Tag: ಶೋಪಿಯಾನ್

  • ಪುಲ್ವಾಮಾದಲ್ಲಿ ಭದ್ರತಾಪಡೆಗಳೊಂದಿಗೆ ಗುಂಡಿನ ಚಕಮಕಿ – ಮೂವರು ಜೈಶ್‌ ಉಗ್ರರು ಮಟಾಶ್‌

    ಪುಲ್ವಾಮಾದಲ್ಲಿ ಭದ್ರತಾಪಡೆಗಳೊಂದಿಗೆ ಗುಂಡಿನ ಚಕಮಕಿ – ಮೂವರು ಜೈಶ್‌ ಉಗ್ರರು ಮಟಾಶ್‌

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ಪಾಮಾದಲ್ಲಿ (Pulwama) ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಮೂವರು ಜೈಶ್‌ ಉಗ್ರರನ್ನು (JEM Terrorists) ಹತ್ಯೆ ಮಾಡಿರುವುದಾಗಿ ಹಿರಿಯ ಸೇನಾಧಿಕಾರಿಗಳು ತಿಳಿಸಿದ್ದಾರೆ.

    ಪುಲ್ವಾಮಾ ಜಿಲ್ಲೆಯ ಉಪನಗರವಾದ ಅವಂತಿಪೋರಾದ (Awantipora) ನಾಡರ್‌ ಮತ್ತು ಟ್ರಾಲ್‌ ಪ್ರದೇಶಗಳಲ್ಲಿ ಇಂದು ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆ ಉಗ್ರರನ್ನು ಹೊಡೆದುರುಳಿಸಿದೆ. ಕಳೆದ ಮೂರು ದಿನಗಳಲ್ಲಿ ನಡೆದ 2ನೇ ಎನ್‌ಕೌಂಟರ್‌ ಇದಾಗಿದೆ. ಹತ್ಯೆಗೀಡಾದ ಮೂವರು ಜೈಶ್‌ ಎ ಮೊಹಮ್ಮದ್‌ ಸಂಘಟನೆಗೆ ಸೇರಿದವರು ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಮಣಿಪುರದ ಚಾಂದೆಲ್‌ನಲ್ಲಿ ಎನ್‌ಕೌಂಟರ್‌ – 10 ಉಗ್ರರನ್ನು ಹತ್ಯೆ ಮಾಡಿದ ಭಾರತೀಯ ಸೇನೆ

    ಇದಕ್ಕೂ ಮುನ್ನ ಮಂಗಳವಾರ (ಮೇ 13) ಶೋಪಿಯಾನ್ (Shopian) ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ ನಡೆದಿತ್ತು. ಈ ವೇಳೆ ಉನ್ನತ ಭಯೋತ್ಪಾದಕ ಕಮಾಂಡರ್ ಶಾಹಿದ್ ಕುಟ್ಟಯ್, ಹರಿಸ್ ನಜೀರ್, ಅದ್ನಾನ್ ಶಫಿ ಎಂಬ ಮೂವರು ಉಗ್ರರನ್ನ ಹತ್ಯೆಗೈಯಲಾಗಿತ್ತು. ಇದನ್ನೂ ಓದಿ: ಚೀನಿ ಏರ್‌ ಡಿಫೆನ್ಸ್‌ ಜಾಮ್‌ ಮಾಡಿ 23 ನಿಮಿಷದಲ್ಲಿ ಮುಗಿಯಿತು ಕಾರ್ಯಾಚರಣೆ – ಭಾರತದ ದಾಳಿಯ ರೋಚಕ ಕಥೆ ಓದಿ

    ದಕ್ಷಿಣ ಕಾಶ್ಮೀರ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಅಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದವು. ಭಯೋತ್ಪಾದಕರು ಪ್ರತಿದಾಳಿ ನಡೆಸಿದ್ದರು. ಇದು ಪರಸ್ಪರರ ನಡುವೆ ಗುಂಡಿನ ಚಕಮಕಿಗೆ ಕಾರಣವಾಗಿತ್ತು. ಇದನ್ನೂ ಓದಿ: ಉಗ್ರರ ವಿರುದ್ಧ ಸಿಡಿದೆದ್ದ ಭಾರತ – ‘ಆಪರೇಷನ್‌ ಸಿಂಧೂರ’ಗೆ ಜೈ ಎಂದ ಬ್ರಿಟಿಷ್‌ ಸಂಸದ

