಕಾನ್ನೋಲ್ಲಿ 23 ರಮ್‌, ಮಿಚೆಲ್‌ ಓವೆನ್‌ 1 ರನ್‌, ಮಿಚೆಲ್‌ ಸ್ಟಾರ್ಕ್‌ 2 ರನ್‌, ನಥಾನ್‌ ಎಲ್ಲಿಸ್‌ 16 ರನ್‌, ಆಡಂ ಝಂಪಾ ಅಜೇಯ 2 ರನ್‌ ಗಳಿಸಿದ್ರೆ ಜೋಶ್‌ ಹ್ಯಾಜಲ್‌ವುಡ್‌ ಶೂನ್ಯ ಸುತ್ತಿದರು.

    ಟೀಂ ಇಂಡಿಯಾ ಪರ ಹರ್ಷಿತ್‌ ರಾಣಾ 4 ವಿಕೆಟ್‌ ಕಿತ್ತರೆ, ಮೊಹಮ್ಮದ್‌ ವಾಷಿಂಗ್ಟನ್‌ ಸುಂದರ್‌ 2 ವಿಕೆಟ್‌, ಸಿರಾಜ್‌, ಪ್ರಸಿದ್ಧ್‌ ಕೃಷ್ಣ, ಕುಲ್ದೀಪ್‌ ಯಾದವ್‌, ಅಕ್ಷರ್‌ ಪಟೇಲ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • ಗಿಲ್‌ ಪಡೆ ಮೇಲೆ ಕ್ಲೀನ್‌ ಸ್ವೀಪ್‌ ತೂಗುಗತ್ತಿ – ಇಂದೇ ಗುಡ್‌ಬೈ ಹೇಳ್ತಾರಾ ರೋ-ಕೊ?

    ಗಿಲ್‌ ಪಡೆ ಮೇಲೆ ಕ್ಲೀನ್‌ ಸ್ವೀಪ್‌ ತೂಗುಗತ್ತಿ – ಇಂದೇ ಗುಡ್‌ಬೈ ಹೇಳ್ತಾರಾ ರೋ-ಕೊ?

    – ದಿಗ್ಗಜರಿಗೆ ಗೆಲುವಿನ ವಿದಾಯ ಸಿಗುತ್ತಾ?

    ಸಿಡ್ನಿ: ಮಾಜಿ ನಾಯಕರಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಆಸೀಸ್ ನೆಲದಲ್ಲಿ ವೃತ್ತಿಜೀವನದ ಕೊನೇ ಪಂದ್ಯಕ್ಕೆ ಸಜ್ಜಾಗಿದ್ದು ಎಂಬ ಮಾತುಗಳು ಕೇಳಿಬಂದಿದ್ದು, ಇಂದೇ ನಿವೃತ್ತಿ ಘೋಷಿಸುವ ಸಾಧ್ಯತೆಗಳೂ ಇವೆ ಎನ್ನಲಾಗುತ್ತಿದೆ. ಈ ಇಬ್ಬರು ದಿಗ್ಗಜರಿಗೆ ಪಂದ್ಯವನ್ನು ಸ್ಮರಣೀಯವನ್ನಾಗಿಸುವ ಸವಾಲು ಶುಭಮಾನ್ ಗಿಲ್ ಬಳಗದ ಮುಂದಿದೆ.

    ಹಿಂದೆಂದೂ ಆಸೀಸ್‌ಗೆ ಕ್ಲೀನ್‌ಸ್ವೀಪ್ ಸಾಧಿಸಲು ಅವಕಾಶ ನೀಡದ ಭಾರತ ಈಗ ಆ ಭೀತಿಯಲ್ಲಿದೆ. ಸಿಡ್ನಿ (Sydney) ಅಂಗಳದಲ್ಲಿಂದು ನಡೆಯಲಿರುವ ಅತಿಥೇಯ ಆಸ್ಟ್ರೇಲಿಯಾ ವಿರುದ್ಧದ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತ ತಂಡ, ಏಕದಿನ ಸರಣಿ (ODI series) ವೈಟ್‌ವಾಷ್‌ನಿಂದ ಪಾರಾಗುವ ಕಠಿಣ ಪರೀಕ್ಷೆ ಎದುರಿಸಲಿದೆ.

    ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಸತತ 2 ಪಂದ್ಯ ಗೆದ್ದು ಸರಣಿ ತನ್ನದಾಗಿಸಿಕೊಂಡಿರುವ ಆಸಿಸ್‌ಗೆ ಇದು ಆಟಕ್ಕುಂಟು ಲೆಕ್ಕಕ್ಕಿಲದ ಪಂದ್ಯವಾಗಿದೆ. ಚೊಚ್ಚಲ ಬಾರಿಗೆ ದ್ವಿಪಕ್ಷೀಯ ಸರಣಿಯಲ್ಲಿ ಭಾರತ ಎದುರು ಕ್ಲೀನ್‌ ಸ್ವೀಪ್ ಸಾಧಿಸಲು ಹೋರಾಡಲಿದೆ. ರೋಹಿತ್- ಕೊಹ್ಲಿ ಆಸೀಸ್‌ನಲ್ಲಿ ಕೊನೆಯ ಬಾರಿಗೆ ಕಣಕ್ಕಿಳಿಯುವುದರ ಜೊತೆಗೆ ಸರಣಿ ಸೋಲಿನ ಅಂತರ ತಗ್ಗಿಸುವ ಒತ್ತಡ ಗಿಲ್ ಪಡೆಗಿದೆ.

    ಆಸ್ಟ್ರೇಲಿಯಾದಲ್ಲಿ ಮುಂದಿನ ಎರಡು ವರ್ಷ ಭಾರತ ಯಾವುದೇ ಏಕದಿನ ಸರಣಿ ಆಡದಿರುವುದರಿಂದ ರೋ-ಕೊ ಪಾಲಿಗೆ ಇದು ಆಸೀಸ್‌ನಲ್ಲಿ ಬಹುತೇಕ ಕೊನೇ ಪಂದ್ಯ ಎನಿಸಿದೆ.

    2007-08ರ ಕಾಮನ್ವೆಲ್ತ್ ಬ್ಯಾಂಕ್ ಸರಣಿಯಲ್ಲಿ ರೋಹಿತ್ ಮೊದಲ ಬಾರಿ ಅಸ್ಟ್ರೇಲಿಯಾ ಪ್ರವಾಸ ಕೈಗೊಂಡರೆ, ಕೊಹ್ಲಿ 2011-12ರ ಟೆಸ್ಟ್ ಸರಣಿಯ ಅಡಿಲೇಡ್ ಪಂದ್ಯದಲ್ಲಿ ಶತಕದೊಂದಿಗೆ ಗಮನಸೆಳೆದಿದ್ದರು. ಆಧುನಿಕ ಕ್ರಿಕೆಟ್‌ನ ದಿಗ್ಗಜ ಕೊಹ್ಲಿ ಸರಣಿಯ ಎರಡು ಪಂದ್ಯಗಳಲ್ಲಿ ಸತತ 2 ಶೂನ್ಯ ಸಂಪಾದನೆಯೊಂದಿಗೆ ನಿರಾಸೆ ಮೂಡಿಸಿದ್ದಾರೆ. ಟೆಸ್ಟ್ ನಾಯಕನಾಗಿ ಇಂಗ್ಲೆಂಡ್‌ನಲ್ಲಿ ರನ್ ಹೊಳೆ ಹರಿಸಿದ್ದ ಶುಭಮನ್ ಗಿಲ್, ಏಕದಿನದಲ್ಲಿ ವಿಲರಾಗಿದ್ದಾರೆ. ಎರಡು ಪಂದ್ಯಗಳಲ್ಲಿ ಕ್ರಮವಾಗಿ 10, 9 ರನ್ ಮಾತ್ರ ಕಲೆಹಾಕಿದ್ದಾರೆ. ಆರಂಭಿಕ ಸ್ಥಾನಕ್ಕೆ ಯಶಸ್ವಿ ಜೈಸ್ವಾಲ್‌ರಿಂದ ಪೈಪೋಟಿ ಎದುರಿಸುತ್ತಿರುವ ರೋಹಿತ್ ಶರ್ಮಾ, ಹಿಂದಿನ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ತುಸು ನಿರಾಳರಾಗಿದ್ದಾರೆ. ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್ ಹಾಗೂ ಕೆಎಲ್ ರಾಹುಲ್‌ರಿಂದ ಹೆಚ್ಚಿನ ರನ್‌ ಕೊಡುಗೆಯ ನಿರೀಕ್ಷೆ ಇದೆ.

