Tag: ಶೃತಿ

  • ʻಕೊರಗಜ್ಜʼ ಫಸ್ಟ್ ಲುಕ್ ಟೀಸರ್ ಔಟ್ – 6 ಭಾಷೆಗಳಲ್ಲಿ ತಯಾರಾದ ಸಿನಿಮಾ

    ʻಕೊರಗಜ್ಜʼ ಫಸ್ಟ್ ಲುಕ್ ಟೀಸರ್ ಔಟ್ – 6 ಭಾಷೆಗಳಲ್ಲಿ ತಯಾರಾದ ಸಿನಿಮಾ

    ಸುಧೀರ್ ಅತ್ತಾವರ್ ನಿರ್ದೇಶನದ ಹಾಗೂ ತ್ರಿವಿಕ್ರಮ ಸಪಲ್ಯ ನಿರ್ಮಾಣದ ಬಹು ನಿರೀಕ್ಷಿತ, ಸಕ್ಸಸ್ ಫಿಲ್ಮ್ಸ್‌ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ಅಡಿಯ ಕೊರಗಜ್ಜ ಚಿತ್ರದ (Koragajja Movie) ಫಸ್ಟ್ ಲುಕ್ ಟೀಸರ್ ಹಾಗೂ 3D ಮೋಷನ್ ಪೋಸ್ಟರ್ ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆಯಾಯಿತು. ದಕ್ಷಿಣ ಕನ್ನಡದ ವಾದ್ಯ ಹಿಮ್ಮೇಳ ಹಾಗೂ ಉಡುಪಿಯ ಮಹಿಳಾ ತಂಡದವರ ಹುಲಿ ನೃತ್ಯದ ಮೆರವಣಿಗೆಯಲ್ಲಿ ಸಾಗಿಬಂದ ಕೊರಗಜ್ಜನ ಎರಡು ಕಟೌಟ್‌ಗಳು ಡೊಳ್ಳು, ಕೊಂಬು-ಕಹಳೆ, ಕೊಳಲು, ತಾಸೆ, ತಾಳಗಳ ವಾದ್ಯಮೇಳದ ಹಿನ್ನೆಯಲ್ಲಿ ಹುಲಿವೇಷದ ಅಬ್ಬರದ ನೃತ್ಯದ ನಡುವೆ ಫಸ್ಟ್ ಲುಕ್ ಅನಾವರಣಗೊಂಡಿರುವುದು ಅತ್ಯಂತ ವಿಶೇಷವಾಗಿತ್ತು.

    ಸಮಾರಂಭದಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವೆ ಮೋಟಮ್ಮ, ನಿರ್ಮಾಪಕಿ – ನಿರ್ದೇಶಕಿ ವಿಜಯಲಕ್ಷ್ಮಿ ಸಿಂಗ್, ನಿರ್ದೇಶಕ, ನಿರ್ಮಾಪಕ, ಸಿನಿಮಾದ ನಟ ನಟಿಯರೆಲ್ಲ ಕಟೌಟ್‌ಗೆ ಪುಷ್ಪಾರ್ಚನೆಗೊಳಿಸಿರುವುದು ಕಾರ್ಯಕ್ರಮಕ್ಕೆ ವಿಶೇಷವಾದ ಮೆರುಗು ನೀಡಿತು.

    ನಿರ್ದೇಶಕ ಸುಧೀರ್ ಅತ್ತಾವರ್ ಮಾತನಾಡಿ, ಮೂರು ವರ್ಷಗಳ ಹಿಂದೆ ಆರಂಭವಾದ ಸಿನಿಮಾ ಈಗ ಅನೇಕ ಅಡೆತಡೆಗಳನ್ನ ದಾಟಿ ಬಿಡುಗಡೆಯ ಹಂತ ತಲುಪಿದೆ. ಇದರ ಪೂರ್ವಭಾವಿಯಾಗಿ ಇಂದು ಫಸ್ಟ್ ಲುಕ್ ಟೀಸರ್ ಹಾಗೂ 3D ಪೋಸ್ಟರ್ ಬಿಡುಗಡೆ ಮಾಡಿದ್ದೇವೆ. ನನಗೆ ತಿಳಿದ ಹಾಗೆ ದಕ್ಷಿಣ ಭಾರತದಲ್ಲೇ ಇದೇ ಮೊದಲ ಬಾರಿಗೆ ಈ ರೀತಿಯ 3D ಪೋಸ್ಟರ್ ಮಾಡಿರುವುದು. ಕೊರಗಜ್ಜನ ಆಶೀರ್ವಾದದಿಂದ ಸಿನಿಮಾ ಅಂದುಕೊಂಡ ಹಾಗೆ ಬಂದಿದೆ. ಚಿತ್ರವನ್ನು ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಪಕ ತ್ರಿವಿಕ್ರಮ ಸಪಲ್ಯ ಮತ್ತು ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ ತಮ್ಮ ಕಾರ್ಯ ನಿರ್ವಹಿಸಿರುತ್ತಾರೆ. ಚಿತ್ರತಂಡದ ಸಹಕಾರ ಅಪಾರ ಎಂದು ಶ್ಲಾಘಿಸಿದ್ರು.

    ಒಟ್ಟು ಆರು ಭಾಷೆಗಳಲ್ಲಿ ಮೂಡಿಬಂದಿರುವ ನಮ್ಮ ಚಿತ್ರದಲ್ಲಿ 31 ಹಾಡುಗಳಿವೆ (ಆರು ಭಾಷೆಗಳಿಂದ). ಗೋಪಿ ಸುಂದರ್ ಅವರ ಸಂಗೀತ ಸಂಯೋಜನೆಯಲ್ಲಿ ಭಾರತದ ಪ್ರಸಿದ್ದ ಗಾಯಕ – ಗಾಯಕಿಯರು ಈ ಹಾಡನ್ನು ಹಾಡಿದ್ದಾರೆ. ಸುಮಾರು 24 ವರ್ಷದ ತನಿಯ ದೈವತ್ವಕ್ಕೇರಿ ಕೊರಗಜ್ಜನಾದ ಕಥೆಯನ್ನು ಈ ಚಿತ್ರದಲ್ಲಿ ತೋರಿಸಲಾಗುತ್ತಿದೆ ಎಂದು ತಿಳಿಸಿದರು.

    ವಿಜಯಲಕ್ಷ್ಮಿ ಮಾತನಾಡಿ, ಇದು ನಾನು ಜೈ ಜಗದೀಶ್ ಆರಂಭಿಸಿದ ಸಿನಿಮಾ. ಸುಮಾರು 25 ಸಿನಿಮಾ ನಿರ್ಮಾಣ ಮಾಡಿರುವ ನಮಗೆ ಈ ಸಿನಿಮಾ ನಿರ್ಮಾಣ ಮಾಡಲು ಸಾಧ್ಯವಾಗದೆ, ಈ ಪ್ರೋಜೆಕ್ಟ್ ನಿಂದ ಹಿಂದೆ ಸರಿದೆವು. ಆದರೆ ಈಗ ಅದು ಸುಧೀರ್ ಅತ್ತಾವರ್‌ಗೆ ಇದು ಒಲಿದಿದೆ. ವಿಭಿನ್ನವಾಗಿ ಫಸ್ಟ್ ಲುಕ್ ರಿಲೀಸ್ ನೋಡಿ, ಈ ಸಿನಿಮಾ ಯಾವ ಮಟ್ಟದಲ್ಲಿ ಮೂಡಿಬಂದಿರಬಹುದೆನ್ಬುವುದನ್ನು ಊಹಿಸಬಹುದು ಎಂದು ತಿಳಿಸಿದರು.

    ನಿರ್ಮಾಪಕ ತ್ರಿವಿಕ್ರಮ ಸಪಲ್ಯ ಮಾತನಾಡಿ, ನಿರ್ದೇಶಕರು ನನಗೆ ಬಹಳ ವರ್ಷಗಳ ಸ್ನೇಹಿತರು. ಅವರು ಹೇಳಿದ ಕಥೆ ಕೇಳಿದ ತಕ್ಷಣ ನಿರ್ಮಾಣಕ್ಕೆ ಮುಂದಾದೆ. ನಾವು ಸಹ ಕೊರಗಜ್ಜನನ್ನು ಆರಾಧಿಸುವ ಕುಟುಂಬದವರು. ಅನುಭವಿ ಕಲಾವಿದರು ಹಾಗೂ ನುರಿತ ತಂತ್ರಜ್ಞರು ನಮ್ಮ ಚಿತ್ರದಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ನವೆಂಬರ್ ಕೊನೆಗೆ ಚಿತ್ರವನ್ನು ತೆರೆಗೆ ತರುವ ಪ್ರಯತ್ನದಲ್ಲಿದ್ದೇವೆ ಎಂದರು.

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕ ವಿದ್ಯಾಧರ್ ಶೆಟ್ಟಿ ಈ ಸಿನಿಮಾದ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಸತತ 3 ವರ್ಷಗಳಿಂದ ಸಿನಿಮಾದ ಚಿತ್ರೀಕರಣ ಮತ್ತು ಪೋಸ್ಟ್ ಪ್ರೊಡಕ್ಷನ್ ಕೆಲಸದ ಬಗೆಗಿನ ಸಾವಿಸ್ತಾರ ವಿಚಾರ ಹಂಚಿಕೊಂಡರು. ನಿರ್ದೇಶಕರ ಹಾಗೂ ಸಹ ಕಲಾವಿದರ ಕಾರ್ಯವೈಖರಿ ಶ್ಲಾಘಿಸುತ್ತಾ, ಚಿತ್ರೀಕರಣದ ಅನುಭವಗಳನ್ನು ಹಂಚಿಕೊಂಡ ಹಿರಿಯ ನಟಿ ಭವ್ಯ ಅವರು, ರಾಣಿ ʻಪಂಜಂದಾಯಿʼ ಪಾತ್ರದಲ್ಲಿ ಖ್ಯಾತ ನಟ ಕಬೀರ್ ಬೇಡಿಯೊಂದಿಗೆ ನಟಿಸಿಸ ಅನುಭವ ಹೇಳಿದರು. ಹಾಡಿನ ಬಿಟಿಎಸ್ ಮತ್ತು ಮೇಕಿಂಗ್ ವೀಡಿಯೋ ನೆರೆದವರನ್ನು ಮಂತ್ರಮುಗ್ಧಗೊಳಿಸಿತು.

    ನನ್ನ ವೃತ್ತಿಜೀವನದಲ್ಲೇ ಇದು ವಿಭಿನ್ನವಾದ ಸಿನಿಮಾ ಎಂದು ಮಾತನಾಡಿದ ನಟಿ ಶೃತಿ, ನಾನು ಈ ಚಿತ್ರದಲ್ಲಿ ಕೊರಗಜ್ಜನ ಸಾಕು ತಾಯಿಯ ಪಾತ್ರ ನಿರ್ವಹಿಸಿದ್ದೇನೆ. ಈ ಚಿತ್ರಕ್ಕಾಗಿ ಸತತ ಇಪ್ಪತ್ತೆಂಟು ಗಂಟೆಗಳ ಚಿತ್ರೀಕರಣ ಮಾಡಿದ್ದೇನೆ. ಇದು ಮರೆಯಲಾರದ ಅನುಭವ. ಅಷ್ಟು ಹೊತ್ತು ಕೆಲಸ ಮಾಡಿದರೂ ನಿರ್ದೇಶಕರಲ್ಲಿದ್ದ ಉತ್ಸಾಹ ಒಂದು ಚೂರು ಕಡಿಮೆ ಆಗಿರಲಿಲ್ಲ. ಕೊರಗಜ್ಜನ ಆಶೀರ್ವಾದದಿಂದ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

  • ಹೀರೋಯಿನ್ ಆಗಿ ಎಂಟ್ರಿ ಕೊಡೋಕೆ ರೆಡಿಯಾಗಿದ್ದಾರೆ ಹಿರಿಯ ನಟಿ ಶೃತಿ ಪುತ್ರಿ

    ಹೀರೋಯಿನ್ ಆಗಿ ಎಂಟ್ರಿ ಕೊಡೋಕೆ ರೆಡಿಯಾಗಿದ್ದಾರೆ ಹಿರಿಯ ನಟಿ ಶೃತಿ ಪುತ್ರಿ

    90ರ ದಶಕದ ನಟ ನಟಿಯರ (Actress) ಮಕ್ಕಳು ಅನೇಕರು ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಕೆಲವರು ಎಂಟ್ರಿ ಕೊಡೋಕೆ ತಯಾರಿ ಮಾಡಿಕೊಳ್ತಿದ್ದಾರೆ.

    ಈ ನಿಟ್ಟಿನಲ್ಲಿ ಹಲವು ದಿನಗಳಿಂದ ಶೃತಿ ಮಗಳ ಸಿನಿಮಾ (Cinema) ಎಂಟ್ರಿಯ ಕುರಿತಾಗಿ ಸುದ್ದಿ ಕೇಳಿ ಬರ್ತಾ ಇತ್ತು. ಇದೀಗ ಆ ಸಮಯ ಹತ್ತಿರದಲ್ಲೇ ಇರುವ ಸೂಚನೆ ಕಂಡುಬರುತ್ತಿದೆ. ನಟಿ ಶೃತಿ ಮಗಳು ಗೌರಿ (Mahendar Gowri) ಮೇಕೋವರ್ ಮಾಡಿಕೊಂಡಿದ್ದು ಹೀರೋಯಿನ್ ಆಗಿ ಎಂಟ್ರಿ ಕೊಡೋದಕ್ಕೆ ರೆಡಿಯಾಗಿದ್ದಾರೆ. ಗೌರಿ-ಗಣೇಶ ಹಬ್ಬಕ್ಕೆ ಶೃತಿ ಮಗಳು ʻಗೌರಿ ಅಲಿಯಾಸ್ ಮಿಲಿʼ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಇದನ್ನೂ ಓದಿ: ಪುಟ್ಟ ಗಣೇಶನ ಹಿಡಿದು ಸಿಹಿ ಸುದ್ದಿ ಹಂಚಿಕೊಂಡ ಐಶ್ವರ್ಯ-ವಿನಯ್ ದಂಪತಿ

    ಶೃತಿ ಮಗಳು ಗೌರಿ ಕೂಡ ತಾಯಿಯಂತೆ ಸರಳ, ಗಂಭೀರ ಉಡುಗೆಯಲ್ಲಿ ಸದಾ ಮಿಂಚುತ್ತಾರೆ. ಇದೀಗ ಸಾಂಪ್ರದಾಯಿಕ ಉಡುಗೆಯಲ್ಲಿ ಫೋಟೋಶೂಟ್ ಮಾಡಿಸಿದ್ದು ಹೊಸ ನಾಯಕಿಯಂತೆ ಕಂಗೊಳಿಸುತ್ತಿದ್ದಾರೆ. ಎಸ್.ಮಹೇಂದರ್ ಹಾಗೂ ಶೃತಿ ಪುತ್ರಿಯಾಗಿರುವ ಗೌರಿ ತಮ್ಮ ಸಿನಿಮಾ ಕುಟುಂಬದ ಪೀಳಿಗೆಯ ಮುಂದಿನ ನಟಿ. ಶೀಘ್ರದಲ್ಲೇ ಶೃತಿ ಮಗಳು ಗೌರಿ ಚಿತ್ರರಂಗಕ್ಕೆ ನಾಯಕಿಯಾಗಿ ಎಂಟ್ರಿ ಕೊಡಲಿದ್ದಾರೆ. ಇದನ್ನೂ ಓದಿ: ಖುಷಿಯಾಗಿ ಗಣೇಶ ಹಬ್ಬ ಆಚರಣೆ – ಡಿವೋರ್ಸ್ ವದಂತಿ ತಳ್ಳಿಹಾಕಿದ ನಟ ಗೋವಿಂದ ದಂಪತಿ

  • ವಯನಾಡು ದುರಂತದಲ್ಲಿ ಕುಟುಂಬದ 9 ಮಂದಿಯನ್ನು ಕಳೆದುಕೊಂಡ್ಳು, ಈಗ ಮದುವೆಯಾಗಬೇಕಿದ್ದ ಹುಡುಗನೂ ಅಪಘಾತದಲ್ಲಿ ಸಾವು

    ವಯನಾಡು ದುರಂತದಲ್ಲಿ ಕುಟುಂಬದ 9 ಮಂದಿಯನ್ನು ಕಳೆದುಕೊಂಡ್ಳು, ಈಗ ಮದುವೆಯಾಗಬೇಕಿದ್ದ ಹುಡುಗನೂ ಅಪಘಾತದಲ್ಲಿ ಸಾವು

    – ಮತ್ತೆ ಅನಾಥೆಯಾದ್ಳು ಶೃತಿ

    ತಿರುವನಂತಪುರಂ: ವಯನಾಡಿನಲ್ಲಿ ಭೂಕುಸಿತದಿಂದ ಇಡೀ ಕುಟುಂಬವನ್ನು ಕಳೆದುಕೊಂಡು ನೋವಿನಲ್ಲಿದ್ದ ಸಂತ್ರಸ್ತೆ ಶೃತಿಗೆ ಈಗ ಮತ್ತೊಂದು ಆಘಾತ ಎದುರಾಗಿದೆ. ಶೃತಿ ಭಾವಿ ಪತಿ ಜೆನ್ಸನ್‌ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

    ಕೋಝಿಕ್ಕೋಡ್-ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿಯ ವೆಲ್ಲರಂಕುನ್ನು ಬಳಿ ಬಸ್‌ಗೆ ಓಮ್ನಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಅಂಬ್ಲವಾಯಲ್‌ ಮೂಲದ ಜೆನ್ಸನ್ ತೀವ್ರವಾಗಿ ಗಾಯಗೊಂಡಿದ್ದರು.

    ಮಂಗಳವಾರ ಮಧ್ಯಾಹ್ನ ಸುಮಾರು 3:30ಕ್ಕೆ ಅಪಘಾತವಾಗಿ ಜೆನ್ಸನ್‌ ಗಂಭೀರ ಗಾಯಗೊಂಡಿದ್ದರು. ಮೆಪ್ಪಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ರಕ್ತಸ್ರಾವ ತಡೆಯಲಾಗದೆ ದಾರುಣವಾಗಿ ಸಾವನ್ನಪ್ಪಿದ್ದಾರೆ. ವ್ಯಾನ್‌ನಲ್ಲಿದ್ದವರಲ್ಲಿ ಶೃತಿ ಕಾಲಿಗೆ ಮಾತ್ರ ಸಣ್ಣಪುಟ್ಟ ಗಾಯವಾಗಿತ್ತು.

    ಕೋಝಿಕ್ಕೋಡ್‌ನಿಂದ ಸುಲ್ತಾನ್ ಬತ್ತೇರಿಗೆ ತೆರಳುತ್ತಿದ್ದ ‘ಬಟರ್‌ಫ್ಲೈ’ ಹೆಸರಿನ ಬಸ್‌ಗೆ ವ್ಯಾನ್ ಡಿಕ್ಕಿ ಹೊಡೆದು ಅಪಘಾತವಾಗಿತ್ತು. ಕಲ್ಪೆಟ್ಟಾದಿಂದ ಬಂದ ಅಗ್ನಿಶಾಮಕ ರಕ್ಷಣಾ ತಂಡಗಳು ಸ್ಥಳೀಯ ನಿವಾಸಿಗಳ ನೆರವಿನಿಂದ ವಾಹನದೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದರು.

    ಅಪಘಾತದಲ್ಲಿ ಶೃತಿ ಅವರ ಸೋದರ ಸಂಬಂಧಿ ಲಾವಣ್ಯ ಕೂಡ ಗಾಯಗೊಂಡಿದ್ದಾರೆ. ಈ ಹಿಂದೆ ಇದೇ ಭೂಕುಸಿತದಲ್ಲಿ ಲಾವಣ್ಯ ತನ್ನ ತಂದೆ-ತಾಯಿ ಮತ್ತು ಸಹೋದರನನ್ನು ಕಳೆದುಕೊಂಡಿದ್ದರು. ಈಕೆ ಶೃತಿ ಅವರ ತಂದೆ ಶಿವಣ್ಣರ ಸಹೋದರ ಸಿದ್ದರಾಜು ಮತ್ತು ಅವರ ಪತ್ನಿ ದಿವ್ಯಾ ದಂಪತಿ ಮಗಳು.

  • ರಾಜಕೀಯಕ್ಕೆ ಎಂಟ್ರಿ ಕೊಡ್ತೀರಾ..?- ರಾಕಿಂಗ್ ಸ್ಟಾರ್ ಯಶ್ ಹೇಳಿದ್ದು ಹೀಗೆ

    ರಾಜಕೀಯಕ್ಕೆ ಎಂಟ್ರಿ ಕೊಡ್ತೀರಾ..?- ರಾಕಿಂಗ್ ಸ್ಟಾರ್ ಯಶ್ ಹೇಳಿದ್ದು ಹೀಗೆ

    ಕೆಜಿಎಫ್ -2 (KGF-2) ಸಕ್ಸಸ್ ಬಳಿಕ ಮುಂದಿನ ಸಿನಿಮಾದ (Cinema) ತಯಾರಿಯಲ್ಲಿ ರಾಕಿಂಗ್ ಸ್ಟಾರ್ (RockingStar) ಯಶ್ ಫುಲ್ ಬ್ಯುಸಿಯಾಗಿದ್ದಾರೆ. ಈ ನಡುವೆ ಯಶ್ ರಾಜಕೀಯಕ್ಕೆ ಬರುತ್ತಾರೆ ಅನ್ನೋ ಚರ್ಚೆ ಹುಟ್ಟಿಕೊಂಡಿವೆ.

