ತುಮಕೂರು: ಬಿಟ್ ಕಾಯಿನ್ ಕಳವು ಆರೋಪ ಪ್ರಕರಣದಲ್ಲಿ ಆರೋಪಿ ಶ್ರೀಕಿ ಸೇರಿದಂತೆ ಮೂವರಿಗೆ ತುಮಕೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಶ್ರೀಕಿ ಜೊತೆಗೆ ರಮೇಶ್, ರಬೀನ್ ಖಂಡೇಲ್ ವಾಲಗೆ ಜಾಮೀನು ಸಿಕ್ಕಿದೆ. ಈ ಮೂವರು ಆರೊಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ಹಾಗೂ ಜೆಎಂಎಫ್ಸಿ ಕೋರ್ಟ್ನಿಂದ ಜಾಮೀನು ಸಿಕ್ಕಿದೆ.
ನ್ಯಾಯಾಧೀಶ ಎನ್.ಸುಬ್ರಹ್ಮಣ್ಯ ಅವರು ಆರೋಪಿಗಳಿಗೆ ಜಾಮೀನು ನೀಡಿ ಆದೇಶಿಸಿದ್ದಾರೆ. ಶ್ರೀಕಿಯಿಂದ 50 ಸಾವಿರ ಮೊತ್ತದ ಬಾಂಡ್ ಹಾಗೂ ಓರ್ವ ವ್ಯಕ್ತಿ ಶೂರಿಟಿ ಪಡೆಯಲಾಗಿದೆ. ರಾಬೀನ್ ಖಂಡೇಲ್ ವಾಲ ಬಳಿ 25 ಸಾವಿರ ಮೌಲ್ಯದ ಬಾಂಡ್ ಹಾಗೂ ಓರ್ವ ವ್ಯಕ್ತಿಯ ಶೂರಿಟಿ ಪಡೆಯಲಾಗಿದೆ. ತನಿಖೆ ನಡೆಸಿ 60 ದಿನದೊಳಗೆ ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಚಾರ್ಜ್ಶೀಟ್ ಸಲ್ಲಿಸಲು ವಿಳಂಬವಾದ ಹಿನ್ನೆಲೆ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಜಾಮೀನು ಮಂಜೂರು ಮಾಡಲಾಗಿದೆ. ತುಮಕೂರು ಉದ್ಯಮಿಯೊಬ್ಬರಿಗೆ ಆನ್ಲೈನ್ ವಂಚಿಸಿದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಬೆಂಗಳೂರು: ಕರ್ನಾಟಕದಲ್ಲಿ ಸಂಚಲನ ಸೃಷ್ಟಿ ಮಾಡಿದ್ದ ಬಿಟ್ ಕಾಯಿನ್ ಪ್ರಕರಣದ (Bit Coin Scam) ಆರೋಪಿ ಶ್ರೀಕಿಗೆ (Sriki) ಈಗ ಗನ್ ಮ್ಯಾನ್ (Gunman) ನೀಡಲಾಗಿದೆ.
ಬಿಟ್ ಕಾಯಿನ್ ಹಗರಣದ ತನಿಖೆ ನಡೆಸಲು ಸರ್ಕಾರ ವಿಶೇಷ ತನಿಖಾ ದಳ (SIT) ರಚನೆ ಮಾಡಿತ್ತು. ಎಸ್ಐಟಿ ಮುಂದೆ ಸ್ಫೋಟಕ ಮಾಹಿತಿ ನೀಡಿದ್ದ ಶ್ರೀಕಿಗೆ ಈಗ ಕೊಲೆ ಬೆದರಿಕೆ ಇದೆ. ಅಷ್ಟೇ ಅಲ್ಲದೇ ಶ್ರೀಕಿ ಪೊಲೀಸರ ಕೈಯಲ್ಲಿ ಸಿಗದೇ ತಪ್ಪಿಸಿಕೊಂಡು ಓಡಾಡುತ್ತಿರುತ್ತಾನೆ. ಹೀಗಾಗಿ ಎಸ್ಐಟಿ ಶ್ರೀಕಿಗೆ ಗನ್ ಮ್ಯಾನ್ ನೀಡಿದೆ.
ವಿಧಾನಸಭಾ ಚುನಾವಣೆಯಲ್ಲಿ (Vidhan Sabha Election) ಬಿಟ್ ಕಾಯಿನ್ ಹಗರಣ ರಾಜ್ಯದಲ್ಲಿ ಕೋಲಾಹಲ ಎಬ್ಬಿಸಿತ್ತು. ಇದರಲ್ಲಿ ಕೆಲವು ಪ್ರಭಾವಿ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಕೈ ಜೋಡಿಸಿದ್ದಾರೆ ಎಂಬ ವದಂತಿ ದಟ್ಟವಾಗಿತ್ತು. ಈ ಹಗರಣದ ಸೂತ್ರಧಾರ ಎನ್ನಲಾಗಿದ್ದ ಅಂತಾರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ಇದನ್ನೂ ಓದಿ: ಇಸ್ತಾಂಬುಲ್ ನೈಟ್ಕ್ಲಬ್ನಲ್ಲಿ ಅಗ್ನಿ ದುರಂತ – 29 ಮಂದಿ ದುರ್ಮರಣ
ಶ್ರೀಕಿಯನ್ನು ಬಳಸಿಕೊಂಡು ರಾಜಕಾರಣಿಗಳು ಬಿಟ್ಕಾಯಿನ್ ಹಗರಣಗಳನ್ನು ಎಸಗಿದ ಆರೋಪವಿದೆ. ವಿವಿಧ ಸೈಬರ್ ಕ್ರೈಂಗಳಲ್ಲಿ ಭಾಗಿಯಾದ ಆರೋಪದಡಿ ಶ್ರೀಕಿ ಹಾಗೂ ನಾಲ್ವರು ಇತರರ ವಿರುದ್ಧ 2021ರ ಫೆಬ್ರವರಿ 22ರಂದು ಮೊದಲ ಆರೋಪಪಟ್ಟಿ ಸಲ್ಲಿಕೆಯಾಗಿತ್ತು. ಅಧಿಕಾರಕ್ಕೆ ಬಂದ ಕಾಂಗ್ರೆಸ್ (Congress) ಸರ್ಕಾರ ಈ ಪ್ರಕರಣದ ಮರು ತನಿಖೆಗೆ ಎಸ್ಐಟಿ ರಚನೆ ಮಾಡಿತ್ತು.