    ಸಿಡ್ನಿಯಲ್ಲಿ ಭಾರತ ಇದುವರೆಗೆ ಅಡಿರುವ ಐದು ಪಂದ್ಯಗಳ ಪೈಕಿ 1ರಲ್ಲಿ ಮಾತ್ರ ಗೆದ್ದಿದೆ. ಇಂದಿನ ಪಂದ್ಯದಲ್ಲಿ ವೈಟ್‌ವಾಶ್‌ ತಪ್ಪಿಸಿಕೊಳ್ಳಲಾದ್ರೂ ಈ ಪಂದ್ಯ ಗೆಲ್ಲಲೇಬೇಕಿದೆ.

  • ವಿಂಡೀಸ್‌ 2-0 ವೈಟ್‌ವಾಶ್‌ – ಭಾರತಕ್ಕೆ 7 ವಿಕೆಟ್‌ಗಳ ಜಯ; ಗಿಲ್‌ ನಾಯಕತ್ವದಲ್ಲಿ ಮೊದಲ ಸರಣಿ ಗೆಲುವು

    ವಿಂಡೀಸ್‌ 2-0 ವೈಟ್‌ವಾಶ್‌ – ಭಾರತಕ್ಕೆ 7 ವಿಕೆಟ್‌ಗಳ ಜಯ; ಗಿಲ್‌ ನಾಯಕತ್ವದಲ್ಲಿ ಮೊದಲ ಸರಣಿ ಗೆಲುವು

    ನವದೆಹಲಿ: ಕೆ.ಎಲ್‌ ರಾಹುಲ್‌ (KL Rahul) ಅವರ ಅಮೋಘ ಅರ್ಧಶತಕದೊಂದಿಗೆ ಭಾರತ ವೆಸ್ಟ್‌ ಇಂಡೀಸ್‌ ವಿರುದ್ಧ 2ನೇ ಪಂದ್ಯದಲ್ಲಿ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ತವರಿನಲ್ಲಿ ನಡೆದ ಟೆಸ್ಟ್‌ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್‌ ಸ್ವೀಪ್‌ ಮಾಡಿಕೊಂಡಿದೆ. ವಿಶೇಷವೆಂದ್ರೆ 37ನೇ ಟೆಸ್ಟ್‌ ಕ್ಯಾಪ್ಟನ್‌ ಶುಭಮನ್‌ ಗಿಲ್‌ (Shubman Gill) ಅವರ ನಾಯಕತ್ವದಲ್ಲಿ ಭಾರತದ ತಂಡದ (Team India) ಮೊದಲ ಜಯ ಕೂಡ ಇದಾಗಿದೆ.

    ಇಲ್ಲಿನ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ 2ನೇ ಟೆಸ್ಟ್‌ ಪಂದ್ಯದಲ್ಲಿ ವಿಂಡೀಸ್‌ (West Indies) ಭಾರತಕ್ಕೆ ಸುಲಭ ತುತ್ತಾಯಿತು. 58 ರನ್‌ಗಳ ಅಲ್ಪ ಹಿನ್ನಡೆಯೊಂದಿಗೆ ಕೊನೆಯ ದಿನದ ಕ್ರೀಸ್‌ ಆರಂಭಿಸಿದ ಭಾರತ ಮತ್ತೆರಡು ವಿಕೆಟ್‌ಗಳನ್ನ ಕಳೆದುಕೊಂಡಿತು. ಆದ್ರೆ ಭಾರತದ ಪರ ಒಂದು ತುದಿಯಲ್ಲಿ ಗಟ್ಟಿಯಾಗಿ ನೆಲೆಯೂರಿದ ಕನ್ನಡಿಗ ಕೆಎಲ್ ರಾಹುಲ್ ತಂಡವನ್ನು ಜಯದ ದಡ ಸೇರಿಸುವಲ್ಲಿ ಯಶಸ್ವಿಯಾದರು. 108 ಎಸೆತಗಳನ್ನು ಎದುರಿಸಿದ ಅವರು 6 ಬೌಂಡರಿ ಮತ್ತು 2 ಸಿಕ್ಸರ್‌ನೊಂದಿಗೆ 58 ರನ್ ಗಳಿಸಿ ಅಜೇಯರಾಗಿ ಉಳಿದರು. ವಿಂಡೀಸ್ ಪರ ನಾಯಕ ರೋಸ್ಟನ್ ಚೇಸ್ 2 ವಿಕೆಟ್‌, ಜೋಮೆಲ್ ವಾರಿಕನ್ ಒಂದು ವಿಕೆಟ್‌ ಪಡೆದರು.

    ಇದಕ್ಕೂ ಮುನ್ನ ಏನಾಯ್ತು?
    ಮೊದಲ ಇನ್ನಿಂಗ್ಸ್‌ನಲ್ಲಿ ಟಾಸ್‌ ಗೆದ್ದ ಭಾರತ ತಂಡ ಬ್ಯಾಟಿಂಗ್‌ ಆಯ್ದುಕೊಂಡಿತ್ತು. 5 ವಿಕೆಟ್ ಕಳೆದುಕೊಂಡು 518 ರನ್‌ಗಳಿಗೆ ಡಿಕ್ಲೇರ್ ಮಾಡಿಕೊಂಡಿತ್ತು. ಇದಕ್ಕುತ್ತರವಾಗಿ ವಿಂಡೀಸ್ ಪ್ರಥಮ ಇನ್ನಿಂಗ್ಸ್ ನಲ್ಲಿ ಕೇವಲ 248 ರನ್ ಗಳನ್ನಷನ್ನೇ ಗಳಿಸಲು ಸಾಧ್ಯವಾಯಿತು. 270 ರನ್ ಗಳ ಪ್ರಥಮ ಇನ್ನಿಂಗ್ಸ್ ಮುನ್ನಡೆ ಪಡೆದಿದ್ದ ನಾಯಕ ಶುಭಮನ್ ಗಿಲ್ ಅವರು ವಿಂಡೀಸ್‌ಗೆ ಫಾಲೋ ಆನ್ ಹೇರಿದರು.

    ವಿಂಡೀಸ್ ತಂಡ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಪ್ರತಿಹೋರಾಟ ನೀಡಿ 390 ರನ್ ಗಳಿಸಿತಾದರೂ ಜಯದ ಗುರಿ ಕೇವಲ 120 ರನ್ ಗಳಾಗಿದ್ದರಿಂದ ಭಾರತಕ್ಕೆ ಸುಲಭ ತುತ್ತಾಯಿತು. ಪಂದ್ಯವನ್ನು 4ನೇ ದಿನದೊಳಗೇ ಮುಗಿಸುವ ಉತ್ಸಾಹವನ್ನು ಭಾರತ ಹೊಂದಿತ್ತು. ಆದ್ರೆ ಯಶಸ್ವಿ ಜೈಸ್ವಾಲ್ 8 ರನ್‌ಗಳಿಗೆ ವಿಕೆಟ್‌ ಒಪ್ಪಿಸಿದ ಬಳಿಕ ನಿಧಾನಗತಿಯ ಬ್ಯಾಟಿಂಗ್‌ಗೆ ಇಳಿಯಿತು.

