Tag: ಶ್ರದ್ಧಾ

  • ಗೆಳತಿ ಹತ್ಯೆಗೈದು ಫ್ರಿಡ್ಜ್‌ನಲ್ಲಿಟ್ಟ – ಕೆಲವೇ ಗಂಟೆಯಲ್ಲೇ ಬೇರೊಬ್ಬಳನ್ನು ಮದುವೆಯಾದ

    ಗೆಳತಿ ಹತ್ಯೆಗೈದು ಫ್ರಿಡ್ಜ್‌ನಲ್ಲಿಟ್ಟ – ಕೆಲವೇ ಗಂಟೆಯಲ್ಲೇ ಬೇರೊಬ್ಬಳನ್ನು ಮದುವೆಯಾದ

    ನವದೆಹಲಿ: ದೆಹಲಿಯಲ್ಲಿ (Delhi) ಮತ್ತೊಂದು ಶ್ರದ್ಧಾ ವಾಕರ್ (Shraddha Walker) ರೀತಿಯ ಭೀಕರ ಹತ್ಯೆ ನಡೆದಿದ್ದು, ರಾಷ್ಟ್ರ ರಾಜಧಾನಿಯ ನಜಾಫ್‍ಗಢ್‍ನ ಮಿತ್ರಾನ್ ಗ್ರಾಮದ ಹೊರವಲಯದಲ್ಲಿರುವ ಢಾಬಾದಲ್ಲಿ ಲಿವ್ ಇನ್ ರಿಲೇಶನ್‍ಶಿಪ್‍ನಲ್ಲಿದ್ದ ಗೆಳತಿಯನ್ನು (Live In Partner) ಹತ್ಯೆಗೈದು, ಫ್ರಿಡ್ಜ್‌ನಲ್ಲಿ ಇಟ್ಟ ಘಟನೆ ನಡೆದಿದೆ.

    ಮೃತಳನ್ನು ನಿಕ್ಕಿ ಯಾದವ್ (22) ಎಂದು ಗುರುತಿಸಲಾಗಿದೆ. ಫೆ. 9ರ ಮಧ್ಯರಾತ್ರಿ ಕಾಶ್ಮೀರಿ ಗೇಟ್ ಐಎಸ್‍ಬಿಟಿ ಬಳಿ ನಿಕ್ಕಿ ಗೆಳೆಯ ಸಾಹಿಲ್ ಗೆಹ್ಲೋಟ್ (24) ಕತ್ತು ಹಿಸುಕಿ ಕೊಲೆ ಮಾಡಿ, ಯಾರಿಗೂ ಅನುಮಾನ ಬಾರದಿರಲಿ ಎಂದು ತನ್ನ ಢಾಬಾದ ಫ್ರಿಡ್ಜ್‌ನಲ್ಲಿ ( Fridge) ಆಕೆಯ ಶವವನ್ನು ಬಚ್ಚಿಟ್ಟಿದ್ದ. ಅಷ್ಟೇ ಅಲ್ಲದೇ ಕೃತ್ಯ ಎಸಗಿ ಕೆಲವೇ ಗಂಟೆಯಲ್ಲಿ ಬೇರೊಂದು ಯುವತಿಯ ಜೊತೆ ಮದುವೆ ಆಗಿರುವ ವಿಷಯ ಬೆಳಕಿಗೆ ಬಂದಿದೆ.

    ಘಟನೆಯೇನು?: ಮಿತ್ರಾನ್ ಗ್ರಾಮದ ನಿವಾಸಿಯಾದ ಸಾಹಿಲ್ ಹರಿಯಾಣದ ಜಜ್ಜರ್ ನಿವಾಸಿ ನಿಕ್ಕಿಯನ್ನು 2018ರಲ್ಲಿ ಉತ್ತಮ ನಗರ ಪ್ರದೇಶದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯುತ್ತಿದ್ದಾಗ ಭೇಟಿಯಾಗಿದ್ದ. ನಂತರ ಇವರಿಬ್ಬರು ನೋಯ್ಡಾದ ಒಂದೇ ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದರು. ಅಲ್ಲಿಂದ ಸ್ನೇಹಿತರಾಗಿದ್ದರು. ಈ ಸ್ನೇಹವೇ ಲೀವ್ ಇನ್ ರಿಲೇಶನ್‍ಶಿಪ್‍ನಲ್ಲಿ ಇರಲು ನಾಂದಿ ಹಾಡಿತು.

    ಅದರಂತೆ ಇಬ್ಬರು ನೋಯ್ಡಾದಲ್ಲಿ ಬಾಡಿಗೆ ಮನೆಯನ್ನು ಪಡೆದು ಒಟ್ಟಿಗೆ ವಾಸಿಸಲು ಪ್ರಾರಂಭಿಸಿದರು. ಆದರೆ ಸಾಹಿಲ್ ತನ್ನ ಸಂಬಂಧದ ಬಗ್ಗೆ ಕುಟುಂಬದ ಸದಸ್ಯರಿಗೆ ತಿಳಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಾಹಿಲ್ ಮನೆಯವರು ಬೇರೊಬ್ಬ ಯುವತಿಯನ್ನು ಮದುವೆ ಆಗುವಂತೆ ಒತ್ತಾಯಿಸಿದ್ದರು. ಅದಕ್ಕೆ ಸಾಹಿಲ್ ಒಪ್ಪಿಗೆ ಸೂಚಿಸಿದ್ದಕ್ಕೆ ಬೇರೆ ಯುವತಿಯ ಜೊತೆಗೆ ಫೆ. 10ಕ್ಕೆ ಮದುವೆಯ ದಿನಾಂಕವನ್ನು ಗೊತ್ತು ಮಾಡಿದ್ದರು.

    ಈ ವಿಷಯ ತಿಳಿದ ನಿಕ್ಕಿ, ಸಾಹಿಲ್ ಜೊತೆ ಜಗಳವಾಡಿದ್ದಳು. ಈ ಹಿನ್ನೆಲೆಯಲ್ಲಿ ಕೋಪಗೊಂಡ ಸಾಹಿಲ್ ನಿಕ್ಕಿಯನ್ನು ಕೊಲೆ ಮಾಡಲು ಯೋಜನೆ ರೂಪಿಸಿದ್ದಾನೆ. ಅದರಂತೆ ಸಾಹಿಲ್ ತನ್ನ ಮೊಬೈಲ್‍ನ ಡೇಟಾ ಕೇಬಲ್ ಅನ್ನು ಬಳಸಿ ತನ್ನ ಕಾರಿನಲ್ಲೇ ನಿಕ್ಕಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

    ನಂತರ ನಿಕ್ಕಿಯನ್ನು ಕೊಂದ ನಂತರ ಸಾಹಿಲ್ ಆಕೆಯ ಶವವನ್ನು ಮಿತ್ರಾನ್ ಗ್ರಾಮದ ಹೊರವಲಯದಲ್ಲಿರುವ ಢಾಬಾದ ಫ್ರಿಡ್ಜ್‌ನಲ್ಲಿ ಬಚ್ಚಿಟ್ಟು ವಿಕೃತಿಯನ್ನು ಮೆರೆದಿದ್ದಾನೆ. ಬಳಿಕ ಕೆಲವೇ ಗಂಟೆಯಲ್ಲಿ ಏನೂ ಆಗದ ರೀತಿಯಲ್ಲಿ ಹೋಗಿ ಮತ್ತೊಬ್ಬ ಯುವತಿಯನ್ನು ಮದುವೆಯಾಗಿದ್ದ. ಇದನ್ನೂ ಓದಿ: ಅಮೆರಿಕ ಅಧ್ಯಕ್ಷೀಯ ಚುನಾವಣೆ ರೇಸ್‍ನಲ್ಲಿ ಭಾರತ ಮೂಲದ ನಿಕ್ಕಿ ಹ್ಯಾಲೆ, ವಿವೇಕ್ ರಾಮಸ್ವಾಮಿ

    ಆದರೆ ಮಂಗಳವಾರ ಢಾಬಾದ ಫ್ರಿಡ್ಜ್‌ನಲ್ಲಿ ನಿಕ್ಕಿಯ ಶವವನ್ನು ಪೊಲೀಸರು ಪತ್ತೆ ಹಚ್ಚಿದ್ದು, ಈ ಹಿನ್ನೆಲೆಯಲ್ಲಿ ಸಾಹಿಲ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಏರ್‌ಬಸ್‌-ಬೋಯಿಂಗ್‌ ಜೊತೆ ಮೆಗಾ ಡೀಲ್‌ : ವಿಶ್ವದಾಖಲೆ ನಿರ್ಮಿಸಿದ ಏರ್‌ ಇಂಡಿಯಾ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತಾಕತ್ ಇದ್ರೆ ಶ್ರದ್ಧಾಳ ದೇಹದ ಭಾಗಗಳನ್ನೆಲ್ಲ ಹುಡುಕಿ – ಪೊಲೀಸರಿಗೆ ಅಫ್ತಾಬ್ ಚಾಲೆಂಜ್

    ತಾಕತ್ ಇದ್ರೆ ಶ್ರದ್ಧಾಳ ದೇಹದ ಭಾಗಗಳನ್ನೆಲ್ಲ ಹುಡುಕಿ – ಪೊಲೀಸರಿಗೆ ಅಫ್ತಾಬ್ ಚಾಲೆಂಜ್

    ನವದೆಹಲಿ: ರಾಷ್ಟ್ರ ರಾಜಧಾನಿಯನ್ನು ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ (Shraddha Walkar) ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಫ್ತಾಬ್ ಪೂನಾವಾಲಾನನ್ನು (Aftab Ameen Poonawala) ಇತ್ತೀಚೆಗಷ್ಟೇ ನಾರ್ಕೋ ಅನಾಲಿಸಿಸ್ ಪರೀಕ್ಷೆ ಮತ್ತು ಪಾಲಿಗ್ರಾಫ್ ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದಾದ ಬಳಿಕ ಆತನನ್ನು ತಿಹಾರ್ ಜೈಲಿನಲ್ಲಿ ಇಡಲಾಗಿದೆ. ಈ ವೇಳೆ ಶ್ರದ್ಧಾಳ ಹತ್ಯೆಯ ಬಗ್ಗೆ ಕೆಲವು ಆಘಾತಕಾರಿ ವಿಷಯವನ್ನು ಪೊಲೀಸ್‌ ಮೂಲಗಳು ತಿಳಿಸಿದೆ.

