Tag: ಶ್ಯಾಂಪೂ

  • ಶ್ರೀಲಂಕಾದಲ್ಲಿ ಚಾಕಲೇಟ್, ಪರ್ಫ್ಯೂಮ್, ಶ್ಯಾಂಪೂ ಸೇರಿ 300 ಆಮದು ಸರಕು ನಿಷೇಧ

    ಶ್ರೀಲಂಕಾದಲ್ಲಿ ಚಾಕಲೇಟ್, ಪರ್ಫ್ಯೂಮ್, ಶ್ಯಾಂಪೂ ಸೇರಿ 300 ಆಮದು ಸರಕು ನಿಷೇಧ

    ಕೊಲೊಂಬೋ: ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾ ಇದೀಗ ನಗದು ಕೊರತೆಯನ್ನು ನಿಭಾಯಿಸಲು ಅಲ್ಲಿನ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು, ಬರೊಬ್ಬರಿ 300 ಗ್ರಾಹಕ ವಸ್ತುಗಳ ಆಮದಿನ ಮೇಲೆ ನಿಷೇಧವನ್ನು ಹೇರಿದೆ.

    ಚಾಕಲೇಟ್, ಪರ್ಫ್ಯೂಮ್, ಹಾಗೂ ಶ್ಯಾಂಪೂ, ಮೆಕಪ್ ವಸ್ತು ಸೇರಿದಂತೆ 300 ಗ್ರಾಹಕ ವಸ್ತುಗಳ ಆಮದಿನ ಮೇಲೆ ನಿಷೇಧವನ್ನು ಹೇರಿದೆ ಎಂದು ಶ್ರೀಲಂಕಾ ಹಣಕಾಸು ಸಚಿವಾಲಯವು ಹೊರಡಿಸಿರುವ ವಿಶೇಷ ಅಧಿಸೂಚನೆಯಲ್ಲಿ ತಿಳಿಸಿದೆ. ಆ. 22ರ ಆಮದು ಮತ್ತು ರಫ್ತು ನಿಯಂತ್ರಣ ನಿಯಮಗಳ ಅಡಿಯಲ್ಲಿ ಗ್ರಾಹಕ ವಸ್ತುಗಳ ಮೇಲಿನ ಆಮದು ನಿಷೇಧವು ತಕ್ಷಣವೇ ಜಾರಿಗೆ ಬರಲಿದೆ. ಆದರೆ ಈ ಎಲ್ಲಾ ವಸ್ತುಗಳನ್ನು ಆ. 23ರ ಮೊದಲು ರಫ್ತು ಮಾಡಿ ಆ ವಸ್ತುವು ಸೆ. 14ರ ಮೊದಲು ದೇಶಕ್ಕೆ ಬಂದರೆ ಅವುಗಳನ್ನು ಮಾತ್ರ ಅನುಮತಿಸಲಾಗುವುದು ಎಂದು ಹೇಳಿದೆ. ಇದನ್ನೂ ಓದಿ: 10 ಮಹಾನಗರ ಪಾಲಿಕೆಗಳ ಮೇಯರ್, ಉಪಮೇಯರ್ ಮೀಸಲಾತಿ ಪ್ರಕಟ – ನಿಮ್ಮ ನಗರಕ್ಕೆ ಯಾರು?

    ಶ್ರೀಲಂಕಾದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಅಲ್ಲಿನ ಜನರು ಅನೇಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಷ್ಟೇ ಅಲ್ಲದೇ ವಿದೇಶಿ ವಿನಿಮಯ ಬಿಕ್ಕಟ್ಟು ತೀವ್ರವಾಗಿದ್ದು, ಅಗತ್ಯ ವಸ್ತುಗಳ ಕೊರೆತೆಯನ್ನು ಉಂಟು ಮಾಡಿದೆ. ಈ ವರ್ಷ ಆರಂಭದಿಂದ ಶ್ರೀಲಂಕಾದ ಬೀದಿ ಬೀದಿಯಲ್ಲಿ ಬೃಹತ್ ಸಾರ್ವಜನಿಕ ಪ್ರತಿಭಟನೆಗಳು ನಡೆದಿದ್ದವು. ಅಷ್ಟೇ ಅಲ್ಲದೇ ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆ ದೇಶ ಬಿಟ್ಟು ಪಲಾಯನ ಮಾಡಿದ್ದರು. ಇದನ್ನೂ ಓದಿ: ದೇಶದ ಅತಿ ದೊಡ್ಡ ಆಸ್ಪತ್ರೆ ಉದ್ಘಾಟಿಸಿದ ಮೋದಿ

    Live Tv
    [brid partner=56869869 player=32851 video=960834 autoplay=true]

  • ಮದ್ಯದ ಬೆಲೆ ಕೇವಲ 40 ರೂ.- ಸೋಪಿನ ಪುಡಿ, ಶ್ಯಾಂಪೂ ಬಳಸಿ ತಯಾರಾಗ್ತಿತ್ತು ಎಣ್ಣೆ!

