Tag: ಶೂ ಭಾಗ್ಯ

  • ಸರ್ಕಾರಿ ಶಾಲೆಯಲ್ಲಿ ಶೂ ಬದಲು ಚಪ್ಪಲಿ ಭಾಗ್ಯ – ದ್ವಂದ್ವ ನಿಲುವಿನ ಆದೇಶದಿಂದ ಹಠ ಹಿಡಿದ ಮಕ್ಕಳು

    ಸರ್ಕಾರಿ ಶಾಲೆಯಲ್ಲಿ ಶೂ ಬದಲು ಚಪ್ಪಲಿ ಭಾಗ್ಯ – ದ್ವಂದ್ವ ನಿಲುವಿನ ಆದೇಶದಿಂದ ಹಠ ಹಿಡಿದ ಮಕ್ಕಳು

    ಗದಗ: ಸರ್ಕಾರದ ಯೋಜನೆಗಳು ನಾನಾ ಸ್ವರೂಪ ಪಡೆದುಕೊಳ್ಳುತ್ತಿವೆ. ಮಕ್ಕಳಿಗೆ ಶೂ (Shoe) ಬದಲು ಚಪ್ಪಲಿ (Slippers) ನೀಡಲಾಗಿದೆ. ಸರ್ಕಾರದ ದ್ವಂದ್ವ ನಿಲುವಿನ ಆದೇಶದಿಂದ ಮಕ್ಕಳು ಹಾಗೂ ಪಾಲಕರಿಗೆ ಬೇಸರ ಮೂಡಿಸಿದ ಘಟನೆ ಗದಗ (Gadag) ಜಿಲ್ಲೆಯಲ್ಲಿ ನಡೆದಿದೆ.

    ಗದಗ ಜಿಲ್ಲೆಯಲ್ಲಿ 612 ಸರ್ಕಾರಿ ಪ್ರಾಥಮಿಕ ಶಾಲೆಗಳಿವೆ. ಆ ಶಾಲಾ ಮಕ್ಕಳ ಶೂ, ಸಾಕ್ಸ್ ಖರೀದಿಗಾಗಿ 2,36,67,930 ರೂ. ನೀಡಲಾಗಿದೆ. ಇನ್ನು 113 ಸರ್ಕಾರಿ ಪ್ರೌಢಶಾಲೆಗಳಿದ್ದು, 5,28,430 ರೂ. ನೀಡಲಾಗಿದೆ. ಆದರೆ ಲಕ್ಷ್ಮೇಶ್ವರ ಪಟ್ಟಣದ 2 ಶಾಲೆಗಳಿಗೆ ಶೂ, ಸಾಕ್ಸ್ ಬದಲಾಗಿದೆ ಚಪ್ಪಲಿ ಭಾಗ್ಯ ಕಲ್ಪಿಸಲಾಗಿದೆ.

    ಲಕ್ಷ್ಮೇಶ್ವರ ಬಸ್ತಿಬಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂಬರ್ 2 ಹಾಗೂ ಕೆಂಚಲಪೂರ ಸರ್ಕಾರಿ ಶಾಲೆ ಮಕ್ಕಳಿಗೆ ಶೂ ಬದಲಿಗೆ ಚಪ್ಪಲಿ ನೀಡಲಾಗಿದೆ. ಒಂದೇ ಮನೆಯಿಂದ ಬೇರೆ ಬೇರೆ ಶಾಲೆಗೆ ಹೋಗುವ ಮಕ್ಕಳಲ್ಲಿ ಶೂ-ಚಪ್ಪಲಿ ವಿಷಯವಾಗಿ ಗಲಾಟೆಗಳು ನಡೆದಿವೆ ಎನ್ನಲಾಗಿದೆ. ಸರ್ಕಾರ ಶೂ, ಸಾಕ್ಸ್ ವಿಷಯದಲ್ಲಿ ಮಕ್ಕಳಲ್ಲಿ ದ್ವಂದ್ವ ನೀತಿ ಮೂಡಿಸಿದೆ. ಇದು ಖಂಡನೀಯ, ಶಿಕ್ಷಣ ಇಲಾಖೆ ಆದೇಶದಿಂದ ಮಕ್ಕಳಿಗೆ ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ ಹಚ್ಚುತ್ತಿದೆ ಎಂಬ ಆರೋಪ ಪಾಲಕರದ್ದಾಗಿದೆ. ಇದನ್ನೂ ಓದಿ: ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