    4ನೇ ದಿನಾಂತ್ಯಕ್ಕೆ 18 ಓವರ್ ಗಳಲ್ಲಿ ಒಂದು ವಿಕೆಟ್‌ಗೆ 63 ರನ್ ಗಳಿಸಿದ್ದ ಭಾರತ ತಂಡ 5ನೇ ದಿನ ಮೊದಲ ಅವಧಿಯಲ್ಲಿ 13 ಓವರ್ ಗಳಲ್ಲಿ ಗೆಲುವಿಗೆ ಅಗತ್ಯವಿದ್ದ ರನ್ ಗಳಿಸಿ ಪಂದ್ಯವನ್ನು ಗೆದ್ದುಕೊಂಡಿತು. ಕೆಎಲ್ ರಾಹುಲ್ ಅವರಿಗೆ ಉತ್ತಮ ಸಾಥ್ ನೀಡಿದ್ದ ಸಾಯಿ ಸುದರ್ಶನ್ 76 ಎಸೆತಗಳಲ್ಲಿ 39 ರನ್ ಗಳಿಸಿದ್ರೆ, ನಾಯಕ ಶುಭಮನ್ ಗಿಲ್ 13 ರನ್‌ ಔಟಾದ್ರೆ, ಧ್ರುವ್ ಜುರೆಲ್‌ 6 ರನ್‌ ಗಳಿಸಿ ಅಜೇಯರಾಗುಳಿದರು.

    ಸಂಕ್ಷಿಪ್ತ ಸ್ಕೋರ್
    * ಭಾರತ ಪ್ರಥಮ ಇನ್ನಿಂಗ್ಸ್ 518/5ಡಿ
    ವೆಸ್ಟ್ ಇಂಡೀಸ್ ಪ್ರಥಮ ಇನ್ನಿಂಗ್ಸ್ 248ಕ್ಕೆ ಆಲೌಟ್

    * ವೆಸ್ಟ್ ಇಂಡೀಸ್ ದ್ವಿತೀಯ ಇನ್ನಿಂಗ್ಸ್ 390ಕ್ಕೆ ಆಲೌಟ್
    ಭಾರತ ದ್ವಿತೀಯ ಇನ್ನಿಂಗ್ಸ್ 124/3

  • ದಿಲ್ಲಿಯಲ್ಲಿ ದರ್ಬಾರ್‌, ದಿಲ್‌ ಗೆದ್ದ ಗಿಲ್‌ – ಭಾರತದ ಹಿಡಿತದಲ್ಲಿ ಪಂದ್ಯ, ವಿಂಡೀಸ್‌ 140ಕ್ಕೆ 4 ವಿಕೆಟ್‌

    ದಿಲ್ಲಿಯಲ್ಲಿ ದರ್ಬಾರ್‌, ದಿಲ್‌ ಗೆದ್ದ ಗಿಲ್‌ – ಭಾರತದ ಹಿಡಿತದಲ್ಲಿ ಪಂದ್ಯ, ವಿಂಡೀಸ್‌ 140ಕ್ಕೆ 4 ವಿಕೆಟ್‌

    • 518ಕ್ಕೆ ಭಾರತ ಡಿಕ್ಲೇರ್‌

    ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್‌ ಪಂದ್ಯದ 2ನೇ ದಿನದಾಟದಲ್ಲಿ ಯಶಸ್ವಿ ಜೈಸ್ವಾಲ್ 173 ರನ್ ಗಳಿಸಿ ಕ್ರೀಸ್‌ಗೆ ಬಂದಾಗ, ನೆರೆದಿದ್ದ ಜನರೆಲ್ಲಾ ಅವರು ದ್ವಿಶತಕ ಗಳಿಸುವುದನ್ನ ನೋಡಲು ಕಾತರರಾಗಿದ್ದರು. ಆದ್ರೆ ಸಣ್ಣ ಎಡವಟ್ಟಿನಿಂದ ದ್ವಿಶತಕ ಗಳಿಸುವ ಅವಕಾಶದಿಂದ ವಂಚಿತರಾದರು. ಜೈಸ್ವಾಲ್‌ ಪೆವಿಲಿಯನ್‌ ಸೇರಿದ ಬಳಿಕ ನಾಯಕ ಗಿಲ್‌ ಶತಕದ ನೆರವಿನಿಂದ ಭಾರತ, ವೆಸ್ಟ್‌ ಇಂಡೀಸ್‌ ವಿರುದ್ಧ 518 ರನ್‌ಗೆ 5 ವಿಕೆಟ್‌ ಕಳೆದುಕೊಂಡು ಡಿಕ್ಲೇರ್‌ ಮಾಡಿಕೊಂಡಿತು.

    ಬಳಿಕ ತನ್ನ ಮೊದಲ ಇನ್ನಿಂಗ್ಸ್‌ ಶುರು ಮಾಡಿರುವ ವಿಂಡೀಸ್‌ ತಂಡ 2ನೇ ದಿನದ ಅಂತ್ಯಕ್ಕೆ 43 ಓವರ್‌ಗಳಲ್ಲಿ 140 ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡಿದೆ. ಟೆವಿನ್ ಇಮ್ಲಾಚ್ 14 ರನ್‌, ಶಾಯಿ ಹೋಪ್‌ 31 ರನ್‌ ಗಳಿಸಿ ಕ್ರೀಸ್‌ನಲ್ಲಿಂದು ಭಾನುವಾರ 3ನೇ ದಿನದ ಆಟ ಆರಂಭಿಸಲಿದ್ದಾರೆ. ಇದನ್ನೂ ಓದಿ: IPL Auction 2026 | ಡಿಸೆಂಬರ್‌ನಲ್ಲಿ ಮಿನಿ ಹರಾಜು – ರಿಟೇನ್‌ ಆಟಗಾರರ ಪಟ್ಟಿ ಪ್ರಕಟಿಸಲು ಡೆಡ್‌ಲೈನ್‌ ಫಿಕ್ಸ್‌!

    ದ್ವಿಶತಕ ಸನಿಹದಲ್ಲಿ ರನೌಟ್‌
    ಜೇಡನ್ ಸೀಲ್ಸ್ ಅವರ ಬೌಲಿಂಗ್‌ನಲ್ಲಿ ಮಿಡ್-ಆಫ್ ಕಡೆಗೆ ಚೆಂಡನ್ನು ತಳ್ಳಿ ಯಶಸ್ವಿ ಒಂದು ರನ್‌ಗಾಗಿ ಓಡಿದರು. ಆದರೆ, ಅರ್ಧ ದೂರ ಕ್ರಮಿಸುವ ವೇಳೆಗೆ ಇನ್ನೊಂದು ತುದಿಯಲ್ಲಿದ್ದ ನಾಯಕ ಶುಭಮನ್ ಗಿಲ್ ಸರಿಯಾಗಿ ಪ್ರತಿಕ್ರಿಯಿಸಲಿಲ್ಲ. ತಕ್ಷಣ ಎಚ್ಚೆತ್ತ ಟ್ಯಾಗನರೈನ್ ಚಂದ್ರಪಾಲ್ ತ್ವರಿತವಾಗಿ ಚೆಂಡನ್ನು ಹಿಡಿದು ವಿಕೆಟ್ ಕೀಪರ್ ಟೆವಿನ್ ಇಮ್ಲಾಕ್ ಎಸೆದರು. ಇಮ್ಲಾಕ್ ಸ್ಟಂಪ್ಸ್‌ಗಳನ್ನು ಉರುಳಿಸಿ ರನ್ ಔಟ್ ಮಾಡಿದರು. ನಾಯಕ ಶುಭಮನ್ ಗಿಲ್ ಅವರೊಂದಿಗಿನ ಗೊಂದಲಮಯ ಓಟದಿಂದಾಗಿ ಯಶಸ್ವಿ ಕೇವಲ 175 ರನ್‌ಗಳಿಗೆ ತಮ್ಮ ಆಟವನ್ನು ಮುಗಿಸಬೇಕಾಯಿತು. ದ್ವಿಶತಕದಿಂದ ವಂಚಿತರಾಗಿದ್ದಕ್ಕೆ ತೀವ್ರ ನಿರಾಶೆಗೊಂಡ ಯಶಸ್ವಿ ಜೈಸ್ವಾ, ತಮ್ಮ ಹಣೆಗೆ ಬಡಿದುಕೊಂಡು ಮೈದಾನದಿಂದ ಹೊರನಡೆದರು. ಇದನ್ನೂ ಓದಿ: ಮತ್ತೊಮ್ಮೆ ದ್ವಿಶತಕ ಸಿಡಿಸುವ ತವಕದಲ್ಲಿ ಜೈಸ್ವಾಲ್‌ -ಬೃಹತ್‌ ಮೊತ್ತದತ್ತ ಭಾರತ

