Tag: ಶ್ರದ್ಧಾ ವಾಲ್ಕರ್

  • ಶ್ರದ್ಧಾ ಹತ್ಯೆ ಪ್ರಕರಣ- ಮಾಂಸ ಸಂರಕ್ಷಣೆಯ ತರಬೇತಿ ಪಡೆದಿದ್ದ ಅಫ್ತಾಬ್

    ಶ್ರದ್ಧಾ ಹತ್ಯೆ ಪ್ರಕರಣ- ಮಾಂಸ ಸಂರಕ್ಷಣೆಯ ತರಬೇತಿ ಪಡೆದಿದ್ದ ಅಫ್ತಾಬ್

    ನವದೆಹಲಿ: ಲಿವ್ ಇನ್ ಗೆಳತಿ (Live-In Partner) ಶ್ರದ್ಧಾ ವಾಕರ್‌ನನ್ನು ಹತ್ಯೆ ಮಾಡಿದ್ದ ಅಫ್ತಾಬ್ ಬಾಣಸಿಗನಾಗಿದ್ದು, ಮಾಂಸವನ್ನು ಹೇಗೆ ಸಂರಕ್ಷಿಸಬೇಕು ಎಂಬುದನ್ನು ತರಬೇತಿ ಪಡೆದಿದ್ದ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

    ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ದೆಹಲಿಯಲ್ಲಿ (Delhi) ಶ್ರದ್ಧಾ ವಾಕರ್ (Shraddha Walkar) ಹತ್ಯೆಗೆ ಸಂಬಂಧಿಸಿ ಆರೋಪಿ ಅಫ್ತಾಬ್ ಪೂನಾವಾಲಾನನ್ನು (Aaftab Poonawala) ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಕೆಲವು ವಿಷಯಗಳನ್ನು ಬಾಯ್ಬಿಟ್ಟಿದ್ದು, ಈ ಬಗ್ಗೆ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಅಫ್ತಾಬ್ ತಾಜ್ ಹೋಟೆಲ್‍ನಲ್ಲಿ ತರಬೇತಿ ಪಡೆಯುತ್ತಿದ್ದು, ಮಾಂಸವನ್ನು ಹೇಗೆ ರಕ್ಷಿಸಬೇಕು ಎನ್ನುವುದನ್ನು ತಿಳಿದಿದ್ದ. ಅಷ್ಟೇ ಅಲ್ಲದೇ ಅಫ್ತಾಬ್ ತನ್ನ ಗೆಳತಿ ಶ್ರದ್ಧಾಳನ್ನು ಕೊಂದ ನಂತರ ನೆಲವನ್ನು ಸ್ವಚ್ಛಗೊಳಿಸಲು ಡ್ರೈ ಐಸ್, ಅಗರ ಬತ್ತಿ ಹಾಗೂ ರಾಸಾಯನಿಕಗಳನ್ನು ಬಳಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಅಫ್ತಾಬ್ ತನ್ನ ಗೆಳತಿ ಶ್ರದ್ಧಾ ವಾಲ್ಕರ್ ಕತ್ತು ಹಿಸುಕಿ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ್ದ. ನಂತರ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ತನ್ನ ನಿವಾಸದಲ್ಲಿ ಸುಮಾರು 3 ವಾರಗಳ ಕಾಲ 300 ಲೀ. ಫ್ರಿಡ್ಜ್‍ನಲ್ಲಿ ಇರಿಸಿದ್ದ ಎಂಬ ಆರೋಪ ಕೇಳಿಬಂದಿತ್ತು. ಇದನ್ನೂ ಓದಿ: ವಿಧಾನಸೌಧದಲ್ಲಿನ ಎಣ್ಣೆ ಬಾಟ್ಲಿ ಹಿಂದಿನ ಕಥೆ ರಿವೀಲ್

    ಶ್ರದ್ಧಾಳನ್ನು ಕೊಂದ ವಾರದೊಳಗೆ ಅಫ್ತಾಬ್ ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ. ತನ್ನ ಹೊಸ ಗೆಳತಿಗೆ ಶ್ರದ್ಧಾಳ ಉಂಗುರವನ್ನೇ ನೀಡಿದ್ದನೆಂದು ನ್ಯಾಯಾಲಯಕ್ಕೆ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರೀತಂ ಗೌಡರಿಂದ ಭರಪೂರ ಕೊಡುಗೆ – ಬಾಗಿನ ಹೆಸರಲ್ಲಿ ಸೀರೆ, ಬೆಳ್ಳಿಯ ದೇವರ ಫೋಟೋ ಹಂಚಿಕೆ

  • ಶ್ರದ್ಧಾ ಕೊಲೆ ಪ್ರಕರಣ – ಜಾಮೀನು ಅರ್ಜಿಯನ್ನು ವಾಪಸ್ ಪಡೆದ ಪೀಸ್ ಪೀಸ್ ಪ್ರೇಮಿ

    ಶ್ರದ್ಧಾ ಕೊಲೆ ಪ್ರಕರಣ – ಜಾಮೀನು ಅರ್ಜಿಯನ್ನು ವಾಪಸ್ ಪಡೆದ ಪೀಸ್ ಪೀಸ್ ಪ್ರೇಮಿ

    ನವದೆಹಲಿ: ಲೀವ್ ಇನ್ ಗೆಳತಿ ಶ್ರದ್ಧಾ ವಾಲ್ಕರ್ (Shraddha Walkar) ಅನ್ನು ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿ ಅಫ್ತಾಬ್ ಪೂನಾವಾಲಾ (Aaftab Poonawala) ಇಂದು ತನ್ನ ವಕೀಲರೊಂದಿಗೆ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾನೆ.

    ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಅಫ್ತಾಬ್ ನ. 17ರಂದು ಜಾಮಿನು ಅರ್ಜಿ ಸಲ್ಲಿಸಿದ್ದ. ಆದರೆ ದೆಹಲಿ ನ್ಯಾಯಾಲಯ (Delhi Court) ವಿಚಾರಣೆಯನ್ನು ಮುಂದೂಡಿತ್ತು. ಈ ಮಧ್ಯೆ ಅಫ್ತಾಬ್ ಜಾಮೀನು ಅರ್ಜಿಯನ್ನು ಹಿಂದಕ್ಕೆ ತೆಗೆದುಕೊಂಡಿದ್ದಾನೆ. ತನ್ನ ಒಪ್ಪಿಗೆಯಿಲ್ಲದೇ ಜಾಮೀನು ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾನೆ.

    ಅಫ್ತಾಬ್‍ನೊಂದಿಗೆ 50 ನಿಮಿಷಗಳ ಸುದೀರ್ಘ ಚರ್ಚೆಯ ನಂತರ ಜಾಮೀನು ಅರ್ಜಿಯನ್ನು ಹಿಂಪಡೆಯಲು ನಿರ್ಧರಿಸಿರುವುದಾಗಿ ಅಫ್ತಾಬ್ ಪರ ವಕೀಲ ಎಂ.ಎಸ್ ಖಾನ್ ನ್ಯಾಯಾಲಯಕ್ಕೆ ತಿಳಿಸಿದರು. ಇದನ್ನೂ ಓದಿ: ಮಗಳ ಹುಟ್ಟುಹಬ್ಬಕ್ಕೆ ಸುವರ್ಣಸೌಧ ಬಾಡಿಗೆ ಕೊಡಿ – ಸಭಾಪತಿ, ಡಿಸಿಗೆ ಪತ್ರ ಬರೆದ ತಂದೆ

    ಪ್ರಕರಣದ ಪ್ರಾಥಮಿಕ ತನಿಖೆ ಪೂರ್ಣಗೊಂಡಿದ್ದು, ಚಾರ್ಜ್ ಶೀಟ್ ಸಲ್ಲಿಕೆಯಾಗದ ಕಾರಣ ಆರೋಪಿಯನ್ನು ನ್ಯಾಯಾಂಗ ಬಂಧನದಲ್ಲಿಡುವ ಉದ್ದೇಶವಿಲ್ಲ ಎಂದು ಜಾಮೀನು ಅರ್ಜಿಯನ್ನು ಸಲ್ಲಿಸುವ ಮೊದಲು ವಕೀಲರು ಆರೋಪಿಸಿದ್ದರು. ಅಫ್ತಾಬ್ ಪೂನಾವಾಲಾ ಆತನ ನ್ಯಾಯಾಂಗ ಬಂಧನವನ್ನು ಡಿ. 9ರಂದು 14 ದಿನಗಳವರೆಗೆ ವಿಸ್ತರಿಸಲಾಗಿತ್ತು. ಇದನ್ನೂ ಓದಿ: ಟೆಲಿಕಾಂ ಆಯ್ತು ಇನ್ನು FMCG – ಮುಕೇಶ್‌ ಅಂಬಾನಿಯಿಂದ ಈಗ ಮೆಟ್ರೋ ಕ್ಯಾಶ್‌ & ಕ್ಯಾರಿ ಶಾಪಿಂಗ್‌

    ಘಟನೆಯೇನು?: ಅಫ್ತಾಬ್ ಅಮಿನ್ ಪೂನಾವಾಲಾ ತನ್ನ ಪ್ರೇಯಸಿ ಶ್ರದ್ಧಾವಾಕರ್ ಹತ್ಯೆ ಮಾಡಿ, ದೇಹವನ್ನು 35 ತುಂಡುಗಳಾಗಿ ಪೀಸ್ ಪೀಸ್ ಮಾಡಿ ದೆಹಲಿಯ ಕಾಡಿನಲ್ಲಿ ಎಸೆದಿದ್ದ, ಶ್ರದ್ಧಾ ಪೋಷಕರು ನೀಡಿದ ದೂರು ಆಧರಿಸಿ ತನಿಖೆ ನಡೆಸಿದ್ದ ಪೊಲೀಸರಿಗೆ ಅಫ್ತಾಬ್ ಭೀಕರವಾಗಿ ಹತ್ಯೆ ಮಾಡಿರುವುದು ತಿಳಿದುಬಂದಿತ್ತು.

    Live Tv
    [brid partner=56869869 player=32851 video=960834 autoplay=true]