    ಸರ್ಕಾರ ರಾಜ್ಯದ ಆಯಾ ಭಾಗದ ಪರಿಸರಕ್ಕೆ ಹೊಂದಿಕೆ ಆಗುವಂತಹ ಶೂ ಅಥವಾ ಚಪ್ಪಲಿ ಖರೀದಿಸಬಹುದು ಎಂದು ಆದೇಶ ಹೊರಡಿಸಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಮಳೆ ಹೆಚ್ಚಾಗುತ್ತಿದ್ದು ಅಲ್ಲಿ ಶೂ ಒಳ್ಳೆಯದು. ಇನ್ನು ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣಾಂಶ ಹೆಚ್ಚಿರುವ ಹಿನ್ನೆಲೆ ಬೆವರಿನಿಂದ ಶೂ ವಾಸನೆ ಬರುತ್ತವೆ. ಹೀಗಾಗಿ ಚಪ್ಪಲಿ ಖರೀದಿಸಬಹುದು ಎಂದು ಆದೇಶಿಸಲಾಗಿದೆ. ಹೀಗಾಗಿ ಲಕ್ಷ್ಮೇಶ್ವರ ಪಟ್ಟಣದ 2 ಶಾಲೆಗಳಲ್ಲಿ ಶೂ ಭಾಗ್ಯ ಬದಲು ಚಪ್ಪಲಿ ಭಾಗ್ಯ ಕಲ್ಪಿಸಲಾಗಿದೆ. ಉತ್ತಮ ಗುಣಮಟ್ಟದ ಶೂ ಅಥವಾ ಪಾದರಕ್ಷೆಗಳನ್ನು ಖರೀದಿಸಿ, ವಿತರಣೆ ಮಾಡುವ ಜವಾಬ್ದಾರಿ ಆಯಾ ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಗೆ ವಹಿಸಲಾಗಿದೆ. ಗದಗ ಭಾಗದಲ್ಲಿ ವಾತಾವರಣಕ್ಕೆ ಶೂ ಗಿಂತ ಚಪ್ಪಲಿ ಒಳ್ಳೆಯದೆಂದು ಖರೀದಿಸಲಾಗಿದೆ. ಒಂದು ಜೊತೆ ಶೂ, ಎರಡು ಜೊತೆ ಸಾಕ್ಸ್ ನೀಡಲಾಗುತ್ತದೆ. ಶೂ ಅಥವಾ ಚಪ್ಪಲಿ ಖರೀದಿ ನಿರ್ಧಾರ ಎಸ್‌ಡಿಎಂಸಿ ತೆಗೆದುಕೊಳ್ಳುತ್ತದೆ. ಈ ಹಣ ರಾಜ್ಯ ಕಚೇರಿಯಿಂದ ಬಿಇಒ ಕಚೇರಿಗೆ ನೇರವಾಗಿ ಬಿಡುಗಡೆ ಆಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಗದಗ ಜಿಲ್ಲೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

    ಮತ್ತೊಂದೆಡೆ ವಿತರಿಸಿದ ಶೂ ಹಾಗೂ ಚಪ್ಪಲಿಗಳು ಕಳಪೆ ಗುಣಮಟ್ಟದ್ದಾಗಿವೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕಿದೆ. ಒಟ್ಟಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮಕ್ಕಳಿಗೆ ಶೂ ಭಾಗ್ಯ ಬದಲು ಚಪ್ಪಲಿ ಭಾಗ್ಯ ಬಂದಿದ್ದು ಮುಜುಗರಕ್ಕೀಡಾಗಿದೆ. ಸರ್ಕಾರ, ಶಿಕ್ಷಣ ಇಲಾಖೆಯ ಈ ನಿಲುವು ಮಕ್ಕಳಿಗೆ ಹಾಗೂ ಪಾಲಕರಿಗೆ ಬೇಸರ ಮೂಡಿಸಿದೆ. ಇದನ್ನೂ ಓದಿ: ಹಬ್ಬಕ್ಕೆ ಬಟ್ಟೆ ಕೊಂಡೊಯ್ಯುತ್ತಿದ್ದ ಪುರಸಭೆ ಸದಸ್ಯನ ತಡೆದು ಮಾರಕಾಸ್ತ್ರದಿಂದ ಹಲ್ಲೆ