    10ನೇ ಟೆಸ್ಟ್‌ ಶತಕ, ಒಂದೇ ವರ್ಷದಲ್ಲಿ 5 ಶತಕ
    ಇನ್ನೂ ಭಾರತ ಟೆಸ್ಟ್ ತಂಡದ ನಾಯಕ ಶುಭಮನ್‌ ಗಿಲ್, ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಂದು ತಮ್ಮ 10ನೇ ಟೆಸ್ಟ್ ಶತಕವನ್ನು ಭಾರಿಸಿ ರೆಕಾರ್ಡ್ ಮುರಿದಿದ್ದಾರೆ. 26 ವರ್ಷದ ಗಿಲ್, ನಾಯಕನಾಗಿ ತಮ್ಮ ಐದನೇ ಶತಕ ಗಳಿಸುವ ಮೂಲಕ ತಮ್ಮ ಬ್ಯಾಟಿಂಗ್‌ನಲ್ಲಿ ಚಿನ್ನದ ಓಟವನ್ನು ಮುಂದುವರೆಸಿದರು. ಶನಿವಾರ ಮಧ್ಯಾಹ್ನದ ಊಟದ ವಿರಾಮದ ನಂತರ, ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಈ ಸಾಧನೆ ಮಾಡಿದ್ದು, ನಾಯಕನಾಗಿ ಐದನೇ ಟೆಸ್ಟ್ ಶತಕದೊಂದಿಗೆ, ಗಿಲ್ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿ, ಭಾರತದ ಟೆಸ್ಟ್ ತಂಡದ ನಾಯಕರಾಗಿ ಅತಿ ಹೆಚ್ಚು ಶತಕಗಳ ವಿಷಯದಲ್ಲಿ ಎಂ.ಎಸ್ ಧೋನಿ ಅವರ ದಾಖಲೆಯನ್ನು ಸರಿಗಟ್ಟಿದರು. ಇದನ್ನೂ ಓದಿ: ಮಹಿಳಾ ವಿಶ್ವಕಪ್‌ | ಭಾರತದ ವನಿತೆಯರ ಪರಾಕ್ರಮ – ಪಾಕ್‌ ವಿರುದ್ಧ 88 ರನ್‌ಗಳ ಭರ್ಜರಿ ಜಯ

    ಇಂಗ್ಲೆಂಡ್‌ನಲ್ಲಿ ನಡೆದ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯಲ್ಲಿ ತಮ್ಮ ಮೊದಲ ಸರಣಿಯಲ್ಲಿಯೇ ನಾಲ್ಕು ಶತಕಗಳನ್ನು ಗಳಿಸಿದ್ದರು. ವಿರಾಟ್ ಕೊಹ್ಲಿ 20 ಶತಕಗಳೊಂದಿಗೆ ಭಾರತದ ಟೆಸ್ಟ್ ನಾಯಕರಾಗಿ ಅಗ್ರಸ್ಥಾನದಲ್ಲಿದ್ದಾರೆ, ನಂತರ ಸುನಿಲ್ ಗವಾಸ್ಕರ್ 11 ಮತ್ತು ಮೊಹಮ್ಮದ್ ಅಜರುದ್ದೀನ್ 9 ಶತಕಗಳ ಪಟ್ಟಿಯಲ್ಲಿ ಇದ್ದಾರೆ.

  • ಭಾರತ-ಪಾಕ್‌ ಕದನಕ್ಕೂ ಮುನ್ನವೇ ಟೀಂ ಇಂಡಿಯಾಗೆ ಆಘಾತ – ಗಿಲ್‌ಗೆ ಗಾಯ

    ಭಾರತ-ಪಾಕ್‌ ಕದನಕ್ಕೂ ಮುನ್ನವೇ ಟೀಂ ಇಂಡಿಯಾಗೆ ಆಘಾತ – ಗಿಲ್‌ಗೆ ಗಾಯ

    ದುಬೈ: ಟಿ-20 ಏಷ್ಯಾ ಕಪ್‌ 2025 (Asia Cup 2025) ಪಂದ್ಯಾವಳಿಯ ಅತ್ಯಂತ ರೋಚಕ ಕದನವಾದ ಭಾರತ-ಪಾಕಿಸ್ತಾನ ಪಂದ್ಯಕ್ಕೆ, ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನ ಸಜ್ಜಾಗಿದೆ. ಇಂದು ರಾತ್ರಿ 8 ಗಂಟೆಗೆ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ಗೆಲ್ಲುವ ಫೆವರಿಟ್‌ ತಂಡವಾಗಿ ಹೊರಹೊಮ್ಮಿದೆ. ಆದ್ರೆ ಪಂದ್ಯ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾ (Team India) ಆಘಾತವಾಗಿದೆ.

    ಬದ್ಧವೈರಿ ಪಾಕಿಸ್ತಾನ ಪಂದ್ಯಕ್ಕೂ ಮುನ್ನ ಶುಭಮನ್‌ ಗಿಲ್‌ (Shubman Gill) ಗಾಯಗೊಂಡಿದ್ದಾರೆ. ಭಾರತ – ಪಾಕ್‌ ಪಂದ್ಯಕ್ಕಾಗಿ ಕಠಿಣ ಅಭ್ಯಾಸ ನಡೆಸುತ್ತಿದ್ದ ವೇಳೆ ಕೈಗೆ ಬಾಲ್‌ ಬಡಿದು, ಇದರಿಂದ ವಿಪರೀತ ನೋವು ಕಾಣಿಸಿಕೊಂಡಿದೆ. ಬಳಿಕ ಅಭ್ಯಾಸ ಸ್ಥಗಿತಗೊಳಿಸಿದ್ದು, ಫಿಸಿಯೋಥೆರಪಿಸ್ಟ್‌ ತಪಾಸಣೆ ನಡೆಸಿದ್ದಾರೆ. ಇದಾದ ಬಳಿಕ ಮತ್ತೆ ನೆಟ್ಸ್‌ನಲ್ಲಿ ಗಿಲ್‌ ಬೆವರಿಳಿಸಿದ್ದಾರೆ. ಇದನ್ನೂ ಓದಿ: ಭಾರತ, ಪಾಕ್ ಕ್ರಿಕೆಟ್ ಕದನ | ಉಗ್ರ ಪೋಷಕ ಪಾಕಿಸ್ತಾನದ ಜೊತೆ ಕ್ರಿಕೆಟ್ ಬೇಕಾ? – ಜನರ ಆಕ್ರೋಶ

    ಗಿಲ್‌ ಇಂಜುರಿಗೊಂಡ ಬಳಿಕ ನಾಯಕ ಸೂರ್ಯಕುಮಾರ್‌ ಯಾದವ್‌ (Suryakumar Yadav), ಮುಖ್ಯಕೋಚ್‌ ಗಂಭೀರ್‌ ಅವರೊಂದಿಗೆ ಮಾತನಾಡಿದ್ದಾರೆ. ಒಂದು ವೇಳೆ ಇಂದಿನ ಪಂದ್ಯದಲ್ಲಿ ಗಿಲ್‌ ಔಟಾದ್ರೆ, ಸಂಜು ಸ್ಯಾಮ್ಸನ್‌ ಆರಂಭಿಕನಾಗಿ ಕಣಕ್ಕಿಳಿಯಲಿದ್ದು, ಗಿಲ್‌ ಬದಲಿಗೆ ಜಿತೇಶ್‌ ಶರ್ಮಾ ಕಣಕ್ಕಿಳಿಯಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಭಾರತ-ಪಾಕ್‌ ಕದನ ಯಾವಾಗಲೂ ಏಕೆ ರಣಕಣ? – ಆಕ್ರಮಣಕಾರಿ ಆಟಕ್ಕೆ ಟೀಂ ಇಂಡಿಯಾ ರೆಡಿ!