ಶ್ರೀಕೃಷ್ಣ (ಶ್ರೀಕಿ) ಬೆಂಗಳೂರಿನ ನಿವಾಸಿಯಾಗಿದ್ದು, 2014 ರಿಂದ 2017ರವರೆಗೆ ಈತ ನೆದರ್ಲ್ಯಾಂಡ್ ಆಮ್ಸ್ಟರ್ಡ್ಯಾಮ್ ಕಂಪ್ಯೂಟರ್ ಸೈನ್ಸ್ನಲ್ಲಿ ಬಿಎಸ್ಸಿ ಪದವಿ ಪಡೆದ ಬಳಿಕ ವೆಬ್ಸೈಟ್ ಹ್ಯಾಕ್ ಮಾಡಲು ಆರಂಭಿಸಿದ್ದ. ಆರಂಭದಲ್ಲಿ ಸಣ್ಣ ಪಟ್ಟ ವೆಬ್ಸೈಟ್ಗಳನ್ನು ಹ್ಯಾಕ್ ಮಾಡಿ ಅನುಭವ ಪಡೆದ ಬಳಿಕ ದೊಡ್ಡ ವೆಬ್ಸೈಟ್ಗಳನ್ನು ಹ್ಯಾಕ್ ಮಾಡಿ ಇದನ್ನೇ ಉದ್ಯೋಗ ಮಾಡಿಕೊಂಡಿದ್ದ. ವೆಬ್ಸೈಟ್ಗಳನ್ನು ಹ್ಯಾಕ್ ಮಾಡಿದ ಬಳಿಕ ಆತ ಬಿಟ್ಕಾಯಿನ್ ಬಳಸಿ ಹಣವನ್ನು ಪಡೆಯುತ್ತಿದ್ದ. ಈ ಎಲ್ಲ ಕೆಲಸಕ್ಕೆ ಡಾರ್ಕ್ ವೆಬ್ ಬಳಕೆ ಮಾಡುತ್ತಿದ್ದ. ಡಾರ್ಕ್ ವೆಬ್ ಬಳಕೆ ಮಾಡುತ್ತಿದ್ದ ಕಾರಣ ಈತನ ಮಾಹಿತಿಗಳು ಸಿಗುತ್ತಿರಲಿಲ್ಲ. ಬಿಟ್ ಕಾಯಿನ್ ಮೂಲಕ ಡ್ರಗ್ಸ್ ತರಿಸಿಕೊಂಡು ಬೇಕಾದ ವ್ಯಕ್ತಿಗಳಿಗೆ ನೀಡುತ್ತಿದ್ದ ಆರೋಪವಿದೆ.
ಬೆಂಗಳೂರು: ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿ ಸೈಲೆಂಟ್ ಆಗಿದ್ದ ಬಿಟ್ಕಾಯಿನ್ ಹಗರಣ ಮತ್ತೆ ಸುದ್ದಿಗೆ ಬಂದಿದೆ. ಬಿಜೆಪಿಯ ಧರ್ಮರಾಜಕಾರಣಕ್ಕೆ ಕಾಂಗ್ರೆಸ್ ಮತ್ತೆ ಬಿಟ್ಕಾಯಿನ್ ಪ್ರತ್ಯಸ್ತ್ರ ಪ್ರಯೋಗಿಸಿದೆ.
2016ರಲ್ಲಿ ಬಿಟ್ಫಿನೆಕ್ಸ್ ಎಕ್ಸ್ಚೇಂಚ್ ಹ್ಯಾಕ್ ಪ್ರಕರಣ ಸಂಬಂಧ ಅಮೆರಿಕದ ಗುಪ್ತಚರ ಸಂಸ್ಥೆ (ಎಫ್ಬಿಐ) (Federal Bureau Of Investigation) (FBI) ತನಿಖೆ ಚುರುಕು ಮಾಡಿದೆ. ಈ ಪ್ರಕರಣದಲ್ಲಿ ಬಂಧಿತ ದಂಪತಿಗೆ ಭಾರತದ ನಂಟು ಇರೋದು ದೃಢವಾಗಿದೆ. ಹಾಗಾಗಿ, ಕರ್ನಾಟಕ ಹ್ಯಾಕರ್ ಶ್ರೀಕಿಗೂ ಅಮೆರಿಕದ ಬಿಟ್ಫಿನೆಕ್ಸ್ ಹ್ಯಾಕ್ ಪ್ರಕರಣಕ್ಕೂ ನಂಟಿನ ಅನುಮಾನ ಮೂಡಿದೆ. ಈ ಸಂಬಂಧ ಎಫ್ಬಿಐ ಅಧಿಕಾರಿಗಳು ಭಾರತಕ್ಕೆ ಎಂಟ್ರಿ ಕೊಟ್ಟಿದ್ದಾರಾ? ಈ ಟೀಮ್ ಕರ್ನಾಟಕಕ್ಕೂ ಬರುತ್ತಾ? ಎಂಬ ಚರ್ಚೆ ಎದ್ದಿದೆ. ಇದನ್ನೂ ಓದಿ: ಬರೋಬ್ಬರಿ 12 ಕಂಪನಿಗಳನ್ನು ಹ್ಯಾಕಿಂಗ್ ಮಾಡಿದ್ದ ಶ್ರೀಕಿ
5. Why was Interpol not informed? Why did the BJP Government wait for over five months up till 24th April 2021 to write to Interpol and that also after the release of Sri Krishna on 17th April, 2021? https://t.co/uYsnVUUeG6
— Randeep Singh Surjewala (@rssurjewala) April 8, 2022
