Tag: ಶೋಭಿತಾ

  • ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರಾ ನಾಗಚೈತನ್ಯ, ಶೋಭಿತಾ ದಂಪತಿ?

    ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರಾ ನಾಗಚೈತನ್ಯ, ಶೋಭಿತಾ ದಂಪತಿ?

    ನಾಗಚೈತನ್ಯ (Nagachaitanya) ಮತ್ತು ಶೋಭಿತಾ (Sobhita Dulipala) ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ. ಇದನ್ನೂ ಓದಿ:ಅವಮಾನ ಸಹಿಸುವಷ್ಟು ಚಿಕ್ಕವನಲ್ಲ – ಸ್ಯಾಂಡಲ್‌ವುಡ್‌ನಿಂದ ಅಸಹಕಾರದ ಬೆನ್ನಲ್ಲೇ ಸೋನು ನಿಗಮ್ ರಿಯಾಕ್ಷನ್

    ಇತ್ತೀಚೆಗೆ ಸಮಾರಂಭವೊಂದರಲ್ಲಿ ಕಾಣಿಸಿಕೊಂಡಿದ್ದಾಗ ಶೋಭಿತಾ ಸೀರೆಯ ಅಂಚನ್ನು ಕೈಯಲ್ಲಿ ಹಿಡಿದುಕೊಂಡು ಹೊಟ್ಟೆಯನ್ನು ಮುಚ್ಚಿಟ್ಟುಕೊಳ್ಳುವ ಪ್ರಯತ್ನ ಮಾಡುತ್ತಿದ್ದರು. ಈ ಕುರಿತ ಫೋಟೋ ಹಾಗೂ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ:ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

    ಇತ್ತೀಚೆಗೆ ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ನಾಗಾರ್ಜುನ, ನಾಗಚೈತನ್ಯ ಜೊತೆ ಶೋಭಿತಾ ಕೂಡ ಆಗಮಿಸಿದ್ದರು. ಈ ವೇಳೆ, ಶೋಭಿತಾ ಹೊಟ್ಟೆಯನ್ನು ಮುಚ್ಚಿಟ್ಟುಕೊಳ್ಳುವ ಪ್ರಯತ್ನ ಮಾಡುತ್ತಿದ್ದರು. ಹೀಗಾಗಿ ಶೋಭಿತಾ ಮದುವೆಯಾಗಿ  ತಿಂಗಳಿಗೆ ಗುಡ್ ನ್ಯೂಸ್ ಕೊಟ್ರಾ ಎಂಬ ಮಾತುಗಳು ಕೇಳಿಬರ್ತಿವೆ.

     

    View this post on Instagram

     

    A post shared by Sobhita Dhulipala (@sobhitad)

    ಸಮಂತಾ (Samantha) ಜೊತೆಗಿನ ಡಿವೋರ್ಸ್ ಬಳಿಕ ಶೋಭಿತಾರನ್ನ ಪ್ರೀತಿಸಿ ಮದುವೆಯಾದರು. ಡಿ.4ರಂದು ನಾಗಚೈತನ್ಯ ಮತ್ತು ಶೋಭಿತಾ ಮದುವೆ ನಡೆದಿತ್ತು.

  • ಹನಿಮೂನ್ ಮೂಡ್‌ನಲ್ಲಿ ಲವ್ ಬರ್ಡ್ಸ್- ನಾಗಚೈತನ್ಯ ಜೊತೆ ಶೋಭಿತಾ ಜಾಲಿ ರೈಡ್

    ಹನಿಮೂನ್ ಮೂಡ್‌ನಲ್ಲಿ ಲವ್ ಬರ್ಡ್ಸ್- ನಾಗಚೈತನ್ಯ ಜೊತೆ ಶೋಭಿತಾ ಜಾಲಿ ರೈಡ್

    ಸೌತ್‌ನ ಮುದ್ದಾದ ಜೋಡಿ ನಾಗಚೈತನ್ಯ (Nagachaitanya) ಮತ್ತು ಶೋಭಿತಾ (Sobhita Dhulipala) ಹನಿಮೂನ್ ಮೂಡ್‌ನಲ್ಲಿದ್ದಾರೆ. ಪತಿ ನಾಗಚೈತನ್ಯ ಜೊತೆ ಶೋಭಿತಾ ಕಾರ್ ರೈಡ್ ಮಾಡಿದ್ದಾರೆ. ಇದನ್ನೂ ಓದಿ:ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಮಿಂಚಿದ ‘ಎರಡನೇ ಸಲ’ ಚಿತ್ರದ ನಟಿ ಸಂಗೀತಾ

    ಮದುವೆಯ ಬಳಿಕ ನಾಗಚೈತನ್ಯ ಹಾಗೂ ಶೋಭಿತಾ ಜೋಡಿ ಹೊಸ ಸ್ಥಳಗಳಿಗೆ ಭೇಟಿ ಕೊಡುತ್ತಲೇ ಇರುತ್ತಾರೆ. ಈಗ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ಮದ್ರಾಸ್ ಇಂಟರ್‌ನ್ಯಾಷನಲ್ ಸರ್ಕ್ಯೂಟ್‌ನಲ್ಲಿ ನಾಗಚೈತನ್ಯ ಜೊತೆ ನಟಿ ಕಾರ್ ರೈಸಿಂಗ್ ಮಾಡಿದ್ದಾರೆ.