    ಇಂದು ಮತ್ತೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಜೈಶ್‌ ಉಗ್ರರನ್ನ ಹತ್ಯೆಗೈಯಲಾಗಿದೆ. ಇದನ್ನೂ ಓದಿ: ಮೇಲುಕೋಟೆ | ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ – ಭೀಕರ ಹತ್ಯೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

  • ಶೋಪಿಯನ್‌ನಲ್ಲಿ ಉಗ್ರರ ಹತ್ಯೆ- ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಭದ್ರತಾ ಪಡೆ

    ಶೋಪಿಯನ್‌ನಲ್ಲಿ ಉಗ್ರರ ಹತ್ಯೆ- ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಭದ್ರತಾ ಪಡೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಶೋಪಿಯಾನ್ (Shopian) ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ(Keller Forest) ಪ್ರದೇಶದಲ್ಲಿ ಮೂವರು ಉಗ್ರರ ಹತ್ಯೆ ಬೆನ್ನಲ್ಲೇ ಭದ್ರತಾ ಪಡೆಗಳು ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಕ್ಕೆ ಪಡೆದುಕೊಂಡಿವೆ.

    ಮೇ 13ರಂದು ‘ಆಪರೇಷನ್ ಕೆಲ್ಲರ್’ ಅಡಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆ ಮೂವರು ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದಿದೆ. ಅದಾದ ಒಂದು ದಿನದ ಬಳಿಕ ಬುಧವಾರ ಭದ್ರತಾ ಪಡೆಗಳು ರೈಫಲ್, ಗ್ರೆನೇಡ್‌ಗಳು ಸೇರಿದಂತೆ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ. ಈ ಶಸ್ತ್ರಾಸ್ತ್ರಗಳು, ಸಾವನ್ನಪ್ಪಿದ್ದ ಮೂವರು ಉಗ್ರರಿಗೆ ಸೇರಿರಬಹುದು ಎನ್ನಲಾಗಿದೆ.ಇದನ್ನೂ ಓದಿ: ʻಬಿಬಿಎಂಪಿʼ ಹೆಸರು ಇತಿಹಾಸ ಪುಟಕ್ಕೆ – ಮೇ 15ರಿಂದ ʻಗ್ರೇಟರ್‌ ಬೆಂಗಳೂರುʼ ಆಡಳಿತ ಜಾರಿ

    ಎನ್‌ಕೌಂಟರ್ ಆದ ಮೂವರು ಭಯೋತ್ಪಾದಕರು ಎಲ್‌ಇಟಿ ಸಂಘಟನೆಗೆ ಸೇರಿದವರಾಗಿದ್ದು, ಆ ಪೈಕಿ ಇಬ್ಬರನ್ನು ಶೋಪಿಯಾನ್‌ನ ಸ್ಥಳೀಯರು ಎನ್ನಲಾಗಿದೆ. ಶಾಹಿದ್ ಕುಟ್ಟಯ್ ಮತ್ತು ಅದ್ನಾನ್ ಶಫಿ ದಾರ್ ಎಂದು ಗುರುತಿಸಲಾಗಿದ್ದು, ಇನ್ನೋರ್ವನ ಗುರುತು ಪತ್ತೆಯಾಗಿಲ್ಲ.

    ದಕ್ಷಿಣ ಕಾಶ್ಮೀರ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಅಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆ ಪ್ರಾರಂಭಿಸಿದಾಗ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿತ್ತು.