ಈ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಟ್ವೀಟ್ ಮಾಡಿದ್ದು, ಕೇಂದ್ರ ಗೃಹ ಸಚಿವರು, ಕರ್ನಾಟಕದ ಮುಖ್ಯಮಂತ್ರಿಗಳು ಉತ್ತರಿಸಲಿ ಎಂದು ಸವಾಲು ಹಾಕಿದ್ದಾರೆ. ಕರ್ನಾಟಕದ ಬಿಜೆಪಿ ಸರ್ಕಾರದ ಅಡಿಯಲ್ಲಿ ನಡೆದ ಭಾರತದ ಅತಿದೊಡ್ಡ ಬಿಟ್ಕಾಯಿನ್ ಹಗರಣದ ತನಿಖೆ ಮಾಡಲು ಎಫ್ಬಿಐ ಭಾರತದಲ್ಲಿದೆಯೇ? ತನಿಖೆಯ ಹಾಗೂ ರಾಜಕೀಯ ವ್ಯಕ್ತಿಗಳು ಸೇರಿದಂತೆ ಶಂಕಿತರ ವಿವರಗಳನ್ನು ಬಿಡುಗಡೆ ಮಾಡ್ತೀರಾ? ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಬಂಧನದಲ್ಲಿದ್ದಿದ್ದು, ಪರಸ್ಪರ ಸಂಬಂಧವಿದೆಯೇ? 17 ಏಪ್ರಿಲ್ 2021ರಂದು ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಶ್ರೀಕಿ ಬಿಡುಗಡೆಗೊಂಡಿದ್ದರು ಕೂಡ 5 ತಿಂಗಳ ಬಳಿಕ ಇಂಟರ್ಪೋಲ್ಗೆ ಬಿಜೆಪಿ ಸರ್ಕಾರ ಈ ಬಗ್ಗೆ ಮಾಹಿತಿ ನೀಡಿದೆ. ಈ ಪ್ರಕರಣದ ಬಗ್ಗೆ ಕರ್ನಾಟಕ ಸರ್ಕಾರ ಯಾಕೆ ಎನ್ಐಎ, ಎಸ್ಎಫ್ಐಒ, ಇಡಿ ತನಿಖೆಗೆ ವಹಿಸಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಚಂದ್ರು ಹತ್ಯೆ ಕೇಸ್ಗೆ ಬಿಗ್ ಟ್ವಿಸ್ಟ್- ಘಟನೆಯ ಇಂಚಿಂಚು ಮಾಹಿತಿ ನೀಡಿದ ಸ್ನೇಹಿತ ಸೈಮನ್ ರಾಜ್
ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿರುವ ಬಿಟ್ಕಾಯಿನ್ ಪ್ರಕರಣಕ್ಕೆ ಸಂಬಂಧಿದಂತೆ ಬಿಜೆಪಿ 3 ವರ್ಷದ ಹಿಂದೆ ಮೃತಪಟ್ಟಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮಗ ರಾಕೇಶ್ ಸಿದ್ದರಾಮಯ್ಯರ ಹೆಸರು ಎಳೆದು ತಂದು ಟ್ವಿಟ್ಟರ್ ನಲ್ಲಿ ಫೋಟೋ ಸಮೇತ ಟ್ವೀಟ್ ಮಾಡಿದೆ.
ಟ್ವೀಟ್ನಲ್ಲಿ ಏನಿದೆ?:
ಬಿಟ್ ಕಾಯಿನ್ ಹಗರಣದಲ್ಲಿ ಪ್ರಭಾವಿಗಳು ಇದ್ದಾರೆ ಎಂದು ಸಿದ್ದರಾಮಯ್ಯ ಅವರು ಆರೋಪಿಸಿದ್ದರು. ಆದರೆ ಈಗ ದಾಖಲೆಯೇ ಇಲ್ಲ ಎನ್ನುತ್ತಿದ್ದಾರೆ. ನಿಮ್ಮ ಅತ್ಯಾಪ್ತರ ವಹಿವಾಟು ನಿಮ್ಮನ್ನು ಅಸಹಾಕನನ್ನಾಗಿ ಮಾಡಿದೆಯೇ? ಬಿಟ್ ಕಾಯಿನ್ ಪ್ರಭಾ ವಲಯ ನಿಮ್ಮನ್ನೇ ಸುತ್ತಿಕೊಳ್ಳಬಹುದೆಂಬ ಭಯ ಕಾಡುತ್ತಿದೆಯೇ? ಮಾನ್ಯ ಬುರುಡೆರಾಮಯ್ಯ, ನಿಮ್ಮ ಅವಧಿಯಲ್ಲಿ ನಡೆದ ಈ ಹಗರಣವನ್ನು ಮುಚ್ಚಿ ಹಾಕುವುದು ನಿಮಗೆ ತೀರಾ ಅನಿವಾರ್ಯವಾಗಿತ್ತು. ಅಪ್ರಿಯವಾದ ಸತ್ಯ ಹೇಳುತ್ತೇವೆ, ಇಲ್ಲಿ ನಿಮ್ಮ ಅತ್ಯಾಪ್ತರೇ ಇದ್ದರು ಎಂಬ ಅನುಮಾನಕ್ಕೆ ಈ ಚಿತ್ರ ಪುಷ್ಠಿ ನೀಡುತ್ತಿದೆ. ಇದನ್ನೂ ಓದಿ: ಬಿಟ್ಕಾಯಿನ್ ಹಗರಣ ಮುಚ್ಚಿಹಾಕೋದು ಅದ್ಕಿಂತ ದೊಡ್ಡ ಸ್ಕ್ಯಾಮ್: ರಾಹುಲ್ ಗಾಂಧಿ
ಸತ್ಯ ಅನಾವರಣವಾಗುವ ಭಯಕ್ಕೆ ನೀವು ಯೂಟರ್ನ್ ತೆಗೆದುಕೊಳ್ಳುತ್ತಿದ್ದೀರಿ ಅಲ್ಲವೇ? ಮಾನ್ಯ ಸಿದ್ದರಾಮಯ್ಯನವರೇ, ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್ನಲ್ಲಿ ನಡೆಯುತ್ತಿದ್ದ ಹುಕ್ಕಾ ಬಾರ್ ಆ ಎಲ್ಲ ಚಟುವಟಿಕೆಯ ಕೇಂದ್ರವಾಗಿತ್ತು. ಸುನೀಶ್ ಹೆಗ್ಡೆ, ಹೇಮಂತ್ ಮುದ್ದಪ್ಪ, ಶ್ರೀಕಿಯಂಥವರು ಆಗ ನಿಮ್ಮ ಮನೆಯ ಸುತ್ತಮುತ್ತಲೂ ಓಡಾಡಿರಲೂ ಬಹುದಲ್ಲವೇ!? ಡ್ರಗ್ಸ್ ಹಾಗೂ ಬಿಟ್ ಕಾಯಿನ್ ಅವ್ಯವಹಾರ ಬಹಿರಂಗವಾಗಿದ್ದು ನಿಮ್ಮ ಕಾಲದಲ್ಲಿ. ಒಂದೆರಡು ಕಡೆ ದಾಳಿ ನಡೆದರೂ ತನಿಖೆ ಹಠಾತ್ ಸ್ಥಗಿತಗೊಂಡಿತು.