    ಮೇ 17 ರಂದು ಸಂಜೆ ಶ್ರದ್ಧಾ ಡೇಟಿಂಗ್ ಅಪ್ಲಿಕೇಶನ್ ಬಬಲ್‍ನಲ್ಲಿ ಸಿಕ್ಕ ವ್ಯಕ್ತಿಯೊಂದಿಗೆ ಡೇಟಿಂಗ್‍ಗೆ ಹೋಗಿದ್ದಳು. ಅದಾದ ಬಳಿಕ ಮೇ 18ರಂದು ತಡರಾತ್ರಿ ಮಹ್ರಾಲಿಯಲ್ಲಿರುವ ಫ್ಲಾಟ್‍ಗೆ ಮರಳಿದ್ದಳು. ಅದಾದ ಬಳಿಕ ನನ್ನನ್ನು ಬಿಟ್ಟು ಹೋಗುವುದಾಗಿ ಬೆದರಿಕೆ ಹಾಕಿದ್ದಳು. ಅಷ್ಟೇ ಅಲ್ಲದೇ ಆಕೆ ತಾನು ಇನ್ನೊಬ್ಬ ವ್ಯಕ್ತಿಯೊಂದಿಗೆ ಡೇಟಿಂಗ್‍ಗೆ ಹೋಗುತ್ತಿರುವುದರ ಬಗ್ಗೆ ತಿಳಿಸಿದ್ದಳು. ಇದರಿಂದ ಕೋಪಗೊಂಡು ನಾನು ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಅದಾದ ಬಳಿಕ ಆಕೆಯ ದೇಹವನ್ನು ಕತ್ತರಿಸಿದ್ದೇನೆ ಎಂದಿದ್ದಾನೆ.

    ಅದಾದ ಬಳಿಕ ಅಫ್ತಾಬ್‍ನನ್ನು ವಿಚಾರಣೆ ನಡೆಸುವಾಗ ದೆಹಲಿ ಪೊಲೀಸರು ಮತ್ತು ತನಿಖಾ ಸಂಸ್ಥೆಗಳಿಗೆ ಅಫ್ತಾಬ್ ಕೊಲೆಯ ಆಯುಧ ಮತ್ತು ಶ್ರದ್ಧಾಳ ದೇಹದ ಭಾಗಗಳನ್ನು ಪತ್ತೆ ಮಾಡುವಂತೆ ಸವಾಲು ಹಾಕಿದ್ದ ಎಂಬ ವಿಷಯ ಇದೀಗ ಮೂಲಗಳಿಂದ ತಿಳಿದು ಬಂದಿದೆ.

    ಪೊಲೀಸರು (Police) ಅಫ್ತಾಬ್‍ನನ್ನು ವಿಚಾರಣೆ ನಡೆಸಿದ್ದ ವೇಳೆ, ಆತ ಶ್ರದ್ಧಾಳನ್ನು ಕೊಂದಿರುವ ಬಗ್ಗೆ ಒಪ್ಪಿಕೊಂಡಿದ್ದ. ಅಷ್ಟೇ ಅಲ್ಲದೇ ಶ್ರದ್ಧಾಳ ದೇಹದ ಭಾಗಗಳು ಹಾಗೂ ಕೊಲೆ ಮಾಡಲು ಬಳಸಿದ್ದ ಆಯುಧವನ್ನು ಹುಡುಕಲು ನಾನು ನಿಮಗೆ ಚಾಲೆಂಜ್ ಮಾಡುತ್ತೇನೆ ಎಂದು ಪೊಲೀಸರಿಗೆ ತಿಳಿಸಿದ್ದ. ಅಷ್ಟೇ ಅಲ್ಲದೇ ಅಫ್ತಾಬ್ ಕೊಲೆಯ ಆಯುಧವನ್ನು ತನ್ನ ಗುರುಗ್ರಾಮ್ ಕಚೇರಿಯ ಬಳಿಯ ಪೊದೆಗೆ ಎಸೆದಿದ್ದಾಗಿಯೂ ತಿಳಿಸಿದ್ದ ಎಂಬ ವಿಷಯಗಳು ಇದೀಗ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಭೀಕರ ಅಪಘಾತ- ಸಿಪಿಐ, ಪತ್ನಿ ಸಾವು

    ಶ್ರದ್ಧಾಳನ್ನು ಕೊಂದ ನಂತರ ಅಫ್ತಾಬ್ ಬೇರೊಂದು ಹುಡುಗಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದ. ಅವನ ಹೊಸ ಗೆಳತಿ (Girl friend) ಗುರುಗ್ರಾಮದವಳಾಗಿದ್ದು, ವೈದ್ಯಳಾಗಿದ್ದಳು. ಆಕೆಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾಗ ಕೊಲೆಯ ಬಗ್ಗೆ ಆಕೆ ಆಘಾತವನ್ನು ವ್ಯಕ್ತಪಡಿಸಿದ್ದಳು. ಇದನ್ನೂ ಓದಿ: ಹಾವಿನಿಂದ ಹೆದ್ದಾರಿಯಲ್ಲಿ ಸರಣಿ ಅಪಘಾತ – ಸಂಚಾರಿ ಪೊಲೀಸರ ವಿರುದ್ದ ಆಕ್ರೋಶ

    Live Tv
    [brid partner=56869869 player=32851 video=960834 autoplay=true]

  • ಪ್ರಬಲ ನಾಯಕನಿಲ್ಲದಿದ್ರೆ ಅಫ್ತಾಬ್‌ನಂಥ ಹಂತಕರು ಪ್ರತಿ ನಗರದಲ್ಲೂ ಹುಟ್ತಾರೆ – ಅಸ್ಸಾಂ ಸಿಎಂ

    ಪ್ರಬಲ ನಾಯಕನಿಲ್ಲದಿದ್ರೆ ಅಫ್ತಾಬ್‌ನಂಥ ಹಂತಕರು ಪ್ರತಿ ನಗರದಲ್ಲೂ ಹುಟ್ತಾರೆ – ಅಸ್ಸಾಂ ಸಿಎಂ

    ಗಾಂಧಿನಗರ: ದೇಶದಲ್ಲಿ ಪ್ರಬಲ ನಾಯಕ ಇಲ್ಲದಿದ್ದರೇ ಅಫ್ತಾಬ್ ಅಮೀನ್ ಪೂನಾವಾಲನಂತಹ (Aftab Ameen Poonawala) ಹಂತಕರು ಪ್ರತಿ ನಗರದಲ್ಲೂ ಹುಟ್ಟುತ್ತಾರೆ ಎಂದು ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮಾ (Himanta Biswa Sarma) ಎಚ್ಚರಿಸಿದ್ದಾರೆ.

    ಗುಜರಾತ್ ಚುನಾವಣಾ (Gujarat Election) ಪ್ರಚಾರ ಸಭೆಯ ಭಾಗವಾಗಿ ಕಚ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ಅವರು, ದೆಹಲಿಯ ಶ್ರದ್ಧಾ ಹತ್ಯೆ (Shraddha Murder Case) ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದರು. ದೇಶದಲ್ಲಿ ಪ್ರಬಲ ನಾಯಕನಿಲ್ಲದಿದ್ದರೆ, ಅಫ್ತಾಬ್‌ನಂತಹ ಹಂತಕರು ಪ್ರತಿ ನಗರದಲ್ಲೂ ಹುಟ್ಟುತ್ತಾರೆ. ಆಗ ನಮ್ಮ ಸಮಾಜ ರಕ್ಷಿಸಲು ಸಾಧ್ಯವಾಗುವುದಿಲ್ಲ ಹೇಳಿದ್ದಾರೆ. ಇದನ್ನೂ ಓದಿ: ವಿಮೆ ಹಣಕ್ಕಾಗಿ ಸುಪಾರಿ ಕೊಟ್ಟು ತಂದೆಯನ್ನೇ ಕೊಲ್ಲಿಸಿದ ಮಗ

    ಕೊಲೆ ಪ್ರಕರಣದ ಭೀಕರತೆಗಳನ್ನು ವಿಚಾರಸಿದಾಗ ಇದನ್ನು ಲವ್ ಜಿಹಾದ್ (Love Jihad) ಪ್ರಕರಣ ಎನ್ನಲಾಗಿದೆ. ಅಲ್ಲದೆ ಹಿಂದೂ ಮಹಿಳೆಯರು ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸುತ್ತಾರೆ ಎಂದು ಆರೋಪಿಸಿದ್ದಾರೆ.  

    ಮೋದಿ ಪರ ಬ್ಯಾಟಿಂಗ್:
    ಮುಂಬೈನಿಂದ ಶ್ರದ್ಧಾಳನ್ನು ಕರೆದುಕೊಂಡು ಬಂದಿದ್ದ ಅಫ್ತಾಬ್ 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ. ಇದೇ ಸಮಯದಲ್ಲಿ ಮತ್ತೊಬ್ಬ ಮಹಿಳೆಯನ್ನು ಕರೆತಂದು ಲೈಂಗಿಕ ಸಂಪರ್ಕ ಮಾಡಿದ್ದಾನೆ. ಇಂತಹ ಕೃತ್ಯಗಳಿಂದ ದೇಶವನ್ನು ರಕ್ಷಿಸಬೇಕಾದರೆ ನಮ್ಮ ದೇಶಕ್ಕೆ ಶಕ್ತಿಯುತ ನಾಯಕನನ್ನು ಹೊಂದಿರಬೇಕು, ರಾಷ್ಟ್ರವನ್ನು ತಮ್ಮ ತಾಯಿ ಎಂದು ಪರಿಗಣಿಸುವವರಾಗಿರಬೇಕು. ಹಾಗಾಗಿ 2024ರಲ್ಲಿ 3ನೇ ಬಾರಿಗೆ ನರೇಂದ್ರ ಮೋದಿ (Narendra Modi) ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವುದು ಬಹಳ ಮುಖ್ಯ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಲವ್ ಜಿಹಾದ್‌ಗೆ ಬಲಿಯಾದ್ರೆ ಇದೇ ಗತಿ – ಹೊಸ ಆಯಾಮದಲ್ಲಿ ತನಿಖೆ ನಡೆಸುವಂತೆ VHP ಮನವಿ

    ಏನಿದು ಘಟನೆ?
    ರಾಷ್ಟ್ರ ರಾಜಧಾನಿಯಲ್ಲಿ ತನ್ನೊಂದಿಗೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಗೆಳತಿಯ ಹತ್ಯೆ ಮಾಡಿ, ದೇಹವನ್ನು 35 ತುಂಡುಗಳನ್ನಾಗಿ ಮಾಡಿ, ಅದನ್ನು ಫ್ರಿಡ್ಜ್ನಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಅನೇಕ ಭಯಾನಕ ಸಂಗತಿಗಳು ಹೊರಬಿದ್ದಿವೆ. ಆರೋಪಿ ಅಫ್ತಾಬ್ ಹಾಗೂ ಶ್ರದ್ಧಾ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಆದರೆ ಮೇ 18ರಂದು ಜಗಳವಾದಾಗ ಶ್ರದ್ಧಾಳ ಎದೆಯ ಮೇಲೆ ಕುಳಿತು ಆಕೆಯ ಕತ್ತು ಹಿಸುಕಿ ಕೊಂದಿದ್ದಾನೆ.