    ಈಗಾಗಲೇ ಅಂಬರೀಶ್, ಜಗ್ಗೇಶ್ (Jaggesh), ಶೃತಿ, ರಮ್ಯಾ (Ramya) ಹಾದಿಯಾಗಿ ಅನೇಕ ಸಿನಿ ದಿಗ್ಗಜರು ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಾಗೆಯೇ ಕೆಜಿಎಫ್-2 ಸಕ್ಸಸ್ ಬಳಿಕ ಅಭಿಮಾನಿಗಳ ಅಲೆ ಎದ್ದಿರೋದ್ರಿಂದ ಯಶ್ (Yash) ಕೂಡ ರಾಜಕೀಯಕ್ಕೆ (Politics) ಬರುತ್ತಾರೆ ಅನ್ನೋ ಮಾತುಗಳು ಕೇಳಿಬರುತ್ತಿದ್ದು, ಇದಕ್ಕೆ ಯಶ್ ಅವರೇ ಫುಲ್‌ಸ್ಟಾಪ್ ಇಟ್ಟಿದ್ದಾರೆ. ಈ ಬಗ್ಗೆ ಮಾಧ್ಯಮ ಸಂದರ್ಶನವೊಂದರಲ್ಲಿ ಯಶ್ ಉತ್ತರ ಕೊಟ್ಟಿದ್ದಾರೆ. ಇದನ್ನೂ ಓದಿ: ಕೊನೆಗೂ KGF-3 ರಹಸ್ಯ ಬಿಚ್ಚಿಟ್ಟ ರಾಕಿಂಗ್ ಸ್ಟಾರ್ ಯಶ್

    `ಮೊದಲಿಗೆ ನಾನು ನನ್ನಲ್ಲಿ ಮತ್ತು ನನ್ನ ಸಿನಿ ಉದ್ಯಮದಲ್ಲಿ ಬಹಳಷ್ಟು ಬದಲಾವಣೆ ತರಲು ಬಯಸುತ್ತೇನೆ. ನನ್ನ ಮಿತಿಯಲ್ಲಿ, ನಾನು ಸಮಾಜದ ಕೆಲ ವಿಷಯಗಳನ್ನು ಬದಲಾಯಿಸಲು ಪ್ರಯತ್ನಿಸುತ್ತೇನೆ. ಅವಶ್ಯಕತೆಯಿದ್ದ ಕೆಲಸಗಳನ್ನು ಈಗಾಗಲೇ ಮಾಡುತ್ತಿದ್ದೇವೆ. ಅದರಿಂದ ಕೆಲವರ ಜೀವನ ಬದಲಾಯಿಸಿದೆ. ಅದಕ್ಕೆ ರಾಜಕೀಯವೇ ಬೇಕು ಅನ್ನುವಂತಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ- ಲಲಿತಾ ನಾಯಕ್‌ಗೆ ಖಾದರ್ ತಿರುಗೇಟು

    ಬಹಳಷ್ಟು ಜನ ರಾಜಕೀಯ ಕೆಟ್ಟದ್ದು, ಬರೀ ಭ್ರಷ್ಟಾಚಾರ ಅಂತಾರೆ, ರಾಜಕಾರಣಿಗಳು ಜನರ ದುಡ್ಡಲ್ಲೇ ಬದುಕುತ್ತಿದ್ದಾರೆ ಅಂತಾರೆ. ಅದು ಎಷ್ಟರಮಟ್ಟಿಗೆ ಸತ್ಯ ಅನ್ನೋದು ನನಗೆ ಗೊತ್ತಿಲ್ಲ. ಆದರೆ ನಾನು ಎಂದಿಗೂ ನಟನಾಗಿ ಇರುತ್ತೇನೆ. ರಾಜಕೀಯ ಕೃತಜ್ಞತೆಯಿಲ್ಲದ ಕೆಲಸ. ಅಲ್ಲಿಗೆ ನಾನು ಬರೋದಿಲ್ಲ ಎಂದು ಖಡಕ್ ಆಗಿ ಉತ್ತರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಭಜರಂಗಿ 2’ ಮೋಷನ್ ಪೋಸ್ಟರ್ ರಿಲೀಸ್- ಕಿರಾಕಿ ಸಾಮ್ರಾಜ್ಯದ ಹಂತಕನ ಭಯಾನಕ ರೂಪ ದರ್ಶನ

    ‘ಭಜರಂಗಿ 2’ ಮೋಷನ್ ಪೋಸ್ಟರ್ ರಿಲೀಸ್- ಕಿರಾಕಿ ಸಾಮ್ರಾಜ್ಯದ ಹಂತಕನ ಭಯಾನಕ ರೂಪ ದರ್ಶನ

    ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್, ನಿರ್ದೇಶಕ ಎ. ಹರ್ಷ ಹ್ಯಾಟ್ರಿಕ್ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ಚಿತ್ರ ‘ಭಜರಂಗಿ 2’. ಈ ಜೋಡಿ ಈಗಾಗಲೇ ವಜ್ರಕಾಯ, ಭಜರಂಗಿ ಚಿತ್ರದ ಮೂಲಕ ಸೂಪರ್ ಸಕ್ಸಸ್ ನೀಡಿ ಮೋಡಿ ಮಾಡಿದ್ದು, ‘ಭಜರಂಗಿ 2’ ಮೂಲಕ ಹ್ಯಾಟ್ರಿಕ್ ಗೆಲುವು ದಾಖಲಿಸುವ ಹಾದಿಯಲ್ಲಿದೆ. ಟೀಸರ್ ಮೂಲಕ ಸ್ಯಾಂಡಲ್‍ವುಡ್ ಅಂಗಳದಲ್ಲಿ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿರುವ ‘ಭಜರಂಗಿ 2’ ಚಿತ್ರ ಇಂದು ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ.

    ಮೋಷನ್ ಪೋಸ್ಟರ್ ನಲ್ಲಿ ಕಿರಾಕಿ ಸಾಮ್ರಾಜ್ಯದ ಕರಾಳ ದರ್ಶನದ ಜೊತೆಗೆ ಕಿರಾಕಿ ಸಾಮ್ರಾಜ್ಯದ ಕೊಲೆಗಡುಕನ ಭಯಂಕರ ರೂಪವನ್ನು ಚಿತ್ರತಂಡ ರಿವೀಲ್ ಮಾಡಿದ್ದು, ಮತ್ತೊಮ್ಮೆ ಮೋಷನ್ ಪೋಸ್ಟರ್ ಮೂಲಕ ಹೊಸ ಕಥೆ ಹೇಳಿ ಚಿತ್ರದ ಮೇಲಿನ ಕ್ಯೂರಿಯಾಸಿಟಿ ಹೆಚ್ಚಿಸಿದ್ದಾರೆ ನಿರ್ದೇಶಕ ಎ. ಹರ್ಷ. ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಹೊಸ ಗೆಟಪ್ ನಲ್ಲಿ ಮತ್ತಷ್ಟು ಎನರ್ಜಿಟಿಕ್ ಆಗಿ ತೆರೆ ಮೇಲೆ ಕಾಣಸಿಗಲಿದ್ದು, ‘ಭಜರಂಗಿ 2’ ಫ್ಯಾಂಟಸಿ ಸಿನಿಮಾವಾಗಿದ್ದು ಎರಡು ಶೇಡ್ ನಲ್ಲಿ ಶಿವಣ್ಣ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಶಿವಣ್ಣ ಜೋಡಿಯಾಗಿ ನಟಿ ಭಾವನಾ ಮೆನನ್ ತೆರೆ ಹಂಚಿಕೊಂಡಿದ್ದಾರೆ. ಹಿರಿಯ ನಟಿ ಶ್ರುತಿ ‘ಭಜರಂಗಿ 2’ ಚಿತ್ರದ ಪ್ರಮುಖ ಆಕರ್ಷಣೆಯಾಗಿದ್ದು, ಈ ಹಿಂದೆ ಕಾಣಿಸಿಕೊಳ್ಳದ ಗೆಟಪ್ ನಲ್ಲಿ, ವಿಭಿನ್ನ ಪಾತ್ರದಲ್ಲಿ ಶ್ರುತಿ ತೆರೆ ಮೇಲೆ ರಂಜಿಸಲಿದ್ದಾರೆ.