    26 ವರ್ಷ ವಯಸ್ಸಿನ ಗಿಲ್ 114 ಅಂತಾರಾಷ್ಟ್ರೀಯ ಪಂದ್ಯ 146 ಇನ್ನಿಂಗ್ಸ್‌ಗಳಲ್ಲಿ 46.30 ಸರಾಸರಿ ಮತ್ತು 80.05 ಸ್ಟ್ರೈಕ್ ರೇಟ್‌ನಲ್ಲಿ 6,020 ರನ್ ಗಳಿಸಿದ್ದಾರೆ. ಇದರಲ್ಲಿ 18 ಶತಕಗಳು ಮತ್ತು 25 ಅರ್ಧಶತಗಳೂ ಸೇರಿವೆ.

    ಇನ್ನೂ ಏಷ್ಯಾ ಕಪ್‌ 2025ರ ಗ್ರೂಪ್‌-ಎ ಪಾಯಿಂಟ್ಸ್‌ ಪಟ್ಟಿಯಲ್ಲಿ ಭಾರತ +10.483 ನೆಟ್‌ ರನ್‌ ರೇಟ್‌ನೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಪಾಕಿಸ್ತಾನ +4.650 ನೆಟ್‌ ರನ್‌ ರೇಟ್‌ನೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಉಭಯ ತಂಡಗಳು ತಲಾ ಒಂದೊಂದು ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಇದನ್ನೂ ಓದಿ: ಭಾರತ ತಂಡವನ್ನೂ ಸೋಲಿಸುವಷ್ಟು ಸಮರ್ಥರಿದ್ದೇವೆ – ಪಂದ್ಯಕ್ಕೂ ಮುನ್ನ ಪಾಕ್‌ ಕ್ಯಾಪ್ಟನ್‌ ವಾರ್ನಿಂಗ್‌

  • ರೋಹಿತ್‌ ಬಳಿಕ 25 ವರ್ಷದ ಗಿಲ್‌ ಟೀಂ ಇಂಡಿಯಾಕ್ಕೆ ಕ್ಯಾಪ್ಟನ್‌?

    ರೋಹಿತ್‌ ಬಳಿಕ 25 ವರ್ಷದ ಗಿಲ್‌ ಟೀಂ ಇಂಡಿಯಾಕ್ಕೆ ಕ್ಯಾಪ್ಟನ್‌?

    ಮುಂಬೈ: ರೋಹಿತ್ ಶರ್ಮಾ (Rohit Sharma) ಬಳಿಕ ಮೂರು ಮಾದರಿಯ ಕ್ರಿಕೆಟ್‌ಗೆ ಟೀಂ ಇಂಡಿಯಾದ ಕ್ಯಾಪ್ಟನ್‌ ಯಾರಾಗ್ತಾರೆ ಅನ್ನೋ ಪ್ರಶ್ನೆಗೆ ಬಹುತೇಕ ಉತ್ತರ ಸಿಕ್ಕಂತೆ ಕಾಣುತ್ತಿದೆ. ರೋಹಿತ್‌ ನಿವೃತ್ತಿ ಬಳಿಕ 25 ವರ್ಷದ ಯುವ ಆಟಗಾರ ಶುಭಮನ್‌ ಗಿಲ್‌ (Shubman Gill) ಅವರನ್ನೇ ಎಲ್ಲಾ ಮಾದರಿಯ ನಾಯಕನನ್ನಾಗಿ ನೇಮಿಸುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

    ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ (International Cricket) ರೋಹಿತ್‌, ವಿರಾಟ್‌ ಕೊಹ್ಲಿ ಅವರ ನಿವೃತ್ತಿಯ ವಿಚಾರಗಳು ಸೋಷಿಯಲ್‌ ಮೀಡಿಯಾದಲ್ಲಿ ಪದೇ ಪದೇ ಸದ್ದು ಮಾಡುತ್ತಿವೆ. ಇದೇ ಅಕ್ಟೋಬರ್‌ 19ರಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿ (ODI Series) ಬಳಿಕ ಇಬ್ಬರು ದಿಗ್ಗಜರು ನಿವೃತ್ತಿ ಘೋಷಿಸುವ ಎಲ್ಲಾ ಸಾಧ್ಯತೆಗಳಿವೆ. ಹಾಗಾಗಿ ರೋಹಿತ್‌ ಬಳಿಕ ಆಲ್‌ಫಾರ್ಮ್ಯಾಟ್‌ (ಎಲ್ಲಾ ಮಾದರಿ)ಗೆ ಗಿಲ್‌ ಅವರನ್ನು ನಾಯಕನನ್ನಾಗಿ ನೇಮಿಸುವ ಬಗ್ಗೆ ಬಿಸಿಸಿಐ ಆಯ್ಕೆ ಸಮಿತಿ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಸೆ.9ರಿಂದ ಶುರುವಾಗಲಿರುವ ಟಿ20 ಏಷ್ಯಾ ಕಪ್‌ ಟೂರ್ನಿ ಬಳಿಕ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.

    ವರದಿಗಳ ಪ್ರಕಾರ, ಶುಭಮನ್‌ ಗಿಲ್‌ ಅವರನ್ನು ಏಕದಿನ ನಾಯಕನನ್ನಾಗಿ ನೇಮಿಸುವ ಬಗ್ಗೆ ಯಾವುದೇ ಸಂಶಯ ಇಲ್ಲ. ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಗೆ ಇನ್ನಷ್ಟು ಸಮಯ ಬೇಕಾಗುತ್ತದೆ ಎಂದು ಬಿಸಿಸಿಐ (BCCI) ಹೇಳಿದೆ. ರೋಹಿತ್‌ ಶರ್ಮಾ ಸದ್ಯ ಏಕದಿನ ಸ್ವರೂಪದಲ್ಲಿ ಮಾತ್ರ ಆಡುತ್ತಿದ್ದು, 2027ರ ಏಕದಿನ ವಿಶ್ವಕಪ್‌ ಗೆದ್ದು ತರುವ ಉತ್ಸಾಹದಲ್ಲಿದ್ದಾರೆ. ಆದ್ರೆ ಅಷ್ಟೊತ್ತಿಗೆ ಅವರ ವಯಸ್ಸು 40 ಸಮೀಪಿಸಲಿದೆ. ಹೀಗಾಗಿ ಆಯ್ಕೆ ಸಮಿತಿ ಅವರ ವಯೋಮಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಕೈಬಿಡುವ ನಿರ್ಧಾರದಲ್ಲಿದೆ. ಹೀಗಾಗಿ ಶುಭಮನ್‌ ಗಿಲ್‌ ಅವರನ್ನು ಆಸೀಸ್‌ ಸರಣಿ ಬಳಿಕ ಏಕದಿನ ನಾಯಕನನ್ನಾಗಿ ನೇಮಕ ಮಾಡುವ ಸಾಧ್ಯತೆಗಳಿವೆ ಎನ್ನಲಾಗ್ತಿದೆ.

