Tag: ಶುಭಾಶಯ

  • ಇಂದು ಪ್ರಧಾನಿ ಮೋದಿ ಹುಟ್ಟುಹಬ್ಬ- ರಾಷ್ಟ್ರಪತಿ ಸೇರಿದಂತೆ ಗಣ್ಯರಿಂದ ಶುಭಾಶಯ

    ಇಂದು ಪ್ರಧಾನಿ ಮೋದಿ ಹುಟ್ಟುಹಬ್ಬ- ರಾಷ್ಟ್ರಪತಿ ಸೇರಿದಂತೆ ಗಣ್ಯರಿಂದ ಶುಭಾಶಯ

    ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi Birthday) ಅವರ 73 ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಸೇರಿದಂತೆ ಹಲವು ಗಣ್ಯರು ಮತ್ತು ರಾಜಕೀಯ ನಾಯಕರು ಪ್ರಧಾನಿಗೆ ಶುಭಾಶಯಗಳನ್ನು ಕೋರಿದ್ದಾರೆ.

    ರಾಷ್ಟ್ರಪತಿ ದ್ರೌಪದಿ ಮುರ್ಮು  ಟ್ವೀಟ್ ಮಾಡಿ ಹುಟ್ಟುಹಬ್ಬಕ್ಕೆ ಶುಭ ಕೋರಿದರು. ನಂತರ ಪ್ರಧಾನಿ ಮೋದಿಯವರು ತಮ್ಮ ದೂರದೃಷ್ಟಿ ಮತ್ತು ದೃಢವಾದ ನಾಯಕತ್ವದಿಂದ ‘ಅಮೃತ್ ಕಾಲ’ದ ಸಮಯದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಭಾರತದ ಅಭಿವೃದ್ಧಿಗೆ ದಾರಿ ಮಾಡಿಕೊಡಲಿ ಎಂದು ಶುಭ ಹಾರೈಸಿದರು.

    ಗೃಹ ಸಚಿವ ಅಮಿತ್ ಶಾ (AmitShah) ಅವರು ಟ್ವೀಟ್ ಮಾಡಿ, ನವ ಭಾರತದ ವಾಸ್ತುಶಿಲ್ಪಿ ಎಂದು ಮೋದಿಯನ್ನು ಶ್ಲಾಘಿಸಿದರು. ಅಲ್ಲದೇ ದೇಶದ ಪ್ರಾಚೀನ ಪರಂಪರೆಯ ಆಧಾರದ ಮೇಲೆ ಭವ್ಯವಾದ ಮತ್ತು ಸ್ವಾವಲಂಬಿ ಭಾರತಕ್ಕೆ ಬಲವಾದ ಅಡಿಪಾಯವನ್ನು ಹಾಕಿದ್ದಾರೆ. ಪಕ್ಷ ಸಂಘಟನೆಯಾಗಲಿ ಅಥವಾ ಸರ್ಕಾರವೇ ಆಗಿರಲಿ, ರಾಷ್ಟ್ರದ ಹಿತಾಸಕ್ತಿ ಅತ್ಯುನ್ನತವಾದುದೆಂಬ ಸ್ಫೂರ್ತಿಯನ್ನು ನಾವು ಸದಾ ಮೋದಿಯವರಿಂದ ಪಡೆಯುತ್ತೇವೆ. ಇಂತಹ ಅದ್ವಿತೀಯ ನಾಯಕನ ಅಡಿಯಲ್ಲಿ ದೇಶಕ್ಕೆ ಸೇವೆ ಸಲ್ಲಿಸುವುದು ನನ್ನ ಸೌಭಾಗ್ಯ ಎಂದಿದ್ದಾರೆ.

    ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ (JP Nadda), ಪ್ರಧಾನಿಯವರು ಭಾರತೀಯ ಸಂಸ್ಕೃತಿಯ ಜಾಗತಿಕ ಪ್ರತಿಷ್ಠೆ, ಜನರ ಬಹು ಆಯಾಮದ ಅಭಿವೃದ್ಧಿ ಮತ್ತು ರಾಷ್ಟ್ರದ ಸಾರ್ವತ್ರಿಕ ಪ್ರಗತಿಗೆ ಸ್ಪಷ್ಟವಾದ ರೂಪವನ್ನು ನೀಡಿದ್ದಾರೆ. ನಮ್ಮ ಗುರಿ “ಅಂತ್ಯೋದಯ” (ಅತ್ಯಂತ ತುಳಿತಕ್ಕೊಳಗಾದವರ ಉನ್ನತಿ) ಪ್ರತಿ ಗ್ರಾಮ ಮತ್ತು ಸಮಾಜದ ಪ್ರತಿಯೊಂದು ವಿಭಾಗವನ್ನು ತಲುಪಿದೆ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ಹೊಂದುವ ಸಂಕಲ್ಪಕ್ಕಾಗಿ ಮಂತ್ರವಾಗಿದೆ ಎಂದು ಟ್ವೀಟ್ ಮಾಡುವ ಮೂಲಕ ಪ್ರಧಾನಿಗೆ ಶುಭಾಶಯ ಕೋರಿದರು.

    ಮೋದಿ ಅವರು ಭಾರತಕ್ಕೆ ಕೇವಲ ಹೊಸ ಗುರುತನ್ನು ನೀಡದೆ ವಿಶ್ವದಲ್ಲಿ ಅದರ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಹೇಳಿದ್ದಾರೆ. ಪ್ರಧಾನಿಯವರು ಭಾರತದ ಅಭಿವೃದ್ಧಿಯನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದ್ದಾರೆ, ಅವರು ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಹಾರೈಸಿದರು.

    ಒಟ್ಟಿನಲ್ಲಿ ಹುಟ್ಟುಹಬ್ಬದ ದಿದಂದೇ ಪ್ರಧಾನಿಯವರು ದ್ವಾರಕಾದಲ್ಲಿ ಯಶೋಭೂಮಿ ಹೆಸರಿನ ಇಂಡಿಯಾ ಇಂಟನ್ರ್ಯಾಷನಲ್ ಕನ್ವೆನ್ಷನ್ ಮತ್ತು ಎಕ್ಸ್‌ಪೋ ಸೆಂಟರ್ (ಐಐಸಿಸಿ) ನ ಮೊದಲ ಹಂತವನ್ನು ಉದ್ಘಾಟಿಸಲಿದ್ದಾರೆ. ಹಾಗೆಯೇ ದ್ವಾರಕಾ ಸೆಕ್ಟರ್ 21 ರಿಂದ ದ್ವಾರಕಾ ಸೆಕ್ಟರ್ 25 ರಲ್ಲಿ ಹೊಸ ಮೆಟ್ರೋ ನಿಲ್ದಾಣಕ್ಕೆ ದೆಹಲಿ ಏರ್‌ಪೋರ್ಟ್ ಮೆಟ್ರೋ ಎಕ್ಸ್‍ಪ್ರೆಸ್ ಲೈನ್‍ನ ವಿಸ್ತರಣೆಯನ್ನು ಉದ್ಘಾಟಿಸಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Breaking – ಅಭಿಷೇಕ್-ಅವಿವಾ ಮದುವೆಗೆ ಶುಭ ಕೋರಿದ ಪ್ರಧಾನಿ ಮೋದಿ

    Breaking – ಅಭಿಷೇಕ್-ಅವಿವಾ ಮದುವೆಗೆ ಶುಭ ಕೋರಿದ ಪ್ರಧಾನಿ ಮೋದಿ

    ಟಿ, ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ (Abhishek Ambarish) ಅವರ ಮದುವೆಗೆ ಶುಭಾಶಯ ಕೋರಿದ್ದಾರೆ ಪ್ರಧಾನಿ ನರೇಂದ್ರ ಮೋದಿ (Narendra Modi). ಶುಭಾಶಯ ಕೋರಿ ಕಳುಹಿಸಿದ ಪತ್ರವನ್ನು ಸುಮಲತಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಹಿಂದೆ ಮದುವೆಗೆ (Marriage) ನರೇಂದ್ರ ಮೋದಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಆಹ್ವಾನ ನೀಡಿದ್ದರು ಸುಮಲತಾ ಮತ್ತು ಪುತ್ರ ಅಭಿಷೇಕ್.