    ಬಳಿಕ ದೇಹವನ್ನು ಕತ್ತರಿಸೋದು ಹೇಗೆ? ಅದನ್ನು ಡಿಎನ್‌ಎಗಳ ಸಾಕ್ಷ್ಯಾಧಾರವೂ ಸಿಗದಂತೆ ದೇಹವನ್ನ ವಿಲೇವಾರಿ ಮಾಡೋದು ಹೇಗೆ ಎಂಬ ಮಾಹಿತಿಗಳ ಬಗ್ಗೆ ಗೂಗಲ್‌ನಲ್ಲಿ ಹುಡುಕಾಡಿದ್ದಾನೆ. ನಂತರ ದೇಹವನ್ನು 35 ಪೀಸ್‌ಗಳಾಗಿ ತಂಡು ಮಾಡಿದ್ದು, ಅದನ್ನು ಸಂಗ್ರಹಿಸಲು 300 ಲೀಟರ್ ಸಾಮರ್ಥ್ಯದ ಹೊಸ ಫ್ರಿಡ್ಜ್ ಸಹ ಖರೀದಿಸಿದ್ದಾನೆ. ದೇಹದ ಮಾಂಸದ ವಾಸನೆ ಹರಡಬಾರದೆಂದು ದಿನವೂ ಅಗರಬತ್ತಿ ಹಚ್ಚಿಡುತ್ತಿದ್ದ. ಈ ನಡುವೆ ಶ್ರದ್ಧಾಳನ್ನು ಕೊಲೆ ಮಾಡಿ ಕೆಲ ದಿನಗಳ ನಂತರ ಮತ್ತೊಬ್ಬ ಮಹಿಳೆಯನ್ನು ತನ್ನ ಅಪಾರ್ಟ್ಮೆಂಟ್‌ಗೆ ಕರೆದು ಸೆಕ್ಸ್ ಮಾಡ್ತಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ. ಈ ಸಂಬಂಧ ತನಿಖೆ ಮುಂದುವರಿದಿದೆ.

    Live Tv
    [brid partner=56869869 player=32851 video=960834 autoplay=true]

  • ಪೀಸ್ ಪೀಸ್ ಪ್ರೇಮಿಯ ಮತ್ತಷ್ಟು ಕ್ರೂರತೆ ಬಹಿರಂಗ- ದೆಹಲಿ ಮಾತ್ರವಲ್ಲ ಡೆಹ್ರಾಡೂನ್‍ನಲ್ಲೂ ದೇಹದ ತುಂಡು ಎಸೆತ

    ಪೀಸ್ ಪೀಸ್ ಪ್ರೇಮಿಯ ಮತ್ತಷ್ಟು ಕ್ರೂರತೆ ಬಹಿರಂಗ- ದೆಹಲಿ ಮಾತ್ರವಲ್ಲ ಡೆಹ್ರಾಡೂನ್‍ನಲ್ಲೂ ದೇಹದ ತುಂಡು ಎಸೆತ

    ನವದೆಹಲಿ: ದೆಹಲಿಯಲ್ಲಿ ನಡೆದ ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್ (Shraddha Walker) ಹತ್ಯೆ ಪ್ರಕರಣದಲ್ಲಿ ಮತ್ತೊಂದು ಸ್ಫೋಟಕ ಮಾಹಿತಿ ಸಿಕ್ಕಿದೆ. ಶ್ರದ್ಧಾ ದೇಹವನ್ನು ತುಂಡರಿದ್ದ ಸೈಕೋ ಪಾತಕಿ ಅಫ್ತಾಬ್ ಬರಿ ದೆಹಲಿಯ ಕಾಡುಗಳಲ್ಲಿ ಮಾತ್ರವಲ್ಲದೇ ಉತ್ತಾರಖಂಡನ ಡೆಹ್ರಾಡೂನ್ ನಲ್ಲೂ ಕೆಲವು ತುಂಡುಗಳನ್ನು ಎಸೆದು ಬಂದಿದ್ದಾನಂತೆ. ಈ ನಡುವೆ ಶ್ರದ್ಧಾ ಸ್ನೇಹಿತರು ಹಂಚಿಕೊಂಡ ಚಾಟ್‍ಗಳು ವೈರಲ್ ಆಗಿದ್ದು, ಅಫ್ತಾಬ್ ಶ್ರದ್ಧಾಳನ್ನು ವರ್ಷಗಳಿಂದ ಹಿಂಸಿಸುತ್ತಿದ್ದದ್ದು ಬಹಿರಂಗವಾಗಿದೆ.

    ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದ ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಲ್ಲಿ ಮೊಗೆದಷ್ಟು ಸ್ಪೋಟಕ ಮಾಹಿತಿಗಳು ಹೊರ ಬರುತ್ತಿದೆ. ದೆಹಲಿ ಪೊಲೀಸರ ವಿಚಾರಣೆಯಲ್ಲಿ ಸೈಕೊ ಪಾತಕಿ ಅಫ್ತಾಬ್ (Aftab Amin Poonawala) ಸ್ಫೋಟಕ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದಾನೆ. ಪೊಲೀಸ್ ಕಸ್ಟಡಿ ವಿಸ್ತರಣೆ ಬಳಿಕ ಪೊಲೀಸರು ಅಫ್ತಾಬ್ ವಿಚಾರಣೆ ಮುಂದುವರಿಸಿದ್ದು, ವಿಚಾರಣೆ ವೇಳೆ ಮತ್ತೊಂದು ಸ್ಪೋಟಕ ಸತ್ಯವನ್ನು ಬಾಯಿ ಬಿಟ್ಟಿದ್ದಾನೆ. ಇದನ್ನೂ ಓದಿ: ಹೌದು, ನಾನು ಡ್ರಗ್ಸ್ ಸೇವಿಸುತ್ತಿದ್ದೆ, ನಶೆಯಲ್ಲೇ ಶ್ರದ್ಧಾ ಹತ್ಯೆ ಮಾಡಿದೆ: ಅಫ್ತಾಬ್ ತಪ್ಪೊಪ್ಪಿಗೆ

    ಶ್ರದ್ಧಾಳ ದೇಹವನ್ನು 16 ಪೀಸ್ ಮಾಡಿದ್ದೆ ಎಂದು ಹೇಳಿಕೆ ತಿರುಚಿದ್ದ ಅಫ್ತಾಬ್, ಈಗ ದೆಹಲಿಯ ಮೆಹ್ರೋಲಿ ಕಾಡುಗಳು ಮಾತ್ರವಲ್ಲದೇ ಉತ್ತರಾಖಂಡ (Uttarakhand) ರಾಜಧಾನಿ ಡೆಹ್ರಾಡೂನ್‍ (Dehradun) ನಲ್ಲೂ ಕೆಲವು ತುಂಡುಗಳನ್ನು ಎಸೆದು ಬಂದಿರುವುದಾಗಿ ಹೇಳಿದ್ದಾನೆ. ಶ್ರದ್ಧಾ ದೇಹದ ಯಾವ ಭಾಗವನ್ನು ಎಸೆದು ಬಂದಿದ್ದ ಎನ್ನುವುದು ಇನ್ನೂ ಖಚಿತವಾಗಿಲ್ಲ, ಆದರೆ ಅಫ್ತಾಬ್ ನೀಡಿದ ಹೇಳಿಕೆಗೆ ಪೊಲೀಸರು ಅಚ್ಚರಿಗೊಂಡಿದ್ದಾರೆ. ಇದನ್ನೂ ಓದಿ: ಶ್ರದ್ಧಾ ಕೊಲೆ ಪ್ರಕರಣ – ತಲೆ ಬುರುಡೆ ಸುಟ್ಟು, ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದ ಅಫ್ತಾಬ್

    ಸ್ನೇಹಿತೆಗೆ ಶ್ರದ್ಧಾ ಮಾಡಿದ ಮೆಸೇಜ್ ವೈರಲ್: ತನಿಖೆಯ ಭಾಗವಾಗಿ ಪೊಲೀಸರು ಶ್ರದ್ಧಾಳ ಸ್ನೇಹಿತರು ಮತ್ತು ಆಕೆ ಕೆಲಸ ಮಾಡುತ್ತಿದ್ದ ಕಂಪನಿಯ ಮ್ಯಾನೇಜರ್ (Company Manager) ಅನ್ನು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ 2020ರಲ್ಲಿ ಶ್ರದ್ಧಾ ಮಾಡಿದ ಮೆಸೇಜ್ ಗಳನ್ನು ಅವರು ಹಂಚಿಕೊಂಡಿದ್ದಾರೆ. ಶ್ರದ್ಧಾ ತನ್ನ ಮ್ಯಾನೇಜರ್ ಕರಣ್ ಭಕ್ಕಿಗೆ 2020ರ ನವೆಂಬರ್ 26 ರಿಂದ 2020ರ ಡಿಸೆಂಬರ್ 3ರ ನಡುವೆ ಮಾಡಿದ ಮೆಸೇಜ್‍ನಲ್ಲಿ ಅಫ್ತಾಬ್ ತನ್ನನ್ನು ಕೊಂದುಬಿಡುವ ಬಗ್ಗೆ ಮಸೇಜ್ ಮಾಡಿದ್ದಾಳೆ. ಇದನ್ನೂ ಓದಿ: ಶ್ರದ್ಧಾ ಕೊಲೆ ಪ್ರಕರಣ- ಸಾಕ್ಷಿ ನಾಶಕ್ಕೆ OLXನಲ್ಲಿ ಫೋನ್ ಮಾರಿದ್ದ ಅಫ್ತಾಬ್!

    ಶ್ರದ್ಧಾ ಮೆಸೇಜ್‍ನಲ್ಲಿ ಮಾಡಿದ್ದೇನು..?: ಅಫ್ತಾಬ್ ನಿನ್ನೆ ಹೆಚ್ಚು ಹೊಡೆದಿದ್ದಾನೆ. ದೇಹಕ್ಕೆ ಹೆಚ್ಚು ನೋವಾಗಿದ್ದು ನಾನು ಕೆಲಸ ಮಾಡುವ ಪರಿಸ್ಥಿತಿಯಲ್ಲಿಲ್ಲ. ನನ್ನ ಬಿಪಿ (Blood Pressure) ಕೂಡ ಕಡಿಮೆಯಾಗಿದೆ. ಹಾಸಿಗೆಯಿಂದ ಎದ್ದೇಳುವ ಶಕ್ತಿಯೂ ನನ್ನಗಿಲ್ಲ. ಅವನು ಮನೆಯಿಂದ ಹೊರ ಹೋಗುವುದು ಕಾಯುತ್ತಿದ್ದೇನೆ. ನಾನು ಪೊಲೀಸ್‍ಗೆ ಕಂಪ್ಲೇಟ್ ಕೊಡಬೇಕು. ಮಹಿಳಾ ಸಂಘಟನೆಯನ್ನು ಸಂಪರ್ಕಿಸಬೇಕು, ನೀವೂ ನನಗೆ ಸಹಾಯ ಮಾಡಿ ಎಂದು ಮೆಸೇಜ್ (Message) ನಲ್ಲಿ ತಿಳಿಸಿದ್ದಾಳೆ. ಅಲ್ಲದೇ ತೀವ್ರ ಗಾಯಗೊಂಡ ಮುಖದ ಪೊಟೋವನ್ನು ತೆಗೆದು ಶ್ರದ್ಧಾ ಮ್ಯಾನೇಜರ್‍ಗೆ ರಜೆಗೆ ಮನವಿ ಮಾಡಿದ್ದಾರೆ. ಫೋಟೋ ನೋಡಿದ ಮ್ಯಾನೇಜರ್ ಕರಣ್ ಭಕ್ಕಿ ಸಹಾಯ ಮಾಡುವ ಭರವಸೆ ನೀಡಿದ್ದರು.