ಈ ಚಿತ್ರದಲ್ಲಿರುವ ಸುನೀಶ್ ಹೆಗ್ಡೆ & ಹೇಮಂತ್ ಜೊತೆಗಿರುವ ಎಲ್ಲರನ್ನು ನೀವು ಗುರುತಿಸಬಲ್ಲಿರಿ ಎಂಬುದು ನಮ್ಮ ನಂಬಿಕೆ. ಆ ನಂಬಿಕೆ ನಿಜವೇ ಆದರೆ ಬಿಟ್ಕಾಯಿನ್ ಹ್ಯಾಕಿಂಗ್ ದಂಧೆ ನಿಮ್ಮ ಕಾಲದಲ್ಲೇ ಆರಂಭವಾಗಿತ್ತು. ಸಿದ್ದರಾಮಯ್ಯನವರೇ, ಆ ಬಗ್ಗೆ ನೀವು ಸ್ಪಷ್ಟ ಮಾಹಿತಿ ಹೊಂದಿದ್ದೀರಿ ಅಲ್ಲವೇ? ಬಿಟ್ ಕಾಯಿನ್ ಹ್ಯಾಕರ್ ಶ್ರೀಕಿ ಜೊತೆಗೆ ಹೇಮಂತ್ ಮುದ್ದಪ್ಪ ಹಾಗೂ ಸುನೀಶ್ ಹೆಗ್ಡೆ ಗಾಢ ಸ್ನೇಹ ಹೊಂದಿದ್ದರು. ಶ್ರೀಕಿ ಮೂಲಕ ಗೇಮಿಂಗ್ ಸೈಟ್ & ಇ-ಪೋರ್ಟಲ್ ಹ್ಯಾಕ್ ಮಾಡಿಸಿದ್ದರು ಎಂಬುದು ಪೊಲೀಸ್ ದಾಖಲೆಯಲ್ಲಿದೆ!? ಇಲ್ಲಿ ನೋಡಿ, ಸುನೀಶ್ ಹೆಗ್ಡೆ & ಹೇಮಂತ್ ಯಾರ ಜೊತೆಗಿದ್ದಾರೆ ಎಂದು ಒಮ್ಮೆ ನೋಡಿ. ರಾಜ್ಯದಲ್ಲಿ ನಡೆದಿದೆ ಎನ್ನಲಾದ ಬಿಟ್ಕಾಯಿನ್ ಹಗರಣದ ಬಗ್ಗೆ ತಾವು ಪ್ರಸ್ತಾಪಿಸಿದ್ದೀರಿ. ಈಗ ನಮಗೆ ಒಂದಿಷ್ಟು ಪ್ರಶ್ನೆಗಳಿವೆ. ಒಂದಷ್ಟು ಚಿತ್ರಗಳಿವೆ, ಅದನ್ನು ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ. ಇದನ್ನೂ ಓದಿ: ಬಿಟ್ಕಾಯಿನ್ ಹಗರಣದಲ್ಲಿ ಸಿಎಂ ತಲೆದಂಡ ಪಡೆಯಲಿದೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಎನ್ನಲಾದ ಶ್ರೀಕಿ ಬರೋಬ್ಬರಿ 12 ಕಂಪನಿಗಳನ್ನು ಹ್ಯಾಕಿಂಗ್ ಮಾಡಿದ್ದ ಎಂಬ ಆರೋಪ ಕೇಳಿಬಂದಿದೆ.
ಶ್ರೀಕಿ 12 ಕಂಪನಿಗಳ ವೆಬ್ಸೈಟ್ ಹ್ಯಾಕ್ ಮಾಡಿದ್ದಾನೆ. ಆತನ ವಿರುದ್ಧ ಇಂಟರ್ ಪೋಲ್ ಇಂದ ಕ್ರಮಕೈಗೊಳ್ಳಿ ಎಂದು ನಗರ ಪೊಲೀಸ್ ಆಯುಕ್ತರಿಗೆ, ತನಿಖಾಧಿಕಾರಿ ಇನ್ಸ್ಪೆಕ್ಟರ್ ಚಂದ್ರಾದರ್ ಪತ್ರದ ಮೂಲಕ ಮನವಿಸಲ್ಲಿಸಿದ್ದಾರೆ. ಶ್ರೀಕಿ, ದೇಶ, ವಿದೇಶದಲ್ಲಿ ಸಾಕಷ್ಟು ಹ್ಯಾಕಿಂಗ್ ಮಾಡಿದ್ದಾನೆ. ದೇಶದಲ್ಲಿ ಮಾತ್ರವಲ್ಲದೇ ವಿದೇಶದಲ್ಲಿ ಕೂಡ ವಂಚನೆಮಾಡಿದ್ದು, ಈ ಬಗ್ಗೆ ತನಿಖಾ ವ್ಯಾಪ್ತಿ ಹೆಚ್ಚಿರೋದರಿಂದ ನಾವು ತನಿಖೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಇಂಟರ್ ಪೋಲ್ಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀಕಿ ಜೊತೆ ಪ್ರಿಯಾಂಕ್ ಖರ್ಗೆಗೆ ಸಂಪರ್ಕ, 50 ಸಾವಿರ ಕೋಟಿ ಆಸ್ತಿ – ಕಾರ್ಣಿಕ್ ಆರೋಪ
ಅದಲ್ಲದೆ ಬಿಟ್ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಎನ್ನಲಾದ ಶ್ರೀಕಿ ಜೊತೆ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆಗೆ ಸಂಪರ್ಕ ಇತ್ತು ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಆರೋಪಿಸಿದ್ದಾರೆ. ಪ್ರಿಯಾಂಕ್ ಐಟಿ ಬಿಟಿ ಮಂತ್ರಿ ಆಗಿದ್ದಾಗ ಶ್ರೀಕಿಯನ್ನು ಭೇಟಿ ಮಾಡಿ ಬಿಟ್ ಕಾಯಿನ್ ಹಗರಣದಿಂದ ಕಪ್ಪು ಹಣ ಪಡೆದಿದ್ದಾರೆ ಎಂಬ ಮಾಹಿತಿ ಇದೆ. ಪ್ರಿಯಾಂಕ್ ಖರ್ಗೆ ಬಳಿ 50 