    ಶುಭಾಶಯ (Greetings) ಕೋರಿ ಬರೆದ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಸುಮಲತಾ (Sumalatha), ‘ಅಭಿಷೇಕ ಅಂಬರೀಶ್–ಅವಿವಾ ಬಿಡಪ್ಪ (Aviva) ಅವರ ಮದುವೆಗೆ ಶುಭಾಶಯಗಳನ್ನು ತಿಳಿಸಿ, ನವ ಜೋಡಿಯ ಹೊಸ ಜೀವನ ಸುಖಕರವಾಗಿರಲಿ ಎಂದು ಹಾರೈಸಿದ ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ನಿಮ್ಮ ಹಾರೈಕೆ, ಆಶೀರ್ವಾದ ಸದಾ ನಮ್ಮ ಕುಟುಂಬದ ಮೇಲಿರಲಿ ಎಂದು ಮತ್ತೊಮ್ಮೆ ಧನ್ಯವಾದಗಳನ್ನು ತಿಳಿಸುವೆ’ ಎಂದು ಬರೆದುಕೊಂಡಿದ್ದಾರೆ.

    ಮದುವೆ, ಆರತಕ್ಷತೆ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ಮುಗಿಸಿಕೊಂಡಿರುವ ನಟ ಅಭಿಷೇಕ್, ಮಾಡೆಲ್ ಅವಿವಾ ಜೂನ್ 16 ರಂದು ಮಂಡ್ಯದ ಜನತೆಗೆ ಬೀಗರೂಟ ಮಾಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಮದುವೆ ಮತ್ತು ಆರತಕ್ಷತೆ ಬೆಂಗಳೂರಿನಲ್ಲಿ ನಡೆದಿರುವ ಕಾರಣದಿಂದಾಗಿ ಬೀಗರೂಟವನ್ನು ಮಂಡ್ಯದಲ್ಲಿ ಏರ್ಪಡಿಸಲಾಗಿದೆ. ಇದನ್ನೂ ಓದಿ:ಚಿಟ್ಟೆಯಂತೆ ಮಿಂಚಿದ ಸಂತೂರ್‌ ಮಮ್ಮಿ ಪ್ರಣಿತಾ ಸುಭಾಷ್

    ಈ ಹಿಂದೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಬಂದಾಗ, ಯಾವ ಜಾಗದಲ್ಲಿ ಅವರಿಗೆ ಕಾರ್ಯಕ್ರಮ ಮಾಡಲು ತಯಾರಿ ಮಾಡಿಕೊಳ್ಳಲಾಗಿತ್ತೋ, ಅದೇ ಜಾಗದಲ್ಲೇ ಬೀಗರೂಟವನ್ನು ಹಮ್ಮಿಕೊಳ್ಳಲಾಗಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಗೆಜ್ಜಲಗೆರೆ ಕಾಲೋನಿ ಬಳಿ 15 ಎಕರೆ ಪ್ರದೇಶದಲ್ಲಿ ಜರ್ಮನ್ ಟೆಂಟ್ ಹಾಕಲಾಗುತ್ತಿದೆ. ಅಲ್ಲಿಯೇ ಬೀಗರೂಟ ನಡೆಯಲಿದೆ.

    ಬೀಗರೂಟಕ್ಕೆ ಕನಿಷ್ಠ 50 ಸಾವಿರಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈಗಾಗಲೇ ಟೆಂಟ್ ಹಾಕುವಂತಹ ಕಾರ್ಯ ನಡೆದಿದ್ದು, ಸುಮಲತಾ ಅಂಬರೀಶ್  ಇಂದು ಅದರ ಪರಿಶೀಲನೆ ಕೂಡ ಮಾಡಿದ್ದಾರೆ. ಬೀಗರೂಟಕ್ಕೆ ಭರ್ಜರಿ ಬಾಡೂಟವೇ ಇರಲಿದ್ದು, ಪಕ್ಕಾ ಮಂಡ್ಯ ಶೈಲಿಯಲ್ಲಿ ಆಹಾರವನ್ನು ಸಿದ್ಧ ಪಡಿಸಲಾಗುತ್ತದೆಯಂತೆ. ಮುದ್ದೆಯೊಂದಿಗೆ ಭರ್ಜರಿ ಮಾಂಸದೂಟ ಕೂಡ ಜೊತೆಯಾಗಲಿದೆ.

  • ಸೈಕಲ್ ದಿನಾಚರಣೆ- ಸಂಗ್ರಹಿಸಿದ ಸೈಕಲ್‌ಗಳ ಫೋಟೋ ಮೂಲಕ ಪೊಲೀಸ್ ಅಧಿಕಾರಿ ವಿಶ್

    ಸೈಕಲ್ ದಿನಾಚರಣೆ- ಸಂಗ್ರಹಿಸಿದ ಸೈಕಲ್‌ಗಳ ಫೋಟೋ ಮೂಲಕ ಪೊಲೀಸ್ ಅಧಿಕಾರಿ ವಿಶ್

    ಕೋಲಾರ: ಶನಿವಾರ ವಿಶ್ವ ಸೈಕಲ್  ದಿನಾಚರಣೆಯಾಗಿದ್ದು (World Bicycle Day) , ಅಪರೂಪದ ಸೈಕಲ್‌ಗಳನ್ನು ಸಂಗ್ರಹಿಸುವ ಪೊಲೀಸ್ ಅಧಿಕಾರಿಯೊಬ್ಬರು ಸಂಗ್ರಹ ಮಾಡಿದ ಸೈಕಲ್‌ಗಳ ಫೋಟೋವನ್ನು ಹಂಚಿಕೊಳ್ಳುವ ಮೂಲಕ ವಿಭಿನ್ನ ರೀತಿಯಲ್ಲಿ ಶುಭಾಶಯ (Wish) ತಿಳಿಸಿದ್ದಾರೆ.