    ಇತ್ತೀಚೆಗೆ ಈ ಜೋಡಿ ಮೆಕ್ಸಿಕೋಗೆ ಭೇಟಿ ನೀಡಿತ್ತು. ಅಲ್ಲಿನ ಹೊಸ ಜಾಗಗಳಿಗೆ ಭೇಟಿ ನೀಡಿ ಸಮಯ ಕಳೆದಿದ್ದರು. ಇದನ್ನೂ ಓದಿ:ಸಮಂತಾ ನಿರ್ಮಾಣದ ಚೊಚ್ಚಲ ಸಿನಿಮಾ ರಿಲೀಸ್‌ಗೆ ರೆಡಿ

     

    View this post on Instagram

     

    A post shared by Sobhita (@sobhitad)

    ಅಂದಹಾಗೆ, ಸಮಂತಾ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ ಮೇಲೆ ಶೋಭಿತಾ ಜೊತೆ ನಾಗಚೈತನ್ಯ ಮದುವೆಯಾದರು. ಕಳೆದ ವರ್ಷ ಡಿ.4ರಂದು ಹೊಸ ಬಾಳಿಗೆ ಕಾಲಿಟ್ಟರು.

  • ಮದುವೆಯ ಬಳಿಕ ಮೊದಲ ಬಾರಿಗೆ ಚಿತ್ರೀಕರಣದಲ್ಲಿ ಭಾಗಿಯಾದ ಶೋಭಿತಾ

    ಮದುವೆಯ ಬಳಿಕ ಮೊದಲ ಬಾರಿಗೆ ಚಿತ್ರೀಕರಣದಲ್ಲಿ ಭಾಗಿಯಾದ ಶೋಭಿತಾ

    ಟಾಲಿವುಡ್ ನಟ ನಾಗಚೈತನ್ಯ (Naga Chaitanya) ಜೊತೆ ವೈವಾಹಿಕ ಜೀವನದಲ್ಲಿ ಬ್ಯುಸಿಯಿದ್ದ ಶೋಭಿತಾ (Sobhita Dhulipala) ಮತ್ತೆ ಕ್ಯಾಮೆರಾ ಮುಂದೆ ಬಂದಿದ್ದಾರೆ. ಮದುವೆಯ ಬಳಿಕ ಮೊದಲ ಬಾರಿಗೆ ಚಿತ್ರೀಕರಣದಲ್ಲಿ ನಟಿ ತೊಡಗಿಸಿಕೊಂಡಿದ್ದಾರೆ. ಇದನ್ನೂ ಓದಿ:ನಟ ದರ್ಶನ್‌ಗೆ ಇನ್ಮುಂದೆ ದೇಶಾದ್ಯಂತ ಸಂಚಾರಕ್ಕೆ ಅವಕಾಶ – ಹೈಕೋರ್ಟ್ ಆದೇಶ

    ಶೋಭಿತಾ ನಟನೆಯ ಹೊಸ ಸಿನಿಮಾದ ಶೂಟಿಂಗ್ ಹೈದರಾಬಾದ್‌ನಲ್ಲಿ ನಡೆಯುತ್ತಿದೆ. ನಟಿ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಕೆಲ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಮದುವೆಯಾಗಿ ಮೂರು ತಿಂಗಳು ಕಳೆದಿಲ್ಲ. ಅಷ್ಟರಲ್ಲಿ ಕೆಲಸಕ್ಕೆ ಹಾಜರಿ ಹಾಕಿರುವ ನಟಿಯ ನಡೆಗೆ ಫ್ಯಾನ್ಸ್ ಸೂಚಿಸಿದ್ದಾರೆ.

    ಅಂದಹಾಗೆ, ನಾಗಚೈತನ್ಯ ಮತ್ತು ಶೋಭಿತಾ ಹಲವು ವರ್ಷಗಳಿಂದ ಪರಿಚಿತರು. ಆ ಪರಿಚಯವೇ ಮದುವೆಗೆ ಮುನ್ನುಡಿ ಬರೆಯುತು. ಸಮಂತಾ ಜೊತೆ ಡಿವೋರ್ಸ್ ಆದ್ಮೇಲೆ ಶೋಭಿತಾ ಜೊತೆ ನಾಗಚೈತನ್ಯ ಡೇಟಿಂಗ್‌ನಲ್ಲಿದ್ದರು.

    ಇನ್ನೂ ಆಗಸ್ಟ್ 8ರಂದು ತಮ್ಮ ನಿವಾಸದಲ್ಲಿ ಉಂಗುರ ಬದಲಿಸಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಕಳೆದ ವರ್ಷದ ಅಂತ್ಯದಲ್ಲಿ ಡಿ.4ರಂದು ಶೋಭಿತಾ ಹಾಗೂ ನಾಗಚೈತನ್ಯ ಮದುವೆಯಾದರು. ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ಈ ಮದುವೆ ನಡೆಯಿತು.

  • ಮದುವೆ ಸಂಭ್ರಮದ ಫೋಟೋ ಹಂಚಿಕೊಂಡ ನಾಗಚೈತನ್ಯ

    ಮದುವೆ ಸಂಭ್ರಮದ ಫೋಟೋ ಹಂಚಿಕೊಂಡ ನಾಗಚೈತನ್ಯ

    ತೆಲುಗಿನ ನಟ ನಾಗಚೈತನ್ಯ (Naga Chaitanya) ಮತ್ತು ಶೋಭಿತಾ (Sobhita Dhulipala) ಡಿ.4ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇಬ್ಬರೂ ಸಂಭ್ರಮದಿಂದ ಮದುವೆಯಾಗಿರುವ (Wedding) ಬ್ಯೂಟಿಫುಲ್ ಫೋಟೋವನ್ನು ಈ ಜೋಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

    ಅನ್ನಪೂರ್ಣ ಸ್ಟುಡಿಯೋದಲ್ಲಿ ಡಿ.4ರಂದು ರಾತ್ರಿ 8:15ಕ್ಕೆ ಶೋಭಿತಾ ಮತ್ತು ನಾಗಚೈತನ್ಯ ಹಸೆಮಣೆ ಏರಿದರು. ಖುಷಿ ಖುಷಿಯಾಗಿ ಇಬ್ಬರೂ ಮದುವೆಯಾಗಿದ್ದಾರೆ.