ಸಾವಿರ ಕೋಟಿ ಮೌಲ್ಯದ ಆಸ್ತಿ ಇದೆ ಎನ್ನಲಾಗಿದ್ದು, ಅವರು ತಮ್ಮ ಕಪ್ಪು ಹಣವನ್ನು ಬಿಟ್ ಕಾಯಿನ್ನಲ್ಲಿ ತೊಡಗಿಸಿದ್ದಾರೆ ಎಂಬ ಆರೋಪ ಇದೆ. ಇದಕ್ಕೆ ಪ್ರಿಯಾಂಕ್ ಖರ್ಗೆ ಉತ್ತರ ನೀಡಬೇಕು ಎಂದು ಗಣೇಶ್ ಕಾರ್ಣಿಕ್ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಶ್ರೀಕಿ ವ್ಯಾಲೆಟ್ನಿಂದ ಬಿಟ್ ಕಾಯಿನ್ ನಾಪತ್ತೆಯಾಗಿಲ್ಲ – ಬೆಂಗಳೂರು ಪೊಲೀಸರಿಂದ ಸ್ಪಷ್ಟನೆ
ಬೆಂಗಳೂರು: ಬಿಟ್ಕಾಯಿನ್ ಹಗರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇಷ್ಟು ದಿನ ಬಿಜೆಪಿ ವಿರುದ್ಧ ಆರೋಪ ಮಾಡ್ತಿದ್ದ ಪ್ರಿಯಾಂಕ್ ಖರ್ಗೆ ವಿರುದ್ಧವೇ ಕಮಲ ಪಡೆ ಹೊಸ ಬಾಂಬ್ ಸಿಡಿಸಿದೆ. ಬಿಟ್ ಕಾಯಿನ್ ಹಗರಣದ ಕಿಂಗ್ ಪಿನ್ ಎನ್ನಲಾದ ಶ್ರೀಕಿಗೆ ಪ್ರಿಯಾಂಕ್ ಖರ್ಗೆ ಸಂಪರ್ಕ ಇತ್ತು ಎಂದು ಬಿಜೆಪಿಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಆರೋಪ ಮಾಡಿದ್ದಾರೆ.
ಪ್ರಿಯಾಂಕ್ ಐಟಿ ಬಿಟಿ ಮಂತ್ರಿ ಆಗಿದ್ದಾಗ ಶ್ರೀಕಿಯನ್ನು ಭೇಟಿ ಮಾಡಿ ಬಿಟ್ ಕಾಯಿನ್ ಹಗರಣದಿಂದ ಕಪ್ಪು ಹಣ ಪಡೆದಿದ್ದಾರೆ ಎಂಬ ಮಾಹಿತಿ ಇದೆ. ಪ್ರಿಯಾಂಕ್ ಖರ್ಗೆ ಬಳಿ 50 ಸಾವಿರ ಕೋಟಿ ಮೌಲ್ಯದ ಆಸ್ತಿ ಇದೆ ಎನ್ನಲಾಗಿದ್ದು, ಅವರು ತಮ್ಮ ಕಪ್ಪು ಹಣವನ್ನು ಬಿಟ್ ಕಾಯಿನ್ನಲ್ಲಿ ತೊಡಗಿಸಿದ್ದಾರೆ ಎಂಬ ಆರೋಪ ಇದೆ.. ಇದಕ್ಕೆ ಪ್ರಿಯಾಂಕ್ ಖರ್ಗೆ ಉತ್ತರ ನೀಡಬೇಕು ಗಣೇಶ್ ಕಾರ್ಣಿಕ್ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬಿಟ್ಕಾಯಿನ್ ಹಗರಣಕ್ಕೆ ಸಿಎಂ ತಲೆದಂಡವಾಗಲಿದೆ : ಪ್ರಿಯಾಂಕ್ ಖರ್ಗೆ
ಶ್ರೀಕಿಗೆ ಭದ್ರತೆ ಕೊಡಬೇಕೆಂಬ ಸಿದ್ದರಾಮಯ್ಯ ಒತ್ತಾಯದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಶ್ರೀಕಿಗೆ ಸರ್ಕಾರಕ್ಕಿಂತ್ಲೂ ಕಾಂಗ್ರೆಸ್ನವರೇ ಹೆಚ್ಚು ರಕ್ಷಣೆ ಕೊಡ್ತಾರೆ ಎಂದು ಟಾಂಗ್ ನೀಡಿದ್ದಾರೆ.
ಬೆಂಗಳೂರು: ಶ್ರೀಕಿ ಅಲಿಯಾಸ್ ಶ್ರೀಕೃಷ್ಣನ ವ್ಯಾಲೆಟ್ನಿಂದ ಯಾವುದೇ ಬಿಟ್ ಕಾಯಿನ್ ವರ್ಗಾವಣೆ ಆಗಿಲ್ಲ ಮತ್ತು ನಾಪತ್ತೆಯಾಗಿಲ್ಲ ಎಂದು ಬೆಂಗಳೂರು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಬಿಟ್ ಕಾಯಿನ್ ಹಗರಣ ಜೋರಾಗುತ್ತಿದ್ದಂತೆ ಬೆಂಗಳೂರು ನಗರ ಪೊಲೀಸರು ಈ ಸಂಬಂಧ ಸುದೀರ್ಘ ವಿವರಗಳಿರುವ ಮಾಧ್ಯಮ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದಾರೆ.
ಹೇಳಿಕೆಯಲ್ಲಿ ಏನಿದೆ?
ಸಿಸಿಬಿ ನಿಷ್ಪಕ್ಷತವಾಗಿ ತನಿಖೆ ಮಾಡಿದ್ದು, ಸಿಸಿಬಿ ತನಿಖೆಯ ತಿರುಚಿದ ವರದಿಗಳು ಬಹಿರಂಗವಾಗುತ್ತಿದೆ. 2020ರ ಏಪ್ರಿಲ್ 11 ರಂದು ಡಾರ್ಕ್ನೆಟ್ ಮೂಲಕ ಸಂಗ್ರಹಿಸಲಾದ ಮಾಹಿತಿ ಪ್ರಕಾರ ಒಬ್ಬನನ್ನು ವಶಕ್ಕೆ ಪಡೆಯಲಾಗುತ್ತದೆ.
ಆರೋಪಿಯಿಂದ 500 ಗ್ರಾಂ ಗಾಂಜಾ ವಶಕ್ಕೆ ಪಡೆದ ಬಳಿಕ ನಾರ್ಕೋಟಿಕ್ಸ್ ಡ್ರಗ್ಸ್ ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ (ಎನ್ಡಿಪಿಎಸ್) ಕಾಯ್ದೆ ಅಡಿ ಕೆ.ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತದೆ. ನಂತರ ಹೆಚ್ಚಿನ ತನಿಖೆಯ ವೇಳೆ ಶ್ರೀಕಿ ಸೇರಿದಂತೆ 10 ಜನರ ಬಂಧನ ಮಾಡಲಾಯಿತು. ವಿಚಾರಣೆ ಸಂಬಂಧ ಕ್ರಿಪ್ಟೋ ಕರೆನ್ಸಿ ವೆಬ್ ಸೈಟ್ ಗಳನ್ನ ಹ್ಯಾಕ್ ಮಾಡಿದ್ದ ಬಗ್ಗೆ ಆರೋಪಿಗಳು ತಪ್ಪೊಪ್ಪಿಕೊಂಡಿರುತ್ತಾರೆ. ಇದೊಂದು ಗಂಭೀರ ಪ್ರಕರಣ ಎಂದು ಪರಿಗಣಿಸಿ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲು ಮಾಡಲಾಗುತ್ತದೆ. ಇದನ್ನೂ ಓದಿ: ಬಾರ್ ವಿರುದ್ಧ ರೊಚ್ಚಿಗೆದ್ದ ಮಹಿಳಾ ಮಣಿಗಳು – ಕುರ್ಚಿಗಳು ಪೀಸ್ ಪೀಸ್
ಶ್ರೀಕಿ ವ್ಯಾಲೆಟ್ನಿಂದ ಯಾವುದೇ ಬಿಟ್ ಕಾಯಿನ್ ವರ್ಗಾವಣೆ ಆಗಿಲ್ಲ ಮತ್ತು ನಾಪತ್ತೆಯಾಗಿಲ್ಲ. ಕಿಪ್ಟೋ ಕರೆನ್ಸಿಯ ತನಿಖೆಯ ಉದ್ದೇಶಕ್ಕಾಗಿ ಖಾತೆ ತೆರೆಯುವ ಅಗತ್ಯ ಇದ್ದ ಕಾರಣ ಸರ್ಕಾರದ ಅನುಮತಿ ಪಡೆದು ಖಾತೆಯನ್ನು ತೆರಯಲಾಗಿತ್ತು. ಬಿಟ್ ಕಾಯಿನ್ ಗುರುತಿಸುವ ವಶಪಡಿಸಿಕೊಳ್ಳುವ ಪಕ್ರಿಯೆ ಸಂದರ್ಭದಲ್ಲಿ ಶ್ರೀಕಿ ಬಿಟ್ ಕಾಯಿನ್ ವ್ಯಾಲೆಟ್ ತೋರಿಸಿದ್ದು ಅದರಲ್ಲಿ 31.8 ಬಿಟ್ ಕಾಯಿನ್ ಇದ್ದವು. ಸೈಬರ್ ತಜ್ಞರು ಹಾಗೂ ಸರ್ಕಾರದ ಅಧಿಕಾರಿಗಳ ಸಮ್ಮುಖದಲ್ಲಿ ಪಂಚನಾಮೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ನನ್ನ ಕುಟುಂಬಕ್ಕೆ ಭದ್ರತೆ ಕೊಡಿ ಎಂದು ಮೋದಿಗೆ ಮನವಿ ಸಲ್ಲಿಸಿದ ಪಾಕ್ ಕ್ರಿಕೆಟಿಗನ ಪತ್ನಿ
ಬಿಟ್ ಕಾಯಿನ್ ಗಳನ್ನು ಪೊಲೀಸ್ ಖಾತೆಗೆ ವರ್ಗ ಮಾಡಿಕೊಳ್ಳಲು ನ್ಯಾಯಾಲಯದ ಅನುಮತಿ ಪಡೆದುಕೊಳ್ಳಲಾಗಿದೆ. ಶ್ರೀಕಿಯ ತನ್ನಲ್ಲಿದ್ದ ಎಲ್ಲ ವ್ಯಾಲೆಟ್ ತೋರಿಸಿದಾಗ 186.811 ಬಿಟ್ ಕಾಯಿನ್ ಪತ್ತೆ ಆಗಿದೆ. ವಿಚಾರಣೆ ವೇಳೆಯಲ್ಲಿ ಆರೋಪಿ ಇದು ನನ್ನ ವೈಯಕ್ತಿಕ ಖಾತೆ ಎಂದು ತಪ್ಪೊಪ್ಪಿಕೊಂಡಿದ್ದ. ಶ್ರೀಕಿ ಬಳಿ ಖಾಸಗಿ ಪಾಸ್ವರ್ಡ್ ಇರಲಿಲ್ಲ ಎಂದು ಸೈಬರ್ ತಜ್ಞರ ಸ್ಪಷ್ಟನೆ ನೀಡಿದ್ದು ಎಲ್ಲಾ ದಾಖಲೆಗಳನ್ನು ರೆಕಾರ್ಡ್ ಮಾಡಲಾಗಿದೆ. ನುರಿತ ಅಧಿಕಾರಿಗಳಿಂದ ತನಿಖೆ ಮಾಡಲಾಗಿದ್ದು, ಗಂಭೀರ ಪ್ರಕರಣವಾದ ಹಿನ್ನೆಲೆಯಲ್ಲಿ ಮಾಹಿತಿಯನ್ನು ಸಿಬಿಐ, ಇಡಿಗೆ ಕಳಿಸಿಕೊಡಲಾಗಿದೆ. ವಿಚಾರಣೆ ಸಮಯದಲ್ಲಿ ಹಲವು ವೆಬ್ಸೈಟ್ಗಳನ್ನು ಹ್ಯಾಕ್ ಮಾಡಿರುವುದಾಗಿ ಶ್ರೀಕಿ ಒಪ್ಪಿಕೊಂಡಿದ್ದಾನೆ. ಹೀಗಾಗಿ ಹೆಚ್ಚಿನ ತನಿಖೆಗೆಗಾಗಿ ಮಾಹಿತಿಯನ್ನು ಇಂಟರ್ಪೋಲ್ಗೆ ನೀಡಲಾಗಿದೆ.
ಶ್ರೀಕಿಗೆ ಪೊಲೀಸ್ ಕಸ್ಟಡಿಯಲ್ಲಿ ಡ್ರಗ್ಸ್ ನೀಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ಆರೋಪವನ್ನು ತನಿಖಾಧಿಕಾರಿ ಅಲ್ಲಗೆಳೆದಿದ್ದರು. ಆದರೆ ನ್ಯಾಯಾಲಯ ಮೆಡಿಕಲ್ ಟೆಸ್ಟ್ ಮಾಡಿಸುವಂತೆ ಸೂಚನೆ ನೀಡಿತ್ತು. ವಿಕ್ಟೋರಿಯಾ ಕೋವಿಡ್ ಆಸ್ಪತ್ರೆಯಾಗಿದ್ದರಿಂದ ಅಲ್ಲಿ ಪರೀಕ್ಷೆ ಮಾಡಲು ಆಗಿರಲಿಲ್ಲ. ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಲಾಯಿತು. ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ(ಎಫ್ಎಸ್ಎಲ್) ಕಳುಹಿಸಲಾಗಿತ್ತು. ಎಫ್ಎಸ್ಎಲ್ ಡ್ರಗ್ಸ್ ಸೇವಿಸಿಲ್ಲ ಎಂದು ನೆಗೆಟಿವ್ ರಿಪೋರ್ಟ್ ನೀಡಿತ್ತು. ಅಲ್ಲದೇ ಹೆಬಿಯಸ್ ಕಾರ್ಪಸ್ ಹಾಕಿದ್ದವರ ಮೇಲೂ ನ್ಯಾಯಾಲಯ 5 ಸಾವಿರ ರೂ. ದಂಡ ವಿಧಿಸಿದೆ. ಸದ್ಯಕ್ಕೆ ಮೂರು ಕೇಸ್ ಗಳ ವಿಚಾರಣೆ ನಡೆದಿದ್ದು ಎಲ್ಲಾ ಕೇಸ್ ಗಳು ಪಾರದರ್ಶಕವಾಗಿದೆ. ಶ್ರೀಕಿ ವಿರುದ್ಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂರು ಪ್ರಕರಣಗಳನ್ನು ಪಾರದರ್ಶಕವಾಗಿ ತನಿಖೆ ಮಾಡಲಾಗುತ್ತಿದೆ.
ಬೆಂಗಳೂರು: ರಾಜ್ಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಬಿಟ್ ಕಾಯಿನ್ ಬೆನ್ನತ್ತಿದ ಪಬ್ಲಿಕ್ ಟಿವಿಗೆ ಸಿಕ್ಕಿದೆ ಪಕ್ಕಾ ದಾಖಲೆ ಸಿಕ್ಕಿದೆ.
ಹೌದು. ಅಂದು 31 ಬಿಟ್ ಕಾಯಿನ್ ವಶಕ್ಕೆ ಪಡಿದಿದ್ದೇವೆ ಎಂದು ಸಿಸಿಬಿ ಹೇಳಿತ್ತು, ಆದರೆ ಇದೀಗ ಬಿಟ್ ಕಾಯಿನ್ ವಶಕ್ಕೆ ಪಡೆದಿಲ್ಲ ಎಂದು ಕೋರ್ಟಿಗೆ ವರದಿ ನೀಡಿದೆ. ಹಾಗಾದರೆ ವಿಚಾರಣೆ ವೇಳೆ ಶ್ರೀಕಿ ಸಿಸಿಬಿ ತೋರಿಸಿದ ವ್ಯಾಲೆಟ್ ಯಾವುದು ಎಂಬುದರ ಬಗ್ಗೆ ಎಕ್ಸ್ ಕ್ಲೂಸಿವ್ ಡೀಟೈಲ್ಸ್ ಇಲ್ಲಿದೆ.
ಜ.8ರಂದು ಸುದ್ದಿಗೋಷ್ಠಿ ನಡೆಸಿದ್ದ ಸಿಸಿಬಿ, ಹ್ಯಾಕರ್ ಶ್ರೀಕೃಷ್ಣ ಬಂಧಿಸಿದ್ದ ವೇಳೆ 31 ಬಿಟ್ ಕಾಯಿನ್ ಸೀಜ್ ಮಾಡಲಾಗಿದೆ. ಇದು ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿಗೆ ಎಂದು ಹೇಳಿತ್ತು. ಆದರೆ ಸೈಬರ್ ತಜ್ಞರು ಕೊಟ್ಟ ವರದಿಯಲ್ಲಿ ಈ ಅಂಶ ಬಯಲಾಗಿದೆ. ಸಿಸಿಬಿ ಶ್ರೀಕಿಯಿಂದ ಒಂದೇ ಒಂದು ಬಿಟ್ ಕಾಯಿನ್ ವಶಕ್ಕೆ ಪಡೆದಿಲ್ಲ ಎಂಬುದು ಸಾಬೀತಾಗಿದೆ. ಇದನ್ನೂ ಓದಿ: ಪೊಲೀಸರೇ ಡ್ರಗ್ಸ್ ನೀಡಿದ್ರು – ಶ್ರೀಕಿ ಆರೋಪ ಸುಳ್ಳು
ಗ್ರೂಪ್ ಸೈಬರ್ ಐಡಿ ಟೆಕ್ನಾಲಜಿ ಸಂಸ್ಥೆ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ್ ಕುಮಾರ್ ಹಾಗೂ ಯೂನೋ ಕಾಯಿನ್ ಟೆಕ್ನಾಲಜಿಸ್ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿ ವಿ.ಸಾತ್ವಿಕ್ ನೆರವನ್ನು ಸಿಸಿಬಿ ಪಡೆದಿತ್ತು. ಅದರಂತೆ ಅವರ ಸಹಾಯದ ಮೂಲಕ ಜನವರಿ 8 ರಂದು 31 ಬಿಟ್ ಕಾಯಿನ್ ವಶಕ್ಕೆ ಪಡೆಯಲಾಗಿದೆ ಎಂದಿತ್ತು. ಬಳಿಕ ಪತ್ರಿಕಾ ಪ್ರಕಟಣೆಯನ್ನೂ ಕೂಡ ಬಿಡುಗಡೆ ಮಾಡಲಾಗಿತ್ತು. ಆದರೆ ಜನವರಿ 22ರಂದು ವಾಲೆಟ್ ಅನ್ನು ತೆರೆದಾಗ 186 ಬಿಟ್ ಕಾಯಿನ್ ಇರೋದು ಗೊತ್ತಾಗಿದೆ. ಆಗ ಹೆಚ್ಚಿನ ತನಿಖೆ ನಡೆಸಿದ ಸಿಸಿಬಿಗೆ ಶಾಕ್ ಕಾದಿತ್ತು.