    ಹಣವಂತರು ಶ್ರೀಮಂತರ ಹಳೇಯ ಕಾರುಗಳನ್ನು ಸಂಗ್ರಹ ಮಾಡುವಂತೆ ಕೋಲಾರದ (Kolar) ಡಿಎಆರ್ ಎಎಸ್‌ಐ ಬಾಬಣ್ಣ ಎಂದೆ ಕರೆಯಲ್ಪಡುವ ಪೊಲೀಸ್ ಅಧಿಕಾರಿ (Police Officer) ಹವ್ಯಾಸ (Hobby) ಎಂಬಂತೆ ವಿಶಿಷ್ಟ ಸೈಕಲ್‌ಗಳನ್ನು ಸಂಗ್ರಹ ಮಾಡಿದ್ದಾರೆ. ಒಬ್ಬೊಬ್ಬರಿಗೆ ಒಂದೊಂದು ಹವ್ಯಾಸಗಳು ಇರುವುದು ಸಹಜ. ಆದರೆ ಇವರಿಗೆ ಹಳೇಯ ಹಾಗೂ ವಿಭಿನ್ನ ಸೈಕಲ್‌ಗಳನ್ನು ಸಂಗ್ರಹ ಮಾಡುವುದು ಹವ್ಯಾಸವಾಗಿದೆ. ಇದನ್ನೂ ಓದಿ: ಒಡಿಶಾ ಸರ್ಕಾರದ ಜೊತೆ ಸಂಪರ್ಕದಲ್ಲಿದ್ದೇವೆ: ಸಿಎಂ ಸಿದ್ದರಾಮಯ್ಯ

    ಕೋಲಾರ ಜಿಲ್ಲಾ ಪೊಲೀಸರಲ್ಲಿ ಫೋಟೋಗ್ರಾಫರ್ ಆಗಿರುವ ಎಎಸ್‌ಐ ಸುರೇಂದ್ರ ಬಾಬು ಅವರನ್ನು ಎಲ್ಲರೂ ಪ್ರೀತಿಯಿಂದ ಬಾಬಣ್ಣ ಎಂದೇ ಕರೆಯುತ್ತಾರೆ. ಬಡವರ ಹಾಗೂ ಮಧ್ಯಮ ವರ್ಗದ ರಥವಾಗಿದ್ದ ಹಳೇಯ ಬೈಸಿಕಲ್ ಸಂಗ್ರಹ ಮಾಡುವುದು ಇವರ ಹವ್ಯಾಸವಾಗಿದೆ. ಇವರು ಅತ್ಯಮೂಲ್ಯ ಹಳೇಯ ಸೈಕಲ್‌ಗಳು, ಭಾರತ್ ರಾಬಿನ್ ಹುಡ್, ಇಂಗ್ಲೆಂಡ್ ರಾಬಿನ್ ಹುಡ್, ಭಾರತ ರ‍್ಯಾಲಿ, ಇಂಗ್ಲೆಂಡ್ ರ‍್ಯಾಲಿ, ಬಿಎಸ್‌ಎ ಮತ್ತು ಅಟ್ಲಾಸ್ ಒಂದಕ್ಕಿಂತ ಒಂದು ಹೆಚ್ಚು ಎಂಬಂತೆ ಬೈಸಿಕಲ್‌ಗಳನ್ನು ಸಂಗ್ರಹ ಮಾಡಿದ್ದಾರೆ. ಇದನ್ನೂ ಓದಿ: ಎಲ್ಲರಿಗೂ ಎಐ, ಎಲೆಕ್ಟ್ರಾನಿಕ್ಸ್‌, ಕಂಪ್ಯೂಟರ್‌ ಅನ್ನೋ ಆಲೋಚನೆ ಬೇಡ: ಹೆಚ್‌.ಆರ್.ರಂಗನಾಥ್‌

    ಸುಮಾರು 40 ರಿಂದ 90ರ ದಶಕದ ಸೈಕಲ್‌ಗಳು ಇವರ ಬಳಿಯಿದ್ದು, ಇವುಗಳನ್ನು ಕಂಡಾಗ ಹಳಬರಿಗಂತೂ ತಾವು ಸೈಕಲ್ ಸವಾರಿ ಮಾಡಿದ ನೆನಪುಗಳು ಮರುಕಳಿಸುವುದು ಗ್ಯಾರಂಟಿ ಎಂದರೆ ಸುಳ್ಳಾಗಲಾರದು. ಇದನ್ನೂ ಓದಿ: ಒಡಿಶಾ ರೈಲು ದುರಂತ: ಉನ್ನತ ಮಟ್ಟದ ತನಿಖೆಗೆ ಲಾಲೂ ಪ್ರಸಾದ್ ಯಾದವ್ ಒತ್ತಾಯ

  • ವ್ಯಾಲೆಂಟೈನ್ ದಿನದಂದು ವಿಶ್ ಮಾಡಿ ನಟಿ ಜಾಕ್ವೆಲಿನ್ ಗೆ ಶಾಕ್ ಕೊಟ್ಟ ಸುಕೇಶ್

    ವ್ಯಾಲೆಂಟೈನ್ ದಿನದಂದು ವಿಶ್ ಮಾಡಿ ನಟಿ ಜಾಕ್ವೆಲಿನ್ ಗೆ ಶಾಕ್ ಕೊಟ್ಟ ಸುಕೇಶ್

    ಹುಕೋಟಿ ವಂಚನೆ ಆರೋಪದಲ್ಲಿ ಜೈಲುವಾಸ ಅನುಭವಿಸುತ್ತಿರುವ ಸುಕೇಶ್ ಚಂದ್ರಶೇಖರ್ ಪ್ರೇಮಿಗಳ ದಿನದಂದು ಗೆಳತಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಶುಭಾಶಯ ಕೋರಿ ಶಾಕ್ ಕೊಟ್ಟಿದ್ದಾರೆ. ಸುಕೇಶ್ ಮತ್ತು ಜಾಕ್ವೆಲಿನ್ ಡೇಟಿಂಗ್ ಮಾಡುತ್ತಿದ್ದರು ಎನ್ನುವ ವಿಚಾರವೇನೂ ಗುಟ್ಟಾಗಿ ಉಳಿದಿರಲಿಲ್ಲ. ಆದರೆ, ಜಾರಿ ನಿರ್ದೇಶನಾಲಯ ಸುಕೇಶ್ ಮೇಲೆ ಪ್ರಕರಣ ದಾಖಲಿಸುತ್ತಿದ್ದಂತೆ ಜಾಕ್ವೆಲಿನ್ ಅಂತರ ಕಾಪಾಡಿಕೊಂಡಿದ್ದರು.

    ವಂಚನೆ ಮಾಡಿರುವ ಬಹುಕೋಟಿ ಹಣದಲ್ಲಿ ನಟಿ, ಗೆಳತಿ ಜಾಕ್ವೆಲಿನ್ ಗೆ ಆರೋಪಿ ಸುಕೇಶ್ ಹಲವು ವಸ್ತುಗಳನ್ನು ಉಡುಗೊರೆಯಾಗಿ ಕೊಡಿಸಿದ್ದಾನೆ ಎಂದು ಜಾರಿ ನಿರ್ದೇಶನಾಲಯ ಪತ್ತೆ ಮಾಡಿತ್ತು. ವಿಚಾರಣೆಗೆ ಬರುವಂತೆ ಜಾಕ್ವೆಲಿನ್ ಗೂ ನೋಟಿಸ್ ಜಾರಿ ಮಾಡಿತ್ತು. ಕೋರ್ಟಿಗೂ ಚಾರ್ಜ್ ಶೀಟ್ ಸಲ್ಲಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಕ್ವೆಲಿನ್ ಜಾಮೀನು ಕೂಡ ಪಡೆದುಕೊಂಡಿದ್ದರು. ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸುಕೇಶ್ ನಿಂದ ಜಾಕ್ವೆಲಿನ್ ಅಂತರ ಕಾಪಾಡಿಕೊಂಡಿದ್ದರು. ಇದನ್ನೂ ಓದಿ: ವಿಶೇಷ ಫೋಟೋ ಶೇರ್‌ ಮಾಡಿ ತಮನ್ನಾ ಜೊತೆಗಿನ ಪ್ರೀತಿ ಅಧಿಕೃತಗೊಳಿಸಿದ ವಿಜಯ್ ವರ್ಮಾ

    ಸುಕೇಶ್ ಹಾಗೂ ಆತನ ಮತ್ತೋರ್ವ ಗೆಳತಿಯಿಂದಾಗಿ ತನಗೆ ಮೋಸವಾಗಿದೆ ಎಂದು ಮೊನ್ನೆಯಷ್ಟೇ ಜಾಕ್ವೆಲಿನ್ ಹೇಳಿಕೆ ನೀಡಿದ್ದರು. ಹಲವು ಆರೋಪಗಳನ್ನೂ ಮಾಡಿದ್ದರು. ಸುಕೇಶ್ ಮೇಲೆ ಏನೇ ಆರೋಪ ಮಾಡಿದರೂ, ಇನ್ನೂ ತಾನು ಜಾಕ್ವೆಲಿನ್ ನನ್ನು ಪ್ರೀತಿಸುತ್ತಿರುವ ವಿಚಾರವನ್ನು ವಿಶ್ ಮಾಡುವ ಮೂಲಕ ಸುಕೇಶ್ ಸಾಬೀತು ಪಡಿಸಿದ್ದಾರೆ. ಮಾಧ್ಯಮಗಳ ಮುಂದೆಯೇ ಶುಭಾಶಯ ಕೋರಿದ್ದಾರೆ.

    ಸುಕೇಶ್ ಹೇಳಿರುವ ಶುಭಾಶಯವನ್ನು ಜಾಕ್ವೆಲಿನ್ ಹೇಗೆ ಸ್ವೀಕರಿಸುತ್ತಾರೋ ಗೊತ್ತಿಲ್ಲ. ಆದರೆ, ಸುಕೇಶ್ ನಿಂದಾಗಿ ತಮಗೆ ಸಾಕಷ್ಟು ತೊಂದರೆ ಆಗಿದೆ ಎನ್ನುವುದನ್ನು ಪದೇ ಪದೇ ಅವರು ಹೇಳುತ್ತಲೇ ಇರುತ್ತಾರೆ. ಸುಕೇಶ್ ಮಾತಿಗೆ ಜಾಕ್ವೆಲಿನ್ ಏನು ಹೇಳುತ್ತಾರೆ ಎನ್ನುವುದನ್ನು ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕನ್ನಡದ ಹುಡುಗನ ಚಿತ್ರಕ್ಕೆ ಶುಭಾಶಯ ತಿಳಿಸಿದ ರಜನಿಕಾಂತ್

    ಕನ್ನಡದ ಹುಡುಗನ ಚಿತ್ರಕ್ಕೆ ಶುಭಾಶಯ ತಿಳಿಸಿದ ರಜನಿಕಾಂತ್

    ಕಾಡು ಬಗೆದಷ್ಟು ನಿಗೂಢವೆನಿಸುವ ಸೃಷ್ಟಿ. ಮೇಲ್ನೋಟಕ್ಕೆ ತಣ್ಣಗೆ, ಹಸಿರಾಗಿ ಕಾಣುವ ಕಾಡಿನ ಒಳಹೊಕ್ಕರೆ ಊಹೆಗೂ ಮೀರಿದ ವಿಷಯಗಳು, ವಿವರಗಳು ಕಾಣಸಿಗುತ್ತದೆ. ಈಗ ಇದೇ ಕಥಾವಸ್ತುವಿನ ಮೇಲೆ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವೊಂದು ತೆರೆಗೆ ಬರುತ್ತಿದೆ. ಆ ಚಿತ್ರದ ಹೆಸರೇ ‘ಒಂದಂಕೆ ಕಾಡು’. ಕನ್ನಡ ಕಿರುತೆರೆಯಲ್ಲಿ ನಿರ್ದೇಶಕರಾಗಿ ಸಾಕಷ್ಟು ಹೆಸರು, ಅನುಭವ, ಯಶಸ್ಸು ಗಳಿಸಿದ ರಾಮಚಂದ್ರ ವೈದ್ಯ ಇದೀಗ ‘ಒಂದಂಕೆ ಕಾಡು’ ಸಿನಿಮಾ ಮೂಲಕ ಬೆಳ್ಳಿತೆರೆಗೆ ನಿರ್ದೇಶಕರಾಗಿ ಪರಿಚಯವಾಗುತ್ತಿದ್ದಾರೆ.

    ‘ಒಂದಂಕೆ ಕಾಡು’ ಚಿತ್ರಕ್ಕೆ ರಾಮಚಂದ್ರ ವೈದ್ಯ ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ದ್ವಿಭಾಷಾ ಚಿತ್ರವಾಗಿದ್ದು, ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ತೆರೆ ಕಾಣಲಿದೆ. ತೆಲುಗಿನಲ್ಲಿ ‘ಅನಗನಗಾ ಒಕ ಅಡವಿ’ ಎಂಬ ಹೆಸರಿನಲ್ಲಿ ಈ ಚಿತ್ರ ನಿರ್ಮಾಣವಾಗಿದೆ.  ರಥರ್ವ, ಸೋನಿ, ಮಧು ಹೆಗ್ಡೆ, ಸುಮಂತ್ ಭಟ್, ಪ್ರೇರಣಾ ಕಂಬಂ ಮುಖ್ಯ ಭೂಮಿಕೆಯಲ್ಲಿದ್ದಾರೆ. ಚಿತ್ರದ ನಿರ್ದೇಶಕ ರಾಮಚಂದ್ರ ವೈದ್ಯ ಅವರಿಗೆ ಸೂಪರ್ ಸ್ಟಾರ್ ರಜನಿಕಾಂತ್ ಶುಭ ಹಾರೈಸಿದ್ದಾರೆ.  ಇದನ್ನೂ ಓದಿ: `ಅವತಾರ್ ಲುಕ್‌ನಲ್ಲಿ ಮಿಂಚಿದ ನಿವೇದಿತಾ ಗೌಡ

    ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ರಾಮಚಂದ್ರ ವೈದ್ಯ ನಮ್ಮ ಸ್ನೇಹಿತರೊಬ್ಬರು ಯಾವುದೋ ಕಾರಣಕ್ಕೆ ರಜನೀಕಾಂತ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ನನ್ನ ಸಿನಿಮಾ ಬಗ್ಗೆ ರಜನೀಕಾಂತ್ ಅವರ ಬಳಿ ಮಾಹಿತಿ ಹಂಚಿಕೊಂಡಿದ್ದಾರೆ. ಅದನ್ನು ಕೇಳಿದ ಬಳಿಕ ರಜನೀಕಾಂತ್ ಒಂದು ಪುಸ್ತಕಕ್ಕೆ ತಮ್ಮ ಆಟೋಗ್ರಾಫ್ ಹಾಕಿ ಇದು ಆ ಯುವ ನಿರ್ದೇಶಕರಿಗೆ ನನ್ನ ಕಾಣಿಕೆ ಎಂದಿದ್ದಾರೆ. ಇದೊಂದು ಜೀವನಸ್ಪೂರ್ತಿಯ ಪುಸ್ತಕವಾಗಿದ್ದು, ಜೀವನದ ಬಗ್ಗೆ ಸಕಾರಾತ್ಮಕ ಚಿಂತನೆಯನ್ನು ಮೂಡಿಸುತ್ತದೆ. ರಜನೀಕಾಂತ್ ಸಹಿ ಇರುವ ಪುಸ್ತಕ ನನಗೆ ತಲುಪಿದ್ದು, ಈ ಶುಭಾಶಯ ನೋಡಿ ಥ್ರಿಲ್ ಆಗಿದೆ. ರಜನೀಕಾಂತ್ ಅವರ ಸರಳತೆ ನನ್ನನ್ನು ಅಕ್ಷರಶಃ ಮೂಕನನ್ನಾಗಿಸಿದೆ. ಈ ಪುಸ್ತಕ ರೂಪದಲ್ಲಿ ಅವರ ಆಶೀರ್ವಾದ ಸಿಕ್ಕಿದ್ದು ನನ್ನ ಬದುಕಿನ ಅವಿಸ್ಮರಣೀಯ ಕ್ಷಣ ಎಂದು ಸಂತಸ ಹಂಚಿಕೊಂಡಿದ್ದಾರೆ.

    ಮಾರ್ಚ್ ತಿಂಗಳಲ್ಲಿ ‘ಒಂದಂಕೆ ಕಾಡು’ ಮತ್ತು ‘ಅನಗನಗ ಒಕ ಅಡವಿ’ ತೆರೆ ಕಾಣಲು ಸಜ್ಜಾಗಿದ್ದು, ರಜನೀಕಾಂತ್ ಅವರಿಂದ ಬಂದ ಶುಭಾಶಯ ಚಿತ್ರತಂಡದ ಉತ್ಸಾಹ ಹೆಚ್ಚಿಸಿದೆ. ‘ಶ್ರೀ ಮಹಾಕಾಳಿ ಪ್ರೊಡಕ್ಷನ್ಸ್’ ನಿರ್ಮಾಣದ ಚೊಚ್ಚಲ ಚಿತ್ರ ಇದಾಗಿದೆ.  ಗಣೇಶ್ ಹೆಗ್ಡೆ ಛಾಯಾಗ್ರಹಣದಲ್ಲಿ ಕರ್ನಾಟಕದ ಪ್ರಕೃತಿ ಸೌಂದರ್ಯ ಅದ್ಭುತವಾಗಿ ಮೂಡಿ ಬಂದಿದೆ. ಶ್ರೀಕಾಂತ್ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದು, ಟಿ.ಜಿ. ನಂದೀಶ್ ಸಂಭಾಷಣೆ, ಮಧು ಹೆಗ್ಡೆ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಹೃದಯಶಿವ, ಡಾ. ಉಮೇಶ್ ಸಾಹಿತ್ಯವಿದೆ. ಅನುರಾಧ ಭಟ್, ಕಪಿಲ್ ನಾಯರ್, ಕೀರ್ತನ್ ಹೊಳ್ಳ ಹಿನ್ನೆಲೆ ಗಾಯನ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶಿಲ್ಪಾ ಶೆಟ್ಟಿಗೆ ಹುಟ್ಟುಹಬ್ಬದ ಸಂಭ್ರಮ – ಬಾಲಿವುಡ್ ಗಣ್ಯರಿಂದ ಶುಭಾಶಯಗಳ ಸುರಿಮಳೆ

    ಶಿಲ್ಪಾ ಶೆಟ್ಟಿಗೆ ಹುಟ್ಟುಹಬ್ಬದ ಸಂಭ್ರಮ – ಬಾಲಿವುಡ್ ಗಣ್ಯರಿಂದ ಶುಭಾಶಯಗಳ ಸುರಿಮಳೆ

    ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಗೆ ಇಂದು 46ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆ ಬಾಲಿವುಡ್‍ನ ಖ್ಯಾತ ನಟಿಯರು ಸೇರಿದಂತೆ ಅನೇಕ ಗಣ್ಯರು ಸೋಶಿಯಲ್ ಮೀಡಿಯಾದಲ್ಲಿ ಫೋಟೋವನ್ನು ಶೇರ್ ಮಾಡಿಕೊಳ್ಳುವ ಮೂಲಕ ವಿಶ್ ಮಾಡುತ್ತಿದ್ದಾರೆ.

    ಮೂಲತಃ ಕರ್ನಾಟಕದ ಕರಾವಳಿ ಮೂಲದವರೆ ಆಗಿದ್ದರೂ, ಶಿಲ್ಪಾ ಶೆಟ್ಟಿಯವರು ಬಾಲಿವುಡ್ ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಹೆಚ್ಚು ಪ್ರಖ್ಯಾತಿ ಪಡೆದರು. ಸದ್ಯ ಮುಂಬೈನಲ್ಲಿ ಬದುಕು ಕಟ್ಟಿಕೊಂಡು, ಸುಂದರವಾದ ಕುಟುಂಬ ಹೊಂದಿರುವ ಶಿಲ್ಪಾ ಶೆಟ್ಟಿ ಎಷ್ಟೇ ವಯಸ್ಸಾದರೂ ಇಂದಿನ ನಟಿಯರಿಗೆ ತಾವೇನು ಕಡಿಮೆ ಇಲ್ಲ ಎಂಬಂತೆ ಫಿಟ್‍ನೆಸ್ ಮೈನ್‍ಟೆನ್ ಮಾಡಿದ್ದಾರೆ.

    ಜೂನ್ 8ರಂದು ನಟಿ ಶಿಲ್ಪಾಶೆಟ್ಟಿಯವರು 46ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ವಿಶೇಷ ದಿನದಂದು ಬಾಲಿವುಡ್ ಸ್ಟಾರ್ ನಟಿ ಮಾಧುರಿ ದೀಕ್ಷಿತ್, ಹುಟ್ಟು ಹಬ್ಬದ ಶುಭಾಶಯಗಳು ಶಿಲ್ಪಾ. ಸಕಾರಾತ್ಮಕ ಆಲೋಚನೆಗಳು ನಿಮ್ಮದಾಗಿರಲಿ ಎಂದು ಶುಭಹಾರೈಸುತ್ತೇನೆ. ನೀವು ಮತ್ತು ನಿಮ್ಮವರು ಕ್ಷೇಮವಾಗಿದ್ದೀರಾ ಎಂದು ಭಾವಿಸುತ್ತೇನೆ. ಫಿಟ್ ಹಾಗೂ ಅದ್ಭುತವಾಗಿರಿ ಎಂದು ವಿಶ್ ಮಾಡಿದ್ದಾರೆ. ಇದನ್ನು ಓದಿ:ರಶ್ಮಿಕಾ ಬಗ್ಗೆ ಕಮೆಂಟ್ ಮಾಡಿದವರ ಚಳಿ ಬಿಡಿಸಿದ ರಕ್ಷಿತ್ ಶೆಟ್ಟಿ

    ರವೀನಾ ಟಂಡನ್‍ರವರು ಹುಟ್ಟು ಹಬ್ಬದ ಶುಭಾಶಯಗಳು ಶಿಲ್ಪಾ ಶೆಟ್ಟಿ. ಲವ್ ಯೂ ಲಾಟ್. ಈ ದಿನ ಅದ್ಭುತವಾಗಿರಲಿ ಎಂದು ವಿಶ್ ಮಾಡಿದ್ದಾರೆ. ಜೊತೆಗೆ ಬಾಲಿವುಡ್ ನಟಿ ಮಲೈಕಾ ಅರೋರಾ, ನಿರೂಪಕ ಮನೀಷ್ ಪೌಲ್ ಸೇರಿದಂತೆ ಅನೇಕ ಮಂದಿ ಶುಭಾಶಯ ತಿಳಿಸಿದ್ದಾರೆ.