    ಏ.22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆಂದು ಶಂಕಿಸಲಾಗಿರುವ ಮೂವರು ಪಾಕಿಸ್ತಾನಿ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್, ಅಲಿ ಭಾಯ್ ಮತ್ತು ಹಾಶಿಮ್ ಮೂಸಾ ಪೋಸ್ಟರ್‌ಗಳನ್ನು ಭದ್ರತಾ ಪಡೆಗಳು ಪೋಸ್ಟ್ ಮಾಡಿದ ಬೆನ್ನಲ್ಲೇ ಗುಂಡಿನ ದಾಳಿ ನಡೆದಿತ್ತು.ಇದನ್ನೂ ಓದಿ: ಕರ್ನಲ್ ಸೋಫಿಯಾ ಪತಿ ಮನೆ ಮೇಲೆ RSS ದಾಳಿ ವದಂತಿ – ಸುಳ್ಳು ಸುದ್ದಿ ನಂಬದಂತೆ ಬೆಳಗಾವಿ ಎಸ್ಪಿ ಮನವಿ

  • ಶೋಪಿಯಾನ್‌ನಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಮೂವರು ಉಗ್ರರು ಮಟಾಶ್‌

    ಶೋಪಿಯಾನ್‌ನಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಮೂವರು ಉಗ್ರರು ಮಟಾಶ್‌

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ (Shopian) ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಹತನಾಗಿದ್ದಾರೆ.

    ಎನೌಕೌಂಟರ್‌ನಲ್ಲಿ ಉನ್ನತ ಭಯೋತ್ಪಾದಕ ಕಮಾಂಡರ್ ಸೇರಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ (ಸಿಎಎಸ್ಒ) ನಡೆಯುತ್ತಿರುವ ಸ್ಥಳದಲ್ಲಿ ಭಯೋತ್ಪಾದಕರು ಸಿಕ್ಕಿಬಿದ್ದಿದ್ದರು ಎಂದು ಭದ್ರತಾ ಪಡೆಗಳು ತಿಳಿಸಿವೆ. ಇದನ್ನೂ ಓದಿ: INS ವಿಕ್ರಾಂತ್ ಎಲ್ಲಿದೆ ಹೇಳಿ – ಪಿಎಂ ಕಚೇರಿ ಅಧಿಕಾರಿಯಂತೆ ಕರೆ ಮಾಡಿದ್ದವ ಅರೆಸ್ಟ್‌

    ದಕ್ಷಿಣ ಕಾಶ್ಮೀರ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಅಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆ ಪ್ರಾರಂಭಿಸಿದವು. ಭಯೋತ್ಪಾದಕರು ಪ್ರತಿದಾಳಿ ನಡೆಸಿದರು. ಇದು ಪರಸ್ಪರರ ನಡುವೆ ಗುಂಡಿನ ಚಕಮಕಿಗೆ ಕಾರಣವಾಯಿತು.

    ಏ.22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆಂದು ಶಂಕಿಸಲಾಗಿರುವ ಮೂವರು ಪಾಕಿಸ್ತಾನಿ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್, ಅಲಿ ಭಾಯ್ ಮತ್ತು ಹಾಶಿಮ್ ಮೂಸಾ ಪೋಸ್ಟರ್‌ಗಳನ್ನು ಭದ್ರತಾ ಪಡೆಗಳು ಪೋಸ್ಟ್ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ಪಹಲ್ಗಾಮ್ ದಾಳಿಯ 3 ಉಗ್ರರ ಫೋಟೋ ರಿಲೀಸ್ – ಸುಳಿವು ಕೊಟ್ಟವರಿಗೆ 20 ಲಕ್ಷ ಬಹುಮಾನ

  • ಶೋಪಿಯಾನದಲ್ಲಿ ಇಬ್ಬರು ಲಷ್ಕರ್ ಉಗ್ರರ ಎನ್‍ಕೌಂಟರ್

    ಶೋಪಿಯಾನದಲ್ಲಿ ಇಬ್ಬರು ಲಷ್ಕರ್ ಉಗ್ರರ ಎನ್‍ಕೌಂಟರ್

    ಶ್ರೀನಗರ: ಜಮ್ಮು-ಕಾಶ್ಮೀರದ (Jammu- Kashmir) ಶೋಪಿಯಾನ ( Shopian) ಜಿಲ್ಲೆಯಲ್ಲಿ ಎನ್‍ಕೌಂಟರ್ ನಡೆದಿದ್ದು, ಇಬ್ಬರು ಲಷ್ಕರ್-ಎ- ತೈಬಾ (LET) ಉಗ್ರರಿಬ್ಬರನ್ನು ಹತ್ಯೆ ಮಾಡಲಾಗಿದೆ.

    ಉಗ್ರರನ್ನು ಮೋರಿಫತ್ ಮಕ್ಬೂಲ್ ಮತ್ತು ಜಾಜಿಮ್ ಫಾರೂಕ್ ಅಲಿಯಾಸ್ ಅಬ್ರಾರ್ ಎಂದು ಗುರುತಿಸಲಾಗಿದೆ. ಇದರಲ್ಲಿ ಅಬ್ರಾರ್ ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಹತ್ಯೆಯಲ್ಲಿ ಭಾಗಿಯಾಗಿದ್ದನೆಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ತಿಳಿಸಿದ್ದಾರೆ.

    ಮಂಗಳವಾರ ನಸುಕಿನ ಜಾವ ಅಲ್ಶಿಪೋರಾ ಪ್ರದೇಶದಲ್ಲಿ ಉಗ್ರರು ಇದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಭದ್ರತಾ ಪಡೆ ತಕ್ಷಣವೇ ಕಾರ್ಯಾಚರಣೆಯಲ್ಲಿ ತೊಡಗಿತ್ತು. ಅಲ್ಲದೆ ಎನ್‍ಕೌಂಟರ್ ಮಾಡಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿತ್ತು. ಇದನ್ನೂ ಓದಿ: ಡಿಜೆ ಸದ್ದಿಗೆ ಯುವಕನಿಗೆ ಹೃದಯಾಘಾತ

    ಎನ್‍ಕೌಂಟರ್ ಬಳಿಕವೂ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್ – 3 ಲಷ್ಕರ್ ಉಗ್ರರ ಸಾವು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಶೋಪಿಯಾನ್ (Shopian) ಜಿಲ್ಲೆಯ ಮುಂಜ್ ಮಾರ್ಗ್ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ (Terrorists) ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಲಷ್ಕರ್-ಎ-ತೊಯ್ಬಾ (LeT) ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ನಿಷೇಧಿತ ಭಯೋತ್ಪಾದನಾ ಸಂಘಟನೆ ಎಲ್‌ಇಟಿಯ 3 ಭಯೋತ್ಪಾದಕರನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿದೆ. ಅವರ ಗುರುತು ಪತ್ತೆ ಹಚ್ಚುವ ಪ್ರಕ್ರಿಯೆ ಮುಂದುವರಿಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

    ವರದಿಗಳ ಪ್ರಕಾರ ಭದ್ರತಾ ಪಡೆಗಳು ಶೋಪಿಯಾನ್ ಝೈನಾಪೋರಾ ಪ್ರದೇಶದ ಮುಂಜ್ ಮಾರ್ಗ್ನಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿಯನ್ನು ಪಡೆದು ಶೋಧಕಾರ್ಯಕ್ಕೆ ತೆರಳಿದ್ದಾರೆ. ಈ ವೇಳೆ ಭಯೋತ್ಪಾದಕರು ಸಿಕ್ಕಿಬಿದ್ದಿದ್ದು, ಗುಂಡಿನ ಚಕಮಕಿ ಪ್ರಾರಂಭವಾಗಿದೆ. ಇದನ್ನೂ ಓದಿ: ಚುನಾವಣೆಗೆ ಸಮೀಪದಲ್ಲಿ ಡಿಕೆಶಿಗೆ ಶಾಕ್ – 5 ವರ್ಷದಲ್ಲಿ ಎಷ್ಟು ಆಸ್ತಿ ಹೆಚ್ಚಾಗಿತ್ತು? ತನಿಖೆ ಎಲ್ಲಿಯವರೆಗೆ ಬಂದಿದೆ?