    ಎಲ್ಲಾ ಫಾರ್ಮ್ಯಾಟ್‌ಗೆ ಒಬ್ಬನೇ ನಾಯಕ?
    ಸದ್ಯ ಬಿಸಿಸಿಐ ಆಯ್ಕೆ ಸಮಿತಿಯು ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಒಬ್ಬನೇ ನಾಯಕನನ್ನ ಹುಡುಕುತ್ತಿದೆ. ಅದಕ್ಕಾಗಿ ಏಷ್ಯಾಕಪ್‌ ಬಳಿಕ 34 ವರ್ಷದ ಸೂರ್ಯಕುಮಾರ್‌ ಯಾದವ್‌ ಅವರನ್ನ ಟಿ20 ನಾಯಕತ್ವದಿಂದ ಬದಲಾಯಿಸುವ ಚಿಂತನೆಯಲ್ಲಿದೆ. ಅಕ್ಷರ್‌ ಪಟೇಲ್‌ ಅವರನ್ನು ಟಿ20I ಉಪನಾಯಕನ್ನಾಗಿ ನೇಮಿಸಲಾಗಿದೆ.

    ಈಗಾಗಲೇ ಟೆಸ್ಟ್‌ ಕ್ಯಾಪ್ಟನ್‌ ಆಗಿ ಸೈ ಎನಿಸಿಕೊಂಡಿರುವ ಶುಭಮನ್‌ ಗಿಲ್‌ ಅಕ್ಟೋಬರ್‌ ಬಳಿಕ ಏಕದಿನ ನಾಯಕನೂ ಆಗಲಿದ್ದಾರೆ. ಜೊತೆಗೆ 2026ರ ಟಿ0 ವಿಶ್ವಕಪ್‌ ಬಳಿಕ ಟಿ20 ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ. ಆದರೆ ಬಿಸಿಸಿಐ ಈ ಕುರಿತು ಎಲ್ಲಿಯೂ ಅಧಿಕೃತ ಹೇಳಿಕೆ ನೀಡಿಲ್ಲ.

    ಆಸೀಸ್‌ ಸರಣಿ ಬಳಿಕ ರೋಹಿತ್- ಕೊಹ್ಲಿಗೆ ವಿದಾಯ?
    ಇನ್ನೂ ಮುಂದಿನ ಅಕ್ಟೋಬರ್‌ 19ರಿಂದ ಅ.25ರ ವರೆಗೆ ಆಸ್ಟ್ರೇಲಿಯಾ ವಿರುದ್ಧ ಭಾರತ 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಈ ಸರಣಿ ಬಳಿಕ ದಿಗ್ಗಜರಾದ ವಿರಾಟ್‌, ರೋಹಿತ್‌ ನಿವೃತ್ತಿ ಘೋಷಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಟೆಸ್ಟ್ ಮತ್ತು ಟಿ20 ಮಾದರಿಗಳಿಗೆ ವಿದಾಯ ಹೇಳಿರುವ ಕೊಹ್ಲಿ ಮತ್ತು ರೋಹಿತ್ ಇಬ್ಬರೂ ಪ್ರಸ್ತುತ ಏಕದಿನ ಮಾದರಿಯಲ್ಲಿ ಮಾತ್ರ ಆಡುತ್ತಿದ್ದಾರೆ.

  • ಟೆಸ್ಟ್‌ ಕ್ಯಾಪ್ಟನ್‌ ಗಿಲ್‌ಗೆ ಅನಾರೋಗ್ಯ – ಏಷ್ಯಾಕಪ್‌ ಟೂರ್ನಿಗೆ ಅಯ್ಯರ್‌ಗೆ ಸಿಗುತ್ತಾ ಚಾನ್ಸ್‌?

    ಟೆಸ್ಟ್‌ ಕ್ಯಾಪ್ಟನ್‌ ಗಿಲ್‌ಗೆ ಅನಾರೋಗ್ಯ – ಏಷ್ಯಾಕಪ್‌ ಟೂರ್ನಿಗೆ ಅಯ್ಯರ್‌ಗೆ ಸಿಗುತ್ತಾ ಚಾನ್ಸ್‌?

    ಮುಂಬೈ: 2025ರ ಟಿ20 ಏಷ್ಯಾಕಪ್‌ ಟೂರ್ನಿಗೆ ಇನ್ನೂ ಕೆಲ ದಿನಗಳು ಬಾಕಿಯಿರುವಾಗಲೇ ಟೀಂ ಇಂಡಿಯಾ (Team India) ಬಿಗ್‌ ಶಾಕ್‌ ಎದುರಾಗಿದೆ. ಈಗಾಗಲೇ ಏಷ್ಯಾಕಪ್‌ ತಂಡದಲ್ಲಿ ಸ್ಥಾನ ಪಡೆದಿರುವ ಉಪನಾಯಕ ಶುಭಮನ್‌ ಗಿಲ್‌ (Shubman Gill) ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ.

    ಮುಂದಿನ ಸೆ.9 ರಿಂದ ಸೆ.28ರ ವರೆಗೆ ಯುಎಇನಲ್ಲಿ ಟಿ20 ಏಷ್ಯಾಕಪ್‌ (Asia Cup 2025) ಟೂರ್ನಿ ನಡೆಯಲಿದೆ. ಅನಾರೋಗ್ಯದಿಂದ ಬಳಲುತ್ತಿರುವ ಗಿಲ್‌, ಪ್ರಸ್ತುತ ಚಂಡೀಗಢದಲ್ಲಿರುವ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಫಿಸಿಕಲ್‌ ಫಿಟ್ನೆಸ್‌ ತಜ್ಞರು ಹೇಳುವಂತೆ ಗಿಲ್‌ ಅವರು ಏಷ್ಯಾಕಪ್‌ ಟೂರ್ನಿಗೆ ಫಿಟ್‌ ಆಗುವ ನಿರೀಕ್ಷೆಯಿದೆ. ಆದ್ರೆ ಇದೇ ಆಗಸ್ಟ್‌ 28ರಿಂದ ಸೆ.15ರ ವರೆಗೆ ನಡೆಯಲಿರುವ ಪ್ರತಿಷ್ಠಿತ ದುಲೀಪ್‌ ಟ್ರೋಫಿಯಿಂದ (Duleep Trophy 2025) ಹೊರಗುಳಿಯುವ ಸಾಧ್ಯತೆಗಳಿಗೆ ಎಂದು ವರದಿಯಾಗಿದೆ. ಇದನ್ನೂ ಓದಿ: Asia Cup 2025: ಟೀಂ ಇಂಡಿಯಾ ಪ್ರಕಟ- ಸೂರ್ಯಕುಮಾರ್‌ ನಾಯಕ, ಕನ್ನಡಿಗ ವರುಣ್‌ಗೆ ಸ್ಥಾನ

    ಏಷ್ಯಾಕಪ್‌ಗೆ ಭಾರತ ತಂಡ ಹೀಗಿದೆ?
    ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್‌ ಪಟೇಲ್, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್‌), ಜಸ್ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲ್ದೀಪ್‌ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ಹರ್ಷಿತ್‌ ರಾಣಾ, ರಿಂಕು ಸಿಂಗ್. ಇದನ್ನೂ ಓದಿ: ಟೀಂ ಇಂಡಿಯಾಗೆ ಅಯ್ಯರ್ ಒನ್‌ಡೇ ಕ್ಯಾಪ್ಟನ್? – ವದಂತಿಗಳಿಗೆ ತೆರೆ ಎಳೆದ ಬಿಸಿಸಿಐ