    ಮದುವೆಯಲ್ಲಿ ಶೋಭಿತಾ ಮತ್ತು ನಾಗಚೈತನ್ಯ ಬಿಳಿ ಬಣ್ಣದ ಉಡುಗೆಯಲ್ಲಿ ಕಂಗೊಳಿಸಿದ್ದಾರೆ. ಮತ್ತೊಂದು ಫೋಟೋದಲ್ಲಿ ನಟಿ ಗೋಲ್ಡನ್ ಸೀರೆಯಲ್ಲಿ ಮಿಂಚಿದ್ದಾರೆ.

    ಇನ್ನೂ ಶೋಭಿತಾ ಮತ್ತು ನಾಗಚೈತನ್ಯ ಕಾಲೇಜು ದಿನಗಳಿಂದ ಪರಿಚಿತರು. ಸಮಂತಾ (Samantha) ಜೊತೆಗಿನ ದಾಂಪತ್ಯಕ್ಕೆ ಪೂರ್ಣ ವಿರಾಮ ಬಿದ್ಮೇಲೆ ಶೋಭಿತಾ ಎಂಟ್ರಿ ಕೊಟ್ಟರು. ಇದನ್ನೂ ಓದಿ:ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದಲ್ಲಿ ಅನಿಲ್ ಕಪೂರ್?

    ಎರಡೂವರೆ ವರ್ಷಗಳ ಡೇಟಿಂಗ್ ನಂತರ ಗುರುಹಿರಿಯರ ಸಮ್ಮತಿ ಪಡೆದು ಹೊಸ ಬಾಳಿಗೆ ನಾಗಚೈತನ್ಯ ಮತ್ತು ಶೋಭಿತಾ ಕಾಲಿಟ್ಟಿದ್ದಾರೆ. ಮದುವೆಯಲ್ಲಿ ಈ ಜೋಡಿಗೆ ಶುಭಕೋರಲು ನ್ಯಾಚುರಲ್‌ ಸ್ಟಾರ್‌ ನಾನಿ ದಂಪತಿ, ನಟ ಕಾರ್ತಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

    ಈ ವರ್ಷ ಆಗಸ್ಟ್ 8ರಂದು ಈ ಜೋಡಿ ನಿಶ್ಚಿತಾರ್ಥ ಕಾರ್ಯಕ್ರಮ ನಟನ ನಿವಾಸದಲ್ಲಿ ಸರಳವಾಗಿ ಜರುಗಿತು. ನಾಗಾರ್ಜುನ ಅಕ್ಕಿನೇನಿ (Nagarjuna Akkineni) ಅವರು ಸೊಸೆಯನ್ನು ಫ್ಯಾನ್ಸ್‌ಗೆ ಪರಿಚಿಯಿಸಿದರು.

    ಅಂದಹಾಗೆ, ‘ಯೇ ಮಾಯ ಚೇಸಾವೆ’ ಸಿನಿಮಾದಲ್ಲಿ ನಾಗಚೈತನ್ಯ ಮತ್ತು ಸಮಂತಾ ಜೊತೆಯಾಗಿ ನಟಿಸಿದರು. ಈ ವೇಳೆ, ಇಬ್ಬರಿಗೂ ಪ್ರೇಮಾಂಕುರವಾಗಿತ್ತು. ಹಲವು ವರ್ಷಗಳ ಡೇಟಿಂಗ್ ನಂತರ 2017ರಲ್ಲಿ ಹಿಂದೂ ಮತ್ತು ಕ್ರೈಸ್ತ ಧರ್ಮದಂತೆ ಇಬ್ಬರ ಮದುವೆ ನಡೆದಿತ್ತು.

    ಕೆಲ ಮನಸ್ತಾಪಗಳಿಂದ 2021ರಲ್ಲಿ ಸಮಂತಾ ಮತ್ತು ನಾಗಚೈತನ್ಯ ಡಿವೋರ್ಸ್ ಘೋಷಿಸಿದರು. 4 ವರ್ಷಗಳ ದಾಂಪತ್ಯಕ್ಕೆ ಈ ಜೋಡಿ ಅಂತ್ಯ ಹಾಡಿದರು.

     

    View this post on Instagram

     

    A post shared by Sobhita (@sobhitad)

    ಇನ್ನೂ ಸಮಂತಾ ಡಿವೋರ್ಸ್ ವಿಚಾರ ತಂದೆ ಜೋಸೆಫ್ ಪ್ರಭುಗೆ ನೋವುಂಟು ಮಾಡಿತ್ತು. ಈ ನೋವಿನಿಂದ ಹೊರಬರಲು ಸಾಕಷ್ಟು ಸಮಯ ತೆಗೆದುಕೊಂಡಿದರು. ನಾಗಚೈತನ್ಯ ಮದುವೆಯ 1 ವಾರಗಳ ಮುನ್ನ ಅಂದರೆ ನ.29ರಂದು ಸಮಂತಾ ತಂದೆ ನಿಧನರಾದರು.

