Tag: ಶ್ರೀ

  • ದುಬೈನಲ್ಲಿ ‘ಜಸ್ಟ್ ಪಾಸ್’ ಸಿನಿಮಾದ ಟೀಸರ್ ರಿಲೀಸ್

    ದುಬೈನಲ್ಲಿ ‘ಜಸ್ಟ್ ಪಾಸ್’ ಸಿನಿಮಾದ ಟೀಸರ್ ರಿಲೀಸ್

    ರಾಯ್ಸ್ ಎಂಟರ್  ಟೈನ್ಮೆಂಟ್ ಲಾಂಛನದಲ್ಲಿ ಕೆ.ವಿ.ಶಶಿಧರ್ ನಿರ್ಮಿಸುತ್ತಿರುವ, ಕೆ.ಎಂ.ರಘು (KM Raghu) ನಿರ್ದೇಶನದಲ್ಲಿ ಶ್ರೀ (Shri) ಹಾಗೂ ಪ್ರಣತಿ ನಾಯಕ- ನಾಯಕಿಯಾಗಿ ನಟಿಸಿರುವ ಜಸ್ಟ್ ಪಾಸ್ (Just Past) ಚಿತ್ರದ ಟೀಸರ್ (Teaser) ಡಿಸೆಂಬರ್ 10ರಂದು ದುಬೈನಲ್ಲಿ ನಡೆಯಲಿರುವ ದುಬೈ ದಸರಾ ಸಂಗೀತ ರಸಸಂಜೆ ಕಾರ್ಯಕ್ರಮದಲ್ಲಿ ಪ್ರಸಾರವಾಗಲಿದೆ. ನಾಡಿನ ಹೆಸರಾಂತ ಕಲಾವಿದರು ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಸಾವಿರಾರು ಕನ್ನಡಿಗರ ಸಮ್ಮುಖದಲ್ಲಿ ಜಸ್ಟ್ ಪಾಸ್ ಚಿತ್ರದ ಟೀಸರ್ ಪ್ರದರ್ಶನವಾಗಲಿದೆ. ಡಿಸೆಂಬರ್‌ 13‌ ರಂದು ಈ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ.

    ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಚಿತ್ರದಲ್ಲಿ ಇರುವುದೆಲ್ಲವ ಬಿಟ್ಟು, ಗಜಾನನ ಗ್ಯಾಂಗ್ ಖ್ಯಾತಿಯ ನಟ ಶ್ರೀ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಸ್ಕ್ರಿಪ್ಟ್ ಕೆಲಸಗಳೆಲ್ಲ ಮುಗಿಸಿ ಶೂಟಿಂಗ್ ಹೊರಡಲು ಸಿನಿಮಾ ತಂಡ ಸಕಲ ತಯಾರಿ ನಡೆಸಿಕೊಂಡಿದೆ. ಚಿತ್ರಕ್ಕೆ ಹೀರೋಯಿನ್ ಹುಡುಕಾಟಲ್ಲಿದ್ದ ಚಿತ್ರತಂಡಕ್ಕೆ ಹೊಸ ಪ್ರತಿಭೆ ಪ್ರಣತಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಡಾನ್ಸ್ ಕರ್ನಾಟಕ ಡಾನ್ಸ್, ಫ್ಯಾಮಿಲಿ ವಾರ್ ಸೀಸನ್ 2 ರನ್ನರ್ ಅಪ್ ಆಗಿರುವ ಪ್ರಣತಿ ಬ್ರಹ್ಮಗಂಟು ಸೀರಿಯಲ್ ನಲ್ಲೂ ನಟಿಸಿದ್ದಾರೆ. ಈಗ ಜಸ್ಟ್ ಪಾಸ್ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು.

    ಕೆ.ಎಂ ರಘು. ನಿರ್ದೇಶನದ ದೊಡ್ಡಹಟ್ಟಿ ಬೋರೇಗೌಡ ಸಿನಿಮಾ ಬೆಂಗಳೂರು ಇಂಟರ್ ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಕನ್ನಡದ ಅತ್ಯುತ್ತಮ ಮೊದಲ ಸಿನಿಮಾ ಎಂಬ ಪ್ರಶಸ್ತಿ ಪಡೆದುಕೊಂಡು ಗಮನ ಸೆಳೆದಿತ್ತು. ಮೊಲದ ಬಾರಿ ನಿರ್ದೇಶಕರು ಯೂತ್ ಫುಲ್ ಸಬ್ಜೆಕ್ಟ್ ಕೈಗೆತ್ತಿಕೊಂಡಿದ್ದಾರೆ.

     

    ರಾಯ್ಸ್ ಎಂಟಟೈನ್ಮೆಂಟ್ ಬ್ಯಾನರ್ ನಡಿ ಶಶಿಧರ್.ಕೆ.ವಿ, ಶ್ರೀಧರ್ ಕೆ.ವಿ ಜಸ್ಟ್ ಪಾಸ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ, ಸುಚೇಂದ್ರ ಪ್ರಸಾದ್, ನವೀನ್ ಡಿ ಪಡಿಕ್ಕಲ್, ಪ್ರಕಾಶ್ ತುಮಿನಾಡ್, ದೀಪಕ್ ರೈ, ಅರ್ಪಿತಾ, ಚಂದು ಶ್ರೀ, ಯಶಿಕಾ, ವಿಶ್ವಾಸ್, ನಿಖಿಲ್, ಗಗನ್, ಅಭಿ ಚಿತ್ರದ ತಾರಾಬಳಗದಲ್ಲಿದ್ದಾರೆ. ಕೆ.ಎಂ.ಪ್ರಕಾಶ್ ಸಂಕಲನ, ಹರ್ಷವರ್ಧನ್ ರಾಜ್ ಸಂಗೀತ, ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಾಹಣ ಚಿತ್ರಕ್ಕಿದೆ.

  • ಸೆಟ್ಟೇರಿತು ಪರಸಂಗ ನಿರ್ದೇಶಕನ ಹೊಸ ಸಿನಿಮಾ ‘ಜಸ್ಟ್ ಪಾಸ್’

    ಸೆಟ್ಟೇರಿತು ಪರಸಂಗ ನಿರ್ದೇಶಕನ ಹೊಸ ಸಿನಿಮಾ ‘ಜಸ್ಟ್ ಪಾಸ್’