    ಶ್ರೇಯಸ್‌ಗೆ ಸಿಗುತ್ತಾ ಚಾನ್ಸ್‌?
    ಶುಭಮನ್‌ ಗಿಲ್‌ ಏಷ್ಯಾಕಪ್‌ ಟೂರ್ನಿ ಹೊತ್ತಿಗೆ ಸುಧಾರಣೆ ಆಗದಿದ್ದರೇ ಶ್ರೇಯಸ್‌ ಅಯ್ಯರ್‌ ಅವರಿಗೆ ಚಾನ್ಸ್‌ ಸಿಗಬಹುದಾ ಎನ್ನುವ ಪ್ರಶ್ನೆಯೂ ಎದ್ದಿದೆ. ಏಕೆಂದ್ರೆ ಸೂರ್ಯಕುಮಾರ್‌ ಯಾದವ್‌ ಕೂಡ ಶ್ರೇಯಸ್‌ ಅಯ್ಯರ್‌ ಆಯ್ಕೆ ಬಗ್ಗೆ ಆಸಕ್ತಿ ಹೊಂದಿದ್ದರು. ಆದ್ರೆ ಉತ್ತರ ವಲಯದ ಕ್ರಿಕೆಟ್‌ ಕಮಿಟಿ ಗಿಲ್‌ ಸ್ಥಾನಕ್ಕೆ ಸಂಭಾವ್ಯ ಆಟಗಾರರನ್ನಾಗಿ ಶುಭಮನ್‌ ರೊಹಿಲ್ಲಾ ಅಥವಾ ಅಂಕಿತ್‌ ಕುಮಾರ್‌ ರಣಜಿ ಆಟಗಾರರನ್ನ ಸೂಚಿಸಿದೆ ಎಂದು ತಿಳಿದುಬಂದಿದೆ.

    ಶ್ರೇಯಸ್‌ ಕ್ಯಾಪ್ಟನ್‌ ಎಂಬ ವದಂತಿ
    ಎರಡು ದಿನಗಳ ಹಿಂದಷ್ಟೇ ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ ಒನ್‌ಡೇ ಕ್ಯಾಪ್ಟನ್ ಆಗಿ ಮಾಡಲಾಗುತ್ತದೆ ಅನ್ನೋ ವದಂತಿಗೆ ಬಿಸಿಸಿಐ ತೆರೆ ಎಳೆದಿತ್ತು. ಇದನ್ನೂ ಓದಿ: Asia Cup 2025 | ಹೊಸ ನಾಯಕತ್ವದಲ್ಲಿ ಪಾಕ್‌ ತಂಡ ಪ್ರಕಟ – ರಿಜ್ವಾನ್‌, ಬಾಬರ್‌ ಹೊರದಬ್ಬಿದ ಪಿಸಿಬಿ

    ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ, ನಾಯಕನ ಆಯ್ಕೆ ವಿಷಯದ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ. ಇದರಲ್ಲಿ ಶ್ರೇಯಸ್ ತಪ್ಪು ಏನೂ ಇಲ್ಲ, ನಮ್ಮದೂ ತಪ್ಪಿಲ್ಲ. ಟೂರ್ನಿಗೆ 15 ಜನರನ್ನಷ್ಟೇ ಆಯ್ಕೆ ಮಾಡಲು ಅವಕಾಶವಿದೆ. ಅವಕಾಶ ಬರುವವರೆಗೆ ಕಾಯಬೇಕಾಗುತ್ತದೆ ಎಂದು ತಿಳಿಸಿದ್ದರು. ಇದೀಗ ಗಿಲ್‌ ಅನಾರೋಗ್ಯದ ಬೆನ್ನಲ್ಲೇ ಅಯ್ಯರ್‌ ಅವರತ್ತ ಅಭಿಮಾನಿಗಳ ಚಿತ್ತ ಹರಿದಿದೆ.

  • Asia Cup 2025: ಟೀಂ ಇಂಡಿಯಾ ಪ್ರಕಟ- ಸೂರ್ಯಕುಮಾರ್‌ ನಾಯಕ, ಕನ್ನಡಿಗ ವರುಣ್‌ಗೆ ಸ್ಥಾನ

    Asia Cup 2025: ಟೀಂ ಇಂಡಿಯಾ ಪ್ರಕಟ- ಸೂರ್ಯಕುಮಾರ್‌ ನಾಯಕ, ಕನ್ನಡಿಗ ವರುಣ್‌ಗೆ ಸ್ಥಾನ

    ಮುಂಬೈ: ಏಷ್ಯಾ ಕಪ್‌ 2025ರ (Asia Cup) ಟೂರ್ನಿಗಾಗಿ ಟೀಂ ಇಂಡಿಯಾ (Team India) ಪ್ರಕಟಿಸಲಾಗಿದೆ. ಸೂರ್ಯಕುಮಾರ್‌ ಯಾದವ್‌ ತಂಡವನ್ನು ಮುನ್ನಡೆಸಲಿದ್ದಾರೆ. ಶುಭಮನ್‌ ಗಿಲ್‌ ಉಪನಾಯಕರಾಗಿದ್ದಾರೆ.

    ಮಂಗಳವಾರ ಮಧ್ಯಾಹ್ನ ಏಷ್ಯಾಕಪ್‌ಗಾಗಿ ಭಾರತದ 15 ಸದಸ್ಯರ ತಂಡವನ್ನು ಘೋಷಿಸಲಾಯಿತು. ಶುಭಮನ್ ಗಿಲ್, ಜಸ್ಪ್ರೀತ್ ಬುಮ್ರಾ ಮತ್ತು ಸಂಜು ಸ್ಯಾಮ್ಸನ್ ತಂಡದಲ್ಲಿದ್ದಾರೆ. ಕುಲದೀಪ್ ಯಾದವ್, ವರುಣ್ ಚಕ್ರವರ್ತಿ ಮತ್ತು ಅಕ್ಷರ್ ಪಟೇಲ್ ಅವರನ್ನು ಸ್ಪಿನ್ನರ್‌ಗಳಾಗಿ ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: Asia Cup 2025 | ಹೊಸ ನಾಯಕತ್ವದಲ್ಲಿ ಪಾಕ್‌ ತಂಡ ಪ್ರಕಟ – ರಿಜ್ವಾನ್‌, ಬಾಬರ್‌ ಹೊರದಬ್ಬಿದ ಪಿಸಿಬಿ

    ಸೆಪ್ಟೆಂಬರ್ 9 ರಂದು ಯುಎಇಯಲ್ಲಿ ಆರಂಭವಾಗುವ ಏಷ್ಯಾಕಪ್‌ನೊಂದಿಗೆ ಭಾರತವು ಮುಂದಿನ ಫೆಬ್ರವರಿಯಲ್ಲಿ ಪುರುಷರ ಟಿ20 ವಿಶ್ವಕಪ್‌ಗೆ ಸಿದ್ಧತೆ ಪ್ರಾರಂಭಿಸಲಿದೆ. ಒಂದು ದಿನದ ನಂತರ ಭಾರತ ತನ್ನ ಮೊದಲ ಪಂದ್ಯವನ್ನು ಆಡಲಿದೆ.

    ಭಾರತ ತಂಡ ಹೀಗಿದೆ?
    ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್, ಜಿತೇಶ್ ಶರ್ಮಾ (ಡಬ್ಲ್ಯುಕೆ), ಜಸ್ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ಹರ್ಷಿತ್‌ ರಾಣಾ, ರಿಂಕು ಸಿಂಗ್.

    ಐದು ಸ್ಟ್ಯಾಂಡ್-ಬೈಗಳು: ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್, ರಿಯಾನ್ ಪರಾಗ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್. ಇದನ್ನೂ ಓದಿ: ಅನಗತ್ಯ ರನ್‌ ಕದಿಯಲು ಯತ್ನಿಸಿ ಯಡವಟ್ಟು – ಮೈದಾನದಲ್ಲೇ ಬ್ಯಾಟ್‌ ಎಸೆದು ಪಾಕ್‌ ಓಪನರ್ ಆಕ್ರೋಶ

  • ಒಂದೇ ಶತಕ, ಹಲವು ದಾಖಲೆ – ಡಾನ್‌ ಬ್ರಾಡ್ಮನ್, ಗವಾಸ್ಕರ್‌ ದಾಖಲೆ ಸರಿಗಟ್ಟಿದ ಗಿಲ್‌

    ಒಂದೇ ಶತಕ, ಹಲವು ದಾಖಲೆ – ಡಾನ್‌ ಬ್ರಾಡ್ಮನ್, ಗವಾಸ್ಕರ್‌ ದಾಖಲೆ ಸರಿಗಟ್ಟಿದ ಗಿಲ್‌

    ಮ್ಯಾಂಚೆಸ್ಟರ್‌: ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ 4ನೇ ಟೆಸ್ಟ್‌ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಯುವ ನಾಯಕ ಶುಭಮನ್‌ ಗಿಲ್ (Shubman Gill) ‌ಮತ್ತೊಂದು ಶತಕ ಸಿಡಿಸುವ ಮೂಲಕ ಡಾನ್‌ ಬ್ರಾಡ್ಮನ್ (Don Bradman), ಸುನೀಲ್‌ ಗವಾಸ್ಕರ್‌, ರನ್‌ ಮಿಷನ್‌ ಕೊಹ್ಲಿ (Virat Kohli) ಅವರಂತಹ ದಿಗ್ಗಜರ ದಾಖಲೆಗಳನ್ನ ಸರಿಗಟ್ಟಿದ್ದಾರೆ.

    ಮ್ಯಾಂಚೆಸ್ಟರ್‌ನಲ್ಲಿ ನಡೆಯುತ್ತಿರುವ ಟೆಸ್ಟ್‌ ಪಂದ್ಯದ ಕೊನೆಯ ದಿನದಾಟದ ಹೊತ್ತಿಗೆ ಒಟ್ಟು 238 ಎಸೆತಗಳನ್ನು ಎದುರಿಸಿದ ಗಿಲ್‌ 12 ಬೌಂಡರಿ ಸಹಿತ 103 ರನ್‌ ಚಚ್ಚಿದರು. ಇದರಿಂದ ಹಲವು ದಾಖಲೆಗಳನ್ನ ನುಚ್ಚುನೂರು ಮಾಡಿ, ದಿಗ್ಗಜರ ಎಲೈಟ್‌ ಲಿಸ್ಟ್‌ ಸೇರಿಕೊಂಡಿದ್ದಾರೆ. ಇದನ್ನೂ ಓದಿ: Asia Cup T20 | ಏಷ್ಯಾ ಕಪ್‌ ಟೂರ್ನಿಗೆ ದಿನಾಂಕ ಪ್ರಕಟ; ಭಾರತ – ಪಾಕ್ ಕದನಕ್ಕೆ ಮುಹೂರ್ತ ಫಿಕ್ಸ್!

    2ನೇ ಭಾರತೀಯನೆಂಬ ಹೆಗ್ಗಳಿಕೆ
    ಟೆಸ್ಟ್‌ ಕ್ರಿಕೆಟ್‌ನಲ್ಲಿ 9ನೇ ಶತಕ ಸಿಡಿಸಿರುವ ಶುಭಮನ್‌ ಗಿಲ್‌ ವೃತ್ತಿಜೀವನದ 18ನೇ ಅಂತಾರಾಷ್ಟ್ರೀಯ ಶತಕ ದಾಖಲಿಸಿದ್ದಾರೆ. ಈ ಮೂಲಕ 35 ವರ್ಷಗಳ ಬಳಿಕ ಮ್ಯಾಂಚೆಸ್ಟರ್‌ನಲ್ಲಿ ಶತಕ ಸಿಡಿಸಿದ ಭಾರತೀಯ ಆಟಗಾರ ಎಂಬ ವಿಶೇಷ ಸಾಧನೆಗೂ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಧನುಷ್ ಬಾಬುಗೆ ಏಷ್ಯನ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ

    ಡಾನ್‌, ಗವಾಸ್ಕರ್‌ ದಾಖಲೆ ಸರಿಗಟ್ಟಿದ ಗಿಲ್‌
    ಟೀಂ ಇಂಡಿಯಾದ 37ನೇ ಟೆಸ್ಟ್ ಕ್ಯಾಪ್ಟನ್‌ ಆಗಿರುವ ಶುಭಮನ್‌ ಗಿಲ್‌ ಚೊಚ್ಚಲ ಸರಣಿಯಲ್ಲೇ ಅಬ್ಬರಿಸಿ ಬೊಬ್ಬಿರಿದಿದ್ದಾರೆ. ಇಂದು ಸಿಡಿಸಿದ ಶತಕದೊಂದಿಗೆ ಈ ಸರಣಿಯಲ್ಲಿ ಒಟ್ಟು 4 ಶತಕ, ಒಂದು ದ್ವಿಶತಕವನ್ನ ದಾಖಲಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ 2 ವರ್ಷಗಳಿಂದ ಅತ್ಯಾಚಾರ ಎಸಗಿದ ಆರೋಪ – RCB ಸ್ಟಾರ್‌ ಯಶ್‌ ದಯಾಳ್‌ ವಿರುದ್ಧ ಪೋಕ್ಸೊ ಕೇಸ್‌

    ಇದರೊಂದಿಗೆ ಟೆಸ್ಟ್‌ ಸರಣಿಯೊಂದರಲ್ಲಿ ನಾಯಕನಾಗಿ ಅತಿಹೆಚ್ಚು ಶತಕ ಸಿಡಿಸಿದ ಅಗ್ರ ಬ್ಯಾಟರ್‌ಗಳ ಎಲೈಟ್‌ ಲಿಸ್ಟ್‌ ಸೇರಿಕೊಂಡಿದ್ದಾರೆ. 1947-48ರಲ್ಲಿ ಡಾನ್‌ ಬ್ರಾಡ್ಮನ್ ಮೊದಲ ಬಾರಿಗೆ 4 ಶತಕ ಸಿಡಿಸಿದ ಸಾಧನೆ ಮಾಡಿದ್ದರು. ಆ ಬಳಿಕ 1978-79ರಲ್ಲಿ ಟೀಂ ಇಂಡಿಯಾದ ಸುನೀಲ್‌ ಗವಾಸ್ಕರ್‌ ಈ ಸಾಧನೆ ಮಾಡಿದ್ದರು. ಇದಾದ 46 ವರ್ಷಗಳ ಬಳಿಕ ಶುಭಮನ್‌ ಗಿಲ್‌ ಸರಣಿಯೊಂದರಲ್ಲಿ 4‌ ಶತಕದ ಸಾಧನೆ ಮಾಡಿದ್ದಾರೆ.

    ಶತಕ ಸಿಡಿಸಿದ 3ನೇ ಭಾರತೀಯ
    ಅಲ್ಲದೇ ಟೆಸ್ಟ್‌ ಕ್ರಿಕೆಟ್‌ನ ಸರಣಿಯೊಂದರಲ್ಲಿ 4 ಶತಕ ಸಿಡಿಸಿದ ಟೀಂ ಇಂಡಿಯಾದ 3ನೇ ಆಟಗಾರನಾಗಿಯೂ ಹೊರಹೊಮ್ಮಿದ್ದಾರೆ. ಈ ಹಿಂದೆ ಆಸ್ಟ್ರೇಲಿಯಾ ವಿರುದ್ಧ ವಿರಾಟ್‌ ಕೊಹ್ಲಿ ಈ ಸಾಧನೆ ಮಾಡಿದ ಮೊದಲ ಎರಡು ಸ್ಥಾನಗಳಲ್ಲಿದ್ದಾರೆ.