  • ಮಾಜಿ ಪತಿ ಮದುವೆ ದಿನ ಸಮಂತಾ ಪೋಸ್ಟ್ ವೈರಲ್- ‘ಹುಡುಗಿಯಂತೆ ಹೋರಾಡಿ’ ಎಂದ ನಟಿ

    ಮಾಜಿ ಪತಿ ಮದುವೆ ದಿನ ಸಮಂತಾ ಪೋಸ್ಟ್ ವೈರಲ್- ‘ಹುಡುಗಿಯಂತೆ ಹೋರಾಡಿ’ ಎಂದ ನಟಿ

    ಟಿ ಶೋಭಿತಾ (Sobhita Dhulipala) ಜೊತೆ ನಾಗಚೈತನ್ಯ (Nagachaitanya) ಡಿ.4ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ಮಾಜಿ ಪತಿ ನಾಗಚೈತನ್ಯ ಮದುವೆ ದಿನ ಸಮಂತಾ (Samantha) ಹಂಚಿಕೊಂಡ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಹುಡುಗಿಯಂತೆ ಹೋರಾಡಿ ಎಂದು ನಟಿ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಶ್ರೀಲೀಲಾಗೆ ಚಿತ್ರರಂಗದಲ್ಲಿ ಉತ್ತಮ ಭವಿಷ್ಯವಿದೆ: ಹೊಗಳಿದ ಅಲ್ಲು ಅರ್ಜುನ್

    ಹಾಲಿವುಡ್ ತಾರೆ ವಯೋಲಾ ಡೇವಿಸ್ ಕಥೆಯ ಕುರಿತು ಪೋಸ್ಟ್ ಹಂಚಿಕೊಂಡಿದ್ದಾರೆ. ವೀಡಿಯೋದಲ್ಲಿ ಪುಟ್ಟ ಬಾಲಕ ಹಾಗೂ ಬಾಲಕಿಯ ನಡುವೆ ಫೈಟ್ ನಡೆಯುತ್ತಿದೆ. ಆತ್ಮವಿಶ್ವಾಸದ ಮನೋಭಾವದಿಂದ ಹುಡುಗ ಜಗಳ ಆರಂಭಿಸಿ ನಂತರ ಹುಡುಗಿಯ ಎದುರು ಸೋತು ಅಳಲು ಆರಂಭಿಸುತ್ತಾನೆ. ಈ ವಿಡಿಯೋ ಹಂಚಿಕೊಂಡಿರುವ ಸಮಂತಾ, ‘ಹುಡುಗಿಯಂತೆ ಹೋರಾಡಿ’ ಎಂದು ಬರೆದಿದ್ದಾರೆ. ಈ ಮೂಲಕ ನಿಗೂಢ ಸಂದೇಶ ಬರೆದುಕೊಂಡಿದ್ದಾರೆ.

    ಅಂದಹಾಗೆ, ಸಮಂತಾ ಜೊತೆ 2017ರಲ್ಲಿ ನಾಗಚೈತನ್ಯ ಮದುವೆಯಾಗಿದ್ದರು. ಕೆಲ ಮನಸ್ತಾಪಗಳಿಂದ ಇಬ್ಬರೂ ಡಿವೋರ್ಸ್ ಪಡೆದುಕೊಳ್ಳುವುದಾಗಿ 2021ರಲ್ಲಿ ಅನೌನ್ಸ್ ಮಾಡಿದರು. ಡಿ.4ರಂದು ಶೋಭಿತಾ ಜೊತೆ ನಟ 2ನೇ ಮದುವೆ ಆಗಿದ್ದಾರೆ.

  • ವೈವಾಹಿಕ ಜೀವನಕ್ಕೆ ಕಾಲಿಟ್ಟ ನಾಗಚೈತನ್ಯ, ಶೋಭಿತಾ – ನಾಗಾರ್ಜುನ ಭಾವುಕ

    ವೈವಾಹಿಕ ಜೀವನಕ್ಕೆ ಕಾಲಿಟ್ಟ ನಾಗಚೈತನ್ಯ, ಶೋಭಿತಾ – ನಾಗಾರ್ಜುನ ಭಾವುಕ

    ಹೈದರಾಬಾದ್: ಕೆಲ ವರ್ಷಗಳ ಡೇಟಿಂಗ್ ಬಳಿಕ ತೆಲುಗು ನಟ ನಾಗಚೈತನ್ಯ (Naga Chaitanya) ಮತ್ತು ನಟಿ ಶೋಭಿತಾ (Sobhita Dhulipala)  ಡಿಸೆಂಬರ್ 4ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಈ ವೇಳೆ ಮಗನ ಮದುವೆ ಕಂಡು ತಂದೆ ನಾಗಾರ್ಜುನ (Nagarjuna Akkineni) ಭಾವುಕರಾಗಿದ್ದಾರೆ.

    ಡಿಸೆಂಬರ್ 4ರಂದು ರಾತ್ರಿ 8:15ಕ್ಕೆ ನಾಗಚೈತನ್ಯ ಹಾಗೂ ಶೋಭಿತಾ ಸಪ್ತಪದಿ ತುಳಿದಿದ್ದಾರೆ. ಹೈದರಾಬಾದ್‌ನ ಅನ್ನಪೂರ್ಣ ಸ್ಟುಡಿಯೋದಲ್ಲಿರುವ ಅಕ್ಕಿನೇನಿ ನಾಗೇಶ್ವರ ರಾವ್ ಅವರ ಪ್ರತಿಮೆ ಮುಂದೆ ನಾಗಚೈತನ್ಯ ಹಾಗೂ ಶೋಭಿತಾ ಕಲ್ಯಾಣ ನಡೆದಿದೆ. ತಂದೆ ನಾಗಾರ್ಜುನ ಮುಂದೆ ನಿಂತು ಮಗನ ಎರಡನೇ ಮದುವೆ ನಡೆಸಿದ್ದಾರೆ.