    ‘ತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಖ್ಯಾತಿಯ ನಿರ್ದೇಶಕ ಕೆ.ಎಂ.ರಘು ನಟ ಶ್ರೀ ಜೊತೆ ‘ಜಸ್ಟ್ ಪಾಸ್’ ಕಥೆ ಹೇಳಲು ಸಜ್ಜಾಗಿದ್ದಾರೆ. ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಮುಹೂರ್ತ ಇಂದು ನೆರವೇರಿದೆ. ನಿರ್ದೇಶಕ ಕೆ.ಎಂ.ರಘು ಮಾತನಾಡಿ ‘ಜಸ್ಟ್ ಪಾಸ್’ ಕಾಲೇಜ್ ಬ್ಯಾಕ್ ಡ್ರಾಪ್ ನಲ್ಲಿ ನಡಿಯೋ ಸಿನಿಮಾ. ಈಗಾಗಲೇ ಕಾಲೇಜ್ ಸಬ್ಜೆಕ್ಟ್ ಇರುವ ಹಲವಾರು ಸಿನಿಮಾಗಳು ಬಂದಿವೆ ನಾವೇನು ಹೊಸತು ಹೇಳ್ತೀವಿ ಅನ್ನೋದು ಮುಖ್ಯ. ಒಂದೇ ಲೈನ್ ನಲ್ಲಿ ಸಿನಿಮಾ ಬಗ್ಗೆ ಹೇಳಬೇಕು ಅಂದ್ರೆ ಈ ಚಿತ್ರದಲ್ಲಿ ಜಸ್ಟ್ ಪಾಸ್ ಆದವರಿಗಾಗಿಯೇ ಕಾಲೇಜ್ ತೆರೆಯಲಾಗಿರುತ್ತೆ. ಅವರಿಗಾಗಿಯೇ ಹಾಸ್ಟೆಲ್ ವ್ಯವಸ್ಥೆ ಕೂಡ ಇರುತ್ತೆ. ಜಸ್ಟ್ ಪಾಸ್ ಆದವರ ಮೆಂಟಾಲಿಟಿ ಬೇರೆ ಇರುತ್ತೆ. ಲಾಸ್ಟ್ ಬೆಂಚ್ ಸ್ಟೂಡೆಂಟ್ ಆಗಿರುತ್ತಾರೆ. ತುಂಬಾ ತರ್ಲೆ ಇರ್ತಾರೆ. ಅವರನ್ನು ಇಟ್ಟುಕೊಂಡು ಯಾವ ರೀತಿ ಎಜುಕೇಶನ್ ನೀಡಲಾಗುತ್ತೆ ಅನ್ನೋದನ್ನ ಕಾಮಿಡಿ, ಸೆಂಟಿಮೆಂಟ್ ಎಲಿಮೆಂಟ್ ಜೊತೆಗೆ ಕಟ್ಟಿಕೊಡಲಾಗಿದೆ. ಕಾಲೇಜ್ ಸಬ್ಜೆಕ್ಟ್ ಎಂದಾಕ್ಷಣ ಎಷ್ಟು ಎಂಟಟೈನ್ಮೆಂಟ್ ಇರುತ್ತೋ ಅಷ್ಟೇ ಒಳ್ಳೆ ಮೆಸೇಜ್ ಕೂಡ ಈ ಚಿತ್ರದಲ್ಲಿದೆ. ಮೈಸೂರು, ಸಕಲೇಶಪುರ, ಮಡಿಕೇರಿಯಲ್ಲಿ ಸಿನಿಮಾ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಕೆ.ಎಂ.ರಘು ಮಾಹಿತಿ ಹಂಚಿಕೊಂಡ್ರು.

    ನಾಯಕ ನಟ ಶ್ರೀ ಮಾತನಾಡಿ ನಿರ್ದೇಶಕರು ಸಿನಿಮಾ ಕಾನ್ಸೆಪ್ಟ್ ಬಗ್ಗೆ ಹೇಳಿದಾಗ ಇಂಟ್ರಸ್ಟಿಂಗ್ ಅನಿಸ್ತು. ಚಿತ್ರದಲ್ಲಿ ‘ಜಸ್ಟ್ ಪಾಸ್’ ಆದವರಿಗಾಗಿಯೇ ಒಂದು ಕಾಲೇಜ್ ತೆರೆಯಲಾಗಿರುತ್ತೆ. ಪ್ರಿನ್ಸಿಪಾಲ್ ಜಸ್ಟ್ ಪಾಸ್ ಆದವರಿಗಾಗಿ ಯಾಕೆ ಕಾಲೇಜ್ ತೆರೆದಿರುತ್ತಾರೆ. ಹೇಗೆ ಎಜುಕೇಶನ್ ನೀಡುತ್ತಾರೆ ಎನ್ನುವ ಸ್ಟೋರಿ ಚಿತ್ರದಲ್ಲಿದೆ. ಚಿತ್ರದಲ್ಲಿ ಅರ್ಜುನ್ ಪಾತ್ರದಲ್ಲಿ ನಟಿಸುತ್ತಿದ್ದೇನೆ. ನಾಯಕ ನಟನಾಗಿ ಇದು ನನ್ನ ನಾಲ್ಕನೇ ಸಿನಿಮಾ. ಬಹಳ ತರ್ಲೆ, ಚೇಷ್ಟೆ ಮಾಡುವಂತ ಕ್ಯಾರೆಕ್ಟರ್ ನನ್ನದು. ಹಿಂದಿನ ಎಲ್ಲಾ ಸಿನಿಮಾಗಳಿಗಿಂತ ಡಿಫ್ರೆಂಟ್ ಆಗಿರೋ ಪಾತ್ರ. ಜಸ್ಟ್ ಪಾಸ್ ಸಿನಿಮಾ ಫಸ್ಟ್ ಕ್ಲಾಸ್ ಆಗಿ ಮಾಡಲು ಎಲ್ಲರೂ ತಯಾರಾಗಿದ್ದೇವೆ ಎಲ್ಲರ ಆಶೀರ್ವಾದ ಬೇಕು ಎಂದು ಸಿನಿಮಾ ಬಗ್ಗೆ ಸಂತಸ ಹಂಚಿಕೊಂಡ್ರು.

    ನಿರ್ಮಾಪಕ ಶಶಿಧರ್.ಕೆ.ವಿ  ಮಾತನಾಡಿ ನಮ್ಮ ಬ್ಯಾನರ್ ಆರಂಭ ಮಾಡಿ ಒಳ್ಳೆ ಸ್ಟೋರಿ ಸಿಕ್ಕರೆ ಸಿನಿಮಾ ಮಾಡೋಣ ಎಂದು ಯೋಜನೆಯಲ್ಲಿದ್ದೆವು.  ಆದ್ರೆ ಅದೇ ಸಮಯದಲ್ಲಿ ಕೊರೋನ ಆರಂಭವಾಯ್ತು. ಅದಾದ ನಂತರ ಕೆ.ಎಂ.ರಘು ಪರಿಚಯ ಆಯ್ತು. ಅವರು ಮಾಡಿಕೊಂಡಿರೋ ಸಬ್ಜೆಕ್ಟ್ ಇಷ್ಟವಾಯ್ತು. ಸಿನಿಮಾ ನಿರ್ಮಾಣ ಮಾಡಲು ಪ್ಲ್ಯಾನ್ ಮಾಡಿದ್ವಿ. ಈ ಚಿತ್ರದಲ್ಲಿ ಕಾಮಿಡಿ, ಸೆಂಟಿಮೆಂಟ್, ಮೋಟಿವೇಶನ್ ಎಲ್ಲವೂ ಇದೆ. ಜನವರಿ 2ರಿಂದ ಚಿತ್ರೀಕರಣ ಆರಂಭವಾಗಲಿದೆ. ಸಿನಿಮಾ ಗ್ಯಾರಂಟಿ ಫಸ್ಟ್ ಕ್ಲಾಸ್ ಆಗಿ ಮೂಡಿ ಬರಲಿದೆ ಎಂಬ ನಂಬಿಕೆ ಇದೆ ಎಂದು ಸಂತಸ ಹಂಚಿಕೊಂಡ್ರು. ಇದನ್ನೂ ಓದಿ: ಆಲ್ವಿನ್ ಹೆನ್ರಿ ನಿರ್ದೇಶನದ ‘ಕ್ರಿಸ್ಟಿ’ ಚಿತ್ರದ ಫಸ್ಟ್ ಲುಕ್ ರಿಲೀಸ್

    ನಾಯಕ ನಟಿ ಪ್ರಣತಿ ಮಾತನಾಡಿ ಬ್ರಹ್ಮಗಂಟು ಧಾರಾವಾಹಿಯಲ್ಲಿ ತಂಗಿ ಪಾತ್ರವನ್ನು ನಿರ್ವಹಿಸಿದ್ದೇನೆ. ನಟನೆಗೆ ನಾನು ಆಕಸ್ಮಿಕವಾಗಿ ಬಂದಿದ್ದು, ಶೃತಿ ನಾಯ್ಡು ಮೇಡಂ ನನ್ನ ಫೋಟೋ ನೋಡಿ ಸೀರಿಯಲ್ ನಲ್ಲಿ ನಟಿಸಲು ಅವಕಾಶ ನೀಡಿದ್ರು. ಅಲ್ಲಿಂದ ನನ್ನ ಜರ್ನಿ ಆರಂಭವಾಯ್ತು. ಕಿರುತೆರೆಯಾದ ನಂತರ ಬೆಳ್ಳಿತೆರೆಗೆ ಮೊದಲ ಹೆಜ್ಜೆ ಇಟ್ಟಿದ್ದೇನೆ. ಇದು ನನ್ನ ಮೊದಲ ಸಿನಿಮಾ. ಕಿರುತೆರೆಯಲ್ಲಿ ಹೇಗೆ ಸಹಕಾರ ನೀಡಿದ್ರೋ ಅದೇ ರೀತಿ ಸಿನಿಮಾಗೂ ಸಪೋರ್ಟ್ ಮಾಡಿ ಎಂದು ಕೇಳಿಕೊಂಡ್ರು.

    ‘ಜಸ್ಟ್ ಪಾಸ್’ ಸಿನಿಮಾವನ್ನು ರಾಯ್ಸ್ ಎಂಟಟೈನ್ಮೆಂಟ್ ಬ್ಯಾನರ್ ನಡಿ ಶಶಿಧರ್.ಕೆ.ವಿ, ಶ್ರೀಧರ್ ಕೆ.ವಿ ನಿರ್ಮಾಣ ಮಾಡುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ, ಸುಚೇಂದ್ರ ಪ್ರಸಾದ್, ನವೀನ್ ಡಿ ಪಡಿಕ್ಕಲ್, ಪ್ರಕಾಶ್ ತುಮಿನಾಡ್, ದೀಪಕ್ ರೈ, ಅರ್ಪಿತಾ, ಬಿಂದು ಶ್ರೀ, ಯಶಿಕಾ, ವಿಶ್ವಾಸ್, ನಿಖಿಲ್, ಗಗನ್, ಅಭಿ ಚಿತ್ರದ ತಾರಾಬಳಗದಲ್ಲಿದ್ದಾರೆ. ಕೆ.ಎಂ.ಪ್ರಕಾಶ್ ಸಂಕಲನ, ಹರ್ಷವರ್ಧನ್ ರಾಜ್ ಸಂಗೀತ, ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಾಹಣ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ‘ಜಸ್ಟ್ ಪಾಸ್’ ಆಗಲು ಹೊರಟ ಹುಡುಗನಿಗೆ ಸಿಕ್ಕಳು ಹೀರೋಯಿನ್

    ‘ಜಸ್ಟ್ ಪಾಸ್’ ಆಗಲು ಹೊರಟ ಹುಡುಗನಿಗೆ ಸಿಕ್ಕಳು ಹೀರೋಯಿನ್

    ‘ತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಮೂಲಕ ಗುರುತಿಸಿಕೊಂಡಿರುವ ನಿರ್ದೇಶಕ ಕೆ.ಎಂ.ರಘು ಹೊಸ ಸಬ್ಜೆಕ್ಟ್ ಹೊತ್ತು ಬಂದಿದ್ದಾರೆ. ಈ ಬಾರಿ ಯೂತ್ ಫುಲ್ ಸಬ್ಜೆಕ್ಟ್ ಕಥೆ ಹೇಳಲು ರೆಡಿಯಾಗಿದ್ದಾರೆ. ಡಿಸೆಂಬರ್ 14ರಂದು ಸಿನಿಮಾ ಸೆಟ್ಟೇರಲಿದ್ದು, ಚಿತ್ರಕ್ಕೆ ‘ಜಸ್ಟ್ ಪಾಸ್’ ಎಂದು ಶೀರ್ಷಿಕೆ ಇಡಲಾಗಿದೆ.

    ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಚಿತ್ರದಲ್ಲಿ ಇರುವುದೆಲ್ಲವ ಬಿಟ್ಟು, ಗಜಾನನ ಗ್ಯಾಂಗ್ ಖ್ಯಾತಿಯ ನಟ ಶ್ರೀ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಸ್ಕ್ರಿಪ್ಟ್ ಕೆಲಸಗಳೆಲ್ಲ ಮುಗಿಸಿ ಶೂಟಿಂಗ್ ಹೊರಡಲು ಸಿನಿಮಾ ತಂಡ ಸಕಲ ತಯಾರಿ ನಡೆಸಿಕೊಂಡಿದೆ. ಚಿತ್ರಕ್ಕೆ ಹೀರೋಯಿನ್ ಹುಡುಕಾಟಲ್ಲಿದ್ದ ಚಿತ್ರತಂಡಕ್ಕೆ ಹೊಸ ಪ್ರತಿಭೆ ಪ್ರಣತಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಡಾನ್ಸ್ ಕರ್ನಾಟಕ ಡಾನ್ಸ್, ಫ್ಯಾಮಿಲಿ ವಾರ್ ಸೀಸನ್ 2 ರನ್ನರ್ ಅಪ್ ಆಗಿರುವ ಪ್ರಣತಿ ಬ್ರಹ್ಮಗಂಟು ಸೀರಿಯಲ್ ನಲ್ಲೂ ನಟಿಸಿದ್ದಾರೆ. ಈಗ ಜಸ್ಟ್ ಪಾಸ್ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.  ಇದನ್ನೂ ಓದಿ: ದೂರು ನೀಡಿದರೂ ಉರ್ಫಿ ಡೋಂಟ್ ಕೇರ್ : ಮೊಬೈಲ್ ಮೂಲಕ ಪ್ರತಿಭಟಿಸಿದ ನಟಿ

    ಕೆ.ಎಂ ರಘು. ನಿರ್ದೇಶನದ ದೊಡ್ಡಹಟ್ಟಿ ಬೋರೇಗೌಡ ಸಿನಿಮಾ ಬೆಂಗಳೂರು ಇಂಟರ್ ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಕನ್ನಡದ ಅತ್ಯುತ್ತಮ ಮೊದಲ ಸಿನಿಮಾ ಎಂಬ ಪ್ರಶಸ್ತಿ ಪಡೆದುಕೊಂಡು ಗಮನ ಸೆಳೆದಿತ್ತು. ಮೊಲದ ಬಾರಿ ನಿರ್ದೇಶಕರು ಯೂತ್ ಫುಲ್ ಸಬ್ಜೆಕ್ಟ್ ಕೈಗೆತ್ತಿಕೊಂಡಿದ್ದು, ಇದೇ ಡಿಸೆಂಬರ್ 14ರಂದು ಸಿನಿಮಾ ಸೆಟ್ಟೇರಲಿದೆ.

    ರಾಯ್ಸ್ ಎಂಟಟೈನ್ಮೆಂಟ್ ಬ್ಯಾನರ್ ನಡಿ ಶಶಿಧರ್.ಕೆ.ವಿ, ಶ್ರೀಧರ್ ಕೆ.ವಿ ಜಸ್ಟ್ ಪಾಸ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ, ಸುಚೇಂದ್ರ ಪ್ರಸಾದ್, ನವೀನ್ ಡಿ ಪಡಿಕ್ಕಲ್, ಪ್ರಕಾಶ್ ತುಮಿನಾಡ್, ದೀಪಕ್ ರೈ, ಅರ್ಪಿತಾ, ಚಂದು ಶ್ರೀ, ಯಶಿಕಾ, ವಿಶ್ವಾಸ್, ನಿಖಿಲ್, ಗಗನ್, ಅಭಿ ಚಿತ್ರದ ತಾರಾಬಳಗದಲ್ಲಿದ್ದಾರೆ. ಕೆ.ಎಂ.ಪ್ರಕಾಶ್ ಸಂಕಲನ, ಹರ್ಷವರ್ಧನ್ ರಾಜ್ ಸಂಗೀತ, ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಾಹಣ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ‘ತರ್ಲೆ ವಿಲೇಜ್’ ಖ್ಯಾತಿಯ ನಿರ್ದೇಶಕ ಕೆ.ಎಂ ರಘು ಹೊಸ ಚಿತ್ರ ಘೋಷಣೆ

    ‘ತರ್ಲೆ ವಿಲೇಜ್’ ಖ್ಯಾತಿಯ ನಿರ್ದೇಶಕ ಕೆ.ಎಂ ರಘು ಹೊಸ ಚಿತ್ರ ಘೋಷಣೆ

    ‘ತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಮೂಲಕ ಚಂದನವನದಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಕೆ.ಎಂ.ರಘು ಹೊಸದೊಂದು ಸಿನಿಮಾಗೆ ಆಕ್ಷನ್ ಕಟ್ ಹೇಳಲು ರೆಡಿಯಾಗಿದ್ದಾರೆ. ಈ ಬಾರಿ ಯೂತ್ ಫುಲ್ ಸಬ್ಜೆಕ್ಟ್ ಕಥೆ ಹೆಣೆದು ನಿರ್ದೇಶನಕ್ಕೆ ಕೆ.ಎಂ ರಘು ಸಜ್ಜಾಗಿದ್ದು ಇದೇ ತಿಂಗಳು ಸಿನಿಮಾ ಸೆಟ್ಟೇರಲಿದೆ.

    ಚಿತ್ರಕ್ಕೆ ‘ಜಸ್ಟ್ ಪಾಸ್’ ಎಂದು ಶೀರ್ಷಿಕೆ ಇಡಲಾಗಿದೆ. ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರಕ್ಕೆ ‘ಇರುವುದೆಲ್ಲವ ಬಿಟ್ಟು’, ‘ಗಜಾನನ ಗ್ಯಾಂಗ್’ ಖ್ಯಾತಿಯ ನಟ ಶ್ರೀ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ನಾಯಕಿ ಪೈನಲ್ ಆಗಬೇಕಿದ್ದು,ಸ್ಕ್ರಿಪ್ಟ್ ಕೆಲಸಗಳೆಲ್ಲ ಮುಗಿಸಿ ಶೂಟಿಂಗ್ ಹೊರಡಲು ಸಿನಿಮಾ ತಂಡ ಸಕಲ ತಯಾರಿ ನಡೆಸಿಕೊಂಡಿದೆ. ಇದೇ ತಿಂಗಳು ಸಿನಿಮಾ ಸೆಟ್ಟೇರಲಿದೆ. ಇದನ್ನೂ ಓದಿ: ರಶ್ಮಿಕಾ ಕನ್ನಡದ ಹುಡುಗಿ, ಬ್ಯಾನ್ ಯಾಕೆ ಮಾಡಬೇಕು: ಧನಂಜಯ್

    ಕೆ.ಎಂ ರಘು. ನಿರ್ದೇಶನದ ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಈ ಬಾರಿಯ ಬೆಂಗಳೂರು ಇಂಟರ್ ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಕನ್ನಡದ ಅತ್ಯುತ್ತಮ ಮೊದಲ ಸಿನಿಮಾ ಎಂಬ ಪ್ರಶಸ್ತಿ ಪಡೆದುಕೊಂಡಿದೆ. ಇದೀಗ ಮೊದಲ ಬಾರಿ ಯೂತ್ ಫುಲ್ ಸಬ್ಜೆಕ್ಟ್ ಕೈಗೆತ್ತಿಕೊಂಡಿದ್ದು, ಸಿನಿಮಾ ಬಗೆಗಿನ ಹೆಚ್ಚಿನ ಮಾಹಿತಿ ಸದ್ಯದಲ್ಲೇ ಶೇರ್ ಮಾಡಿಕೊಳ್ಳಲಿದೆ ಚಿತ್ರತಂಡ.

    ರಾಯ್ಸ್ ಎಂಟಟೈನ್ಮೆಂಟ್ ಬ್ಯಾನರ್ ನಡಿ ಶಶಿಧರ್.ಕೆ.ವಿ, ಶ್ರೀಧರ್ ಕೆ.ವಿ ‘ಜಸ್ಟ್ ಪಾಸ್’ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ, ಸುಚೇಂದ್ರ ಪ್ರಸಾದ್, ನವೀನ್ ಡಿ ಪಡಿಕ್ಕಲ್, ಪ್ರಕಾಶ್ ತುಮಿನಾಡ್, ದೀಪಕ್ ರೈ ಮೊದಲಾದವರ ತಾರಾಬಳಗ ಸಿನಿಮಾದಲ್ಲಿದೆ. ಕೆ.ಎಂ.ಪ್ರಕಾಶ್ ಸಂಕಲನ, ಹರ್ಷವರ್ಧನ್ ರಾಜ್ ಸಂಗೀತ, ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಹಣ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಸುನಾಮಿ ಕಿಟ್ಟಿ ಹೊಸ ಚಿತ್ರಕ್ಕೆ ಧ್ರುವ ಸರ್ಜಾ ಸಾಥ್ : ಒರಟ ಶ್ರೀ ನಿರ್ದೇಶನ

    ಸುನಾಮಿ ಕಿಟ್ಟಿ ಹೊಸ ಚಿತ್ರಕ್ಕೆ ಧ್ರುವ ಸರ್ಜಾ ಸಾಥ್ : ಒರಟ ಶ್ರೀ ನಿರ್ದೇಶನ

    ‘ಒರಟ’ ಸಿನಿಮಾ ಖ್ಯಾತಿಯ ನಿರ್ದೇಶಕ ಶ್ರೀ ಮತ್ತೊಂದು ಹೊಸ ಪ್ರಾಜೆಕ್ಟ್ ಜೊತೆಗೆ ನಿರ್ದೇಶನಕ್ಕೆ ಮರಳಿದ್ದಾರೆ. ಚಿತ್ರಕ್ಕೆ ‘ಕೋರ’ ಎಂದು ಟೈಟಲ್ ಇಡಲಾಗಿದ್ದು, ಚಿತ್ರದ ಪವರ್ ಫುಲ್ ಟೀಸರ್ ಬಿಡುಗಡೆ ಮಾಡುವ ಮೂಲಕ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ‘ಕೋರ’ ಸಿನಿಮಾ ಮೂಲಕ ರಿಯಾಲಿಟಿ ಶೋ ಖ್ಯಾತಿಯ ಸುನಾಮಿ ಕಿಟ್ಟಿ ನಾಯಕ ನಟನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಚಿತ್ರದಲ್ಲಿ ನಾಯಕಿಯಾಗಿ ಚರೀಷ್ಮಾ ನಟಿಸುತ್ತಿದ್ದಾರೆ. ಟೀಸರ್ ಝಲಕ್ ಪ್ರಾಮಿಸಿಂಗ್ ಆಗಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಚಿತ್ರದ ನಿರ್ಮಾಪಕರ ಪಿ. ಮೂರ್ತಿ ಖಳನಟನಾಗಿ ನಟಿಸಿದ್ದು, ಎಂ. ಕೆ ಮಠ, ಮುನಿರಾಜು, ಸೌಜನ್ಯ ಒಳಗೊಂಡ ತಾರಾಗಣ ಚಿತ್ರದಲ್ಲಿದೆ.

    ಟೀಸರ್ ರಿಲೀಸ್ ಮಾಡಿ ಮಾತನಾಡಿದ ಧ್ರುವ ಸರ್ಜಾ ಚಿತ್ರದ ಬ್ಯಾಗ್ರೌಂಡ್ ಸ್ಕೋರ್ ಶಶಾಂಕ್ ಶೇಷಗಿರಿ ಅದ್ಭುತವಾಗಿ ಮಾಡಿದ್ದಾರೆ. ಸುನಾಮಿ ಕಿಟ್ಟಿ ಸಖತ್ ಆಗಿ ಸ್ಟಂಟ್ಸ್ ಮಾಡಿದ್ದಾರೆ. ಹಂಡ್ರೆಡ್ ಪರ್ಸೆಂಟ್ ಈ ಸಿನಿಮಾ ರಿಲೀಸ್ ಆದ ಮೇಲೆ ಜನಗಳು ಸುನಾಮಿ ತರ ಥಿಯೇಟರ್ ಗೆ ಬರ್ತಾರೆ. ನಿರ್ಮಾಪಕರು ಕೂಡ ಖಳನಟನಾಗಿ ತುಂಬಾ ಚೆನ್ನಾಗಿ ಅಭಿನಯಿಸಿದ್ದಾರೆ. ಟೀಸರ್ ನಲ್ಲಿ ಪಾಸಿಟಿವ್ ವೈಬ್ಸ್ ಇದೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದ್ದಾರೆ. ನಿರ್ಮಾಪಕರಾದ ಪಿ. ಮೂರ್ತಿ ಮಾತನಾಡಿ ನಮ್ಮ ಚಿತ್ರದ ಟೀಸರ್ ಧ್ರುವ ಸರ್ಜಾ ಬಿಡುಗಡೆ ಮಾಡಿದ್ದು ತುಂಬಾ ಖುಷಿ ಕೊಟ್ಟಿದೆ. ಎಲ್ಲಾ ಕಲಾವಿದರು ತುಂಬಾ ಕಷ್ಟಪಟ್ಟು ಸಿನಿಮಾ ಮಾಡಿದ್ದೀವಿ. ನಾನು ಚಿತ್ರದಲ್ಲಿ ಖಳನಟನಾಗಿ ನಟಿಸಿದ್ದೇನೆ. ಎಲ್ಲರ ಆಶೀರ್ವಾದ ಚಿತ್ರತಂಡದ ಮೇಲಿರಲಿ ಎಂದ್ರು. ಇದನ್ನೂ ಓದಿ:ಗಡಿನಾಡ ಕನ್ನಡಿಗ ಎಂದ ರೂಪೇಶ್‌ ಶೆಟ್ಟಿಗೆ ಬೆದರಿಕೆ, ದೂರು ದಾಖಲಿಸಿದ ಕುಟುಂಬದವರು

    ನಿರ್ದೇಶಕ ಶ್ರೀ ಮಾತನಾಡಿ ಟೀಸರ್ ನಲ್ಲಿ ಯಾವ ರೀತಿ ಮೇಕಿಂಗ್, ಕ್ವಾಲಿಟಿ ಇದೆಯೋ ಅದೇ ರೀತಿ ಇಡೀ ಸಿನಿಮಾ ಕೂಡ ಇರುತ್ತೆ. ಕೋರದಲ್ಲಿ ಬುಡುಕಟ್ಟು ಜನಾಂಗದ ಕಥೆ ಹೇಳ ಹೊರಟಿದ್ದೀವಿ, ಅವರಿಂದಲೇ ಇಂದು ಕಾಡು ಉಳಿದಿದೆ. ನಾವೆಲ್ಲರೂ ಬುಡಕಟ್ಟು ಜನಾಂಗದವರನ್ನು ಉಳಿಸೋ ಕೆಲಸ ಮಾಡಬೇಕಾಗಿದೆ. ಅವರ ಭಾವನೆಗಳು, ಆಚಾರ, ವಿಚಾರ, ನೋವು ಇದೆಲ್ಲವೂ ಸಿನಿಮಾದಲ್ಲಿದೆ. ತುಂಬಾ ದೊಡ್ಡ ಸ್ಕೇಲ್ ನಲ್ಲಿ ಆಕ್ಷನ್ ಪ್ಯಾಕೇಜ್ ಜೊತೆಗೆ ಇದೆಲ್ಲವನ್ನು ಕಟ್ಟಿಕೊಡಲಾಗಿದೆ. ನಿರ್ಮಾಪಕರು ಇದಕ್ಕೆ ದೊಡ್ಡ ಮಟ್ಟದಲ್ಲಿ ಸಾಥ್ ನೀಡಿದ್ದು ಪ್ಯಾನ್ ಇಂಡಿಯಾ ಸಿನಿಮಾವಾಗಿ ಬಿಡುಗಡೆಯಾಗುತ್ತಿದೆ. ಬಹುತೇಕ ಶೂಟಿಂಗ್ ಮುಗಿದಿದ್ದು, ಎರಡು ಫೈಟಿಂಗ್ ಸೀನ್ ಬಾಕಿ ಇದೆ ಎಂದು ತಿಳಿಸಿದ್ದಾರೆ.

    ನಾಯಕ ನಟ ಸುನಾಮಿ ಕಿಟ್ಟಿ ಮಾತನಾಡಿ ಮೂರ್ತಿ ಅವರ ಬ್ಯಾನರ್ ನಡಿ ಹೀರೋ ಆಗಿ ಲಾಂಚ್ ಆಗ್ತಿರೋದಕ್ಕೆ ತುಂಬಾ ಖುಷಿ ಇದೆ. ಕೋರ ಮೂಲಕ ಹೀರೋ ಆಗಿ ಎಂಟ್ರಿ ಕೊಡ್ತಿದ್ದೇನೆ. ರಿಯಾಲಿಟಿ ಶೋ ಗಳಲ್ಲಿ ನನಗೆ ಹೇಗೆ ಸಾಥ್ ಕೊಟ್ಟು ಬೆಳೆಸಿದ್ರೋ ಹಾಗೆ ಈ ಸಿನಿಮಾಗೂ ಸಪೋರ್ಟ್ ಮಾಡಿ ಎಂದು ತಿಳಿಸಿದ್ರು. ರತ್ನಮ್ಮ ಮೂವೀಸ್ ಬ್ಯಾನರ್ ನಡಿ ಪಿ. ಮೂರ್ತಿ ‘ಕೋರ’ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದು, ಶಶಾಂಕ್ ಶೇಷಗಿರಿ ಹಿನ್ನೆಲೆ ಸಂಗೀತ, ಹೇಮಂತ್ ಕುಮಾರ್ ಸಂಗೀತ ನಿರ್ದೆಶನ, ಸೆಲ್ವಂ ಛಾಯಾಗ್ರಹಣ, ಕೆ.ಗಿರೀಶ್ ಕುಮಾರ್ ಸಂಕಲನ, ರವಿವರ್ಮಾ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಸಕಲೇಶಪುರ, ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ, ಬೆಂಗಳೂರಿನಲ್ಲಿ ‘ಕೋರ’ ಸಿನಿಮಾ ಸೆರೆ ಹಿಡಿಯಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • 3-4 ತಿಂಗ್ಳಲ್ಲಿ ಸರ್ಕಾರ ಪತನವಾದ್ರೆ ಸ್ವಾಮೀಜಿಗೆ ಹೆಬ್ಬೆರಳು ದಾನ ಮಾಡ್ತೇನೆ- ಬಿಜೆಪಿ ಕಾರ್ಯಕರ್ತ

    3-4 ತಿಂಗ್ಳಲ್ಲಿ ಸರ್ಕಾರ ಪತನವಾದ್ರೆ ಸ್ವಾಮೀಜಿಗೆ ಹೆಬ್ಬೆರಳು ದಾನ ಮಾಡ್ತೇನೆ- ಬಿಜೆಪಿ ಕಾರ್ಯಕರ್ತ

    ಮಂಡ್ಯ: ಕೋಡಿ ಮಠದ ಶ್ರೀಗಳ ಹೇಳಿಕೆ ಖಂಡಿಸಿ ಮಂಡ್ಯ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಅವರು ಸವಾಲು ಹಾಕಿದ್ದಾರೆ.

    ನಿಮ್ಮ ಭವಿಷ್ಯ ನಿಜವಾದರೆ ಹೆಬ್ಬೆರಳು ಕಟ್ ಮಾಡಿಕೊಂಡು ನಿಮ್ಮ ಪಾದಕ್ಕೆ ಅರ್ಪಿಸುತ್ತೇನೆ. ಒಂದು ವೇಳೆ ಸರ್ಕಾರ ಅವಧಿ ಪೂರ್ಣಗೊಳಿಸಿದರೆ ಶ್ರೀಗಳು ನನ್ನನ್ನು ಮಠದ ಶಿಷ್ಯನಾಗಿ ಸ್ವೀಕರಿಸುವಂತೆ ಆಗ್ರಹಿಸಿದ್ದಾರೆ.

    ಕಾರ್ಯಕರ್ತನ ಸವಾಲೇನು..?
    ನಿನ್ನೆ ಕೋಡಿ ಮಠದ ಸ್ವಾಮಿಗಳು ಇನ್ನು 3-4 ತಿಂಗಳಲ್ಲಿ ಬಿಜೆಪಿ ಸರ್ಕಾರ ಪತನವಾಗುತ್ತದೆ ಎಂದು ಹೇಳಿದರು. ಒಂದು ವೇಳೆ 3-4 ತಿಂಗಳಲ್ಲಿ ಬಿಜೆಪಿ ಸರ್ಕಾರ ಪತನವಾದರೆ ಹಿಂದೆ ಏಕಲವ್ಯ ದ್ರೋಣಾಚಾರ್ಯರಿಗೆ ತನ್ನ ಬಲಗೈ ಹೆಬ್ಬೆರಳನ್ನು ಯಾವ ರೀತಿ ದಾನವಾಗಿ ನೀಡಿದ್ದಾನೋ ಅದೇ ರೀತಿ ನನ್ನ ಬಲಗೈ ಹೆಬ್ಬೆರಳನ್ನು ಸ್ವಾಮೀಜಿಗಳಿಗೆ ದಾನವಾಗಿ ಕೊಡುತ್ತೇನೆ. ಒಂದು ವೇಳೆ ಬಿಜೆಪಿ ಪೂರ್ಣಾವಧಿ ಸರ್ಕಾರ ಮಾಡಿದರೆ ಬೇರೇನೂ ಬೇಡ ನಿಮ್ಮ ಶಿಷ್ಯನಾಗಿ ನನ್ನನ್ನು ಸ್ವೀಕರಿಸಬೇಕಾಗಿ ಸ್ವಾಮೀಜಿ ಹಾಗೂ ಮಠದ ಭಕ್ತನಾಗಿ ಮನವಿ ಮಾಡಿಕೊಂಡರು.

    ಶ್ರೀಗಳು ಹೇಳೀದ್ದೇನು..?
    ಗುರುವಾರ ಹಾವೇರಿಯಲ್ಲಿ ಮಾತನಾಡಿ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಬಿಎಸ್‍ವೈ ಸರ್ಕಾರದ ಪತನದ ಮುನ್ಸೂಚನೆ ನೀಡಿದ್ದರು. ಮಧ್ಯಂತರ ಚುನಾವಣೆ ಸನಿಹ ಬಂದಿದೆ ಎಂಬ ವಿಚಾರ ಕೇಳಿದಾಗ ಮೈತ್ರಿ ಸರ್ಕಾರ 14 ತಿಂಗಳಿಗೆ ಪತನವಾಗಿದೆ. ಇನ್ನೂ ಕಾಲಾವಕಾಶ ಇದೆ ಕಾದು ನೋಡಿ. 18 ತಿಂಗಳ ನಂತರ ಮತ ಭಿಕ್ಷೆ ಎಂದು ನಾನು ಚುನಾವಣೆ ಪೂರ್ವದಲ್ಲಿ ಹೇಳಿದ್ದೆ. ಈಗ 14, 15 ತಿಂಗಳು ಮುಗಿದಿದೆ, ಇನ್ನೂ ಮೂರು ನಾಲ್ಕು ತಿಂಗಳು ಕಾದು ನೋಡಿ ಎಂದು ಕೋಡಿಹಳ್ಳಿ ಮಠದ ಶ್ರೀ ಭವಿಷ್ಯ ಹೇಳಿದ್ದರು.

  • ವೈಯಕ್ತಿಕವಾಗಿ ನಾನು ಒಬ್ಬ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ: ಸಿಎಂ ಎಚ್‍ಡಿಕೆ

    ವೈಯಕ್ತಿಕವಾಗಿ ನಾನು ಒಬ್ಬ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ: ಸಿಎಂ ಎಚ್‍ಡಿಕೆ

    ಗದಗ: ತೋಂಟದಾರ್ಯ ಸಿದ್ಧಲಿಂಗ ಶ್ರೀಗಳ ಅಗಲಿಕೆಯಿಂದ ನನಗೆ ತುಂಬಾ ಆಘಾತವಾಗಿದ್ದು, ವೈಯಕ್ತಿಕವಾಗಿ ಒಬ್ಬ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

    ತೋಂಟದಾರ್ಯ ಶ್ರೀಗಳ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಶ್ರೀಗಳು ಉತ್ತರ ಕರ್ನಾಟಕದ ಬಗ್ಗೆ ನನಗೆ ಹಲವಾರು ಹೊಸ ವಿಚಾರಗಳನ್ನು ತಿಳಿಸಿದ್ದರು. ಈ ನಾಡಿಗೆ ಅವರು ಸಾಹಿತ್ಯ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಕೊಟ್ಟ ಕಾಣಿಕೆ ಅಪಾರವಾದದ್ದು, ಅವರ ನಿಧನದ ಸುದ್ದಿ ಕೇಳಿದಾಗ ನನಗೆ ನಂಬಲು ಸಾಧ್ಯವಾಗಲಿಲ್ಲ. ಅವರ ಅಗಲಿಕೆಯಿಂದ ನನಗೆ ತುಂಬಾ ಆಘಾತವಾಗಿದೆ. ವೈಯಕ್ತಿಕವಾಗಿ ನಾನು ಒಬ್ಬ ಮಹಾನ್ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ ಎಂದು ತಮ್ಮ ಅಳಲನ್ನು ತೋಡಿಕೊಂಡರು.

    ಶ್ರೀಗಳು ಕೇವಲ ಉತ್ತರ ಕರ್ನಾಟಕದವರಲ್ಲ. ಅವರು ಇಡೀ ನಾಡಿನ ಸ್ವಾಮೀಜಿಗಳು. ಅವರು ಮಾಡಿದಂತಹ ಕೆಲಸವನ್ನು ಅವರ ಉತ್ತರಾಧಿಕಾರಿಯಾದ ನಾಗನೂರು ಶ್ರೀಗಳು ಮುಂದುವರಿಸಿಕೊಂಡು ಹೋಗುತ್ತಾರೆ. ಆ ಬಗ್ಗೆ ನಂಬಿಕೆ ನನಗಿದೆ. ನಾಗನೂರಿಗೂ ನನಗೂ ಅವಿನಾಭಾವ ಸಂಬಂಧವಿದೆ. ಏಕೆಂದರೆ ನಾನು ನನ್ನ ಮೊದಲ ಗ್ರಾಮ ವಾಸ್ತವ್ಯ ಮಾಡಿದ್ದು ಸಹ ನಾಗನೂರು ಮಠದಿಂದ. ನಾಗನೂರು ಶ್ರೀಗಳು ಈ ಮಠವನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಲಿ ಎಂದು ಹಾರೈಸಿದರು.

    ಸಿದ್ಧಲಿಂಗ ಶ್ರೀಗಳ ಅಗಲಿಕೆಯಿಂದ ಸಮಾಜಕ್ಕೆ ಆಗಿರುವ ನಷ್ಟಕ್ಕಿಂತ, ನನಗೆ ಹೆಚ್ಚು ನಷ್ಟ ಆಗಿದೆ. ಅವರು 12 ವರ್ಷಗಳ ಹಿಂದೆಯೇ ನನಗೆ ಉತ್ತರ ಕರ್ನಾಟಕ ಬಗ್ಗೆ ಹೆಚ್ಚಿನ ವಿವರವನ್ನು ನೀಡಿದ್ದರು. ಅಲ್ಲದೇ ಶ್ರೀಗಳಿಗೆ ವಿಶೇಷ ಗೌರವ ಸೂಚಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯಕ್ಕೆ ಶ್ರೀಗಳ ಹೆಸರನ್ನು ಇಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು, ಶೀಘ್ರವೇ ವಿಶ್ವವಿದ್ಯಾನಿಲಯಕ್ಕೆ ಶ್ರೀಗಳ ಹೆಸರನ್ನು ನಾಮಕರಣ ಮಾಡಲಾಗುತ್ತದೆ ಎನ್ನುವ ಘೋಷಣೆಯನ್ನು ಸಹ ಮಾಡಿದರು.

    ಲಿಂಗಾಯತ ಧರ್ಮದ ಪ್ರಮುಖ ರೂವಾರಿ, ಸಮಾಜ ಸುಧಾರಕ, ಗದಗಿನ ತೋಂಟದಾರ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಶನಿವಾರ ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿ ಇಹಲೋಕ ತ್ಯಜಿಸಿದ್ದರು. ಮಾಜಿ ಪ್ರಧಾನಿ ದೇವೇಗೌಡ, ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಶ್ರೀಗಳ ಅಂತಿಮ ದರ್ಶನವನ್ನು ಪಡೆದುಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಹು ಅಂಗಾಂಗ ವೈಫಲ್ಯದಿಂದ ಶಿರೂರು ಶ್ರೀ ಸಾವು?

    ಬಹು ಅಂಗಾಂಗ ವೈಫಲ್ಯದಿಂದ ಶಿರೂರು ಶ್ರೀ ಸಾವು?

    ಉಡುಪಿ: ಇಲ್ಲಿನ ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯದ್ದು ಸಹಜ ಸಾವು ಎಂದು ಮರಣೋತ್ತರ ಪರೀಕ್ಷೆಯ ಅಂತಿಮ ವರದಿ ಬಂದಿದೆ ಎನ್ನಲಾಗಿದೆ.

    ಶಿರೂರು ಸ್ವಾಮೀಜಿಯವರದ್ದು ಅನುಮನಾಸ್ಪದ ಸಾವು ಪ್ರಕರಣವಾಗಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಪೊಲೀಸರು ಕಾಯುತ್ತಿದ್ದರು. ಈ ಎರಡೂ ವರದಿಗಳನ್ನು ಹೋಲಿಕೆ ಮಾಡಿ ಅಂತಿಮ ವರದಿಯನ್ನು ಕೆಎಂಸಿ ವೈದ್ಯರು ನೀಡಲಿದ್ದಾರೆ. ಮರಣೋತ್ತರ ಪರೀಕ್ಷೆ ಅಂತಿಮ ವರದಿ ಎಫ್.ಎಸ್.ಎಲ್ ಇಂದು ಅಥವಾ ನಾಳೆ ಬರುವ ಸಾಧ್ಯತೆಯಿದೆ.

    ಮರಣೋತ್ತರ ವರದಿಯಲ್ಲಿ ಸಹಜ ಸಾವು ಎಂಬ ಉಲ್ಲೇಖವಿದೆ ಎನ್ನಲಾಗಿದೆ. ಶ್ರೀಗಳ ದೇಹದಲ್ಲಿ ವಿಷದ ಅಂಶವಿಲ್ಲ ಎಂಬ ವರದಿ ಪೊಲೀಸರ ಕೈಸೇರಿರುವ ಸಾಧ್ಯತೆ ಇದೆ. ಎರಡು ವರದಿ ಬಂದ ಬಳಿಕ ಸ್ವಾಮೀಜಿ ಸಾವಿಗೆ ಕಾರಣವನ್ನು ಮಣಿಪಾಲ ವೈದ್ಯರು ಪೊಲೀಸರಿಗೆ ವಿವರಿಸಲಿದ್ದಾರೆ.

    ಜುಲೈ 19ರಂದು ಸಾವನಪ್ಪಿದ್ದ ಶಿರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ ಹೊಟ್ಟೆಯಲ್ಲಿ ವಿಷಕಾರಿ ಅಂಶ ಸಿಕ್ಕಿದೆ ಅಂತ ಕೆಎಂಸಿ ವೈದ್ಯರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಬಹುಅಂಗಾಂಗ ವೈಫಲ್ಯದಿಂದ ಸ್ವಾಮೀಜಿ ಸಾವನ್ನಪ್ಪಿದ್ದಾರೆ ಎಂದೂ ವೈದ್ಯರು ಹೇಳಿದ್ದರು. ಈ ಹೇಳಿಕೆ ನಂತರ ಸ್ವಾಮೀಜಿ ಸಾವು ಸಾಕಷ್ಟು ಚರ್ಚೆಗಳಿಗೆ, ಅನುಮಾನಗಳಿಗೆ ಕಾರಣವಾಗಿತ್ತು. ಪೊಲೀಸರಿಗೆ ತನಿಖೆ ಕೂಡಾ ಬಹಳ ಸವಾಲಿನದ್ದಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿರುವ ರಾಹುಲ್- ಶ್ರೀಗಳ ಜೊತೆ ಪ್ರತ್ಯೇಕ ಧರ್ಮದ ಬಗ್ಗೆ ಚರ್ಚೆ?

    ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿರುವ ರಾಹುಲ್- ಶ್ರೀಗಳ ಜೊತೆ ಪ್ರತ್ಯೇಕ ಧರ್ಮದ ಬಗ್ಗೆ ಚರ್ಚೆ?

    ದಾವಣಗೆರೆ/ ತುಮಕೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯಕ್ಕೆ ಭೇಟಿ ನೀಡಿರೋ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ದಾವಣಗೆರೆ ಹಾಗೂ ತುಮಕೂರು ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ.

    ದಾವಣಗೆರೆ ಬಾಪೂಜಿ ಗೆಸ್ಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಿದ್ದ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ, ಬೆಳಗ್ಗೆ 4 ಜಿಲ್ಲೆಗಳ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಕಾಂಗ್ರೆಸ್ ಪದಾಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ನಂತರ ಅಸಂಘಟಿತ ಕಾರ್ಮಿಕರ ಜೊತೆ ಸಂವಾದ ಏರ್ಪಡಿಸಲಾಗಿದ್ದು, ತದನಂತರ ಕಾರ್ಮಿಕ ಸಮಸ್ಯೆಗಳ ಬಗ್ಗೆ ಕುರಿತು ಚರ್ಚೆ ನಡೆಸಲಿದ್ದಾರೆ.

    10.30ಕ್ಕೆ ದಾವಣಗೆರೆ ಬಿಐಇಟಿ ಕಾಲೇಜ್ ಸಭಾಂಗಣದಲ್ಲಿ ವರ್ತಕರು ವ್ಯಾಪಾರಿಗಳ ಜೊತೆ ಜಿ ಎಸ್ ಟಿ, ನೋಟ್ ಬ್ಯಾನ್ ಎಫೆಕ್ಟ್ ಕುರಿತ ಸಂವಾದ ಕಾರ್ಯಕ್ರಮವಿದ್ದು, ನಂತರ 11 ಕ್ಕೆ ಹೊಳೆಲ್ಕೆರೆ ಪಯಣ, ಸಮಾಜ ಕಲ್ಯಾಣ ಸಚಿವ ಹೆಚ್ ಆಂಜನೇಯ ಕ್ಷೇತ್ರದಲ್ಲಿ ರಾಹುಲ್ ಸಂಚಾರ ಮಾಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    ಮಧ್ಯಾಹ್ನ 2.30 ಕ್ಕೆ ತುಮಕೂರು ವಿಶ್ವವಿದ್ಯಾಲಯದ ಹೆಲಿಪ್ಯಾಡ್‍ಗೆ ಬಂದು ಇಳಿಯಲಿದ್ದಾರೆ. ಅಲ್ಲಿಂದ ನೇರವಾಗಿ ರಸ್ತೆ ಮಾರ್ಗದ ಮೂಲಕ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟು ಶಿವಕುಮಾರ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ಸುಮಾರು ಅರ್ಧಗಂಟೆಗಳ ಕಾಲ ಶ್ರೀಗಳೊಂದಿಗೆ ಕುಶಲೋಪರಿ ನಡೆಸಲಿದ್ದಾರೆ. ಬಳಿಕ ಕ್ಯಾತಸಂದ್ರ ಸರ್ಕಲ್ ನಲ್ಲಿ ಸಾರ್ವಜನಿರನ್ನು ಉದ್ದೇಶಿಸಿ ಐದು ನಿಮಿಷಗಳ ಕಾಲ ಮಾತನಾಡಲಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

    ಅಲ್ಲಿಂದ ನೇರವಾಗಿ ಬಿಎಚ್ ರಸ್ತೆ ಮಾರ್ಗವಾಗಿ ವಿಶೇಷ ಬಸ್ ಮೂಲಕ ರೋಡ್ ಶೋ ಸಾಗಿ ಟೌನ್ ಹಾಲ್ ಸರ್ಕಲ್ ನಲ್ಲಿ 10 ನಿಮಿಷ ಭಾಷಣ ಮಾಡಲಿದ್ದಾರೆ. ನಂತರ ಕುಣಿಗಲ್‍ನತ್ತ ಪ್ರಯಾಣ ಬೆಳೆಸಲಿದ್ದಾರೆ. ದಾರಿ ಮಧ್ಯೆ ಗೂಳುರು, ನಾಗವಲ್ಲಿ ಹೆಬ್ಬೂರು ಕುಣಿಗಲ್‍ನಲ್ಲಿ ನಿಂತು ಐದೈದು ನಿಮಿಷ ಭಾಷಣ ಮಾಡಲಿದ್ದಾರೆ, ಬಳಿಕ ಕುಣಿಗಲ್ ಮೂಲಕ ಮಾಗಡಿಯತ್ತ ಹೊರಡಲಿದ್ದಾರೆ ಎನ್ನಲಾಗಿದೆ.