    ಹತರಾಗಿರುವ ಮೂವರು ಭಯೋತ್ಪಾದಕರಲ್ಲಿ ಇದೀಗ ಇಬ್ಬರ ಗುರುತು ಪತ್ತೆಹಚ್ಚಲಾಗಿದೆ. ಅದರಲ್ಲೊಬ್ಬ ಕಾಶ್ಮೀರ ಪಂಡಿತ್ ಪುರಾಣ ಕೃಷ್ಣ ಭಟ್ ಹತ್ಯೆಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕ ಲತೀಫ್ ಲೋನ್ ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ನೇಪಾಳದ ಟಿಲ್ ಬಹದ್ದೂರ್ ಥಾಪಾ ಹತ್ಯೆಯಲ್ಲಿ ಭಾಗಿಯಾಗಿದ್ದ ಉಮರ್ ನಜೀರ್ ಎಂದು ಗುರುತಿಸಲಾಗಿದೆ.

    ಉಗ್ರರಿಂದ 1 ಎಕೆ 47 ರೈಫಲ್ ಹಾಗೂ 2 ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಜೆಡಿಎಸ್ ಟಿಕೆಟ್ ಫೈಟ್ – ಅಂತರ ಕಾಯ್ದುಕೊಂಡ ಹಾಲಿ ಶಾಸಕರು

    Live Tv
    [brid partner=56869869 player=32851 video=960834 autoplay=true]

  • ಶೋಪಿಯಾನ್ ಜಿಲ್ಲೆಯ ಅಮ್ಶಿಪೋರಾದಲ್ಲಿ ಮೂವರು ಉಗ್ರರು ಮಟಾಷ್

    ಶೋಪಿಯಾನ್ ಜಿಲ್ಲೆಯ ಅಮ್ಶಿಪೋರಾದಲ್ಲಿ ಮೂವರು ಉಗ್ರರು ಮಟಾಷ್

    ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಮ್ಶಿಪೋರಾದಲ್ಲಿ ಮೂವರು ಉಗ್ರರನ್ನು ಭಾರತಿಯ ಸೇನೆ ಸದೆಬಡಿದಿದೆ.

    ಇಂದು ಮುಂಜಾನೆ ಅಮ್ಶಿಪೋರಾದಲ್ಲಿ ಭದ್ರಾತ ಪಡೆ ಹಾಗೂ ಉಗ್ರರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಭದ್ರತಾ ಪಡೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಸದ್ಯ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ.

    ನಿನ್ನೆಯಷ್ಟೇ ಕುಲ್ಗಾಂ ಜಿಲ್ಲೆಯ ನಾಗ್ನಾಡ್ ಎಂಬ ಪ್ರದೇಶದಲ್ಲಿ ಭದ್ರತಾ ಪಡೆಯ ಎನ್‍ಕೌಂಟರ್‍ಗೆ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಉಗ್ರರು ಹತ್ಯೆಗೀಡಾಗಿದ್ದರು.

    ಕದನವಿರಾಮ ಉಲ್ಲಂಘಿಸಿದ ಪಾಕ್:
    ಇತ್ತ ನೆರೆ ರಾಷ್ಟ್ರ ಪಾಕಿಸ್ತಾನ ಇಂದು ಮುಂಜಾನೆ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗುಲ್ಪುರ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘಿಸಿದೆ. ಪಾಕ್ ಸೈನಿಕರ ಅಪ್ರಚೋದಿತ ಗುಂಡಿನ ದಾಳಿಗೆ ಮೂವರು ನಾಗರಿಕರು ಮೃತಪಟ್ಟಿದ್ದಾರೆ ಎಂದು ಪೂಂಚ್ ಜಿಲ್ಲೆಯ ಉಪ ಆಯುಕ್ತ ರಾಹುಲ್ ಯಾದವ್ ತಿಳಿಸಿದ್ದಾರೆ.