    ಮತ್ತೊಂದು ಮೆಸೆಂಜರ್ (Messanger) ಚಾಟ್‍ನಲ್ಲಿ ಶ್ರದ್ಧಾ ಅಫ್ತಾಬ್ ಹೊಡೆದ ವಿಚಾರವನ್ನು ಸ್ನೇಹಿತೆಯಿಂದ ಮುಚ್ಚಿಡುವ ಪ್ರಯತ್ನ ಮಾಡಿದ್ದಾಳೆ. ಮೂಗಿನ ಮೇಲಿನ ಗಾಯ ಕಂಡು ಏನಾಯಿತು ಎಂದು ಕೇಳಿದ ಸ್ನೇಹಿತೆಗೆ ಮೆಟ್ಟಿಲು ಹತ್ತುವಾಗ ಜಾರಿ ಬಿದ್ದಿರುವುದಾಗಿ ಬಳಿಕ ಮುರಿದಿದೆ, ಕೆಲವು ವಾರದಲ್ಲಿ ಸರಿಯಾಗಲಿದೆ ಎಂದು ಶ್ರದ್ಧಾ ಹೇಳಿದ್ದಾಳೆ. ಈ ನಡುವೆ ಸ್ನೇಹಿತ ಲಕ್ಷ್ಮಣ್ ನಾಡಾರ್ ಗೆ ವ್ಯಾಟ್ಸಪ್ ಕಾಲ್ (Whatsap Call) ಮಾಡಿದ್ದ ಶ್ರದ್ಧಾ, ಅಫ್ತಾಬ್‍ನಿಂದ ರಕ್ಷಿಸುವಂತೆ ಕೇಳಿಕೊಂಡಿದ್ದಳು. ರಾತ್ರಿ ಆಫ್ತಾಬ್‍ನೊಂದಿಗೆ ಉಳಿದುಕೊಂಡರೆ ಅವನು ನನ್ನನ್ನು ಕೊಲ್ಲುತ್ತಾನೆ ಎಂದು ಹೇಳಿಕೊಂಡಿದ್ದಳು. ಇದನ್ನೂ ಓದಿ: ಶ್ರದ್ಧಾ ದೇಹ ತುಂಡರಿಸಿದ್ರೂ ತಲೆಬುರುಡೆಗೆ ಹಾನಿ ಮಾಡಿಲ್ಲ- ಫ್ರಿಡ್ಜ್‌ನಲ್ಲಿಟ್ಟು ಆಗಾಗ ನೋಡ್ತಿದ್ದ ಅಫ್ತಾಬ್

    ಹಲ್ಲೆಯಿಂದ ಖಿನ್ನತೆಗೆ ಒಳಗಾಗಿದ್ದ ಶ್ರದ್ಧಾ: ಅಫ್ತಾಬ್‍ನ ನಿರಂತರ ಶೋಷಣೆಯಿಂದ ಶ್ರದ್ಧಾ ಖಿನ್ನತೆಗೆ ಒಳಗಾಗಿದ್ದಳು ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಇದಕ್ಕಾಗಿ ಮುಂಬೈ ಮೂಲದ ವೈದ್ಯ ಪ್ರಣವ್ ಕಬ್ರಾ (Pranav Kabra) ಅವರನ್ನು ಶ್ರದ್ಧಾ ಕಳೆದ ವರ್ಷ ಸಂಪರ್ಕಿಸಿದ್ದಳು. ಅವಳು ತನ್ನ ಸಿಟ್ಟು, ಖಿನ್ನತೆ ಬಗ್ಗೆ ಫೋನ್‍ನಲ್ಲಿ ಹೇಳಿಕೊಂಡಿದ್ದಳು. ನೇರವಾಗಿ ಸಂಪರ್ಕಿಸಲು ವೈದ್ಯರು ಸಲಹೆ ನೀಡಿದ ವೇಳೆ ಕೋವಿಡ್ ಕಾರಣದಿಂದ ನಿರಾಕರಿಸಿದರು ಎಂದು ವೈದ್ಯ ಪ್ರಣವ್ ಕಬ್ರಾ ಹೇಳಿಕೆ ದಾಖಲಿಸಿದ್ದಾರೆ.  ಇದನ್ನೂ ಓದಿ: ಶ್ರದ್ಧಾ ಕೇಸ್‌ನಂತೆಯೇ ಬಾಂಗ್ಲಾದಲ್ಲೂ ಭೀಕರ ಹತ್ಯೆ – ಹಿಂದೂ ಯುವತಿಯನ್ನು ಪೀಸ್ ಪೀಸ್ ಮಾಡಿದ ಹಂತಕ ಪ್ರೇಮಿ

    ಪೊಲೀಸರಿಗೆ ಕೋರ್ಟ್ ಸೂಚನೆ: ಅಫ್ತಾಬ್ ಮಂಪರು ಪರೀಕ್ಷೆ ಸಂಬಂಧ ಕೋರ್ಟ್ (Court ಮಹತ್ವದ ಸೂಚನೆ ನೀಡಿದೆ. ಮುಂದಿನ ಐದು ದಿನಗಳಲ್ಲಿ ತಜ್ಞರ ಸಮ್ಮುಖದಲ್ಲಿ ಪರೀಕ್ಷೆ ನಡೆಸಲು ರೋಹಿಣಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಸಾಕೇತ್ ನ್ಯಾಯಾಲಯ ಆದೇಶ ನೀಡಿದೆ. ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವಿಜಯಶ್ರೀ ರಾಥೋಡ್ ಅಫ್ತಾಬ್ ಪರಿಸ್ಥಿತಿ ಕಂಡಿ ಯಾವುದೇ ಥರ್ಡ್ ಡಿಗ್ರಿ ಟ್ರಿಂಟ್ಮೆಂಟ್ ನೀಡದಂತೆ ತನಿಖಾಧಿಕಾರಿಗೆ ನಿರ್ದೇಶಿಸಿದ್ದಾರೆ. ಇದನ್ನೂ ಓದಿ: ಲವ್ ಜಿಹಾದ್‌ಗೆ ಬಲಿಯಾದ್ರೆ ಇದೇ ಗತಿ – ಹೊಸ ಆಯಾಮದಲ್ಲಿ ತನಿಖೆ ನಡೆಸುವಂತೆ VHP ಮನವಿ

    ತನಿಖೆಯ ಭಾಗವಾಗಿ ಹಿಮಾಚಲದಲ್ಲಿ ಪರಿಶೀಲನೆ ನಡೆಸುತ್ತಿದ್ದ ದೆಹಲಿ ಪೊಲೀಸರು, ಈಗ ಅಫ್ತಾಬ್ ಹೇಳಿಕೆಯ ಬಳಿಕ ಉತ್ತರಾಖಂಡಗೆ ಪ್ರಯಾಣ ಬೆಳೆಸಿದ್ದು ಡೆಹ್ರಾಡೂನ್‍ನಲ್ಲಿ ಶ್ರದ್ಧಾ ದೇಹದ ತುಂಡುಗಳಿಗಾಗಿ ಹುಡುಕಾಟ ನಡೆಸಲಿದ್ದಾರೆ. ಈ ನಡುವೆ ಮಂಪರು ಪರೀಕ್ಷೆ ಬಳಿಕ ಮತ್ತಷ್ಟು ಸ್ಫೋಟಕ ಸತ್ಯಗಳು ಹೊರಗೆ ಬರಲಿದೆ.

    Live Tv
    [brid partner=56869869 player=32851 video=960834 autoplay=true]

  • ಹೌದು, ನಾನು ಡ್ರಗ್ಸ್ ಸೇವಿಸುತ್ತಿದ್ದೆ, ನಶೆಯಲ್ಲೇ ಶ್ರದ್ಧಾ ಹತ್ಯೆ ಮಾಡಿದೆ: ಅಫ್ತಾಬ್ ತಪ್ಪೊಪ್ಪಿಗೆ

    ಹೌದು, ನಾನು ಡ್ರಗ್ಸ್ ಸೇವಿಸುತ್ತಿದ್ದೆ, ನಶೆಯಲ್ಲೇ ಶ್ರದ್ಧಾ ಹತ್ಯೆ ಮಾಡಿದೆ: ಅಫ್ತಾಬ್ ತಪ್ಪೊಪ್ಪಿಗೆ

    -ಶ್ರದ್ಧಾ ಕೂಡಾ ಮದ್ಯ ಸೇವಿಸುತ್ತಿದ್ದಳು
    – 35 ಅಲ್ಲ 16 ಪೀಸ್ ಮಾಡಿದ್ದೆ

    ನವದೆಹಲಿ: ಶ್ರದ್ಧಾ ವಾಕರ್ (Shraddha Walkar) ಹತ್ಯೆ ಪ್ರಕರಣದಲ್ಲಿ ಪ್ರತಿನಿತ್ಯ ಸ್ಫೋಟಕ ಮಾಹಿತಿಗಳು ಹೊರ ಬರುತ್ತಿದೆ. ಪ್ರಕರಣ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು (Delhi) ಮುಂದೆ ಅಫ್ತಾಬ್ ಹೊಸ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾನೆ. ತನಿಖೆ ವೇಳೆ ಅಫ್ತಾಬ್ (Aftab Amin Poonawala) ಡ್ರಗ್ಸ್‌ಗೆ ಅಡಿಕ್ಟ್ ಆಗಿರುವುದಾಗಿ ಒಪ್ಪಿಕೊಂಡಿದ್ದಾನೆ. ನಿತ್ಯ ಗಾಂಜಾ ಸೇವಿಸುತ್ತಿದ್ದೆ, ನಶೆಯಲ್ಲಿ ತೇಲಾಡುತ್ತಿದ್ದೆ, ಗಾಂಜಾ ಸೇವನೆಯನ್ನು ಶ್ರದ್ಧಾ ವಿರೋಧಿಸಿದ್ದಳು, ಇದೇ ಕಾರಣಕ್ಕೆ ಶ್ರದ್ಧಾ ಜಗಳವಾಡುತ್ತಿದ್ದಳು ಎಂದು ತನಿಖೆ ವೇಳೆ ಅಫ್ತಾಬ್ ಹೇಳಿಕೊಂಡಿದ್ದಾನೆ.