    ಸುಮಾರು 13 ವರ್ಷಗಳ ಬಳಿಕ ಶಿಲ್ಪಾಶೆಟ್ಟಿಯವರು ನಿಕ್ಕಾಮಾ ಸಿನಿಮಾದ ಮೂಲಕ ಮತ್ತೆ ಬಾಲಿವುಡ್‍ಗೆ ಕಮ್ ಬ್ಯಾಕ್ ಮಾಡಿದ್ದು, ಜೂನ್ 5 ರಂದು ಚಿತ್ರ ತೆರೆ ಕಾಣಬೇಕಾಗಿತ್ತು. ಆದರೆ ಕೊರೊನಾ ಲಾಕ್‍ಡೌನ್‍ನಿಂದಾಗಿ ಚಿತ್ರ ಬಿಡುಗಡೆ ವಿಳಂಬವಾಗಿದೆ. ಇದನ್ನು ಓದಿ:ಕೊರೊನಾ ಲಸಿಕೆ ಇಂಜೆಕ್ಷನ್‍ಗೆ ಹೆದರಿಕೊಂಡ್ರಾ ನಿರ್ದೇಶಕ ಪ್ರಶಾಂತ್ ನೀಲ್?

  • 78ನೇ ವಸಂತಕ್ಕೆ ಕಾಲಿಟ್ಟ ಸಂಗೀತ ನಿರ್ದೇಶಕ ಇಳಯರಾಜ

    78ನೇ ವಸಂತಕ್ಕೆ ಕಾಲಿಟ್ಟ ಸಂಗೀತ ನಿರ್ದೇಶಕ ಇಳಯರಾಜ

    ಚೆನ್ನೈ: ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ 78ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

    ಈ ವಿಶೇಷದಿನದಂದು ಅಭಿಮಾನಿಗಳು ತಮ್ಮ ನೆಚ್ಚಿನ ಹಾಡುಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಇಳಯರಾಜರವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ಇಳಯರಾಜರವರು 1,000ಕ್ಕೂ ಹೆಚ್ಚು ಸಿನಿಮಾಗಳಿಗೆ 7,000ಕ್ಕೂ ಹೆಚ್ಚು ಹಾಡುಗಳಿಗೆ ಸಂಗೀತಾ ಸಂಯೋಜಿಸಿದ್ದಾರೆ. ವಿಶ್ವದ ಅತ್ಯುತ್ತಮ ಸಂಗೀತ ನಿರ್ದೇಶಕರಲ್ಲಿ ಇಳಯರಾಜವರು ಕೂಡ ಒಬ್ಬರಾಗಿದ್ದಾರೆ ಎಂದು ಗುರುತಿಸಲಾಗಿದೆ.

    ಕೊರೊನಾ ವೈರಸ್ ಲಾಕ್‍ಡೌನ್‍ನಿಂದ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಇಳಜರಾಜರವರು ತಮ್ಮ ಚೆನ್ನೈ ನಿವಾಸದಲ್ಲಿ ಕುಟುಂಬದೊಂದಿಗೆ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇಳಯರಾಜರವರಿಗೆ ಅಭಿಮಾನಿಗಳು ಸೇರಿದಂತೆ ಚಿತ್ರರಂಗದ ಗಣ್ಯರು ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯ ಕೋರುತ್ತಿದ್ದಾರೆ.

    ಇಳಯರಾಜರವರು ನಾಲ್ಕು ದಶಕದ ತಮ್ಮ ವೃತ್ತಿ ಜೀವನದಲ್ಲಿ ಸಾವಿರಾರು ಹಿಟ್ ಹಾಡುಗಳನ್ನು ನೀಡುವ ಮೂಲಕ ಯಶಸ್ಸು ಪಡೆದುಕೊಂಡಿದ್ದಾರೆ. ಅಲ್ಲದೆ ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಸಿನಿಮಾಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ದಕ್ಷಿಣ ಭಾರತದ ಚಲನಚಿತ್ರಗಳಿಗೆ ಪಾಶ್ಚತ್ಯ ಮಾದರಿಯ ಸಂಗೀತ ತಂತ್ರಗಳನ್ನು ಪರಿಚಯಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

    2010 ಮತ್ತು 2018ರಲ್ಲಿ ಇಳಯರಾಜರವರಿಗೆ ಸರ್ಕಾರ ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಇದನ್ನು ಓದಿ: ಸಿಬಿಎಸ್‍ಇ ಪರೀಕ್ಷೆ ರದ್ದು – ಕರ್ನಾಟದಲ್ಲಿ ಏನು?

  • ಕಷ್ಟದ ಪರಿಸ್ಥಿತಿಯಲ್ಲೂ ಅಭಿಮಾನಿಗಳಿಗೆ ಸಿಹಿ ಹಂಚಿದ ಕಲಾವಿದರು

    ಕಷ್ಟದ ಪರಿಸ್ಥಿತಿಯಲ್ಲೂ ಅಭಿಮಾನಿಗಳಿಗೆ ಸಿಹಿ ಹಂಚಿದ ಕಲಾವಿದರು

    ಬೆಂಗಳೂರು: ಯುಗಾದಿ ಹಬ್ಬದಂದು ಪ್ರತಿವರ್ಷ ಸ್ಯಾಂಡಲ್‍ವುಡ್‍ನಲ್ಲಿ ಸ್ಟಾರ್ ನಟ, ನಟಿಯರ ಸಿನಿಮಾಗಳು ಥಿಯೇಟರ್‍ನಲ್ಲಿ ರಿಲೀಸ್ ಆಗುತ್ತಿದ್ದವು. ಆದರೆ ಈ ಬಾರಿ ಕೋವಿಡ್-19 ಭೀತಿ ಎದುರಾಗಿರುವುದರಿಂದ ಯಾವುದೇ ಸಿನಿಮಾಗಳು ಬಿಗ್ ಸ್ಕ್ರೀನ್‍ನಲ್ಲಿ ತೆರೆಕಂಡಿಲ್ಲ.

    ಕೊರೊನಾ ಮಹಾಮಾರಿಗೆ ಜನ ಸಾಮಾನ್ಯರಷ್ಟೇ ಅಲ್ಲದೆ ಸ್ಟಾರ್ ನಟರು ಕೂಡ ಬೇಸತ್ತಿದ್ದಾರೆ. ಸದ್ಯ ಈ ಎಲ್ಲದರ ಮಧ್ಯೆ ಯುಗಾದಿ ಹಬ್ಬದ ಈ ದಿನದಂದು ಸಿನಿತಾರೆಯರೂ ತಮ್ಮ ಪ್ರೀತಿಯ ಅಭಿಮಾನಿಗಳಿಗೆ ಸೋಶಿಯಲ್ ಮೀಡಿಯಾದಲ್ಲಿ ಬೆಲ್ಲದಂತೆ ಸಿಹಿಯಾಗಿ ಶುಭಾಶಯ ಕೋರಿದ್ದಾರೆ.

    ನಟ ನವರಸ ನಾಯಕ ಜಗ್ಗೇಶ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ‘ತಂದೆತಾಯಿ ರಾಯರ ಕೃಪೆಯಿಂದ ಈ ಸಂವತ್ಸರ ಸಮಸ್ತ ಮನುಕುಲದ ಮನೋವಾಂಛ ಫಲಗಳನ್ನು ಈಡೇರಿಸಿ, ನಮ್ಮ ಕಾಡುತ್ತಿರುವ ಕೊರೊನಾ ವಿಶ್ವದಿಂದ ತೊಲಗಿ. ಕ್ಷೇಮ ವಿಜಯ ಆಯು ಆರೋಗ್ಯ ಮಳೆ, ಬೆಳೆ, ಧನ, ಕನಕ, ವಸ್ತು, ವಾಹನ ಸಂತಸ ದೈವಭಕ್ತಿ ಸರ್ವರಿಗೂ ಪ್ರಾಪ್ತವಾಗಲಿ ಎಂದು ರಾಯರಲ್ಲಿ ಪ್ರಾರ್ಥನೆ. ಹಿಂದುಗಳ ನಿಜ ಹೊಸವರ್ಷ ಯುಗಾದಿ ಹಬ್ಬದ ಶುಭಾಶಯಗಳು’ ಎಂದು ಟ್ವೀಟ್ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ.

    ಅಭಿಮಾನಿಗಳ ಪ್ರೀತಿಯ ದಾಸ ನಟ ದರ್ಶನ್, ‘ಸರ್ವರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಬೇವಿನ ಕಹಿಗಿಂತ ಬೆಲ್ಲದ ಸಿಹಿಯೇ ಹೆಚ್ಚಿರಲಿ. ಸುಖ, ಸಮೃದ್ಧಿ, ಶಾಂತಿ ನಿಮ್ಮ ಜೀವನದಲ್ಲಿ ಹಾಲಿನಂತೆ ಉಕ್ಕಲಿ ಎಂದು ಆಶಿಸುತ್ತೇನೆ ನಿಮ್ಮ ದಾಸ ದರ್ಶನ್ ಎಂದು ಟ್ವೀಟ್ ಮಾಡಿದ್ದಾರೆ.

    ‘ಚೈತ್ರಮಾಸದ ಪ್ರಾರಂಭದ ಸೂರ್ಯೋದಯದ ವೇಳೆ, ಚತುರ್ಮುಖ ಬ್ರಹ್ಮನು ಸಂಪೂರ್ಣ ಜಗತ್ತಿನ ಸೃಷ್ಟಿ ಮಾಡಿದನು ಎಂಬುದಾಗಿ ಯುಗಾದಿ ಬಗ್ಗೆ ಸಂಸ್ಕೃತ ಶ್ಲೋಕ ಹೇಳುತ್ತದೆ. ಹೊಸ ವರ್ಷದ ಬದುಕು ಹಬ್ಬವಾಗಿರಲು ವಾಸ್ತವಕ್ಕೆ ಮಾಸ್ಕೇ ಬೆಲ್ಲ, ಸ್ಯಾನಿಟೈಸರೇ ಬೇವು. ನವ ವಸಂತದ ಅಲೆಯಲಿ, ಜಗತ್ತಿನ ಸಂಕಷ್ಟಗಳು ದೂರಾಗಲಿ. ಸರ್ವರಿಗೂ ಯುಗಾದಿ ಹಬ್ಬದ ಶುಭಾಶಯಗಳು’ ಎಂದು ನಟ ಗೋಲ್ಡನ್ ಸ್ಟಾರ್ ಗಣೇಶ್ ಶುಭಾಶಯ ತಿಳಿಸಿದ್ದಾರೆ.

    ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ನನ್ನ ಪ್ರೀತಿಯ ಸಮಸ್ತ ಕನ್ನಡಿಗರ ಕುಟುಂಬಕ್ಕೆ ಈ ನಿಮ್ಮ ಕಿಚ್ಚನಿಂದ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಯುಗಾದಿ ಹಬ್ಬದ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ.

    ರೋರಿಂಗ್ ಸ್ಟಾರ್ ಶ್ರೀ ಮುರುಳಿ ತಮ್ಮ ಮುಂದಿನ ಮದಗಜ ಸಿನಿಮಾದ ಮುದ್ದಾದ ಪೋಸ್ಟರ್‍ವೊಂದನ್ನು ಶೇರ್ ಮಾಡಿಕೊಳ್ಳುವ ಮೂಲಕ ‘ಯುಗಾದಿ ಹಬ್ಬದ ಶುಭಾಶಯಗಳು’ ಎಂದು ವಿಶ್ ಮಾಡಿದ್ದಾರೆ.

    ಸ್ಯಾಂಡಲ್‍ವುಡ್ ನಟಿ ಹರಿಪ್ರಿಯಾ ರಯಲ್ ಸ್ಟಾರ್ ಉಪೇಂದ್ರ ಜೊತೆ ಅಭಿನಯಿಸುತ್ತಿರುವ ಲಗಾಮ್ ಸಿನಿಮಾದ ಪೋಸ್ಟರ್‍ನನ್ನು ಶೇರ್ ಮಾಡಿಕೊಳ್ಳುವುದರ ಜೊತೆಗೆ ‘ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಯುಗಾದಿ, ಎಲ್ಲರ ಬದುಕಿನಲ್ಲಿ ಹೊಸ ಸಂತೋಷ ಸಂಭ್ರಮ ತರಲಿ, ನಿಮ್ಮ ಜೀವನದ ಸಿಹಿ ಹೆಚ್ಚಿಸಲಿ’ ಎಂದು ಶುಭಾ ಹಾರೈಸಿದ್ದಾರೆ.

    ನಟ ರಕ್ಷಿತ್ ಶೆಟ್ಟಿ, ಸಮಸ್ತ ನಾಡಿನ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಎಲ್ಲರಿಗೂ ಶುಭವ ತರಲಿ ಯುಗಾದಿ ಎಂದು ವಿಶ್ ಮಾಡಿದ್ದಾರೆ.

  • ತಳಮಟ್ಟದಿಂದ ಪಕ್ಷವನ್ನು ಬಲ ಪಡಿಸಿದ ಪ್ರಮುಖ ನಾಯಕ – ಡಿವಿಎಸ್‍ಗೆ ಮೋದಿ ಶುಭಾಶಯ

    ತಳಮಟ್ಟದಿಂದ ಪಕ್ಷವನ್ನು ಬಲ ಪಡಿಸಿದ ಪ್ರಮುಖ ನಾಯಕ – ಡಿವಿಎಸ್‍ಗೆ ಮೋದಿ ಶುಭಾಶಯ

    ನವದೆಹಲಿ: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ ಸದಾನಂದ ಗೌಡರವರು ಇಂದು 68 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರ ಸಹೋದ್ಯೋಗಿಗಳು ಟ್ವೀಟ್ ಮಾಡುವ ಮೂಲಕ ಸದಾನಂದ ಗೌಡರಿಗೆ ಶುಭಾಶಯ ತಿಳಿಸಿದ್ದಾರೆ.

    ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರು, ಕೇಂದ್ರ ಸಚಿವ ಶ್ರೀ ಡಿ.ವಿ ಸದಾನಂದ ಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ನೀವು ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವಲ್ಲಿ ಪ್ರಮುಖ ಕಾರ್ಯನಿರ್ವಹಿಸಿದ ಓರ್ವ ಅನುಭವಿ ಪ್ರಭಾವಿ ನಾಯಕ. ರಾಸಾಯನಿಕ ಮತ್ತು ರಸಗೊಬ್ಬರ ಕ್ಷೇತ್ರಗಳ ಬೆಳವಣಿಗೆ ಪ್ರಮುಖ ಪಾತ್ರವಹಿಸಿದವರು. ಅವರ ದೀರ್ಘಕಾಲ ಬಾಳಬೇಕೆಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಕೇಂದ್ರದ ಹಿರಿಯ ಸಚಿವರಾದ ರಾಜನಾಥ್ ಸಿಂಗ್‍ರವರು, ರಾಷ್ಟ್ರ ಮತ್ತು ಪಕ್ಷಕ್ಕೆ ಹಲವಾರು ಸೇವೆ ಸಲ್ಲಿಸಿದ್ದಾರೆ ಮತ್ತು ತಮ್ಮ ಕರ್ತವ್ಯವನ್ನು ಸಂಪೂರ್ಣವಾಗಿ ಅಚ್ಚು-ಕಟ್ಟಿನಿಂದ ನಿರ್ವಹಿಸುತ್ತಾರೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಟ್ವೀಟ್ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ.

    ಮತ್ತೊರ್ವ ಕ್ಯಾಬಿನೆಟ್ ಸಹೋದೋಗ್ಯಿ ಪ್ರಕಾಶ್ ಜಾವಡೇಕರ್, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ ಸದಾನಂದ ಗೌಡರವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮಗೆ ಉತ್ತಮ ಆರೋಗ್ಯ ಹಾಗೂ ದೀರ್ಘಯುಷ್ಯ ದೊರೆಯಲಿ ಎಂದು ಟ್ವೀಟ್ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ.

    ಸದಾನಂದ ಗೌಡರು ಬೆಂಗಳೂರು ಉತ್ತರ ಕ್ಷೇತ್ರದಿಂದ ಗೆದ್ದು ಲೋಕಸಭೆಗೆ ಆಯ್ಕೆ ಆಗಿದ್ದಾರೆ. ಈ ಮುನ್ನ ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಕೂಡ ಕಾರ್ಯನಿರ್ವಹಿಸಿದ್ದರು. ಅಲ್ಲದೆ 2016ರಲ್ಲಿ ಕಾನೂನು ಹಾಗೂ ರೈಲ್ವೇ ಖಾತೆಯ ರಾಜ್ಯ ಸಚಿವರಾಗಿದ್ದರು.

  • ಕಠಿಣ ಪರಿಶ್ರಮಕ್ಕೆ ನಮಸ್ಕರಿಸೋಣ- ರೈತರಿಗೆ ದರ್ಶನ್ ಶುಭಾಶಯ

    ಕಠಿಣ ಪರಿಶ್ರಮಕ್ಕೆ ನಮಸ್ಕರಿಸೋಣ- ರೈತರಿಗೆ ದರ್ಶನ್ ಶುಭಾಶಯ

    ಬೆಂಗಳೂರು: ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ ಇಂದು ರೈತರ ದಿನವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರೈತರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

    ಈ ಸಂಬಂಧ ತಮ್ಮ ಫೇಸ್‍ಬುಕ್ ಲ್ಲಿ ಬರೆದುಕೊಂಡಿರುವ ದಾಸ, ರೈತರ ಕಠಿಣ ಶ್ರಮಕ್ಕೆ ಧನ್ಯವಾದಗಳನ್ನು ಧನ್ಯವಾದಗಳನ್ನು ಸಮರ್ಪಿಸೋಣ ಎಂದು ಕರೆ ನೀಡಿದ್ದಾರೆ.

    ದರ್ಶನ್ ಹೇಳಿದ್ದೇನು..?
    ರೈತರು ನಿಜವಾದ ವೀರರಾಗಿದ್ದಾರೆ ಏಕೆಂದರೆ ಅವರ ಸಮರ್ಪಣೆ ಮತ್ತು ಶ್ರಮದಿಂದ, ಬಂಜರು ಭೂಮಿಯನ್ನು ಆಹಾರವನ್ನು ಉತ್ಪಾದಿಸುವ ಭೂಮಿಯಾಗಿ ಪರಿವರ್ತಿಸಿ ಅವರು ತಮ್ಮ ಹೃದಯ ಮತ್ತು ಆತ್ಮವನ್ನು ಮಣ್ಣಿನಲ್ಲಿ ಇರಿಸಿ ಅದನ್ನು ಜೀವಿಸಲು ಮತ್ತು ನಮಗೆ ಆಹಾರವನ್ನು ಕೊಡುತ್ತಾರೆ. ಅವರ ಪ್ರಯತ್ನಕ್ಕೆ ಧನ್ಯವಾದಗಳು ಮತ್ತು ಅವರ ಕಠಿಣ ಪರಿಶ್ರಮಕ್ಕೆ ನಮಸ್ಕರಿಸೋಣ. ರೈತ ದಿನಾಚರಣೆಯ ಶುಭಾಶಯಗಳು ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ದೇಶದ 5ನೇ ಪ್ರಧಾನಿ ಮತ್ತು ರೈತ ನಾಯಕ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನವಾದ ಡಿಸೆಂಬರ್ 23 ರಂದು ಪ್ರತಿವರ್ಷ ರಾಷ್ಟ್ರೀಯ ರೈತ ದಿನವನ್ನಾಗಿ ಆಚರಿಸಲಾಗುತ್ತಿದೆ. ಚರಣ್ ಸಿಂಗ್ ರವರು ತಮ್ಮ ಅವಧಿಯಲ್ಲಿ ದೇಶದ ಅನ್ನದಾತರ ಸಾಮಾಜಿಕ ಹಾಗೂ ಆರ್ಥಿಕ ಸಬಲೀಕರಣಕ್ಕಾಗಿ ಹತ್ತಾರು ನೀತಿಗಳನ್ನು ಜಾರಿಗೆ ತಂದಿದ್ದಾರೆ. ಆಧುನಿಕ ಕೃಷಿ ಪದ್ಧತಿ ಅಳವಡಿಕೆಗೆ ಪ್ರೋತ್ಸಾಹ ನೀಡಿದ್ದರು. ಅವರು ಸ್ವತಹಃ ರೈತ ಕುಟುಂಬಕ್ಕೆ ಸೇರಿದವರಾಗಿದ್ದರಿಂದ ರೈತರ ಕಷ್ಟಗಳನ್ನು ಅರಿತವರಾಗಿದ್ದರು. ಸ್ವಾತಂತ್ರ್ಯ ಪೂರ್ವದಿಂದ ಸ್ವಾತಂತ್ಯ್ರ ನಂತರದವರೆಗೂ ಕೃಷಿಗೆ ಅವರ ಕೊಡುಗೆ ಅಪಾರವಾಗಿದೆ.

    ಭಾರತದ ಗ್ರಾಮೀಣ ಜನಸಂಖ್ಯೆಯ ಶೇ.80 ಕ್ಕಿಂತ ಹೆಚ್ಚು ಜನರಿಗೆ ಕೃಷಿಯೇ ಆದಾಯದ ಮುಖ್ಯ ಮೂಲವಾಗಿದೆ. ರೈತ ದಿನ ಅಥವಾ ರಾಷ್ಟ್ರೀಯ ರೈತ ದಿನಾಚರಣೆ ಅಥವಾ ಕಿಸಾನ್ ದಿವಸ್ ಅನ್ನು ಪ್ರತಿವರ್ಷ ಡಿಸೆಂಬರ್ 23 ರಂದು ರಾಷ್ಟ್ರವ್ಯಾಪಿ ಆಚರಿಸಲಾಗುತ್ತದೆ.