    ಮದ್ಯದ ಬೆಲೆ ಕೇವಲ 40 ರೂ.- ಸೋಪಿನ ಪುಡಿ, ಶ್ಯಾಂಪೂ ಬಳಸಿ ತಯಾರಾಗ್ತಿತ್ತು ಎಣ್ಣೆ!

    ನವದೆಹಲಿ: ಸೋಪಿನ ಪುಡಿ, ಶ್ಯಾಂಪೂ ಬಳಸಿ ತಯಾರಾಗುತ್ತಿದ್ದ ಹಾನಿಕಾರಕ ಮದ್ಯವನ್ನು ಗ್ರಾಹಕರಿಗೆ ಕೇವಲ 40 ರೂ.ಗೆ ಮಾರುತ್ತಿದ್ದ ಖದೀಮರು ಪೊಲೀಸರ ಬಲೆಗೆ ಬಿದ್ದಿದ್ದಾರೆ.

    ದೆಹಲಿಯ ರಘುಬೀರ್ ನಗರದಲ್ಲಿ ಶುಕ್ರವಾರ ಪೊಲೀಸರು ಎರಡು ಅಂಗಡಿ ಮೇಲೆ ದಾಳಿ ಮಾಡಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಮೇಲ್ನೊಟಕ್ಕೆ ದಿನಸಿ ಅಂಗಡಿ ಅಂತ ಬೋರ್ಡ್ ಹಾಕಿಕೊಂಡು ಅಕ್ರಮವಾಗಿ ಡ್ರಮ್‍ಗಟ್ಟಲೆ ಸಾರಾಯಿಯನ್ನು ಇಲ್ಲಿ ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಅಂಗಡಿ ಮೇಲೆ ದಾಳಿ ಮಾಡಿದಾಗ ಈ ಸತ್ಯಾಂಶ ಹೊರಬಿದ್ದಿದೆ.

    ಅಂಗಡಿಯಲ್ಲಿ ಪತ್ತೆಯಾದ ಸಾರಾಯಿ ತಯಾರಿಕೆಯ ಸಾಮಾಗ್ರಿ ಪಟ್ಟಿಯಲ್ಲಿ ಈ ಮದ್ಯಕ್ಕೆ ಯಾವ್ಯಾವ ಸಾಮಾಗ್ರಿ ಬಳಕೆಯಾಗುತ್ತದೆ ಎಂದು ಮಾಹಿತಿ ಸಿಕ್ಕಿದೆ. ಆಗ ಸಾರಾಯಿ ತಯಾರಿಸಲು ಆರೋಪಿಗಳು ಹಾನಿಕಾರಕ ಸೋಪಿನ ಪುಡಿ ಹಾಗೂ ಶ್ಯಾಂಪುಗಳನ್ನು ಬಳಕೆ ಮಾಡುತ್ತಾರೆ ಎಂಬುದು ಬಯಲಾಗಿದೆ. ಅಲ್ಲದೆ ಗ್ರಾಹಕರಿಗೆ ಪ್ರತಿ ಬಾಟಲಿಗೆ ಕೇವಲ 40 ರೂ.ಗೆ ಈ ಸಾರಾಯಿಯನ್ನು ಅಂಗಡಿಯವರು ಮಾರಾಟ ಮಾಡುತ್ತಿದ್ದರು ಎಂಬುದರ ಬಗ್ಗೆ ಕೂಡ ಸಾಕ್ಷಿಗಳು ದೊರಕಿದೆ.

    ಆರೋಪಿಗಳಾದ ಜಿಜಾರ್ ಸಿಂಗ್ ಹಾಗೂ ವಿಶಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದು, ಸ್ಥಳದಲ್ಲಿದ್ದ ಅಕ್ರಮ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಈ ಹಿಂದೆ 2009ರಲ್ಲಿ ಇದೇ ಪ್ರದೇಶದಲ್ಲಿ ಸಾರಾಯಿ ಸೇವಿಸಿ 17ಕ್ಕಿಂತ ಹೆಚ್ಚು ಮಂದಿ ಮೃತಪಟ್ಟಿದ್ದರು. ಆ ಪ್ರಕರಣದಲ್ಲಿ ಜಿಜಾರ್ ಸಿಂಗ್‍ನ ಮಾವನೇ ಆರೋಪಿಯಾಗಿದ್ದನು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv