Tag: ಶ್ರಿಯಾ ಶರಣ್

  • ಬಿಕಿನಿ ಧರಿಸಿ ಪಡ್ಡೆಹುಡುಗರ ಟೆಂಪ್ರೆಚರ್‌ ಹೆಚ್ಚಿಸಿದ ಶ್ರಿಯಾ ಶರಣ್

    ಬಿಕಿನಿ ಧರಿಸಿ ಪಡ್ಡೆಹುಡುಗರ ಟೆಂಪ್ರೆಚರ್‌ ಹೆಚ್ಚಿಸಿದ ಶ್ರಿಯಾ ಶರಣ್

    ‘ಕಬ್ಜ’ ಸಿನಿಮಾದ (Kabza Film) ಬ್ಯೂಟಿ ಶ್ರಿಯಾ ಶರಣ್ ಮಳೆಗಾಲದ ಚಳಿಯಲ್ಲೂ ಬಿಸಿ ಹೆಚ್ಚಿಸಿದ್ದಾರೆ. ತಮ್ಮ ಸೋಶಿಯಲ್ ಮೀಡಿಯಾದಲ್ಲಿ ನಟಿ ಶೇರ್ ಮಾಡಿದ ಫೋಟೋ ನೋಡಿದ ನೆಟ್ಟಿಗರ ಕಣ್ಣು ತಂಪಾಗಿದೆ. ಚಳಿಯಲ್ಲೂ ಬಿಕಿನಿ ಧರಿಸಿ ಪಡ್ಡೆಹುಡುಗರ ಟೆಂಪ್ರೆಚರ್‌ ಹೆಚ್ಚಿಸಿದ್ದಾರೆ. ಇದನ್ನೂ ಓದಿ:ಮೆಗಾಸ್ಟಾರ್ ಚಿರಂಜೀವಿ ಚಿತ್ರ ರಿಜೆಕ್ಟ್‌ ಮಾಡಿದ ಶ್ರೀಲೀಲಾ

    41ರ ಹರೆಯದಲ್ಲೂ 18ರ ಯುವತಿಯರನ್ನ ನಾಚಿಸುವಂತ ಫಿಟ್‌ನೆಸ್ ಹೊಂದಿದ್ದಾರೆ ಶ್ರೀಯಾ. ಬೀಚ್‌ನಲ್ಲಿ ಬಿಕಿನಿ ಹಾಕಿ ಕೊಟ್ಟ ಪೋಸ್‌ಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ಇದನ್ನೂ ಓದಿ:ರೀಲ್ಸ್ ರಾಣಿ ಈಗ ಪ್ರಭಾಸ್‌ಗೆ ನಾಯಕಿ

    ಕಡಲ ತೀರದಲ್ಲಿ ವಿವಿಧ ಭಂಗಿಯಲ್ಲಿ ನಟಿ ಫೋಟೋಶೂಟ್ ಮಾಡಿಸಿದ್ದಾರೆ. ನಟಿಯ ಮಾದಕ ನೋಟಕ್ಕೆ ಗಂಡ್ ಹೈಕ್ಳು ಕಳೆದೋಗಿದ್ದಾರೆ.

    ‘ಕಬ್ಜ’ ನಟಿ ಶ್ರೀಯಾ ಸದ್ಯ ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾದಿಂದ ಸಿನಿಮಾಗೆ ಬಗೆ ಬಗೆಯ ಪಾತ್ರಗಳನ್ನು ಮಾಡುವ ಮೂಲಕ ಸಿನಿಪ್ರೇಕ್ಷಕರ ಮನಗೆಲ್ಲುತ್ತಿದ್ದಾರೆ.

    ತೆಲುಗಿನ ‘ಸಂತೋಷಂ’ ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಶ್ರೀಯಾ ಶರಣ್ ಇದೀಗ ಬಹುಭಾಷಾ ನಟಿಯಾಗಿ ಬೇಡಿಕೆ ಹೆಚ್ಚಿಕೊಂಡಿದ್ದಾರೆ. ಇದನ್ನೂ ಓದಿ:‘ತಂಗಲಾನ್’ ಸೀಕ್ವೆಲ್ ಬಗ್ಗೆ ಸಿಹಿಸುದ್ದಿ ಕೊಟ್ಟ ಚಿಯಾನ್ ವಿಕ್ರಮ್

    ಈ ಹಿಂದೆ ‘ಚಂದ್ರ’ (Chandra Kannada Film) ಎಂಬ ಕನ್ನಡ ಸಿನಿಮಾದಲ್ಲಿ ಲವ್ಲಿ ಸ್ಟಾರ್ ಪ್ರೇಮ್‌ಗೆ (Lovely Star Prem) ನಾಯಕಿಯಾಗಿ ನಟಿಸಿದ್ದರು. ಈ ಸಿನಿಮಾಗೆ ರೂಪಾ ಅಯ್ಯರ್ ನಿರ್ದೇಶನ ಮಾಡಿದ್ದರು.

    ಅಂದಹಾಗೆ, ಉಪೇಂದ್ರ (Upendra) ನಟನೆಯ ಕಬ್ಜ ಸಿನಿಮಾದಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದರು. ಈ ಚಿತ್ರವನ್ನು ಆರ್. ಚಂದ್ರು ನಿರ್ದೇಶನ ಮಾಡಿದ್ರು. ‘ಕಬ್ಜ ಪಾರ್ಟ್ 2’ ಕೂಡ ಬರಲಿದೆ. ಈ ಸಿನಿಮಾಗಾಗಿ ಫ್ಯಾನ್ಸ್ ಕೂಡ ಎದುರು ನೋಡ್ತಿದ್ದಾರೆ.

  • ಫ್ಯಾಮಿಲಿ ಆಡಿಯನ್ಸ್ ನ ಮತ್ತೆ ಥಿಯೇಟರ್ ಒಳಗೆ ಕರೆಯಿಸಿದ ‘ಕಬ್ಜ’

    ಫ್ಯಾಮಿಲಿ ಆಡಿಯನ್ಸ್ ನ ಮತ್ತೆ ಥಿಯೇಟರ್ ಒಳಗೆ ಕರೆಯಿಸಿದ ‘ಕಬ್ಜ’

    ನ್ನಡದ ಪ್ರತಿಭಾವಂತ ನಿರ್ದೇಶಕ ಆರ್.ಚಂದ್ರು (R. Chandru) ಅವರ ‘ಕಬ್ಜ’ (Kabzaa) ಸಿನಿಮಾ ದಿನದಿಂದ ದಿನಕ್ಕೆ ಪ್ರೇಕ್ಷಕರನ್ನು ಹೆಚ್ಚಿಸಿಕೊಳ್ಳುತ್ತಲೇ ಇದೆ. ಈ ವೀಕೆಂಡ್ ನಲ್ಲೂ ಚಿತ್ರ ಬಾಕ್ಸ್ ಆಫೀಸ್ ಭರ್ತಿ ಮಾಡಿದೆ. ಅದರಲ್ಲೂ ಫ್ಯಾಮಿಲಿ ಆಡಿಯನ್ಸ್ ಮತ್ತೆ ಚಿತ್ರಮಂದಿರಕ್ಕೆ ಬರುವಂತೆ ಮಾಡಿದ ಹೆಗ್ಗಳಿಕೆ ಈ ಸಿನಿಮಾದ್ದು. ಈ ಚಿತ್ರದಲ್ಲಿ ಬರುವ ‘ನಮಾಮಿ ನಮಾಮಿ’ (Namami) ಹಾಡು ಮಹಿಳೆಯರಿಗೆ ಹೆಚ್ಚು ಇಷ್ಟವಾಗಿದ್ದು ಶ್ರಿಯಾ ಶರಣ್ (Shriya Sharan) ಅವರ ಫಾಲೋವರ್ಸ್ ಸಂಖ್ಯೆ ಕೂಡ ಹೆಚ್ಚಾಗಿದೆಯಂತೆ. ಈ ಮಾತನ್ನು ಸ್ವತಃ ಶ್ರಿಯಾ ಹೇಳಿಕೊಂಡಿದ್ದಾರೆ.

    ನಾಳೆ ಯುಗಾದಿ ಹಬ್ಬ. ಹಾಗಾಗಿ ಮತ್ತಷ್ಟು ಶೋಗಳ ಸಂಖ್ಯೆ ಹೆಚ್ಚಿಗೆ ಆಗುವ ಸಾಧ್ಯತೆ ಇದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಅದರಲ್ಲೂ ನಾಳೆ ಫ್ಯಾಮಿಲಿ ಆಡಿಯನ್ಸ್ ಹೆಚ್ಚಾಗಿ ಬರುವ ಸಾಧ್ಯತೆಯನ್ನೂ ತಿಳಿಸಿದೆ. ‘ನಮಾಮಿ’ ಹಾಡಿನಲ್ಲಿ ಶ್ರಿಯಾ ಹಾಕಿರುವ ಕಾಸ್ಟ್ಯೂಮ್, ಜ್ಯುವೆಲರಿಸ್ , ಕಾಲ್ಗೆಜ್ಜೆ ಹೀಗೆ ಮಹಿಳೆಯರನ್ನು ಗಮನ ಸೆಳೆದಿದ್ದು ಸುಳ್ಳಲ್ಲ. ಇದನ್ನೂ ಓದಿ: ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ : ನಟನ ನಿವಾಸಕ್ಕೆ ಫುಲ್ ಸೆಕ್ಯೂರಿಟಿ

    ಸಿನಿಮಾ ರಿಲೀಸ್ ಆಗಿ ಎರಡನೇ ದಿನಕ್ಕೆ ಕಬ್ಜ ಸಿನಿಮಾ 100 ಕೋಟಿ ಕ್ಲಬ್ ಸೇರಿರುವ ಕುರಿತು ಅಧಿಕೃತವಾಗಿಯೇ ಚಿತ್ರತಂಡ ಮಾಹಿತಿ ನೀಡಿತ್ತು. ಇದೀಗ 250 ಕೋಟಿಯ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಥಿಯೇಟರ್ ಹಾಗೂ ಡಿಜಿಟಲ್, ಡಬ್ಬಿಂಗ್ ರೈಟ್ಸ್ ಇವೆಲ್ಲವೂ ಸೇರಿ 200 ಕೋಟಿ ರೂಪಾಯಿಗೂ ಅಧಿಕ ಹಣ ಬಂದಿದೆ ಎಂದು ಅಂದಾಜಿಸಲಾಗುತ್ತಿದೆ.

    ನಾನಾ ಕಾರಣಗಳಿಂದಾಗಿ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸದ್ದು ಮಾಡುತ್ತಿದೆ. ಉಪೇಂದ್ರ (Upendra), ಸುದೀಪ್ ಮತ್ತು ಶಿವರಾಜ್ ಕುಮಾರ್ ಮೂವರು ಸ್ಟಾರ್ ನಟರು ಇದೇ ಮೊದಲ ಬಾರಿಗೆ ತೆರೆ ಹಂಚಿಕೊಂಡಿದ್ದಾರೆ. ಅಚ್ಚರಿ ಎನ್ನುವಂತೆ ಚಂದ್ರು ಮೇಕಿಂಗ್ ಮಾಡಿದ್ದಾರೆ. ಅದ್ಧೂರಿಯಾಗಿ ಸಿನಿಮಾ ಮೂಡಿ ಬಂದಿದೆ. ನುರಿತ ತಂತ್ರಜ್ಞರ ತಂಡವೇ ಈ ಚಿತ್ರದಲ್ಲಿ ಒಂದಾಗಿದೆ.

  • Breaking- ‘ಕಬ್ಜ 2’ ಪಕ್ಕಾ : ಸುಳಿವು ನೀಡಿದ ರಿಯಲ್ ಸ್ಟಾರ್ ಉಪೇಂದ್ರ

    Breaking- ‘ಕಬ್ಜ 2’ ಪಕ್ಕಾ : ಸುಳಿವು ನೀಡಿದ ರಿಯಲ್ ಸ್ಟಾರ್ ಉಪೇಂದ್ರ

    ನ್ನಡದ ಪ್ರತಿಭಾವಂತ ನಿರ್ದೇಶಕ ಆರ್.ಚಂದ್ರು (R. Chandru) ನಿರ್ದೇಶನದ ಕಬ್ಜ (Kabzaa) ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ವಿಶ್ವದಾದ್ಯಂತ ನಾಲ್ಕು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಐದು ಭಾಷೆಗಳಲ್ಲಿ ಚಿತ್ರ ರಿಲೀಸ್ ಆಗುತ್ತಿದೆ. ಈ ಸಮಯದಲ್ಲಿ ಕಬ್ಜ 2 ಸಿನಿಮಾದ ಬಗ್ಗೆ ಸುಳಿವು ನೀಡಿದ್ದಾರೆ ನಟ ಉಪೇಂದ್ರ (Upendra). ನಿನ್ನೆ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ನಡೆದ ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಬ್ಜ 2 ಸಿನಿಮಾದಲ್ಲಿ ನನಗೆ ಅತಿಥಿ ಪಾತ್ರ ಕೊಡಿ, ಸುದೀಪ್ ಅವರನ್ನು ಹೀರೋ ಆಗಿ ಮಾಡಿ ಎಂದು ನಿರ್ದೇಶಕರಲ್ಲಿ ಮನವಿ ಮಾಡಿಕೊಂಡರು.

    ‘ಕಬ್ಜ ಇದು ನಟರ ಸಿನಿಮಾವಲ್ಲ, ಟೆಕ್ನಿಷಿಯನ್ಸ್ ಸಿನಿಮಾ. ಈ ಸಿನಿಮಾದಲ್ಲಿ ನಿರ್ದೇಶಕರು, ಸಂಗೀತ ನಿರ್ದೇಶಕರ, ಕಲಾ ನಿರ್ದೇಶಕ, ಸಿನಿಮಾಟೋಗ್ರಾಫರ್ ಕಾಣುತ್ತಾರೆ. ನಟರು ಕೇವಲ ಹಿಂದಿನ ಶಕ್ತಿ ಅಷ್ಟೇ. ಇಂತಹ ಸಿನಿಮಾಗಳನ್ನು ಪ್ರೇಕ್ಷಕರು ಗೆಲ್ಲಿಸುತ್ತಾರೆ. ಕಬ್ಜ 2 ಸಿನಿಮಾ ಕೂಡ ಆಗಲಿ. ಆ ಸಿನಿಮಾದಲ್ಲಿ ಸುದೀಪ್ ಮುಖ್ಯ ಪಾತ್ರ ಮಾಡಲಿ’ ಎಂದು ಹಾರೈಸಿದರು ಹಾಗೂ ಕಬ್ಜ 2 ಬರುವ ಕುರಿತು ಸುಳಿವನ್ನೂ ಅವರು ನೀಡಿದರು. ಇದನ್ನೂ ಓದಿ: ಆಸ್ಕರ್ ಪಾರ್ಟಿಯಲ್ಲಿ ಕಂಗೊಳಿಸಿದ ರಾ ರಾ ರಕ್ಕಮ್ಮ

    ಪ್ರಿ ರಿಲೀಸ್ ಇವೆಂಟ್ ನಲ್ಲಿ ಭಾಗಿಯಾಗಿದ್ದ ಡಾಲಿ ಧನಂಜಯ್, ‘ಕಬ್ಜ ಸಿನಿಮಾದಲ್ಲಿ ನನಗೆ ಅವಕಾಶ ನೀಡಿಲ್ಲ. ನಿರ್ದೇಶಕರು ಬಹುಶಃ ನನ್ನನ್ನು ಮರೆತಿದ್ದಾರೆ. ಕಬ್ಜ 2 ನಲ್ಲಾದರೂ ಅವಕಾಶ ಕೊಡಲಿ ಎಂದರು. ಅಲ್ಲದೇ ಮೊದಲ ಶೋ ರಾತ್ರಿಯೇ ಇರಲಿ, ಬೆಳಗ್ಗೆ ಆಯೋಜನೆ ಆಗಿರಲಿ ಒಬ್ಬ ಅಭಿಮಾನಿಯಾಗಿ ಬಂದು ಥಿಯೇಟರ್ ನಲ್ಲಿ ಸಂಭ್ರಮಿಸುತ್ತೇನೆ’ ಎಂದರು.

    ನಿರ್ದೇಶಕ ಆರ್.ಚಂದ್ರು ಅವರನ್ನು ಹಾಡಿ ಹೊಗಳಿದ ಕಿಚ್ಚ ಸುದೀಪ್ (Sudeep), ‘ಇಂಥದ್ದೊಂದು ಸಿನಿಮಾದಲ್ಲಿ ನಾನು ಭಾಗಿಯಾಗಿದ್ದೇನೆ ಎನ್ನುವುದು ಸಂತಸ ತಂದಿದೆ. ನಿರ್ದೇಶಕರು ಸಿನಿಮಾವನ್ನು ತುಂಬಾ ಚೆನ್ನಾಗಿ ಮಾಡಿದ್ದಾರೆ. ಪ್ರೇಕ್ಷಕರು ಕೂಡ ಅಷ್ಟೇ ಈ ಸಿನಿಮಾವನ್ನು ಒಪ್ಪಿಕೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ. ಒಳ್ಳೊಳ್ಳೆ ಸಿನಿಮಾಗಳು ಹಾಗೂ ಹೃದಯಕ್ಕೆ ಹತ್ತಿರ ಇದ್ದವರು ಸಿನಿಮಾ ಮಾಡಿದಾಗ, ಅವರಿಗೆ ಸಪೋರ್ಟ್ ಮಾಡುವುದು ನನ್ನ ಕರ್ತವ್ಯ. ನಾನು ಮಾಡಿದ್ದೇನೆ’ ಎಂದು ಹೇಳಿದರು.

    ಪ್ರಿ ಇವೆಂಟ್ ಕಾರ್ಯಕ್ರಮದಲ್ಲಿ ನೆನಪಿರಲಿ ಪ್ರೇಮ್, ನಟಿ ಶ್ರಿಯಾ ಸರಣ್ (Shriya Sharan), ತಾನ್ಯ ಹೋಪ್, ಚಕ್ರವರ್ತಿ ಚಂದ್ರಚೂಡ, ನಿರ್ಮಾಪಕರಾದ ಕೆ.ಪಿ. ಶ್ರೀಕಾಂತ್, ಜಾಕ್ ಮಂಜು, ಸುದೀಪ್ ಪುತ್ರಿ ಶಾನ್ವಿ ಸೇರಿದಂತೆ ಹಲವಾರು ಸಿಲೆಬ್ರಿಟಿಗಳು ಹಾಜರಿದ್ದರು. ಕಾರ್ಯಕ್ರಮದಲ್ಲಿ ಸಿನಿಮಾದ ಹಾಡುಗಳನ್ನು ಮತ್ತು ಟ್ರೈಲರ್ ತೋರಿಸಲಾಯಿತು.

  • ಬಾಲಿವುಡ್ ನಂತರ ತಮಿಳಿನಲ್ಲೂ ಹವಾ ಸೃಷ್ಟಿಸಿದ ‘ಕಬ್ಜ’ ಸಿನಿಮಾ

    ಬಾಲಿವುಡ್ ನಂತರ ತಮಿಳಿನಲ್ಲೂ ಹವಾ ಸೃಷ್ಟಿಸಿದ ‘ಕಬ್ಜ’ ಸಿನಿಮಾ

    ನ್ನಡದ ಪ್ರತಿಭಾವಂತ ನಿರ್ದೇಶಕ ಆರ್.ಚಂದ್ರು (R. Chandru) ನಿರ್ದೇಶನದ ಕಬ್ಜ (Kabzaa) ಸಿನಿಮಾ ತಮಿಳು ಚಿತ್ರರಂಗದಲ್ಲೂ ಹವಾ ಕ್ರಿಯೇಟ್ ಮಾಡಿದೆ. ನಿನ್ನೆ ಚೆನ್ನೈನಲ್ಲಿ (Chennai) ನಡೆದ ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ನಟ ಉಪೇಂದ್ರ (Upendra), ನಟಿ ಶ್ರಿಯಾ ಶರಣ್ (Shriya Sharan), ಕೆ.ಪಿ ಶ್ರೀಕಾಂತ್ ಸೇರಿದಂತೆ ಚಿತ್ರತಂಡ ಹಲವಾರು ಸದಸ್ಯರು ಭಾಗಿಯಾಗಿದ್ದರು. ಕಬ್ಜ ಸಿನಿಮಾ ತಮಿಳಿನಲ್ಲೂ ರಿಲೀಸ್ ಆಗುತ್ತಿದ್ದು, ನೂರಾರು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತಿದೆ.

    ಉಪೇಂದ್ರ, ಸುದೀಪ್​ ಅಭಿನಯದ ‘ಕಬ್ಜ’ ಅಲೆ ಜೋರಾಗಿದೆ. ಬರೀ ಬೆಂಗಳೂರಿನಲ್ಲಷ್ಟೇ ಅಲ್ಲ, ದೂರದ ಮುಂಬೈನಲ್ಲೂ ಅರ್ಕೇಶ್ವರನದ್ದೇ ಆರ್ಭಟ, ಭಾರ್ಗವ್ ಭಕ್ಷಿಯದ್ದೇ ಹವಾ ಆಗಿತ್ತು, ಇದೀಗ ಚೆನ್ನೈನಲ್ಲೂ ತನ್ನ ಖದರ್ ತೋರಿಸಿದೆ. ‘ಕಬ್ಜ’ ಚಿತ್ರದ ಬಿಡುಗಡೆಗೆ ಇನ್ನೊಂದು ವಾರವಷ್ಟೇ ಉಳಿದಿದೆ. ಚಿತ್ರದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಚಿತ್ರತಂಡ ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡುತ್ತಿದೆ. ಇದನ್ನೂ ಓದಿ: ರಿಷಬ್ ಶೆಟ್ಟಿ ಮಗಳ ಬರ್ತ್‌ಡೇ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ತಾರೆಯರು

    ಚಿತ್ರದ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಮಾತನಾಡಿದ ಉಪೇಂದ್ರ ಚಿತ್ರದ ಪ್ರಚಾರ ಮಾಡುತ್ತಿರುವ ಬಗ್ಗೆ ಖುಷಿ ವ್ಯಕ್ತಪಡಿಸುವುದರ ಜತೆಗೆ, ಅಭಿಮಾನಿಗಳ ಈ ಪ್ರೀತಿ ನೋಡಿ ತಮ್ಮ ಕಣ್ತುಂಬಿ ಬಂದಿದೆ ಎಂದರು. ಚಿತ್ರವನ್ನು ನೋಡಿ ಹರಸಿ, ಹಾರೈಸಿ ಎಂದರು. ತಮ್ಮ ಸಿನಿಮಾದ ಬಗ್ಗೆ ನಿರ್ದೇಶಕ ಆರ್.ಚಂದ್ರು ಅಭಿಮಾನದಿಂದ ಮಾತುಗಳನ್ನು ಆಡಿದರು.

    ನಾನಾ ಕಾರಣಗಳಿಂದಾಗಿ ಸಿನಿಮಾ ನಿರೀಕ್ಷೆ ಮೂಡಿಸಿದೆ. 1945  ರಿಂದ 1987 ರ ಕಾಲಘಟ್ಟದಲ್ಲಿ ನಡೆಯೋ ಕಥೆ ಸಿನಿಮಾದಲ್ಲಿ. ಒಂದು ಕಡೆ ಸ್ವತಂತ್ರ ಪೂರ್ವ ಮತ್ತೊಂದು ಕಡೆ ಸ್ವತಂತ್ರದ ನಂತರ ಭಾರತ ಹೇಗಿತ್ತು ಅನ್ನುವುದನ್ನು ತೋರಿಸಲಾಗಿದೆ. ‘ಕಬ್ಜ’ ಚಿತ್ರವು ಮಾರ್ಚ್ 17 ರಂದು ಜಗತ್ತಿನಾದ್ಯಂತ 50 ದೇಶಗಳ 4 ಸಾವಿರ ಪರದೆಗಳಲ್ಲಿ, ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

  • ಮುಂಬೈನಲ್ಲಿ ‘ಕಬ್ಜ’ ಹವಾ : ಬಾಲಿವುಡ್ ನಲ್ಲಿ ಉಪೇಂದ್ರ, ಸುದೀಪ್ ರೋಡ್ ಶೋ

    ಮುಂಬೈನಲ್ಲಿ ‘ಕಬ್ಜ’ ಹವಾ : ಬಾಲಿವುಡ್ ನಲ್ಲಿ ಉಪೇಂದ್ರ, ಸುದೀಪ್ ರೋಡ್ ಶೋ

    ಪೇಂದ್ರ, ಸುದೀಪ್​ (Sudeep) ಅಭಿನಯದ ‘ಕಬ್ಜ’ (Kabzaa) ಅಲೆ ಜೋರಾಗಿದೆ. ಬರೀ ಬೆಂಗಳೂರಿನಲ್ಲಷ್ಟೇ ಅಲ್ಲ, ದೂರದ ಮುಂಬೈನಲ್ಲೂ ಅರ್ಕೇಶ್ವರನದ್ದೇ ಆರ್ಭಟ, ಭಾರ್ಗವ್ ಭಕ್ಷಿಯದ್ದೇ ಹವಾ. ಆರ್​. ಚಂದ್ರು (R. Chandru) ನಿರ್ಮಾಣದ, ನಿರ್ದೇಶನದ ‘ಕಬ್ಜ’ ಚಿತ್ರದ ಬಿಡುಗಡೆಗೆ ಇನ್ನೊಂದು ವಾರವಷ್ಟೇ ಉಳಿದಿದೆ. ಚಿತ್ರದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಚಿತ್ರತಂಡ, ಗುರುವಾರ ಮುಂಬೈನಲ್ಲಿ ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಿ ಬಂದಿದೆ. ಮುಂಬೈನಲ್ಲಿ ‘ಕಬ್ಜ’ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ ಬಹಳ ಗ್ರ್ಯಾಂಡ್ ಆಗಿ ನಡೆದಿದೆ.

    ಹಿಂದಿ ಚಿತ್ರರಂಗದ ಜನಪ್ರಿಯ ನಿರ್ಮಾಪಕ ಮತ್ತು ವಿತರಕ ಆನಂದ್​ ಪಂಡಿತ್​, ‘ಕಬ್ಜ’ ಚಿತ್ರದ ಹಿಂದಿ ಭಾಷೆಯ ವಿತರಣೆಯ ಹಕ್ಕುಗಳನ್ನು ಪಡೆದಾಗಲೇ, ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿತ್ತು. ಅದಕ್ಕೆ ತಕ್ಕ ಹಾಗೆ ಅದ್ದೂರಿಯಾಗಿ ಪ್ರಿ-ರಿಲೀಸ್ ಈವೆಂಟ್ ಆಯೋಜಿಸಿದ್ದರು ಆನಂದ್ ಪಂಡಿತ್.‌ ಮೊದಲಿಗೆ ಬುಲೆಟ್ ಮೂಲಕ ಸುಮಾರು 60 ಬೈಕ್​ಗಳಲ್ಲಿ ಎರಡೂ ವರೆ ಕಿ.ಮೀ Rallt ಮಾಡಲಾಯಿತ. ಉಪೇಂದ್ರ, ಆನಂದ್ ಪಂಡಿತ್ ಬುಲೆಟ್ ಏರಿ ಸವಾರಿ ಮಾಡಿದರು. ಇನ್ನು, ಸುದೀಪ್, ಶ್ರೇಯಾ ಶರಣ್ ಸಹ ಅವರಿಗೆ ಸಾಥ್​ ಕೊಟ್ಟರು. ಇದನ್ನೂ ಓದಿ: ಎಮೋಷನಲ್ ನಿಂದನೆ ಬಗ್ಗೆ ಮೌನ ಮುರಿದ ಮೇಘನಾ ರಾಜ್

    ನಂತರ ಚಿತ್ರದ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಮಾತನಾಡಿದ ಉಪೇಂದ್ರ, ಮುಂಬೈನಲ್ಲಿ ಚಿತ್ರದ ಪ್ರಚಾರ ಮಾಡುತ್ತಿರುವ ಬಗ್ಗೆ ಖುಷಿ ವ್ಯಕ್ತಪಡಿಸುವುದರ ಜತೆಗೆ, ಅಭಿಮಾನಿಗಳ ಈ ಪ್ರೀತಿ ನೋಡಿ ತಮ್ಮ ಕಣ್ತುಂಬಿ ಬಂದಿದೆ ಎಂದರು. ಚಿತ್ರವನ್ನು ನೋಡಿ ಹರಸಿ, ಹಾರೈಸಿ ಎಂದರು.

    ಸುದೀಪ್​ಗೆ ಮುಂಬೈ ಹೊಸದಲ್ಲ. ಈಗಾಗಲೇ ಅಲ್ಲಿ ಸಾಕಷ್ಟು ಕೆಲಸ ಮಾಡಿರುವ ಅವರು, ತಮ್ಮ ಹೃದಯದಲ್ಲಿ ಮುಂಬೈ ವಿಶೇಷ ಸ್ಥಾನ ಪಡೆದಿದೆ ಎಂದು ಹೇಳಿದರು. ‘ಜನ ನಮ್ಮ ಚಿತ್ರದ ಟ್ರೇಲರ್​ಗೆ ಸಾಕಷ್ಟು ಪ್ರೀತಿ ತೋರುತ್ತಿದ್ದಾರೆ. ಈ ಪ್ರೀತಿ ಚಿತ್ರ ಬಿಡುಗಡೆಯಾದ ಮೇಲೂ ಮುಂದುವರೆಯಲಿ’ ಎಂದು ಹೇಳಿದರು. ‘ಕಬ್ಜ’ ಚಿತ್ರವು ಮಾರ್ಚ್ ೧೭ ರಂದು ಜಗತ್ತಿನಾದ್ಯಂತ 50 ದೇಶಗಳ 4 ಸಾವಿರ ಪರದೆಗಳಲ್ಲಿ, ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

  • ಸುದೀಪ್ ‘ಕಬ್ಜ’ ಚಿತ್ರದಿಂದ ಹೊರ ನಡೆದಿರುವ ಸುದ್ದಿ ಸುಳ್ಳು : ನಿರ್ದೇಶಕ ಆರ್.ಚಂದ್ರು

    ಸುದೀಪ್ ‘ಕಬ್ಜ’ ಚಿತ್ರದಿಂದ ಹೊರ ನಡೆದಿರುವ ಸುದ್ದಿ ಸುಳ್ಳು : ನಿರ್ದೇಶಕ ಆರ್.ಚಂದ್ರು

    ಹೆಸರಾಂತ ನಿರ್ದೇಶಕ ಆರ್.ಚಂದ್ರು ಅವರ ‘ಕಬ್ಜ’ ಸಿನಿಮಾದಿಂದ ಸುದೀಪ್ ಅವರು ಹೊರ ನಡೆದಿದ್ದಾರೆ ಎನ್ನುವ ಸುದ್ದಿ ನೆನ್ನೆಯಿಂದ ಗಾಂಧಿನಗರದಲ್ಲಿ ಗಿರಕಿ ಹೊಡೆಯುತ್ತಿತ್ತು. ಆರ್.ಚಂದ್ರು ಮತ್ತು ಸುದೀಪ್ ನಡುವೆ ಮನಸ್ತಾಪ ಕಾರಣದಿಂದಾಗಿ ಕಿಚ್ಚ ‘ಕಬ್ಜ’ ಸಿನಿಮಾದಲ್ಲಿ ನಟಿಸುತ್ತಿಲ್ಲ ಎಂಬ ಸುದ್ದಿ ಭಾರೀ ಸಂಚಲನ ಮೂಡಿಸಿತ್ತು. ಇದನ್ನೂ ಓದಿ : ಪಾವನಾ ನಾಯಕಿಯಾಗಿ ನಟಿಸಿದ ‘ಇನ್’ ಚಿತ್ರದ ಟೀಸರ್ ರಿಲೀಸ್ ಮಾಡಿದ ಕಿಚ್ಚ

    ಸುದೀಪ್ ಮತ್ತು ಉಪೇಂದ್ರ ಕಾಂಬಿನೇಷನ್ ನ ಈ ಸಿನಿಮಾ ಭಾರೀ ಬಜೆಟ್ ನಲ್ಲಿ ಮೂಡಿ ಬರುತ್ತಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿದೆ. ಈ ಸಿನಿಮಾದಲ್ಲಿ ಸುದೀಪ್ ಮತ್ತು ಉಪೇಂದ್ರ ವಿಭಿನ್ನ ರೀತಿಯ ಪಾತ್ರಗಳನ್ನು ಮಾಡುತ್ತಿದ್ದಾರೆ. ಈಗಾಗಲೇ ಸುದೀಪ್ ಕೂಡ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಇಷ್ಟೆಲ್ಲ ಬೆಳವಣಿಗೆಗಳು ನಡೆದರೂ, ಕಿಚ್ಚ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನುವುದು ನಾನಾ ರೀತಿಯ ಅನುಮಾನಕ್ಕೂ ಕಾರಣವಾಗಿತ್ತು. ಇದನ್ನೂ ಓದಿ : ರಾಷ್ಟ್ರ ಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ನಿರ್ದೇಶನದ ‘ಡೊಳ್ಳು’ ಚಿತ್ರಕ್ಕೆ ಮತ್ತೆರಡು ಪುರಸ್ಕಾರ

    ಈ ಕುರಿತು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಆರ್.ಚಂದ್ರು, “ಎಲ್ಲರಿಗೂ ನಮಸ್ಕಾರ, ನಿನ್ನೆಯಿಂದ ಸುದೀಪ್ ಅವರು ಕಬ್ಜ ಚಿತ್ರತಂಡದಿಂದ ಹೊರ ನಡೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆ ಸುದ್ದಿ ಸತ್ಯಕ್ಕೆ ದೂರವಾದದ್ದು. ಕಿಚ್ಚು ಸುದೀಪ್ ಅವರು ಈಗಾಗಲೇ ಕಬ್ಜ ಚಿತ್ರೀಕರಣದಲ್ಲಿ ಪಾಲ್ಗೊಂಡು ನಟಿಸಿದ್ದಾರೆ. ಹಾಗಾಗಿ ದಯವಿಟ್ಟು ಈ ರೀತಿಯ ಸುಳ್ಳು ಸುದ್ದಿಗೆ ಯಾರೂ ಕಿವಿಗೊಡಬಾರದು” ಎಂದು ಟ್ವಿಟ್ ಮಾಡಿದ್ದಾರೆ ನಿರ್ದೇಶಕರು. ಇದನ್ನೂ ಓದಿ : ಸ್ಟಾರ್ ತಾರಾಗಣದ ಬಹು ನಿರೀಕ್ಷಿತ ‘ತ್ರಿಕೋನ’ ಬಿಡುಗಡೆಗೆ ರೆಡಿ

    ಇಬ್ಬರು ಸ್ಟಾರ್ ನಟರು ಸಿನಿಮಾದಲ್ಲಿ ಇದ್ದಾರೆ ಎಂದರೆ, ಸಿನಿಮಾ ಕುರಿತು ಹೈಪ್ ಕ್ರಿಯೇಟ್ ಆಗುವುದು ಸಹಜ. ಅಲ್ಲದೇ, ಈ ಇಬ್ಬರೂ ಸ್ಟಾರ್ ನಟರು ಈಗಾಗಲೇ ಹಲವು ಚಿತ್ರರಂಗಗಳ ಜತೆ ಗುರುತಿಸಿಕೊಂಡಿದ್ದಾರೆ. ಹಾಗಾಗಿ ಕಬ್ಜ ಚಿತ್ರ ಪ್ಯಾನ್ ಇಂಡಿಯಾ ಪರಿಕಲ್ಪನೆಯಲ್ಲೇ ತಯಾರಾಗಿದೆ. ಅಷ್ಟೇ ಸದ್ದು ಮಾಡುತ್ತಿದೆ. ಹೀಗಾಗಿ ಕಿಚ್ಚನ ಬಗ್ಗೆ ಗಾಸಿಪ್ ಮೂಡಿದೆ. ಏ.1 ರಿಂದ ಈ ಸುದ್ದಿ ಸ್ಯಾಂಡಲ್ ವುಡ್ ನಲ್ಲಿ ಹರಿದಾಡುತ್ತಿದ್ದರಿಂದ ಅದು ಏಪ್ರಿಲ್ ಫೂಲ್ ಮಾಡಿದ್ದಾರೆ ಎನ್ನಲಾಗಿತ್ತು. ಆದರೆ, ಸುದ್ದಿ ಬೇರೆ ರೀತಿಯಲ್ಲಿ ಗಂಭೀರತೆಯನ್ನು ಸೃಷ್ಟಿ ಮಾಡಿತ್ತು. ಹಾಗಾಗಿ ಆರ್.ಚಂದ್ರು ಅವರೇ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

  • ಅದೃಷ್ಟ, ಸಂತೋಷ ಎರಡೂ ಅವಳ ಸ್ನೇಹಿತರಾಗಿರಲಿ – ಮುದ್ದಿನ ಮಗಳಿಗೆ ಶ್ರಿಯಾ ವಿಶ್

    ಅದೃಷ್ಟ, ಸಂತೋಷ ಎರಡೂ ಅವಳ ಸ್ನೇಹಿತರಾಗಿರಲಿ – ಮುದ್ದಿನ ಮಗಳಿಗೆ ಶ್ರಿಯಾ ವಿಶ್

    ಬೆಂಗಳೂರು: ನಟಿ ಶ್ರಿಯಾ ಶರಣ್ ಪುತ್ರಿಗೆ ಇಂದು ಒಂದು ವರ್ಷ ತುಂಬಿದ್ದು, ಇದೇ ಖುಷಿಯಲ್ಲಿ ಶ್ರಿಯಾ ಪುತ್ರಿ ಜೊತೆಗಿರುವ ಕೆಲವೊಂದು ಕ್ಯೂಟ್ ಫೋಟೋ ಹಾಗೂ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    shriya_saran

    ಒಂದು ಕಾಲದಲ್ಲಿ ಟಾಲಿವುಡ್‍ನ ಟಾಪ್ ನಟಿಯರಲ್ಲಿ ಒಬ್ಬರಾಗಿ ಸ್ಟಾರ್ ನಟರೊಂದಿಗೆ ಮಿಂಚಿದ್ದ ನಟಿ ಶ್ರಿಯಾ ಸದ್ಯ ಮದುವೆಯ ಬಳಿಕ ಸಿನಿಮಾಗಳಲ್ಲಿ ಅಷ್ಟಾಗಿ ಕಾಣಿಸಿಕೊಳ್ಳುತ್ತಿಲ್ಲ. ಆದರೂ ಸೋಶಿಯಲ್ ಮೀಡಿಯಾದಲ್ಲಿ ಆಗಾಗಾ ಫೋಟೋ ಹಾಗೂ ವೀಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ಸಖತ್ ಆ್ಯಕ್ಟೀವ್ ಆಗಿರುವ ಶ್ರಿಯಾ ಇದೀಗ ಪುತ್ರಿ ರಾಧಾ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

    shriya_saran

    ಸದ್ಯ ಈ ಕುರಿತಂತೆ ಶ್ರಿಯಾ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ರಾಧಾ ನಿದ್ರೆ ಮಾಡುತ್ತಿದ್ದ ವೇಳೆ ಮುದ್ದಾಡುತ್ತಿರುವ ವೀಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಮಗಳು ಹಾಗೂ ಪತಿ ಜೊತೆಗೆ ಕ್ಲಿಕ್ಕಿಸಿಕೊಂಡಿರುವ ಕೆಲವು ಒಂದೆರಡು ಫೋಟೋವನ್ನು ಹಂಚಿಕೊಂಡಿದ್ದಾರೆ. ಮತ್ತೊಂದರಲ್ಲಿ ಮಗಳನ್ನು ತಮ್ಮ ಎದೆಯ ಮೇಲೆ ಮಲಗಿಸಿಕೊಂಡು ಮುದ್ದಾಡುತ್ತಿರುವ ಹಾಗೂ ಮಗಳ ಪುಟ್ಟ ಬೆರಳಿಗೆ ಹೂವಿನಿಂದ ರಿಂಗ್ ಮಾಡಿ ಹಾಕಿರುವ ಪುಟ್ಟ ವೀಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ನಟಿ, ಭರತನಾಟ್ಯ ಕಲಾವಿದೆ ಶೋಬನಾಗೆ ಓಮಿಕ್ರಾನ್ ಪಾಸಿಟಿವ್

    shriya_saran

    ವೀಡಿಯೋ ಹಾಗೂ ಫೋಟೋಗಳ ಜೊತೆಗೆ ಇಂದು ನನ್ನ ಮಗಳಿಗೆ ಒಂದು ವರ್ಷ ತುಂಬಿದೆ. ಕಳೆದ ವರ್ಷ 7.40ಕ್ಕೆ ಜನಿಸಿದ ನನ್ನ ಮಗಳು ನಮ್ಮ ಹೃದಯದಲ್ಲಿ ಶಾಶ್ವತವಾಗಿ ನೆಲೆಯುರಿದಳು. ನಮ್ಮನ್ನು ತಂದೆ, ತಾಯಿಯನ್ನಾಗಿ ಮಾಡಿ, ಇಡೀ ಕುಟುಂಬಕ್ಕೆ ಅವಳು ನೀಡಿದ ಪ್ರೀತಿಗೆ ಧನ್ಯವಾದ. ನಾನು ಗರ್ಭಿಣಿಯಾಗಿದ್ದ ಸಮಯದಲ್ಲಿ ನನಗೆ ಸಹಾಯ ಮತ್ತು ಸಲಹೆ ನೀಡಿದ ನಾಟಾಕೊಶ್ಚೆವ್, ನಿರ್ಜ ಶರಣ್, ಆರತಿ ಶರಣ್, ಶೌರ್ಯ, ಧೃತಿದಾವೆ ನನ್ನ ಎಲ್ಲಾ ಸ್ನೇಹಿತರಿಗೂ ಧನ್ಯವಾದಗಳು. ನಮಗೆ ನಿಮ್ಮೆಲ್ಲರ ಆಶೀರ್ವಾದಬೇಕು. ರಾಧಾ ನೋಡಲು ಆಂಡ್ರೆ ಕೊಶ್ಚೆವ್‍ನಂತೆ ಕಾಣುತ್ತಾಳೆ ಎಂದು ರಿಯಾಜಮ್ಲಾನಿ ಹೇಳುತ್ತಾರೆ ಎಂದಿದ್ದಾರೆ.

     

    View this post on Instagram

     

    A post shared by Shriya Saran (@shriya_saran1109)

    ಅವಳು ಎಲ್ಲಾ ಕಡೆಯೂ ಸ್ನೇಹಿತರನ್ನು ಮಾಡಿಕೊಂಡು ವಿಶ್ವದಲ್ಲಿ ಎಲ್ಲರ ಪ್ರೀತಿಗಳಿಸಲಿ. ಅದೃಷ್ಟ ಮತ್ತು ಸಂತೋಷ ಎರಡು ಅವಳ ಸ್ನೇಹಿತರಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಾನಸಿಕವಾಗಿ ಕುಗ್ಗಿ, ಸುಧಾರಿಸಿಕೊಂಡು ಮತ್ತೆ ಯಶಸ್ವಿಯಾಗಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ಸಮಂತಾ

    ಇತ್ತೀಚೆಗಷ್ಟೇ ಶ್ರಿಯಾ ಶರಣ್ ಪತಿ ಆಂಡ್ರೆ ಕೊಶ್ಚೆವ್ ಮತ್ತು ಪುತ್ರಿ ರಾಧಾ ಜೊತೆ ಹೊಸ ವರ್ಷ ಸೆಲೆಬ್ರಿಟ್ ಮಾಡಲು ಗೋವಾಗೆ ತೆರಳಿದ್ದರು. ಈ ವೇಳೆ ಶ್ರಿಯಾ ಪತಿಗೆ ರೊಮ್ಯಾಂಟಿಕ್ ಆಗಿ ಕಿಸ್ ನೀಡಿದ್ದ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಇದನ್ನೂ ಓದಿ: ‘ಪುಷ್ಪ-2’ಗೆ ಶೇ.50 ಸಂಭಾವನೆ ಹೆಚ್ಚಿಸಿಕೊಂಡ ರಶ್ಮಿಕಾ!

  • ಪತಿಗೆ ರೊಮ್ಯಾಂಟಿಕ್  ಕಿಸ್ ಕೊಟ್ಟ ಶ್ರಿಯಾ ಶರಣ್ – ಫೋಟೋ ವೈರಲ್

    ಪತಿಗೆ ರೊಮ್ಯಾಂಟಿಕ್ ಕಿಸ್ ಕೊಟ್ಟ ಶ್ರಿಯಾ ಶರಣ್ – ಫೋಟೋ ವೈರಲ್

    ಹೈದರಾಬಾದ್: ನಟಿ ಶ್ರಿಯಾ ಶರಣ್ ಪತಿ ಆಂಡ್ರೆ ಕೊಶ್ಚೆವ್‍ಗೆ ಕಿಸ್ ಮಾಡುತ್ತಿರುವ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಶ್ರಿಯಾ ಶರಣ್ ಪತಿ ಆಂಡ್ರೆ ಕೊಶ್ಚೆವ್ ಮತ್ತು ಪುತ್ರಿ ರಾಧಾ ಜೊತೆ ಈ ಬಾರಿ ಹೊಸ ವರ್ಷ ಸೆಲೆಬ್ರಿಟ್ ಮಾಡಲು ಗೋವಾಗೆ ತೆರಳಿದ್ದಾರೆ. ಸದ್ಯ ಗೋವಾದಲ್ಲಿ ಕುಟುಂಬದೊಂದಿಗೆ ಸಖತ್ ಎಂಜಾಯ್ ಮಾಡುತ್ತಿರುವ ಶ್ರಿಯಾ ಒಂದಷ್ಟು ಕ್ಯೂಟ್ ಆ್ಯಂಡ್ ರೊಮ್ಯಾಂಟಿಕ್ ಫೋಟೋಗಳನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಶ್ರಿಯಾ ಪತಿಗೆ ರೊಮ್ಯಾಂಟಿಕ್ ಆಗಿ ಕಿಸ್ ನೀಡುತ್ತಿರುವ ಫೋಟೋ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.

    Shriya Saran

    ದಕ್ಷಿಣ ಭಾರತದ ಕ್ಯೂಟ್ ಕಪಲ್‍ಗಳಲ್ಲಿ ಶ್ರಿಯಾ ಶರಣ್ ಹಾಗೂ ಆಂಡ್ರೆ ಕೊಶ್ಚೆವ್ ಕೂಡ ಒಬ್ಬರು. ಈ ದಂಪತಿ ಆಗಾಗ ಫೋಟೋ ಹಾಗೂ ವೀಡಿಯೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗಷ್ಟೇ ಶ್ರಿಯಾ ತಮಗೆ ಹೆಣ್ಣು ಮಗು ಜನಿಸಿದ ವಿಚಾರ ಬಹಿರಂಗಪಡಿಸಿದ್ದರು. ಅಲ್ಲದೇ ಈ ವಿಚಾರವನ್ನು 2 ವರ್ಷಗಳ ಕಾಲ ರಹಸ್ಯವಾಗಿಟ್ಟಿದ್ದರು. ದನ್ನೂ ಓದಿ: ತಾಯಿಯಾಗಿರುವ ವಿಚಾರ 2 ವರ್ಷಗಳ ನಂತ್ರ ಬಹಿರಂಗ ಪಡಿಸಿದ ಶ್ರಿಯಾ ಶರಣ್

    Shriya Saran

    ಸದ್ಯ ಪತಿ ಜೊತೆಗೆ ಗೋವಾ ಟ್ರಿಪ್‍ನಲ್ಲಿ ಬ್ಯುಸಿಯಾಗಿರುವ ಶ್ರಿಯಾ ಇಂದು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋವೊಂದನ್ನು ಪೋಸ್ಟ್ ಮಾಡಿದ್ದಾರೆ. ಈ ಫೋಟೋದಲ್ಲಿ ಶ್ರಿಯಾ ಸೂರ್ಯಾಸ್ತದ ಸಮಯದಲ್ಲಿ ಪತಿಗೆ ರೊಮ್ಯಾಂಟಿಕ್ ಆಗಿ ಕಿಸ್ ಮಾಡಿರುವುದನ್ನು ಕಾಣಬಹುದಾಗಿದೆ. ಅಲ್ಲದೇ ಈ ಫೋಟೋವನ್ನು ಸ್ವೀಮ್ಮಿಂಗ್ ಮಾಡಿ ಬಂದ ನಂತರ ಕ್ಲಿಕ್ಕಿಸಿಕೊಂಡಿರುವಂತೆ ಕಾಣಿಸುತ್ತದೆ.

    ಅಕ್ಟೋಬರ್‌ನಲ್ಲಿ ತಮಗೆ ಹೆಣ್ಣು ಮಗು ಜನಿಸಿರುವ ವಿಚಾರವನ್ನು ರಿವೀಲ್ ಮಾಡಿದ್ದ ಶ್ರಿಯಾ, 2020ರ ಕ್ವಾರಂಟೈನ್ ತುಂಬಾನೇ ಅದ್ಭುತವಾಗಿತ್ತು. ಇಡೀ ಪ್ರಪಂಚವು ಕಷ್ಟದಲ್ಲಿ ಸಾಗುತ್ತಿರುವಾಗ, ನಮ್ಮ ಪ್ರಪಂಚವು ಬದಲಾಯಿತು. ನಮಗೆ ಆ ಸಂದರ್ಭದಲ್ಲಿ ಹೆಣ್ಣುಮಗುವಾಗಿದೆ ಎಂದು ಬರೆದುಕೊಂಡು ಒಂದು ವೀಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದರು. ದನ್ನೂ ಓದಿ: ಆಸ್ಪತ್ರೆಗೆ ದಾಖಲಾಗಿ ಡಿಂಪಲ್ ಕ್ವೀನ್ ರಚಿತಾ ಡಿಸ್ಚಾರ್ಜ್

    2018 ರ ಮಾರ್ಚ್‍ನಲ್ಲಿ ಶ್ರಿಯಾ ತಮ್ಮ ರಷ್ಯಾದ ಗೆಳೆಯ ಆಂಡ್ರೆ ಕೊಶ್ಚೆವ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದೀಗ ನಿರ್ದೇಶಕ ಎಸ್‍ಎಸ್ ರಾಜಮೌಳಿ ಆ್ಯಕ್ಷನ್ ಕಟ್ ಹೇಳಿರುವ ಆರ್‌ಆರ್‌ಆರ್‌ ಸಿನಿಮಾದಲ್ಲಿ ಬಾಲಿವುಡ್ ನಟ ಅಜಯ್ ದೇವ್‍ಗನ್‍ಗೆ ಜೋಡಿಯಾಗಿ ಶ್ರಿಯಾ ಕಾಣಿಸಿಕೊಂಡಿದ್ದಾರೆ. ಚಂದ್ರ, ಅರಸು ಸಿನಿಮಾ ಮೂಲಕ ಕನ್ನಡ ಚಿತ್ರಗಳಲ್ಲಿಯೂ ಅಭಿನಯಿಸಿರುವ ಶ್ರಿಯಾ ಕನ್ನಡ ಅಭಿಮಾನಿಗಳ ಪ್ರೀತಿ ಸಂಪಾದಿಸಿಕೊಂಡಿದ್ದಾರೆ.