    ಮಗನ ಮದುವೆ ಫೋಟೋ ಎಕ್ಸ್‌ನಲ್ಲಿ ಹಂಚಿಕೊಂಡು ನಾಗಾರ್ಜುನ ಭಾವುಕರಾಗಿದ್ದಾರೆ. ಮಗನ ಮದುವೆ ಭಾವನಾತ್ಮಕ ಕ್ಷಣ. ನನ್ನ ಪ್ರೀತಿಯ ಚೈಗೆ ಅಭಿನಂದನೆಗಳು ಹಾಗೇ ಕುಟುಂಬಕ್ಕೆ ಸ್ವಾಗತ ಶೋಭಿತಾ. ನೀವಿಬ್ಬರು ನಮ್ಮ ಜೀವನದಲ್ಲಿ ತುಂಬಾ ಸಂತೋಷವನ್ನು ತಂದಿದ್ದೀರಿ ಎಂದು ಬರೆದು ಎಕ್ಸ್‌ನಲ್ಲಿ ನಾಗಾರ್ಜುನ ಪೋಸ್ಟ್ ಮಾಡಿದ್ದಾರೆ.

    ನಾಗಚೈತನ್ಯ ಹಾಗೂ ಶೋಭಿತಾ ಕಲ್ಯಾಣಕ್ಕೆ ಕೇವಲ 400 ಅತಿಥಿಗಳಿಗೆ ಮಾತ್ರ ಮದುವೆ ಆಹ್ವಾನ ನೀಡಲಾಗಿತ್ತು. ಅಲ್ಲು ಅರ್ಜುನ್, ರಾಮ್ ಚರಣ್ ದಂಪತಿ, ಮಹೇಶ್ ಬಾಬು ದಂಪತಿ, ಪ್ರಭಾಸ್, ರಾಜಮೌಳಿ, ಪಿ.ವಿ ಸಿಂಧೂ ಸೇರಿ ಹಲವು ಗಣ್ಯರು ನವದಂಪತಿಗೆ ಶುಭಕೋರಿದರು.

  • ‘ಸಾಯಬೇಕು ಅಂದ್ರೆ ನೀನು ಸಾಯಿ’- ಶೋಭಿತಾ ಬರೆದ ಡೆತ್‌ನೋಟ್‌ನಲ್ಲಿ ಹೊಸ ಟ್ವಿಸ್ಟ್

    ‘ಸಾಯಬೇಕು ಅಂದ್ರೆ ನೀನು ಸಾಯಿ’- ಶೋಭಿತಾ ಬರೆದ ಡೆತ್‌ನೋಟ್‌ನಲ್ಲಿ ಹೊಸ ಟ್ವಿಸ್ಟ್

    ‘ಬ್ರಹ್ಮಗಂಟು’ ಸೀರಿಯಲ್ ನಟಿ ಶೋಭಿತಾ (Shobhitha) ಡಿ.1ರಂದು ಹೈದರಾಬಾದ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದಾ ಪಾಸಿಟಿವಿಟಿಯಿಂದ ಇರುವ ವ್ಯಕ್ತಿ ಸೂಸೈಡ್ ಮಾಡಿಕೊಂಡಿರೋದು ಅನೇಕರಿಗೆ ಶಾಕ್ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಹೈದರಾಬಾದ್‌ನ ಗಚ್ಚಿಬೌಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದೀಗ ಶೋಭಿತಾ ಸಾವಿಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪೋಲಿಸರಿಗೆ ನಟಿ ಬರೆದ ಲೆಟರ್ ಸಿಕ್ಕಿದೆ. ಇದನ್ನೂ ಓದಿ:BBK 11: ಉಲ್ಟಾ ಹೊಡೆದ ಶೋಭಾ ಶೆಟ್ಟಿ- ‘ಬಿಗ್ ಬಾಸ್’ ನಾನು ಹೊರಗೆ ಹೋಗಲ್ಲ ಎಂದ ನಟಿ

    ಪತಿ ಜೊತೆ ಹೈದರಾಬಾದ್‌ನಲ್ಲಿ ಸೆಟಲ್ ಆಗಿದ್ದ ಶೋಭಿತಾ ಸಾಯುವ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆ. ಅದು ಪೊಲೀಸರ ಕೈಗೆ ಸಿಕ್ಕಿದೆ. ಅದರಲ್ಲಿ ‘ನೀನು ಸಾಯಬಹುದು ಅಂದ್ರೆ ನೀನು ಸಾಯಿ’ ಎಂದು ಬರೆಯಲಾಗಿದೆ. ಜೀವನದಲ್ಲಿ ಎಲ್ಲವೂ ಪೆರ್ಫೆಕ್ಟ್ ಆಗಿದೆ ಎಂದು ಬರೆಯಲಾಗಿದೆ. ಇದರ ಅರ್ಥಕ್ಕಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಟಿಯ ಮನೆಯ ನೆರೆ ಹೊರೆಯವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಮಾನಸಿಕ ಸಮಸ್ಯೆಯಿಂದ ಸೂಸೈಡ್ ಮಾಡಿಕೊಂಡಿರುವ ಬಗ್ಗೆಯೂ ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ ಪತಿಯೊಂದಿಗೆ ಭಿನ್ನಾಭಿಪ್ರಾಯ ಇತ್ತೇ? ಎಂಬುದನ್ನು ಕೂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮುಂದೆ ಪ್ರಕರಣದಲ್ಲಿ ಏನೆಲ್ಲಾ ತಿರುವು ಸಿಗಲಿದೆ ಕಾದುನೋಡಬೇಕಿದೆ.