    ವಜ್ರಕಾಯ, ಭಜರಂಗಿ ಸಿನಿಮಾಗಳಿಗಿಂತಲೂ ಎಲ್ಲಾ ರೀತಿಯಲ್ಲೂ ಅದ್ಧೂರಿತನದಿಂದ ಕೂಡಿರಲಿದೆ ‘ಭಜರಂಗಿ 2 ಚಿತ್ರ’. ಅದರ ಝಲಕ್ ಈಗಾಗಲೇ ಟೀಸರ್ ನಲ್ಲಿ ನೋಡಿಯೂ ಆಗಿದೆ. ಜಯಣ್ಣ ಫಿಲಂಸ್ ಬ್ಯಾನರ್ ಅಡಿಯಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗುತ್ತಿರುವ ಚಿತ್ರಕ್ಕೆ ಚಂದನವನದ ಹೆಸರಾಂತ ನಿರ್ಮಾಪಕರು, ವಿತರಕರಾದ ಜಯಣ್ಣ, ಭೋಗೇಂದ್ರ ಬಂಡವಾಳ ಹೂಡಿದ್ದಾರೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ‘ಭಜರಂಗಿ 2’ ಚಿತ್ರ ಮೂಡಿಬರಲಿದ್ದು, ಸ್ವಾಮಿ.ಜೆ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ಟೀಸರ್ ಮೂಲಕ ಧೂಳೆಬ್ಬಿಸಿದ ‘ಭಜರಂಗಿ 2’ ಚಿತ್ರದ ಮೇಲೆ ದೊಡ್ಮನೆ ಅಭಿಮಾನಿ ಬಳಗದ ನಿರೀಕ್ಷೆ ಹೆಚ್ಚಿದ್ದು ಚಿತ್ರ ಬಿಡುಗಡೆಯನ್ನೇ ಎದುರು ನೋಡುತ್ತಿದ್ದಾರೆ.

    https://www.youtube.com/watch?v=vZGKtlPP7Ow&feature=youtu.be

  • ನಟಿ ಶೃತಿಯಿಂದ KSRTC ಬಸ್ಸಿನಲ್ಲಿರೋ ವಿಶೇಷ ಸ್ತ್ರೀ ಶೌಚಾಲಯ ಪರಿಶೀಲನೆ

    ನಟಿ ಶೃತಿಯಿಂದ KSRTC ಬಸ್ಸಿನಲ್ಲಿರೋ ವಿಶೇಷ ಸ್ತ್ರೀ ಶೌಚಾಲಯ ಪರಿಶೀಲನೆ

    ಬೆಂಗಳೂರು: ನಟಿ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ಇಲಾಖೆ ಅಧ್ಯಕ್ಷೆ ಶೃತಿ ಮೆಜೆಸ್ಟಿಕ್‍ನ ಕೆಂಪೇಗೌಡ ಬಸ್ ನಿಲ್ದಾಣದ ಸ್ತ್ರೀ ಶೌಚಾಲಯವನ್ನು ವೀಕ್ಷಿಸಿದ್ರು.

    ಕೆಎಸ್‌ಆರ್‌ಟಿಸಿ ನಿಗಮವು ಅನುಷ್ಠಾನಗೊಳಿಸಿರುವ ಸ್ತ್ರೀ ಶೌಚಾಲಯದ ಅನುಷ್ಠಾನ, ಬಳಕೆ ಹಾಗೂ ಮಹಿಳೆಯರಿಗೆ ಆಗುತ್ತಿರುವ ಅನುಕೂಲಗಳ ಬಗ್ಗೆ ಮಾಹಿತಿ ಪಡೆದರು. ಸ್ತ್ರೀ ಶೌಚಾಲಯಗಳ ಅವಶ್ಯಕತೆಯು ಬಹಳಷ್ಟು ಇದ್ದು ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಇದನ್ನು ಅನುಷ್ಠಾನಕ್ಕೆ ತರಬೇಕೆಂದು ತಿಳಿಸಿದರು.

    ಮೆಜೆಸ್ಟಿಕ್‍ನ ಕೆಎಸ್‌ಆರ್‌ಟಿಸಿಯ ಕೆಂಪೇಗೌಡ ಬಸ್ ನಿಲ್ದಾಣದ ಒಂದನೇ ಟರ್ಮಿನಲ್ ನ ಪ್ರವೇಶ ದ್ವಾರದ ಸಮೀಪ ಈ ವಿಶೇಷ ಶೌಚಾಲಯವಿದ್ದು, ಬಸ್ ನಿಲುಗಡೆ ಮಾಡಲಾಗಿದೆ. ಕೆಎಸ್‌ಆರ್‌ಟಿಸಿ ಗುಜರಿ ಬಸ್ಸನ್ನು ಹೈಟೆಕ್ ಶೌಚಾಲಯವಾಗಿ ಪರಿವರ್ತಿಸಲಾಗಿದೆ. ಈ ಮುಖಾಂತರ ಕೆಎಸ್‌ಆರ್‌ಟಿಸಿ ಅನುಪಯುಕ್ತ ಬಸ್ಸನ್ನು ಬಳಸಿಕೊಂಡು ಅತ್ಯಾಧುನಿಕ ಶೌಚಾಲಯ ನಿರ್ಮಾಣ ಮಾಡಿದ ದೇಶದ ಮೊದಲ ರಸ್ತೆ ಸಾರಿಗೆ ನಿಗಮವಾಗಿದೆ. ಹನ್ನೆರಡು ಮೀಟರ್ ಉದ್ದದ ಬಸ್ಸಿನಲ್ಲಿ ಇಂಡಿಯನ್ ಹಾಗೂ ವೆಸ್ಟರ್ನ್ ಶೌಚಾಲಯಗಳಿವೆ.