    ಮುಂಬೈನಿಂದ (Mumbai) ದೆಹಲಿಗೆ ಶಿಫ್ಟ್ ಆಗಿದ್ದರಿಂದ ಶ್ರದ್ಧಾ ಮತ್ತು ನನ್ನ ನಡುವೆ ಲಗೇಜ್ ತರುವ ವಿಚಾರಕ್ಕೆ ಮೇ 18 ರಂದು ಜಗಳವಾಗಿತ್ತು. ಮುಂಬೈನಲ್ಲಿ ಮನೆ ಬಳಕೆಯ ಲಗೇಜ್ ಇತ್ತು, ಅದನ್ನು ದೆಹಲಿಗೆ ತರುವ ಬಗ್ಗೆ ಇಬ್ಬರ ನಡುವೆ ಜಗಳವಾಗಿತ್ತು. ಇಬ್ಬರು ನಗದು ಹಣದ ಕೊರತೆ ಎದುರಿಸುತ್ತಿದ್ದರಿಂದ ಮುಂಬೈನಿಂದ ಲಗೇಜ್ ತರುವುದು ಯಾರು ಎಂದು ಜಗಳಮಾಡಿಕೊಂಡಿದ್ದೆವು, ಕೊಲೆಯಾದ ದಿನ ತೀವ್ರ ಮಾತಿನ ಜಕಮಕಿ ನಡೆದಿತ್ತು.

    ಜಗಳ ನಡುವೆ ಮನೆಯಿಂದ ಹೊರಗೆ ಹೋಗಿ ಗಾಂಜಾ ಸೇವಿಸಿ ಮನೆಗೆ ವಾಪಸ್ ಆಗಿದ್ದೆ, ಈ ವೇಳೆ ಜಗಳ ಮುಂದುವರಿದು ನಶೆಯಲ್ಲಿ ಕತ್ತು ಹಿಸುಕಿ ಹತ್ಯೆ ಮಾಡಿರುವುದಾಗಿ ಅಫ್ತಾಬ್ ಹೇಳಿದ್ದಾನೆ. ಇದು ನಶೆಯಲ್ಲಿ ನಡೆದ ಘಟನೆಯಾಗಿದ್ದು, ಶ್ರದ್ಧಾ ಹತ್ಯೆ ಮಾಡುವ ಉದ್ದೇಶ ಇರಲಿಲ್ಲ ಎಂದು ಸೈಕೋ ಕಿಲ್ಲರ್ ಅಫ್ತಾಬ್ ಹೇಳಿಕೆ ನೀಡಿದ್ದಾನೆ. ಇದನ್ನೂ ಓದಿ: ಪ್ರೀತಿಸಿ ಮದುವೆಯಾದವಳು ಮತಾಂತರವಾಗಲಿಲ್ಲ – ಪತ್ನಿಯನ್ನೇ ಕೊಲ್ಲಲು ಮುಂದಾದ ಪತಿ

    ಶ್ರದ್ಧಾ ಜೊತೆ ಮದ್ಯ ಸೇವಿಸುತ್ತಿದ್ದೆ
    ವಿಚಾರಣೆ ವೇಳೆ ಶ್ರದ್ಧಾ ಕೂಡಾ ಮದ್ಯ ಸೇವನೆ ಮಾಡುತ್ತಿದ್ದ ಮಾಹಿತಿಯನ್ನು ಅಫ್ತಾಬ್ ಹಂಚಿಕೊಂಡಿದ್ದಾನೆ. ಹಲವು ಬಾರಿ ಮನೆಯಲ್ಲಿ ಶ್ರದ್ಧಾ ಜೊತೆಯಲ್ಲಿ ಮದ್ಯ ಸೇವನೆ ಮಾಡಿ ಜಗಳ ಮಾಡಿರುವುದಾಗಿ ಹೇಳಿಕೊಂಡಿದ್ದಾನೆ.

    35 ಅಲ್ಲ 16 ಪೀಸ್ ಮಾಡಿದ್ದೆ
    ಇದೇ ವೇಳೆ ಅಫ್ತಾಬ್ ತನ್ನ ಹೇಳಿಕೆಯನ್ನು ಬದಲಿಸಿದ್ದು, ಶ್ರದ್ಧಾ ದೇಹವನ್ನು 35 ಭಾಗವಲ್ಲ ಬದಲಿಗೆ 16 ಭಾಗಗಳಾಗಿ ತುಂಡರಿಸಿ ಫ್ರಿಡ್ಜ್‌ನಲ್ಲಿ ತುಂಬಿದ್ದೆ ಎಂದು ಅಫ್ತಾಬ್ ಹೇಳಿದ್ದಾನೆ. ಸೊಂಟದ ಕೆಳಭಾಗದಿಂದ ಕಾಲಿನವರೆಗೆ ಮೂರು ಭಾಗಗಳಾಗಿ ಮಾಡಿದರೆ, ಮೇಲಿನ ದೇಹ ಮತ್ತು ಒಳ ಭಾಗಗಳನ್ನು 13 ಭಾಗಗಳಾಗಿ ಕತ್ತರಿಸಿರುವುದಾಗಿ ಹೇಳಿದ್ದಾನೆ, ತಲೆಯನ್ನು ಗುರುತು ಸಿಗದ ಹಾಗೇ ಸುಟ್ಟು ಎಸೆದಿದ್ದು, ಅದನ್ನು ಕತ್ತಿರಿಸುವ ಪ್ರಯತ್ನ ಮಾಡಿಲ್ಲ ಎಂದು ತಿಳಿಸಿದ್ದಾನೆ.

    ಮಂಪರು ಪರೀಕ್ಷೆ ನಿರ್ಧಾರದ ಬಳಿಕ ಅಫ್ತಾಬ್ ತನ್ನ ಹೇಳಿಕೆಯಲ್ಲಿ ಮಹತ್ವದ ಹೇಳಿಕೆ ಬದಲಿಸಿದ್ದು ಇದು ತನಿಖೆಯ ದಿಕ್ಕನ್ನು ಮತ್ತೊಂದು ಕಡೆಗೆ ತಿರುಗಿಸಲಿದೆ. ಈಗಾಗಲೇ ಪೊಲೀಸರು 13 ಭಾಗಗಳನ್ನು ಗುರುತಿಸಿದ್ದು, ತಲೆ ಬರುಡೆಯನ್ನು ಪತ್ತೆ ಹಚ್ಚಿ ಡಿಎನ್‍ಎ ಟೆಸ್ಟ್‌ಗೆ ಕಳುಹಿಸಿದೆ. ಈ ವರದಿಗಾಗಿಯೂ ಪೊಲೀಸರು ಕಾಯುತ್ತಿದ್ದಾರೆ. ಇದನ್ನೂ ಓದಿ: ಭೀಮಾ ಕೋರೆಗಾಂವ್‌ ಪ್ರಕರಣ – ದಲಿತ ಚಿಂತಕ ಆನಂದ್‌ ತೇಲ್ತುಂಬ್ಡೆಗೆ ಬಾಂಬೆ ಹೈಕೋರ್ಟ್ ಜಾಮೀನು

    2020ರಲ್ಲೇ ಶ್ರದ್ಧಾ ಮೇಲೆ ತೀವ್ರ ಹಲ್ಲೆ ಮಾಡಿದ್ನಾ ಆಫ್ತಾಬ್?
    ಶ್ರದ್ಧಾ ಸೋಶಿಯಲ್ ಮೀಡಿಯಾ ಪರಿಶೀಲನೆ ನಡೆಸಿರುವ ಪೊಲೀಸರಿಗೆ ಹೊಸ ಮಾಹಿತಿ ತಿಳಿದು ಬಂದಿದೆ. ಶ್ರದ್ಧಾ ಅಪ್ಲೋಡ್ ಮಾಡಿದ ಹಳೆಯ ಫೋಟೋದಲ್ಲಿ ಮುಖದ ಮೇಲೆ ಗಾಯ ಪತ್ತೆಯಾಗಿದೆ. ಮುಖದ ಮೇಲೆ ಗಾಯ, ಊದಿಕೊಂಡ ಕಣ್ಣುಗಳು, ಮೂಗಿನ ಮೇಲೆಯೂ ಗಾಯದ ಗುರುತು ಹೊಂದಿರುವ ಫೋಟೋಗಳನ್ನು 2020ರಲ್ಲಿ ಶ್ರದ್ಧಾ ಅಪ್ಲೋಡ್ ಮಾಡಿದ್ದಾಳೆ. ಹೀಗಾಗಿ ಅಫ್ತಾಬ್ ಈ ಹಿಂದೆಯೂ ಶ್ರದ್ಧಾ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ನಾ ಎಂಬ ಅನುಮಾನ ಮೂಡಿದೆ.

    176 ಪೊಲೀಸ್ ಠಾಣೆಗಳಿಗೆ ನೋಟಿಸ್
    ಶ್ರದ್ಧಾ ಮೃತ ದೇಹ ಪತ್ತೆ ಮಾಡುವ ನಿಟ್ಟಿನಲ್ಲಿ ದೆಹಲಿ ಪೊಲೀಸ್ ಮಹಾ ನಿರ್ದೇಶಕರು ಮೆಹ್ರೋಲಿ ಸುತ್ತಲಿನ 176 ಪೊಲೀಸ್ ಠಾಣೆಗಳಿಗೆ ನೋಟಿಸ್ ನೀಡಿದ್ದಾರೆ. ಮೇ 18 ರಿಂದ ಜುಲೈ ಅಂತ್ಯದ ಅವಧಿಯಲ್ಲಿ ದೆಹಲಿಯಲ್ಲಿ ಪತ್ತೆಯಾದ ಗುರುತು ಸಿಗದ ಹೆಣ್ಣು ದೇಹಗಳ ಮಾಹಿತಿಯನ್ನು ತಿಳಿಸುವಂತೆ ಸೂಚನೆ ನೀಡಿದ್ದಾರೆ. ಈ ಮೂಲಕ ಶ್ರದ್ಧಾಳ ಬಾಕಿ ದೇಹಕ್ಕಾಗಿ ಹುಡುಕಾಟ ತೀವ್ರವಾಗಿದೆ.

    ಅಫ್ತಾಬ್ ವಿಚಾರಣೆ ವೇಳೆ ಪದೇ ಪದೇ ಹೇಳಿಕೆ ಬದಲಿಸುತ್ತಿರುವ ಹಿನ್ನೆಲೆ ಪೊಲೀಸರು ಸಾಕಷ್ಟು ಗೊಂದಲಕ್ಕೀಡಾಗಿದ್ದಾರೆ. ಈಗಾಗಲೇ ಮಂಪರು ಪರೀಕ್ಷೆ ನಡೆಸಲು ನ್ಯಾಯಲಯ ಅನುಮತಿ ನೀಡಿದ್ದು, ಅಫ್ತಾಬ್ ಕೂಡಾ ಒಪ್ಪಿಗೆ ಸೂಚಿಸಿದ್ದಾನೆ. ತಜ್ಞರ ಸಮ್ಮುಖದಲ್ಲಿ ಪರೀಕ್ಷೆ ನಡೆಸಲು ಪೊಲೀಸರು ತಯಾರಿ ಮಾಡಿಕೊಳುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶ್ರದ್ಧಾ ಕೊಲೆ ಪ್ರಕರಣ – ತಲೆ ಬುರುಡೆ ಸುಟ್ಟು, ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದ ಅಫ್ತಾಬ್

    ಶ್ರದ್ಧಾ ಕೊಲೆ ಪ್ರಕರಣ – ತಲೆ ಬುರುಡೆ ಸುಟ್ಟು, ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದ ಅಫ್ತಾಬ್

    ನವದೆಹಲಿ: ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್ (Shraddha) ಹತ್ಯೆ ಪ್ರಕರಣ (Delhi Murder) ತನಿಖೆಯಲ್ಲಿ ಸ್ಫೋಟಕ ಮಾಹಿತಿಗಳು ಹೊರ ಬರುತ್ತಿದ್ದು, ಸಾಕ್ಷ್ಯಗಳ ನಾಶಕ್ಕೆ ನಿರ್ಧರಿಸಿದ್ದ ಆರೋಪಿ ಅಫ್ತಾಬ್ (Aftab) ಯುವತಿಯ ಮುಖ ಸುಟ್ಟು ಹಾಕಿದ್ದ ಎಂದು ತಿಳಿದು ಬಂದಿದೆ.