    ಅಂದಹಾಗೆ, ಮ್ಯಾಟ್ರಿಮೋನಿ ವೆಬ್‌ಸೈಟ್‌ನಲ್ಲಿ ನೋಡಿ 2023ರಲ್ಲಿ ಸುಧೀರ್ ರೆಡ್ಡಿರನ್ನು ಹಾಸನ ಮೂಲದ ಶೋಭಿತಾ ಮದುವೆಯಾಗಿದ್ದರು.

  • ಶೋಭಿತಾ ಸಾವಿನ ವಿಚಾರ ಅನುಮಾನಾಸ್ಪದವಾಗಿದೆ: ಚಂದು ಗೌಡ

    ಶೋಭಿತಾ ಸಾವಿನ ವಿಚಾರ ಅನುಮಾನಾಸ್ಪದವಾಗಿದೆ: ಚಂದು ಗೌಡ

    ಕಿರುತೆರೆ ನಟಿ ಶೋಭಿತಾ ಶಿವಣ್ಣ (Shobhitha Shivanna) ಅವರ ಇಂದು (ಡಿ.1) ಸೂಸೈಡ್ ಮಾಡಿಕೊಂಡಿದ್ದಾರೆ. ಗೀತಾ ಭಾರತಿ ಭಟ್ ಅವರು ಶೋಭಿತಾ ಕುರಿತು ಪ್ರತಿಕ್ರಿಯಿಸಿದ ಬೆನ್ನಲ್ಲೇ ನಟ ಚಂದು ಗೌಡ (Chandu Gowda) ಕೂಡ ‘ಪಬ್ಲಿಕ್ ಟಿವಿ’ಗೆ ರಿಯಾಕ್ಟ್ ಮಾಡಿದ್ದಾರೆ. ಅವರು ಆತ್ಮಹತ್ಯೆ ಸುದ್ದಿ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ಯಾರೊಂದಿಗೂ ಅವರು ಕಷ್ಟಗಳ ಬಗ್ಗೆ ಹಂಚಿಕೊಳ್ಳುತ್ತಿರಲಿಲ್ಲ ಎಂದು ಚಂದು ಮಾತನಾಡಿದ್ದಾರೆ.

    ನಾನು ಶೋಭಿತಾ ಜೊತೆ 2 ಸಿನಿಮಾ ಮಾಡಿದ್ದೇನೆ. ಬೆಳಗ್ಗೆ ಅವರ ಸಾವಿನ ಸುದ್ದಿ ಗೊತ್ತಾಯ್ತು. ಇನ್ನೂ ಈ ವಿಚಾರವನ್ನು ನನಗೆ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ಅವರು ಸೂಸೈಡ್ ಮಾಡಿಕೊಳ್ಳುವಂತಹ ವ್ಯಕ್ತಿಯೇ ಅಲ್ಲ. ಜೀವನದಲ್ಲಿ ಅವರು ತುಂಬಾ ಕಷ್ಟ ನೋಡಿ ಬಂದಿದ್ದಾರೆ. ಕಷ್ಟಪಟ್ಟು ಒಂದು ಮನೆಯನ್ನು ಕಟ್ಟಿಸಿದರು ಶೋಭಿತಾ. ಆ ಮನೆಯಲ್ಲಿ ಅವರ ತಂದೆ ವಾಸ ಮಾಡಲಿಲ್ಲ ಎಂಬ ಬೇಜಾರು ಅವರಿಗಿತ್ತು. ಆ ವೇಳೆ ಅವರ ತಂದೆ ತೀರಿಕೊಂಡರು. ಇದನ್ನೂ ಓದಿ:ಆತ್ಮಹತ್ಯೆಗೆ ಶರಣಾದ ‘ಬ್ರಹ್ಮಗಂಟು’ ಸೀರಿಯಲ್‌ ನಟಿ ಶೋಭಿತಾ

    ಅವರೊಂದಿಗೆ 2 ಸಿನಿಮಾ ಮಾಡಿದ್ದೀನಿ. ಜಾಕ್‌ಪಾಟ್ ಅನ್ನೋ ಸಿನಿಮಾ ಇನ್ನೂ ನಾಲ್ಕೈದು ತಿಂಗಳಿನಲ್ಲಿ ರಿಲೀಸ್ ಆಗಲಿದೆ. ಅವರ ಜೀವನ ಚೆನ್ನಾಗಿಯೇ ಹೋಗುತ್ತಿತ್ತು. ಆದರೆ ಅವರು ಸೂಸೈಡ್ ಮಾಡಿಕೊಂಡಿರುವುದಕ್ಕೆ ಕಾರಣನೇ ಸಿಗುತ್ತಿಲ್ಲ. ಅವರ ಸಾವಿನ ವಿಚಾರ ಅನುಮಾನ ಬರೋ ಹಾಗಿದೆ. ಸುಮಾರು ಪ್ರಶ್ನೆಗಳಿಗೆ ಉತ್ತರ ಬೇಕು ಎಂದು ಮಾತನಾಡಿದ್ದಾರೆ.

    ಮದುವೆಯ ಬಳಿಕ ಅಷ್ಟೂ ಸಂಪರ್ಕ ಇರಲಿಲ್ಲ. ಅವರು ನನಗೆ 8 ವರ್ಷಗಳಿಂದ ಪರಿಚಯ, ಆದರೆ ಅವರ ಕಷ್ಟಗಳ ಬಗ್ಗೆ ಯಾರೊಂದಿಗೂ ಹಂಚಿಕೊಳ್ಳುತ್ತಿರಲಿಲ್ಲ. ದಿಢೀರ್ ಅಂತ ಯಾಕೆ ಈ ನಿರ್ಧಾರ ತೆಗೆದುಕೊಂಡರು ಗೊತ್ತಾಗುತ್ತಿಲ್ಲ ಎಂದು ಚಂದು ಗೌಡ ಭಾವುಕರಾಗಿದ್ದಾರೆ.

    ಅಂದಹಾಗೆ, ‘ಬ್ರಹ್ಮಗಂಟು’ ಸೀರಿಯಲ್ ಸೇರಿದಂತೆ 12 ಸೀರಿಯಲ್‌ಗಳಲ್ಲಿ ಶೋಭಿತಾ ನಟಿಸಿದರು. ಜಾಕ್‌ಪಾಟ್, ವಂದನಾ, ಅಟೆಂಪ್ಟ್ ಟು ಮರ್ಡರ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

  • ಶೋಭಿತಾ ಸೂಸೈಡ್ ಮಾಡಿಕೊಳ್ಳುವಂತಹ ವ್ಯಕ್ತಿಯಲ್ಲ: ಗೀತಾ ಭಾರತಿ ಭಟ್ ಭಾವುಕ

    ಶೋಭಿತಾ ಸೂಸೈಡ್ ಮಾಡಿಕೊಳ್ಳುವಂತಹ ವ್ಯಕ್ತಿಯಲ್ಲ: ಗೀತಾ ಭಾರತಿ ಭಟ್ ಭಾವುಕ

    ಕಿರುತೆರೆ ನಟಿ ಶೋಭಿತಾ (35) ಹೈದರಾಬಾದ್‌ನಲ್ಲಿ ಇಂದು (ಡಿ.1) ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದೀಗ ಶೋಭಿತಾ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿತ್ವದವರಲ್ಲ ಎಂದು ‘ಬ್ರಹ್ಮಗಂಟು’ ಸಹನಟಿ ಗೀತಾ (Geetha Bharathi Bhat) ಪ್ರತಿಕ್ರಿಯಿಸಿದ್ದಾರೆ. ‘ಬ್ರಹ್ಮಗಂಟು’ (Brahmagantu) ಸೀರಿಯಲ್‌ನಲ್ಲಿ ಶೋಭಿತಾ ಜೊತೆ ನಟಿಸಿದ ದಿನಗಳನ್ನು ಗೀತಾ ಸ್ಮರಿಸಿದ್ದಾರೆ.

    ಶೋಭಿತಾ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿತ್ವದವರು ಅಲ್ಲ. ನಾವಿಬ್ಬರೂ ‘ಬ್ರಹ್ಮಗಂಟು’ ಸೀರಿಯಲ್ ಮಾಡಬೇಕಾದರೆ, ಬೇರೆ ಯಾರೋ ಸೀರಿಯಲ್ ಆರ್ಟಿಸ್ಟ್ ಸೂಸೈಡ್ ಸುದ್ದಿ ಕೇಳಿ ಈ ರೀತಿ ಮಾಡಿಕೊಳ್ಳುವುದು ತಪ್ಪು ಎಂದು ಶೋಭಿತಾ ಚರ್ಚಿಸಿದರು. ಆದರೆ ಇವರ ಸುದ್ದಿ ಈ ತರಹ ಬರುತ್ತೆ ಎಂದು ಅಂದುಕೊಂಡಿರಲಿಲ್ಲ. ಈಗಲೂ ಅವರ ಆತ್ಮಹತ್ಯೆಯ ಸುದ್ದಿ ನಂಬೋಕೆ ತುಂಬಾ ಕಷ್ಟ ಆಗುತ್ತಿದೆ ಎಂದು ನಟಿ ಗೀತಾ ಮಾತನಾಡಿದ್ದಾರೆ. ಇದನ್ನೂ ಓದಿ:ಬಾಲಿವುಡ್ ಸಿನಿಮಾ ಮಾಡದಿರಲು ಕಾರಣ ಬಿಚ್ಚಿಟ್ಟ ಐಕಾನ್ ಸ್ಟಾರ್

    ಶೋಭಿತಾ ಮದುವೆಯಾದ್ಮೇಲೆ ನನ್ನ ಜೊತೆ ಸಂಪರ್ಕ ಇರಲಿಲ್ಲ. ನಾನು ಅವರನ್ನು ಕಡೆಯದಾಗಿ ಭೇಟಿ ಆಗಿದ್ದು, ಅವರ ಮದುವೆಗೂ ಮುಂಚೆ, ಆ ನಂತರ ಅವರು ಸಿಗಲಿಲ್ಲ. ಅವರಿಗೆ ಅದೇನು ಕಷ್ಟು ಇತ್ತು ಎಂಬುದು ಗೊತ್ತಿಲ್ಲ. ಅವರ ಕಷ್ಟ ಏನಿತ್ತು ಅವರು ಯಾರ ಹತ್ತಿರ ಆದ್ರೂ ಹೇಳಿಕೊಳ್ಳಬೇಕಿತ್ತು. ಅವರ ಕುಟುಂಬಕ್ಕೆ ಅವರ ಸಾವಿನ ನೋವನ್ನು ಸಹಿಸಿಕೊಳ್ಳುವ ಶಕ್ತಿ ಕೊಡಲಿ ಅಂತ ಕೇಳಿಕೊಳ್ಳುತ್ತೇನೆ.

    ಅವರ ಕುಟುಂಬವನ್ನು ಶೋಭಿತಾ ನೋಡಿಕೊಳ್ಳುತ್ತಿದ್ದರು. ಅವರು ತುಂಬಾ ಸ್ವಾಭಿಮಾನಿಯಾಗಿದ್ದರು. ಅವರು ತುಂಬಾ ಸ್ಟ್ರಾಂಗ್ ವ್ಯಕ್ತಿ ಆಗಿದ್ದರು. ಅವರು ಈ ಮಟ್ಟಕ್ಕೆ ಕುಗ್ಗಿ ಸೂಸೈಡ್ ಮಾಡಿಕೊಂಡಿದ್ದಾರೆ ಎಂದರೆ ನಂಬೋಕೆ ಆಗುತ್ತಿಲ್ಲ ಎಂದು ನಟಿ ಭಾವುಕರಾಗಿದ್ದಾರೆ.

    ಅಂದಹಾಗೆ, ‘ಬ್ರಹ್ಮಗಂಟು’ ಸೀರಿಯಲ್ ಸೇರಿದಂತೆ 12 ಸೀರಿಯಲ್‌ಗಳಲ್ಲಿ ಶೋಭಿತಾ ನಟಿಸಿದರು. ಜಾಕ್‌ಪಾಟ್, ವಂದನಾ, ಅಟೆಂಪ್ಟ್ ಟು ಮರ್ಡರ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

  • ಮದುವೆ ಸಂಭ್ರಮದಲ್ಲಿ ನಾಗಚೈತನ್ಯ, ಶೋಭಿತಾ- ವಿವಾಹಪೂರ್ವ ಶಾಸ್ತ್ರಗಳು ಶುರು

    ಮದುವೆ ಸಂಭ್ರಮದಲ್ಲಿ ನಾಗಚೈತನ್ಯ, ಶೋಭಿತಾ- ವಿವಾಹಪೂರ್ವ ಶಾಸ್ತ್ರಗಳು ಶುರು

    ಟಾಲಿವುಡ್ ನಟ ನಾಗಚೈತನ್ಯ, ಶೋಭಿತಾ (Sobhita Dhulipala) ಕುಟುಂಬದಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ನಾಗಚೈತನ್ಯ (Nagachaitanya) ಮತ್ತು ಶೋಭಿತಾರವರ ವಿವಾಹಪೂರ್ವ ಶಾಸ್ತ್ರಗಳು ಜರುಗಿವೆ. ಇಬ್ಬರೂ ಖುಷಿ ಖುಷಿಯಾಗಿ ಭಾಗಿಯಾಗಿರುವ ಫೋಟೋಗಳು ಅಭಿಮಾನಿಗಳ ಗಮನ ಸೆಳೆದಿವೆ.

    ಮದುವೆ ಕಾರ್ಯಕ್ರಮದ ಆರಂಭದ ಭಾಗವಾಗಿ ನಾಗಚೈತನ್ಯ ಹಾಗೂ ಶೋಭಿತಾ ಅರಿಶಿಣ ಕುಂಕುಮ ನೀರಿನಲ್ಲಿ ಪವಿತ್ರವಾದ ಮಂಗಳಸ್ನಾನ ಮಾಡಿದ್ದಾರೆ. ಜೊತೆಗೆ ಹಳದಿ ಶಾಸ್ತ್ರ ಕೂಡ ನೆರವೇರಿದೆ. ಶಾಸ್ತ್ರದ ವೇಳೆ, ಇಬ್ಬರೂ ಫುಲ್ ಖುಷಿಯಾಗಿದ್ದಾರೆ. ಇದನ್ನೂ ಓದಿ:ತಲೈವಾ ಹುಟ್ಟುಹಬ್ಬದಂದು ಫ್ಯಾನ್ಸ್‌ಗೆ ಸಿಗಲಿದೆ ‘ಜೈಲರ್’ ಟೀಮ್‌ನಿಂದ ಗುಡ್ ನ್ಯೂಸ್- ಏನದು?

    ಇದೇ ಡಿ.4ರಂದು ಹೈದರಾಬಾದ್‌ನ ಅನ್ನಪೂರ್ಣ ಸ್ಟುಡಿಯೋದಲ್ಲಿ ನಾಗಚೈತನ್ಯ ಮತ್ತು ಶೋಭಿತಾ ಮದುವೆ ಜರುಗಲಿದೆ. ಈ ಮದುವೆಗೆ ತೆಲುಗು ಖ್ಯಾತ ನಟ, ನಟಿಯರು ಮತ್ತು ರಾಜಕೀಯ ಗಣ್ಯರು ಭಾಗಿಯಾಗಿದ್ದಾರೆ.

    ಅಂದಹಾಗೆ, ಈ ಹಿಂದೆ ಸಮಂತಾ (Samantha) ಜೊತೆ ನಾಗಚೈತನ್ಯ ಮದುವೆಯಾಗಿದ್ದರು. ಕಾರಣಾಂತರಗಳಿಂದ 2021ರಲ್ಲಿ ಇಬ್ಬರೂ ಡಿವೋರ್ಸ್ ಪಡೆದರು. ಈಗ ಶೋಭಿತಾ ಜೊತೆ 2ನೇ ಮದುವೆಗೆ ನಟ ಸಜ್ಜಾಗಿದ್ದಾರೆ.