  • ಮೂರು ದಿನಗಳಲ್ಲಿ ನೋವು ಕಡಿಮೆಯಾಗದಿದ್ರೆ ಸರ್ಜರಿ: ಶರಣ್

    ಮೂರು ದಿನಗಳಲ್ಲಿ ನೋವು ಕಡಿಮೆಯಾಗದಿದ್ರೆ ಸರ್ಜರಿ: ಶರಣ್

    ಬೆಂಗಳೂರು: ಆರಂಭದಲ್ಲಿ ನಾನು ಮಸಲ್ ಕ್ಯಾಚಸ್ ಇರಬೇಕು ಎಂದು ಭಾವಿಸಿದ್ದೆ. ಆದರೆ ನಿನ್ನೆ ಸ್ಕ್ಯಾನ್ ಮಾಡಿದ ಬಳಿಕ ಕಿಡ್ನಿ ಸ್ಟೋನ್ ಇರುವುದು ತಿಳಿಯಿತು. ಸಣ್ಣ ಪ್ರಮಾಣದ ಸ್ಟೋನ್ ಇದೆ. ಏನೂ ತೊಂದರೆ ಇಲ್ಲ, ನೋವು ಕಡಿಮೆಯಾಗದಿದ್ದರೆ ಸರ್ಜರಿ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಸ್ವತಃ ನಟ ಶರಣ್ ಆಸ್ಪತ್ರೆಯ ಬಳಿ ಮಾತನಾಡಿ ತಿಳಿಸಿದ್ದಾರೆ.

    ಆಸ್ಪತ್ರೆ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಆಸ್ಪತ್ರೆಯಲ್ಲಿದ್ದರೂ ಮನಸ್ಸಿರೋದು ಸಿನಿಮಾ ಕಡೆ. ಶನಿವಾರ ತಡೆಯೋಕೆ ಆಗದಷ್ಟು ನೋವು ಕಾಣಿಸಿಕೊಂಡಿತ್ತು. ನನ್ನ ಜೀವನದಲ್ಲಿಯೇ ಇಂತಹ ನೋವು ಅನುಭವಿಸಿರಲಿಲ್ಲ. ಶೂಟಿಂಗ್‍ಗೆ ಹೋಗಿದ್ದ ವೇಳೆ ವಿಪರೀತ ನೋವು ಕಾಣಿಸಿಕೊಂಡಿತ್ತು. ಹಿಂದಿನ ಎರಡು ದಿನ ನೋವು ಕಾಣಿಸಿಕೊಂಡಿದ್ದರೂ ನನಗೆ ಗೊತ್ತಾಗಿರಲಿಲ್ಲ ಎಂದು ತಿಳಿಸಿದ್ದಾರೆ.

    ಆರಂಭದಲ್ಲಿ ಮಸಲ್ ಕ್ಯಾಚ್ ಆಗಿರಬೇಕು ಅಂದುಕೊಂಡಿದ್ದೆ. ಹೀಗಾಗಿ ನಿನ್ನೆ ನೋವು ಕಾಣಿಸಿಕೊಂಡಾಗಲೂ ಅದಾಗೇ ಹೋಗುತ್ತೆ ಅಂದುಕೊಂಡೆ. ಹಾಗೇ ನೋವು ಮಾಯವಾಯಿತು. ಆದರೆ ಕೆಲವು ಗಂಟೆಗಳ ಬಳಿಕ ಮತ್ತೆ ನೋವು ಕಾಣಿಸಿಕೊಂಡಿತು. ನಂತರ ಅವತಾರ ಪುರುಷ ಟೀಂನವರೇ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ವೈದ್ಯರು ಪರೀಕ್ಷೆ ನಡೆಸಿ, ಕಿಡ್ನಿ ಸ್ಟೋನ್ ಆಗಿದೆ ಎಂದು ಸ್ಪಷ್ಟಪಡಿಸಿದರು. ಸಣ್ಣ ಪ್ರಮಾಣದ ಸ್ಟೋನ್ ಆಗಿದೆ. ಸದ್ಯಕ್ಕೆ ಏನೂ ತೊಂದರೆ ಇಲ್ಲ. ಎರಡು ದಿನ ರೆಸ್ಟ್ ಮಾಡೋಕೆ ಹೇಳಿದ್ದಾರೆ. ಮೂರು ದಿನಗಳ ಬಳಿಕ ಕಡಿಮೆ ಆಗದಿದ್ದರೆ, ಸರ್ಜರಿ ಮಾಡುವುದಾಗಿ ತಿಳಿಸಿದ್ದಾರೆ ಎಂದು ತಿಳಿಸಿದ್ದಾರೆ.

    ವೈದ್ಯರ ಬಳಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನೆಯವರು ಹಲವು ಬಾರಿ ಹೇಳಿದ್ದರು. ಆದರೂ ನಾನು ನಿರ್ಲಕ್ಷ್ಯ ಮಾಡಿದ್ದೆ. ಇದೀಗ ವೈದ್ಯರು ಪರೀಕ್ಷೆ ನಡೆಸಿದ್ದಾರೆ. ಮೂರು ದಿನಗಳ ನಂತರವೂ ಕಡಿಮೆಯಾಗದಿದ್ದರೆ ಸರ್ಜರಿ ಮಾಡುವುದಾಗಿ ತಿಳಿಸಿದ್ದಾರೆ. ಹೆಚ್ಚು ನೀರು ಕುಡಿಯುವಂತೆ ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದರು.

    ಶನಿವಾರ ಶರಣ್ ಆರೋಗ್ಯದ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ್ದ ನಟಿ, ಸಹೋದರಿ ಶೃತಿ, ಅಣ್ಣನಿಗೆ ದೊಡ್ಡ ಸಮಸ್ಯೆ ಏನು ಆಗಿಲ್ಲ. ಅವತಾರ ಪುರುಷ ಸಿನಿಮಾ ಶೂಟಿಂಗ್ ವೇಳೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ಮತ್ತು ಚಿತ್ರೀಕರಣಕ್ಕೆ ಸಮಸ್ಯೆಯಾಗುವ ಹಿನ್ನೆಲೆ ತಮ್ಮ ನೋವನ್ನು ಸೋದರ ಶರಣ್ ಯಾರ ಬಳಿಯೂ ಹೇಳಿ ಕೊಂಡಿರಲಿಲ್ಲ. ಪರೀಕ್ಷೆ ನಡೆಸಿದ ಬಳಿಕ ಕಿಡ್ನಿಯಲ್ಲಿ ಸ್ಟೋನ್ ಇರೋದಾಗಿ ವೈದ್ಯರು ತಿಳಿಸಿದ್ದು, ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಿದ್ದಾರೆ. ಇಂದು ಚಿಕಿತ್ಸೆ ಪಡೆದು ನಾಳೆ ಮನೆಗೆ ಬರಬಹುದು. ತಮ್ಮಿಂದಾಗಿ ಶೂಟಿಂಗ್ ಪೋಸ್ಟ್ ಪೋನ್ ಆಗಿದ್ದಕ್ಕೆ ಶರಣ್ ತುಂಬಾ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದರು.

  • ಅಣ್ಣನಿಗೆ ಏನೂ ಆಗಿಲ್ಲ: ಶರಣ್ ಆನಾರೋಗ್ಯದ ಬಗ್ಗೆ ಶೃತಿ ಪ್ರತಿಕ್ರಿಯೆ

    ಅಣ್ಣನಿಗೆ ಏನೂ ಆಗಿಲ್ಲ: ಶರಣ್ ಆನಾರೋಗ್ಯದ ಬಗ್ಗೆ ಶೃತಿ ಪ್ರತಿಕ್ರಿಯೆ

    -ಆರೋಗ್ಯ ಸುಧಾರಣೆ ಬಳಿಕ ಶೂಟಿಂಗ್

    ಬೆಂಗಳೂರು: ಸೋದರ ಶರಣ್ ಆರೋಗ್ಯದಲ್ಲಿ ದೊಡ್ಡ ಸಮಸ್ಯೆ ಏನು ಆಗಿಲ್ಲ ಎಂದು ಹಿರಿಯ ನಟಿ ಶೃತಿ ಮಾಹಿತಿ ನೀಡಿದ್ದಾರೆ.