    ಭೌತಿಕ ಸಾಕ್ಷ್ಯಗಳ ಹುಡುಕಾಟ ನಡೆಸುತ್ತಿದ್ದ ಪೊಲೀಸರಿಗೆ ತಲೆ ಬುರುಡೆ ಮತ್ತು ತುಂಡರಿಸಿದ ಕೈ ಸಿಕ್ಕಿದ್ದು, ತಲೆ ಸುಟ್ಟ ಸ್ಥಿತಿಯಲ್ಲಿತ್ತು ಎಂದು ತಿಳಿದು ಬಂದಿದೆ. ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ್ದ ಅಫ್ತಾಬ್ ನಿತ್ಯ 2 ತುಂಡುಗಳನ್ನು ಎಸೆದು ಬರುತ್ತಿದ್ದ. ಕೊನೆಯವರೆಗೂ ತಲೆ ಬುರುಡೆ ಉಳಿಸಿಕೊಂಡಿದ್ದ ಅಫ್ತಾಬ್ ಅದರ ಗುರುತು ಸಿಗದಂತೆ ಸುಟ್ಟು ಎಸೆದಿದ್ದ ಎಂದು ಮೂಲಗಳು ಹೇಳಿವೆ.

    ಸಾಕ್ಷಿ ಮತ್ತು ಮುಖದ ಗುರುತು ಅಳಿಸುವ ಬಗ್ಗೆ ಗೂಗಲ್‌ನಿಂದ ಮಾಹಿತಿ ಹುಡುಕಿ, ಅದರಂತೆ ತಲೆ ಸುಟ್ಟ ಹಾಕಿ, ಬಳಿಕ ಅದನ್ನು ಕೈ ಭಾಗದೊಂದಿಗೆ ಎಸೆದು ಬಂದಿರುವುದಾಗಿ ಅಫ್ತಾಬ್ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳಿವೆ. ಇದನ್ನೂ ಓದಿ: ಶ್ರದ್ಧಾ ಕೊಲೆ ಪ್ರಕರಣ- ಸಾಕ್ಷಿ ನಾಶಕ್ಕೆ OLXನಲ್ಲಿ ಫೋನ್ ಮಾರಿದ್ದ ಅಫ್ತಾಬ್!

    ಸದ್ಯ ಪತ್ತೆಯಾಗಿರುವ ತಲೆ ಬರುಡೆಯನ್ನು ಡಿಎನ್‌ಎ ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದು, ಈವರೆಗೂ ಸಿಕ್ಕಿರುವ ಸಾಕ್ಷ್ಯಗಳನ್ನು ಏಮ್ಸ್‌ನಲ್ಲಿ ಡಿಎನ್‌ಎ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಶ್ರದ್ಧಾ ತಂದೆ ವಿಕಾಸ್ ವಾಕರ್ ಅವರ ಸ್ಯಾಂಪಲ್ ಪಡೆದಿದ್ದು ಅದನ್ನು ಮ್ಯಾಚ್ ಮಾಡುವ ಕಾರ್ಯ ನಡೆಯಲಿದೆ. ಇದನ್ನೂ ಓದಿ: ಶ್ರದ್ಧಾ ದೇಹ ತುಂಡರಿಸಿದ್ರೂ ತಲೆಬುರುಡೆಗೆ ಹಾನಿ ಮಾಡಿಲ್ಲ- ಫ್ರಿಡ್ಜ್‌ನಲ್ಲಿಟ್ಟು ಆಗಾಗ ನೋಡ್ತಿದ್ದ ಅಫ್ತಾಬ್

    Live Tv
    [brid partner=56869869 player=32851 video=960834 autoplay=true]

  • ಶ್ರದ್ಧಾ ಕೊಲೆ ಪ್ರಕರಣ- ಸಾಕ್ಷಿ ನಾಶಕ್ಕೆ OLXನಲ್ಲಿ ಫೋನ್ ಮಾರಿದ್ದ ಅಫ್ತಾಬ್!

    ಶ್ರದ್ಧಾ ಕೊಲೆ ಪ್ರಕರಣ- ಸಾಕ್ಷಿ ನಾಶಕ್ಕೆ OLXನಲ್ಲಿ ಫೋನ್ ಮಾರಿದ್ದ ಅಫ್ತಾಬ್!

    – ತುಂಡರಿಸಿದ ಕೈ, ತಲೆ, ಕಸದ ಲಾರಿಗೆ ಎಸೆದಿದ್ದ ಬಟ್ಟೆ ಪತ್ತೆ
    – ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಡಿಎನ್‍ಎ ಪರೀಕ್ಷೆ

    ನವದೆಹಲಿ: ರಾಷ್ಟ್ರ ರಾಜ್ಯಧಾನಿಯಲ್ಲಿ ಲೀವ್ ಇನ್ ರಿಲೇಶನ್ ಶಿಪ್‍ನಲ್ಲಿದ್ದ ಗೆಳತಿಯನ್ನು ಭೀಕರವಾಗಿ ಹತ್ಯೆಗೈದು 35 ಪೀಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಭಯಾನಕ ವಿಷಯಗಳು ಹೊರಬರುತ್ತಿವೆ. ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ಹತ್ಯೆ ಬಳಿಕ ಡೇಟಿಂಗ್ ಆ್ಯಪ್ ಮೂಲಕ ಹಲವು ಯುವತಿಯರ ಜೊತೆ ಮಾತನಾಡುತ್ತಿದ್ದ. ಅದಾದ ಬಳಿಕ ಕೊಲೆ ಮಾಡಿದ್ದಕ್ಕೆ ಸಾಕ್ಷಿ ಸಿಗಬಾರದು ಎಂದು ತನ್ನ ಫೋನ್‍ನನ್ನು ಒಎಲ್‍ಎಕ್ಸ್‌ನಲ್ಲಿ ಮಾಡಿದ್ದಾನೆ.

    ಪೊಲೀಸ್ ಮೂಲಗಳ ಪ್ರಕಾರ ಅಫ್ತಾಬ್ (Aaftab Ameen Poonawala) ಮತ್ತು ಶ್ರದ್ಧಾ (Shraddha) ಡೇಟಿಂಗ್ ಅಪ್ಲಿಕೇಶನ್ ಬಂಬಲ್ ಮೂಲಕ ಪರಸ್ಪರ ಭೇಟಿಯಾಗಿದ್ದರು. ಅದಾದ ಬಳಿಕ ಕಳೆದ 3 ವರ್ಷಗಳ ಕಾಲ ಒಟ್ಟಿಗೆ ಇದ್ದರು. ಆದರೆ ಮದುವೆ ವಿಚಾರಕ್ಕೆ ಜಗಳವಾಗಿ ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದ. ಅದಾದ ಬಳಿಕ ಶ್ರದ್ಧಾಳ ದೇಹವನ್ನು 35 ಪೀಸ್ ಮಾಡಿ ಅದನ್ನು ಫ್ರಿಡ್ಜ್‌ನಲ್ಲಿ ಇಟ್ಟು ಆ ಬಳಿಕ ಆ ಎಲ್ಲ ದೇಹದ ಪೀಸ್‍ನ್ನು ಕಾಡಿನಲ್ಲಿ (Forest) ವಿಲೇವಾರಿ ಮಾಡಿದ್ದ.

    ಇನ್ನೂ ಶ್ರದ್ಧಾಳನ್ನು ಕೊಲೆ ಮಾಡಿದ ನಂತರ ಅಫ್ತಾಬ್ ಡೇಟಿಂಗ್ ಅಪ್ಲಿಕೇಶನ್‍ಗಳಲ್ಲಿ ಸಕ್ರಿಯರಾಗಿದ್ದ. ಕಳೆದ ಆರು ತಿಂಗಳಲ್ಲಿ ಅನೇಕ ಯುವತಿಯರನ್ನು ಭೇಟಿಯಾಗಿ, ಅವರ ಜೊತೆ ಸಂಬಂಧವನ್ನು ಹೊಂದಿದ್ದ. ಅದಾದ ಬಳಿಕ ಅಫ್ತಾಬ್ ಯಾರಿಗೂ ಸಂಶಯ ಬರಬಾರದು ಎಂದು ತನ್ನ ಫೋನ್‍ನನ್ನು ಒಎಲ್‍ಎಕ್ಸ್‌ನಲ್ಲಿ ಮಾರಾಟ ಮಾಡಿದ್ದಾನೆ ಎನ್ನುವ ವಿಷಯ ಇದೀಗ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಹೊಂಬಾಳೆ ಸಂಸ್ಥೆಗೂ ಚಿಲುಮೆಗೂ ಸಂಬಂಧ ಇಲ್ಲ: ಕೈ ಆರೋಪಕ್ಕೆ ಅಶ್ವಥ್ ನಾರಾಯಣ್ ತಿರುಗೇಟು

    ಇನ್ನೂ ಶ್ರದ್ಧಾ ವಾಕರ್ ಹತ್ಯೆ ಬಳಿಕ ಅಫ್ತಾಬ್ ಆಕೆಯ ಬಟ್ಟೆಗಳನ್ನು ಕಸದ ವಾಹನಕ್ಕೆ ಎಸೆದಿದ್ದ ಬಟ್ಟೆಗಳನ್ನು ಪತ್ತೆ ಹಚ್ಚುವಲ್ಲಿ ಪೆÇಲೀಸರು ಯಶಸ್ವಿಯಾಗಿದ್ದಾರೆ. ದೆಹಲಿ ಹೊರವಲಯದಲ್ಲಿರುವ ಡಪ್ಪಿಂಗ್ ಯಾರ್ಡ್‍ನಲ್ಲಿ ತೀವ್ರ ಹುಡುಕಾಟದ ನಂತರ ರಕ್ತದ ಕಲೆಗಳಿರುವ ಬಟ್ಟೆಗಳು ದೊರೆತಿದ್ದು ಅವುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