  • ಶೂ ಭಾಗ್ಯ ಯೋಜನೆ ಜಾರಿ ಹಿಂದಿದೆ ಮನಕಲಕುವ ಕಥೆ: ಸಿದ್ದರಾಮಯ್ಯ ನೆನಪು

    ಶೂ ಭಾಗ್ಯ ಯೋಜನೆ ಜಾರಿ ಹಿಂದಿದೆ ಮನಕಲಕುವ ಕಥೆ: ಸಿದ್ದರಾಮಯ್ಯ ನೆನಪು

    ಬಾಗಲಕೋಟೆ: ತಾವು ಶಾಲಾ ದಿನಗಳ ಸಮಯದಲ್ಲಿ ಟೈರ್ ನಿಂದ ತಯಾರಿಸಿದ್ದ ಚಪ್ಪಲಿ ಧರಿಸಿ ಹೋಗುತ್ತಿದ್ದೇವು, ಈಗಿನ ಮಕ್ಕಳಿಗೆ ಇಂತಹ ತೊಂದರೆ ಆಗಬಾರದು ಎಂದು ಹೇಳಿ ಶೂ ಭಾಗ್ಯ ಯೋಜನೆ ಜಾರಿ ಮಾಡಿದ್ದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

    ಬಾದಾಮಿಯಲ್ಲಿ ಪುಸ್ತಕ ಪ್ರಾಧಿಕಾರದ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಟೈರ್ ಚಪ್ಪಲಿ ಪ್ರಸಂಗ ನೆನೆಸಿಕೊಂಡರು. ನಾನು ಶಾಲೆಗೆ ಹೋಗುವಾಗ ಟೈರ್ ಚಪ್ಪಲಿ ಧರಿಸುತ್ತಿದ್ದೆ. ಇಂತಹ ತೊಂದರೆ ಬರಬಾರದೆಂದು ವಿದ್ಯಾರ್ಥಿಗಳಿಗೆ ಶೂ ಭಾಗ್ಯ ಜಾರಿಗೆ ತಂದಿದ್ದೇವೆ ಎಂದರು. ಇದೇ ವೇಳೆ ತಮ್ಮ ಅಧಿಕಾರ ಮತ್ತು ಸಂಪತ್ತು ಯಾವತ್ತೂ ಬಲಾಡ್ಯರ ಕೈಯಲ್ಲಿರಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅಲ್ಲದೇ ನಾನು ಧರಿಸುತ್ತಿದ್ದ ಟೈರ್ ಚಪ್ಪಲಿ ಮೂರು ವರ್ಷ ಆದ್ರು ಹರಿದಿರಲಿಲ್ಲ ಎಂದು ನಗೆಚಟಾಕಿ ಹಾರಿಸಿದರು.

    ಬಾದಾಮಿಯ ಕನಕ ಜಯಂತಿ ಕಾರ್ಯಕ್ರಮದ ವೇಳೆ ಸಿದ್ದರಾಮಯ್ಯ ಅವರು ಸ್ವತಃ ಡೋಲು ಬಾರಿಸಿ ಗಮನ ಸೆಳೆದರು. ಆದರೆ ಆ ವೇಳೆ ಡೋಲು ಬಾರಿಸುವ ಕೋಲಿನ ಸಿಬಿರು ಚುಚ್ಚಿ ಸಿದ್ದರಾಮಯ್ಯ ಅವರ ಬೆರಳಿಗೆ ಗಾಯವಾಯಿತು. ಕೂಡಲೇ ಎಚ್ಚೆತ್ತ ಕಾರ್ಯಕರ್ತರು ಬೆರಳಿಗೆ ಚುಚ್ಚಿದ್ದ ಸಿಬಿರು ತೆಗೆದು ಪ್ರಥಮ ಚಿಕಿತ್ಸೆ ನೀಡಿದರು.

    ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಗಮಿಸಿದ್ದ ಸಿದ್ದರಾಮಯ್ಯ ಅವರು ಮಾಧ್ಯಮಗಳೊಂದಿಗೆ ಮಾತನಾಡಲು ನಿರಾಕರಿಸಿದರು. ಈ ವೇಳೆ ಸಿದ್ದರಾಮಯ್ಯನವರಿಗೆ ಮೈತ್ರಿ ಸರ್ಕಾರ ನಡೆಸುವ ಉದ್ದೇಶ ಇಲ್ಲ ಎಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ವಿಚಾರವಾಗಿ ಮಾಧ್ಯಮಗಳು ಪ್ರಶ್ನೆಗೆ ಪ್ರತಿಕ್ರಿಯೆ ನೀಡದ ಅವರು, ಹೊರಟ್ಟಿ ಹೇಳಿಕೆ ಕೊಟ್ಟಿದ್ದರೆ ತೋರಿಸಿ ಎಂದು ರಾಜ್ಯ ರಾಜಕಾರಣದ ಬಗ್ಗೆ ಮಾತನಾಡದೆ ತೆರಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸರ್ಕಾರದ ಶೂ ಭಾಗ್ಯದಲ್ಲೂ ಗೋಲ್ ಮಾಲ್- ಪ್ರತಿ ಮಕ್ಕಳ ಶೂನಲ್ಲೂ ಪಡೀತಾರೆ ಕಮಿಷನ್

    ಸರ್ಕಾರದ ಶೂ ಭಾಗ್ಯದಲ್ಲೂ ಗೋಲ್ ಮಾಲ್- ಪ್ರತಿ ಮಕ್ಕಳ ಶೂನಲ್ಲೂ ಪಡೀತಾರೆ ಕಮಿಷನ್

    ದಾವಣಗೆರೆ: ಸರ್ಕಾರಿ ಶಾಲೆಗಳ ಕಡೆ ಮಕ್ಕಳನ್ನು ಸೆಳೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಆದ್ರೆ ಈ ಯೋಜನೆಗಳಲ್ಲಿ ಮಕ್ಕಳಿಗೆ ತಲುಪಬೇಕಾದ ಹಣದಲ್ಲಿ ಕಮಿಷನ್ ಅಸೆಯಿಂದ ಮಧ್ಯವರ್ತಿಗಳು ಬ್ರಹ್ಮಾಂಡ ಭ್ರಷ್ಟಾಚಾರ ನಡೆಸುತ್ತಿದ್ದಾರೆ.

    ಅಂತಹದ್ದೇ ಒಂದು ಭ್ರಷ್ಟಾಚಾರದ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ನೀಡಬೇಕಿದ್ದ ಶೂ ಗಳಲ್ಲಿ ಶಾಲೆಯ ಎಸ್‍ಡಿಎಂಸಿ ಸದಸ್ಯರು ಹಾಗೂ ಶಿಕ್ಷಕರು ಕಮಿಷನ್ ಕೇಳುತ್ತಿರುವ ಎಕ್ಸ್ ಕ್ಲ್ಯೂಸಿವ್ ದೃಶ್ಯಗಳು ಹಾಗೂ ಫೋನ್ ರೆಕಾರ್ಡ್ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ದಾವಣಗೆರೆಯ ಕೆಲ ಸರ್ಕಾರಿ ಶಾಲೆಗಳಲ್ಲಿ ಶೂ ಸಪ್ಲೈ ಏಜೆನ್ಸಿ ಗಳ ಜೊತೆ ಡೈರೆಕ್ಟ್ ಡೀಲ್ ಮಾತನಾಡುತ್ತಿದ್ದಾರೆ. ಒಂದು ಮಗುವಿಗೆ 25 ರೂಪಾಯಿ ಗಳಿಂದ 40 ರೂಪಾಯಿಗಳವರೆಗೂ ಕಮಿಷನ್ ಮಾತನಾಡುತ್ತಿದ್ದಾರೆ. ಸರ್ಕಾರ ಬಡ ಮಕ್ಕಳಿಗೆ ಶೂ ಭಾಗ್ಯ ಜಾರಿಗೆ ತಂದ್ರೆ ಇಲ್ಲಿನ ಶಿಕ್ಷಕರು ಹಾಗೂ ಎಸ್‍ಡಿಎಂಸಿ ಸದಸ್ಯರು ಕಮಿಷನ್ ಭಾಗ್ಯವನ್ನು ಹುಟ್ಟಿಹಾಕಿಕೊಂಡಿದ್ದಾರೆ.