ಬಿಟ್ ಕಾಯಿನ್ ಎಕ್ಸ್ ಚೇಂಜ್ ಎಜೆನ್ಸಿಯ ವ್ಯಾಲೆಟ್ನಲ್ಲಿದ್ದ ಬಿಟ್ ಕಾಯಿನ್ಗಳನ್ನು ಶ್ರೀಕಿ ತೋರಿಸಿದ್ದಾನೆ ಎನ್ನುವುದು ಗೊತ್ತಾಯಿತು. ಬಳಿಕ ಸಿಸಿಬಿ ಪೊಲೀಸರು ಯಾವುದೇ ಬಿಟ್ ಕಾಯಿನ್ ಅನ್ನು ವಶಕ್ಕೆ ಪಡೆದಿಲ್ಲ ಎಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಈ ವರದಿಯ ಪ್ರತಿ ಪಬ್ಲಿಕ್ ಟಿವಿಗೆ ಎಕ್ಸ್ ಕ್ಲೂಸಿವ್ ಆಗಿ ಸಿಕ್ಕಿದೆ.
ಬೆಂಗಳೂರು: ಬಹುಕೋಟಿ ಬಿಟ್ಕಾಯಿನ್ ಹಗರಣ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಹ್ಯಾಕರ್ ಶ್ರೀಕಿ ಕೋರ್ಟ್ಗೆ ಪೊಲೀಸರ ವಿರುದ್ಧವೇ ಮಾಡಿದ್ದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎನ್ನುವುದು ಸಾಬೀತಾಗಿದೆ.
ನಾನು ಸಿಸಿಬಿ ಕಸ್ಟಡಿಯಲ್ಲಿ ಇದ್ದಾಗ ಪೊಲೀಸ್ ಇನ್ಸ್ಪೆಕ್ಟರ್ ಚಂದ್ರಾಧರ್ ನನಗೆ ಮಾದಕದ್ರವ್ಯ ಒದಗಿಸಿದ್ದರು ಎಂದು 20201ರ ಜನವರಿ 11ರಂದು ನ್ಯಾಯಾಧೀಶರ ಮುಂದೆ ಹ್ಯಾಕರ್ ಶ್ರೀಕಿ ಆರೋಪ ಮಾಡಿದ್ದ. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ನ್ಯಾಯಾಧೀಶರು, ಕೂಡಲೇ ಶ್ರೀಕಿಯನ್ನು ವಿಕ್ಟೋರಿಯಾದಲ್ಲಿ ಮಾದಕದ್ರವ್ಯ ಪರೀಕ್ಷೆಗೆ ಒಳಪಡಿಸುವಂತೆ ಸೂಚಿಸಿದ್ದರು. ಇದನ್ನೂ ಓದಿ: ಡೇವಿಡ್ ವಾರ್ನರ್ ಸಿಡಿಸಿದ ಆ ಒಂದು ಸಿಕ್ಸ್ – ಕ್ರೀಡಾಸ್ಫೂರ್ತಿಗೆ ವಿರುದ್ಧವೇ?
ಈ ವೇಳೆ ವಿಕ್ಟೋರಿಯಾ ಆಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಟ್ಟಿತ್ತು. ಹೀಗಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಶ್ರೀಕಿ ಡ್ರಗ್ಸ್ ಸೇವಿಸದೇ ಇರುವುದು ದೃಢವಾಗಿತ್ತು. ಶ್ರೀಕಿ ಆರೋಪ ಸುಳ್ಳೆಂದು ಸಾಬೀತಾಗಿತ್ತು.
ನನ್ನ ಮಗನಿಂದ ಒತ್ತಾಯಪೂರ್ವಕವಾಗಿ ಬೇರೆ ಬೇರೆ ಕೆಲಸ ಮಾಡಿಸಲು ಪೊಲೀಸರು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಶ್ರೀಕಿ ತಂದೆ ಗೋಪಾಲ್ ರಮೇಶ್ ಸಹ ಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ವೇಳೆ ಶ್ರೀಕಿ, ಜಡ್ಜ್ ಮುಂದೆ ಪೊಲೀಸರ ವಿರುದ್ಧ ಡ್ರಗ್ಸ್ ಆರೋಪ ಮಾಡಿದ್ದ. ಇದನ್ನೂ ಓದಿ: ಪುನೀತ್ರಿಂದ ಪ್ರೇರಣೆ ಪಡೆದು ದೇಹದಾನಕ್ಕೆ ಮುಂದಾದ ಕಾಫಿನಾಡ ದಂಪತಿ
ಈ ಕುರಿತಂತೆ ವಿವರ ನೀಡಿದ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ, ವಿಕ್ಟೋರಿಯಾದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಎಂದು ಕೋರ್ಟ್ ತಿಳಿಸಿದ್ರೆ, ಇವರು ಕೋವಿಡ್ ನೆಪ ಹೇಳಿ ಬಿಎಂಸಿಯಲ್ಲಿ ಶ್ರೀಕಿಯ ಹೊಟ್ಟೆ ತೊಳಿಸಿದ್ದಾರೆ ಎಂದು ಪೊಲೀಸರ ವಿರುದ್ಧ ಆಪಾದನೆ ಮಾಡಿದ್ದಾರೆ.
ಶ್ರೀಕಿ ತಂದೆ, ನನ್ನ ಮಗನಿಗೆ ನಿಮ್ಹಾನ್ಸ್ನಲ್ಲಿ ಡ್ರಗ್ಸ್ ಪರೀಕ್ಷೆ ಮಾಡಿಸಿ ಎಂದು ಮತ್ತೆ ಕೋರ್ಟ್ ಮೊರೆ ಹೋಗಿದ್ದಾರೆ. ಫೆಬ್ರವರಿ 15ರಂದೇ ಸಿಸಿಬಿಗೆ ಪತ್ರ ಬರೆದಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿದ್ದಾಗ ಶ್ರೀಕಿಗೆ ಮಾದಕದ್ರವ್ಯ ಕೊಟ್ಟಿದ್ಯಾರು? ಯಾಕೆ ಕೊಡುತ್ತಿದ್ದರು? ತನಿಖೆ ಏಕೆ ಆಗಿಲ್ಲ ಎಂದು ಕಾಂಗ್ರೆಸ್ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.