    ಪೂರ್ವ ದೆಹಲಿ ಭಾಗದಲ್ಲಿ ತುಂಡರಿಸಿ ಕೈ ಮೂಳೆಗಳು ಮತ್ತು ತಲೆ ಭಾಗ ಪತ್ತೆಯಾಗಿದ್ದು, ಇವುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಡಿಎನ್‍ಎ ಪರೀಕ್ಷೆಗೆ ಕಳುಹಿಸಿದ್ದಾರೆ. ಏಮ್ಸ್ ಆಸ್ಪತ್ರೆಯಲ್ಲಿ ಡಿಎನ್‍ಎ ಪರೀಕ್ಷೆ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಶ್ರದ್ಧಾ ತಂದೆ ವಿಕಾಸ್ ವಾಕರ್ ಡಿಎನ್‍ಎ ಸ್ಯಾಂಪಲ್ಸ್ ಪಡೆಯಲಾಗಿದೆ. ಇದನ್ನೂ ಓದಿ: ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಆಟೋದಿಂದ ಜಂಪ್ – ಬಾಲಕಿ ತಲೆಗೆ ಗಂಭೀರ ಗಾಯ

    ಮನೆಯಲ್ಲಿ ರಕ್ತದ ಕಲೆಗಳನ್ನು ಅಳಿಸಲು ಬಳಸಿದ ಕೆಮಿಕಲ್ ಮತ್ತು ಗೋಡೆಯ ಮೇಲಿರುವ ರಕ್ತದ ಕಲೆಯೂ ಪತ್ತೆಯಾಗಿದ್ದು ಎಫ್‍ಎಸ್‍ಎಲ್ ತಂಡ ಪರಿಶೀಲನೆ ನಡೆಸುತ್ತಿದೆ. ಇದರ ಜೊತೆಗೆ ಶ್ರದ್ಧಾ ಹತ್ಯೆ ಬಳಿಕ ಆಕೆಯ ಮೂಬೈಲ್ ನಿಂದ ಹಣ ವರ್ಗಾವಣೆ ಮತ್ತು ಲೋಕೆಷನ್ ಮೇಲೆ ಹತ್ಯೆಯನ್ನು ನಿರೂಪಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಡೇಟಿಂಗ್ ಆ್ಯಪ್, ಲೀವ್ ಇನ್ ಟುಗೆದರ್ ಹಾವಳಿ- ಕಾಲೇಜುಗಳಲ್ಲಿ ಮಹಿಳಾ ಆಯೋಗದಿಂದ ಸ್ಪೆಷಲ್ ಕ್ಲಾಸ್

    ಡೇಟಿಂಗ್ ಆ್ಯಪ್, ಲೀವ್ ಇನ್ ಟುಗೆದರ್ ಹಾವಳಿ- ಕಾಲೇಜುಗಳಲ್ಲಿ ಮಹಿಳಾ ಆಯೋಗದಿಂದ ಸ್ಪೆಷಲ್ ಕ್ಲಾಸ್

    ಬೆಂಗಳೂರು: ದೆಹಲಿಯಲ್ಲಿ ಶ್ರದ್ಧಾ ಬೀಭತ್ಸ ಹತ್ಯೆಯ ಬಳಿಕ ಡೇಟಿಂಗ್ ಆಪ್ ಹಾವಳಿ ಹಾಗೂ ಲೀವ್‍ಇನ್ ರಿಲೇಷನ್‍ಶಿಪ್ (Live In Relationship) ವಿಚಾರದಲ್ಲಿ ಯುವ ಜನ ಹಾದಿ ತಪ್ತಾ ಇರೋದು ಗೊತ್ತಾಗುತ್ತಿದೆ. ಕರ್ನಾಟಕದ ಪರಿಸ್ಥಿತಿಯೂ ಇದಕ್ಕೆ ಭಿನ್ನವಾಗಿಲ್ಲ. ಹೀಗಾಗಿ ಮಹಿಳಾ ಆಯೋಗ (Commission for Women) ಫೀಲ್ಡ್ ಗಿಳಿದಿದೆ.

    ದೆಹಲಿಯ ಶ್ರದ್ದಾ ವಿಕಾಸ್ ವಾಲ್ಕರ್ ಹತ್ಯೆ ಪ್ರಕರಣ ದೇಶವನ್ನೇ ಬೆಚ್ಚಿಬೀಳಿಸಿದೆ. ಕಿರಾತಕನ ಜೊತೆ ಡೇಟಿಂಗ್ ಆಪ್ ಚಾಟಿಂಗ್, ಲೀವ್ ಇನ್ ರಿಲೇಷನ್‍ನಲ್ಲಿ ಇಲ್ಲದೇ ಇದ್ದಿದ್ದರೆ ಶ್ರದ್ಧಾಳಿಗೆ ಈ ಪರಿಸ್ಥಿತಿ ಬರುತ್ತಾ ಇರಲಿಲ್ವೋನೋ. ಡೇಟಿಂಗ್ ಆಪ್‍ಗಳ ಮೂಲಕ ಮುಖವಾಡ ಧರಿಸಿಕೊಂಡಿರುವ ಇಂತಹ ಕ್ರಿಮಿಗಳ ಕಾಟದಿಂದ, ನರರಾಕ್ಷಸರ ಜೊತೆ ಲೀವ್ ಇನ್ ರಿಲೇಷನ್‍ನಲ್ಲಿರೋದ್ರಿಂದ ಅದೆಷ್ಟೋ ಹುಡ್ಗೀರ ಬದುಕು ಬರ್ಬಾದ್ ಆಗಿದೆ. ಕರ್ನಾಟಕದಲ್ಲಿ ಅದರಲ್ಲೂ ನಗರ ಪ್ರದೇಶದಲ್ಲಿ ಈ ಆಪ್‍ಗಳ ರಿಲೇಷನ್‍ಶಿಪ್‍ನ ವಿಷವರ್ತುಲದಲ್ಲಿ ಹೆಣ್ಣುಮಕ್ಕಳು ಸಿಕ್ಕಿಹಾಕಿಕೊಂಡಿದ್ದಾರೆ. ಹೀಗಾಗಿ ಜಾಗೃತಿಗಾಗಿ ಕರ್ನಾಟಕ ಮಹಿಳಾ ಆಯೋಗ ಈಗ ಫೀಲ್ಡ್ ಗಿಳಿದಿದೆ. ಇದನ್ನೂ ಓದಿ: ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ್ದಕ್ಕೆ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಹತ್ಯೆಗೈದ

    ಕಾಲೇಜುಗಳಲ್ಲಿ `ಜಾಗೃತಿ’ ಕ್ಲಾಸ್: ರಾಜ್ಯಾದ್ಯಂತ ಕಾಲೇಜುಗಳಲ್ಲಿ ಮಹಿಳಾ ಆಯೋಗದ ಟೀಂಗಳಿಂದ ಸ್ಪೆಷಲ್ ಕ್ಲಾಸ್ ನಡೆಸಲಾಗುತ್ತೆ. ಸೋಷಿಯಲ್ ಮೀಡಿಯಾದ ಬಳಕೆಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತೆ. ಜೊತೆಗೆ ಸ್ವಾವಲಂಬಿ ಬದುಕಿನ ಬಗ್ಗೆ ತರಗತಿಗಳಲ್ಲಿ ಹೇಳಿಕೊಡಲಾಗುತ್ತೆ. ಇತ್ತೀಚಿನ ದಿನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಲೀವ್ ಇನ್ ರಿಲೇಷನ್‍ಗಳಿಂದ ಆಗಬಹುದಾದ ತೊಡಕಿನ ಬಗ್ಗೆ ವಿವರಣೆ ನೀಡಲಾಗುತ್ತೆ. ಈ ರೀತಿಯ ಆ್ಯಪ್‍ಗಳಿಂದ ಆಗಲಿರುವ ತೊಂದರೆಯ ಬಗ್ಗೆ ತಜ್ಞರನ್ನು ಕರೆಸಿ ವಿಶೇಷ ತರಗತಿ ನಡೆಸಲಾಗುತ್ತೆ. ಕಾಲೇಜು ಮಾತ್ರವಲ್ಲದೇ ಮಹಿಳಾ ಉದ್ಯೋಗಿಗಳು ಇರುವ ಸಂಸ್ಥೆಯಲ್ಲೂ ಕೂಡ ಜಾಗೃತಿ ತರಗತಿ ನಡೆಸಲಾಗುತ್ತದೆ.

    ಈಗಾಗಲೇ ರಾಜ್ಯದಲ್ಲಿ ಲಿವ್ ಇನ್ ರಿಲೇಷನ್ ಶಿಪ್‍ನಿಂದಾಗಿ ಸಾಕಷ್ಟು ಮಹಿಳೆಯರು ತೊಂದರೆ ಅನುಭವಿಸಿದ್ದು ಮಹಿಳಾ ಆಯೋಗದ ಮೆಟ್ಟಿಲೇರಿದ್ದಾರೆ. ಜೊತೆಗೆ ಕಾಲೇಜ್ ಓದುವ ವಿದ್ಯಾರ್ಥಿಗಳು ಈ ಆಪ್‍ಗಳಿಗೆ ಆಡಿಕ್ಟ್ ಆಗಿರೋದ್ರಿಂದ ಇದ್ರಿಂದ ಹೊರಬರುವ ಬಗ್ಗೆ ಕೂಡ ಹೆಚ್ಚಿನ ಜಾಗೃತಿ ಅತ್ಯಗತ್ಯವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ್ದಕ್ಕೆ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಹತ್ಯೆಗೈದ

    ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ್ದಕ್ಕೆ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಹತ್ಯೆಗೈದ

    ಲಕ್ನೋ: ತನ್ನನ್ನು ಮದುವೆಯಾಗುವಂತೆ (Marriage) ಕೇಳಿದ್ದಕ್ಕೆ ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದ (Live In Relationship) ಗೆಳತಿಯನ್ನ ಭೀಕರವಾಗಿ ಹತ್ಯೆ ಮಾಡಿದ ದೆಹಲಿಯ (Delhi Murder) ಘಟನೆ ಇನ್ನೂ ಕಣ್ಣಿಗೆ ಕಟ್ಟಿದಂತಿದೆ. ಇದೀಗ ಉತ್ತರ ಪ್ರದೇಶದಲ್ಲಿ (UttarPradesh) ಅಂತಹದ್ದೇ ಘಟನೆಯೊಂದು ನಡೆದಿರುವುದು ಪೊಲೀಸರ ನಿದ್ದೆಗೆಡಿಸಿದೆ.

    ಮುಸ್ಲಿಂ (Muslim) ಯುವಕನೊಬ್ಬ ತನ್ನ 19 ವರ್ಷದ ಹಿಂದೂ ಗೆಳತಿ ಮತಾಂತರಗೊಳ್ಳಲು ನಿರಾಕರಿಸಿದ್ದರಿಂದ ಆಕೆಯನ್ನು ಕಟ್ಟಡದ 4ನೇ ಮಹಡಿಯಿಂದ ಎಸೆದು ಕೊಂದಿರುವ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ. ಇದನ್ನೂ ಓದಿ: ರಾಜೀವ್‌ಗಾಂಧಿ ಹತ್ಯೆ ಕೇಸ್ – ರೀಲಿಸ್ ಆದ 6 ಮಂದಿಯಲ್ಲಿ ನಾಲ್ವರು ಗಡಿಪಾರು

    ಆರೋಪಿ ಸೂಫಿಯಾನ್ ಹಾಗೂ ನಿಧಿ ಗುಪ್ತ (19) ದುಬಗ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ವಾಸಿಸುತ್ತಿದ್ದರು. ನಿಧಿ ಬ್ಯೂಟಿಷಿಯನ್ (Beautician) ತರಬೇತಿ ಪಡೆದಿದ್ದಳು. ಕಳೆದ ಎರಡು ತಿಂಗಳಿನಿಂದ ಇಬ್ಬರು ಸಂಬಂಧ ಹೊಂದಿದ್ದರು. ಇದನ್ನೂ ಓದಿ: ಭಾರತ-ಕಿವೀಸ್ ಸರಣಿ ಆರಂಭಕ್ಕೂ ಮುನ್ನ ಕಪ್ ಹಿಡಿದು ಹೊರಟ ವಿಲಿಯಮ್ಸನ್

    ಸೂಫಿಯಾನ್ ನಿಧಿಗೆ ಮೊಬೈಲ್ (Mobile) ಸಹ ಕೊಡಿಸಿದ್ದ. ಕರೆ ಮಾಡಿದಾಗೆಲ್ಲಾ, ಸಂದೇಶಗಳನ್ನು ಕಳಿಸುವಾಗ ಆಕೆಯನ್ನು ಇಸ್ಲಾಂಗೆ ಮತಾಂತರವಾಗುವಂತೆ ಬ್ರೈನ್‌ವಾಶ್ ಮಾಡುತ್ತಿದ್ದ. ಈ ವಿಷಯ ತಿಳಿದ ನಿಧಿ ಪೋಷಕರು ಸೂಫಿಯಾನ್ ಮತ್ತು ಅವನ ಕುಟುಂಬಕ್ಕೆ ಬೆದರಿಕೆ ಹಾಕಿದ್ದರು. ಬಲವಂತವಾಗಿ ಮತಾಂತಗೊಳಿಸಲು ಪ್ರಯತ್ನಿಸುತ್ತಿದ್ದರಿಂದ ನಿಧಿಯನ್ನು ಅಜ್ಜಿ ಮನೆಗೆ ಕಳುಹಿಸಿದ್ದರು. ಇದರಿಂದ ಕೆಲ ದಿನಗಳಿಂದ ಸೂಫಿಯಾನ್‌ನೊಂದಿಗೆ ಮಾತನಾಡುವುದು ನಿಂತಿತ್ತು. ಆದಾಗ್ಯೂ ಸೂಫಿಯಾನ್ ದುರ್ವರ್ತನೆಯಿಂದ ಪೋಷಕರು ದೂರು ನೀಡಿದ್ದರು. ಬಳಿಕ ರಾಜಿ ಮಾಡಿಕೊಳ್ಳಲಾಗಿತ್ತು. ಆದರೆ ಭಾನುವಾರ ನಿಧಿ ತನ್ನ ಮನೆಯ ನಾಲ್ಕನೇ ಮಹಡಿಗೆ ಬಂದಾಗ ಬಾಲ್ಕನಿಯಿಂದ ಎಸೆದಿದ್ದಾನೆ ಎಂದು ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ.

    ಬಳಿಕ ರಕ್ತದ ಮಡುವಿನಲ್ಲಿದ್ದ ನಿಧಿಯನ್ನು ಇಲ್ಲಿನ ಕಿಂಗ್‌ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಗಂಭೀರ ಗಾಯಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾಳೆ.

    ಲಕ್ನೋ ಪೊಲೀಸರು (Lucknow Police) ಕೊಲೆ ಮತ್ತು ಬಲವಂತದ ಮತಾಂತರಕ್ಕೆ ಸಂಬಂಧಿಸಿದಂತೆ ಐಪಿಸಿಯ (IPC) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ (FIR) ದಾಖಲಿಸಿದ್ದಾರೆ. ಭಾನುವಾರದಿಂದ ಸುಫಿಯಾನ್ ಮತ್ತು ಕುಟುಂಬ ಪರಾರಿಯಾಗಿದೆ. ಕುಟುಂಬವನ್ನು ಪತ್ತೆಹಚ್ಚಲು ಪೊಲೀಸರು (Police) ಬಲೆ ಬೀಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶ್ರದ್ಧಾ ದೇಹ ತುಂಡರಿಸಿದ್ರೂ ತಲೆಬುರುಡೆಗೆ ಹಾನಿ ಮಾಡಿಲ್ಲ- ಫ್ರಿಡ್ಜ್‌ನಲ್ಲಿಟ್ಟು ಆಗಾಗ ನೋಡ್ತಿದ್ದ ಅಫ್ತಾಬ್

    ಶ್ರದ್ಧಾ ದೇಹ ತುಂಡರಿಸಿದ್ರೂ ತಲೆಬುರುಡೆಗೆ ಹಾನಿ ಮಾಡಿಲ್ಲ- ಫ್ರಿಡ್ಜ್‌ನಲ್ಲಿಟ್ಟು ಆಗಾಗ ನೋಡ್ತಿದ್ದ ಅಫ್ತಾಬ್

    ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ (NewDelhi) ಲೀವಿಂಗ್ ರಿಲೇಶನ್ ಶಿಪ್ (Live-In Partner) ಶ್ರದ್ಧಾ ವಾಕರ್ (Shraddha Walker) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಭಯಾನಕ ವಿಷಯಗಳು ಬಯಲಾಗುತ್ತಿವೆ. ಪಾಗಲ್ ಪ್ರೇಮಿ ಅಫ್ತಾಬ್ (Aaftab), ಶ್ರದ್ಧಾಳನ್ನು ಹತ್ಯೆ ಮಾಡಿದ ಬಳಿಕ ಆ ತಲೆ ಬುರುಡೆಯನ್ನು ತನಲ್ಲೆ ಇಟ್ಟುಕೊಂಡು ವಿಕೃತಿ ಪ್ರೀತಿಯನ್ನು ತೋರಿಸಿದ್ದ ಎಂಬುದು ಬೆಳಕಿಗೆ ಬಂದಿದೆ.

    ಡೇಟಿಂಗ್ ಆ್ಯಪ್‍ನ ಮೂಲಕ ಪರಿಚಯವಾಗಿದ್ದ ಶ್ರದ್ಧಾ ಹಾಗೂ ಅಫ್ತಾಬ್ ಇಬ್ಬರು 3 ವರ್ಷಗಳ ಕಾಲ ಲೀವಿಂಗ್ ರಿಲೇಶನ್ ಶಿಪ್‍ನಲ್ಲಿದ್ದರು. ಮದುವೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಶ್ರದ್ಧಾಳ ಕತ್ತು ಹಿಸುಕಿ ಕೊಂದಿದ್ದ ಅಫ್ತಾಬ್ ಬಳಿಕ ಆಕೆಯ ದೇಹವನ್ನು 35 ಪೀಸ್‍ಗಳಾಗಿ ಮಾಡಿದ್ದ. ಆದರೆ ಶ್ರದ್ಧಾಳ ತಲೆಯ ಭಾಗಕ್ಕೆ ಒಂದು ಸ್ವಲ್ಪವೂ ಹಾನಿಯಾಗದಂತೆ ನೋಡಿಕೊಂಡಿದ್ದ. ದೇಹವನ್ನು ತುಂಡು ತುಂಡಾಗಿ ಕತ್ತರಿಸಿದರೂ ತಲೆ ಬುರುಡೆಯನ್ನು ಫ್ರಿಡ್ಜ್‌ನಲ್ಲಿ ಹಾಗೇ ಉಳಿಸಿಕೊಂಡಿದ್ದ. ಇನ್ನೂ ಶ್ರದ್ಧಾಳ ನೆನಪಾದಾಗಲೆಲ್ಲ ಫ್ರಿಡ್ಜ್‌ನ್ನು ತೆಗೆದು ಆ ತಲೆ ಬುರುಡೆಯನ್ನು ನೋಡಿ ಅವಳೊಂದಿಗೆ ಕ್ಷಣಗಳನ್ನು ನೆನಪಿಸಿಕೊಳ್ತಿದ್ದ ಎಂದು ಪೊಲೀಸ್ ವಿಚಾರಣೆ ವೇಳೆ ಬಯಲಾಗಿದೆ.

    ಇನ್ನೂ ಹತ್ಯೆಯ ಬಳಿಕ ಶ್ರದ್ಧಾ ತಲೆ ಭಾಗಕ್ಕೆ ಹಾನಿಯಾಗದಂತೆ ನೋಡಿಕೊಂಡಿದ್ದ ಅಫ್ತಾಬ್ ಶ್ರದ್ಧಾ ದೇಹದ ಎಲ್ಲ ಭಾಗಗಳನ್ನು ಎಸೆದ ಬಳಿಕ ಕೊನೆಯಲ್ಲಿ ಆಕೆಯ ತಲೆ ಬುರುಡೆಯನ್ನು ಎಸೆದಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ. ಇದನ್ನೂ ಓದಿ: ಶ್ರದ್ಧಾ ಭೀಕರ ಹತ್ಯೆ ಪ್ರಕರಣ – ಪೊಲೀಸರ ಮುಂದೆ ಸತ್ಯ ಬಾಯ್ಬಿಟ್ಟ ಕಿರಾತಕ

    ಘಟನೆಗೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಪೊಲೀಸರು ಈಗಾಗಲೇ ಹಲವು ಮೂಳೆಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನೂ ವಶ ಪಡಿಸಿಕೊಂಡಿರುವ ಮೂಳೆಗಳನ್ನು ಡಿಎನ್‍ಎ ಟೆಸ್ಟ್‌ಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ. ಜೊತೆಗೆ ಅಫ್ತಾಬ್ ನೀಡಿರುವ ಮಾಹಿತಿ ಆಧರಿಸಿ ತಲೆ ಬುರುಡೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ತಲೆ ಬುರುಡೆ ಸಿಕ್ಕಲ್ಲಿ ಕೇಸ್‍ಗೆ ಮತ್ತಷ್ಟು ಬಲ ಬರುವ ಹಿನ್ನಲೆಯಲ್ಲಿ ತಲೆ ಬುರುಡೆಯ ಬಗ್ಗೆ ತೀವ್ರ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಫ್ತಾಬ್‍ನನ್ನು ನೇಣಿಗೆ ಹಾಕಿ: ಲವ್ ಜಿಹಾದ್ ಶಂಕೆ ವ್ಯಕ್ತಪಡಿಸಿದ ಶ್ರದ್ಧಾಳ ತಂದೆ

    Live Tv
    [brid partner=56869869 player=32851 video=960834 autoplay=true]