    ದಾವಣಗೆರೆಯಲ್ಲಿ 1 ರಿಂದ 10 ನೇ ತರಗತಿವರೆಗೆ 1607 ಸರ್ಕಾರಿ ಶಾಲೆಗಳಿದ್ದು, 1.43 ಲಕ್ಷಕ್ಕೂ ಅಧಿಕ ಶಾಲಾ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸರ್ಕಾರ ಮಕ್ಕಳಿಗೆ ಶೂ ಭಾಗ್ಯವನ್ನು ಮೂರು ಹಂತಗಳಲ್ಲಿ ವಿತರಣೆಗೆ ಕ್ರಮ ಜರುಗಿಸಿದೆ.

    * 1 ರಿಂದ 5 ನೇ ತರಗತಿ ಮಕ್ಕಳಿಗೆ ಒಂದು ಹಂತದಲ್ಲಿ ವಿತರಣೆ, ಅದಕ್ಕೆ ತಲಾ ಒಬ್ಬ ವಿದ್ಯಾರ್ಥಿಗೆ 265 ರೂಪಾಯಿ ನಿಗದಿ.
    * 6-8 ನೇ ತರಗತಿಗೆ ಮಕ್ಕಳಿಗೆ ಎರಡನೇ ಹಂತದಲ್ಲಿ ವಿತರಣೆ, ತಲಾ ಒಬ್ಬ ವಿದ್ಯಾರ್ಥಿಗೆ 295 ರೂಪಾಯಿ ನಿಗದಿ.
    * 9-10 ನೇ ತರಗತಿ ಮಕ್ಕಳಿಗೆ ಮೂರನೇ ಹಂತದಲ್ಲಿ ವಿತರಣೆ, ತಲಾ ಒಬ್ಬ ವಿದ್ಯಾರ್ಥಿಗೆ 325 ರೂಪಾಯಿ ನಿಗದಿ ಮಾಡಲಾಗಿದೆ.
    * 1 ಜೊತೆ ಶೂ, 2 ಜೊತೆ ಸಾಕ್ಸ್ ವಿತರಣೆಗೆ ಸರ್ಕಾರ ಆದೇಶ ನೀಡಿದೆ.

    ಅಲ್ಲದೇ ಸರ್ಕಾರಿ ಶಾಲೆಗಳಲ್ಲಿ ಶೂ ಸರಿಯಾಗಿ ವಿತರಣೆ ಮಾಡಲಾಗಿದೇಯೋ ಇಲ್ಲವೋ, ಕಟ್ಟ ಕಡೆಯ ಫಲಾನುಭವಿಗೆ ತಲುಪಿದೆಯೋ ಎಂದು ಗಮನಿಸಲು ಹಾಗೂ ಪರಿಶೀಲನೆ ಮಾಡಲು ಸರ್ಕಾರ ಒಂದು ತಾಲೂಕಿಗೆ 3 ರಿಂದ 4 ಇಲಾಖೇತರ ಅಧಿಕಾರಿಗಳ ಕಮಿಟಿ ಮಾಡಿದೆ. ಆದರೂ ಸಹ ಅಧಿಕಾರಿಗಳು ಮಾತ್ರ ಇದನ್ನು ಕಂಡೂ ಕಾಣದ ರೀತಿಯಲ್ಲಿ ಜಾಣ ಕುರುಡು ಪ್ರದರ್ಶನ ಮಾಡುತ್ತಿದ್ದಾರೆ.