    ಅವತಾರ ಪುರುಷ ಸಿನಿಮಾ ಶೂಟಿಂಗ್ ವೇಳೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆ ಶರಣ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶರಣ್ ಆರೋಗ್ಯದ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಶೃತಿ, ಅಣ್ಣನಿಗೆ ದೊಡ್ಡ ಸಮಸ್ಯೆ ಏನು ಆಗಿಲ್ಲ. ಇಂದು ಅವತಾರ ಪುರುಷ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ವೇಳೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೊರೊನಾ ಮತ್ತು ಚಿತ್ರೀಕರಣಕ್ಕೆ ಸಮಸ್ಯೆಯಾಗುವ ಹಿನ್ನೆಲೆ ತಮ್ಮ ನೋವನ್ನು ಸೋದರ ಶರಣ್ ಯಾರ ಬಳಿಯೂ ಹೇಳಿ ಕೊಂಡಿರಲಿಲ್ಲ ಎಂದು ತಿಳಿಸಿದರು.

    ಕಿಡ್ನಿಯಲ್ಲಿ ಸ್ಟೋನ್ ಇರೋದಾಗಿ ವೈದ್ಯರು ತಿಳಿಸಿದ್ದು, ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಿದ್ದಾರೆ. ಇಂದು ಚಿಕಿತ್ಸೆ ಪಡೆದು ನಾಳೆ ಮನೆಗೆ ಬರಬಹುದು. ಇಂದು ತಮ್ಮಿಂದಾಗಿ ಶೂಟಿಂಗ್ ಪೋಸ್ಟ್ ಪೋನ್ ಆಗಿದ್ದಕ್ಕೆ ಶರಣ್ ತುಂಬಾ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಶೃತಿ ಹೇಳಿದರು.

    ಒಂದು ವಾರದಿಂದ ಅವತಾರ ಪುರುಷ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಇಂದು ಸದಾ ಲವಲವಿಕೆಯಿಂದ ಇರೋ ಶರಣ್ ಸರ್ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಹಾಗಾಗಿ ಶೂಟಿಂಗ್ ಸೆಟ್ ನಿಂದ ನೇರವಾಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಯ್ತು. ಶರಣ್ ಅವರು ಆದಷ್ಟು ಬೇಗ ಗುಣಮುಖರಾಗುತ್ತಾರೆ. ಆರೋಗ್ಯ ಸುಧಾರಿಸಿದ ಬಳಿಕ ಶರಣ್ ಚಿತ್ರೀಕರಣಕ್ಕೆ ಹಾಜರಾಗಲಿದ್ದಾರೆ ಎಂದು ನಿರ್ದೇಶಕ ಸಿಂಪಲ್ ಸುನಿ ಮಾಹಿತಿ ನೀಡಿದ್ದಾರೆ.

    ಹೆಚ್ ಎಂಟಿ ಗ್ರೌಂಡ್ ನಲ್ಲಿ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಶರಣ್ ಅವರಿಗೆ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ನಿರ್ದೇಶಕ ಸಿಂಪಲ್ ಸುನಿ ನತ್ತು ನಿರ್ಮಾಪಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಚಿತ್ರದಲ್ಲಿ ಶರಣ್ ಗೆ ಆಶಿಕಾ ರಂಗನಾಥ್ ನಾಯಕಿಯಾಗಿದ್ದಾರೆ. ಸಿಂಪಲ್ ಸುನಿ ಆ್ಯಕ್ಷನ್ ಕಟ್ ಹೇಳಿದ್ದು, ಕೋವಿಡ್ 19 ಪರಿಣಾಮ ಇದರ ಶೂಟಿಂಗ್ ಸ್ಥಗಿತಗೊಂಡಿತ್ತು. ಇದೀಗ ಸರ್ಕಾರ ಮಾರ್ಗ ಸೂಚಿ ಅನ್ವಯ ಚಿತ್ರತಂಡ ಕೊನೆಯ ಹಂತದ ಶೂಟಿಂಗ್ ನಲ್ಲಿ ತೊಡಗಿಕೊಂಡಿತ್ತು.

  • ಮೇಘನಾ ರಾಜ್ ಭೇಟಿ ಮಾಡಿದ ಸ್ಯಾಂಡಲ್‍ವುಡ್ ಹಿರಿಯ ತಾರೆಯರು

    ಮೇಘನಾ ರಾಜ್ ಭೇಟಿ ಮಾಡಿದ ಸ್ಯಾಂಡಲ್‍ವುಡ್ ಹಿರಿಯ ತಾರೆಯರು

    – ಸುಧಾರಾಣಿ, ಮಾಳವಿಕಾ ಅವಿನಾಶ್, ಶೃತಿ ಸೇರಿ ಹಲವರು ಭೇಟಿ

    ಬೆಂಗಳೂರು: ಸ್ಯಾಂಡಲ್‍ವುಡ್ ಹಿರಿಯ ತಾರೆಯರು ನಟ ಚಿರಂಜೀವಿ ಸರ್ಜಾ ಪತ್ನಿ, ನಟಿ ಮೇಘನಾ ರಾಜ್ ಅವರನ್ನು ಭೇಟಿ ಮಾಡಿ, ಕುಶಲೋಪಚರಿ ವಿಚಾರಿಸಿದ್ದಾರೆ.

    ಈ ಕುರಿತು ಮಾಳ್ವಿಕಾ ಅವಿನಾಶ್ ಅವರು ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ. ಭೇಟಿಯಾದ ಕುರಿತು ಫೋಟೋಗಳನ್ನು ಹಂಚಿಕೊಂಡು ಸಾಲುಗಳನ್ನು ಬರೆದಿರುವ ಮಾಳವಿಕಾ ಅವಿನಾಶ್, ನಾನು ಬಾಲ ನಟಿಯಾಗಿದ್ದಾಗಿನಿಂದ ಸುಂದರ್ ರಾಜ್ ಅವರನ್ನು ಬಲ್ಲೆ. ನಾವಿಬ್ಬರೂ ಪ್ರತ್ಯೇಕವಾಗಿ ಹಾಗೂ ಒಟ್ಟಿಗೆ ಚಲನಚಿತ್ರ ಭ್ರಾತೃತ್ವದಲ್ಲಿ ತುಂಬಾ ಪ್ರಯಾಣಿಸಿದ್ದೇವೆ ಎಂದು ಹೇಳಿದ್ದಾರೆ.

    ಇದೀಗ ಪ್ರಮೀಳಾ ಅವರು ಪ್ರೀತಿಯಿಂದ ಮಾಡಿದ ಮಸಾಲಾ ದೋಸೆಯೊಂದಿಗೆ ತಾಯಿಯಾಗುತ್ತಿರುವ ಮೇಘನಾ ಅವರನ್ನು ಸುಧಾರಾಣಿ, ಶೃತಿ ಹಾಗೂ ಅವರ ಮಗಳು ಮಿಲಿ ಅವರೊಂದಿಗೆ ಭೇಟಿಯಾದೆವು. ಇದೊಂದು ಹೃದಯಸ್ಪರ್ಶಿ ಕ್ಷಣವಾಗಿತ್ತು ಎಂದು ಟ್ವೀಟ್‍ನಲ್ಲಿ ಬರೆದುಕೊಂಡಿದ್ದಾರೆ.

    ಮಾಳವಿಕಾ ಅವಿನಾಶ್ ಅವರು ಸಿನಿಮಾ ಇಂಡಸ್ಟ್ರಿಯ ಉತ್ತಮ ಸ್ನೇಹಿತೆಯರಾದ ಸುಧಾರಾಣಿ, ಶೃತಿ ಹಾಗೂ ಸುಂದರ್ ರಾಜ್ ಕುಟುಂಬದವರೊಂದಿಗೆ ತೆಗೆದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಶೃತಿ ಮಗಳು ಮಿಲಿ ಸಹ ಸೇರಿದ್ದಾರೆ.

    ಮೇಘನಾ ಗರ್ಭಿಣಿ ಹಿನ್ನೆಲೆ ಸ್ಯಾಂಡಲ್‍ವುಡ್ ಹಿರಿಯ ನಟಿಯರು ಭೇಟಿಯಾಗಿ ಮಾತುಕತೆ ನಡೆಸಿ ಸ್ವಲ್ಪ ಹೊತ್ತ ಕಾಲ ಕಳೆದು ಬಂದಿದ್ದಾರೆ. ಪರಸ್ಪರ ಮಾತುಕತೆ ನಡೆಸಿ, ಮೇಘನಾ ಅವರ ಆರೋಗ್ಯ ವಿಚಾರಿಸಿ ಬಂದಿದ್ದಾರೆ. ಅಲ್ಲದೆ ಕುಟುಂಬದೊಂದಿಗೆ ಕಾಲ ಕಳೆದು ಹರಟೆ ಹೊಡೆದಿದ್ದಾರೆ. ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

    ಮೆಘನಾ ರಾಜ್ ಇತ್ತೀಚೆಗಷ್ಟೇ ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಮನೆಯಲ್ಲೇ ಕುಟುಂಬಸ್ಥರ ಜೊತೆ ಕಾಲ ಕಳೆಯುತ್ತಿದ್ದಾರೆ. ಮೆಘನಾ ಅವರು ಸೃಜನ್ ಲೋಕೇಶ್ ಜೊತೆ ಸೆಲ್ಪೀ ಮಮ್ಮಿ ಗೂಗಲ್ ಡ್ಯಾಡಿ ಚಿತ್ರದಲ್ಲಿ ನಟಿಸಿದ್ದು, ಈ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರಮಂದಿರಗಳು ಪ್ರದರ್ಶನ ಆರಂಭಿಸಿದ ಬಳಿಕ ಚಿತ್ರ ಬಿಡುಗಡೆಯಾಗಲಿದೆ.

  • ಚಂದನವನದ ಮೂವರು ದಿಗ್ಗಜರ ಹುಟ್ಟುಹಬ್ಬ

    ಚಂದನವನದ ಮೂವರು ದಿಗ್ಗಜರ ಹುಟ್ಟುಹಬ್ಬ

    ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಇಂದು ಮೂವರು ದಿಗ್ಗಜ ಕಲಾವಿದರ ಹುಟ್ಟುಹಬ್ಬದ ಸಂಭ್ರಮ. ಸಾಹಸಸಿಂಹ ವಿಷ್ಣುವರ್ಧನ್, ರಿಯಲ್ ಸ್ಟಾರ್ ಉಪೇಂದ್ರ, ನಟಿ ಶೃತಿ ಅವರ ಹುಟ್ಟುಹಬ್ಬದ ಆಚರಣೆಯನ್ನು ಅಭಿಮಾನಿಗಳು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದಾರೆ.

    ಅಭಿಮಾನಿಗಳ ಆರಾಧ್ಯ ದೈವ ಸಾಹಸಸಿಂಹ ವಿಷ್ಣುವರ್ಧನ್ ಅವರ 69ನೇ ಜಯಂತೋತ್ಸವ. ಕಳೆದ ವರ್ಷದಂತೆ ಈ ವರ್ಷ ಕೂಡ ವಿಷ್ಣುದಾದ ಅವರ ಹುಟ್ಟುಹಬ್ಬವನ್ನ 2 ಕಡೆ ಆಚರಿಸಲಾಗುತ್ತಿದೆ. ವಿಷ್ಣುವರ್ಧನ್ ನಿವಾಸದಲ್ಲಿ ಭಾರತಿ ವಿಷ್ಣುವರ್ಧನ್ ಮತ್ತು ಕುಟುಂಬ ಸದಸ್ಯರು ಹುಟ್ಟುಹಬ್ಬ ಆಚರಿಸಿದರೆ, ಅಭಿಮಾನಿಗಳು ಅಭಿಮಾನ್ ಸ್ಟುಡಿಯೋದಲ್ಲಿ ದಾದಗೆ ನಮಿಸಲಿದ್ದಾರೆ.

    https://www.instagram.com/p/B2hNtEmn6mL/

    ಸ್ಯಾಂಡಲ್‍ವುಡ್‍ನ ರಿಯಲ್ ಸ್ಟಾರ್ ಉಪೇಂದ್ರ 52ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಅಭಿಮಾನಿಗಳು ಹಾಗೂ ಸಿನಿಮಾ ತಾರೆಯರು ಉಪ್ಪಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ಅಲ್ಲದೆ ಎಲ್ಲೆಡೆ ಉಪ್ಪಿ ಅಭಿಮಾನಿಗಳು ಸಡಗರ ಸಂಭ್ರಮದಿಂದ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ.

    ಇತ್ತ ಚಂದದ ಗೊಂಬೆ ಶೃತಿ ಅವರು 44ನೇ ವಸಂತಕ್ಕೆ ಕಾಲಿಡ್ತಿದ್ದಾರೆ. ಅಭಿಮಾನಿಗಳು ಹಾಗೂ ಸಿನಿತಾರೆಯರು ನಟಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಶುಭಹಾರೈಸಿದ್ದಾರೆ. ವಿಷ್ಣುದಾದ ದೈಹಿಕವಾಗಿ ನಮ್ಮ ಜೊತೆ ಇಲ್ಲವಾದರೂ ಅಭಿಮಾನಿಗಳ ಮನದಲ್ಲಿ ಅವರು ಎಂದಿಗೂ ಅಮರ. ಬರ್ತ್ ಡೇ ಸಂಭ್ರಮದಲ್ಲಿರೋ ರಿಯಲ್ ಸ್ಟಾರ್ ಉಪ್ಪಿ, ನಟಿ ಶೃತಿ ಅವರು ಇನ್ನಷ್ಟು ಒಳ್ಳೆ ಕೆಲಸ ಮಾಡಿ ಉತ್ತಮ ಹೆಸರುಗಳಿಸಲಿ ಅನ್ನೋದು ಎಲ್ಲರ ಆಶಯವಾಗಿದೆ.